ಒಟ್ಟು 186 ಕಡೆಗಳಲ್ಲಿ , 58 ದಾಸರು , 170 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(1) ಸತಿ-ಪತಿ ಭಾವದ ಸ್ತುತಿಗಳು (ಜಾವಡಿಗಳು) ಎಂದಿಗೆ ತೀರಿದೆ ಸುಂದರನಾಯಕಿ ಅಂಗಜ ಬಾಣದ ಅತುರವನ್ನೂ ಪ ಚಂದ್ರಮುಖಿಯೇ ನೀ ನಾದಿನ ಹೇಳಲ್ ಬಂದೆನುನಾನಹುದೇ ಭಾವಕರನ್ನೇ ಕುಂದುಗಳನೀಪರಿ ಉಸುರುವೆ ಉಚಿತವೆ ಸಂದಣಿಯಾಗೆನ್ನೊಳಿಂದಿನ ಕಾಲಯೆಂದಿಗೆ 1 ಬಲ್ಲೆನು ನಿನ್ನಂ ಭಾವದ ಸೊಲ್ಲಂ ಬೆಲ್ಲದ ಮಾತನಾಡಿ ಕಳುಹಿಪೆನೇಂ ಬೊಲ್ಲಿದಿಗೆ ಸಾಕುಬಿಡು ಇಂಪಿನ ಕವಚತೊಡು ಸಲ್ಲಿದೆ ಸುಂಕವ ಸಮ್ಮತಿಯಿಂದಾ 2 ಮಾರನು ಬಂದೂ ಮನದೊಳು ನಿಂದೂ ದಾರಿಯನು ತಪ್ಪಿಸಿ ಧಣಿಸುವ ಕಾಣೆ ಓರದೆ ಕೋರಿದ ಕಾರ್ಯವ ತೀರಿಸೆ ಕಾಂಕಳು ನೀನಾಗಿ ಕಾಮಶಾಸ್ತ್ರವಂ 3 ಈ ಸುಖಸಂಪದ ಈಶ್ವರ ಬಲ್ಲಂ ಆಸೆಯ ತೋರಿ ನೀ ಮೋಸವಗೆಯ್ವೆ ದಾಸನು ವಂದಿಪ ಸುಖತೋರಿದೆ ದೇಶಿಕನಲೆ ತುಲಸಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
(ಆ) ಲಕ್ಷ್ಮೀಸ್ತುತಿಗಳು ನಾರಿಮಣಿಯೆ ನಿನ್ನಾಣೆ ನಾಕಾಣೆ ಕರತಂದು ತೊರೆ ಚೆಲ್ವ ರಂಗನಾ ಪ ಕರತಂದು ತೋರೆ ಮಧ್ಯರಂಗನಾ ಅ.ಪ ಪಾರವಾರನೆಂಬ ಧೀರ ಭವದೂರನೊ ಬಾರದ ಮನಸೆನ್ನ ಸೂರೆಗೊಳ್ಳುತಿದೇ 1 ಮೀರಿದ ಹದ್ದಿಗೆ ಹಾರಿಬಂದಾ ಗಿಣಿಯು ದಾರಿಯ ತಪ್ಪಿ ಹಿಂತಿರುಗಿದಂತೆ ಮಾರನಯ್ಯನ ಪಾದತೋರಿ ಪೋಗಿಯು ತಾ ತೇರಮೇಲೇರಿದ ಸಾರುವ ಬಾರೆ 2 ಉರಗೇಂದ್ರಶಯನನೆ ಸರಿಗಾಣೆ ರಮಣಿ ಶ್ರೀ ನರಗೆ ಸಾರಥಿಯಾಗಿ ಮೆರೆವ ಶ್ರೀ ಪರಮಾತ್ಮ ನಿರುತಿಹ ನೀನೋಗಿ ಕರತಾರೆ ಕಾಮಿನೀ3
--------------
ಚನ್ನಪಟ್ಟಣದ ಅಹೋಬಲದಾಸರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಉ) ತಾತ್ತ್ವಿಕ ಕೃತಿಗಳು ಪಾರಾಯಣ ಮಾಡಿರೋ ಭವ ಪಾರಾವಾರದೊಳು ತಾರ ಕವಿದು ನೋಡಿರೋ ಪ ನೀರ ಬೊಬ್ಬುಳಿಕೆಯು ತೋರುವ ರೀತಿ ಶ ರೀರ ನಚ್ಚಿರಬೇಡಿರೋ ಧಾರಣಿಯಲಿ ಪೇಳಿರೋ 1 ಸಾಹಸ ಪಡಬೇಡಿರೋ ಬಾಹವೆಂದಿರ ಬೇಡಿರೋ 2 ನೇಹದಿ ನಾರಿಯೊಳು ದೇಹಿ ಸಂಸಾರದೊಳು 3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತ ದಾರಿಯೆಲ್ಲಿಗೆ ಪೇಳಿರೋ 4 ಮಿಂಚಬಾರದು ತನ್ನ ಮಡದಿಯ ಬಾಲರ ಕಂಚು ಕನ್ನಡಿ ಭಾರದೀ ಸಂಚಿತ ದ್ರವ್ಯದಿ ಕೊಂಚವು ಬಾರುದು ಉಗಿ ಸಂಚಿಗೆ ದೇಹವಿದ 5 ಒಲಿದು ಕೊಂಡಾಡುವರು 6 ಅರ್ಥವಿದ್ದವನ ಸಮರ್ಥನೀತನ ಜನ್ಮ ಸಾರ್ಥಕವೆಂಬುವರು ಆರ್ಥವ ಕಳಕೊಂಡು ಸಾರ್ಥನಾಗಲು ಜನ್ಮಸು ವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಿಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು8 ಮರಣ ಪೊಂದುವರು ಕೊರಳನು ಕೊಯ್ಸುವರೋ 9 ಬಂಧುಗಳನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರು ನಿಜ ದಂದುಗಕ್ಕೊಳಗಹರು 10 ಗಂಟು ಕಟ್ಟಿರೆ ಮನದಿ ಗಂಟಲ ಬಿಗಿವಾಗ ನಂಟರಿಲ್ಲವು ಜಗದಿ 11 ತಾಪದಿ ನೆನೆಯುತಿರೆ ಭೂಪನು ನಮ್ಮ ದೊರೆ12
--------------
ವೆಂಕಟವರದಾರ್ಯರು
(ಧನ್ವಂತ್ರಿಯ ಪ್ರಾರ್ಥನೆ) ವೇದ ವೇದ್ಯ ವೈದ್ಯನಾದನು ಭಕ್ತಜನ್ಮಾದಿ ವ್ಯಾಧಿಗಳನ್ನು ಬಾಧಿಸಿ ದುಗ್ಧ ಮಹೋದಧಿ ಮಥಿಸಿದ ಸಮಯದಿ ಪಾರಿಜಾ ತೋದಯವಾದ ಮೇಲಾದರದಿ ಪ. ಧೀರದಿತೆಯಸುರಾರಿ ನಾಯಕರೆಲ್ಲ ಸೇರಿ ಕ್ಷೀರಾಂಬುಧಿ ತೀರದ ತಡೆಗಾಗಿ ಭಾರಿ ಮಂದರವೆತ್ತಿ ತಾರಲಾರದೆ ಮಧ್ಯ ದಾರಿಯೊಳಗೆ ಬಿದ್ದು ಚೀರಲಂದು ನೀರದನಿಭ ಕೃಪೆದೋರಿ ಬಂದಲ್ಲಿ ಸ- ರ್ಪಾರಿಯ ಶಿರದ ಮೇಲೇರಿಸಿ ಗಿರಿಯ ಗಂ- ಭೀರ ರವದಿ ಮುಂದೆ ಸಾರಿದ ಸುರಮೋದ- ಕಾರಿ ಸಂಸ್ಕøತಿ ಭಯವಾರಣನು 1 ಅಮರದೈತ್ಯರ ಭುಜ ಭ್ರಮಣೆಗೆ ನಿಲ್ಲದ ಕ್ಷಮೆಯಧರನ ಕಂಡು ಸುಮನಸ ಗಣಕಾಗಿ ಕಮಠಾವತಾರದಿಂದಮಿತಭಾರವ ಲಕ್ಷ್ಮೀ ರಮಣ ಬೆಂಬನಿಂದಲಾಕ್ರಮಿಸಿದ್ದನೂ ಕ್ಷಮೆಯಿಂತು ತೋರಿ ಸಂಭ್ರಮದಿಂದ ಸುರಕಲ್ಪ- ದ್ರುಮಕಂಠರತ್ನ ಚಂದ್ರಮ ಮುಖ್ಯರುದಿಸಲು ರಮೆಯೊಂದು ರೂಪದಿ ನಮಿಸುತ್ತ ಬರೆ ತನ್ನ ರಮಣೀಯ ಮದುವಿಯಾ ಕ್ರಮವ ತೋರಿ 2 ಇಂತು ವಿವಾಹದನಂತರದಲಿ ಶ್ರೀ- ಕಾಂತನು ದೇವರ್ಕಳಂತವರಿತು ನಿ- ಬೋಧ ಚಿನ್ಮಯನು ನಿರ್ಭಯದಿ ಧ- ನ್ವಂತರಿಯಾದುದನೆಂತೆಂಬೆನು ಕಂತುಕೋಟಿಯ ಗೆಲುವಂತೆ ಸಕಲ ಸುಜ ನಾಂತರ್ಬಹಿರ್ಗತ ಸಂತಾಪಗಳ ಬಲ- ವಂತದಿಂದಲಿ ಕಳವಂಥ ಮೂರುತಿಯಾಗಿ ನಿಖಿಳ ವೇದಾಂತೇಶನು 3 ಕುಂಡಲ ಹಾರ ವನರುಹಾಂಬಕ ವಲ್ಲುಹಾಸ ಕೌಸ್ತುಭಧರ ಕರಿ ಕರೋರುತರ ಕ್ಷಣಿತ ಕಿಂಕಿಣಿ ಕಾಂಚೀವರ ಮಂಜೀರಾ ಸುನಸ ಸುಂದರದಂತ ಶುಭನೀಲಕೇಶಾಂತ ವನಜ ಸಂಭವನೀಗರುಹುತಾಯುರ್ವೇದಾಂತ ನೆನೆಸುವವರಪಮೃತ್ಯುಹಾರಿ ರೂಪವ ತೋರಿ ವಿನಯದಿ ವಿಬುಧಾರ ಸೇರಿದನು 4 ಪಾತಕ ಸಂಘಾಧಾರದಿಂದ್ಯಮಪರಿ ವಾರವೆಂದೆನಿಪತ್ತಿ ಸಾರವ ಸ್ಮಾರಕ್ಷಯೋರಗಜ್ವರಕಫ ಗೂರು ಪ್ರಮೇಹಾದಿ ವಾರಕ ವರಸುಖ ಕಾರಕನು ಥೋರ ಕರದಿ ಸುಧಾಪೂರಿತ ಕಲಶವ ತೋರಿ ದಾನವ ಮೋಹಕಾರಿ ನಾರಾಯಣಿ ಸ್ತ್ರೀ ರೂಪದಿಂದ ದೈತ್ಯಾರಿಗಳಿಗೆ ಕೊಟ್ಟ ಧೀರ ವೆಂಕಟ ಶಿಖರಾರೂಢನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಅನುಭಾವದ ನಿಗೂಢ ಮುಂಡಿಗೆಗಳು ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1 ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2 ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3 ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4 ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5 ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6 ಸುಳಿ ಕಮಲ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
--------------
ಕನಕದಾಸ
ಅಭಿಮಾನವ್ಯಾಕೊ ಮಾನವಾ ಪ ಸಭಯ ದುಃಖದೊಳಗಿರುವಾ ದುರಭಿಅ.ಪ ನೀರ ಮೇಲಿನ ಗುಳ್ಳೆಯಂದದಿ ತೋರ್ಪ ಶ- ರೀರ ಭೋಗಾಪೇಕ್ಷಿಸಿ | ನಾನು ನನ್ನದೆಂದು 1 ತನ್ನನೇನು ತಾ ಬಲ್ಲದೆ | ನಾನು ನನ್ನದೆಂದು 2 ಪೈಣ ದಾರಿಗೆ ದಾರಿಯಾವುದು | ನಾನು ನನ್ನದೆಂದು3 ಇಭದಂತೆ ಮದವೇರುತಾ | ನಾನು ನನ್ನದೆಂದು4 ಇದು ಸ್ಥಿರವಿಲ್ಲ ಇನ್ನೊಂದು ತಪ್ಪುವುದದಲ್ಲ ಪದರದೆ ನೀ ಕೇಳೀಸೊಲ್ಲ | ನಾನು ನನ್ನದೆಂದು 5 ವೇದಶಾಸ್ತ್ರ ಪುರಾಣವ್ಯಾರ ಪೊಗಳುವುದು ಶೋಧನೆ ಮಾಡಿ ತಿಳಿಯದೆ | ನಾನು ನನ್ನದೆಂದು6 ಗುರುರಾಮವಿಠಲನು ಗುರುತಾಗಿರುವ ನೆಲೆ ಅರಿತುಕೊಂಡವ ಧನ್ಯ | ನಾನು ನನ್ನದೆಂದು 7
--------------
ಗುರುರಾಮವಿಠಲ
ಇದೇ ಸಮಯ ಹರಿಯೇ ಇದೇ ಸಮಯ ಪ ಕಮಲ ತೋರಿ ಸದಾ | ಬಿಡದೆ ಎನ್ನ ಮುದದಿ ಪೊರೆವುದಕೆ ಅ.ಪ ನಾನಾ ಯೋನಿಯಲಿ ಬಂದು ಜ್ಞಾನ ದುರ್ಲಭನಾಗಿ | ಹೀನನಾದವಗೆ ಸುಜ್ಞಾನ ಪಾಲಿಸುವುದಕೆ 1 ಆಶಾಪಾಶಕೆ ಸಿಲುಕಿ ಶ್ರೀಶನ ಮರೆತೆನೋ | ಲೇಸು ದಾರಿಯ ತೋರಿ ದಾಸನ ಕಾಯುವುದಕೆ 2 ಸಂತರ ಸಂಗವ ಸಂತತ ಪಾಲಿಸಿ ಅಂತರಂಗದಿ ನಿನ್ನ ಚಿಂತನೆ ಕೊಡುವುದಕೆ 3 ಹಿಂದಿನ ಸುಕೃತದಿ ಬಂದೆ ಭೂಸುರನಾಗಿ | ಮುಂದಿನ ಪದಕ್ಕಾಗಿ ಕುಂದದೆ ಸಲಹುವುದಕೆ 4 ಪತಿ ವಿಜಯವಿಠ್ಠಲ ವೆಂಕಟ | ತಾಪವ ಕಳೆದೆನ್ನ ಕಾಪಾಡುವುದಕೆ 5
--------------
ವಿಜಯದಾಸ
ಇಂದ್ರಿಯವಶಕನ ಮಾಡಿದಿರೆನ್ನಮುಂದುವರಿವೆನರಿಯದೆ ಸುಪ್ರಸನ್ನಾಪಎನ್ನೊಳಿರುವ ಗುಣದೋಷ ಸೂಕ್ಷ್ಮಂಗಳಚನ್ನಾಗಿ 'ವರಿಸಿ ತಿಳಿದು ನೋಡೆಮನ್ನಿಸಿ ಪೊರೆವ ಕರುಣ ಬರದಿದ್ದರುನಿನ್ನವನೆಂಬಭಿಮಾನದಿಂ ಗುರುವೆ1ಶೈಲಕೆ ಸ್ಥೂಲತೆ ಜಾಲಾಂದ್ರಗತ ರೇಣುಜಾಲಕೆ ಸೂಕ್ಷ್ಮತೆಯತಿ ಲಾಘವತೂಲಕೆ ಬಂದಿಪ್ಪ ಸ್ವಾಭಾ'ಕವ ನೋಡಿತಾಳಲಾರದವನಂದದಿ ಮುಂದುವರಿಸುವೆನು2ಮಶಕ ಮಕ್ಷುಕ ಮಲ ಕ್ರಿ'ು ಖರ ಸೂಕರಶಶ ಗಜ ತುರಗ ವ್ಯಾಘ್ರಾಧಿಗಳಪಶುಗಳ ಸಂದಣಿಗಳಲಿ ಕೊಂಬೆನು ಎನ್ನವಶ'ಲ್ಲವೆಂದಿವ ವೊಳಗುಗೈವವರುಂಟೆ 3ಪರರೆನ್ನೊಳಿಹ ಗುಣ ದೋಷಾನುಸಾರದಿಹರುಷ 'ಷಾದಜನಕ ವಾಕ್ಯವಅರಿತರಿಯದೆ ನುಡಿದರೆ 'ಚಾರಿಸಿ ನಾನೆಚ್ಚರುಗೊಳ್ಳದು ಭ್ರಮೆುಂ ಕೆಡುತಿಹೆನಾಗಿ 4ಪರರ ದೂಷಣೆಯ ನಾ ಮಾಡಿದರುಪರರೊಳು ಬರಿದೆ ದ್ವೇಷವನೆಸಗಿದರು ಮುಂದೆ'ರಿಯರ ವಚನವ ಹಳಿದರು ಸಟೆಯನುಚರಿಸಿದರಾಗಲೆನಗೆ 'ಪ್ರಹತಿ ದೋಷ 5ರಾಗ ದ್ವೇಷದ ಬಲ'ಡಿದನ್ಯಧರ್ಮವನಾಗಮವಂತರ ಸಮ್ಮತವಾಕೂಗಿ ವಾದಿಸಿ ಜುಸುವ ಬುದ್ಧಿಗೈದರಿನ್ನಾಗಲಿ ಸುರೆಯನ್ನೀಂಟಿದ ದೋಷವೆನಗೆ6ಪರನಾರಿಯರ ರೂಪು ಲಾವಣ್ಯವನು ನೋಡಿಕರಗಿದೆನೈ ಕಾಮಾಧೀನನಾಗಿಬರಿಯನೃತವನಾಡ್ದೆನೈ ತಪ್ಪಿದೆನು ಮುಂದೆಬರಲಿ ಸ್ವರ್ಣಸ್ತಿಯ ದೋಷವೆನಗೆ ಸ್ವಾ'ು 7ಆರಾದರೇನವರೆಸಗಿದ ಕರ್ಮದದಾರಿಯೊಳಿರೆ ನಿಗ್ರ'ಸಿನು ಮುಂದೆದೂರಿಕೊಂಡರೆ ಕೇಳಿ ಖತಿಗೊಂಡೆನಾದರೆಸಾರಲಿ ಗುರುದಾರಗಾ'ುದೋಷವು ನನ್ನ 8ಆವಜನ್ಮದ ಸುಕೃತವೊ ನಿನ್ನ ಚರಣದಸೇವೆ ದೊರಕಿ ಧನ್ಯನಾದೆನಯ್ಯಾಭಾವನೆಯಳವಡದ ಅಭಿಮಾನದಿಂದನ್ಯಜೀವರೊಳ್ದೋಷವನೆಣಿಸಿ ನಾನೊಂದೆನೂ 9ಎನ್ನ ಜನನಿ ಜನಕರು ನಿನ್ನ ಚರಣದೊಳ್ಚೆನ್ನಾಗಿ ನಿಂದರು ಸದ್ಗುರುವೆನಿನ್ನವನಾದೆ ನಾನಿಲ್ಲ ಜನುಮವೆನಗೆನ್ನುತಿದ್ದರು ರಾಗಾದಿಗಳಾಶೆ ಬಲುಹಯ್ಯ 10ಮರೆತು ನಡದೆನು ತಪ್ಪಿದೆನಯ್ಯ ಚಿಕನಾಗಪುರವಾಸ ಗುರು ವಾಸುದೇವಾರ್ಯನೆಪರಮ ಪಾಪಿಗಳ ಸಂಸರ್ಗದೋಷವೆನಗೆಬರಲಿ ಮಾಡಿದ ಪ್ರತಿಜ್ಞೆಯ ಬಿಟ್ಟೆನಾದರೆ 11
--------------
ವೆಂಕಟದಾಸರು
ಊ. ಆತ್ಮನಿವೇದನೆ ಇಂದು ನಿನಗಿಷ್ಟ ವಂದಿಸಿ ಬಾಯ್ತೆರದು ಬೇಡಿದೆ ಪ ಮುಂದೆ ನೀ ಮನ ಬಂದಂತ್ಯದ ಮಾಳ್ಪುದು ಕಂದು ಕಂಠನ ಪದ ತೀವ್ರಗಮನ ಬಾಲಾ ಅ.ಪ. ಆರು ಅರಿಯದೆ ಇದು ಒಂದು ಬಾರಿ ಸೇವೆಮಾಡಲು ನಿನ್ನ ಘೋರ ದಾರಿಯಲಿಂದ ಪಾರುಗಾಣಿಸುವಾ 1 ಹಿಂದೆ ಪೇಳಿದನು ಕಳುಹಿ ಪೂರ್ಣಾನಂದ ಪಡಿಸೊ ಇಂದುಧರ ಪಿತನಾಣೆ ಸುಖ ಸಿಂಧುವಿನೊಳಗಿಟ್ಟು ಪೊರೆವಾ 2 ಪುಸಿಯಲ್ಲ ಪುಶಿಯಲ್ಲ ಈಶನಾಣೆ ಮಧ್ವದಾಸನೆ ಕೇಳು ತಂದೆವರದಗೋಪಾಲವಿಠಲನಾಣೆ 3
--------------
ತಂದೆವರದಗೋಪಾಲವಿಠಲರು
ಋಣವ ಮಾಡ್ದಧಮಗುಸುರಲೆುಲ್ಲ ನೀತಿಯಮನು ಮುಖ್ಯಸ್ಮøತಿಕರ್ತರೂ ಪಕಣುಗೆಟ್ಟಿನೀ ದೋಷ ಕಡಲೊಳಗೆ ಮುಳುಗಿ ಮುಂದಣ ಗತಿಯದೇನೆನಗೆ ಕರುಣಿಸೈ ಗುರುವೆ ಅ.ಪಹೇಮಾದ್ರಿ ಮಾಧ'ೀಯಾದಿ ಪ್ರಾಯಶ್ಚಿತ್ತ ನೇಮ 'ಧಿ ಕಾಂಡಗೆಗಳೊಳೂಕಾಮದಿಂದಲಿ ಮಹಾಪಾತಕಗಳನು ಮಾಡಿದೀ ಮಹಾ ತಂಡಗಳೊಳೂಭೂ'ು ಗೋ ದ್ವಿಜರಾಜ ಸ್ತ್ರೀ ದ್ರೋ'ಗಳೊಳು ಪರಭಾ'ುನೀಗಾ'ುಗಳೊಳೂತಾಮಸಾಧಮರೊಳಧರ್ಮನೆನಿಸಿಹೆನೆಂದೇ ಮರಳಿ ಮರಳಿ ಪೇಳಿಹುದಲ್ಲವೆ ಗುರುವೆ 1ಹದಿನೆಂಟು ಬಗೆ ಮಹಾ ಪೌರಾಣ ಕಥೆಗಳೊಳಗಧಮನೀ ಋಣವಂತನೆವದರುತಿವೆಯುಪಪುರಾಣಂಗಳಷ್ಟಾದಶಗಳಧಮನೀ ಋಣವಂತನೆಒದಗಿದೀ ಸಂಖ್ಯೆಯುಪಸ್ಮøತಿಗಳೊಳಗೂ ಪೇಳ್ವುದಧಮನೀ ಋಣವಂತನೆಸದಯತನ ಪುಟ್ಟದಾುತೀ ಪತಿತ 'ಷಯದಲಿಹದನೆನಂಮುಂದೆ ಮುಳುಗಿದೆನೆಲ್ಲೊ ಗುರುವೆ 2ಮೂರು ಮತ್ತೈದಾ ಭೇದ ಋಣ 'ದ್ದರೆಯು ತೀರುವರೆ ಮಾರ್ಗಗಳಿವೆತೀರದಿದ್ದರು ಜನುಮಗೊಡುವವಲ್ಲದೆ ವೃದ್ಧಿಸಿರಿ ಬೆಳೆಯದೆ ನಿಂತಿವೆಆರು ಬಗೆುಂ ಬಡ್ಡಿ ನುಡಿಯದಿದ್ದರು ದಿನವು'ುೀರಲಿದಕೊದಗುತಲಿವೆದಾರಿಯ ನನಗೀಪರಿಯ ಧನ ಋಣವ ದೈವಹೇರಿ ತಳವಳಿದೆನೈರಕ್ಷಿಸೈ ಗುರುವೆ 3ಕಾಶಿಗೈದುವರಾಗದಡ'ಯೊಳಿರುವರಾಗದೀಶ ಭಜನೆಯ ಗಣಿಸದೂುೀಷಣೆಗಳನು ಬಿಟ್ಟು ಸನ್ಯಾಸವನು ಮಾಡಲೀಸದೆ ತನವನರಸದೂದೇಶದೇಶವ ತಿರುಗೆ ತೀರ್ಥಗಳೊಳ್ಮಿಂದರೂಲೇಶ ಮಾತ್ರವು ಸವೆಯದೂಈ ಶರೀರವು ಬೀಳೆ ಕ್ರಮವಾಗಿ ತೊತ್ತು ಸತಿದಾಸಸುತ ಕತ್ತೆಭವಗೊಡುವದೈ ಗುರುವೆ 4ಋಣವು ಮಾಡಿದ ಪತಿತನುಂಬ ಪಂಕ್ತಿಯೊಳು ಜನರುಣಲಾಗದುಂಡರವನೂತನಯ ಪೌತ್ರರು ಸ'ತ ಪತಿತನಪ್ಪನು ನಿಮಂತ್ರಣಗೈಸೆ ಧನ ಋಣಿಯನೂಎಣಿಸಲಾ ಕಲ್ಪನರಕವು ಪಿತೃಗಳಿಗೆ ಕರ್ತನನುಭ'ಪ ನರಕಗಳನೂಎನುತ ಭೀಷ್ಮಾಚಾರ್ಯರುಸುರಿದರು ಧರ್ಮನಂದನಗೆ ಭಾರತ ಶಾಂತಿಪರ್ವದೊಳು ಗುರುವೆ 5ತಲೆಯೋಡ ಪಿಡಿದು ಚಂಡಾಲಗೇರಿಯಲಾದರಳುತ ಕೊಟ್ಟ ಪರಧನವಸಲಿಸದೆ ಕೆಟ್ಟು ಬಂದೆನು ಭಿಕ್ಷಗೊಡಿಯೆಂದುಹಲವು ನಿಂದ್ಯದ್ರವ್ಯವಾಅಳುಕದೆ ತಂದು ಜೀವನಗೈಯ್ದುದರಿಂದುಸಲೆಗೈದು ತಂದ ಋಣವಾಕಳಿವ ನವನರಕಗಳೆಂದು ಹರಿಶ್ಚಂದ್ರ 'ಭುತಿಳು'ದರು ದುರ್ಮನ ಬಿಡದಲ್ಲೊ ಗುರುವೆ 6ಸುತನ ಮಾರಿದ ದೋಷ ಸತಿಯ ಮಾರಿದ ದೋಷಪಿತೃ ಮಾತೃಹತ್ಯ ದೋಷಾಪತಿತನಾಗುವ ದೋಷ ಪತ್ರವನು ಬರದು ತನುಪತನವಾಗುವ 'ಶೇಷಯತನದಿಂದ ಮಾಡ್ದ ಪುಣ್ಯವು ಪೋಪದೋಷ ಪರಸುತ ಭೃತ್ಯನಪ್ಪ ದೋಷಜೊತೆಗೂಡಿ ಗಣಿಸದೆ ಸಾಲವನು ಮಾಡಿದೀಪತಿತನನು ನರಕಕಿಳುಹುವದೆಲ್ಲೊ ಗುರುವೆ 7ನಿತ್ಯಕರ್ಮವ ಮಾಡುವಧಿಕಾರ ಮೊದಲಿಲ್ಲಸತ್ತ ಸೂತಕಕಧಿಕವೂಹೆತ್ತ ತಾು ತಂದೆಗಳ ಮೃತ ದಿನದಿ ಪಿಂಡಗಳನಿತ್ತರವರನುಸಿರವೂಸತ್ತರೂ ಬಿಡದೆ ಬೆಂಬತ್ತಿ ಪೈಶಾಚದಂತೊತ್ತುವದೇಳೇಳು ಭವವೂಇತ್ತಲ್ಲದೆ ಬಡ್ಡಿಸಹ ಮೌಲ್ಯವನು ಪೋಗದೆತ್ತ ಹೋಗಲಿ ಯೇನಮಾಡಲೈ ಗುರುವೇ 8ವರುಷ ಸಾ'ರವಾದರೆಯು ಋಣದ ಮ'ಮೆಯನುಬರೆಯುವದಸಾಧ್ಯ ಗುರುವೆಪರಮ ಋಣಿಗಳು ಸ್ಮøತಿ ಪುರಾಣೇತಿಹಾಸಗಳೊಳರುಪುತಿಹರಿಂತು ಗುರುವೆಹರತು ಋಣಗತ್ತಲೆಯು ನಿನ್ನ ಪದಗಾಬಂತೆಕರುಣಿಸೈ ಬೇಗ ಗುರುವೆಮರೆಯೊಕ್ಕೆ ನಾನು ತಿಮ್ಮದಾಸ ಚಿಕ್ಕನಾಗಪುರವರನಿಲಯ ವಾಸುದೇವಾರ್ಯ ಸದ್ಗುರುವೆ 9
--------------
ತಿಮ್ಮಪ್ಪದಾಸರು
ಎತ್ತಲಿಂದ ಬಂದೆ ಎನ್ನ ಒಗೆತನಕೆ ಎಲೆಖೋಡಿ ಸವತಿಎತ್ತಲಿಂದ ಬಂದೆ ಎನ್ನ ಒಗೆತನಕೆ ಪ ಕತ್ತಲು ಬೆಳುದಿಂಗಳಂತಾಯಿತುಮಿತ್ತು ಎತ್ತಲಿಂದ ಬಂದು ಸೇರಿತುಬಂದು ಎದುರಿಗೆ ಹಲ್ಲ ತೆರೆದಳುಒಂದು ಮಾತನು ಆಡದೆನ್ನೊಳುಒಂದನ್ನು ಸೇವೆಗೆ ಬರಗೊಡಳುಸಂದಿಯಲಿ ಲೊಟಕೆಯ ಹಾಕುತಲಿಹಳು1 ಹಾಲೊಳು ವಿಷವ ಹೊಯ್ದಂತೆ ಮಾಡಿದಳುಇಲ್ಲವನೆ ಹೇಳಿ ಕಾಲಕಾಲಲಿ ಎನ್ನ ಒದೆಸಿದಳುಬೇಳ ಮೇಳದಿ ತೊಡೆಯ ಮೇಲೆ ಹೊರಳಿಮೇಲೆಯೆ ಮೀಸೆಯ ಹುರಿ ಮಾಡುವಳು 2 ನೆರಳ ನೀರೊಳು ಬಗ್ಗಿ ನೋಡುವಳು ಎಬ್ಬಿ ತೆಗೆದುಮರಳಿ ಮರಳಿ ಒಡವೆಯ ನಿಡುವಳುಹೊರಯಿಕೆ ಒಳಯಿಕೆ ಮುರುಕಿಸಿ ನಡೆಯುತಲಿರೆ ಗಂಡಸು ಎಂದು ಅಣಕಿಸುತಿಹಳು3 ಮೋರೆಯನೀಗ ಎನಗೆ ತೋರಿಸಳುಸೀರೆ ಕುಪ್ಪುಸವ ಆರು ಕಾಣದಂತೆ ಉಡುವಳುದಾರಿಯ ಹಿಡಿ ನೀನಿರಬೇಡೆಂಬಳುನೂರು ಬಾರಿಯು ಸಾರಿದೆನೆಂಬಳು 4 ಒಗೆತನ ಕೊಂಡಳು 5 ಜನನ ಮರಣಗಳಳಿದು ಜಠರ ಬಾಧೆಗಳಳಿದುಘನ ಪುರುಷನಾಗಿ ಘನತಾನಾಗಿ ಇರುವನವನ6 ಪತಿ ಚಿದಾನಂದ ಮೂರುತಿ ತಾನಾದವನು7
--------------
ಚಿದಾನಂದ ಅವಧೂತರು
ಎನ್ನೊಳು ನ್ಯೂನವಾರಿಸದೇ ಸಲಹಯ್ಯಾ ಪ ಕಾಮಕ್ರೋಧ ಸಂಗವ ಮಾಡೀ | ತಾಮಸ ಲೋಭದಿ ಮೋಹವ ಕೂಡಿ | ತಾಮದ ಮತ್ಸರದಲಿ ಬೆರೆದಾಡೀ | ನೇಮದಿಗೆಟ್ಟೆ ವೃಥಾಯಕ1 ವಿಷಯೇಂದ್ರಿಯ ಸುಖ ವಿಷಯೆಂದರಿಯದೆ | ವಿಷಯದಿ ನಿಸಿದಿನಗಳೆದೆನು ಹರಿಯೇ | ಕುಶಲದ ಕರ್ಮದ ದಾರಿಯ ವಿಡಿಯೆ | ಘಸಣಿಗೆ ಬಿದ್ದೆನು ಭವದಿಂದ2 ತಂದೆ ಮಹಿಪತಿ ನಂದನ ಪ್ರಾಣಾ | ಮುದದಿ ಕೈಯನು ಪಿಡಿಯಲೋ ಪೂರ್ಣಾ | ಛಂದದಿ ತೋರಿಸಿ ನಾಮದ ಖೂನಾ | ಇಂದಿಗೆ ಧನ್ಯನ ಮಾಡು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನಿದೆತ್ತಣ ಬಯಕೆ ಎಲೊ ಮಂಕು ಜೀವನೀನು ಅರಿತರೆ ಪೇಳು ನಿಜವನೆನಗೆ ಪ ಎಂಟೆರಡು ಮಾರುತರು ಎಡೆಎಡೆಗೆ ಬರುತಿರಲುನಂಟರೈವರು ಕೂಡಿ ಆಕ್ರಮಿಸುತಿಹರುದಾಂಟುವುದು ಅಸದಳವೊ ಎರಡೊಂದು ಬಲೆಗಳಲಿಕಂಟಕದಿ ಬಲು ತಾಪದಿಂದ ಬಳಲುವರು 1 ಆರೆರಡು ದಂತಿಗಳು ದಾರಿಯೊಳು ನಿಂತಿಹವುಆರು ಮೂರು ತುರುಗಗಳು ದಾರಿಯನು ಕೊಡವುಮೂರೆರಡನೀಡಾಡಿ ತೋರುವುದು ಎನ್ನಾಣೆಸಾರಿ ಏನೇನಹುದು ಎಂಬುದನು ನೋಡು 2 ಪರರನು ನಿಂದಿಸದೆ ಪರಯೋಗ್ಯ ನೀನಾಗಿಪರರ ಪಾಪಗಳ ನೀ ಕಟ್ಟಿಕೊಳದೆಪರಮಾತ್ಮ ಕಾಗಿನೆಲೆಯಾದಿಕೇಶವರಾಯಪರಹಿತಕೆ ಸಖನೆಂದು ಭಜಿಸೆಲೊ ಮನುಜ 3
--------------
ಕನಕದಾಸ
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು