ಒಟ್ಟು 293 ಕಡೆಗಳಲ್ಲಿ , 65 ದಾಸರು , 281 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೊ ಪತಿತಪಾವನ್ನಾ ನಿನ್ನ ಪಾಲಿಗೆ ಬಂದೆ ಮೋಹನ್ನಾ -ಆಹಾ ಪಾಲಾಬ್ಧಿಶಾಯಿ ಗೋಪಾಲರೊಡೆಯಾ ಲೋಕ ಪಾಲಕ ವಿನುತಾ ಗೋಪಾಲ ಫಾಲಾಕ್ಷನೆ ಪ ಬಂದೆನೊ ನಿನ್ನ ಹಂಬಲಿಸಿ ನಾನು ನೊಂದು ಸಂಸ್ಕøತಿಯಲ್ಲಿ ಸೂಸಿ ಈಸಿ ಮುಂದಣ ನೆಲೆಗಾಣೆ ಗುಣಿಸಿ ಏನೇ ನೆಂದು ಪೇಳಲೊ ವಿಸ್ತರಿಸಿ -ಆಹಾ ಮಂದರಧರ ನಿನ್ನ ಮಂದಿರದ ದಾಸಿ ಕಂದನು ನಾನೆಲೊ ಕಣ್ತೆರೆದು ನೋಡೊ 1 ಪೊಂದಿದೆ ಭಾರವವೊಹಿಸು ಪ್ರತಿ ಬಂಧಕವ ಪರಿಹರಿಸು ನಿನ ಗೊಂದಿಸುವೆ ಕೊಡು ಲೇಸು ಅತ್ಯಾ ನಂದದಲ್ಲಿ ಚಿತ್ತವಿಡಿಸು -ಆಹಾ ಇಂದಿರಾ ಮಂದಿರಾ ಸುಂದರ ಯೋಜನ ಗಂಧಿಯ ಬಸುರಿಲಿ ಬಂದ ಭವದೂರಾ 2 ನಿಂದ್ಯ ಕರ್ಮವು ಮಾಡಿದವನ ದೂತ ರಿಂದ ತರಿಸಿದೆ ತ್ರಿಭುವನಾ ಜಯ ವೆಂದು ಕೊಂಡಾಡಲು ಜವನಾ ಭೀತಿ ಯಿಂದ ಮಾಡಿದ ನಿನ್ನ ಸ್ತವನಾ -ಆಹ ಒಂದಾನಂತವಾಗಿ ದ್ವಂದ್ವಪಾಪಗಳಿಗೆ ನಿಂದಿರಬಲ್ಲವೆ ಸಂದರುಶನವಾಗೆ 3 ಕಂದುಕ ಪುಟಿ ಸೂತ ಬಳುಕಿ ದೈತ್ಯ ವೃಂದ ಮೋಹಕವಾಗಿ ಸಿಲುಕಿ ಸುರ ಸಂದೋಹಕೆ ನೀನೆ ಘಳಿಕಿ ನಿಜ ವೆಂದು ಮಾನವರಿಗೆ ಬಳಿಕಿ -ಆಹಾ ಎಂದೆಂದಿಗೆ ಸಿದ್ಧ್ದಾಗಂಧಮಾತುರ ಕಳೆ ಗುಂದದೆ ಮತಿ ಕೊಡು ನಂದಕಾನಂದ ಹಸ್ತನೆ 4 ಹಂದಿ ನಾಯಿ ನರಿ ರಾಸಾ ಜನ್ಮ ಬಂದರೆ ಎನಗದು ಹರುಷಾ ಬಹು ಮುಂದುಂಟು ರಹಸ್ಯಾ ಮನಸಾಪೇಕ್ಷಾ ಸಂದೇಹ ಮಾಡಿಸೊ ಶ್ರೀಶಾ -ಆಹಾ ಯೋನಿ ಸಂದೀದ ಕಾಲಕ್ಕು ಒಂದು ವಿಂಶತಿ ಮತ ಹೊಂದಿಸದಿರು ಹರಿ5 ಅಂಧಃಕಾರದೊಳೆನ್ನ ತಂದೆ ಇದ ರಿಂದ ನಿನಗೇನೊ ಮುಂದೆ ಲಾಭ ಬಂದಾದರೂ ಇಲ್ಲಾ ಇಂದೆ ಸುಖ ಸಾಂದ್ರ ಕಡಿಮೆನೊ ಮುಂದೆ -ಆಹಾ 6 ಇಂದಿರಾವರ ರಾಮ ಶಾಮಾ ರಾಮ ಚಂದ್ರ ಚತುರ ಸಾರ್ವಭೌಮಾ ದಿವ್ಯ ಸಿರಿ ಉರಪ್ರೇಮಾ ಮುಚ ಕುಂದ ಪಾಲಕ ನಿಸ್ಸೀಮಾ -ಆಹಾ ಇಂದ್ರಿಯಂಗಳು ತನು ಸಂಬಂಧದೆಡೆಗೆ ಪೋಪಾ ತೊಂದರೆ ಬಿಡಿಸೊ ಗೋವಿಂದ ಗೋವಳರಾಯಾ 7 ದುಂದುಭಿ ಭೇರಿಯ ರಭಸಾ ಮಹಾ ಬಂಧುರಾ ನೆರೆದ ವಿಶೇಷಾ ಮಂತ್ರಿ ಮಂದಿ ಪರಿವಾರ ಭೂಷಾ -ಆಹಾ ಬಿಂದು ಮಾತುರ ಇವು ಮುಂದಿನೈಶ್ವರ್ಯ ಸಿದ್ಧಾ ಕುಂದಗೊಡದೆ ಬೊಮ್ಮನಂದದಿ ಪಥತೋರಿ8 ಹಿಂದಣ ಬಲವನ್ನು ಕಾಣೆ ನಾನು ಅಂದು ನುಡಿದದ್ದು ಮಾಣೆ ಅನು ಬಂಧಗಳಿಗೆ ಕಾಮಧೇನೆ ಸತ್ಯ ಪತಿ ನೀನೆ -ಆಹಾ ನಂದನ ಮನೋಹಂಸಾ 9 ಸಂದಣೆ ತೊಲಗದೆಂಬಿಯಾ ಆಹಾ ಬಂದರೆ ಬರಲಿ ಎಂಬಿಯಾ ಇದೇ ಸಂದಲಿ ಅನುಗಾಲ ನ್ಯಾಯಾ ಅನು ಸಂಧಾನ ನಿನ್ನಲಿ ಪ್ರೀಯಾ -ಆಹಾ ಇಂಧನದೊಳು ವಾಯು ವ್ಯಾಪಿಸಿದದ ರಂದದಿ ಸರ್ವಾಂಗಾ ನಿಂದಿಹ ನಿರ್ದೋಷಾ 10 ಕಂದರ್ಪ ಕೋಟಿ ಲಾವಣ್ಯ ಅರ ವಿಂದ ನಯನ ಗುಣ ಗಣ್ಯ ದೀನ ಮಂದಾರ ಸತತ ತಾರುಣ್ಯ ಸರಿ ಬಂದಂತೆ ಮಾಡೊ ಕಾರುಣ್ಯ -ಆಹಾ ವಂದೆದೈವವು ನಾನೆಂದ ಮುರಾರಿಯ ಕೊಂದು ಬಿಸುಟಾಧೀರ ನಂದಕುಮಾರಕ11 ಇಂದ್ರಿಯಂಗಳ ಗಾತ್ರಾ ಪ್ರಾಣಾ ಸರ್ವ ಕುಂದಣ ಪುಟದಂತೆ ವರಣಾ ಕಂಬು ಕಂಧರ ಪೊಳಿಯಲಿ ವಚನಾ -ಆಹಾ ಸಂದರ್ಭವಾಗಿ ಏನೆಂದದೆ ಸಚ್ಛಾಸ್ತ್ರ ವೊಂದಿಬರಲಿ ಮುಕುಂದಾ ಮುದ್ದುರಂಗಾ12 ಅಂದಿಗೆ ಪೊಂಗೆಜ್ಜೆ ಮೆರೆಯೆ ತಂದೆ ಯೆಂದು ಕುಣಿಯೊ ಎನ್ನ ಧೊರಿಯೆ ವಾದ್ಯಾ ಧಿಂ ಧಿಂ ಧಿಮಿಕೆಂದು ಮೊರೆಯೆ ಮೇಲೆ ವೃಂದಾರಕ ಪುಷ್ಪಗರಿಯೆ -ಆಹಾ ಇಂದಿನ ಉತ್ಸಾಹ ಇಂದ್ರಾದ್ಯರು ಪೂತು ರೆಂದು ಪೊಗಳೆ ನಗೆಯಿಂದ ನೋಡುವದೆ 13 ಮಧ್ವರಮಣ ಪಾಪಿ ಭಕ್ತಿ ಜ್ಞಾನ ಸದ್ಧರ್ಮ ವೈರಾಗ್ಯಯುಕ್ತಿ ಕೊಡು ಭುಕ್ತಿ ಇತ್ತು ಮುದ್ರಧಾರನಾ ಮಾಡಿ ಮುಕ್ತಿ -ಆಹಾ ನಿರ್ಧಾರಮಾರ್ಗವ ಬದ್ಧದಿ ತೋರಯ್ಯಾ ಪತಿ 14 ಬಂಧೂರ ಕೀರ್ತಿ ಸಂಪನ್ನಾ ಕರಿ ಬಂಧ ವಿಮೋಚನ್ನ ನಾ ರಂದ ವರದ ಸುಪ್ರಸನ್ನಾ ಶತಾ ನಂದ ಕಾನನವಾಸಾ ಘನ್ನಾ -ಆಹಾ ಸಿಂಧುಜನಕನೆ ಪರಂಧಾಮತ್ರಯ ಸತ್ಯ ಸಂಧ ವಿಜಯವಿಠ್ಠಲೆಂದು ವದನ ಎನ್ನಾ15
--------------
ವಿಜಯದಾಸ
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಿಡಿದೆಲೆ ಬಿಡಬೇಡ್ಹುಡುಗಹುದು ಇದು ಕೆಡದ ವಸ್ತು ನಿಜ ಪಿಡಿ ಬಿಗಿದು ಪ ಎಡರುತೊಡರಿಗೆದೆಒಡೆಯದೆ ದೃಢವಿಡಿ ಜಡಭವ ತೊಡರನು ಕಡಿಯುವುದು ಅ.ಪ ಭಕ್ತಿಯಿಂದೆಂಬುವ ಗೂಟ ಜಡಿದು ಮಹ ಸತ್ಯವೆಂದೆಂಬ ಹಗ್ಗ ಸುತ್ತ ಬಿಗಿದು ಚಿತ್ತೆಂಬ ಗಂಟ್ಹಾಕು ಎತ್ತವದಲದಂತೆ ನಿತ್ಯ ಮುಕ್ತಿಸುಖ ಕೊಡುತಿಹ್ಯನು 1 ಸುಜನ ಸಂಗವೆಂಬ ಮಂದಿರದಿ ಮಹ ಭಜನವೆಂದೆಂಬುವ ಗೋದಿಲದಿ ನಿಜಧ್ಯಾನ ಮೇವು ಹಾಕಿ ಭುಜಶಾಯಿಪಾದ ನಿಜಧೇನುವನು ಕಟ್ಟಿ ಮಜದಲಿ ನಲಿಯೊ 2 ಆರಿಗೆ ಸಿಗದಂಥ ಒಡವೆಯಿದು ಸರ ದಾರನೆ ನಿನಗೆ ಸಿಕ್ಕಿಹ್ಯದು ಸಾರಸೌಖ್ಯಕ್ಕೆ ಮೂಲಧಾರನಾಗಿಹ್ಯ ಧೀರಶ್ರೀರಾಮಪಾದ ಶೂರನೆ ಬಿಡದಿರು 3
--------------
ರಾಮದಾಸರು
ಪೀಠಸಮರ್ಪಣೆಕಂ|| ಮಾನಸ ಪೂಜೆಯ ವಿರಚಿಸಿಶ್ರೀನಿಲಯನ ಚರಣಗಳಿಗೆ ಪಾವುಗೆಗಳ ನಾಂಆನತನಾಗುತಲೊಪ್ಪಿಸಿಭಾನುವಿನ ಪಥದಲಿಳುಹಿ ಬಿಂಬದಿ ಭಜಿಪೆಂಬಂದೀ ಪೀಠದಿ ನೆಲಸೊ ಹೃÀದಯಮಂದಿರದಿಂದಾ ಕರುಣದಿಂ ವೆಂಕಟರಾಯಾ ಪಪುರದೊಳು ವಿಮಲೆಯುತ್ಕುರುಷಣಿಯಗ್ನಿ ಯೊಳಿರುವಳು ಜ್ಞಾನೆ ದಕ್ಷಿಣದೇಶದಿನಿರುರುತಿಯೊಳು ಕ್ರಿಯೆ ವರುಣನೊಳ್ಯೋಗಾಖ್ಯೆಮರುತನೊಳ್ಪ್ರಹ್ವಿ ಸೋಮನೊಳ್ ಸತ್ಯೆುಹಳಾಗಿ 1ಈಶನೊಳೀಶಾನೆ ಮಧ್ಯದೊಳನುಗ್ರಹೋಪಾಸಿಕೆಯಾದಿಯಾಗಿರುತಿಹರುವಾಸುದೇವನೆ ನಮ್ಮನೊಲಿದು ರಕ್ಷಿಸುವರೆಸಾಸಿರ ನಾಮಸನ್ನುತನೆ ಸಂತಸದಿಂದ 2ಅನಲನೊಳ್ ಧರ್ಮ ನಿರುರುತಿಯೊಳ್ ಜ್ಞಾನವುತನುಗೊಂಡು ವೈರಾಗ್ಯ ಮರುತನೊಳುವಿನಯದಿಂದೈಶ್ವರ್ಯನೀಶದೇಶದಿ ಸೇವೆಗನುಕೂಲರಾಗಿ ಕಾದಿರುವರೆನ್ನೊಡೆಯನೆ 3ಮುಂದೆಯಧರ್ಮ ದಕ್ಷಿಣದೊಳಜ್ಞಾನವುಹಿಂದೆಡೆಯೊಳಗವೈರಾಗ್ಯ ತಾನುಇಂದುದೇಶದೊಳನೈಶ್ವರ್ಯನೊಂದಿರುವನುಇಂದೆಮ್ಮನೊಲಿದು ರಕ್ಷಿಸಲು ಗೋವಿಂದನೆ 4ಕಲಶದೊಳ್ ಗಂಗಾದಿ ನದಿಗಳು ಶಂಖದಜಲದೊಳು ಬ್ರಹ್ಮಾದಿಗಳ ತೀರ್ಥಸಂಘವುಒಲಿದಘ್ರ್ಯ ಪಾದ್ಯಾಚಮನ ಸ್ನಾನ ಶುದ್ಧಾಂಬುಗಳ ಪಂಚಪಾತ್ರೆಗಳೊಳು ನೆಲಸಿವೆ ಸ್ವಾಮಿ 5ಪುರುಷಸೂಕ್ತದಿಂದೆನ್ನ ಶರೀರದೊಳ್ಪೂಜಿಪವರಬಿಂಬದೊಳು ನ್ಯಾಸಗೈದಿಹೆನುಪರಮ ಮಂತ್ರಾಧಿದೇವತೆಗಳನೆಂಟು ಪನ್ನೆರಡಕ್ಕರದ ವಿದ್ಯೆುಂದಲು ಜಗದೀಶ 6ಗುರುವಾಸುದೇವಾರ್ಯರೂಪದಿ ಶ್ರೀರಂಗಪುರದ ಕಾವೇರಿ ತೀರದೋಳು ನೀನೆಕರುಣಿಸಿದತಿ ಗೋಪ್ಯ ಮಾರ್ಗದಿಂದರ್ಚಿಪೆತಿರುಪತಿ ಕ್ಷೇತ್ರದ ದೊರೆಯೆ ವೆಂಕಟರಾಯ 7ಓಂ ನಂದಗೋಪಪ್ರಿಯಾತ್ಮಜಾಯ ನಮಃ
--------------
ತಿಮ್ಮಪ್ಪದಾಸರು
ಪುಟ್ಟ ಬಾಲನೆ ಮನೆ ಕಟ್ಟೀಲಾಡೋಕೆಟ್ಟ ಗೋಪರ ಮನೀಗ್ಹೋಗಬ್ಯಾಡಾ ಪ ನಿನ್ನ ಮಗನು ಮೆದ್ದು ಬೆಣ್ಣೆ ಪಾಲ್ ಮೊಸರನೆಉಣ್ಣೀಸುತಲೆ ಬೆಕ್ಕಿಗುಂಡನಮ್ಮಸಣ್ಣ ಮಕ್ಕಳ ಕೈಯ್ಯ ಕಣ್ಣಿನಿಂದಲೆ ಕಟ್ಟಿಓಡುತಲಿಹರಮ್ಮಾ ನೋಡೆಂಬರೋ 1 ಕಂದಯ್ಯಾ ಗೋಪೆಯರ ಮಂದಿರಕ್ಹೋಗದೆಇಂದು ಹುಟ್ಟಿದ ದಿನಾ ಎರಕೋ ಕೂಸಮಂದಿರದೊಳು ವಿಪ್ರವೃಂದವ ಪೂಜಿಸಿಛಂದಛಂದದ ವಸ್ತ ತಂದಿಡುವೆ 2 ಮಂದಿ ಮಕ್ಕಳು ನೋಡು ಛಂದದಿ ತಮ್ಮನೆಮುಂದಲೆ ಊರೊಳಗಾಡೆಂಬರೊನಿಂದ ಧಾಂಧಲೆ ಭಾಳ ಬಂದು ಹೇಳುವರಲ್ಲೋಇಂದೆಲ್ಲಿ ಪೋಗದಿರಿಂದಿರೇಶಾ 3
--------------
ಇಂದಿರೇಶರು
ಪೂಜಾ ಮಾಡೋಣ ಬಾರೆ ಶ್ರೀ ಲಕುಮಿಯ ಪೂಜಾ ಮಾಡೋಣ ಬಾರೆ ಪ. ವನಜನ ನೇತ್ರೆಯ ತ್ರಿಜಗನ್ಮಾತೆ ಪ್ರಖ್ಯಾತೆ ಅ.ಪ. ಅರ್ಥಿಯಿಂದಲಿ ಇಟ್ಟು ಚಿತ್ತದೊಲ್ಲಭನ ಸ್ತುತಿಸಿ ಬೇಡಿಕೊಂಡು ಮತ್ತೆ ನಿಮಗೆ ಕರವೆತ್ತಿ ಪ್ರಾರ್ಥಿಸುತಲಿ 1 ಗಂಧಪುಷ್ಪ ವಸ್ತ್ರಾಭರಣ ಆನಂದ ದೀಪಗಳಿಂದ ಇಂದು ನಾ ಪೂಜಿಪೆ ಮಂದಿರದೊಳು ಆನಂದಭರಿತಳಾಗಿ ಬಾ 2 ರುಕ್ಮೀಶವಿಠಲನ ಪಟ್ಟದ ರಾಣಿ ವಕ್ಷಸ್ಥಳದಲಿನಿಂತು ನಲಿಯುತ ಬಾ ಭಕ್ತಜನರ ಮನೋಭೀಷ್ಟವ ಸಲಿಸುತ ಬಾ 3
--------------
ಗುಂಡಮ್ಮ
ಪೂಜಿಪೆ ಜಗದಂಬಿಕೆಯಾ ಅಂಬಿಕೆಯ ಮಾನಸ ಮಂದಿರದಲಿ ಭಕ್ತಿಯಿಂದ ಮಾ ಪತಿಸೇವಾ ನೀ ನಿರುತದಿ ನೀಡೆ ಪ. ವರ ಗಂಗಾಜಲದಿಂದಭಿಷೇಕ ಜರಿ ಪೀತಾಂಬರ ಕಂಚುಕದಿಂದ ಪರಿಮಳ ಪುಷ್ಪ ಸುರೋಜದಿಂದ ಅಲಂಕರಿಸುವೆನೀಗಾ ನಾ ಅಲಂಕರಿಸುವೆ 1 ಪರಿಪರಿ ಪತ್ರಹೂಗಳಿಂದ ಅರ್ಚಿಪೆ ಮುದದಿಂದ2 ಕದಳಿ ಖರ್ಜೂರ ದ್ರಾಕ್ಷಾದಿಗಳ ಬದರಿ ದಾಳಿಂಬ ನೈವೇದ್ಯಗಳಿಂ ಅರ್ಪಿಪೆ ಅಂಬಿಕೆಗೆ ನಾ ಅರ್ಪಿಪೆ ಅಂಬಿಕೆಗೆ3 ಆ ರಜತಾದ್ರಿನಿವಾಸಿಗೀಗಾ ಶ್ರೀ ಶ್ರೀನಿವಾಸನ ಸೋದರಿಗೀಗಾ ಆರುತಿ ಬೆಳಗುವೆ 4
--------------
ಸರಸ್ವತಿ ಬಾಯಿ
ಪೊಂದಿದ ಭಕುತರ ತ್ವರದಿ ಪೊರೆಯುವವನಿಗೆ | ನಂದಕಂದ ವಂದಿಸಿ ಕರುಣದಿ || ಇಂದು ಮುಖಿಯರು ಶಿಂಧುಶಯನಾಗೆ | ಮಂದಿರದೊಳಗೆ ಆನಂದದಿಂದ ಶ್ರೀ || ಶಾಮಸುಂದರಗೆ | ಘನ ಮೋದದಿಂದ | ಜಯ ಮಂಗಳವೆಂದು ಪಾಡಿರೆ ||
--------------
ಶಾಮಸುಂದರ ವಿಠಲ
ಬಡತನ ವ್ಯಾತಕೆ ನಮಗೆ ಕಡೆಗಣ್ಣ ನೋಡಿದಿದ್ದರೆ ನಿಮ್ಮ ಭೂಷಣ ಬಿಡುವವ ನಾನಲ್ಲ ನಿಮಗೆ 1 ಪಿಡಿದು ಪಾದವ ನಿಮ್ಮ ಬಡವನೆಂದೆನಿಸಲು ಜಡನುಡಿ ನಿಮಗೆ ನಿಮಗೆ ಭೂಷಣವೆ ಬಿಡುಬಿಡು ಭಕ್ತವತ್ಸಲನೆಂಬ ಬಿರುದವ ಒಡಲ ಹೊರೆವ ದೊಂದಿರದವಗೆ 2 ಬಡವನಾಧಾರವೆಂದು ಕೊಂಡಾಡುತಿರಲಿನ್ನು ಬಡಿವಾರ ವ್ಯಾತಕ್ಕೆ ನಿಮಗೆ ನುಡಿ ಮಾತಿನಂತಲ್ಲ ಪೊಡಿವಿಯೊಳಗಿದು ಬಿಡುವಾಂಗಿಲ್ಲ ನಮ್ಮ ನಿಮಗೆ 3 ಪಿಡಿದ ಪಾದವ ನಿಮ್ಮ ಬಿಡೆನೆಂಬ ದೃಢವಿದು ಒಡೆಯ ಕೇಳಿನ್ನಿ ಮಾತು ಬಿಡಿಸಿಕೊಂಡರೆ ನಿಮ್ಮ ಬಿಡುವರಾರಿನ್ನು ನೋಡು ತಿಳಿದು ಗುರುನಾಥ4 ಅಡಿಗಳ ಕುಡಿಯೊಳುವಿಡಿದು ನಾ ನಿಮ್ಮನು ಬಡುವೆ ಸದ್ಗತಿ ಹರುಷವನು ಮೂಢಮಹಿಪತಿಗಿನ್ನು ಬ್ಯಾರೆ ಗತಿಯ ಕಾಣಿ ಒಡೆಯ ನಿಮ್ಮಪಾದಪದ್ಮದಾಣಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಡವನಾಗಿರುವನಕ ಭಯವಿಲ್ಲವಯ್ಯ ಪ ಕೆಡುಕ ವಂಚಕ ಕಳ್ಳ ಬಳಿಬಾರನಯ್ಯ ಅ.ಪ ಬಡವತಾನಡಿಗಡಿಗೆ ಕಡುದೈನ್ಯಭಾವದಲಿ ದೃಢ ಭಕ್ತಿಯೊಳು ಹರಿಗೆ ಪೊಡಮಡುವನು ಕಡವರವನಾಂತವನು ಕಡುನುಡಿಗಳನು ಕಲಿತು ಪೊಡವಿಚನೆಂದೆನಿಸಿ ಕಡುಲೋಭಿಯಹನು 1 ಗುಣ ಶಾಂತಿ ನಯ ವಿನಯ ಹಣವಂತಗಿರದಯ್ಯ ಹಣವು ಕಪಿಯಂತವನ ಕುಣಿಸದಿರದು ಉಣಿಸು ನಿದ್ರಾದಿಗಳು ಕ್ಷಣಮಾತ್ರವಿಲ್ಲವಗೆ ಹಣದಾಸೆ ಎಳ್ಳಷ್ಟು ಬೇಡ ಮಾಂಗಿರಿರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಂದ ಶಿರಿ ರಾಘವೇಂದ್ರಮೂರುತಿ ಮನ ಮಂದಿರದೊಳಗೆ ಸರಸದಿ ಪ ಬಂದನು ಭಕುತನ ಬಂಧನ ಬಿಡಿಸ್ಯಾ - ನಂದನೀಡುತ ಮುದದಿಂದಲಿ ಭರದಿಂದಅ.ಪ ಮುದದಲಿ ಶೋಭಿಪ ವದÀನದೊಳೊಪ್ಪುವ ರದನದಿ ಶೋಭಿತನು ಉದಿಸಿದ ಎನ್ನಯ ಹೃದಯಾಂಬರದೊಳು ಸದಯ ಮೂರುತಿ ಧರನು ಆಗಾಡಿದ ಮೃದು ನುಡಿಯಾ ಅತಿ ಭಿಡಿಯಾ ಪದಸಕಿತ - ಸುಖನೀಡುತ ಇದು ಮೊದಲಾ ಗಿಹ - ಅದ್ಭುತ ಮಹಿಮೆಯ ಪದÀದಲಿ ತೋರುತ ಸದಮಲ ಮನದೊಳು 1 ಕುಣಿದಾಡುತ ಗುಣಗಳ ಗಣಿಸುವ ಭಕ್ತರ ದಣಿಸೆನೊ ಭವದೊಳಗೆ ಗಣಿಸುವೆ ದಾಸರ ಗಣದೊಳಗವನಿಗೆ ಉಣಿಸುವೆ ಪರಸುಖ ಕೊನಿಗೆ ಬೇಡಿದ ಇಷ್ಟವ ಕೊಡುವೆ ದುರಿತವ ತಡಿವೆ ಪೊರೆಯುತಾ ಬೆರೆಯುತಾ ಮಣಿಸುತಾ ತಿಳಿಸುತಾ ಕ್ಷಣ ಕ್ಷಣದಲಿ ವೀಕ್ಷಣದಿಂದಲಿ ಶÀ್ರಮ ತೃಣ ಸಮವೋ ಧಣಿ ನಾ ನಿನಗೆಂದು 2 ಧಿಟಜ್ಞಾನ - ಭಕುತಿಯ ಥಟನೆ ಕೊಡುವೊ ಉತ್ಕಟ ಮಹಿಮನೋ ನಾನು ಪಟುತರ ಎನಪದ ಚಟುಲ ನಳಿನಯುಗ ಷಟ್ಪದ ಸಮ ನೀನೋ ನಾನಾಡಿದ ನುಡಿ ಖರೆಯಾ - ಮರೆಯಾ ಕೊಂಡಾಡೆಲೋ ನೀಡೆಲೋ ಘಟಿಸುವೆ ಸಮಯಕೆ - ಧಿಟ ಗುರುಜಗನ್ನಾಥ ವಿಠಲನ ಹೃತ್ಯಂ - ಪುಟದಿ ತೋರುವೆನೆಂದು 3
--------------
ಗುರುಜಗನ್ನಾಥದಾಸರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಂದಾನೊ ನಂದಸುತ ಈ ಮಂದಿರದಿ ಪ ಮುರಳಿಯನೂದುವನು ತುರುಗಳ ಕರೆಯುವನುಸರಸಿಜಾಕ್ಷರೆ ನಮ್ಮ ಶರಣರಂಗಳದೊಳು1 ತುರುಗಳ ಕಾಯುವನು ಸರಗಳ ಮುಡಿದಿಹನುಸರಣೀಯೊಳಗೆ ಮುದ್ದು ಚರಣವನಿಕ್ಕುತ 2 ಅರಳೆಲೆ ತೂಗುವನು ಕೃಷ್ಣ ಅರಗಿಣಿಯಂತಿಹನುಹರುಷವ ಬಡಿಸುತವರ ಇಂದಿರೇಶನು 3
--------------
ಇಂದಿರೇಶರು
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ