ಒಟ್ಟು 23 ಕಡೆಗಳಲ್ಲಿ , 9 ದಾಸರು , 23 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಬ್ಜಭವಪಿತ | ಮದ್ಗುರ್ವಂತರ್ಯಾಮಿ | ಸಲಹಯ್ಯ ಕುಬ್ಜ ಮೂರುತಿ | ಯಾದ ಗುರು | ಗೋವಿಂದ ವಿಠಲಯ್ಯ ||ಪ| ಈಶ ತಂದೆ ವೆಂಕ | ಟೇಶ ವಿಠಲನ | ದಾಸ ಸಹವಾಸ |ದೋಷ ರಾಶಿಯ | ನಾಶ ಗೈಸಿತು | ಶ್ರೀಶ ಕೇಶವನೇ 1 ಮರಣ ಸಮಯದಿ | ಚರಣ ಪುಷ್ಕರ | ಭಜಿಸಿದ ಜಮಿಳನ |ಕರುಣದಿಂದಲಿ | ಮರೆದ ವೋಲ್ | ಎನ್ನ ಮನಕೆ ಬಾ ನಾರಾಯಣ 2 ಭೇದ ಮತವೆಂ | ಬಬ್ಧಿಯಲಿ | ಉದಿಸಿವೆನು ಕಾಣಯ್ಯ |ಮಧ್ವಪತಿ | ಮದ್ಭಾರ ನಿನ್ನದು | ಸಲಹೊ ಮಾಧವನೆ 3 ಗೋವಿದಾಂಪತಿ | ಗೋಪ ಪಾಲಕ | ಶ್ರೀಶ ಗೋವಿಂದಮಾವ ಕಂಸನ | ಕೊಂದಸಿರಿ | ಗೋವಿಂದ ಸಲಹಯ್ಯ 4 ಸಿರಿ | ಕೃಷ್ಣ ಬೇಡುವೆ | ಕಷ್ಟ ಬಿಡಿಸಯ್ಯ |ವೃಷ್ಟಿಕುಲ ಸಂ | ಪನ್ನ ಪಾವನ | ವಿಷ್ಣು ಮೂರುತಿಯೆ 5 ವೇದಗಮ್ಯ | ದಯಾಪಯೋನಿಧಿ | ಸಾಧು ವಂದಿತನೆ |ಮೋದದಿಂ | ತವಪಾದ ಪೂಜಿಪೆ | ಪಾಲಿಸೈ ಮಧುಸೂಧನ 6 ಕಾಯ ಮಮತೆಲಿ | ಕಟ್ಟೆ ಧರ್ಮಾತ್ಮ |ಭವದ ಭವಣೆಯ | ಬಿಡಿಸುವುದು | ಬಲಿವರದ ತ್ರಿವಿಕ್ರಮ 7 ವಿಮಲ ಸತ್ಕಲ್ಯಾಣ | ಗುಣ ನಿಸ್ಸೀಮ | ಸುಜ್ಞಾನಾಅಮರಾರಿಯ ಧ್ವರ | ಕೆಡಿಸಿ ಉಳಿಸಿದೆ | ಶೀಲ ವಾಮನ 8 ಹೃದಯ ಶೋಭಿತ | ಮೋದಮಯ | ಮಧ್ವಾಂತರಾತ್ಮಕನೇ |ಆದಿಮೂರುತಿ | ಸಾಧು ವಂದಿತ ಕಾಯೋ ಶ್ರೀಧರನೇ 9 ಭಂಜನ ಬಿಸಜ ಭವ ಪಿತ | ಈಶ ಸರ್ವೇಶಾ |ಒಸೆದು ಬೇಡುವೆ | ಕಸರು ಕರ್ಮವ | ಹರಿಸೋ ಹೃಷಿಕೇಶ 10 ಬದ್ಧ ಜೀವನ | ಅಬದ್ಧ ಮಾಡಲು | ತಿದ್ದಿ ಸೃಜಿಸಿದೆಯೋ |ಸದ್ಗುರುವೆ ಮತ್ | ಪೊದ್ದಿಕೆಯ ಕಳೆ | ಪದ್ಮನಾಭನೆ 11 ಸಿರಿ ಮನೋಹರ |ಧಾಮತ್ರಯ ಸು | ತ್ರಾಮ ವಂದಿತ | ಪಾಲಿಸೈ ದಾಮೋದರ 12 ಪಂಕ ಕಳೆಯಯ್ಯ |ವೆಂಕಟಾ ಬಿರು | ದಾಂಕ ಜಯ ಜಯ | ಸಂಕರುಷಣ 13 ವಿಶ್ವ ವ್ಯಾಪಕನೇಶ್ರೀಶ ಸದ್ಮನೆ | ವಾಸುದೇವನೆ | ಪೋಷಿಸೈ ಪರಮಾತ್ಮನೇ 14 ನಿರವದ್ಯ ಆಪನ್ನ ಪಾಲನೆ | ಪೊರೆಯೊ ಪ್ರದ್ಯುಮ್ನ 15 ಅನಿರುದ್ಧ 16 ಕರಿವರನು ತವ | ಚರಣ ಸರಸಿಜ | ನಂಬಿ ಮೊರೆಯಿಡಲು |ಕರದ ಚಕ್ರದಿ | ತರಿದು ನಕ್ರನ | ಬಿಸುಟ ದೊರೆ ಪುರುಷೋತ್ತಮ 17 ದರ ಚಕ್ರಧರ | ಅಧೋಕ್ಷಜ18 ತರಳ ಕರೆಯಲು | ಭರದಿ ಕಂಬದಿ | ಬಂದ ತ್ರಿಪದಾಹ್ವದುರುಳ ಹಿರಣ್ಯನ | ತರಿದು ಭಕ್ತನ | ಸಲಹಿದ್ಯೋ ನರಸಿಂಹನೆ 19 ಕಚ್ಛಪ ಅಚ್ಯುತ | ಸಲಹೊ ಚ್ಯುತಿ ದೂರ | 20 ಸಾನುಕೂಲವು | ಸಕಲ ಸಾಧನ | ನಿನ್ನ ಭಜಿಸುವಗೇ ಜ್ಞಾನಗಮ್ಯ | ಅನಾದಿ ರೋಗವ | ನೀಗೋ ನೀ ಜನಾರ್ಧನ 21 ಸ್ಮರ ಕೋಟಿ ಸುಂದರ | ಪಾಹಿ ಉಪೇಂದ್ರ 22 ಮರದಿ ಎಂಜಲ | ಸವಿದು ಶಬರಿಯ | ಕಾಯ್ದೆ ಮುರವೈರಿ ತ್ವರದಿ ತ್ವತ್ಪದ | ವನಜ ಕಾಂಬುವ | ಹದನರುಹು ಶ್ರೀಹರಿ 23 ಜಿಷ್ಣು ಸಖ | ಶಿಷ್ಟೇಷ್ಟಪರಿ | ಹರಿಸಯ್ಯ ಮುತೃಷ್ಣಾ |ಕೃಷ್ಣೆ ಗಕ್ಷಯ | ವಸನ ದಾತನೆ | ಕಾಯೊ ಶ್ರೀ ಕೃಷ್ಣ 24 ನಿರುತ ನಿನ್ನಯ | ಚರಣ ಪುಷ್ಕರ | ಮಧುಪನೆನಿಸಯ್ಯಸ್ಮರಿಪರಘ | ಪರಿಹರಿಪ ಗುರು | ಗೋವಿಂದ ವಿಠಲಯ್ಯಾ | 25
--------------
ಗುರುಗೋವಿಂದವಿಠಲರು
(ಋ) ಕ್ಷೇತ್ರವರ್ಣನೆ (1) ಮೇಲುಕೋಟೆ ಯತಿರಾಜ ಸಂಪತ್ಕುಮಾರಾ ಸ ತ್ಕøತದೊಳಗಿರಿಸೆನ್ನ ಧೀರಾ ಪ ಸತತ ಶ್ರೀಮದ್ವೈಷ್ಣವರನಾ ನುತಿಸುವಾನಂದ ದೊಳಗಿರಿಸೈ ಪತಿತಪಾವನ ಕಂಕಣಾಧ್ರುತ ಕ್ಷಿತಿಯ ಪಾಲ ಮಹಾನುಭಾವನೆ 1 ನೋಡಲಿಚ್ಚೈಸಿ ನಾಂ ಬಂದೆ ನನ್ನ ಮೂಢಾಕೃತದೊಳು ನಿಂದೆ ಕೇಡುಗಳು ಬಂದೆನ್ನ ವಿಧ ವಿಧ ಬಾಧೆ ಪಡಿಸುತ್ತಿರುವದಿದೆಕೊ ನೋಡಿ ಸುಜನರ ಕೂಡಿ ಭಜನೆಯ ಮಾಡುವೆನು ಶ್ರೀಮಾಧವಾಗ್ರಣಿ 2 ತುಲಶಿಮಣಿಹಾರ ಲೀಲಾ ಸ ತ್ಫಲತಂತ್ರ ದಾಸಾನುಕೂಲಾ ಕಾಲಕಲನಹುದೊ ಶ್ರೀಮನ್ ಬಾಲಬ್ರಹ್ಮಚಾರಿ ಮದ್ಗುರು ಮೇಲುಕೋಟೆಯೊಳಿರುವೊ ನಿಜವರ ಲೀಲಾಮಾನುಷವಿಗ್ರಹನೆ ನಿಜ ಯತಿರಾಜ ಸಂಪತ್ಕುಮಾರಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಆನಂದಾದ್ರಿ ವಾಸ | ವಿಠಲ ಪೊರೆ ಇವನಾ ಪ ಮಾನಮೇಯ ಜ್ಞಾನ | ಸಾನುಕೂಲಿಸಿ ಇವಗೆನೀನಾಗಿ ಪೊರೆಯೊ ಹರಿ | ಕೋನೇರಿವಾಸಾ ಅ.ಪ. ಚಿತ್ರ ಚಾರಿತ್ರ | ಶುಭಗಾತ್ರನೇ ಶತಪತ್ರನೇತ್ರಕರವಾದ ದ್ವಂದ್ವ | ಸೂತ್ರಾಂತರಾತ್ಮ |ಮಿತ್ರನಾನುಗ್ರಹಕೆ | ಪಾತ್ರನ ಸಲಹೊ ಮಾಕಳತ್ರನೇ ನಿನ್ನ ಸುಪ | ವಿತ್ರ ಪದ ನಮಿಪೇ 1 ಕರುಣವೆಂತುಟೊ ನಿನಗೆ | ಶರಣಜನ ವತ್ಸಲನೇಕರೆದೊಯ್ದು ಸ್ವಪ್ನದಲಿ | ಹರ ಗಿರಿಜೆ ತೋರೀ |ಮರಳಿ ಬ್ರಹ್ಮನ ಲೋಕ | ದರುಶನಾನಂದದಲಿಕರೆದೊಯ್ದು ಕರುಣಾಳು | ಸುರಸೇವ್ಯ ಬದರಿಗೆ 2 ದಶಮತಿಗೆ ಬೋಧಿಸುವ | ವ್ಯಾಸದರ್ಶನ ಭಾವಿದಶಮತಿಯ ಸಹವಿರುವ | ವ್ಯಾಸ ಭಕ್ತನ್ನಾ |ಹಸನಾಗಿ ತೋರಿ ನೀ | ವಸುಮತಿಗೆ ಕರೆತಂದುಬೆಸಸಿದೆಯಾ ಫಲದೈವ | ದರ್ಶನಕೆ ಇವನಾ 3 ಬದ್ಧನಾದರು ಇಹದಿ | ಶುದ್ಧ ಸಂಸ್ಕøತನಿಹನುಮಧ್ವಮತ ದಾಸತ್ವ | ಶ್ರದ್ಧೆಯುಳ್ಳವನೇಬುದ್ಧಿಯಲಿ ಎನಗೆ ಉ | ದ್ಬುದ್ಭವನೆ ಮಾಡ್ದ ಪರಿತಿದ್ದಿ ಅಂಕಿತವಿತ್ತು | ಬುದ್ಧಿ ಪೇಳಿಹೆನೋ 4 ಸಂಚಿತ ಕರ್ಮ | ತೀವ್ರದಲಿ ದಹಿಸೇಗೋವುಗಳ ಪಾಲ ಗುರು | ಗೋವಿಂದ ವಿಠ್ಠಲನೆಭಾವದಲಿ ಬಿನ್ನವಿಪೆ | ನೀ ವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಇಂದು ಕಂಡೆ ನಾ ಇಂದಿರಾಪತಿ ತಂದೆ ತಾಯಿ ಗೋವಿಂದನ ಬಂಧು ಬಳಗೆನಗೆಂದು ನಾ ನಂದ ಕಂದ ಮುಕುಂದನ 1 ಕಾಮಪೂರಿತ ಕಂಜಲೋಚನ ಸ್ವಾಮಿ ಕಾವನೈಯನ ಸಾಮಗಾಯನ ಪ್ರಿಯನ ಸೋಮಶೇಖರ ಧ್ಯೇಯನ 2 ಸಾನುಕೂಲ ಸಕಲಕ ಸಾಧನ ಭಾನುಕೋಟಿ ಪ್ರಕಾಶನ ಜ್ಞಾನಗಮ್ಯ ವಿನಾಶನ ದೀನ ಮಹಿಪತಿ ಈಶನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏಸು ಜನ್ಮದಲೇನು ಪುಣ್ಯಮಾಡಿದೆವೊ ಲೇಸಾಗಿನ್ನು ಸ್ವಾಮಿ ನಿಮ್ಮನ ಕಂಡೆವೊ ಧ್ರುವ ಸಾಧನವೆಂಥಾದೆಂಬುದು ನಾವಿನ್ನರಿಯೆವೊ ನಿಮ್ಮ ದರುಶನದಲಿ ಪಾವನಾದೆವೊ ಇದೆ ಸಕಲ ಸಾಧನದ ಸುಫಲವೊ ಸ್ವಾಮಿ ನಿಮ್ಮ ದಯಕ ಸಾನುಕೂಲವೊ 1 ಮನೋಹರ ಮೋಹನಮೂರ್ತಿ ಕಂಡೆವೊ ಕೃಷ್ಣ ನಿಮ್ಮನ ಬಿಗಿದಪ್ಪಿಕೊಂಡೆವೊ ನಾನಾಸವಿಯ ನೆಲೆಗಳೂಟ ಉಂಡೆವೊ ಎಂದೂ ಬಿಡದೆ ಹೃದಯಲಿಟ್ಟುಕೊಂಡೆವೊ 2 ಹೆಣ್ಣು ಪ್ರಾಣಿಗಳು ನಾವೇನು ಬಲ್ಲ್ಲಿವೊ ನಿಮ್ಮ ವಿನಾ ಇನ್ನೊಂದು ನಾವೊಲ್ಲಿವೊ ಚನ್ನಾಗೊಲಿದ ಭಾನುಕೋಟಿ ನಮ್ಮಲ್ಲಿವೊ ಚಿಣ್ಣಮಹಿಪತಿಗಿದೆ ಸಾಫಲ್ಯವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೀನ ಜನ ಅಭಿಮಾನವನು ನೀನು ಅನುದಿನದಲಿ | ರಕ್ಷಿಸುವೆ ಸಾನುಕೂಲದಿ | ಶ್ರೀ ನಿಧಿಯೆ ಧೀರ ಎಂದು | ವೀರ ಹರಿಮಾರ ಸಂಹಾರಸಖ ಕ್ರೂರ ಫಣಿದರ್ಪಹರನೇ | ಮುಕುಂದ ಮುಚಕುಂದ | ಪ್ರೀಯ ವರದನಾ ಮಾನಸದಿ ಅರಿತು ತವ ಕುರಿತು | ಭಕ್ತಿರತನಾಗಿಹ ಅನವರತ ಸುಖದಲಿಡುತಿಹ | ಕೃಷ್ಣಾ ಸಲಹು ಒಲವಿಂದ 1 ಅಂಕಿತ-ಕೃಷ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದೇಶಿಕರಿಗೆ ದೇವ ನೀನಹುದಯ್ಯ ಲೇಸು ಲೇಸಾಗಿ ಪಾಲಿಸೊ ಎನ್ನಯ್ಯ ಧ್ರುವ ಅನಾಥನಾಥ ನೀನೆ ಸಾನುಕೂಲ ಅನುದಿನ ಮಾಡುವೆ ನೀ ಪ್ರತಿಪಾಲ 1 ಅಣುರೇಣುಕ ಸಾಹ್ಯ ಮಾಡುವ ಸ್ವಾಮಿ ನ್ಯೂನ ನೋಡದೆ ತಪ್ಪು ಮಾಡುವಿ ಕ್ಷಮೆ 2 ನೀನೆ ಸಕಲಕೆಲ್ಲ ಸಲಹುವ ದಾತ ಜನವನದೊಳು ಘನಗುರು ಸಾಕ್ಷಾತ 3 ದೇವಾದೀದೇವ ಶ್ರೀದೇವ ಅವಧೂತ ಭವ ಹರ ಗುರು ನೀನೆ ಸದೋದಿತ 4 ದೀನಮಹಿಪತಿ ಸ್ವಾಮ್ಯಹುದೋ ಕೃಪಾಲ ಭಾನುಕೋಟಿತೇಜ ನೀನೆ ಅಚಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧನ್ಯನೋ ಶೇಷಗಿರಿದಾಸ ನೀನೂ ನಿತ್ಯ ಪ ಮುಂಗೈಯ ಮ್ಯಾಲಿನ ಗಿಳಿ ಹಾರಿಹೋದಂತೆ ರಂಗ ಮಧ್ವನ ಸ್ಮರಣೆ ಮಾಡಿಕೊಳುತ ಮಂಗಳಾಂಗನಾಗಿ ಸ್ವರ್ಗಸ್ಥನಾದಿ ಕ್ಷಣ ಭಂಗುರವೆಂಬ ಪ್ರಮಾಣ ಸಿದ್ಧಿಸಿತು ಗಡ 1 ಸತ್‍ಶಿಷ್ಯನೆಂದೆನಿಸಿಕೊಂಡದಕೆ ಎನ್ನ ಮ ನೋತ್ಸಾಹ ಮಾತ್ರ ಬಂದಾಗಲಿಲ್ಲಾ ವತ್ಸ ಕೇಳು ಉಪಸರ್ಗ ಕೂಡಿದ ನಾಭಿ ತತ್ಸಮಾನಾಯಿತೊ ಇಂದಿನಾರಭ್ಯವೂ2 ಒಂದೆ ಪ್ರವಾಹದೊಳು ಈಸು ಬೀಳಲು ಸುಳಿ ಯಿಂದ ಹಿಂದಕೆ ಒಬ್ಬನಿಂದಂತೇವೆ ಇಂದು ಎನಗಾಯಿತೊ ಭೂಮಿಯೊಳಗೆ ಋಣಾನು- ಬಂಧ ಇಂತಿರಲಿಕ್ಕೆ ಯತ್ನ ಒಬ್ಬರದಿಲ್ಲ3 ಪರಿಣಾಮಕೆ ನಿನಗೆ ಸಾನುಕೂಲಾವಾಗಿ ಅನಿಲದೇವನು ಒಲಿದು ಹರಿಯ ಕೂಡಾ ಪ್ರಣಮಪೂರ್ವಕದಿಂದ ಪಂಚತ್ವ ಐದಿದೆ ಸಾ- ಧನ ಪೂರ್ತಿಕಾಲ ಎಳ್ಳನಿತು ಉಳದಿಪ್ಪದೊ 4 ವಿಧಿ ಸಂವತ್ಸರ ಭಾದ್ರಪದ ಶುಕ್ಲದ ಭಾನು ಬಿದಿಗೆಯಲಿ ಪ್ರವರ ಗೌತಮ ಸಂಗಮಾ ನಿಧಿಯಲಿ ವಿಜಯವಿಠ್ಠಲನಂಘ್ರಿಯುಗಳವನು ಹೃದಯದಲಿ ಇಟ್ಟು ದೇಹವ ತ್ಯಾಗಮಾಡ್ದೆ 5
--------------
ವಿಜಯದಾಸ
ಪತಿ ವಿಠಲ | ಬುಧಜನೇಡ್ಯಾಮುದದಿಂದ ಲೀಕೆಯನು | ಸಲಹೊ ಶ್ರೀ ಹರಿಯೇ ಪ ನೊಂದು ಭವದಲಿ ಬಹಳ | ಇಂದಿರಾರಮಣ ತವಅಂದ ಪದದಾಸ್ಯ ಮನ | ಮಂದಿರದಿ ಬಯಸೀ |ಬಂದು ಬೇಡ್ದಳಿಗೆ ನಾ | ನೊಂದು ಅಂಕಿತವಿತ್ತೆತಂದೆ ತೈಜಸನೆ ನೀ | ನಂದೆ ಪೇಳ್ದಂತೇ 1 ಬಹಳ ಭಕ್ತಿಯಲಿಂದ | ವಿಹಿತ ಕರ್ಮಾಸಕ್ತೆಅಹಿಶಯ್ಯ ಕೃಪೆಯಿಂದ | ಮಹಿಮೆ ತೋರೀ |ಅಹಿತ ವಿಹಿತಗಳೆರಡ | ಸಹನೆ ದಯಪಾಲಿಸುತಮಹಮಹಿಮ ಪೊರೆ ಇವಳ ಸುಹೃತ ಜನರ ಬಂಧೋ2 ಜ್ಞಾನಾಯು ರೂಪನಿಗೆ | ನೀನಿವಳನೊಪ್ಪಿಸುತಸಾನುಕೂಲಿಸು ಮುಕುತಿ | ಜ್ಞಾನ ಭಕುತಿಗಳಾ |ಕಾಣೆ ತವ ಕಾರುಣ್ಯ | ಕೆಣೆಯು ತ್ರೈಭುವನದಲಿಮಾಣದಲೆ ಪೊರೆ ಇವಳ | ದೀನ ಜನ ಪಾಲಾ 3 ಪತಿ ಕೃಷ್ಣ | ಕಾಳಿಪತಿನುತ ಹರಿಯೆಕಾಳಘಾವಳಿಗಳನು | ಕಳೆದು ಪೊರೆ ಇವಳಾ4 ಪಾವನಾತ್ಮಕ ದೇವ | ಪಾವಮಾನಿಯ ಪ್ರೀಯಜೀವ ಪರತಂತ್ರತೆಯ | ಭಾವ ಅನುಭವದೀದೇವ ಸಾಧನಗೈಸಿ | ಜೀವಿ ಇವಳನು ಪೊರೆಗೋವಿಂದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ 1 ಘನ ದಯದಲಿ ಸಮರ್ಥ ಅನುಭವಕೆ ಸುತತ್ವಾರ್ಥ 2 ಸಾಹ್ಯಸಾನುಕೂಲದಾಗರ ಮಹಿಮೆ ನಿನ್ನದು ಅಪಾರ ಸ್ವಸುಖದ ಸಾಗರ ಮಹಿಪತಿಯ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡಿದ್ಯಾ ಇಂದಿಗೆ ಹೀಂಗ | ಆಗದ್ಹಾಂಗ || ಕೂಡಿ ದುರ್ಜನರೆಲ್ಲ ನಗುವ ಪರಿಯಲಿ ಪ ಏನು ಕಂಡು ಒಲಿದೀ ನೀ ಅವಗೆ | ಖಳನ ಘಾತಕಮನದವಗೆ | ತಾನು ದಾರೆಂದು ವಿಚಾರಿಸದಧಮಗೆ |ಸಾನುಕೂಲಾಗಿ ಸರ್ವ ಬಗೆಯಲಿ 1 ಸಾಧು ಸಂತರು ಎಂಬುದನರಿಯಾ | ಭೇದವಾದ ಕುಬುದ್ಧಿಯಮರೆಯಾ || ಕಾದಾಡಿ ಕರ್ಮದ ಹಾದೀ ಹಿಡಿಯದ | ವಾದಕಂಜದ ಜನ ಸಾಧಕನಿಗೆ 2 ಹಿಂದಿನ ಗುಣಗಳ ಬಿಟ್ಟ್ಯಾಕೋ | ಮಂದಿಗೆ ಪದವಿಯ ಕೊಟ್ಟ್ಯಾಕೋ ತಂದೆ ಸದ್ಗುರು | ಭವತಾರಕನಂಘ್ರಿಯ | ಹೊಂದಿದವರಿಗಭಿಮಾನವಿಲ್ಲದಂತೆ 3
--------------
ಭಾವತರಕರು
ಮುಕುಂದ ಹರಿ ವಿಠಲ | ಸಾಕ ಬೇಕಿವನಾ ಪ ಅಕಳಂಕ ಚರಿತ ಹರಿ | ವಿಖನ ಸಾಂಡೊಡೆಯ ಅ.ಪ. ಮೋದಮುನಿ ಸನ್ಮಾರ್ಗ | ಬೋದೆಯುಳ್ಳವನಿವನುವಾದಿರಾಜರ ಕರುಣ | ಪಾತ್ರನಿಹ ನೀತಾಸಾಧು ಸನ್ಮಾರ್ಗದಲಿ | ಆದರಣೆಯುಳ್ಳವನುಕಾರುಕೊ ಬಿಡದಿವನ | ಬಾದರಾಯಣನೇ 1 ಜ್ಞಾನಿಗಳ ವಂಶದಲಿ | ಜನುಮಪೊತ್ತಿಹನೀತಜ್ಞಾನಾನು ಸಂಧಾನ | ಪಾಲಿಸೀ ಇವಗೇಮೌನಿಗಳ ಸಹವಾಸ | ಸಾನುಕೂಲಿಸಿ ಹರಿಯೆಧ್ಯಾನಗೋಚರನಾಗೊ | ವೇಣುಗೋಪಾಲ 2 ಪಾದ | ಸದ್ಭಜಕ ನೆನಿಸೋಅಧ್ವೈತ ಪ್ರಕ್ರಿಯವ | ಪ್ರಧ್ವಂಸಗೈವಂಥಶುದ್ಧ ಮತಿಯನೆ ಇತ್ತು | ಉದ್ದರಿಸೊ ಇವನಾ 3 ಅಚ್ಯುತಾನಂತ ಹರಿ | ಉಚ್ಚರೊಳು ಉಚ್ಚನಿಹಉಚ್ಚ ನೀಚಗಳೆಂದು | ಸರ್ವ ಜೀವರೊಳುಸ್ವಚ್ಛ ತರತಮ ಬೇಧ | ಪಂಚಕವ ತಿಳಿಸಿವಗೆಸಚ್ಚಿದಾನಂದಾತ್ಮ | ಮಚ್ಛಾದಿ ವಪುಷಾ 4 ಭಾವುಕರ ಪರಿಪಾಲ | ದೇವರಾತನಿಗೊಲಿದೆಜೀವರಂತರ್ಯಾಮಿ | ವಿವಿಧ ರೂಪಾತ್ಮಾನೀವೊಲಿದು ಇವನೀಗೆ | ಸರ್ವದಾ ಪೊರೆಯಂದುದೇವ ಭಿನ್ನವಿಪೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು