ಒಟ್ಟು 375 ಕಡೆಗಳಲ್ಲಿ , 75 ದಾಸರು , 334 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನಸ ಕಂಡೆ ನಿನ್ನಿನಿರುಳೊಳು ಕೇಳುಕನಸಿನ ಸೊಗಸನು ತರಳೆಚಿನುಮಯಾತ್ಮಕ ಚಿದಾನಂದ ಅವಧೂತದಿನಕರ ಪ್ರಭಾತೀತ ಗುರುನಾಥ ಬಂದಿಹ ಪ ಕಾಶ ಕೌಪೀನವನುಟ್ಟು ಚೆಲ್ವಬಾಸುರ ಕುಂಡಲವಿಟ್ಟುಕೇಶದ ಜಡೆಗಳು ಥಳಥಳಿಸಲು ಸರ್ವಭೂಷಿತನಾಗಿ ತನ್ನೆದುರಿಗೆ ನಿಂತಿಹ 1 ನೆಟ್ಟನೆ ನಡುಮನೆಯೊಳು ತಾನುನೆಟ್ಟನೆ ಬಂದು ಕುಳಿತಿಹನುಶಿಷ್ಟ ಮೂರುತಿ ತನ್ನ ಕಾಯಬೇಕು ಎಂದುಮುಟ್ಟಿ ಪಾದವ ನಾನು ಶರಣು ಮಾಡಲಿದ್ದೆ2 ಸುಂದರ ಕಳೆಯುಳ್ಳ ಸ್ವಾಮಿತಾನು ಸಿಂಧು ಕೃಪಾಕರನಾಮಿ ಎಂದಡಿಗಡಿಗೆ ಸಾಷ್ಟಾಂಗವೆರಗಿನಿಂದು ಪೂಜಿಸಿ ಕಣ್ತುಂಬ ನೋಡಿನಲಿವ 3 ನಾನಾ ಪೂಜೆಯನೆಲ್ಲವ ಮಾಡಿ ಗುರುಧ್ಯಾನದಿನಾನೋಲಾಡಿ ಮಾನವನಾಗಿನಾನು ನಿಂದಿರಲೆನ್ನ ಕಿವಿಯೊಳುನಾನು ನೀಗಿತ್ತೆಂದು ಉಪದೇಶ ನೀಡುವ4 ಈಪರಿ ಕನಸನು ಕಂಡು ಎಲ್ಲತಾಪವು ಪರಿಹಾರಗೊಂಡುಭೂಪ ಚಿದಾನಂದ ಅವಧೂತ ತಾನಾದರೂಪಾಗಿ ಬೆಳಗಿರೆ ಬೆಳಗಿರೆ ಬೆಳ್ಳನೆ ಬೆಳಕಿತ್ತು5
--------------
ಚಿದಾನಂದ ಅವಧೂತರು
ಶ್ರೀಕಾಂತ ಬಿನ್ನಹ ಸರ್ವಲೋಕೈಕ ರಕ್ಷಕನಾಗಿಯಾಕೆ ನೀರಪೊಕ್ಕೆಯಯ್ಯಾ ಶ್ರೀಕೃಷ್ಣರಾಯಭೀಕರತಮನ ಕೊಂದುಶ್ರೀಕರವೇದವ ತಂದುಲೋಕೇಶನಿಗಿತ್ತೆ ಕಾಣೆ ಎಲೆ ಸತ್ಯಭಾಮೆ 1 ಮಾರಜನಕನ ಕೌಸ್ತುಭಹಾರ ಕೇಳು ಕಠಿಣ ಶ-ರೀರವ ಪಡದೆ ಯಾಕೆ ಶ್ರೀಕೃಷ್ಣರಾಯನೀರೊಳು ಧಾರಿಣಿ ಮುಳುಗೆಚಾರು ಕೂರ್ಮಾಕಾರದಿಂದಭೂರಮಣಿಯ ಪೊರೆದೆ ಎಲೆ ಸತ್ಯಭಾಮೆ2 ಧಾರಿಣಿಯ ಮಣ್ಣನಗೆದುಬೇರಮೆದ್ದು ಕಠಿಣ ಕಾಂ-ತಾರವ ಸೇರಿದೆ ಯಾಕೆ ಶ್ರೀಕೃಷ್ಣರಾಯಕ್ರೂರದಾಡೆಯಗ್ರದಿ ವೈ-ಯಾರದಿ ಭೂಮಿಯನೆತ್ತಿಮೂರು ಲೋಕವ ಪೊರದೆ ಎಲೆ ಸತ್ಯಭಾಮೆ 3
--------------
ಕೆಳದಿ ವೆಂಕಣ್ಣ ಕವಿ
(1) ನಿಂದಾಸ್ತುತಿಗಳು ಏನುಂಟು ನಿನ್ನೊಳಗೆ ನಾ ಬೇಡಲು ಏನು ಕೊಡುವೆ ಎನಗೆ ಪ ಶ್ರೀನಿವಾಸನೇ ಬಲು ದೀನನೊಳವಲಕ್ಕಿ ಮಾನವ ನೋಡದೆಅ.ಪ ತಿರುಕನಾಗಿ ತಂದೆ ಧರೆಯ ಕಶ್ಯಪನೆಂಬ ತಿರುಕ ಹಾರುವನಿಗೆ ಗುರಿಮಾಡಿದೆ ಸಿರಿಯನು ರಜಕನ ಪರಿವಾರದಿ ಬಿಟ್ಟು ಗರಳ ಹಾಸಿನೊಳೊರಗಿದೆ ಕೃಷ್ಣ 1 ಧನಕನಕಂಗಳು ನಿನಗಿರೆ ಸತ್ರಾಜಿ ತನ ಮಣಿಯನು ನೀಗಣಿಸುವೆಯಾ ಅನುವಾದ ಮನೆಯಿರೆ ಮುನಿಮನವೇತಕೆ ಮನೆವಾರ್ತೆಯುಳ್ಳರೆ ವನವಾಸಬೇಕೆ 2 ಕಾಮಧೇನುವು ಕಲ್ಪನಾಮಕ ತರುವು ಚಿಂ ತಾಮಣಿಗಳನು ಸುತ್ರಾಮಗಿತ್ತು ಗೋಮಯರಸಗಳ ಕಾಮಿಸಿ ಕದ್ದು ನೀ ದಾಮೋದರನಾದೆ ತಾಮರಸಾಕ್ಷ 3 ಖ್ಯಾತಿ ನೋಡದೆ ರಣ ಭೀತಿಯೊಳೋಡಿದೆ ಜಾತಿ ನೋಡದೆ ಜಾಂಬವತಿಗೂಡಿದೆ ನೀತಿಯ ನೋಡದೆ ಕೋತಿಯೊಳಾಡಿದೆ ಮಾತು ನೋಡದೆ ಬರಿ ಮಾಯೆಯ ಪಿಡಿದೆ 4 ಗತಿಹೀನರಿಗೆ ವರ ಗತಿಯ ತೋರಿಪನಾಮ ಸ್ಮøತಿಯೊಂದಿತ್ತರೆ ಸಾಕೆನಗೆ ಅತಿಶಯವಿದು ಎನ್ನ ಮತಿಯೊಳು ನಿನ್ನಯ ರತಿಯನ್ನು ಪಾಲಿಸು ವರದವಿಠಲರಾಮ 5
--------------
ವೆಂಕಟವರದಾರ್ಯರು
* ಹರಿಗುರು ಕರುಣದಿ ದೊರಕಿದುದೆನಗೀ ಪರಮ ಪಾವನ ತಂಬೂರಿ ಪ. ನರÀಹರಿ ಭಕ್ತರು ಒಲಿದೆನಗಿತ್ತರು ಸುಲಲಿತ ನಾದದ ತಂಬೂರಿ ಅ.ಪ. ತಂದೆ ಮುದ್ದುಮೋಹನರು ಸ್ವಪ್ನದಿ ತಂದು ತೋರಿದಂಥ ತಂಬೂರಿ ನಂದ ಕಂದನ ಗುಣ ಅಂದದಿ ಸ್ತುತಿಸೆ ಆ- ನಂದವ ತೋರುವ ತಂಬೂರಿ ಇಂದಿರೇಶನ ಭಕ್ತರಂದದಿ ಧರಿಸುವ ರೆಂದೆಂದಿಗು ಈ ತಂಬೂರಿ ನೊಂದು ಭವದೊಳು ತಪ್ತರಾದವರಿಗೆ ಬಂಧನ ಬಿಡಿಸುವ ತಂಬೂರಿ 1 ಅಂತರಭಕ್ತರು ಹರುಷದಿ ನುಡಿಸುವ ಕಂತುಪಿತಗೆ ಪ್ರೀತಿ ತಂಬೂರಿ ಸಂತತ ಮಾನಾಭಿಮಾನವ ತೊರೆದು ಏ- ಕಾಂತದಿ ಸುಖಿಸುವ ತಂಬೂರಿ ಶಾಂತದಿ ನಾರದಾದಿಗಳು ವೈಕುಂಠದಿ ನಿಂತು ನುಡಿಸುವಂಥ ತಂಬೂರಿ ಪಂಥದಿ ಹರಿಪಾದಂಗಳ ಭಜಿಸೆ ನಿ- ಶ್ಚಿಂತೆಯ ಮಾಳ್ಪಂಥ ತಂಬೂರಿ2 ಬಲು ಬಲು ಪರಿಯಲಿ ಹರಿದಾಸತ್ವಕೆ ಬರುವಂತೆ ಮಾಡಿದ ತಂಬೂರಿ ಛಲದಿಂದಲಿ ಶ್ರೀ ಹರಿ ತಾನಿಡ್ಹಿಸಿದ ಒಲುಮೆಯಿಂದಲಿ ಈ ತಂಬೂರಿ ನೆಲೆಯಾದೆನು ಹರಿದಾಸರ ಮಾರ್ಗದಿ ಕಲುಷವ ಕಳೆದಿತು ತಂಬೂರಿ ಸುಲಭದಿಂದ ಶ್ರೀ ಗುರುಗಳು ಕರುಣಿಸಿ ನೆಲೆಗೆ ನಿಲಿಸಿದಂಥ ತಂಬೂರಿ 3 ಶ್ರೀನಿವಾಸನು ತಾ ಕೊಡಿಸಿದನು ಏನೆಂಬೆನು ಈ ತಂಬೂರಿ ಮಾನಾಭಿಮಾನವ ತೊಲಗಿಸುವುದಕೆ ಕಾರಣವಾಗಿಹ ತಂಬೂರಿ ಶ್ರೀನಿಧಿ ಸೊಸೆ ಬಹು ಆನಂದದಲಿ ತಾ ನುಡಿಸುವಳೀ ತಂಬೂರಿ ಗಾನಲೋಲ ಕೃಷ್ಣ ತಾನೊಲಿವುದಕೆ ಕಾರಣ ಮಾಡಿಹ ತಂಬೂರಿ 4 ಬೆಟ್ಟದೊಡೆಯ ತಾನಿಷ್ಟು ಹಟವ ಮಾಡಿ ಕೊಟ್ಟೀ ಕೊಟ್ಟನು ತಂಬೂರಿ ಎಷ್ಟು ನಾಚಿಕೆಪಟ್ಟರು ಬಿಡದಲೆ ಕಷ್ಟ ಕಳೆಯಲಿತ್ತ ತಂಬೂರಿ ಭವ ಕಟ್ಟು ಇಂದೆನ್ನನು ಮುಟ್ಟಿಸಿತ್ಹರಿಪುರ ತಂಬೂರಿ ಎಷ್ಟು ಹೇಳಲಿ ಶ್ರೀನಿಧಿ ಗೋಪಾಲ ಕೃಷ್ಣವಿಠ್ಠಲನಿತ್ತ ತಂಬೂರಿ 5
--------------
ಅಂಬಾಬಾಯಿ
--------ನೆ ಮಾಡುವೆಯಂದರೆ ಅರಸುಳ್ಯ ದ್ವಂದ್ವಪಾದಕೆ ನಾ ವಂದನೆ ಪ ಅಂದು ಜಲದೊಳಾಡಿ ಕೊಂದ ಸೋಮಕನ ವೇದತಂದೂ ------ಗಿತ್ತಾಗೊಂದನೆ ಮಂದರಗಿರಿಯ ನೆತ್ತಿ ಚಂದದಿ --------- ಭೂಮಿ ಮೂಗಿನಿಂದ ಸೀಳಿದ ದೇವಗೆ ವಂದನೆ 1 ತರುಳನಿ ಗೋಸ್ಕರ ಸ್ತಂಭದೊಳಗೆ ಬಂದಾ ನರಹರಿ ರೂಪಗೆ ವಂದನೆ ಮುರುಡನಾಗಿ ದಾನ ಮೂರು ಪಾದವು ಕೇಳಿ ಧರುಣಿಯ ಗೆದ್ದವಗೆ ವಂದನೆ 2 ಪ್ರೇಮಸಲ್ಲದೆ ಪಿತೃವಾಕ್ಯವು ಮನ್ನಿಸಿ ಪಡೆದಮ್ಮನ ಹೊಡೆದಾತಗೆ ವಂದನೆ ತಾಮಸ ದಾನವರಗಳ ಖಂಡಿಸಿದ ಶ್ರೀರಾಮ ದೇವರಿಗೆ ವಂದನೆ 3 ಗೊಲ್ಲರ ಸ್ತ್ರೀಯರ ಕೂಡಿ ಮೆರೆದಾಡುವಂಥ ನಲ್ಲ ಕೃಷ್ಣಗೆ ವಂದನೆ ಎಲ್ಲಾನೂ ತೊರೆದು ಬತ್ತಲಲ್ಲಿ ಇರುವ ನಮ್ಮ ಬೌದ್ಧಾವತಾರಗೆ ವಂದನೆ 4 ಚಲುವ ಅಶ್ವವನೇರಿ ಚರಿಸಿದ ಮಹಾಮಹಿಮ ಕಲ್ಕಿ ಸ್ವರೂಪಗೆ ವಂದನೆ ಸುಲಭದಿ ಭಕ್ತರ ಚನ್ನಾಗಿಸಲಹುವ ಶ್ರೀ ಹೆನ್ನೆ ವಿಠ್ಠಲಗೆ ವಂದನೆ 5
--------------
ಹೆನ್ನೆರಂಗದಾಸರು
(2) ವೇದಾಂತದೇಶಿಕರು ವೇದಾಂತ ಗುರು ಸಾರ್ವಭೌಮ ಜ್ಞಾನ ಬೋಧಾನುಕೂಲ ನಿಸ್ಸೀಮ ಪ ಆದಿನೋಡು ಅನಾದಿಯೆನ್ನುತ ಬೋಧೆಗೊಳಿಸುಪದೇಶ ಮಾಡಿದ ಸಾಧುಶಿಖರನೆ ಸರ್ವತಂತ್ರನೆ ವಾದಭೀಕರ ವೈಷ್ಣವೋ ನಿಜ 1 ದ್ವಿದಳ ದಾಸನ ಕೈದಸಿದ ನಿಜ ಪದವಿನೋಡೆಂದೆನುತ ಮನಸನು ಕದಿವ ಕಳ್ಳರ ಕೊಂದು ಹಿಡಿಯೆಂ ದೊದಗಿತ್ತನು ಮೊದಲಿನಕ್ಷರಾ2 ಮೂರು ಬಿಡು ನೀ ಮೂರು ಹಿಡಿ ಕೇ ಳಾರು ಚಕ್ರವ ದಾಂಟಿ ತ್ರಿಕುಟಿಯ ಸೇರಿ ಸಂಪದವಾರಿಯೊಳಗದ್ದು ತೋರಿದ ಪರಮಾತ್ಮ ಪರತರ 3 ಎಂಟು ಹಾರಿಸಿ ಎಂಟುಲಿಪಿಯನು ಗಂಟು ಮಾಡೆಂದೆನುತ ನನ್ನೊಳ ಗುಂಟುಮಾಡಿಯು ತೋರಿದ ವೈ ಕುಂಠನಾಥನ ನನ್ನೊಳಗ ನಿಜ 4 ಶುದ್ಧ ಹಂಸನ ಮಾಡಿ ನನಗಾ ಚಿದ್ವಿವೇಕದ ಕವಚ ತೊಡಿಸಿದ ಸತ್ಸ್ವರೂಪಾಚಾರ್ಯನಹುದೆಲೊ ಮದ್ಗುರುವೆ ಶ್ರೀ ತುಲಶೀರಾಮಾ 5
--------------
ಚನ್ನಪಟ್ಟಣದ ಅಹೋಬಲದಾಸರು
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು
(ಆ) ಶ್ರೀರಾಮಸ್ತುತಿಗಳು ರಾಮನ ನೆನೆ ಮನವೆ ಹೃದಯಾರಾಮನ ನೆನೆ ಮನವೆ ಪ ಸದ್ಗುಣಧಾಮನ ಸೀತಾ ಅ.ಪ ದಶರಥ ನಂದನನಾ ಧರಣಿಯೊಳಸುರರÀ ಕೊಂದವನ ವಸುಮತೀಸುತೆಯಂ ಒಲಿದೊಡಗೂಡಿ 1 ತಂದೆಯಮಾತಲಿವನಕೈತಂದುಸರಾಗದಲಿಬಂದವಿರಾಧನ ಕೊಂದು ನಿಶಾಚರಿಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ ಕಬಂಧನ ಮಾತನನುಸರಿಸುತ ಸುತನ ಘಾತಿಸಿ ದಾತನ 3 ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ 4 ಧರಣಿಜೆಯನುಕಂಡುವನವನುಮುರಿದುಗುರುತುಗೊಂಡು ಅರಿಪುರವನು ಸುಟ್ಟುರುಹಿದ ವಾನರವರನಿಗೆ ಸೃಷ್ಟಿಪ ಪದವಿತ್ತಾತನ 5 ಶರಣನ ಲಂಕೆಗೆ ದೊರೆಯನು ಮಾಡಿ ಸಿರಿಯನಯೋಧ್ಯೆಗೆ ಕರೆತಂದಾತನ6 ಧರಣಿಯ ಪಾಲಿಸುತ ಧರ್ಮದ ಸರಣಿಯ ಲಾಲಿಸುತ ವರದವಿಠಲದೊರೆ ಪರಮೋದಾರನ 7
--------------
ವೆಂಕಟವರದಾರ್ಯರು
(ಈ) ಅವತಾರತ್ರಯ ಆರು ನಿನಗಿದಿರಧಿಕ ಧಾರುಣಿಯೊಳಗೆ ಪ ಸಾರ ಶಾಸ್ತ್ರವನೊರೆದ ಸರ್ವಜ್ಞ ಮುನಿರಾಯ ಅ.ಪ. ಆರೊಂದು ವೈರಿಗಳ ತರಿದು ವೈಷ್ಣವರಿಗೆಆರೆರಡು ಊಧ್ರ್ವ ಪುಂಡ್ರಗಳ ಇಡಿಸಿಆರು ಮೂರರಮೇಲೆ ಮೂರಧಿಕ ಕುಮತಗಳಬೇರೊರಸಿ ಕಿತ್ತೊಮ್ಮೆ ಬಿಸುಟಂಥ ಧೀರ 1 ಆರು ನಾಲ್ಕು ತತ್ವದಭಿಮಾನಿಗಳಿಗೊಡೆಯಮಾರುತನ ಮೂರನೆಯ ಅವತಾರನೆಆರೈದು ಮೇಲೆರಡು ಅಧಿಕ ಲಕ್ಷಣವುಳ್ಳಮೂರುತಿಯೊಳೊಪ್ಪುತಿಹ ಮುನಿವರೇಣ್ಯ 2 ಆರಾರು ಮೇಲೊಂದು ಅಧಿಕ ಲೆಖ್ಖದ ಗ್ರಂಥಸಾರವನು ರಚಿಸಿ ಸಜ್ಜನರಿಗಿತ್ತುಪಾರಮಾರ್ಥಿಕ ಭೇದ ಪಂಚಕ ಸ್ಥಾಪಿಸಿದೆ ಉ-ದಾರ ಶ್ರೀಕೃಷ್ಣನ ದಾಸರೊಳು ದೊರೆಯೆ 3
--------------
ವ್ಯಾಸರಾಯರು
(ಈ) ಆತ್ಮನಿವೇದನಾ ಕೃತಿಗಳು ಅಕಟಕಟ ಬಹಳ ಬಡತನವಡಸಿದುದೆ ನಿನಗೆ ಅಕಳಂಕ ಚರಿತ ಹರಿಯೆ ಪ ಪ್ರಕಟತನದಿಂ ಗೋದಾನಕ್ಕೆ ಕೈನೀಡುವರೇ ಸುಖಮಯ ಶರೀರ ಚನ್ನರಾಯಾ ಅ.ಪ ಹಿಂದೆ ಯಜ್ಞದಲಿ ಬಲಿಯಿತ್ತ ಭೂದಾನಕ್ಕೆ ದಂದಿಗೆ ಸಾಲದಾಯಿತೆ ಅಂದು ಕರ್ಣನು ಕೊಟ್ಟ ದಾನವನು ನೀ ಪಿಡಿದು ದಂದಿಗೆ ಸಾಲದಾಯಿತೆ ಇಂದು ನಿನ್ನಯ ದಾಸಾನುದಾಸನು ಕೊಟ್ಟ ಗೋದಾನ ದೊಂದೊಂದು ಗೋಗಳಿಗೆಛಂದದಲಿ ನಿಂದು ದಾನವ ಕೊಂಡೆಯಾ ಸ್ವಾಮಿ 1 ಉರದೊಳಗೆ ಅನವರತ ವಾಸವಾಗಿರುತಿಪ್ಪ ಶರಧಿಸುತೆ ಕೈಬಿಟ್ಟಳೇ ಬೆರೆತು ಪೋದುದೇ ಪಾಲ್ಗಡಲು ಮುನಿಸಿಕೊಂಡು ಬರಡಾಯಿತೇ ಕಾಮಧೇನೂ ತಿರುಕ ಹಾರುವನಂತೆ ಪರಿಪರಿಯ ದಾನಕ್ಕೆ ಭರದಿ ಕೈ ಒಡ್ಡುತಿಹರೆ ಪುರುಷೋತ್ತಮನೆಂಬ ಅಭಿಮಾನವಿನಿತಿಲ್ಲದೇ ದೂರಿಗೊಳಗಾಗಬಹುದೆ ಸ್ವಾಮಿ 2 ಇತ್ತ ದಾನದ ಗೋವುಗಳನೆಲ್ಲ ಗುಡಿಯೊಳಗೆ ಮೊತ್ತದಿಂ ಕೂಡಿಕೊಂಡೂ ಒತ್ತಿ ಮುದ್ರೆಯನು ನಾಮವನಿಟ್ಟು ಬಾಲಗಳಿ ಗೆತ್ತಿ ಘಂಟೆಗಳ ಕಟ್ಟೀ ಅರ್ಥಿಯಿಂ ತೋರಿಸಿ ಯೆನ್ನ ಕುಲಕೋಟಿಗಳಿ ಗಿತ್ತೆ ಸುರಪದವನು ಕರ್ತುೃ ವೈಕುಂಠ ವೇಲಾಪುರಾಧೀಶ್ವರನೇ ಭೃತ್ಯನ್ನ ಕಾಯೊ ಸತತ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
(ಈ) ಮಹಾಲಕ್ಷ್ಮಿ ಇಂದೀವರನಯನ ಕೃಷ್ಣಾನಂದಕಾರಿಣಿ ಪ ಎಂದೆಂದಿಗು ಹೊಂದಿ ನೀನಾನಂದ ಕೊಡುವ ಕಾರಣದಿಂದ ಅ.ಪ. ಕಾಲ ಜನಿಸಿ ಸಿಂಧುರಾಜಗೆ ಪುತ್ರಿ ಎನಿಸಿ ಚಂದಿರನಗ್ರಜೆ ಎನಿಸಿ ಸಿಂಧುಶಾಯಿ ಮಂದಿರಳೆನಿಸಿ 1 ಕಮಲ ಚರಣೆ ಕಮಲಗಂಧೆ ಕಮಲವಾಸನೆ ಕಮಲಾಕ್ಷಣೆ ಕಮಲಾಂಗಿಯೆ 2 ನರಸಿಂಹವಿಠಲನ ಹೊಂದಿದೆ ಪರಮಭಕ್ತರಘ ಕಳೆದು ಹರಿಯ ನಾಮ ಜಿಹ್ವೆಗಿತ್ತು ನಿರುತದಿ ಯುದ್ಧ... ದೇವಿ 3
--------------
ನರಸಿಂಹವಿಠಲರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ವೇದವ್ಯಾಸರನ್ನು ನೆನೆದು) ವ್ಯಾಸರೂಪಿಯಾದ ಶ್ರೀನಿವಾಸನ ನಂಬಿ ಪ. ದ್ವಾಪರಾಂತದಿ ದೈತ್ಯಜನರ ಪ್ರತಾಪದಿಂದಲಿ ಜ್ಞಾನತತ್ವ ಪ್ರ- ದೀಪ ಮಾಲಿನ್ಯವನು ಪೊಂದಿರಲು ಕ್ಷೀರಾಬ್ಧಿ ತಡಿಯಲಿ ಅಜ ಬಂದು ಸ್ತುತಿಸಲು ತಾಪ ಶಮಿಸುವೆನೆಂಬಭಯವಿತ್ತಾಪರಾಶಗೊಲಿದು ಕರುಣಿಸಿ ಕೃಪಾಪಯೋನಿಧಿರೂಪ ತೋರಿದ 1 ಮಹಾಭಾರತಾಮೃತ ಸಹಿತ ವಿರಚಿಸಿ ತೋರ್ಪಂತೆ ಬಹು ಗಂ- ಭೀರ ಸಾರವನಿಟ್ಟು ಪರಿಜನವಾ ತತ್ವೋಕ್ತಿಯಿಂದ ಪ- ರೋರು ಭಾವವ ತಿಳಿಸಿ ದೈತ್ಯರ ಗಾರಗೊಳಿಸುತ ಅನವರತ ಸಂ- ಸಾರ ಚಕ್ರದಿ ತಿರುಗುವವರ ವಿಚಾರ ಭ್ರಮೆಗೊಂಬಂತೆ ತಿಳಿಸಿದ 2 ಶುದ್ಧ ಸಾತ್ವಿಕರಾದ ಜೀವರನುದ್ಧರಿಸಬೇಕೆಂದು ಶ್ರುತಿಗಣ ಬದ್ಧ ಸೂತ್ರವ ನಿರ್ಮಿಸುತ್ತದನು ಸಿದ್ಧಾಂತ ಮಾಡಲು ಮಧ್ವಮುನಿವರಗಿತ್ತು ನಿಯಮವನು ನಿರ್ನೈಸಿ ತಿಳಿಸುತ ಪಾತಾಳಕೆ ಸುರೋತ್ತಮ ಸಿದ್ಧ ಸೇವಿತ ಶೇಷಗಿರಿಯೊಳಗಿದ್ದು ಭಜಕರನುದ್ಧರಿಸುತಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅತ್ತಿಗೆ ಭೋಜನಮಾಡೆ ಸಾವಕಾಶದಿ ನೀನೂ ಮತ್ತೆ ಮತ್ತೆ ಬೇಕಾದ್ದೆಲ್ಲ ತಂದು ಬಡಿಸುವೆನೂ ಪ ಕ್ಷೀರಾನ್ನ ದಧ್ಯೋದನ್ನ ಇನ್ನು ಪರಮಾನ್ನಗಳು ಹೋಳಿಗೆ ಪಳಿದ್ಯ ಹುಳಿಕೂಟು ಉಪ್ಪಿನಕಾಯಿಗಳ ಪಚ್ಚಡಿ ಚೆನ್ನಾಗಿ ಭೋಜನ ಮಾಡೆ ನಮ್ಮಣ್ಣನ ಸಹಿತದಿ 1 ಲಾಡು ಚಿರೋಟಿ ಮಂಡಿಗೆಗಳು ಬೇಡವೆಂದು ಕಯ್ಯತೋರಿ ಬೇಡಿ ಬೇಡಿ ಹಾಕಿಸಿಕೊಂಬಿ ಜೋಡು ಜೋಡಾಗಿ ಗೂಡೆ ಗೂಡೆ ಹಪ್ಪಳ ಸಂಡಿಗೆ ಕೂಡೆ ಕೂಡೆ ಸುರಿಯುತ್ತಿದ್ದರೆ ಹಾಡು ಹೇಳುವುದಕ್ಕೆ ಬಾಯಿ ಬಿಡುವುದಿಲ್ಲವೇನÉೀ? 2 ಪಟ್ಟದರಸಿ ನಮ್ಮಣ್ಣನ ಭಾಗ್ಯದೇವತೆಯೇ ಸಿಟ್ಟುಮಾಡದೆ ಗುರುರಾಮವಿಠಲನ್ನಾ ಸ್ಮರಿಸಿಕೊಂಡು ದಿಟ್ಟೆ ಬೀಗಿತ್ತಿ 3
--------------
ಗುರುರಾಮವಿಠಲ