ಒಟ್ಟು 25 ಕಡೆಗಳಲ್ಲಿ , 17 ದಾಸರು , 23 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
(ಆ) ಶ್ರೀ ಹರಿಯ ಸ್ತುತಿ ಕೃತಿ ಆಗಿ ಹೋಗುವುದು ಜಗದೀಶನಾಕೃತಿಯು ಅಗಾಧವಿಹುದೈಯ್ಯ ಪ ಮಂದರೋದ್ಧರನಾಜ್ಞೆಯಿಂದ ಬ್ರಹ್ಮನು ತಾನು ಇಂದಿಗೆ ಸೃಷ್ಟಿ ಮಾಡುವುದಿಲ್ಲವೇನು ಇಂದೀವರಾಕ್ಷ ಮುಕುಂದನ ದಯದೀ ಪಾಂಡುನಂದನನು ಅಶ್ವಮೇಧವ ಮಾಡಲಿಲ್ಲೇ 1 ಹರಿಯ ಕೃಪೆಯಿಂದಲಿ ವರದಂಜನೇಯ ಸುತನು ಗುರು ರಾಮನಾ ಸತಿಯ ಅರಸುವುದಕ್ಕಾಗಿ ಪರಮ ದುರ್ಲಭವಾದ ಶರಧಿಯನು ಹರುಷದಲಿ ಸಿರಿನಾಮ ಸ್ಮರಿಸಿ ಹಾರಲಿಲ್ಲೇನೋ2 ಧನಭೂಮಿ ಕನ್ಯಾಗ್ರಹದಾನ ಕೊಡಲದಕೆ ಹರಿ ಅನುಕೂಲವಾದಷ್ಟೇ ಫಲಕೊಡುವನು ಮನವನೊಪ್ಪಿಸಿ ಗತಿ ಎಂದು ನೆನೆದವರಿಗೆ ಘನ ಮುಕ್ತಿಯನು ಕೊಡುವ ಹನುಮೇಶವಿಠಲ 3
--------------
ಹನುಮೇಶವಿಠಲ
ಅನುದಿನವು ಶ್ರವಣಮನನಾದಿ ಸಾಧನ ಮಾಡು ಇನ್ನು ಸಂಶಯವ್ಯಾತಕೊ ಪ. ಏನು ಶಪಥವ ಮಾಡಲಿ ಮತವು ಹಿರಿದೆಂದು ಜ್ಞಾನಿಗಳ ಸಮ್ಮತವೊ ಅ.ಪ. ಗುರುಮಧ್ವಶಾಸ್ತ್ರವೆ ಸಕಲ ಶಾಸ್ತ್ರಧಿಕೆಂದು ಶಿರವರಿದು ಮುಂದಿರಿಸಲೆ ಪರಮತಜಾಲವೆಲ್ಲ ವೇದವಿರುದ್ಧವೆಂದು ಶರಧಿಯನು ನಾ ದಾಟಲೆ1 ಭಾಗವತಶಾಸ್ತ್ರವೆ ಬಹು ಭಾಗ್ಯವೆಂತೆಂದು ನೆಗಹಿ ಪರ್ವತವ [ನಿಲಿಸಲೆ] ಭಾಗವತ ನಿಂದಕಗೆ ಬಹು ನರಕವೆಂತೆಂದು ಪರ್ವ- ತಾಗ್ರದಿಂ ಧುಮುಕಲೆ 2 ವಿದಿತ ದೈವರೊಳಗೆ ವಿಷ್ಣು ಉತ್ತಮನೆಂದು ವೇದಂಗಳ ಒಡನುಡಿಸಲೆ ಅಧಿಕಾರಿಗಳೊಳಗೆ ಅಂಬುಜಸಂಭವನೆಂದು [ಕಾದೆಣ್ಣೆ]ಯೊಳು ಮುಣುಗ [ಲೆ] 3 ಪರಲೋಕಸಾಧನಕೆ ತಾರತಮ್ಯಮತವೆಂದು ಗರಳವನು ಕುಡಿಯಲೆ ಹರಿದಿನಕೆ ಮರುದಿನಕೆ ಸರಿಯಿಲ್ಲವೆಂತೆಂದು ಹರಿವ ಹಾವನು ಹಿಡಿಯಲೆ 4 ಗುರುಮಧ್ವರಾಯರೆ ಆತ್ಮರಕ್ಷಕರೆಂದು ಅನಲವ ಕೈ ಪಿಡಿಯಲೆ ಅಮಿತ ಗುಣಪೂರ್ಣನೆಂದು ಅ- ಶರೀರವನು ನುಡಿಸಲೆ 5
--------------
ವಾದಿರಾಜ
ಈತನೀಗ ವಾತಜಾತನು ತನ್ನ ಪ ತÁತಗಾಗಿ ದನುಜಕುಲವಘಾತಿಸಿದ ವನೌಕಸಾರ್ಯಅ.ಪ. ಅಂಬುಧಿಯ ಲಂಘಿಸಿ ಭರದಿಲಂಬ ಶಿಖರದಲ್ಲಿ ಧುಮುಕಿಸಂಭ್ರಮದಿಂದ ಲಂಕೆಗೆ ಪೋಗಿಅಂಬುಜಾಕ್ಷಿಯನರಸಿದಾತ1 ಧರಣಿಸುತೆಯ ಚರಣಕೆರಗಿಕರುಣಿ ರಾಮನುಂಗುರವಿತ್ತುಕರದಿ ದಾನವರನು ಸವರಿಶರಧಿಯನುತ್ತರಿಸಿದಾತ 2 ಕಡಲ ತಡಿಯೊಳಿರ್ದ ಕಪಿಗ-ಳೊಡನೆ ರಾಮನಂಘ್ರಿಗೆರಗಿಮಡದಿ ಚೂಡಾರತುನವಿತ್ತುಕಡು ಕೃತಾರ್ಥನೆನಿಸಿಕೊಂಡ 3 ದುರುಳ ಕೌರವನನುಜನುರವಕರದಿ ಸೀಳಿ ರಕ್ತವ ಸುರಿದುನರಸಿಂಹನಿಗೆ ಅರ್ಪಿಸಿದಧರೆಗೆ ಭೀಮನೆನಿಸಿದಾತ 4 ಇಳೆಯೊಳಿದ್ದ ಮಧ್ಯಗೇಹನಕುಲದಿ ಜನಿಸಿ ಶುದ್ಧವಾದನಳಿನನಾಭನ ಒಲುಮೆಯಿಂದಮಲಿನರನ್ನು ಅಳಿದ ಧೀರ 5 ಇಪ್ಪತೊಂದು ಕುಮತಗಳನುಒಪ್ಪದಿಂದ ಗೆಲಿದು ಭಕ್ತಕಲ್ಪವೃಕ್ಷನೆನಿಸಿ ಮೆರೆದಸರ್ಪಶಯನನ ನಿಜವ ತೋರ್ದ6 ಧರಣಿ ಮಂಡಲದೊಳಗೆ ಭೂಮಿಸುರರ ಗಣಕೆ ಶಾಸ್ತ್ರಾಮೃತವಎರೆದು ಕೃಷ್ಣನ ಇರವ ತೋರಿವರ ಬದರಿಯೊಳ್ ನಿಂದ ಧೀರ7
--------------
ವ್ಯಾಸರಾಯರು
ಎಂತು ಪೊಗಳಲೊ ನಿನ್ನ-ಯತಿಕುಲ ಶಿರೋರನ್ನ ಪ ಶಾಂತ ಮಧ್ವಾಚಾರ್ಯ ಸಂತ ಕುಲವರ್ಯ ಅ.ಪ. ಪ್ರಥಮಾವತಾರದಲಿ ವ್ರತತಿ ರಾಮನ ಭಜಿಸಿಅತಿ ಪಂಥದಿಂದ ಶರಧಿಯನು ದಾಟಿಕ್ಷಿತಿಜೆಗಂಕಿತವಿತ್ತು ಪೂದೋಟವನು ಕಿತ್ತೆಪ್ರತಿಗಾಣೆ ನಿನಗೆ ಅಪ್ರತಿ ಪರಾಕ್ರಮಿಯೆ 1 ದ್ವಿತಿಯಾವತಾರದಲಿ ದೇವಕೀಜನ ಕಂಡುಸತಿಗೆ ಕಾಮಿಸಿದವನ ಸಾಹಸದಿ ಸದೆದೆಪ್ರತಿಯಾದ ಮಾಗಧನಪೃತನದಲಿ ನೀ ಕೊಂದೆಪ್ರತಿಯ ಕಾಣೆನೊ ನಿನಗೆ ಮೂಜ್ಜಗದೊಳಗೆ 2 ತೃತಿಯಾವತಾರದಲಿ ತ್ರಿಜಗನುತಿಸಲು ಬಂದುಯತಿಯಾಗಿ ಮಹಾಮಹಿಮನನು ಭಜಿಸಿದೆಕ್ಷಿತಿಗಧಿಕ ಉಡುಪಿಯಲಿ ಕೃಷ್ಣನ್ನ ನಿಲಿಸಿ ಪ್ರತಿಮತಮತವ ಮುರಿದೆ ಪೂರ್ಣಪ್ರಜ್ಞ ಮುನಿವರನೆ 3
--------------
ವ್ಯಾಸರಾಯರು
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಗಂಗಾ ಭಾಗೀರಥೀ ಮಂಗಳಾಂಗಿ ಅಳಕನಂದನ ನೀ ಮಹಾ ಸುಂದರಾಂಗಿ ಸಿಂಧುರಾಜನ ರಾಣಿ ಸಿರಿಯು ಸಂಪತ್ತು ಕೊಡು ಕಂಗಳಿಂದಲಿ ನೋಡಿ ಕರುಣಿಸೆನ್ನ ಪ ಕಾಶಿ ಪಟ್ಟಣದಲಿ ವಾಸವಾಗಿ ಸರಸ್ವತಿಯನು ಕೂಡಿ ನೀ ಸರಸವಾಗಿ ಸೋಸಿಲಿಂದಲಿ ಸೂರ್ಯಪುತ್ರಿ ಯಮುನೆಯನು ಕೂಡಿ ಉ- ಲ್ಲಾಸದಿದ್ಹರಿದು ವಾರ್ಣಾಸಿಗ್ಹೋಗಿ 1 ಹಾಲಿನಂತೆ ಹರಿವೊ ಗಂಗೆ ನೀನು ನೀಲದಂತಿದ್ದ ಯಮುನೆಯನು ಕೂಡಿ ಲೀಲೆಯಿಂದಲಿ ಸರಸ್ವತಿಯನು ಕೂಡಿ ಓಲ್ಯಾಡುತ ಬಂದೆ ಒಯ್ಯಾರದಿಂದ 2 ಭಗೀರಥನ ಹಿಂದೆ ನೀ ಬಂದೆ ಓಡಿ ಸಗರನ ಸುತರ ಉದ್ಧಾರ ಮಾಡಿ ಜಗವ ಪಾವನ ಮಾಡೋ ಜಾಹ್ನವಿಯೆ ನೀ ಎನ್ನ ಮಗುವೆಂದು ಮುಂದಕೆ ಕರೆಯೆ ತಾಯಿ 3 ಬಿಂದುಮಾಧವ ವೇಣುಮಾಧವನ್ನ ಆ- ನಂದ ಭೈರವ ಕಾಳ ಭೈರವನ್ನ ಚಂದದಿಂದ್ವಿಶ್ವನಾಥನ್ನ ಗುಡಿಮುಂದೆ ಹೊಂದಿ ಹರಿದ್ಹನುಮಂತ ಘಾಟಿನ್ಹಿಂದೆ 4 ಪೊಡವಿ ಮ್ಯಾಲಿಂಥ ಸಡಗರದಿ ಹರಿದು ಕಡಲಶಯನನ್ನ ಕಾಲುಂಗುಷ್ಠದ ಮಗಳು ಕಡಲರಾಣಿಯೆ ಕಯ್ಯ ಪಿಡಿಯೆ ನೀನು 5 ಮರದ ಬಾಗಿಣ ಕುಂಕುಮರಿಷಿಣವು ಗಂಧ ಪರಿಪರಿಯಿಂದ ಪೂಜೆಯಗೊಂಬುವಿ ಸ್ಥಿರವಾದ ಮುತ್ತೈದೆತನ ಜನುಮ ಜನುಮಕ್ಕು ವರವ ಕೊಟ್ಟು ವೈಕುಂಠವನು ತೋರಿಸೆ 6 ಮಧ್ಯಾಹ್ನದಲಿ ಮಲಕರ್ಣಿಕೆಯ ಸ್ನಾನ ಶುದ್ಧವಾಗಿ ಪಂಚಗಂಗೆಯಲಿ ಭವ ಸ- ಮುದ್ರವನು ದಾಟಿಸೆ ಭಾಗೀರಥಿ 7 ಸುಕೃತ ಒದಗಿತೆಂದು ಗಂಗ ಭೆÀಟ್ಟಿಯಾಗೊ ಪುಣ್ಯ ಬಂದಿತಿಂದು ಚಕ್ರತೀರ್ಥದ ಸ್ನಾನ ಸಂಕಲ್ಪದ ಫಲವ ಕೊಟ್ಟು ರಕ್ಷಿಸು ತಾಯಿ ತರಂಗಿಣಿ 8 ಸಾಸಿರ ಮುಖದಿ ಶರಧಿಯನು ಕೂಡಿ ಹೋಗಿ ಬಾ ಊರಿಗೆ ಭಕ್ತಿಮುಕ್ತಿ ನೀಡಿ ನೀನು ಭೀಮೇಶ ಕೃಷ್ಣನಲಿ ಹುಟ್ಟಿದ್ದು ಪಾದವನು ತೋರೆನ್ನ ಪೊರೆಯಬೇಕೆ 9
--------------
ಹರಪನಹಳ್ಳಿಭೀಮವ್ವ
ಜಯ ವಾಯು ಹನುಮಂತ ಜಯ ಭೀಮ ಬಲವಂತ ಪ ಜಯಪೂರ್ಣ ಮತಿವಂತ ಜಯ ಸಲಹೊ ಸಂತ ಅ.ಪ. ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂದು ಲಂಘಿಸಿ ಖಳರ ವನ ಭಂಗಿಸಿ ಸೀತೆ-ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ 1 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಅರಿಬಲವ ಕುಟ್ಟಿಉರಗ ಬಂಧನದಿಂದ ಕಪಿವರರು ಮೈಮರೆಯೆಗಿರಿಯ ಸಂಜೀವನವ ತಂದು ಬದುಕಿಸಿದೆ 2 ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂಜ್ಜಗದಿ ಮೆರೆದೆ 3 ಧsÀುರದಲಿ ದುರ್ಯೋಧನನ ಬಲವನು ತರಿದೆಅರಿತು ದುಶ್ಶಾಸನನ ಒಡಲನ್ನು ಬಗೆದೆಉರವ ತಪ್ಪಿಸಿ ಕೌರವನ್ನ ತೊಡೆಗಳ ಮುರಿದೆಹರಿಯ ಕಿಂಕರ ಧುರಂಧರಗಾರು ಸರಿಯೆ ಕಲಿಯುಗದಲಿ ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀಹರಿಯ ಗುಣಗಳನು ಮರೆಸಿಕಲಿಯನನುಸರಿಸಲು ಗುರುವಾಗಿ ಅವತರಿಸಿಖಳರ ದುರ್ಮತ ಮುರಿದೆ ಶ್ರೀಕೃಷ್ಣಪರನೆಂದೆ
--------------
ವ್ಯಾಸರಾಯರು
ಜಯದೇವ ಜಯದೇವ ಜಯ ರಾಘವ ರಾಮಾ ದಯದಲಿಯಚ್ಚರನೀವದು ಸ್ಮರಿಸಲುತವನಾಮಾ ಪ ಹಭವ ಭವಮುಖರಮೊರೆಯನು ಕೇಳುತಲಿ ದಶರಥ ಕೌಲಸ್ಯರಾ ಬಸಿರಿಂದುದಿಸುತಲಿ ರುಷಿ ಮುಕರಕ್ಷಿಸಿ ತಾಟಕಿ ದೇಹದಿಬಿಡಿಸುತಲಿ ವಸುಧಿಲಿ ಶಿಲೆಯನು ಪಾದದದಿಮೆಟ್ಯುದ್ಧರಿಸುತಲಿ 1 ಹರುಷದಿ ಕೌಶಿಕನೊಡನೆ ಮಿಥಿಲೆಗೆ ಪೋಗುತಲಿ ಹರದು ಮುರಿದು ಜನಕಜೆ ಮಾಲೆಯ ಧರಿಸುತಲಿ ಬರಲಾನಂದದಿ ಭೃಗುಪತಿ ದಶರಥ ದರಶನ ಪಾಡುತಲಿ ಅರಸುತನಕ ಕೈಕೆಯು ಬ್ಯಾಡೆನೆ ನಡೆದೈತ್ವರಿಲಿ 2 ವನದಲಿ ಭಂಗಿಸಿಶೂರ್ಪನಖಿಖರ ದೂಶಣರಾ ಅನುವರ ಕಾಂಚನ ಮೃಗವಾ ಬೆಂಬೆತ್ತಲು ದೂರಾ ಜನಕಜೆಯಾಕೃತಿ ವೈಯ್ಯಲು ಕಪಟದಿದಶಶಿರಾ ಅನುಭಜಟಾಯುವಿನಿಂದಲಿ ಕೆಳಿ ನಡದೆ ಧೀರಾ 3 ಪಥದಲಿ ಮುರಿದುಕಬಂಧವ ಶಬರಿಗೆ ಗತಿನೀಡಿ ಪ್ರಥಮದಿ ಹನುಮನ ಕಂಡು ವಾಲಿಯ ಹತಮಾಡಿ ರತಿಯಲಿ ಸುಗ್ರೀವಜಾಂಭವ ಸೈನ್ಯದ ಲೋಡಗೂಡಿ ಕ್ಷಿತಿಜೆಯಾ ಸುದ್ದಿಯತರಿಸಿ ನಡೆದೈನಲಿದಾಡಿ 4 ಸೇತುವೆ ಗಟ್ಟಿಸಿ ಶರಣವ ಬರಲು ವಿಭೀಷಣನು ಭೀತಿಯ ಹಾರಿಸಿಸೈನ್ಯದಿ ದಾಟಿದೆ ಶರಧಿಯನು ನೀತಿಯ ತಪ್ಪಿದ ರಾವಣ ಕುಂಭಶ್ರವಣರನು ಖ್ಯಾತಿಲಿ ಮಡಹಿದೆ ಅವರಾಸಂತತಿ ಸಂಪದನು 5 ಶರಣಗಸ್ಥಿತಪರಪದವಿತ್ತು ದೇವರ ಶೆರೆಬಿಡಿಸಿ ಮರಳಿದಯೋಧ್ಯಕಪುಷ್ಪಕದಿಂ ಸೀತೆಯವರೆಸೀ ಮೆರೆವತ್ಸಜರಜನನಿಯರ ಸಕಲರಸುಖಬಡಿಸಿ ಸುರಮುನಿಜನರನುಸಲಹಿದೈ ಸಾಮ್ರಾಜ್ಯವನು 6 ನಾಮದಮಹಿಮೆ ಹೊಗಳಲು ಶೃತಿಗಳಿಗಳವಲ್ಲಾ ಪ್ರೇಮದಿಸವಿಸದುಂಬುವ ಶಿವ ಸೀತಾಬಲ್ಲಾ ನೇಮದಿಸುರನಂದಾನ್ನರ ಬವ ತರಿಸಿದರಲ್ಲಾ ಕಾಮಿತ ದಾಯಕ ಗುರುಮಹಿಪತಿ ಪ್ರಭುಶಿರಿನಲ್ಲಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ನಿನ್ನ ಚಂದ್ರಕೋಟಿ ತೇಜ ಚಕ್ರಧರನ ಭೃತ್ಯಾ ಪ ತ್ರಿದಶ ದೈತ್ಯರು ಕೂಡಿ ತೀವ್ರದಿಂದಲಿ ತಾವು ಮಂದರ ಶೈಲ ತವಕದಿ ತಂದಾಗ ಉದಧಿಯೊಳಿಟ್ಟು ಸರ್ಪವನೆ ಸುತ್ತಿದರು ಪಿಡಿದು ಮುದದಿಂದ ಕಟಿಯಲು ಮುನಿದು ಮಹರೋಷದಿ ಅದು ನೋಡಿ ಮದನಾರಿ ಕಂಗೆಡಲು ಅಂಜದೆ ನೀನು ಸುರರು ಸುಖಬಡಲು 1 ವಾತನ ಸುತನಾಗಿ ವಾಲಿಯ ತಮ್ಮನ ಕೂಡಿ ಭೂತಳಾಧಿಪ ರಾಮಚಂದ್ರನ ಪದವಾರಿ ಜಾತಕ್ಕೊಂದನೆ ಮಾಡಿ ವೃತ್ತಾಂತವನು ಪೇಳಿ ಆತುರದಲಿ ಪುರಹೂತನಂದನ ನಿ ರ್ಭೀತನ ಕೊಲ್ಲಿಸಿ ಶರಧಿಯನು ಹಾರಿ ಸೀತೆಗುಂಗುರ ಕೊಟ್ಟು ಬೆಳೆದ ಚಲ್ವ- ವಾತಹತಮಾಡಿ ಲಂಕಾಪುರವ ಸುಟ್ಟ 2 ಪಾಂಡುಚಕ್ರವರ್ತಿ ಕುಂತಿಯಲಿ ಜನಿಸಿ ಮಂಡಲದೊಳು ಮಹಾಶೂರನೆನಿಸಿ ವಿಷ ಉಂಡು ದಕ್ಕಿಸಿಕೊಂಡು ಉರಗಲೋಕದಲ್ಲಿದ್ದು ತಾಂಡ ಭಾದಿಯ ಗೆದ್ದು ಹಿಡಿದು ಹಿಡಂಬನ ಹಿಂಡಿ ಬಕಾಸುರನ ಖಂಡರಿಸಿ ಕೀಚಕನ ಮಂಡಲದೊಳಗೆ ನಿಂದೆ ವಿರಾಟನ್ನ ದಿಂಡುಗೆಡುಹಿ ಕದನದಲಿ ವೇಗ ಕೊಂದೆ 3 ಬುದ್ಧಿಹೀನರಾಗಿ ಬಾಳಿದ ಮನುಷ್ಯರ ಶುದ್ಧಾತ್ಮರನ ಮಾಡಿ ಶುಭವೇಗದಲಿ ಶ್ರೀ ಮುದ್ರೆಧಾರಣ ಕೊಟ್ಟು ಜ್ಞಾನಾಂಬುಧಿಯೊಳಿಟ್ಟು ಅದ್ವೈತ ಮತ ಕಾಲಿಲೊದ್ದು ಪರವಾದಿ ಎದ್ದೋಡಿ ಬಂದು ತಿರುಗಿ ನಿಮ್ಮ ಉದ್ಧರಿಸಿ ಅವರವರ ದೋಷ ಹೋಯಿತು ಕರಗಿ4 ಭೂವ್ಯೊಮ ಪಾತಾಳದೊಳಗೆ ಎದುರುಗಾಣೆ ವಾಯು ಹನುಮ ಭೀಮ ಮಧ್ವನೆಂದಿನಿಸಿದೆ ಕಾಯಜ ಜನಕನ ಪದವ ಪೂಜಿಸಿ ಅಂಬು ಜೆಯನ ಪದವಿ ಪಡೆದು ಹರ ಇಂದ್ರಾದಿಗಳಿಗೆ ನಾಯಕನೆನಿಸಿದೆ ನಾನಾ ದುರಿತವಾಗಿ ಮಾಯಿಗಳೆಲ್ಲ ತರಿದೆ ಸುಭಕುತರ ಆಯತದಿಂದ ಪೊರೆದೆ ವಿಜಯವಿಠ್ಠಲರಾಯ ವೆಂಕಟನ ಒಲಿಮೆಯಿಂದಲಿ ಮೆರೆದೆ5
--------------
ವಿಜಯದಾಸ
ನೀ ಮುನಿದು ಇಳೆಯೊಳಗೇ| ಸುರಮುನಿ ಜನಪಾಲನ ಮನದಲಿ ಬಂದದಿ ನೆರೆಯದೇ ಸಾರುವದೀಗ ಪ ನಿನ್ನಯ ಒಪ್ಪುವ ಮಾರ್ಗವ ನೋಡುತ| ಮುಚ್ಚನು ಕುಡಿಗಂಗಳ ಯವಿಯಾ| ಪನ್ನಗವೇಣೀ ನಿನ್ನವಿಯೋಗ ದುಗುಡದೀ| ಕುಳಿತನುಡಗಿ ಅವಯವ ಸೋಹ್ಯಾ 1 ನಿನ್ನ ಕಾಣುವೆ ನೆಂಬಂಥ ವಾಣಿಯಲೆದ್ದು ಲಜ್ಜಿಸಿ ಹಿಂದಕ ಕಾಲೆಳೆದಾ| ಘನ್ನ ವಿರಹ ತಾಪದ ದೆಶೆಯಿಂದಲಿ ಕಿಡಿ ಕಿಡಿ ಜ್ವಾಲಾಂಗನು ಆದಾ 2 ಕಪಟದಿ ಬಂದು ನೋಡುವೆ ನಿನ್ನೆನುತಲಿ ಯಾಚಕ ರೂಪತಾಳಿದನು| ವಿಪುಳಾಂಗ ತಾಳಲಾದರದೇ ನಿನ್ನ ಕುವರಿಯ ತೊರೆಂದೆ ಚಂದನು ಶರಧಿಯನು3 ದಿನದೊಳಗರಗಳಗಿ ಗಮಿಸದು ಯನುತಲಿ ವನದೋಳು ಪೋಗಿ ಹೊತ್ತುಗಳೆವಾ|ಮನಿ ಮನಿ ಪೊಕ್ಕು ಗೋಕುಲದಲಿ ನಿನ್ನನು ಅರಸುತಿಹನು ಪಾವನ ದೇವಾ4 ಕ್ಷತ್ರೀಯರು ನಿಷ್ಠುರರೆಂದು ನಿನ್ನಮ್ಯಾಲಿನ ಕೋಪದಿ ಕಂಡ ವೃತವಳದಾ| ಅತಿತವನೋಡದೇ ತಾನಾಗಿ ಬಂದನು ಹಯವೇ ನೋಡೆ ಜೀವನ ಜಗದಾ 5 ಕುವಲಯ ಲೋಚನೆ ಕೂಡಿದ ನಿಮ್ಮಿರ್ವರ ಹಾಸ್ಯದ ಮುಖವನು| ಜವದೀ ಅವನಿಲಿ ಕಂಡೆನು ಧನ್ಯಧನ್ಯಾದೆನು ಮಹಿಪತಿ ಸುತ ಪ್ರಭುವಿನ ದಯದೀ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು