ಒಟ್ಟು 54 ಕಡೆಗಳಲ್ಲಿ , 26 ದಾಸರು , 53 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(ಕಾಣೂರು ಮಠದ ನರಸಿಂಹ) ನೋಡಿರಯ್ಯ ನರಸಿಂಹ ಮೂರ್ತಿಯ ಪಾಡಿರೋ ಕೀರ್ತಿಯನು ಪ. ಚಿಕ್ಕವನ ಗೋಳಿಕ್ಕಿಸುತಲತಿ ಸೊಕ್ಕಿದಸುರನನು ಧಿಕ್ಕರಿಸುತಿಹ ಕಕ್ಕುಲತೆಯಿಂದುಕ್ಕಿ ರೋಷವನು ಮಿಕ್ಕ ದೇವರ ಲೆಕ್ಕಿಸದವನ ತಿಕ್ಕಿ ತೊಡೆಯೊಳಗಿಕ್ಕಿ ನಖಗಳನಿಕ್ಕರಿಸಿ ಸಾಲಿಕ್ಕಿ ತರುವ ಕರುಳಕ್ಕರದಿ ತೆಗೆದ್ಹಕ್ಕಿಗಮನನ 1 ವೇದಮುಖ ಸುರರೆಲ್ಲ ದೂರದಿ ಕಾದುಕೊಂಡಿರಲು ಸಿರಿನಡು ಹಾದಿಯಲಿ ಚಿನ್ಮೋದನಿರಕಾಲ್ಹಾದ ಬಡುತಿರಲು ಪಾದಪದ್ಮಗಳನ್ನು ಭಕ್ತಿರಸಾರದರದಿ ಶಿರಕಿಕ್ಕಿರುವ ಪ್ರ- ಲ್ಹಾದನನು ಪಿಡಿದೆತ್ತಿ ಪರಮವಿನೋದಗೊಂಡ ಪರಾಪರೇಶನ 2 ಅರ್ಥಿಯಿಂದಲಿ ಬಂದಿರುವರು ಪೂರ್ಣಾರ್ಥದಾಯಕನಾ ವ್ಯರ್ಥವೈರದ ದ್ವ್ಯರ್ಧಿದೈತ್ಯರ ಮೂರ್ತಿದಹಿಸುವನಾ ಅರ್ತಿಹರ ಶೇಷಾದ್ರಿವರ ಪುರುಷಾರ್ಥ ಪಾಲಿಪೆನೆಂದು ವಾಮನ ತೀರ್ಥ ಕೃತ ಪೂಜಾರ್ಥವಿಲ್ಲಿಗೆ ಕೀರ್ತಿಕರ ನಿಲಯಾರ್ಥದಾತನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಭಗವದ್ಭಕ್ತ ಸಂಮೋಹ ಪ್ರಾರ್ಥನೆ) ಗಜಮುಖನ ಪ್ರಪಿತಾಮಹನಹಿಮನ ಗಜೆಯರಸನ ಪಿತನ ಪೆತ್ತನ ಸಾರಥಿ ಪಾದ ಪಂಕಜವ ಭಜಿಸಿ ಭಾರತಿವರನ ನಮಿಸುವೆ ಅಜಭವಾದಿ ಗುರೂತ್ತಮರ ನಿಜ ವೃಜಿನಪಂಕ ನಿವೃತ್ತಿಗೊಳಿಸುವದೆಂದು ವಂದಿಸುವೆ 1 ಅವ್ಯವಹಿತಾಸದೃಶ ಭಕ್ತಿಯ ಸವ್ಯಸಾಚಿ ಸಹಾಯ ಸಲಿಸಾ ದಿವ್ಯ ಪದವಿಯ ಪಡೆವೆನೆಂದುಗತವ್ಯಳೀಕದಲಿ ಕಾವ್ಯ ವ್ಯಾಕರಣಗಳಿಂದ ವಹಿಸಿದ ಸೇವ್ಯ ಗುರು ಲಾ- ತವ್ಯ ಮುನಿವರರಂಘ್ರಿಕಮಲವ ನುತಿಸಿ ನಮಿಸುವೆನು 2 ಪುಂಡರೀಕ ದಲಾಯತಾಕ್ಷನೆ ಹಿಂಡು ದೈವದ ಗಂಡನೆಂದತಿ ಚಂಡ ಮೈಗಳ ಖಂಡಿಸಿದ ಯತಿಮಂಡಲೇಶ್ವರನ ಪಾಂಡ್ಯದೇಶದೊಳವತರಿಸಿದಾ ಖಂಡಲಾತ್ಮನ ನಮಿಪೆ ಮಮ ಹೃ- ನ್ಮಂಡಲದಿ ಪಾಲಿಸು ಸುಧಾರಸವುಂಡು ನಲಿವಂತೆ 3 ಮೋದತೀರ್ಥ ಮಹಾಬ್ಧಿಯನು ಕಡೆ- ದಾದಿಯಲಿ ನ್ಯಾಯಾಮೃತವ ತೆಗೆ- ದಾದರದಿ ಸಜ್ಜನರಿಗುಣಿಸಿದ ಗಾಢಮತಿಯುತನ ಮಾಧವನ ಗುಣತರ್ಕ ತಾಂಡವ ವೋದಿಸುತ ಚಂದ್ರಿಕೆಯ ತೋರಿದ ಬೋಧಕರ ಪ್ರಲ್ಹಾದಮುನಿ ಕರುಣದಲಿ ಸಲಹೆನ್ನ 4 ಮಂಗಳಾಂಬುತರಂಗ ತುಂಗಾ ಸಂಗಿ ಮಂತ್ರಾಲಯದಿ ನಿಂದು ಕು ರಂಗ ವೈರಿಯ ಪೂರ್ವ ಕರುಣಾಲಿಂಗನೋತ್ಸುಕನ ಪಂಗು ಬಧಿರಾದ್ಯಂಗ ಹೀನರ ಪಾಂಗ ನೋಟದಿ ಪಾಲಿಸುವ ಯತಿ ಪುಂಗವಾರ್ಜಿತ ರಾಘವೇಂದ್ರರ ನಮಿಪೆನನವರತ 5 ಜೋಲಿಸುವ ಕಂಠದಲಿ ತುಳಸೀ ಮಾಲೆಯನು ಕರಯುಗದಿ ವೀಣಾ ತಾಳಗಳ ಬಾರಿಸುತ ಸರ್ವತ್ರದಲಿ ಸಂಚರಿಸಿ ಶ್ರೀಲಲಾಮನ ಲೀಲೆಗಳಿಗನು- ಕೂಲರಾದ ಸುರರ್ಷಿ ನಾರದ ರಾಲಯಸಿ ತಪ್ಪುಗಳ ತಿದ್ದುವುದೆಂದು ನಮಿಸುವೆನು 6 ಸತ್ಯಭಾಮಾಕಾಂತನಿದಿರಲಿ ನಿತ್ಯ ನಡೆಸುವನೆಂಬ ಸೇವೆಗೆ ಒತ್ತಿಬಹ ವಿಘ್ನಗಳ ದೂರದಿ ಕಿತ್ತು ಬಿಸುಟುವರ ಹತ್ತು ದೆಶೆಯಲಿ ನಿಂತು ರಕ್ಷಿಪ ಕೃತ್ತಿವಾಸ ಸುರೇಶಮುಖ ದೇ- ವೋತ್ತುಮರ ನಾ ನಮಿಪೆ ತತ್ವದ ಭೃತ್ಯನಹುದೆಂದು 7 ಪಾವಮಾನ ಮತೀಯ ವೈಷ್ಣವ- ರಾವಳಿಗೆ ಶರಣೆಂಬೆ ನಿಮ್ಮ ಕೃ- ಪಾವಲಂಬನವಿತ್ತು ಕರುಣವ ಶುದ್ಧಿಕರಿಸುತಲಿ ದೇವ ದೇವವರೇಣ್ಯ ಭಕ್ತರ ಕಾವ ಶೇಷಗಿರೀಂದ್ರನಾಥನ ಸೇವಿಸುವ ಸುಖವಿತ್ತು ಸುಲಭದಿ ಸಲುಹಬೇಕೆಂದು 8
--------------
ತುಪಾಕಿ ವೆಂಕಟರಮಣಾಚಾರ್ಯ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
1. ರಾಮಾನುಜರು ಆಚಾರ್ಯ ಪ್ರಾಚಾರ್ಯ ಪರಮಾಚಾರ್ಯಾ ನೀಚತೆ ನೀಗಿಸಿ ನಿನ್ನಂತೆ ಗೈದೇ ಪ ಸರ್ವಗುರುವೇ ನಮಿಪೆ ಧ್ಯಾನಿಪೆ ಶ್ರೀನಿವಾಸಾ ಅ.ಪ ಪಾದೋದಕದಿಂ ಪಾವನಗೈದೇ ಸಾಧು ಸಂಗತಿಗಳ ಸಂತಸದಿ ಪೇಳ್ದೇ1 ಭೇದವ ತೊರೆದೇ ವೇದಗಳೊರೆದೇ ಸಾದರದಿಂ ಸದ್ಬಂಧು ನೀನಾದೇ 2 ಪಾಪವ ಕಳೆದೇ ಗೋಪ್ಯಗಳುಸುರಿದೆ ಶ್ರೀಪತಿಮೂರ್ತಿಯ ಹೃದಯದಿ ತೋರ್ದೆ 3 ಕೃಪೆಯನ್ನು ತೋರ್ದೆ ಅಪಾರ ಮಹಿಮ ಉಪಕರಿಸುತ ಎನ್ನ ಉನ್ನತಿಗೆ ತಂದೆ 4 ಸಂಸಾರಾಂಬುಧಿ ಹಿಂಸೆ ದಾಂಟಿಸಿದೆ ಹಂಸನೆ ಸಿಂಹ ಕಿಶೋರ ನ್ಯಾಯದಿ 5 ವಿಪರೀತಮತಿಯನ್ನ ಪರಿಹರಿಸಿದೆ ನೀಂ ಸುಪಥದಿ ಸುಖದಾನಂದನಿಧಿಯಿತ್ತೇ 6 ಜಾಜೀಶನಿಗೆ ಪ್ರೇಮಪುತ್ರನು ನೀಂ ಪೂಜಿಪೆ ಪದಯುಗ ಶರಣನೆ ಕರುಣಿಸು 7
--------------
ಶಾಮಶರ್ಮರು
2. ನಮ್ಮಾಳ್ವಾರ್ ವಕುಳಾಭರಣನೆ ಶರಣೆಂಬೆ ಸಕಲ ಬಂಧು ನೀ ಸಲಹೆಂಬ ಪ ನಿಖಿಲ ಲೋಕಿಗರ ಶಿಶುನಡೆನೂಕಿದೆ ಅಕಳಂಕನೆ ಶಠಗೋಪ ನೀನಾದೆ ಅ.ಪ ನಾಥನಾಯಕಿಯೆ ಕಾರಿಕುಮಾರ ಪೂತನೆ ಸೇನಾಪತಿಯವತಾರ ಪಾತಕಹರ ತಾಮ್ರಪರ್ಣಿತೀರ ಕೀರ್ತಿ ಪಡೆದ ಸುರಪೂಜ್ಯನುದಾರ 1 ಪದುಮ ಪವಿತ್ರನಂದದ ಪ್ರಭೆನೋಡಿ ಮಧುರಕವಿಯು ಬರೆ ಮುದಗೂಡಿ ಅದುಭುತ ಮಂತ್ರವನೊರೆದೆ ಹರಿಯಪಾಡಿ ಸದಮಲ ಸೇವಕನಲಿ ಮನೆಮಾಡಿ2 ಹದಿನಾರು ವರುಷಾಹಾರವಿಲ್ಲದೆ ಬದಿರಾಂಧ ಮೂಕನಾದ ಮುನಿ ವಿಧಿ ಪಿತನದುಭುತಧ್ಯಾನ ಮೈಗೂಡಿ ಸುಧೀಂದ್ರ ಶುಭದ ಅಮೃತಪದ 3 ನಾಥಗೊಲಿದು ತಿರುವಾಯ್ಮೊಳಿಯನು ಪ್ರೀತಿಯೊಳುಪದೇಶವ ಗೈದು ಪಾತಕ ಹರಿಸುತ ಪರಿಸರ ಪೊರೆಯುತ ದಾತಾರಂ ಸುಖದಾತಾರಂ 4 ಮಧುರಾಪೀಠವು ನೀರೊಳು ಮುಳುಗಲು ವಿಧಿಯಿಲ್ಲದೆ ಪಂಡಿತರೊರಲಿ ಅಧಿಕರಿಸುತ ತವ ಪದಗಳಿಗೆರಗೆ ಮಧುರವಾಣಿಯಿಂ ಹಾಡಿದ 5 ಹತ್ತಾಳ್ವಾರರ ಶರೀರವಾಗಿ ಪೆತ್ತಿಹ ಪರಮೌದಾರ ಮುನಿ ಎತ್ತಲು ಹರಿಗುರು ಸರ್ವೋತ್ತಮರೆನು ತುತ್ತುಮಪದವಿಯ ಮಾರ್ಗವತೋರಿದ6 ಆದಿವೈಷ್ಣವ ದೀಕ್ಷಾಚಾರ್ಯ ವೇದವ ದ್ರಾವಿಡದೊಳು ಪೇಳ್ದೆ ಶ್ರೀಧರಸನ್ನಿಧಿಯೊಳಗಿದ ಪಠಿಸಲು ಸಾದರದೊಲಿವಂ ಜಾಜೀಶಂ 7
--------------
ಶಾಮಶರ್ಮರು
3. ಎಲ್ಲ ಆಳ್ವಾರರು ಆಳ್ವಾರ್ ತಿರುವಡಿಗಳೆ ಶರಣೆನ್ನುತ ಬಾಳ್ವರು ಭಜಿಪುದು ಬಕುತಿಯಲಿ ಪ ಕೇಳ್ವರು ಕಥೆಗಳ ಮಮತೆಯಿಂದಲಿ ಮಾಳ್ವರು ಮನೆ ವೈಕುಂಠದಲಿ ಅ.ಪ ಮೊದಲಿನ ಮೂವರು ಮಾಧವನೆನುತ್ತ ಪದುಮನಾಭನೊಡನಾಡಿದರು ಅದುಭುತ ಮಹಿಮಾ ತಿರುಮೊಳಿಶಯ್ಯರ ಮುದದಿಂ ಶಿವ ಕೊಂಡಾಡಿದನು 1 ಮಧುರಕವಿಗಳು ನಮ್ಮಾಳ್ವಾರರ ಪದಗಳ ಪೂಜಿಸಿ ಹಾಡಿದರು ತದುಪರಿ ತಿರುವಾಯ್ಮೊಳಿಯನು ಅವರಿಂ ದಧಿಕರಿಸುತ ಹಿತವೆಸಗಿದರು 2 ಪೆರಿಯಾಳ್ವಾರರು ಹರಿಯನು ಪಾಡುತ ವರವೇದಕೆ ತಾವ್ ಮೊದಲಿಗರು ಪರಮಪಾವನೆ ಗೋದಾದೇವಿಯು ದೊರೆ ಶ್ರೀರಂಗನ ಕೈವಿಡಿದಳ್ 3 ಪೆರಿಯ ತಿರುಮೊಳಿಯ ತಿರುಮಂಗೈಯ್ಯರು ತಿರುಪ್ಪಾಣ ವಿಪ್ರನಾರಾಯಣ ತಿರುವನಂತಪುರದ ಕುಲಶೇಖರರು ಸಿರಿಯರಸನ ತೇರ ಮಾಡಿದರು 4 ಪರಮಾತ್ಮನ ಸನ್ನಿಧಿಯಿಂದಲ್ಲಿಗೆ ತೆರಳುತ ಮಹಿಮೆಯ ತೋರಿದರು ನಿರುತ ದೇವರೆಡೆ ಪೂಜೆಗೊಂಬರು ವರಜಾಜೀಶನ ಸೇವಕರು 5
--------------
ಶಾಮಶರ್ಮರು
ಅಧ್ಯಾಯ ಎರಡು ಸ್ವಾತ್ಮಾನಾಪಿ ವರಾಹೇಣ ದತ್ತಾವಾಸ ಸ್ಥಳೋsಚ್ಯುತಃ ಮಾಯಾವೀ ಬಕುಲಾಲಾಭ ತುಷ್ಟೋ ವ್ಯಾsದ್ವೇಂಕಟೇಶ್ವರ ಅರುಣೋದಯದಲೆದ್ದನು ಅಂದಿಗಲ್ಲೆ ಭೂ ವರಾಹನು ಬಂದು ಗರ್ಜನೆ ಮಾಡುತೆದುರಿಗೆ ಮುಂದಕಲ್ಲೆ ಅಡಗಿದನು ಭಯದಿಂದ ವೇಂಕಟನು 1 ಪಿಡಿದನು ಭೂವರಾಹನು ಮಂದ ಜನರನೆ ಮೋಹಿಸುತ ಹೀಗೆಂದ ವೇಂಕಟಗೆ ಇಂದು ನೀನ್ಯಾರೆಲೊ ಪೋಗುವಿಯೆಲ್ಲಿ ನೀ ಎನ್ನ ಮುಂದೆ ನುಡಿಬೇಗ 2 ಮಾತಾಡಿದನು ವೇಂಕಟನು ಆತುರನ ಪರಿಯ ಕೂತುಪೇಳಿದನಾಗ ತನ್ನ ಪುರಾತನ ಕಥೆಯಲ್ಲ ಆತಗೆ ಈ ತಲೆಯ ಔಷಧಕೆ ಬಂದೆನುನೀ ತಿಳಿಯೋ ಎಂದ 3 ಅಪ್ಪಿಕೊಂಡೀ ಮಾತಿಗವನಾ ಮುಪ್ಪಿನವ ತಾ ಕ್ರೋಢರೂಪಿಯು ತಪ್ಪದಲೇ ಅಪ್ಪಿಕೊಂಡಿಹ ಭೂವರಾಹನು ಹಾಲಿಗೆ ಹೆಪ್ಪು ಕೊಟ್ಟಂತೆ 4 ದುಃಖಗಳ ಪೇಳುತ ಸುಮ್ಮನಾಗದೆ ನಿಮ್ಮಾ ಭೆಟ್ಟಿ ಇದು ಸಂಭ್ರಮವು ರಮ್ಯಗಿರಿಯಲ್ಲಿ 5 ಮಾತಾಡಿದನುನಂದೊಂದು ಇಂದು ನಮ್ಮಿಬ್ಬರೊಳಗೆ ಒಂದು ಮಾತು ಉಳಿಯಲಿಲ್ಲಾ ನಿಂದೊಂದು ಮಾತೇನು ಪೇಳೊ ಶ್ರೀ ಲಕ್ಷ್ಮೀಕಾಂತಾ1 ಇರವೆ ಸ್ಥಳ ಒಂದಿಷ್ಟು ಸುದ್ದಿ ಒಂದು ಬಿಟ್ಟು ನಿನ್ನ ಬುದ್ಧಿ ಶ್ರೀ ಲಕ್ಷ್ಮೀಕಾಂತಾ2 ನಿನ್ನವನಾಗಿರುವೆÀ ಒಳ್ಳಿತು ನಿನ್ನಿಂದ ಫಲ ಪೇಳೊ ಶ್ರೀ ಲಕ್ಷ್ಮೀಕಾಂತಾ 3 ಮಡದಿಯ ಕಳೆದು ಮೇಲೆ ಕೊಡು ನೀ ಲಕ್ಷ್ಮೀಕಾಂತಾ 4 ಪದುಮಾವತಿಯ ಶ್ರೀಧರಣಿಕಾಂತಾ ಋಣಮುಕ್ತನಾಗಿ ಅದರಮೇಲೆ ಕೊಟ್ಟೀಯೇನೋ ಶ್ರೀ ಲಕ್ಷ್ಮೀಕಾಂತಾ 5 ಋಣಮುಕ್ತನಾನಾದಮೇಲೆ ಕ್ಷಣಮಾತ್ರ ಇಲ್ಲಿರುವವನಲ್ಲಾ ಒಣಮಾತೇನೋ ಸ್ಥಳ ಪೇಳೆನಗೆ ಶ್ರೀ ಧರಣಿಕಾಂತಾ ಗುಣಗಳುನಿನ್ನಲ್ಲೆ ಇಲ್ಲಹಣವು ಕೊಡಲಾಗುದು ಮತ್ತೆ ಒಣಸ್ನೇಹಕ್ಕೆ ಸ್ಥಳ ಬಂದೀತೆ ಲಕ್ಷ್ಮೀಕಾಂತಾ 6 ಇಲ್ಲೆ ಚಂಚಲ ನಾಗ ಬೇಡಾ ಶ್ರೀ ಧರಣಿಕಾಂತಾ ವಂಚಕ ನೀಸರಿಯೋ ಒಂದಕು ಕೊಡದ ಲೋಭಿ ಒಳ್ಳೆಹಂಚಿಕೆಯನೋ ನೀನು ಶ್ರೀ ಲಕ್ಷ್ಮೀಕಾಂತಾ7 ಕಡೆಗೆ ಚನ್ನಾಗಿ ಪೇಳೊ ನೀನು ಲಕ್ಷ್ಮೀಕಾಂತಾ8 ನಿನ್ನ ಅಭಿಷೇಕವು ಗೆಲಿಸುವಿಯೊ ಧನ್ಯ ಶ್ರೀ ಲಕ್ಷ್ಮೀಕಾಂತಾ 9 ಸ್ವಾಮಿ ಪುಷ್ಕರಣೆಯ ಮೂರು ಪಾದದಿಂದ ಪಾದಕಂತು ಎಷ್ಟೊ ಲಕ್ಷ್ಮೀಕಾಂತಾ 10 ಮತ್ಯಾಕೀಪರಿ ಮಾತಾಡುವಿ ಹೊತ್ತು ಬಹಳಾಯಿತು ಎನಗೆ ಪಥ್ಯಕ್ಕೆ ತಡವಾಯಿತೇಳೋ ಶ್ರೀಧರಣಿಕಾಂತಾ ಸತ್ಯ ನೂರುಪಾದ ಸ್ಥಳವ ಕ್ಲಿಪ್ತ ಮಾಡಿಕೊಟ್ಟೆ ನಿನಗೆ ಸ್ವಸ್ಥದಿಂದ ಇರುಹೋಗೋನೀ ಲಕ್ಷ್ಮೀಕಾಂತಾ 11 ಸ್ವಸ್ಥದಿಂದ ಇರುವೆನ್ಹ್ಯಾಂಗೆ ಪಥÀ್ಯದಡಿಗೆ ಮಾಡುವಂಥ ಹೆತ್ತತಾಯಿ ಇಲ್ಲವೋ ಎನಗೆ ಶ್ರೀ ಧರಣಿಕಾಂತಾ ಹೆತ್ತಾಯಿಯ ಪರಿಯಾಗಿ ನಿನಗೆ ಪಥÀ್ಯದಡಿಗೆ ಮಾಡುವದಕೆ ಮತ್ತ ಬಕುಲಾವತಿಯ ಕೊಡುವೆ ಶ್ರೀ ಲಕ್ಷ್ಮೀಕಾಂತಾ 12 ಇಂಥ ಘಾಯ ಮಾಯುವತನಕ ಜೇನ್ತುಪ್ಪಸಾಮೆಯ ಅನ್ನ ಸಂತತ ಬೇಕಲ್ಲಾ ಎನಗೆ ಶ್ರೀಧರಣಿಕಾಂತಾ ಚಿಂತಾಮಣಿಗೆ ಸರಿಯಾದಂಥ ನಂ ತಾದ್ರಿಯಲ್ಲಿದ್ದ ಮೇಲೆ ಚಿಂತೆಯಾಕೆ ಅದನು ಕೊಡುವೆ ಶ್ರೀ ಲಕ್ಷ್ಮೀಕಾಂತಾ 13 ವಚನ ಧರಣಿಯ ರಮಣ ಈ ಪರಿಯು ಬೇಡಿದ್ದುಕೊಟ್ಟು ತಿರುಗಿದನು ಸ್ವಾಮಿ ಪುಷ್ಕರಣೀಯ ತೀರಕ್ಕೆ ಸರಸದಲಿ ಮುಂದಲ್ಲೆ ಇರುವ ನಿತ್ಯದಲಿ ಪರಮ ಭಕುತಳು ಆಗಿ ಇರುವ ಬಕುಲಾವತಿಯ ಕರದಿಂದ ಪಥ್ಯ ಸ್ವೀಕರಿಸುತಲೇ ನಿತ್ಯದಲಿ ಸುರತಾನಂತಾಖ್ಯ ಗಿರಿಯಲ್ಲಿ ಇರುವವನ ಕರುಣದಲಿ ಮುಗಿಯಿತೆರಡು ಅಧ್ಯಾಯ1
--------------
ಅನಂತಾದ್ರೀಶ - ಕಥನಕಾವ್ಯಗಳು
ಆವಿರ್ಭವಿಸಿದಳಾಗ ಜಗನ್ಮಾತೆ | ಅಖಿಲಾಂಡ ವಿಖ್ಯಾತೆ ಪ ದೇವದಾನವರು ತಾವೊಡಗೂಡುತ ಲಾವುದಧಿಯಮದಿಸÀುತ್ತಿರಲದರೊಳು ಅ.ಪ ಪೊಳೆವ ಬೆರಳುಂಗುರ ಶೋಭಿತಪಾದ | ಧರಿಸಿದ ಸುರುಚಿರ ರುಳಿಯು ಅಂದಿಗೆ ಗೆಜ್ಜೆಯ ನಾದ | ಕಟಿಯಲಿ ನೋಡೆ ಥಳಥಳವಾದ ಶೃಂಗಾರವಾದ | ಒಡ್ಯಾಣದ ಮೋದ ದಲಿ ತಾನಿಟ್ಟಿಹ ಚಲುವಿಕೆಯಿಂದಲಿ ಸಲೆ ಬೆಳಗುತಲಿ ನಳಿನಲೋಚನೊಳು 1 ಕರಿರಾಜನ ಕರದಂತೆ ಒಪ್ಪುವ ಕರವು | ಬೆರಳಲಿ ನೋಡೆ ಪರಿಶೋಭಿಸುತಿಹ ಮಾಣಿಕ್ಯದುಂಗುರವು | ರಾರಾಜಿಸುವ ಹರಡಿ ಕಂಕಣಗಳು ಬಲು ಸುರುಚಿರವು | ಪರಿಕಿಸೆ ಸುಂದರವು ಪರಿ ಸರಗಳು ಕೊರಳೊಳು ಶೋಭಿಸೆ ತರಣಿ ಕಾಂತಿಯನು ತಿರಸ್ಕರಿಸುತ್ತಲಿ 2 ಮಂದಸ್ಮಿತ ಪರಿಶೋಭಿತ ಶುಭವದನ | ಆನಂದಸದನ ಕುಂದಕುಟ್ಮಲದಂತಿಹ ಸಮರದನ | ಸಂತಾಪಾರ್ದನ ಬಂಧುರ ಚಂಪಕ ನಾಸಿಕದ ಹದನ | ಏಂ ಪೇಳಲಿ ಅದನ ಮಂದರಾದ್ರಿಧರ ಕರಿಗಿರೀಶನ ಎಂದೆಂದಗಲದ ಸುಂದರಾಬ್ಜಮುಖಿ3
--------------
ವರಾವಾಣಿರಾಮರಾಯದಾಸರು
ಇದೇ ಇದೇ ಘನಸುಖಾ ಸಾಧಿಸಿ ಗುರುಮುಖಾ ಧ್ರುವ ಅಂಜದಾಲಿಸಿ ಕೇಳಿ ಪ್ರಾಂಜಳಾಗ್ಯದೆ ಝಂ ಝಂ ಝಂ ಝಂ ಝಂ ಝಂ ಝೆಂಕರಿಸುತಲ್ಯದೆ 1 ಒಂದೊಂದು ಪರಿಲ್ಯಾನಂದವುದೋರುತಲ್ಯದೆ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂಮಿಡುಗುತದೆ 2 ಮನೋಹರಾಗುವ ಅನುಭವದೋರುತದೆ ದೀನ ಮಹಿಪತಿಗೆ ಪಾವನಗೈಸುತದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಥಾಶ್ರವಣ ಮಾಡದೆ ನರದೇಹವ ವೃಥಾ ಕಳೆವದೆಂದಿಗು ಸಲ್ಲ ಪೃಥಾಸುತನ ಮಹರಥಾವನು ಸರ್ವಥಾ ಪೊರೆವ ಸಂಶಯವಿಲ್ಲ ಪ. ವಿಕಲಿ ಪ್ರವರ್ತನ ಲೋಲಿಕಾಗಮ ಕಲಾನುಕೃತ ದುಷ್ಕಾಲದಲಿ ಒಲಿವನು ನಿರ್ಮಲಗೊಳಿಸುತಲಿ ಸಲೀಲವೆ ಲಘುಕರ್ಮದಲಿ ಸುನೀಲವಕ್ಷ ಸ್ಥಳಾಂತರ ಶ್ರೀಲಲಾಮನನು ಕೊಂಡಾಡುತಲಿ 1 ಅಲ್ಪ ಸುಖವ ಸಂಕಲ್ಪಿಸುವರಿಗಹಿತಲ್ಪನೊಲಿಯ ತಾನೆಂದೆಂದು ನಾಲ್ವರಿ ಫಲಗಳನಿಪ್ಪನೆ ಸಂಸ್ಕøತಿಯಿಪ್ಪಂದದಿ ದಯದೋರೆಂದು ಒಪ್ಪಿಸಿ ಮತ್ತವನಿಪ್ಪುದನುಂಡು ನೀರಪ್ಪಣೆಯಲಿ ಸನ್ಮತಗೊಂಡು ಹಿಂಡು 2 ಸ್ಮರಣೆ ಮಾತ್ರದಿಂದಲವನು ಪಾಪವ ಕರಣವ ಶುದ್ಧೀಕರಿಸುತಲಿ ಸನ್ಮತಿ ಇರಿಸುವನು ಪುರು ಪುರುಷಾರ್ಥಕರ ಪದಪದ್ಮವನಿರಿಸಿ ಶಿರದಿ ಸತ್ಕರಿಸುವನು ಮನದಲ್ಲಿರಿಸಿದವರನನುಸರಿಸುವನು 3
--------------
ತುಪಾಕಿ ವೆಂಕಟರಮಣಾಚಾರ್ಯ