ಒಟ್ಟು 222 ಕಡೆಗಳಲ್ಲಿ , 63 ದಾಸರು , 216 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕವಚ ಕವಚದೊಳು ಬ್ರಹ್ಮಾಸ್ತ್ರ ವಜ್ರ ವಜ್ರ ವಜ್ರ ವಜ್ರ ಕವಚ 1 ಬಗಳಾದೇಹವ ತನ್ನದು ಮಾಡುವುದೇ ವಜ್ರ ಕವಚಬಗಳಳಾಗಿ ತಾನಿರುವುದೇ ವಜ್ರಕವಚಬಗಳಾ ಒಳಹೊರಗೆ ಒಂದಾಗಿಹುದೇ ವಜ್ರಕವಚಬಗಳೆ ನಿಜವಾಗಿ ಒಲಿದಿಹುದೇ ವಜ್ರಕವಚ 2 ನಾರಾಯಣ ಕವಚ ಶಿವಕವಚ ಶಕ್ತಿಕವಚಸೂರ್ಯ ಕವಚ ಎಲ್ಲ ದೇವ ಕವಚಕಾರಣಾತ್ಮಕ ಚಿದಾನಂದ ಬಗಳ ಕವಚಆರ ಯತ್ನವು ನಡೆಯದಿಹುದದು ವಜ್ರಕವಚ3
--------------
ಚಿದಾನಂದ ಅವಧೂತರು
ಗಜಮುಖ ಗಣಪನಂಬುಜಪಾದಕ್ಕೆರಗುವೆ ನಿಜವಾದ ವರವ ನಾ ಬೇಡಿಕೊಂಬೆ ಅಜನರಸಿಗೆ ಅತಿ ಭಕ್ತಿಂದೆ ಭಜಿಸುವೆ ತ್ರಿಜಗವಂದಿತನ ಕತೆಯ ಪೇಳ್ವೆನು 1 ಗೋಕುಲದೊಳಗೆಲ್ಲ ಗೋಪಾಂಗನೇರು ಕೂಡಿ ಏಕವಾಗಿ ಮಾತನಾಡಿಕೊಂಡು ತಾವು ಅ- ನೇಕ ಸಂಭ್ರಮದಿಂದ ಆಡಿ ನೀರಾಟವ ಬೇಕಾದೂಟವನುಂಡು ಬರುವೋಣೆಂದು 2 ಘೃತ ಪರಮಾನ್ನವು ಚಕ್ಕುಲಿ ಗಿಲುಗಂಜಿ ಗುಳ್ಳೋರಿಗೆ ಬುಂದ್ಯ ಭಕ್ಷ್ಯ ಮಂಡಿಗೆ ಫೇಣಿ ಬುತ್ತಿ ಚಿತ್ರಾನ್ನ ಹಪ್ಪಳ ಸಂಡಿಗಂಬೋಡುಪ್ಪಿನಕಾಯಿಗಳು 3 ಕೇಸರಿ ಕುಂಕುಮರಿಷಿಣ ಅಚ್ಚಮಲ್ಲಿಗೆ ಶಾವಂತಿಗೆ ಸರವು ದಿವ್ಯ ಕರ್ಪೂರದಡಿಕೆ ಯಾಲಕ್ಕಿ ಎಲೆಯ ಸುಣ್ಣ ಪತ್ರೆ ಲವಂಗ ತಬಕಿಲೆ ತಂದರು 4 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆ ಸಂಪಿಗೆ ಮುಡಿದು ದಿವ್ಯ ಕೊರಳ ಕಟ್ಟಾಣಿ ಸರಿಗೆ ಚಂದ್ರಹಾರ ಪು- ತ್ಥಳಿ ಪಚ್ಚಪದಕಗಳ್ಹೊಳೆಯುತಲಿ 5 ಕಡಗ ಕಂಕಣ ದ್ವಾರ್ಯ ನಾಗಮುರಿಗೆ ವಂಕಿ ಬಿಡಿಮುತ್ತಿನ ಗೊಂಡ್ಯ ಬಾಜುಬಂದು ದೊಡ್ಡ ವಾಲೆ ಸರಪಳಿ ಮುತ್ತು ಬು- ಗುಡಿ ಚಂದರ ಬಾಳ್ಯ ಹೊಳೆಯುತಲಿ 6 ಮುದ್ದು ಮೋರೆಗೆ ತಕ್ಕ ಮುಕುರ್ಯ ಬುಲಾಕನಿಟ್ಟ ವ- ಜ್ರದ್ಹರಳು ಬಲಮೂಗಿನಲಿ ದಿವ್ಯ ತಿದ್ದಿ ಮುಂಗುರುಳು ಮುತ್ತಿನ ಬೊಟ್ಟು ಕುಂಕುಮ ಪದ್ಮದ್ಹೂವಿನ ಕುಬುಸಗಳ ತೊಟ್ಟು 7 ಹರದಿಯರೆಲ್ಲರು ಪರಮ ಸುಭ್ರಮದಿಂದ ಜರದ ಪೀತಾಂಬರ್ವಜ್ಜರದ ಪಟ್ಟಿನಿಟ್ಟು ಪರಿ ಬಣ್ಣ ಸೀರೆಗಳುಟ್ಟು ಕಾಲ- ಲಿ ರುಳಿ ಕಾಲುಂಗರ ಗೆಜ್ಜೆ ಪೈಜಣವು 8 ಚೆಲ್ವೆಯರೆಲ್ಲರು ಉಲ್ಲಾಸದಿಂದಲಿ ಘುಲ್ಲು ಘಲ್ಲೆಂದು ಹೆಜ್ಜನಿಡುತ ತಾವು ಮಲ್ಲೆ ಮಲ್ಲಿಗೆ ಪುನ್ನಾಗ ಸಂಪಿಗೆ ತೋಟ ಅಲ್ಲಲ್ಲೆ ನಿಂತು ನೋಡುತ ಬಂದರು 9 ಕುಂದ ಮಂದಾರ ಸುಗಂಧಿಕ ದವನವು ಬಂಗಾರದಂಥ ಕ್ಯಾದಿಗೆಯಮಲ ಚೊಕ್ಕ ದುಂಡುಮಲ್ಲಿಗೆ ಪಾರಿಜಾತ ತಾವರೆಮೊಗ್ಗು ಚೆಂದ ಚೆಂದದ ಶಾವಂತಿಗೆ ವನವು 10 ಹತ್ತಿ ಆಲದ ಮರ ಅಡಕೆ ತೆಂಗಿನ ಮರ ಅ- ಶ್ವತ್ಥ ಕಪಿತ್ಥ ಕಿತ್ತಳೆ ಹಲಸು ನೋಡು- ತ್ತತ್ತಿ ದ್ರಾಕ್ಷಿ ನೀರಲ ನಿಂಬೆ ದಾಳಿಂಬ್ರ ಪಕ್ವಾದ ಜಂಬು ಸೀತಾಫಲವು 11 ಎಲೆದೋಟದೊಳಗೆ ಯಾಲಕ್ಕಿಗೊನೆಯು ನೋಡೆ ಕಳಿತ ಮಾವಿನ ಹಣ್ಣು ಕದಳೀ ಫಲ ಬೋರೆ ಶ್ರೀತುಳಸಿ ವನಗಳಲ್ಲೆ ಅರಿಷಿಣಂಜೂರಿ ಔದುಂಬ್ರ ಫಲ 12 ಚಕೋರ ಚಾತಕ ಗಿಳಿ ಚಕ್ರವಾಕ ಪಕ್ಷಿ ಗಿಳಿಹಿಂಡು ಗಂಡೆರಳೆ ಗರುಡ ಹಂಸವು ನೋಡೆ ಹರಿ ಬ್ರಹ್ಮ ತಂದೆ ಮಕ್ಕಳು ಏರೋವಾಹನವು 13 ಕಸ್ತೂರಿಮೃಗ ಪುನುಗಿನ ಬೆಕ್ಕು ಪಾರ್ವಾಳ ಜಕ್ವಕ್ಕಿ ಕೊಳಲ್ಹಕ್ಕಿ ಸಾರಂಗವು ಚಾರಿ ಕುಕ್ಕುಟ ಭೈರುಂಡ ಎಡಖಗ ಬಲಕ್ಕಾಗಿ ಕೊಟ್ಟವು ಶಕುನ ಜಲಕ್ರೀಡೆಗೆ 14 ಕಾಳಿಮರ್ದನ ಕೃಷ್ಣ ಹಾರಿದ ಮಡುವಿದು ಕಾಳಿಂಗನೋಡಿಸಿ ಕಳೆದ ವಿಷ ಕೆಟ್ಟ ನೋಡೆ ಅಮೃತಕೆ ಮಿಗಿಲಾಗಿದೆ ಈ ಜಲ ಏನು ಪುಣ್ಯ ಮಾಡಿದ್ದಳೊ ಯಮುನಾ 15 ನೀಲ ಮಾಣಿಕ್ಯ ಮುತ್ತು ಕೂಡಿಸಿದಂತೆ ತ್ರಿವೇಣಿ ಆ- ದಳು ತಾ ಪ್ರಯಾಗದಲಿ ತ್ರಿವೇಣಿ ಭಾಗೀರಥಿ ಸರಸ್ವತಿ ಕೂಡಿ ಸಂಗಮಳಾಗಿ ಪೋಗೋಳು ಕಾಶಿ ಪಟ್ಟಣಕೆ 16 ಕಮಲಸಖನ ಪುತ್ರಿ ಕಾಮಿತ ಫಲಕೊಟ್ಟು ವರುಣನರ್ಧಾಂಗಿ ನೀ ವರವ ಕೊಡೆ ತಾಯೆ ಯಮಧರ್ಮರಾಯನ ಭಗಿನಿ ನಿಮ್ಮ ಸ್ನಾನ- ಫಲಕೊಟ್ಟು ಪಾಲಿಸೀಗೆಂದೆನುತ 17 ನೋಡುತ ನಗುತ ಮಾತಾಡುತ ನಿಂತರು ಓಡುತಾವೆ ಜಲ ಸೆಳವಿನಿಂದ ಆಹ ಮಾಡುವೋಣ್ಹ್ಯಾಗೆ ಸ್ನಾನವ ನಾವು ಎನುತಲಿ ಜೋಡಿಸಿ ತಮ್ಮ ್ಹಸ್ತ ಮುಗಿದರಾಗ 18 ಉಟ್ಟ ಸೀರೆಗಳನು ಬಿಟ್ಟು ಕುಪ್ಪಸ ಕಟ್ಟಿ ಇಟ್ಟರು ಉಸುಕಿನ ಮಿಟ್ಟಿಯಲ್ಲೇ ತಾವು ಮಿತ್ರೆಯರೆಲ್ಲ ತಮ್ಮ ಸ್ತನಗಳ್ಹಿಡಕೊಂಡು ಥಟ್ಟನೆ ಇಳಿದರು ನದಿಯೊಳಗೆ 19 ವಾರಿಗೆ ಗೆಳೆತೇರು ವರ ಮೋಹನಾಂಗೇರು ಮೋರೆಗೆ ಅರಿಷಿಣ ಕುಂಕುಮ್ಹಚ್ಚಿ ತಮ್ಮ ನೀರಜಾಕ್ಷಿಯರೆಲ್ಲ ನಿರ್ಮಲವಾಗಿದ್ದ ನೀರೊಳು ನಿಂತು ಮೈ ತೊಳೆದರಾಗ 20 ಭಾರಿ ಸೆಳವಿನೊಳು ಬತ್ತಲೋಲ್ಯಾಡುತ ಸಾರಸಮುಖಿಯರು ಸರಸದಿಂದ ಚೆಲ್ಲೆ ದ್ವಾರ್ಯ ಕಂಕಣಕರ ಬೊಗಸೆಲಿಂದ ನೀರು ತುಂಬಿ ಚೆಲ್ಲ್ಯಾಡುತಲಿ 21 ಸರ್ಪನಂಥ ಹೆರಳೊಲಿವುತ ನೀರೊಳು ಮುತ್ತಿನ ಸರಪದಕ್ಹೊಳೆಯುತಲಿ ಬುಕ್ಕ್ಹಿಟ್ಟು ಗಂಧ ಮಲ್ಲಿಗೆ ಪಾರಿಜಾತವು ತೆಪ್ಪದಂದದಲಿ ತೇಲಾಡುತಿರೆ22 ಅಂಬುಜಮುಖಿಯರು ಸಂಭ್ರಮದಿಂದಲಿ
--------------
ಹರಪನಹಳ್ಳಿಭೀಮವ್ವ
ಗೆಳೆತನ ಹಿಡಿದನೆ ಬಗಳೆಯ ಕೂಡೆಗೆಳೆತನ ಆರಿಗೂ ದೊರಕದತನಯ ಸತಿಯು ಧನವೆಂಬುದ ಸೇರದಜನನ ಮರಣಕೆ ಹೊರತಾದ ಪ ಎನ್ನ ಕಾಲು ಬಗಳೆ ಕಾಲಾಗಿಎನ್ನ ಹಸ್ತ ಬಗಳೆ ಹಸ್ತವಾಗಿಎನ್ನ ಬುಜ ಬಗಳೆ ಬುಜವಾಗಿಎನ್ನ ಕಣ್ಣೇ ಬಗಳೆ ಕಣ್ಣಾಗಿ 1 ಎನ್ನ ದೇಹವು ಬಗಳೆ ದೇಹವಾಗಿಎನ್ನ ಇಂದ್ರಿಯ ಬಗಳೆ ಇಂದ್ರಿಯವಾಗಿಎನ್ನ ಮನವು ಬಗಳೆ ಮನವಾಗಿಎನ್ನ ಜೀವ ಬಗಳೆ ಜೀವವಾಗಿ 2 ನಾನೇ ಬಗಳೆಯಾಗಿ ಬಗಳೆಯೇ ನಾನಾಗಿನಾನು ನೀನು ಎಂಬೆರಡುಳಿದುಜ್ಞಾನ ಚಿದಾನಂದ ಬ್ರಹ್ಮಾಸ್ತ್ರ ತಾನಾಗಿತಾನೇ ತಾನಾದ ಗೆಳೆತನವ 3
--------------
ಚಿದಾನಂದ ಅವಧೂತರು
ತಿಳಿಯ ಬಲ್ಲೆನೆ ನಾನಿನ್ನ ವೆಂಕಟರಮಣ ಪ ತಿಳಿಯ ಬಲ್ಲೆನೆ ನಿನ್ನ ನಳಿನಭವಾದ್ಯರಿ ಗಳವಡಿಯದ ಪಾದ ಪಾದ ಭಜನೆ ಬೇಡಿದೆ ಕೃಪಾಸಿಂಧು ನಂಬಿದೆ ನಿನ್ನ ಸುಜನವಾರಿಧಿ ಶರದೇಂದು ಪಾಲಿಸು ಎನ್ನ ನಿಜವಾಗಿ ಪೇಳುವೆ ವೃಜಿ£ಮರ್ದನನೆಂದು 1 ಎಡಬಲದಲಿ ನಿನ್ನ ಮಡದೇರ ಒಡಗೂಡಿ ಒಡಲನಾಮಕವಾಗಿ ಒಡಲೊಳಿದ್ದನ್ನವ ವಡಬಾಗ್ನಿಯೊಳುನಿಂತು ಜಡÀಜಸಂಭವಸುರ ಗಡಣ ಕೆ ನೀಡುತ್ತಾ ಒಡೆಯನೆನಿಸಿ ಭವ ನಿತ್ಯ ಒಡೆಯ ಪುಷ್ಕÀರಣಿಕೂಲನಿಲಯ ಜಗ ದ್ವಡೆಯ ಎನ್ನನು ಪೊರೆ ತಡವ್ಯಾಕೊ ಸಿರಿಲೋಲ2 ಸಿದ್ಧರಾಮಶೆಟ್ಟಿ ಶುದ್ಧಸ್ವರೂಪನೆ ಮುದ್ದುಮೋಹನ ಮುಖಕೆ ತಿದ್ದಿತೀಡಿದನಾಮ ಶುದ್ಧ ಭಕ್ತರನ್ನೆಲ್ಲ ಮುದ್ದುಗೊಳಿಸುವಂಥ ಮುದ್ದಾದ ಮುಖದಲ್ಲಿ ಎದ್ದು ಕಾಣುವ ನಗೆ ಪೊದ್ದುಕೊಂಡಿಹ ನಾನಾ ಆಭರಣದಿಂದಲಿ ಎದ್ದು ಬರುವ ನಿನ್ನ ಪ್ರದ್ಯೊತನಿಭ ಮೂರ್ತಿ ವಾಸುದೇವ ಮದ್ಹøದಯಗತಬಿಂಬ ಸಿದ್ಧಗುರುಜಗನ್ನಾಥ ವಿಠಲರೇಯ 3
--------------
ಗುರುಜಗನ್ನಾಥದಾಸರು
ಸುರಾಸುರಾರ್ಚಿತ ಸರೋಜಲೋಚನ ಸರಾಗದಿಂದೆನ್ನನೀಕ್ಷಿಸೈ ಪರಾಪರೇಶನೆ ಪರಾತ್ಪರನೆ ನೀ ಪರಾಕುಮಾಡದೆ ಪಾಲಿಸೈ ಪ ವಿರಾಜಮಾನ ಸುವಿರಾಜವಾಹನ ವಿರಾಟ್ಪುರುಷ ವಿಶ್ವಂಧರ ಕರಾರವಿಂದದಿ ಕರಾದಿಗಳ ಪಿಡಿ ಧರಾತಿಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹುಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾಭರಣ ಗುಣಭೂಷಣ ಸುರಾರಿಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರಿಸುಕೋಮಲಶರೀರ ನಿನ್ನದು ಈ ಪರಿ ಸಿರಿಯುದರದೊಳೇ ಸಿರಿಯಧರಿಸಿದ ಪರಿಯದೆಂತುಟೋ ಕೇಳ್ ಹರಿ 4 ಪಯೋಧಿತನಯಾ ವಯೋಸುರೂಪನೆ ದಯಾನಿಧೇ ಧರ್ಮಾತ್ಮನೆ ದಯಾರಸದಿ ಹೃತ್ಪಯೋಜಮಧ್ಯದಿ ನಿಯಾಮಿಸುವ ನಿರ್ಮಾಯನೆ 5 ವರೇಣ್ಯ ಸಜ್ಜನ ಶರಣ್ಯ ಪುಲಿಗಿರಿಯರಣ್ಯ ಮಧ್ಯವಿರಾಜಿತ ಹಿರಣ್ಮಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ 6 ವ್ಯಾಘ್ರನೆಂಬುವತ್ಯುಗ್ರ ದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪ ಸುರಾಗ್ರಗಣ್ಯ ಪುಣ್ಯಾತ್ಮನೆ 7 ಸುರರು ನರರು ನಿನ್ನರಿಮೆಯನರಿಯದೆ ನಿರುತವು ಸನ್ನುತಿಗೈವರೆ ಪರಮಪುರುಷ ಸುಖಕರ ನೀನೆನ್ನುತ ಪರಿಪರಿ ನಿನ್ನನೆ ಪೊಗಳ್ವರೆ 8 ಮೂಜಗ ಮಾಡುವ ಪೂಜೆಯಿಂದ ನೀನೀ ಜಗದಲಿ ಒಲಿದಿರ್ಪೆಯ ಮೂಜಗ ಪೂಜಿಪ ವ್ಯಾಜದಿಂದ ನಿಜಪೂಜೆಯ ನೀ ಕೈಗೊಂಬೆಯ 9 ನಿಜಪದದೊಳು ನೀನಜಭವ ಮುಖಸುರವ್ರಜಗೋಚರನಾಗಿಲ್ಲವೈ ಸುಜನರ ಪೊರೆಯವ ನಿಜಮತಿಯಿಂದಲಿ ತ್ರಿಜಗಕ್ಕೆ ಗೋಚರನಾಗಿಹೈ10 ನಿತ್ಯತೃಪ್ತ ನೀನತ್ಯುತ್ತಮ ನಿಜಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಧರಣಿಯೊಳುರುತರ ಮೆರೆಯುವ ಫಣಿಭೂ ಧರದೊಳು ನಿರುತವು ಭಕ್ತರ ಸಿರಿವಲ್ಲಭ ವರದ ವಿಠಲ ಕರುಣಾಕರ 12
--------------
ವೆಂಕಟವರದಾರ್ಯರು
ಪೊಗಳಲಾಪೆನೆ ಪಾಮರ ಪ್ರಾಣಿ ಪ ಭವ ಒಂಭತ್ತು ಛಿದ್ರದ ನಾವೆಯಲಿ | ಅಂಬಿಗನಾಗಿಹ ಕರುಣದಲಿ 1 ದಶಮನಪರಿ ತನ್ನತಾಮರೆದಾ | ಸ್ವಸುಖ ನೀಡಿದ ನಿಜವಾದಾ2 ಹರಿಭಕುತಿಯ ಕೀಲವ ತೋರಿ | ಗುರುಮಹೀಪತಿ ಸ್ವಾಮಿ ಉದಾರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯತಿಕಕ್ಷೆ - ದಾಸಕಕ್ಷೆ ಮುನಿಜನರ ನೆನೆಸಿ ಜನರೂ | ಮುನಿ ಜನರ ನೆನೆಸಿ ಬಿಡ | ದನುದಿನದಲಿ ನಿಮ್ಮ | ಮನ ಮಲಿನ ಪೋಗಿ ಸ | ವನಧಿ ಹರಿವೊಲಿದು | ಘನವಾಗಿ ಪಾಲಿಸುವನು ಪ ವಿಶ್ವ | ಮಿತ್ರ ಮೈತ್ರಾವಾರುಣಿ ಭೃಗು | ವೀತಿ ಹೋತ್ರ ಕಪಿ ಗಾಗ್ರ್ಯ ಗಾಲವ | ಗರ್ಗಗಾರ್ಚಮಾ || ಪತ್ರ ಫಾಲಾಶವಟು | ಶಾಂಡಿಲ್ಯ ಶಕಟ ಸು | ಕೃತಿ ಗೋತ್ರ ಗೌರೀವೀತಹವ್ಯ | ಕಪಿ ಶಂಖಕಟ ಮೈತ್ರಾವರುಣವಾಧುಳಾ || 1 ಉಪಮನ್ಯು ಶಂಕು ಉದ್ದಾಲಕ ಕೌಂಡಿಣ್ಯ | ಅಪುನವಾನ ಅತಿಥಿ ಪಾಂತುಚಾವನ ಚವನ | ಕ | ಶ್ಯಪ ಪೂತಿಮಾಷರೈಭ || ವಿಪುಳ ಜಮದಗ್ನಿ ವಾಲ್ಮಿಕಿ ರೇಭ ಜಾಬಾಲಿ | ಸ್ವಪನ ಸಾತ್ಯಕಿಯು ಸಾಮ್ಯಾಳ ದೇವರತತಿ | ಕಪಿಕುತ್ಸ್ನ ಪೌರಕುತ್ಸಾ 2 ಮುನಿಮಾದ್ರಮ ಶಣಶರ್ಮ ಬಾದರಾಯಣ | ಕನಕ ಕಾತ್ಯಾಯನ ಮಾರ್ಕಾಂಡ್ಯ ಮಾಂಡವ್ಯ | ತೃಣಬಿಂದು ಭಾಷ್ಕಾಳಾಖ್ಯ || ಪನಸ ಅಘಮರ್ಷಣ ಪ್ರಮಧ ಪ್ರಾಗಾಧ ಜೀ | ವನಯಾಜ್ಞವಲ್ಕ್ಯ ಜಿವಂತಿ ಮಾತಂಗ ಶೋ | ದನ ಧೌಮ್ಯ ಆರ್ಯ ರುಚಿರಾ || 3 ವಾಸಿಷ್ಟ ಶ್ರೀವತ್ಸ ಲೋಹಿತಾಷ್ಯಕಶರ್ವ | ಕರ್ದಮ ಮರೀಚಿ ಪಾ | ಬೇಷಿ ಜಾವಾಯುಲಿಕೆಯೂ || ಭೂಷಣೌ ಬಾರ್ಹಸ್ಪತ್ಯದಾಲ್ಭ್ಯ ಸುಯಜ್ಞಾಜ್ಞಿ | ವೇಶ್ಯ ಮುಖ ಸಪರಿಧಿಸಾಲಂಕಾಯನಾ ಧರ್ಮ | ನಾಶಯ ದೇವಶ್ರವತಾ ||4 ಶ್ರವ ಪೂರ್ಣವಾಹಕ ಕೃತು ಅಂಗಿರಸಾಂಗಿರಾ || ಲವ ಶಮನ ಋಷಿಶೃಂಗ || ಕವಿ ವೇದಶಾಲ ವಿಶಾಲ ಕೌಶಿಕ ಶುಚಿ | ಭುವನ ಉರ್ಜಯನ ಮಾಹಋಷಿಭಹುದ ಸಂ | ಭವಸ್ತಂಭ ಕಿರಾಠಿ ಕಪಿಸೇನ ಶಾಂಡಿಲ್ಯ | ಪವನದಮ ಬೀಜವಾಪಿ || 5 ಉಲಿಖಲು ಧನಂಜಯ ವಾಲಿಖ್ಯಮಾಯ | ಕಲಿಕಿ ಸೃಂಗಿ ಮಧು ಚಂದವಿತನು ಬಹು | ಶರಭ || ಪುಲಸ್ತ್ಯ ದಧೀಚಿ ಕಥಾಸೂನು ಸೇವಾಸ್ಯ ಮಾ | ದ್ಗಲ ವಿಷ್ಣು ತ್ರಿಧಕುಕ್ಷಿ ಶುಕ್ಷ ಮನತಂತು | ಬಲವೀರ್ಯ ಬಬ್ರಾಮೇನೂ6 ಅಪವರ್ಗ ಹಿರಣ್ಯನಾಭ ಅ | ದ್ಭುತ ಅಜಾಮೀಡ ಪರ್ವತ ಶ್ವೇತಕೇತಮಾಹ || ಸತ್ಯವ್ರತ ಶ್ರ್ರುತಿದೃತಿ ಆಯತಾ || ಶ್ರುತಿಕೀರ್ತಿ ಸುಪ್ರಭಾವತ್ಸ ಮೃತಾಂಡ ಸೂ | ಕ್ರೋಢ ಕೋಲ ಗೋಬಲ ಮಾತೃಕಾನಂದ || ಕಥನ ಸರ್ವಸ್ಥಂಬವಾ 7 ನೈಧ್ರುವಾ ದೀರ್ಘತಮ ಜಮದಗ್ನಿ ಕಾರುಣಿ | ಸದ್ಮುನಿಕಾಂಡಮಣಿ ಮಾಂಡವ್ಯವಾಚÀಸಕ | ಶಿದ್ಧಿಸನಕಸ ನಂದನಾ || ವಿದ್ಯಾಂಗ ಹವ್ಯರೋಹಿತಶರ್ಮ ಸೂಕರ್ಮ | ಮೇಧ ಮೇಧ ಪ್ರ | ಶುಕ ಬುದ್ಧಿ ಸಮೇಧ ಪೇರ್ಮಿ 8 ಪಂಚ ಪಂಚಾಸಪ್ತ ಅಪ್ಟ ಕಾಲದಲಿ ಪ್ರಾ | ಪಂಚದೊಳು ತೊಡಕದಲೆ ಬುದ್ಧಿ ಚಿತ್ತದೊಳಿಟ್ಟು | ಗಿದ್ದವರ ಕೊಂಚ ಮುನಿಗಳ ಪೇಳಿದೆ || ವಂಚನೆಯಿಲ್ಲದೆ ಸ್ಮರಿಸಿ ಮಧ್ವಮತಪೊಂದಿ | ಸಂಚಿತಾಗಮ ಕಳೆವ ಸರ್ವಸುಖವೀವ ವಿ | ಮಿಂಚಿನಂದದಿ ಪೊಳೆವನು 9
--------------
ವಿಜಯದಾಸ
351ಆದಿತ್ಯದೇವ ತ್ವತ್ಪಾದಯುಗಳಕಭಿ ವಾದನವ ಮಾಳ್ಪೆ ಅನುದೀನ | ಅನುದೀನ ಸಜ್ಜನರ ವ್ಯಾಧಿಯ ಕಳೆದು ಸುಖವೀಯೊ 1 352ಸಂಜ್ಞಾರಮಣ ನಿನಗೆ ವಿಜ್ಞಾಪಿಸುವೆನೊ ಸ ರ್ವಜ್ಞ ನೀನೆಂದು ಸರ್ವತ್ರ | ಸರ್ವತ್ರ ಎನಗೆ ಬ್ರ ಹ್ಮಜ್ಞಾನ ಭಕುತಿ ಕರುಣೀಸೊ 2 353 ಸೂರಿಗಮ್ಯನೆ ವಾಕ್ಶರೀರ ಬುದ್ಧಿಜವಾದ ಪಾರ ದೋಷಗಳನೆಣಿಸಾದೆ | ಎಣಿಸಾದೆ ಭಗವಂತ ನಾರಾಧನೆಯನಿತ್ತು ಕರುಣೀಸೊ 3 353 ರೋಹಿಣೀರಮಣ ಮದ್ದೇಹಗೇಹಾದಿಗಳ ಮೋಹ ಪರಿಹರಿಸಿ ಮನದಲ್ಲಿ | ಮನದಲ್ಲಿ ಎನಗೆ ಗರುಡ ವಾಹನನ ಸ್ಮರಣೆಯನು ಕರುಣೀಸೊ 4 354ಕ್ಷೀರಾಬ್ದಿಜಾತ ಮಾರಾರಿಮಸ್ತಕಸದನ ವಾರಿಜೋದ್ಭವನ ಆವೇಶ | ಆವೇಶಪಾತ್ರ ಪರಿ ಹಾರ ಗೈಸೆನ್ನ ಭವತಾಪ 5 355 ದತ್ತದೂರ್ವಾಸನನುಜ ಅತ್ರಿಸಂಭವನೆ ತ್ವ ದ್ಭøತ್ಯ ನಾನಯ್ಯ ಎಂದೆಂದು | ಎಂದೆಂದು ಪ್ರಾರ್ಥಿಸುವೆ ಹೃತ್ತಿಮಿರ ಕಳೆದು ಸಂತೈಸೊ 6 356 ಕೋಲ ಭೂನಂದನ ಪ್ರವಾಳ ಸಮವರ್ಣ ಕರ ವಾಳ ಸಮಖೇಟ ನಿಶ್ಯಂಕ | ನಿಶ್ಯಂಕನಾಖ್ಯ ಸುರ ಮೌಳಿ ನೀಯೆನ್ನ 7 357 ಮಂಗಳಾಹ್ವಯನೆ ಸರ್ವೇಂಗಿತಜ್ಞನೆ ಅಂತ ರಂಗದಲಿ ಹರಿಯ ನೆನೆವಂತೆ | ನೆನೆವಂತೆ ಕರುಣಿಸೊ ಅನುದಿನ 8 358 ಭೌಮರಾಜನೆ ತ್ವನ್ಮಹಾಮಹಿಮೆ ತುತಿಸಲ್ಕೆ ಪಾಮರನಿಗಳವೆ ಎಂದೆಂದು | ಎಂದೆಂದು ಸಜ್ಜನರ ಕಾಮಿತಾರ್ಥವನೆ ಕರುಣೀಸೊ 9 359 ಬುಧನೆ ನೀ ಸುಗುಣವಾರಿಧಿಯೆಂದು ಬಿನ್ನೈಪೆ ಕ್ಷುಧೆಯ ಸಂಹರಿಸಿ ಸುಜ್ಞಾನ | ಸುಜ್ಞಾನ ಸದ್ಭಕ್ತಿ ಸುಧೆಯ ಪಾನವನೆ ಕರುಣೀಸೊ 10 360 ಚಂದ್ರನಂದನ ಸತತ ವಂದಿಸುವೆ ಮನ್ಮನದ ಮಮದೈವ ಸರ್ವ ಗೋ ವಿಂದನಹುದೆಂದು ತಿಳಿಸಯ್ಯಾ 11 361 ತಾರಾತ್ಮಜನೆ ಮಚ್ಛರೀರದೊಳು ನೆಲೆಗೊಂಡು ತೋರು ಸಜ್ಜನರ ಸನ್ಮಾರ್ಗ | ಸನ್ಮಾರ್ಗ ತೋರಿ ಉ ದ್ಧಾರಗೈಸೆನ್ನ ಭವದಿಂದ 12 362 ನತಿಸಿ ಬೇಡುವೆ ಬೃಹಸ್ಪತಿ ಗುರುವೆ ಎನ್ನದು ರ್ಮತಿಯ ಪರಿಹರಿಸಿ ಸುಜ್ಞಾನ ಸುಜ್ಞಾನವಿತ್ತು ಶ್ರೀ ಪತಿಯ ತೋರೆನ್ನ ಮನದಲ್ಲಿ 13 363 ಸುರರಾಜಗುರುವೆ ತ್ವಚ್ಚರಣಾರವಿಂದಗಳಿ ಗೆರಗಿ ಬಿನ್ನೈಪೆ ಇಳೆಯೊಳು ಇಳೆಯೊಳುಳ್ಳಖಿಳ ಬ್ರಾಹ್ಮ ಣರ ಸಂತೈಸೋ ದಯದಿಂದ 14 364 ತಾರಾರಮಣನೆ ಮದ್ಬಾರ ನಿನ್ನದೊ ಮಹೋ ದಾರ ನೀನೆಂದು ಬಿನ್ನೈಪೆ | ಬಿನ್ನೈಪೆ ದುರಿತವ ನಿ ವಾರಿಸಿ ತೋರೊ ತವರೂಪ 15 365 ಶಕ್ರಾರಿಗಳ ಗುರುವೆ ಶುಕ್ರಮುನಿರಾಯ ದರ ಚಕ್ರಾಬ್ಜಪಾಣಿ ಗುಣರೂಪ | ಗುಣರೂಪ ವ್ಯಾಪಾರ ಪ್ರಕ್ರಿಯವ ತಿಳಿಸೊ ಪ್ರತಿದೀನ 16 366 ಕವಿಕುಲೋತ್ತಂಸ ಭಾರ್ಗವ ಬೇಡಿಕೊಂಬೆ ಭಾ ಗವತ ಭಾರತ ಮೊದಲಾದ | ಮೊದಲಾದ ಶಾಸ್ತ್ರಗಳ ಶ್ರವಣ ಸುಖವೆನಗೆ ಕರುಣೀಸೊ | 17 367 ನಿಗಮಾರ್ಥ ಕೋವಿದನೆ ಭೃಗುಕುಲೋತ್ತಂಸ ಕೈ ಮುಗಿದು ಬೇಡುವೆನೊ ದೈವಜ್ಞ | ದೈವಜ್ಞ ಹರಿಯ ಓ ಲಗದಲ್ಲಿ ಬುದ್ಧಿಯಿರಲೆಂದು 18 368 ತರಣಿನಂದನ ಶನೈಶ್ಚರ ನಿನ್ನ ದಿವ್ಯ ಪದಾಬ್ಜ ಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಬಹುಜನ್ಮಕೃತ ಪಾಪ ತ್ವರಿತದಿಂದಿಳಿಸಿ ಪೊರೆಯೆಂದು 19 369 ಛಾಯಾತನುಜ ಮನೋವಾಕ್ಕಾಯ ಕ್ಲೇಶಗಳಿಂದ ಸಮಯದಿ ಶ್ರೀ ಲಕ್ಷ್ಮೀನಾ ರಾಯಣನ ಸ್ಮರಣೆ ಕರುಣೀಸೊ 20 370 ಇದನೆ ಬೇಡುವೆ ಪದೇಪದೆಗೆ ಪುಷ್ಕರನ ಗುರುವೆ ಹರಿಮೂರ್ತಿ ಕೀರ್ತನೆಗೆ ಳೊದಗಲೆನಗೆಂದು ಬಿನ್ನೈಪೆ 21 371ಅಹಿಕ ಪಾರತ್ರಿಕದಿ ನರಹರಿಯದಾಸರ ನವ ಗ್ರಹದೇವತೆಗಳು ದಣಿಸೋರೆ | ದಣಿಸೋರೆ ಇವರನ್ನು ಅಹಿತರೆಂದೆನುತ ಕೆಡಬೇಡಿ22 372 ಜಗನ್ನಾಥವಿಠ್ಠಲನ ಬದಿಗರಿವರಹುದೆಂದು ಹಗಲಿರುಳು ಬಿಡದೆ ತುತಿಸುವ | ತುತಿಸುವ ಮಹಾತ್ಮರಿಗೆ ಸುಗತಿಗಳನಿತ್ತು ಸಲಹೋರು 23
--------------
ಜಗನ್ನಾಥದಾಸರು
ಅಂಗನೆ | ನಮ್ಮ ರಂಗನೆ | ಮುನಿದನ್ಯಾತಕೆ ಪ್ರಾಣಲಿಂಗನೆ ಪ ನಿಜವಾದ ವಾಜಿಯ ಮಾಜುತ ಪೇಳಲು |ಸೋಜಿಗ ಮಾಡಲು ಮಂಗನೇನೆ ? 1 ಕೊಳಲನೂದಲು ಬಳಲದೆ ಮನವಿಟ್ಟು |ಕೇಳಲು ಮರುಳ ಕುರಂಗನೇನೆ ? 2 ಬಿಡದೆ ರಮಣಿಯನ್ನು ಎಡದಲ್ಲಿ ಬಿಡುವನು |ಮಡದಿ ಮಾರ್ಗದೊಳು ಹಂಗವೇನೆ ? 3 ಕೈಯಲ್ಲಿ ನೆರೆಯದೆ ಮೈಯಲ್ಲಿ ತೋರದೆ |ಸುಯ್ಯಲು ಬಿಡಲು ಭುಜಂಗನೇನೆ ? 4 ತಕ್ಕಾದ ನುಡಿಯನು ರುಕ್ಮೇಶನಾಡದೆ |ಅಕ್ಕ ಮಿಕ್ಕದ ವಿಹಂಗನೇನೆ ? 5
--------------
ರುಕ್ಮಾಂಗದರು
ಅಂಜಿಕೆಯಾಗುತಿದೆ ುದನೋಡಿ ಅಂಜಿಕೆಯಾಗುತಿದೆಮಂಜಿನಂದದ ಮಾಯೆ ರಂಜನೆಯಾಗಿ ರಂಜನನರಿಯದಿರೆ ಪಹುಸಿಯೆಂದು ಶ್ರುತಿ ಸಾರ್ದರೂ ತಾನೊಮ್ಮೆ ನಸಿಯದೆ ನಿಜದಂತಿರೆಹೊಸದು ಕಟ್ಟಿದ ಬಲೆ ಹೊದಿಸಿದಂದದಿ ಮತ್ತೂ ಹೊಸಹೊಸತಾಗಿರಲುಹಸಿವು ತೃಷೆಗಳೆಂಬಿವು ದಿನದಿನ ಹಸಗೆಡಿಸುತಲಿರಲುಕುಸುಮಬಾಣನ ಕಾಟ ಕುಸಿಯ ಮೆಟ್ಟಲು ಮನ ಮಸಿಯಾಗಿ ಮುದ್ರಿಸಲು 1 ಪೇಳ್ವದು ಪರತತ್ವವು ಬುದ್ದಿಯ ಬಾಳ್ವಿಕೆ ಬಹು ಬದ್ಧವುಕೋಳ್ವೋದ ಶೂರನ ಕಲಿತನದಂತಿದು ಕೀಳ್ವಾಯಕಿಳೀಯುತಿರೆಕೇಳ್ವರೆ ಮಾರ್ಗವನು ಜ್ಞಾನಿಯು ಕೋಳ್ವಿಡಿಯಲಿ ಬದ್ಧನುಹಾಳ್‍ವಾದದಲಿ ಹೊತ್ತು ಹೋಗುತ ನಿಜವಾಗಿ ಆಳ್ವನನರಿಯದಿರೆ 2 ಯೋಗಿಗಳ್‍ಕಾಣದಿರೆ ಕರ್ಮದ ರಾಗಿಗಳ್ ಕಾಳಾಗಿರೆಭೋಗಿಗಳೆಲ್ಲರು ಭಯದಲ್ಲಿ ಮುಳುಗಿರೆ ರೋಗಗಳ್ ಬಹುವಾಗಿರೆಸಾಗದೆ ಮಾರ್ಗವಿರೆ ಪುನರಪಿ ಪ್ರಾಗನೆ ಪಡೆಯುತಿರೆಹಾಗೆ ವಾಸನೆಯನ್ನು ಹೊದ್ದಿ ಮತ್ತತಿಶಯವಾಗಿಯೆ ವರಕೊಂಡಿರೆ 3ಧರ್ಮವ ಮಾಡದಿರೆ ಮನ ಪಾಪ ಕರ್ಮವ ಕೂಡುತಿರೆದುರ್ಮಾರ್ಗವೆಂದರೆ ದೃಢವಾಗಿ ನಲಿದು ವಿಕರ್ಮಕ್ಕೆ ವೊಡಲಾಗಿರೆಹಮ್ಮನು ನೆಗ್ಗಿದರೆ ಹೋಗದೆ ಬಿಮ್ಮಾಗಿ ಬೆಳೆಯುತಿರೆನೆಮ್ಮುತ ವಿಷಯವ ನೆನೆಯುತಲೀ ಪರಿ ಹೆಮ್ಮೆಯೆ ಹೆಚ್ಚುತಿರೆ 4ಮೊಳೆಯುತ ಮೇಲ್ಮುಟ್ಟಿರೆ ಹಮ್ಮಿದು ಬೆಳೆಯುತ ಬೇರ್ಬಿಟ್ಟಿರೆಕಳಚಿದರ್ಕೆಡದಾಶೆ ಕಾಲ್ಕಟ್ಟಿ ಕೆಡಹಿರೆ ತಳತುದಿ ತೋರದಿರೆಅಳಿಯುವದೆಂದಿಗಿದು ಸುಖ ತಾನು ಹೊಳೆಯುವದೆಂದಿಗದುನಳಿನಾಕ್ಷ ತಿಳುಹಿಸು ನಂಬಿದೆ ತಿರುಪತಿನಿಳಯ ವೆಂಕಟನಾಥನೆ 5ಕಂ||ಎಡೆಬಿಡದನುತಪಿಸುತ ಪದವಿಡಿದೆರಗಿಯೆ ಬಿನ್ನವಿಸಲು ತಿರುಪತಿಯೊಡೆ ಯಂಕಡು ಕರುಣದಿಂದ ಗುರುತನು ವಿಡಿದಭಯವನಿತ್ತ ನುಡಿಯನನುವದಿಸುವೆನಾಂ ಓಂ ಪರಸ್ಮೈಬ್ರಹ್ಮಣೇ ನಮಃ
--------------
ತಿಮ್ಮಪ್ಪದಾಸರು
ಅಡಿಗೆಯನು ಮಾಡಬೇಕಣ್ಣ - ನಾನೀಗ ಜ್ಞಾನದಡಿಗೆಯನು ಮಾಡಬೇಕಣ್ಣ ಪ ಅಡಿಗೆಯನ್ನು ಮಾಡಬೇಕುಮಡಿಸಬೇಕು ಮದಗಳನ್ನುಒಡೆಯನಾಜ್ಞೆಯಿಂದ ಒಳ್ಳೆಸಡಗರದಲಿ ಮನೆಯ ಸಾರಿಸಿ ಅ ತನ್ನ ಗುರುವ ನೆನೆಯ ಬೇಕಣ್ಣತನುಭಾವವೆಂಬ ಭಿನ್ನ ಕಲ್ಮಶವಳಿಯ ಬೇಕಣ್ಣಒನಕೆಯಿಂದ ಕುಟ್ಟಿಕೇರಿ ತನಗೆ ತಾನೆ ಆದ ಕೆಚ್ಚನನುವರಿತು ಇಕ್ಕಬೇಕು ಅರಿವರ್ಗವೆಂಬ ತುಂಟರಳಿಸಿ 1 ತತ್ವಭಾಂಡವ ತೊಳೆಯ ಬೇಕಣ್ಣ - ಸತ್ಯಾತ್ಮನಾಗಿಅರ್ತಿ ಅಕ್ಕಿಯ ಮಥಿಸಬೇಕಣ್ಣಕತ್ತರಿ ಮನವೆಂಬ ಹೊಟ್ಟನು ಎತ್ತಿ ಒಲೆಗೆ ಹಾಕಿ ಇನ್ನುಮುತ್ತಿಕೊಂಡಿಹ ಮಮತೆಯನ್ನು ಎತ್ತಿ ಎಸರ ಹಿಂಗಿಸುತಲಿ 2 ಜನನ ಸೊಂಡಿಗೆ ಹುರಿಯಬೇಕಣ್ಣ - ನಿಜವಾಗಿ ನಿಂತುತನುವು ತುಪ್ಪವ ಕಾಸಬೇಕಣ್ಣಕನಕಗಿರಿ ಕಾಗಿನೆಲೆಯಾದಿಕೇಶವನ ದಾಸಕನಕನ ಕಟ್ಟಳೆಯೊಳು ನಿಂತು ಸುಖದ ಪಾಕವ ಚಂದದಿ ಸವಿದುಣ್ಣಲಿಕ್ಕೆ 3
--------------
ಕನಕದಾಸ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅನಾದ್ಯನಂತ ಕಾಲದಲಿ ನೀ ನಿರ್ದೋಷಅನಾಥ ಬಂಧುವೆ ಆಪ್ತ ಕಾಮಅನವರತ ನಿನ್ನಾಧೀನದವನಯ್ಯಕಾಣೆ ನಿನ್ನಗಲಿಪ್ಪ ಕಾಲವನ್ನುಜ್ಞಾನೇಚ್ಛ ಪ್ರಯತ್ನ ಚೇತನ ನಿಷ್ಠವೊ ||ತಾನಾದರಾಗಲಿ ತನ್ನಿಯಾಮಕ ನೀನುಈ ನೀತಿ ಸಿದ್ಧವಾಗಿದೆ ಹಾನಿ ವೃದ್ಧಿಗೆನಾನೆ ಕಾರಣನಲ್ಲಾನಂದ ಮೂರ್ತಿಪ್ರಾಣಾಂತರ್ಯಾಮಿ ಶ್ರೀ ವ್ಯಾಸವಿಠ್ಠಲರೇಯನೀನಿಟ್ಟ ಪರಿಯಲ್ಲಿ ನಿಜವಾಗಿ ಇರುತಿಪ್ಪೆ ||1
--------------
ವ್ಯಾಸವಿಠ್ಠಲರು
ಅರಹು ಅಂಜನಾಗದನಕಾ ಪರಗತಿ ದೊರೆಯದು ಗುರುಕೃಪೆ ಆಗದನಕಾ ಧ್ರುವ ಕಣ್ಣುಕಂಡು ಕಾಣದನಕಾ ಅನುಮಾನ ಹೋಗದು ಉನ್ಮನವಾಗದನಕಾ ಙÁ್ಞನ ಉದಯವಾಗದನಕಾ ಮನ ಬೆರಿಯದು ಘನಮಯಾಶ್ಚರ್ಯವಾಗದನಕ 1 ತನ್ನೊಳು ತಾ ತಿಳಿಯದನಕಾ ಭಿನ್ನವಳಿಯದು ಅನುಭವ ಸುಖ ಹೊಳೆಯದನಕಾ ನೆನವು ನೆಲೆ ಗೊಳ್ಳದನಕಾ ಘನಪ್ರಭೆಯು ಹೊಳಿಯದು ಧ್ಯಾನ ನಿಜವಾಗದನಕ2 ಏರಿ ತ್ರಿಪುರ ನೋಡದನಕಾ ಗುರುಮಹಿಮೆ ತಿಳಿಯದು ತಾ ದೃಢಗೊಳ್ಳದನಕಾ ಮುರು ಹರಿಯಗುಡದನಕಾ ಹರಿಯದು ಜನ್ಮಗುರುಚರಣವ ನೋಡದನಕಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿ ನಿನ್ನ ನಿಜವಾ ಆನಂದಘನವಾ ಚೈತನ್ಯದಿರವಾ ಮರಣರಹಿತವಾ ಆತ್ಮಾನುಭವ ಪ ಮನವಾಣಿ ಮೀರಿ ತನು ಮೂರ ಮೀರಿ ಕಲ್ಪನ ತೀರೀ ತಾ ನಿರ್ವಿಕಾರಿ ಅದೇ ನೀನು ತಿಳಿಯೈ ಇದು ನೀನಲ್ಲ 1 ಜಗವಿದು ಕನಸೋ ಪುಸಿಯೆಂದೆಣೆಸೋ ಮನದಿ ವಿವೇಕವ ಮಾಡಿ ನಿಶ್ಚಯಿಸೋ ಶಂಕರಬೋಧಾ ಇದುವೇ ಮೋದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ