ಒಟ್ಟು 64 ಕಡೆಗಳಲ್ಲಿ , 9 ದಾಸರು , 58 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೃತಿನಾಥ ಸ್ಮøತಿಯಿತ್ತು ಸತತ ಪೊರೆಯೋಗತಿ ಗೋತ್ರ ನೀನೆಂದು | ಸತತ ತುತಿಸುವೆನೋ ಪ ನಿಚ್ಚ ಸೇವೆಯ ಕೊಳ್ಳೋ 1 ಪತಿ ಸಖನೇ |ನ್ಯೂನಾತಿರೇಕಗಳ | ನೀನಾಗಿ ಮನ್ನಿಸುತಮಾನನಿಧಿ ಗುಣಪೂರ್ಣ | ನೀನೆನ್ನ ಪೊರೆಯೋ 2 ಭಾವದಲಿ ನೀನಿರಲು | ಅವ ಭಯವಿಲ್ಲೆನಗೆಶ್ರೀವರನೆ ಸರ್ವೇಶ | ಸರ್ವಜ್ಞ ಮೂರ್ತೇ |ಕಾವ ಕರುಣಿಯೆ ಗುರು | ಗೋವಿಂದ ವಿಠಲ ಬಾಗೋವತ್ಸ ಧ್ವನಿ ಕೇಳಿ | ಧಾವಿಸುವ ಪರಿಯಂತೆ 3
--------------
ಗುರುಗೋವಿಂದವಿಠಲರು
ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
ಅನಂತ ಹರಿ ವಿಠಲ | ಕಾಪಾಡೊ ಇವನಾ ಪ ಅನಘ ಕರುಣಾಳು ಹರಿ | ನಿನಗೆ ಭಿನ್ನೈಪೇ ಅ.ಪ. ಪಿತೃಮಾತೃ ಸೇವೆಯಲಿ | ರತಿಯ ಕರುಣಿಸು ಇವಗೆಹಿತ ವಹಿತ ವೆರಡರಲಿ | ಪ್ರೀತಿ ಸಮ ವಿರಲೀಮತಿ ಮತಾಂವರರಂಘ್ರಿ | ಹಿತದಿಂದ ಸೇವಿಸುವಮತಿಯನೇ ಕರುಣಿಸುತ | ಕಾಪಾಡೋ ಹರಿಯೇ 1 ಭಕುತಿ ಸುಜ್ಞಾನಾದಿ | ವ್ಯಕುತಿಗೈ ಇವನಲ್ಲಿಕಕುಲಾತಿ ಇರದಂತೆ | ಮುಕುತಿ ಸತ್ಪಥದೀಪ್ರಕಟಗೈ ಸ್ಥಿರಬುದ್ಧಿ | ಅಕಳಂಕ ಶ್ರೀಹರಿಯೆನಿಖಿಲಾಗಮ ಸುವೇದ್ಯ | ಭಕುತ ಪರಿಪಾಲಾ2 ಸ್ಮರಣೆ ಸುಖ ಸುಧೆ ಸುರಿದು | ಶರಧಿಭವ ಉತ್ತರಿಸೊಮರುತಾಂತರಾತ್ಮಕನೆ | ಕಾರುಣ್ಯ ಮೂರ್ತೇಆರುಹಲೇನಿಹುದಿನ್ನು | ಸರ್ವಜ್ಞ ನೀನಿರಲುಮೊರೆಇದನ ಸಲಿಸು ಗುರು | ಗೋವಿಂದ ವಿಠಲ3
--------------
ಗುರುಗೋವಿಂದವಿಠಲರು
ಆಮಿತ ಮಹಿಮೋಪೇತ ವಿಠಲ ಸಲಹೋ ಪ. ವಿಮಲಮತಿ ಇತ್ತಿವಗೆ ಕಾಮಿತಾರ್ಥವನೇಅ.ಪ. ತೈಜಸನೆ ನೀನಾಗಿ ನಿಜಯಾರ್ಯನುಗ್ರಹವಯೋಜಿಸಿಹೆ ಸ್ವಪ್ನದಲಿ ಕಾರುಣ್ಯಮೂರ್ತೇಭ್ರಾಜಿಷ್ಣು ಸುಜ್ಞಾನ | ವೈರಾಗ್ಯ ಭಾಗ್ಯಗಳಮಾಜದಲೆ ಕರುಣಿಸೆಂದಾನಮಿಪೆ ಹರಿಯೇ 1 ಹೇ ಸದಾಶಿವ ವಂದ್ಯ | ಕ್ಲೇಶತೋಷಗಳಲ್ಲಿಭಾಸಿಸಲಿ ತವನಾಮ | ಮೀಸಲದ ಮನದೀ |ಆಶುಗತಿಮತ ಪೊಂದಿ | ದಾಸದೀಕ್ಷಾಕಾಂಕ್ಷಿವಾಸವಾನುಜ ಇವನ | ದಾಸನೆಂದೆನಿಸೋ 2 ಭವ ಉತ್ತರಿಪಸದ್ವಿದ್ಯ ಪಾಲಿಪುದು ಮಧ್ವಾಂತರಾತ್ಮಾ 3 ಹರಿಗುರೂ ಸದ್ಭಕ್ತಿ | ದುರ್ವಿಷಯನಾಸಕ್ತಿಎರಡು ಮೂರ್ಭೇದಗಳ | ಅರಿವ ನೀನಿತ್ತೂತರತಮದ ಸುಜ್ಞಾನ | ಕರುಣಿಸುವುದೆಂದೆನುತಕರಿವರದ ಭಿನ್ನವಿಪೆ ಪ್ರಾರ್ಥನೆಯ ಸಲಿಸೋ 4 ಕಾಯ ಬೇಕೋ 5
--------------
ಗುರುಗೋವಿಂದವಿಠಲರು
ಇಂದು ಭಾಗ ಹರಿ ವಿಠಲ | ಪೊರೆಯ ಬೇಕಿವಳಾ ಪ ನೊಂದಿಹಳೊ ಬಹುವಾಗಿ | ಹೇಸಿ ಸಂಸ್ಕøತಿಲೀ ಅ.ಪ. ವಿನುತ | ಪರಿಪರಿಯ ಶಾಸ್ತ್ರಗಳುವರಲುತಿದೆ ಶ್ರೀಹರಿಯೆ | ಮೊರೆ ಕೇಳದೇನೋತರುಣಿ ದ್ರೌಪದಿವರದ | ಕರಿವರದ ನೀನೆಂದುಮರಳಿಮಹಪಾಪಿ ಆ | ಅಜಾಮಿಳವರದಾ 1 ಉಸಿರಿದ್ದು ಭಾರವನು | ಹೊರುಎಂದು ಪೇಳ್ಬಹುದುಉಸಿರಳಿವ ಪರಿಮಾಡೆ | ಮೊರೆ ಆವನಿಡುವಾಬಸಿರಿನಿಂ ಬಂದಂಥ | ಶಿಶುಗಳೆಲ್ಲವೂ ಪೋಗಿಯಶವ ವರ ಮೆರೆಸಲ್ಕೆ | ಹಸುಮಗನಸಲಹೋ 2 ಸಂಸಾರ ಕ್ಲೇಶಗಳ | ಶಿಂಸಿಸಲು ಅಳಿವಲ್ಲಕಂಸಾರಿ ನಾವಾಗಿ | ಪೊರೆಯ ಬೇಕಿವಳಾವಂಶ ಉದ್ದರಿಸೆ ಪದ | ಪಾಂಸು ಬೇಡ್ವಳೊ ನಿನ್ನಸಂಶಯವು ಯಾಕಿನ್ನು | ಕರುಣಿಸೋ ಹರಿಯೆ 3 ಸುಜನ | ತಂದೆ ಕೈಪಿಡಿಯೋ 4 ಜ್ಞಾನ ಸದ್ಭಕುತಿ ವೈ | ರಾಗ್ಯ ಕೊಟ್ಟವಳೀಗೆಕಾಣಿಸೋ ಸದ್ಗತಿಯ | ಕಾರುಣ್ಯ ಮೂರ್ತೇಏನೊಂದು ಅನ್ಯವನು | ನಾನು ಬೇಡುವುದಿಲ್ಲಜಾಣಗುರು ಗೋವಿಂದ | ವಿಠಲಾ ಪೊರೆ ಇವಳಾ 5
--------------
ಗುರುಗೋವಿಂದವಿಠಲರು
ಋಗ್ವೇದ ಪ್ರಿಯ ವಿಠಲ | ಸದ್ಗುಣಾರ್ಣವನೇ ಪ ಋಗ್ವಿನುತ ನೀನಾಗಿ | ಈಕೆಯನು ಪೊರೆಯೋ ಅ.ಪ. ವೇದಾಧಿಕಾರವನು | ನೀ ದಯದಿ ತ್ಯಜಿಸದೆಮೋದದಿಂ ತೋರಿ | ಋಗ್ವೇದ ವಾಚಿಸಿದೇ |ಮೋದ ಮುನಿ ಮತದಲ್ಲಿ | ಸಾಧಿಸಿವಳಲಿ ದೀಕ್ಷೆಭೇದ ಪಂಚಕ ತಿಳಿಸಿ | ಉದ್ಧರಿಸೊ ಇವಳಾ 1 ಹರಿದಾಸ್ಯ ಕಷ್ಟವೆನೆ | ಹಿರಿಯರ ಮತವಿಹುದುತರಳೆ ಆದ ಕಾಂಕ್ಷಿಪಳು | ಪೂರ್ವ ಪುಣ್ಯದಲೀಮುರವೈರಿ ನೀನಾಗಿ ಕರುಣಿಸುತ ತವದಾಸ್ಯಪರಿಹರಿಸು ಭವನೋವ | ಕಾರುಣ್ಯಮೂರ್ತೇ 2 ಭವ | ಮೋಚನವ ಗೈಯ್ಯೋ 3 ಲೌಕಿಕವು ವೈದಿಕವು | ಸಕಲವರ್ಣಾತ್ಮಕನೆವಾಕು ಸಕಲವು ತವ ಆ | ಲೌಕಿಕದ ಮಹಿಮಾವಾಕಾಗಿ ವರ್ತಿಸುತ | ಬೇಕಾದ ವರ ನೀಡಿನೋಕ ನೀಯನೆ ಕಾಯೊ | ಈಕೆಯನು ಹರಿಯೇ 4 ಭಾವಿ ಮರುತರ ಪ್ರೀಯ | ಆವಾವ ಕಾಲಕ್ಕುದೇವ ತವ ಸ್ಮøತಿಯಿತ್ತು | ಕಾವುದೀಕೆಯನೂನೋವು ಸುಖಗಳ ಸಮತೆ | ಭಾವದಲಿ ಅನುಭವಿಪಭಾವ ಕೊಡುವುದು ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಏನು ಸೋಜಿಗವಯ್ಯ ಪಂಪಾಪತೇ ಪ ನೀನೆ ಪರನೇಂಧ್ಹೇಳ್ವ | ದೀನ ಜನಗಳನೆರಹೀ ಅ.ಪ. ಹರಿಯಾಜ್ಞೆಯನುಸರಿಸಿ | ದುಶ್ಯಾಸ್ತ್ರ ಬಿತ್ತರಿಸಿಹರಿಪರನು ಎಂತೆಂಬ | ವರ ಜ್ಞಾನ ಮರೆಸೀ |ಸರ್ವ ತಮೋ ಯೋಗ್ಯ | ನರರಿಗ್ವರಗಳನಿತ್ತುಉರುತರೈಹಿಕ ಸುಖದಿ | ಮೆರೆಸುವಿಯೊ ಪರವಾ 1 ಜಂಗಮರು ಜೋಗಿಗಳು | ಲಿಂಗಗಳ ಧರಿಸಿಹರುಮಂಗಳಾತ್ಮಕ ನಿನ್ನ | ಅಂಗದೊಳಗೈಕ್ಯಾ |ಮಂಗನಂದದಿ ಬಯಸಿ | ಮಂಗಳವ ಕಳಕೊಂಡುಭಂಗ ಪಡುವರು ಪರದಿ | ಶೃಂಗಾರ ಮೂರ್ತೇ 2 ಹರಿಕಾರ್ಯ ಸಾಧಕರ5ಲೆರಡನೇ ಂiÀ5ನಾಗಿಪರಮ ವೈ5ವನೆನಿಸಿ | ಭೂ ಭುಜರಿಗೇಹರಿ ಪುರದ ದಾರಿಯನು | ತೋರಿಸುತ ಮೆರೆಯುತಿಹವಿರೂಪಾಕ್ಷ ನಿನಚರಣ | ಸರಸಿಜಕೆ ನಮಿಪೇ 3 ಮರುತಾತ್ಮ ಸಂಭೂತ | ವೈರಾಗ್ಯನಿಧಿ ಶಿವನೆಗಿರಿಜೆಯಳ ಪರಿಗ್ರಹಿಪ | ಕಾರ್ಯ ನಿರ್ವಹಿಸೀ |ಶರಣ ಜನ ಸಂದೋಹ | ನೆರಹಿ ವೈಭವದಿಂದಪರಮ ಮುದವನು ಈವೆ | ಹರಿಯ ಭಕುತರಿಗೆ 4 ಮಾಧವ ಗುರು | ಗೋವಿಂದ ವಿಠ್ಠಲನಸಂದರ್ಶನಾದಿಯಲಿ | ಛಂದದಲಿ ಗೈದೂ |ಬಂದು ನಿನ್ನಂಘ್ರಿಗಳ | ದ್ವಂದ್ವ ಕೆರಗುವ ಭಕ್ತವೃಂದಗಳಿಗೀವೆಯಾ | ನಂದ ಸಂದೋಹ 5
--------------
ಗುರುಗೋವಿಂದವಿಠಲರು
ಏಳು ನಾರಾಯಣನೆ - ಏಳು ವಾಸುದೇವಏಳು ಕೃಷ್ಣಾಚ್ಯುತನೆ _ ಏಳು ಹೇ ಮಾಧವಾ ಪ ಏಳು ವೈಕುಂಠನೇ - ಏಳು ಕಾರುಣ್ಯನೇಏಳು ಲಕ್ಷ್ಮೀಶನೇ - ಏಳು ಭಗವಂತ ನಮಿಪೇ 1 ಏಳು ಮಧ್ವೇಶನೇ _ ಏಳು ಪ್ರಾಣೇಶನೇಏಳು ರುದ್ರೇಶನೇ - ಏಳಾಂಬಿಕೇಶಾ 2 ಏಳು ಇಂದ್ರೇಶನೇ - ಏಳು ಶಚಿಗೀಶನೇಏಳು ವಿಪ್ರೇಕ ಭ - ಕೇಶನೆ ಗೋಪತೇ 3 ಕಾರುಣಿಕ ಮೂರ್ತೇ4 ಏಳು ಸಾಮ ಪ್ರಿಯನೆ - ಸರ್ವ ಕಾರಣ ಮೂರ್ತೆಏಳು ವೇದಾರ್ಥ ಪ್ರಿಯ - ಸರ್ವದಾ ಇಹನೇ 5 ಏಳು ಗದ್ಯ ಪ್ರಿಯನೆ - ಪುರಾಣ ಪುರುಷನೇಏಳು ಸ್ತೋತ್ರ ಪ್ರಿಯನೆ - ಸರ್ವದಾ ವಿಶ್ವಮೂರ್ತಿ 6 ಏಳು ಗುರು ಹೃದಯನೇ - ಪವನಾಂತರಾತ್ಮನೇಏಳು ಗುರು ಗೋವಿಂದ - ವಿಠಲ ಹಯವದನ 7
--------------
ಗುರುಗೋವಿಂದವಿಠಲರು
ಕಾಲ - ನಾಮಕಾ | ತ್ರಿಸಂಧ್ಯಾಕಾಲ - ಚಾಲಕಾ ಪ ಕಾಲ ಕರ್ಮಗಳಿ | ಗಾಲಯ ರೂಪನೆಬಾಲನ ಬಿನ್ನಪ | ಪಾಲಿಸಬೇಕೈ ಅ.ಪ. ಭವ | ಭಂಗದೊಳಗೆ ಮಹಮಂಗನ ತೆರನಹೆ | ಶೃಂಗಾರ ಮೂರ್ತೇ 1 ಕಾಯಾ - ನಿ ಹಿತಾ | ನಾಡಿಗಳಲಿಧೇಯಾ - ವಿಹಿತಾ ||ಆಯಾ ನಾಡಿಗತ | ಧೇಯ ತೀರ್ಥ ಧ್ಯಾನೊಪಾಯ ತಿಳಿಸಿ ಕಾಯೊ | ವಾಯು ಬೃಹತಿ ಪ್ರಿಯ 2 ಸ್ನಾನಾ ಪಾವನಾ | ತವ ಮಹಿಮಾಧ್ಯಾನೋಪಾಸನಾ ||ತ್ರಾಣವೀಯೊ ನಿತ್ರಾಣನೆನಗೆ ಜಗತ್ರಾಣ ಪ್ರಾಣ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕೈವಲ್ಯಪತಿ ವಿಠಲ | ಇವಳ ನೀ ಸಲಹೋ ಪ ದೇವದೇವೊತ್ಮತವ | ದಾಸ್ಯಕಾಂಕ್ಷಿಪಳಾ ಅ.ಪ. ಗುರುಗಳೊಂದಗೆ ಯಾತ್ರೆ | ಭರದಿ ಸ್ವಪ್ನದಿಗೈದು |ಮರಳಿ ಕೊಲ್ಹಾಪುರದ | ಶಿರಿರಮೆಯ ಕಂಡೂ |ಮರುತ ದರ್ಶನದಿಂದ | ವರಸು ಉಪದೇಶಕ್ಕೆತರುಣಿ ಶುದ್ಧಳು ಇಹಳು | ಉರಗಾದ್ರಿವಾಸಾ 1 ತೈಜಸನು ನೀನಾಗಿ ನೈಜದಂಕಿತ ಪ್ರಾಪ್ತಿಮಾಜದಲೆ ಸೂಚಿಸಿಹೆ | ಭ್ರಾಜಿಷ್ಣು ಮೂರ್ತೇ|ಯೋಜಿಸಿದೆ ಅದಕಾಗಿ | ತರಳೆಗಂಕಿತವನ್ನುರಾಜಿಸೋ ಮನದಿ ತವ | ನೈಜರೂಪವನೂ 2 ತರತಮದ ಸುಜ್ಞಾನ | ಹರಿಗುರೂ ಸದ್ಭಕ್ತಿಮರುತ ಮತ ದೀಕ್ಷೆಯನು | ಪರಮ ವೈರಾಗ್ಯಕರುಣಿಸುತ ಸಂಸಾರ ಶರಧಿಯನೆ ದಾಂಟಿಸೊಅರವಿದೂರನೆ ಹರಿಯೆ | ಪ್ರಾರ್ಥಿಸುವೆ ನಿನ್ನಾ 3 ಕರ್ಮ ನಿಷ್ಕಾಮದಲಿ | ಪೇರ್ಮೆಯಲಿ ಚರಿಪಂತೆಭರ್ಮಗರ್ಭನ ಪಿತನೆ | ಸನ್ಮನವನಿತ್ತೂ |ನಿರ್ಮಮತೆ ನೀಡಿ | ಕರ್ಮನಿರ್ಲೇಪದಲಿಹಮ್ರ್ಯ ವೈಕುಂಠವನು | ಗಮಿಪ ತೆರಮಾಡೋ 4 ಭಾವುಕರ ಪರಿಪಾಲ | ಭೂವೈಕುಂಠಲೋಲದೇವದೇವೋತ್ತಮನೆ | ಗೋವಿಂದ ಮೂರ್ತೇ |ನೀ ವೊಲಿಯದಿಲ್ಲ ಗುರು | ಗೋವಿಂದ ವಿಠ್ಠಲನೆಸೇವಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಖಗವರಧ್ವಜ ವಿಠಲ ಪೊರೆಯ ಬೇಕಿವನ ಪ ಭಾಗವತ ಸುಶ್ಲೋಕ್ಯ ಬಗೆಬಗೆಯಲಿಂದಿವನಮಿಗಿಲಾಗಿ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತಪತಿಯೊಲಿಮೆಗಳು | ಕತ್ತರಿಸಿ ಪೋಗಿ ಕೃತಕೃತ್ಯತಾನೆಂಬ ಉ | ತ್ಕøಷ್ಟಮತಿಯೊದಗೇಕೃತಿವಾಸನ ತಾತ | ಇತ್ತುದಕೆ ಸಂತೃಪ್ತಿಪೊತ್ತು ತವದಾಸ್ಯವನು | ಅರ್ಥಿಸುವ ಹರಿಯೇ 1 ಪೋರನಾ ಮಯಕಳೆದು | ತಾರತಮ್ಯ ಜ್ಞಾನ ಮೂರೆರಡು ಭೇದಗಳ | ಸಾರವನೆ ಅರುಹೀಕಾರಣಿಕ ನೀನೆ ಉ | ದ್ದಾರವನೆ ಮಾಡೊ ಹರಿಬೇಕೊಂದ ಪ್ರಾರ್ಥಿಪೆನೊ | ಕಾರುಣ್ಯ ಮೂರ್ತೇ 2 ಅನೇಕ ಜನ್ಮದಲಿ | ಹೀನಯೋನಿಲಿ ನೊಂದುಜ್ಞಾನ ಸಾಧನ ವಿರದೆ | ದೀನ ನಾದವಗೇಮಾನ ನಿಧಿ ಶಾಸ್ತ್ರ ಸಂ | ಧಾನ ವೀಯುತ ತ್ವರ್ಯಧ್ಯಾನ ಸಾಧನ ವೀಯೊ | ಪ್ರಾಣಾಂತರಾತ್ಮಾ 3 ಲೌಕಿಕವನೆಲ್ಲ ವೈ | ದೀಕ ವೆಂದೆನಿಸೊ ಹರಿಕಾಕು ಸಂಗವ ಕೊಡದೆ | ನೀ ಕೊಡೊ ಸತ್ಸಂಗಏಕಮೇವನೆ ಸ್ವಾಮಿ | ಮಾಕಳತ್ರನೆ ನಿನ್ನ_ನೇಕ ಬಗೆಯಲಿ ತುತಿಪ | ವಾಕ್ಸಿದ್ಧಿ ಈಯೋ 4 ಪದ್ಮನಾಭನೇ ಹೃ | ತ್ಪದ್ಮದಲಿ ತವರೂಪಸಿದ್ಧಿಸುತ ಸಂಚಿತವ | ಪ್ರಧ್ವಂಸ ಗೈದೂಅದ್ವೈತ ತ್ರಯದರಿವು | ಬುದ್ದಿಗೆ ನಿಲುಕಿಸೆನೆಹೃದ್ಯ ಗುರು ಗೋವಿಂದ ವಿಠಲ ಬಿನ್ನವಿಪೇ 5
--------------
ಗುರುಗೋವಿಂದವಿಠಲರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ಚಿಕ್ಕ ತಿರುಪತಿವಾಸ - ಶ್ರೀ ವೆಂಕಟೇಶ ಪ ಅಕ್ಕರದಿ ನೀನೆನ್ನ - ತಕ್ಕೈಸಬೇಕೋ ಅ.ಪ. ಚಕ್ರಧರ ದೇವಾಚೊಕ್ಕ ಮೂರುತಿ ಅಜನ | ಪೊಕ್ಕಳಾದಲಿ ಪಡೆದುಲಕ್ಕುಮಿಗೆ ಮೀರ್ದ ಪೊಂ | ಬಕ್ಕಿ ಧೇರನ ಕಾಯೋ 1 ಸಪ್ತ ಪ್ರಕಾರದಲಿ | ಆಪ್ತ ನೀ ನೆಲಿಸಿದ್ದುಗುಪ್ತ ಮಹಿಮನೆ ಜಗಕೆ | ವ್ಯಕ್ತನಾಗದಲೇ |ಕ್ಲುಪ್ತಿಯಿಂದದಿ ಹವಿ | ಭೋಕ್ತø ಯಜ್ಞನಿವೊಲಿದುವ್ಯಕ್ತನಾದೆಯೊ ಜಡದಿ | ಅವ್ಯಕ್ತ ಮೂರ್ತೇ 2 ಮೂರ್ತಿ | ಪ್ರತಿರಹಿತ ದೇವಾ 3 ವರಾಹ | ಸ್ವಾಮಿ ಪುಷ್ಕರಿಣ್ಯಾದಿಆ ಮಹಾ ತೀರ್ಥಗಳ | ವಿಮಾನ ಸ್ಥಿತನಾ |ಈ ಮನೋರೂಪದಲಿ | ನೇಮಾನು ಸಂಧಾನಕಾಮಿಸುವೆ ಶ್ರೀರಮಣ | ಭೂಮಿಗ್ವಲ್ಲಭನೇ 4 ಸರ್ವಜಗ ಸೃಜಿಸುವನೆ | ಸರ್ವವನು ಲಯಿಸುವನೆಸರ್ವಕುತ್ತಮನೆನಿಪೆ | ಶರ್ವವಂದ್ಯಾಸರ್ವ ಪ್ರೇರಕ ನೀನೆ | ಸರ್ವ ಚೇಷ್ಟಕ ನೀನೆಸರ್ವ ಸುಂದರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು