ಒಟ್ಟು 21 ಕಡೆಗಳಲ್ಲಿ , 17 ದಾಸರು , 21 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಉತ್ಸವದಲಾಹ್ನಿಕವ ಕಡು ಜನರು ಕೇಳಿರಯ್ಯ ಪ. ಅರುಣ ಉದಯದೊಳೆದ್ದು ಆ ದ್ವಾರಪಾಲಕರುಭರದೆ ಘಂಟೆ ಸುವಿಘ್ನ ಮಾಡೆತರತರದ ಹರಿದಾಸರು ತಾಳ ಮೇಳಗಳಿಂದಪರಿಪರಿಯ ಗಾನ ಪಾಡೆ ತ್ವರಿತ ವಾದ್ಯಗಳಿಂದ ತರುವಾಯ ಭೋರಿಡೆ ಮುರಹರನುಪ್ಪವಡಿಸೆತರುಣ ಯತಿಗಳು ಎದ್ದು ಸ್ನಾನ ಜಪಗಳ ಮಾಡಿನಿರುತ ಶಂಖ ಭ್ರಮಣೆ ಮಾಡೆ ನೀಟಾಗಿಒಪ್ಪುತಿಹ ಉಡುಪಿಯ ಶ್ರೀಕೃಷ್ಣನ 1 ಘೃತ ನೆನೆಕಡಲೆಯುಶುದ್ಧಾದ ಪಾಲ್ಮೊಸರು ಶುಂಠಿ ಸಕ್ಕರೆಲಡ್ಡಿಗೆತಂದ ನೈವೇದ್ಯವ ಸವಿದು ತಾ ಪೂಜೆ ಮಾಡಿಸಿಕೊಂಬ 2 ಪದ್ಮನಾಭಗೆ ಬೇಗ ಪುರುಷಸೂಕ್ತದಭಿಷೇಕಮುದದಿಂದ ಮಾಡಿದ ಬಳಿಕವಿಧಿಯ ಪೂರ್ವಕವಾಗಿ ಅಗಿಲು ಗಂಧ ತುಲಸಿಮಾಲೆಅಧಿಕವಾಗಿ ಸಮರ್ಪಿಸಿ ಒದಗಿದ್ದ ಶುಂಠಿ ಬೆಲ್ಲ ಒಳಿತಾದ ಅನ್ನ ಸೂಪದಧಿ ಕ್ಷೀರ ಕದಳಿಫಲವು ಮುರಮರ್ದನನುಚೆಲುವ ತಾ ಹಂಸಪೂಜೆಯ ಕೊಂಬ ತದನಂತರದಲಿ ಮೃತ್ತಿಕೆಯ ತಾ ಗಣಿಯಕಟ್ಟಿಸಿಕೊಂಬ 3 ದಧಿ ದಿವ್ಯ ಮಧು ಸಕ್ಕರೆ ಸೀಯಾಳವು ಇಂ-ದಿರೇಶಗೆ ಬೇಗ ಶಿರದ ಮೇಲ-ಭಿಷೇಕ ಮುದದಿಂದ ಮಾಡಿದ ಬಳಿಕತಿರುಗಿ ನೈವೇದ್ಯವನು ತೀವ್ರದಿಂದಲೆ ಸ-ಮರ್ಪಿಸಿ ಚೆಲುವ ಮಂಗಳಾರತಿಯಿಂದಪಂಚಾಮೃತದ ಪೂಜೆಗೊಂಬ 4 ಜಲಜನಾಭಗೆ ಉಷ್ಣಜಲವ ತಂದ್ಹದ ಮಾಡಿಲಲಿತವಾಗಿ ಎರೆಯುತಒಳಿತಾದ ಹೆಸರ್ಹಿಟ್ಟಿನಲಿ ಒರೆಸಿ ಮೈಯನೆತೊಳೆದು ಸುಲಭಗೆ ಪಾಲನುಣಿಸಿ ಬಳಿಕಬಾಲಉಡಿಗೆಯಿಟ್ಟು ಬಹುನೈವೇದ್ಯವನರ್ಪಿಸಿಚೆಲುವ ಉದ್ವಾರ್ಚನೆ ಪೂಜೆಚೆಂದಾಗಿ ಮಾಡಿಸಿಕೊಂಬ 5 ಮಧ್ವ ಸರೋವರಜಲವು ಹೊಳೆವÀ ಚಿನ್ನ ಕಲಶÀದಲಿಶುದ್ಧದಲಿ ಶೋಧಿಸಿ ತುಂಬಿಸಿಬದ್ಧ ಘಂಟೆನಾದದಲಿ ಬಹುಬೇಗದಲಿಬಂದು ಸನ್ನಿಧಿಯಲಿ ಪೂಜಿಸಿವಿಧುರಥನೆ ಶಂಕರಥನೆ ಪುರುಷಸೂಕ್ತÀದಭಿಷೇಕಮುದದಿಂದ ಮಾಡಿದ ಬಳಿಕ ಸಜ್ಜಿ ಘೃತದೋಸೆ ಬೆಣ್ಣೆ ಸಾರು ನೈವೇದ್ಯವ ಸವಿದು ಚೆಲುವಮಂಗಳಾರತಿಯಿಂದ ಮುದದಿ ತೀರ್ಥಪೂಜೆಗೊಂಬ 6 ಉರು ಪದಕಾಭರಂಣಗಳು ಉನ್ನಂತತೋಳ್ಬಂದಿಕರಮುದ್ರೆ ಕಂಕಣಗಳು ಚರಣಾರವಿಂದಗಳಿಗೆ ಚಾರುಚಿನ್ನದ್ಹಾವಿಗೆಕಿರುಗೆಜ್ಜೆ ಕಾಲಲಂದುಗೆವರ ಪೀತಾಂಬರ ಕಟಿಗೆ ವಡ್ಯಾಣ ನೇವಳ ಇಟ್ಟುನಿರುತ ಸುವರ್ಣದ ಕವಚವುಕೊರಳ ಕೌಸ್ತುಭಹಾರ ಕೋಮಲ ಸುವರ್ಣಕುಂಡಲಸಿರಿಮೂರುತಿ ಸಣ್ಣ ನಾಮ ಶಿರದ ಜಾವಳ ಜಡೆ ಕಡಗೋಲು ನೇಣುಸಹಿತ7 ದಧಿ ಶುಂಠಿ ನಿಂಬೆರಸ ತಕ್ರಜಗದೇಕ ಸವಿದ ಪರಿಯ 8 ಬಗೆಬಗೆಯ ಮಂಗಳಾರತಿ ಬಾರಿಬಾರಿಗೆ ಮಾಡಿ ಚಾ-ಮರ ದರ್ಪಣಗಳೆಸೆಯೆ ನಗೆಮುಖದ ಕೃಷ್ಣ-ನಂಘ್ರಿಗೆ ಷೋಡಶ ಪೂಜೆಯ ಮಾಡಿಮುಗಿಸಿ ಗುರುರಾಯ ಬರಲುಹನುಮಂತದೇವರಿಗೆ ಹಸನಾದ ಭಕ್ಷ್ಯಭೋಜ್ಯಅನುದಿನದಲರ್ಪಿಸಿ ಪೂಜಿಸಿಮುನಿ ಮಧ್ವರಾಯರಿಗೆ ಮುದದಿಂದಲರ್ಪಿಸಿ9 ಅರಳು ಆರಚ್ಚು ಬೆಲ್ಲವುಆ ಕಾಲದಲರ್ಪಿಸಿ ಪೂಜಿಸಿ ಕರಣದಲಿ ನೋಡಿ ನಗುವ 10 ಪುಟ್ಟ ಕೃಷ್ಣರಾಯರಿಗೆ ಹೊನ್ನ ಕವಚವ ತೊಡಿಸಿಇಟ್ಟ ರನ್ನದ ಕಿರೀಟವುದಿಟ್ಟಾದ ಪದಕಂಗಳು ದಿವ್ಯಮುತ್ತಿನ ಸರಕಟ್ಟಿದ್ದ ಪೂಮಾಲೆ ಎಸೆಯೆಶ್ರೇಷ್ಠವಾದ ಧೂಪದೀಪ ಶ್ರೀಪತಿಗೆ ದೋಸೆ ಬೆಣ್ಣೆಗಟ್ಟುರುಳಿ ನೈವೇದ್ಯವು ಕಟಕಟನೆಶುಂಠೀಕಷಾಯುಂಡು ಬಾಯಿ ತೊಳೆದುತಟ್ಟನೆ ರಾತ್ರಿ ಪೂಜೆಯಗೊಂಡು ತಾ ಪಲ್ಲಕ್ಕಿಯೇರಿ ಬರುವ11 ಅರಳು ಬಹುಕೊಬರಿ ಚೂರುಗಳು ಆ ಕಾಲದಲಿ ಸೂಸಿ ಪೂಜಿಸೆ ಕರುಣದಲಿ ನೋಡಿ ನಗುವ 12 ಧೀರನಿಗೆ ಚತುರ್ವೇದ ದಿವ್ಯಶಾಸ್ತ್ರಪುರಾಣ ಚೆಲುವಗಷ್ಟಕ ಗೀತವುಭೇರಿಮೌಳಿ ಮೌಳಿವಾದ್ಯಮೌಳಿಮೌಳಿ ಚಕ್ರವಾದ್ಯತಾರತಮ್ಯದ ಸರ್ವವಾದ್ಯಗಳೆಸೆಯೆತಾರಿ ಸೇವೆಯ ಮಾಡಿ ಸ್ವಾಮಿ ವೀಳ್ಯ ಮಂತ್ರಾಕ್ಷತೆ ಕಾರುಣ್ಯದಲಿಬೆರೆಸಿ ಮಾರಜನಕಗೆ ಏಕಾಂತ ಸೇವೆಯ ಮಾಡಿ ನವಮಾರಜನಕನ ಹಂಪೂಜೆಯ ಜಾಗ್ರತೆಯಲಿ ನೋಡಿ ನಗುವ 13 ಹಡಗಿನಿಂದಲಿ ಬಂದು ಕಡಲ ತಡಿಯಲಿ ನಿಂದುಬಿಡದೆ ಯತಿಗಳ ಕೈಯ ಬಿಂಕದಿ ಪೂಜೆಗೊಂಬಆದಿ ಕೃಷ್ಣನ ಆಹ್ನಿಕವನು ಆಧಾರದಲಿಓದಿವಿನೋದದಲಿ ಪಠಿಪ ಜನರಿಗೆಆಧಿವ್ಯಾಧಿಗಳಟ್ಟಿ ಬಹು ಭಾಗ್ಯಗಳ ಕೊಡುವಮಾಧವನ ಕೃಪೆಯಿಂದಲಿವಾದಿರಾಜರಿಗೊಲಿದು ವಚನ ಶುದ್ಧೋಕ್ತದಲಿ ಹೇಳುವ ಜನರಿಗೆಬರುವ ದುರಿತವ ಕಳೆದು ಮೇಲಾಗಿ ರಕ್ಷಿಸಿಕೊಂಬ ಹಯವದನ 14
--------------
ವಾದಿರಾಜ
ಉದಯಕಾಲದೊಳೆದ್ದು ಗೋಪಿಯು ದಧಿಯ ಮಥಿಸುವ ಎಂಬ ಸಮಯದಿ ಉದರಗಣ್ಣನು ಎದ್ದು ತೊಟ್ಟಿಲೊಳ್ ತೊದಲು ನುಡಿಗಳಿಂ ಕರೆದ ತಾಯಿಯ 1 ನುಡಿಯ ಲಾಲಿಸಿ ನಳಿನನೇತ್ರನು ಕರೆದ ಹಾಲನು ಕೊಡುವೆನೆಂದರೆ ಕೊಡುವೆನೆಂದರೆ ಕಣ್ಣಮುಚ್ಚನು ಒಡನೆ ಮಲಗುವ ಮಲಗದೇಳುವ 2 ನಿದ್ರೆ ತೀರದೆ ನೀ ಎದ್ದ ಕಾರಣ ಬುದ್ಧಿ ಸಾಲದು ಮುದ್ದು ಮಗುವಿಗೆ ಒದ್ದು ಕೆಲಸವ ತಿದ್ದಿ ಉನ್ಮತ ಅಮ್ಮ ಬಾರೆಲೆ ಎನ್ನಗಲಬೇಡವೆ 3 ಗುಮ್ಮ ಬರುತದೆ ಗುಸುಗುಸೆನುತದೆ ಶ್ರೀದವಿಠಲನಾ ಶ್ರೀಲತಾಂಗಿಯು ಮೋದಪಡಿಸುವ ಮಾನವೀಯಳೇ ವೇದಗೋಚರ ನೀ ಏಳಬೇಡವೋ ಪಾದಕೆರಗುವೆ ಪವಡಿಸೆಂದಳು 4
--------------
ಶ್ರೀದವಿಠಲರು
ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕೋಪಿಸದಿರು ಸ್ವಾಮಿ ಶ್ರೀ ನರಸಿಂಹ ಪ. ಕೋಪಿಸದಿರು ಕರುಣಾಪಯೋನಿಧಿಯೆ ಮ- ಹಾಪರಾಧಗಳನು ಲೇಪಗೊಳಿಸದಿರು ಅ.ಪ. ಮಧ್ವ ವಲ್ಲಭ ನಿನ್ನ ಸೇವೆಯ ನಡಸುವ ಮಧ್ಯ ಮಧ್ಯದೊಳೆದ್ದು ಹೋದ ತಪ್ಪು ಶುದ್ಧಿಯಿಲ್ಲದ ತಪ್ಪು ಸೂಕ್ತಿ ಪಾಠಗಳೊಳಾ- ಬದ್ಧ ಬರುವ ತಪ್ಪೆನಿದ್ದರು ಕ್ಷಮಿಸಿನ್ನು 1 ಸಂಸಾರ ಲಂಪಟನಾಗಿ ಬಳಲುವೆನು ಕಂಸಾರಿ ನಿನಗಿನ್ನು ಪೇಳ್ವದೇನು ಹಂಸವಾಹನ ಪೀಠ ಹಲಧರನನುಜನೆ ಸಂಶಯಿಸದೆ ಎನ್ನ ಕಾಯೊ ಕಮಲನಾಭ 2 ಪತಿತಜನರಿಗಧಿಪತಿಯಾಗಿರುವೆ ನಾನು ಮತಿಹೀನನೆಂಬುದ ಬಲ್ಲಿ ನೀನು ಪಾದ ಪದ್ಮವೆ ಇನ್ನು ಗತಿ ಎಂದು ನಂಬಿದನ ಮೇಲೆ ಮುನಿಸಿನ್ನೇನು 3 ಪಾತಕ ಕಡಲೊಳು ಪೊರಳುತ ನೆರಳುತ ಯಾತರಿಂದಲು ಏಳಲಾರದಿನ್ನು ಶ್ರೀ ತರುಣಿಯವರ ನಿನ್ನ ಸೇರಿದ ಜಗ ನ್ನಾಥ ದಾಸರ ಪಾದದವಲಂಬಗೊಂಡೆನು 4 ಶ್ರೀಶ ಶೇಷಗಿರೀಂದ್ರ ವಾಸ ನಿನ್ನನೆ ನಂಬಿ ದಾಸ ಕೂಟದಿ ಸೇರಿಕೊಂಡಿಹೆನು ಣಾ ಸಮುದ್ರನೆ ಎನ್ನ ಕಾವದುಚಿತವಿನ್ನು 5
--------------
ತುಪಾಕಿ ವೆಂಕಟರಮಣಾಚಾರ್ಯ
ತಾನಾಗಿ ದೊರಕುವುದು ಹರಿದರುಶನ ಪ ಶ್ರೀನಾಥವಿಠಲನಲಿ ದೃಢಭಕ್ತಿವುಳ್ಳವಗೆ ಅ.ಪ ಅರುಣೀಯದೊಳೆದ್ದು ಹರಿಕೃಷ್ಣ ಎನುವವಗೆ ಹರಿಹರಿ ಹರಿ ಎಂದು ಸ್ನಾನಗೈವವಗೆ ಹರಿಯ ದ್ವಾದಶನಾಮ ಪಠಣೆಯಿಂಮಣಿವವಗೆ ಗರುಡವಾಹನ ಕೃಷ್ಣ ಗೋಪಾಲಯೆನುವವಗೆ1 ನಿತ್ಯಕರ್ಮವಗೈದು ಫಲವ ಬಯಸದ ಕತ್ರ್ಯವ್ಯಗಳ ಗೈದು ಫಲ ಕೃಷ್ಣಗರ್ಪಿಪ ನರಗೆ ಉತ್ಸಾಹದಿಂದ ಅಭ್ಯಾಗತರ ಪೂಜಿಪಗೆ ಸತ್ಯದೈವವು ಎಂದು ಗೋಸೇವೆ ಗೈವವಗೆ 2 ಕುಳಿತು ನಿಲುವೆಡೆಗಳೊಳು ಹರಿಕೃಷ್ಣ ಎನುವವಗೆ ಇಳೆಯೊಳಿಹ ನರರೆಲ್ಲ ಭ್ರಾತರೆಂದವಗೆ ಉಳಿವು ಅಳಿವುಗಳೆಲ್ಲ ಹರಿಕರುಣವೆಂಬವಗೆ ಜಲಜನಾಭನ ದಿವ್ಯ ನಾಮಗಳ ಭಜಿಸುವಗೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ತುಳಸೀ ದೇವಿ ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ ಸತಿ ಉದ್ಧರಿಸೆನ್ನನೆಂದು ಉದಕವೆರೆದು ನಮಸ್ಕರಿಸಿ ವಂದಿಸುತಲಿ ಸುಧೆಯ ಸುರರಿಗಿತ್ತ ಧನ್ವಂತರಿ ನಯನದಿ ಉದಿಸಿದೆ ಆನಂದ ಅಶ್ರುಗಳಿಂದಲಿ ಮದಗರ್ವ ಬಿಡಿಸೆನ್ನ ಶುದ್ಧಿಯನ್ನೆ ಮಾಡಿ ಹೃದಯದಿ ಹರಿಯ ತೋರಿ ರಕ್ಷಿಸೆಂದೆನಲು ಸದ್ದಿಲ್ಲದೆ ಪೊರೆವ ಗೋಪಾಲಕೃಷ್ಣವಿಠ್ಠಲ
--------------
ಅಂಬಾಬಾಯಿ
ನಿತ್ಯ ಸೋಧಿಸಿ ಭಕ್ತಿ ರಸÀ ಸ್ವಾದ ಮಾಡುವ ಸಾಧುಗಳೊಳಗಿಡೊ ಶ್ರೀಶಾ ರಮೇಶ ಪ ಬೋಧಿಸಿ ತತ್ತ್ವರಸ ಸ್ವಾದ ನೀಡುವ ಮಾಧವ ಶ್ರೀಶನೆ ಮೋದ ಬೀರುತ ನಿನ್ನ ಪಾದವ ತೋರುವ ಸಾಧುಗಳೊಳಗಿಡೊ ಅಗಾಧ ಮಹಿಮನೆ ಅ.ಪ ಭವÀಸಂಸಾರದೊಳಿರಲು ಸಜ್ಜನರು ಅರುಣೋದಯದೊಳೆದ್ದು ನಿನ್ನ ಚರಣಪಲ್ಲವವನ್ನು ಕೃಷ್ಣಾ ಸ್ಮರಿಸುತಲಿರುವರೊ ಪರಮಪುರುಷಕೇಳೊ ಅಂಥಾ ವರ ಭಾಗವತರನು ಕರುಣದಿ ತೋರೋ ಶ್ರೀಶಾ ವರ ನೂಪುರಗೆಜ್ಜೆ ಧರಿಸಿ ಮೆರೆವ ದೇವಾ ವರ ಭಕ್ತರು ಕರೆ ಕರೆದಲ್ಲಿಗೆ ಬಹ ಶರಧಿ ಶಯನ ನಿನ್ನ ಬಿರುದಲ್ಲವೆ ಕೃಷ್ಣಾ ತ್ಪರಿತದಿ ನಿನ್ನಡಿ ಸ್ಮರಿಸುವರನೆ ತೋರೊ 1 ಅಗರು ಚಂದನ ಗಂಧ ಸೊಗವಿಲಿ ಧರಿಸುತ ಮಿಗೆ ಪೀತಾಂಬರದುಡಿಗೆಯನುಟ್ಟು ಕೃಷ್ಣಾ ಸಿರಿ ಸಹಿತಿರೆ ಸೊಗವಿಲಿ ಕರಿರಾಜನ ಸ್ವರ ಆಲಿಸಿ ಅಗಹರ ಸಿರಿಗ್ಹೇಳದೆ ಬಂದೆ ಶ್ರೀಧರ ಝಗಝಗಿಸುತ ನಿನ್ನ ಪದರುಹಗಳನಿಟ್ಟು ಮಿಗೆ ವೇಗದಿ ಬಂದು ಕರಿಯನುದ್ಧರಿಸಿದೆ ಈಗ ಬೇಗ ನಿನ್ನ ಭಕ್ತರ ಸೊಗವಿಲಿ ತೋರೋ ಕೃಷ್ಣಾ 2 ಯತಿ ಮುನಿ ಹೃದಯಾನಂದ ಶ್ರೀಕೃಷ್ಣ ಸತತದಿ ನಿನ್ನ ನಾಮ ಜತನ ಮಾಡುತ ತಮ್ಮ ಮತಿಭ್ರಮಣೆಯಲು ನಿನ್ನಾಕೃತಿ ನೋಡುತ ಸ್ತುತಿಪ ಯತಿಕುಲ ತಿಲಕಾಗ್ರಣಿ ಶ್ರೀ ಶ್ರೀನಿವಾಸ ಎನ್ನ ಮತಿಭ್ರಮಣೆಯನು ನೀಗಿಸುವಂಥಾ ಸುಜನರ ಸತತದಿ ತೋರಿಸೋ ಕ್ಷಿತಿಯೊಳು ವೆಂಕಟ ಪತಿತ ಪಾಮರರನು ಗತಿಕಾಣಿಸೆ ಕೃಷ್ಣಾ3
--------------
ಸರಸ್ವತಿ ಬಾಯಿ
ಪತಿಯೆ ಪರದೇವತೆಯು ಸತಿಯರಿಗೆ ಜಗದಿ ಮತಿಯರಿತು ಭಜಿಸಿ ಪರಗತಿಯ ಸಾರುವುದು ಪ. ಉದಯಕಾಲದೊಳೆದ್ದು ಸದಮಲ ಶುಧ್ಧಿಯಲಿ ಪಾದ ಮನದಿ ಸ್ಮರಿಸುತಲಿ ಪತಿ ಹೃದಯದಲಿರುವನು ಎಂದು ಪತಿ ಪದಕರ್ಪಿಸುವುದು 1 ಆದರದಲಿ ಪತಿಯ ಪಾದವನೆ ತೊಳೆದು ಆ ಸ್ವಾದೋದಕವ ಪಾನಗೈದು ಸುಖಿಸುವುದು ವೇದಗೋಚರ ಹರಿಯೆ ನೀ ದಯವ ಮಾಡೆಂದು ಆದರದಿ ಪತಿಯ ಮನವರಿತು ನುಡಿಯುವುದು 2 ಸ್ವಚ್ಛದಲ್ಲಿ ಮನದ ತುಚ್ಛ ವಿಷಯವ ತೊರೆದು ಇಚ್ಛೆಯಿಂದಲಿ ಹರಿಯ ನಾಮಗಳ ಭಜಿಸಿ ಅಚ್ಯುತಾನಂತ ಗೋವಿಂದನೆನ್ನುತ ಸತತ ಮಚ್ಚಾದ್ಯನೇಕ ಅವತಾರ ನೆನೆಯುವುದು 3 ಪತಿಯೆ ಹರಿಯೆಂದರಿತು ಪತಿಯೆ ಗುರುವೆಂದರಿತು ಪತಿಯ ಪೂಜೆಯನು ಅತಿ ಹಿತದಿ ಗೈಯ್ಯುವುದು ಪತಿಯಂತರ್ಗತನೆ ಎನ್ನತಿಶಯದಿ ಪೊರೆಯೆಂದು ಪತಿವ್ರತವ ನಡೆಸುತಲಿ ಹಿತದಿ ಬಾಳುವುದು 4 ಪತಿಯ ನಿಂದಕಳಿಗೆ ಗತಿಯಿಲ್ಲ ಪರದಲ್ಲಿ ಅತಿ ಬಾಧೆಪಡಿಸುವನು ಯಮನು ನಿರ್ದಯದಿ ಪತಿವ್ರತವ ಸಾಧಿಸುವ ಸತಿಯರಿಗೆ ಅನವರತ ಚ್ಯುತರಹಿತ ಪದವೀವ ಗೋಪಾಲಕೃಷ್ಣವಿಠಲ5
--------------
ಅಂಬಾಬಾಯಿ
ಬಂದ ಶ್ರೀಕೃಷ್ಣ ನಲಿಯುತ್ತ ನಸುನಗೆ-ಯಿಂದ ಬೇಗ ಯಶೋದೆಯಿದ್ದೆ[ಡೆಗೆ] ಪ. ಉದಯದೊಳೆದ್ದು ಮೊಸರ ಕಡೆವಾಗ ತನ್ನಅದುಭುತ ಬಾಲಲೀಲೆಗಳ ಪಾಡೆಮುದದಿ ನಯನದಿ ಜಲ ತುಳುಕಾಡುತಿರೆ ಕಂಡುಮದನನಯ್ಯನು ನಚ್ಚಿ ಬೆಣ್ಣೆಯ ಬೇಡುತ್ತ1 ಮಕ್ಕಳುಗಳ ಕೂಡಿ ಮನೆಮನೆಯೊಳಗಾಡಿಮಿಕ್ಕುಮೀರಿದ ರಕ್ಕಸರನೀಡ್ಯಾಡಿಅಕ್ಕರಿಂದಲಿ ತಾಯ ಮುಖವನೀಕ್ಷಿಸುತಲಿಗಕ್ಕನೆ ಸೆರಗ ಪಿಡಿದು ಮೊಲೆಯ ಕೊಡೆನ್ನುತ2 ಕುರುಳಕೂದಲು ಅರಳೆಲೆ ಮಾಗಾಯಿಕೊರಳಪದಕ ಹಾರ ಎಸೆಯುತಿರೆಚರಣದಂದುಗೆ ಗೆಜ್ಜೆ ಘಲುಘಲುಕೆನ್ನುತಲಿಸಿರಿಯರಸ ಹಯವದನನೆನಿಪ ಮೋಹನಾಂಗ 3
--------------
ವಾದಿರಾಜ
ಬೆಳಗಾಯಿತು ಏಳಿ ಪಾದ ನಳಿನ ಸೇವಕರು ಪ ಉದಯ ಕಾಲದೊಳೆದ್ದು ಹೃದಯ ನಿರ್ಮಲರಾಗಿ ಮಧುಸೂದನನ ಪಾಡಿ ಸ್ತುತಿಸುತಲಿ ಮುದದಿಂದ ಮಾಧವನ ವಿಧವಿಧದಿ ಪೂಜಿಸಿ ಪದುಮನಾಭನ ಪಾಡಿ ಪೊಗಳುವ ಜನರು 1 ರಂಗನ ಮಹಾದ್ವಾರದ ಮುಂದೆ ಕಾಣುವ ಗಜ ಸಾಲುಗಳ ನೋಡುತ ಬಂಗಾರ ಕೋಡುಳ್ಳ ಗೋವ್ಗಳಿಗೆರಗುತ್ತ ಅಂಗಜ ಜನಕನ ಪಾಡಿ ಪೊಗಳುವರು2 ರಂಭೆ ಊರ್ವಶಿ ಮೇನಕೆಯರೆಲ್ಲರು ಕೂಡಿ ಸಂಭ್ರಮದಲಿ ನಾಟ್ಯವಾಡುತಿರೆ ಗಂಗೆ ಗೋದಾವರಿ ಕೃಷ್ಣ ತುಂಗಭದ್ರೆ ಯಮುನೆಯರು ಇಂಬಿಲ್ಲದೆ ಪಾಡುತಿಹರೊ ಶ್ರೀ ಹರಿಯ 3 ಅತ್ರಿ ವಸಿಷ್ಠ ಗೌತಮ ಭಾರದ್ವಾಜರು ಅರ್ಥಿಯಲ್ಲಿ ಜಮದಗ್ನಿ ಋಷಿಗಳೆಲ್ಲ ಸ್ತೋತ್ರಮಾಡುತ ಪುರುಷೋತ್ತಮನನು ಪಾಡಿ ವಿಶ್ವಾಮಿತ್ರರು ಬಹು ಭಕ್ತಿಯಲಿ 4 ಸುತ್ತ ಸನಕಾದಿ ನಾರದರೆಲ್ಲ ಪಾಡಲು ನೃತ್ಯಗಾಯನದಿಂದ ಶ್ರೀ ಕೃಷ್ಣನ ಅರ್ತಿಯಿಂದ ಅಜಭವ ಸುರರೆಲ್ಲ ಸ್ತುತಿಸಲು ಸ್ತೋತ್ರಮಾಡಲು ದುರ್ಗದೇವಿಯರು5 ಗಜರಾಜ ಗೋಮಾತೆ ಮೊದಲಾದವರು ಬಂದು ಮಧುಸೂದನನ ನೋಡೆ ನಿಂತಿಹರು ಮದಗಜಗÀಮನೇರು ಮುದದಿ ಕಲಶ ಕನ್ನಡಿಗಳ ಪಿಡಿದು ನಿಂತಿಹರು ಬೇಗದಲಿ 6 ಮುತ್ತಿನ ಕದಗಳು ತೆಗೆವ ವ್ಯಾಳ್ಯದಲಿ ನೌಬತ್ತು ನಗಾರಿ ವಾದ್ಯಗಳಾಗಲು ಸಪರ್Àನ್ಹಾಸಿಕೆಯಲ್ಲಿ ಮಲಗಿರುವ ದೇವನ ಅರ್ಥಿವೈಭವ ನೋಡೊ ವೇಳೆ ಮೀರುವದು7 ಗಂಗಾಜನಕನ ಚರಣಂಗಳು ನೋಡುವ ಬಂಗಾರ ಕಿರುಗಂಟೆಗಳ ನಡುವನು ನೋಡುವ ರಂಗು ಕೇಸರಿಯ ಪೀತಾಂಬರ ನೋಡುವ ಶೃಂಗಾರ ವೈಜಯಂತಿಯ ನೋಡುವ 8 ವಕ್ಷ ಸ್ಥಳದಲ್ಲಿ ಶ್ರೀ ಲಕ್ಷ್ಮಿಯ ನೋಡುವ ಹಸ್ತದ ಆಭರಣಂಗಳ ನೋಡುವ ಮುತ್ತಿನ ಭುಜ ಕೀರ್ತಿ ರತ್ನದ್ಹಾರಗಳಿಂದ ಒಪ್ಪುವ ಉರದಿ ಶ್ರೀವತ್ಸನ ಸ್ತುತಿಸೆ 9 ಕೋಟಿ ಸೂರ್ಯರ ಕಾಂತಿ ಸೋಲಿಪ ನಗುಮುಖ ಲಲಾಟದಿ ಕಸ್ತುರಿ ತಿಲಕ ಒಪ್ಪಿರಲು ಮಾಟದ ಕರ್ಣಕುಂಡಲಗಳು ಹೊಳೆಯುತ್ತ ನೋಟದಿ ಜಗವ ಮೋಹಿಪ ದೇವನನು ನೋಡೆ10 ಅಂದದ ಮುಗುಳು ನಗೆಯು ದಂತ ಪಂಙÉ್ತಯು ಪಾದ ಕದಪುಗಳಂದವು ಇಂದ್ರ ನೀಲದಮಣಿ ಖಚಿತ ಕಿರೀಟದ ಮಂದಹಾಸದ ನಗೆÀಮುಖ ನೋಡುವ 11 ಕಡೆಗಣ್ಣ ನೋಟದಿ ಜಗವ ಸೃಷ್ಟಿಪದೇವ ಖಗವಾಹನನು ಸಂರಕ್ಷಿಪ ಲೋಕವ ಅಗಣಿತ ಮಹಿಮ ಅತಿಶಯದಿ ಲಯವ ಮಾಳ್ಪ ಸುಗುಣ ಸುಂದರನ ಗುಣ ಪೊಗಳುವ ಜನರು12 ನಿಖಿಳ ವ್ಯಾಪಕ ಕೃಷ್ಣ ಶುಕಮುನಿ ವಂದಿತ ದಿವ್ಯ ಚರಣನ ರುಕುಮಿಣಿ ಅರಸನ ಭಕುತರ ಪೋಷನ ಸಖ್ಯದಿಂದ ಪ್ರಿಯನ ನೋಡುವ ಸುಜನರು13 ಅನಿರುದ್ಧ ದೇವ ಶ್ರೀ ಪ್ರದ್ಯುಮ್ನ ಮೂರ್ತಿಯ ಸಂಕರುಷಣ ವಾಸುದೇವೇಶನ ನವನೀತ ಚೋರನ ನಾರಾಯಣನ ನಾಮ ಸ್ಮರಿಸುವ ಸುಜನರು 14 ಕವಿಜನ ಪ್ರಿಯನ ಕಮನೀಯ ರೂಪನ ಕಮಲನಾಭವಿಠ್ಠಲನ ಪಾಡುವ ಕಮಲಸಖನ ಸೋಲಿಸುವ ಮುಖಕಾಂತಿಯಕಮಲಾಕ್ಷಿಯರಸನ ಪೊಗಳುವ ಸುಜನರು15
--------------
ನಿಡಗುರುಕಿ ಜೀವೂಬಾಯಿ