ಒಟ್ಟು 61 ಕಡೆಗಳಲ್ಲಿ , 2 ದಾಸರು , 61 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಜಯಮಂಗಳ ಶುಭ ಮಂಗಳ ಶ್ರೀ ಗುರುಮೂರ್ತಿಗೆ ಧ್ರುವ ವೇದೋದ್ಧಾರ ಶ್ರೀಮತ್ಸ್ಯಗೆ ಮಂಗಳ ಮೇದಿನಿಯ ಪೊತ್ತ ಕೂರ್ಮಗೆ ಮಂಗಳ ಕಾದಿ ಗೆದ್ದ ಶ್ರೀವರಾಹಗೆ ಮಂಗಳ ಒದಗಿ ಮೂಡಿದ ನರಸಿಂಹಗೆ ಮಂಗಳ 1 ಧರಿಯೆ ದಾನವಕೊಂಡ ವಾಮನಗೆ ಮಂಗಳ ಶೂರ ಪರಶುರಾಮಗೆ ಮಂಗಳ ಶರಣ ರಕ್ಷಕ ಶ್ರೀರಾಮಗೆ ಮಂಗಳ ಸಿರಿಯನಾಳುವ ಶ್ರೀಕೃಷ್ಣಗೆ ಮಂಗಳ 2 ಗುಹ್ಯ ಗೋಪ್ಯದಲಿಹ ಬೌದ್ದಗೆ ಮಂಗಳ ಹಯವನೇರಿದ ಕಲ್ಕಿಗೆ ಮಂಗಳ ಜಯ ಜಯ ಮಹಿಪತಿಸ್ವಾಮಿಗೆ ಮಂಗಳ ದಯುವುಳ್ಳ ಶ್ರೀದೇವಿದೇವಗೆಮಂಗಳ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವನೆವೆ ಶರಣಾ ಪ ಗುರುಗರಡಿಯ ಮನಿಯೊಳು ಬೆರೆದು | ಗುರುದಾಸರ ಸಂಗವ ಬಲಿದು | ಅರಿತಾವಿನಾ ಅಲ್ಲಿಯ ಕಳೆಗಳ ತಿಳಿದು 1 ಹರಿದಾಡುವ ಚಂಚಲ ನೀಗಿ | ಗುರುಸೇವೆಯಲಿ ತತ್ಪರನಾಗಿ | ಕರುಣವ ಬೀರ್ವನು ಅರಿಸಖರೊಳಗಾಗಿ2 ಆರಿಗೆ ಹೊಲ್ಲೆಯ ತಾ ನುಡಿಯಾ | ಆರಿಂದು ನಿಷ್ಟುರ ಪಡಿಯಾ | ಧರಿಯೊಳು ಸನ್ಮತ ಮಾರ್ಗದಿ ತಾ ನಡಿಯಾ3 ದೋರಗಡುದೆ ಬಲ್ಲವಿಕೆಯನು | ಪರರವಗುಣವನು ಅರಿಸನು | ನೀರು ಹಾಲಿನ ಸಖ್ಯಕ ಪರಿಲಿಹನು4 ತನುಧನ ಮದದೊಳು ಬೆರಿತಿರದೇ ಘನದೆಚ್ಚರಿಕೆಯ ಮರೆದಿರದೇ ನೆನೆವನು ಗುರುಮಹಿಪತಿಸ್ವಾಮಿಯ ಬಿಡದೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಗುರುಪೂಜಿ ಮಾಡುವ ನಿಂದು ಮನದೊಳು ಹರುಷಪಡುವ ಧ್ರುವ ತಂದೆ ಸದ್ಗುರುಸೇವೆ ಮಾಡುವ ಬಂದ ಜನ್ಮದ ಹಾದಿ ಬಿಡುವ ಪಥ ಬ್ಯಾಗೆ ಹಿಡುವ ಹೊಂದಿ ಸದ್ಗತಿ ಮುಕ್ತಿ ಕೊಡುವ 1 ಬಂದು ಸಾರ್ಥಕ ಮಾಡುವ ಪಾದ ನೋಡುವ ತಂದು ರತಿಪ್ರೇಮ ನೀಡುವ ಒಂದು ನಾಮ ನಿಶ್ಚಯವಿಡುವ 2 ಒಂದು ಮನದಿ ಪೂಜಿಮಾಡುವ ಎಂದು ಬಿಡದೆ ನಾಮವ ಕೊಂಡಾಡುವ ಇಂದು ನಲಿನಲಿದಾಡುವ ಕಂದ ಮಹಿಪತಿಸ್ವಾಮಿ ನೋಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಭಾಸ್ಕರ ಪುಣ್ಯ ಪ್ರಭೆಯ ಕೂಡಿ ಧ್ರುವ ಪುಣ್ಯ ಎದುರಿಟ್ಟು ಬಂದು ಮುಂದೆ ಕಣ್ಣಾರೆ ಕಂಡು ತ್ರಾಹಿ ಎಂದೆ ಸಣ್ಣ ದೊಡ್ಡದರೊಳು ವಸ್ತು ಒಂದೆ ಬಣ್ಣ ಬಣ್ಣಾ ಗೀಹ್ಯದರಿಂದೆ 1 ಹೇಳಬಾರದಯ್ಯ ನಿಜವರ್ಮ ಕೇಳಿ ಶ್ರೀಸದ್ಗುರು ಪಾದಧರ್ಮ ಅಳಿಯಿತು ನೋಡಿ ಪೂರ್ವ ಕರ್ಮ ಹೊಳಿಯಿತೆನ್ನೊಳು ಘನ ಬ್ರಹ್ಮ 2 ಸೋಹ್ಯ ದೋರಿ ಕೊಟ್ಟೆನಗಿಂದು ಮಹಿಪತಿಸ್ವಾಮಿ ತಾನೆ ಬಂದು ಈಹ್ಯಪರ ಪೂರ್ಣ ಕೃಪಾಸಿಂಧು ಸಾಹ್ಯ ಮಾಡುತೀಹ್ಯ ದೀನ ಬಂಧು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ವಸ್ತು ಸನಾತನ ಒಂದೆ ಆದಿ ಅನಾದಿಯಾಧಾರಿದರಿಂದೆ ಧ್ರುವ ವೇದವಂದಿತ ವಸ್ತುವಿಮಲಾ ಸಾಧುಜನರ ಸಾಧನೆಗನುಕೂಲಾ 1 ಜ್ಞಾನವಿಜ್ಞಾನದ ನಿಜಸಾರಾ ಅನುಭವಕನುಭವಾಗುವ ಸುಆಗರಾ 2 ಸಗುಣ ನಿರ್ಗುಣಕಿದೆ ಮೂಲ ಭಕ್ತಜನರು ಮಾಡುವುದು ಪ್ರತಿಪಾಲಾ 3 ದೇವಾದಿಗಳು ಮಾಡುವರಿದೇ ಧ್ಯಾನಾ ಭವಹರ ಗುರುಮೂರುತಿ ನಿಧಾನಾ 4 ಇಹಪರ ಸುಖದೋರುದಿದೆ ನೀಟ ಮಹಿಪತಿಸ್ವಾಮಿ ಶ್ರೀಗುರು ಮಣಿಮುಗುಟ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿ ನಿಜ ಉಪಾಯ ಸದಮಲ ಸುಖದಾಶದಾಶ್ರಯ ಧ್ರುವ ಸಾಧನವಿಲ್ಲಿದೆ ಶ್ರೇಯಸುಖ ಬ್ಯಾರದೆ ಕೇಳತಿಸೂಕ್ಷ್ಮ ಮಾತು ಭೇದಿಸಿ ನೋಡೇನೆಂದರೆ ತಿಳಿದೀತು ಸಾಧಿಸಿ ಕೈಗೊಟ್ಟಿತು 1 ಗೋವಗೋಂತಲ್ಲದೆ ಬ್ಯಾರೆದೆ ಘನ ಭಾವಿಸದೆ ನಿಜಖೂನಾ ಸಾವಧವಾದವಗಿದೇನಿಧಾನ ಭವಹರ ಗುರುಕರುಣಾ 2 ತಾನೆಂಬುದರೊಳು ತಾನೆತಾನಾಗೇದ ಭಾನುಕೋಟಿ ಉದಿತ ದೀನ ಮಹಿಪತಿಸ್ವಾಮಿಯು ಸಾಕ್ಷಾತಾನಂದ ಘನಭರಿತಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ನಾರೆ ತಿಳಿದು ನೋಡು ಮನರಾಯಾ | ನಿನ್ನ ಕಣ್ಣದೆರೆದು ಸ್ವ ಹಿತದ ಉಪಾಯಾ ಪ ನಾನಾ ಜನ್ಮದಲ್ಲಿ ಬಂದು ಧರೆಯಲ್ಲಿ ಸುಖ | ವೇನು ಪಡೆದಿ ಹರಿಯ ಸ್ಮರಣೆ ಮರೆದಿಲ್ಲಿ 1 ಶರಗೊಡ್ಡಿ ಬೇಡಿಕೊಂಬೆ ನಾನೀಗಾ | ಸ್ಥಿರವಾದರಿಲ್ಲ ದೂರ ಶಿವಯೋಗಾ 2 ಇಂದು ನಾಳೆವೆನ್ನಬೇಡಿ ನಿಶ್ಚಯಾ ನಿನಗ | ಮುಂದ ಮತ್ತ ದೊರೆಯದಿದ ನರದೇಹಾ 3 ತಂದೆ ಮಹಿಪತಿಸ್ವಾಮಿ ದಯದಿಂದ | ನಂದವ ಪಡೆದು ಗೆಲಿಯೋ ಭವದಿಂದಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವನ ಕಂಡಿರ್ಯಾ ಕಾವಕರುಣನ ಭಾವ ಭಾವಿಸುವ ಪರಿಯಾಗುವ ದೇವನ ಧ್ರುವ ಸಗುಣಲೀಹ್ಯನಾ ಭಕುತಿಗೊಲಿವನಾ ಸುಗಮದಿಂದ ನಿಗಮನುಳುಹಿ ನಗವ ನೆಗೆದನಾ 1 ಸಿರಿಯ ಲೋಲನಾ ವರಕೃಪಾಲನಾ ಧರಿಯನುಳುಹಿ ತರಳಗೊಲಿದು ಪ್ರಿಯವಾದನಾ2 ವರವ ಬಲಿಗೆ ಇತ್ತು ದೋರಿದ ಭಾರ್ಗವರೂಪನಾ 3 ಪರಮ ಆತ್ಮನಾ ಹರಿಸರ್ವೋತ್ತಮನಾ ಸುರರ ನೆರೆಯ ಬಿಡಿಸಿ ಹೊರಟ ಪಾಂಡವಪ್ರಿಯನಾ 4 ಹೊಳೆವ ತೇಜನಾ ಮೂಲೋಕ ಪಾವನಾ ಹಳಿದು ವ್ರತವ ನೋಡಿ ಹಯವನೇರಿ ಸುಳಿದನಾ 5 ಘನ ಮಹಿಮನಾ ದಯಾ ನಿಸ್ಸೀಮನಾ ದೀನ ಮಹಿಪತಿಸ್ವಾಮಿ ಭಾನುಕೋಟೆ ದೀಪ್ತನಾ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವರೆವೆ ಧನ್ಯರಲ್ಲವೆ ಈ ಶರಣರು | ಈ ಶರಣರು | ಇವರೆವೆ ಧನ್ಯರಲ್ಲವೆ ಅವನಿಲಿ ಶರಣರು ಪ ಕರುಣಾನಂದವ ಪಡೆದು | ತರಣೋಪಾಯವನರಿದು | ಜರಿವನ್ಯ ಹಂಬಲವ ಬೆರೆದು | ಭಕ್ತಿರಸದೊಳು | ನಿರಪೇಕ್ಷ ವೃತ್ತಿಯಿಂದಾ | ಚರರಿಸುತಿಹ ಶರಣರು 1 ಭವ ಕಾನನವನೆ ತೊರೆವಾ | ನಿತ್ಯ ತಾನಾರೆಂಬುದು ನರಿವಾ | ಸ್ವಾನಂದಬೋಧವನು ಮಾನ | ನೀಗಿ ಶ್ರವಣದಿ | ಸಾನುರಾಗದಲಿಂದ ತಾನುಂಬ ಶರಣರು 2 ಹರಿಯಲ್ಲರೊಳಗರಿದು | ಶರೀರ ಭಾವನೆ ಮರೆದು | ಹರುಷದ ಗುಡಿಗಟ್ಟಿಬರುವ | ನಯನೋದಕದಿ | ಗುರುಮಹಿಪತಿಸ್ವಾಮಿ ಚರಣದ ಶರಣರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತು ಎನ್ನ ತಾರಿಸುವಿಯೋ ತಿಳಿಯದಿಂದಿಗೆ ಕಂತುಪಿತನೆ ಮುಕುತಿ ಮಾರ್ಗ ಹೊಂದುವೆನೆಂದಿಗೆ ಪ ಓದಿತತ್ವ ಶಾಸû್ರಗಳನು ಜನರಿಗ್ಹೇಳುವೆ ನಾನು ಮೇದನಿಯೊಳು ಬಲ್ಲವನೆಂಬ ಗರ್ವ ತಾಳುವೆ ಸಾಧು ಸಂತರ ನಡಿಯ ನುಡಿಯ ಮಹಿಮೆ ಕೇಳುವೆ ಮತ್ತೆ ಹಾದಿತಪ್ಪಿ ಕುಜನ ವೃತ್ತಿಯಲ್ಲಿ ಬಾಳುವೆ 1 ಸ್ವಾದ ಲಂಪಟ ದುರ್ವಿಷಯ ಬಿಡದ ಸಕ್ತನು ಕಪಟ ಕಲುಷ ಚಿತ್ತನು ಸಾಧಕಗುರು ಹಿರಿಯರ ಅನುಸರಿಸಿದ ಭಕ್ತರು ಸಾಧಿಪಕರ್ಮ ವೃತ್ತಗಳಲ್ಲಿ ಡಂಭಯುಕ್ತನು 2 ಒಂದು ಎರಡು ಹೇಳಲೇ ಎನ್ನತಪ್ಪವಾ ಹೃದಯ ಮಂದಿರ ಮೊಳಗಿಲ್ಲವಾಯಿತು ಜ್ಞಾನ ದೀಪವಾ ನೊಂದು ಬೆಂದು ತಾಪತ್ರಯದಿ ಸುಖದ ರೂಪವಾ ಬಗೆವೆ ನಿಂದು ಒಮ್ಮಿಗ್ಯಾರ ವಿಡಿಯೆ ಪಶ್ಚಾತ್ತಾಪವಾ 3 ಪತಿತಪಾವನ ದೀನೋದ್ಧರಣನೆಂಬ ಬಿರುದವಾ ಕ್ಷಿತಿಯೊಳಿನ್ನು ತಾಳಿದುದರ ಕೇಳು ಮಾಧವಾ ಮತಿವಿವೇಕದಿಂದೆ ಹಚ್ಚಿ ಭಕುತಿ ಸ್ವಾದವಾ ಗತಿಯ ಕೊಟ್ಟ ಕರಿಯೆ ನಾನು ನಿನ್ನ ಮರೆದವಾ 4 ನಿನ್ನ ಭಕ್ತರ ಮನಿಯ ನಾಯಿ ಯಂದು ಎನ್ನನು ಮುನ್ನಿನವರು ಉಂಡ ವೆಂಜಲ ಶೇಷವನ್ನನು ಇನ್ನು ಇಕ್ಕಿಸಿ ಸಲಹಬೇಕು ಮೂಢ ಚಿನ್ನನು ಘನ್ನ ಗುರು ಮಹಿಪತಿಸ್ವಾಮಿದಯ ಸಂಪನ್ನನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದೆಂದು ಎನಗೆ ನೀನೆ ಅಖಿಳದೊಳು ಎಂದೆಂದು ಎನಗೆ ನೀನೆ ಅಂದಿಗಿಂದಿಗೆ ಎನ್ನ ತಂದೆ ತಾಯಿಯು ನೀನೆ ಬಂಧು ಬಳಗವು ನೀಯೆನಗೆ ಹರಿಯೆ ಧ್ರುವ ಸುಖಸೌಖ್ಯದಲಿ ಸದಾನಂದ ಘನ ಬೀರುತಿಹ್ಯ ಭಗುತ ಜನರಿಗಹುದು ನೀ ಪ್ರೀಯ ಸಕಲದೇವಾದಿಗಳ ಕೈಯಲೊಂದಿಸಿಕೊಂಬ ಮಕುಟ ಮಣಿಯಹುದೊ ನೀ ಎನ್ನಯ್ಯ ಲೋಕಾಧಿಲೋಕಪಾಲನೆಂದು ಶ್ರುತಿಸ್ಮøತಿ ಅಖಿಳ ಭುವನದಲೆನ್ನ ಸಾಕಿ ಸಲಹುವ ಸ್ವಾಮಿ 1 ಏಕೋದೇವನೆ ನೀನದ್ವಿತೀಯ ಶ್ರೇಯಧೇನುವಾಗಿ ಸಾರಸಗರವುತಿಹ್ಯ ಸುಖ ದಾಯಕಹುದಯ್ಯ ನೀ ಸಾಕ್ಷಾತ ದಯಕರುಣದಿಂದಭಯಕರ ನಿತ್ಯಸಂಗಪೂರ್ಣ ತೋಯಜಾಕ್ಷ ನೀ ಪೂರ್ಣಪರಮ ಭಕ್ತರ ಪ್ರಾಣ ನಾಯಕನೆ ನೀನೆ ಪ್ರಖ್ಯಾತ ಕ್ಷಯರಹಿತನೆಂದು ಜಯವೆನಿಸಿಕೊಳುತಿಹ್ಯ ದಯಭರಿತನಹುದುಯ್ಯ ಸದೋದಿತ 2 ನೀನೆ ಗತಿಯೆಂದು ಧರೆಯೊಳು ಕೊಂಡಾಡುವ ನೆನಹುತಿಹ್ಯ ನÀಹುದುಯ್ಯ ಬಾಲಕನು ನಾ ನಿನ್ನ ಫನದೊಲವಿನಿಂದ ಪಾವನಗೈಸುತಲಿಹ್ಯ ದೀನ ದಯಾಳು ನೀನೆ ಎನ್ನ ಅನುದಿನದಲಾಧಾರಿ ಮುನಿಜನರ ಸಹಕಾರಿ ನೀನಹುದಯ್ಯ ಜಗಜ್ಜೀವನ ಮನೋಹರನ ಮಾಡುತಿಹ್ಯ ದಾಸ ಮಹಿಪತಿಸ್ವಾಮಿಭಾನುಕೋಟಿಯು ನೀನು ಪ್ರಸನ್ನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನಾರಿಸುವಿ ಹರಿಯೇ ಎನ್ನವಗುಣಾ ಅನಂತಾನಂತ ತಪ್ಪು ಮಾಡಿದ ಪಾಮರೊಳೇನಾ ಪ ಉದಯ ಉದ್ಯೋಗನೆನುವೆ ಮಧ್ಯಾಹ್ನಕ ಕ್ಷುಧೆ ತೃಷೆಯಲ್ಲಿ ದಣಿವೆ ಇರುಳಿಗಿನ್ನು ವದಗಿ ನಿದ್ರೆ ಯನುವೆ ಇದರೊಳು ನಿನ್ನ ನಾಮನೆನೆಯದೆ ದಿನಗಳೆದೇನಾ 1 ನಿನ್ನ ಕಥೆಯಾ ಕೇಳದೇ ಮಂಗಳಂಗುಟ ಕಣ್ಣಿನೊಳಿಟ್ಟು ನೋಡದೇ ಸರ್ವಾಂಗದಿ ಚೆನ್ನಾಗಿ ಮಾಡದೇ ಎನ್ನ ಕಾಯವು ಸತಿಸುತರಿಗೆ ಮಾರಿದೇನಾ 2 ಹರಿ ಭಕ್ತಿ ಮುದ್ರೆ ಧರಿಸೀ ಹೆಮ್ಮಿಲಿ ದುರಾಚರಣೆ ಮಾಡಿದ ಕ್ಷಮಿಸೀ ಸತ್ಸಂಗದಿ ಅರಿವಿಗೆ ಮನನೀಲಿಸೀ ಹೊರೆವದು ಗುರು ಮಹಿಪತಿಸ್ವಾಮಿ ಕರುಣಿಸಿ ಎನ್ನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ನಿನ್ನ ಹಿತವಾ ಪಡೆದ್ಕೋ ಯಲೆ ಜೀವವೇ | ಶ್ರೀನಾಥನಂಘ್ರಿ ನಂಬಿ ಸುಖಿಸಲಾರೆಯಾ ಪ ಶ್ವಾನ ಸೂಕರಾದಾ ನಾನಾ ಯೋನಿಯಲ್ಲಿ ತೊಳಲಿ ಬಂದು | ಮಾನವ ಜನ್ಮ ಪುಣ್ಯದಿಂದ ಬಂದುದಾ | ಭವ | ಕಾನನದ ಮಾರ್ಗವನು ಜರೆಯಲಾಪೆಯಾ 1 ಕಾಮ ಕ್ರೋಧ ಲೋಭವೆಂಬಾ ತಾಮಸದ ಬಲಿಗೆ ಸಿಲುಕಿ | ನೇಮಗೆಟ್ಟಾ ವ್ಯರ್ಥನಾದೆ ಹರಿಯ ನಾಮವಾ | ಪ್ರೇಮದಿಂದ ಸ್ಮರಿಸಿ ಭಕ್ತಿ ಸೀಮೆಯೊಳು ಪಡೆದು ಮುಕ್ತಿ | ಸಾಮರಾಜ್ಯ ಪದವಿಯನು ಸಾರಲಾಪೆಯಾ 2 ಮರದು ತನ್ನ ನಿದ್ರೆಯೊಳು ಅರಸು ರಂಕನಾಗಿವಂತೆ | ಶರೀರ ತಾನೆಂಬ ವಿದ್ಯಾವಳಿದು ಜಾಗಿಸೀ | ಗುರು ಮಹಿಪತಿಸ್ವಾಮಿ ಕಿರಣವೆಲ್ಲರೊಳು ಕಂಡು | ಶರಣರಾ ವೃತ್ತಿಯೊಳು ಬರಸಲಾಪೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದ್ಹೇಳಲಿ ನಾನು | ಸಾಧುರಾ ಮಹಿಮೆಯನು | ಮನವ ವುನ್ಮನಮಾಡೀ | ಘನಸುಖದೊಳುಕೂಡಿ | ಆನಂದದೊಳಗಿಹನು ಪ ಬಹುಮಾತವನಾಡಾ | ಮೌನವಹಿಡಿದುಕೂಡಾ | ಸಹಜದಿ ನುಡಿವಂದಾ | ನಾಡಿದ ರದರಿಂದಾ | ಸ್ವಹಿತದ ಸುಖನೋಡಾ 1 ಅರಿಯಾನಂತಿಹನಲ್ಲಾ | ಅರಿವನು ಉಳಿದಿಲ್ಲಾ | ಅರಹು ಮರಹು ಮೀರಿ | ಕುರ್ಹುವಿನ ಮನೆಸೇರಿ | ಅರಿಸುಖ ಸಮವೆಲ್ಲಾ 2 ಸಾಧುರ ನಿಜವೆಲ್ಲಾ | ಸಾಧು ಆದವ ಬಲ್ಲಾ ಸಾಧುರ ವೇಷದಿ | ಉದರವ ಹೊರೆಯುತಾ | ಬೋಧಿಸುವದಲ್ಲಾ 3 ಆಶೆಯಂಬುದು ಬಿಟ್ಟು ವೇಷವ ಕಳೆದಿಟ್ಟು | ಲೇಸಾಗಿ ಗುರುವರ | ಮಹಿಪತಿಸ್ವಾಮಿಯಾ | ಧ್ಯಾಸದಿ ಬೆರೆತಿಹನು 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳುತಲೆದ್ದು ಮನವೆ ನೀ ವಲೀ ನಿಜಖೂನ ಕುಲಕೋಟಿ ಉದ್ಧರಿಸುವ ನೆಲೆನಿಭ ಸ್ಥಾನ ಬೆಳಗಾಗಲಿಕ್ಕೇರಿತು ನೀ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 1 ಒಳಮುಖನಾಗರಿಯೋ ನೀ ಸುಲಲಿತ ಜ್ಞಾನ ಅಲೇಶ ಮಾಡದೆ ನೀ ಬ್ಯಾಗ ಬಲಿ ನಿಜಧ್ಯಾನ ಥಳಥಳಗುಡುತಲ್ಯದ ಒಳಿತಾಗಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 2 ತೊಳಿಬೇಕೆಲೊ ಮನದ ಹೀನ ಮಲಿನಗುಣ ಕರ್ಮ ತಮಂಧತನ ಕಳೆಕಾಂತಿಯುಳ್ಳ ಕರುಣಾರ್ಣವ ಸ್ವಾಮಿ ಪೂರ್ಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 3 ಸಲೆ ಮೊರೆಹೊಕ್ಕು ನೀ ಸದಾಬಲಿ ಭಕ್ತಿ ಪೂರ್ಣ ಅನುದಿನ ಸದ್ವಸ್ತು ಶರಣ ಸಕಳ ಸುರವುತಲ್ಯದೆ ಬಲ್ಲ ಸ್ವಾಮಿ ಕರುಣ ತಿಳಕೊಂಡು ಮಾಡು ಗುರುಮೂರ್ತಿಗೆ ಸುನಮನ 4 ಇಳೆಯೊಳಿದೆ ಸಕಲಪುಣ್ಯಶಿರೋನಿಧಾನ ಘಳಿಸುವದೊಂದೆ ಸುಫಳಿತ ಸುದಿವ್ಯ ಘನ ತಿಳಿಯೊ ಸುಮನವೆ ಮಹಿಪತಿಸ್ವಾಮಿ ಪೂರ್ಣ ಒಲುವಾಂಗೆ ಮಾಡು ಗುರುಮೂರ್ತಿಗೆ ಸುನಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು