ಒಟ್ಟು 26 ಕಡೆಗಳಲ್ಲಿ , 17 ದಾಸರು , 23 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರ ಪಿಡಿಯೊ ಬೇಗಾ ಪ ಸಿರಿ | ಮಾಧವನೆ ಭಿನ್ನವಿಪೆಕಾದುಕೊ ಬಿಡದಿವನ | ಹೇ ದಯಾಪೂರ್ಣ 1 ಪ್ರಾಚೀನ ಕರ್ಮಗಳ | ಯೋಚಿಸಲು ಯನ್ನಳವೆಮೋಚ ಕೇಚ್ಛೆಯ ತೋರೊ | ಕೀಚಕಾರಿ ಪ್ರೀಯನೀಚೋಚ್ಛ ತರತಮವ | ವಾಚಿಸಿವನಲಿ ನಿಂತುವಾಚಾಮ ಗೋಚರನೆ ಸಾಕ್ಷಿ ವೇದ್ಯಾ 2 ಭಾಗವತ ಪೀಯೂಷ | ವೇಗ ಉಣಿಸುತಲಿವನನೀಗೊ ಭವರೋಗವನು | ನಾಗಾರಿವಾಹಾಜಾಗರ ಸ್ವಪ್ನದಲಿ | ನೀಗಿ ಭ್ರಮವೆರಡನ್ನುಜಾಗು ಮಾಡದೆ ಸಲಹೋ ಭೊಗಿಶಯನಾ 3 ಭವ | ಅಂಬುಧಿಯ ದಾಂಟಿ ನೀ-ಲಾಂಬು ದಾಭ ಹರಿ ಹೃದಯಾಂಬರದಿ ತೋರಿಇಂಬಿಟ್ಟು ಭಕ್ತನ್ನ | ಸಲಹೆ ಬಿನ್ನವಿಪೆ ಕೃ-ಪಾಂಬುಧಿಯೆ ತವ ಪಾ | ದಾಂಬುಜದಲಿಡುವೆ 4 ಭಾವ ಕ್ರಿಯ ದ್ರವ್ಯದೊಳು | ಅದ್ವಯನು ನೀನೆಂಬಭಾವದನುಭವವಿತ್ತು | ಇವನ ಪಾಲಿಪುದುಕಾವ ಕರುಣಿಯೆ ಗುರು | ಗೋವಿಂದ ವಿಠ್ಠಲನೆಗೋವತ್ಸಧ್ವನಿದಾವು | ಧಾವಿಸೂವಂತೆ 5
--------------
ಗುರುಗೋವಿಂದವಿಠಲರು
ಕಾಯ ಪಾದ ಪದುಮ ದಾಸ್ಯವನಿತ್ತು ಪ ಕಂಸಾರಿ ತವ ಪಾದಪಾಲಿಸುವನೆ ಶಿರದೊಳಗಸಂಶಯದಿ ಧರಿಸೀ |ವಿಂಶತಿಯ ಮತ್ತೊಂದು ಭಾಷ್ಯ ದೂಷಕ ಮರು-ತ್ತಂಶ ಸಂಭೂತ ಶ್ರೀ ಮಧ್ವ ಮತದವನಾ 1 ಆವ ಭವರೋಗ ಹ | ಭಾವ ಕ್ರಿಯ ದ್ರವ್ಯಾಖ್ಯಅದ್ವೈತ ತ್ರಯಗಳನು ಸಂಧಾನವಿತ್ತೂ |ದೇವ ದತ್ತದಿ ತೃಪ್ತಿ ಭಾವವನೆ ನೀನಿತ್ತುಭಾವದಲಿ ತವರೂಪ ಓವಿ ತೋರುವುದೂ 2 ಆಗಮಸುವೇದ್ಯ ಭವರೋಗ ವೈದ್ಯನೆ ದೇವನಾಗಾರಿ ವಾಹನನೆ | ಯೋಗಿಧ್ಯೇಯಾಆಗು ಹೋಗುಗಳೆರಡು | ನೀನಿತ್ತುದೆಂಬಂಥಜಾಗ್ರತೆಯ ನೀನಿತ್ತು ಕಾಪಾಡು ಹರಿಯೇ 3 ಕುಡುತೆ ಪಾಲನು ಭಕ್ತ ಕೊಡಲದನು ಕುಡಿಯುತ್ತಕಡಲಂತೆ ಹಾಯಿಸಿದೆ ಬಡವರಾಧಾರೀ |ಧೃಡಭಕ್ತಿ ಸುಜ್ಞಾನ ವೈರಾಗ್ಯ ಭಾಗ್ಯಗಳಕಡು ಕರಣಿ ನೀನಿತ್ತು ಕಡೆಹಾಯ್ಸು ಭವವಾ 4 ಸರ್ವಜ್ಞ ಸರ್ವೇಶ ಸರ್ವಾಂತರಾತ್ಮಕನೆದರ್ವಿಜೀವನ ಕಾಯೊ ದುರ್ವಿಭಾವ್ಯಾ |ಗುರ್ವಂತರಾತ್ಮ ಮತ್ಪ್ರಾರ್ಥನೆಯ ಸಲಿಸಯ್ಯಶರ್ವವಂದ್ಯನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಗೋಪಿನಾಥ ವಿಠಲ | ನೀ ಪಾಲಿಸಿವಳಾ ಪ ಶ್ರೀಪತಿಯೆ ಕರುಣಾಳು | ಕೈ ಪಿಡಿದು ಸಲಹೊ ಅ.ಪ. ನಿತ್ಯ ಮಂಗಳನೆಯುಕ್ತಿಯಲಿ ನಿನ್ನಿಂದ | ಸ್ವಪ್ನ ಸೂಚಿಸಿದಂತೆಇತ್ತಿಹೆನು ಅಂಕಿತವ | ಸಾರ್ಥಕವ ಪಡಿಸೊ 1 ಶೃಂಗಾರ ಮೂರುತಿಯೆ | ಮಂಗಳಾಂಗನೆ ದೇವಹೆಂಗಳೀಗೆ ಸುಜ್ಞಾನ | ಭಕ್ತಿಯನೆ ಇತ್ತೂಅಂಗನಾಮಣಿಯಂತೆ | ಸಿಂಗರಿಸುತಿವಳನ್ನುಭಂಗಗೈ ಅಜ್ಞಾನ | ಭ್ರಾಂತಿ ಜ್ಞಾನವನು 2 ಭಾಗವತರೊಡನಾಟ | ಯೋಗಕರುಣಿಸು ದೇವನಾಗಾರಿವಾಹನನೆ | ಯೋಗಿಜನವಂದ್ಯಾಆಗುಹೋಗುಗಳೆಲ್ಲ | ನೀನಿಚ್ಛೆ ಸಂಕಲ್ಪಆಗು ಮಾಡೈ ದೇವ | ಮನದಭೀಷ್ಟಗಳಾ 3 ತತ್ವ ಪತಿಗಳಿಗೆಲ್ಲ | ಮರುತನೆ ಅಧಿಕೆಂಬತತ್ವವನೆ ತಿಳಿಸುತ್ತಾ | ಕಾಪಾಡೊ ಇವಳಾಪ್ರತ್ಯಹತ್ ತವನಾಮ | ಸಂಸ್ತುತಿಯ ಕರುಣಿಸುತಉತ್ತಾರಿಸೋ ಭವವನ್ನು | ಪ್ರತ್ಯಗಾತುಮನೆ 4 ಗೋವುಗಳ ಪರಿಪಾಲ | ಗೋವರ್ದನೋದ್ದರನೆಗೋಪಿಜನಪ್ರಿಯ | ಗೋಪಾಲ ಬಾಲಾಗಾವಲ್ಗಣೀವರದ | ಬಿನ್ನಪವ ಸಲಿಸಯ್ಯಕಾವುದಾನತರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಚಂದ್ರಭಾಗ ಹರಿ ವಿಠಲ | ಸಲಹ ಬೇಕಿವಳಾ ಪ ಇಂದೀವರಾಕ್ಷ ಹರಿ | ಮಂದರೋದ್ಧಾರೀ ಅ.ಪ. ಮೋದ ಬಡಿಸುವ ಭಾರಮೋದ ಮಯ ನಿನಗಲ್ಲ | ದಧಾರಿಸಿಹುದೋಆದಿ ಮೂರುತಿ ಹರಿಯೆ | ಸಾಧನ ಸಾಧ್ಯವಾಗಿಕಾದುಕೋ ಬಿಡದಿವಳ | ಮಾಧವನೆ ದೇವಾ 1 ತರತಮಾತ್ಮಕ ಜ್ಞಾನ | ಅರುಹುತಿವಳಿಗೆ ಭೇದಎರಡು ಮೂರರ ಅರಿವು | ನೆರೆ ಕೈಗೂಡಲೀಹರಿಯೆ ಸರ್ವೋತ್ತಮನು | ಸುರಪಾದಿ ಸುರರೆಲ್ಲಹರಿಯ ಕಿಂಕರರೆಂಬ | ವರಜ್ಞಾನ ವಿರಲಿ 2 ಆಗು ಹೋಗುಗಳಲ್ಲಿ | ವೇಗ ಸಮತೆಯು ಬರಲಿಜಾಗು ಮಾಡದೆ ದ್ವಂದ್ವ | ಸಹನೆ ಬರುತಿರಲೀನಾಗಾರಿ ವಾಹನನ | ನಾಮ ಸುಧೆ ಸರ್ವದಾಸಾಗಿ ಮನ ಸವಿವಂತೆ | ಹಗಲಿರುಳು ಇರಲೀ 3 ಕಾಲ | ಮೋದದಿಂ ಕಳೆವಂತೆನೀ ದಯದಿ ಪಾಲಿಸುತ | ಕಾದುಕೋ ಇವಳಾಬೋಧ ಮೂರುತಿಯಾಗಿ | ಹೇ ದಯಾಕರ ಕೃಷ್ಣಾಆದರದಿ ಸುಜ್ಞಾನ | ಭಕ್ತಿಯನ್ನೀಯೋ 4 ಭವ ಬಂಧ ಬಿಡಿಸುವುದುಶ್ರೀವರನೆ ಶ್ರೀಗುರೂ | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ನಿಲ್ಲೆ ನಿಲ್ಲೆ ಕೊಲ್ಲಾಪುರದೇವಿ ಇಲ್ಲೆ ಬಾರೆ ಗೆಜ್ಜೆ ಘಿಲ್ಲೆನುತÀ ಪ ಕರುಣಸಾಗರ ಹರಿತರುಣಿಯೆ ನೀ ಕೋಟಿ ತರುಣ ಕಿರಣ ರತ್ನಾಭರಣನಿಟ್ಟು ಮಣಿಕೌಂಸ್ತುಭ ವಕ್ಷ ಸ್ಥಳದಲ್ಲಿದ್ದೊ ್ಹಳೆಯುವ ಸುಪರಣವಾಹನಾ ಲಕ್ಷ್ಮಿ ಶರಣು ವಂದಿತಳೆ1 ಪಂಕಜಾಕ್ಷಿ ಪಂಕಜೋದ್ಭವನ ಜನನಿ ಪಂಕಜಮುಖಿ ಪಾಲಿಸೆ ಎನ್ನ ಪಂಕಜನಾಭನ ಅಂಕದಲ್ಲೊಪ್ಪುವ ಪಂಕಜೆ ನಿನ್ನ ಪಾದಪಂಕಜಕೆರಗುವೆ 2 ಮುಗುಳುನಗೆಯ ಮುತ್ತುಗಳು ಜಡಿತ ಕ- ರ್ಣಗಲ ವಾಲೆಯು ಕದಪಿನಲ್ಲೊ ್ಹಳೆಯೆ ಬಗೆ ಬಗೆ ಸರ ಬಂಗಾರವನಿಟ್ಟು ಮೂ- ರ್ಜಗವ ಮೋಹಿಸೊ ಜಗದಾಧಿಪತಿಯ ರಾಣಿ3 ಸಾಗರದೊಳಗ್ಹುಟ್ಟಿ ಆಗ ಶ್ರೀನಾಥನ ಬ್ಯಾಗ ನೋಡಿ ಪರಮೋತ್ಸವದಿ ನಾಗಶಯನ ನಾಗಾರಿವಾಹನನ- ರ್ಧಾಂಗಿ ಎನಿಸಿದಾನಂತ ಮಹಿಮಳೆ 4 ಶೇಷಗಿರಿಯ ಶ್ರೀನಿವಾಸನ ಎದೆಯಲ್ಲ್ಯಾ ವಾಸವಾಗಿರಲ್ಯತಿ ಪ್ರೇಮದಲಿ ಈಶ ನಾರದ ಬ್ರಹ್ಮಾಸುರರೊಡೆಯ ಭೀ- ಮೇಶಕೃಷ್ಣನ ನಿಜ ದಾಸರಿಗ್ವರನೀಹೊ 5
--------------
ಹರಪನಹಳ್ಳಿಭೀಮವ್ವ
ಪಾಲಿಸೆನ್ನನು ದೇವಾ ಪರಮ ಪುರುಷಾ ಶ್ವೇತ ವರಹಾ ಪ ಸ್ವಾಯಿಚ್ಛೆಯಲಿ ಬಂದು ಮೆರೆದು ಮಹಾಕೀರ್ತಿಯನು ಪಯೋನಿಧಿಸುತೆಯಿಂದ ತುತಿಸಿಕೊಳ್ಳುತಾ ಜಯಜಯದೇವನಾಶ್ರಯ ಕಾಮಧೇನು ನೀ ದಯಮಾಡಿ ನೋಡುವದು ದಾಸ ನೆನೆಸುವದು 1 ಪರಾಕು ಬೊಮ್ಮಾಂಡವನು ಹೊತ್ತು ನಸುನಗು ನಾಗಾರಿಗಮನಾ ಮಣಿ ಮಯದಾಭರಣದಿಂದೆಸೆವ ದೇ ವೋತ್ತಮನೆ ದಾನವರ ಬಲವಳಿದಾ ಧೈರ್ಯ 2 ನಿತ್ಯ ಪುಷ್ಕರಣಿಯಲಿ ನಿರುತ ಪೂಜೆಯಗೊಂಡು ಪ್ರತ್ಯಕ್ಷವಾಗಿ ವರಗಳನೀವುತ ಸಿರಿ ವಿಜಯವಿಠ್ಠಲ ವರಹ ಭೃತ್ಯನೆನೆಸಿ ನಿನ್ನ ಸ್ತೋತ್ಯದೊಳಗಿಡು ದೇವಾ3
--------------
ವಿಜಯದಾಸ
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದರು ಹರಿಯ ವಾಲಗಕೆ ಭಕ್ತ | ವೃಂದ ಸಹಿತ ಸುರ ಶ್ರೇಷ್ಠ ಮೊದಲಾದವರು ಪ ನಾಗಾರಿ ಸುತ ಬಂದ | ನಾಗಾರಿ ಬಂದಾ | ನಾಗಾನ ಧನು ಬಂದ ನಾಗಪುಂಗವ ಬಂದ | ಗಮನ ಬಂದ | ನಾಗ ಬಂದಾ || 1 ನಾಗಶಯ ಮುಖವಾದ ನಾಗವಾಹನ ಮಿತ್ರ | ನಾಗ ಚರ್ಮಾಂಬರ ಸಖನು ಬಂದಾ | ನಾಗಾರಿ ಸುತೆಯಳನಾಳಿದವನು ಬಂದಾ | ನಾಗಾರಿ ಬಾಂಧವ ಬಂದಾ || 2 ನಾಗದ್ವೇಷಿಕನು ನಾಗಾನಾದನನುಜ | ನಾಗಕೇತನನ ಕೊಂದಗ್ರಜನು ಬಂದಾ | ಸಿರಿ ವಿಜಯವಿಠ್ಠಲರೇಯ | ನಾಗವಾಹನನಾಗಿ ಬರುವ ಸಂಭ್ರಮದೊಳು ||3
--------------
ವಿಜಯದಾಸ
ಬಂದೆ ಬಂದೆ ಸ್ವಾಮಿಯೆ ಬಂದೆ ಬಂದೆ ಪ. ಬಂದೆ ಬಂದೆ ಗೋವಿಂದ ಗೋವಳ ಬಾಂಧವ ಭಕ್ತವತ್ಸಲಇಂದಿರೇಶ ಶ್ರೀ ವೆಂಕಟ ನಿನ್ನ ಸಂದರುಶದಕೆ ಸಾಗಿ ನಾನಿಲ್ಲಿ ಅ.ಪ. ನಡೆದು ನಡೆಸುತ ನುಡಿದು ನುಡಿಸುತಅಡಿಗಡಿಗೆ ಕಾಪಾಡುತಒಡನೆ ಆಡುತ ಬಿಡದೆ ಕ್ಷಣವನುಸಡಗರದಿ ಕರೆತರಲು ನಾನಿಲ್ಲಿ 1 ಆಪ್ತ ಅನಿಮಿತ್ತ ವ್ಯಾಪ್ತ ಸರ್ವತ್ರಗುಪ್ತ ಗುಣಗಣಪೂರ್ಣನೆಪ್ರಾಪ್ತ ನೀನೆನಗಾಗಬೇಕೆಂದುವ್ಯಾಪ್ತಿ ನಿನ್ನದು ಹುಡುಕುತಲಿ ನಾ2 ಒಂದು ರೂಪದಿ ನಿಂದು ಎನ್ನಲ್ಲಿಚೆಂದದಿಂ ಕರೆತಂದೆ ಇಲ್ಲಿಒಂದರಿಯೆ ನಿನ್ನ ವಂದಿಸುವ ಬಗೆಬಂದೊದಗೊ ನೀನೆನ್ನ ವದನಕೆ 3 ಬಂದೆ ಬಂದೆ ನೀ ಬಂದಂತೆ ಕರ-ತಂದುದಕೆ ಫಲ ನೀನೆ ಬಲ್ಲೆಸಂದರುಶನ ನಿನಗೆ ನೀ ಮಾಳ್ಪಂದವನು ನೋಳ್ಪಾತುರದಿ ನಾ 4 ಏನು ಕೊಡಲಿಲ್ಲ ಏನು ಬೇಡಲಿಲ್ಲಏನು ಪಡೆಯಲೊ ಕರುಣಿಯೆನೀನು ಕೊಟ್ಟ ಸ್ವಾತಂತ್ರ್ಯದ ಫಲನಿನಗೆ ಅರ್ಪಿಸಬೇಕೆನುತ ಇಲ್ಲಿ 5 ರಕ್ಷಶಿಕ್ಷಕ ಮೋಕ್ಷದಾಯಕಸೂಕ್ಷ್ಮ ಘನ ಮಹಾವ್ಯಾಪಕಕುಕ್ಷಿಯೊಳು ಜಗದ್ಭರಿತ ಪೂರಿತಅಕ್ಷಯಫಲದಾಯಕ 6 ನಮೋ ನಮೋ ನಾಗಾರಿವಾಹನನಮೋ ನಮೋ ಸುರಸುಪ್ರಸನ್ನನೆನಮೋ ನಮೋ ಗೋಪಾಲವಿಠಲನಮಿಪ ಭಕ್ತರ ಸಲಹುವನೆಂದು 7
--------------
ಗೋಪಾಲದಾಸರು
ಬಾಗೀನಮಿಪೆ ಬೇಗಬಾರೋ ಶ್ರೀ ನರಹರಿಯೇ ಪ ಭಾಗವತರು ನಿನ್ನ ಕೂಗಿ ಕರೆವರಯ್ಯ ಅ.ಪ ನಾಗಶಯನೆ ನಿನ್ನ ನಾಗರಾಜನು ಸ್ತುತಿಸೆ ಬೇಗಸಲಹಿದಿ ಬಂದು ನಾಗಾರಿವಾಹನ 1 ಸ್ತಂಭದಿಂದಲಿ ಬಂದು ಡಿಂಭಗೊಲಿದವನೆಂದು ನಂಬಿದ ಭಕುತರ ಹಂಬಲ ಪೂರ್ತಿಸಲು2 ಕಾರ್ಪರ ಋಷಿ ತಪಕೆ ಒಪ್ಪಿ ಭುವಿಯೊಳ್ ಬಂದು ಪಿಪ್ಪಲ ತರುವಿನೊಳ್ ಇಪ್ಪ 'ಶ್ರೀನರಹರಿಯೇ' 3
--------------
ಕಾರ್ಪರ ನರಹರಿದಾಸರು
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ರಾಘವೇಂದ್ರ ಹರಿ ವಿಠಲ | ಕಾಪಾಡೊ ಇವಳಾ ಪ ಭೋಗಿ ಶಯನನೆ ಹರಿಯೆ | ನಾಗಾರಿವಾಹಾ ಅ.ಪ. ಮಂತ್ರಮಂದಿರ ಧೊರೆಯ ಅಂತರಂಗದಿ ಭಜಿಪಸತತದಿ ವಿಜಯಾರ್ಯ | ಚಿಂತೆಯಲ್ಲಿಹಳಾ |ಅಯೆ ಸತ್ಸುಕೃತದಿಂ ಹರಿದಾಸ್ಯ ಕಾಂಕ್ಷಿಪಳಮಾತೆ ಕೈ ಪಿಡಿ ಹರಿಯೇ | ಸಂತರುದ್ಧರಣಾ 1 ಭಾವದಲಿ ತವ ಮಹಿಮೆ | ಸ್ತವನಗೈಯ್ಯುವ ಕಾರ್ಯದಿವಸ ದಿವಸದಿ ವೃದ್ಧಿ | ಭಾವವನೆ ಪೊಂದೀಕವನ ರೂಪದಿ ಪ್ರವಹ | ಭುವಿಯೊಳಗೆ ಹರಿವಂತೆಹವಣಿಸೋ ಶ್ರೀಹರಿಯೇ | ಪವನ ವಂದಿತನೆ 2 ಭವ ಭಂಗ | ಕಾರುಣ್ಯಪಾಂಗ 3 ಭವ ಶರಧಿ | ದಾಟಿಸೋ ಹರಿಯೇ 4 ಕೈವಲ್ಯಪ್ರದ ಪುರುಷ | ದೇವದೇವೇಶ ಹರಿಗೊವತ್ಸನದಿಗಾವು | ಧಾವಿಸುವ ತೆರದೀನೀವೊಲಿಯು ತಿವಳಿಗೆ | ಭಾವದಲಿ ಮೈದೋರೊಭಾವಜನಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು