ಒಟ್ಟು 50 ಕಡೆಗಳಲ್ಲಿ , 14 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ಮಹಿಮಗೆ ಮಂಗಳಾರತಿಯ ಎತ್ತಿದರು 1 ಮತ್ಸ್ಯಾವತಾರ ಶ್ರೀಹರಿಯ ಅಕ್ಷಗಂಗಳದೊಂದು ಬೆಳಕು ನಿತ್ಯವೇದವ ತಂದ ಬೆಳಕು ತುಂಬಿತು ದ್ವಾರಾವತಿಗೆ 2 ಕೂರ್ಮಾವತಾರ ಶ್ರೀಹರಿಯ ಹೇಮಗಿರಿಯ ತಂದ ಬೆಳಕು ಬಲ್ಲಿದ ಕಾಯನ್ನ ಬೆಳಕು ತುಂಬಿತು ದ್ವಾರಾವತಿಗೆ 3 ವರಾಹಾವತಾರ ಶ್ರೀಹರಿಯ ಹೊಳೆದ ಕೋರೆದಾಡೆಯ ಬೆಳಕು ಧಾರುಣಿಯ ನೆಗವಿದ ಬೆಳಕು ತುಂಬಿತು ದ್ವಾರಾವತಿಗೆ 4 ನರಮೃಗರೂಪ ಶ್ರೀಹರಿಯ ಮೆರೆವೊ ನಖದ ಬೆಳಕು ಉರಿಗಣ್ಣು ಜ್ವಾಲೆಯ ಬೆಳಕು ತುಂಬಿತು ದ್ವಾರಾವತಿಗೆ 5 ವಾಮನಾವತಾರ ಶ್ರೀಹರಿಯ ಭೂಮಿಯನಳೆದೊಂದು ಬೆಳಕು ಬಾಲಕ ತನಯನ ಬೆಳಕು ತುಂಬಿತು ದ್ವಾರಾವತಿಗೆ 6 ಭಾರ್ಗವಾವತಾರ ಶ್ರೀಹರಿಯ ಮೆರೆÉವೊ ಬಲುಭುಜದೊಂದು ಬೆಳಕು ದುರುಳ ಕ್ಷತ್ರೆÉೀರ ಗೆದ್ದ ಬೆಳಕು ತುಂಬಿತು ದ್ವಾರಾವತಿಗೆ 7 ದಶರಥತನಯ ಶ್ರೀಹರಿಯ ಎಸೆವೊ ಬಿಲ್ಲುಬಾಣದ ಬೆಳಕು ಶಶಿವದನೆಯ ತಂದ ಬೆಳಕು ತುಂಬಿತು ದ್ವಾರಾವತಿಗೆ 8 ಗೋಪಿ ಮುದ್ದಾಡಿದ ಬೆಳಕು ದೇವಕ್ಕಿತನಯನ ಬೆಳಕು ತುಂಬಿತು ದ್ವಾರಾವತಿಗೆ 9 ಬೌದ್ಧಾವತಾರ ಶ್ರೀಹರಿಯ ಬುದ್ಧಿಪಲ್ಲಟದೊಂದು ಬೆಳಕು ರುದ್ರನ್ನ ಗೆಲಿದೊಂದು ಬೆಳಕು ತುಂಬಿತು ದ್ವಾರಾವತಿಗೆ 10 ಕಲ್ಕ್ಯವತಾರ ಶ್ರೀಹರಿಯ ಹೊಳೆವಾಖಂಡದೊಂದು ಬೆಳಕು ಗುರು ಹಯವದನನ್ನ ಬೆಳಕು ತುಂಬಿತು ದ್ವಾರಾವತಿಗೆ 11
--------------
ವಾದಿರಾಜ
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದಸುಖಾ ಇಂಥಾ ಅಂಥಿಂಥವರಿಗಿಂಥಾದೈಲ್ಲದೆ ನೋಡಿ ಧ್ರುವ ಒಂದೊಂದುಪರಿ ಕೇಳಿಸುವ ಹ ನ್ನೊಂದರ ಮ್ಯಾಲಿನ್ನೊಂದರ ಘೋಷ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಮಿಡುಗತಿಹ್ಯ ಆನಂದಸುಖ 1 ಉದಯಾಸ್ತಿಲ್ಲದೆ ಬೆಳಗಿನ ಪ್ರಭೆಯು ತುದಿಮೊದಲಿಲ್ಲದೆ ತುಂಬಿತು ಪೂರ್ಣ ಬುಧಜನರನುದಿನ ಸೇವಿಸುತಿಹ್ಯ ಸದಮಲವಾದ ಸದಾ ಸವಿಸುಖ2 ವಿಹಿತ ವಿವೇಕದ ಅನುಭವಗೂಡಿ ಬಾಹ್ಯಾಂತ್ರದ ಘನದೋರುತಲಿಹ್ಯ ಸ್ವಹಿತಸುಖದ ಸುಧಾರಸಗರೆವ ಮಹಿಪತಿಗುರು ಕರಣದ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದಿರೆಯೊಡನೆ ನಿಲಯಕೆ ಬಂದಾ ಪ ಬೃಂದಾವನಾಂಚನನು ಶರ ದಿಂದುವದನ ಮುನಿವೃಂದ ನುತಚರಿತ ಅ.ಪ ಗಜ ತುರಗ ಪತಾಕ ತು ತ್ತೂರಿ ವರ ಛತ್ರಿ ಚಾಮರ ತಾಳ ಮೇಳ ಬಿರುದಾವಳಿ ಸಹಿತದಿ ಪೌರಬೀದಿಯಲಿ ಮೆರೆಯುತ ಶೌರಿಯು 1 ಪಾರಿಜಾತ ಸುಜಾತ ಮಲ್ಲಿಕಾ ಚಾರು ಮಾಲತೀಹಾರ ತುಳಸೀ ಹಾರವನರ್ಪಿಸಿ ನೀರಜನಾಭನಿಗೆ ನಾರಿಜನರು ಆರತಿಯನು ಬೆಳಗಿರೆ 2 ವೇದಘೋಷ ಜಯಘೋಷ ಜನರ ಸಂ ತೋಷ ಧ್ವನಿಯು ತುಂಬಿತು ಗಗನ ಯಾದವ ವಂಶ ಪ್ರಸನ್ನನು ಎಮ್ಮವ ನಾದನಿಂದು ಹಿರಿದಾಯಿತು ಜನುಮವು 3
--------------
ವಿದ್ಯಾಪ್ರಸನ್ನತೀರ್ಥರು
ಇಂದು ಕಂಡೆ ಕಣ್ಣಾರೆ ನನ್ನ ಸ್ವಾಮಿಯ ಬಂದ ಜನ್ಮಸಾಫಲ್ಯವಾಯಿತೀಗ ಧ್ರುವ ಮುಂಬಿಗಾಗ್ಯಾವೆನ್ನೊಳು ಸುಉಲ್ಹಾಸ ಅಂಬುಜಾಕ್ಷನ ಕಂಡೆ ಸುಪ್ರಕಾಶ ತುಂಬಿತುಳುಕುತಲ್ಯದ ಬಲುಹರುಷ ಇಂಬುಸಾಲದು ಬ್ರಹ್ಮಾಂಡ ಆಕಾಶ 1 ಎನ್ನಹೃದಯ ಮಂದಿರದೊಳು ನೋಡಿ ತನ್ನಿಂದ ತಾಂ ಬಂದನು ದಯಮಾಡಿ ಕಣ್ಣುಪಾರಣೆಗೈಸಿದೆನ್ನ ಕೂಡಿ ಇನ್ನು ದಣಿಯದೆನ್ನಮನ ಕೊಂಡಾಡಿ 2 ಘನ ಸುಖದೋರುತದೆ ಎನಗಿಂದು ಭಾನುಕೋಟಿ ಉದಯವಾದನೆಂದು ದೀನ ಮಹಿಪತಿಸ್ವಾ,ಮಿ ಕೃಪಾಸಿಂಧು ಮನೋಹರ ಮಾಡಿದ ತಾನೆ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ಗುರುಕೃಪೆಯಿಂದ ದ್ರುವ ಕಣ್ಣಮುಚ್ಚಿದರೆ ತಾ ಕಣ್ಣನೊಳಗದೆ ಕಣ್ದೆರದರೆ ಕಾಣಿಸುತದೆ ಸಣ್ಣ ದೊಡ್ಡದರೊಳು ತುಂಬಿತುಳುಕುತದೆ ಬಣ್ಣ ಬಣ್ಣದಲೆ ಭಾಸುತಲ್ಯದೆ 1 ಆಲಿಸಿಕೇಳಲು ಹೇಳಗುಡುತಲ್ಯದೆ ತಾಳಮೃದಂಗ ಭೇರಿ ಭೋರಿಡುತ ಒಳಹೊರಗೆ ಧಿಮಿಧಿಮಿಗೊಡುತಲ್ಯದೆ ಹೇಳಲಿನ್ನೇನು ಕೌತುಕವ 2 ಸುಳಿ ಸುಳಿದಾಡುತಹೊಳೆಯುತ ಎನ್ನೊಳಗೆ ಥಳಥಳಿಸುವ ತೇಜ:ಪುಂಜವಿದು ಪರಿ ಕಳೆದೋರುತಲ್ಯದೆ ಝಳಝಳಿಸುತ ಎನ್ನ ಮನದೊಳಗೆ 3 ತುತ್ತಾಯಿತಾ ಮಾಡಿನಿತ್ಯ ಸಲುಹುತದೆ ಎತ್ತಹೋದರೆ ತನ್ನಹತ್ತಿಲ್ಯದೆ ದತ್ತವುಳ್ಳವಗೆ ತಾ ಪ್ರತ್ಯಕ್ಷವಾಗ್ಯದೆ ಮೊತ್ತವಾಗ್ಯದೆ ತನ್ನ ನೆತ್ತಿಯೊಳಗೆ 4 ಧನ್ಯಗೈಸಿತು ಎನ್ನ ಪ್ರಾಣ ಜೀವನವಿದು ಚೆನ್ನಾಗಿ ಪೂರ್ಣ ಗುರುಕೃಪೆಯಿಂದ ಕಣ್ಣಾರೆ ಕಂಡೆ ಭಾನು ಕೋಟಿಪ್ರಕಾಶ ನಿಮ್ಮ ಧನ್ಯಧನ್ಯವಾದ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣ ಹಬ್ಬವಾಯಿತು ಎನಗಿಂದು ಧನ್ಯಧನ್ಯಗೈಸಿದ ದೀನಬಂಧು ಧ್ರುವ ತುಂಬಿತುಳುಕುತಲ್ಯದ ಬ್ರಹ್ಮಾನಂದ ಹಂಬಲಿಟ್ಟು ನೋಡನುಭವದಿಂದ ಗುಂಭಗುರತವಾಗದೇ ನಿಜಾನಂದ ನಂಬಿ ನಡಿಯಲಿಕ್ಕಿದೆ ಬಲು ಚಂದ 1 ಕಣ್ಣು ಮುಟ್ಟಿನೋಡಲು ಖೂನಗೊಟ್ಟು ಪುಣ್ಯ ಹೊಳೆಯುತಲ್ಯದೆ ಎದುರಿಟ್ಟು ಎನ್ನ ಮ್ಯಾಲೆ ಸದ್ಗುರು ದಯವಿಟ್ಟು ಚಿನ್ನುಮಯದೋರಿದ ನಿಜಗುಟ್ಟು 2 ಹೇಳಲಿನ್ನೇನದನುಭವಸುಖಾ ಥಳಥಳಗುಡುತದೆ ಕೌತುಕಾ ಕೇಳಿಕೋ ಬೇಕಿದುವೆ ಗುರುಮುಖಾ ಹೇಳಿಕುಡುವ ಮಹಿಪತಿಗುರು ಥೋಕಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಬಹುದಕೆ ಕನ್ನಡಿಯಾಕೆ ಭಿನ್ನವಿಲ್ಲದೆ ನೋಡಿ ತನ್ನೊಳು ಘನಬ್ರಹ್ಮವಿರಲಿಕ್ಕೆ ಅನುಮಾನವು ಬ್ಯಾಡಿಧ್ರುವ ಕುಂಭಿನಿಯೊಳು ಘನಹೊಳೆಯುತ ತುಂಬಿತುಳುಕುತಲ್ಯಾದೆ ಉಂಬವರಿಗಿದಿರಿಡುತ ಬಿಂಬಿಸುತಲ್ಯಾದೆ ಹಂಬಲಿಸಿದರೆ ತನ್ನೊಳಗೆ ತಾ ಗುಂಭಗುರುತವಾಗ್ಯಾದೆ ಇಂಬು ತಾನೆ ಆಗ್ಯಾದೆ 1 ಹೇಳುವ ಮಾತಿನ ಮಾತಿಲ್ಲ ಕೇಳಿರಯ್ಯಾ ಚೆನ್ನಾಗಿ ಒಳ ಹೊರಗಿದು ಭಾಸುತಿ ಹ್ಯ ದೆಲ್ಲಾ ಸುಳವು ಬಲ್ಲಾತ ಯೋಗಿ ಕಳೆಕಾಂತಿಗಳ ಅನುಭವವೆಲ್ಲಾನು ತಿಳಿಯಬಲ್ಲವ ಭೋಗಿ ಹೊಳೆವುತಿಹ್ಯದು ಸರ್ವಮಯವೆಲ್ಲಾ ಮೊಳೆಮಿಂಚು ತಾನಾಗಿ 2 ಇಲ್ಲೆವೆ ಎರಡು ಹಾದಿಯ ಕಟ್ಟಿಗುಲ್ಲುಮಾಡದೆ ನೋಡಿ ಗೋಲ್ಹಾಟ ಮಂಡಲವನು ದಾಟಿ ಅಲ್ಲಿಯೆ ಮಹಿಪತಿ ನೋಡಿ ಅಲ್ಲಿಯೆ ಮನ ತಾಂ ಮನಿಕಟ್ಟಿ ಫÀುಲ್ಲನಾಭನ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ಪ ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ಒರೆದಿತು ಖಗಕುಲ ಸಾಧಿಸಿ ನೋಡಲು ಕೃಷ್ಣನ ಈಗಲೆಸಾಧ್ಯವೆ ನೀ ಬೃಂದಾವನದೊಳು1 ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನಾಆವು ಕಾವುತಲಿ ಗೋವಳರೆಲ್ಲರಹಾವ ಭಾವದಲಿ ಬೃಂದಾವನದೊಳು 2 ಕದಂಬ ವನದೊಳು 3
--------------
ವ್ಯಾಸರಾಯರು
ಕೋಲ ಕೋಲೆನ್ನಿ ಮುತ್ತಿನ ಕೋಲ ಕೋಲೆನ್ನಿಗೋಪಾಲರಾಯನ ನೋಡುವ ಬಾಲೆಯರೆÉ ಬನ್ನಿ ಪ. ದಿಕ್ಕು ತುಂಬಿತು ಈ ದಿಕ್ಕು ತುಂಬಿತುಲೆಕ್ಕವಿಲ್ಲದ ಜನರು ರುಕ್ಮಿಣಿಯ ಮುಯ್ಯಕ್ಕೆ1 ಕಾಶ ತುಂಬಿತು ಎಲ್ಲ ಕೋಶ ತುಂಬಿತು ಆಶೆ ಬಡುತಲೆ ಜನರು ಸೋಸಿನ ಮುಯ್ಯಕ್ಕೆ 2 ಹಾದಿ ತುಂಬಿತು ಎಲ್ಲ ಬೀದಿ ತುಂಬಿತು ಆದರದಿಂದಲೆ ಜನರುಮೋದದಿ ಮುಯ್ಯಕ್ಕೆ 3 ಅಂಬರ ತುಂಬಿತುಸಂಭ್ರಮದಿಂದಲೆ ಜನರು ರಂಭೆಯರ ಮುಯ್ಯಕ್ಕೆ 4 ಪಟ್ಟಣ ತುಂಬಿತು ಒಂದಿಷ್ಟು ಬಿಡದಲೆ ಕೃಷ್ಣ ರಾಮೇಶನ ಜನರು ಶ್ರೇಷ್ಠದ ಮುಯ್ಯಕ್ಕೆ 5
--------------
ಗಲಗಲಿಅವ್ವನವರು
ಗೌರೀದೇವಿ ಮಾತಾಡೇ ಎನ್ನ ಮೌನದ ಗೌರೀ ಯಾತಕಚಲಮನ ಸೋತವನೊಡನೆ ಮಾತಾಡೇ ಗೌರಿ ಮಾತಾಡೇ ಪ ನಸುನಗೆ ಮುಖವಿದು ಬಾಡಿ ಕೆಂದುಟಿಯು ಎಸೆದಿರಲು ನಾನೋಡಿ ವಸುಧೆಯೊಳಗೆ ನಾ ಜೀವಿಸಲಾರೆ ಘಸಘಸವ್ಯಾತಕೆ ತುಂಬಿತÀು ಅರಗಿಣಿ 1 ಕ್ಷಣ ಬಿಟ್ಟಿರಲಾರೆ ಅಮ್ಮ ಷಣ್ಮುಖ ಗಣಪರ ತಾಯೆ ನೀ ಬಾರೇ ವಸುಧೆಯೊಳಗೆ ನಾ ಜೀವಿಸಲಾರೆ ಘಸಘಸವ್ಯಾತಕೆ ತುಂಬಿತು ಅರಗಿಣಿ 2 ಕ್ರೋಧವ್ಯಾತಕೆ ಎನ್ನೊಳು ಗೌರೀ ಏನಪ- ರಾಧವು ಇದ್ದರು ತಾಳೇ ಪಾದ ಕಿಂಕಿಣಿಯೇ ಆದರಿಸುವೆ ನಾ ಆದರಿಸುವೆನೇ 3
--------------
ಶ್ರೀದವಿಠಲರು
ತಿಮಿರ ಭರದಿ ಬಿಟ್ಟೋಡಿತು ಪ ಶ್ರುತಿ ಶಾಸ್ತ್ರವೆಂಬ ಕಂಜಗಳತಿ ರಮ್ಯದಿಂದರಳಿದವುಕ್ಷಿತಿಯೋಳು ಕುಮುದದಂತೆ ದುರ್ಮತಗಳೆಲ್ಲ ಕುಗ್ಗಿದವು ||ಇತರ ದೇವಂಗಳಿಂತು ಭಜಿಸಿದೆ ರಘುಪತಿಯೆ ದೈವ ಮಧ್ವ ಮತವೆ ಸಿದ್ಧಾಂತವುಸತತವನು ಹರಿ ಸರ್ವೋತ್ತಮನೆಂದುತುತಿಸುವ ಕಾಂತಿಯು ತುಂಬಿತು ಜಗದೊಳು 1 ಚಕ್ರವಾಕ ಧ್ವನಿಗೈದವು ||ಸಾರಿ ಸಾರಿಗೆ ಹೊತ್ತು ಯೇರುವ ತೆರದಲಿಶ್ರೀರಮಣನ ಚರಣಾರವಿಂದವು ನಿತ್ಯಆರಾಧಿಸುವ ವಿಚಾರವಿದೆನುತಲಿತಾರತಮ್ಯ ಜ್ಞಾನ ತೋರಿದರಿಳಿಯೊಳು 2 ಅಂದವಾದಲಾದಿನ್ನೆ ಹನುಮಂತನೊಡೆಯ(ಮುಂದಿನ ಪಾದಗಳು ಸಿಕ್ಕಿಲ್ಲ)
--------------
ಮೋಹನದಾಸರು
ತುಂಬಿತು ಬೆಳೆದಿಂಗಳು-ಈ ವನದೊಳುತುಂಬಿತು ಬೆಳೆದಿಂಗಳು ಪ ತುಂಬಿತು ಬೆಳೆದಿಂಗಳೀವನದೊಳಗೆಲ್ಲಅಂಬುಜನಾಥನು ಬಾರ ಕಾಣಕ್ಕ ಅ.ಪ. ಮಾಗಿ ಹೋಗಿ ವಸಂತವು ಬರುತಿದೆಕೋಗಿಲೆ ತುಂಬಿಲ್ಲಿ ಕೂಗುತಿದೆಆಗಲೆ ಎಳೆಮಾವು ತಳಿರೇಳುತಲಿದೆನಾಗಶಯನ ಕೃಷ್ಣ ಬಾರ ಕಾಣಕ್ಕ1 ಕಟ್ಟಿದ್ದ ಬಿಳಿಯೆಲೆ ತೊಟ್ಟಾರುತಲಿದೆಪಟ್ಲ ಜಾಜಿಯ ಮೊಗ್ಗು ಅರಳುತಿದೆಬಟ್ಟೆ ಬಟ್ಟೆಲಿ ನೋಡಿ ಕಣ್ಣು ಝುಮ್ಮಿಟ್ಟಿತುಧಿಟ್ಟತನದ ರಂಗ ಬಾರ ಕಾಣಕ್ಕ 2 ಕಾದ ನೀರು ಎಲ್ಲ ಆರಿ ಹೋಗುತಲಿದೆಕಾಯ್ದ ಮಲ್ಲಿಗೆ ಹೂವು ಬಾಡುತಿದೆಮದನನ ಬಾಧೆಯು ಬಹಳವಾಗಿದೆ ಈಗಮದನನೈಯನು ಕೃಷ್ಣ ಬಾರ ಕಾಣಕ್ಕ3 ಅಡವಿಲಿ ಕೆರೆಕಟ್ಟೆ ಕುಡಿವೋರಿಲ್ಲದೆ ಬತ್ತಿನಡೆವೋರಿಲ್ಲದೆ ದಾರಿ ಹಸಗೆಟ್ಟಿತುಕಾಡಮಲ್ಲಿಗೆ ಹೂವ ಕುಯ್ದು ಮುಡಿವರಿಲ್ಲನೋಡದೆ ಎನ್ನ ಜೀವ ಹಸಗೆಟ್ಟಿತಮ್ಮ 4 ಹಾಸಿದ್ಹಾಸಿಗೆ ಮಂಚ ಹಸಗೆಟ್ಹೋಗುತಿದೆಪೂಸಿದ ಶ್ರೀಗಂಧ ಬೆವರುತಿದೆಲೇಸಾದ ನಮ್ಮೆದೆ ಮಿಂಚೇರುತಲಿದೆವಾಸುದೇವನು ಕೃಷ್ಣ ಬಾರಕಾಣಕ್ಕ 5 ಕಾಯ ಹೊಳವು ಮಾಡಿ ಕುಚವ ಸೋರೆಯಮಾಡಿಮನವೆಂಬ ತಂತಿಯ ಹೂಡಿಕೊಂಡುಎರಡು ಕಂಗಳನ್ನು ಎರಡು ತಾಳವÀ ಮಾಡಿಮೇಳಕೊಪ್ಪುವೆ ರಂಗ ಬಾರ ಕಾಣಕ್ಕ6 ಒಳದೊಡೆ ನಡುಗಿತೆ, ನೆರಿಯು ಹಾರುತಲಿವೆಕಳಕಳಿಸುತಲಿದೆ ಕಳವಳವುಪುಳಕವಾಗುತಲಿದೆ ಕಳೆಯುಗುಂದುತಲಿದೆನಳಿನಾಭನು ಕೃಷ್ಣ ಬಾರ ಕಾಣಕ್ಕ7
--------------
ವ್ಯಾಸರಾಯರು