ಒಟ್ಟು 17 ಕಡೆಗಳಲ್ಲಿ , 9 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ಎನ್ನ ಕೈ ಬಿಡಬೇಡವೋ ಪ ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ ತಂದೆ ಅನಾಥರ ಬಂಧು ಕಾಪಾಡಯ್ಯ 1 ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2 ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3 ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4 ಶರಣನ ಸಲಹಿದ ಪರಮ ಪುರುಷ ನೀನೆ 5 ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6 ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7 ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8 ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9 ವಂದ್ಯನೆಂದೆನಿಸಿದೆ ಇಂದಿರಾ ವರದನೆ 10 ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11 ನೀನೇನು ತೋರದೇನು || ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12 ಲೀಲೆಯಿಂದನುದಿನ ಸಲಹೊ ಸದಾನಂದ 13
--------------
ಸದಾನಂದರು
ಕಮಲೋದ್ಭವನ ತಾಯೇ | ನಮಿಸುವೆನ್ನನು ಕಾಯೇ ಕಮಲಾಕ್ಷ ಹರಿ ಪ್ರೀಯೆ | ಚಿತ್ಪ್ರಕೃತೇ ಪ ಓಂಕಾರ ವಾಚ್ಯನ | ಶಂಕೆ ಇಲ್ಲದೆ ಭಜಿಸೇಸಂಖ್ಯೆ ರಹಿತ ರೂಪಳೇ |ಯಂಕಾಮಯೇ ತಂತಮು | ಗ್ರಂ ಕೃಣೋಮೆಂದು ಬಿಂಕದಿ ಶ್ರುತಿ ಪೇಳ್ವುದೇ 1 ಆಪಾಂಗ ವೀಕ್ಷಣ ಸೃಷ್ಠಿ | ವ್ಯಾಪಾರಂಗಳ ಹರಿಕೃಪೆಯಿಂದ - ಗೈಯ್ಯುವಳೇ |ಅಪವಿತ್ರರಿಗೆ ಯೋಗ್ಯ | ವಿಪರೀತ ಮತಿಯಿತ್ತು ಕುಪಥಾಂಧಂತದು ಪ್ರಾಪಕೇ 2 ಕಂಬು ಚಕ್ರಾಂಕಿತನ | ಅಂಬುಜಾಕ್ಷನ ಹೃದಯಾಂಬರದಲಿ - ತೋರಿಸೇ |ಇಂಬಿಟ್ಟು ಮನ ಬಯಕೆ | ತುಂಬಿಸುವುದು ಅನ್ಯಹಂಬಲ ನೀ ಕೊಡದೇ3 ಸನ್ನುತ | ಮೋಕ್ಷದಾಯಕ ಪರಮಾಕ್ಷರ ಶ್ರೀ ಹರಿಯ |ಈಕ್ಷಿಪ ಸುಖ ಕೊಡು | ಪೇಕ್ಷಿಸದಲೆ ತಾಯೆಲಕ್ಷಣವಂತೇ - ಗುಣವಂತೇ 4 ಕರವೀರ ಪುರದರಿಸಿ | ಶರದಿ ಸಂಭವೆ ಎನಿಸಿವರವ ನೀಡುತ ಪೊರೆವೇಗುರು ಗೋವಿಂದ ವಿಠ್ಠಲ | ಚರಣ ನೀರೇರುಹಕರುಣಿಸಿ ಸಲಹೇ - ಮಾತೇ 5
--------------
ಗುರುಗೋವಿಂದವಿಠಲರು
ಕರ ಪಿಡಿಯೊ ಬೇಗಾ ಪ ಸಿರಿ | ಮಾಧವನೆ ಭಿನ್ನವಿಪೆಕಾದುಕೊ ಬಿಡದಿವನ | ಹೇ ದಯಾಪೂರ್ಣ 1 ಪ್ರಾಚೀನ ಕರ್ಮಗಳ | ಯೋಚಿಸಲು ಯನ್ನಳವೆಮೋಚ ಕೇಚ್ಛೆಯ ತೋರೊ | ಕೀಚಕಾರಿ ಪ್ರೀಯನೀಚೋಚ್ಛ ತರತಮವ | ವಾಚಿಸಿವನಲಿ ನಿಂತುವಾಚಾಮ ಗೋಚರನೆ ಸಾಕ್ಷಿ ವೇದ್ಯಾ 2 ಭಾಗವತ ಪೀಯೂಷ | ವೇಗ ಉಣಿಸುತಲಿವನನೀಗೊ ಭವರೋಗವನು | ನಾಗಾರಿವಾಹಾಜಾಗರ ಸ್ವಪ್ನದಲಿ | ನೀಗಿ ಭ್ರಮವೆರಡನ್ನುಜಾಗು ಮಾಡದೆ ಸಲಹೋ ಭೊಗಿಶಯನಾ 3 ಭವ | ಅಂಬುಧಿಯ ದಾಂಟಿ ನೀ-ಲಾಂಬು ದಾಭ ಹರಿ ಹೃದಯಾಂಬರದಿ ತೋರಿಇಂಬಿಟ್ಟು ಭಕ್ತನ್ನ | ಸಲಹೆ ಬಿನ್ನವಿಪೆ ಕೃ-ಪಾಂಬುಧಿಯೆ ತವ ಪಾ | ದಾಂಬುಜದಲಿಡುವೆ 4 ಭಾವ ಕ್ರಿಯ ದ್ರವ್ಯದೊಳು | ಅದ್ವಯನು ನೀನೆಂಬಭಾವದನುಭವವಿತ್ತು | ಇವನ ಪಾಲಿಪುದುಕಾವ ಕರುಣಿಯೆ ಗುರು | ಗೋವಿಂದ ವಿಠ್ಠಲನೆಗೋವತ್ಸಧ್ವನಿದಾವು | ಧಾವಿಸೂವಂತೆ 5
--------------
ಗುರುಗೋವಿಂದವಿಠಲರು
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನಿತ್ಯ ಶುಭ ಮಂಗಳಂ ಪ. ವೈಕುಂಠವಾಸನಿಗೆ ವಾಣೀಶಗ್ವಲಿದವಗೆ ಲೋಕದಲಿ ಪ್ರಹ್ಲಾದಗ್ವಲಿದ ಲಕ್ಷ್ಮೀಶಗೆ ಪ್ರಾಕೃತದಲಿ ವಸುದೇವ ಪುತ್ರನೆಂದೆನಿಸಿ ಜೋಕೇಲಿ ಗೋಕುಲಕೆ ಜಾರಿ ಬಂದವಗೆ 1 ಪುಟ್ಟ ಮಗುವಾದವಗೆ ಪೂತಣಿಯ ಕೆಡಹಿದಗೆ ತೊಟ್ಟಿಲೊಳು ಮಲಗಿ ತೂಗಿಸಿಕೊಂಬಗೆ ದುಷ್ಟ ಶಕಟನÀ ಮುರಿದು ತೃಣಾವರ್ತನೆಂಬ ದೈತ್ಯನ ಮುಟ್ಟಿ ಪ್ರಾಣವ ತೆಗೆದ ಮುದ್ದುಕೃಷ್ಣನಿಗೆ 2 ಅಂಬೆಗಾಲಿಕ್ಕಿದಗೆ ಅಂಗಳದೊಳಾಡಿದಗೆ ತುಂಬಿದಾ ಪಾಲುಗಳ ತಾನೆ ಸವಿದು ಇಂಬಿಟ್ಟು ಬಾಲರಿಗೆ ಸವಿ ಇಕ್ಕಿ ಸವಿದವಗೆ ಅಂಬುಜಾಕ್ಷ ನಮ್ಮ ಹಯವದನಗೆ 3
--------------
ವಾದಿರಾಜ
ನೀಚಕೃತ್ಯದ ಮನಸೇ ನಿನಗೆ ತುಸು ನಾಚಿಕಿಲ್ಲಲೆ ಹೊಲಸೆ ಪ ಪ್ರಾಚೀನಹಿರಿಯರ ಯೋಚಿಸಿನೋಡದೆ ನೀಚತನದ ಆಲೋಚನೆಯೊಳು ಬಿದ್ದು ಅ.ಪ ಕುಂತಿಸುತನ ರಥವ ನಡೆಸಿದನು ಅ ತ್ಯಂತ ಕೃಪೆಯಿಂದ ಹರಿಯು ಕಂತುಜನಕ ಭಕ್ತ ಚಿಂತಾಯಕನೆಂದು ಅಂತರಂಗದಿ ಭಜಿಸಿ ಸಂತಸ ಪಡುವಲ್ಲಿ 1 ಅಂಬರೀಷನೆಂಬುವ ನೃಪಗೆ ಮುನಿ ಡೊಂಬೆಯಿಂಬ (?) ಶಾಪಿಸಲು ಅಂಬುಜಾಸನ ಬಂದು ಬೆಂಬಲಿಸಿ ನೃಪನನ್ನು ಇಂಬಿಟ್ಟು ಪೊರೆದದ್ದು ನಂಬಿ ಭಜಿಸವಲ್ಲಿ 2 ಭೂಮಿಪ ಬಲಿಚಕ್ರನ ಬಾಗಿಲ ಕಾಯ್ದ ಪ್ರೇಮದಿಂ ರಮೆಯರಸನು ಪ್ರೇಮದಿಂ ಭಕುತರ ಕಾಮಿತವೀಯಲು ಕಾಮಧೇನೀತನೆಂದು ನೇಮದಿಂದರವಲ್ಲಿ 3 ಗೌತಮ ಮುನಿಸತಿಯು ಪಾಷಾಣವಾಗಿ ಕ್ಷಿತಿಮೇಲೆ ಎರಗಿರಲು ಕ್ಷಿತಿಜಾತೆಪತಿ ತಾನು ಅತಿಹಿತದ ಕೃಪೆಯಿಂದ ಪತಿತಗೈದವನೆಂದು ಸ್ತುತಿಸಿ ಒಲಿಸವಲ್ಲಿ 4 ಹನುಮಂತನೊಡೆಯನಾದ ಜನಕಜೆಪತಿ ವನಜಾಕ್ಷ ಶ್ರೀರಾಮನ ಘನತರಮಹಿಮೆಯ ಅನುದಿನಕೊಂಡಾಡು ಘನಮುಕ್ತಿ ಸಾಮ್ರಾಜ್ಯ ಕನಿಕರದಿಂ ಕೊಡುವ 5
--------------
ರಾಮದಾಸರು
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ
ಬೇಡುವೆನು ಶ್ರೀಕೃಷ್ಣ | ಕಾಡುತಿಹ ಭವರೋಗಓಡಿಸುವುದು ತಡೆಯದೇ ಪ ನಾಡಾಡಿ ದೈವಗಳ | ಬೇಡ್ವನಲ್ಲವೊ ಕೃಷ್ಣನೋಡೆನ್ನ ದಯದಿಂದ | ಸಾರ್ವಭೌಮಾ ಅ.ಪ. ಪರ ಕಂಬು ಚಕ್ರಾಂಕಿತನೆನಂಬಿಹೆನೊ ನಿನ್ನ ಪದವ ||ಕುಂಭಿಣಿಯ ಪರಿಪಾಲ | ಅಂಭ್ರಣಿಯ ಸುವಿಲೋಲಇಂಬಿಟ್ಟು ವದಗಿಸುತ | ಸಂಭ್ರಮದಿ ಕಾಯೋ | ಕರುಣೀ 1 ಪ್ರೇರ್ಯ ಪ್ರೇರಕ ನೀನೆ | ಬಾಧ್ಯ ಬಾಧಕ ನೀನೆಸೇವ್ಯ ಸೇವಕನೆ ಹರಿಯೇ ||ವಾಪ್ಯ ವ್ಯಾಪಕ ಸ್ವಾಮಿ | ಪೋಷ್ಯ ಪೋಷಕ ರೂಪಿಕಾರ್ಯ ಕಾರಣ ರೂಪನೇ ||ಭಾವ್ಯನೇ ನಿನ್ನಿಂದ | ಧಾರ್ಯ ಈ ಜಗವೆಲ್ಲವೀರ್ಯ ಔದಾರ್ಯ ಶೌರ್ಯ ||ಪೂಜ್ಯ ಪೂಜಕನೆನಿಪ | ಬಹಿರಂತರಾತ್ಮಕನೆಪ್ರಾಪ್ಯ ಪ್ರಾಪಕ ನಿನ್ನ | ಪ್ರಾಪ್ತಿಯನೆ ತಿಳಿಸೋ | ಸ್ವಾಮಿ 2 ತಾರತಮ್ಯ ಜ್ಞಾನ ಸದ್ | ವೈರಾಗ್ಯ ಹರಿ ಭಕುತಿಬಾರಿ ಬಾರಿಗೆ ಬೇಡುವೇ ||ಸೂರಿ ಸಂಗವ ನೀಯೊ | ದೂರಗೈ ದುಸ್ಸಂಗಮಾರಪಿತ ದಯಾಪಾಂಗನೆ ||ಕಾರುಣಿಕ ನೀನೆಂದು | ಸಾರಿರುವ ತವಪಾದದೂರ ಮಾಡಲಿ ಬೇಡವೊ ||ಆರು ಕಾಯುವರಿಲ್ಲ | ವಾರೀಜ ಜಾಂಡದೊಳುಧೀರ ಗುರು ಗೋವಿಂದ | ವಿಠಲ ಬಹು ಆಪ್ತಾ | ಗೋಪ್ತಾ 3
--------------
ಗುರುಗೋವಿಂದವಿಠಲರು
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ
ವೈಕುಂಠ ವಿಠ್ಠಲನೆ ನೀನಿವನ ಸಾಕಬೇಕಯ್ಯ ಶ್ರೀ ಹರಿಯೆ ಪ ನಾಕಪತಿಯೆ ನಿನ್ನ ತೋಕನೆಂದೆನಿಸಿ ಕೃಪಾಕರುಣೆ ಕಾಪಾಡ ಬೇಕೊ ಹರಿಯೆ ಅ.ಪ. ಪುಂಡಲೀಕ ವರದ ಪಾಂಡುರಂಗನೆ ನಿನ್ನತೊಂಡನಾಗಿಹನ ಕೈಗೊಂಡು ಕಾಪಾಡೊ ಹರಿಯೆ |ಅಂಡಜಸುವಾಹನನೆ ಮಾರ್ತಾಂಡ ಶತತೇಜಭಾಂಡ ಕಾರಕ ಭೀಮ ಗೊಲಿದಂತೆ ಒಲಿಯಬೇಕು 1 ಇಹಪರಗಳೆರಡಕ್ಕೂ ಅಹಿಶಯ್ಯ ನಿನ ಪಾದವಹಿಸೆ ಸೇವಿಪನಯ್ಯ ಸಹಜ ಭಕ್ತಿಯಲಿವಿಹಗೇಂದ್ರ ವಾಹನನೆ ಐಹಿಕದ ಭಯಹರಿಸಿವಿಹಿತ (ಕರುಣ)ದಿಂದಿವನ ಕಾಪಾಡು ಬೇಕು ಹರಿಯೇ 2 ವಿಘ್ನಹರ ನಿನ್ನಲ್ಲಿ | ಲಗ್ನ ಗೈಸಿಹಮನವ ನಿ-ರ್ವಿಘ್ನತೆಯ ನೀಡಯ್ಯ ಸರ್ವಕಾಲದಲಿಯಜ್ಞೇಶ ಯಜ್ಞ ಭುಗ್ ಯಜ್ಞಸಾಧನ ಯಜ್ಞಯಜ್ಞಾನು ಸಂಧಾನ ಸರ್ವಕಾರ್ಯದಲೀಯೊ 3 ವೃಂದಾರ ಕೇಂದ್ರ ರಿಂ | ವಂದ್ಯ ಹಯಮುಖ ಪಾದಭೃಂಗರೆಂದೆನಿಸುವ ಭಾವಿ ಮರುತರ ಚರಣದೀಸಂಧಿಸುತ ಧೃಡಭಕ್ತಿ ವೃಂದಾವನಾಖ್ಯಾನಸಂದೋಹ ಸುಜ್ಞಾನ ನೀನಿತ್ತು ಸಲಹೊ ಹರಿಯೇ 4 ಪತಿ ನಿನ್ನ ಹಂಬಲಿಸಿ ಬೇಡುವೆನುಇಂಬಿಟ್ಟು ತವ ಪಾದದ್ಹಂಬಲವ ನೀಯೋಉಂಬುಡುವ ಕ್ರಿಯೆಗಳಲಿ ಬಿಂಬ ಕ್ರಿಯೆಗಳ ತಿಳಿಸಿಬಿಂಬ ತವರೂಪ ಹೃದಯಾಂಬರದಿ ತೋರಿ ಸಲಹೋ 5 ಪಂಚಪಂಚಸುತತ್ವ | ಪಂಚ ಭೇದದಜ್ಞಾನಸಂಚಿಂತೆಯ ನೀಯೋ ವಾಂಛಿತಾರ್ಥದನೇಪಂಚ ಅವಿದ್ಯೆಯ ಕಳೆದು ಪಂಚಸು ಪರ್ವದಲಿಪಂಚಾಸ್ಯನಲಿ ನಿನ್ನ ಪಂಚರೂಪವ ತೋರಿಸೋ 6 ದಿವಿಜ ವಂದ್ಯಮಧ್ವಾಂತರಾತ್ಮ ಗುರು ಗೋವಿಂದ ವಿಠಲ ತವದಿವ್ಯ ರೂಪವ ತೋರಿ ಕಾಪಾಡೊ ಹರಿಯೆ 7
--------------
ಗುರುಗೋವಿಂದವಿಠಲರು
ಶ್ರೀ ತುಳಸಿ ದೇವಿ ತಾಯಿ ಶ್ರೀ ತುಳಸೀಯೆ | ಕಾಯೆ ಭಕ್ತರ ಪ್ರೀಯೆಕಾಯೆ ಶ್ರೀಹರಿ ಜಾಯೆ | ತಾಯೆ ವರವ ನೀಯೇ ಪ ಪಾದ | ತೋಯಜ ಕಾಂಬುವದಾಯವಿತ್ತೆನ್ನ ನೀ | ಪ್ರೀಯದಿಂದಲಿ ಕಾಯೇ ಅ.ಪ. ಅಮೃತ ಕಲಶಹರಿಯು ಉದುಭವಿಸಲು | ವರ ಧನ್ವಂತ್ರೀಯೂ ||ಹರುಷೋದ್ರೇಕದಿ ನಯನ | ವರಬಿಂದು ಉದುರಲುಶಿರಿ ತುಳಸಿ ಎನಿಸೀದೆ | ಶರಣರ್ಗೆ ಗತಿ ಕೊಡುವ 1 ಓಲಗ ಗೈವರು 2 ಕಲುಷ ಸುಜನ | ಮಲಗಳ ಕಳೆದೂ |ಆಲವ ಭೋದರೆ ಶಾಸ್ತ್ರ | ವಲಿಸಿ ಕೀರ್ತಿಪ ನರಗೆನೆಲೆಯ ಕಾಣಿಪ ತನ್ನ | ಚೆಲುವ ವೈಕುಂಠದಿ 3 ಕರುಣಿಸು ಹರಿಪಾದ | ವರ ಪದ್ಮ ದ್ವಯದಲ್ಲಿನಿರುತ ಭಕುತಿಯನ್ನೆ | ವರಗುಣ ಸಂಪನ್ನೆ |ಕರವೀರ ಪುರದರಿಸಿ | ವರ ಸನ್ನಿಧಾನಕ್ಕೆನಿರುತದಿ ಸತ್ಪಾತ್ರೆ | ಪರಮ ಪಾವನ ಗಾತ್ರೆ 4 ಹಂಬಲೊಂದೆನಗುಂಟು | ಜಾಂಬುವತಿಯೆ ತುಳಸಿಇಂಬಿಟ್ಟು ಸಲಹುವೆ | ನೆಂಬ ಮತಿಯು ಇರೇ |ಬಿಂಬನು ಗುರು ಗೋ | ವಿಂದ ವಿಠಲ ಪಾದಅಂಬುಜದ್ವಯ ತೋರಿ | ಸಂಭ್ರಮದಲ್ಲಿ ಇರಿಸೆ 5
--------------
ಗುರುಗೋವಿಂದವಿಠಲರು
ಶ್ರೀ ಶೇಷ ಚಂದ್ರಿಕಾರಾಯರ ಸಂಕ್ಷಿಪ್ತ ಚರಿತ್ರೆ (ವಾರ್ಧಿಕ ಷಟ್ಪದಿ) ರಘುನಾಥರಂ ಸೇವಿಸೀ |ರಘುನಾಥ ತೀರ್ಥರಂ ಮಿಗಿಲಾಗಿ ಸೇವಿಸುವಅಘಗಳನು ನೀಗಿ ಶ್ರೀ ರಘುವರನ ಪ್ರೀತಿಯನುಮಿಗೆ ಪೊಂದಿ ಭವದಾಟಿ ನಗಧರನ ಲೋಕದೊಳು ಬಗೆ ಬಗೆಯ ಸುಖದಿ ಬಾಳ್ವ ಪ ಏಕಮೇವನ ಚರಣ | ತೋಕರೆಂದೆನಿಸಿ ಸಾತ್ವೀಕರೆನಿಪ ತಾಯ್ತಂದೆಗಾಕುವರನೆನಿಸುತಏಕಋಷಿ ಶೌನಕ ಸುಗೋತ್ರದೊಳುವೆಂಕಟವರಮೃಗಾಭಿದನು ಎನಿಸೀ ||ನೂಕಿ ಪಂಚಾಬ್ದಗಳನಾ ಕುವರಗಾಗುಪನಯನಕೈಗೊಂಡು ಗುರು ಚರಣನೇಕ ವಿಧ ಸೇವಿಸುತವಾಕಾದಿ ಶಾಸ್ತ್ರಗಳ ಸಾಕಷ್ಟು ಅಭ್ಯಸಿಸಿ ಸ್ವೀಕರಿಸಿ ದ್ವಿತೀಯಾಶ್ರಮಾ 1 ಅನುಜ ಅಂಭ್ರಣಿಯ ರಮಣಪದಅಂಭುಜಗಳಂ ಭಜಿಸಿ ಸಂಭ್ರಮದಿ ಸತಿವೆರಸಿ ಉಂಬುಡುವ ಸರ್ವವೆಲ್ಲ |ಬಿಂಬನಲಿ ಅನ್ವಯಿಸಿ ಇಂಬುಗೊಂಡವರಾಗಿಸಂಭ್ರಮದ ಸಂತಾನದಂಬಲನೆ ತಾ ತೊರೆದುಹಂಬಲಿಸಿ ಹರಿಪಾದ ಗುಂಭದಿಂದಲಿ ಭಜಿಸಿ ಇಂಬಿಟ್ಟ ಸನ್ಯಾಸದೀ 2 ಹತ್ತು ಮೂರ್ಮತ್ತೈದು ವತ್ಸರದಿ ವಿಠಲ ಪದವರ್ತಿ ಲಕುಮಿನರೆಯಣ ತೀರ್ಥರಿಂ ಸನ್ಯಾಸದುತ್ತ ಮಾಶ್ರಮ ಪೊಂದಿ ಭೃತ್ಯರಿಗೆ ಶ್ರೀಮಧ್ವ ಶಾಸ್ತ್ರಗಳ ಬಿತ್ತರಿಸುತಾ |ಮತ್ತೆ ಬದರಿಯ ಸೇತು ಉತ್ತಮ ಕ್ಷೇತ್ರ ತ್ರೈರಾವರ್ತಿ ಸಂಚರಿಸಿ ಬಲು ಮತ್ತ ಮಾಯ್ಗಳನಳಿದುಕೃತ್ತಿ ವಾಸನ ತಾತ ಉತ್ತಮೋತ್ತಮನೆಂದು ವತ್ತಿ ಪೇಳ್ದರು ಸುಜನಕೇ 3 ಶೇಷನಾವೇಷದಿಂ ವ್ಯಾಸಾಭಿದಾನ ಸ ನ್ಯಾಸಿ ಎನಿಸುತಲಿ ದೀನೇಶನಂಶಜರಿಂದವಾಸಿಸುತ ಹಂಪೆಯಲಿ ಲೇಸು ಸುತ್ಸೂತ್ರಗಳ ಭಾಷ್ಯಾವ್ಯಾಖ್ಯಾ ಚಂದ್ರಿಕಾವ್ಯಾಸ ತ್ರಯಗಳು ಎಂದು ಭಾಸುರದ ಕೀರ್ತಿಯಲಿಕಾಶಿ ಗಧದರ ಮಿಶ್ರ ಏಸು ಮಾಯ್ಗಳ ಜಯಕೆಲೇಸು ಕಾರಣವೆನಿಪ ಆಸಿ ಗ್ರಂಥಗಳ್ರಚನೆ ಬೇಸರದೆ ನೆಡೆಯುತಿರಲೂ 4 ವರಶಿಷ್ಯರಿಂವರೆಸಿ ಇರುತಿರಲು ದಿನ ಒಂದುಅರೆವಾಸಿಯಾದಂಥವರ ಚಂದ್ರಿಕಾಗ್ರಂಥಎರಡು ಅಧ್ಯಾಯಗಳು ಪೂರಣವು ಯಾರಿಂದ ಒರೆವುದೆಂದೆನೆ ಪ್ರಾರ್ಥಿಸೀ ||ವರನರರ ಸಲಹುದಕೆ ಹರಿಯಾಜ್ಞೆಯಿಂ ಮತ್ತೆಎರಡು ಮೂರ್ಜನ್ಮಗಳ ಧರಿಸುವೆವು ನಾವು ಎರಡೈ-ದರಿಲ್ಲಿಂದ ನರಜನ್ಮದೊಳು ಗ್ರಂಥ ಪೂರಣವು ಆಹುದೆಂದರು 5 ಉಕ್ತಿಗನು ರಘುನಾಥ ತೀರ್ಥರೆಂದುರೆ ಮರೆದುಗ್ರಂಥ ಶೇಷವ ರಚಿಸಿ ತತ್ತರಭಿಧರು ಎನಿಸಿತತ್ವ ಕಣಿಕಾಖ್ಯವನು ತಂತ್ರಸಾರದ ವ್ಯಾಖ್ಯಮತ್ತಿತರ ಗ್ರಂಥಗಳನು ||ಬಿತ್ತರಿಸಿ ಹರಿಯನ್ನು ತೃಪ್ತಿಸುತ ಪೂರ್ವದಲಿಛಾತ್ರರಂ ಪಡೆದಂತೆ ಮತ್ತೆ ಈ ಜನ್ಮದಲಿಉತ್ತಮರು ಶಿಷ್ಯ ಸಂಪತ್ತಿನಿಂ ಮೆರೆದಿಹರು ತತ್ವಕೋವಿದರು 6 ತೈಜಸ ಪೇಳಿದ 7 ಮಹಿಷಿ ಕ್ಷೇತ್ರದೊಳುಸಿರಿ ಕೃಷ್ಣನಂ ನಿಲಿಸಿ ಹರಿರಥೋತ್ಸವ ಪೂಜೆವರುಷ ವರುಷದಿ ಗೈಯ್ಯೆವರ ಭೂಮಿ ಕಾಣೆ ಭೂಸುರರಿಗಿತ್ತಿಹರು ಅಯ್ಯಾ 8 ಆಷಾಢ ಸಿತ ತೃತಿಯ ಭಾಸಿಸುವ ಮಧ್ಯಾಹ್ನಕಾಶೀಗೇ ಮಿಗಿಲೆನಿಪ ತ್ರಿಮಕೂಟಗಾಗಮಿಸಿಭೂಸುರರಿಗೇ ತಮ್ಮ ಆಶ್ವಾಸ ತಿಳಿಸುತ್ತ ಲೇಸು ಸಂಗಮವೀಯತಾ ||ಶೇಷ ಚಂದ್ರಿಕಾಚಾರ್ಯ ಶ್ರೀಶನರ್ಚಿಸಿ ಕಾಯರಮೇಶ ಚರಣದಲೀಯ ಲೋಸುಗದಿ ಮನಮಾಡಿಆಸುಸತ್ತಿಥಿ ಚೌತಿ ಲೇಸೆನಿಸಿ ಉದಿಸುತಿರಲೀ ಶರೀರವನು ಅರ್ಪಿಸಿದರು 9 ಇವರ ವೃಂದಾವನವು ಅಶ್ವತ್ಥ ನರೆಯಣನಪವಿತರದ ಪದ ಧ್ರುವಕೆ ಬೀಳುವ ಸ್ಥಳದೊಳಗೆ ಸ್ಥಾಯವದು ಮಠಬಿರಿದುಗಳು ಅಶ್ವತ್ಥತರುಛಾಯವೇ ಛತ್ರಿಯೆನಿಸುತಿಹುದೂ ||ಕವೇರ ಕನ್ಯೆಯು ಕಪಿಲ ದಿವ ದೀವಟಿಗೆ ಸಮವುಇವರಿರುವ ಕ್ಷೇತ್ರವೇ ಪ್ರವರ ಗಯಪ್ರಯಾಗವಿಶ್ವೇಶ ಸನ್ನಿಧಿಯು ಇವರ ಗುಣ ಸ್ಥವನವೇಶಶ್ವದಾನಂದ ಸಂದೋಹವು 10 ವತ್ಸರವು ನೂರೆರಡು ಸತ್ಸಿದ್ದಿಗೇ ಪೊತ್ತಸತ್ಸರೀರವ ತ್ಯಜಿಸಿ ಮತ್ಸರಾದ್ವಿರಹಿತರುವತ್ಸಾರಿ ಸಿರಿಕೃಷ್ಣ ವತ್ಸರೆಂದೆನಿಸುತ್ತ ಸತ್ವ್ಸಭಾವದಿ ಮೆರೆಯುತಾ ||ಹೃತ್ಸರೋಜದಿ ಪವನ ಹೃತ್ಸರೂಜದಿ ಶಿರೀವತ್ಸಲಾಂಛನ ಗುರುಗೋವಿಂದ ವಿಠಲಪದಸತ್ಸರೋಜದ ಧ್ಯಾನ ಉತ್ಸುಕದಿ ಗೈದು ತನವತ್ಸರ್ಗ ಬೀಷ್ಟಗಳಗರೆವಾ 11
--------------
ಗುರುಗೋವಿಂದವಿಠಲರು
ಎಂಥ ಶ್ರೀಮಂತಾನಂತನೆ ಶ್ರೀಕಾಂತೆಯ ಕಾಂತಎಂಥ ಶ್ರೀಮಂತಾನಂತನೆ ಪ.ಬೊಮ್ಮನು ಹೆಮ್ಮಗ ಮೊಮ್ಮ ಮೃಡಮ್ಮರಿಮೊಮ್ಮ ಶಚಿಮನೋರಮ್ಮ ಸ್ಮರಮ್ಮಗಅಮ್ಮರಸಮ್ಮೂಹ ನಿಮ್ಮನುಗಮ್ಯರುನಮ್ಮೊ ನಮ್ಮೊ ಪರಮ್ಮ ಮಹಿಮ್ಮ 1ಪನ್ನಗಾಪನ್ನ ಶಯನ್ನಕ್ಕೆ ಬೆನ್ನೀವಪನ್ನಗಾಶನ್ನ ವಾಹನ್ನ ರತುನ್ನ ಭವನ್ನ ಸುಖೋನ್ನತರನ್ನಾಗರ ನಿಜನಿನ್ನಿದಿರಿನ್ನಾರೆನ್ನೊಡೆಯನ್ನೆ 2ಬಲ್ಲ ಕೈವಲ್ಯಜÕರೊಲ್ಲಭ ಸುಲ್ಲಭಬಲ್ಲಿದಕ್ಷುಲ್ಲರದಲ್ಲಣನಲ್ಲವೆಹುಲ್ಲಲುಗಲಳವಲ್ಲ ನೀನಿಲ್ಲದೆಸಲ್ಲದು ಸೊಲ್ಲದು ನಿಲ್ಲದಿದೆಲ್ಲ 3ಅಂಗಕೆ ಹೆಂಗಳಾಲಿಂಗನಾಂತ ಗಡಮಂಗಳಾಪಾಂಗ ವಿಶ್ವಂಗಳ ಮಂಗಳಸಿಂಗರದುಂಗುಟ ಸಂಗದಗಂಗೆ ಜಗಂಗಳಘಂಗಳ ಹಿಂಗಿಪಳು ರಂಗ 4ಅಂಬರದಂಬುಗೆ ತುಂಬೆ ವಿಶ್ವಂ ಬಸುರಿಂಬಿಲಿ ಇಂಬಿಟ್ಟುಕೊಂಬ ಕೃಪಾಂಬುಧಿಡಿಂಬಕದಂಬದ ಬಿಂಬ ಪ್ರಸನ್ವೆಂಕಟನಂಬಿದರ್ಗಿಂಬೀವನೆಂಬ ಕುಟುಂಬಿ 5
--------------
ಪ್ರಸನ್ನವೆಂಕಟದಾಸರು