ಒಟ್ಟು 189 ಕಡೆಗಳಲ್ಲಿ , 46 ದಾಸರು , 175 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸದ್ಗುರುವಿನ ಕೃಪೆ ಸದ್ಗತಿ ಸುಖದೋರಿತು ಧ್ರುವ ಮಸ್ತಕದ ಮ್ಯಾಲೆ ಅಭಯ ಹಸ್ತ ತಾವಿಡಲಿಕ್ಕೆ ಸ್ವಸ್ತಹೊಂದಿತು ಮನವು ವಸ್ತುದ ಸುಳವಿಲೆ 1 ಕರುಣಿಸಿ ನೋಡಲಿಕ್ಕೆ ಕರಗಿಹೋಯಿತು ಮಹಾಪಾಪ ಸೆರಗು ಸಿಲುಕಿತು ಸುಪಥ ಪರಮಾನಂದದ 2 ಹರುಷಾನಂದವಾಯಿತು ತರಳ ಮಹಿಪತಿಗೆ ಗುರುನಾಮಾಮೃತ ಸೇವಿಸಿ ವರಕೃಪೆಯಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸನ್ನುತ ಸತತ ಸದ್ಗುಣಪೂರ್ಣ ಪ್ರಥಮಾಂಗ ಸಂಪೂಜ್ಯ ಶರ್ವಮಿತ್ರ ಪ ಪ್ರತಿ ಪ್ರತಿ ಕ್ಷಣ ನಿನ್ನ ಪತಿತಪಾವನ ಪಾದ ಕ್ಕತಿ ದೈನ್ಯದಲ್ಲೆರಗಿ ಮೊರೆ ಇಡುವೆ ಪೊರೆಯೆಂದು ಅ.ಪ. ಕೋರಿದರೆ ಮನಕರಗಿ ಹಾರಿ ಬರುವಿಯೆಂದು ನಾರದರೆ ಮೊದಲಾದ ನಿಜಭಕ್ತರೆಲ್ಲ ಸಾರಿಹರು ಸರ್ವೇಶ ಸಾರತಮ ಸರ್ವರೊಳು ಘೋರ ಭವದಿಂದೆನ್ನ ಪೊರೆ ಎನಲು ಬರೆಯಂತೆ 1 ಕೃಪೆಯಿಂದ ನೀ ನೋಡೆ ಬ್ರಹ್ಮಾಂಡ ದೋಷಗಳು ಲುಪ್ತವಾಗುವುದಯ್ಯ ಒಂದೆ ಕ್ಷಣದಿ ನಿಪುಣನಾಗುವನವನು ಇಹಪರ ನಿಧಿ ಒದಗಿ ಅಪರಿಮಿತ ಸುಖ ಉಣುವ ಅಪ್ರತಿಮ ಕೀರ್ತಿಯು 2 ವಿಧಿ ಶಿವ ಶಕ್ತ ಸುರರಿಂದ ಸಂಸೇವ್ಯ ಜಯೇಶವಿಠಲ ಕೀರ್ತಿಪೂರ್ಣಾ ಪರಿ ದೋಷಗಳು ಪರಮ ಕೃಪೆ ವೀಕ್ಷಣದಿ ಪರಿಹರಿಸಿ ಬೆರೆ ಎನ್ನ ಪರಭಕ್ತಿ ನಿಧಿ ಇತ್ತು 3
--------------
ಜಯೇಶವಿಠಲ
ಸನ್ಮಾರ್ಗಪಿಡಿದು ಸದ್ವಸ್ತಿಯೊಳು ಬೆರೆದಿಹ ಸದ್ಬ್ರಹ್ಮರಿಗೆ ನಮಸ್ಕಾರ 1 ಸದ್ಗುರು ಕೃಪೆಯಿಂದ ಸದ್ಗತಿಯ ಪಡೆದಿಹ ಸದ್ಭಕ್ತರಿಗೆ ನಮಸ್ಕಾರ 2 ಅಧ್ಯಾತ್ಮವಿದ್ಯ ಸಾದ್ಯ ಮಾಡಿಕೊಂಡಿಹ ಬುದ್ಧಿವಂತರಿಗೆ ನಮಸ್ಕಾರ 3 ಸಿದ್ಧಾಂತ ಅನುಭವದ ಸಾಧನವು ಬಲಿದಿಹ ಶುದ್ಧ ಬುದ್ಧರಿಗೆ ನಮಸ್ಕಾರ 4 ಇದೆ ನಿಜತಿಳಿದಿಹ ಸದ್ಬೋಧದಲ್ಲಿ ಪೂರ್ಣ ಸದ್ಭಾವಿಗಳಿಗೆ ನಮಸ್ಕಾರ 5 ಆದಿತತ್ವದ ನೆಲೆಯು ಭೇದಿಸಿ ಬೆರೆದಿಹ ಬುದ್ದಜನರಿಗೆ ನಮಸ್ಕಾರ 6 ಕ್ರೋಧ ಕಳೆದು ಸದಾ ಶಾಂತಪದಹೊಂದಿದ ಸಾಧುರಿಗೆ ನಮಸ್ಕಾರ 7 ಭಿನ್ನ ಭೇದವನಳಿದು ತನ್ನ ತಾ ತಿಳಿದ ಸುಜ್ಞಾನಿಗಳಿಗೆ ನಮಸ್ಕಾರ 8 ಮೇಲ್ಗಿರಿಯೊಳಗಿಪ್ಪ ಮೂಲಮೂರ್ತಿಯ ತಿಳಿವ ನೆಲೆವಂತರಿಗೆ ನಮಸ್ಕಾರ 9 ಮಾಯಮೋಹವನಳಿದು ಸೋಹ್ಯ ಸೊನ್ನೆಯ ತಿಳಿದ ಮಹಾಮಹಿಮರಿಗೆ ನಮಸ್ಕಾರ 10 ಆರುಮೂರನೆ ಗೆದ್ದು ಏರಿ ತ್ರಿಪುರ ದಾಟಿ ಮೀರಿಹರಿಗೆ ನಮಸ್ಕಾರ 11 ಮನಕರಗಿ ಘನ ಬೆರೆದು ತಾನೆ ತಾನಾಗಿಹ ಮೋನ ಮುಗ್ಧರಿಗೆ ನಮಸ್ಕಾರ 12 ತತ್ವಮಸಿ ಅರ್ಥದಿತ್ಯರ್ಥವನು ತಿಳಿದಿಹ ಮುಕ್ತಜನರಿಗೆ ನಮಸ್ಕಾರ 13 ತಾನರಿತು ಸುಖಿಯಾಗಿ ಇನ್ನೊಬ್ಬರಿಗೆ ಕಣ್ದೆರೆಸುತಿಹರಿಗೆ ನಮಸ್ಕಾರ 14 ತರಳ ಮಹಿಪತಿ ಹೊರೆವ ಅರುಹು ಕುರುಹವನಿತ್ತ ಗುರುಹಿರಿಯರಿಗೆ ನಮಸ್ಕಾರ 15
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸದೆ ಹೊಳೆಯ ಹೃದಯದೊಳಿಹ್ಯ ಗೆಳಿಯ ಧ್ರುವ ಸಾಧಿಸಬೇಕೊಂದು ಪಾಲ ಭೇದಿಸಿ ನೋಡುವದ್ಹತ್ತುಪಾಲ ಎದುರಿಡುವಂತೆ ಗೋಪಾಲ ಬುಧಜನ ಪ್ರತಿಪಾಲ 1 ಸಾಧನವೆಂಬುದೆ ಸುಪಥ ಬೋಧವೆ ಸದ್ಗುರುಮಾರ್ಗ ಸ್ವಹಿತ ಸದಮಲಾನಂದಭರಿತ ಇದೇ ಶಾಶ್ವತ 2 ಸಾಧಿಸಿ ಸದ್ಗುರು ಕೃಪೆಯಿಂದ ಭೇದಿಸು ಮಹಿಪತಿ ನಿನಗಿಂದು ಚೆಂದ ಹೃದಯದೊಳ್ಹಾನ ಮುಕುಂದಬದಿಯಲಿ ಗೋವಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸಿ ನೋಡಿ ನಿಜ ಖೂನ ಸದ್ಗುರು ಕೃಪೆಯಿಂದ ಸ್ವಸುಖದ ನಿಧಾನ ಧ್ರುವ ಸಹಜಾವಸ್ಥೆಗೆ ಬಂದು ನೋಡಿ ಸಹಜ ಸದ್ವಸ್ತು ಬಾಹುದು ತಾನೆ ಕೈಗೂಡಿ ದೇಹ ದಂಡನೆಂಬುದು ಬ್ಯಾಡಿ ಸಾಹ್ಯಮಾಡುವ ಗುರುಸೇವೆ ಪೂರ್ಣಮಾಡಿ 1 ಸಾಧನವೆಂಬುದೆ ಸಾಕ್ಷೇಪ ಭೇದಿಸಿ ನೋಡಲಿಕ್ಕಿದುವೆ ವಸ್ತು ತಾಂ ಸಮೀಪ ಆದಿ ಅನಾದಿ ಸ್ವರೂಪ ಸಾಧಿಸಿದವನೆ ತಾ ಮೂರುಲೋಕ ಆಪ 2 ಎಲ್ಲಕ್ಕೆ ಮೇಲು ಗುರುಭಕ್ತಿ ಅಲ್ಲೆಸಲ್ಲದು ಮತ್ತೆ ಮುಂದೆ ಬೇಕೆಂಬ ಉಕ್ತಿ ಇಲ್ಲೆ ತಿಳಿಕೋ ನೀ ಮಹಿಪತಿ ಸುಲಭದಿಂದ ಸಾಧಿಸಿಕೊಂಡು ನಿಜಯುಕ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವಾಗಿ ನೋಡಿ ನಿಜ ಭಾವಬಲಿದು ನೋಡಲಿಕ್ಯದೆ ವಸ್ತು ಸಹಜ ಧ್ರುವ ಹತ್ತಿಲಿದೆ ತಾ ಸರ್ವಕಾಲ ಚಿತ್ತೊಂದೆ ಮಾಡಿ ನೋಡು ಗುರುಪಾದ ಕಮಲ ನೆತ್ತಿಯೊಳಗದೆ ನಿಶ್ಚಲ ಉತ್ತಮೋತ್ತವಾದ ಸದ್ವಸ್ತು ಅನುಕೂಲ 1 ಅತ್ತಿತ್ತಲೆ ನೋಡಲಾಗದು ತುಂಬಿ ತುಳುಕುವದು ಸುತ್ತೆ ಸೂಸ್ಯಾಡುತಲಿಹುದು ಮತ್ತೆ ಉನ್ಮನವಾಗಿ ತನ್ನೊಳು ತಾ ನೋಡುವದು2 ಸಾರವೆ ಅದೆ ಸತ್ಯನೋಡಿ ಮಿಥ್ಯ ಭ್ರಾಂತನೆ ಈಡಾಡಿ ಗುರುಕೃಪೆಯಿಂದ ನಿಜಗೂಡಿ ತರಳ ಮಹಿಪತಿ ಹರುಷಗೈದ ಬೆರೆದಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವಾಗಿ ನೋಡೋ ಸ್ವಾಮಿ ಸದ್ಗುರು ಶ್ರೀಪಾದ ಬೋಧ ಧ್ರುವ ತಿರುಗಿ ನೋಡೋ ನಿನ್ನ ನೀನು ಅರಿತು ಸ್ವಾನುಭವದಿಂದ ಕರಗಿ ಮನ ನೋಡಿ ನಿಜದೋರುತದೆ ಬ್ರಹ್ಮಾನಂದ ಸೆರಗವಿಡಿದು ಸೇರು ಬ್ಯಾಗೆ ಗುರುಕರುಣ ಕೃಪೆಯಿಂದ ಪರಮ ಸುಪಥವಿದೆ ವರಮುನಿಗಳಾನಂದ 1 ಹಚ್ಚಿ ನಿಜಧ್ಯಾಸವಂದು ಕಚ್ಚಿಕೊಂಡಿರೋ ಸುಹಾಸ ಮುಚ್ಚಿಕೊಂಡು ಮುಕ್ತಿ ಮಾರ್ಗ ನೆಚ್ಚಿರೋ ನಿಜಪ್ರಕಾಶ ಹುಚ್ಚುಗೊಂಡು ಹರಿಯ ರೂಪ ಅಚ್ಚರಿಸೋ ನಿರಾಶ ಎಚ್ಚತ್ತು ನಿನ್ನೊಳಗೆ ಬೆರೆಯೋ ಘನಸಮರಸ 2 ಸಾವಧಾನವೆಂದು ಶ್ರುತಿ ಸಾರುತದೆ ತಾ ಪೂರ್ಣ ಸುವಿದ್ಯ ಸುಖವಿದು ಸಾಧಿಸು ಅನುದಿನ ಪಾವನ್ನಗೈಸುದಿದೆ ಮಹಿಪತಿ ಜೀವಪ್ರಾಣ ಭಾವ ಬಲಿದು ನೋಡಲಿಕೆ ದೋರುತದೊ ನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸುಗ್ಗಿ ಸುಕಾಲಾಯಿತು ಜಗದೊಳಗೆ ಅಗ್ಗಳತ್ಯಾಯಿತು ಗುರುದಯಲೆನಗೆ ಧ್ರುವ ಭಕ್ತಿ ಭೂಮಿಯು ಕೈಗೊಟ್ಟಿತು ಪೂರ್ಣ ತತ್ವೋಪದೇಶ ತಿಳಿಯಿತು ನಿಧಾನ ಭಕ್ತರಿಗಿದರಿಡುವದು ಅನುದಿನ ಮುಕ್ತಿಯ ಫಲ ಮುನಿಜನರಾಭಣ 1 ಮಳೆಗರಿಯಿತು ಮಹಾಗುರುದಯ ಕರುಣ ಬೆಳೆಬೆಳೆಯಿತು ಮಹಾ ಸುಙÁ್ಞನದ ಸ್ಫುರಣ ತಿಳಿಯಿತು ಬರವಿದು ಭವಬಂಧನ ಕಳೆಯಿತು ಕಾಂಕ್ಷೆ ಹುಟ್ಟುವ ಹೊಂದುಣ2 ಮನೋಹರವಾಯಿತು ಗುರುಕೃಪೆಯಿಂದ ಜನವನದೊಳು ಕಾಣಿಸಿದ ಗೋವಿಂದ ಅನುಭವ ಸುಖವಿದು ಬ್ರಹ್ಮಾನಂದ ಘನಸುಖಪಡೆದ ಮಹಿಪತಿ ಇದರಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆಯಿಂದ ಅನುಭವಿಸಲು ಬ್ರಹ್ಮಾನಂದ ಧ್ರುವ ಶಿಖಾಮಧ್ಯದಲಿ ಪೂರ್ಣ ಸುಖಗರವುತಲ್ಯದೆ ಸಂತ್ರಾಧಾರಿ ಸಕಲವೆಲ್ಲಕೆ ಸನ್ಮತವಾಗಿ ತೋರುವದೊಂದೇ ಪರಿ ಶುಕಾದಿ ಮುನಿಗಳು ಪ್ರಕಟಿಸಿ ಹೇಳಿಹರು ಖೂನದೋರಿ ಬೇಕಾದರೆ ಇದು ನೋಡಬೇಕು ಷಡುಚಕ್ರವೇರಿ 1 ಸಾಮಾನ್ಯವಲ್ಲವಿದು ಸಹಸ್ರ ಕೋಟಿಗೊಬ್ಬ ಬಲ್ಲ ಖೂನ ಕಾಮಾಂಧದೊಳಗಿದ್ದ ಮನುಜ ಪ್ರಾಣಿಗಳು ಬಲ್ಲವೇನ ತಾಮಸಿಗಳಿಗಿದು ತಾರ್ಕಣ್ಯವಾಗುವದಲ್ಲ ಗಮ್ಯಸ್ಥಾನ ಸ್ವಾಮಿ ಸದ್ಗುರು ದಯಮಾಡಿದರಹುದು ಸಮ್ಯಗಜ್ಞಾನ 2 ಶಿರೋರತ್ನವಾಗಿ ವಂದಿಸಿಕೊಂಬುವದಿದೆಲ್ಲಕೆ ಪೂಜ್ಯ ಹರುಷಗೈಸುವ ಪುಣ್ಯ ಪರಮ ಭಕ್ತರಿಗಿದೆವೆ ಸಾಯೋಜ್ಯ ತರಳ ಮಹಿಪತಿಗಿದೆ ಸ್ವ ಸುಖದೋರುವ ಸುಸಾಮ್ರಾಜ್ಯ ಶಿರದಲಿ ಕರವಿಟ್ಟು ತೋರಿದ ಗುರು ಭಾನುಕೋಟಿತೇಜ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಣ್ಣು ಕೊಳ್ಳಿರೋ ಪುಣ್ಯವಂತರು ಹಣ್ಣು ಕೊಳ್ಳಿರೋ ಹಣ್ಣು ಕೊಳ್ಳಿರಯ್ಯಾನ್ನಂತ ಗುಣಮಹಿಮೆಯುಳ್ಳ ಧ್ರುವ ಹಣ್ಣು ಬಂದದೆ ನೋಡ್ಯಾನಂದೋ ಬ್ರಹ್ಮಾಪಾಟಿಯಿಂದ ಕಣ್ದೆರದು ಕೊಂಡವರು ಧನ್ಯ ಧನ್ಯರೊ 1 ಹಣ್ಣಿಗೊಂದು ಹೆಸರು ಇಲ್ಲ ಇನ್ನೊಂದು ಕೊಸರು ಇಲ್ಲ ಚೆನ್ನಾಗಿ ಉನ್ಮನವಾಗಿ ಹಣ್ಣ 2 ಅಣ್ಣಗಳ ಬಂದು ಕಣ್ಣುಗೆಟ್ಟು ಹೋಗಬ್ಯಾಡಿ ಸಣ್ಣ ದೊಡ್ಡರೊಳಗಿಹ್ಯ ಹಣ್ಣ 3 ಉತ್ತುಮರುದ್ದೇಶವಾಗಿ ಮತ್ತೆ ಹತ್ತುಭಾರೆ ತುತ್ತಿಗೊಮ್ಮೆ ಬಾಯಿದೆರೆವ ಹಣ್ಣು 4 ಬಿತ್ತಿಬೆಳೆದ ಫಲವಲ್ಲ ಹೊತ್ತುಮಾರುವದಲ್ಲ ಚಿತ್ತದೊಳಗ್ಹತ್ತಿಲಿಹ ಹಣ್ಣು 5 ನಾಲ್ಕು ಮಂದಿ ತಿಳಿಯದೆ ಹೋಕಹೋದರಾರು ಮಂದಿ ಪುಕ್ಕಸಾಟಿ ದಣಿದರ್ಹದಿನೆಂಟು ಮಂದಿ ಕಾಣಿರೋ 6 ಹಣ್ಣು ಕೊಂಡು ಮಹಿಪತಿಯ ಪುಣ್ಯ ಪೂರ್ವಾಜಿತ ತಾನೆಧನ್ಯ ಧನ್ಯವಾದ ಗುರುಕೃಪೆಯಿಂದ ಕಾಣಿರೋ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮಂತ ದೇವರು (ದಂಡಕ) ಅಂಜನಿಯ ಉದರದಿಂ ಪುಟ್ಟುತಾರ್ಭಟಿಸುತಲಿ ಕಂಜಮಿತ್ರಂಗೆ ಹಾರ್ದೆ ಧೀರಾ ವಾಯುಕುಮಾರಾ ರಣರಂಗಧೀರಾ ಕದನಕಂಠೀರಾ ದಿನಮಣಿಯ ಪಿಡಿದು ನುಂಗುವೆನೆಂಬೊ ಸಮಯದೋಳ್ ಬರಲು ದೇವತೆ ನಿಕರಗಳೆಲ್ಲಾ ಬೆದರಿಸಿದಿ ಎಲ್ಲಾ ಭಾಪು ಭಲ ಭಲ್ಲ ಭಾರತಿಯ ನಲ್ಲ ಸೂರ್ಯಸುತನಂ ಕಂಡು ಪಂಪಾಸರೋವರದಿ ಭಾಸ್ಕರಾನ್ವಯಗೆರಗಿ- ದೆಂದು ಜಯ ಜಗದ್ಬಂಧು ಕಾರುಣ್ಯಸಿಂಧು ಸೀತಾಪತಿಯ ಕರುಣದಿಂದ ಗಗನಕ್ಕೆ ಖ್ಯಾತಿಯಿಂದಲಿ ಬ್ಯಾಗ ಬೆಳದಿ ವೃಷಿಗಳನಳದಿ ದೈತ್ಯರ ತುಳದಿ ರಾಮಮುದ್ರಿಯ ಕೊಂಡು ಅಜನಸುತ ಸಹಿತಾಗಿ ನೇಮದಿಂ ಶರಧಿಯಂ ನೋಡಿ ದುರಿತಗಳ ದೂಡಿ ಪಾಡಿ ಕೊಂಡಾಡಿ ಕೋಟಿ ಸಿಡಿಲಬ್ಬರಣೆಯಿಂದ ಜಲಧಿಯ ಜಿಗಿದು ದಾಟಿದಿ ಲಂಕಾಪುರ- ವನ್ನು ಪೇಳಲಿನ್ನೇನು ಭುಜಬಲವನ್ನು ತೃಣಬಿಂದು ಋಷಿಯ ಕಾಣುತಲಲ್ಲಿ ಕುಣಿದಾಡಿ ಪರಿಪರಿಯ ಚೇಷ್ಟೆ- ಗಳಿಂದ ಮಾಡಿದೈ ಛಂದ ಅಂಜನೆಯ ಕಂದ ಪುನಹ ಲಂಕೆಗೆ ಹಾರಿ ಲಂಕಿಣಿಯ ಸಂಹರಿಸಿ ಭೂಜಾತೆಯನು ಅರಸು- ತಲ್ಲಿ ಅತಿರೋಷದಲ್ಲಿ ತಿರುತಿರುಗುತಲ್ಲಿ ರಾಮನಾಮಾಮೃತವ ಜಿಹ್ವಾಗ್ರದೋಳ್ ಸುರಿವ ಭೂವಿಜಯ ಚರಣಮಂ ಕಂಡು.... ಮಾಡಿದೈ ಗಂಡು ರಘುವರನ ಮುದ್ರೆಯನಿತ್ತು ನಿಜಮಾತೆಗೆ ಹರುಷಬಡಿಸಿದಿ ಹನೂ- ಮಂತಾ ಗುರುಮುನಿಯ ಶಾಂತಾ ದಿವಸಾಧಿಪತಿಕೋಟಿತೇಜದಿಂ ಮೆರೆವಂಥಾ ಜಯ ಹನುಮ ಭೀಮ ಬಲವಂತಾ ಬಾಲದಿಂ ಬೆಂಕಿಯಂ ಹಚ್ಚಿ ಲಂಕಾಪುರವ ಲೀಲೆಯಿಂದಲಿ ದಹನಮಾಡಿ ಸುತ್ತ ಓಡ್ಯಾಡಿ ದೈತ್ಯರಂ ಕಾಡಿ ಸುರನಿಕರವಂದು ಆಕಾಶಮಾರ್ಗದಿ ಎಲ್ಲ ದೇವದುಂದುಭಿನಾದ ಗೈದು ..................................ಮಹಿಮೆ ಹೌಧೌದು ತ್ರಿಭುವನದೊಳಗಧಿಕನೈ ಕದರುಂಡಲಗಿರಾಯಾ ಅಭಯಮಂ ಕೊಡು ಎನ್ನ ಧೊರೆಯೆ ನಾ ನಿನ್ನ ಮರೆಯೆ ಅಗಡಿಪುರದಲಿ ನಿನ್ನ ಕೃಪೆಯಿಂದ ಪೇಳ್ದೆನೈ ಸೊಗಸಿನಿಂದ ಇಡು ಮಹಾರಾಯ ಅವನಾಯುಗೇಯಾ ಹನುಮಂತರಾಯಾ ಶ್ರೀಹನುಮಂತಗೌಡರ್À ಬಹಾದ್ದೂರರನ್ನು ಸರ್ಪಸುತಪುರದಲ್ಲಿ ಕಾಯ್ವ ಇಷ್ಟಾರ್ಥವೀವ ಭಕುತ ಸಂಜೀವ ಶ್ರೀ ಹನುಮಂತ ದಂಡಕವ ಕೇಳ್ದರ್ಗೆ ಇಹಪರದಿ ಶ್ರೀಹರಿಯೆ ಬಂದು ಅವರಲ್ಲಿ ನಿಂದು ಕಾರುಣ್ಯಸಿಂಧು ಪರಾಕು ಪರಾಕು
--------------
ಕದರುಂಡಲಗಿ ಹನುಮಯ್ಯ