ಒಟ್ಟು 16 ಕಡೆಗಳಲ್ಲಿ , 10 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶ್ರೀ ವಾದಿರಾಜರ ಪ್ರಾರ್ಥನೆ) ಭಾವಿಭಾರತಿವರನೆ ದಾಸನ ಬೇಗ ಕಾವ ಕಲುಷಹರನೆ ದೇವ ಋಜು ಗಣನಾಥನೀಪರಿ ಸಾವಕಾಶಕೆ ಸಮಯವಲ್ಲಿದು ಪ. ಅರಿಷಡ್ವರ್ಗದಿ ಸಿಲುಕಿ ಕ್ಷಣಕ್ಷಣ ಕರಗಿ ಕುಂದುತ ಬಂದೆನು ನಾನಾ ಪರಿಯ ಕ್ಲೇಶದಿ ನೊಂದೆನು ಮುಂದೇನು ದುರಿತಾರಾಶಿಗಳನ್ನು ಬೇಗದಿ ತರಿದು ಸಜ್ಜನಗುಣವ ಸುಲಭದಿ ಪೊರೆದನೆಂಬೈತಿಹ್ಯ ವಚನದಿ ಭರವಸದಿ ನಂಬಿರುವೆ ನಿನ್ನನು 1 ತುರಗ ವದನ ದೇವನ ವಲಿಸಿ ದೇವ ನರವರ ಸಂಘವನು ಕರದು ತಂಪೇರಿಸಿ ಸರಿಯೆನಿಸಿದನೆ ಹರಿಯೆ ತಾನೆಂದೊದರಿಕೊಂಡಿಹ ನರಕಭಾಜಿಗಳಾದ ಮೈಗಳ- ನರಿದು ವಾದದಿ ಮುರಿದು ಹಲ್ಲನು ಸಿರಿವರನ ಸತ್ಕರಿಸಿ ಪೂಜಿಪ2 ವನಜಾಕ್ಷ ರಾಮಭಕ್ತನಾಗಿಹ ವಿಭೀಷಣಗೆ ಮಾರುತಿಯಿಂದುತ್ತ- ಮುಂದಿನ ಫಲ ನೀಡೆಂದು ಮಣಿದು ಬೇಡುವೆ ನಿನ್ನ ಪದಯುಗ ವನರುಹಗಳನುವಶ್ಯದಾಯಕ ನಿತ್ಯ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಲ್ಲಿರುವೆ ಬಾರಯ್ಯದೇವ ಬಲ್ಲಿದ ನೀನೆ ಅನಾಥಜನಜೀವ ಪ ಪುಲ್ಲನಾಭ ನೋಡೆನ್ನ ಪರಿಭವದ ದು:ಖವನು ನಿಲ್ಲದೆ ದಯಮಾಡು ಬೇಗದೊಳಭವ ಅ.ಪ ಕ್ಷಣಕ್ಷಣಕೆ ಒದಗುತಿಹ್ಯ ದಣಿವು ಬೇನ್ಯಾಪತ್ತು ಅನುಪಮ ಬಡತನದ ಘನ ಘನ ವಿಪತ್ತು ದಿನದಿನ ಪರರನು ಮಣಿದುಬೇಡುವ ಹೊತ್ತು ಇನಿತೆಲ್ಲ ಕನಿಕರದಿ ನೀನೆ ಕಳೆಯಭವ 1 ಕನಕ ವಸ್ತ್ರಾಭರಣ ವನಿತೆಗ್ಹಾಕುವ ಚಿಂತೆ ಧನಧಾನ್ಯವಿಲ್ಲೆಂಬ ಎಣಿಕಿಲ್ಲದ ಚಿಂತೆ ಮನಕೆ ತುಸುಗೊಡದ ರಿಣಬಾಧದ್ದತಿ ಚಿಂತೆ ವನಜಾಕ್ಷ ಕೃಪೆಯಿತ್ತು ನೀನೆ ಬಿಡಿಸಯ್ಯ 2 ಧರೆಯಸುಖೆನಗಿಲ್ಲೆಂಬ ಪರಿಪರಿಯು ಉರಿ ತಾಪ ಪರರಸೇವೆಯ ಮಾಡ್ವ ಪರಮ ಪರಿತಾಪ ಜರಜರಕೆ ಬಂದು ಆವರಿಸುವುವು ಮಹಪಾಪ ಪರಹರಿಸೆಲವೋ ಶ್ರೀರಾಮಪ್ರಭು ಭೂಪ 3
--------------
ರಾಮದಾಸರು
ಕರುಣಿಸೊ ಗುರು ಎನಗೆ ಅರಘಳಿಗಿ ನೀ ಎನ್ನ ಹೃದಯದಿಂದಲಗದ್ಹಾಂಗೆ ಧ್ರುವ ಕಣ್ಣಿನೊಳಗ ನಿನ್ನ ಕಾಣದಿದ್ದರೆ ಪೂರ್ಣ ಪ್ರಾಣನಿಲ್ಲದೊ ನಿಮಿಷಾರ್ಧದಲಿ ಕ್ಷಣಕ್ಷಣಕ್ಕೊದಗಿ ನೀ ಖೂನದೋರದಿದ್ದರೆ ತನು ವಿಕಳಿತವಾಗಿ ಕ್ಷೀಣಹೊಂದುವದೊ 1 ಬೇಡುವದೊಂದೆ ನಾ ಬಿಡದೆ ನಿಜರೂಪ ಪೊಡವಿಯೊಳಗೆ ದೃಢ ನಿಶ್ಚಯಲಿ ಎಡಬಲವು ನೋಡದೆ ಒಡಲ ಹೊಕ್ಕಿದೆ ನಿನ್ನ ಕಡೆಗಾಣಿಸುವದೆನ್ನೊಡೆಯನೆ ಪಿಡಿದು ಕೈಯ 2 ಸುತ್ತಸೂಸುತಲಿನ್ನು ಚಿತ್ತದಿಂದಗಲದೆ ನಿತ್ಯವಾಗಿರೊ ನೀ ಹೃತ್ಕಮಲದಲಿ ಹೆತ್ತ ತಾಯಿಯೋಪಾದಿ ತುತ್ತುತುತ್ತಿಗೆ ಒಮ್ಮೆ ಹತ್ತಿಲಿದ್ದು ಸಂತತ ಸಲಹೊ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚೋದ್ಯ ಚೋದ್ಯ ಹರಿ ನಿನ್ನ ಆಟ ಸುಲಭವಲ್ಲಾರಿಗೆ ತಿಳಿಯದೀ ಮಾಟ ಪ ಉಣಿಸುವವರೊಳು ನೀನೆ ಉಣುತಿರುವವರಲಿ ನೀನೆ ಉಣಿಸುಣಿಸಿ ಅಣಕಿಸುವ ಬಿನುಗರಲಿ ನೀನೆ ಮಣಿಯುವವರೊಳು ನೀನೆ ಮಣಿಸಿಕೊಂಬರಲಿ ನೀನೆ ಕ್ಷಣಕ್ಷಣಕೆ ಬದಲ್ವಾಗ ಬಣ್ಣಕಗರಲಿ ನೀನೆ 1 ಹೊಡೆಯುವವರಲಿ ನೀನೆ ಹೊಡೆಸುವವರಲ್ಲಿ ನೀನೆ ಹೊಡೆಸಿಕೊಳ್ವರಲಿ ನೀನೆ ಬಿಡಿಸುವವರಲಿ ನೀನೆ ದುಡಿಯುವವರಲಿ ನೀನೆ ದುಡಿಸಿ ಕೊಂಬರಲಿ ನೀನೆ ಬಡವರಲಿ ನೀನೆ ಬಲ್ಲಿದರೊಳ್ನೀನೆ 2 ಕೊಟ್ಟೊಡೆಯರಲಿ ನೀನೆ ಬಿಟ್ಟೋಡ್ವರಲಿ ನೀನೆ ಕೊಟ್ವೊವಚನತಪ್ಪುವ ಭ್ರಷ್ಟರಲಿ ನೀನೆ ಶಿಷ್ಟನಿಷ್ಟರಲಿ ನೀನೆ ಬಿಟ್ಟಾಡ್ವರಲಿ ನೀನೆ ಇಟ್ಟಿಟ್ಟು ಹಂಗಿಸುವ ದುಷ್ಟರಲಿ ನೀನೆ 3 ಪಾಪಿಷ್ಟರಲಿ ನೀನೆ ಕೋಪಿಷ್ಟರಲಿ ನೀನೆ ಶಾಪಿಸುವರಲಿ ನೀನೆ ಶಾಪಕೊಂಬರಲಿ ನೀನೆ ತಾಪತ್ರದಲಿ ನೀನೆ ಭೂಪತಿಗಳೊಳು ನೀನೆ ಅಪಾರ ಸೃಷ್ಟಿ ಸರ್ವವ್ಯಾಪಕನು ನೀನೆ 4 ಇನ್ನರಿದು ನೋಡಲು ಅನ್ಯವೊಂದಿಲ್ಲವು ನಿನ್ನಪ್ರಭೆಯೆ ಸಕಲ ಜಗವನ್ನು ಬೆಳಗುವುದು ನಿನ್ನ ರೂಪವೆ ಜಗ ಎನ್ನಯ್ಯ ಶ್ರೀರಾಮ ಭಿನ್ನಬೇದ ಬಿಡಿಸೆನ್ನ ಧನ್ಯನೆನಿಸಯ್ಯ 5
--------------
ರಾಮದಾಸರು
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1 ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2 ದುರಿತ ಮಾಯಾ ಶರೀರಿ ನಾನು 3 ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4 ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5
--------------
ಕನಕದಾಸ
ಪರಿ ಏನೋ ಬಾಲ ಹನುಮ ಪ. ಬಂಧಿಸಿದರಾರಿಲ್ಲಿ ನಿನ್ನ ಹನುಮ ಅ.ಪ. ಒಂದು ಸಲ ನೋಡುವೆನೆ ಬ್ರಹ್ಮಾಸ್ತ್ರವಲ್ಲವಿದು ಒಂದು ಸಲ ನೋಡುವೆನೆ ಅಜಗರವಿದಲ್ಲ ಒಂದು ಸಲ ನೋಡುವೆನೆ ಕಳ್ಳ ಗುಂಪಲ್ಲವಿದು ಒಂದೆರಡು ಕೋಣವೆರಡರ ಮಧ್ಯೆ ಇರುವ 1 ಕ್ಷಣಕೆ ಪರಿಹರವಾಯ್ತು ಹಿಂದೆ ಆ ಬಂಧಗಳು ಕ್ಷಣಕ್ಷಣಕು ಇದ್ದಂತೆ ಇರುವುದೀ ತೊಡಕು ಗುಣದಂತೆ ಆವರಣ ವರ್ತುಳಾಕಾರದಲಿ ತೆನೆಗಳಲಿ ಕೋತಿಗಳ ಕಾವಲಿನ ಕಟ್ಟು 2 ಬೀಸಿದೀ ಬಲೆ ತೆಗೆಯೆ ಶ್ರೀ ಶನಿಗು ಅಳವಲ್ಲ ವಾಸುದೇವನೆÀ ಬಲ್ಲ ಈ ಮರ್ಮವ ದಾಸಜನ ಪ್ರಿಯ ಶ್ರೀಗೋಪಾಲಕೃಷ್ಣವಿಠ್ಠಲ ವ್ಯಾಸರಿಂದಲಿ ನಿನಗೆ ಮೋಸಗೈಸಿದನೋ 3
--------------
ಅಂಬಾಬಾಯಿ
ಬೇಡುವುದೂ ಬಲು ಕಷ್ಟ ಪ ನೀಡದಿದ್ದವನೇ ನಷ್ಟ ಅ.ಪ. ನಾಚಿಕೆ ಎಲ್ಲನು ತೊರೆದು ಮಹಾ ನೀಚರಿಗೆ ಬಾಯ್ತೆರದು 1 ಕೊಟ್ಟಾರೆಂಬ ದುರಾಶಾ ಕ್ರಿಯಾ ಭ್ರಷ್ಟರರಿಯರೂ ಕ್ಲೇಶಾ 2 ಚಿತ್ತವೃತ್ತಿಯನು ಕಂಡೂ ಅಧಮರ ಹೊತ್ತುಹೊತ್ತಿಗೆ ಕಾಣಿಸಿಕೊಂಡು 3 ಗುಣಹೀನರ ಕೊಂಡಾಡೀ ಬಂದು ಕ್ಷಣಕ್ಷಣಕವರನು ನೋಡೀ 4 ಶ್ರೀದವಿಠಲನ ಬಿಟ್ಟೂ ಅಧಮಾಧಮರಿಗೆ ದೈನಬಟ್ಟು 5
--------------
ಶ್ರೀದವಿಠಲರು
ಮಾಧವ ಪ ದುರುಳ ತಿರುಕನು ನಾನು 1 ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು2 ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು 3 ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನುಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು4 ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನುಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು 5
--------------
ಕನಕದಾಸ
ಲಾವಣಿ ಖೋಡಿಮನಸು ಇದು ಓಡಿ ಹೋಗುತದಬೇಡೆಂದರು ಕೇಳದು ಹರಿಯೆಜೋಡಿಸಿ ಕೈಗಳ ಬೇಡಿಕೊಂಬೆ ದಯಮಾಡಿಹಿಡಿದು ಕೊಡು ನರಹರಿಯೆ ಪ ಗಾಡಿಕಾರ ನಿನ್ನ ಮೋಡಿಯ ಮೂರ್ತಿಯಕೂಡಿಸಿ ಪೂಜಿಸಲಘ ಹರಿಯೆದೂಡುತ ಹೃದಯದ ಗೂಡಿನೊಳಗೆ ಸ್ಥಿರ ಮಾಡಲು ಹದವನು ನಾನರಿಯೆನೋಡಿಂದ್ರಿಯಗಳ ತೀಡಬಲ್ಲೆ ಮನತೀಡುವ ಯತ್ನವು ಬರೆಬರೆಯೆಬೇಡಬೇಡವೆಂದಾಡುವೆನೆ ನಿನ್ನನೋಡುವುದೆಂತೈ ಜಗದೊರೆಯೆಕೋಡಗನಂತಿದು ಕಿಡಿಗೇಡಿ ಜಿಗಿದಾಡಿ ಪೋಗುವುದು ತ್ವರೆಮಾಡಿಕೂಡಿಸದದು ಬಹುಕಾಡಿ ದಿಟಿಸ್ಯಾಡಿ ನೋಡಲದು ಅಡನಾಡಿಕಾಡಿಕಾಡಿ ಬಲು ಪೀಡಿಸುತಿರುವದುಕಾಡುವುದೇನಿದು ಈ ಪರಿಯಾಜೋಡಿಸಿ ಕೈಗಳ 1 ತುಣುಕು ತುಣುಕು ಮನಸು ಇದು ಕ್ಷಣದೊಳು ಹಿಡಿವುದುತಿಣಿಕಿ ತಿಣಿಕಿ ಗಡ ಇದನ್ಹಿಡಿಯೆ ಹೆಣಗಲ್ಯಾತಕೆಂದು ಗೊಣಗುತಿಹರುಜನ ಗುಣ ಗೊತ್ತಿತ್ತಿಲ್ಲಿದೆ ಗುಣ ಖಣಿಯೆಗುಣರಹಿತನೆ ನಿನ್ನ ಗುಣ ನಾಮಂಗಳನೆಣಿಸುತೆ ನಾಲಗೆ ತಾದಣಿಯೆ ಟೊಣೆದು ನಿಮ್ಮನು ಕ್ಷಣಕ್ಷಣಕೊಂದುಕಣಕೆ ಹಾರುವುದು ಸುರಧರಣಿಯೆಇಣಚಿಹಾಂಗೆ ಚಪಲವೋಧಣಿಯೆಅಣಕಿಸಿದ್ಹಾಂಗ ಕುಣಿಕುಣಿಯೆಬಣಗು ಜನರು ನಮಗದು ಹೊಣಿಯೆಒಣ ಮಾತಿದು ಕೇಳ್ ನಿರ್ಗುಣಿಯೆಮಣಿಯದು ದಣಿಯದು ಹಣಿಯದು ತಣಿಯದುಟೊಣಿಯಲು ನಿನ್ನದು ಅದರಣಿಯೆ 2 ಸ್ಪಷ್ಟ ಹೇಳುವೆನು ಚೇಷ್ಟೆಗಳದರದುಯ ಥೇಷ್ಟವಾಗಿ ಕಣಾ ಕಣಾಶಿಷ್ಯರನೆಲ್ಲಾ ಭ್ರಷ್ಟ ಮಾಡುವುದು ದೃಷ್ಟಿ ಇಂದೊಂದೇ ಕಾರಣಎಷ್ಟು ಮಾತ್ರಕಿವರಿಷ್ಟ ನಡೆಸದಿಂದಿಷ್ಟೇ ಇದರದು ಧೋರಣಾಕಷ್ಟದಿ ಹಿಡಿದಿಟ್ಟ ಅಷ್ಟು ಇಂದಿಯಕಿದೆದುಷ್ಟರುಪದೇಶದ ಪ್ರೇರಣಾನಷ್ಟಮಾಡೋ ಈ ಚೇಷ್ಟೆಗುಣ ಸುಪುಷ್ಟ ಮತಿಯ ಕೊಡೊ ಪೂರಣಮುಷ್ಠಿಯೊಳಗಿಸೊ ತನುಹರಣಸೃಷ್ಟಿಸ್ಥಿತಿಲಯ ಕಾರಣಸೃಷ್ಟಿಯೊಳಗೆ ಉತ್ಕøಷ್ಟ ಗದುಗಿನಶ್ರೇಷ್ಠ ವೀರನಾರಾಯಣ 3
--------------
ವೀರನಾರಾಯಣ
ಲೋಕನೀತಿ ಏನು ಮಾಡಿದರೇನು ಹಾನಿಯಾಗದು ಪಾಪ ಶ್ರೀನಿಕೇತನನ ದಿವ್ಯನಾಮ ನೆನೆಮನವೆ ಪ ಕ್ಷಣ ಪದಕಮಲಗಳ ಸ್ಮರಿಸಿ ಮನದೊಳಗೆ ಪ್ರತಿ ಕ್ಷಣಕ್ಷಣದಿ ಹರಿ ಮಹಿಮೆ ಭಜಿಸಿ ಭಕ್ತಿಯಲಿ ತೃಣ ಘನದೊಳಿಹನು ಹರಿ ಎನುತ ಚಿಂತಿಸಿ ಮನದಿ ಪ್ರಣವ ಪ್ರತಿಪಾದ್ಯನಂಘ್ರಿಯ ಭಜಿಸದನಕ 1 ಕಪಟನಾಟಕ ಸೂತ್ರಧಾರಿ ಶ್ರೀ ಹರಿಯ ಗುಣ ಅಪರಿಮಿತ ಮಹಿಮೆಗಳ ಭಜಿಸಿ ಹಿಗ್ಗುತಲಿ ಚಪಲ ಬುದ್ಧಿಗಳಿಂದ ತಪಿಸಿ ಕಂಗೆಡದೆ ಮನ ಅಪರೂಪ ಹರಿನಾಮ ಜಪ ಮಾಡದನಕ 2 ದಾನಧರ್ಮಗಳಿಂದ ಧನ್ಯನಾದೆನು ಎನಲು ಹಾನಿಯಾಗೋದು ಆಯು ಪ್ರತಿ ನಿಮಿಷದಿ ಸ್ನಾನ ಜಪತಪದೊಳಗೆ ಯಾರೆನಗೆ ಸರಿ ಎನದÉ ಮೌನದಿಂದ್ಹರಿ ನಾಮ ಧ್ಯಾನಿಸುವತನಕ 3 ಕ್ಲೇಶ ಆನಂದಗಳು ಈಶನಾಜ್ಞೆ ಇದೆಂದು ವಾಸುದೇವನೆ ಜಗತ್ಪ್ರೇರಕನು ಎಂದು ಶ್ವಾಸ ಬಿಡುವ ಶಕ್ತಿ ಲೇಸು ತನಗಿಲ್ಲ ಸ- ರ್ವೇಶ ನಿನ್ನಧೀನವೆಂದರಿವ ತನಕ4 ಗಾತ್ರ ಶೋಷಣೆಯಾಕೆ ಪಾರ್ಥಸಖನಂಘ್ರಿಗಳ ಕೀರ್ತಿಸುತ ಮನದಿ ರಾತ್ರಿ ಹಗಲು ಕಮಲನಾಭ ವಿಠ್ಠಲನ ಶ್ರೀಮೂರ್ತಿಯನೆ ನೆನೆನೆನೆದು ಸುಖಿಯಾಗೊ ಮನವೆ5
--------------
ನಿಡಗುರುಕಿ ಜೀವೂಬಾಯಿ
ಶರಣಜನರ ಪಾಲ ಹರಿ ದಯಾಸಿಂಧುವೆ ವೆಂಕಟೇಶ ಮರೆಯದೆ ಸಲಹೆನ್ನ ದೀನಜನಾಪ್ತನ ವೆಂಕಟೇಶ ಪ ಕರಿ ಧ್ರುವ ಪ್ರಹ್ಲಾದ ಪಾಂಚಾಲಿ ಪಾಲನೆ ವೆಂಕಟೇಶ ದುರುಳರಕ್ಕಸಹರ ಹರಸುರನಮಿತನೆ ವೆಂಕಟೇಶ ಪರಮಪಾವನ ಸಿರಿಯರ ಸಖಜೀವನೆ ವೆಂಕಟೇಶ ದುರುಳಮಾತ ನೀನಳಿದು ಗೋವಳರ್ಪೊರೆದನೆ ವೆಂಕಟೇಶ 1 ವಸುದೇವ ದೇವಕಿ ಬಸಿರೊಳು ಬಂದನೆ ವೆಂಕಟೇಶ ಕುಶಲದಿ ವಸುಧೆಲಮಮಹಿಮೆ ತೋರ್ದನೆ ವೆಂಕಟೇಶ ಅಸುರ ಕಂಸನ ಕುಟ್ಟಿ ಗೋಕುಲರಿದನೆ ವೆಂಕಟೇಶ ಶಶಿಮುಖಿ ಗೋಪಿಯರಾನಂದಲೀಲನೆ ವೆಂಕಟೇಶ 2 ಮಂದರಧರ ಗೋವಿಂದ ಮುಕುಂದನೆ ವೆಂಕಟೇಶ ಸಿಂಧುಶಯನ ಆನಂದನ ಕಂದನೆ ವೆಂಕಟೇಶ ಇಂದಿರೆಯರ ಬಿಟ್ಟು ಭೂಲೋಕಕ್ಕಿಳಿದನೆ ವೆಂಕಟೇಶ ಸುಂದರಗಿರಿಯ ಭೂವೈಕುಂಠವೆನಿಸಿದನೆ ವೆಂಕಟೇಶ 3 ಬಣಗರಸೊಕ್ಕನು ಕ್ಷಣಕ್ಷಣಕೆ ಮುರಿದನೆ ವೆಂಕಟೇಶ ಮನಮುಟ್ಟಿ ಬೇಡ್ವರ ಮನದಿಷ್ಟವಿತ್ತನೆ ವೆಂಕಟೇಶ ಎಣಿಕೆಗೆ ಮೀರಿದ ದ್ರವ್ಯ ಕೂಡಿಟ್ಟನೆ ವೆಂಕಟೇಶ ಘನಘನಮಹಿಮೆಯ ಭುವನದಿ ತೋರ್ದನೆ ವೆಂಕಟೇಶ 4 ನಂಬಿದೆ ನಿನ್ನ ಪಾದಾಂಬುಜಗಳನ್ನು ವೆಂಕಟೇಶ ಬೆಂಬಲವಿರ್ದು ನೀ ಸಂಭ್ರಮದಿ ಸಲಹೆನ್ನ ವೆಂಕಟೇಶ ನಂಬಿದ ದಾಸರ ಭವಾಂಬುಧಿ ಗೆಲಿಪನೆ ವೆಂಕಟೇಶ ಅಂಬುಜಮುಖಿ ಸೀತಾಪತಿ ಶ್ರೀರಾಮನೆ ವೆಂಕಟೇಶ 5
--------------
ರಾಮದಾಸರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಹರಿ ಹರಿಯೆಂದು ನೆನೆಯೋ ಮರಿಯದೆ ಮನುಜ ಧ್ರುವ ನಡೆಯುತ ನುಡಿಯುತ ನಡೆ ನುಡಿಯೊಳಗೆ ಪೊಡವಿಧರನ ಮಹಿಮೆಯ ಕೊಂಡಾಡುತ ಇಡವುತ ತೊಡವುತ ಮುಡವುತ ಮನದೊಳು ಬಿಡದೆ ಸ್ಮರಸೊ ನೀ ಅಡಿ ಗಡಿಗೊಮ್ಮೆ 1 ಉಣುತ ಉಡುತನ್ನೋದಕ ಕೊಳುತ ವನಿತಯರೊಡಗೂಡಿ ಘನಸುಖ ಪಡೆಯುತ ಅನಭದಿಂದಾನಂದದಿ ನೆನೆಯೋ ತನುಮನದೊಳು ನೀ ಕ್ಷಣಕ್ಷಣಕೊಮ್ಮೆ 2 ಏಳುತ ಕೂಡುತ ಮಲಗುತ ನೆನೆಯೋ ಹಲವು ಪರಿಲಿ ಶ್ರೀ ಹರಿ ಸರ್ವೋತ್ತಮ ನೆಲೆಗೊಂಡಿರೋ ಮಹಿಪತಿ ನಿಜನಾಮವ ಸಲಹುತ ಸ್ವಾಮಿ ಶ್ರೀಗುರು ಶ್ರೀಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೇಗೆ ಕಳೆಯಬೇಕೋ ಹೊತ್ತು ಹೇಗೆ ಕಳೆಯಬೇಕೋ ಪ ಹೇಗೆ ಕಳಿಲಿ ಭವಸಾಗರದಲಿ ಮನ ನೀಗದು ಚಂಚಲ ಸಾಗರನಿಲಯ ಅ.ಪ ಹುಟ್ಟಬಾರದಿತ್ತು ಇಹ್ಯದಿ ಹುಟ್ಟಿದ್ದೇ ತಪ್ಪಾಯಿತು ನಿಷ್ಠೆಲಿರಗೊಡದೆನ್ನ ದುಷ್ಟಮನಸು ಘಳಿ ಗಿಷ್ಟೆಲ್ಲ ಎಲ್ಲಿತ್ತು ಹುಟ್ಟದಿದ್ದರೆ ನಾನು 1 ಕ್ಷಣಕ್ಷಣಕೊಂದು ರೀತಿ ಮನಸಿನ ಗಣನೆಯಿಲ್ಲದ ಭ್ರಾಂತಿ ಜನಿಸಿದಂದಿನಿಂದ ಘನತರ ಕುಣಿಸ್ಯಾಡಿ ಜನರ ಸೇವೆಯೊಳು ದಣಿಸಿತು ಪಾಪಿ 2 ಅನುಗಾಲವು ಚಿಂತೆ ಜೀವಕೆ ಇನಿತು ಇಲ್ಲ ಸ್ವಸ್ಥ ತನುಮನಧನ ನಿನಗರ್ಪಿಸಿ ಬೇಡುವೆ ಘನ ಬೇಸತ್ತೆ ಪೊರೆ ಚಿನುಮಯ ಶ್ರೀರಾಮ 3
--------------
ರಾಮದಾಸರು
ಎಂತಹುದೊ ನಿನ್ನ ಭಕುತಿ ? |ಸಂತತ ನಿನ್ನ ದಾಸರ ಸಂಗವಿರದೆನಗೆ ಪ.ವೃಣವನಾಶಿಪ ಕುರುಡು ನೊಣ ಮೊಸರ ಕಂಡಂತೆ |ಧನಿಕರ ಮನೆಗೆ ಕ್ಷಣಕ್ಷಣಕ್ಕೆ ಪೋಗಿ ||ತನುಬಾಗಿ ತುಟಿಯೊಣಗಿ ಅಣಕನುಡಿ ಕೇಳ್ವ - ಕೃ - |ಪಣ ಮನಕೆ ಎಂತಹದು ನಿನ್ನಯ ಭಕುತಿ 1ಅಡಿಯಾಡಿ ಮುಖಬಾಡಿ ನುಡಿಯಡಗಿ ಬಡವನೆಂದು |ಒಡಲ ತೋರಿಸಿದೆನೊ ಕಡುದೈನ್ಯದಿ ||ಒಡೆಯ ನೀನಹುದೆಂದು ಮಡದಿ - ಮಕ್ಕಳಿಗೆ ಹೆಸ - |ರಿಡುವ ಅವರಡಿಗೆ ಎರಗುವನ ಮನಕೆ 2ಹೋಗಿಬಾರೈ ಎಂದು ಅತಿಗಳೆದರು ತಲೆ - |ಬಾಗಿ ನಿಂತು ಅಲ್ಲಿ ಮೌನವಾಗಿ ||ಓಗರತೆ ಮನೆಮನೆ ತಪ್ಪದೆ ತಿರುಗುವ |ಜೋಗಿಯ ಕೈಯಕೋಡಗದಂಥ ಮನಕೆ 3ಅವನ ತೋರಿ ಬೆಟಿಕಿರಿಯ ಬಾಲವ ಬೀಸಿ |ಕುನ್ನಿ ಸುಳಿದಾಡಿ ಕಾಲ್ಗೆರಗುವ ತರದಿ ||ಹೆಣ್ಣಿನಾಶೆಗೆ ಬಾಯಬಿಡುವ ಸ್ತ್ರೈಣನಪರಿ - |ಘನ್ನವಯ್ಯ ಘನ್ನವಯ್ಯ ಬನ್ನಬಡುವ ಕುನ್ನಿಮನಕೆ 4ವಟುವಾಗಿ ಬಲಿಯ ದಾನವನು ಬೇಡಹೋದ |ಕಟು ಕಷ್ಟಗಳನೆಲ್ಲ ನೀನೆ ಬಲ್ಲೆ ||ವಟಪತ್ರಶಾಯಿ ಶ್ರೀಫಣಿ ವರದಪುರಂದರ - |ವಿಠಲ ನಿನ್ನ ದಾಸರ ಸಂಗಸುಖವಿರದೆ 5
--------------
ಪುರಂದರದಾಸರು