ಒಟ್ಟು 58 ಕಡೆಗಳಲ್ಲಿ , 32 ದಾಸರು , 58 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
ಅಮ್ಮಬಾರೆ ನಮ್ಮಮ್ಮನೆ ನೀನಮ್ಮ ಅಮ್ಮಬಾರೆ ನಮ್ಮಮ್ಮನೆ ಧ್ರುವ ಅಮ್ಮಬಾರೆ ನಮ್ಮಮ್ಮನೆ ನೀ ನಮ್ಮ ಬೊಮ್ಮನ ಪಡೆದಮ್ಮ ನೀ ಪರ ಬ್ರಹ್ಮ ನೀನಹುದಮ್ಮ ನೀನಮ್ಮ ಅಮ್ಮಬಾರೆ ನಮ್ಮಮ್ಮನೆ 1 ಉಮ್ಮ ಸವಿದೊಮ್ಮೆ ಅಮ್ಮೆ ನಾ ನಿನ್ನ ಸುಮ್ಮನಿರುವೆ ನಾ ಒಮ್ಮನದಲೆಮ್ಮೆ ಇಮ್ಮನಡಿಬೇಡೆ ಅಮ್ಮೆ ನಾನ ನಿಮ್ಮ ಒಮ್ಮೆ ಅಮ್ಮಿಯಾಲಮೃತ್ಯೆರಿ ಅಮ್ಮಾ 2 ಒಮ್ಮೆ ದಯವೆಂಬ ಅಮ್ಮನುಣಿಸಮ್ಮಾ ನಮ್ಮ ಕರುಣದಾ ಅಮ್ಮನುಣಿಸಮ್ಮಾ ಒಮ್ಮೊಮ್ಮುಣಿಸ ನಮ್ಮಮ್ಮ ನೀನಮ್ಮಾ ರಮ್ಮಿಸಿ ಮಹಿಪತಿ ಬಾಲಕಗ ನಿಮ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನಂದನನಂದನೊಲಿಯೆ ಏನಂದದ್ದೆ ವೇದ ವೃಂದಾ ಪ 'ಅ'ಮೊದಲು 'ಕ'್ಷ ಕಾರಾಂತ ಈ ಮಹಾವರ್ಣಗಳೆಲ್ಲ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ 1 ಪೋಪದು ಬರುತಿಪ್ಪುದು ಕೋಪಶಾಣಿ ಮಾಡುವುದು ರೂಪ ಲಾವಣ್ಯವು ಹರಿವ್ಯಾಪಾರವೆಂದವರಿಗೆ 2 ಪಾವಕ ವಾಯು ತರು ಫಲಪುಷ್ಪ ಬಳ್ಳಿಲಿ ಹರಿ ಒಳಗೆ ವ್ಯಾಪ್ತನೆಂದವಗೆ 3 ತಾರೊ ಬಾರೊ ಬೀರೊ ಸಾರೊ ಮಾರೊ ಕೋರೊ ಹಾರೊ ಹೋರೊ ಸೇರೊ ಕೋರೊದೆಂಬ ದಿಶಾಪ್ರೇರಣೆ ಎಂದವರಿಗೆ 4 ಮಧ್ವಶಾಸ್ತ್ರ ಪ್ರವಚನ ಮುದ್ದುಕೃಷ್ಣನ ದರುಶನ ಸಿದ್ಧ ವಿಜಯವಿಠ್ಠಲನ ಪೊಂದಿ ಕೊಂಡಾಡುವವರಿಗೆ 5
--------------
ವಿಜಯದಾಸ
ಆರತಿಯೆತ್ತಿದರು ಅಪ್ರಮೇಯಗೆ ಪ ಸಾರಸಮುಖಿಯರು ಸಂತೋಷದಿಂದ ಅ.ಪ ತರಳಗೋಸುಗ ಕಂಬ ಬಿರಿದು ಅವತಾರಗೈದು ದುರುಳನುದುರವ ಸೀಳಿ ಕರುಳ ಧರಿಸಿದವಗೆ 1 ದಾದಿ ಕಾರಣ ಪೂರ್ಣ ಭೋದಾಮೃತಮಯಗೆ 2 ಕಾಮುಕರನು ಕೊಂದು ಭೂಮಿ ಭಾರವನಿಳುಹಿ ಸ್ವಾಮಿಯಾಗಿ ಮೆರೆವ ಶ್ರೀ ಮನೋಹರನಿಗೆ 3 ಸ್ವಸ್ತಿಯಾಗಲಿ ಎಂದು ಹಸ್ತಿನಿಯರು | ಹವಳದ 4 ಕಿಂಕರ ಜನಮನ ಸಂಕಟಹರ ನಿಷ್ಕ ಳಂಕ ನೀನೆನ್ನುತ ಶಂಕಿನಿಯರು | ರತ್ನದ 5 ಭೃತ್ಯವತ್ಸಲನೆಂದು ಚಿತ್ತಿನಿಯರು | ಮುತ್ತಿನ 6 ಕುಂದಣ 7 ಸೌಪರ್ಣಿ ವಾರುಣಿ ರ್ವಾಣಿÉ ಸ್ಮರನ ರಾಣಿ ಯಿಂದ್ರಾಣಿ ಮುಖ್ಯರು | ಹುವ್ವಿನ 8 ಪುರಹರ ವೈರಿ ಮುಖ್ಯ ಸುರವಂದ್ಯ ಶರಣ ಶ್ರೀ ಗುರು ರಾಮವಿಠಲಗೆ 9
--------------
ಗುರುರಾಮವಿಠಲ
ಆವರೋಗವೆ ಯೆನಗೆ ದೇವ ಧನ್ವಂತ್ರೀ ಪ ಸಾವಧಾನದಿಯೆನ್ನ ಕೈಪಿಡಿದು ನೋಡೋ ಅ ಪ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು 1 ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ 2 ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ 3
--------------
ವಿಜಯದಾಸ
ಇ. ಗುರುನಮನ ವಿಷ್ಣುತೀರ್ಥರೆ ಪಾಲಿಸೀ ನಿರಂತರ ಮಧ್ಯಗೇಹರ ಸುತನೆನಿಸಿರ್ದ ಗುರುವರ ಪ ಮಧ್ವಶಾಸ್ತ್ರವು ಜೀರ್ಣವಾಗುವ ಸಮಯದಿ ಬದ್ಧಾದರದಿ ಬಂದುದ್ಧರಿಸುವ ಗುರುವರ 1 ಜಾನಕೀಪತಿಯೊಳು ಲಕ್ಷುಮಣನಂತೆ 2 ವಾಲ್ಮೀಕಿಗಳ ಶಿಷ್ಯಕುಶಲವರಂತೆಯೇ ಚೆಲ್ವ ವ್ಯಾಸರು ಅನಿರುದ್ಧರು ನಿಮಗೆ 3 ಪಾಜಕ ಕ್ಷೇತ್ರದೊಳ್ಸನ್ಯಾಸಾಶ್ರಮಿಯಾಗಿ ರಾಜೇಶ ಹಯಮುಖ ಕೃಷ್ಣನರ್ಚಿಸಿದ 4
--------------
ವಿಶ್ವೇಂದ್ರತೀರ್ಥ
ಇದ್ದೀಯಯ್ಯ ಎನ್ನೊಳಗೆನೀ ಇನಕುಲರಾಯ ಪ ಇದ್ದೀಯೈ ಸರ್ವರ ಹೃದ್ಗುಹೆಯೆಂತೆಂಬ ಪದ್ಮದೊಳಗೆನೀನು ಪದುಮೆಯಿಂದೊಡಗೂಡಿ ಅ.ಪ ಮರುತಾತ್ಮಜ ನಿನ್ನ ಚರಣವನೊತ್ತಲು ಸರಸಿಜಭವ ಮುಖ್ಯ ಪರಿವಾರಸಹಿತನು 1 ಮೂರು ಲೋಕದ ವ್ಯಾಪಾರ ನಡೆಸುತ್ತ ಯಾರಿಗು ತಿಳಿಸದೆಯೆಲ್ಲೆಲ್ಲಿಯು ನೀನೆ 2 ಪ್ರೇಮದಿಂದಲಿ ಭಕ್ತಸ್ತೋಮವೋಲೈಸುವದು ಸ್ವಾಮಿಯಾಗಿ ಗುರು ರಾಮವಿಠಲ ತಂದೆ 3
--------------
ಗುರುರಾಮವಿಠಲ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈತನೀಗಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದ ಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ. ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆ ಕೊಟ್ಟು ಶರ್ಮಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿ ತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವರಾಜ್ಯಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನಪೆತ್ತ ಚೆಲುವ ನಮಲಗಂಗೆಯಿತ್ತು ನಲಿವ ವಾಸುದೇವ 2 ಉರಗಶಯನ ಗರುಡಗಮನ ಪರಮಪದವನುಳಿದುಶೇಷ ಗಿರಿಯೊಳಿರ್ದುಬಂದ ವ್ಯಾಘ್ರಗಿರಿಯ ಶಿಖರಕೆ ಭರದಿ ನಿತ್ಯಮುಕ್ತರೊಡನೆ ಕರದಿ ಶಂಖಚಕ್ರಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದವಿಠಲ 3
--------------
ಸರಗೂರು ವೆಂಕಟವರದಾರ್ಯರು
ಈತನೀತನೆ ರಮಾನಿವಾಸನು ಕೇಳಿ ಜನರು ಈತನೀಗ ಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆಕೊಟ್ಟು ಶಮನಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವ ರಾಜ್ಯ ಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನ ಪೆತ್ತ ಚೆಲುವನಮಲ ಗಂಗೆಯಿತ್ತು ನಲಿವ ನಮರ ವೈರಿಗಳನು ಕೊಲುವ ಕಮಲನಾಭ ವಾಸುದೇವ2 ಉರಗಶಯನ ಗರುಡಗಮನ ಪರಮಪದನುಳದು ಶೇಷ ಗಿರಿಯೊಳಿರ್ದು ಬಂದ ವ್ಯಾಘ್ರಗಿರಿಯ ಶಿಖರಕೆ ಭರದಿನಿತ್ಯಮುಕ್ತರೊಡನೆ ಕರದಿ ಶಂಕ ಚಕ್ರ ಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದ ವಿಠಲ 3
--------------
ವೆಂಕಟವರದಾರ್ಯರು
ಉಗಾಭೋಗ ಚಿಕ್ಕ ಮಗುವಾದ ಪ್ರಹ್ಲಾದ ದೇವನನು ರಕ್ಕಸನು ಪಿಡಿದತಿ ಹಿಂಸೆಪಡಿಸುವದ ನೋಡಿ ಉಕ್ಕಿಬರುತಿಹ ಕೋಪದಿಂ ಕಿಡಿಕಿಡಿಯಾಗಿ ಉಕ್ಕಿನ ಕಂಬದಿಂ ಉರಿಯ ಕಾರುತ ಬಂದು ಪಕ್ಕಿದೇರನು ಹಿರಣ್ಯಕಶಿಪನ ಪಿಡಿದು ತಾ ಉರ ಬಗೆದು ಕರುಳ ಮಾಲೆಯ ಗಕ್ಕನೆ ಗಳಕಿಕ್ಕಿಕೊಂಡು ಆರ್ಭಟಿಸಿದಂದು ಲಕ್ಕುಮಿಯಾದಿಯಾಗಿ ಮುಕ್ಕೋಟಿ ದೇವತೆಗಳು ಬೆದರಿ ದಿಕ್ಕೆಟ್ಟು ಗಡ ಗಡ ನಡುಗುತಿರಲಾಗ ಅಕ್ಕರದ ಭಕುತ ಪ್ರಹ್ಲಾದ ಬರೆ ಬಿಗಿಯಪ್ಪಿ ತಕ್ಕೈಸಿ ಮುಂಡಾಡಿ ಪ್ರಸನ್ನನಾದನು ತನ್ನ ಭಕ್ತರೊಳಿನ್ನೆಷ್ಟು ಪ್ರೀತಿಯೋ ರಂಗೇಶವಿಠಲಗೆ
--------------
ರಂಗೇಶವಿಠಲದಾಸರು
ಎಂತೋಪೂಜಿಪುದಂತರ್ಯಾಮಿಯಾ-ನಂತಾದಿರಹಿತನ ಚಿಂತಾದೂರನ ಚಿನುಮಯ ರೂಪನಾ ದೆಂತೋಧ್ಯಾನಿಪೆ ನಾ ಪ ಈಶ-ವೀಶ-ವಾಹನಗೀಸಚರಾಚರ ಮಿಸಲಿಗೊಳಗಲ್ಲಾ ವಾಸುಕಿ ಭೋಗನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲಸಿಹಮೂರ್ತಿಗೆ-ಸಲಿಲ ಸ್ಪರ್ಶನವೆ ಜಲರುಹನೇತ್ರಗೆ ಜಲರುಹಗಾತ್ರಗೆ ಜಲದಲ್ಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುಡುವಗೆ ಬಣ್ಣದವಸ್ತ್ರಗಳೆ ಉನ್ನತ ಕೌಸ್ತುಭರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂಪಡೆದವಗೆ ಮಿಸುಪ ತುಲಸಿಯಿಂದೆಸವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದಲಿಸೃಜಿಸಿದ ಗಂಧವತೀಶನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾನತನಿಗೆ 7 ವೇದ ಗೋಚರಿಸು ವೇದಾತ್ಮಕನು ವೇದೋದ್ಧಾರಕನು ವೇದಲೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೆ 8 ಪೊಕ್ಕರೆ ಜಲಮಂ ಕುತ್ತಿಗೆ ನೆರೆಯದವಸ್ತು ಪರಾತ್ಪರನಾ ನಿತ್ಯತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತುಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರ ಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರವಿಲ್ಲದ ನಂತ ಗುಣಾತ್ಮಕನಾ ಎಂತು ಪ್ರದಕ್ಷಿಣೆಯಾಂತು ನಮಿಪೆ ಜಗದಂತ ಶರೀರಕನಾ 11 ಸರ್ವಾಧಾರನ ಸರ್ವ ಶರೀರನ ಸರ್ವವ್ಯಾಪಕನಾ ಸರ್ವನ ನಮಿಸುವಗರ್ವವೆಂತುಟೊ ಶಕ್ರನಮಸ್ಕøತನಾ 12 ಧರೆಯೊಳು ಪುಲಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿದಾಸೋತ್ತಮರಾ 13
--------------
ಸರಗೂರು ವೆಂಕಟವರದಾರ್ಯರು
ಎಲ್ಲಿಂದೆಲ್ಯರುಳಿದ್ಯೋ ಎಲೆ ಮನವೆ ಪ ಎಲ್ಲಿಂದೆಲ್ಯುರುಳಿದ್ಯೋ | ಎಲೆ ಮನವೇ | ಬಲ್ಲತನದಲಿಗಿಡ ಕೊನೆಯ ನೇರಿ ಬಿದ್ದಂತೆ 1 ದುರ್ಲಭ ನರದೇಹದಿ ಬಂದು | ಫುಲ್ಲನಾಭನ ನೆನೆಯದೆ | ಕ್ಷುಲ್ಲಗುಣದಲಿ ನಾನಾ ಹೀನ ಯೋನಿಯ ಮುಖಕ 2 ಅಗ್ರಜನ್ಮದಲಿ ಬಂದು ಸಂತರಾನುಗ್ರಹವ | ಪಡೆದುಕೊಳ್ಳದೆ | ವ್ಯಗ್ರಬುದ್ಧಿಯಲಿ ಅತಿ ಶೂದ್ರ ನಡುವಳಿವಿಡಿದು 3 ವರಗಳನು ಪಡಕೊಳ್ಳವೆ | ಶರೀರಾಭಿಮಾನಿ ಗೆಳೆತನ ಕಟ್ಟಿ ವಿಷಯಕ್ಕು 4 ತಂದೆ ಮಹಿಪತಿ ಸ್ವಾಮಿಯಾ ಮೊರೆ ಹೊಕ್ಕು | ಬಂದ ಸಾರ್ಥಕವ ಮಾಡು | ಇಂದಿನೆಚ್ಚರ ನಾಳೆ ಸಂಧಿಸಿದು ನಿಜದಿಂದ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕೆ ಪೋಗುವೆ ರಂಗಾ, ರಂಗಯ್ಯ ರಂಗ ಪ ಏಕಾಂತದೊಳು ಪೇಳ್ವ ವಾಕ್ಕುಗಳನು ಕೇಳಿ ಅ.ಪ ಮುನಿಸತಿ ಶಿಲೆಯಾಗಿ ವನಜನಾಭಾಯೆಂದು ನೆನೆಯುತಲಿಲ್ಲವೋ ಮನ ಮೋಹನಾ ತನಯ ಪ್ರಹ್ಲಾದ ತಾ ಜನಕಾ ಬಾರೆನಲಿಲ್ಲ 1 ದುರುಳ ಮಕರಿಯಿಂದೆ ಪರಿತಾಪವಾಂತಿಲ್ಲ ಸ್ಮರಿಸಲಿಲ್ಲ ದುರುಳ ಕದ್ದೊಯ್ಯಲಿಲ್ಲ ಸರಸಿಜಾನನನೀಗ ಚರಣಕೆರಗಲಿಲ್ಲ 2 ಹದಿನಾರು ಸಾವಿರ ಸುದತೀ ಮಣಿಯರೆಲ್ಲ ಮದನಾಂಗ ಬಾರೆಂದು ಕರೆಯಲಿಲ್ಲ ಉದಧಿ ನಿನ್ನರಸಲಿಲ್ಲ ಪದುಳದೆ ಬಲಿ ನಿನ್ನ ಚದುರ ಬಾರೆನಲಿಲ್ಲ 3 ಕರದೆ ಕೊಡಲಿಯ ಪಿಡಿದು ಮರದೆ ನಿ[ಲ್ಲೆನುತಲಿ] ನೂರಾರು ಕೈಯವ ಕರೆಯಲಿಲ್ಲ ಹರನೀಗ ತ್ರಿಪುರರ ತರಿಯೆ ಬಾರೆನಲಿಲ್ಲ ವರತುರುಗವೇರಿ ಧುರಕೆ ಬಾರೆಂಬರಿಲ್ಲ4 ಕಾಮಿತವೀಯೆಂದು ಪ್ರೇಮದಿ ಭಜಿಸುವ ಪಾಮರರಿಲ್ಲಿಗೇ ಬರುತಿರ್ಪರೋ ಶಾಮನೆ ಮಾಂಗಿರಿಗಾಮಿಯಾಗಿಹೆಯೇಕೆ ಕಾಮಹರನೆ ಬಾರೊ ರಾಮದಾಸಜೀವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್