ಒಟ್ಟು 33 ಕಡೆಗಳಲ್ಲಿ , 24 ದಾಸರು , 31 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಧ್ಯಾಯ ಒಂದು ಜಯ ವಿಬುಧನುತರ ಚರಣ ಜಯತು ನಾಗಾಭರಣ ಜಯ ಭಕ್ತ ಜನ ಶರಣ ಜಯ ದುಃಖಹರಣ 1 ಜಯತು ಖಳಕೃತಕದನ ಜಯಜಯತು ಜಿತಮದನ ಜಯ ಜಯತು ಸುಖಸದನ ಜಯ ಪಂಚವದನ2 ಜಯತು ಶ್ರೀಶಕೈಲಾಸ ಜಯ ಭಜಕವಿಶ್ವಾಸ ಜಯ ಅನಂತಾದ್ರೀಶ ಪ್ರಿಯಪಾರ್ವತೀಶ 3 ಪದ ಮುಂಚೆ ನುತಿಸುವೆ ಭಕುತಿಯಿಂದಲಿ ಪಂಚವದನನ ಪಾದಪಂಕಜ ಚಂಚಲಾಗದಲಿರಲಿ ಮನ ಮತಿ ಮುಂಚೆ ಕೊಡುಯೆಂದು ಹಿಂಚೆ ಕುಲ ದೇವಾದಿ ಪದಯುಗ ವಂಚನೆಯು ಇಲ್ಲದಲೆ ನುತಿಸುವೆ ಹಂಚಿಕಿಂದಲಿ ಕುಶಲಬುದ್ಧಿ ಪ್ರಪಂಚ ಕೊಡುಯೆಂದು 1 ಮನಸಿಜನ ಗೆದ್ದವರು ಮೇದಿನಿಯ ಹುಡಿಕಿದರಿಲ್ಲಾ ಮತ್ತೀಮನಸು ಗೆದ್ದವರುಂಟೆಯೆಲ್ಲರಿ ಗನುಭವಾಗಿಹುದು ಮನಸಿಜನ ಗೆದ್ದಂಥ ರುದ್ರನು ಮನಕೆ ತಾ ಅಭಿಮಾನಯಾಗಿಹ ನೆನುತ ಮೊದಲಾತನನ ನುತಿಸಿದೆ ಮನಸಿನೊಳಗಿಟ್ಟು 2 ಸಾರಲಿಂಗ ಪುರಾಣದರ್ಥದ ಸಾರಿ ತಿಳುವುತ ಮತ್ತೆ ಗ್ರಂಥ ವಿ ಚಾರ ಮಾಡುತ ಅದರ ಅರ್ಥವ ಪೂರ್ಣ ತಿಳಕೊಂಡು 'ಶ್ರೀರತಾನಂತಾದ್ರಿ' ರಮಣನ ಸಾರ ಕೃಪೆಯಿಂದಲೆಯೆ ಪೇಳುವೆ ಪಾರ್ವತೀಶಗೆ ಪ್ರೀತಿಕರ ಶಿವ ಪಾರಿಜಾತವನು 3 ಪದ ಪೂರ್ವದಲ್ಲಿ ಪಾರ್ವತಿಯು ಪರ್ವತಶ್ರೇಷ್ಠ ಹಿಮ ಪರ್ವತದ ಮಧ್ಯದಲ್ಲಿ ಸರ್ವಗುರು ಕೈಲಾಸ ಪಾರ್ವತೀಶನ ಮನ:ಪೂರ್ವಕದಿ ಬಯಸುತಲ ಪೂರ್ವ ತಪ ಮಾಡುತಿರುವಳಲ್ಲೆ ಪಾರ್ವತಿಯ ಕಷ್ಟ ಹಿಮಪರ್ವತನು ತಾ ನೋಡಿ ಸರ್ವ ಕಾರ್ಯವ ಬಿಟ್ಟು ಇರುವ ಬಲು ಚಿಂತೆಯಲಿ ಸರ್ವಸಂಪನ್ನಳಾಗಿರುವಳೆನ್ನ ಮಗಳು ಈ ಪಾರ್ವತಿಗೆ ತಕ್ಕ ವರನಿರುವನಾರೆಂದು 1 ಬಂದನಾಗಲ್ಲವನ ಮಂದಿರಕೆ ನಾರದನು ಮುಂದೆ ಗಿರಿರಾಜ ಅಲ್ಲಿಂದ ಆತನಕಂಡು ಇಂದು ಇಲ್ಲಿಗೆ ನೀವು ಬಂದು ಕಾರಣವೇನುಯೆಂದು ಕೇಳಿದನು ಅಂದ ಮಾತನ್ನು ಕೇಳಿ ಮುಂದೆ ಮುನಿರಾಜ ತಾ ಮಂದಹಾಸದಿ ನಗುತವೊಂದೊಂದು ಕಥೆ ಪೇಳಿ ಛಂದದಲಿ ಮನಸಿಗಾನಂದ ಬಡಿಸುತ ನುಡಿದ ಬಂದ ಕಾರ್ಯವ ಅವನ ಮುಂದೆ ವಿಸ್ತರದಿ 2 ಪದ ತಿಳಿಯೋ ನೀ ಗಿರಿರಾಜ ನಾ ಬಂದ ಕಾರ್ಯವ ತಿಳಿಯೋ ನೀ ಗಿರಿರಾಜ ಭೋರಾಜರಾಜಾ ತಿಳಿಯೋ ನಿನಗೊಬ್ಬಳಿಯ ಬಂದಿಹ ನಳಿಯನಾಗಿ ಮುಖಕಳೆಯು ಉಳ್ಳವ ಇಳೆಯೊಳಿಂಥಾ ಅಳಿಯನ ಸಮ ಅಳಿಯನಿಲ್ಲ ಕಾಲ್ಗಳೆಯುದಲೆ ಇರು ಪ ಹರಿಯಿರುವ ಪ್ರಖ್ಯಾತಾ ಸರ್ವರಿಗೆ ಆತನೆ ದೊರೆಯೆನಿಸಿಕೊಂಬಾತಾ ಕರಿರಾಜ ಕೂಗುತ ಕರೆಯಲೊದಗಿದನಾತಾ ತನ್ನ ಸ್ಮರಿಸಿದವರನು ಮರೆಯದಲೆ ಪೊರೆವಾತಾ ಅನಾಥಾನಾಥ ಧರೆಯೊಳಗೆ ಶ್ರೀಹರಿಯ ಮೂರ್ತಿಯ ಸರಿಯುಯಿಲ್ಲವು ಮರೆಯದಲೆ ಆ ಸಿರಿಯ ರಮಣನ ಕರೆಯ ಕಳಿಸುತ ಹಿರಿಯ ಮಗಳನು ಹರಿಗೆ ಅರ್ಪಿಸು1 ಬಡವನಲ್ಲವು ಆತಾ ಬಹುಬಡವ ಭಕ್ತರ ದೃಢವ ನೋಡುವನಾತಾ ತಾ ಬಿಡದೆ ಕರವನು ಪಿಡಿವ ಸ್ನೇಹ ಸಮೇತಾ ಬೇಡಿದ್ದು ತ್ವರದಲಿ ಕೊಡುವನವ ಬಹು ದಾತಾ ಲಕ್ಷ್ಮಿಯಸತ್ತಾ ದೃಢವಿರಲಿ ಮನ ಪೊಡವಿರಲಿ ಉಂಬುಡುವ ಮಗಳನು ತಡವು ಮಾಡದೆ2 ಕೊಡುವದುಚಿತವು ಒಡವೆಗಳು ಬಹಳಿಡುವುತಲೆ ಸುಖಪಡುವಳಾಕೆಯು ಎಂಥವನು ಅವ ತಾನು ಎಂಬಂಥ ಮನಸಿನ ಭ್ರಾಂತಿ ಬಿಡು ಎಲೋ ನೀನು ಅತ್ಯಂತವಾಗಿಹ ಶಾಂತ ಮೂರುತಿ ತಾನು ಎಂತೆಂಥವರಿಗವ ನಂತ ತಿಳಿಯದು ಇನ್ನು ಮತ್ಹೇಳಲೇನು ಇಂಥ ಶ್ರೀಮದನಂತಾದ್ರೀಶನು ಕಾಂತಿಯಿಂದಿರುವಂಥ ಮಗಳಿಗೆ ನಿಶ್ಚಿಂತೆಯಿಂದಿರು 3 ಪದ ಮುನಿಯ ಮಾತನು ಕೇಳಿ ಮನಸಿನೊಳು ಹಿಗ್ಗುತಲೆ ಮನದ ಚಿಂತೆಯ ಬಿಟ್ಟು ಮನಸಿಜಪಿತನು ಎನ್ನ ಮನಿ ಅಳಿಯನಾದ ಎನ್ನ ಜನುಮ ಸಾರ್ಥಕವಾಯಿ ತೆನುತ ತಿಳಿದನು ತಾನು ಘನ ಹಿಮಾಚಲನು ಅನುದಿನವು ತನ್ನಲ್ಲಿ ಅನು ಕೂಲವಾಗುತಲೆ ತನಗೆ ಹಿತಮಾಡುತಿಹ ಜನರೊಳಗೆ ಮ- ತ್ತಾಪ್ತ ಜನರನ್ನು ಕೇಳದಲೆ ಅನುಮಾನ ಬಿಟ್ಟು ಹೀಗೆನುತ ಮಾತಾಡಿದನು ಮುನಿಯ ಮುಂದೆ ಪದ ಕೊಡುವೆನು ಆ ವಿಷ್ಣುವಿಗೆ ಮಗಳನ್ನು ಕೊಡುವೆನು ಕೊಡುವೆನು ಸಂತೋಷ ಬಡುವೆನಾತನ ಪಾದಾ ಹಿಡಿವೆನು ಚಿಂತೆಯ ಬಿಡುವೆನು ಮಗಳನ್ನು ಪ ನಾರದ ನಿನಮಾತು ಇನ್ನು ಸರಿ ಬಾರದು ಆರಿಗೆ ಮುನ್ನ ನೀರದ ವರ್ಣನ ತೋರಿದ ಬುದ್ಧಿ ವಿ ಶಾರದ ನಿನ್ನ ಮಾತು ಮೀರದೆ ಮಗಳನ್ನು ಕೊ....1 ನಿನ್ನ ಮಹಿಮೆ ಬಲ್ಲೆ ನಾಲ್ಕುಲೋಕ ಮಾನ್ಯರಿಗತಿಮಾನ್ಯ ನೀನು ನಿನ್ನ ಚಿತ್ತಕೆ ಬಂದರಿನ್ನೇಕೆ ತಡಬಹು ಚೆನ್ನಾತ ಆತಗೆ ಮನ್ನಿಸಿ ಮಗಳನ್ನು ಕೊ....... 2 ಭಾಷೆಯು ಅದು ಸುಳ್ಳಲ್ಲ ಲೇಸಾಗಿ ನಾನಿನ್ನ ಭಾಷೆಗೆ ಮೆಚ್ಚಿ ಉಲ್ಲಾಸದಿ `ಅನಂತಾದ್ರೀಶಗೆ ' ಮಗಳನ್ನು ಕೊಡುವೆನು3 ಪದ ಬ್ರಹ್ಮಪುತ್ರ ಕೇಳಿ ಸಂಭ್ರಮ ಬಡವುತ ನಮ್ಮ ಕಾರ್ಯ ಆಯಿತೆಂದು ಸುಮ್ಮನಿರುವುತ 1 ಒಮ್ಮಿಂದೊಮ್ಮೆಲೆದ್ದು ಮತ್ತೊಮ್ಮೆ ಹೇಳುತ ರಮಿಸದಲೆ ನಡೆದ ತನ್ನ ಜಿವ್ಹೆ ತೋರುತ 2 ಹೋಳು ತಂಬೂರಿ ತಂತಿಗಳನು ಮೀಟುತ ಚೆಲುವ ಮುನಿಯ ನಡೆದ ಬಾಗಿಲವ ದಾಟುತ 3 ಚೆಂದವಾಗಾನಂದ ಭಾರದಿಂದ ಮಣಿವುತ ಮುದೆ ಪಾರ್ವತಿಯ ಬಳಿಗೆ ಬಂದು ಕುಣಿಯುತ 4 ಮುನ್ನ ನುಡಿದ ಮದುವೆಯ ಸುದ್ದಿಯನು ನಗವುತ ಚೆನ್ನಿಗ`ನಂತಾದ್ರೀಶ'ನನ್ನು ಸ್ಮರಿಸುತ 5 ಪದ ಕೇಳಮ್ಮ ಹೊಸಸುದ್ದಿ ಪಾರ್ವತಿ ನಿನಗೆ ಹೇಳಬಂದೆನು ಎನಗಿದು ಪ್ರೀತಿಪ ಪಂಕಜನಾಭ ಬರುವನಂತೆ ನಿನ್ನ ಕಂಕಣಕಯ್ಯ ಪಿಡಿವನಂತೆ ಪಂಕಜಮುಖಿಯೆ ನಿಶ್ಚಯವಂತೆ ನಿ ಶ್ಯಂಕೆಯಿಂದಿರು ಯಾತಕೆ ಚಿಂತೆ 1 ನಕ್ಕು ಆಡುವನಲ್ಲವು ನಾನು ಎ ನ್ನಕ್ಕಯ್ಯ ನಿನಗೆ ಹಿತ ಪೇಳುವೆನು ಮಿಕ್ಕ ಮಾತುಗಳಿಂದ ಫಲವೇನು ನಿನ್ನ ತಕ್ಕ ಪುರುಷ ಅವ ತಿಳಿ ನೀನು 2 ಶ್ರೀಮದನಾಂತಾದ್ರಿವಾಸಗೆ ನಿನ್ನ ನೇಮಿಸಿದ ಹಿಮವಂತನು ಈಗ ಕೋಮಲಾಂಗಿಯೇ ಎನ್ನ ಮನಸಿಗೆ ಬಂತು ಈ ಮಾತು ಸತ್ಯವಾಗಲಿ ಬೇಗ 3 ಪದ ಪರಿ ಸುದ್ದಿಯುಂಟೆಂದು ಪೇಳುತಲೆ ಟಣ್‍ಟಣನೆ ಜಿಗಿವುತು ತ್ಕಂಠzಲ್ಲಿ ಅಲ್ಲಿಂದ ಹೊರಟು ಮುನಿಬಂದು ವೈ ಕುಂಠದಲಿ ತಾ ನುಡಿದ ಉಂಟಾದ ಸುದ್ದಿ ವೈಕುಂಠಪತಿಗೆ ಎಂಟೆಂಟು ಕಳೆಯಿಂದ ಉಂಟಾದ ಪಾರ್ವತಿಯ ಗಂಟು ಹಾಕಿದೆಯೆನಲು ತಂಟಕನೋ ನೀ ಕಲಹಗಂಟಕನೋ ಸರಿಯಿನ್ನು ಭಂಟನಹುದೆಂದು ವೈಕುಂಠಪತಿನಕ್ಕ 1 ನಾರದನ ಮಾತು ಸರಿಬಾರದೆ ಪಾರ್ವತಿಯು ತೀರದಂಥಾ ದು:ಖವಾರಿಧಿಯಲಿ ಮುಳುಗಿ ಸಾರಿದಳು ತನ್ನೊಳಗೆ ಘೋರಾದ ಚಿಂತೆ ಬಂತಾರಿದನು ಬಿಡಿಸುವರು ತೋರದೆನಗೆ ತೋರದಿರಬೇಕು ನಾ ದೂರದಲಿ ಇಲ್ಲೆ ಇರಬಾರದೆಂತೆಂದು ಸುಖ ತೋರದಲೆ ತನ್ನ ಮಾತು ಮೀರದಲೆ ಇರುವ ಸುವಿ ಶಾರದಳು ಸಖಿಯೊಡನೆ ಘೋರಾದರಣ್ಯವನು ಸೇರಿದಳು ತಾನು ಮುಂದೆ ಮತ್ತಾಕೆಯ ಮುಂದೆ ಮಾತಾಡದಲೆ ನೊಂದು ತನ್ನೊಳಗೆ ತಾ ತಂದು ಆ ವನದಲ್ಲಿ ಮುಂದೇನು ಮಾಡಲೆಂತೆಂದು ತಿಳಿಯದೆ ಮರುಗಿ ಮಂದಗಮನೆಯು ಚಿಂತೆಯಿಂದ ಮಲಗಿದಳು ಮುಂದೆ ಆ ಸಖಿ ನೋಡಿ ಸಂದೇಹ ಬಡುತ ತ್ವರ ದಿಂದ ಬದಿಯಲಿ ತಾನು ಬಂದು ಹಾ ಇದುಯೇನು ಇಂದು ಮುಖಿ ಹೀಗೆಯೆಂದೆಂದು ಮಲಗುವಳಲ್ಲ ಇಂದೇನು ಬಂತು ಇಂತೆಂದು ಚಿಂತಿಸುತ ಹೀಗೆಂದಳಾಗ 2 ಪದ ಇಲ್ಲೇಕೆ ಮಲಗಿದೆ ಹೇಳಮ್ಮ ನೀ ಇಲ್ಲೇಕೆ ಎಲ್ಲಾನು ಬಿಟ್ಟು ವನದಲ್ಲಿಯೆ ಪಾರ್ವತಿ ಮಂದಿರ ಪ ಬಿಟ್ಟು ಇಲ್ಲಿ ಮಲಗುವರೆ ನಿನಗೆ ಬಂದಿಹದೇನು ಹೇಳದಿರುವರೆ ನಿನ್ನ ತಂದೆ ತಾಯಿಗಳೆಷ್ಟು ಮರಗುವರೆ ಇಂದು ಮುಖಿಯಳೆ ಯಾರೇನಂದರೇನೆ ಗೆಳತಿ ನಿನಗೆ 1 ನಿನ್ನ ಪ್ರಾಣದ ಸಖಿನಾನಲ್ಲೆ ನಿನ ಗಿನ್ನಾರಿರುವರು ಹಿತವರು ಇಲ್ಲೆ ನಾ ನಿನ್ನ ಕಾರ್ಯವ ಮಾಡುವಳಲ್ಲೆ ಚಿನ್ನದಂಥವಳೆ ನೀ ಘನ್ನಾರಣ್ಯಕೆ ಬಂದು 2 ನಿದ್ರೆ ಬಂದಿಹುದೇನೆ ನಿನಗಿಂದು ಅಥವಾ ಬುದ್ಧಿ ಹೋಯಿತೆ ಮತ್ತೆ ನಿನ್ನದು ಇಂದು ತಿಳಿಯದು ಬುದ್ಧಿವಂತಿಯೆ ಅನಂತಾದ್ರೀಶನಾಣೆ ನಿನಗೆ 3 ಪದ ಇಂದು ಮುಖಿ ಪಾರ್ವ ತಿಯು ಹಿತದಿಂದ ಆಡಿದ ಮಾತು ಒಂದೊಂದು ಸ್ಮರಿಸುತಲೆ ಛಂದಾಗಿ ಮನಸಿಗೆ ತಂದು ನೋಡಿದಳು ಇಂದು ಯೆನ್ನ ಭಾಗ್ಯಕ್ಕೆ ತಂದೆ ತಾಯಿಗಳಿಲ್ಲ ಬಂಧು ಬಾಂಧವರಿನ್ನು ಮುಂದೆಲ್ಲಿ ಬರುವವರು ಸಂದೇಹವೇಕೆ ಸಖಿ ಯಿಂದಧಿಕ ಮತ್ತಿಲ್ಲ ವೆಂದು ದು:ಖವ ಸಖಿಯ ಮುಂದ ಹೇಳಿದಳು 1 ಪದ ಏನು ಹೇಳಲಿಸಖಿ ಇನ್ನೇನು ಹೇಳಲಿ ನಾನು ಖೂನದಿ ತಂದೆಯು ಹರಿಗೆಯೆನ್ನನು ನೇಮಿಸಿದಾ ಪ ಮೃತ್ಯುಂಜಯ ಮೃಡನೆ ಎನ್ನ ಚಿತ್ತಕೊಪ್ಪುವ ಪತಿಯು ಸತ್ಯದಿ ಆಗಲಿಯೆಂದು ಚಿತ್ತದಿ ಬಯಸುತಲೆ ನಿತ್ಯದಿ ಬಹುದಿನ ಬಿಡದಲೆ ಅರ್ಥಿಲೆ ಮಾಡಿರುವಂಥ ಪಾರ್ಥೇಶ್ವರನಾ ಪೂಜೆಯು ವ್ಯರ್ಥಾಯಿತಲ್ಲೆ 1 ನಾರದ ಮುನಿಯಿ ಮಾತು ಸಾರಿದ ನನ್ನಲಿ ಬರಿದು ಬಾರದೆನ್ನ ಮನಸಿಗೆ ಅದು ತಾರದೆ ನಾ ಬಂದೆ ಮೀರಿದ ಕೆಲಸವು ತೀರಲಾರದು ಅದು ಎಂದು ಸೇರಿದೆ ವನವನು ನಾಕಾಲೂರದೆ ಮನೆಯಲ್ಲೆ2 ಹೃದ್ರೋಗದಿ ಬಳಲುವಳಿಗೆ ನಿದ್ರೆಯೆಂಬುವದೆಲ್ಲೆ ಭದ್ರಾಂಗಿಯು ಸತಿ ನಾನು ಉದ್ರೇಕದಿ ಮೈಮರೆತು, ಹಿಮಾದ್ರಿಯು ಎನ್ನನು ಕೈಲಾ ಸಾದ್ರೀಶನ ಬಿಟ್ಟು ಅನಂತಾದ್ರೀಶಗೆ ಕೊಡುವ3 ಪದ ಪರಿ ಮಾತುನು ಕೇಳಿ ಆ ಪ್ರಾಣದ ಸಖಿ ತಾನು ಪರಿ ಮಾತಾಡಿದಳು ಆ ಪಾರ್ವತಿಯ ಮುಂದೆ ಏ ಪಾರ್ವತಿಯೇ ಬಿಡುಸಂತಾಪವ ನಿನಗೊಂದು ಹೇಳುವೆ ಆ ಪಿತಗರಿಯದೆ ನಡೆ ನೀ ತಾಪಸವನದಲ್ಲೆ 1 ಈ ರೀತಿಯ ನುಡಿ ಕೇಳಿ ಹಾರೈಸುತ ಸಖಿಕೂಡಿ ಪಾರ್ವತಿ ತಾ ನಡೆದಳು ಘೋರಾರಣ್ಯದಲಿ ಇರ್ವಳು ಆಳುPದೆÀಲಿಂಗಾಕಾರವು ಪೂಜಿಸುತಲ್ಲೆ ಚಾರ್ವಾಂಗಿಯು ತಾ ನಿದ್ರಾಹಾರವು ಇಲ್ಲದಲೆ2 ದೀನೋದ್ಧಾರಕ ಶಿವನು ತಾನೆ ಅಲ್ಲಿಗೆ ಬಂದು ಏನು ಬೇಡುವೆ ಪಾರ್ವತಿ ನೀನು ಬೇಡೆಂದ ಏನು ಧೇನಿಸುವೇ ಬಿಡು ಮಾನಿನಿಯೆ ಭಕ್ತಾ ಧೀ ನಾನಂತಾದ್ರೀಶನ ಆಣೆ ನಿನಗುಂಟು 3 ಪದ ಹರನ ಮಾತನು ಕೇಳಿ ಹರಿಣಾಕ್ಷಿ ಪಾರ್ವತಿಯು ತ್ವರದಿಂದ ಎದ್ದು ಪರಮ ನಾಚಿಕೆಯಿಂದ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ವಚನ ಪ್ರಹ್ಲಾದ ಹೀಗೆ ಬಾಲಕರಿಗ್ಹೇ ಳುವಾಗ ಕೇಳುತಲದನು ಬೇಗಶಂಡಾಮರ್ಕ- ರ್ಹೋಳಗಿ ಹೇಳಿದರು ಚಂದಾಗಿ ದೈತ್ಯನಾಗಲಾಕ್ಷಣದಲ್ಲಿ ಬೇ ಆಗ ಪ್ರಹ್ಲಾದನಾ ಬೇಗ ಕರೆ ಕಳಿಸುತಲೆ ಹೀಗೆಂದ ಕ್ರೋಧ ಭರಿತನಾಗಿ ತಾನು 1 ರಾಗ ಆವಾತ ಬಲನಿನಗೆ ಪ ನಾನೊಬ್ಬನೆ ಬಲ ಅ.ಪ ಕುಲಭೇದ ಮಾಡುವಿಯೋ ಹುಟ್ಟಿ ನೀಕುಲಕಂಟನಾದ್ಯೋ1 ಕೆಟ್ಟರಲ್ಲಾ ಕಡುದೈತ್ಯ ಜಾಲಿಗಿಡನಾಗಿ ಹುಟ್ಟಿದ್ಯೋ 2 ಇದ್ದರೇನು ಬಿಡದೆ ಆ ಕೊಡಲಿಗೆ ಕಾವಾದ್ಯೋ 3 ವಚನ ನಾ ಮಾತುಗಳು ವಿರಸಾದ ಸರಿಸಿ ಅವನಲಿ ಸ್ನೇಹ ಸ್ಮರಿಸಿ ಅವನಲಿ ಭಕ್ತಿಸುರ ಹರುಷದಿಂದಲಿ ನುಡಿದ ಹರಿ ಹಿರಣ್ಯ ಕಶಿಪುವಿಗೆ ರಾಗ ಅವನೆ ಎನಗೆ ಬಲವು ಪ ಶ್ರೀ ವೈಕುಂಠ ಭುವನಕ್ಕೆ ಒಡೆಯಾ ಅ.ಪ ಕುಲಗಳಿಗೊಡೆಯ 1 ಅವನೆ ಪಾಲಿಸಿ ನಾಶವನು ಅವನೆ ಸರ್ವೋತ್ತಮನವನೆ ಎನ್ನೊಡೆಯಾ 2 ಸರ್ವರಲ್ಲಿ ಇಡು ಸ್ನೇಹವ ಪಾದ ಅನಂತಾದ್ರಿಗೊಡೆಯ ನಾಗಿರುವಾ 3 ರಾಗ ಮಗನಮೇಲೆ ಖಡ್ಗ ಹಿಡಿದನು 1 ಮಾತಾಡಿದ್ಹೇಳೆಲೊ ನೀನು 2 ಹರಿಯನ್ನೇ ಕೊಂಡಾಡುವೆಯಲ್ಲಾ ಆಹರಿಯ ಹೊರತು ಗತಿಯೆನಗಿಲ್ಲಾ 3 ಕಡಿದು ಬಿಡುವೆ ನಿನ್ನನ್ನು ನಾನು ಹಿಂದೆ ಕಡಿದೇನು ಮಾಡಿದಿ ಎಲೋ ನೀನು 4 ಕಂಡಂಜುವನಲ್ಲವೆಲೊ ನಾನು 5 ಸ್ಥಿರವೆಂಬುದನರಿಯೆಯೋ 6 ಶ್ರೀಹರಿವಶವಾಗಿಹುದು 7 ಅವನಿದಿರುವಾ ಸ್ಥಳವಾವುದು 8 ಕೊಡುವ ನೆನಗವತಾನು 9 ಮೂರ್ಖ ತಿಳಿ ನೀನು 10 ಪ್ರಕಟನಾಗುವ ಅನಂತಾದ್ರೀಶಾ 11 ವಚನ ದೃಢವಾದ ಕಂಬವನು ದೃಢಮುಷ್ಠಿ ಕಡುಶಬ್ಧ ತಡವಿಲ್ಲ ಹೋಯಿತು ಒಳಗೆಹಿಡಿ ಬ್ರಹ್ಮಾದಿಗಳು ಪೊಡ ನಡುವೆ ಬಂದಿತು ಎಂದು ಸಿಕ್ಕಲ್ಲೇ ಅಡಗಿದರು ಆಗ ಪಟುತರ ಶ್ರೀಹರಿಯುಕುಟಿ ಮಹಾಕಠಿನ ನರಮೃಗನಾಗಿ ಭಟರು ಇರುವಲ್ಲೆ ಆರ್ಭ ಸಂಹನನ ನರನುನರ ಸಿಂಹ ಜಿಹ್ವೆನಲಿದಾಡುವದು ದೈತ್ಯಸಿಂಹ ನಡುಗಿದನು ರಾಗ ಶೌರ್ಯದಿಂದ ಯುದ್ಧವೆಂಬೋ ಕಾರ್ಯ ಮಾಡಿದಾ 1 ಗದೆಯ ಸಹಿತ ಕೈಯ ಹರಿಯು ವದಗಿ ಹಿಡಿದನು 2 ಖಡಗಚರ್ಮ ಹಿಡಿದು ಬಂದ ನಡೆದು ಮುಂದಕ್ಕೆ 3 ತಕ್ಕವಾಗಿರುವ ಹೊಸ್ತಿಲಕ್ಕೆ ನಡೆದನು 4 ಹೃದಯದಲ್ಲಿ ಸೀಳಿದಾ 5 ಕೊಂದು ಎಲ್ಲ ಸರಳ ಮಾಡಿದಾ 6 ಸ್ತುತಿಸಿ ಪುಷ್ಟವೃಷ್ಟಿಕರೆದುರು7 ಭಯನಿವಾರಣನ ದಯದಿ ಭಯವ ಕಳೆದರು 8 ನುಡಿದವಾಗ ತೀವ್ರದಿಂದಲಿ 9 ಗಾಯನವ ಮಾಳ್ಪರು 10 ಸಾಹಿತ್ಯದಿಂದಲಿ11 ಮೂರ್ತಿ ಕಂಡು ದೂರ ನಿಂತರು 12 ಸಂತತಾನಂತದ್ರೀಶನಂತ ತಿಳಿಯರು 13 ವಚನ ಸಂಪೂರ್ಣ ಕೇಳ್ವರೂ ಅವರು ದುರಿತ ತೋರುವನು ಪ್ರತ್ಯಕ್ಷ ಚಾರ್ವನಂತಾದ್ರೀಶ ನಾರಸಿಂಹನು ಮಾಡಿರುವಲ್ಲಿ ಪೂರ್ಣವಾಯಿ ದಯದಿಂದ ಮೂರು ಅಧ್ಯಾಯ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅರಿತು ಕೊಳ್ಳಿರೊ ಬ್ಯಾಗ ಹರಿಯ ನಾಮಮೃತ ದೊರಕುವದಲ್ಲಿದು ನೋಡಿ ಸರ್ಕನೆ ಸರ್ವರಿಗೆಲ್ಲಾ ಧ್ರುವ ಗುರುಕರುಣ ಕೃಪೆಯಿಂದ ಪರಮ ದಿವ್ಯಾಮೃತವು ಸುರಿಸುರಿದು ಚಪ್ದರಿಸು ಸೂರ್ಯಾಡಿ ಸಾರಸವ 1 ಅನುದಿನ ಸೇವಿಸುವ ಅನುಭವಿಗಳೂಟ ಏನೆಂದು ಸುರಲಿ ನಾ ಆನಂದೋಬ್ರಹ್ಮವಾ 2 ಮಾನವ ಜನ್ಮ ಚಂದ ಮಾಡಿಕೊಳ್ಳಿರೊ ಬಂದ ಕೈಯಲಿ ಬ್ಯಾಗ 3 ಆಲಸ್ಯ ಮಾಡಬ್ಯಾಡಿ ವಾಲ್ಗೈಸಿಕೊಳ್ಳಲಿಕ್ಕೆ ಸುಲಲಿತವಾಗಿಹುದು ತಿಳಿದುಕೊಂಬವರಿಗೆ 4 ಇರಳ್ಹಗಲ ಪೂರ್ಣ ಸುರವುತಿಹ ಅಮೃತ ತರಳ ಮಹಿಪತಿ ಪ್ರಾಣ ದೊರೆವ ಸಂಜೀವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆ ನಮಿಪೆ ವಿಷ್ಣು ಶ್ರೀ ಬ್ರಹ್ಮ ವಾಯು ವಾಣಿ ಭಾರತಿ ಮುಖ್ಯರವತಾರ ಆವೇಶಕಾನಮಿಪೆ ಪ ಮತ್ಸ್ಯ ಕೂರ್ಮ ಭೂವರಹ ನರಸಿಂಹ ದಧಿ ವಾಮನ ತ್ರಿವಿಕ್ರಮ ಭೃಗುಕುಲೋದ್ಭವ ಬುದ್ಧ ಕಲ್ಕಿ ಹಯಾಸ್ಯ ನಾಮ ತಾಪಸ ಮನು ಉಪೇಂದ್ರ ಅಜಿತಾದಿಗಳಿಗಾ ನಮಿಪೆ 1 ದಾಸ ಧನ್ವಂತ್ರಿ ಹರಿ ಹಂಸ ದತ್ತಾ ವ್ಯಾಸ ಕಪಿಲಾತ್ಮಂತರಾತ್ಮ ಪರಮಾತ್ಮ ಯ ಜ್ಞೇಶ ವೈಕುಂಠ ನಾರಾಯಣಾಧ್ಯವತಾರಕಾನಮಿಪೆ 2 ನಾರಾಯಣೀ ಋಷಭ ಐತರೇಯ ಶಿಂಶು ಮಾರ ಯಜ್ಞ ಪ್ರಾಜ್ಞ ಸಂಕರುಷಣಾ ಕ್ಷಿರಾಬ್ದಿ ನಿಲಯ ಯಮನಂದನಾ ಕೃಷ್ಣ ಹರಿ ನಾರಾಯಣ ಧರ್ಮಸೇತು ರೂಪಾದಿಗಳಿಗಾನಮಿಪೆ 3 ಗುಣಗಳಭಿಮಾನಿ ಶ್ರೀ ಭೂ ದುರ್ಗ ದಕ್ಷಿಣಾಂ ಭೃಣಿ ಮಹಾಲಕ್ಷ್ಮೀ ಶ್ರೀ ವಿಷ್ಣುಪತ್ನೀ ಮಾಯಾ ಕೃತಿ ಶಾಂತಿ ಶುದ್ಧ ರು ಕ್ಮಿಣಿ ಸತ್ಯ ಸೀತಾದ್ಯಮಿತ ರೂಪಗಳಿಗಾನಮಿಪೆ 4 ಹೀನಳೆನಿಸುವಳನಂತಾಂಶದಲಿ ಸುಖ ಬಲ ಜ್ಞಾನಾದಿ ಗುಣದಿ ಮಹಾಲಕ್ಷ್ಮಿ ಹರಿಗೆ ಆನಂದ ವಿಜ್ಞಾನ ಮಯನ ವಕ್ಷಸ್ಥಳವೆ ಸ್ಥಾನವಾಗಿಹುದು ಇಂದಿರೆಗೆ ಆವಾಗ 5 ವಿಧಿ ವಿರಿಂಚಿ ಮಹನ್ ಬ್ರಹ್ಮ ಸೂತ್ರ ಗುರು ಮಹಾಪ್ರಭು ಋಜ ಸಮಾನ ವಿಜ್ಞ ಪ್ರಾಜ್ಞ ಹರಿಭಕ್ತಿ ಮೇಧಾವಿ ಮುಕ್ತಿ ಧೃತಿ ಅಮೃತನಿಗೆ 6 ಸ್ಥಿತಿ ಯೋಗ ವೈರಾಗ್ಯ ಚಿಂತ್ಯ ಬಲಸುಖ ಬುದ್ಧಿ ವಿತತಾದಿ ಗೋಪ ಹನುಮ ಭೀಮ ವೃಷಿವರಾನಂದ ಮುನಿ ಮೊದಲಾದ ರೂಪಶ್ರೀ ಪತಿಗಧಿಷ್ಟಾನ ಕೋಟಿಗುಣಾಧಮರು ರಮೆಗೆ ಆ ನಮಿಪ 7 ಸರಸ್ವತಿ ಗಾಯತ್ರಿ ಬುದ್ಧಿ ವಿದ್ಯಾ ಪ್ರೀತಿ ಗುರುಭಕ್ತಿ ಸರ್ವ ವೇದಾತ್ಮಿಕ ಭುಜಿ ಪರಮಾನು ಭೂತಿ ಸಾವಿತ್ರಿ ಸು ಸುಖಾತ್ಮಿಕಾ ಪತಿ ನಾಮಗಳಿವೆಂದರಿದು 8 ಶಿವಕನ್ಯ ಇಂದ್ರಸೇನಾ ಕಾಶಿಜಾ ಚಂದ್ರ ಯುವತಿ ದ್ರೌಪದಿಯು ಭಾರತಿ ರೂಪವು ಪವಮಾನ ಬ್ರಹ್ಮರಿಗೆ ಶತಗುಣಾಧಮ ಸದಾ ಶಿವನ ರೂಪಗಳ ಈ ಪರಿಯ ಚಿಂತಿಸುತ 9 ತತ್ಪುಮಾನ್ನೂಧ್ರ್ವಪಟ ದುರ್ವಾಸ ವ್ಯಾಧ ಅ ಶ್ವತ್ಥಾಮ ಜೈಗೀಷವ್ಯ ತಪ ಅಹಂಕ್ರತು ಶುಕ ವಾಮದೇವ ಗುರು ಮೃತ್ಯುಂಜಯೋರ್ವ ಸದ್ಯೋಜಾತ ತತ್ಪುರುಷಗಾನಮಿಪೆ 10 ನರ ವಯು ಶುಕಕೇಶವೇಶ ಬಲಗೆ ಸಂ ಕರುಷಗಾವೇಶ ಲಕ್ಷ್ಮಣದೇವಗೆ ಗರುಡ ಶೇಷಾಘೋರ ಸಮರು ಶತಗುಣದಿಂದ ಕೊರತೆಯೆನಿಸುವರು ಮೂವರು ವಾಣಿ ದೇವಿಗೆ 11 ಶೇಷಗೆ ಸಮಾನನೆನಿಪಳು ಜಾಂಬವತಿ ರಮಾ ವೇಶ ಕಾಲದಿ ಷಣ್ಮಹಿಷಿಯರ ಒಳಗೆ ಹ್ರಾಸಕಾಲದಿ ಸಮಳು ಐವರಿಗೆ ಜಾಂಬವತಿ ವೀಶಾದ್ಯರಿಗೆ ಹರಿ ಸ್ತ್ರೀಯರ ಸಮರೈದುಗುಣ12 ರೇವತಿ ಶ್ರೀಯುತ ಶ್ರೀ ಪೇಯ ರೂಪತ್ರ ಯಾವಕಾಲದಿ ವಾರುಣಿಗೆ ಪಾರ್ವತೀ ದೇವಿ ಸೌಪರಣಿಗೆ ಸಮ ಷಣ್ಮಹಿಷಿಯರಿಗೆರಡು ಮೂವರೀರೈದು ಗುಣ ಕಡಿಮೆ ಪತಿಗಳಿಗೆ 13 ಕುಶ ವಾಲಿ ಗಾಧಿ ಮಂದ್ರದ್ಯುಮ್ನನು ವಿಕುಕ್ಷಿ ಶ್ವಸನ ಹರಿ ಶೇಷ ಸಂಯುಕ್ತಾರ್ಜುನಾ ಅಶನೀಧರನ ಸುರೂಪಂಗಳಿವು ಮನ್ಮಥನ ನಿತ್ಯ 14 ಪ್ರದ್ಯುಮ್ನ ಸಂಯುಕ್ತ ರುಕ್ಮಿಣೀ ದೇವಿ ಸುತ ಪ್ರದ್ಯುಮ್ನ ಭರತನು ಸನತ್ಕು ಮಾರಾ ಸಾಂಬ ಸ್ಕಂಧ ಸುದರುಶನ ರುದ್ರ ನಾರ್ಧಾಂಗಿನಿಗೆ ದಶಗುಣಾಧಮರೆಂದು15 ಭವ ಪ್ರಾಣ ನಾಮರಗೆ ರೂಪ ಸರ್ಮೋತ್ತುಂಗನು ಕಾಮ ಪುತ್ರಾನಿರುದ್ದಾದಿಗಳು ದಶ ಹೀನ ಈ ಮಹಾತ್ಮರ ದಿವ್ಯ ಅವತಾರರೂಪಗಳಿಗಾನಮಿಪೆ 16 ಪ್ಲವಗ ಬ್ರಹ್ಮಾಂಶಯುಗ್ದೋಣ ಮಾರುತಾವೇಶ ಸಂಯುತ ವುದ್ಧವಾ ಮುರು ರೂಪವು ಬೃಹಸ್ಪತಿಗೆ ಪ್ರದ್ಯುಮ್ನನ ಕು ಮಾರಾನಿರುದ್ಧ ಶತೃಘ್ನ ಅನಿರುದ್ಧನಿಗೆ 17 ತಾರ ಚಿತ್ರಾಂಗದ ಶಚಿ ರೂಪ ಲಕ್ಷುಣ ಈ ರುಗ್ಮವತ್ರಿ ಎರಡು ರತಿರೂಪವು ಆರುಜನ ದಕ್ಷ ಸ್ವಯಂಭುವ ಮನು ಪ್ರಾಣ ಗಿರೈದು ಗುಣಗಳಿಂದಧಮರೆಂದರಿದು 18 ಭೂತಾಭಿಮಾನಿ ಪ್ರವಹ ಪಂಚಗುಣದಿ ಪುರು ಹೊತ ಪತ್ನ್ಯಾದಿಗಳಿಗಧಮನೆನಿಪ ಈತಗವತಾರವಿಲ್ಲವನಿಯೊಳು ಚಂದ್ರ ಪ್ರ ದ್ಯೋತನಾಂತಕ ಸ್ವಯಂಭುವ ಪತ್ನಿ ಶತರೂಪಿ 19 ಸತ್ಯಜಿತ ಜಾಂಬವಾನ್ ವಿದುರ ಗುರು ವಾಯು ಸಂ ಯುಕ್ತ ಧರ್ಮಜ ಯಮಗೆ ರೂಪ ನಾಲ್ಕು ರಾತ್ರಿ ಚರನವತಾರ ಯಿಂದ್ರ ಯುಕ್ತಾಂಗದಾ ದಿತ್ಯ ನವತಾರ ಬ್ರಹ್ಮ ವಿಷ್ಟ ಸುಗ್ರೀವ 20 ಹರಿಯುಕ್ತ ಕರ್ನ ಮನು ಪತ್ನಿ ಶತರೂಪ ನಾ ಲ್ವರು ಸಮರು ಪ್ರವಹಗಿಂದೆರಡು ಗುಣದೀ ಕೊರತಿ ಮಹ ಭಿಷಕು ಮಂಡೂಕ ಶಂತನು ಸುಶೇ ಪಾದ ಪಾದಾರ್ಧಿಕಾನಮಿಪೆ21 ನಾರದಾಧಮ ವರುಣಗಿಂತಗ್ನಿ ಅವ ತಾರ ದೃಷ್ಟದ್ಯುಮ್ನ ಲವ ನೀಲರೂ ಪಾದ ಗುಣದಾಧಮರು ಎಂದು22 ಅಂಗೀರ ಪುಲಸ್ತ್ಯಾತ್ರಿ ಪುಲಹನು ಮರೀಚಿ ಮುನಿ ಪುಂಗವ ದಶಿಷ್ಠ ಕೃತು ಬ್ರಹ್ಮ ಸುತರೂ ತುಂಗ ವಿಶ್ವಾಮಿತ್ರ ವೈವಸ್ವತರು ಸದಾ ಕೆಂಗದಿರಗಧಮರೊಂಭತ್ತು ಜನರೆಂದು 23 ಸಪ್ತ ಋಷಿಗಳಿಗೆ ಸಮನೆನಿಪ ವೈವಸ್ವತನು ಲುಪ್ತವಾಗಲು ಕಡಿಮೆಯೆನಿಪ ಪ್ರಾವಹ ತಾರ ಕ್ಲುಪ್ತ ಒಂದೇ ರೂಪ ಕೃಪೆಯೆಂದು ಕರೆಸುವಳಿಗಾನಮಿಪೆ24 ಹರನಾವೇಶಯುತ ಘಟೋತ್ಕಚ ದುರ್ಮಖನು ನಿಋಋತಿ ಕರೆಸುವನು ರಾಹು ಯುಗ್ಭೀಷ್ಟಕ ನೃಪಾ ನರೆ ಮಿತ್ರ ನಾಮಕನ ರೂಪ ನಾಲ್ವರು ಅಗ್ನಿ ಗೆರಡು ಗುಣದಿಂಧಮರೆನಿಪರೆಂದೆಂದು 25 ಮಾರಾರಿಯುಕ್ತ ಭಗದತ್ತ ತತ್ತನÀಯ ಕು ಬೇರಗೆರಡವತಾರ ವಿಘ್ನೇಶಗೆ ಚಾರುದೇಷ್ಣನು ಒಂದೆ ಇಂದ್ರನಾವೇಶಯುತ ಆರುರೂಪಗಳುಳ್ಳ ನಾಸತ್ಯ ದಸ್ರರಿಗೆ 26 ವಿವಿಧÀ ಮೈಂದ ತ್ರಿಸಿಖ ನಕುಲ ಸಹದೇವ ವಿಭು ಅವತಾರ ಅಶ್ವಿನೀ ದೇವತೆಗಳ ಲವಣಾದಿ ಷಡ್ರಸಗಳೊಳಗಿದ್ದು ಜೀವರಿಗೆ ವಿವಿಧ ಭೋಗಗಳಿತ್ತು ಸಂತೈಪರೆಂದೆಂದು 27 ದ್ರೋಣಾರ್ಕ ದೋಷಾಗ್ನಿ ಧ್ರುವ ವಿಭಾವಸು ವಸ್ತು ಪ್ರಾಣಾಷ್ಟ ವಸುಗಳೊಳಗೆ ದ್ಯುನಾಮಕ ವಾಣೀಶಯುಕ್ತ ಭೀಷ್ಮನು ನಂದಗೋಪಾಲ ದ್ರೋಣನಾಮಕ ಪ್ರಧಾನಾಗ್ನಿಗಿಂದಧಮರೆಂದಾ ನಮಿಪೆ 28 ಭೀಮರೈವತ ವೋಜಜ್ಯೆಕಪಾದ ಹಿರ್ಬದ್ನಿ ಭವ ವಾಮ ಬಹುರೂಪೋಗ್ರಜ ವೃಷಾಕಪಿ ಈ ಮಹನ್ನೆಂಬ ಹನ್ನೊಂದು ರುದ್ರರು ಭೂರಿ ನಾಮಕ ಜೈಕ ಪಾದಹಿರ್ಬದ್ನಿ ಭೂರಿಶ್ರವಗಾನಮಿಪೆ29 ತ್ರ್ಯಕ್ಷನುಳಿಧತ್ತು ರುದ್ರರು ಸಮರು ಶಲ್ಯ ವಿರು ಪಾಕ್ಷನವತಾರ ಕೃಪ ವಿಷ್ಕಂಭುನೂ ಅಕ್ಷೀಣಬಲ ಪತ್ರತಾಪಕ ಸಹದೇವ ರಕ್ಷಘ್ನ ಸೋಮದತ್ತನು ಎನಿಸುತಿಹಗೆ 30 ವಿರೂಪಾಕ್ಷ ವಿಷ್ಕಂಭ ಪತ್ರತಾಪಕ ಮೂರು ಹರನ ರೂಪಾಂತರಗಳಿವು ವಿವಸ್ವಾನ್ ಅರಿಯಮ ಪೂಷ ಭಗ ಸವಿತು ತೃಷ್ಟಾಧಾತ ವರುಣ ಶಕ್ರೋರುಕ್ರಮನು ಮಿತ್ರ ಪರ್ಜನ್ಯಗಾನಮಿಪೆ 31 ಶೌರಿನಂದನ ಭಾನು ಸವಿತ್ರ ನಾಮಕ ಸೂರ್ಯ ವೀರಸೇನನು ಯಮಾವಿಷ್ಟ ತ್ವಷ್ಟಾ ಆರುಜನ ರುಕ್ತರೆನಿಪರು ವುರುಕ್ರ್ರಮ ಶಕ್ರ ವಾರಿಧಿ ವಿವಸ್ವಾನ್ ಮಿತ್ರ ಪರ್ಜನ್ಯರಿಗೆ 32 ಪ್ರಾಣ ನಾಗ ಪಂಚಕ ಅಹಂಕಾರಿಕ ಪ್ರಾಣ ಪ್ರವಹ ನಿವಹ ಸಂವಹ ಸ್ವಹಾ ಕಾಲ ಶ್ವಾಸ ಏ ಕೋನ ಪಂಚಾಶನ್ ಮರುದ್ಗಣಸ್ಥರು ಎಂದು 33 ಶ್ವೇತ ಶಂ ಹನುಮ ಭೀಮ ಯತಿವುದಿತ ಕಾಮ ಜಡಪಿಂಗ ಕಂ ಪನ ವೃದ್ವಹ ಧನಂಜಯ ದೇವದತ್ತರಿಗೆ 34 ಶುಕ್ರ ಶಂಕು ಗುರು ಕಾಂತ ಪ್ರತಿಭ ಸಂವರ್ತಕನು ಪಿಕ ಕಪಿಗಳಿವರು ಮುರುತರು ಸಮೀರಾ ಯುಕುತ ಪಾಂಡು ವರಾಹನು ಎನಿಪ ಸಂಪಾತಿ ಕೇಸರಿ ಶ್ವೇತ ಮರುತನವತಾರ ವೆಂದಾನಮಿಪೆ35 ಪ್ರತಿಭವಂಶನು ಚೇಕಿತಾನೆಂದೆನಿಪ ವಿ ಪ್ರಥು ಸೌಮ್ಯ ಕುಂತೀಭೋಜನೆ ಕೂರ್ಮನು ಕ್ಷಿತಿ ಯೊಳಗೆ ಪ್ರಾಣಪಂಚಕರೊಳು ಪ್ರಾಣ ಗಜ ಅಥ ಗವಾಕ್ಷಾಪಾನ ವ್ಯಾನ ಗವಯನು ಎಂದು 36 ವೃಷನು ಸರ್ವತ್ರಾತನು ವುದಾನಗಂಧ ಮಾ ದ ಸಮಾನನರಿವರು ವಿತ್ತಪನ ಸುತರು ಶ್ವಸನಗಣದೊಳು ಕಿಂಚಿದುತ್ತ ಮರಹಂ ಪ್ರವಹ ಗಸಮರೆನಿಪರು ಪ್ರಾಣ ಪಂಚಕರು ಎಂದೂ 37 ಪ್ರತಿ ವಿಂಧ್ಯ ಧರ್ಮಜನ ಭೀಮಸೇನನ ಪುತ್ರ ಶೃತಸೋಮ ಅರ್ಜುನಜ ಶೃತಕೀರ್ತಿಸಾ ಶತಾನೀಕÀನ ಕುಲಜ ಸಹದೇವಾತ್ಮಜನು ಶೃತಕರ್ಮರಿವರು ದ್ರೌಪದಿ ದೇವಿಗಾತ್ಮಜರಿಗಾನಮಿಪೆ38 ಚಿತ್ರರಥ ಅಭಿಪೌಮ್ರಬಲ ಕಿಶೋರ ಗೋಪಾಲ ರುತ್ತಮರು ಗಂಧರ್ವರೈವರಿಂದ ಯುಕ್ತರಾಗಿಹರು ಕೈಕೇಯರೈವರು ಪಾಂಡು ಪುತ್ರಜರು ವಿಶ್ವದೇವತೆಗಳಿವರೆಂದು39 ಕಾಲ ಕಾಮಲೋಚನದಕ್ಷ ಕೃತು ಪುರೂ ರವ ಸತ್ಯ ವಸು ಧುರಿಗಳಿವರು ವಿಶ್ವೇ ಋಭು ಗುಣ ಪಿತೃತ್ರಯ ದ್ಯಾವ ಅವನಿಪರು ಗಣಪಾದ್ಯರಧಮ ಮಿತ್ರನಿಗೆಂದು 40 ವಸುಗಳೆಂಟಾದಿತ್ಯರೀರಾರು ಒಂದಧಿಕ ದಶರುದ್ರಗಣ ಪಿತೃತ್ರಯ ಬೃಹಸ್ಪತೀ ವಿಶ್ವ ದೇವ ಅಶ್ವಿನಿಗಳೆರಡೈವತ್ತು ಶ್ವಸನಗಣರು ಋಭುವೊಂದು ಎರಡು ದ್ಯಾವಾಪೃಥವಿ 41 ಒಂಭತ್ತು ಕೋಟಿ ದೇವತೆಗಳೊಳು ನೂರು ಜನ ಅಂಬುಜಾಪ್ತರ ಒಳಗುರುರುಕ್ರಮನುಳಿದು ಪದ್ಮ ಸಂಭವನ ಸಹರಾಗಿಹರು ಶತಸ್ಥರಿಗೆ 42 ಮರುತತ್ರಯರು ವನಿಯಮ ಸೋಮ ಶಿವದಿವಾ ಕರರಾರು ರುದ್ರ ಗುರು ಇವರುಕ್ತರೂ ಉರವರಿತ ಎಂಭತ್ತೈದು ಸಮರು ತಮ್ಮೊಳಗೆ ಸರಸಿಜೋದ್ಭವನ ಸುತರೆನಿಪ ಸನÀಕಾದಿಗಳಿಗಾನಮಿಪೆ43 ಸನಕಾದಿಗಳೊಳುತ್ತಮ ಸತತ್ಕುಮಾರ ಶಿಖಿ ತನುಜ ಪಾವಕನು ಪರ್ಜನ್ಯನು ಮೇಘಪ ಎನಿಸುವನು ಶರಭವೊಂದೇರೂಪ ಧರ್ಮರಾ ಜನ ಪತ್ನಿ ದೇವಕಿಯು ಶಾಮಲೆಯ ರೂಪವೆಂದಾ ನಮಿಪೆ44 ಯಮ ಭಾರ್ಯ ಶಾಮಲಾ ರೋಹಿಣಿದೇವಿ ಚಂ ದ್ರಮನ ಸ್ತ್ರೀ ಅನಿರುದ್ಧದೇಹಿ ಉಷಾ ದ್ಯುಮಣಿ ಭಾರ್ಯಾ ಸಂಜ್ಞ ಗಂಗಾ ವರುಣ ಭಾರ್ಯ ಸುಮರಾರು ಜನರು ಪಾವಕಗೆ ಕಿಂಚಿದಧಮರೆಂದಾ ನಮಿಪೆ45 ಪರ್ಜನ್ಯ ಈ ರೆರಡು ವನ್ಹಿಗೆ ಕಡಿಮೆ ಪಾದಮಾನೀ ಸುರಪನಂದನ ಜಯಂತನು ಪ್ರಹಲ್ಲಾದ ಈ ರ್ವರು ಮುಖ್ಯರಧಮ ಪರ್ಜನ್ಯಗೆಂದೆಂದು 46 ಎರಡು ಗುಣ ಪರ್ಜನ್ಯಗಿಂದಧಮಳು ಸ್ವಹಾ ರೆರಡಧಿಕ ಗುಣದಿ ಸ್ವಪತಿಗೆ ನೀಚಳೂ ಹರಿ ಶಕ್ರಸತಿ ಅಶ್ವಿ ಯುಕ್ತಾಭಿಮನ್ಯು ಚಂ ದಿರಜ ಬುಧನವತಾರ ಸ್ವಾಹಾ ದೇವಿಗಧಮಳೆಂದಾ ನಮಿಪೆ 47 ಎನಿಸುವಳು ಶಲ್ಯ ಜರಾಸಂಧನಾತ್ಮಜಾ ಶ್ವಿನಿ ಭಾರ್ಯಾನಾಮಾಭಿಮಾನಿ ಉಷಾ ಘನರಸಾಧಿಪ ಬುಧಗೆ ಕಿಂಚಿದ್ಗುಣ ಕಡಿಮೆ ಅವಳ ಪತ್ನಿಗೆ ದಶಗುಣಾಧಮಳುಯೆಂದು 48 ಧರಣಿಗಭಿಮಾನಿ ಎನಿಸುವ ಸೂರ್ಯಸುತ ಶನೇ ಶ್ವರ ಉಷಾದೇವಿಗೆರಡು ಗುಣಾಧಮ ತರಣಿ ನಂದನಗೆ ಸತ್ಕರ್ಮಾಭಿಮಾನಿ ಪು ಷ್ಕರ ಕಡಿಮೆ ಪಂಚಗುಣದಿಂದ ಎಂದೆಂದು 49 ನಾರದನ ಶಿಷ್ಯ ಪ್ರಹ್ಲಾದ ಬಾಲ್ಹೀಕ ಸ ಮೀರ ಸಂಯುಕ್ತ ಸಹ್ಲಾದ ಶಲ್ಯಾ ಮೂರನೆಯನುಹ್ಲಾದ ಸವಿತ್ರನಾವೇಶದಲಿ ತೋರಿದನು ದೃಷ್ಟಕೇತು ಎನಿಸಿ ಧರೆಯೊಳಗೆ 50 ತಾಮಾಂಶಯುಗ್ ಜಯಂತನು ಬಭ್ರುವಹ ವರು <ಈ
--------------
ಜಗನ್ನಾಥದಾಸರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಕರ್ಮವ ಮಾಡಿ ನಾ ನಿನ್ನ ಒಲಿಸಲಿ ಶ್ರೀನಿವಾಸ ಧ್ಯಾನಕೆ ನಿಲುಕದ ಜ್ಞಾನಿಗಳರಸ ನೀನು ಶ್ರೀನಿವಾಸ ಪ ಗಂಗೆಯ ತಂದು ಮಂಗಳಸ್ನಾನ ಮಾಡಿಸೆ ಶ್ರೀನಿವಾಸ ಗಂಗೆಯು ನಿನ್ನಂಗುಷ್ಟದಲ್ಲಿಹಳಲ್ಲೊ ಶ್ರೀನಿವಾಸ 1 ಮನಮೆಚ್ಚುವಂತೆ ನಿನ್ನ ಸುಮಗಳಿಂದರ್ಚಿಪೆನೆ ಶ್ರೀನಿವಾಸ ವನಜ ಪುಷÀ್ಪವು ನಿನ್ನ ನಾಭಿಯೊಳಿಹುದಲ್ಲೋ ಶ್ರೀನಿವಾಸ 2 ಅಂಗಿವಸ್ತ್ರಗಳಿಂದ ಶೃಂಗರಿಸುವೆನೆಂದರೆ ಶ್ರೀನಿವಾಸ ಅಂಗನೆ ಲಕುಮಿ ಸಕಲಾಭರಣಂಗಳಾಗಿರುವಳಲ್ಲೊ ಶ್ರೀನಿವಾಸ 3 ಅನ್ನ ಪಾನಗಳಿತ್ತು ಧನ್ಯನಾಗುವೆನೆ ಶ್ರೀನಿವಾಸ ಅನ್ನಪೂರ್ಣಿ ಷಡುರಸದನ್ನವ ಮಾಳ್ಪಳಲ್ಲೊ ಶ್ರೀನಿವಾಸ 4 ಕಡುಭಕ್ತಿಯಿಂದ ನಿನ್ನಡಿ ಸೇವೆ ಮಾಳ್ಪೆನೆ ಶ್ರೀನಿವಾಸ ಎಡಬಿಡÀದೆ ಹನುಮ ನಿನ್ನಡಿಯ ಪಿಡಿದಿಹನಲ್ಲೊ ಶ್ರೀನಿವಾಸ 5 ಜಗದುದರ ನಿನ್ನ ಬಗೆ ಬಗೆ ನಾಮಗಳ ಸ್ತುತಿಸೆ ಶ್ರೀನಿವಾಸ ಅಗಣಿತವಾಗಿಹುದು ಮುಗಿಯದಂತಿಹುದಲ್ಲೊ ಶ್ರೀನಿವಾಸ6 ಶ್ರಿಷ್ಟಿಕರ್ತ ಶ್ರೀ ರಂಗೇಶವಿಠಲನೆ ಎಂಬೆ ಶ್ರೀನಿವಾಸ ಇಷ್ಟೆಂದ ಮಾತ್ರಕೆ ಒಲಿದಿಷ್ಟವ ಸಲಿಸೈಯ್ಯಾ ಶ್ರೀನಿವಾಸ 7
--------------
ರಂಗೇಶವಿಠಲದಾಸರು
ಏಳೊ ಬಾಲನೆ ವೇಳೆ ಮೀರುತಿಹುದು ಪ ಕೇಳುತಿಹರು ಯದುಮೌಳಿಯೆಲ್ಲಿ ಎಂದು ಅ.ಪ ಎದ್ದು ಬಾರೆಲೋ ಮುದ್ದು ಬಾಲಕೃಷ್ಣ ಪದ್ಧತಿಯಲಿ ಕ್ಷೀರ ಸಿದ್ಧವಾಗಿಹುದು 1 ಜಾಣ ನಿನ್ನಯ ವೇಣುನಾದ ಕೇಳೆ ಏಣನಯನೆಯರು ಕಾಣ ಬಯಸುತಿಹರು 2 ಯಮುನಾ ತೀರದಿ ಸುಮಲತೆಗಳಲ್ಲಿ ಕಮಲನಯನ ನಿನ್ನ ರಮಿಸ ಬಯಸುತಿಹರು 3 ಮೌನಿಜನರು ತಮ್ಮ ಸ್ನಾನ ಮುಗಿಸಿ ನಿನ್ನ ಜ್ಞಾನ ಪೊಂದೆ ಗುಣಗಾನ ಮಾಡುತಿಹರು 4 ನಿನ್ನ ಪ್ರಿಯ ಜನರನ್ನು ಕಾಯಿಸಲು ಇನ್ನು ತರವೇನೋ ಪ್ರಸನ್ನವದನನಾಗಿ 5
--------------
ವಿದ್ಯಾಪ್ರಸನ್ನತೀರ್ಥರು
ಒಲ್ಲೆನೀ ಕವಚ ಕುಂಡಲಗಳನ್ನು ಒಲ್ಲೆ ನಾನು ಕಿರೀಟ ಪಾದುಕೆಗಳನ್ನು ಪ ಹಗಲು ಹಾದರಗಿತ್ತಿಯಂತಿಪ್ಪ ಮನುಜನಿಗೆ ಸೊಗಸುವುದು ಸೊಗಸದೆಂಬರುಹಿಲ್ಲದೇ ಜಗದುದರ ನಿನ್ನಿಂದ ಶೋಭಿಸುವನಘ್ರ್ಯದ ವ ಸ್ತುಗಳ ಎನಗೀಯಲೇತಕೆ ಮೆಚ್ಚಿದೆಯೋ ದೇವ 1 ನೋಡಲೆವೆ ಸೀವುದಿದನಿಟ್ಟು ಕೈಕೊಂಡ ಪ್ರಾಣ ಗೂಡಿನೊಳಗಿಹುದೇ ಅಕಟಕಟ ಹರಿಯೇ ಬೇಡವೀ ಮಾಯ ಕೃಪೆಯಿಂದ ಸದ್ಭಕುತಿಯ ಜೋಡ ತೊಡಿಸಿದನೊಲ್ಲೆ ಕಾಡಬೇಡವೋ ದೇವ 2 ಶಿರಕೆ ಕರ್ಣಕೆ ಚರಣಗಳಿಗೆ ಕಥೆಯನ್ನು ಪೇ ಳ್ದೆರಗುವುದನೊಲಿದು ಕುಣಿದಾಡುವುದನು ಕುಂಡಲ ಕಿರೀಟಗಳನು ವರ ಪಾದುಕೆಗಳ ನಾನೊಲ್ಲೆ ಹರಿಯೇ 3 ನಿನ್ನ ದಾಸಾನುದಾಸ ದಾಸರ ಗುಣಾರ್ಣವದೊ ಳೆನ್ನೊಳೆಳ್ಳನಿತುಂಟೆ ಅಕಟಕಟ ಹರಿಯೇ ಬನ್ನಬಡಿಸಲು ಬೇಡ ದಕ್ಕದೀಯುಡುಗೊರೆಯು ಚುನ್ನವಾಡುವರು ಧಾತ್ರಿಯ ಮನುಜರೆಲೆ ದೇವ 4 ಇದನು ಕೊಡಬೇಕಾದಡೆಯು ಮುಕ್ತ್ಯಾಂಗನೆಯ ಮದುವೆಯನು ಮಾಡಿ ಯಾಬಳಿಕನಿತ ವೊದವಿಸುವುದುಚಿತ ಒಪ್ಪಂದವಾಗಿಹುದು ಚದುರ ವೈಕುಂಠ ವೇಲಾಪುರಾಧೀಶ 5
--------------
ಬೇಲೂರು ವೈಕುಂಠದಾಸರು
ಕಂಡಿರ್ಯಾ ನೀವು ಕಂಡಿರ್ಯಾ ಮಂಡಲದೊಳು ನಿಜ ಕಂಡಿರ್ಯಾ ಧ್ರುವ ಮಂಡೆಯ ಮರೆಯಲ್ಯ ಖಂಡವಾಗಿಹುದು 1 ಪಿಂಡಬ್ರಹ್ಮಾಂಡಕೆ ಭೇದದೋರದಿದು 2 ಹಿಂಡದೈವಕ ತಾಪ್ರಚಂಡನಾಗಿಹುದು 3 ಕಂಡವರಾಶ್ರಯ ಪಂಡಿತರಿಗೆ ಪ್ರಿಯ 4 ಕಂಡವರಕಂಡು ಕೂಡಿಕೊಂಬುದಿದು 5 ನೋಡಿದವರ ಕೂಡ ನೋಟಮಾಳಾಹುದು6 ಮೂಢ ಮಹಿಪತಿ ಪ್ರಾಣದೊಡೆಯನಾಗಿಹ್ಯ ನಿಜ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಾಯ || ಕಾಯ ಪ ಅಣುರೂಪದಿಂದಿದ್ದು ಕ್ಷಣದೊಳಗದ್ಭುತ ರೂಪವ ಧರಿಸಿ ಬಲಿಯ ಬಂಧಿಸಿದೆ | ರಣ ಶಬ್ದವಿಲ್ಲದೆ ಸರ್ವ ಸಾಮ್ರಾಜ್ಯವ ನಗ್ರಜಗಿತ್ತಿಹ ಕಾರ್ಯವಾಶ್ಚರ್ಯ 1 ವಾದಿರಾಜರಿಗೆ ನೀ ಒಲಿದು ಶ್ರೀ ಸೋದೆಯೊಳ್ ನಿಂತಿದ್ದ ತೆರವತಿ ಚೋದ್ಯವಾಗಿಹುದು | ಕದನವಾಗಿಲ್ಲ ಭೂಭುಜರಲ್ಲಿ ಒಲಿದುದು ಹರಿಭಕ್ತರ್ಗತಿ ತೋರ್ಪ ಕಾರ್ಯ 2 ರಾಜ್ಯದೊಳಗತಿ ಮಾನ್ಯ ವಾದಿರಾಜರ ಭಾಗ್ಯ ದೇವಾಧಿದೇವ ಶ್ರೀ ತ್ರಿವಿಕ್ರಮರಾಯ 3
--------------
ವಿಶ್ವೇಂದ್ರತೀರ್ಥ
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ ಪ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ 1 ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ 2 ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ 3 ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು 4 ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ 5 ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು 6 ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ 7
--------------
ಕನಕದಾಸ