ಒಟ್ಟು 591 ಕಡೆಗಳಲ್ಲಿ , 76 ದಾಸರು , 483 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಇಷ್ಟ ಲಿಂಗವ ಪೂಜಿಸೆಂದು ಗುರುವು ಕೈಯಲಿ ಕೊಟ್ಟಇಷ್ಟಲಿಂಗ ನೀನೆ ಎಂದು ಕಿವಿಯಲಿ ಹೇಳಿಬಿಟ್ಟ ಪ ಉದಯದಲಿ ಲಿಂಗವನ್ನು ಬಯಲ ಕಡೆಗೆ ಒಯ್ಯುವೆಅದರ ತರುವಾಯದಲಿ ಲಿಂಗಮುಖವನೀಗ ತೊಳೆವೆಹದ ಮಾಡಿಯೆ ಬಿಸಿನೀರನು ಲಿಂಗಕ್ಕೆ ಎರೆವೆವಿಧವಿಧದ ವಸ್ತ್ರಗಳನ್ನು ಲಿಂಗಕ್ಕೆ ಉಡಿಸುವೆ 1 ಬಸಿತವನು ಹಣೆಯ ತುಂಬ ಲಿಂಗಕ್ಕೆ ಧರಿಸುವೆಕುಸುಮವೇನು ದೊರಕಿದರು ಲಿಂಗಕ್ಕೆ ಮುಡಿಸುವೆಬಿಸಿಯಾರಿದ ಎಡೆಯ ನಾನು ಲಿಂಗಕ್ಕೆ ಉಣಿಸುವೆಪಶುಪತಿಯೆ ಉದಕವೆಂದು ಲಿಂಗಕ್ಕೆ ಕುಡಿಸುವೆ2 ಲಿಂಗ ಕೊಳ್ಳೆಂದು ತಾಂಬೂಲ ನೀಡುವೆಭಂಗಭವನ ಸ್ತೋತ್ರ ಮಾಡಿ ಲಿಂಗವನ್ನು ಮಲಗಿಸುವೆಲಿಂಗವನ್ನು ನಡೆಸ್ಯಾಡಿ ಲಿಂಗವನ್ನು ಮಲಗಿಸುವೆಲಿಂಗ ಚಿದಾನಂದ ಬ್ರಹ್ಮಲಿಂಗವಾಗಿ ಇರುತಿಹೆ 3
--------------
ಚಿದಾನಂದ ಅವಧೂತರು
ಎನಿಕೆ ಒಂದಾಗಲಿ ಗುರುವೆ ಎನಿಕೆ ಒಂದಾಗಲಿಎನಿಕೆ ಒಂದಾಗಲಿ ಯೋಚನೆ ಇದಾಗಲಿಧ್ಯಾನ ಚಿದಾನಂದ ಗುರುವ ಧ್ಯಾನ ಮರೆಯದಂತೆ ಎನಗೆ ಪ ಕಂಡವರು ಉಗುಳಲಿ ಕಾಲಲೆನ್ನ ಒದೆಯಲಿಭಂಡ ಮನುಜನಿವನು ಎಂದು ಬಾಳುಗೇಡಿ ಎನಲಿ ಎನಗೆ 1 ಅನಾಯಾಸ ಬರಲಿ ಅಸಹ್ಯಿಸಿಕೊಳ್ಳುತಿರಲಿಹೀನಮನುಜನಿವನು ಎಂದು ಬಾಳುಗೇಡಿ ಎನಲಿ ಎನಗೆ2 ಮುಂದೆ ಕೆಡಹಿ ಬೀಳಲಿ ಮುಂಗೈ ಮೊಳಕಾಲ್ಮುರಿಯಲಿಹಿಂದಣಿಂದ ಕಳ್ಳರು ಕಟ್ಟಿಯೆಹಿಮ್ಮಡ ಕಡಿಯಲೆನಗೆ 3 ತನುವು ಎಲ್ಲ ನೋಯಲಿ ತಲೆ ಬೇನೆಯು ಬರಲಿಘನ ಕುರುವು ಕುತ್ತವು ಬಲಿದು ಘನವಾಗಿ ಇರಲಿ ಎನಗೆ4 ಇಂತು ಎನಗಾಗಲಿ ಇದೇ ಎನಗಿರಲಿ ಚಿಂತಾಯುತ ಚಿದಾನಂದನ ಚಿಂತೆ ಮರೆಯದಂತೆ ಎನಗೆ 5
--------------
ಚಿದಾನಂದ ಅವಧೂತರು
ಎಲ್ಲ ತಾಪತ್ರಯದ ಚಿಂತೆ ಬಗಳಗೆ ಹತ್ತಿಹುದುಸೊಲ್ಲು ಸೊಲ್ಲಿಗೆ ನೆನೆವ ಚಿಂತೆ ಎನಗೆ ಹತ್ತಿಹುದು ಪ ಮಡದಿ ಸುತರು ಮನೆಯ ಪಶುವು ಬಗಳೆಗೆ ಹತ್ತಿಹುದುಷಡು ಚಕ್ರಂಗಳ ಭೇದಿಪುದೆಲ್ಲಾ ಎನಗೆ ಹತ್ತಿಹುದುಕೊಡು ಕೊಳ್ಳುವುದು ಹಾಕುವುದೆಲ್ಲಾ ಬಗಳೆಗೆ ಹತ್ತಿಹುದುಎಡೆದೆರಪಿಲ್ಲದೆ ನಾದವ ಕೇಳುವುದೆನಗೆ ಹತ್ತಿಹುದು 1 ನಿತ್ಯ ನಿತ್ಯದ ಪರಾಮರಿಕೆಯು ಬಗಳೆಗೆ ಹತ್ತಿಹುದುಮತ್ತೆ ಭ್ರೂಮಧ್ಯದ ಅರಿವೆಯ ಹುಚ್ಚು ಎನಗೆ ಹತ್ತಿಹುದುಬಿತ್ತಿ ಬೆಳೆಯುವುದು ಮಳೆಯಿಲ್ಲೆಂಬುದು ಬಗಳೆಗೆ ಹತ್ತಿಹುದುಎತ್ತೆತ್ತಲು ತಾ ಬೆಳಕ ನೋಡುವುದು ಎನಗೆ ಹತ್ತಿಹುದು 2 ಭಕುತರ ಬದುಕನು ಹಸನು ಮಾಡುವುದು ಬಗಳೆಗೆ ಹತ್ತಿಹುದುಭಕುತಿಯ ಶರಧಿಲಿ ಮುಳುಗಾಡುವುದು ಎನಗೆ ಹತ್ತಿಹುದುಸದಾ ಕಾಲವು ಕಾದಿರುತಿಹುದು ಬಗಳೆಗೆ ಹತ್ತಿಹುದುಚಿದಾನಂದ ಶ್ರೀ ಬಗಳೆಯ ಭಜಿಪುದು ಎನಗೆ ಹತ್ತಿಹುದು 3
--------------
ಚಿದಾನಂದ ಅವಧೂತರು
ಗುರುವಿನ ಗುಣಂಗಳ ನೆನೆವೆ ಸಿದ್ಧೇಶ ನಾನುಗುರುವಿನ ಪಾದಂಗಳ ನೆನೆವೆ ಸಿದ್ಧೇಶ ಪ ಸುಖವು ಬಂದರೆ ಹಿಗ್ಗದವರು ಸಿದ್ಧೇಶ ನಾನಾದುಃಖವು ಬಂದರೆ ಬಗ್ಗದವರು ಸಿದ್ಧೇಶ ಅಖಿಳವೆಲ್ಲವ ಬ್ರಹ್ಮವೆಂದರು ಸಿದ್ಧೇಶ ಇವರುಮುಕುತ ಗಣಂಗಳು ಈಗ ಸಿದ್ಧೇಶ 1 ಮಾನ ಹಚ್ಚಿಕೊಳ್ಳದವರು ಸಿದ್ಧೇಶ ಅಭಿಮಾನಗಳು ನೀಗಿದವರು ಸಿದ್ಧೇಶತಾನೆ ಎಂದು ತಿಳಿದವರು ಸಿದ್ಧೇಶ ಅವರುಜ್ಞಾನ ಮುಕ್ತಗಣಂಗಳು ಸಿದ್ಧೇಶ 2 ಸಂಸಾರವಿದ್ದರೆ ಬಾಧಕವಿಲ್ಲದವರು ಸಿದ್ಧೇಶಸಿದ್ಧ ಚಿದಾನಂದರಿಹರು ಸಿದ್ಧೇಶ ಇವರುಶುದ್ಧ ಮುಕ್ತ ಗಣಂಗಳು ಸಿದ್ದೇಶ3
--------------
ಚಿದಾನಂದ ಅವಧೂತರು
ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ಬಯಸೋದು _ ಉತ್ತಮ ಸಂಗ - ಬಯಸೋದು ಪ ಬಯಸೂವುದುತ್ತಮ ಸಂಗ | ಭವಭಯ ಪರಿಹರಿಸೂವ ಸಂಗ | ಆಹಭಯ ದೂರಾಭಯಪ್ರದ | ದಯ ಪೂರ್ಣ ಹರಿಯ ಹೃ-ದಯ ವ್ಯಾಪ್ತವಾದಂಥ | ವಿಯದೊಳು ಕಾಂಬಂಧ ಅ.ಪ. ವಿಭವ | ಹೇತು ಇವರೆಂದು ಖ್ಯಾತಿಲಿ ಇರುವ | ಬೊಮ್ಮದಿವಿಜೇಡ್ಯ ವೈಕುಂಠನವ | ಮೃಗ್ಯನವರಿಂದನಾಗುತಲಿರುವ | ಆಹಅವನ ಪದ ಕಮಲದಿ | ಧೃವ ಚಿತ್ತ ಉಳ್ಳವರವರಿಗೆಂಬರು ವೈ | ಷ್ಣವಾಸ್ಯರೆಂದೆನುತಲಿ 1 ತಾಪ ಶಮನ | ಸೇವಿಪರ ಹೃದಯಾಂತಃಕರಣ | ಆಹದಿರುತ ತೋರಿಕೊಳ್ಳೆ | ತಾರೇಶನಂದದಿಪರಿತಾಪವಿನ್ನುಂಟಿ | ಮರಳಿ ಅಂಥವನಿಗೆ 2 ಶುದ್ಧಾಂತಃಕರಣರ ಭಕ್ತಿ | ಪಾಶಬದ್ದನಾಗಿಹ ಹರಿಮೂರ್ತಿ | ಇಂಥಶುದ್ಧರ ವಸ ಹರಿಕೀರ್ತಿ | ಇಂದದಗ್ದ ಪಾಪದ ಮೂಟೆ ಭರ್ತಿ | ಆಹಊಧ್ರ್ವ ಪುಂಡ್ರವು ಶಂಖ | ಮುದ್ರಾದಿ ಚಿನ್ಹಿತಶಬ್ದರಿವರು ಪ್ರ | ಸಿದ್ಧ ಭಾಗ್ವತರೆಂದು 3 ಕಾಮ ಕಾರ್ಮಾಅವಿದ್ಯದಿಂದ | ದೇಹಭೂಮಿಯೊಳುತ್ಪನ್ನದಿಂದ | ಜಾತಿಬ್ರಾಹ್ಮಣಾಹಂಭಾವದಿಂದ | ಶೂನ್ಯಶ್ರೀಮನೋಹರ ಜೀವರಿಂದ | ಆಹಸಾಮಸನ್ನುತ ಭಿನ್ನ | ನೇಮ ತಿಳಿದು ತಾರ-ತಮ್ಯವ ತಿಳಿದವ | ಪ್ರೇಮ ಭಕ್ತನವನು 4 ನೋವು ಸಂತೋಷಗಳೆಂಬ | ದ್ವಯಭಾವಗಳ್ಸಮತೇಲಿ ಉಂಬ | ಜ್ಞಾನಿದೇವ ದೇವಗೆ ಪ್ರಿಯನೆಂಬ | ಬುದ್ಧಿಲೋಪಿ ಅವರ ಭಜಿಸೆ ತುಂಬ | ಆಹಗೋವ ಪಾಲಕ ಗುರು | ಗೋವಿಂದ ವಿಠ್ಠಲಕಾವನು ಬೆಂಬಿಡದೆ | ಈ ವಿಧ ಭಕುತರ 5
--------------
ಗುರುಗೋವಿಂದವಿಠಲರು
ಶೃತಿನಾಥ ಸ್ಮøತಿಯಿತ್ತು ಸತತ ಪೊರೆಯೋಗತಿ ಗೋತ್ರ ನೀನೆಂದು | ಸತತ ತುತಿಸುವೆನೋ ಪ ನಿಚ್ಚ ಸೇವೆಯ ಕೊಳ್ಳೋ 1 ಪತಿ ಸಖನೇ |ನ್ಯೂನಾತಿರೇಕಗಳ | ನೀನಾಗಿ ಮನ್ನಿಸುತಮಾನನಿಧಿ ಗುಣಪೂರ್ಣ | ನೀನೆನ್ನ ಪೊರೆಯೋ 2 ಭಾವದಲಿ ನೀನಿರಲು | ಅವ ಭಯವಿಲ್ಲೆನಗೆಶ್ರೀವರನೆ ಸರ್ವೇಶ | ಸರ್ವಜ್ಞ ಮೂರ್ತೇ |ಕಾವ ಕರುಣಿಯೆ ಗುರು | ಗೋವಿಂದ ವಿಠಲ ಬಾಗೋವತ್ಸ ಧ್ವನಿ ಕೇಳಿ | ಧಾವಿಸುವ ಪರಿಯಂತೆ 3
--------------
ಗುರುಗೋವಿಂದವಿಠಲರು
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
ತತ್ವವಿವೇಚನೆ ಅಂತರಂಗದ ಕದವು ತೆರೆಯಿತಿಂದು ಪ ಎಂತು ಪುಣ್ಯದ ಫಲವು ಪ್ರಾಪ್ತಿ ದೊರಕಿತೊ ಎನಗೆ ಅ.ಪ ಏಸುದಿನವಾಯಿತೊ ಬೀಗಮುದ್ರೆಯ ಮಾಡಿ | ವಾಸವಾಗಿದ್ದರೋ ದುರುಳರಿಲ್ಲಿ || ಮೋಸವಾಯಿತು ಇಂದಿನ ತನಕ ತಮಸಿನ | ರಾಶಿಯೊಳಗೆ ಹೂಳಿ ಕಾಣಿಸುತ್ತಿರಲಿಲ್ಲ 1 ಹರಿಕರುಣವೆಂಬಂಥ ಕೀಲಿ ಕೈ ದೊರಕಿತು | ಗುರುಕರುಣವೆಂಬಂಥ ಶಕ್ತಿಯಿಂದ || ಪರಮ ಭಾಗವತರ ಸಹವಾಸದಲಿ ಪೋಗಿ | ಹರಿ ಸ್ಮರಣೆಯಿಂದಲ್ಲಿ ಬೀಗಮುದ್ರೆಯ ತೆಗೆದೆ 2 ಸುತ್ತಲಿದ್ದವರೆಲ್ಲ ಪಲಾಯನವಾದರು | ಭಕ್ತಿಕಕ್ಕಡವೆಂಬ ಜ್ಞಾನದೀಪ || ಜತ್ತಾಗಿ ಹಿಡಿಕೊಂಡು ದ್ವಾರದೊಳಗೆ ಪೊಕ್ಕೆ | ಎತ್ತನೋಡಿದರತ್ತ ಶೃಂಗಾರಸದನ 3 ಹೊರಗೆ ದ್ವಾರವು ನಾಲ್ಕು ಒಳಗೈದು ದ್ವಾರಗಳು | ಪರ ದಾರಿಗೆ ಪ್ರಾಣ ಜಯವಿಜಯರು || ಮಿರುಗುವ ಮಧ್ಯಮಂಟಪ ಕೋಟಿರವಿಯಂತೆ | ಸರಸಿಜನಾಭನ ಅರಮನೆಯ ಸೊಬಗು 4 ಸ್ವಮೂರ್ತಿಗಣ ಮಧ್ಯ ಸಚ್ಚಿದಾನಂದೈಕ | ರಮೆಧರೆಯರಿಂದಲಾಲಿಂಗಿತ್ವದಿ || ಕಮಲಜಾದಿಗಳಿಂದ ತುತಿಸಿಕೊಳ್ಳುತ ಹೃದಯ- | ಕಮಲದೊಳಗಿರುವ ಶ್ರೀ ವಿಜಯವಿಠ್ಠಲನ ಕಂಡೆ 5
--------------
ವಿಜಯದಾಸ
ನಾ ವಂದಿಸುವೆ ನಲಿದಾಡುವೇ ಪ ಪವಿತ್ರಳಾದೇ ನಿತ್ಯ ಪರಮಾತ್ಮನ ಕಂಡು ಕೃತಾರ್ಥಳಾದೇ 1 ವಜ್ರ ಮಂಟಪ ವೈಭವನೋಡಿದೆ ನೋಡಿ ಉಧೃತಳಾದೇ 2 ಸತ್ಯಧ್ಯಾನರು ಎತ್ತಿ ಮಾಡುವಂಥ | ಮಂಗಳಾರ್ತಿಯನೆ ಕಂಡೆನೇ ವಿಸ್ತರ ನೋಡಿದೆ3 ಕೊಂಡಾಡುವುದ ನಾ ಕೇಳಿದೆ ಹಿಂಡು ಪಡೆವುದ ನೋಡಿದೆ 4 ಮುಟ್ಟಿಪೂಜಿಸಿದ ಮೂರ್ತಿಯು ಮತ್ತೆ ಕುಬೇರನ ಅಳಕಾ ಪಟ್ಟಣವೇ ಪ್ರತ್ಯಕ್ಷ ಬಂದಿರುವುದಿಲ್ಲಿ 5 ಬೆಳ್ಳಿ ಭಂಗಾರದ ಮಿಳ್ಕೆ, ತಂಬಿಗಿ ಢಾಲಿಯನು ಕೈಯಲಿ ಜನರು ಕೊಂಡೊಯ್ವರು ಭಾಳಿರುವುದು 6 ಪ್ರತ್ಯಕ್ಷವೈಕುಂಠವೆನಿಪುದೂ ದಾಯಪಿಡಿವರೂ 10 ನೋಡಿ ಸಂತುಷ್ಟಳಾದೇ ಈ ಮಠದಲಿ 11 ಮತ್ಯಾರಿಗೀಡಿಲ್ಲನೋಡು ಸೃಷ್ಟಿವೊಳಗಿನವರಿಗೀಡಿಲ್ಲನೋಡು 12 ವಾದಿಮತದ್ವಾದಿನೀ ಸೋಲಿಸುವರು | ಮಾಯಮತಿಗಳ ಮಾಯಮಾಡುವರೂ ಪಾಠದಿಬೋಧಿಸುವರೂ 13 ಸುರಲೋಕ ಪೂಜ್ಯರಿವರೂ ಶಿರೋಮಣಿಯೆಂದು ಕರೆಸಿಕೊಳ್ಳುವರೂ 14
--------------
ಓರಬಾಯಿ ಲಕ್ಷ್ಮೀದೇವಮ್ಮ
ಪಾರ್ವತಿರಮಣನಾ ನೋಡಿದೆನು | ನೋಡಿದೆನು | ಪರ್ವತ ಮಲ್ಲೇಶನಾ 1 ಆಟವಾಡುತ ಪಾಟ ಪಾಡುತ | ಕೋಟಿ ಜನರ ಸಹಿತಾಗಿ ಸಾಟಿಯಿಲ್ಲದ ಪರ್ವತ | ನಾಗಾ ಲೋಟಿಯನೆ ನಾ ನೋಡಿದೆ 2 ಅಲ್ಲಿದ್ದ ಜನರ ಸಹಿತಾಗಿ ಪೆದ್ದ ಚೆರುವನ್ನೆದಾಟಿದೆ | ಪುಟ್ಟ ಬೆಟ್ಟಗಳೇರಿ ಇಳಿಯುತ ಕೃಷ್ಣಧ್ಯಾನವ ಮಾಡುತ ದಿಟ್ಟ ಮಲ್ಲಿಕಾರ್ಜುನನ ಮನ ಮುಟ್ಟಿ ಸ್ನರಣೆಯ ಮಾಡುತ 3 ಶ್ರೀಭೌಮನ ಕೊಳ್ಳ ನೇಮದಿಂದಲಿ ದಾಟಿದೆ4 ಆ ಶೈಲ ಕೈಲಾಸ ಧಾಮರೆ | ಸೋಂಪಿನಿಂದಲಿ ಬಂದೆನೂ ಸಾಕ್ಷಿಗಣಪಗೆ ಕೈಯ ಮುಗಿದೂ | ಶ್ರೀ ಶೈಲಶಿಖರವ ಕಂಡೆನು5 ಭಂಗಾರ ಗೋಪುರದ ಮ್ಯಾಲೆ | ಶೃಂಗಾರವನು ನಾ ನೋಡಿದೆ ನಂದಿ ಭೃಂಗಿ ಮೊದಲು ಮಾಡಿ ಸಕಲ ತೀರ್ಥವ ನೋಡಿದೆ6 ಅಲ್ಲಿ ಸ್ನಾನವ ಮಾಡಿನಾನು | ಬಲ್ಲಿದನ ಬಲದಿಂದಲಿ ಎಲ್ಲ ಫಲ ಪುಷ್ಪಧರಿಸಿದ ಮಲ್ಲಿಕಾರ್ಜುನನ ನೋಡಿದೆ 7 ಪಂಚಾಮೃತವ ಮಾಡಿನಾನು | ಸಂಚಿತಾಗಮ ಕರ್ಮವು ವಂಚನಿಲ್ಲದೆ ಕರೆದು | ನಿಶ್ಚಿಂತೆ ಮನವನು ಮಾಡಿದೆ 8 ಜನಿತ ಪಾತಾಳಗಂಗಿ ಉದಕವು ತಂದು ಗಂಗಾಧರಗೆ ಎರೆದು ನಾನು | ಕಂಗಳಿಂದಲಿ ನೋಡಿದೆ 9 ಥೂಪ-ದೀಪ-ನೈವೇದ್ಯದಾರುತಿ | ಅನೇಕ ಭಕ್ತಿಲಿ ಮಾಡಿದೆ ಪ್ರೀತಿಯ ತೋರೆಂದು ಶಿವಗೆ | ಪ್ರೀತಿಲಿ ಕರಮುಗಿದೆನು 10 ಮುದ್ದು ಕೋಟಿಲಿಂಗಗೆ ನಾನು | ವಿಧ್ಯುಕ್ತದಿ ನಮಿಸಿದೆ ವೃದ್ಧ ಮಲ್ಲೇಶ್ವರನ ನೋಡಿ | ಅಲ್ಲಿದ್ದದೇವರ ಭಜಿಸಿದೆ 11 ಅಮರರಿಂದರ್ಚಿಸಿಗೊಂಬ | ಭ್ರಮರಾಂಬನ ನೋಡಿದೆ ಭ್ರಮೆಯು ಬ್ಯಾಡೆಂದು ಸಂಸಾರದ | ಬ್ಯಾಗದಿಂದಲಿ ಬೇಡಿದೆ 12 ಥಟ್ಟನೇ ಪಂಚಾ ಮಠವನೋಡಿ | ಅಟಕೇಶ್ವರಕೆ ಬಂದೆನು ಶಿಖರೇಶ್ವರನ ದರ್ಶನ ಮಾಡಿ | ಹಾಟಕೇಶ ಪುರ ನೋಡಿದೆ13 ಭಾರತಿಯ ಶೈಲಿ ವಿಸ್ತಾರ ಪತ್ರಿ ಪುಷ್ಪಗಳ ಫಲಗಳ ನಾರಸಿಂಹ ವಿಠಲಗರ್ಪಿಸಿ | ಧಾರೆ ಎರೆದು ಬಂದೆನು 14
--------------
ಓರಬಾಯಿ ಲಕ್ಷ್ಮೀದೇವಮ್ಮ
(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಅಮ್ಮೆಂಬಳದ ಕುರ್ನಾಡು ಸೋಮನಾಥ) ಕಾಮಿತ ಫಲದಾತ ಕಟ್ಟೆಯ ಸ್ವಾಮಿ ಸೋಮನಾಥಾ ಪೂಜೆಯ ನಿರುತದಿ ಕೊಳ್ಳುವ ಪ. ಅಂಬಿಕೆಯನು ವರಿಸಿ ಗಜಚ ರ್ಮಾಂಬರವನು ಧರಿಸಿ ಶಂಬರಾರಿಯನು ಸುಲಭದಿ ಗೆಲಿದಂ- ಮ್ಮೆಂಬಳಜನರನು ನಂಬಿಸಿ ಸಲಹುವ 1 ಒಡೆಯನು ನೀನೆಂದೂ ಊರಿನ ಬಡ ಜನರುಗಳಿಂದೂ ಕೊಡುವ ಪೂಜೆಯನು ಮಡದಿಸಮೇತೀ- ಗಿಡದ ಬುಡದಿ ಕೊಂಬುಡುಪತಿಶಿಖರ 2 ದೋಷಗಳನು ತರಿವಾ ಪನ್ನಗ ಭೂಷಣನೀ ಬರುವಾ ತೋಷಪಡುವ ಸಜ್ಜನರಿಗೆ ಶೇಷಗಿ ರೀಶನು ಸಕಲಭಿಲಾಷೆಯ ಸಲಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ