ಒಟ್ಟು 20 ಕಡೆಗಳಲ್ಲಿ , 16 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನಾದರೂ ದಯಬಾರದೆ ನಿನಗೆ ಸಂ-| ಪನ್ನ ಮೂರುತಿ ಶ್ರೀಹರಿ ಪ ನಿನ್ನ ನಾಮಸ್ಮರಣೆ ದೊರಕಿತು || ನಿನ್ನ ನಂಬಿದನಾಥನನುದಿನ ಅ.ಪ ಧಾರಿಣಿಯಲಿ ಬಳಲಿದೆ || ಪಾರ ರಹಿತನೆ ನಿರ್ಗುಣಾತ್ಮಕ | ಮಾರನನು ರಕ್ಷಿಸಿದ ದೇವನೆ 1 ಕಂದ ಧ್ರುವನು ಬಂದು ನಿಂದು ಮಧುವನದಲ್ಲಿ | ಚಂದದಿಂ ತಪಗೈಯಲು || ನಂದನಂದನ ದೇವ ಪಾಲಿಸು 2 ನಂಬಿದ ದ್ರೌಪದಿಗಭಯವಿತ್ತೆ || ಸಂಭ್ರಮದಿ ಕೊಡುವಂತೆ ಭಕ್ತಕ-| ದಂಬಪಾಲಕ ಶ್ರೀನಿವಾಸನೆ 3
--------------
ಸದಾನಂದರು
ಎಂತೋ ಪೂಜಿಪುದಂತರ್ಯಾಮಿಯನನಂತಾದಿರಹಿತನ ಚಿಂತಾದೂರನ ಚಿನುಮಯರೂಪನನೆಂತೋ ಧ್ಯಾನಿಪುದು ಪ ಈಶ ವೀಸ ವಾಹನಗೀಸನ ಚರಾಚರ ಮೀಸಲಿಗಳವಲ್ಲಾ ವಾಸುಕಿ ಭೋಗ ನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸಿತುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲೆಸಿಹ ಮೂರ್ತಿಗೆ ಸಲಿಲ ಸ್ವರ್ಶನವೆ ಜಲರುಹ ನೇತ್ರಗೆ ಜಲರುಹಗಾತ್ರಗೆ ಜಲದಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುತುಡುವಗೆ ಬಣ್ಣದ ವಸ್ತ್ರಗಳೆ ಕೌಸ್ತುಭ ರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂ ಪಡೆದವಗೆ ಮಿಸುಪ ತುಲಸಿಯಿಂದೆಸೆವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದ ಅಸೃಜಿಸಿದ ಗಂಧವತೀತನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾತನಿಗೆ 7 ವೇದಗೋಚರಿಸುವೇದಾತ್ಮಕನು ವೇದೋದ್ಧಾರಕನು ವೇದವೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೇ 8 ಕುತ್ತಿಗೆನೆನೆಯದ ವಸ್ತು ಪರಾತ್ಪರ ಪೊಕ್ಕರೆ ಜಲವನ್ನ ನಿತ್ಯ ತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತು ಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರ ವಿಲ್ಲದನಂತರ ಗುಣಾತ್ಮಕನ ಎಂತು ಪ್ರದಕ್ಷಿಣಿಯಾಂತು ನಮಿಪೆ ಜಗದಂತರೀಕನ 11 ಸರ್ವಾಧಾರನ ಸರ್ವಶರೀರನ ಸರ್ವವ್ಯಾಪಕ ನಾ ಸರ್ವನ ನಮಿಸುವ ಗರ್ವವೆಂತುಟೊ ಶಕ್ರ ಸಮಸ್ಕøತನಾ12 ಧರೆಯೊಳು ಪುಲಿಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿ ಸರ್ವೋತ್ತಮ13
--------------
ವೆಂಕಟವರದಾರ್ಯರು
ಎಂತೋಪೂಜಿಪುದಂತರ್ಯಾಮಿಯಾ-ನಂತಾದಿರಹಿತನ ಚಿಂತಾದೂರನ ಚಿನುಮಯ ರೂಪನಾ ದೆಂತೋಧ್ಯಾನಿಪೆ ನಾ ಪ ಈಶ-ವೀಶ-ವಾಹನಗೀಸಚರಾಚರ ಮಿಸಲಿಗೊಳಗಲ್ಲಾ ವಾಸುಕಿ ಭೋಗನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲಸಿಹಮೂರ್ತಿಗೆ-ಸಲಿಲ ಸ್ಪರ್ಶನವೆ ಜಲರುಹನೇತ್ರಗೆ ಜಲರುಹಗಾತ್ರಗೆ ಜಲದಲ್ಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುಡುವಗೆ ಬಣ್ಣದವಸ್ತ್ರಗಳೆ ಉನ್ನತ ಕೌಸ್ತುಭರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂಪಡೆದವಗೆ ಮಿಸುಪ ತುಲಸಿಯಿಂದೆಸವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದಲಿಸೃಜಿಸಿದ ಗಂಧವತೀಶನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾನತನಿಗೆ 7 ವೇದ ಗೋಚರಿಸು ವೇದಾತ್ಮಕನು ವೇದೋದ್ಧಾರಕನು ವೇದಲೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೆ 8 ಪೊಕ್ಕರೆ ಜಲಮಂ ಕುತ್ತಿಗೆ ನೆರೆಯದವಸ್ತು ಪರಾತ್ಪರನಾ ನಿತ್ಯತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತುಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರ ಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರವಿಲ್ಲದ ನಂತ ಗುಣಾತ್ಮಕನಾ ಎಂತು ಪ್ರದಕ್ಷಿಣೆಯಾಂತು ನಮಿಪೆ ಜಗದಂತ ಶರೀರಕನಾ 11 ಸರ್ವಾಧಾರನ ಸರ್ವ ಶರೀರನ ಸರ್ವವ್ಯಾಪಕನಾ ಸರ್ವನ ನಮಿಸುವಗರ್ವವೆಂತುಟೊ ಶಕ್ರನಮಸ್ಕøತನಾ 12 ಧರೆಯೊಳು ಪುಲಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿದಾಸೋತ್ತಮರಾ 13
--------------
ಸರಗೂರು ವೆಂಕಟವರದಾರ್ಯರು
ಕರುಣಿಸೋ ಬೇಗನೆ ಕರಿವರದ ಹರಿ ಪ ತೋಯಜನಯನ ಕಾಯಜಪಿತ ದೈ ಹರಣ ಸ್ವಶ್ರೇಯ ಸಕರಹರಿ 1 ಮಾಧವ 2 ಅಂಡಜಗಮನ ಆಖಂಡಲನುತ ಭೂ ಮಂಡಲ ಪಾಲಕ ತಾಂಡವ ಕೃಷ್ಣಾ 3 ನಘ ತ್ರಿಗುಣಾತ್ಮಕ ಹರಿ 4 ಗೋಪತನಯ ಸಂಜೀವಿತ ತ್ರಿಜಗ- ದ್ವ್ಯಾಪಕ ಘನ ಹೆನ್ನೆಪುgದÀ ಶ್ರೀಪತಿ 5
--------------
ಹೆನ್ನೆರಂಗದಾಸರು
ಚಿಂತಿಸೋ ಭಾರತವ ನೀ ಚಿಂತಿಸೊ ಪ. ಚಿಂತಿಸೊ ಭಾರತ ಮಹಿಮಾ | ಸಿರಿಕಾಂತನೆ ಉತ್ತಮೋತ್ತಮಾ | ಆಹಪಂಕ್ತಿಪಂಕ್ತಿಯೊಳಂತೆ | ಚಿಂತಿತ ಫಲದನಸಂಗ್ತಿ ಪೇಳುವ ಶ್ರುತಿ | ಅರ್ಥ ಭೋಧಿಪುದೆಂದು ಅ.ಪ. ಕಾಳಗ ಸರ್ವ | ಧೀಶನ ಮಹಿಮೆಯ 1 ಅಧಿಭೂತ ಅಧ್ಯಾತ್ಮ ಉಂಟು | ಮತ್ತೆಅಧಿದೈವವೆಂಬುದು ಉಂಟು | ಕೇಳುವಿದಿತವಾಗುವುದಲ್ಲ ಗಂಟು | ಗುರುಮುದದಿಂದ ಬಿಡಿಸಲೀ | ಗಂಟು | ಆಹಅದುಭುತಾರ್ಥಗಳೆಲ್ಲ | ವಿದಿತವಾಗುತ ಹರಿಹೃದಯಾಂತರಂಗನ | ನಿಧಿಧ್ಯಾಸನಕ್ಕವಕಾಶ 2 ಮೂರ್ಬಗೆ ಭಾಷೆಗಳಲ್ಲಿ | ಉಕ್ತಸಾರ ಪ್ರಮೆಯಂಗಳಲ್ಲಿ | ಹರಿ ಉ-ದಾರ ಗುಣಂಗಳು ಅಲ್ಲಿ | ಉಕ್ತಮೀರದೆ ಸ್ಪಷ್ಟತ್ವದಲ್ಲಿ | ಆಹನೇರವಾಗಿಯೆ ಪೇಳ್ದ | ಕಾರಣ ಕರೆವರುಮೂರರೊಳ ಗೊಂದು | ಸಾರಸಮಾಧ್ಯೆಂದು 3 ದರ್ಶನಾಂತರ ಸಿದ್ಧವಾದ | ವೈಷ್ಣ್ವದರ್ಶನ ಪ್ರತ್ಯುಕ್ತವಾದ | ಶೈವದರ್ಶನಾದಿ ಸಿದ್ಧವಾದ | ವಸ್ತುದರ್ಶಿತ ಶಿವನರ್ಚಿಸೀದ | ಆಹ ವಿ-ಮರ್ಶನ ಯೋಗ್ಯ ಸ | ದೃರ್ಶನ ದಿಂದಲಿದರ್ಶನ ಭಾಷೆ ದಿ | ಗ್ದರ್ಶನ ವಿದು ತಿಳಿ 4 ಶೂಲಾಟ್ಟ ಜನಪದವೆಂಬ | ಶಿವಶೂಲವು ಚತುಷ್ಪಥವೆಂಬ | ಕೇಶಶೂಲಿಗಳ್ಪ್ರಮದೇರು ಎಂಬ | ಯುಗಕಲಿಯೊಳಗಿಹರು ಎಂಬೆಂಬ | ಆಹಮೇಲಾದ ಗೂಢಾರ್ಥ | ಜಾಲಗಳೆಲ್ಲವುಓಲೈಸು ಗುಹ್ಯದ | ಭಾಷೆ ಎಂದೆನುತಲಿ 5 ಪರ ಪಾಂಡವಾದಿಗಳ್ಪೆಸರೆಂದು 6 ಸ್ವರವರ್ಣ ವಾಕ್ಯ ಭಾರತ | ಗ್ರಂಥಸರ್ವವು ಮುಖ್ಯ ಪ್ರವೃತ್ತ | ಹರಿಸರ್ವೋತ್ತಮನೆಂಬ ತತ್ವ | ಪೇಳೆಸಿರಿ ವೇದವ್ಯಾಸ ವಿರಚಿತ | ಆಹಪರಮ ಭಕ್ತರು ಪೃಥೆ | ವರ ಉದರೋದ್ಭವಧರ್ಮಾದ್ಯರ ಚರಿತೆ | ಅರುಹುವುದೆನುತಲಿ 7 ಗುಣಗಳು ಭಕ್ತ್ಯಾದಿ ದಶವು | ಇನ್ನುಕರ್ಣದಿಂ ಕೇಳ್ವುದೆಲ್ಲವು | ಹಾಗೆಗುಣಗಳು ಶೀಲ ವಿನಿಯಾವು | ಮತ್ತೆಗುಣಸುವುದು ಮೂರು ವೇದವು | ಆಹಮನು ಪದ ವಾಚ್ಯಗ | ಳೆನಿಸುವುದೀ ಪಂಚಗುಣಧರ್ಮ ವಾಚ್ಯರು | ಪಾಂಡವರೆನಿಪರು 8 ಅಭಿಮಾನಿ ಧರ್ಮಕ್ಕೆ ಎಂದು | ಮನುಅಭಿಧನು ಧರ್ಮಜನೆಂದು | ಇನ್ನುಅಭಿಮಾನಿ ಭಕ್ತ್ಯಾದಿಗೆಂದು | ಭೀಮನಭಿಧನಾಗಿಹನವ ಎಂದು | ಆಹಅಭಿಧನರ್ಜುನ ಶ್ರುತ | ಕಭಿಮಾನ ಎನುತಲಿಶುಭ ಶೀಲ ವಿನಯಕ್ಕೆ | ಅಭಿಮಾನಿಯಮಳರು 9 ಪರಿ ಪತಿ ಪರಿ ಜ್ಞಾನುಳ್ಳ | ಆ ಪೃಥೆ ಸುತರೆಲ್ಲನೀ ಪರಿಭಾವಿಸು | ಆಸ್ತೀಕರೆನುತಲಿ 10 ದ್ರುಪದಜೆ ಧರ್ಮಾದಿ ಐದು | ಜನಸುಪುಣ್ಯ ಶ್ಲೋಕರ ಕಥೆ ಇದು | ಇನ್ನುಉಪರಿಚರಾಭಿಧನೆಂದು | ವಿಷ್ಣುಸುಪ್ರತಿಪಾಧ್ಯನು ಎಂದು | ಆಹಇಪ್ಪರಿ ಮಹಿಮೆಯು | ಪೇತವು ಭಾರತಸುಪ್ರತಿಷ್ಠಿತವಿದು | ಅಬ್ಜಜಾಂಡದಲೆಂದು11 ಭಕ್ತಿವೈರಾಗ್ಯವು ಜ್ಞಾನಾ | ಮತ್ತೆಧೃತಿಯು ಸುಮೇಧಾ ಸುಪ್ರಜ್ಞಾ | ಇನ್ನುಸ್ಥಿತಿ ಬಲಯೋಗವು ಪ್ರಾಣಾ | ಭೀಮಹತ್ತು ಗುಣಾತ್ಮಕ ಮಾನಾ | ಆಹಉತ್ತಮ ಗುಣಿಪರ | ನಾತ್ಮನಾ ಅದರಿಂದತತ್ತನು ಎನಿಸೀಹ | ಪೃಥ್ವಿಪ ಭೀಮನು 12 ಮೂರ್ತಿ ಮೂರ್ತಿ | ಆಹಕರೆಸಿಹ ಶಕುನಿಯು | ಮೂರುತಿ ನಾಸ್ತಿಕ್ಯಸರ್ವದೋಷಾತ್ಮಕ | ರೆನಿಪರಂಧಜರೆಲ್ಲಾ 13 ಹರವನಾತರನು ಎಂದು | ದ್ರೌಣಿಕರೆಸುವನಹಂಕಾರನೆಂದು | ಇನ್ನುಕರಣಗಳ್ಪ್ರಾಣಾದಿ ಎಂದು | ಮತ್ತೆವರ ಸೈನ್ಯ ಪಾಪಗಳೆಂದು | ಆಹಅರಿವುದರ ಪುಣ್ಯ | ಪರವೆಂದು ಪಾಂಡವರಇರುತಿಹ ವಿಷ್ಣುವು | ಅವರ ನಿಯೋಜಕ 14 ಸರ್ವವು ಅಧ್ಯಾತ್ಮನಿಷ್ಟ | ಗ್ರಂಥದುರ್ವಿಜ್ಞೇಯ ಸರ್ವರ್ಗೆ ಎನುತ | ವ್ಯಾಸಸರ್ವಜ್ಞ ತಾನೆಲ್ಲ ಜ್ಞಾತ | ನಿಹಪೂರ್ವ ಮಾರುತ ಹರಿದೂತ | ಆಹಅರಿವ ಗುರು ಗೋವಿಂದ | ವಿಠಲಾನುಗ್ರಹದಿಂದಮರುತಾನುಗ್ರಹದಿಂದ | ಅರಿವರು ಇತರರು 15
--------------
ಗುರುಗೋವಿಂದವಿಠಲರು
ದೇವ ದೇವ ಲೋಕೇಶ್ವರಾ ರಾಮ ಪ ಪಾವನಾತ್ಮ ಪರಾತ್ಪರಾ ದೋಷದೂರಾ ಜೀವ ಜೀವ ಚರಾಚರ ಗೂಢಚಾರ ಅ.ಪ ತ್ರಿಗುಣಾತ್ಮಕಲೀಲಾ ಕರುಣಾಲವಾಲಾ 1 ಧರಣಿಜಾ ಕಳತ್ರಾ ಕರುಣೈಕ ಪಾತ್ರಾ 2 ಜವ ಜೀವನೇ ಶ್ರೀಧವ ಮಾಂಗಿರೀಶ || 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನರಿತಿಹರಾರಿಹರು || ಪರತರಪಾವನನು ಪ ಭಗವದ್ರೂಪನು| ತ್ರಿಗುಣಾತ್ಮಕನು| ಜಗದಾಧಾರಕನು || ಜಗನ್ನಿವಾಸನು| ಜಗದಾನಂದನು| ಜಗದೀಶನು ನೀನು 1 ಜಗನಿಯಾಮಕ | ಜಗದುದ್ಧಾರಕ | ತ್ರಿಜಗವಿರಾಜಿತನು|| ಅಗಣಿತಮಹಿಮನು| ನಿಗಮಗೋಚರ | ತ್ರಿಜಗದ್ವಂದಿತನು2 ಭಕ್ತಾನಂದನು| ಭಕ್ತಾಧೀನನು| ಭಕ್ತಪರಾಯಣನು 3 ಶರಣಾಗತಪರಿ | ಪಾಲಕ | ನೀನು| ಕರುಣಾಸಾಗರನು|| ಪರಬ್ರಹ್ಮನು | ಪರಂಜ್ಯೋತಿಯು | ಪರಮಾತ್ಮನು ನೀನು4 ನಿನ್ನಯ ನಾಮೋ| ಚ್ಚರಿಸಿದ ಪಾಮರ | ಪಾವನನಾಗುವನು|| ನಾಮಾಮೃತವನು | ಸೇವಿಸೆ ಬ್ರಹ್ಮಾ| ನಂದವ ಪೊಂದುವನು5
--------------
ವೆಂಕಟ್‍ರಾವ್
ನಾರಾಯಣತೇ - ನಮೋ ನಮೋ ತಾರಕ ಪದಯುಗ - ನಮೋ ನಮೋ ಪ ಪಾರಾಶರತೇ ನಮೋ ನಮೋ ಗುಣ ವಾರಿಧಿ ಸುಖಮಯ - ನಮೋ ನಮೋ ಅ.ಪ ಇಂದಿರೆ ಮನುಕುಮುದೇಂದು ಪರಾವರ ನಂದಗುಣಾರ್ಣವ ನಮೋ ನಮೋ ಸಿಂಧುಶಯನ ಅರವಿಂದ ಸುನಾಭ ಮಹೇಂದ್ರ ವಿನಾಂತನೆ ನಮೋ ನಮೋ1 ಸುಂದರ ವೀ ಜಗ _ ತಂದೆ ಮಹಾಬಲ ಕುಂದು ವಿದೂರನೆ ನಮೋ ನಮೋ ಮಂದಜ ಭವಮನ ಸ್ಪಂದನ ಕರುಣಿಯೆ ನಮೋ ನಮೋ2 ಸುಂದರ ತಮ ಅರವಿಂದ ಸುಲೋಚನ ಕಂಧರ ಪಾಣಿಯ ನಮೋ ನಮೋ ನಂದನ ಕಂದ ಮುಕುಂದ ಜನಾರ್ಧನ ಛಂದಸು ವೇದ್ಯನೆ ನಮೋ ನಮೋ 3 ನಾಶರಹಿತ ಸ್ವತಂತ್ರಗುಣಾತ್ಮಕ ವಾಸುದೇವತೇ ನಮೋ ನಮೋ ಭೇಶಕಾಂತಿ ಮುಕ್ತೇಶ ಪರಾಮೃತ ವಿಶ್ವಜೂತಿ ಬಲ ನಮೋ ನಮೋ 4 ಶೇಷಶಯನ ವಾರಾಸಿಗೇಹ ಮಾಯೇಶ ಸನಾತನ ನಮೋನಮೋ ಓಸು ಜಾಡಾಜಡ ರಾಸಿ ಬಿಂಬಗುಣ ಭಾಸಕ ನಾಯಕ ನಮೋ ನಮೋ 5 ದೇವ ದೇವ ಜಗ ಪಾವನ ಚರಿತ ವಿಭಾವರಿ ಚರಹರ ನಮೋ ನಮೋ ಜೀವರ ಜೀವ ವಿಭಾವ ಸುನಾಯಕ ಭಾವುಕ ಜನಪ್ರಿಯ ನಮೋ ನಮೋ 6 ಅಂಡಜವಾಹನ ಪುಂಡರೀಕನುತ ಪಾಂಡುರಂಗತೇ ನಮೋ ನಮೋ ತೊಂಡವತ್ಸಲಾಖಂಡ ವಿಜಯ ಕೋದಂಡಪಾಣಿ ತೇ ನಮೋ ನಮೋ 7 ಭವ ಸಂಕಟ ನಾಶಕ ಶಂಕರ ಮಹಿಮನೆ ನಮೋ ನಮೋ ಸುಂಕ ಸುಲಿವ ಬಿರುದಾಂಕಿತ ಕುಟಿಲಾ ಟಂಕರಹಿತ ತೇ ನಮೊ ನಮೋ 8 ಪರಮೇಷ್ಠಿ ಜನಕ “ಶ್ರೀ ಕೃಷ್ಣವಿಠಲ” ವಿಭು ನಮೋ ನಮೋ ಅಷ್ಟಕರ್ತ ಶಿಪಿವಿಷ್ಠಸುನಾಮಕ ಧಿಟ್ಟ ನೃಸಿಂಹನೆ ನಮೋ ನಮೋ 9
--------------
ಕೃಷ್ಣವಿಠಲದಾಸರು
ಪರಮೇಶ್ವರಿ ಪಾರ್ವತಿಸತಿ ವರದೆ ಶ್ರೀವನದುರ್ಗಾ ಪ. ತರುಣಾರುಣಶತಕೋಟಿ ಕರುಣಾನನೆ ಮಾಂ ಪಾಹಿ ಅ.ಪ. ಜಗದ್ಭರಿತೆ ಜನಾರ್ದನಿ ಜಗದೇಕ ಶರಣ್ಯೆ ನಿಗಮಾಗಮಶಿರೋರತುನೆ ಮಿಗೆ ಕೈಯುಗಮಂ ಮುಗಿವೆಯಗಜೆ ಶ್ರೀಜಗದಂಬಿಕೆ 1 ಸದಾನಂದೆ ಸರೋಜಾಕ್ಷಿ ಸದಾವಳಿಸನ್ನುತೆ ತ್ರಿದಶಾರ್ಚಿತೆ ತ್ರಿಗುಣಾತ್ಮಕಿ ಸದಯೆ ಹೃದಯೆ ಮುದದಿಂ ಪದನಂಬಿದೆ ಪದುಮಾಲಯೆ2 ವಿರಾಜಿಸುವ ವಿಶ್ವೋತ್ತಮ ವರಚಿತ್ರಪುರೇಶ್ವರಿ ಹರಿಲಕ್ಷ್ಮೀನಾರಾಯಣಿ ಕರುಣಾಭರಣೆ ಶರಣೋದ್ಧರಣೆ ಶ್ರೀಚರಣಾಂಬುಜೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಮದಾಂಧನೋ ನಾನು ಮಧುಸೂದನ ಪ ಜಗವನು ತುಂಬಿದ ತ್ರಿಗುಣಾತ್ಮಕನೆತೆಗೆದು ಕಣ್ಗಳ ನೋಡದ ನಾನು 1 ಪವನನೊಡೆಯ ನಿನ್ನ ಸವಿಸವಿ ಸ್ತವಕೆಕಿವಿಗೊಡದೆ ಕಿವುಡನಾದೆನಾ 2 ಎಡೆಗಿದ್ದರು ಗಡ ಅಡಗಿಹನಿಲ್ಲೆಂದುಹುಡುಕುತ ಕೇಳುವ ಜಡಮತಿ ನಾನು 3 ಗದುಗಿನ ವೀರನಾರಾಯಣನೆ ಎನ್ನಎದೆಯೊಳು ನಿಂತಿರೆ ನೋಡದ ನಾನು 4
--------------
ವೀರನಾರಾಯಣ
ವೇಶ ನಿಜ ವಿಲಾಸ ಪ. ಭಾಸುರ ಮಣಿಗಣಭೂಷಣ ದಿತಿಸುತ- ಭೀಷಣ ಸಜ್ಜನಪೋಷಣ ಕಪಿವರ ಅ.ಪ. ಕಂಜಸಖೋಪಮ ಕಮಲಾನನಾನತ ಸಂಜೀವನ ಹನುಮಾ ಮಂಜುಳ ವಜ್ರಶರೀರ ವೀರ ಹರಿ- ರಂಜನಾಂಜನಾಸುತ ಸದ್ಗುಣಯುತ 1 ನಿಗಮಾಗಮ ಪಾರಂಗತ ರಾಮಾ- ನುಗ ಪಾವನರೂಪ ಭಗವಜ್ಜನ ಭಾಗ್ಯೋದಯ ಭಾರತಿ ದೃಗುಚಕೋರಚಂದ್ರಮ ತ್ರಿಗುಣಾತ್ಮಕ 2 ಅಜಪದನಿಯತ ಭೂಭುಜಪತಿ ಪಾಂಡುತ- ನುಜ ಸುರವ್ರಜವಿನುತ ಕುಜನಧ್ವಾಂತನೀರಜಸಖ ಗರುಡ- ಧ್ವಜಶರಣ್ಯ ಶಾಶ್ವತ ತ್ರಿಜಗನ್ಮಯ 3 ವರಕಾರ್ಕಳಪುರ ಗುರು ವೆಂಕಟಪತಿ ಚರಣಾಗ್ರೇ ವಿರಾಜ ಶರಣಭರಣಯುತ ಕರುಣಾಕರ 4
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಪಾದವಲ್ಲಭಾ ದೇವಾ ಗುರುನಾಥಾ ದತ್ತರಾಜಾ ವರಗಾಣ ಪುರಾಧೀಶಾ ಅವದೂತಾ ದತ್ತರಾಜಾ ತ್ರಿಗುಣಾತ್ಮಕಾ ಘನಮಹಿಮಾ ತ್ರಿಗುಣಾತೀತ ಭೂಮಾ ಅಘನಾಶ ಪೂರ್ಣಕಾಮಾ ಜಗದೀಶ ಸೌಖ್ಯಧಾಮಾ ಬಗೆಹರಿಸೈ ಮೋಹಮಾಯಾ ಭಗವಂತ ನೀ ಗುರುರಾಯಾ ವೈರಾಗ್ಯ ಶಾಂತಿ ಸುಖವಾ ಪರಮಾರ್ಥಜ್ಞಾನದರಿವಾ ಗುರುಪಾದಸೇವೆ ಗೈವಾ ವರಭಾಗ್ಯ ನೀಡು ದೇವಾ ಪರಿಹರಿಸೈ ವಿಷಯಚಿಂತಾ ಪ0ರಮಾತ್ಮ ಸದ್ಗುರುನಾಥಾ ಘನ ನಿರ್ವಿಕಲ್ಪರೂಪಾ ನೀನೆನ್ನ ಸ್ವಾತ್ಮಾರೂಪಾ ಮನವಾಣಿ ಮೀರ್ದ ರೂಪಾ ಆನಂದ ಬ್ರಹ್ಮರೂಪಾ ಕನಸೈ ಈ ಜಗವು ನಿನ್ನೋಳ್ ಗುರುರಾಜ ಶಂಕರಾರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಸಾಂಬ ಶಿವ ಶರಣರಿಗೊಂದು ಶರಣಾರ್ಥಿ ಪ ನರಲೋಕದೊಳಗೆ ಸಂಚಾರವ ಮಾಡುವ ಪರಮಾತ್ಮ ಪರಿಪೂರ್ಣ ಎಲ್ಲ ಜೀವದೊಳೆಂದು ಅರಿತಂಥವನಿಗೊಂದು ಶರಣಾರ್ಥಿ ಮರೆಹೊಕ್ಕ ದೀನರನು ರಕ್ಷಿಪ ಪುಣ್ಯ ಪುರು ಪುರುಷ ಪ್ರಯತ್ನದಿಂದುದ್ಯೋಗವನು ಮಾಳ್ಪ ಸರಿವಂಥವರಿಗೊಂದು ಶರಣಾರ್ಥಿ 1 ಧಾರಣಿಯೊಳು ಪೆಸರೊಡೆದು ರಂಜಿಸುವಂಥ ಕಾರುಣಿಕರಿಗೊಂದು ಶರಣಾರ್ಥಿ ದವರಿಗೊಂದು ಶರಣಾರ್ಥಿ ನಿತ್ಯ ಕರ್ಮವ ರಚಿಸುವ ಚಾರು ಶೀಲರಿಗೊಂದು ಶರಣಾರ್ಥಿ ಸ್ಸಾರ ಮಾಡಿದಗೊಂದು ಶರಣಾರ್ಥಿ 2 ಕೆರೆಭಾವಿ ದೇವಾಲಯಗಳ ಕಟ್ಟಿಸಿ ದೇವರುತ್ಸವವನು ಬರಿಸುವಗೆ ದ್ಧರಿಸಿ ಭುಂಜಿಪಗೊಂದು ಶರಣಾರ್ಥಿ ಪರದಾರ ಪರದ್ರವ್ಯ ಪರದ್ರೋಹವಿಲ್ಲದ ಮಹಾ ಪುರುಷರಿಗೊಂದು ಶರಣಾರ್ಥಿ ಹರಿಹರರೊಳಗೆ ಭೇದವ ಮಾಡಿ ನಡೆಯದ ದುರಿತ ದೂರರಿಗೊಂದು ಶರಣಾರ್ಥಿ 3 ಸತ್ತು ಹುಟ್ಟುವ ಭವಶರಧಿಯ ಗೆಲುವಂಥ ಉತ್ತಮರಿಗೊಂದು ಶರಣಾರ್ಥಿ ನಿತ್ಯ ಸಾಲಿಗ್ರಾಮಂಗಳನು ಪೂಜಿಸಿ ಹರಿ ತೀರ್ಥಗೊಂಬನಿಗೊಂದು ಶರಣಾರ್ಥಿ ಕೃತ್ತಿ ವಾಸನ ಆಗಮೋಕ್ತದಿ ಪೂಜಿಪ ಭಕ್ತಿವಂತರಿಗೊಂದು ಶರಣಾರ್ಥಿ ತತ್ವ ವಿಚಾರ ವೇದಾಂತದ ಅರ್ಥವ ಯಾ ವತ್ತರಿದವಗೊಂದು ಶರಣಾರ್ಥಿ 4 ಅರವಟ್ಟಿಗೆಯನು ಚೈತ್ರದೊಳಿಕ್ಕಿ ಜನರಿಗೆ ನೀರೆರಸಿದವರಿಗೊಂದು ಶರಣಾರ್ಥಿ ಸಿರಿ ತುಳಸಿಯನ್ನು ನೇಮದಲಿ ಪೂಜಿಸುವಂಥ ಹರಿ ಶರಣರಿಗೊಂದು ಶರಣಾರ್ಥಿ ತರಣಿಯೆ ತ್ರಿಗುಣಾತ್ಮಕನೆಂದು ಹೃದಯದೊಳರಿ ದೆರಗುವಗೊಂದು ಶರಣಾರ್ಥಿ ಮರುಸುತನ ಕೋಣೆ ವಾಸ ಲಕ್ಷ್ಮೀಶನ ಚರಣ ಪಂಕಜಕೊಂದು ಶರಣಾರ್ಥಿ 5
--------------
ಕವಿ ಪರಮದೇವದಾಸರು
ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಹರೇ ಶಂಕರ ಪಾರ್ವತೀವರ ಪಾಲಿಸು ನೀ ಎನ್ನ ಪ. ದುರಿತರಾಶಿಗಳ ದೂರಮಾಡು ಗಿರಿ- ವರ ಮಹಾನುಭಾವ ಶಿವಶಿವ ಅ.ಪ. ತ್ರಿಗುಣಾತ್ಮಕ ತ್ರಿದಶಾಲಯ ಪೂಜಿತ ನಿಗಮಾಗಮವಿನುತ ಅಗಜಾಲಿಂಗಿತ ಆಶೀವಿಷಧರ ಮೃಗಧರಾಂಕ ಚೂಡ ಹೃದ್ಗೂಢ 1 ಸರ್ವೋತ್ತಮ ಹರಿಯಹುದೆಂಬ ಜ್ಞಾನವ ಸರ್ವಕಾಲಕ್ಕೀಯೊ ದುರ್ಮತಗಳನೆಲ್ಲ ದೂರ ಮಾಡೊ ಕರಿ- ಚರ್ಮಾಂಬರಧರ ಪ್ರವೀರ 2 ಸಂಜೀವನ ಲಕ್ಷ್ಮೀನಾರಾಯಣ ಮಣಿ- ರಂಜಿತ ನಿರ್ಲೇಪ ಮಂಜುಳಕದಿರೆಯ ಮಂಜುನಾಥ ಭವ- ಭಂಜನ ಹರಿಪ್ರಿಯ ಜಯ ಜಯ 3
--------------
ತುಪಾಕಿ ವೆಂಕಟರಮಣಾಚಾರ್ಯ