ಒಟ್ಟು 125 ಕಡೆಗಳಲ್ಲಿ , 49 ದಾಸರು , 125 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
(38ನೇ ವರ್ಷದ ವರ್ಧಂತಿ) ದಯಾನಿಧೆ ಪರಿಪಾಲಯ ಮಾಂ ಪ. ಮಾನುಷತ್ವವು ಬಂದ ಸಮಯದಿ ಹೀನ ಭೋಗವೆ ಬಯಸಿದೆ ನಾನು ನನ್ನದು ಎಂಬ ಕೀಳಭಿ- ಮಾನವೇ ನಾ ವಹಿಸಿದೆ ಏನನೆಂಬೆನು ಎನ್ನ ಬುದ್ಧಿವಿ- ಹೀನತೆಯ ಬಯಲಾಸೆ ಬಿಡಿಸು 1 ಇಳೆಯೊಳಿರುತಿಹ ನಿನ್ನ ಮಹಿಮೆಯ ತಿಳಿಯದಾದೆನು ಮೋಹದಿ ಕಳೆದೆ ಮೂವತ್ತೆಂಟು ವತ್ಸರ ಹಲವು ವಿಷಯದಿ ಚೋಹದಿ ಕಲಿಮಲಾಪಹ ಕೃಪಾಳು ನಿನ್ನಯ ನೆಲೆಯನರಿಯದೆ ನೊಂದೆನಲ್ಲೊ 2 ಆಸ್ಯದಲಿತ್ವನ್ನಾಮ ನುಡಿಸುತ ದಾಸ್ಯವನು ದಯ ಮಾಡುತ ಹಾಸ್ಯ ಮಾಳ್ಪರ ಹಲ್ಲ ಮುರಿದು ವಿಲಾಸ್ಯ ಮತಿ ಕಾಪಾಡುತ ಪೋಷ್ಯ ಪದವನು ನೀಡು ಲಕ್ಷ್ಮೀ- ವಾಸ್ಯ ವಕ್ಷನ ವೆಂಕಟೇಶ3
--------------
ತುಪಾಕಿ ವೆಂಕಟರಮಣಾಚಾರ್ಯ
(ಅ) ಶ್ರೀ ಗಣೇಶ ಗಣಪತಿ ಶ್ರೀ ಗಜವದನಾ ಬೇಗದಿ ಕರುಣಿಸು ಪ ಬಾಗುತ ಬೇಡುವೆ ನೀಗು ವಿಘ್ನಗಳ ಅ.ಪ. ಪದ್ಯವ ರಚಿಸಲು ಬುದ್ಧಿಯನೀವುದುಬಿದ್ದು ಬೇಡುವೆ ಸಿದ್ಧಿ ವಿನಾಯಕ 1 ತೋರು ದಯವನೋಂಕಾರ ರೂಪನೆಶೌರಿಯ ತುತಿಸಲು ಬೀರು ಬಲವನು 2 ಗದುಗಿನ ವೀರನಾರಾಯಣ ದೇವನಪದವನು ಭಜಿಸಲು ಪದಗಳ ರಚಿಸಲು 3
--------------
ವೀರನಾರಾಯಣ
(ಈ) ಆತ್ಮನಿವೇದನಾ ಕೃತಿಗಳು ಅಕಟಕಟ ಬಹಳ ಬಡತನವಡಸಿದುದೆ ನಿನಗೆ ಅಕಳಂಕ ಚರಿತ ಹರಿಯೆ ಪ ಪ್ರಕಟತನದಿಂ ಗೋದಾನಕ್ಕೆ ಕೈನೀಡುವರೇ ಸುಖಮಯ ಶರೀರ ಚನ್ನರಾಯಾ ಅ.ಪ ಹಿಂದೆ ಯಜ್ಞದಲಿ ಬಲಿಯಿತ್ತ ಭೂದಾನಕ್ಕೆ ದಂದಿಗೆ ಸಾಲದಾಯಿತೆ ಅಂದು ಕರ್ಣನು ಕೊಟ್ಟ ದಾನವನು ನೀ ಪಿಡಿದು ದಂದಿಗೆ ಸಾಲದಾಯಿತೆ ಇಂದು ನಿನ್ನಯ ದಾಸಾನುದಾಸನು ಕೊಟ್ಟ ಗೋದಾನ ದೊಂದೊಂದು ಗೋಗಳಿಗೆಛಂದದಲಿ ನಿಂದು ದಾನವ ಕೊಂಡೆಯಾ ಸ್ವಾಮಿ 1 ಉರದೊಳಗೆ ಅನವರತ ವಾಸವಾಗಿರುತಿಪ್ಪ ಶರಧಿಸುತೆ ಕೈಬಿಟ್ಟಳೇ ಬೆರೆತು ಪೋದುದೇ ಪಾಲ್ಗಡಲು ಮುನಿಸಿಕೊಂಡು ಬರಡಾಯಿತೇ ಕಾಮಧೇನೂ ತಿರುಕ ಹಾರುವನಂತೆ ಪರಿಪರಿಯ ದಾನಕ್ಕೆ ಭರದಿ ಕೈ ಒಡ್ಡುತಿಹರೆ ಪುರುಷೋತ್ತಮನೆಂಬ ಅಭಿಮಾನವಿನಿತಿಲ್ಲದೇ ದೂರಿಗೊಳಗಾಗಬಹುದೆ ಸ್ವಾಮಿ 2 ಇತ್ತ ದಾನದ ಗೋವುಗಳನೆಲ್ಲ ಗುಡಿಯೊಳಗೆ ಮೊತ್ತದಿಂ ಕೂಡಿಕೊಂಡೂ ಒತ್ತಿ ಮುದ್ರೆಯನು ನಾಮವನಿಟ್ಟು ಬಾಲಗಳಿ ಗೆತ್ತಿ ಘಂಟೆಗಳ ಕಟ್ಟೀ ಅರ್ಥಿಯಿಂ ತೋರಿಸಿ ಯೆನ್ನ ಕುಲಕೋಟಿಗಳಿ ಗಿತ್ತೆ ಸುರಪದವನು ಕರ್ತುೃ ವೈಕುಂಠ ವೇಲಾಪುರಾಧೀಶ್ವರನೇ ಭೃತ್ಯನ್ನ ಕಾಯೊ ಸತತ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡಿನ ದೇವಿಯನ್ನು ಕುರಿತು) ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆಪ. ದಯಮಾಡೆ ಕೇವಲ ಭಯವಿಹ್ವಲನಲ್ಲಿ ದಯಸಾಗರೆ ಸೌಭಾಗ್ಯಸಂಪದವನ್ನುಅ.ಪ. ವೇದಾಂತವೇದ್ಯೆ ನಿಖಿಳಜಗದಾದಿವಿನೋದೆ ಮಧುರಬಿಂಬಾಧರೆ ನಿನ್ನಯ ಪರಿಹರಿಸಿ ಸರ್ವಾಪ- ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1 ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆ ಲಂಬೋದರಪರಿರಂಭಕರಾಂಬುಜೆ ಮುಖೇಂದುಪದ್ಮ ದ- ರೋಲಂಬಕುಂತಳೆ ಶುಂಭ ಮರ್ದಿನಿ 2 ಸಿಂಧೂರನಯನೆ ನಿಖಿಲಾಮರವಂದಿತಚರಣೆ ನಿತ್ಯಾನಂದಪ್ರಕಾಶಿನಿ ಅಂಧಕಾಸುರವೈರಿಹೃದಯಾನಂದ ಪಾರಾವಾರ ಪೂರ್ಣಮಿ- ಸುರಥನರೇಂದ್ರವರದೆ ಮೃಗೇಂದ್ರವಾಹಿನಿ3 ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆ ಮಹಾಗಜಗೌರಿ ಶಂಕರಿ ತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ- ದಿವಾಕರೆ ಮಾನಿತೋದ್ಧರೆ4 ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರ ಜಗದಾದಿಮಾಯೆ ಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ- ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ5
--------------
ತುಪಾಕಿ ವೆಂಕಟರಮಣಾಚಾರ್ಯ
(ಮನೆಬಾಗಿಲ ಮೇಲೆ ಶ್ರೀನಿವಾಸ ಮೂರ್ತಿ) ಮಾಧವ ನಿಧಿಗಿರಿನಾಯಕ ಪದಕಮಲಾಶ್ರಿತ ಪರುಷಸುಖದಾಯಕ ಪ. ಬಲಿಯ ದೃಢಕೆ ಮೆಚ್ಚಿ ಬಾಗಿಲ ಕಾಯ್ದನಿ- ರ್ಮಲ ಕರುಣಾಮೃತ ವಾರಿಧೆ ಸುಲಭದಿ ಮುಂದಿನ ವಲಭಿತ್ಪದವನು ಸಲಿಸುತ ನೀನೀ ನಿಲಯದಿ ಸೇರಿದಿ 1 ಮಾಕಳತ್ರ ಮಮತಾನರಮೋಹ ನಿ- ರಾಕರಿಸಖಿಳ ಸುಖಾಕರನೆ ಸ್ವೀಕರಿಸೆನ್ನಯ ಸರ್ವ ಸಮರ್ಪಣ ಬೇಕು ಸರ್ವದಾ ತ್ವಜನ ತರ್ಪಣ 2 ಭೂರಮೇಶ ಗೃಹದ್ವಾರದಿ ನೀ ನೆಲೆ- ದೋರಲು ದುರಿತವು ಸೇರದಲೆ ದೂರೋಡುವದೆಂದರಿತು ನಂಬಿದೆನು ನೀರಜಾರಮಣ ಶೇಷ ಗಿರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಲಾಲಿ ಹಾಡು) ಲಾಲಿ ರಘುಕುಲವೀರ ರಾಕ್ಷಸಗಣಾರಿ ಲಾಲಿ ಜಗದೇಕ ಸುಂದರ ಸೇತುಕಾರಿ ಲಾಲಿ ನಗಚಾಪ ಹೃತ್ಕಮಲ ಸಂಚಾರಿ ಲಾಲಿ ಸುಗುಣಾಂಬುನಿಧಿ ಸುಜನಾರ್ತಿ ಹಾರಿ ಪ. ಧರಣಿ ಭಾರವನು ಬೇಗಿಳುಹಬೇಕೆಂದು ಸುರರು ನಡೆತಂದು ಸಿರಿವರನೆ ನಿನ್ನ ಪ್ರಾರ್ಥನೆ ಮಾಡಲಂದು ಧರೆಯೊಳವತರಿಸಿ ರಾಜಿಸಿದೆ ಗುಣಸಿಂಧು 1 ದರಚಕ್ರ ಶೇಷರನು ಸರಿಯಾಗಿ ತನ್ನಾ ವರಜಪದವೈದುತವತರಿಸಿರಲು ಮುನ್ನ ಭರತ ಶತ್ರುಘ್ನ ಲಕ್ಷ್ಮಣರೆಂಬರನ್ನ ಚರಣ ಸೇವಕರೆನಿಸಿ ಪೊರದಿ ಗುಣರನ್ನ 2 ಶ್ರೀ ರಾಮ ಸೀತಾವರಾಶ್ರಿತ ಪ್ರೇಮ ಮಾರುತಿಗೆ ವಿಧಿಪದವನಿತ್ತ ಗುಣಧಾಮ ಘೋರ ರಾವಣ ಮುಖ್ಯ ದಿತಿಜ ನರ್ದೂಮ ಭೂರಮಣ ಶೇಷಗಿರಿವರ ಪೂರ್ಣಕಾಮ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಕ್ಷಯ ಗುಣಪೂರ್ಣ ಲಕ್ಷ್ಮೀರಮಣ ಪ ಕುಕ್ಷಿಯೊಳಗೆ ಜಗವಿಟ್ಟು ರಕ್ಷಿಪ ಸ್ವಾಮಿ ಈಕ್ಷಿಸಿ ಕರುಣ ಕಟಾಕ್ಷದಿ ಸತತ ಅ.ಪ. ಏಸೇಸು ಕಲ್ಪದಲ್ಲೂ ಈಶ ನೀನಿಹುದಯ್ಯ ದಾಸರು ಜೀವರ್ಕಳು ಕೃಪಾಳು ಕ್ಲೇಶ ಸುಖಂಗಳಿಗೆ ನೀನೆ ಸ್ವತಂತ್ರನೆಂದು ಸೂಸಿ ಪೇಳುತ್ತಲಿಹರು ಸಜ್ಜನರು ವಾಸುದೇವನೆ ಸರ್ವಾಸುನಿಲಯನೆ ಏಸೇಸು ಬಂದರು ದಾಸರ ಬಿಡದಿರು ನೀ ಸಲಹದೆ ಉದಾಸೀನ ಮಾಡಲು ಆಸರೆ ಯಾರಿನ್ನು ಶಾಶ್ವತ ವಿಭುವೆ 1 ನಿನ್ನಧೀನನÀವನು ನಿನ್ನ ದಾಸರ ಸೂನು ಎನ್ನುವ ಸಥೆಯಿಂದ ಮುಕುಂದ ನಿನ್ನನೆ ಬೇಡುವೆ ನಿನ್ನನೆ ಕಾಡುವೆ ಅನ್ಯಥಾ ಗತಿಗಾಣೆ ನಿನ್ನಾಣೆ ನಿನ್ನ ದಾಸರ ಪದವನ್ನು ಪಿಡಿದು ನಾ ನಿನ್ನನು ಸ್ತುತಿಸಿದೆನೆನ್ನುತ ಕೃಪೆಗೈದು ಬಿನ್ನಪ ಲಾಲಿಸಿ ಬನ್ನವ ಕಳೆದು ಘನ್ನ ಭಕುತಿಯಿತ್ತು ಧನ್ಯನ ಮಾಡೊ 2 ಶರಣರ ಮಹದೇವ ಶರಣರ ಬಿಡದೆ ಕಾವ ಶರಣರ ಉದ್ಧಾರ ಗಂಭೀರ ಶರಣ ರಕ್ಷಾಮಣಿ ಶರಣ ತ್ರಿದಶ ತರು ಶರಣ ಸುರಧೇನು ಎನಿಸಿನ್ನು ನಿರುತದಿ ಪೊರೆಯುವ ಬಿರುದಗಳರಿತು ಶರಣೆಂದು ನಿನ್ನಯ ಚರಣ ಕಮಲವನು ಮರೆಹೊಕ್ಕೆನು ಕಾಯೊ ಪರಮ ದಯಾಕರ ಕರಿರಾಜವರದ ಶ್ರೀಕಾಂತ ನಿಶ್ಚಿಂತ 3
--------------
ಲಕ್ಷ್ಮೀನಾರಯಣರಾಯರು
ಅಚ್ಚರಿಯೊಳಚ್ಚರಿಯು ಅಚ್ಯುತನ ನಾಮವಿದು ತುಚ್ಛ ಬುದ್ಧಿಯ ಬಿಟ್ಟು ಎಚ್ಚೆತ್ತು ನೋಡೊ ಪ ನಿಧಿಯು ತನ್ನೆದುರಿಗಿರೆ ವದರಿ ದುರ್ಯೋಧನನು ಮದಡನಾದನು ಬರಿದೆ ದಳವ ಕೊಂಡು ಸದಮಲಾತ್ಮನ ದಿವ್ಯ ಪದವನರ್ಜುನ ಪಿಡಿದು ಮುದದಿ ಭಾಗ್ಯವ ಪಡೆದನದ್ಭುತವ ನೋಡ 1 ಹರಿಯ ಯೋಗದ ಸಿರಿಯು ಇರುವ ನಿಜವರಿಯದೆ ಕುರುಡನಣುಗನು ಜರಿದು ಹಾಳಾದನು ಉರುತರದ ಭಕ್ತಿಯಿಂದೆರಗಿ ಕರಗಳ ಮುಗಿದು ನರ ತನ್ನ ಹೆಸರನ್ನು ಸಾರ್ಥಕವಗೈದ 2 ನೀಚಯುಕ್ತಿಗಳಿಂದ ಗೋಚರಕೆ ಬಹನಲ್ಲ ವಾಚಾಮಗೋಚರನು ಶ್ರೀಕಾಂತನು ಕೀಚಕಾರಿ ಪ್ರಿಯನ ಶ್ರೀ ಚರಣ ಭಕ್ತಿ ಭವ-ಮೋಚನಕೆ ಸೂಚನೆಯು ಆಚರಿಸಿ ನೋಡೋ 3
--------------
ಲಕ್ಷ್ಮೀನಾರಯಣರಾಯರು
ಅಂತರಂಗದಲಿ ಹರಿಯ ಕಾಣದವನೆಹುಟ್ಟು ಕುರುಡನೋ ಪ ಸಂತತ ಸಿರಿಕೃಷ್ಣ ಚರಿತೆ ಕೇಳದವನೆಜಡಮತಿ ಕಿವುಡನೊ ಎಂದೆಂದಿಗುಅ.ಪ. ಹರುಷದಲಿ ನರಹರಿಯ ಪೂಜೆಯ ಮಾಡದವನೆ ಕೈ ಮುರಿದವನೊಕುರುವರ ಸೂತನ ಮುಂದೆ ಕೃಷ್ಣಾಯೆಂದುಕುಣಿಯದವನೆ ಕುಂಟನೋನರಹರಿ ಚರಣೋದಕ ಧರಿಸದ ಶಿರನಾಯುಂಡ ಹೆಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರ ಭೋಜನವೋ ಎಂದೆಂದಿಗು 1 ಅಮರೇಶ ಕೃಷ್ಣಗರ್ಪಿತವಿಲ್ಲದಾ ಕರ್ಮಅಸತಿಯ ವ್ರತನೇಮವೋರಮೆಯರಸಗೆ ಪ್ರೀತಿಯಿಲ್ಲದ ವಿತರಣೆರಂಡೆ ಕೊರಳ ಸೂತ್ರವೊಕಮಲನಾಭನ ಪಾಡಿ ಪೊಗಳದ ಸಂಗೀತಗಾರ್ಧಭ ರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರಮಾಡದವನೆ ಮೃಗವೊ, ಎಂದೆಂದಿಗು2ಜರೆ ಪುಟ್ಟು ಮರಣವ ತೊಡೆವ ಸುಧೆಯ ಬಿಟ್ಟುಸುರೆಯ ಸೇವಿಸಬೇಡವೊಸುರಧೇನುವಿರಲಾಗಿ ಸೂಕರ ಮೊಲೆಹಾಲುಕರೆದು ಕುಡಿಯಬೇಡವೊಕರಿರಥಾ ತುರಗವಿರಲು ಬಿಟ್ಟು ಕೆಡಹುವಕತ್ತೆಯೇರಲಿಬೇಡವೊಪರಮ ಪದವನೀವ ಸಿರಿಕೃಷ್ಣನಿರಲಾಗಿನರರ ಸೇವಿಸಬೇಡವೊ, ಎಂದೆಂದಿಗು 3
--------------
ವ್ಯಾಸರಾಯರು
ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಅಲ್ಪದೇಹವು ಹುಟ್ಟಿ ಮಾಯ ಕಲ್ಪನೆಗೊಳಗಾಗಿ ಸ್ವಲ್ಪವನ (ಸ್ವಲ್ಪವು) ಶ್ರೀಹರಿ ನಾಮಸ್ಮರಿಸಿ ಸದ್ಗತಿ ಕಾಣುವ ಸಾಧನೆ ಇಲ್ಲದ್ಹೋಯಿತು ಪ ಜನುಮ ಜನುಮದಲಿ ಸಂಸಾರ ಜಲಧಿಯೊಳಗೆ ಮುಳುಗಿ ಘನ ಪುರುಷನ ಮಹಿಮೆ ಕಾಣದೆ ಗಾಢಾಂಧ ಕಾರದಲಿ ದಿನಗಳ ಕಳೆದು ದೇವರ ಭಜಿಸದೆ ಜನುಮಗಳಳಿದೂ ಚರಿಸುವದಾಯಿತು 1 ಭ್ರಾಂತಿಯ ಘನವಾಗಿ ಪ್ರಪಂಚ ಬದ್ಧನಾಗಿ ಕಾಂತೇರ ಮೋಹಕ್ಕೆ ಸಿಲುಕಿ ಕಾಲವುಕಳೆದಿನ್ನು ಚಿಂತನೆ ಮಾಡದೆ ಮುಕ್ತಿ ಸೇರದಂತಾಯಿತು 2 ಪನ್ನಗಶಯನನ್ನಾ ಪರಿಪರಿ ಭಕುತಿಲಿ ಮನದಿಂದ ವರ್ಣಿಸಿ ಜಿವ್ಹದಲಿ ಹರಿಪದವನ್ನೇ ಕಾಣದಲೆ ಇನ್ನು ಶ್ರೀ ವ್ಯರ್ಥವು ಹೋಯಿತು 3
--------------
ಹೆನ್ನೆರಂಗದಾಸರು
ಆರು ಪೇಳಿದರೊ ಜೀವಾ ನಿನಗಾರು ಪೇಳಿದರೋ ಪ ಆರು ಪೇಳಿದರೋ ಈ ಸೋರುವ ಮನೆಯೊಳು ಇರುವುದು ಒಳಿತಲ್ಲಾ ತೆರಳುವುದುಚಿತನೇ ಅ.ಪ. ದುಷ್ಟರಿರುವರೋ ಈ ಗ್ರಹದೊಳು ಕಟ್ಟಿ ಸುಲಿಯುವರೋ ಇಟ್ಟಿದ್ದ ಅನ್ನದಿ ಕೆಟ್ಟ ಕ್ರಿಮಿಗಳುಂಟು ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬಿದೋ ಅಲ್ಲಿ 1 ಛಾಯಾವೂ ಇಲ್ಲಾ ಈ ಮನೆಯೊಳು ದಾಯಾವೂ ಇಲ್ಲಾ ಬಾಯ ಬಿಡಿಸುವರೋ ಅನ್ಯಾಯ ಮಾಡುವರೋ ಉಪಾಯದಿಂದಲಿ ಬಿಟ್ಟು ಹಯವದನನ ಶೇರೋ 2 ತರುಣರಿರುವರೋ ಈ ಮನೆಯೊಳು ಮರುಳು ಮಾಡುವರೋ ಪರುಮ ಹರುಷ ನಮ್ಮ ಹನುಮೇಶ ವಿಠಲನ ನೆರೆ ನಂಬಿ ಸ್ಮರಿಸುವ ಸ್ಥಿರ ಪದವನು ಸೇರೊ 3
--------------
ಹನುಮೇಶವಿಠಲ