ಒಟ್ಟು 33 ಕಡೆಗಳಲ್ಲಿ , 19 ದಾಸರು , 32 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
* ಶ್ರೀ ಪರಾತ್ಪರವಿಠಲ ಪಾಲಿಸಿವರ ಪ ಚರಾಚರಾತ್ಮಕದೇವ ಪರಮ ಪ್ರೀತಿಯಿಂದ ಅ.ಪ. ಮೂರ್ತಿ ಭಾಗವತ ಪ್ರಧಾನ ಸಾಗರೋಪಮ ಭಕ್ತಿ ಪ್ರದದೇವ ಬಾಗಿ ಬೇಡುವೆ ವಿಜ್ಞಾನರೂಪದಿ ನಿನ್ನ 1 ಭಾಗವತೋತ್ತಮರ ಪದ್ಧತಿಯಲಿ ಗುಪ್ತಸಾಧನ ಪಾಲಿಸು ಶುಕಾನುಬಂಧದಿ ಶುಕಪ್ರೇಮ ಪಾತ್ರನಾಗಿ ಸುಖಮಯನ ಭಜಿಸುತಿರಲಿ 2 ಆಪ್ತತಮ ಗುಣಸಮುದ್ರ ಶ್ರೀಜಯೇಶ- ವಿಠಲ ಪೂರ್ಣ ಪ್ರೀತಿಯಲಿ ನಿತ್ಯ ಭಾಗವತರ ಸಂಗದಲಿಟ್ಟು ನಿರುಪಮ ಸುಖನೀಡು 3 ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲಶೀಲಗಳನ್ನು ಎಂದೊ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆನೆಲವಿತ್ತ ದಯವಂತ ಶ್ರೀಕಾಂತ 3
--------------
ಜಯೇಶವಿಠಲ
ಆದಿಯಲಿ ಮಧುಕೈಟಬರನು ಸಂಹರಿಸಿದಂಥ ಶೂರನೆ ವೇದವನು ಕದ್ದೊಯ್ದ ದಾನವನೊಳು ಕಾದಿಗೆದ್ದ ಧೀರನೆ 1 ಹದಿನಾರು ಸಾವಿರ ಗೋಪಿಯನಾಳಿದಾಮಿತ ಬಲವಂತನೆ ಕದನಕೊದಗಿದಸುರರನ್ನು ಸದೆ ಬಡಿದ ಪ್ರಖ್ಯಾತನೆ 2 ಸಾಧು ಸಜ್ಜನರ ಸಂತಾಪ ಕಳೆದಾಮೋದ ತೀರ್ಥಾರಾಧ್ಯನೆ ಆದಿದೈವಿಕಾದಿ ಈತಿ ಬಾಧೆ ಕಳೆಯೊ ರಂಗೇಶವಿಠಲನೆ 3
--------------
ರಂಗೇಶವಿಠಲದಾಸರು
ಎಂತು ವರ್ಣಿಸಲಮ್ಮ ನಾನು ಕಂತುಜನಕನಾನಂತನಗಮ್ಯನನÀಂತವತಾರನಪ. ಸಂತತ ಸಜ್ಜನರಂತರಂಗದಲಿ ನಿಂತಿಹ ಲಕ್ಷ್ಮೀಕಾಂತನ ಮಹಿಮೆಯ ಅ.ಪ. ನೀರೊಳಾಡುತ ಭಾರವ ಹೊರೆವ ಧಾರುಣಿಯ ಪೊರೆವ ಘೋರ ರೂಪದಲಿ ಭೂಮಿಯನಳೆವ ಕ್ರೂರನೃಪರಳಿವ ಆ ರಾವಣನ ಬಲವ ಮುರಿವ ಚೋರ ದಿಗಂಬರವ ಚಾರು ಕುದುರೇಯನೇರಿ ಬರುವ ಸುಕು- ಮಾರ ಜಗದೊಳು ಶೂರ ಜಾರುವ ಕಠಿಣಶರೀರದಿ ಭೂಮಿಯ ಸೇರುವ ಕಂಬವಿದಾರಣ ಮಾಡುವ ಮೀರುವಭುವನಕೆ ತೋರುವ ಪರಶುವ ಜಾರ ವಸನಹೀನ ಧೀರ ಸುಅಶ್ವವನೇರಿ ಮೆರೆವನ 1 ನಿಗಮೋದ್ಧರಿಸುವ ನಗವನು ತರುವ ಜಗತಿಯುದ್ಧರಿಸುವ ಮಗುವ ಪಾಲಿಸುವ ಮಾಯದಿ ಬೆಳೆವ ದುಗುಡ ನೃಪಕುಲವ ಬಗಿದು ಭಾಸ್ಕರ ತನಯನಿಗೊಲಿವ ನೆಗಹಿ ಗೋವರ್ಧನವ ಬಗೆಬಗೆ ಮಾತಾಡಿ ಸುಗುಣ ವಾಜಿಯನೇರಿ ಬಂದ ಸಚ್ಚಿದಾನಂದ ಹುಗಿದು ಸೋಮಕನ ಅದ್ರಿಗೆ ಬೆನ್ನಿತ್ತು ಅಗಿದು ಭೂಮಿಯ ನರಮೃಗನಾಗುತ ಗಗನಕೆ ಬೆಳೆದು ಘಾತಿಸಿ ಕ್ಷತ್ರಿಯರ ರಘುವರ ಯದುಪತಿ ವಿಗತವಸನನಾಗಿ ಜಗಕೆ ಬಲ್ಲಿದ ಹಯವೇರಿ ಬರುವನ 2 ನಳಿನೋದ್ಭವನಿಗಾಗಮವನಿತ್ತ ಗಿರಿಯ ನಿಲಿಸಿತ್ತ ಇಳೆಯ ಕದ್ದೊಯ್ದ ದಾನವನಳಿದ ನರಹರಿ ತಾನಾದ ಬಲಿಮುಖವ ಮುರಿದ ಖಳಭೂಪರಳಿದ ದÀಶಶಿರನÀಳಿದ ಕೊಳಲನೂದಿದ ದುಷ್ಟ ಲಲನೇರ ವ್ರತವಳಿದ ಕಲಿಯ ಮರ್ದಿಸಿದ ಹೊಳೆವ ಬೆನ್ನಲಿ ಗಿರಿತಳವೆತ್ತಿದನ ನೆಲನ ಬಗಿದು ಕಂಬದಲಿ ಬಂದವನ ಬೆಳೆದ ಬೊಮ್ಮಾಂಡಕೆ ಭಾರ್ಗವಾಧಿಪನ ಬುದ್ಧ ಕಲ್ಕಿ ಚೆಲುವ ಹಯವದನನ ಬಲ್ಲಿದನ 3
--------------
ವಾದಿರಾಜ
ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳು ಹಯಗ್ರೀವಮೂರ್ತಿ ಪ. ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ 1 ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ ಪರಶು ಪಿಡಿದು ಬಾಹುಜರ ಕಿತ್ತೆ ನೆರೆನಂಬಿದಗೆ ಸ್ಥಿರಪಟ್ಟವನಿತ್ತೆ ದೊಡ್ಡ ದುರುಳಕಾಳಿಂಗನ ಶಿರದಿ ನಿಂತೆ 2 ಪರವ್ರತೆಯರ ಮಾನಭೇದನ ಚತುರ ತುರಗವೇರಿ ನಲಿವನ ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ ಸತತ ರಕ್ಷಿಪ ಶ್ರೀ ಹಯವದನ 3
--------------
ವಾದಿರಾಜ
ಗೋವಿಂದೋ ನಾರಾಯಣ ಗೋವಿಂದೋ ನಾರಾಯಣ ಪ ವೇದಗಳು ಕದ್ದೊಯ್ದು ದೈತ್ಯ ಪಯೋಧಿಯೊಳಗಿಡಲು ಮತ್ಸ್ಯ ರೂಪದೊಳಂದು ವೇದಗಳ ತಂದನಮ್ಮ 1 ಬೆಟ್ಟವು ಮುಳುಗು ಸಮಯದಿ ನಮ್ಮರಂಗ ಹುಡಿಗಟ್ಟಿ ಸುರರರಕ್ಷಿಸಿದನಮ್ಮ 2 ಮಡಿದೊಯ್ಯಲು ಕ್ರೋಡತನ ತಾಳ್ದವನ ಛೇದಿಸಿ ದವಡೆಯೊಳ- ವನಿಯನೆತ್ತಿದನಮ್ಮ 3 ಕಶ್ಯಪನ ಸಿಗಿದನಮ್ಮ ಕೀರ್ತಿಯ ಪಡೆದನಮ್ಮ 4 ದಾನವ ಬೇಡಿದನು ಬಲಿಯಕೊಂದ ನಮ್ಮ 5 ನಿತ್ಯಾತ್ಮಕನಾಗಿ ಮೆರೆದ ನಮ್ಮ 6 ವಾರಿಧಿಯನು ಬಂಧಿಸಿದನಮ್ಮ ಮೀರಿದ ರಕ್ಕಸನಗಳ ನಿಳುಹಿ ನಾರಿ ಸೀತೆಯ ತಂದನಮ್ಮ 7 ಕಂಸನನು ಕೊಂದನಮ್ಮ ಗೋವುಗಳನು ಕಾಯ್ದನಮ್ಮ 8 ಬೌದ್ಧರೂಸವತಾಳ್ದನಮ್ಮ ಕೀರ್ತಿಯ ಪಡೆದ ನಮ್ಮ 9 ತುರುಗವ ನೇರುತ ಬಂದನಮ್ಮ ಕರುಣದಿಂದಲಿ ಕಾಯ್ದನಮ್ಮ 10 ಶ್ರೀ ಕೃಷ್ಣ ಮುಕುಂದನಮ್ಮ 11
--------------
ಕವಿ ಪರಮದೇವದಾಸರು
ಜಯವೆನ್ನಿ ಜನರೆಲ್ಲ ಸ್ವಾಮಿ ಭವರೋಗವ್ಶೆದ್ಯಗೆ ಭಾವಜನಯ್ಯಗೆ ಕುವಲಯಧರಸ್ವಾಮಿಗೆ ನಾರಾಯಣ ಪ. ಆಗಮಚೋರನ ಗೆಲಿದ ರಾಮ ಬೇಗನೆ ಸುರರಿಗೆ ಸುಧೆಯೆರೆದ ಕೃಷ್ಣ ನಾಗಲೋಕವ ಹೊಕ್ಕವನ ಕೊಂದಾಗ ಶಿಶು ಕೂಗೆ ಕಂಬದಿ ಬಂದಗೆ ನಾರಾಯಣ 1 ಭಾಗೀರಥಿಯ ಪಡೆದೆ ರಂಗ ಬಾಗಿಸಿ ತಾಯ ಶಿರವ ಕಡಿದೆ ರಾಮ ನೀಗಿದಶ್ವವಾಹಕಗೆ ನಾರಾಯಣ 2 ಜಲದೊಳಗಾಳ್ದನ ಸೀಳ್ದ ರಾಮ ಅಲಸದೆ ಗಿರಿಯ ಬೆನ್ನಲಿ ತಾಳ್ದ ಕೃಷ್ಣ ನೆಲನ ಕದ್ದೊಯ್ದಸುರನ ಮರ್ದಿಸಿದ ಶಿಶು- ಗೊಲಿದು ಬಲಿಯ ತುಳಿದೆ ನಾರಾಯಣ 3 ಛಲಪದದಿ ರಾಯರ ಕಡಿದೆ ರಾಮ ಬಲು ಬಿಲ್ಲನು ಕರದಲ್ಲಿ ಪಿಡಿದೆ ಕೃಷ್ಣ ಕೋ- ಡುಳ್ಳವ ಕೋಪದ ಮುಖ ದೈನ್ಯದಿ ಬೇಡುವೆ ಕೊಡಲಿಗಾರ ನಾರಾಯಣ 4 ರೂಢಿಯೊಳು ರಾಯರ ಗೆಲಿದ ರಾಮ ಓಡಿ ಹೊಕ್ಕನೆ ದುರ್ಗದ ಜಲ ಕೃಷ್ಣ ನೋಡೆ ನಾರಿಯರ ವ್ರತವಳಿದೆ ಹಯವದನ ರೂಢರಾವುತನಾದ ನಾರಾಯಣ5
--------------
ವಾದಿರಾಜ
ತೋರುವನೂ | ದಯ ದೋರುವನೂ|| ಭಕ್ತರಿಗೆ | ದಯ| ದೋರುವನು ಪ ತೋರುತಲವರನು | ಪರಿಪರಿವಿಧದೊಳು ಪೊರೆಯುವನೂ | ಹರಿ | ಮೆರೆಯುವನೂಅ. ಪ ಆದಿಯೊಳಾ| ತಮನೆಂಬಾಸುರನನು || ಭೇದಿಸಿ ವೇದವ ತಂದವನು || ಮೋದದಿ ಗಿರಿಯನು | ಕೂರ್ಮವತಾರದಿ | ಸಾಧಿಸಿ ಬೆನ್ನೊಳು ಪೊತ್ತವನು 1 ಧರಣಿಯ ಕದ್ದೊಯ್ದಸುರನ ಬಗಿಯಲು | ವರಾಹವತಾರವ ತಳೆದವನು|| ನರಮೃಗರೂಪದೊ| ಳುದಿಸುತ ಕಂಬದಿ| ವರ ಪ್ರಹ್ಲಾದನ ಪೊರೆದವನು 2 ಬಲಿಯೊಳು ದಾನವ |ಬೇಡುತ ಮೂರಡಿ| ಯೊಳಗಿಳೆಯನು ತಾನಳೆದವನು|| ಭಾರ್ಗವನೂ ಭೃಗು ಮೊಮ್ಮಗನು| 3 ಶರಣಗೆ ಲಂಕಾ| ಪುರದೊಡೆತನವನು| ಸ್ಥಿರವಾಗಿತ್ತಿಹ ರಾಘವನು|| ತುರುಗಳ ನಿಕರವ ಪೊರೆದವನು 4 ಬೌದ್ದವತಾರವ | ಧರಿಸಿದ ಮಹಿಮನು| ಕಲ್ಕಿಸ್ವರೂಪದಿ ಮೆರೆಯುವನು|| ಶ್ರಧ್ದೆಯೋಳವನನು | ಭಜಿಸಲು ಮುದದಲಿ | ಅಬ್ಧಿವಾಸ ಮೈದೋರುವನು 5 ಮಧುವನದಲಿ ಧ್ರುವ | ತಪವಾಚರಿಸಲು | ಮುದದೊಳು ಧ್ರುವಪದವಿತ್ತವನು | ಸುದತಿಯು ಮೊರೆಯಿಡ | ಲಕ್ಷಯ ಸೀರೆಯ | ಇತ್ತವನೂ ದಯವಿತ್ತವನು6 ಶೇಷಗಿರೀಶನು | ದಾಸರಿಗೊಲಿದವ | ರಾಸೆಯ ಸಲಿಸಿದ | ಶ್ರೀವರನು || ಶೇಷಶಯನ ಹರಿ | ದಾಸದಾಸನೆ | ನ್ನಾಸೆಯನೂ ತಾನೀಯುವನು 7 ಪಂಕಜನಾಭನು | ಪರಮಪವಿತ್ರನು | ಕಿಂಕರಜನಪರಿಪಾಲಕನು || ಶಂಕಚಕ್ರಂಗಳ ಧರಿಸಿದ ಶ್ರೀಪತಿ | ವೆಂಕಟೇಶ ದಯದೋರುವನು 8
--------------
ವೆಂಕಟ್‍ರಾವ್
ನಾಗವೇಣಿಯೆಂದರೆ ಹೀಗೇಕೆ ಮಾಳ್ಪಿರಿ ಬಾಗಿಲು ಕುಟ್ಟುವುದೇಕೆ ನೀವ್ ಪ ಬಾಗಿಲು ಬಿಡುವೊಡೆ ಹೇಗದು ಸಾಧ್ಯವೊ ಬೇಗ ಹೇಳು ನೀನಾರು ಇನ್ನು ಅ.ಪ. ಆಗಮ ಕದ್ದೊಯ್ದ ಅಸುರನ ಕೊಂದು ನಾ ನಾನಾಗಲೆ ನಾಲ್ಮೊಗಗಿತ್ತೆ ಕೇಳಿ ಆಗಲೆ ಆಗಮದಲಿ ನಿನಗರ್ತಿಯಷ್ಟಿದ್ದರೆ ಮೂಗನ್ಹಿಡಿದು ಕೂಡೋ ಬೇಗ 1 ಮೂಗನ್ಹಿಡಿವ ಒಣಯೋಗಿಯು ನಾನಲ್ಲ ಆ ಗಿರಿಯನು ನಾ ಪೊತ್ತೆ ಕೇಳಿ ಈಗ ನಾವರಿದೆವು ನೀ ಗಿರಿ ಹೊರವಡೆ ಇಂದು 2 ಕಳ್ಳನಲ್ಲ ಭೂಮಿ ಕಳ್ಳನ ಕೊಂದೆನೆ ಸೂಕರ ನಾನಾಗಿ ಕೇಳಿ ಘೊಳ್ಳನೆ ನಗುವರು ಕೇಳಿದವರು ಇದ ಮೆಲ್ಲು ಹೋಗಿ ನೀ ಮಣ್ಣ 3 ಮಣ್ಣು ಮಾತೇಕೆ ಹಿರಣ್ಯಕನನು ಕೊಂದೆ ಚಿಣ್ಣನ ಕಾಯ್ದೆನು ಕೇಳಿ ಚಿಣ್ಣರ ಸಾಕ್ಷಿಯ ಬಿಟ್ಟರೆ ನಿನಗಿಲ್ಲ ಚಿಣ್ಣನಾಗು ನೀ ಹೋಗÉೂ 4 ಸಣ್ಣವನಾದರೂ ಘನ್ನನು ನಾನಾದೆ ಪುಣ್ಯನದಿಯ ನಾ ಪೆತ್ತೆ ಕೇಳಿ ಬಿನ್ನಾಣ ಮಾತಿಗೆ ಸೋಲುವರಲ್ಲವೊ ಬೆನ್ನು ತಿರುಗಿಸಿ ನೀ ಪೋಗೊ5 ತಿರುಗಿಸಿದವನಲ್ಲ ಬೆನ್ನನೊಬ್ಬರಿಗೂ ನಾ ಪರಶುಧರನು ನಾ ಕೇಳಿ ಅರಸರಲ್ಲ ನಾವ್ ಸರಸಿಜನೇತ್ರೆಯರು ಕರುಣರಹಿತ ನೀ ಪೋಗೊ 6 ಚರಣರಜದಿ ನಾ ಶಿಲೆಯನುದ್ಧರಿಸಿದೆ ಕರುಣರಹಿತನೆ ಪೇಳಿ ನೀವು ಸರಸ ಮಾತುಗಳನು ಮನ್ನಿಸಿ ಎಮ್ಮನು ಕರಿಗಿರೀಶ ನೀ ಕಾಯೋ ಸ್ವಾಮಿ 7
--------------
ವರಾವಾಣಿರಾಮರಾಯದಾಸರು
ನಾರಾಯಣ ನರಹರಿ ನಾರದಪ್ರಿಯ ನರಸುರಮುನಿ ವರದಾಯಕ ಧ್ರುವ ವೇದ ಕದ್ದೊಯ್ದವನ ಮರ್ದಿಸಲಿಕ್ಕೆ ಸಾಧಿಸಿ ಬಂದ್ಯೊ ಮಚ್ಛರೂಪನೆ ಮಾಧವ ನೀ ಬಂದು ಕೂರ್ಮನಾಗಿ ನಿಂದು ಮೇದಿನಿಯ ಭಾರವ ತಾಳಿದೆ 1 ಧರೆಯ ಕದ್ದಸುರನ ಕೋರದಾಡಿಂದ ಸೀಳಿ ವರಾಹರೂಪಬಂದು ದೋರಿದೆ ಹಿರಣ್ಯಕಶ್ಯಪ ವಿದಾರಣ ಮಾಡಿ ನೀ ತರಳ ಪ್ರಲ್ಹಾದನ ರಕ್ಷಿಸಿದೆ 2 ವಾಮನ ರೂಪವದೋರಿದೆ ನೇಮದಿಂದಲಿ ಪಿತನಾಜ್ಞೆಯ ನಡೆಸಲು ಸ್ವಾಮಿ ಭಾರ್ಗವರೂಪ ತಾಳಿದೆ 3 ದೇವತೆಗಳ ಸ್ಥಾಪಿಸಲಿಕ್ಕೆ ಬಂದು ದೈತ್ಯ ರಾವಣನ ಕೊಂದ್ಯೊ ಶ್ರೀರಾಮ ನೀ ದೇವಕಿ ಉದರದಲಿ ಜನಿಸಿ ಬಂದು ಕೃಷ್ಣ ಗೋವಳರನ್ನು ಪ್ರತಿಪಾಲಿಸಿದೆ 4 ಪತಿವ್ರತೆಗಳ ವ್ರತ ಅಳಿಯಲಿಕ್ಕಾಗಿ ಬಂದು ಸುಳಹುದೋರಿದೂ ಬೌದ್ದ್ಯರೂಪನೆ ಹತ್ತಿ ಕುದರಿಯ ಒತ್ತಿ ಆಳಲಿಕ್ಕೆ ಮತ್ತೆ ಬಂದೆಯ ಕಲ್ಕಿರೂಪನೆ 5 ಹತ್ತವತಾರ ಧರಿಸಿ ಬಂದು ಕ್ಷಿತಿಯೊಳ ಪತಿತರ ಪಾವನಗೈಸಿದೆ ಭಕ್ತಜನರುದ್ದರಿಸಲಿಕ್ಕೆ ಬಂದು ಶಕ್ತಿಪರಾಕ್ರಮದೋರಿದೆ 6 ಸಾವಿರ ನಾಮದೊಡೆಯ ಸ್ವಾಮಿ ನೀ ಬಂದು ಭಾವಿಸುವರೊಡನೆ ಕೂಡಿದೆ ಭವಭಂಧನ ತಾರಿಸಿ ಮಹಿಪತಿಯ ಪ್ರಾಣ ಪಾವನ ನೀ ಮಾಡಿದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ನರಹರಿಯೆ ಪ. ನಾರಾಯಣ ನರಹರಿಯೆ ಹಯವದನ ಸ್ವಾಮಿ ನೀ ಎನಗೆ ದಯವಾಗೊ ಅ.ಪ. ನಿಗಮವ ಕದ್ದೊಯ್ದ ದುಗುಡ ದೈತ್ಯನ ಕೊಂದು ಆಗಮವ ತಂದು ಅಜಗಿತ್ತೆ ಆಗಮವ ತಂದು ಅಜಗಿತ್ತೆ ಹಯವದನ ಆದಿಮೂರುತಿಯೆ ದಯವಾಗೊ 1 ಕೂರ್ಮರೂಪದಿ ಬಂದು ಆ ಗಿರಿಯನೆತ್ತಿದ ಪ್ರೇಮದಿ ಸುರರಿಗಮೃತವ ಪ್ರೇಮದಿ ಅಮೃತವನಿಕ್ಕಿದ ಹಯವದನ ಸ್ವಾಮಿ ನೀ ಎನಗೆ ದಯವಾಗೊ 2 ಕ್ರೋಡರೂಪದಿ ಬಂದು ಮೂಢದೈತ್ಯನ ಕೊಂದು ರÀೂಢಿಯ ನೆಗಹಿ ಜಗಕಿತ್ತೆ ರÀೂಢಿಯ ನೆಗಹಿ ಜಗಕಿತ್ತೆ ಹಯವದನ ಪ್ರೌಢ ನೀ ಎನಗೆ ದಯವಾಗೊ 3 ಶಿಶುವ ಬಾಧಿಸುತಿರ್ದ ಕಶಿಪನ್ನ ಸೀಳಿದಿ ಕುಶಲದಿಂ ಕರುಳ ಮಾಲೆಯ ಕುಶಲದಿಂ ಮಾಲೆ ಧರಿಸಿದ ಹಯವದನ ಬಿಸಜಾಕ್ಷ ಎನಗೆ ದಯವಾಗೊ 4 ವಾಮನರೂಪದಿ ಬಂದು ಭೂಮಿ ಓರಡಿ ಮಾಡಿ ವ್ಯೋಮಕ್ಕೆ ಚರಣವ ನೀಡಿದೆ ವ್ಯೋಮಕ್ಕೆ ಚರಣವ ನೀಡಿದ ಹಯವದನ ವಾಮನ ಎನಗೆ ದಯವಾಗೊ 5 ಕೊಡಲಿಯ ಪಿಡಿದು ಕಡಿದೆ ದುಷ್ಟನೃಪರ ಹಡೆದ ತಂದೆಯ ಮಾತು ಸಲಿಸಿದೆ ಹಡೆದ ತಂದೆಯ ಮಾತು ಸಲಿಸಿದ ಹಯವದನ ಒಡೆಯ ನೀ ಎನಗೆ ದಯವಾಗೊ 6 ಸೀತೆಗೋಸ್ಕರ ಪೋಗಿ ಸೇತುವೆಯ ಕಟ್ಟಿದೆ ಭೂತ ರಾವಣನ ಮಡುಹಿದೆ ಭೂತ ರಾವಣನ ಮಡುಹಿದೆ ಹಯವದನ ಖ್ಯಾತ ನೀ ಎನಗೆ ದಯವಾಗೊ 7 ಗೊಲ್ಲರ ಒಡನಾಡಿ ಬಲ್ಲಿದಸುರÀನ ಕೊಂದು ಮಲ್ಲರೊಡನಾಡಿ ಮಡುಹಿದೆ ಮಲ್ಲರೊಡನಾಡಿ ಮಡುಹಿದ ಹಯವದನ ಫುಲ್ಲಾಕ್ಷ ಎನಗೆ ದಯವಾಗೊ 8 ತ್ರಿಪುರರ ಸತಿಯರಿಗುಪದೇಶವನಿಕ್ಕಿ ತ್ರಿಪುರರನೆಲ್ಲ ಮಡುಹಿದೆ ತ್ರಿಪುರರನೆಲ್ಲ ಮಡುಹಿದ ಹಯವದನ ನಿಪುಣ ನೀ ಎನಗೆ ದಯವಾಗೊ 9 ತೇಜಿಯನೇರಿ ರಾಹುತನಾಗಿ ನೀ ಮೆರೆದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಹಯವದನ ಭೋಜ ನೀ ಎನಗೆ ದಯವಾಗೊ 10 ವಾದಿರಾಜರಿಗೊಲಿದು ಸ್ವಾದೆಪುರದಲಿ ನಿಂದು ವೇದದ ಕಥೆಯನರುಹಿದೆ ವೇದದ ಕಥೆಯನರುಹಿದ ಹಯವದನ ಮಾಧವ ನೀ ಎನಗೆ ದಯವಾಗೊ 11
--------------
ವಾದಿರಾಜ
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಭವ - ಸಂಕಟ ಕಳೆ - ವೆಂಕಟೇಶ ||ಅ|| ಪಂಕ ಸಿರಿ ವೆಂಕಟೇಶ ಅ.ಪ. ಮಹ ವೇದಗಳನು ಕದ್ದ ದೈತ್ಯನ ಕೊಂದೆ ವೆಂಕಟೇಶಮಹ ಮೀನನಾಗಿ ನೀ ಸತ್ಯವ್ರತಗೆ ಒಲಿದೆ ವೆಂಕಟೇಶ 1 ಕೂರ್ಮ ನೀನಾಗುತ - ವೆಂಕಟೇಶಮಂದರಗಿರಿ ಪೊತ್ತು ಭಕ್ತರ ಸಲಹಿದೆ ವೆಂಕಟೇಶ 2 ಮತ್ತರಾದ ಮಧುಕೈಟಭರ - ಕೊಂದೆ ವೆಂಕಟೇಶಮತ್ತೆ ಭೂ ಚಾಪೆಯ ಮಾಡಿದವನ ಕೊಂದೆ ವೆಂಕಟೇಶ 3 ಕಶಿಪು ಬಾಧೆ ಕಳೆಯಲು - ತರಳಗೆ ವೆಂಕಟೇಶಕ್ಷಣದಿ ಕಂಭದಿ ಬಂದು ದುರುಳನ ಸವರಿದೆ ವೆಂಕಟೇಶ 4 ಮೂರು ಪಾದವ ಬೇಡಿ - ಬಲಿಯ ಭಂಜಿಸಿದೆ ವೆಂಕಟೇಶಪಾರಗಾಣದ ಮಹಿಮೆ ಬಾಗಿಲ ಕಾಯ್ದೆ ವೆಂಕಟೇಶ 5 ಹಂಚಿ ಮೆರೆದೆ ವೆಂಕಟೇಶ 6 ಮಡದಿಯ ಕದ್ದೊಯ್ದ ದೈತ್ಯನನ್ನಳಿದೆ ವೆಂಕಟೇಶಧೃಢ ಭಕುತಗೆ ಲಂಕೆಯ ಪಟ್ಟಣವಿತ್ತೆ ವೆಂಕಟೇಶ 7 ಗೋಪಿ ಜನರ ಪ್ರಿಯ | ಸುಪರ್ಣವರವಾಹ ವೆಂಕಟೇಶಪಾಪಿ ಕೌರವ ಕುಲಹರ ಧರ್ಮ ಸ್ಥಾಪಿ ವೆಂಕಟೇಶ 8 ಬೆತ್ತಲೆ ನೀ ನಿಂತು ಕುತ್ಸಿತ ಅಸುರರಸದೆದ್ಯೋ ವೆಂಕಟೇಶಕುತ್ಸಿತ ಅಸುರರ ಮೋಹಿಸುತಳಿದೆಯೊ ವೆಂಕಟೇಶ 9 ತುರಗನೇರಿ ಕಲ್ಕಿ ಎನಿಸಿಕೊಂಡೆಯೊ ವೆಂಕಟೇಶಉರಗಾದ್ರಿ ವಾಸ ಗುರು ಗೋವಿಂದ ವಿಠಲ ವೆಂಕಟೇಶ 10
--------------
ಗುರುಗೋವಿಂದವಿಠಲರು
ಭವ ಭಯ ವಿನಾಶ ಭೋ ಭಕ್ತವಿಲಾಸ ಭೋ ಪಾ-ಪವಿನಾಶ ಭೋ ಬಾಡದ ರಂಗೇಶ ಭೋ ಪ ಹರಿಯ ಸುತನಿಗೆ ಅಭಯವನಿತ್ತೆ ಹರಿಯ ಮಗನಾ ಕೊಂದೆಹರಿಯೆನಲು ಹರಿರೂಪ ತಾಳಿದೆಹರಿಯೊಳಡಗಿದೆ ಮತ್ತೆಹರಿಯನಗ್ರಜ ಕೋಟಿ ತೇಜನಹರಿಯ ವದನನೆಂಬ1 ಶಿವನ ಮಗಳೊಡಗೂಡಿ ಮತ್ತೆಶಿವಮಗಳನು ಮಾವನಿಗಿತ್ತೆಶಿವನ ಉಪಟಳಕಳುಕಿ ಗೋಕುಲಶಿವನ ಕರದಲಿ ಪೊತ್ತೆಶಿವನ ಧನುವನು ಖಂಡಿಸಿ ಮತ್ತೆಶಿವನ ತಲೆಯೇರಿ ನಿಂದೆಶಿವನ ಭೋಜನವಾಹನ ಸುತನಿಗೆಶಿವನ ಪ್ರತಿಪಾಲನೆಂಬ 2 ಕಮಲವನು ಈರಡಿಯ ಮಾಡಿದೆಕಮಲ ಮೊರೆಯಿಡಲಂದುಕಮಲದಲಿ ಬ್ರಹ್ಮಾಂಡ ತೋರಿದೆಕಮಲಧರ ನೀನೆಂದು ಕಮಲವನು ಕದ್ದೊಯ್ದ ಕಳ್ಳನ ಸದೆದುಕಮಲವ ತಂದೆಕಮಲಮುಖಿಯಳ ಕಾಯ್ದ ಕಾಗಿನೆಲೆವಿಮಲ ಆದಿಕೇಶವನೆಂಬ 3
--------------
ಕನಕದಾಸ