ಒಟ್ಟು 35 ಕಡೆಗಳಲ್ಲಿ , 14 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
ಅಕ್ಕ ಕೇಳೆ ನಿನ್ನ ತಪಸಿಯರೊಳಗೊಬ್ಬ ಮುಕ್ಕಣ್ಣಗೀವರಂತೆ | ವಿಗಡ ಮುನಿಯ ಮಾತಾ ಲೆಕ್ಕಿಸಿ ಮದುವೆಯ ಮಾಡಿಕೊಡುವನಂತೆ 1 ತಲೆಯೆಲ್ಲಾಜಡೆಯಂತೆ | ಅದರೋಳಗ ಜಲವಂತೆ | ತಿಲಕ ಪಣೆಗೆ ಬಾಲಚಂದ್ರನಂತೆ | ಹೊಳೆವ ಕಿಡಿಗಣ್ಣಂತೆ | ನಂಜುಗೊರಳನಂತೆ | ಸಲೆರುಂಡ ಮಾಲೆಯಾ | ಸರವ ಹಾಕಿಹನಂತೆ | 2 ಉರಗಾಭೂಷಣನಂತೆ | ಭಸ್ಮಲೇಪನನಂತೆ | ಕರಿಯ ಚರ್ಮಾರಂಬರದುಡಿಗೆಯಂತೆ | ನಿರುತ ಡಮರು ಬಾರಿಸುವ ಜೋಗಿಯಂತೆ 3 ಅಡವಿ ಗಿರಿಗಳಲಿ ಇಪ್ಪನಂತೆ | ಒಡನೆ ಪುಲಿದೊಗಲದ ಹಾಸಿಗೆ ಇಹುದಂತೆ | ನುಡಿಗೊಮ್ಮೆ ರಾಮ ರಾಮಾಯಂಬ ಸ್ಮರಣೆಯಂತೆ 4 ಆರೊ ಇಲ್ಲದ ಪರದೇಶಿಯಂತೆ | ಭವ |ತಾರಕ ಶಿವನೆಂದು ಮೊರೆಯ ಹೊಗಬೇಕಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1 ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2 ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3 ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4 ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5 ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6 ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7 ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8 ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9 ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10 ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
--------------
ಕನಕದಾಸ
ಏನು ಬಂದ್ಯೋ ಜೀವವೆ ಶರೀರದೊಳು ವ್ಯರ್ಥವಾಗಿಪ. ದಾನಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞÁನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳಸನ್ನಿಧಿಯಲ್ಲಿರಲಿಲ್ಲ ನಿರ್ಮಲಮನದಲಿ ಒಂದುದಿನವಿರಲಿಲ್ಲ 1 ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲಯತಿಯಾಗಿ ತೀರ್ಥಯಾತ್ರೆ ಮಾಡಲಿಲ್ಲಶ್ರುತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲಮೃತವಾಗೋಕಾಲ ಬಂತು ಬರಿದೆ ಮುಪ್ಪಾದೆನಲ್ಲ 2 ಉಂಡು ಸುಖಿ ಅಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆಮೊಂಡಜೋಗಿಗುಣಂಗಳ ಬಿಡಿಸೊ ಹಯವದನ 3
--------------
ವಾದಿರಾಜ
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು
ಒಂದರಿಂ ಸುಖವಿಲ್ಲ ಹುಟ್ಟು ಮೊದಲು ಡಂಭ- ಪ ದಿಂದ ಭೈರೂಪ ತೊಟ್ಟು ತಿರುಗುತಿದೆಅ.ಪ ಬಟ್ಟೆ ಸಂಸಾರ ವಿಷಯ ಕೋಟಲೆಗೊಂಡುನಾಯ್ ಬಾಯ ಕೊಚೆಯಂತೆ ನಸಿಯುತಿದೆ ದೇಹ 1 ಬುದ್ಧಿ ದೃಢ ದುರ್ಮಾರ್ಗದಿಂದ ನೋಡದೆ ಹೋಯ್ತುಶುದ್ಧ ಸತ್ಕರ್ಮವಿಲ್ಲದೆ ಸೂರೆ ಹೋಯ್ತುದುರ್ದೆಸೆಯ ಪಥದ ಲಂಪಟ ಮಾಯಕೆ ಸಿಲುಕಿಮದ್ದಳೆಯ ಇಲಿಯಂತೆ ಆಯಿತೀ ದೇಹ 2 ಭೋಗ ಸಂಗವಮಾಡಿ ಪೋಗಲೈಸಿತು ದೇಹರಾಗಲೋಭವು ಹೆಚ್ಚಿ ವೈರಾಗ್ಯ ಹೊಯ್ತುಆಗಮವ ತಿಳಿಯದೆ ಕೃಷ್ಣನ್ನ ಧ್ಯಾನಿಸದೆಜೋಗಿ ಕೈ ಕೋಡಗನಂತೆ ತಿರುಗುತಿದೆ 3
--------------
ವ್ಯಾಸರಾಯರು
ಗೋಪಿ | ತೋರಿಸೇ || ಅವನ ದೂರಿಂದ ಸಾಕಾರ | ನೋಡುವೆ ಜೋಗಿಯಾ ಪ ಚಿಕ್ಕ ಮಕ್ಕಳು ಅಂಜಿ | ಪಕ್ಕನೆ ಒಳಮನೆ || ಪೊಕ್ಕರು ನೋಡುತಾ || ಮುಕ್ಕಣ್ಣಿನವನ 1 ಎಂದ ಮುದ್ದಿನ ನುಡಿ | ಚೆಂದದಿ ಕೇಳುತ || ಕಂದನೆತ್ತಿಕೊಂಡು | ಬಂದಳೆಶೋದಾ 2 ಇಂದು ಮೌಳಿಯ ನೋಡಿ | ಮಂದಹಾಸದಲಿಂದಾ | ನಂದವ ನಿತ್ತನು | ಬಂದ ಮಹೇಶಗೆ || 3 ಶುಭ | ಚರಣಕೆ ಎರಗುತ || ತೆರಳಿದ ಸಾಂಬನು | ಹರಷದಲಿಂದ 4 ಅನುದಿನ | ಧರೆಯೊಳು ಕಾಂಬುವರ | ಸುಕ್ರತವೆಂತೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ಜೋಗಿ ಬಂದ ಕಾಣೇ ಈತ ಮಹಾಯೋಗಿ ಬಂದ ಕಾಣೇ ಗಗನ ಮಣಿಯ ಮೀರುವ ತೇಜದ ದತ್ತ ದಿಗಂಬರ ನೆನಿಪೆ ನೋಡಮ್ಮಾ ಪ ತವೆ ಸಂಜೆ ಧಾರೆಗಳು ಹೊಳೆವ ಲೊ ಪ್ಪುವ ಕೆಂಜೆಡಿಯಗಳು ಕುವಲಯ ಶಾಮನು ಕಿರೀಟ ಕುಂಡಲದಿಂದ ಠವಠವಿಸುವ ಮೊಗದಾ ನೋಡಮ್ಮಾ 1 ಕೇಶರ ಗಂಧವನು ನುಂಪಿಟ್ಟು ತ್ರಿಸರೋಜ ಮಾಲೆಯನು ಭೂಷಿತ ದಿವ್ಯಾಂಬರ ಕಾಂಚಿ ಧಾಮದಿ ಘೋಷಿಪ ಘಂಟೆಗಳು ನೋಡಮ್ಮಾ 2 ಮೆಟ್ಟಿದ ಪಾದುಕೆಯಾ ರತನದ ಬೊಟ್ಟಿಲಿ ಜಪ ಮಾಲೆಯಾ ನೆಟ್ಟನೆ ನೆನೆವ ರುದ್ಧರಿಸಲು ತಾರಕ ಸೃಷ್ಟಿಗೆ ಗುರುವಾಗಿಹ ನೋಡಮ್ಮಾ 3 ಆದಿ ಯೋಗವನು ಪ್ರಕಟಿಸಿ ಹಾದಿಯ ತೋರುವನು ದ್ವಾದಶ ನಾದದ ಭೇದ ತೋರುವ ಶಂಖ ನೂಡುತ ನಲಿಯುತಲಿಹ ನೋಡಮ್ಮಾ 4 ಮೂರ್ತಿ ಚಿ-ಹ್ನವನು ದೋರುವಾ ಶ್ರೀ ಮನೋರಮ ದೇವನು ನೇಮದ ಮಹಿಪತಿ ನಂದನ ಪ್ರಭು ಭಕ್ತ ಕಾಮಿತಾರ್ಥವ ನೀಡುವ ನೋಡಮ್ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋಗಿ ಬಂದನೋಗೋವಿಂದಾ | ನಮ್ಮ | ಬಾಗಿಲಿಗೆ ನಡೆತಂದಾ || ಬೇಗನೇ ಪವಡಿಸು ಕಂದಾ | ನಾನು | ಜೋಗುಳಪಾಡುವೆ ಛಂದಾ || ಗೋಗಮನನಾಗಿ ಶ್ರೀ ಗಿರಿಜೆಯ ಕೂಡಿ | ಯೋಗಿಗಳರಸನು ಝಗ ಝಗಿಸುವ ಪ ಜಡೆಯಲಿಗಂಗೆಯಧರಿಸಿ ಮುಂ | ಗುಡಿಯಲಿ ಚಂದ್ರನನಿಲಿಸಿ | ಫಣಿ ಕುಂಡಲ ವಿರಿಸಿ| ಬಿಡದೆ ವಿಷವನುಂಡು ಕಡುಗಪ್ಪುಗೋರಳಲಿ | ಒಡನೆರುಂಡಮಾಲೆಯ ಗಡಬಡಿಸುವ 1 ಇಟ್ಟವಿಭೂತಿಯತನುವಾ | ಶಿವ | ತೊಟ್ಟರುದ್ರಾಕ್ಷದಿ ಮೆರೆವಾ | ದುಟ್ಟಿಹಹುಲಿಚರ್ಮಾಂಬರವಾ | ನೆಟ್ಟನೆ ಡವರವ | ಮುಟ್ಟಿ | ನುಡಿಸುತಲಿ | ಛಟ ಫಟ ಧ್ವನಿಯಾರ್ಭಟದ ವೈರಾಗಿ2 ಕರದಿಕಪಾಲವ ಪಿಡಿದು | ಸಿಂಧು | ಗೋಕುಲದ ಶಿರಿನೋಡಲಾಗಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋಗಿಯ ನೋಡಿರೇ ತಾಪಸ ಯೋಗಿಯ ನೋಡಿರೇ ಆಗಮನುತ ಗುಣಸಾರಸ್ವಾನಂದಶರವಾ ಭುವನದಿಮೆರವಾ ಪ ಗಿರಿಜೇಶನು ಧರಿಸಿಹ ರುಂಡಮಾಲಾಕೃತಿಯೋ ; ವಿದ್ಯುಲ್ಲತಿಯೋ ಭೂಷಣವೋ ; ತಾರಾಗಣವೋ 1 ಶ್ರೀ ಮಹಾದೇವನ ನಂಜು ಗೊರಳಠವಠವಿಯೋ : ಮೇಘ ಚ್ಛವಿಯೋ ತರಣಿಯ ಸದನೋ ಕಾಮಶಲಭನುಹಿದ ಭಾಲಾಕ್ಷದ ಇರವೋ; ದೀಪಾಂಕುರವೋ; ವ್ಯೋಮನದಿಯ ಆವರಿಸಿಹ ಭವನ ಕಂಜೆಡಿಯೋ: ಹವಳದ ಕುಡಿಯೋ 2 ಕರ ಡಮರದ ನಾದಸ್ಪರಣೋ : ಘನವ್ಯಾಕರಣೋ: ಕರ್ಪುರ ಗಿರಿಯೋ; ಸುರಕುಜ ಪರಿಯೋ: ಗುರವರ ಮಹಿಪತಿ ನಂದನ ತಾರಕ ಶಿವನೋ: ನಿಜ ಬಾಂಧವನೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೆಗೆ ತೆಗೆ ಬಾಗಿಲನ್ನು ಲಕ್ಷ್ಮೀಪತಿ ತೆಗೆ ತೆಗೆ ಬಾಗಿಲನ್ನು ಪ ತೆಗೆ ತೆಗೆ ಬಾಗಿಲ ಜೋಗಿ ಕೇಶವದಾಸ ನಗುತ ಬಂದಿರುವನು ಸ್ವೀಕರಿಸಿನ್ನು ಅ.ಪ. ಹÉೀಸಿ ಸಂಸಾರವನ್ನು ತ್ಯಜಿಸಿ ಬಿಟ್ಟು ಆಶೆಪಾಶೆಗಳನ್ನು ಸಾಸಿಮೆ ಕಾಳಿಗೆ ಸರಿಮಾಡಿ ಭವವನ್ನು ವಾಸುಕಿ ಶಯನ ಶ್ರೀ ಲೋಲನ ನಂಬೀ 1 ನಿನ್ನಯ ಭಜನೆಯನು ಮಾಡುತ ಬಂದೆ ನಿನ್ನಯ ಸ್ಮರಣೆಯನು ಪನ್ನಗ ಶಯನ ಶ್ರೀ ದಾಸದಾಸರ ಪೋಷ ಮನ್ನಿಸಿ ನೋಡಲು ಚರಣವ ನಂಬೀ 2 ನಿನ್ನಯ ಲೀಲೆಯಲ್ಲೀ ವೇಷವ ಹಾಕಿ ನಿನ್ನ ನಾಟಕದಲ್ಲಿ ಚನ್ನಾಗಿ ಕುಣಿದು ಲೋಕದೊಳಹÀುತಿಯನಾಗಿ ಚನ್ನಕೇಶವ ಸೂತ್ರಧಾರನ ನಂಬೀ 3
--------------
ಕರ್ಕಿ ಕೇಶವದಾಸ
ನಿನ್ನ ಮಹಿಮೆ ತಿಳಿಯುವುದೊಂದಗಾಧ ದೇವ ಉನ್ನತೋನ್ನತಚರಿತ ನುತಸಹಜಭಾವ ಪ ಯೋಗಿ ನೀನಾದಯ್ಯ ಜೋಗಿಯೆಂದೆನಿಸಿದಿ ಆಗಾಧ ದೇಹ ತಾಳ್ದಿ ಬಾಗಿಲವ ಕಾಯ್ದಿ ಮಿಗಿಲಾದ ರೂಪಾದಿ ಜಗವ ಪಾಲಿಸಿದಿ 1 ಕರುಣದಿಂದಾಳಿದಿ ವರವಿತ್ತು ಕಳುಹಿದಿ ಧರೆಗೆ ಭಾರೆನಿಸಿದಿ ತಿರುಗಿ ನೀ ಮುನಿದಿ ಘಟ ನೀಡ್ದಿ ಪರಮಭಟನೆನಿಸಿದಿ ಶರಗಳನು ಪೋಣಿಸಿದಿ ಧುರದೊಳಗೆ ಕೊಂದಿ 2 ತಮ್ಮನ ಪಕ್ಷ್ಹಿಡಿದಿ ತಮ್ಮನಣ್ಣನಕೊಂದಿ ತಮ್ಮಗಧಿಕಾರ ಗೈದಿ ಸಮ್ಮತದಿ ಕಾಯ್ದಿ ತಮ್ಮನಿಗೆ ಭಾವನಾದಿ ತಮ್ಮನಿಗೆ ಬೋವನಾದಿ ತಮ್ಮನಿಂ ಕೊಲ್ಲಿಸಿದಿ ಸಮ್ಮತವ ಗೈದಿ 3 ಮಾವಗಳಿಯನಾದಿ ಮಾವಗೆ ವೈರ್ಯಾದಿ ಮಾವನ ಕುಲವಳಿದಿ ತಾಯನ್ನ ಕಾಯ್ದಿ ಗೋವು ಪಾಲಕನಾದಿ ಗೋವಿಗೆ ಮಗನಾದಿ ಗೋವುಗಳನಾಳಿದಿ ಗೋವುಕುಲ ಪೊರೆದಿ 4 ಮೀನಾದಿ ಕೂರ್ಮಾದಿ ದಾನ ಬೇಡುವನಾದಿ ಕಾನನ ಮೃಗನಾಗಿ ಧ್ಯಾನಿಪರಕಾಯ್ದಿ ದೀನಪಾಲನೆ ನಿನ್ನ ಜಾಣಮಹಿಮಂಗಳನ್ನು ಹೀನರರಿವರೆ ಮಮಪ್ರಾಣ ಶ್ರೀರಾಮ 5
--------------
ರಾಮದಾಸರು
ಬಾಗೋ ಬಾಗೋ ಜೀವನೇ ಸಾಗರನಿಲಯಗೆ ಪ ಬಾಗೋ ಮನಸಿನ ನೀಗಿ ಕಲ್ಮಷ ಬೇಗ ತಿಳಿದು ನೀಜೋಗಿವಂದ್ಯಗೆ ಅ.ಪ ಕನಸಿದು ಜಗಮೋಹ ಕಾಣು ಕಾಣೋ ನಿನಗೆ ವೈಕುಂಠ ಒಂದೇ ಗೇಣೋ ಚಿನುಮಾಯಾತ್ಮನ ತ್ವರ ಕಾಣು ಕಾಣೋ ತನುಮನವರ್ಪಿಸಿ ನೆನವು ನಿಲ್ಲಿಸಿ ನಿಜ ಘನಮಹಾತ್ಮನ ಹಿಡಿ ಖೂನ ಖೂನೋ 1 ಕಾಯ ಕಾಯ ಗುರುತಿಟ್ಟರಿಯಿದರ ನೆಲೆಯ ನೆಲೆಯ ಮರುಳನೆ ನರಕದ ಕುಣಿಯು ಕುಣಿಯೋ ನೆರೆದು ತೋರಿ ಸಂತೆ ಹರಿದು ಹೋಗುವಂತೆ ಧರೆ ನಿನಗೊಂದಿನ ಮಾಯ ಮಾಯ 2 ಬಂದದ್ದು ವಿಚಾರ ಮಾಡೋ ಮಾಡೋ ಇಂದಿನ ಸಮಯ ಕಳಿಬೇಡೋ ಬೇಡೋ ಬಂಧುರಸುಖಕೆ ಮನ ನೀಡೋ ನೀಡೋ ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಚರಣವ ಪಾಡೋ ಪಾಡೋ 3
--------------
ರಾಮದಾಸರು
ಮೋಸ ಪೋದೆಯಲ್ಲೇ ಭಾಸುರಾಂಗಿ ನೀನು ಪ ಕಾಶಿ ನಿವಾಸಿ ವಿಶ್ವೇಶ್ವರನಹುದೆಂದು ಅ.ಪ. ವಿಶ್ವೇಶ್ವರನವನಲ್ಲ ತಿಳಿದು ನೋಡು ನೀನು ವಿಶ್ವಪತಿಯಾ ವಿಷ್ಣುವಿನಡಿಯಾಳು ಅವನು ಸುಸ್ವಭಾವದ ಸರಳ ಹೃದಯಾನ್ವಿತಳು ನೀನು ಕಪಟ ಕಿರಾತನವನು 1 ತ್ರಿಪುರ ಸುಂದರಿಯೆಂಬ ಬಿರುದು ಪೊತ್ತಿಹೆ ನೀನು ಕಪಟ ವೇಷದೊಳು ಬಂದ ವಿಷಕಂಠನವನು ಚಪಲಾಕ್ಷಿಯೆ ನಿಜಸ್ಥಿತಿ ಅರಿಯಲಿಲ್ಲ ನೀನು ಗುಪಿತದಲಿ ನಿನ ಕಂಡು ಮರುಳು ಮಾಡ್ದನವನು 2 ರಾಜರಾಜೇಶ್ವರಿಯಾಗಿ ರಾಜಿಸುವೆ ನೀನು ಭೋಜನಕಾಗಿ ಭಿಕ್ಷ ಬೇಡುವನಲ್ಲೆ ಅವನು ಮೂಜಗವು ಮೋಹಿಸುವ ಕೋಮಲಾಂಗಿಯು ನೀನು ಈ ಜಗವರಿಯೆ ಸರ್ವದ ಭಸ್ಮಾಂಗನವನು 3 ಕನಕ ಮಣಿಮಯದಂತಃಪುರವಾಸಿಯು ನೀನು ಶುನಕ ಗೋಮಾಯ್ಗಳೆಡೆ ಮಸಣವಾಸಿಯವನು ಘನ ವಿಶಾಲಾಕ್ಷಿಯೆ ಮಂದಹಾಸಮುಖಿ ನೀನು ಮಿನುಗುವ ಬೆಸಗಣ್ಣಿನುರಿಮೊಗದೊಳಿಹನವನು 4 ಚಾರು ಪೀತಾಂಬರ ಧರಿಸಿ ಶೋಭಿಸುವೆ ನೀನು ಕೋರಿ ಗಜಚರ್ಮಧರಿಸುವ ಭಿಕಾರಿಯವನು ಭೂರಿ ಸುಖಭೋಗಂಗಳನನುಭವಿಸುವೆ ನೀನು ನಾರಸಿಂಹ ಮಂತ್ರ ಜಪಿಪ ವಿರಾಗಿಯವನು5 ಕರುಣಾ ಕಟಾಕ್ಷದಿಂ ಜಗವ ಪೊರೆದಪೆ ನೀನು ಕರುಣವಿಲ್ಲದೆ ಮೂಜಗವನುರುಹುವನವನು ಪರಮ ಭಕತರಿಗೆ ಮುಕುತಿಪಥ ತೋರುವೆ ನೀನು ನರನಾದ ಭಕ್ತನೊಳು ಹೋರಾಡಿದವನು 6 ಮಂಗಳಪ್ರದೆಯೆಂದು ಖ್ಯಾತಿಗೊಂಡಿರುವೆ ನೀನು ಜಂಗಮ ಜೋಗಿಗಳಿಗೆ ನೆಲೆಯಾಗಿಹನವನೂ ಗಂಗಾಜನಕನ ಪ್ರಿಯತಮ ಸೋದರಿಯು ನೀನು ರಂಗೇಶವಿಠಲನ ಚರಣ ಸೇವಕನವನು 7
--------------
ರಂಗೇಶವಿಠಲದಾಸರು