ಒಟ್ಟು 1877 ಕಡೆಗಳಲ್ಲಿ , 112 ದಾಸರು , 1510 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇತ್ತ ಬಾರೊ ಒಲವುತ್ತ ಬಾರೊಹತ್ತವತಾರದ ಚಿತ್ರಚಾರಿತ್ರ ಎನ್ನತ್ತ ಬಾರೊಪ. ಒದ್ದು ಶಕಟನ ಮುರಿದ ಶಿಶುವೆ ನೀನೆದ್ದು ಬಾರೊ ಅ-ಳದ್ದು ಬ್ರಹ್ಮಾಂಡವ ಸೀಳ್ದ ಮಹಿಮೆಸಾಲದ್ದೆÉ ಬಾರೊಕದ್ದು ಬೆಣ್ಣೆನೇಕೆ ಮೆದ್ದೆ ದಾರಿದ್ರವೆ ಮುದ್ದೆ ಬಾರೊ ಆಡು-ತಿದ್ದ ಮಕ್ಕಳ ನೀನು ಗುದ್ದಿ ದೂರನು ತರುತಿದ್ದೆ ಬಾರೊ 1 ಹಿಂದೆ ಬಾಯೆಂದರೆ ಮುಂದೆ ಬಾಹೆ ಗೋವಿಂದ ಬಾರೊ ಎನ್ನ ಕಂದ ಬಾಯೆಂದರೆ ಮುಂದೆ ನಿಲುವೆ ಮುಕುಂದ ಬಾರೊಬಂದೆನ್ನ ಮುಂದೆ ನೀ ನಿಂದಿರು ನಿತ್ಯಾನಂದ ಬಾರೊಎಂದೆಂದು ಭಕುತರ ಹೊರೆದಿಹ ಕಾರುಣ್ಯಸಿಂಧು ಬಾರೊ 2 ಮಂಥನ ಮಾಡಲು ನಿಂತೆÀ ಕಡೆಗೋಲ ನೇಣಾಂತೆ ಬಾರೊಸಂತರಿಗನುದಿನ ಸಂತೋಷವೀವ ನಿಶ್ಚಿಂತ ಬಾರೊಅಂತವಿಲ್ಲದ ಮಾರಾಂತನ ಗೆಲಿದ ಕೃತಾಂತ ಬಾರೊಅಂತಿಂತೆನದೆ ಮಾಕಾಂತ ಹಯವದನನನಂತ ಬಾರೊ3
--------------
ವಾದಿರಾಜ
ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ. ಬಂಧುಬಳಗವ ಕಾಣೆ ಇಂದಿರೇಶನೆ ಭವದಿ ಬೆಂದು ನೊಂದೆನೊ ನಾನು ಸಿಂಧುಶಯನ ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು ಮಂದಮತಿಗೆ ಇನ್ನು ಮುಂದೆ ಗತಿ ಏನೊ 1 ಕಾಣದಲೆ ನಿನ್ನನು ಕಾತರಿಸುತಿದೆ ಮನವು ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ ಜಾಣತನವಿದು ಸರಿಯೆ ಫಣಿಶಾಯಿಶಯನ 2 ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ ಮಾಧವನೆ ಕರುಣದಲಿ ಕಾಯಬೇಕೊ ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ ಛೇದಿಸೊ ಅಜ್ಞಾನ ಹೇ ದಯಾನಿಧಿಯೆ 3 ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ ಸರ್ವರನು ಪೊರೆಯುವನೆ ಸರ್ವರಾಧೀಶ ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ ಸರ್ವ ಸಾಕ್ಷಿಯೆ ಸತತ ಆನಂದವೀಯೊ 4 ಆನಂದಗಿರಿನಿಲಯ ಆನಂದಕಂದನೆ ಆನಂದ ಗೋಪಾಲಕೃಷ್ಣವಿಠ್ಠಲಾ ಆನಂದನಿಲಯ ಶ್ರೀ ಗುರುಗಳಂತರ್ಯಾಮಿ ನೀನಿಂದು ಸರ್ವತ್ರ ಕಾಯಬೇಕಯ್ಯ 5
--------------
ಅಂಬಾಬಾಯಿ
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು
ಇಂದಿರೆಯರಸನೆ ಬಾರೊ ಇಂದುವದನನೆ ಬಾರೊಕಂದರ್ಪನ ತಂದೆ ಬಾರೊ ಮಂದರಧÀರ ಬಾರಯ್ಯ ಪ. ಮೇದಿನಿ ತಂದ ಸಚ್ಚರಿತ್ರನೆ ಬಾರೊಅಚ್ಚ ನರಸಿಂಹ ಬಾರೊ ಹೆಚ್ಚಿದ ವಾಮನ ಬಾರೊಕೊಚ್ಚಿ ನೃಪರತರಿದ ಸಚ್ಚಿದಾನಂದ ಬಾರಯ್ಯ 1 ವಾಸುದೇವ ಬಾರಯ್ಯ 2 ಇಂಗಿತವರಿತು ಬಾರೊ ಇಂಗಡಲರಸನೆ ಬಾರೊತುಂಗಗುಣಗಣ ಬಾರೊ ಸಂಗೀತಪ್ರಿಯ ಬಾರೊಉಂಗುರಗಳಿಂದೊಪ್ಪುವ ಅಂಗುಳಿಯ ಸನ್ನೆಯಿಂದಪೊಂಗೊಳಲೂದುವ ಚೆಲ್ವ ಮಂಗಳಮೂರುತಿ ಬಾರಯ್ಯ 3 ಕುಂಡಲ ಮೂರ್ತಿ ಬಾರೊಕುಂಕುಮಶೋಭಿತ ಲಕ್ಷ್ಮಿ ಅಂಕಿತ ವಕ್ಷನೆ ಬಾರೊಕೊಂಕಿದ ಕುರುಳ ಚೆಲ್ವ ಬಿಂಕವ ಬಿಟ್ಟು ಬಾರಯ್ಯ
--------------
ವಾದಿರಾಜ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇದು ಏನೊ ನಿನ್ನ ಮತೀ ಮತೀ | ಇದರಿಂದಾಗದು ಗತೀ ಗತೀ ಪ ಸತಿ ಸುತರಿಂದಲಿ ಗತಿಯನ್ನು ಪಡೆದ ಕೇಳ ಬಲ್ಲೆಯಾ ಕಥೀ ಕಥೀ1 ಸಂಚಿತ ಪ್ರಾರಬ್ಧ ಕ್ರಿಯಮಾಣಾ | ತೀರಲಿಲ್ಲವೋ ಮಿತೀ ಮಿತೀ | ಪಂಚ ದಶಾಕ್ಷರೀ ಮಂತ್ರವ ಜಪಿಸಲು | ನೀ ಪರಶಿವನೆಂಬುದೋ ಶ್ರುತೀ ಶ್ರುತೀ 2 ಮೂರ್ತಿ ಭವತಾರಕ ದೇವನ | ಪೂಜಿಸಿ ಮಾಡೊ ಸ್ತುತೀ ಸ್ತುತೀ | ಅರಿಯದಿರ್ದರರ್ಚಕರನು ಸೇವಿಸಿ |ಆಗು ನೀ ಭೂಪತೀ ಭೂಪತೀ 3
--------------
ಭಾವತರಕರು
ಇಂದು ಕಂಡೆನು ಹರಿಯ | ಭವಹಾರಿಯ ಇಂದು ಕಂಡೆನು ಕಂಬದಿಂದಲಿ ಪ ಬಂದು ದೈತ್ಯನ ಕೊಂದು ಕಂದನಿ- ಗಂದು ಒಲಿದಾನಂದ ಸಾಂದ್ರನ ಇಂದಿರಾ ಮಂದಿರನ ವಂದ್ಯನ ಅ.ಪ. ಎಂದಿನಂದದಿ ಬರುತ | ಮನದಲಿ ಶ್ರೀ ಮು- ಕುಂದ ನಾಮವ ನೆನೆಯುತ ಮುಂದು ಮುಂದಕೆ ನಡೆಯುತ | ಆ- ನಂದದಿ ಹೋಗುತಲಿರೆ ಸುಂದರಿ ಶ್ರೀ ತುಲಸಿಗೊಲಿದು ಬೃಂದೆಯನು ಕರವಿಡಿದು ಪೊಳೆದು ಬಂದು ಗಂಡಕಿಯಿಂದ ಭಕ್ತರ ವೃಂದ ಪೊರೆಯಲು ಪಥದಿ ನಿಂದನ1 ಸುಕೃತ | ಬಂದೊದಗಿತೊ ಶ್ರೀಶನೆನಗೆ ದೊರೆತ | ಪ್ರಭಾವದೆ ದುರಿತ | ರಾಶಿಯು ಇನ್ನು ದಾಸರಾಯರ ಕುಲದಿ ಜನಿಸಿದ ಕೂಸೆನುತ ದೇಸಿಗರ ಸೇವೆಗೆ ಮೀಸಲಾಗಿಸಲೋಸುಗೆನ್ನ ಮ- ಹಾಶಯವ ಲೇಸೆನಿಸಿ ಬಂದವ 2 ವಿಕಳ ತತಿಗೆ ಬಾಧಕ | ಈತನ ನಾಮ ಪ್ರಕಟಿಸಲಿನ್ನು ಸುಖ | ಪಾಲಿಸುವನು ಯುಕುತಿಗೆಂದಿಗು ನಿಲುಕ | ಸುಕೃತರಿಂದ ಭಕುತಿ ಸೇವೆಯನೊಂದೆ ಕೊಳ್ಳುವ ಭಕುತಿ ಮುಕುತಿಗಳನ್ನು ಕೊಡುವ ಸಕಲ ಕಾಲದಿ ನಿಂತು ಸಲಹುವ ಲಕುಮಿಕಾಂತನ ಸರ್ವ ಶಕ್ತನ 3
--------------
ಲಕ್ಷ್ಮೀನಾರಯಣರಾಯರು
ಇದು ಥರವೇ ಥರವೇ ದೇವಾ ಥರವೇ ನಿನ್ನವರ ವಂಚಿಸಿ ನೀ ಮರೆಯಲ್ಲಿ ಇರುವುದು ಥರವೆ ಪ. ಪರಿಪರಿಯಲಿ ಸ್ತುತಿಗೈಯುತಲಿ ನಿನ್ನ ಪರಮ ಮಂಗಳ ಪಾದಗಾಣದೆ ಮರುಗುತಿರುವಾ ವರ ಭಕುತರಿಗೆ ಕರುಣದೋರದೆ ಇರುವೆ ವೆಂಕಟ ಅ.ಪ. ಅಜಭವಾದಿಗಳು ಸ್ತುತಿಸಿ ಪೂಜಿಸಿದ ಪಾದ ತ್ರಿಜಗವಂದಿತ ಕೃಷ್ಣ ನಿನ್ನಪಾದ ಭಜನೆಯನು ಮಾಡುತ ನಿನ್ನ ತ್ಯಜಿಸದನುದಿನ ಸುಜನರೆಲ್ಲರು ಸ್ತುತಿಸಿ ಪಾಡುತಿರೇ ತ್ರಿಜಗ ಪೂಜಿತನಾಗಿ ಭಕುತರ ಭಜನೆ ನಿನಗರಿವಿಲ್ಲೇ ದೇವನೆ ಸ್ವಜನರನು ಪಾಲಿಸುವ ಬಿರುದನು ತ್ಯಜಿಸುವರೆ ಸಿರಿಯರಸ ವೆಂಕಟ 1 ಮಚ್ಛಕೂರ್ಮವರಾಹನಾಗಿ ದೈತ್ಯರ ಸ್ವಚ್ಛಭಕುತರ ಸಲಹೆ ಸಂಹರಿಸಿ ಅಚ್ಛಪ್ರಲ್ಹಾದನಿಗೊಲಿದ ನರಹರಿಯಾಗಿ ಅಚ್ಛವಾಮನನಾಗಿ ಬಲಿಯತಲೆಯತುಳಿದು ಸ್ವಚ್ಛಗಂಗೆಯ ಇಂಬಿಡದೇ ದುಷ್ಟ ರಾಜರನಳಿದ ಭಾರ್ಗವ ದುಷ್ಟ ತಾಟಕಿ ಸಂಹರಿಸಿದನೆ ಕೃಷ್ಣರೂಪದಿ ಗೋಪೆರಿಗ್ವಲಿದನೆ ಉತ್ಕøಷ್ಟ ಬೌದ್ಧ ಕಲ್ಕಿ ವೆಂಕಟ 2 ಪರಮಪುರುಷ ಬಾ ವರದ ಮೂರುತಿ ಬಾ ಪರಿಪರಿ ಸ್ತುತಿಸಿ ವಂದಿಪೆ ಸಿರಿವರದ ಬಾ ಶರಧಿಶಯನ ನಿನ್ನ ಚರಣ ಸ್ಮರಣೆಯೀಯೆ ಶರಣಾಗತ ರಕ್ಷಾಮಣಿ ಬೇಗ ಬಾ ಸಿರಿಗೆ ಪೇಳದೆ ಬಂದು ಕರಿಯ ಪೊರೆದ ದೊರೆ ಶ್ರೀ ಶ್ರೀನಿವಾಸ ಬಾ ಗರುಡ ಗಮನನೆ ಶರಣಜನರನು ಮರೆಯದಲಿ ನೀ ಕರುಣ ವೆಂಕಟ 3
--------------
ಸರಸ್ವತಿ ಬಾಯಿ
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇದು ಹೊನ್ನು ಹೂವುಗಳ ತಾರತಮ್ಯ ಪ ಇದು ಬಾಹ್ಯ ಅದು ಅಂತರಂಗಿಗೆ ರಮ್ಯ ಅ.ಪ ಹೊನ್ನಿನಿಂದಾಗುವುದು ಹೂವಿನಿಂದಾಗುವುದು ಹೊನ್ನು ಹೂವೆರಡಯ್ಯ ಬಣ್ಣ ಒಂದೇ ಹೊನ್ನು ಹೂವೆರಡಕ್ಕು ಬಣ್ಣ ಒಂದಾಗವೋ ನಿನ್ನ ಕೃಪೆಯೆಂಬ ರೇಕುಗಳಾಗಬೇಕೋ 1 ಹೊನ್ನು ಭೂಲೋಕಕ್ಕೆ ಹೂವು ಪರಲೋಕಕ್ಕೆ ಹೊನ್ನಿನಾ ಹೂವುಗಳು ಇಹಪರಕೆ ದಾನ ಹೊನ್ನುಳ್ಳವರಿಗೆಲ್ಲ ಹೂ ಹೊನ್ನುವಿಲ್ಲ ತಾನಿಲ್ಲ ಹೊನ್ನ ಹೊರುವುದಸಾಧ್ಯ 2 ಹೊನ್ನ ಕಾವುದಸಾಧ್ಯ | ಹೊನ್ನುಳ್ಳ ನರರಿಗೆ [ಮ] ಗಳಿಲ್ಲ ಹೊನ್ನುಳ್ಳ ಮನುಜ ಪಾತಕಗಳನು ಕಲಿಯುವ ಹೊನ್ನಿಲ್ಲದಾತರಿಗೆ ಹೂವೊಂದು ದೊರಕಿದೊಡೆ ಅನ್ನ ನಿದ್ರಾ ಪಾನ ಸೌಖ್ಯಂಗಳುಂಟಯ್ಯ 3 [ಹೊನ್ನುಳ್ಳವಸದಾ ಹೊನ್ನಿ ನೊಡನೆಕಲ್ಳ್ವೆ] ಹೊನ್ನಿಲ್ಲದಾತ ಶ್ರೀರಾಮಕೃಷ್ಣರ ಕಲೆವ ಹೊನ್ನಿಂದ ಬೆಣ್ಣೆತಾಂ ಸುಣ್ಣವೆನಿಪುದು ಜಗದಿ ಹೊನ್ನಿಲ್ಲದಾತಂಗೆ ಸುಣ್ಣವೇ ಬೆಣ್ಣೆ 4 ಹೊನ್ನಕೇಳನು ನಮ್ಮ ಮಾಂಗಿರಿಪುರವಾಸ ಹೊನ್ನಿಂಗೆ ಬದಲು ಭಕ್ತಿಯಹೂವ ಕೇಳ್ವುದು ಹೊನ್ನ ದಾನವಮಾಡಿ ಹೂವ ಹರಿಗರ್ಪಿಸಿರಿ ಇನ್ನಾವ ವರಗಳನ್ನು ಬೇಡ ಬೇಡಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇದುಸ್ನಾನ ಇದುಸ್ನಾನ ಇದುಸ್ನಾನವಯ್ಯ ಸದಮಲಜ್ಞಾನಿಗಳು ಮನವೊಪ್ಪಿ ಮಾಡ್ವ ಪ ಇಟ್ಟು ಹಂಗಿಸದ್ದೆ ಸ್ನಾನ ಕೊಟ್ಟು ಕುದಿಯದ್ದೆ ಸ್ನಾನ ಕೊಟ್ಟದ್ದು ಕೊಡುವುದೇ ಶಿಷ್ಟ ತುಂಗಾಸ್ನಾನ ನಿಷ್ಠರಾಡದ್ದೆ ಸ್ನಾನ ದುಷ್ಟಸಂಗಳಿವುದೇ ಸ್ನಾನ ಶಿಷ್ಟಜನಸಂಗವೇ ನಿಜ ಕೃಷ್ಣಾಸ್ನಾನ 1 ಭವ ಅದು ಸ್ನಾನ ಕ್ಷೀರಸಾಗರ ಸ್ನಾನ ರಾಗನೀಗ್ವುದೆ ಸ್ನಾನ ಜಾಗರಣ ಸದಾಸ್ನಾನ ಭಾಗವತರೊಲುಮೆ ನಿಜ ಭಾಗೀರಥೀಸ್ನಾನ 2 ಮರೆವ ತರಿವುದೆ ಸ್ನಾನ ಅರಿವು ತಿಳಿವುದೆ ಸ್ನಾನ ಪರಮಜ್ಞಾನ ನಿಜ ಸುರಗಂಗಾಸ್ನಾನ ಕರುಣ ಪಡೆವುದೆ ಸ್ನಾನ ಮರಣಗೆಲಿವುದೆ ಸ್ನಾನ ಹರಿದಾಸರೊಡನಾಟ ಸರಸ್ವತೀ ಸ್ನಾನ 3 ವಾದನೀಗ್ವುದೆ ಸ್ನಾನ ಭೇದ ಅಳಿವುದೆ ಸ್ನಾನ ಮಾಧವನ ಕಥಾಶ್ರವಣ ಸದಾ ಯಮುನಾ ಸ್ನಾನ ವೇದವನರಿವುದೆ ಸ್ನಾನ ಬೋಧಪಡೆವುದೆ ಸ್ನಾನ ಸಾಧುಸಜ್ಜನಸೇವೆ ಗೋದಾವರೀಸ್ನಾನ 4 ನೇಮನಿತ್ಯವೆ ಸ್ನಾನ ತಾಮಸ್ಹರಣವೆ ಸ್ನಾನ ಕಾಮತೊಳೆವುದೆ ನಿಜ ಭೀಮಾನದೀಸ್ನಾನ ಕ್ಷೇಮಸಾಗರ ತ್ರಿಭೂಮಿಯೊಳಧಿಕ ಶ್ರೀ ರಾಮನಡಿಭಕುತಿಮುಕ್ತಿ ಹೇಮಾನದೀಸ್ನಾನ 5
--------------
ರಾಮದಾಸರು
ಇದೇ ಭಕುತಿ ಮತಿಗೆ ಮುಕುತಿ | ಇದಕ್ಕಧಿಕವಾಗಿಪ್ಪ ವಿಧಿಗಳೆಲ್ಲಿಯಿಲ್ಲಾ ಪ ರತುನ ಗರ್ಭದೊಳಗೆ ತಿಳಿ | ರತುನ ಸಮಕ್ಷೇತ್ರಗಳಿಗೆ | ರತುನವೆನ್ನಿ ಯತಿವಂಶ | ರÀತುನ ಮಧ್ವಮುನಿಮಾಡಿದಾ 1 ಪದ ಜೀವಸ್ತರಿಗದೆ ಪಾ | ಪ ಜನರು ಕೃಷ್ಣರಾಯನ ಪಾದವ ನೋಡಿ ನಿತ್ಯಾ | ಸಾಧನಿ ಮನ ಮಾಡಿರಯ್ಯಾ 2 ಏಳು ಒಂದು ಮಠದ ಲೋಕರಂಸೆ ಸದನವೆನ್ನಿ | ಪೇಳಲೇನು ಅವರೇ ಯಿಲ್ಲಿ ಊಳಿಗವ ಮಾಡುತ್ತಿಪ್ಪರು 3 ಮೇರೊ ಪರ್ವತ ತುಲ್ಯವಿದೆ | ವಾರಿಜನೆ ಮಧ್ವರಾಯ | ಈ ರಜತ ಪೀಠವೆ ಮಂದಿರ ಶತಕೋಟಿ ಎನ್ನೀ4 ಮೆರೆವ ಮಧ್ವತೀರ್ಥ ಬಾಹಿರ | ವರಣ ಉದಕವೆನ್ನಿ ಇಲ್ಲಿ | ಚರಿಸುವಂಥ ಸುಗುಣ ತೃಣಾ ದ್ಯರು ಮುಕುತಿ ಯೋಗ್ಯರಹುದು5 ಉಡಪಿ ಯಾತ್ರೆ ಮಾಡಿದವನು | ಪೊಡವಿ ತುಂಬ ಯಾತ್ರೆ | ಬಿಡದೆ ಚರಿಸಿದವನೆ ಎಂದು | ಮೃಡನು ಇಲ್ಲಿ ಸಾರುತಿಪ್ಪಾ 6 ಉಬ್ಬಿ ಸರ್ವ ಇಂದ್ರಿಯಂಗಳಾ | ಹಬ್ಬವಾಗಿ ಸುಖಿಪದಕೆ | ಊರ್ಬಿಯೊಳಗೆ ಉಡುಪಿ ಯಾತ್ರೆ | ಅಬ್ಬದಲೆ ದೊರಕದಯ್ಯಾ 7 ಹಿಂಗಿ ಪೋಗದಕೆ ಇದೇ | ಅಂಗವಲ್ಲದೆ ಬೇರೆ ಇಲ್ಲ | ರಂಗ ಸುಲಭಸಾಧ್ಯಾವಾಹಾ 8 ನೂರು ಕಲ್ಪಧರ್ಮ ಮಾರನಯ್ಯ ವಿಜಯವಿಠ್ಠಲನ | ಸಾರಿ ತಂದು ಕೊಡುವಾ9
--------------
ವಿಜಯದಾಸ