ಒಟ್ಟು 2522 ಕಡೆಗಳಲ್ಲಿ , 120 ದಾಸರು , 1811 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಬದುಕಿದರಯ್ಯ ಹರಿ ನಿನ್ನ ನಂಬಿ ಪ ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ಅ ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ 1 ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ2 ತಿರುಪೆ ಕೂಳ್ ಪುಟ್ಟದೈ ಕೃಷ್ಣ3
--------------
ಕನಕದಾಸ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರ್ತನಾಭೀಷ್ಟವನು | ಪೂರ್ತಿಗೊಳಿಸೊ ಪ ಕಾರ್ತಸ್ವರ ಮೊದಲಾದ | ವಾರ್ತೆ ನಾನೊಲ್ಲೇ ಅ.ಪ. ಫಲ ಗಿಡೆಲೆ ಮರ ಬಳ್ಳಿ | ಜಲ ಬಿಂದು ನವ ನದಿಯುಜಲ ನಿಧಿಯು ವನಗಿರಿಯು | ಜಲ ಚರಾಚರಧೀ ||ಒಳ ಹೊರಗೆ ಸಂವ್ಯಾಪ್ತ | ಚಲಿಪೆ ನೆಲೆಯಿಲ್ಲದಲೆತಿಳಿಸೊ ತವ ಮಹಿಮೆಗಳ | ಅಲವ ಭೋದಾತ್ಮಾ 1 ಕಂಡ ನೀರೊಳು ಮುಳುಗಿ | ಅಂಡಲೆದು ಬೆಂಡಾದೆಪುಂಡರೀಕಾಕ್ಷ ಪದ | ಬಂಡುಣಿ ಎನಿಸದೇ ||ಹಿಂಡು ತೀರದ ಗತ | ಪಾಂಡುರಂಗನ ರೂಪಕಂಡು ಹಿಗ್ಗುವುದೆಂದೊ | ಕುಂಡಲಿಯ ಶಯನಾ 2 ಜ್ಞಾನಾಯು ರೂಪಕನೂ | ಪ್ರಾಣಾಂತರಾತ್ಮ ನಿನಜ್ಞಾನ ಕೊಟ್ಟು ಧರಿಸೊ | ಗಾನ ಪ್ರಿಯನೇ ||ಪ್ರಾಣನಿಗೆ ಪ್ರಾಣ ಗುರು | ಗೋವಿಂದ ವಿಠ್ಠಲನೆನೀನಾಗಿ ಒಲಿಯದಲೆ | ಅನ್ಯಗತಿ ಕಾಣೇ3
--------------
ಗುರುಗೋವಿಂದವಿಠಲರು
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ಪರಿ ಶುದ್ಧನಾದೆ ಗುರು ಕರುಣದಲೀ1 ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2 ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಸೋಜಿಗವು ಬಲು ತೀವ್ರದಲಿ 3 ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ | ಅಕ್ಷಯವಾಗುವದು ಇದ್ದ ಪುಣ್ಯ | ಮಾಳ್ಪ ಮನಸು ಪುಟ್ಟಿತು ನೋಡಾ4 ಓದನವು ಉದರದಲಿ ತುಂಬಲಾಕ್ಷಣದಲ್ಲಿ | ಜ್ಞಾನ ಬಂದೊದಗುವದು ಗುರು ಪೂರ್ಣ | ಬೋಧರಾ ಮತದಲ್ಲಿ ಲೋಲಾಡುವಾನಂದಾ 5 ದಧಿ ತಕ್ರ ಮೊದಲಾದ ವ್ಯಂಜನ ಉಣಲು | ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ | ರತಿಪತಿಪಿತನ ಪದಸೇವೆಯೊಳಗಿಪ್ಪವೊ 6 ಕೃಷ್ಣ ಸಂದರುಶನ ಮೃಷ್ಟಾನ ಭೋಜನ | ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ | ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7
--------------
ವಿಜಯದಾಸ
ಆವ ಪರಿಯಲಿ ನಿಮ್ಮನೊಲಿಸಿ ಮೆಚ್ಚಿಪ ವಿಧವುರವೆಯಷ್ಟು ತೋರದಲ್ಲ ಪ ದೇವ ದೇವೇಶ ನೀನೆಂದು ನಂಬಿರಲು ಕೃ-ಪಾವಲೋಕನದಿ ಸಲಹೊ ದೇವಅ ಫಣಿರಾಜನಾಸನದಿ ಕುಳಿತಿಹಗೆ ಅರಿವೆಯಾಸನವ ನಾನೆಂತ್ಹಾಸಲಿಘನವಾದ ಗಂಗೆಯನು ಪಡೆದವಗೆ ಕಲಶ ನೀರನದೆಂತು ಮೈಗೆರೆಯಲಿತನುವಿನ ಪರಿಮಳವು ಘಮಘಮಿಪನಿಗೆ ಸುಚಂದನವದೆಂತು ನಾ ಪೂಸಲಿಅನವರತ ನಾಭಿಯೊಳು ಶತಪತ್ರವಿಹಗೆ ಮಿಕ್ಕಿನ ಪೂವ ಮುಡಿಸಲೆಂತೈ ದೇವ 1 ಸುರುಚಿರೋಜ್ವಲ ಪೀತವಾಸನಿಗೆ ಉಡುಗೊರೆಯಅರಿವೆಯೇನನು ಪೊದಿಸಲಿವರ ಕೌಸ್ತುಭವು ಕೊರಳೊಳಗೆ ಇಪ್ಪವಗೆ ಆ-ಭರಣವಾವುದ ತೊಡಿಸಲಿತರಣಿ ಶತಕೋಟಿತೇಜನ ಮುಂದೆ ಹ್ಯಾಗೆ ನಾ-ಪೆರತೊಂದು ದೀಪವಿಡಲಿನೆರಹಿದ ಫಣಿಪತಿಯ ಸ್ತೋತ್ರದೂರನ ನಾನುಸ್ಮರಿಪೆನೆಂತಯ್ಯ ದೇವ ದೇವ 2 ವನಜಜಾಂಡ ಕೋಟಿಯುದರಂಗೆ ಆವುದನುಉಣಿಸಿ ತೃಪ್ತಿಯ ಮಾಡಲಿಅನಿಮಿಷರಿಗಮೃತವನ್ನೆರೆದವನ ತೃಷೆಯ ನೀ-ರಿನೊಳೆಂತು ಸಂತವಿಡಲಿವಿನತೆಯಾತ್ಮಜ ಪಕ್ಷದನಿಲನಿರೆ ಬೇರೆ ಬೀ-ಸಣಿಗೆಯನ್ನೇಂ ಬೀಸಲಿಅಣುರೇಣು ಪರಿಪೂರ್ಣ ಮೂರುತಿಗೆ ನಾ ಪ್ರದ-ಕ್ಷಿಣೆಯೆಂತು ಸುತ್ತಿಬರಲಿ ದೇವ 3 ಮಿಗೆ ಫಣಿಯ ಫಣದಾತಪತ್ರವಿರುವಂಗೆ ನೆರ-ಳಿಗೆ ಕೊಡೆಯನೇಂ ಪಿಡಿಯಲಿಪಗಲಿರುಳು ಸಾಮಗಾನ ಪ್ರಿಯನ ಮುಂದೆ ಗೀ-ತಗಳ ನಾನೇಂ ಪಾಡಲಿಜಗವರಿಯೆ ಲಕ್ಷ್ಮೀದೇವಿಪತಿಗೆ ಎಷ್ಟು ಹೊ-ನ್ನುಗಳ ದಕ್ಷಿಣೆಯ ಕೊಡಲಿನಿಗಮತತಿ ಕಾಣದಿಹ ಮಹಿಮನಿಗೆ ನಮಿಸುವಬಗೆಯ ನಾನರಿವೆನೆಂತೈ ದೇವ 4 ಒಲಿಸುವುದನರಿಯೆ ಮೆಚ್ಚಿಸುವ ಬಗೆಯರಿಯೆ ಹೊ-ಗಳುವ ಹೊಲಬ ನಾನರಿಯೆನುತಿಳಿದುದಿಲ್ಲವು ಷೋಡಶೋಪಚಾರದ ಪೂಜೆ-ಗಳಲೊಂದು ಪರಿಯಾದರೂನೆಲೆಯ ಕಾಣೆನು ನಿಗಮಶಾಸ್ತ್ರ ನವವಿಧ ಭಕ್ತಿ-ಯೊಳಗೊಂದು ಬಗೆಯಾದರೂಅಳಿಲಸೇವೆಯನೊಪ್ಪಿಸಿಕೊಂಡು ಶರಣನ ಸಲಹೊನೆಲೆಯಾದಿ ಕೇಶವನೆ ಸ್ವಾಮಿ - ಪ್ರೇಮಿ5
--------------
ಕನಕದಾಸ
ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1 ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2 ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
--------------
ವಿಜಯದಾಸ
ಆವ ರೋಗವೊ ಎನಗೆ ದೇವಧನ್ವಂತ್ರಿ ಪ. ಸಾವಧಾನದಿ ಕೈಯ ಪಿಡಿದು ನೀ ನೋಡಯ್ಯ ಅ.ಪ. ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ 1 ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವುಗುರುಹಿರಿಯರಂಘ್ರಿಗೆ ಶಿರ ಬಾಗದುಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವುಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ 2 ಅನಾಥಬಂಧು ಗೋಪಾಲವಿಠಲರೇಯಎನ್ನ ಭಾಗದ ವೈದ್ಯ ನೀನೆಯಾದೆಅನಾದಿ ಕಾಲದ ಭವರೋಗ ಕಳೆಯಯ್ಯನಾನೆಂದಿಗು ಮರೆಯೆ ನೀ ಮಾಡಿದುಪಕಾರ 3
--------------
ಗೋಪಾಲದಾಸರು
ಆವ ಸಾಧನದ ಗೋಜ್ಯಾಕೆ ನಿನ್ನ ಭಾವದೊಳಗೆ ಹರಿಯಿರಲಿಕ್ಕೆ ಪ ಜಾವಜಾವಕೆ ಗೋವಳರೊಡೆಯನ ಕೇವಲಭಕ್ತಿಯಿಂ ಕೂಗಲು ಸಾಲದೆ ಅ.ಪ ಎಷ್ಟು ಆಸನ್ಹಾಕಿದರೇನೋ ಬಲು ಕಷ್ಟದಿ ದೇಹದಂಡಿಸಲೇನೋ ಬೆಟ್ಟವೇರಿ ಕೂತರೆ ಏನೋ ಅನ್ನ ಬಿಟ್ಟು ಉಪವಾಸ ಮಲಗಿದರೇನೋ ಕಷ್ಟಹರಣ ಮಹ ಶಿಷ್ಟಪಾಲನೆಂದು ನಿಷ್ಠೆಯಿಂ ಭಜಿಸಲಿ ಸಾಕಾಗದೇನೋ 1 ತೊಪ್ಪಲ ತಿಂದು ಬಾಳಿದರೇನೋ ಮತ್ತು ತಿಪ್ಪೆಯೊಳಗೆ ಉಣಕೂತರೇನೊ ಕಪ್ಪೆಯಂತೆ ಜಲ ಮುಳುಗಿದರೇನೋ ಎಲೊ ಮುಪ್ಪಿನ್ಹದ್ದಿನಂತೆ ಮೇಲಕ್ಹೋದರೇನೋ ಅನುದಿನ ಮುಪ್ಪುರಾಂತಕನ ಗೌಪ್ಯದಿಂ ನೆನೆಯಲು ಸಾಕಾಗದೇನೊ 2 ಸೊಟ್ಟಿ ಹಾಕಿಕೊಂಡು ಪೋದರೇನೋ ಚರ್ಮ ಉಟ್ಟುಕೊಂಡು ತಿರುಗಿದರೇನೋ ಬಟ್ಟಿ ನುಂಗಿ ದೇಹ್ಯ ತೊಳೆದರೇನೋ ಬಲು ಕಷ್ಟದೆಷ್ಟು ಸಾಧಿಸಲೇನೋ ಕೆಟ್ಟಗುಣವ ಬಿಟ್ಟು ದಿಟ್ಟ ಶ್ರೀರಾಮನ ಗಟ್ಟ್ಯಾಗಿ ನಂಬಲು ಮುಕ್ತಿಕಾಣೊ 3
--------------
ರಾಮದಾಸರು
ಆವಭೂತ ಬಡಕೊಂಡಿತೆಲೊ ನಿನಗೆ ದೇವ ಕೇಶವನಂಘ್ರಿಧ್ಯಾಸವೆ ಮರೆದಿ ಪ ಸತಿಸುತರ ಮಮತೆಂಬ ವ್ಯಥೆ ಭೂತ ಬಡಿಯಿತೆ ಅತಿ ವಿಷಯಲಂಪಟದ ದುರ್ಮತಿಭೂತ ಹಿಡಿಯಿತೆ ಅತಿ ಸಿರಿಯಭೂತ ನಿನ್ನ ಮತಿಗೆಡಿಸಿತೇನೆಲೊ ರತಿಪತಿಪಿತನಂಘ್ರಿಸ್ತುತಿಯನೆ ಮರೆತಿ 1 ಸೂಳೆಯರ ಗಾಳ್ಯೆಂಬ ಹಾಳುಬವ್ವ ತಾಕಿತೇ ಕೀಳು ಸಂಸಾರದ ಮಹ ಗೋಳು ಭೂತ್ಹಿಡೀತೇ ಸಾಲಿಗರ ಭಯಭೂತ ನಾಲಿಗೆಯ ಸೆಳೆಯಿತೇ ನೀಲಶಾಮನ ಭಜನಫಲವೆ ಮರೆತೆಲ್ಲೊ 2 ಪೋದವಯ ಪೋಯಿತು ಆದದ್ದಾಗ್ಹೋಯಿತು ಪಾದದಾಸರಕೂಡಿ ಶೋಧಮಾಡಿನ್ನು ಭೂಧವ ಶ್ರೀರಾಮನ ಪಾದವನು ನಂಬಿ ಭವ ಬಾಧೆ ಗೆಲಿದಿನ್ನು ಮುಕ್ತಿ ಹಾದಿಯ ಕಾಣೊ 3
--------------
ರಾಮದಾಸರು
ಆವಭೇಧವಿಲ್ಲದವನೆ ನಿಜಜ್ಞಾನಿಯು ತನು ಭಾವವರಿತು ನಡೆಯುವನೆ ನಿಜ ಭಾಗವತನು ಪ ಮಾನ ಅಪಮಾನ ಸಮಕಾಣುವನೆ ಸಜ್ಜನನು ತಾನು ತನ್ನದೆಂಬ ಮಾಯವಳಿದವನೆ ಸಾಧು ಏನು ಕೊಟ್ಟರು ಒಲ್ಲೆನೆಂಬುವನೆ ಸನ್ಯಾಸಿ ದೀನರನು ಕಂಡು ಮನಮರುಗುವನೆ ಭಕ್ತ 1 ನಿಜಧರ್ಮವರಿಯದ ಪಾಮರನೆ ಶೂದ್ರನು ನಿಜವಾಕ್ಯಗಳ ಕೇಳಿ ಅಳಿವವನೆ ಭವಿಯು ಸುಜನರಿಗೆ ತಲೆಬಾಗಿ ನಡೆವವನೆ ಸಿದ್ಧಾಂತಿ ಕುಜನರ ಮಾತಿಗೊಳಪಡುವವನೆ ನರಕಿ 2 ಪಿಡಿದ ವ್ರತನೇಮಗಳ ಬಿಡದವನೆ ಕಡುಗಲಿ ಜಡದೇಹ್ಯಮೋಹವನು ತೊಡೆದವನೆ ಸತ್ಯ ಬಂಟ ಜಗದೊಳಗೆ ಒಡೆಯ ಶ್ರೀರಾಮನಡಿ ದೃಢಯುತನೆ ಮುಕ್ತ 3
--------------
ರಾಮದಾಸರು
ಆವರೋಗವೆ ಯೆನಗೆ ದೇವ ಧನ್ವಂತ್ರೀ ಪ ಸಾವಧಾನದಿಯೆನ್ನ ಕೈಪಿಡಿದು ನೋಡೋ ಅ ಪ ಹರಿಮೂರ್ತಿ ಕಾಣಿಸದು ಎನ್ನ ಕಂಗಳಿಗೆ ಹರಿಕೀರ್ತನೆ ಕೇಳದೆನ್ನ ಕಿವಿಗಳಿಗೆ ಹರಿಯ ಶ್ರೀಗಂಧವಾಘ್ರಾಣಿಸದೆನ್ನ ನಾಸಿಕವು ಹರಿಯಪ್ರಸಾದ ಜಿಹ್ವೆಗೆ ಸವಿಯಾಗದು 1 ಹರಿಪಾದ ಪೂಜಿಸೆ ಹಸ್ತಗಳು ಚರಿಸದು ಹರಿಗುರುಗಳಂಘ್ರಿಗೆ ಶಿರ ಬಾಗದು ಹರಿಯ ಸೇವೆಗೆ ಯೆನ್ನ ಅಂಗಗಳು ಚಲಿಸದು ಹರಿಯಾತ್ರೆಗೆನ್ನ ಕಾಲುಗಳೇಳದೋ 2 ಅನಾಥಬಂಧು ಶ್ರೀವಿಜಯವಿಠ್ಠಲರೇಯ ಯೆನ್ನ ಭಾಗ್ಯದ ಸ್ವಾಮಿಯಾಗಿ ನೀನೊ ಅನಾದಿಕಾಲದ ಘನರೋಗವನೆ ಬಿಡಿಸು ನಿನ್ನ ಉಪಕಾರವ ನಾನೆಂದಿಗೂ ಮರೆಯೇ 3
--------------
ವಿಜಯದಾಸ
ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ಭಜಿಸುವೆ ಪಸಾಕೊ ಸಂಸೃತಿಯಾಟವಿಷ್ಟರ ಮೇಲೆನೂಕೊ ರಾಗ ದ್ವೇಷಗಳ ಚನ್ನಾಗಿಕಾಕೋದರನಂತೆ ಕಾಡದೆ ಜನರನುಬೇಕೋ ಸಾಧನಗಳ ನೀ ಸಾಧಿಸಲು 1ಏಕೋ ಮೂಢನಂದದಿ ಸುಮ್ಮನಿರುವೆ ವಿವೇಕೋಪಚಯವ ಮಾಡು ಮನದಲಿಲೋಕೋಪಕಾರವ ನಡಸು ನಿಷ್ಕಪಟದಿಈ ಕೋಪವ ಬಿಟ್ಟರಿದಿರಾರು ನಿನಗೆ 2ಫಣ ಕೋಪಮನನಾಗಿ ಪಗಲ ಕಾಣದೆ ನಿನ್ನನಾ ಕೋಪಮೆಗೆ ಪೆಚ್ಚಿದ ನಿಜ ಸುಖವಾತಾಕೋ ಶ್ರೀ ಪಾದವನು ಗೋಪಾಲಾರ್ಯನಕೋ ಕೋ ಎಂದು ಕೊಡುವನು ಮುಕುತಿಯನು 3
--------------
ಗೋಪಾಲಾರ್ಯರು
ಇಟ್ಹಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ ಪ ಸೃಷ್ಟಿವಂದಿತ ಪಾದಪದುಮ ಶ್ರೀ ಹರಿಯೇ ಅ.ಪ. ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪಚಿನ್ನದ ಹರಿವಾಣದಲಿ ಭೋಜನಘನ್ನ ಮಹಿಮ ನಿನ್ನ ಕರುಣ ತಪ್ಪಿದ ಮ್ಯಾಲೆ ಕ-ದನ್ನ ಕಾಣದೆ ಬಾಯ್ಬಿಡಿಸುವೆಯೋ ಹರಿಯೇ 1 ಕೆÀಂಪಿಲಿ ಪೊಳೆವ ಪೀತಾಂಬರ ಉಡಿಸುವಿಸೊಂಪಿನಂಚಿನ ಶಾಲು ಹೊದಿಸುವಿಯೋಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆಕಪರ್ದಕ ಕೌಪೀನವು ದೊರೆಯದೋ ಹರಿಯೇ 2 ಚಂದ್ರಶಾಲೆಯಲ್ಲಿ ಚಂದ್ರಕಿರಣದಂತೊಪ್ಪುವಚಂದದ ಮಂಚದೊಳ್ಮಲಗಿಸುವಿಮಂದರೋದ್ಧರ ನಿನ್ನ ಮಮತೆ ತಪ್ಪಲು ಧರ್ಮಮಂದಿರದೊಳು ತೋಳ್ತಲಗಿಂಬು ಹರಿಯೇ 3 ನರಯಾನದೊಳು ಕ್ಷಣ ನರವರನೆನಿಸುವಿವರಛತ್ರ ಚಾಮರ ಹಾಕಿಸುವಿಕರುಣಾನಿಧೇ ನಿನ್ನ ಕರುಣ ತಪ್ಪಿದ ಮ್ಯಾಲೆಚರಣರಕ್ಷೆಯು ದೊರೆಯದು ಶ್ರೀಹರಿಯೇ 4 ಗಂಗಾಜನಕ ಪಾಂಡುರಂಗ ನಿನ್ನಯ ಭಕ್ತರಸಂಗವಿರಲಿ ದುಷ್ಟರ ಸಂಗ ಬ್ಯಾಡಅಂಗನೆಯರ ಕೂಡಿ ಅನಂಗಬಾಣಕೆ ಸಿಲುಕಿಭಂಗವ ಪಡಲಾರೆ ಶ್ರೀರಂಗವಿಠಲ ಹರಿಯೇ 5
--------------
ಶ್ರೀಪಾದರಾಜರು