ಒಟ್ಟು 34 ಕಡೆಗಳಲ್ಲಿ , 22 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(1) ದಶಾವತಾರ ಶ್ರೀಹರ ನಿನ್ನ ಲೀಲೆ ಏನು ಹೇಳಲಯ್ಯ ನಾನು ಪ ಮೋಹಗೊಳಿಸಿ ಲೋಕವನ್ನು ಪಾಲಿಸುತ್ತಿಹೆ ಅ.ಪ ಮತ್ಸ್ಯನಾಗಿ ವೇದ ತಂದೆ ಆಮೆಯಾಗಿ ಅಮೃತ ವಿತ್ತೆ ವರಹನಾಗಿ ನೀನು ಧರಣಿ ಹೊತ್ತೆಯೈ 1 ನರಹರಿ ತರಳರಕ್ಷ ಬ್ರಹ್ಮಚಾರಿ ಇಂದ್ರಪಾಲ ದಾ ಶರಥಿಯೆ ನೀನು ಧರ್ಮ ತೋರ್ದೆಯೈ 2 ಬಾಲಕೃಷ್ಣ ಲಾಲಿಲೀಲೆ ಪರುಶುಧಾರಿ ಪಿತೃಭಕ್ತ ಬಲ್ಲರಾಮನಾಗಿ ನೀನು ಬುದ್ಧಿ ಪೇಳ್ದೆಯೈ 3 ಕಲ್ಕಿಯಾಗಿ ಕೆಸರ ತೊಳೆವೆ ವಿಷ್ಣು ಜಾಜಿಶ್ಯಾಮವನ್ನು ಶುಲ್ಕವಿಲ್ಲದಂತೆ ನಿನ್ನಲ್ಲಿಗೊಯ್ವುದೈ 4
--------------
ಶಾಮಶರ್ಮರು
ಹಲವು ಸಂಭ್ರಮಗಳಿಂ ಮನೆ ಕಟ್ಟಿದೀ ದೇವ ಪ ನೆಲೆಗೆಡಿಸಿ ಅದನಿಂದು ಕೆಡಹುತಿರುವೀ ಅ.ಪ ಪ್ರಾರಬ್ಧಕರ್ಮವೆಂತೆಂಬ ಹಳ್ಳವ ತೋಡಿ ಆರು ಜನ ಕೆಲಸಗಾರರನಲ್ಲಿ ಕೂಡಿ ಮೀರಿ ಮಾಯೆಯ ಭಾರಿ ಕಲ್ಕೆಸರುಗಳ ಹೂಡಿ ಭಾರಿನೆಲಗಟ್ಟು ರಚಿಸಿದರೊಂದುಗೂಡಿ 1 ಎಲುವಿನ್ಹಂದರ ಹರಹಿ ಬಲಿದ ಮಾಂಸದ ಗೋಡೆಗಳ ಮೇಲೆ ಚೆÀಲುವ ಚರ್ಮ ಹೊದ್ದಿಸಿ ಜಲರಕ್ತ ಕಾಲ್ವೆಗಳ ಹರಿಸಿ | ಸ್ವಚ್ಛತೆಯಿರಿಸಿ ಬಲುಉಸಿರುಬಲದಿಂದಲದ ಚಲನಗೊಳಿಸಿ 2 ಐದು ಇಂದ್ರಿಯಗಳೇ ದ್ವಾರ ಕಿಟಕಿಗಳಾಗೆ ಐದುಬಗೆ ವಿಷಯಗಳು ಆಹಾರವಾಗೆ ವೈದು ಯಮಪುರಿಗೆ ತಲ್ಪಿಸÀಲುಣಿಸನಿದನುಂಡು ಐದಿದುದು ನರಕಕೂಪಕೆ ಜೀವದಂಡು 3 ಕ್ಷೇತ್ರಜ್ಞ ನೀನು ನಿನ್ನಯ ಕಣ್ಣಮುಂದಿಂತು ಗಾತ್ರದಲಿ ವಾಸಿಪ ಜೀವನು ನಿನ್ನ ಮರೆತು ಕ್ಷೇತ್ರಘಾತಕಕಾರ್ಯವೆಸಗುತಿರಲಂದಂದೆ ನೇತ್ರ ಹಸ್ತಗಳ ಛೆÉೀದಿಸದೆ ಉಳುಹಿದೆಯೆಂತು 4 ಸರ್ವಸ್ವತಂತ್ರನೀ ಜೀವ ಪರತಂತ್ರನವ ಗರ್ವ ಅಜ್ಞಾನ ಅಂಧತೆಗಳಲಿ ಸಿಲುಕಿ ಸರ್ವ ದುಷ್ಕರ್ಮಗಳ ನಡೆಸಿ ಕೆಡಸಿಹನಿದನು ಸರ್ವದಾ ಕ್ಷಮಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
101. ಹರಿಹರ ಧ್ರುವತಾಳ ಹರಿಹರರಿಬ್ಬರು ಒಂದೇ ರೂಪವ ಧರಿಸಿ | ದುರುಳ ಗುಹಾಸುರನ ಕೊಂದರೆಂದೂ | ಮರಳು ಮಾನವರು ತಿಳಿಯಾದೆ ನುಡಿವರು | ಹರಿಹರರೀರ್ವರು ಏರವಾದರೆ ಅಂದು | ಹರನು ಮೈಮರೆದು ನಿಂದನ್ಯಾತಕೆ | ಧಾರುಣಿಯೊಳಗೆ ಹಿರಣ್ಯಕಶಿಪು ದೈತ್ಯ | ಸುರರ ಓಡಿಸಿ ಪ್ರಬಲನಾಗಿರೆ | ಪರಮ ಪುರುಷ ಹರಿ ನರಹರಿರೂಪವನ್ನು | ಧರಿಸಿ ರಕ್ಕಸನ್ನ ಕೊಲ್ಲುವಾಗಲಿ, ಕೇ | ಸರಿಯಾ ಬಳಿಗೆ ಪೋಗಿ ಮಾರೆಯಾ ಬೇಡಿಕೊಂಡು | ಮೆರದಾನೇನೋ ಅವತಾರ ಮಾಡಿ | ಹರಿಯ ಅದ್ಭೂತ ಶಕ್ತಿ ನಾನಾ ಲೀಲಾ ವಿನೋದ | ಚರಿಸೂವ ಪರಬೊಮ್ಮ ಗುಣಪೂರ್ಣ ನೂ | ತುರಗವದನ ಮತ್ಸ್ಯಕೂರ್ಮಸೂಕರ ವೇಷ | ಧರಿಸಿದಾತನು ಕಾಣೋ ಯುಗಯುಗದೀ | ಕರುಣಾಸಿಂಧು ನಮ್ಮ ವಿಜಯವಿಠಲರೇಯಾ | ಹರಿಹರ ರೂಪ ಧರಿಸಿದ ಕಾಣಿರೋ 1 ಮಟ್ಟತಾಳ ದೀಪದ ಉಪಕಾರ ದಿನಪಗೆ ಏನಾಹದು | ಭೂಪತಿಗಾಳಿನ ಅನುಸುಣ್ಯಾತಕೆ | ಕೋಪವನು ತಾಳಿ ಭೃಗುಮುನಿ ಕೈಯಿಂದ | ಶಾಪನ ಕೈಕೊಂಡನಂದು ಭಸ್ಮಾ ಸುರನ | ಆ ಪತ್ತಿಗಾರದೆ ಮೊರೆ ಇಡಲು ಕೇಳಿ | ಶ್ರೀಪತಿ ಮೊಗದಲಿ ಕಾಯದದ್ದು ಕಾಣದೆ | ಗೋಪಾಲ ವಿಜಯವಿಠಲ ಹರಿಹರ | ರೂಪವು ತಾನಾದ ಅನೇಕ ರೂಪನೊ 2 ತ್ರಿವಿಡಿತಾಳ ಕಂತು ಜನಕ ಶಿವನ ಬೇಡಿಕೊಂಡದ್ದು ಪುರಾ | ಣಾಂತರದಲ್ಲಿ ಪೇಳುತಿವೆ ನೋಡಿಕೊ | ಎಂತಾಹದೀ ನುಡಿ ಸಿದ್ಧವಲ್ಲವೊ ಶ್ರೀ | ನಖ ಮೌಳಿ ಅಭೀದಾನು | ವೈರಿ ಅರ್ಧಂಗವನೆ ತಾಳಿ | ನಿಂತಿಪ್ಪ ಶ್ರೀ ಹರಿಯಾ ಕೂಡಾ | ನಂತಾ ಕಲ್ಪರೆ ನಿಗಮಾ ಗೋಚರ ಸರ್ವ | ಸ್ವತಂತ್ರನು ಒಬ್ಬಾರ ಹಂಗಿಗಾನೆ | ಚಿಂತಾಮಣಿಯಾ ಬಳಿಯಾ ನಾಡ ಹರಳನೆ ತಂದು | ಸಂತತವಿಟ್ಟರೆ ಸರಿಯಾಗೋದೆ | ಸಂತೋಷ ಪೂರ್ಣಗೆ ದೈತ್ಯನ ಕೊಲ್ಲುವುದಕೆ | ಚಿಂತೆಮಾಡಿದನೆಂಬೊ ವಾರ್ತಿಯೇನೂ | ನಿತ್ಯ ಮೇಹಕವನೆ ತೋರಿ | ಅಂತು ಗಾಣದ ನರಕಕ್ಕೆ ಹಾಕೂವ | ದಂತಿ ವರದ ದೇವ ವಿಜಯವಿಠಲ ಜಗ | ದಂತರಿಯಾಮಿಗೆ ಅಸಾಧ್ಯ ಬಂದಿಲ್ಲ 3 ಅಟ್ಟತಾಳ ಹರಗೆ ಈ ಪ್ರತಿಪ ಉಳ್ಳರೆ ಭಸುಮಾ | ಸುರಗಂಜಿ ಹರಿಗೆ ಮೊರೆ ಇಡುವನೇನೊ | ಜರಸಂಧನಿಗೆ ಇತ್ತಾವರ ಮತ್ತೇನಾಯಿತು | ಮರಳಿ ರಾಮನಕೂಡ ಶರಧನು ಪಿಡಿದು ಮೈ | ಮರೆದು ನಿಂದದ್ದು ಸರ್ವ ಜಗ ವೆಲ್ಲ ಬಲ್ಲದು | ಕರಿ ರಾಜಾ ಆ ಮೂಲಾವೆಂದು ಕರೆವಾಗ | ಪರಮೇಷ್ಠಿ ಶಿವನೊ ಮತ್ತಾವನೊ ಕಾಯ್ದವ | ಸುರರೊಳಗೀತಾ ಗಿಂದಧಿಕ ದೇವರು ಇಲ್ಲಾ | ಹರಿಹರರೂಪಾ ಶ್ರೀ ವಿಜಯವಿಠಲರೇಯಾ | ಚರಿತೆಯ ತೋರುವ ಅವರ ಯೋಗ್ಯತಾದಷ್ಟು 4 ಆದಿತಾಳ ತ್ರಿಶೂಲ ಡಮರುಗ ಭಸಿತ ರುದ್ರಾಕ್ಷಿಯು | ಪಶುವಾಹನನಾಗಿ ಇಪ್ಪದಿದೆ | ಅಸುರಾರಿಯಲ್ಲದೆ ಅನ್ಯರೂಪಗಳಲ್ಲ | ಹಸನಾಗಿ ತಿಳಿದು ಈತನ ಮಹಿಮೆ ಕೊಂಡಾಡಿ | ಕೆಸರು ಕಸ್ತೂರಿಯಾದರೆ ಕೌತುಕವಲ್ಲವೇನೊ | ಶಶಿಧರ ಹರಿರೂಪ ದೊ[ಳು]ಕೂಡುವನೆ | ವಶವಾಗಿ ಇಪ್ಪನು ತದ್ರೂಪಾದಂತೆ ಕಾಣೊ | ಕುಶನ ಬಯಸುವನು ಸಮನಾಗಿ ನಿಲ್ಲುವನೆ | ಪಶುಗಳ ಕಾಯ್ದ ನಮ್ಮ ವಿಜಯವಿಠಲ ಪ | ರಶುರಾಮ ಕ್ಷೇತ್ರದಲಿ ಹರಿಹರ ರೂಪನಾದಾ 5 ಜತೆ ತುಂಗಮಹಿಮೆ ದೇವೋತ್ತುಂಗಾ ತುಂಗಾವಾಸ | ರಂಗ ವಿಜಯವಿಠಲ ಹರಿಹರ ಮೂರುತಿ 6
--------------
ವಿಜಯದಾಸ
ಇಂದಿನ ದಿನವೇ ಶುಭದಿನವು | ಇಂದಿರೇಶನ ಕೀರ್ತಿಯ ಕೊಂಡಾಡಿದೆವೆಂದು ಪ ಮುನ್ನ ಮಾಡಿದ ಜನ್ಮಾಂತರದ ದುಷ್ಕ್ರತವೆಂಬ | ಘನ್ನ ಕೆಸರಸೋಸಿ ಹೃದಯ ಶುದ್ದಾಯಿತೆಂದು 1 ತರಣಿ ಉದಯವಾಗಿ | ಪರಿಹಾರಾಯಿತು ಅಜ್ಞಾನವೆಂಬ ಕತ್ತಲೆಯಿಂದು 2 ಕಂದ ನೊಡೆಯ ತನ್ನ ಸ್ಮರಣೆ ಕೊಟ್ಟನೆಂದು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಮನ ಅನ್ಯಕ್ಕೆರಗುತ್ತಿದೆ ಪ ಪತಿ ಅಂಗ ಸಂಗದೊಳಿರುತಿದ್ದು ಇದ್ದುಸತಿ ಉಪಪತಿಯನ್ನು ಬಯಸುವಂತೆಶ್ರುತಿ ತತ್ವ ಶಾಸ್ತ್ರಗಳರಿತಿದ್ದು ಇದ್ದು ದು-ರ್ಮತಿ ದುಷ್ಟ ಚರಿತೆಗೆ ಎಳೆಯುತಿದೆ ಎನ್ನ1 ನಿತ್ಯ ಉಣುತಿದ್ದು ಇದ್ದುಸುರೆಯ ಚಿಂತಿಸಿ ರುಚಿಗೊಳ್ಳುವಂತೆಕರಿ-ಸುರನದಿಯಲ್ಲಿ ಮೀಯುತಿದ್ದು ಇದ್ದುಪರಮ ಹರುಷದಿ ಕೆಸರ ಚೆಲ್ಲಿಕೊಂಬಂತೆ 2 ಪರಮ ಪಾವನ ಗುಣಪೂರ್ಣನೆ ನಿನ್ನಚರಣಯುಗಳವನ್ನು ಧ್ಯಾನಿಸುತನೆರೆಹೊರೆಯಲಿ ಮನ ಹೋಗದಂದದಲಿಕರುಣಿಸಿ ನಿಲ್ಲಿಸೊ ಸಿರಿಕೃಷ್ಣರಾಯ 3
--------------
ವ್ಯಾಸರಾಯರು
ಎನ್ನಾಗಮವ ಹೀಗಾಯಿತೊ ದೇವ ಇನ್ನು ನೀ ಎನ್ನನು ಸಲಹುವ ಬಗೆಯಂತೊ ಪ ಸಕ್ಕರಿ ತಾಯೆಂದು ಸಂತಿಗೆ ಕಳುಹಲು ತಕ್ಕಡಿ ಲಶುನವ ತಂದ ತರಳನಂತೆ 1 ಪರಮ ನಿರ್ಮಲವಾದ ತುಲಸಿ ತಾಯೆನೆ ದುಷ್ಟ ತುರುಚಿಯನೆ ತಂದ ತರಳನಂತೆ 2 ಮಸಿಯ ಒರೆಸಿಕೊಂಡು ಬಾಯೆನ್ನೆ ಶಿಶು ತಾನೆ ಕೆಸರು ಪೂಸಿಕೊಂಡು ಬಂದ ತರಳನಂತೆ3 ಕಳುಹಿದಾ ಪಿರಿಯರು ಹಳಿಯಲಿ ಚಿಂತಿಲ್ಲ ಗೆಳೆಯಾರು ನಗುವ ಚಿಂತೆಯೆ ಘನವೆಲೊ ದೇವ4 ಆಪುತ ಪ್ರಿಯ ಬಂಧು ವ್ಯಾಪಕ ನೀನೆಂದು ಜ್ಞಾಪಕಗೊಳಿಸಿದೆ ವಾಸುದೇವವಿಠಲ 5
--------------
ವ್ಯಾಸತತ್ವಜ್ಞದಾಸರು
ಒಂದು ಪ್ರಾರ್ಥಿಸಲು ನೂರೊಂದು ಕೊಟ್ಟಿಯೊ ದೇವ ತಂದೆ ನಿನ್ನಯ ಕರುಣವೆಂದಿಗೂ ಇರಲಿ ಪ ಇಂದು ನೀನಿತ್ತ ನೂರೊಂದು ನಿನ್ನಯ ಪಾದ ದ್ವಂದ್ವಕರ್ಪಿಸುವೆ ನಿನ್ನಯ ಸೇವೆ ಎಂದೆನುತ ಅ.ಪ ನಿನ್ನ ಮೂರ್ತಿಯ ನೋಡಿ ನಿನ್ನ ಸ್ತುತಿಯನೆ ಮಾಡಿ ನಿನ್ನ ಕರದಲಿ ಪಿಡಿದು ಪುಣ್ಯಗಳಿಸಿದೆನೊ ನಿನ್ನ ಸುಂದರ ರೂಪ ಸತತ ಹೃದಯದಿ ಪೊತ್ತು ಧನ್ಯನಾಗಿರುವೆನಿನ್ನೇನು ಬೇಕಿಹುದೆನಗೆ 1 ನಿಟ್ಟುಸಿರು ಬಿಡಿಸಿದೆಯೊ ಹೊಟ್ಟೆಯನು ಸುಡಿಸಿದೆಯೊ ಕಟ್ಟಕಡೆಯಲಿ ಕರವನಿತ್ತು ಮೇಲೆತ್ತಿದೆಯೊ ಕಟ್ಟುಬಣ್ಣವಿದಲ್ಲ ಸುಟ್ಟರಿದು ಪೋಗದೊ ಘಟ್ಟಿಯಾಯಿತು ಎನ್ನ ಪ್ರೇಮ ನಿನ್ನೊಳಗೆ 2 ಕೆಸರಿನಲಿ ಕಂಬದಂತಿದ್ದ ಎನ್ನಯ ಸ್ಥಿತಿಯು ಕುಸಿಯಲಿಲ್ಲವೊ ದೇವ ಶಶಿಕುಲ ಪ್ರಸನ್ನ ಹೊಸದಾದ ಚೈತನ್ಯವೆನಗೆ ವಿಕಸಿತವಾಯ್ತು ಉಸಿರಿರುವ ತನಕ ನಾ ಮರೆವುದಿಲ್ಲವೊ ನಿನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕುಲ ಕುಲ ಕುಲವೆನ್ನುತಿಹರು ಪ ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಅ ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ1 ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು 2 ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ 3
--------------
ಕನಕದಾಸ
ಕ್ಷಿತಿಭಾರ ಹರಣನೇ ಶ್ರೀಜಾನಕೀ ಪತಿಯೇ |ಶಿತಿಕಂಠ ಸಖ ಹರಿಯೇ ಪ ಅತಿ ವಿಮಲನಂತಾರ್ಕ ನಿಭ ಪದಾಗತಿ ವಹನೆ ಪೊರೆ ಶ್ರೀರಾಮಚಂದ್ರಾನೇ ಅ.ಪ. ಪರಮ ಮಂಗಳ ನಾಮ | ಪರಿಹರಿಸಿ ಸಂಸೃತಿಯನಿರುತ ಮಹದಾನಂದ | ಪ್ರದವೆನಿಪುದೋ ||ಮರುತಾಂತರಾತ್ಮ ತವ | ನಾಮ ಸುಧೆ ಸುಖ ಸವಿದುಇರುವಂತೆ ಮಾಡಯ್ಯ | ಕರುಣ ನಿಧಿಯೇ 1 ಕಮಲ ಸಂಭವನಯ್ಯ | ಸುಮನಸರಿಗತಿ ಪ್ರೀಯಕಮಲದಳ ನೇತ್ರನೇ | ಕಾಮಿತ ಪ್ರದನೇ ||ಭ್ರಮ ಮೂರ ಪರಿಹರಿಸೊ | ಕಮಲಾಪ್ತ ಕುಲಜನೇಶಮದಮಾನ್ವಿತನೆನಿಸಿ | ವಿಮಲ ಮತಿ ಈಯೋ 2 ದಶಕಂಠ ಹರ ನಿನ್ನ | ಯಶವನ್ನೆ ಪೊಗಳಲುಶೇಷ ವಿಪ ರುದ್ರಾದಿ | ಗಸದಳವು ಇಹುದೂ |ಕಸರು ಕರ್ಮಾದಿಗಳ | ಕೆಸರು ಕಳೆ ಪ್ರಾರ್ಥಿಸುವೆಅಸಮ ಮಹಿಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಪಾದದರ್ಶನವೀಯೈ ಜಾನಕೀನಾಥ ಪ ವೇದ ವೇದಾಂತಗಳ ಓದಿದವ ನಾನಲ್ಲ ವಾದ ವಾಕ್ಯಾರ್ಥಗಳ ಭೇದ ಎನಗಿಲ್ಲ ಅ.ಪ ಪಾತಕಂಗಳ ಗೈದು ಭೀತನಾಗಿಹೆನಯ್ಯ ನೀತಿನಿಯಮಗಳಿಂದ ದೂರ ನಾನು ಈತಿ ಬಾಧೆಗಳಿಂದ ನಾ ತಪಿಸುತಿಹೆನಯ್ಯ ಮಾತುಮಾತಿಗೆ ನಿನ್ನ ನಾಮ ಜಪವೀಯೆಂದು 1 ಕೆಸರೊಳಗೆ ಹಾಕುವೆಯೊ ಹೊಸ ಜನುಮವೀಯುವೆಯೊ ಬಿಸಜಾಕ್ಷ ನಿನ್ನ ಮನಬಂದಂತೆ ಮಾಡೊ ಉಸಿರಾಡುವನ್ನೆಗಂ ನಿನ್ನ ಭಜನೆಯ ಗೈಸಿ ರಸ ಕಸಗಳೊಂದೆನಿಸೊ ಮಾಂಗಿರಿಯರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪ್ರಾಣಪತಿ ಶ್ರೀನಿವಾಸ ವಿಠಲ ಪೊರೆ ಇವಳ ಪ ಆನತೇಷ್ಟ ಪ್ರದನು | ನೀನೆಂದು ಬಿನ್ನವಿಪೆಜ್ಞಾನ ಗಮ್ಯನೆ ದೇವ | ನೀನಾಗಿ ಪೊರೆಯೋ ಅ.ಪ. ಮಾನ್ಯ ಮಾನದ ಹರಿಯೆ | ಕನ್ಯೆಗಭಯದನಾಗಿಪುಣ್ಯ ಜೀವಿಯ ಸಲಹೆ | ಬಿನ್ನೈಪೆ ನಿನಗೇ |ನಿನ್ಹೊರತು ಜಗದೊಳಗೆ | ಅನ್ಯರನು ಕಾಣೆ ಕಾರುಣ್ಯ ನಿಧಿ ದಾನವಾ | ರಣ್ಯ ದಾವನಲಾ 1 ಭಾವಿಭಾರತಿ ಪತಿಯ | ಸೇವೆಯನೆ ಕೊಂಬಹಯಗ್ರೀವನೆ ನಿನ್ನ ಪದ | ತಾವರೆಯ ದಾಸ್ಯಾ |ಓದಿ ಬೇಡುತ್ತಿಹಳ | ತೀವರದಿ ಕೈ ಪಿಡಿಯೆದೇವ ನಿನ್ನಡಿಗಾನು | ಧಾವಿಸುತ ಬೇಡ್ವೇ 2 ಮಾರುತಾಂತರ್ಗತನೆ | ತಾರತಮ್ಯ ಜ್ಞಾನಮೂರೆರಡು ಭೇದಗಳ | ದಾರಿಯನೆ ತೋರೀ |ಸಾರತಮ ನೀನು ನಿ | ಸ್ಸಾರ ಜಗವೆಂತೆಂಬ ಚಾರುಮತಿಯನೆ ಇತ್ತು | ಪಾರು ಮಾಡಿವಳಾ 3 ವಿಷಯಗಳ ಅನುಭವದಿ | ಎಸೆವ ನಿನ್ನಯ ಸ್ಮರಣೆಹಸನಾಗಿ ನೀನಿತ್ತು | ಕೆಸರ ಕಳೆಯೋ |ಕುಶಲ ಕ್ಲೇಶಾದಿ ನಿ | ನ್ನೊಶವೆಂಬ ಧೃಡವಿರಲಿಬಿಸಜಾಕ್ಷ ಶ್ರೀರಾಮ | ಪ್ರಸರಿಸೋ ಜ್ಞಾನ 4 ದೇವ ದೇವೇಶ ಗುರು | ಸಾರ್ವಬೌಮರ ಪಾಲಶ್ರೀವರನೆ ಸರ್ವಜ್ಞ | ದುರ್ವಿಬಾವ್ಯಾ |ನೀವೊಲಿಯುತಿವಳಿನ್ನು | ಸಾರ್ವ ಕಾಲದಿ ಪೊರೆಯೊಗೋವಳರ ಪಾಲ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಟ್ಟೆಯ ನೆವದಿಂದ ಬಂದು ತಟ್ಟ ಕವನೆ ಕಂಡು ಕಣ್ಣ ತೆರೆದ ಕೃಷ್ಣವೇಣಿ ನಿಮ್ಮ ಕಂಡೆ ದುಷ್ಟ ಮಾನವರ ಬಾಧೆಗೆ ಅಂಜಿ ಇತ್ತ ಬಂದೆ ಕಷ್ಟ ದುರಿತಗಳ ಕಳೆಯೆ ತಾಯೆ ಪ. ಭೋರಿಡುವ ಮಳೆಗೆ ಹಲ್ಲುಗಿಟಗರಿದು ಶೀತತಲೆ- ಗೇರಿ ಕಂಪಿಸಿ ನಡುಗುತ್ತ ಜಾರಿ ಕೆಸರೊಳು ಬಿದ್ದು ಮತ್ತೇಳುತಲಿ ದಾರಿಯನು ಕೇಳಿಕೊಳ್ಳುತ ಕ್ರೂರವಾಗಿದ್ದ ಜಾಲಿಯ ಮುಳ್ಳನೆ ತುಳಿದು ಹರಿ ನಾರಾಯಣ ಎನ್ನುತ ಹಾರೈಸಿ ನಿಮ್ಮ ದರುಶನಕ್ಕೆ ನಾ ಬಂದೆ ಘೋರ ದುರಿತವನು ಕಳೆಯೆ ತಾಯೆ 1 ನಿತ್ಯ ಕಲ್ಯಾಣಿ ನಿರ್ಜರಸ್ತೋತ್ರೆ ಶುಭಗಾತ್ರೆ ಪ್ರತ್ಯಕ್ಷ ವಿಷ್ಣುಜಾತೆ ಮಾತೆ ವಿಸ್ತರಿಸಲಾರೆ ಶ್ರೀ ವಿಷ್ಣು ಸಂಪ್ರೀತೆ ಸತ್ಪಾತ್ರ ಸಂಪೂಜಿತೆ ಪ್ರೀತೆ ಸತ್ತು ಹುಟ್ಟುವ ಜನ್ಮ ಕೋಟಲೆಯ ಖಂಡ್ರಿಸೆ ಪತಿತ ಪಾವನ ಚರಿತೆ ವ್ಯರ್ಥವಾಯಿತು ಜನ್ಮ ಸಾರ್ಥಕವ ಮಾಡಮ್ಮ ಮುಕ್ತಿಸಾಧನದಾತೆ ಮಾತೆ 2 ಸುರಗಂಗೆ ಕೃಷ್ಣಮಲಾಪಹಾರಿ ಮೂವರು ಕೂಡಿ ಬೆರೆದಿದ್ದ ಸಂಗಮದಲ್ಲಿ ಅರಿಸಿಣ ಅಕ್ಷತೆ ಗಂಧ ಕುಂಕುಮ ತಾಂಬೂಲಗಳ ಹರುಷದಿಂದರ್ಪಿಸುತಲಿ ಥರಥರದಿ ನೆರೆದ ಮುತ್ತೈದೆಯರೆಲ್ಲರು ಮರದ ಬಾಗಿನವ ಕೊಡುತಲಿ ಹರುಷದಿಂದಿಪ್ಪುದನು ಕಂಡೆ ಹೆಳವನಕಟ್ಟೆ ಅರಸು ರಂಗನ ಕೃಪೆಯಲ್ಲಿ ತಾಯೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಭಕ್ತವತ್ಸಲನೆಂಬ ಬಿರುದು ಬಿಡದಿರು ದೇವ ಬಹು ಪರಾಕೆಲೊ ಮುರಾರಿ ಪ. ಶಕ್ತ ನೀನೆಂದು ನಂಬಿರುವೆ ಕೃಪಾಸಿಂಧು ಮತ್ತಗಜ ಮೈಮರೆದು ಸುತ್ತಿ ಕೆಸರೊಳು ಬಿದ್ದು ಶಕ್ತಿ ಹೀನನಾಗಿ ಏಳದಂತಾಗಿದೆ ಮತ್ತಾರಿಗಳವಲ್ಲ ಮಂದರಾದ್ರಿಧರನೆ ಎತ್ತಿ ಕಡೆಹಾಯಿಸೊ ಎನ್ನೊಡೆಯ ಶ್ರೀ ಹರಿಯೆ 1 ನಿಂದ ನೆಲ ಮುನಿಯುತಿದೆ ನಿಪುಣತನವಡಗಿತು ಮಂದಮತಿ ವೆಗ್ಗಳಿಸಿ ನೆಲೆಗಾಣೆ ಮುಂದೆ ತಂದೆ ನೀನಲ್ಲದಿನ್ಯಾರು ರಕ್ಷಿಪರಯ್ಯ ಬಂಧನವ ಪರಿಹರಿಸೊ ಭಯನಿವಾರಣ ಹರಿಯೆ 2 ಕೊಂಡೆಯರ ಕೆಡಮೆಟ್ಟಿ ಕುಹಕಿಗಳ ಮಸ್ತಕವ ಚೆಂಡಾಡಿದ ಚಿನ್ಮಯರೂಪ ನೀನು ದಿಂಡರಿದು ದುರಳರನು ದುರಿತಗಳ ಪರಿಹರಿಸಿ ಪುಂಡರೀಕಾಕ್ಷ 3 ವ್ಯಾಕುಲದಿ ಕೃಷ್ಣಮೃಗವು ಎದೆಗುಂದಿರೆ ನೀ ಕರುಣಿ ಸಮಯದಲಿ ವೃಷ್ಟಿಯ ಕರೆದು ಜೋಕೆಯಲಿ ಪಥÀವೆನೇರಿಸಿದ್ಯೊ ಜಗದೀಶ 4 ನಿನ್ನನೆ ಪೂಜಿಪೆನು ನಿನ್ನನೆ ಪಾಡಿ ಪೊಗಳುವೆನು ನಿನ್ನನೆ ನಂಬಿದವಳಿಗಿಂತ ಉನ್ನತವಾದ ಕಂಟಕವು ಬಂದಿದೆ ಕಾಯೊ ಪನ್ನಗಶಯನ ಹೆಳವನಕಟ್ಟೆ ರಂಗಯ್ಯ 5
--------------
ಹೆಳವನಕಟ್ಟೆ ಗಿರಿಯಮ್ಮ
ಭುವನದೊಳಿವನೆ ಶೂರ ಪ ಭವಬಂಧಗಳ ನಿನ್ನ | ಕುವರನೆ ಬಿಡಿಸುವ ಅ.ಪ ಮಕ್ಕಳ ಕೂಡಿಕೊಂಡು | ನಮ್ಮನೆಗಿವ-| ನೊಕ್ಕಲಿಕ್ಕುವನು ಬಂದು || ಪಕ್ಕನೆ ಓಡುವ | ಸಿಕ್ಕನು ಯೆಮಗಿವ 1 ಒರಗಿದ ಮಕ್ಕಳ | ಕರೆದು ಡಬ್ಬಿಸುವನು 2 ಹಿಂಡಿದ ಪಾಲ್ಮೊಸರು || ಚೆಂಡಾಟದೊಳು ನೆಲ-| ನುಂಡುಂಡು ಕೆಸರಾಯ್ತು 3 ನಿಲುತ ಪಾತ್ರವ ಕೊಂಡು | ಮೆಲುವ ನಾಟಕಧಾರಿ 4 ಬೆಳಗನ್ನು ಮೇಳವಿಸೆ || ಕಳೆದು ತರಿಸುವ ನಾವಿ | ನ್ನುಳಿ (ವು)ಪಾಯವ ಕಾಣೆ 5 ದೊರೆಯದಿದ್ದರೆ ಬೈವನು | ಮನೆಗೆ ಕಿಚ್ಚ-| ನ್ನಿರಿಸುವೆನೆನ್ನುವನು || ವೊರಳೊಳು ವಿಷ್ಠಿಸಿ | ಮರೆಯೊಳಡಗುವ6 ನಿಲದೀಗ ತರಿಸಲ್ಲ(ದೆ) || ಸುಲಿಗೆÉಗಾರಗೆ ತಕ್ಕ | ಬಲುಮೆಯೊಳ್ ಬುದ್ಧ್ದಿಯ-| ನೊಲಿದು ಪೇಳುತಲೆಮ್ಮ | ಕುಲವನುದ್ಧರಿಸವ್ವ 7 ಎಂದು ನಾನಾ ತೆರದಿ | ನಾರಿಯರು ಗೋ-| ವಿಂದನನತಿ ಮುದದಿ || ಗೋಪಿ ಪರಿ ಚಾಡಿ8 ತಕ್ಕ ಪದ್ಧತಿ ಧಾತ್ರಿಗೆ || ಬೆಕ್ಕಸಗೊಳದಿರಿ ಅಕ್ಕು ಸದಾನಂದ 9
--------------
ಸದಾನಂದರು