ಒಟ್ಟು 19 ಕಡೆಗಳಲ್ಲಿ , 11 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಏ) ವಿಶೇಷ ಸಂದರ್ಭದ ಹಾಡುಗಳು (1) ಶ್ರೀ ಶೃಂಗೇರಿ ಸ್ವಾಮಿಗಳ ಜಯತಿಯ ಮೆರವಣೆಗೆ ಗುರುವೆ ಪೂಜಿಪೆ ನಿಮ್ಮಯ ಚರಣಗಳನೂ ಪ ದರುಹಿನೊಳಗೆನ್ನನಿರಿಸಿ ಪಾಲಿಸೊ ದುರಿತದೂತವಿಚಾರ ಶ್ರೀಮದ್ಗುರು ಅ.ಪ ಶ್ರೀಸರಸ್ವತಿಸುಪ್ರಸನ್ನ ವಿಶೇಷ ದಿವ್ಯಪಾದಾಬ್ಜ ಕುಶಲನೆ ಬೇಸರಾಂತಕಮಾದ ಶಾಸ್ತ್ರಾಭ್ಯಾಸ ನಿಜಸನ್ಯಾಸಿ ಕಾರಣ 1 ವೇದನಾಲ್ಕು ಪ್ರಣವ ಪ್ರಸಾದ ವಿದ್ಯ ಸಬೋಧದಾಯಕ ಆದಿಗುರು ಶೃಂಗೇರಿಮಠವೆಂದೋದಿಹೇಳುವುದಾದ ಕಾರಣ 2 ರಾಜಸೋಮಿ ಜಗದ್ಗುರು ಜಯ ಆದಿ ಬೀಜಸಪೂಜ ದೈವಸಮಾಜ ಸತ್ಯಸಭೋಜ ಕಾರಣ 3 ರಾಜ ರಾಜ ಸಮಾಜದೊಳು ದುರ್ಬೀಜ ವಸ್ತುಗಳಿಡಲು ನಿಜಯತಿ ರಾಜಧಾನಿಗೆ ರಮ್ಯವಾದ ಸುವಸ್ತು ಪುಷ್ಪಗಳಾದಕಾರಣ 4 ಕುಂಪಿಣೀಧೊರೆಯ ನೀನೆ ಪರಮಪದನೆಂದೊಗಳಿ ಇಂಪಾದ ಸವಾರಿಯೆದುರಿಗೆ ದಂಪತಿಗಳಡಿಯಾದ ಕಾರಣ 5 ಎಲ್ಲ ದೇಶದ ರಾಜರೆಲ್ಲರು ಬಲ್ಲ ಗುರು ನೀನೆಂದು ನಿಮಗತಿ ಬಿಲ್ಲು ಬಾಣಗಳಿತ್ತು ಗುರುತುಗಳುಳ, ಸತ್ಯಸಮಾಜಭೋಜನೆ 6 ಆನೆಕುದುರೆಗಳೆತ್ತಲೆತ್ತಲು ಮತ್ತೆ ಮುತ್ತಿನ ತೊಂಪೆ ವೈಭವ ಏನು ಸಂಭ್ರಮದಿಂದ ಬಂದೆಯೊ ಭಾನುಕೋಟಿಪ್ರಕಾಶ ಕಾರಣ 7 ವೀರಶೈಯ್ಯಾಚಾರ ರತ್ನ ತಿರಿವುಮುತ್ತಿನಹಾರ ನಿರ್ಗುಣ ಧೀರ ತತ್ವವಿಚಾರ ಕಲ್ಮಷದೂರ ಅದ್ವಯಸಾರ ಕಾರಣ8 ಗೌರ್ನಮೆಂಟಿನೊಳಿತ್ತ ಸತ್ಯಾ ಮುಖ್ಯ ಜನರಲ್ ಬಾವುಟಗಳೂ ಶೌರಿ ತಮ್ಮ ಸವಾರಿಯೊಳಗದು ಫಾರಮೆಂಟಿನನೊಳಿರುವ ಕಾರಣ9 ಪಾದಸೇವೆಗೆ ಬರುವ ಭಕ್ತರ ಪಾಪಅಂತಕ ಪರಮಹಂಸನೆ ದೀಪವಿಲ್ಲದ ಬೆಳಕು ತಮ್ಮೊಳಗಾ ಪಯೋನಿಧಿ ಕಂಡ ಕಾರಣ10 ದಿಕ್ಕು ದೇಶದಿ ನಿಬಿಡಮಾಗಿದೆ ನಿಮ್ಮ ನಾಮಜಯಂತಿಯುತ್ಸವ ಮುಕ್ತಿಯಂಬೆನಗೀವ ನಿಜಪದ ಮೋಕ್ಷದಾಯಕನಾದ ಕಾರಣ11 ಕೈವಲ್ಯ ಪರಶಿವನೆಂಬೊ ನಿಶ್ಚಯ ಬಲ್ಲೆನೆಂಬುವ ಭಾಗ್ಯವಂ ಜನಕಿಲ್ಲಿ ಕೊಟ್ಟಕಾರಣ 12 ವಿಜಯನಗರಕ್ಕೈದ ಸಂಪದ ಅಜನು ಪೊಗಳಲ್ ತೋರಿಸಾಕ್ಷಾತ್ ದ್ವಿಜಪ್ರಜಾವತಿ ನಿಮ್ಮಭಜಿಸುವೆ ನಿಜಗುರು ನೀನಾದ ಕಾರಣ 13 ಸೀಮೆ ಭೂಮಿಯ ಜನಗಳೆಲ್ಲರು ಕಾಮಿತಾರ್ಥವ ಬೇಡುತಿರ್ಪರು ಸ್ವಾಮಿಯಹುದೋ ಜಗದ್ಗುರು ಶೃಂಗೇರಿಮಠದೊಳಗಿರುವಕಾರಣ 14 ವೀರಕಂಕಣ ಧೀರ ತತ್ವವಿಚಾರ ಶುಭಕರ ಧೀರನಹುದೆಲೊ ದಾರಿತೋರಿದ ಗುರುವು ತುಲಸೀಹಾರ ಕಂಟಕದೂರ15
--------------
ಚನ್ನಪಟ್ಟಣದ ಅಹೋಬಲದಾಸರು
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಇದು ಏನೊ ನಿನ್ನ ಮತೀ ಮತೀ | ಇದರಿಂದಾಗದು ಗತೀ ಗತೀ ಪ ಸತಿ ಸುತರಿಂದಲಿ ಗತಿಯನ್ನು ಪಡೆದ ಕೇಳ ಬಲ್ಲೆಯಾ ಕಥೀ ಕಥೀ1 ಸಂಚಿತ ಪ್ರಾರಬ್ಧ ಕ್ರಿಯಮಾಣಾ | ತೀರಲಿಲ್ಲವೋ ಮಿತೀ ಮಿತೀ | ಪಂಚ ದಶಾಕ್ಷರೀ ಮಂತ್ರವ ಜಪಿಸಲು | ನೀ ಪರಶಿವನೆಂಬುದೋ ಶ್ರುತೀ ಶ್ರುತೀ 2 ಮೂರ್ತಿ ಭವತಾರಕ ದೇವನ | ಪೂಜಿಸಿ ಮಾಡೊ ಸ್ತುತೀ ಸ್ತುತೀ | ಅರಿಯದಿರ್ದರರ್ಚಕರನು ಸೇವಿಸಿ |ಆಗು ನೀ ಭೂಪತೀ ಭೂಪತೀ 3
--------------
ಭಾವತರಕರು
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗ ಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ 1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ತಂತ್ರಗಳೆಲ್ಲ ಬಯಲಾಯ್ತೊ ರಂಗ ನಿನ್ನ ಕಥೆಯ ಕೇಳಿ ಭಯವಾಯ್ತೋ ಪ ನಿನ್ನ ವಂಚನೆಗೇ ಜಯವಾಯ್ತೋ ಅ.ಪ ಶರನಿಧಿಯ ಮಥನದಿ ಗರಳವು ಜನಿಸಲು ಪರಶಿವನುಂಬುವ ಪರಿಗೈದೆಯೇನೋ ತರುಣಿ ಸಂಜನಿಸಲು ಶರಗಳ ನೀಡಿ ದೈ ಪರಿ ಸಟೆಯೇನೋ 1 ಧರಣಿಯನಿತ್ತನ ಶಿರವನು ತುಳಿದೆ ಪರಿಗಣಿಸದೆ ತಾಯ ಕೊರಳನು ತರಿದೆ ಪರಸತಿಯರ ಕೂಡ ನೆರೆ ನಲಿದಾಡಿದೆ ಕರದಿ ಸನ್ನೆಯ ಮಾಡಿ ಕುರುಕುಲವಿರಿದೇ 2 ಮದನ ಸುಂದರಿಯಾಗಿ ಸುಧೆಯ ಕುಂಭವ ಕೊಂಡೆ ಅದಿತಿಯ ಸುತರಿಗೆ ಅದ ನೀನುಣಿಸಿದೆ ಮಧುರುಚಿಯರಿತನ ಚಕ್ರದಿ ತರಿದೆ [ಎದುರಿಸದೆವಾಲಿಯ ಮರೆಯಲಿರಿದೆ] 3 ಪೊಡವಿಯೊಡೆಯನ ಕಡೆಗಣಿಸೀ ನಿನ್ನ ಅಡಿಯಿಡೆ ಯಿದ್ದವನೊಡವೆರೆದೆ ನುಡಿದು ಕರ್ಣನ ಕಂಗೆಡಿಸಿದೆ ಭೀಷ್ಮನ ಕೆಡಹಿದೆ ಮಾಂಗಿರಿಯೊಡೆಯ ಗೋಪಾಲಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಡಿ ಪಡಿ ಜೀವನ್ಮುಕ್ತಿ ಪ ಗುರುವರನು ತಾ ಪರಶಿವನೆಂದು | ಅರಿದು ಪೂಜಿಸು ಮನದೊಳಗಿಂದು 1 ವ್ರತನೇಮಗಳೊಳು ಫಲವಿಲ್ಲಾ | ಸದ್ಗತಿ ನಿನಗದರೊಳಗಾಗುವದಿಲ್ಲ 2 ಭವತಾರಕನ ಭಜಕರ ನೋಡು | ಕಂಡರೆ ಕರೆದರ್ಚನೆಯನು ಮಾಡು 3
--------------
ಭಾವತರಕರು
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪಾರ್ವತಿದೇವಿ ಗಿರಿಜೆ ನೀ ಒಲಿಯುವರೇ ಪರಶಿವನು ತಕ್ಕ ವರನೆಂದು ಮೆರೆಯುವರೆ ಪ ಪರಮ ವೈಷ್ಣವ ಭಕ್ತಾಗ್ರಣಿಯಾದ ಶಿವನಿಗೆ ಇರುತಿಹ ಕೊರತೆಗಳರಿಯದೆ ಗರುವದಲಿ ಅ.ಪ ಮನ್ಮಥನ ವೈರಿಗೆ ವಾಸಕೆ ಯೋಗ್ಯ ಮನೆಯಿಲ್ಲದಿರುವಾತಗೆ ಮನೆಯು ಮಶಾಣವೆನ್ನುತ ಪೇಳುತಿಹರಿನ್ನು ಸುಮನಸರೊಡಯನೆ ಸಖನಂತೆ ಇದು ಕೇಳು ಮನಸಿನ ಅಭಿಮಾನಿ ಶಿವನು ಘನತರದ ವಿಷಪಾನಗೈದನು ಮನದಿ ಶ್ರೀ ರಘುವರನ ಸ್ಮರಿಸುತ ವೃಷಭ ವಾಹನವೇರಿ ಚರಿಪಗೆ 1 ರುಂಡಮಾಲೆಯ ಧರಿಸಿದ ಕೊರಳೊಳಗೆ ಸರ್ಪ ದಂಡೆ ಅಲಂಕರಿಸಿರುವ ಮಂಡೆಯೊಳಗೆ ಚಲುವ ಗಂಗೆಯ ಧರಿಸಿಹ ಚಂದ್ರಶೇಖರ ಶಿವನೆಂದು ಕರೆಸಿಕೊಂಬ ಕೆಂಡಗಣ್ಣಿನ ಕ್ರೂರರೂಪನ ಕಂಡು ಹರುಷದಿ ಹಿಗ್ಗಿ ನಲಿಯುವಿ ಮಂಡೆಯಲಿ ಕೆಂಜಡೆಯ ಸುತ್ತಿಹ ಹಿಂಡು ವಿಷ ಸರ್ಪಗಳಲಂಕೃತನಿಗೆ 2 ಕರಿಚರ್ಮಾಂಬರನುಡುವ ಕೈಯಲ್ಲಿ ಕಪಾಲ ತಿರಿದುಂಡು ಹರುಷಿಸುವ ಪರಿ ದೈತ್ಯ ಪಿಶಾಚಯಕ್ಷರ ಕೂಡಿ ಚರಿಸುತ್ತ ಕುಣಿಯುತ್ತ ಗೊರವನಂತಿರುತಿಹ ಪರಮ ವೈರಾಗ್ಯವನು ಧರಿಸಿ ಫಣೆಯ ಗಣ್ಣನು ಬಳಿದು ಭಸುಮವ ಚರಿಸುವನು ರುಷಿವರರ ತೆರದಲಿ ಎಣಿಸಿ ಮಣಿಗಳ ಒಲಿಸಿ ಹರಿಯನು 3 ರಾಮಮಂತ್ರವ ಜಪಿಸಿ ರಮಣಿಗೆ ದಿವ್ಯ ರಾಮಚರಿತೆಯ ಬೋಧಿಸಿ ಕಾಮಹರನು ಕೈಲಾಸಪತಿಯು ಮತ್ತೆ ಕಾಮದೇವನು ಎಂಬ ನಾಮಸ್ಮರಿಸುವ ಆ ಮಹಾಗಣಪತಿಯು ಪುತ್ರನು ವೀರಭಕ್ತನು ಸುತನು ಶಿವನಿಗೆ ಪ್ರೇಮದಲಿ ಷಣ್ಮುಖನು ಸುತನೆಂ- ದೀ ಮಹಾಮಹಿಮೆಗಳು ತಿಳಿಯದೆ4 ಸುಂದರಾಂಗಿ ನಿನ್ನಯ ಚಲುವಿಕೆಗೆ ತಕ್ಕ ಚಂದದ ವರನೇ ಕೇಳು ಮಂದರೋದ್ಧರ ಶ್ರೀ ಮುಕುಂದನ ಭಜಿಸಲು ಚಂದದ ವರಗಳ ಕುಂದದೆ ಕರುಣಿಪ ಕಂದುಗೊರಳನು ಶಿವನು ಕಮಲ ನಾಭ ವಿಠ್ಠಲನ ಭಜಿಪ ಸಂತತ ಮಂದಗಮನೆಯ ಇಂದುಧರನಿಗೆ ಚಂದದಲಿ ವನಮಾಲೆ ಹಾಕುತ 5
--------------
ನಿಡಗುರುಕಿ ಜೀವೂಬಾಯಿ