ಒಟ್ಟು 308 ಕಡೆಗಳಲ್ಲಿ , 66 ದಾಸರು , 289 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪರಮಪುರುಷ ಯದುಕುಲೇಶ ಶರಧಿ ಮಂದಿರವಾಸ ಶ್ರೀಶ ಪ ಪರಮ ಹರುಷದಿಂದಲೀಗ ಉರುಟನೆಯ ಮಾಡುವೆನು ಅ.ಪ. ನೀಲಮೇಘ ವರ್ಣ ನಿನ್ನ ಬಾಲಶಶಿಯ ಪೋಲುವಂಥ ಫಾಲವನ್ನು ತೋರುಬೇಗ ಕುಂಕುಮವ ಹಚ್ಚುವೆನು 1 ವಾರಿಜಾಕ್ಷ ಮಾರಜನಕ ವಾರಿನಿಧಿ ಗಂಭೀರ ಸುಗುಣ ತೋರು ನಿನ್ನ ಚರಣಗಳನು ಅರಿಸಿನವ ಹಚ್ಚುವೆನು 2 ಸುಂದರಾಂಗ ಮಂದಹಾಸ ಕುಂದರನೆ ಸಿಂಧುಶಯನ ಕಂಧರವ ತೋರು ಬೇಗ ಗಂಧವನು ಹಚ್ಚುವೆನು 3 ಕುಸುಮ ನೇತ್ರ ಕುಸುಮಪೀಠ ಸ್ತೋತ್ರ ಪಾದ ಕುಸುಮ ಮಾಲೆ ಹಾಕುವೆನು 4 ಚಾರು ಚರಿತ ಕರಿಗಿರೀಶ ಆರತಿಯ ಬೆಳಗುವೆನು ತೋರು ತವ ಮುಖಾರವಿಂದ 5
--------------
ವರಾವಾಣಿರಾಮರಾಯದಾಸರು
ಪರಮಾನಂದದೊಳಿರುವ ಪರಿಯನರಿ ಗರುವ ಬೇಡ ಹೇ ಮನಸಾ ಪ ಸಿರಿವರ ನಾರಾಯಣ ನಾಮಾಮೃತ ನರಘಳಿಗೆಯು ಮರೆಯದೆ ನೆನೆ ಮನಸಾಅ.ಪ ಇಂದಿರೆಯರಸನ ಸುಂದರ ಚರಣಗ ಳಂದದ ಶ್ರೀ ತುಳಸಿಯ ದಳದಿ ಚಂದದೊಳರ್ಚಿಸಿ ಕುಂದದ ಭಕುತಿಯೊಳಾ ನಂದದೊಳಿರು ಹೇ ಮನಸಾ 1 ಸಿರಿ ರಾಮನ ಮಂಗಳ ಮೂರ್ತಿಯ ಘನ ಕೊರಳೊಳು ಹಾರಗಳರ್ಪಿಸುತ ಪರಿಪರಿ ಪರಿಮಳ ಪುಷ್ಪಗಳಿಂದಲಿ ಕರುಣಾಕರನನರ್ಚಿಸು ಮನಸಾ2 ಸರ್ವಾಂತರ್ಗತ ಜಗದುದರನ ನೀ ನಿರ್ಮಲ ಪೀಠದಿ ಕುಳ್ಳಿರಿಸಿ ಸರ್ವಷಡ್ರಸೋಪೇತ ಸುಭೋಜನ ಸರ್ವಾತ್ಮನಿಗರ್ಪಿಸು ಮನಸಾ 3 ಸುಫಲ ಕ್ಷೀರ ತಾಂಬೂಲಗಳರ್ಪಿಸಿ ಸಫಲಗೊಳಿಸು ಜನ್ಮವ ಮನಸಾ ಅಪಾರಮಹಿಮನ ಗುಣಗಳ ಕೀರ್ತಿಸಿ ಕೃಪಾನಿಧಿಯ ನಮಿಸೆಲೊ ಮನಸಾ 4 ಅಗಣಿತ ಮಹಿಮನಿಗಾರ್ತಿಗಳರ್ಪಿಸಿ ಮಿಗೆ ಭಕ್ತಿಲಿ ನಮಿಸೆಲೊ ಮನಸಾ ಸುಗುಣಮಣಿಯು ರಘುರಾಮವಿಠಲ ನಿ ನ್ನಗಲದೆ ಹೃದಯದಲಿಹ ಮನಸಾ5
--------------
ರಘುರಾಮವಿಠಲದಾಸರು
ಪರಿಪಾಲಿಸು ದಯದಿ ನಿರುತ ದಾಸಪುರಂದರ ಗುರುವೆ ಧರ್ಮಪಥವನು ತೋರಿ ಉದಾರಿ ಪ ಸುರಮೌನಿಯೆ ಮುದದಿ ಹರಿನಾಮವಾ ಘನ ಬೀರುತಾ ನಿರಯಾ ಪಾತ್ರರ ಸಲಹಿದಿನೀ 1 ಬಾಣಾಲಕ್ಷಕೆ ಪಾದನ್ಯೂನ ಕವನ ನೀ ವಿರಚಿಸುತಾ ವನಜನಾಭನ ಸ್ತಪಿಸಿದ ನೀ 2 ಶಿರಿಶಾಮಸುಂದರನಾ ಚರಣಾಬ್ಜಕಾರಡಿಯಂದದಿ ಚರಿಪ ಜ್ಞಾನಿಯೆ ನಮಿಸುವೆನು 3
--------------
ಶಾಮಸುಂದರ ವಿಠಲ
ಪವಮಾನಸದಾ ಸಲಹೈ | ಪ್ರೇಮಾಂಬುಧಿಯೆ ದಾತ ಪ ಹರಿಕುಲೇಶ ಸಿರಿವರನ | ಚರಣಧ್ಯಾನಗೈಯದಲೆ ಕೊನೆಗೆ ತೋರೋ ಎನಗೆ 1 ನಾನೆಂಬೋ ಗರ್ವದಲಿ | ಶ್ರೀನಾಥನ ಪದ ಪೊಂದದೆ ಹೀನತನದಿ ಕಾಲಕಳೆದೆ | ಮಾಣದೆ ನೋಡಿಂದಿನಾ ದಿನದಿ 2 ಶ್ರೀ ಶಾಮಸುಂದರನ ದಾಸಾಗ್ರಣಿ | ಪವಿಸಮಾಂಗ ಶ್ವಾಸದೊಡೆಯೆ ಕೊರವಿಯ | ಪೋಷಿಸು ಗುರು ನಾವಂದಿಪೆ 3
--------------
ಶಾಮಸುಂದರ ವಿಠಲ
ಪಾಂಡುನಂದನರಂತೆ ತೋರುತಿಹರು ಪಂಡಿತೋತ್ತುಮ ಸತ್ಯಧ್ಯಾನ ತೀರ್ಥರು ಪ ನಿಜಜ್ಞಾನ ಚಿಹ್ನದಿ ವಿಜಯಾದಿ ಸುದ್ಣುಣದಿ ಸುಜನ ಗಣದಿ | ವೃಜಿನ ವರ್ಜಿತರಾಗಿ ಗಜವರದನಂಘ್ರಿಯುಗ ಭಜನ ತತ್ಪರರಾಗಿ 1 ಧರಮ ಬಲ್ಲವರಾಗಿ ಗುರುಭಕ್ತಿ ಯುತರಾಗಿ ವರ ಸುಗೀತಾರ್ಥ ತತ್ವಜ್ಞರಾಗಿ ಧರಣಿ ಮೇಲುಳ್ಳ ಸುಕ್ಷೇತ್ರ ತತ್ತೀರ್ಥ ಚರಿಸುತಲಿ ಕರಿತುರಗ ಪರಿಪಾಲಿಸುವರಾಗಿ 2 ಋಷಿ ವ್ಯಾಸರುಕ್ತಿಯಲಿ ನಿಶೆಹಗಲು ಮನವಿರಿಸಿ ವಸುಧಿ ಸುರರಿಗೆ ಸನ್ಮೋದಗೊಳಿಸಿ ವಸುದೇವಸುತ ಶಾಮಸುಂದರನ ವಶಗೊಳಿಸಿ ದಶ ದಿಶದಿ ಜಯಭೇರಿ ಅಸಮರೆಂಡೊಡೆಸುತಲಿ 3
--------------
ಶಾಮಸುಂದರ ವಿಠಲ
ಪಾದ ಲಂಬೋದರಅಂಬರಾಧಿಪ ಮನದ್ಹಂಬಲವ ನೀಡೆಂದು ಪ ನಾಕನಾಥನುತ ಪಿನಾಕಿಸುತ | ಕಾಕುಮತಿಯ ಕಳೆದು ಕಾಯೊಖುವಾಹನೇಕದಂತ 1 ಭದ್ರಮೂರುತಿಯೆ ಕರುಣಾಬ್ಧಿತ್ವರಿತದ್ಧರಿಸು ಎಂದು ನಮಿಪೆ ಅದ್ರಿಜೆ ಕುಮಾರ ನಿರುತ 2 ಸಿಂಧೂರ ವದನನೆ ಸುರವೃಂದ ವಂದಿತವಂದಿಸಿ ಬೇಡುವೆ ಶಾಮಸುಂದರನ ಪ್ರೀತಿ ಪಾತ್ರ 3
--------------
ಶಾಮಸುಂದರ ವಿಠಲ
ಪಾದಕ್ಕೆರಗುವೆ ಗುಹಾ ಪ ಮೋದರನ ಸಖ ಶಿವನ ಸುತ ತವ ಅ.ಪ ದುಷ್ಟ ಪದ್ಮನ ಬಾಧೆಯಾ ಸಹಿಸಲಿಕೆ ಕೂಡದೆ ಇಷ್ಟವನು ಪಾಲಿಸಿದ ಗುಹತವ 1 ಜನ್ಮವನು ಧರಿಸುತ್ತಲಧಿಕ ದು- ನಿರ್ಮೂಲನ ಮಾಡಿರುವ ಗುಹ ತವ ಪಾದಕ್ಕೆ|| 2 ರಿಂದ ಬಂದಾ ಶಾಪದಲಿ ತಾನೂ ಬಂದ ಶರಜಗೆ ದಾಸನನುದಿನ 3
--------------
ಬೆಳ್ಳೆ ದಾಸಪ್ಪಯ್ಯ
ಪಾಲಿಸೆನ್ನ ಮಾತೆ ಕರುಣದಿ ಪಾಲಾಂಬುಧಿ ಜಾತೆ ಪ ಕಾಲಕಾಲಕೆ ಕಮಲಾಲಯೆ ಗೋಪಿಯ ಬಾಲನಾಳುಗಳ ಊಳಿಗವಿತ್ತು ಅ.ಪ ಜಾನಕಿಶುಭಗಾತ್ರೆ ನಮಿಸುವೆ | ಮಾನಿತೆ ಚರಿತ್ರೆ ಸಾನುರಾಗದಿ ತವ ಸೂನುವೆನಿಪ ಪವ ಮಾನಸುಶಾಸ್ತ್ರದ ಜ್ಞಾನವಿತ್ತು ಸದಾ 1 ಶಂಭು ದೃಹಿಣಿ ವಿನುತೆ ತ್ರೈಜಗ ದಂಬೆ ಸುಗುಣ ಭರಿತೆ | ಕುಂಭಿಣಿ ಸುತೆ ದುರ್ಗಾಂಭ್ರಣಿ ಮಮಹೃದ ಯಾಂಬುಜದೊಳಿಹ ಬಿಂಬನ ತೋರಿ 2 ಪ್ರೇಮದಿಂದ ನೋಡೆ ಮನ್ಮನ | ಧಾಮದಿ ನಲಿದಾಡಿ | ಕಾಮಿನಿಮಣೀ ಗಜಗಾಮಿನಿ ಗೋಮಿನಿ ಶಾಮಸುಂದರನ ವಾಮಾಂಗಿಯೆ ಸದಾ 3
--------------
ಶಾಮಸುಂದರ ವಿಠಲ
ಪುಂಡರೀಕಾಕ್ಷನ ನಾ ಕಂಡೆ ಪಾಂಡುರಂಗೇಶನ ಪಾಂಡವಪಕ್ಷನ ಪ ಅಂಡಜವಾಹನೋದ್ದಂಡ ಪರಾಕ್ರಮ ಶುಂಡಲವರದ ಭೂಮಂಡಲ ಭರಿತನಅ.ಪ ದೇವದೇವೇಶನ ಭಾವಜಜನಕನ ಪಾವನಚರಿತನ ಭಾವುಕವರದನ ಶ್ರೀವನಮಾಲನ ಲಾವಣ್ಯಾಂಗನ ದೇವತರಂಗಿಣಿ ಪಾವನ ಪದನ1 ಪಾತಕ ಹರಣನ ಜ್ಯೋತಿಸ್ವರೂಪನ ಭೂತಳವಳೆದನ ಪಾತಕ ಹರ ಜೀಮೂತ ನೀಲಾಂಗನ [ಪ್ರೀತ] ಮಾಂಗಿರಿನಾಥ ಸುಂದರನ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪುರಂದರ ದಾಸರಾಯಾ | ನಮಿಸೆ ನಿಮ್ಮಚರಣ ಸರಸೀರುಹವಾ ಪ ಮೊರೆಹೊಕ್ಕ ಜನರ ನೀ | ಪೊರೆಯದೆ ಬಿಡುವರೆವರಪ್ರಹ್ಲಾದ್ ಗರುಹಿದಂ | ತರುಹು ಮಂತ್ರಾರ್ಥಿವ ಅ.ಪ. ದ್ವಾರಕ ಪುರದೊಳಗೆ | ನರ್ತನ ಗೈಯ್ಯೆವಾರ ಕಾಂತೆಯರೆಲ್ಲರೂ |ಭೋರಿಟ್ಟು ಮೊರೆಯುವ | ಸ್ವರಕೇಳಿ ಸುರರೆಲ್ಲಹರಿಯ ಓಲಗವಾರು | ಹೊಗುವರು ಎಂದರು1 ಓಲಗ ಸೇರ್ದ 2 ಷೋಡಶದ್ವಯ ಸ್ವರದಿ | ಮೈ ಮರೆಯುತ್ತಪಾಡಿ ಪೊಗಳಿ ಮುದದೀ |ಮೃಡವಂದ್ಯ ಹರಿಯವನ | ಕಡುಭಕುತಿಗೆ ಮೆಚ್ಚಿನೀಡುವೆ ವರವ ನೀ | ಬೇಡು ಬೇಡನೆ ಪೇಳ್ದ3 ಎಚ್ಚತ್ತು ಮುನಿ ನೋಡಿದ | ನಗುತಿರ್ಪಅಚ್ಚ್ಯುತನ್ನಾ ಬೇಡಿದ |ಸಚ್ಛಾರಿತ್ರನೆ ಕೇಳು | ನಿಚ್ಚಾಟೆನ್ನಯ ಕೂಡೆಪೆಚ್ಚ ಪೇರ್ಮಲಿ ಆಡು | ಲಕ್ಷಣಾಗ್ರಜನೇ 4 ಪುರಂದರ | ಗಡದಲ್ಲುದೀಸಿದ 5 ಚಿನಿವಾರ ವರದನಲ್ಲೀ | ಜನಿಸುತ್ತಧನ ನವಕೋಟಿಯ ಗಳಿಸೀ |ಘನ ಲೋಭಿ ದ್ವಿಜನ | ಜ್ಞಾನೋದಯ ಮಾಡುತಘನಗುಣ ಸಿರಿಪತಿ | ಅಣುಗನ್ನ ಪೊರೆದ 6 ಪುರಂದರ ದಾಸರ 7 ಹಿರಿಯ ವೈರಾಗ್ಯ ಪೊಂದಿ | ಸಕಲವನ್ನುಸಿರಿಕೃಷ್ಣಗರ್ಪಣೆಂದೀ |ಗುರು ವ್ಯಾಸರಲಿ ಪುರಂ | ದರನೆಂಬಂಕಿತ ಪೊಂದಿಪರಿಸರ ಮತ ಸರ್ವೋತ್ತಮವೆಂದು ಬರೆದಂಥ8 ಸಾರ ವಿಸ್ತಾರದಿವೇದ ಗಮ್ಯಾನಂದ | ಮಯನ ಬೋಧಿಸಿದ 9ನಾಲ್ಕಾರು ಜನ ಶಿಷ್ಯರ | ಜ್ಞಾನೀಗಳ ಲೋಕೋದ್ದಾರಕೆ ಈಯುತೆ ಕಾಕು ಮಾಯ್ಮತಗಳ | ಸಾಕಷ್ಟು ಖಂಡಿಸಿಮಾಕಳತ್ರನ ಮಹಿಮೆ | ಮನೆಮನೆ ಬೀರಿದ 10 ಮಾಸ ಪುಷ್ಯವದ್ಯದೀ | ಪರಮೋತ್ತಮಶಶಿ ರವಿಗಳ ಮೇಳದೀ |ರಸೆಯ ತ್ಯಜಿಸಿ ಗುರು ಗೋವಿಂದ ವಿಠಲನಎಸೆವ ಪಾದಗಳ್ಬಿಸಜ | ಸೇರುತ ಮೆರೆದಾ 11
--------------
ಗುರುಗೋವಿಂದವಿಠಲರು
ಪೂಜೆಗೈಯಲು ಬಾ ಸಖಿ ಸುಮುಖಿ ರಾಜಾಸಹೋದರಿಗೆ | ರಾಜೀವಾಂಬಕಿ ಪೂಜೆಗೈಯಲು ಬಾ ಸಖಿ ಸುಮುಖಿ ಪ ಮೃಗ ಮುದದಿ ಮುದದಿ ಶಕ್ರಂದನವಂದಿತ ಶ್ರೀಪಂಕಜಾಕ್ಷಿಗೆ 1 ಗಂಧಗರು ಕುಸುಮಾಕ್ಷತೆಯಿಂದಾ | ಸಿಂಧು ಜಾತೆಗೆ 2 ಶಾಮಸುಂದರನ ರಾಣಿಗೆ | ಹರಿಗೆ | ಭೂಮಿಜಾವರಗೆ | ಭೂಮಿಜಾತೆಗೆ ಜವದಲಿ ವಾಮಲೋಚನೆ 3
--------------
ಶಾಮಸುಂದರ ವಿಠಲ
ಪೋತನ ಪಾಲಿಸೋಪವಮಾನಾ | ಈ ಭೂತಳದೊಳು ನಿನ್ನ ಖ್ಯಾತಿ ಘುನಾ ಪದರಿಗೆ ಬಿದ್ದವನೆಂದು ಗ್ರಹಿಸೋ 1 ತಾಯಿಯು ಇಲ್ಲದ ಬಾಲಕನು | ಇವನ ಕಾಯಲು ನೀ ದಯಾ ಸಾಗರನು 2 ಶ್ವಾಸದೊಡಿಯ ನೀನೆಂತೆಂದು | ಶೃತಿ ಘೋಷಿಸುವದು ಆನತ ಬಂಧು3 ಶಿಶುವಿಗೊಲಿದು ನೀ ಸಲಹಿದರೆ | ದೇವ ಖರೆ 4 ಗ್ರಾಮ ಬಲ್ಲಿಟಗಿ ಕೃತವಾಸ | ಶಿರಿಶಾಮಸುಂದರನ ಪ್ರಿಯದಾಸ 5
--------------
ಶಾಮಸುಂದರ ವಿಠಲ
ಪೋದರಯ್ಯ ತೆರಳಿ ಪೋದರು | ಸಾಧುನರಸಿಂಹಾರ್ಯರು ಮಾಧವನ ಮಂದಿರಕೆ ಪ ಶ್ರೀಕರ ಕೃಷ್ಣಾತಟದಿ ಐಕೂರು ಗ್ರಾಮದಿ ನೆಲೆಸಿ | ಏಕೋ ಭಾವದಿಂ ಸದಾ ಶ್ರೀಕಾಂತನ್ನ ಧ್ಯಾನಂಗತರು 1 ಭಾಗವತ ಸಾರೋದ್ಧಾರ ಸತ್‍ಶಿಷ್ಯರಿಗೆ ಸಾರುತ ಸದ್ಭಕ್ತಿಜ್ಞಾನ | ವೈರಾಗ್ಯಮಾರ್ಗವ ತೋರಿ 2 ಮಧ್ವಮತದಿ ಸಿದ್ಧಾಂತ ಪದ್ಧತಿಯನುಸರಿಸಿ | ಸದ್ಧರ್ಮದಿ ನಡೆಸುವ ಪ್ರಸಿದ್ಧ ವಿದ್ವಾಂಸರು 3 ವ್ಯಾಸದಾಸಕೂಟ ಮರ್ಮಲೇಸಾಗಿ ಸಜ್ಜನ ತತಿಗೆ ಬ್ಯಾಸರಿಲ್ಲದಲೆ ಪ್ರತಿವಾಸರುಪದೇಶಿಸುವರು 4 ನಿತ್ಯಗೈವ ಕೃತ್ಯಂಗಳು | ತತ್ವೇಶ್ವರ ದ್ವಾರಾ ಹರಿಗೆ ಚಿತ್ತಪೂರ್ವಕರ್ಪಿಸುವ ಸೋತ್ತುಮರೋತ್ತುಮರು ಲೋಕಕೆ 5 ಅಂತರಂಗದಲ್ಲಿ ಲಯದ ಚಿಂತನೆಯಗೈದು ಮುಕ್ತಿ ಪಂಥವನ್ನೆ ಪಿಡಿದು | ಜ್ಞಾನ ಸಂತತಿಯ ಜಗದಿ ನೆಲೆಸಿ 6 ಯಾವ ಸಂಶಯವ್ಯಾಕೆ ಕೋವಿದವರ್ಯರಾದ | ಭಾವಜ್ಷರ ಮುಖದಿಂದ ದೇವಾಂಶರೆನಿಸಿಕೊಂಡವರು 7 ವ್ಯಯ ಸಂವತ್ಸರಂತ್ಯಮಾಸ | ದ್ವಯತಿಥಿ ಸಿತವರ್ಷ ಹಯಸಪ್ರಸುತನ ವಾರದಿ ತ್ರಯ ಝಾವ ರಜನಿಯಲ್ಲಿ 8 ಆಸನಸ್ಥರರಾಗಿ ನಾಸಿಕಾಗ್ರದಲಿಟ್ಟು ಶ್ವಾಸಮಂತ್ರ ಜ ಪಿಸಿ ಬಿಂಬೋಪಾಸನಗೈವ ಬುಧರು 9 ಸಾಗರಶಯನನ ಧ್ಯಾನ ಯೋಗ ಬಲದಿ ತಿಳಿದು ಭುವಿ ಭೋಗ ತೀರಿತೆಂದು ಕೊಯಿಲು ತಾಗಿದ್ದೊಂದೆ ನೆವನದಿಂದ 10 ಆಶೆಕ್ರೋಧಂಗಳನಳಿದು | ಕ್ಲೇಶಮೋದ ಸಮ ತಿಳಿದು | ಭೂಸುರ ವೃಂದಕೆ ಸುಗ್ರಾಸವಿತ್ತು ತೋಷಿಸುವರು 11 ಹರಿಯಪುರಕೆ ಪೋಪ ಸಮಯ ಹರಿಸು ಬಂದು ಕೃಪ್ಣೆ ಇವರ ಚರಿಯ ನರೆÉದ ಜನಕೆ ತೋರಿ 12 ಸ್ವಾಮಿಶಾಮಸುಂದರನ | ನಾಮದ ಸನ್ಮಹಿಮ ಸತತ | ಪಾಮರ ಜನಕೆ ಪೇಳಿ ಪ್ರೇಮದಿಂ ಸಲಹಿದವರು 13
--------------
ಶಾಮಸುಂದರ ವಿಠಲ
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ