ಒಟ್ಟು 83 ಕಡೆಗಳಲ್ಲಿ , 39 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಗೋಪಾಲಕುಲ ಬಾಲ ಗೋವಿಂದ ಗುಣಶೀಲ ನೀ ಪಾಲಿಸೆನ್ನನು ದೇವ ಪ ಶರನಿಧಿ ಸಂಚಾರ ವರ ಮಂದರೋದ್ಧರ ಪರಮಾತ್ಮ ಭೂಧರ ದೇವ 1 ನರಭಕ್ತ ಭಯಹಾರ ಸುರಕಾರ್ಯಕೃತ ಧೀರ ಧರಣೇಸುರೇಶ್ವರ ದೇವ 2 ಸಕಲಾರ್ತಿಹರ ಶÀೂರ ಕುರುತೇಷ್ಟದಾತಾರ ವಿಕಟಾರ್ತ ಶ್ರೀಕರ ದೇವ 3 ಕಲಿದೋಷ ಪರಿಹಾರ ಸಲೆ ಧರ್ಮವಿಸ್ತಾರ ಜಲಧೀಶ ಮಂದಿರ ದೇವ 4 ಶ್ರೀಕಾಂತ ಶ್ರೀಮಂತ ಶ್ರೀಕೃಷ್ಣ ಜಯವಂತ ನೀ ಪಾಲಿಸೆನ್ನನು ದೇವ 5
--------------
ಲಕ್ಷ್ಮೀನಾರಯಣರಾಯರು
(ಆ) ಆಳ್ವಾರಾಚಾರ್ಯ ಸ್ತುತಿಗಳು (1) ಆಂಜನೇಯ ನೋಡಿರೈ ಕಣ್ದಣಿಯಾ ಸಜ್ಜನರೆಲ್ಲ ಪಾಡಿರೈ ಮನದಣಿಯಾ ಪ ಗಾಢಭಕುತಿಯನಾಂತು ಭಜನೆಯ ಮಾಡುವರ ದುರಿತಗಳನೋಡಿಸಿ ಕೂಡೆನಿರ್ಮಲರೆನಿಸಿ ಪೊರೆವಾ ರೂಢನಹ ಮಾರುತಿಯ ಮೂರ್ತಿಯ ಅ.ಪ ಉಡಿಯೋಳ್ ಘಂಟೆಗಳೆಸೆಯೆ ಚರಣದೊಳುಳ್ಳ ತೊಡರುಗಗ್ಗರಮುಲಿಯೆ ರ್ಕಡೆಯ ಕರ್ಣದಿ ಪೊಳೆಯೆ ಕಡಗ ಮಣಿಮಕುಟಗಳ ಪೇರುರ ದೆಡೆಯ ವಜ್ರದಪದಕ ಮೊದಲಹ ತೊಡಿಗೆಗಳ ಸಡಗರದೊಳೊಪ್ಪುವ ದೃಢತರದ ಮಾರುತಿಯ ಮೂರ್ತಿಯ 1 ಭರದಿಂದ ಶರನಿಧಿಯಾ ಲಂಘಿಸಿ ಪೊಕ್ಕಾ ನಿರುಪಮತರ ಲಂಕೆಯ ಗುರಿಗೊಂಡರಸಿ ಸೀತೆಯಾ ಕಂಡಾರಘು ವರನುರುಮುದ್ರಿಕೆಯ ಕರದೊಳಿತ್ತಾರಮಣಿಯಿಂ ವಿ ಸ್ಫುರಿಪ ಚೂಡಾಮಣಿಯ ಕೈಕೊಂ ಡಿರದೆ ಬಂದೊಡೆಯಂಗೆ ಸಲಿಸಿದ ಪರಮಬಲಯುತನಮಳಮೂರ್ತಿಯ 2 ವಾದವಿದೂರನನು ಪಾವನ ಮೃದು ಪಾದಾರವಿಂದನನು ವೇದಾಂತವೇದ್ಯನನು-ಸನ್ನುತಪರ ನಾದಾನುಮೋದನನು ಸಾದರದೊಳೈತಂದು ಪ್ರಾರ್ಥಿಪ ಸಾಧುಸಂತತಿಗೊಲಿದು ಪರಮಾ ಮೋದದಿಂ ಪರಮಾರ್ಥವಿಷಯವ ಬೋಧಿಸುವ ಮಾರುತಿಯ ಮೂರ್ತಿಯ 3 ರಂಗನಾಥನದೂತನ ಸತ್ಕರುಣಾಂತ ರಂಗನಾರ್ತಪ್ರೀತನ ಕಂಗೊಳಿಸುವ ನೂತನಪುರವರದೊಳು ಹಿಂಗದೊಪ್ಪಿರುವಾತನ ಮಂಗಳಾತ್ಮನ ಮೋಹದೂರನ ಸಂಗರಹಿತನ ಸತ್ಯಚರಿತನ ರಂಗದಾಸಪ್ರಣಿತಮಹಿಮೋ ತ್ತುಂಗ ಶ್ರೀ ಮಾರುತಿಯ ಮೂರ್ತಿಯ 4
--------------
ರಂಗದಾಸರು
(ಇ) ಆತ್ಮನೀವೇದನೆಯ ಕೃತಿಗಳು ಆಕಾರವಿಲ್ಲದ ಅನಾದಿಯೊಳು ಪಂತ ಸಾಕಾರನಾಗಿಹನು ಶ್ರೀ ಲಕ್ಷ್ಮೀಕಾಂತ ಪ ಕುಸುಮಶರನೆ ಪೂವು ಅದರೊಳಗಿಲ್ಲ ಎಸೆಯೆ ಕೋದಂಡ ಕಬ್ಬೈಸೆ ಧನುವಲ್ಲ ಹೊಸ ಬಗೆಯಾಗಿ ನಾಂಟದ ಸರಳಲ್ಲ ವಿಷಮ ವಿಗ್ರಹಕಿನ್ನು ಕೇಳ್ ಪ್ರಾಣವಿಲ್ಲ 1 ಮುಂದುವರೆವರೆ ಮೋಹರದೊಳು ತನ್ನ ಚಂದದಿಂದೊಪ್ಪುವಂಗವ ಕಾಣೆ ಮುನ್ನ ಕುಂದದಕೇದಗೆಯೆಸಳಿವೆ ನೋಡು ತನ್ನ ಸಂಧಿಸಿತೇನೊ ಚಿದ್ರೂಪ ಗುಣರನ್ನ 2 ಸರಿಯಲ್ಲದವರೊಳು ಸಮರವ ಮಾಡಿ ಧುರದೊಳು ಮಿಗೆ ನೊಂದೆನಯ್ಯ ಮೈ ಬಾಡಿ ಪರಿಹರಿಸೆಲವೊ ಸುರಸತಿಯರ ಮಧ್ಯೆಕೂಡಿ ಸುರಪುರಪತಿ ದುರಿತವಿರದೊಂದುಗೂಡಿ3
--------------
ಕವಿ ಲಕ್ಷ್ಮೀಶ
ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಭಿಮಾನ ಕಳೆವಂಥ | ಸುಲಭ ಮಾರ್ಗವನೇ |ಪ್ರಭುವೆ ಹರಿ ನಿನ್ನ ಸ್ಮøತಿ | ಸರ್ಬದಲಿ ಈಯೋ ಪ ಕರ್ಮ | ಸೃಷ್ಟಿ ನಡೆಸುವಲಿ |ಇಷ್ಟು ತತ್ವೇಶರನು | ಸುಷ್ಠು ಕರ್ಮವ ನಡೆಸೆಭ್ರಷ್ಟ ಎನ್ನಿಂದೆಂಬ | ಕರ್ತೃತ್ವದಲ್ಲಿರುವಾ 1 ಕರ್ಮ ಕರ್ಮ ನಾಮಕನೇ 2 ತನುನಿಷ್ಠ ತತ್ವೇಶರ | ಗಣಿತದ ಕರ್ಮಗಳತನು ತಮ್ಮ ಇಂದ್ರಿಯದಿ | ಅನುನಯದಿ ಗೈಯ್ಯೋ |ಎನ ತನುವು ಇಂದ್ರಿಯವೆ | ಕಾರಣವು ಎಂಬಂಥಹೀನ ಕಾರಕ ಸ್ವಾಮ್ಯ | ಮಾನವೆಂಬಂಥಾ 3 ಹಲವು ತತ್ವರು ದೇಹ | ದಲಿ ನಿಂತು ಕರ್ಮಗಳಹಲವು ಗೈಯುತ ಹರಿಗೆ | ಒಲಿದು ಅರ್ಪಿಸುತಿರೇ |ಫಲವು ಹಂಚಿಪ ಹರಿಯ | ಫಲಸ್ವಾಮ್ಯ ತಿಳಿಯದಿಹತಿಳಿಗೇಡಿ ಯೆನ್ನ ಭ್ರಮ | ಒಲಿದು ನೀ ಕಳೆಯೋ 4 ಅಹಿಕ ಪಾರತ್ರಿಕವು | ವಿಹಿತ ಸುಖವೆರಡರಲಿಅಹಿಕ ದುಃಖದ ವಿರಲು | ಬಹುದು ಮೋಕ್ಷೆರಿ ಬಾ |ಅಹಿತ ಮತಿ ಕಳೆಯುತ | ಶ್ರೀಹರಿಯೆ ನಿನ್ವೊಲಿಮೆಮಹಿತ ಮೋಕ್ಷದವೆಂಬ | ವಿಹಿತ ಮತಿ ಈ ಯೋ 5 ವಿಷಯದಲಿ ಮೈ ಮೆರೆತು | ವಿಷಯೋಪ ಭೋಗಗಳೆಅಸಮ ಪುರುಷಾರ್ಥಗಳ | ಲೇಸು ಪ್ರದವೆಂಬಾ |ವಿಷಯಾಭಿಮಾನಗಳು | ನಶಿಪಂತೆ ನೀ ಮಾಡಿವಿಷಯಾದಿಗಳಿಗೆಲ್ಲ | ಈಶ ನೀವೆನೆ ತಿಳಿಸೋ 6 ಕಕ್ಕಸದ ಅಭಿಮಾನ | ಷಟ್ಕಗಳ ನೀ ಕಳೆದುಅಕ್ಕರದಿ ತಾಯ್ತನ್ನ | ಮಕ್ಕಳನು ಪೊರೆವಂತೇ |ಲೆಕ್ಕಿಸದಲೆನ್ನಯ | ಲಕ್ಷ ಅಪರಾಧಗಳ ಕ್ಷಮಿಸಿಚೊಕ್ಕ ಗುರು ಗೋವಿಂದ | ವಿಠ್ಠಲನೆ ಸಲಹೋ 7
--------------
ಗುರುಗೋವಿಂದವಿಠಲರು
ಅರಿಯಾರೊ ಅಂದಿಗಂದಿಗನ್ಯ - ಈ ಧರೆಯೊಳಿವರ ಮಹಿಮೆ ಘನ್ನ ಪ ಮರುತಾವೇಶಯುತ - ಉರಗಾಂಶರನ್ನ ಅ.ಪ ಪ್ರಲ್ಹಾದ ಲಕ್ಷ್ಮಣ ಬಾಹ್ಲೀಕÀ ವ್ಯಾಸನು ಇಲ್ಲೀಗ ರಾಘವೇಂದ್ರ ಉಲ್ಲಾಸ ಬಡುವನು 1 ಇನ್ನೂರ ನಾಲ್ವತ್ತು ಮುನ್ನೀಗ ಪೋದದ್ದು ನನ್ನುರ ಅರವತ್ತು ಇನ್ನು ಉಳಿದಿಹದು 2 ಎಲ್ಲೀ ನೋಡಲಿವರಿಲ್ಲದ ಸ್ಥಳವಿಲ್ಲ ಬಲ್ಲಾ ಭಕುತಗೆ - ಅಲ್ಲಲ್ಲೆ ತೋರುವದು 3 ಖುಲ್ಲ ನರರಿಗೆ - ಎಲ್ಲೆಲ್ಲಿ ಇಲ್ಲವೊ ಸಲ್ಲೋದು ನಿಶ್ಚಯ - ಸುಳ್ಳಲ್ಲ ಈ ಮಾತು 4 ದುಷ್ಟ ಜನರಿಗೆ ಇಷ್ಟಾರ್ಥ ಕೊಡುವೊನೊಮ್ಮೆ ಶಿಷ್ಟಾ ಜನರಿಗ ಭೀಷ್ಠಾವ ಕೊಡುವದು 5 ಇವರ ಪೂಜಿಪ ಜನ - ದಿವಿಜರು ನಿಶ್ಚಯ ಭುವನದೊಳಗೆ ಇನ್ನು ಇವರಿಗೆ ಸರಿಯುಂಟೆ 6 ಇವರನ ಒಲಿಸಲು ಪವನಾನು ಒಲಿವನು ಮಾಧವ ತಾನೆÀ ಒಲಿವÀನು 7 ಅಮಿತ ಮಹಿಮರೆಂದು ಪ್ರಮಿತರು ಪೇಳೋರು ಸುಮತಿಗಳ ಮನಕೆ ಗಮಿಸಿ ತಿಳಿಸುವದು 8 ದಾತಾ ಗುರು ಜಗನ್ನಾಥಾ ವಿಠಲ ಬಹು ಪ್ರೀತಿಯಿಂದಲಿ ಇವರ ಖ್ಯಾತಿಯ ಮಾಡೊದು 9
--------------
ಗುರುಜಗನ್ನಾಥದಾಸರು
ಆಲದೆಲೆಯ ಮ್ಯಾಲೆ ಮಲಗಿದ್ದಾದಿಕೇಶವ(ನ) ನೋಡ ಬನ್ನಿರಾಲದೆಲೆಯ ಮ್ಯಾಲೆ ಕೃಷ್ಣ ಬಾಲರೂಪ ಧರಿಸಿ ಅಂಧಕಾರ ಪ್ರಳಯ ಜಲದ ಒಳಗೊಂದಾಲದೆಲೆÉಯ ಮ್ಯಾಲೆ ಕೃಷ್ಣ ಪ ಪ್ರಳಯ ಕಾಲದಲ್ಲೆ ಹರಿಯು ಸರ್ವ ಜೀವರನೆಲ್ಲ ತನ್ನ ಉದರದೊಳಗಿಂಬಿಟ್ಟುಕೊಂಡು ಛಲವ ಮಾಡದಂತೆ ರಂಗ ಬೆರಳು ಬಾಯೊಳಗಿಟ್ಟು ಚೀಪುತ ಹರಳು ಮಾಣಿಕ್ಯದರಳೆಲೆ ಮಾಗಾಯಿ ಕೌಸ್ತುಭ ಕಟಿಸೂತ್ರ ಕರುಣ ಸಾಗರಗಿನ್ನು ವರ ವೈಕುಂಠವಾಸ ಒಂದಾಲದೆಲೆಯ ಮ್ಯಾಲೆ 1 ಅಷ್ಟು ಜೀವರನೆಲ್ಲ ತನ್ನ ಹೊಟ್ಟೆಯೊಳಗಿಂ ಬಿಟ್ಟು ಕೊಂಡು ಸೃಷ್ಟಿ ಲಯಕೆ ಕರ್ತನಾದ ಶ್ರೇಷ್ಠ ಸುಂದರಾಂಗ ತನ್ಹೆಬ್ಬೆಟ್ಟು ಬಾಯೊಳ ಗಿಟ್ಟು ಚೀಪುತ ವಕ್ಷಸ್ಥಳದಿ ಹೆಚ್ಚಿನ ಶ್ರೀವತ್ಸ ತೋರುತ ಉತ್ತಮ ವೈಜ(ಯಂ)ತಿ ವಜ್ರ ಕೆತ್ತಿದ ಕಿರೀಟ ಲಕ್ಷ್ಮೀಚಿತ್ತ ಚೋರನಾದ ಪರಮಾತ್ಮ ಪರಮ ಹರುಷದಿಂ ದ್ವೊಂದಾಲದೆಲೆಯ ಮ್ಯಾಲೆ 2 ಗಂಧ ಕಸ್ತೂರಿ ಪರಿಮಳ ಸುಗಂಧವಾದ ಕುಸುಮ ಕೆಲದಿ ಹೊಂದಿ ಕಟ್ಟಿದ ತುಳಸಿಮಾಲಿಕಿಂದೆ ಪರಮ ಶೋಭಿತವಾದ ಬಂದಿ ಕಂಕಣ ಬಾಹುಪ್ಪುರಿಗಳು ದುಂಡುಮುತ್ತಿನ ಕೂದಲ ಕಾಂತಿ ಕದಪಿಲೆಸೆಯಲು ಅಂದಿಗೆ ಪಾಗಡ ಗೆಜ್ಜೆ ಚೆಂದವಾದ ನಾದಗಳಿಂದ ಇಂದುಕೋಟಿ ರವಿಯ ತೇಜ ಮಂದಹಾಸ ಮುಖದ ಹರಿ ಒಂದಾಲದೆಲೆಯ ಮ್ಯಾಲೆ 3 ಥಳಥಳಿಸುವಂತ್ಹೊಳೆವೊ ಚಕ್ರ ಧವಳವರಣ ಶಂಖ ಕರದಿ ಹವಳದುಟಿಯು ಹರಿಯ ಪದ್ಮ ದಳಗಳಂತಕ್ಷಿಗಳ ಚೆಲುವ ಅರುಣನಂತೆ ಚರಣ ಕರದಲ್ಲಿ ಒತ್ತುವೊ ಸಿರಿಯ ಪರಮಪುರುಷ ನೋಡಿ ಸರಸದಿ ಜರ ಪೀತಾಂಬರ ನಾಭಿಕಮಲಕ್ಕೊಲೆವೊ ಒಡ್ಯಾಣವನೆ ಇಟ್ಟು ಹಲವು ಸೂರ್ಯರಂತೆ ಲಕ್ಷ್ಮೀರಮಣ ಶ್ಯಾಮವರಣ ಹರಿ ಒಂದಾಲದೆಲೆಯ ಮ್ಯಾಲೆ 4 ಅಳಕÀನಂದನ ಪಿತನು ತಾ ಘ- ನೋದಕÀದೊಳು ತಾ ರಂಗ ಚಾಮರ ಎಣಿಕಿಲ್ಲದೆ ಮಾ ಣಿಕ್ಯದಾಭರಣ ಫಣಿಪಮಂಚಶಯನ ನೀಲ ಕನಕರತ್ನ ಬಿಗಿದ್ಹಾಸಿಕೆಯಲಿ ಪಂಚಶರನ ಜನಕ ಜಗವ ನಿಟ್ಟು ತನ್ನಲ್ಲಿ ಅಳಕಗೂದಲು ಚೆಂಡಿಕೆಲ್ಲೆ ಅರಳುಮಲ್ಲಿಗೆ ಸುತ್ತಿಹರಿಗೆ ಝಳಕು ಮಿಂಚಿನಂತೆ ಜಗಕÉ ಬೆಳಕಿನÀಲಿ ಭೀಮೇಶ ಕೃ ಷ್ಣೊಂದಾಲದೆಲೆಯ ಮ್ಯಾಲೆ 5
--------------
ಹರಪನಹಳ್ಳಿಭೀಮವ್ವ
ಈತನೀಗಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದ ಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ. ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆ ಕೊಟ್ಟು ಶರ್ಮಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿ ತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವರಾಜ್ಯಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನಪೆತ್ತ ಚೆಲುವ ನಮಲಗಂಗೆಯಿತ್ತು ನಲಿವ ವಾಸುದೇವ 2 ಉರಗಶಯನ ಗರುಡಗಮನ ಪರಮಪದವನುಳಿದುಶೇಷ ಗಿರಿಯೊಳಿರ್ದುಬಂದ ವ್ಯಾಘ್ರಗಿರಿಯ ಶಿಖರಕೆ ಭರದಿ ನಿತ್ಯಮುಕ್ತರೊಡನೆ ಕರದಿ ಶಂಖಚಕ್ರಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದವಿಠಲ 3
--------------
ಸರಗೂರು ವೆಂಕಟವರದಾರ್ಯರು
ಈತನೀತನೆ ರಮಾನಿವಾಸನು ಕೇಳಿ ಜನರು ಈತನೀಗ ಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆಕೊಟ್ಟು ಶಮನಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವ ರಾಜ್ಯ ಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನ ಪೆತ್ತ ಚೆಲುವನಮಲ ಗಂಗೆಯಿತ್ತು ನಲಿವ ನಮರ ವೈರಿಗಳನು ಕೊಲುವ ಕಮಲನಾಭ ವಾಸುದೇವ2 ಉರಗಶಯನ ಗರುಡಗಮನ ಪರಮಪದನುಳದು ಶೇಷ ಗಿರಿಯೊಳಿರ್ದು ಬಂದ ವ್ಯಾಘ್ರಗಿರಿಯ ಶಿಖರಕೆ ಭರದಿನಿತ್ಯಮುಕ್ತರೊಡನೆ ಕರದಿ ಶಂಕ ಚಕ್ರ ಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದ ವಿಠಲ 3
--------------
ವೆಂಕಟವರದಾರ್ಯರು
ಎಂತುನುತಿಪೆ ನಾನು ಈ ಜಗದಂತರ್ಯಾಮಿಯನು ಪ ಪರಿಯವು ಸಂತತ ವಾಙ್ಮನ ಅ.ಪ ಸಾಸಿರಮುಖದವನ ಅವಯವಸಾಸಿರವುಳ್ಳವನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನನು 1 ಜಗವನು ನಿರ್ಮಿಸುವ ಬೊಮ್ಮನು ಮಗನೆಂದೆನಿಸಿರುವ ಬಗೆಯುವಡೀ ಜಗವ ಜಠರದಿ ನುಸುಳಿಕೊಂಡಿರುವ ಮ್ಮೊಗನೆಂಬುವರೀಯಗಣಿತ ಮಹಿಮನ 2 ನಿಗಮವ ಪೆತ್ತವನ ಬೊಮ್ಮಗೆ ನಿಗಮವನಿತ್ತವನ ನಿಗಮೋದ್ಧಾರಕನ ನಿತ್ಯದಿ ನಿಗಮಗೋಚರನ [ಸುಗುಣ]ಶ್ರೀಪದಯುಗಳಾಂಬುಜನನು 3 ಮಾಯಾಧೀಶ್ವರನ ದೇವನಿಕಾಯಾರಾಧಿತನ ಕಾಯಜ ಸುಂದರನಾ ಜೀವನಿಕಾಯಕೆ ಮಂದಿರನಾ ದಾಯಗೆಟ್ಟರನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ ತರಣಿಯೊಳಿರುತಿಹನ ಶರನಿಧಿ ಮಂದಿರನಾ ಶ್ರೀಪುಲಿಗಿರಿಯೊಳು ನಿಂದಿಹನಾ ಪೊರೆಯುವ ವರದವಿಠಲನ ನಾ5
--------------
ವೆಂಕಟವರದಾರ್ಯರು
ಎಂತುನುತಿಪೆ ನಾನು-ಈ ಜಗ | ದಂತರ್ಯಾಮಿಯನು ಪ ಸಂತತ ವಾಙÁ್ಮನ ಅ.ಪ. ಸಾಸಿರ ಮುಖದವನ-ಅವಯವ-ಸಾಸಿರವುಳ್ಳವನ ಸಾಸಿರ ಪೆಸರವನ-ರೂಪಿ ಸಾಸಿರವಾಗಿಹನ ಮೀಸಲಳಿಯದಂತೀ ಸಚರಾಚರ ವಾಸಿಯಾದ ಶ್ರೀ ವಾಸುದೇವನು1 ಜಗವನು ನಿರ್ಮಿಸುವ-ಬೊಮ್ಮನು-ಮಗನೆಂದೆನಿಸಿರುವ ಬಗೆಯುವದೀಜಗವ-ಜಠರದಿ-ನುಸುಳಿಸಿಕೊಂಡಿರುವ ಮಗುಳಿದ ನಳಿಯುವ ನಗಚಾಪರಮೊಮ್ಮಗನೆಂಬುವರೀ | ಯಗಣಿತ ಮಹಿಮನ 2 ನಿಗಮವ ಪೆತ್ತವನ-ಬೊಮ್ಮಗೆ-ನಿಗಮವನಿತ್ತವನ ನಿಗಮೋದ್ಧಾರಕನ-ನಿತ್ಯದಿ-ನಿಗಮಗೋಚರನ ಬಗೆಬಗೆಯೋಗಿಗಳ ಧ್ಯಾನಕೆನುಗಳಿದ ಶ್ರೀಪದ ಯುಗಳಾಂಬುಜನನು 3 ಮಾಯಾಧೀಶ್ವರನ-ದೇವನಿ-ಕಾಯಾರಾಧಿತನ ಕಾಯಜ ಸುಂದರನಾ-ಜೀವನಿ-ಕಾಯಕೆ ಮಂದಿರನಾ ಮಾಯಾಕಾರನಿವ ನಾಯವ ನರಿಯದೆ ದಾಯಗೆಟ್ಟರ ನ್ಯಾಯದಿ ಮುನಿಗಳು 4 ಪರಮಪದದೊಳಿಹನಾ ಪುನರಪಿ- ತರಣಿಯೊಳಿರುತಿಹನ ಶರನಿಧಿ ಮಂದಿರನಾ-ಶ್ರೀ ಪುಲಿಗಿರಿಯೊಳು ನಿಂದಿಹನ ನಿರುತವು ತನ್ನಯ ಚರಣವ ನಂಬಿದ ಶರಣರ ಪೊರೆಯುವ-ವರದ ವಿಠಲನಾ 5
--------------
ಸರಗೂರು ವೆಂಕಟವರದಾರ್ಯರು
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ಧಿ ಎನ್ನೊಳಗಿಲ್ಲ - ಗುಣಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ ಪ ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ 1 ಅನುದಿನ ಚರಿಸಲಿಲ್ಲಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ2 ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲಮದಗಜದಂತೆ ಮಕರಿಗೆ ಸಿಲ್ಕಿ ಒರಲಲಿಲ್ಲಗದರಿ ಶಿಶುಪಾಲನಂದದಿ ನಿನ್ನನುಪೇಕ್ಷಿಸಿ ಜರೆಯಲಿಲ್ಲ3 ಬುವಿಯೊಳು ಬಲಿಯಂತೆ ದಾನವ ನೀಡಲಿಲ್ಲಭವನಂತೆ ಶ್ಮಶಾನದಿ ಮನೆಮಾಡಿ ಸ್ಮರಿಸಲಿಲ್ಲತವ ಪುಂಡರೀಕನಂತೆ ಹಲಗೆಯಿಟ್ಟಿಗೆ ಮೇಲೆ ನಿಲಿಸಲಿಲ್ಲಭುವನದೊಡೆಯ ನೆಲೆಯಾದಿಕೇಶವನ ಮರೆಯಲಿಲ್ಲ4
--------------
ಕನಕದಾಸ
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ