ಒಟ್ಟು 730 ಕಡೆಗಳಲ್ಲಿ , 93 ದಾಸರು , 642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(2) ರಾಮಾನುಜರು ಬೇಡಿಕೊಂಬುವೆನು ನಿಮ್ಮ ರಾಮಾನುಜರೆ ಬೇಡಿಕೊಂಬುವೆನು ನಿಮ್ಮಾ ಪ ಪಾಡಿ ಹಿಗ್ಗುವ ಸುಖವ ಸಂತತ ಕಮಲ ಮಧ್ಯದೊ ಳಾಡುತೆನ್ನನು ರಕ್ಷಿಸೆನುತಲಿ ಅ.ಪ ಚರಮ ಶ್ಲೋಕವ ಬೋಧಿಸಿ ಅಷ್ಟಾಕ್ಷರಿಯೊ ಳಿರುವ ಗೋಪ್ಯವ ತೋರಿಸಿ ಗೈವುತ ಪ್ರಣವ ಶಬ್ದದಿ ಬೆರಸಿ ನಿನ್ನನೆ ಭಜಿಸಿ ಸ್ಮರಿಸುತ ಪರಮನಾಗುವ ಮತಿಯ ತ್ವರಿತದಿ 1 ಅಷ್ಟಮದಗಳು ಎನ್ನನೂ ಬಂಧಿಸಿ ಮಾಯಾ ಅಷ್ಟಪಾಶದಿ ನೊಂದೆನೊ ದುಷ್ಟಕಾಮಾದಿಗಳ ಭ್ರಾಂತಿಯು ಕಟ್ಟ ನರಕದಿ ಕೆಡಹಿ ಸುಡುತಿದೆ ಭ್ರಷ್ಟಗುಣಗಳ ದೂರಸೇರಿಸಿ ಶ್ರೇಷ್ಠಮುಕ್ತಿಯ ಪಡೆವ ವಿರತಿಯ 2 ಜ್ಯೋತಿ ಜ್ಯೋತಿಯ ನಿಲ್ಲಿಸಿ ಹೂಬಳ್ಳಿಯೊಳ್ ಜ್ಯೋತಿನೋಡು ಪೂಜಿಸಿ ಮಾತೆ ಮಾತುಳ ಪಾಲಕಾನುಜ- ಸತಿ ಸುತ ಬಂಧು ಮಿತ್ರ ವ್ರಾತ ಸಂಗಡಬಂಧಬಿಟ್ಟು ಪು ನೀತನಾಗಲಿಬೇಕು ಎನುತಲಿ 3 ಯಾದವಾದ್ರಿಯ ವಾಸನೆ ಭಕ್ತರನೆಲ್ಲ- ಮೋದದಿಂದಲಿಯಾಳ್ವನೇ ಮೇದಿನೀಮಹದೇವಪುರವರ ನಾದಶ್ರೀಗುರುರಂಗ ನಿನ್ನ ಸು- ಪಾದನಂಬಿದ ರಂಗದಾಸನ ಪರಮಯೋಗಿಯು ಎನ್ನಿಸೆನುತಲಿ 4 ಅಷ್ಟಾಕ್ಷರದ್ವಯದರ್ಥದಿ ನಿಷ್ಠಾಪರನಾಗಿ ಮನದಿ ನಿರುತಂ ಜಪಿಸಲ್ ಇಷ್ಟಾರ್ಥವು ಸಿದ್ಧಿಸುತಂ ಅಷ್ಟಮನೋಳ್ಬೆರದುನಿಲ್ವನಿದು ಸಿದ್ಧಾಂತಂ ಕಂದ
--------------
ರಂಗದಾಸರು
ಇಂದಿರಾನಂದ ಉದಧಿವರ್ಧನನೆಂದು ಪ ಕಂದರ್ಪಕೋಟಿ ಲಾವಣ್ಯನಿಧಿ ಮನಪೊಂದು ಅ.ಪ ನಾನು ನನ್ನದು ಎಂಬ ಜ್ಞಾನ ಸಂತತಿಯಿಂದ ನಾನಾ ಯಾತನೆ ಭಾವ ಬಲೆಯ ಕಟ್ಟಿ ಹೀನಗೋಜಿಲಿ ಸಿಕ್ಕಿ ಬಲುನೊಂದೆ ಗೋವಿಂದ ನೀನು ನಿನ್ನದು ಎಂಬ ಅಮೃತಗಾನದಿ ನಿಲಿಸು 1 ದರ್ವಿಯಂದದಿ ನಾನು ನೀ ಸರ್ವ ಸ್ವಾತಂತ್ರ ನಿರ್ವಾಹ ನಿನ್ನಿಂದ ಸರ್ವ ಜಗಕೆ ದೂರ್ವ ಏರಿಸೆ ಸಕಲ ದುರಿತವಳಿಸಿ ಮುಕ್ತಿಸುಖ ತೋರ್ವಂಥ ಗುಣನಿಧಿ ಸರ್ವಾತ್ಮ ಹೊರೆ ಹೊರೆಯೊ 2 ನಿನ್ನ ದರುಶನ ಬಿಟ್ಟು ಅನ್ಯತ್ರ ನಿರ್ಭೀತಿ ಎನ್ನಲಿ ಎಂದೆಂದು ವೇದವೇದ್ಯ ನಿನ್ನ ದರುಶನ ಫಲಕೆ ನಿನ್ನ ಮಹಕರುಣ ಇನ್ನು ಕಾರಣದೇವ ಧನ್ಯರಲಿ ಇಡು ಎನ್ನ 3 ಮನೋವಿಕಾರಗಳೆಂಬ ದುಃಖಾರ್ಣದಿ ಬಿದ್ದು ಅನುಮಾನ ಮಾಡಿದೆನೊ ನಿನ್ನ ಅಮೃತ ತನುಧ್ಯಾನ ಮನಕಿಡಿಯದೇನುಗತಿ ಯದುವರ್ಯ ತೃಣಕೆ ಕೈವಲ್ಲೀವ ತ್ರ್ಯಧೀಶಮನಪೊಂದು 4 ಜ್ಞಾನಮನ ಬಿಡದಿರು ದೀನ ಬಾಂಧವ ಕೃಷ್ಣ ಇನ್ನು ಮಾಯವನು ತೆಗೆದೆನ್ನ ಬೆರೆಯೊ ಜ್ಞಾನನಿಧಿ ಜಯೇಶವಿಠಲನೆ ವಿಧಿವಂದ್ಯ ಪ್ರಾಣಾಧಾರಕ ಶುಕನ ಆನಂದನಿಧಿ ಪಾಹಿ 5
--------------
ಜಯೇಶವಿಠಲ
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಕಂಡೆ ಕಂಡೆ ಮುಚುಕುಂದವರದ ಮು- ಕುಂದ ಮೂಡಲಗಿರಿ ಗೋವಿಂದನ ಪ ಶರಧಿ ಬಿಟ್ಟು ಈ ಗಿರಿಯಲ್ಯಾಕೊ ನೀ ತೆರೆದ ಕಣ್ಣು ನಾರುವಮೈಗೆ ಬಿಳಿಯ ಕರ್ಪುರ ಪರಿಮಳದ ಸುವಾಸನೆಗೆ ಜರಿದು ಬಂದೆ ನಿನ್ನ ಪರಿಯ ನಾ ಬಲ್ಲೆ 1 ಛಲನ ಮೇಲೆ ನಿನ್ನ ಛಲವು ಯಾಕೊ ನೀ ಸುರರಸುರರ ಕೈಯಲಿ ಸಿಕ್ಕು ಭಾರ ತಿರುಗನುಪಕಾರ ಗಿರಿರಾಜನು ನಿನ್ನ ಸರಿಯೆಂದೆನಿಸುವ 2 ಬಲ್ಲೆ ಬಲ್ಲೆ ಕೋರ್ಹಲ್ಲುಗಳಿಂದ ಮೆಲ್ಲುತ ಬೇರನವಲ್ಯವನು ಎಲ್ಲ ನೀಗಿ ದಧ್ಯಾನ್ಯ ನೈವೇದ್ಯ ಚೆಲ್ವ ಧರಣಿಪತಿ ಬಲ್ಲಿದ ವರಾಹನ 3 ಕಂಬ ಒಡೆದು ಕರುಳ್ಹಾರವಲ್ಲದೆ ಕಂಡು ಅಜನ ಕಂಠಾಭರಣ ನೊಂದ ಮೈಗೆ ಪುನುಕಾಪು ಮಜ್ಜನ ತಾಂಬೂಲ ಮಂಚ ಸುಪ್ಪತ್ತಿಗೆಶಯನ 4 ದಾನ ಬೇಡಿದ ನೆಲ ಭೂಮಿಯ ಬಿಟ್ಟುರ- ಗಾದ್ರಿಯಲಿರುವುದು ಉಚಿತವಲ್ಲ ಸಾಧಿಸಿ ಬಲಿಯ ಪಾತಾಳಕೆ ಮೆಟ್ಟಿದ ಪಾದ ತೋರದಲಾಚ್ಛಾದನ ಮಾಡಿದಿ 5 ಪೊಡವಿದಾನ ನೆಲಬಿಡದೆ ಕೊಟ್ಟು ಅಡವಿ ಗುಡ್ಡದಲ್ಲಾವಾಸ ಕೊಡಲಿಪಿಡಿದು ತನ್ನ ಹಡೆದ ಮಾತೆಶಿರ ಕಡಿದ ಕೈ ಕೆಳಗೆ ಮಾಡ್ಹಿಡಿದಸುರನ 6 ಹೆತ್ತಜನಕ ಮನೆಬಿಟ್ಟು ಹೊರಡಿಸೆ ಉಟ್ಟ ನಾರ್ವಸÀ್ತ್ರ ಸಹಿತಾಗಿ ಲಕ್ಷ್ಮಿ ಲಕ್ಷಿಟ್ಟು ಬಂದ್ವಕ್ಷ ಸ್ಥಳದಲ್ಲಿರೆ ಅಷ್ಟಪದವಿಗಧಿಕಾರಿ ಎನಿಸಿದಿ 7 ಗೊಲ್ಲರೇಶ ಎಲ್ಲರಿಗುತ್ತಮನೆಂದು ಬಲ್ಲಿದಮುನಿ ಪಾದದ್ವೊದೆಯೆ ಕೊಲ್ಲಾಪುರ ಮನೆಮಾಡೆ ಮಹಾಲಕ್ಷುಮಿ ನಿಲ್ಲದೆ ಬಂದ್ವಾಲ್ಮೀಕವ ಸೇರಿದೆ 8 ಸಾರಿ ಹೇಳಿ ನೀ ನಿಗಮವ ನಿಂದ್ಯಮಾಡಿ ನಾರಿಯರ ವ್ರತವಳಿದು ಮಾರಜನಕ ಅಭಿಮಾನ ಬಿಟ್ಟರೆ ಅ- ಪಾರಮಹಿಮ ನಿನ್ನ ನೋಡಿ ನಗುವರೊ 9 ದೊರೆ ನಿನ್ನ ದರುಶನಕೆ ತ್ವರಿತದಿ ಜನರು ಮೂವತ್ತು ಗಾವುದ ಮೂರ್ಹೆಜ್ಜೆಯ ಮಾಡಿ ತುರಗನೇರ್ಹಾರಿಸಿ ಗಿರಿಯ ಬಿಟ್ಟೂ ್ಹೀದರೆ ವರದ ವೆಂಕಟನ್ಹಿಂದೆ ತಿರುಗುವರ್ಯಾರೊ 10 ನಿನ್ನ ನಾಮವ ತಂದೆನ್ನ ಜಿಹ್ವಕೆ ಚೆನ್ನವಾಗಿ ಬಂಧನ ಮಾಡೆ ಘನ್ನ ಮಹಿಮ ಭೀಮೇಶಕೃಷ್ಣ ಬಂದು ಕಣ್ಣಿಗೆ ಸುಳಿವ ಪ್ರಸನ್ನವೆಂಕಟನ 11
--------------
ಹರಪನಹಳ್ಳಿಭೀಮವ್ವ
ಕಂಡೆ ನಾನೊಂದು ಸುವಸ್ತ ಮಂಡಲದೊಳು ಸದ್ಗುರು ದಯದಲಿ ಸಾಭ್ಯಸ್ತ ಧ್ರುವ ನೆನವಿನ ಕೊನೆಯಲಿ ಅನುವಾಗಿ ದೋರತದೆ ಘನ ದೀಪ್ತಿಯಲಿ ಬೀರುತಿದೆ ಮನದ ಮುಗುಟ 1 ಪ್ರಣವನ ಮೂಲಾಗ್ರಹಲಿ ಪರಿಪೂರ್ಣತಾನಾಗೆÀದ ಘನವೆ ಘನವಾಗ್ಹೊಳೆಯುತದೆ ಪ್ರಾಣಪದಕ 2 ಮಹಿಪತಿ ಬಾಹ್ಯಾಂತ್ರದೊಳು ವಸ್ತು ವಿರಾಜಿಸುತದೆ ಮಹಿಮರೆ ಬಲ್ಲರೀಸುಖ ನಾಮಾಮೃತದ ಸ್ವಾನುಭವದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸಯ್ಯ ಕಸ್ತೂರಿರಂಗ ಕರುಣಿಸಯ್ಯ ಪ ದುಷ್ಟಸಂಸಾರ ಬಹುಕಷ್ಟವಯ್ಯ ಇದ ರಟ್ಟೊಳಿಗಳ ತಾಳಲಾರೆನಯ್ಯ ಆರೆನಿದರ ಕೋಟಿಲೆಗಳಾರೆನಯ್ಯ ಪಾದ ಸೇರಿಸೈಯ್ಯ 1 ಕಾಮಕ್ರೋಧ ಲೋಭಮೋಹ ಬಿಡಿಸಯ್ಯ ಮದಮಾತ್ಸರ್ಯವೆಂಬ ಕಾಟ ನೀನೊತ್ತಿಸಯ್ಯ ಪಾದ ಹೊಂದಿಸಯ್ಯ ಸರ್ವಬಂಧು [ನೀ] ಎನ್ನ ಜಿಹ್ವೆಯಲಿ ನೆಲೆಸಯ್ಯ 2 ಆಶ ಪಾಶಕ್ಲೇಶವೆಲ್ಲ ನಾಶ ಮಾಡಿಸಯ್ಯ ಶ್ರೀಶ ನಿನ್ನ ದಾಸರಲ್ಲಿ ಸೇರಿಸಯ್ಯ ವಾಸುಕಿಶಯನ ಭವದಿ ನೊಂದೆನಯ್ಯ ಸ ರ್ವೇಶಬಂಧು ಎನ್ನನುದ್ಧರಿಸಯ್ಯ 3 ಪುತ್ರಮಿತ್ರಬಂಧುವರ್ಗದಿ ಬಿದ್ದಿಹೆನಯ್ಯ ಅ ನಿತ್ಯಮೋಹದಲ್ಲಿ ಮುಳುಗಿ ಪೋದೆನಯ್ಯ ವ್ಯರ್ಥನಾಗಿ ಕಾಲವನ್ನು ಕಳೆದೆನಯ್ಯ ಎನ್ನ ಮರಣ ಕಾಲದಿ ನಿಮ್ಮ ಸ್ಮರಣೆ ಕರುಣಿಸಯ್ಯ 4 ಜನನ ಮರಣವೆಂಬೊ ಜಾಡ್ಯ ಕ್ರೂರವಯ್ಯ ಇದರ ವಿಧವನರಿತು ವೈದ್ಯ ಮಾಳ್ವರ ಕಾಣೆನಯ್ಯ ಬ್ರಹ್ಮಾದಿ ದೇವತೆಗಳೂ ಅರಿಯರಯ್ಯ ಧನ್ವಂತ್ರಿರೂಪ ಶ್ರೀನಿವಾಸ ರಕ್ಷಿಸಯ್ಯ 5 ದೇಹವೆಲ್ಲ ಗಳಿತವಾಗಿ ಪೋಯಿತಯ್ಯ ಇಂದ್ರೀಯ ಸ್ವಾಧೀನದಲ್ಲಿ ನಿಲ್ಲದಯ್ಯ ವಿಷಯದಲ್ಲಿ ಮನಸು ಬಹಳ ಹರಿವುದಯ್ಯ ಲಕ್ಷ್ಮೀಪತಿಯೆ ನಿಮ್ಮ ಭಕ್ತಿಯಿತ್ತು ಸಲಹಯ್ಯ 6 ದೀನನಾಗಿ ನಿನ್ನ ಚರಣ ಸೇರಿದೆನಯ್ಯ ಜ್ಞಾನವೈರಾಗ್ಯವಿತ್ತು ಪಾಲಿಸೆನ್ನಯ್ಯ ಮರಳಿ ಜನ್ಮ ಬಾರದಂತೆ ಮಾಡಬೇಕಯ್ಯಾ ಗರುಡಗ ಮನ ವೆಂಕಟರಮಣ ಭವಸಂಕಟ ಬಿಡಿಸಯ್ಯ 7
--------------
ಯದುಗಿರಿಯಮ್ಮ
ನಂಬದೆ-ನಾ-ಕೆಟ್ಟೆ ಪ ಅಂಬುಜಾಕ್ಷನೆ ನಿನ್ನಾ ಅ.ಪ ಗಳಿಸಿತು ಬಹುಕಾಲಾ ವಿಷಯಕೆ ಆಯ್ತೆಲ್ಲಾ ಅತಿಶಯ ವಾಯ್ತಾಶೇಗತಿಯನು ನಾಕಾಣೆ ಮತಿವಂತ ವ್ರತತತಿ ಜಪಜಪ ಹೋಮಕೆ ಗತಿದಾಯಕ ನಂಬದೆ 1 ಬಂದೆನು ಬಹುಸಾರಿ ನೊಂದೆನು ಈ ಪರಿಯೇ ಕಂದಿಸೆ ಯಮರಾಯಾ ಬಂಧುವು ಯಾರೈಯ ಇಂದಿರೆ ಮನಶಶಿ ಸುಂದರಮೂರ್ತಿ ಮಹೇಂದ್ರ ಪರಾತ್ಪರ ಪೂರ್ಣಾನಂದನ 2 ಮಾಡಿಹೆನಪರಾಧ ಪಾಡದೆ ತವ ಮಹಿಮೆ ಬೇಡುವೆ ನಿಜಭಕ್ತಿ ಓಡಿಸು ಈ ಬುದ್ಧಿ ಓಡಿಸೆ ಜಗ ಕಾಪಾಡುತಜೀವರ ಈಡು ದಿಕ್ಕಿಲ್ಲದ ಗೂಢ ಸ್ವತಂತ್ರನೆ 3 ಜ್ಞಾನವ ನಾಬಿಟ್ಟೆ ಹೀನನು ಹೇ ಧೊರೆಯೆ ಜ್ಞಾನದ ಶರಣೆಂಬೆ ಏನನು ಕೊಡಲಾರೆ ಆನತ ಬಂಧುವನಂತ ಗುಣಾರ್ಣವ ಶ್ರೀನಿಧಿ ಸೃಷ್ಟಿವಿನೋದವ ಗೈವನ4 ಬಂದಿಯು ನಾನೈಯಾ ಬಂಧಕ ನೀನೈಯ ಎಂದಿಗುನಾದಾಸಾ-ತಂಡಿಡು ನೀಲೇಸಾ ನಂದ ಮುನೀಂದ್ರ ಸುಮಾನಸ ಮಂದಿರ ನಂದದ ಶ್ರೀವರ “ಶ್ರೀ ಕೃಷ್ಣವಿಠಲ”ನ5
--------------
ಕೃಷ್ಣವಿಠಲದಾಸರು
ಪಾಲಿಸೈ ತಿಮ್ಮಪ್ಪ ಪರಮ ಪಾವನನಪ್ಪ ಪ್ರಾಣದಾಸೆಗಳಿಂದ ಕಾಣ ಬರುವೆವೆಂದ ಆಣೆ ಭಾಷೆಯನೊಂದ ಮಾಣೆನೊ ಗೋವಿಂದ ಕಾಣಿಕೆಯ ಕರದಿಂದ ತ್ರಾಣ ಮೀರಿಯೆ ಬಂದ ಜಾಣರಾಯನೆ ಚಂದಗಾಣಿಸೊ ಶುಭದಿಂದ 1 ಸ್ವಾಮಿ ನೀನೇ ಹೊಣೆ ಭೂಮಿಯೊಳು ರಕ್ಷಣೆ ಕಾಮಿತ ಸೈರಣೆ ನಾಮಕಲ್ಪನೆಯು ಪ್ರೇಮವಾಗಿಹ (ಹಣೆ)1 ನಾಮದ ಮನ್ನಣೆ ಸೌಮನಸ್ಯದ ಮಾಣೆ ತಾಮಸಕ್ಕಿಡಿಗಾಣೆ 2 ಸೇವಕ ಸಂಕಲ್ಪ ಕಾವನಾಯಕನಿಪ್ಪ ಠಾವಿಗಾಗಿಯೇ ಪೋಪ ಭಾವದಿಯಿರುತಿಪ್ಪ ಜೀವನ ತಾನಪ್ಪ ದೇವ ಕಾಣು ಈ ಕಪ್ಪ ಈವೆನೆನುತ ಬಪ್ಪ ಭೂವರಾಹತಿಮ್ಮಪ್ಪ 3
--------------
ವರಹತಿಮ್ಮಪ್ಪ
ಬಂದಿಯಾತಕೋ ಈ ಭವದೊಳು | ನೊಂದಿಯಾತಕೋ ನೀನೊಂದನರಿಯೆ || ಬಂದಿಯಾತನು ನೀ ಮತಿಮಂದನಾಗದೆ | ಗತಿ ಮುಂದೇನೆಂದು ತಿಳಿಯದಲೆ ಪ ನಾ ನಾ ಎನುತಲಿ ನಾನಾ ಯೋನಿಯೊಳು | ಜನಿಸಿ ಬಂದು ನೀ ಹೀನನೆನಿಸಿಕೊಂಡು || ಅಜ್ಞಾನದೊಳಗೆ ಬೆರೆತು ನೀ - | ನಾರೆಂಬದನರಿಯಲಿಲ್ಲವು ಗುರುತು | ಜ್ಞಾನಿ ಪುರುಷರ ಕೇಳುವದನೆ ಮರೆತು | ಇನ್ನು ಸದ್ಗತಿಗೆ ಆದಿಯೊ ಹೊರತು | ನೀ ಇದನರಿತು 1 ಆರರೊಳಗೆ ಬಿದ್ದು ಆರನು ನೋಡದೆ | ಆರು ಚಕ್ರದ ಮೇಲೆ ಏರಿ ಮ್ಯಾಲಕಿನ್ನು | ತೋರುತಿಹುದು ನೋಡು ರೂಪವಲ್ಲೀ | ಧಾರುಣಿಯೊಳಗೆಲ್ಲ ಅದರ ವ್ಯಾಪವು | ತೋರಿದಾಕ್ಷಣ ಅಳಿದ್ಹೋಯ್ತು ಪಾಪ | ಇದನು ಬಿಟ್ಟು ಮೂರ ನೆನಿಸಿ ಕೆಟ್ಟೀ | ಬಯಸಿ ನೊಂದೀ 2 ನರ ತನು ದೊರೆಕೋದು ಬರಿದೇನೊ | ಎರಡಿನ್ನು ಸರಿಯಾಗೊ ತನಕ | ಬರುವದೇನೊ ಸುಮ್ಮನೆ ಮರುಳಾಗ ಬ್ಯಾಡ || ಸರಿಸು ಅಸ್ಥಿರವೆಂದು ನೀ ಬೇಗದಲಿ | ಸಂಚಿತವೆಲ್ಲ ಕೂಡಿ ಬಂದಿತಿನ್ನೇನು | ಗುರು ಭವತಾರಕನ ಭಜಿಸು ನಿನ್ನ | ಮನಸಿನಿಂದಲಿ 3
--------------
ಭಾವತರಕರು
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
(ಅ) ಮಾಡುವುದೋ ಕೃಪೆ ದಾಸನೊಳು ರಾಮ ಮಾಡುವುದೋ ಕೃಪೆ ದಾಸನೊಳು ಪ ನೋಡ ನೋಡುತ ಕೈಯ್ಯ ಬಿಡುವರೆ ಬೇಡ ಬೇಡಿಕೊಂಬೆನು ರೂಢಿಯೊಳು ನಿನ್ನಂಥ ಕರುಣಿಯ ನೊಡಲಿಲ್ಲವೋ ಎಲ್ಲಿಯು ಅ ಬಂದೆನೋ ನಾನಾ ಜನ್ಮದಲೀ | ರಾಮ ನೊಂದೆನೋ ನಾ ಬಹು ಭವಣೆಯಲೀ ದ್ವಂದ್ವ ದುಃಖದಿ ಕಂದಿ ಕುಂದುತ ಮುಂದುಗಾಣದೆ ಕೆಟ್ಟೆನೋ ಕಂದನೆನ್ನುತ ಬಂದು ಪೊರೆ ಪರಮಾತ್ಮ ನಂಬಿದೆ ನಿನ್ನನು 1 ದಾನ ಧರ್ಮಗಳ ನಾನರಿಯೆ | ರಾಮ ಮೌನ ಮಂತ್ರಗಳ ನಾನರಿಯೆ ಧ್ಯಾನ ಧಾರಣ ಜ್ಞಾನಸಾಧನವೇನೊಂದನು ಅರಿಯೆ ಹಾನಿಯಿದ ನಾನೇನನೊರೆಯಲಿ ಮಾನನಿಧಿ ನಿನ್ನವನು ನಾ 2 ಕಾಮಿನಿ ಕಾಂಚನ ಭೂಮಿಗಳ | ರಾಮ ಕಾಮಕೆÉ ಸಿಕ್ಕಿದೆನೋ ಬಹಳ ನೇಮ ನಿಷ್ಠೆಗಳೇನೂ ಇಲ್ಲದೇ ತಾಪದಿ ನಾ ಕೆಟ್ಟೆನೋ ನಾಮಸುಧೆಯ ಪಾನ ಕರುಣಿಸು ಪ್ರೇಮದಲಿ ಶ್ರೀಕಾಂತನೇ 3
--------------
ಲಕ್ಷ್ಮೀನಾರಯಣರಾಯರು
* ಹರಿಗುರು ಕರುಣದಿ ದೊರಕಿದುದೆನಗೀ ಪರಮ ಪಾವನ ತಂಬೂರಿ ಪ. ನರÀಹರಿ ಭಕ್ತರು ಒಲಿದೆನಗಿತ್ತರು ಸುಲಲಿತ ನಾದದ ತಂಬೂರಿ ಅ.ಪ. ತಂದೆ ಮುದ್ದುಮೋಹನರು ಸ್ವಪ್ನದಿ ತಂದು ತೋರಿದಂಥ ತಂಬೂರಿ ನಂದ ಕಂದನ ಗುಣ ಅಂದದಿ ಸ್ತುತಿಸೆ ಆ- ನಂದವ ತೋರುವ ತಂಬೂರಿ ಇಂದಿರೇಶನ ಭಕ್ತರಂದದಿ ಧರಿಸುವ ರೆಂದೆಂದಿಗು ಈ ತಂಬೂರಿ ನೊಂದು ಭವದೊಳು ತಪ್ತರಾದವರಿಗೆ ಬಂಧನ ಬಿಡಿಸುವ ತಂಬೂರಿ 1 ಅಂತರಭಕ್ತರು ಹರುಷದಿ ನುಡಿಸುವ ಕಂತುಪಿತಗೆ ಪ್ರೀತಿ ತಂಬೂರಿ ಸಂತತ ಮಾನಾಭಿಮಾನವ ತೊರೆದು ಏ- ಕಾಂತದಿ ಸುಖಿಸುವ ತಂಬೂರಿ ಶಾಂತದಿ ನಾರದಾದಿಗಳು ವೈಕುಂಠದಿ ನಿಂತು ನುಡಿಸುವಂಥ ತಂಬೂರಿ ಪಂಥದಿ ಹರಿಪಾದಂಗಳ ಭಜಿಸೆ ನಿ- ಶ್ಚಿಂತೆಯ ಮಾಳ್ಪಂಥ ತಂಬೂರಿ2 ಬಲು ಬಲು ಪರಿಯಲಿ ಹರಿದಾಸತ್ವಕೆ ಬರುವಂತೆ ಮಾಡಿದ ತಂಬೂರಿ ಛಲದಿಂದಲಿ ಶ್ರೀ ಹರಿ ತಾನಿಡ್ಹಿಸಿದ ಒಲುಮೆಯಿಂದಲಿ ಈ ತಂಬೂರಿ ನೆಲೆಯಾದೆನು ಹರಿದಾಸರ ಮಾರ್ಗದಿ ಕಲುಷವ ಕಳೆದಿತು ತಂಬೂರಿ ಸುಲಭದಿಂದ ಶ್ರೀ ಗುರುಗಳು ಕರುಣಿಸಿ ನೆಲೆಗೆ ನಿಲಿಸಿದಂಥ ತಂಬೂರಿ 3 ಶ್ರೀನಿವಾಸನು ತಾ ಕೊಡಿಸಿದನು ಏನೆಂಬೆನು ಈ ತಂಬೂರಿ ಮಾನಾಭಿಮಾನವ ತೊಲಗಿಸುವುದಕೆ ಕಾರಣವಾಗಿಹ ತಂಬೂರಿ ಶ್ರೀನಿಧಿ ಸೊಸೆ ಬಹು ಆನಂದದಲಿ ತಾ ನುಡಿಸುವಳೀ ತಂಬೂರಿ ಗಾನಲೋಲ ಕೃಷ್ಣ ತಾನೊಲಿವುದಕೆ ಕಾರಣ ಮಾಡಿಹ ತಂಬೂರಿ 4 ಬೆಟ್ಟದೊಡೆಯ ತಾನಿಷ್ಟು ಹಟವ ಮಾಡಿ ಕೊಟ್ಟೀ ಕೊಟ್ಟನು ತಂಬೂರಿ ಎಷ್ಟು ನಾಚಿಕೆಪಟ್ಟರು ಬಿಡದಲೆ ಕಷ್ಟ ಕಳೆಯಲಿತ್ತ ತಂಬೂರಿ ಭವ ಕಟ್ಟು ಇಂದೆನ್ನನು ಮುಟ್ಟಿಸಿತ್ಹರಿಪುರ ತಂಬೂರಿ ಎಷ್ಟು ಹೇಳಲಿ ಶ್ರೀನಿಧಿ ಗೋಪಾಲ ಕೃಷ್ಣವಿಠ್ಠಲನಿತ್ತ ತಂಬೂರಿ 5
--------------
ಅಂಬಾಬಾಯಿ
ಕಮಲಾಕ್ಷ ಶ್ರೀಹರಿ ಪ ನೊಂದೆನೊ ಭವಬಂಧದೊಳಗೆ ಸಿಂಧುಶಯನ ಪೊರೆಯೊ ಜಗದ್ವಂದ್ಯ ಪಾದಕೆರಗಿ ನಮಿಸುವೆ 1 ಸುಂದರಾಂಗ ಹರಿಯೆ ಭಕ್ತವೃಂದ ಪೊರೆದು ಕಾಯ್ವ ದೇವ ಸಿಂಧುಶಯನ ಶ್ರೀ ಮುಕುಂದನೆ 2 ಪಾಲಿಸೆನ್ನ ಪವನನಯ್ಯ ಪಾದಕೆರಗಿ ಮುಗಿವೆಕಯ್ಯ ಲೋಲಲೋಚನೆಯರ ಪ್ರಿಯನೆ 3 ರಂಗನೆ ಉತ್ತುಂಗ ಮಹಿಮ ಮಂಗಳರೂಪ ಪಾಂಡುರಂಗ ಕೃಪಾಪಾಂಗ ಶ್ರೀಹರಿ4 ಪಾಹಿ ಪಾಹಿ ಪಂಕಜಾಕ್ಷಿ ಪಾಹಿ ಲಕ್ಷ್ಮೀರಮಣ ಶ್ರೀಶ ಪಾಹಿ ಕಮಲನಾಭ ವಿಠ್ಠಲನೆ 5
--------------
ನಿಡಗುರುಕಿ ಜೀವೂಬಾಯಿ
ನಾನೊಂದು ಕನಸು ಕಂಡೆ ಕೇಳಕ್ಕಾ ಪ ನರರಂತೆ ಬಂದ ನಲ್ಲೆ ಕೇಳಕ್ಕಾ | ಪರಿಪರಿಲಿ ಬೋಧಿಸಿದನೇ ಕೇಳಕ್ಕಾ 1 ಅಯ್ಯ ನಂಘ್ರಿಗೆ ಸಿರಸನು | ನಾ ಚಾಚಿ | ಜೀಯ ಸಲಹೆನ್ನಯನಲು ಕೇಳಕ್ಕಾ ಕೈಯ ಬಿಡೆನೆಂದಿಗೆಂದು ಕೇಳಕ್ಕಾ 2 ಕನ್ನಡಿಯೊಳಡಗಿದಂತೆ ಕೇಳಕ್ಕಾ | ಲಿನ್ನು ಮನ ಬೆರಗಾಯಿತೆ ಕೇಳಕ್ಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪ್ರಥಮ ವಚನ ಕಾಂತಿಯಿಂದಿರುವ | ಚಕ್ರ ಪದುಮ ಗದೆ | ಅದರೊಳಗೆ ಬಿದ್ದಿರುವ ಪರಮಪವಿತ್ರ ತ್ಯುಬುಗಳ ತೆಗೆದು | ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ | ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ | ದಿನವೆ ಪರಮ ಪುಣ್ಯೋದಯ ಪ ಪಾದ | ಸರಸೀರುಹ ಸರಸದಿಂ ಕೊಂಡಾಡಿ | ನೆರಳಿ ಮರಳೀ ಸೌಖ್ಯದಾನಂದ | ಶರಧಿಯೊಳು ಮುಣುಗಿ ಮುಣುಗಿ ಏಳುತ | ಸೌಖ್ಯದಾನಂದ ಭಕ್ತಿಭಾವಗಳಿಂದ ಕರುಣಾಳು ಕೃಷ್ಣ ತ್ವರಿತದಲಿ ತನ್ನ ಸೇವಕ ಜನರೊಳಗೆ | ಸೇರಿಪ್ಪ ನಾ ಅರಿಯನು ನಾನೊಂದು ಸ್ತೋತ್ರ ಮಾಡುವದಕ್ಕೆ | ವರವ್ರಜ ತರುಣಿಯರು ಏನು ಪುಣ್ಯವ ಮಾಡಿದರೊ | ಸರುವದಾ ಹರಿಯನ್ನು ಕಾಣುವರು ಕಂಗಳಲಿ | ಪರಿಹಾಸ್ಯ ನುಡಿಯಲ್ಲ | ಪರಮ ಪವಿತ್ರರಿಗೆ ದೊರೆ | ಸಿರಿ ವಿಜಯವಿಠ್ಠಲನು | ಕರವಿಡಿದು ಎನ್ನಭೀಷ್ಟವನಿತ್ತು | ಪರಿಪಾಲಿಸಬೇಕೆಂದು ಭಕ್ತ ಕೇಳಿದನು 1 ದ್ವಿತೀಯ ವಚನ ಜಲಜನಾಭನÀ ರಥದ ದಡದ ಮೇಲೆ ನಿಲ್ಲಿಸಿ | ಜಲದೊಳಗೆ ತಾ ಮುಳುಗಿ ಅಕ್ರೂರ ಕಣ್ಣು ತೆರೆಯೆ | ಕಲುಷವರ್ಜಿತನಾದ ಕೃಷ್ಣ | ಹಲಧರನ ಸಹ ಮೇಳ ಸಂಭ್ರಮದಿ | ಜಲದೊಳಗೆ ತಾ ಕಂಡು | ನಾ ಪೇಳಿದ ಮಾತು ನಡಿಸಿ | ಬಲವಂತದಲಿ ಬಿದ್ದ ಭವರೋಗ ವೈದ್ಯನ ಮಾತೆ | ಲಲನಾಮಣಿಗೆ ಏನು ಹೇಳುವೆನು | ಸುಲಭವಾಗಿ ಎಮಗೆ ಅಭೀಷ್ಟಪ್ರದವಿದು | ಎಂದೆನುತ ತಂದೆ ನಂದಗೋಪನು | ಯೋಚಿಸಿ ಮನದಲಿ ಚಿಂತೆಯಗೊಂಡು | ಹನುಮೇಶ ವನಜಾಕ್ಷ | ಘನಮಹಿಮ ಎನ್ನ ಮನದ ಚಿಂತೆಯನು ಹನನವ ಮಾಡಿ ಎನ್ನ ಕೈಪಿಡಿಯಲಾಗದೆ ಈಗ ಎನುತ | ಮೇಲೇಳೆ ಸನಕ ಸನಂದನ ಸನತ್ಕುಮಾರ ಸಹ | ವನಜ ಸಂಭವ ಜನಕ ವೈಕುಂಠಪತಿ ಕೃಷ್ಣ | ಕನಕ ರಥದ ಮೇಲೆ ನಿಂತಿದ್ದು ತಾ ಕಂಡು | ಕರವೆರಡು ಜೋಡಿಸಿ | ಭರದಿ ಭಕ್ತಿಯಗೊಂಡು | ನರಜನ್ಮ ಹುಳು ನಿನ್ನ ಮಹಿಮೆಗಳ ಅರಿಯದೆ | ಜಲದೊಳಗೆ ನೀ ಬಿದ್ದಿ ಎನುತಲೀ ಯೋಚಿಸಿದೆ | ಚರಣದ ಮಹಿಮೆಗಳ | ಮರಣದಲಿ ಅಜಮಿಳಗೆ ದಯಮಾಡ ಬೇಕೈ | ಅರ್ಭಕ ಪ್ರಹ್ಲಾದ ನಿಜಮುನಿ ಶುಕಾಚಾರ್ಯರಂತೆ | ಅಪ್ರಾಕೃತ ಅಕಲಂಕ ಚರಿತ ಅಮರೇಂದ್ರ ವಂದಿತ | ಪಾಲಾ ವಿಜಯನ ರಥವನ್ನು ಸಾರಥಿಯಾಗಿ ದಯಾಸಮುದ್ರ ವಿಜಯವಿಠ್ಠಲನೇ2 ತೃತೀಯ ವಚನ ಅರವಿಂದನಾಭ ಕೃಷ್ಣ ಅಖಿಲಜನ ಪರಿಪಾಲ | ಕೃಪಾ ಸಮುದ್ರ | ಕಳತ್ರ | ಪರಿಪಾಲಿಸಬೇಕೆನ್ನ | ಪಾವನ ಚರಿತ್ರ | ಸುರಪತಿಗೆ ಅಸುರರ ಬಲನೀಗಿ ಆ | ವಿರಂಚಿ ಬಳಿಗೆ | ಶರಣೆಂದು ವರವೊಂದು ಕೇಳಿದೆ ವೈಕುಂಠಪತಿ ಕೃಷ್ಣ | ಕಂಟಕ ಕಂಸಾದಿಗಳ ಗೆಲಿದು | ಪಾದ | ಸರಸಿಜದೊಳು ಚಿತ್ತವಿರುವಂದದಲಿ | ಪರಮ ದಯಾಕರ ನಿನ್ನ ಮಹಾ ಮಹಿಮೆಗಳ | ಗರ್ವಿಷ್ಠನಾಗಿ ಮಲಗಿದವನಲ್ಲಿ | ಕೇಳ್ವ | ತ್ವರಿತದಲಿ ದಯಮಾಡಿ | ಭರದಿ ಪಾಲಿಸಬೇಕೆನ್ನ | ಭಕ್ತಜನ ವತ್ಸಲನೆ ಎನಲಾ ಮಾತಿಗೆ | ಇನ ಇಂದಿರೆ ಅರಸ | ಹನುಮೇಶ ಕನಕಮಯವಾದ ಪೀತಾಂಬರ | ಜನಿವಾರ | ಅನೇಕ ಅತರಿಗಳ ಗೆಲಿವ ಕನಕಮಯ | ಕಿರೀಟ ಚತುರ್ಭುಜ | ಕಟಕ ರತ್ನಮಯದುಂ | ಗುರ ವಾಹನ ಚಕ್ರವರ್ತಿಗೆ ತನ್ನ ನಿಜರೂಪವ3 ಚತುರ್ಥ ವಚನ ಆನಂದತೀರ್ಥ ಮುನಿವಂದ್ಯ | ಜ್ಞಾನಿಗಳ ವಲ್ಲಭ | ದೀನಜನ ಮಂದಾರ ನಾ | ನಿನ್ನ ಮೊರೆಹೊಕ್ಕು ಧೇನಿಸಲರಿಯೆ | ಆನೆಯನು ಆದರದಿ ಕಾಯ್ದ ಶ್ರೀನಿವಾಸ | ಸಾನುರಾಗದಿ ಪ್ರಹ್ಲಾದಗೊಲಿದ ಶ್ರೀನಿಧಿ ನರಸಿಂಹ | ಅನಾದಿ ಕಾಲದಿ ತಂದೆ ಬಂಧು ಬಳಗವು ಎಂದೆ | ಮಾನಿನಿ ದ್ರೌಪದಿ ಮೊರೆ ಇಟ್ಟಾಗ ಧ್ವನಿ ಕೇಳಿ | ಮಣಿ ಲಕುಮಿಗ್ಹೇಳದೆ | ಆನಂದಮಯನು ಅಕ್ಷಯವಿತ್ತು ಆಗ ಪರಿಪಾಲಿಸಿದಿ ಅದರಂತೆ | ಮಾನಹೀನನೆಂದು ನಿರಾಕರಿಸದೆ | ಧ್ಯಾನಕ್ಕೆ ಒಳಗಾಗಿ | ಮೌನಿಜನರನು ಕಾವ ಕ್ಷೋಣೀಶ ಮಾಣಿಕ್ಯ ಮಕುಟ ಕುಂಡಲಧರ | ಸಿರಿ ತುಳಸಿ | ಪರಿಮಳ ಸಿರಿಗಂಧ ಉದರದಲಿ ಬೆಳಗುವ | ಉಪೇಂದ್ರ ನಾಮ ಕೃಷ್ಣ ಉರಗೇಶಶಯನಾ | ನಿನ್ನ ದಾಸರದಾಸನೆಂದೆನುತ | ಕಾಣಸಿ ನಿನ್ನ ನಿಜರೂಪ | ನಿನ್ನ ಸ್ತೋತ್ರ ಮಾಡುವ ಭಕ್ತಗಣದೊಳಗೆ ನಿಲ್ಲಿಸೊ | ನಿನ್ನ ಮತ್ತೊಂದು ಪದಾರ್ಥ ಕೇಳುವವನಲ್ಲ | ತೀರ್ಥ ತೀರ್ಥಗಳಲ್ಲಿ ಮುಳುಗಿ ಬಂದವನಲ್ಲ | ಸಾರ್ಥಕವಾದಂಥ ಕೃತ್ಯ ಮಾಡುವನಲ್ಲ | ಸಾಧುಜನಸಂಗದಲಿ ಸೇರಿ ಪಾಡಿದವನಲ್ಲ | ಈ ನುಡಿ ಸತ್ಯವೇ ಲೇಸು ಪುಸಿಯಲ್ಲ | ಮಲ್ಲಮಲ್ಲರ ಗೆಲಿದ ಮಾಧವನು ನೀನಲ್ಲದೆ ಇನ್ನೊಂದು ದೈವವಿಲ್ಲದ ಮಧ್ವ ಮುನಿ ಹೃದಯಾಟ್ಟ ಪೀಠದೊಳು ವಾಸ ಮಾಡುವ ದೊರೆ ಉದ್ಧರಿಸಬೇಕೆನ್ನ ವಿಜಯವಿಠ್ಠಲನೆ 4 ಐದನೇ ವಚನ ಕರಿಯಬೇಕೆನ್ನ ಹಿರಿಯರೂ | ಇಡಲಾಗದ ಮನಸು ಸರ್ವದಾ ನಿನ್ನ | ಚರಣಾರವಿಂದ ದ್ವಂದ್ವದಲಿ | ಭರದಿಂದ ಮುದ್ರೆಯನಿಟ್ಟ | ತುತಿ ಮಾಡುವೆ ನಿನ್ನ | ಮುಚಕುಂದ ವರದ ನಿತ್ಯಾನಂದ ವಿಗ್ರಹ | ಸರಸಿರುಹಾಕ್ಷ ಸಜ್ಜನ ಪರಿಪಾಲಾ | ಪೂಜ್ಯ ಅವಗುಣ ವರ್ಜ ಅಕಳಂತ | ಮಹಾನುಭಾವ ಮಧ್ವೇಶ | ಈ ನುಡಿಯು ಪುಸಿಯಲ್ಲ | ಕರ ಪಿಡಿದು ಕಾಯ್ವರನ ಕಾಣೆ ಚರಣಾವಿಂದವನು ಭಜಿಪ ವೀಣೆ | ಈ ಕ್ಷೋಣಿಯೊಳಗೆನ್ನ ನರಜನ್ಮವು ಬಾರದೆ ಪರಿಪಾಲಿಸಬೇಕೆನ್ನ | ಪರಮ ಪವಿತ್ರ ಪಂಕೇರುಹನೇತ್ರ ಸಂಕಟಗಳ ಕಳೆದು | ಸೌಖ್ಯಪದ ವೈಕುಂಠದೊಳಗೆನ್ನ ನಿಲ್ಲಿಸೊ | ಭರದಿಂದ ನಿನ್ನ ನಾಮದ ಭಂಡಾರ ಕದ್ದ ಕಳ್ಳನೆನೆಸಿ | ಅರವಿಂದನಾಭ ನಿನ್ನ ಅಮರನೇ ವೈಕುಂಠ | ಕಾರಾಗೃಹದೊಳಗೆ ವಾಸ ಮಾಡಿಸು ದೇವ ಕೋಟಿ | ವರುಷಕೆ ಇದುವೆ ಎನಗೆ ಹರುಷ ಆನಂದಮಯ | ಇನ್ನೋರ್ವನಿಲ್ಲ ವಿಜಯವಿಠ್ಠಲನೇ 5
--------------
ವಿಜಯದಾಸ