ಒಟ್ಟು 785 ಕಡೆಗಳಲ್ಲಿ , 85 ದಾಸರು , 595 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನೆನ್ನ ದೊರೆಯ ಲಕುಮಿಯ | ಗಂಡನೆನಿಪ ಹರಿಯ ಪ ಕುಂಡಲಿಶಯನನಿರುವ ಪರಿಯ | ಪದ ಪುಂಡಲೀಕ ಸೇವಿಪ ಪರಿಯ ಅ.ಪ. ಸಿರಿರಂಗ ಪುರಿಗೆ ಬಂದು | ವಿರಜಯೆನಿಪ ವರ ಕಾವೇರಿಯೊಳು ಮಿಂದು ನಿರುಪಮ ರಂಗಮಂದಿರದಿ ನಿಂದು | ನಮ್ಮ ಸಿರಿ ರಂಗರಾಜನ ಕಂಡೆನಿಂದು 1 ಇಂದೆನ್ನ ಭಾಗ್ಯಕೆಣೆಯಿಲ್ಲ ಈ ಮಂದಸ್ಮಿತನ ಕಂಡೆನಲ್ಲ ಹಿಂದಿನ ಪುಣ್ಯ ಫಲಿಸಿತಲ್ಲ ಇನ್ನು ಮುಂದಕೆ ಬಹು ಸಾಧನವಾಯಿತಲ್ಲ 2 ವಾಸುಕಿಶಯನನಾಗಿರುವ | ಬಲು ಸೋಸಿನಿಂದ ಗರುಡನೇರಿ ಮೆರೆವ ದೋಷರಾಶಿಗಳ ತರಿವ | ತನ್ನ ದಾಸರ ಪ್ರೀತಿಯಲಿ ಪೊರೆವ 3 ಇಂದಿರೆ ರಮಣನಂದನ ಕಂದ | ತಾನು ಇಂದೆನಗೆ ಒಲಿದು ದಯದಿಂದ ಸಂದರುಶನವಿತ್ತು ಆನಂದಾಮಿಗೆ ಪೊಂದಿಸಿ ದಾಟಿಸಿದ ಭವದಿಂದ4 ಸಂದು ಹೋದವಘಗಳೆಲ್ಲವೆಂದ | ಇನ್ನು ಮುಂದೆನಗೆ ಭಯವಿಲ್ಲವೆಂದ ಸುಂದರ ರಂಗೇಶವಿಠಲ ಬಂದ | ಮನ ಮಂದಿರದಿ ನೆಲೆಯಾಗಿ ನಿಂದ 5
--------------
ರಂಗೇಶವಿಠಲದಾಸರು
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕಂಬುಕಂಧರ ಹರಿಯಪ. ಪಾಲಿತ ಕೌಂತೇಯ ಭಾಗವತ ತನಕಾಗಿ ತಾ ದಯವಗೈದ ಭರದಿಂದ ತೋರ್ವ ಭೋಗಿಶಯನ ಸ- ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ1 ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟು ಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದು ನಿಂದು ವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿ ದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು2 ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನು ದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನು ಸೂಸಿ ಕರುಣಾರಾಸ ರಾಜ್ಯದ ವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ3 ಸುಖದಿಂ ಬಾಳುವದು ಪರಿಯ ನೀನರಿಯಾ ನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿ ಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ4 ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವ ಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವ ಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳ ಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ5
--------------
ತುಪಾಕಿ ವೆಂಕಟರಮಣಾಚಾರ್ಯ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರುಣಿಸು ಬೇಗ ಸಿರಿವರ ಕರುಣಿಸು ಬೇಗ ಪ. ಲಕ್ಷ್ಮಾಶ್ರಯ ವಕ್ಷಸ್ಥಳ ಪಕ್ಷೇಂದ್ರ ವಿಹಾರಿ ಅಕ್ಷಾರಿ ಪ್ರಿಯ ಪೂರ್ಣ ಕಟಾಕ್ಷದಿ ನೋಡುತಲಿ 1 ಕಂಠೇಧೃತ ಕೌಸ್ತುಭ, ವೈಕುಂಠಾಲಯವಾಸಿ ಶುಂಠಾಶಯ ಧೂವನ ನರ ಕಂಠೀರವ ಕಮಠಾ 2 ದೂರೀಕೃತ ಘೋರಾಮಯ ಧೀರಾಖಳ ಸಾರಾ ನಾರಾಯಣ ನರಕಾರ್ಣವ ತಾರಣ ರಘುವೀರ 3 ಭಕ್ತಾವನಶಕ್ತಾಮೃತ ರಕ್ತಾಧರ ಶ್ರೀದ ಪಾದ 4 ವಾಗೀಶ ವೃತಾನುಗ ಸಕಲಾಗಮನುತ ಚರಣ ಭೋಗೀಶ ಧರಾಲಯ ದಯವಾಗು ಸದಾಶರಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರ್ಪೂರದಾರತಿಯ ತಂದೆತ್ತಿರೆ ಚೆಲ್ವಸುಪ್ರಕಾಶಗೆ ಸುಜನರ ಕಾಯ್ವಗೆಪಾಂಡವಭಾವಗೆ ದೇವರ ದೇವಗೆನಿರ್ಜರೇಂದ್ರನ ಬಲಿ ಗರ್ಜಿಸುತಿರೆ ಕಂಡುಅರ್ಜುನಪ್ರಿಯ ತಾನು ಕುಬ್ಜನಾಗಿಹೆÉಜ್ಜೆ ಭೂಮಿಯ ಬೇಡಿ ಬಲಿಯ ಗರ್ವವನುನಿರ್ಜಿಸಲು ಬಂದ ವಾಮನಗೆ ನಿಸ್ಸೀಮನಿಗೆ ಪೂರ್ಣ ಕಾಮನಿಗೆ 1 ನಳಿನನಾಭನೆಂದು ತಿಳಿದು ಬೇಗನೆ ಬಲಿಕೆಳದಿಯ ಕರೆದುದಕವತರಿಸಿಚಲುವ ಪಾದವ ತೊಳೆದಿಳೆಯ ದಾನವ ಮಾಡೆನಳಿನಜಾಂಡಕ್ಕಾಗಿ ಬೆಳೆದವಗೆ ಬಹು ತಳೆದವಗೆ-ಭೂಮಿಯಳೆದವಗೆ 2 ಬಲಿಯ ಭಕ್ತಿಗೆ ಮೆಚ್ಚಿ ಚೆಲುವ ಉಡುಪಿನ ಕೃಷ್ಣಉಳಿದ ಭೂಮಿಯ ತೋರೆನ್ನುತ ನುಡಿಯೆಸತಿ ನಾಚಿಕೆಯಿಂದ ತನ್ನಳೆದುಕೋ ಎನ್ನತಲೆಯ ಮೆಟ್ಟಿದ ಬಹು ವಿಕ್ರಮಗೆ ಪರಾಕ್ರಮಗೆ ತ್ರಿವಿಕ್ರಮಗೆ3
--------------
ವ್ಯಾಸರಾಯರು
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಕಳ್ಳನ ಹೆಜ್ಜೆಯನು | ಜಗದೊಳು ಕಳ್ಳನೇ ತಾ ಬಲ್ಲ | ಎಲ್ಲರಿಗಿದು ತಾನು | ಭೇದಿಸಿ | ನೋಡಲು ಅಳವಲ್ಲಾ ಪ ನಡುಮನಿಯೊಳು ಬಂದಾ | ಮಂದಿರಕನ್ನವ ಕೊರೆದಾ 1 ಸ್ವಪ್ರಭೆಯಲ್ಲಿ ಮೆರೆವಾ | ಅಲ್ಲಿಯ ಚಿದ್ರತ್ನವ ಕದ್ದಾ | ಸ್ವಾನುಭವದಿ ಮೆದ್ದಾ 2 ಕಳ್ಳರ ಸಂಗತಿಯಾ | ಮಹಿಪತಿ | ನಂದನ ತಾ ಮಾಡಿ | ಕದಿಯುತ ನೋಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಣಿ ನಿನ್ನಂಥವಳ ಪ. ಮುದ್ದು ರುಕ್ಮಿಣಿಯು ದೂತೆಗೆ ತಿದ್ದಿ ಮಾತುಗಳ ಹೇಳಿ ಬುದ್ಧಿವಂತಳೆ ರಾಯಗ ಸುದ್ದಿ ಹೇಳಮ್ಮ ಹೋಗಿ1 ಮಾನ ಮಾಡಿ ದೂತೆಗೆ ಆನೆ ಅಂಬಾರಿ ಕೊಟ್ಟುನಾನಾ ಭೂಷಣಗಳಿಟ್ಟು ತಾನು ವಸ್ತ್ರಗಳನೆ ಕೊಟ್ಟು2 ಹರದಿ ರುಕ್ಮಿಣಿಯು ದೂತೆಗೆ ತುರಗ ಬಿರುದುಗಳೆ ಕೊಟ್ಟುಎರಗಿ ಹೇಳಮ್ಮ ಅಷ್ಟು ಹಿರಿತನಗಳಟ್ಟು 3 ರಂಗ ಬಂದಿಳಿದಾನೆಂಬೊ ಮಂಗಳವಾರ್ತೆಯಸಂಗೀತಲೋಲರಾಯನ ತಂಗಿಗ್ಹೇಳಮ್ಮ ಹೋಗಿ 4 ಭರದಿ ದ್ರೌಪತಿಗೆ ಮುಯ್ಯಾ ತಿರುಗಿಸಿ ತಂದಾರೆಂದು ಎರಗಿ ಹೇಳಮ್ಮ ಮೈಯ್ಯ ಮರೆತಿರಬ್ಯಾಡಿರೆಂದು5 ಮಂದಗಮನೆಯರು ಮುಯ್ಯ ತಂದಾರೆ ತಾರಾರೆಂದು ಸಂದೇಹ ಬಿಟ್ಟು ಊಟ ಚಂದಾಗಿ ಮಾಡಿರೆಂದು6 ಧೀರರಾಯಗೆ ಮುಯ್ಯ ನಾರಿಯರು ತಂದಾರೆಂದು ಬಾರಿ ಬಾರಿಗೆ ನಮಿಸಿ ಸಾರಿ ಹೇಳಮ್ಮ ಹೋಗಿ 7 ಧಿಟ್ಟೆಯರು ಮುಯ್ಯ ಉತ್ಕøಷ್ಟದಿ ತಂದಾರೆಂದು ಕೃಷ್ಣರಾಯನ ಬಂದದ್ದಷ್ಟು ಹೇಳಮ್ಮ ಹೋಗಿ8 ಇಂದು ರಾಮೇಶನ ಮಡದಿಯರು ಬಂದರು ದ್ವಾರದಿ ಒಂದೊಂದು ಮಾತುರಾಯಗೆ ಚಂದಾಗಿ ಹೇಳಮ್ಮ ಹೋಗಿ9
--------------
ಗಲಗಲಿಅವ್ವನವರು
ಕಾಮಜನಕ ಭೃಗು ರಾಮ ದಯಾಂಬುಧಿ ಕಾಮಿತ ಫಲದಾಯಿ ಪ. ಮಂಗಳಾಯನ ಮಾತರಿಶ್ವನುತಾ ದಯವಾಗು ದ್ವಿಯುಗ ಶೃಂಗ ಹವ್ಯವಹಾಂತರಂಗಗತ ದು:ಕ್ಷತ್ರಹಂತಾ ತುಂಗ ಪರಶುಧರಾಂಸಬಾಹು ನಿಭಾಂಗ ಶಾರ್ಙಶರಾಸನಾರ್ಜುನ ದುರಿತ ತರಂಗ ಸಂಗರಮಾಂಗಸಂಗತ 1 ನೀನೆ ಗ್ರಹಪತಿಯೆಂಬುದನು ತಿಳಿದು ದುರ್ಮೋಹವಳಿದು ತಾನು ಯನ್ನುವಹಂಕೃತಿಯು ಕಳಿದು ನಿನ್ನಲ್ಲಿ ನಲಿದು ಸ್ನಾನ ಹೋಮ ಸುರಾರ್ಚನಾದಿಗ ಳೇನು ಮಾಡಿದರೆಲ್ಲ ನಿನ್ನ ಸಮಾನಕರಿಪ ಮಹಾನುಭಾವನೆ 2 ಒಪ್ಪಿಸಿದೆ ಸರ್ವಸ್ವವನು ನಿನಗೆ ಗತಿ ನೀನೆ ಎನಗೆ ಕಪ್ಪಕಾಣಿಕೆ ಎಲ್ಲವೂ ನಿನಗೆ ಇದು ಸತ್ಯ ಕೊನೆಗೆ ಅಪ್ಪಳಿಸು ರಿಪುಪುಂಜವನು ಬರುತಿಪ್ಪದುರಿತವ ಭಂಗಿಸುತ ನ- ಕಂದರ್ಪಭಂಜನ ಸರ್ಪಗಿರಿವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯ ಸುತ್ತಿ ಬಾಯ ಹೊಯ್ವುದು ಆಯ ತಪ್ಪಿ ಆಯ ಕೆಟ್ಟ ನ್ಯಾಯಬಪ್ಪುದು ಪ ಹೆತ್ತ ತಾಯಿ ತಂದೆಯನ್ನು ಒತ್ತಿ ಬಯ್ವುದು ಅತ್ತೆಯನ್ನು ಕಂಡು ಹರುಷವಿತ್ತು ನಗುವುದು ಮೃತ್ಯುವನ್ನು ತಂದು ತನ್ನ ಹತ್ತಿರಿಡುವುದು ಒತ್ತಿನವನ ಹೊರಗೆ ಸಾರೆನುತ್ತ ನುಡಿವುದು 1 ಗುರುಗಳನ್ನು ಜರೆದು ಕರೆಕರೆಯ ತಪ್ಪುದು ಕೊರಳು ಕೊಯ್ಕರನ್ನು ತಾನು ಸೆರಗ ಪಿಡಿವುದು ಮರವೆ ತೋರ್ಪುದು ಗರುವತನದಿ ಪರರ ಒಡವೆ ಇರುಳು ಸುಲಿವುದು 2 ದಾನದತ್ತವಾದುದನ್ನು ತಾನು ಸೆಳೆಯುವುದು ಮಾನವನ್ನು ಹಿಡಿದು ಮೇಲೆ ಮಾನಯಿಡುವುದು ಜ್ಞಾನಿಯನ್ನು ಕಂಡು ಮನದಿ ಬೇನೆ ತೋರ್ಪುದು ಅನಾಥರನ್ನು ಕಂಡು ಬಹು ಹೀನ ನುಡಿವುದು 3 ಅನ್ನವನ್ನು ಇತ್ತವರ ಮುನ್ನ ಬೈಯ್ವುದು ಭಿನ್ನ ಭೇದ ತೋರಿ ಮನವ ಕನ್ನ ಕೊರೆವುದು ತನ್ನವರ ಮರೆತು ಪರರ ಕನ್ಯೆಗಳುವುದು ಹೊನ್ನ ಬೊಂಬೆಯಂತೆ ಮಾಯೆ ಬೆನ್ನ ಸುಳಿವುದು 4 ತಪ್ಪಿ ನಡೆಯೆ ಈ ಪರಿಯೊಳಿಪ್ಪೆಯೆಂಬುದು ಅಪ್ಪ ವರಾಹತಿಮ್ಮಪ್ಪನ ಸೇರಿಕೊಂಬುದು ಒಪ್ಪಿ ತೋರ್ಪ ಮಾಯೆಯೆಲ್ಲ ತಪ್ಪಿ ಪೋಪುದು ಉಪ್ಪರದ ದಾಸ ಪೇಳ್ದ ಒಪ್ಪಿಕೊಂಬುದು 5
--------------
ವರಹತಿಮ್ಮಪ್ಪ
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾರಣನೇ ಇವನು ಎಲ್ಲಕ್ಕೂ ಕಾರಣನೇ ಇವನು ಪ ಕಾರಣನಿವನು ಸಾಧಾರಣನಲ್ಲನು ಮಾರಮಣನು ಕರುಣಾರಸಮಯನು ಅ.ಪ ಇಚ್ಛೆಯಿಂದಲಿ ತಾನು ಅಖಿಲ ಜಗ ತ್ಸøಷ್ಟಿಯ ಮಾಡುವನು ಸ್ವಚ್ಛನಾದರು ತನ್ನ ಮೆಚ್ಚಿಗೆಯಿಂದಲಿ ತುಚ್ಛನೆಂಬೊ ಶಬ್ದ ವಾಚ್ಯನಾಗಿರುವನು 1 ಎಲ್ಲವ ಬಲ್ಲವನು ಈಶನು ಇಲ್ಲದ ಸ್ಥಳವಿಲ್ಲ ಚಿಲ್ಲರೆ ದೈವಗಳೆಲ್ಲರು ಈತನ ಚೆಲ್ಲಾಟಗಳಿಗೆ ಉಲ್ಲಾಸಿಸುವರು 2 ಭಿನ್ನರೂಪಗಳಿಂದ ಜಗದೊಳು ತನ್ನ ಲೀಲೆಯ ತೋರ್ಪ ಸನ್ನುತ ಭಕುತಗೆ ಮನ್ನಣೆಯಿಂದ ಪ್ರ ಸನ್ನನಾಗಿ ಉನ್ನತ ಪದವೀಯಲು 3
--------------
ವಿದ್ಯಾಪ್ರಸನ್ನತೀರ್ಥರು
ಕೀರ್ತಿಸಿ ಜನರೆಲ್ಲ ಹರಿಯ ಗುಣ ಪ ಕೀರ್ತಿಸಿ ಜನರು ಕೃತಾರ್ಥರಾಗಿರೊ ಅ.ಪ ಆವನು ವನದೊಳಗೆ ನಿತ್ಯದಿಬಾಹ ಜನರ ಬಡಿದುಜೀವನ ಮಾಳ್ಪ ಕಿರಾತನು ಕೀರ್ತಿಸೆತಾ ಒಲಿದಾತನ ಕೋವಿದನೆನಿಸಿದ 1 ಆವನ ಪಾದರಜ ಸೋಕಲುಆ ವನಿತೆಯ ಜಡಭಾವವ ತೊಲಗಿಸಿ ಆ ವನಿತೆಯನುಪಾವನ ಮಾಡಿದ ದೇವಾಧಿದೇವನ 2 ಅಂದು ಶಬರಿ ತಾನು ಪ್ರೇಮದಿತಿಂದ ಫಲವ ಕೊಡಲುಕುಂದು ನೋಡದೆ ಆನಂದದೆ ಗ್ರಹಿಸಿಕುಂದದ ಪದವಿಯನಂದು ಕೊಟ್ಟವನ3 ದÀುಷ್ಟ ರಾವಣ ತಾನು ಸುರರಿಗೆಕಷ್ಟಬಡಿಸುತಿರಲುಪುಟ್ಟಿ ಭವನದೊಳು ಕುಟ್ಟಿ ಖಳರ ಸುರ-ರಿಷ್ಟವ ಸಲಿಸಿದ ಸೃಷ್ಟಿಗೊಡೆಯನ 4 ತನ್ನ ನಂಬಿದ ಜನರ ಮತ್ತೆ ತಾ-ನನ್ಯರಿಗೊಪ್ಪಿಸದೆಮುನ್ನಿನಘವ ಕಳೆದಿನ್ನು ಕಾಪಾಡುವಘನ್ನ ಮಹಿಮ ಶ್ರೀರಂಗವಿಠಲನ 5
--------------
ಶ್ರೀಪಾದರಾಜರು