ಒಟ್ಟು 430 ಕಡೆಗಳಲ್ಲಿ , 79 ದಾಸರು , 383 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು
ತಿಳಿ ಸತ್ಯರೂಪವÀ ಪರಮಾನುಭವವ ಸುವಿಚಾರದಿಂದ ಯೋಚಿಸು ಜೀವಾ ಪ ನಾ ನೀನು ಎನುವಾ ಇದು ಅದು ಎನುವ ನಾನಾತ್ಮಭಾವಾ ಪುಸಿಯಿದು ಜೀವಾ ಏನೊಂದು ಮಿಲ್ಲದೆ ತಾನುಳಿದಿರುವ ಸ್ವಾನುಭವಾತ್ಮಾ ಸತ್ಯನಾಗಿರುವ 1 ಕರ್ತೃವೆನಿಸದ ಭೋಕ್ತøವೆನಿಸದ ಅನಿಸಿಕೆಯಳಿದಾ ನಿತ್ಯನಿರಂಜನ ಮಾಯಾವಿಲಾಸದಿ ತೋರುವನೀಪರಿ ಕನಸಿನೊಲಿದುವೇ ಪುಸಿ ಈ ಜಗವು 2 ಅವಿಚಾರಗಳಿಗೆ ಬೇರಾಗಿ ತೋರೇ ಸುವಿಚಾರದಿಂ ನೋಡೇ ತಿಳಿವುದು ಇದುವೇ ಅದೇ ಪರಮಾತ್ಮನೇ ನೀನಿರುವಿಯಿದೋ ಗುರು ಶಂಕರರಾರ್ಯನ ವರಬೋಧವಿದೋ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿಸು ದಾಸನ ನಿರುತ ನಿಲಯ ಕರುಣಾರ್ಣವ ತಿಳಿಯದಾಡಿದ ವಚನ ಹೊಲೆಗಲಿಸದಿಳೆಯೊಳು ಪ ಗುಪಿತದಿಂ ತವಪಾದ ಜಪಿಸಿ ಆನಂದಿಸದೆ ಅಪರಾಧಿಯಾಗಿರುವೆ ಕೃಪೆಯಿಂದ ಕ್ಷಮಾಮಾಡಿ 1 ಬಿನುಗುಮತಿಗೈದಂಥ ಘನತಪ್ಪುಗಣಿಸದೆ ಚಿನುವiಯಾತ್ಮನೆ ಬೇಗ ಕನಿಕರದಿ ಮೊರೆ ಕೇಳಿ 2 ಸುಲಭಭಜಕರಿಗತಿ ಚೆಲುವ ಶ್ರೀರಾಮಯ್ಯ 3
--------------
ರಾಮದಾಸರು
ತಿಳೀಮನವೇ ತಿಳೀಮನವೇ ತಿಳೀಮನವೇ ತಿಳಿ ಸಂಪೂರ್ಣ ಸುಖತಾಣಾ ತಿಳಿ ಸಂಪೂರ್ಣ ಸುಖತಾಣಾ ಸಾವಿನ ಬಾಧೆಯ ನೀಗುವಿ ನಿಜವಾಗೀ ಸಾವಿನ ಬಾಧಾ ಭಾವಾತೀತನ ನೀ ತಿಳೀಮನವೇ ಪ ನೋಡು ನೀನೇ ಆತ್ಮಸ್ವರೂಪಾ ಪೇಳಿದ ಗುರುಭೂಪಾ ಪೇಳ್ದೆ ಗುರುಭೂಪಾ ದೂಡು ದೇಹಾದಿಗಳ ತಾಪಾ ನೋಡುನಿಜರೂಪಾ ನೀ ನುಡಿಮನಗಳಿಗೂ ಕಡೆಯಾಗಿರುವ ಅಡಗಿದ ಗೂಢವಿದು ತಿಳೀಮನವೇ 1 ಕರ್ಮ ಪಾಶಕೆ ಕಠಾರಿಯಿದು ಜ್ಞಾನಾ ಮರ್ಮವಿದು ಘನಶಾಂತಿಯಾ ಸ್ಥಾನಾ ಧರ್ಮಾಧರ್ಮವ ಮೀರಿಹ ತಾಣ ದುರ್ಮತಿಯಾ ಬಿಡು ಜಾಣಾ ಘೋರತರದ ಸಂಸಾರದ ನಾಶಾ ಪೂರಣಗೊಂಬುದು ಆಶಾ ಪರಾಶಾಂತಿಗಿನ್ನೊಂದನು ಕಾಣೆ ಗುರುಶಂಕರನಾಣೇ ಗುರುಶಂಕರನಾಣೇ ತಿಳೀಮನವೇ 2
--------------
ಶಂಕರಭಟ್ಟ ಅಗ್ನಿಹೋತ್ರಿ
ತೀರ್ಥ ಪಿಡಿದವರೆಲ್ಲ ತಿರುನಾಮಧಾರಿಗಳೆ - ಜನ್ಮ ಪ ಸಾರ್ಥಕವಿಲ್ಲದವರೆಲ್ಲ ಭಾಗವತರೆ ಅ ಮೂಗ್ಹಿಡಿದು ನೀರೊಳಗೆ ಮುಳುಗಿ ಜಪತಪ ಮಾಡಿನಿಗಮಾಗಮ ಪುರಾಣಗಳನೋದಿ ತಿಳಿದುಬಾಗಿ ಪರಸ್ತ್ರೀಯರನು ಬಯಸಿ ಕಣ್ಣಿಡುವಂಥಯೋಗ ಭ್ರಷ್ಟರೆಲ್ಲ ದೇವ ಬ್ರಾಹ್ಮಣರೆ ? 1 ಪಟ್ಟೆ ನಾಮವ ಬಳಿದು ಪಾತ್ರೆ ಕೈಯಲಿ ಹಿಡಿದು ಗುಟ್ಟಿನಲಿ ಜಪಿಸುವ ಗುರುತರಿಯದೆಕೆಟ್ಟ ಕೂಗನು ಕೂಗಿ ಹೊಟ್ಟೆಯನು ಹೊರೆವಂಥಪೊಟ್ಟೆಗುಡುಮಗಳೆಲ್ಲ ಪರಮ ವೈಷ್ಣವರೆ ? 2 ಲಿಂಗಾಂಗದೊಳಗಿರುವ ಚಿನ್ಮಯವ ತಿಳಿಯದೆಅಂಗಲಿಂಗದ ನೆಲೆಯ ಗುರುತರಿಯದೆಜಂಗಮ ಸ್ಥಾವರದ ಹೊಲಬನರಿಯದ ಇಂಥಭಂಗಿಮುಕ್ಕಗಳೆಲ್ಲ ನಿಜ ಲಿಂಗವಂತರೆ ? 3 ಅಲ್ಲಾ ಖುದಾ ಎಂಬ ಅರ್ಥವನು ತಿಳಿಯದೆಮುಲ್ಲ ಶಾಸ್ತ್ರದ ನೆಲೆಯ ಮುನ್ನರಿಯದೆಪೊಳ್ಳು ಕೂಗನು ಕೂಗಿ ಬಗುಳಿ ಬಾಯಾರುವಂಥಕಳ್ಳ ಸುಳ್ಳರಿಗೆಲ್ಲ ವೀರ ಸ್ವರ್ಗವುಂಟೆ ?4 ವೇಷ ಭಾಷೆಯ ಕಲಿತು ಗೋಸಾಯಿ ಉಡೆದೊಟ್ಟುಆಸೆಯನು ತೊರೆಯದೆಯೆ ತಪಕೆ ಕುಳಿತುವಾಸನೆಯ ಗುರುತಿನಾ ಹೊಲಬನರಿಯದ ಇಂಥವೇಷಧಾರಿಗಳೆಲ್ಲ ಸಂನ್ಯಾಸಿಗಳೆ ? 5 ಆರು ಚಕ್ರದ ನೆಲೆಯ ಅಷ್ಟಾಂಗ ಯೋಗದಲಿಮೂರು ಮೂರ್ತಿಯ ಮೂರು ಕಡೆಯೊಳಿರಿಸಿಮಾರ ಪಿತನಹ ಕಾಗಿನೆಲೆಯಾದಿ ಕೇಶವನಸಾರಿ ಭಜಿಸಿದವರಿಗೆ ಕೊರೆವ ಕೊರತೆಯುಂಟೆ ? 6
--------------
ಕನಕದಾಸ
ತುಳಸಿ ಸ್ವೀಕರಿಸೆನ್ನಯ ಪೂಜೆಯ ತುಳಸೀ ಲೋಕೋತ್ತರನರಸೀ ಪ ಈ ಕರಗಳು ಧನ್ಯಗಳಾಗಲಿ ಮನ ವ್ಯಾಕುಲ ಪರಿಹರಿಸಮ್ಮ ಜನನಿ ಅ.ಪ ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಫುಲ್ಲ ಕುಸುಮವಿರಲು ಒಲ್ಲನು ಹರಿ ನೀನಿಲ್ಲದ ಪೂಜೆಯ ಬಲ್ಲರಿದನು ಜ್ಞಾನಿಗಳು ಮಾತೆ 1 ವಂದಿಸಿ ನಿನ್ನಯ ಚರಣಗಳಿಗೆ ಫಲ ಗಂಧ ಪುಷ್ಪಗಳನರ್ಪಿಸುವೆ ಬೃಂದಾವನಲೋಲನ ವಲ್ಲಭೆ ಮೃದು ಮಂದಹಾಸವನು ತೋರೆ ಮಾತೆ 2 ನೀನಿದ್ದೆಡೆ ಹರಿ ತಾನಿರುವನು ಅನು ಮಾನವಿಲ್ಲವೆನಗೆ ನೀನಾಗಿರುವೆ ಪ್ರಸನ್ನವದನೆ 3
--------------
ವಿದ್ಯಾಪ್ರಸನ್ನತೀರ್ಥರು
ತೂಗಿರೆ ಗುರುಗಳ ತೂಗಿರೆ ಯತಿಗಳ ತೂಗಿರೆ ದಾಸಗ್ರೇಸರರ ನಾಗಶಯನನು ರಾಗವ ಪಡೆದಂಥ ಯೋಗಿವರೇಣ್ಯರ ತೂಗಿರೆ ಪ ಈ ಮಹಿಯೊಳು ಪುಟ್ಟಿ ಶ್ರೀಮುದತೀರ್ಥ ಸು- ನಾಮದಿ ಕರೆಸುವರ ತೂಗಿರೆ ಆ ಮುದತೀರ್ಥ ಪದ್ಮನಾಭ ನಾಮದಿಂದಿರುವರ ತೂಗಿರೆ1 ರಾಮನ ತಂದಿತ್ತ ನರಹರಿ ಮುನಿಪರ ಮಾಧವ ತೀರ್ಥರ ತೂಗಿರೆ ಆಮ- ಹಾವಿದ್ಯಾರಣ್ಯರನ ಗೆಲಿದಂಥ ಶ್ರೀ ಮದಕ್ಷೋಭ್ಯರ ತೂಗಿರೆ 2 ಕಾಕಿಣಿತೀರಸ್ಥ ಟೀಕಾಚಾರ್ಯರೆಂಬೊ ನಾಕಪಾಂಶಜರನ ತೂಗಿರೆ ಶ್ರೀಕೃಷ್ಣ ತಟದಿ ಜಿತಾಮಿತ್ರರೆಂಬೊ ಪಿ- ನಾಕಿ ಅಂಶಜರನ ತೂಗಿರೆ 3 ರಾಜರಂದದಿ ಸುಖಭೋಜನ ಕೃದ್ಯತಿ ರಾಜ ಶ್ರೀಪಾದರ ತೂಗಿರೆ ವ್ಯಾಜದಿ ವಿಜಯ ಸಾಮ್ರಾಜ್ಯರೆನಿಸಿ ವ್ಯಾಸರಾಜರು ಮಲಗ್ಯಾರ ತೂಗಿರೆ 4 ವಾದಿಗಳನು ಯುಕ್ತಿವಾದದಿ ಗೆಲಿದಂಥ ವಾದಿರಾಜರನ್ನ ತೂಗಿರೆ ಮೇದಿನಿಯೊಳು ಕೃಷ್ಣದ್ವೈಪಾಯನರೆಂಬೊ ವೇದವ್ಯಾಸಾತ್ಮಜರ ತೂಗಿರೆ 5 ಪರಿಮಳ ರಚಿಸಿದ ವರಹಜ ತೀರಸ್ಥ ಇರುಳು ಕಾಲದಲಿ ತರಣಿಯ ತೋರಿದ ಗುರುಸತ್ಯ ಬೋಧರ ತೂಗಿರೆ 6 ಪರಮತ ಖಂಡನ ನಿರುತದಿ ಮಾಡಿದ ಗುರುವರದೇಂದ್ರರ ತೂಗಿರೆ ಗುರು ಭುವನೇಂದ್ರರ ಕರಜವ್ಯಾಸತತ್ವ ವರಿತ ಯತೀಶರ ತೂಗಿರೆ 7 ವರಭಾಗವತಸಾರ ಸರಸದಿ ರಚಿಸಿದ ಗುರುವಿಷ್ಣು ತೀರ್ಥರ ತೂಗಿರೆ ಪರಮ ಕ್ಷೇತ್ರಕೂಡಲಿಯೊಳಗಿರುವಂಥ ಗುರುರಘುವೀರರ ತೂಗಿರೆ 8 ಹರಿಯ ಮಹಿಮೆಯನ್ನು ಸರಸದಿ ಪೇಳಿದ ಪುರಂದರ ದಾಸರ ತೂಗಿರೆ ಹರಿಸರ್ವೋತ್ತಮನೆಂದು ಸುರಮುನಿ ಗರುಹಿದ ಗುರು ವಿಜಯದಾಸರ ತೂಗಿರೆ 9 ಬನ್ನವ ಬಿಡಿಸಿ ಶಿಷ್ಯನ್ನ ಪಾಲಿಸಿದ ಭಾಗಣ್ಣ ದಾಸರನ್ನು ತೂಗಿರೆ ಘನ್ನ ಹರಿಯಗುಣ ವರ್ಣಿಸಿದಂಥ ಜ ಗನ್ನಾಥ ದಾಸರ ತೂಗಿರೆ 10 ಮಾನವಿರಾಯರ ಪ್ರಾಣಪದಕರಾದ ಪ್ರಾಣೇಶದಾಸರ ತೂಗಿರೆ ವೇಣುಗೋಪಾಲನ್ನ ಗಾನದಿ ತುತಿಸಿದ ಆನಂದದಾಸರ ತೂಗಿರೆ 11 ವಾಸ ಆದಿಶಿಲಾಧೀಶನ್ನ ಭಜಿಸಿದ ಶೇಷ್ಠ ದಾಸರನ್ನ ತೂಗೀರೆ ಶ್ರೇಷ್ಠ ಕಾರ್ಪರ ನರಕೇಸರಿಗತಿಪ್ರೀಯ ದಾಸೋತ್ತಮರನ್ನ ತೂಗೀರೆ 12
--------------
ಕಾರ್ಪರ ನರಹರಿದಾಸರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾರಿಗಾಣದಯ್ಯ ಕಣ್ಣಿಗೆ ದಾರಿ ತೋರಿಸಯ್ಯಾ ಪ ಪಾರುಗಾಣದ ಸಂಸಾರ ವಾರಿಧಿಯಲಿ ಪಾರುಗಾಣಿಸಯ್ಯ ಮಾರನ ಪಿತನೇ ಅ.ಪ ಯಾರಿಗೆ ಮೊರೆಯಿಡಲಾರು ಕೈಹಿಡಿವರು ಧಾರಿಣಿಯೆ ಅಂಧಕಾರವಯ್ಯ ಸಾರಸನಾಭ ನೀ ಕಾರುಣ್ಯಾಮೃತ ಬೀರದಿದ್ದರೆ ಎನ್ನ ಗತಿಏನೋ ರಂಗ1 ಸತಿಸುತರೆನಗತಿ ಹಿತರೆಂದೆನ್ನುತೆ ಸತತ ನಂಬಿ ಸತ್ಪಥವನು ಮರೆತಂತೆ ಪತಿತನಾದೆನಗೆ ನೀ ಗತಿದೋರದಿದ್ದರೆ ಪತಿತನಾಗಿರುವುದೇ ಗತಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದುರಿತ ಪರಿಹರಿಸೋ ಭಾರಕನು ನೀನು ಪಾದ ಹೊಂದಿದವರಿಗೆಯಿನ್ನು ಪ ಮಾನವ ನಾನು ಮನ ಖಚಿತವಿಲ್ಲದ ಕಂದರಕೆ ಬಿದ್ದು ಬಹುಕಷ್ಟ ಪಡುತಾ ಸಂದೇಹವಾನು ಬಿಡದೆ ಸಂಶಯಿಸಿ ನಿನ್ನೊಮ್ಮೆ ಎಂದು ಕೊನಿಮದ ದೋಷದಿಂದ ಅದರಿಂದಾ 1 ಕಷ್ಟವನು ಪಡುವಾಗ ಕೃಷ್ಣ ನೀನೆ ಗತಿಯೆಂದು ಅಷ್ಟು ಮಾತ್ರ ಸುಖಬರಲು ಅರಿತು ನಿನ್ನ ನಿಷ್ಠರಾದವರನಾಸಂಖ್ಯ ಅರಿಯೆನು ಮಾಡ್ದ ದುಷ್ಟ ಬುದ್ಧಿಗಳಿಂದ ದುರುದ್ದೇಷದಿಂದಾ 2 ನೀನೆ ಸೂತ್ರಧಾರನಾಗಿರುವೆ ಸಕಲಕ್ಕೂ ನಾನೊಂದೂ ಅರಿಯದಜ್ಞಾನಿ ಹರಿಯೆ ಏನಾದರಾಗಲಿ ಇನ್ನು ಎನ್ನನು ಬಿಡದೆ ನೀ ದಯಮಾಡಿ ರಕ್ಷಿಸೋ ನಿಜ 'ಹೊನ್ನ ವಿಠ್ಠಲಾ 3
--------------
ಹೆನ್ನೆರಂಗದಾಸರು
ದೂತನಾ ಮನೆಗೆ ಬಂದ ಕಾರಣ ಪೇಳೋ ದಾತಾ ಪ ಪಾತಕವ ಪರಿಹರಿಸಿ ಪರಿಪಾಲಿಸುವುದಲ್ಲದೇ ಮತ್ತಾವಕಾರಣ ಅ.ಪ. ಸಂಸಾರಿಗೆ ಇನ್ನು ಘೋರ ದುರಿತಕೊಳಗಾಗಿರುವ ಶರಣರಿಘರುಷ ವರ್ಷಗರೆಯುವುದಲ್ಲದೇ 1 ತವ ಚರಣದಲಿ ಕುಳಿತು ನೀರು ಕುಡುವೆನೆಂದರೆ ದಾರಿಗಾಣೆಯೋ ರಾಯಾ 2 ಸುಮನಸರ ಪ್ರೀಯಶ್ವಾಸ ಜಾಪಕ ಪ್ರಾಶ ವಿಷನನುಜ ತಂದೆವರದಗೋಪಾಲವಿಠಲನ ದಾಸಾ 3
--------------
ತಂದೆವರದಗೋಪಾಲವಿಠಲರು
ದೂರ ನೋಡದಿರೆಲೊ ರಂಗಯ್ಯಾ ಪ. ಭವ ಮಡುವಿನೊಳಗಿರುವೆನೋ ಪಿಡಿಯೆನ್ನ ಕೈಯ ತಡಮಾಡ ಬ್ಯಾಡಯ್ಯ ಅ.ಪ. ಹಿಂದೇಸು ಜನ್ಮಂಗಳು ಬಂದು ಪೋದಾವಯ್ಯ ಮುಂದಿನಾಗತಿಯು ತೋರದಯ್ಯಾ ತಂದೆ ತಾಯಿ ಸರ್ವ ಬಂಧು ಬಾಂದವಾ ಕಂದರ್ಪ ಪಿತನೆ1 ಆರು ಕಾಯುವರಿಲ್ಲಾ ಮುರಾರಿ ನಿನಗೆ ಸಾರಿದೆನಲ್ಲಾ ಸೇರಿಸೋ ಸಾಧು ಜನರ ಸಹವಾಸಾ ಹರಿ ನಿನ್ನಲ್ಲಿ ಮನಸು ನಿಲ್ಲಿಸು ಶ್ರೀಶಾ ಶ್ರೀನಿವಾಸಾ 2 ಯೆಷ್ಟು ಹೇಳಲಿ ಯನ್ನ ಕಷ್ಟ ಕೇಳುವರಿಲ್ಲ ಅರಿಷ್ಟ ಸಂಸಾರದೊಳೂ ಕೆಟ್ಟು ಪೋಗುವೆನು ದೃಷ್ಟಿಯಿಂದಲಿ ನೋಡೆನ್ನ ಕಾಳಿಮರ್ಧನಕೃಷ್ಣವಾ 3
--------------
ಕಳಸದ ಸುಂದರಮ್ಮ
ದೂರು ಯಾತಕ್ಕೆ ತರಲ್ಯಮ್ಮಾ | ಯಶೋದಮ್ಮ || ವಾರಿಜ ಮುಖಿಯರು ಶೇರದೆ ಹೇಳ್ವರು ಪ ವಂದು ದಿನ ನಾ ಮನಿಯ ಬಿಟ್ಟು ಹೋಗುವೆನೆಯಲ್ಲ್ಯೊ | ಬಂದು ಹೇಳುವರೆಲ್ಲ ಕೇಳು ಗೋಕುಲದೊಳು | ಸಂದು ಸಂದನೆ ತಿರುಗಿ ಮಂದಗಮನಿಯರು | ಹೊಂದಿ ಒದಗಿ ಬಾಯಂದದ್ದು ನಿಜಮಾತು 1 ಯನ್ನ ಮಾತನ್ನು ಸುಳ್ಳಾದರೆ | ಗೋವಳ್ಹಾರೇ ಮನ್ನಿಸಿ ಬದಿಗೆ ಕರೆದುಕೇಳು | ಅವರಿಗೆ ಹೇಳು ಕನ್ಯೆಯರೆಲ್ಲಾ ಬಂದು ಬೆಣ್ಣೆಗಳ್ಳನೆಂದು ಕಣ್ಣಿಲಿ ನೋಡದೆಯನ್ನ ದಂಡಿಸುವರೇ2 ಪರರ ಮನೆಯೊಳಗಿರುವ ಮಡಿಕೆ ಪಾತ್ರೆ ನಿನಗ್ಯಾಕೆ | ಸ್ಥಿರ ಕ್ಷೀರಾಂ ಬುಧಿಶಯನನಾಗಿ | ಇರವದು ಆಗಿ | ಪುರದ ಸ್ತ್ರೀಯರು ಯಲ್ಲ ದೊರೆ ಹೆನ್ನೆ ವಿಠಲನೆಂದು ಮರೆತು ಹೇಳಲಿ ಬಹು ಸ್ಥಿರವಾಗಿ ಮಾಡುವರೇನೆ 3
--------------
ಹೆನ್ನೆರಂಗದಾಸರು
ದೇವ ಕರುಣಾಳು ನೀ ಕಾವಲಾಗಿರುವುದಕೆ ಆವ ವೇತನ ಕೊಡುವೆ ಶ್ರೀ ವರನೆ ನಿನಗೆ ಪ. ರೂಢ ಕೈಪಿಡಿದು ಕಾಪಾಡುತಿಹ ಬಿರುದ ಪಾಡಿ ಪೊಗಳುತ ನಮಿಸಿ ಬೇಡಿಕೊಂಬುವೆನು ನಾ ಮಾಡಿದಪರಾಧಗಳು ನೋಡಲದ್ಭುತವು 1 ನಡೆ ತಪ್ಪು ನುಡಿ ತಪ್ಪು ನಿಂತಲ್ಲಿ ಬಹು ತಪ್ಪು ಖಡುಮೋಹ ಕೃತ ತಪ್ಪು ಕಾಮಕೃತ ತಪ್ಪು ಮಾಡದಿ ಮನೆ ಮಿತ್ರ ಧನ ಒಡವೆಯಾಶೆಯು ತಪ್ಪು ಒಡೆಯನೀ ಕ್ಷಮಿಸೆಂದು ವಂದಿಸುವೆ ನಿಂದು 2 ಯುಕ್ತಾಯುಕ್ತವನರಿಯೆ ಎನ್ನಹಂಕೃತಿ ಮರೆಯೆ ಭಕ್ತಿ ಮುಕ್ತಿದ ಸರ್ವ ಶಕ್ತಿ ಶ್ರೀ ಹರಿಯೆ ಭಕ್ತವತ್ಸಲ ವೆಂಕಟಾದ್ರಿ ಶೇಖರ ಸಿರಿಯೆ ಯುಕ್ತಿಯಿಂದಲಿ ಎನ್ನ ಪಾಲಿಸುವ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ