ಒಟ್ಟು 40 ಕಡೆಗಳಲ್ಲಿ , 16 ದಾಸರು , 36 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಬ್ಜಭವಪಿತ | ಮದ್ಗುರ್ವಂತರ್ಯಾಮಿ | ಸಲಹಯ್ಯ ಕುಬ್ಜ ಮೂರುತಿ | ಯಾದ ಗುರು | ಗೋವಿಂದ ವಿಠಲಯ್ಯ ||ಪ| ಈಶ ತಂದೆ ವೆಂಕ | ಟೇಶ ವಿಠಲನ | ದಾಸ ಸಹವಾಸ |ದೋಷ ರಾಶಿಯ | ನಾಶ ಗೈಸಿತು | ಶ್ರೀಶ ಕೇಶವನೇ 1 ಮರಣ ಸಮಯದಿ | ಚರಣ ಪುಷ್ಕರ | ಭಜಿಸಿದ ಜಮಿಳನ |ಕರುಣದಿಂದಲಿ | ಮರೆದ ವೋಲ್ | ಎನ್ನ ಮನಕೆ ಬಾ ನಾರಾಯಣ 2 ಭೇದ ಮತವೆಂ | ಬಬ್ಧಿಯಲಿ | ಉದಿಸಿವೆನು ಕಾಣಯ್ಯ |ಮಧ್ವಪತಿ | ಮದ್ಭಾರ ನಿನ್ನದು | ಸಲಹೊ ಮಾಧವನೆ 3 ಗೋವಿದಾಂಪತಿ | ಗೋಪ ಪಾಲಕ | ಶ್ರೀಶ ಗೋವಿಂದಮಾವ ಕಂಸನ | ಕೊಂದಸಿರಿ | ಗೋವಿಂದ ಸಲಹಯ್ಯ 4 ಸಿರಿ | ಕೃಷ್ಣ ಬೇಡುವೆ | ಕಷ್ಟ ಬಿಡಿಸಯ್ಯ |ವೃಷ್ಟಿಕುಲ ಸಂ | ಪನ್ನ ಪಾವನ | ವಿಷ್ಣು ಮೂರುತಿಯೆ 5 ವೇದಗಮ್ಯ | ದಯಾಪಯೋನಿಧಿ | ಸಾಧು ವಂದಿತನೆ |ಮೋದದಿಂ | ತವಪಾದ ಪೂಜಿಪೆ | ಪಾಲಿಸೈ ಮಧುಸೂಧನ 6 ಕಾಯ ಮಮತೆಲಿ | ಕಟ್ಟೆ ಧರ್ಮಾತ್ಮ |ಭವದ ಭವಣೆಯ | ಬಿಡಿಸುವುದು | ಬಲಿವರದ ತ್ರಿವಿಕ್ರಮ 7 ವಿಮಲ ಸತ್ಕಲ್ಯಾಣ | ಗುಣ ನಿಸ್ಸೀಮ | ಸುಜ್ಞಾನಾಅಮರಾರಿಯ ಧ್ವರ | ಕೆಡಿಸಿ ಉಳಿಸಿದೆ | ಶೀಲ ವಾಮನ 8 ಹೃದಯ ಶೋಭಿತ | ಮೋದಮಯ | ಮಧ್ವಾಂತರಾತ್ಮಕನೇ |ಆದಿಮೂರುತಿ | ಸಾಧು ವಂದಿತ ಕಾಯೋ ಶ್ರೀಧರನೇ 9 ಭಂಜನ ಬಿಸಜ ಭವ ಪಿತ | ಈಶ ಸರ್ವೇಶಾ |ಒಸೆದು ಬೇಡುವೆ | ಕಸರು ಕರ್ಮವ | ಹರಿಸೋ ಹೃಷಿಕೇಶ 10 ಬದ್ಧ ಜೀವನ | ಅಬದ್ಧ ಮಾಡಲು | ತಿದ್ದಿ ಸೃಜಿಸಿದೆಯೋ |ಸದ್ಗುರುವೆ ಮತ್ | ಪೊದ್ದಿಕೆಯ ಕಳೆ | ಪದ್ಮನಾಭನೆ 11 ಸಿರಿ ಮನೋಹರ |ಧಾಮತ್ರಯ ಸು | ತ್ರಾಮ ವಂದಿತ | ಪಾಲಿಸೈ ದಾಮೋದರ 12 ಪಂಕ ಕಳೆಯಯ್ಯ |ವೆಂಕಟಾ ಬಿರು | ದಾಂಕ ಜಯ ಜಯ | ಸಂಕರುಷಣ 13 ವಿಶ್ವ ವ್ಯಾಪಕನೇಶ್ರೀಶ ಸದ್ಮನೆ | ವಾಸುದೇವನೆ | ಪೋಷಿಸೈ ಪರಮಾತ್ಮನೇ 14 ನಿರವದ್ಯ ಆಪನ್ನ ಪಾಲನೆ | ಪೊರೆಯೊ ಪ್ರದ್ಯುಮ್ನ 15 ಅನಿರುದ್ಧ 16 ಕರಿವರನು ತವ | ಚರಣ ಸರಸಿಜ | ನಂಬಿ ಮೊರೆಯಿಡಲು |ಕರದ ಚಕ್ರದಿ | ತರಿದು ನಕ್ರನ | ಬಿಸುಟ ದೊರೆ ಪುರುಷೋತ್ತಮ 17 ದರ ಚಕ್ರಧರ | ಅಧೋಕ್ಷಜ18 ತರಳ ಕರೆಯಲು | ಭರದಿ ಕಂಬದಿ | ಬಂದ ತ್ರಿಪದಾಹ್ವದುರುಳ ಹಿರಣ್ಯನ | ತರಿದು ಭಕ್ತನ | ಸಲಹಿದ್ಯೋ ನರಸಿಂಹನೆ 19 ಕಚ್ಛಪ ಅಚ್ಯುತ | ಸಲಹೊ ಚ್ಯುತಿ ದೂರ | 20 ಸಾನುಕೂಲವು | ಸಕಲ ಸಾಧನ | ನಿನ್ನ ಭಜಿಸುವಗೇ ಜ್ಞಾನಗಮ್ಯ | ಅನಾದಿ ರೋಗವ | ನೀಗೋ ನೀ ಜನಾರ್ಧನ 21 ಸ್ಮರ ಕೋಟಿ ಸುಂದರ | ಪಾಹಿ ಉಪೇಂದ್ರ 22 ಮರದಿ ಎಂಜಲ | ಸವಿದು ಶಬರಿಯ | ಕಾಯ್ದೆ ಮುರವೈರಿ ತ್ವರದಿ ತ್ವತ್ಪದ | ವನಜ ಕಾಂಬುವ | ಹದನರುಹು ಶ್ರೀಹರಿ 23 ಜಿಷ್ಣು ಸಖ | ಶಿಷ್ಟೇಷ್ಟಪರಿ | ಹರಿಸಯ್ಯ ಮುತೃಷ್ಣಾ |ಕೃಷ್ಣೆ ಗಕ್ಷಯ | ವಸನ ದಾತನೆ | ಕಾಯೊ ಶ್ರೀ ಕೃಷ್ಣ 24 ನಿರುತ ನಿನ್ನಯ | ಚರಣ ಪುಷ್ಕರ | ಮಧುಪನೆನಿಸಯ್ಯಸ್ಮರಿಪರಘ | ಪರಿಹರಿಪ ಗುರು | ಗೋವಿಂದ ವಿಠಲಯ್ಯಾ | 25
--------------
ಗುರುಗೋವಿಂದವಿಠಲರು
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ತಿಳಿಯ ಬಲ್ಲೆನೆ ನಾನಿನ್ನ ವೆಂಕಟರಮಣ ಪ ತಿಳಿಯ ಬಲ್ಲೆನೆ ನಿನ್ನ ನಳಿನಭವಾದ್ಯರಿ ಗಳವಡಿಯದ ಪಾದ ಪಾದ ಭಜನೆ ಬೇಡಿದೆ ಕೃಪಾಸಿಂಧು ನಂಬಿದೆ ನಿನ್ನ ಸುಜನವಾರಿಧಿ ಶರದೇಂದು ಪಾಲಿಸು ಎನ್ನ ನಿಜವಾಗಿ ಪೇಳುವೆ ವೃಜಿ£ಮರ್ದನನೆಂದು 1 ಎಡಬಲದಲಿ ನಿನ್ನ ಮಡದೇರ ಒಡಗೂಡಿ ಒಡಲನಾಮಕವಾಗಿ ಒಡಲೊಳಿದ್ದನ್ನವ ವಡಬಾಗ್ನಿಯೊಳುನಿಂತು ಜಡÀಜಸಂಭವಸುರ ಗಡಣ ಕೆ ನೀಡುತ್ತಾ ಒಡೆಯನೆನಿಸಿ ಭವ ನಿತ್ಯ ಒಡೆಯ ಪುಷ್ಕÀರಣಿಕೂಲನಿಲಯ ಜಗ ದ್ವಡೆಯ ಎನ್ನನು ಪೊರೆ ತಡವ್ಯಾಕೊ ಸಿರಿಲೋಲ2 ಸಿದ್ಧರಾಮಶೆಟ್ಟಿ ಶುದ್ಧಸ್ವರೂಪನೆ ಮುದ್ದುಮೋಹನ ಮುಖಕೆ ತಿದ್ದಿತೀಡಿದನಾಮ ಶುದ್ಧ ಭಕ್ತರನ್ನೆಲ್ಲ ಮುದ್ದುಗೊಳಿಸುವಂಥ ಮುದ್ದಾದ ಮುಖದಲ್ಲಿ ಎದ್ದು ಕಾಣುವ ನಗೆ ಪೊದ್ದುಕೊಂಡಿಹ ನಾನಾ ಆಭರಣದಿಂದಲಿ ಎದ್ದು ಬರುವ ನಿನ್ನ ಪ್ರದ್ಯೊತನಿಭ ಮೂರ್ತಿ ವಾಸುದೇವ ಮದ್ಹøದಯಗತಬಿಂಬ ಸಿದ್ಧಗುರುಜಗನ್ನಾಥ ವಿಠಲರೇಯ 3
--------------
ಗುರುಜಗನ್ನಾಥದಾಸರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
373ಶಿವನು ನೀನಾದರೆ ಶಿವನ ರಾಣಿ ನಿನಗೇನೊ ಅವಿವೇಕ ಮನುಜ ಈ ಮಾತು | ಈ ಮಾತು ಕೇಳಿದರೆ ಕವಿಜನರು ನಗರೆ ಕೈ ಹೊಡೆದು 1 374ಎಲ್ಲ ಬಂದೇ ಎಂಬ ಖುಲ್ಲ ಮಾನವ ನಿನ್ನ ವಲ್ಲಭೆಯ ಬೆರೆದು ಸಂತಾನ | ಸಂತಾನ ಪಡೆವೇಕೆ ಇಲ್ಲವೇ ಜನನಿ ಭಗಿನೇರು 2 375ಬಿಂಬವೊಂದೆ ಪ್ರತಿಬಿಂಬ ವೊಂದೆಂಬಿ ಈಶು ದ್ಧಾಂಬರದ ನೆರಳು ಕಪ್ಪಾಗೆ | ಕಪ್ಪಾದ ಬಳಿಕ ನೀ ನೆಂಬೊ ಈ ಮಾತು ಪುಸಿಯಲ್ಲಿ 3 376 ಎಲ್ಲ ಒಂದೆ ಎಂಬ ಸೊಲ್ಲು ಖರೆಯೆಂತೆನಲು ಖರೆಯೆಂಬ ಮಾತುಗಳು ಸುಳ್ಳೆನ್ನರೇನೊ ಸುಜನಾರು 4 377 ನಿಮ್ಮ ನಾ ಬೈದರೆ ನಮ್ಮ ನೀವ್ ಬೈದರೆ ಅದ್ವೈತ ಸುಮ್ಮನಿರಬೇಕು ಎಲೊ ಭ್ರಾಂತ 5 378 ಶುದ್ಧ ಬ್ರಹ್ಮನ ಸುಂಗುಣವ ಕದ್ದ ಪ್ರಯುಕ್ತ ಪ್ರ ಸಿದ್ಧ ಚೋರತ್ವ ನಿನ್ನಲ್ಲಿ | ನಿನ್ನಲ್ಲಿ ಪೊದ್ದಿತೊ ಉದ್ಧಾರವೆಲ್ಲೊ ಭವದಿಂದ 6 379 ಮಾಯವಾದಿಯ ಮತವು ಹೇಯವೆಂಬುದು ಸಿದ್ದ ತಾಯಿತಂದೆಗಳು ಸತಿಪುತ್ರ | ಸತಿಪುತ್ರರಗಲಿದರೆ ಬಾಯಿ ಬಿಟ್ಯಾಕೊ ಆಳುತಿದ್ದಿ 7 380 ಸುಳ್ಳಿಗಿಂತಧಿಕ ಮತ್ತಿಲ್ಲವೋ ಮಹಪಾಪ ಸುಳ್ಳು ಕಳ್ಳತನವು ನಿನ್ನಲ್ಲಿ | ನಿನ್ನಲ್ಲಿ ಉಂಟಾಯಿ ತಲ್ಲೊ ಜಾರತ್ವ ಇದರಂತೆ 8 381ಮೇ ಮಾತೆ ವಂಧ್ಯೆಯೆಂಬ ಈ ಮಾತಿನಂತೆ ಮು ಅಪುಸಿಯಿಂಬೀ ಮಾತುಗಳು ಭ್ರಾಮಕವೆ ಖರೆಯೊ ನಿಜವಲ್ಲ 9 382 ಶಶವಿಷಾಣಗಳೆಂದು ಒಪ್ಪುವರೆ ಬಲ್ಲವರು ಮೊಲೆಹಾಲು ಉಂಡಿತೋ ರಿಸೊ ಮಿಥ್ಯೆ ಸತ್ಯವಹುದೇನೊ 10 383ಸತ್ಯವೆಂದರೆ ಖರೆಯು ಮಿಥ್ಯೆಯೆಂದರೆ ಸುಳ್ಳು ನ್ಮತ್ತ ಈ ಮಾತು ನಿಜವೆಲ್ಲಿ 11 384ಭೀತಿ ನಿರ್ಭೀತಿ ಶೀತತಾಪಗಳೊತ್ತಟ್ಟು ನೀತವಾಗಿಹವೆ ಜಗದೊಳು |ಜಗದೊಳಿದ್ದರೆ ತೋರು ಜಾತಿ ಭೇದಗಳು ಇರಲಾಗಿ 12 385 ಜೀವೇಶರೊಂದೆಂಬ ಈ ಮಾತು ಕೇಳ್ವರಿಗೆ ಕೇವಲ ಶ್ರಾವ್ಯವೆಂದೆಂದು | ಎಂದೆಂದು ಬುಧರು ಪಶು ಗಾವಿ ನೀನೆಂದು ಕರೆಯಾರೆ 13 386 ಗುಣವಂತನೆಂಬ ಈ ಮಾತನು ಕೇಳಿ ಸುಖಿಸದವ ಮನುಜ ಪಶುಸಿದ್ಧ ಪುಸಿಯಲ್ಲ | ಪುಸಿಯಲ್ಲ ನಿನ್ನ ಮತ ಗಣನೆ ಮಾಡದಲೆ ಬಯ್ವೋರ 14 387ಮಲದ ಗರ್ತಕೆ ಶುದ್ಧ ಜಲಧಿ ಸಮಯವೆಂತೆಂಬಿ ಕಲುಷವರ್ಜಿತಕೆ ತೃಣಜೀವ | ತೃಣಜೀವ ಸರಿಯೆ ಸಿಂ ಬಳಕ ಗೋಘೃತವು ಸಮವಹುದೆ 15 388 ಐರಾವತಕೆ ಸರಿಯೆ ಕೂರಿಹೇನಿನ ಮರಿಯು ತೋರಿತೊ ನಿನ್ನ ಅಜ್ಞಾನ 16 389 ದ್ವಾಸುಪರ್ಣಾ ಎಂಬ ಈ ಶ್ರುತಿಗಳಲ್ಲಿ ವಿ ಶ್ವಾಸ ಮಾಡದಲೆ ಜೀವೇಶ | ಜೀವೇಶಕೈಕ್ಯೋಪ ದೇಶ ಮಾಡಿದವ ಚಂಡಾಲ 17 390ಅಜರಾಮರಣ ಬ್ರಹ್ಮ ಭುಜಗಭೂಷಣ ಪೂಜ್ಯ ತ್ರಿಜಗ ದೇವೇಶ ಹರಿಯೆತ್ತ | ಹರಿಯೆತ್ತ ನೀನೆತ್ತ ಅಜಗಜನ್ಯಾಯ ಪುಸಿಯಲ್ಲ 18 391 ಪಾಲುಗಡಲೊಳಗಿಪ್ಪ ಶ್ರೀ ಲೋಲ ಹರಿಯೆಲ್ಲಿ ಹೇಲುಚ್ಚೆವೊಳಗೆ ಹೊರಳುವ | ಹೊರಳಾಡಿ ಬಳಲುವ ಖೂಳ ಮಾನವನೆ ನೀನೆಲ್ಲಿ 19 392 ಕ್ಷೀರಾಂಬುಧಿಗೆ ಸರಿಯೆ ಕಾರಿಕೆಯ ಶ್ಲೇಷ್ಮ ಭಾ ಗೀರಥಿಗೆ ಸಮವೆ ಖರಮೂತ್ರ | ಖರಮೂತ್ರ ಜೀವ ಲ ಕ್ಷ್ಮೀರಮಣಗೆಣೆಯೆ ಜಗದೊಳು 20 393ಗುಣಪೂರ್ಣ ಸರ್ವಜ್ಞ ಅಣುಮಹದ್ಗತನ ನಿ ರ್ಗುಣ ಅಲ್ಪನೆನುತಿದ್ದಿ | ಎನುತಿದ್ದಿ ಹರಿಗೆ ದೂ ಷಣೆಯು ಬೇರುಂಟೆ ಇದಕಿಂತ 21 394 ಈಶ ನಾನೆನಲು ಕೀನಾಶನಿಂದಲಿ ದಣಿಪ ದಾಸನೆಂಬುವಗೆ ದಯದಿಂದ | ದಯದಿಂದ ತನ್ನಯಾ ವಾಸದೊಳಿಟ್ಟು ಸಲಹೂವ 22 395ಈಶತ್ವ ವೆಂಬುದು ಲಕುಮೀಶಗಲ್ಲದೆ ಜೀವ ರಾಶಿಗಳಿಗುಂಟೆ ಈ ಶಕ್ತಿ | ಈ ಶಕ್ತಿ ಸತ್ವಗುಣ ಈಶ ಬಿಟ್ಟಿಹನೆ ಜಗದೊಳು 23 396 ಉದ್ಗೀಥಶ್ರೀ ಪ್ರಾಣ ಹೃದ್ಗತನು ಜಗದೇಕ ಸದ್ಗುರುವರೇಣ್ಯನೆನುತಿಪ್ಪ | ಎನುತಿಪ್ಪರಿಗೆ ಯಮ ಗದ್ಗದನೆ ನಡುಗಿ ನಮಿಸುವ 24 397 ಸ್ವಾಮಿ ಭೃತ್ಯನ್ಯಾಯ ಈ ಮಾತಿನೊಳಗುಂಟು ಗ್ರಾಮಧಾಮಗಳು ಇದರಂತೆ | ಇದರಂತೆ ನೋಡಿಕೊ ನೀ ಮಾತ್ರ ನುಡಿಯೆ ಸಾಕೆಂಬೆ 25 398ಈಶ ನಾನೆಂದವನ ಶ್ವಾಸ ಬಿಡಗೊಡದೆ ಯಮ ಸೆಳೆದೊಯಿದು ನರಕದೊಳು ಘಾಸಿಗೊಳಿಸುವನೊ ಬಹುಕಾಲ 26 399 ಮಾತಾ ಪಿತರ ದ್ರೋಹಿ ಬಂಧು ಘಾತಕ ಬ್ರಹ್ಮ ಘಾತಕನು ನೀನು ಪುಸಿಯಲ್ಲ | ಪುಸಿಯಲ್ಲ ಶ್ರೀ ಜಗ ನ್ನಾಥ ವಿಠಲನೆ ನಾನೆಂಬಿ 27
--------------
ಜಗನ್ನಾಥದಾಸರು
ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಪ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ2 ಅರ್ಧ ಮಾರ್ಗವು ಬರಲು ಬಂದೆ ದಿವಸದಲ್ಲಿ | ಸಾಧರ್À ತ್ರಿಕೋಟಿ ದೇವತೆಗಳಲಿ | ಊಧ್ರ್ವರೇತಸನಾಗಿ ಮಿಂದ ಫಲವಕ್ಕು | ಪರಿಯಂತ 3 ಕ್ಷೇತ್ರದ ಬಳಿಗಾಗಿ ಬರಲು ಅವನ ಏಳು | ಗೋತ್ರ ನೂರೊಂದು ಕುಲದವರು | ಗಾತ್ರವ ಮರೆದು ರೋಮಾಂಚನದಿಂದಲಿ | ಪಾತ್ರವನಾಡೋರು ಮೋಕ್ಷಮಾರ್ಗವ ಸಾರಿ4 ಕರವ ಜೋಡಿಸಿ ನಿಂದು | ಸನ್ನುತಿಸಿ ದರ್ಶನ ಮಾಡಲು | ಕರವ ತಿಳಿದು ಜ್ಞಾನ ಭಕುತಿ ಸಂ | ಪನ್ನ ವಿರುಕುತಿಲಿ ಗತಿಗಭಿಮುಖನಾಹ 5 ಮಧ್ವ ಸರೋವÀರದಲ್ಲಿ ಸ್ನಾನವಗೈದು | ಸಿದ್ಧಾಂತ ಕರ್ಮಗಳನನುಸರಿಸೀ | ಶುದ್ಧಾತ್ಮ ಕೃಷ್ಣನ ದೇವಾಲಯವ ಸಾರೆ | ಪೊದ್ದಿದಾ ಸತ್ಯಲೋಕದ ಸಭೆಯೊಳಗೆ 6 ಕೃಷ್ಣ ಕೃಷ್ಣ ಯೆಂದು | ನವ ವಿಧ ಪೂಜೆಯನ್ನು | ದೃಷ್ಟಿಯಿಂದಲಿ ನೋಡೆ ಅವನೆ ಮುಕ್ತಾ | ಮುಟ್ಟಿ ಪೂಜಿಸುವರ ಸತ್ಪುಣ್ಯ ವಿಜಯ | ವಿಠ್ಠಲ ತಾ ಬಲ್ಲ ನರರೆಣಿಸಲಳವಲ್ಲಾ 7
--------------
ವಿಜಯದಾಸ
ಈಗಲೊ ಇನ್ನಾವಾಗಲೊ ಈ ತನುವು ಪೋಗದಿರದು ಪ. ಭೋಗದಾಸೆಯ ಬಿಡಿಸಯ್ಯ ನಾಗಶಯನ ನಳಿನನಯನ ಅ.ಪ. ಎಂಬತ್ತು ನಾಲ್ಕು ಲಕ್ಷ ಯೋನಿಗಳಲಿ ಬಂದು ಅಂಬುಜಾಕ್ಷನೊಂದೆನಯ್ಯ ಅಂದಂದು ಮಾಡಿದ ಅಘದಿಕುಂಭೀಪಾಕ ಮೊದಲಾದ ಕುತ್ಸ್ಸಿತ ನರಕದಿ ಬಿದ್ದುಉಂಬ ದುಃಖವ ಬಿಡಿಸಯ್ಯ ಉದಧಿಶಯನ ಪುಣ್ಯಕಥನ 1 ಓದನ ಮಾತ್ರಕ್ಕೆ ಸಭೆಯೊಳುವಾದಿಸುವೆ ವೇದಶಾಸ್ತ್ರ ಉಪನ್ಯಾಸಂಗಳನು ಮಾಡುವೆಕ್ರೋಧರಹಿತನಾಗಿ ಅವರು ಕೊಡಲು ಕೊಂಡಾಡುವೆಆದರಿಸದಿದ್ದರವರ ಬೈದು ಬರುವೆ ಖಿನ್ನನಾಗಿ2 ದೇಶದೇಶಂಗಳಿಗೆ ಧನದ ಆಸೆಗಾಗಿ ಪೋಗಿ ಪೋಗಿಬ್ಯಾಸರದೆ ಕಂಡವರ ಕಾಡಿ ಬೇಡಿ ಬಳಲಿದೆಕಾಸಿನ ಲಾಭವು ಕಾಣೆ ಘಾಸಿಯಾದೆನಯ್ಯ ಶ್ರೀನಿ-ವಾಸ ನಿನ್ನ ಪೂಜಿಸದೆ ಮೋಸಹೋದೆನಯ್ಯ ನಾನು3 ಸ್ನಾನಮೌನಂಗಳನು ಮಾಡುವೆ ಸಕಲ ಜನರ ಮುಂದೆಮಾನವರಿಲ್ಲದಾಗಲೆ ಮೌನವಿಲ್ಲ ಮಂತ್ರವಿಲ್ಲಜ್ಞಾನವ ಪೇಳುವೆ ಮೋಸಕಟ್ಟ[ಲೆ]ಯ ಮಾಡಿಕೊಂಡುಧ್ಯಾನಿಸದೆ ಹೊಟ್ಟೆಯನ್ನು ಹೊರೆವೆ ನಿನ್ನ ಮರೆವೆ4 ಕರ್ಣ ಕೇಳದು ಅನ್ಯವಾರ್ತೆ[ಗೆ] ಹೊತ್ತುಸಾಲದುಇನ್ನು ಹೇಸಿಕೆ ಮನಕೆ ಬಾರದು ಮುಂದಿನ ಗತಿಗೆ ದಾರಿ ತೋರದು 5 ಕಂಬುಕಂಧರ ನಿನ್ನ ನೆನೆಯದೆ 6 ವೃದ್ಧನಾದೆನು ಪಲ್ಗಳೆಲ್ಲ ಬಿದ್ದವು ಕಣ್ಣುಕಾಣಬಾರದುಎದ್ದು ನಿಲ್ಲಲಾರೆನಯ್ಯ ಉದ್ಧರಿಸೊ ಹಯವದನತಿದ್ದಿ ಮನವ ನಿನ್ನ ಪಾದಪದ್ಮವ ನೆನೆವಂತೆ ಮಾಡೊಪೊದ್ದಿದವರ ಪೊರೆವ ಕರುಣಾಸಿಂಧು ಎನಗೆ ನೀನೆ ಬಂಧು 7
--------------
ವಾದಿರಾಜ
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ ಪ ನಿರ್ದೋಷ ಗುಣವಾರುಧಿ ನಿರ್ಧಾರವಾಗಿ ನುಡಿವೆ ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು 1 ಅಜ ಭವಾದ್ಯರು ನಿನ್ನ ಭಜಿಪರಾರು ದೋಷ ಮಾನವ ತಿಳಿದು ಭಜಿಸಬಲ್ಲೆನೆ ದೇವಾ 2 ಮಧ್ವ ಸರೋವರದಲ್ಲಿ ಇದ್ದು ಪೂಜೆಯಗೊಂಬ ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ 3
--------------
ವಿಜಯದಾಸ
ಕೇಳೆ ಯಶೋದೆ ನಿನ್ನ ಮಗನ ಲೂಟಿಯಪ ತಾಳಲಾರೆವೆ ನಾವು ತರಳನ ದುಡುಕುಪೇಳಬಾರದೆ ಗೋಪಾಲಕೃಷ್ಣಗೆ ಬುದ್ಧಿಅಮ್ಮಾ-ಇದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕುಪಾಲು ಮೊಸರು ಬೆಣ್ಣೆಗಳ ಮೆದ್ದುಕೋಲಲಿ ನೀರ ಕೊಡಗಳೊಡೆದನೀಲವರ್ಣದ ದಿಟ್ಟ ನಿತ್ಯವೀ ಹೋರಾಟಬಾಲೆಯರಲ್ಲಿ ನೋಟ ಬಹಳ ಬಗೆಯಲ್ಲಿತಿಳಿದೆವೆಂದರೆ ಮೇಲೆ ಎಂಜಲುಗುಳಿ ಪೋದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನೊಳು ಜಲಕ್ರೀಡೆಯನಾಡಲುಚಿತ್ತಚೋರ ನಮ್ಮ ಸೀರೆಗಳೆಲ್ಲವಹೊತ್ತು ಕೊಂಡು ಮರವನೇರಿದಬತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಯುಕ್ತಿ ಬಹುಬಲ್ಲ ಹತ್ತಿಲಿ ಬಂದು ಕರವೆತ್ತಿ ಮುಗಿದರೆ ವಸ್ತ್ರ ಕೊಡುವೆನೆಂದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 2 ಸದ್ದು ಮಾಡದೆ ಸರಿ ಹೊತ್ತಿಲಿನಿದ್ದೆಗಣ್ಣಿಲಿ ನಾನಿರಲುಮುದ್ದು ಕೃಷ್ಣ ನಮ್ಮ ಮನೆಯವರಂತೆಮುದದಿಂದಲೆನ್ನನು ತಾ ಕೂಡಿದಎದ್ದು ನೋಡುವೆನಲ್ಲ ಆಹ ಏನೆಂಬುವರೆಲ್ಲಬುದ್ಧಿ ಮೋಸ ಬಂತಲ್ಲ ಪೊದ್ದಿ ಸಲ್ಲಿಸಿದೆಬುದ್ಧಿವಂತನೆಂದರೆ ಪರಿಹಾಸ್ಯ ಮಾಡಿ ನಗುವಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 3
--------------
ವ್ಯಾಸರಾಯರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ಜಯತೀರ್ಥರಾಯಾ ಗುರುವರ್ಯಾ ಮುಗಿವೆನು ಕೈಯ್ಯಾ ಪ ತೋಯಜಾಕ್ಷನಂಘ್ರಿ ಪ್ರೀಯ - ಜೀಯ ಮಳಬೇಡ ನಿಲಯ ಅ.ಪ ಮೋದ ತೀರ್ಥಗ್ರಂಥ ಕ್ಷೀರ ವಾರಿಧಿಯನ್ನು ಮಥಿಸಿ ಧೀರ ಸಾಧುಗಳಿಗೆ ಸುಧೆಯನೆರದೆ - ವಾದಿಗಳೆದಯ ಮುರಿದೇ 1 ಅದ್ವೈತಾರಣ್ಯದಹನ - ಮಧ್ವ ಪಂಥಸುಜನಸದನ ಪೊದ್ದಿದೆನೋ ನಿನ್ನ ಚರಣ - ಉದ್ಧರಿಸೋ ದೀನೋದ್ಧರಣ 2 ಅಕ್ಷಯಮಾಲಾ ದಂಡ ಧಾರೀ - ಭಿಕ್ಷುಶ್ರೇಷ್ಠನಧಿಕಾರಿ ಅಕ್ಷೋಭ್ಯ ಮುನಿಪ ತನಯ - ಲಕ್ಷ್ಮೀಕಾಂತ ಭಜಕ ಸದಯ 3
--------------
ಲಕ್ಷ್ಮೀನಾರಯಣರಾಯರು
ತಿಳಿಯದು ಅಟಾ ಶ್ರೀಹರಿ ನಿನ್ನಾ| ನಳಿನ ಸಂಭವ ಮೊದಲಾದ ನಿರ್ಜರರಿಗೆ ಪ ಮೊತ್ತವೆನಿಪ ಕ್ಷೀರ ಸಾಗರ ಮಧ್ಯಲಿ| ಉತ್ತಂಗವಾದ ಶೇಷನ ಮಂಚದ ಮ್ಯಾಲೆ| ಸುತ್ತಸನಕಾದಿ ಭಾಗವತರ ಸಂಗ| ನಿತ್ಯವೆರಸಿ ಕ್ರೀಡಿಸುವದ ಬಿಟ್ಟು| ಮತ್ತೆ ವನದೊಳಾಡುವರೇ ತೃಣಗಳ| ಕಿತ್ತಿ ಹಾಸಿಕೆ ಮಾಡುವರೇ ಕಪಿಸಂಗ ಅತ್ಯಂತ ದಲ್ಹಿಡುರೇ ಕುಬ್ಸಿಯಾ| ವತ್ತಿನೀ ಅಳುವರೇ1 ಗಂಭೀರವಾದ ಸುರವರದಿಂದ ನಾರದ| ತುಂಬುರ ಮಾಳ ಗೀತವ ಕೈಕೊಂಡು| ಕೌಸ್ತುಭ ಮಾಲೆಯ ಹಾಕಿ| ವಾಹನ ಬಿಟ್ಟು| ಕೊಂಬು ಕೊಳನ ನೂದುರೇ ಗುಂಜಿಯಾ ವಣಿ ಬಿಂಬಸರವ ಹಾಕುತೀ ಕಲಿಯಾದಾ| ಕಂಬಳಿ ಯನುರೆ ಪೊದ್ದು ವಸ್ತ್ರದಿ ಮರ| ಸಂಭ್ರಮ ವೇಸರೇ 2 ಸುಜನ ಸಮರ್ಪಿಪ ಊಟವ| ದಯದಿಂದ ಕೈಕೊಂಡು ತೃಪ್ತನಾಗಿ| ಶ್ರೀಯಾ ಕುಚ ಕೊಡಮ್ಯಾಲ ಕರವನಿಟ್ಟು| ಜಯವಿಜಯ ವೆಂಬದ್ವಾರ ಪಾಲರಿರೆ| ಗೋವಲ್ಲರೆಂಜಲ ತಿಂಬುದೇ ಸರಗಹಗ| ಕೈಯ್ಯಲಿಂದ ತೊಳೆವರೇ ಮುದದಿ| ಬಲಿಯ ಬಾಗಿಲ ಕಾವುರೇ ಮಹಿಪತಿ ನಂದನ ಜೀವನ-ನೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ