ಒಟ್ಟು 2602 ಕಡೆಗಳಲ್ಲಿ , 107 ದಾಸರು , 1651 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಪೋಶನವ ಹಾಕೆ ಒ(ವೈ?) ಯ್ಯಾರಿ ಲೋಕಸುಂದರಿ ಶ್ರೀಪತಿಯ ಕರದಲ್ಲಿ ಘೃತಧಾರೆ ಲೋ- ಕಂಸಾರಿ ಕೈಯಲ್ಲಿ ತ್ರಿಧಾರೆ ಪ ಕೊಳಲನೂದುತಾಕಳನೆ ಕಾಯುತ್ತ ದಧಿಚೋರನಾಗಿ ಕಳಲಗಡಿಗೆಯನೊಡೆದು ಪೋಗುತ್ತ ಸೆಳೆದು ಗೋಪೇರ ಸೀರೆಗಳ ಮರಕೆ ಕಟ್ಟಿದ್ದ ಕರಕೆ 1 ವಾರಿಜಾಕ್ಷಗೆ ಒಲಿದು ನಲಿಯುತ್ತ ವರ ಮೋಹನಾಂಗಿ ಸಾರಸಮುಖಿ ಸರಸವಾಡುತ್ತ ಮಾರಜನಕನ ಮನವ ಮೋಹಿಸುತ ಮುಖನೋಡಿ ನಗುತ2 ನಂದನಂದನ ನರನ ಸಾರಥಿಯೊ ಭೀಮೇಶಕೃಷ್ಣ ಕೊಂಡಾಪೋಶನ ಕುಳಿತ ಸತಿಜೊತೆಗೆ ಚೆಂದದಿಂದಲಿ ಬೆಳಗಲಾರತಿಯ ಪಾಡಿ ಕೀರುತಿಯ 3
--------------
ಹರಪನಹಳ್ಳಿಭೀಮವ್ವ
ಆರ ಮಗನೆಂದರಿಯೆವೆ ಇವ ನಮ್ಮಕೇರಿಯೊಳು ಸುಳಿದು ಪೋದ ಪ. ನೀಲವರ್ಣನ ಮೈಯ್ಯವ ತುಲಸಿ ವನ-ಮಾಲೆ ಕೊರಳೊಳು ಕೌಸ್ತುಭಬಾಲಪ್ರಾಯದ ಚೆನ್ನಿಗ ಬಂದು ಪೋ-[ಗ]ಲು ಸನ್ನೆಯ ಮಾಡಿದ1 ಚಿಕ್ಕಪ್ರಾಯದ ಚೆನ್ನಿಗ ಯೌವನದಲುಕ್ಕುವ ಕಡುಚೆಲುವನೆಚೊಕ್ಕಟಾದ ಚದುರನೊಬ್ಬ ಕುಚಕೆ ಕೈ-ಯಿಕ್ಕಿ ಕಸ್ತೂರಿ ಪೂಸಿದ 2 ಪೀತಾಂಬರನುಡಿಸಿದ ವಿನಯ ಸವಿ-ಮಾತುಮಾತಿಗೆ ನಗಿಸಿದಪ್ರೀತಿಯಿಂದಲಿ ತನ್ನ ಚೆಂದುಟಿಯ ಅಧರಾ-ಮೃತವನುಣಿಸಿದ3 ಪಾರಿಜಾತವ ಸೂಡಿದ ಕಸ್ತೂರಿಯಗೀರುನಾಮವ ತಿದ್ದಿದದೂರದಲಿ ನಿಂತು ಎನ್ನ ಸೋಗೆಗಣ್ಣಓರೆನೋಟದಿ ನೋಡಿದ4 ಆಗ ಮೊದಲಾಗಿ ತನುವಾ ಮದನಶರತಾಗಿ ಕಟ್ಟುಡುಗಿದಾವೆಬೇಗದಲಿ ಹಯವದನ ಬಂದೆನ್ನಮೋಹದಿಂದಲಿ ಕೂಡಿದ5
--------------
ವಾದಿರಾಜ
ಆರತಿ ಬೆಳಗುವೆ ನಾ ಸದ್ಗುರುವಿಗೆ ಪ ಭಾವದ ಪೊಂಬ್ಹರಿವಾಣ ಭಕುತಿಯಾ ತೀವಿದ್ಯಾರತಿಜ್ಞಾನ ಜ್ಯೋತಿಯಲಿತ್ತಿ1 ಮುಖದಲಿ ನುಡಿಯುತ ನಾಮಾವಳಿಯೂ ಸಕಲರು ಪ್ರೇಮದಿ ಹಾಕಿ ಚಪ್ಪಾಳಿಯಾ2 ನಯನದಿನೋಡಿ ಶರಣವ ಮಾಡೀ ಭಯವನೀಡಾಡಿ ಸ್ತುತಿಗಳ ಪಾಡಿ3 ಇಂದಿನ ದಿನದಾನಂದವು ನಮಗ ಹಿಂದಿನ ಪುಣ್ಣ್ಯಿದಿರಿಟ್ಟಿತು ಈಗ 4 ಒಡಲ್ಹೊಕ್ಕು ಮಹಿಪತಿನಂದನೊಡಿಯನಾ ಪಡೆಯ ಬನ್ನಿರೀಬ್ಯಾಗ ಮುಕುತಿಯ ಸಾಧನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆಲದೆಲೆಯ ಮ್ಯಾಲೆ ಮಲಗಿದ್ದಾದಿಕೇಶವ(ನ) ನೋಡ ಬನ್ನಿರಾಲದೆಲೆಯ ಮ್ಯಾಲೆ ಕೃಷ್ಣ ಬಾಲರೂಪ ಧರಿಸಿ ಅಂಧಕಾರ ಪ್ರಳಯ ಜಲದ ಒಳಗೊಂದಾಲದೆಲೆÉಯ ಮ್ಯಾಲೆ ಕೃಷ್ಣ ಪ ಪ್ರಳಯ ಕಾಲದಲ್ಲೆ ಹರಿಯು ಸರ್ವ ಜೀವರನೆಲ್ಲ ತನ್ನ ಉದರದೊಳಗಿಂಬಿಟ್ಟುಕೊಂಡು ಛಲವ ಮಾಡದಂತೆ ರಂಗ ಬೆರಳು ಬಾಯೊಳಗಿಟ್ಟು ಚೀಪುತ ಹರಳು ಮಾಣಿಕ್ಯದರಳೆಲೆ ಮಾಗಾಯಿ ಕೌಸ್ತುಭ ಕಟಿಸೂತ್ರ ಕರುಣ ಸಾಗರಗಿನ್ನು ವರ ವೈಕುಂಠವಾಸ ಒಂದಾಲದೆಲೆಯ ಮ್ಯಾಲೆ 1 ಅಷ್ಟು ಜೀವರನೆಲ್ಲ ತನ್ನ ಹೊಟ್ಟೆಯೊಳಗಿಂ ಬಿಟ್ಟು ಕೊಂಡು ಸೃಷ್ಟಿ ಲಯಕೆ ಕರ್ತನಾದ ಶ್ರೇಷ್ಠ ಸುಂದರಾಂಗ ತನ್ಹೆಬ್ಬೆಟ್ಟು ಬಾಯೊಳ ಗಿಟ್ಟು ಚೀಪುತ ವಕ್ಷಸ್ಥಳದಿ ಹೆಚ್ಚಿನ ಶ್ರೀವತ್ಸ ತೋರುತ ಉತ್ತಮ ವೈಜ(ಯಂ)ತಿ ವಜ್ರ ಕೆತ್ತಿದ ಕಿರೀಟ ಲಕ್ಷ್ಮೀಚಿತ್ತ ಚೋರನಾದ ಪರಮಾತ್ಮ ಪರಮ ಹರುಷದಿಂ ದ್ವೊಂದಾಲದೆಲೆಯ ಮ್ಯಾಲೆ 2 ಗಂಧ ಕಸ್ತೂರಿ ಪರಿಮಳ ಸುಗಂಧವಾದ ಕುಸುಮ ಕೆಲದಿ ಹೊಂದಿ ಕಟ್ಟಿದ ತುಳಸಿಮಾಲಿಕಿಂದೆ ಪರಮ ಶೋಭಿತವಾದ ಬಂದಿ ಕಂಕಣ ಬಾಹುಪ್ಪುರಿಗಳು ದುಂಡುಮುತ್ತಿನ ಕೂದಲ ಕಾಂತಿ ಕದಪಿಲೆಸೆಯಲು ಅಂದಿಗೆ ಪಾಗಡ ಗೆಜ್ಜೆ ಚೆಂದವಾದ ನಾದಗಳಿಂದ ಇಂದುಕೋಟಿ ರವಿಯ ತೇಜ ಮಂದಹಾಸ ಮುಖದ ಹರಿ ಒಂದಾಲದೆಲೆಯ ಮ್ಯಾಲೆ 3 ಥಳಥಳಿಸುವಂತ್ಹೊಳೆವೊ ಚಕ್ರ ಧವಳವರಣ ಶಂಖ ಕರದಿ ಹವಳದುಟಿಯು ಹರಿಯ ಪದ್ಮ ದಳಗಳಂತಕ್ಷಿಗಳ ಚೆಲುವ ಅರುಣನಂತೆ ಚರಣ ಕರದಲ್ಲಿ ಒತ್ತುವೊ ಸಿರಿಯ ಪರಮಪುರುಷ ನೋಡಿ ಸರಸದಿ ಜರ ಪೀತಾಂಬರ ನಾಭಿಕಮಲಕ್ಕೊಲೆವೊ ಒಡ್ಯಾಣವನೆ ಇಟ್ಟು ಹಲವು ಸೂರ್ಯರಂತೆ ಲಕ್ಷ್ಮೀರಮಣ ಶ್ಯಾಮವರಣ ಹರಿ ಒಂದಾಲದೆಲೆಯ ಮ್ಯಾಲೆ 4 ಅಳಕÀನಂದನ ಪಿತನು ತಾ ಘ- ನೋದಕÀದೊಳು ತಾ ರಂಗ ಚಾಮರ ಎಣಿಕಿಲ್ಲದೆ ಮಾ ಣಿಕ್ಯದಾಭರಣ ಫಣಿಪಮಂಚಶಯನ ನೀಲ ಕನಕರತ್ನ ಬಿಗಿದ್ಹಾಸಿಕೆಯಲಿ ಪಂಚಶರನ ಜನಕ ಜಗವ ನಿಟ್ಟು ತನ್ನಲ್ಲಿ ಅಳಕಗೂದಲು ಚೆಂಡಿಕೆಲ್ಲೆ ಅರಳುಮಲ್ಲಿಗೆ ಸುತ್ತಿಹರಿಗೆ ಝಳಕು ಮಿಂಚಿನಂತೆ ಜಗಕÉ ಬೆಳಕಿನÀಲಿ ಭೀಮೇಶ ಕೃ ಷ್ಣೊಂದಾಲದೆಲೆಯ ಮ್ಯಾಲೆ 5
--------------
ಹರಪನಹಳ್ಳಿಭೀಮವ್ವ
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಆಲಿಸು ರಂಗನ ಮುರಳಿಯಾ ಕರೆ ವನುತೆಯರೆ ಬೇಗ ತ್ವರೆ ತ್ವರೆ ಪ. ಪಕ್ಕದ ನೆರೆಹೊರೆ ಅಕ್ಕ ತಂಗಿಯರೆ ರಿಂಧಾವನಕೆ ತ್ವರೆ ತ್ವರೆ ಅ.ಪ. ರಂಗನ ಮುರಳಿಯ ಧ್ವನಿಯಿದು ನೋಡಿ ಕಂಗಳಿಗ್ಹÀ್ಹಬ್ಬವು ತ್ವರೆ ತ್ವರೆ ನಮ್ಮ 1 ಮಿಕ್ಕ ಕೆಲಸವೆಲ್ಲ ಲೆಕ್ಕದೊಳಿಡದೆ ಲಕ್ಕುಮಿ ಪತಿಯೆಡೆ ತ್ವರೆ ತ್ವರೆ2 ಪರಮ ಪುರುಷ ಎಮ್ಮ ಕರೆದನು ನೋಡಿ ಮುರಳಿಯ ಸ್ವರದೊಳು ತ್ವರೆ ತ್ವರೆ3 ಶ್ರೀ ಶ್ರೀನಿವಾಸನು ಪೋಷಿಪನೆಮ್ಮ ದೋಷವೇನಿದ್ದರು ತ್ವರೆ ತ್ವರೆ ತಂಗಿ4
--------------
ಸರಸ್ವತಿ ಬಾಯಿ
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ
ಆವ ಸೇವೆಯಿಂದ ನಿನ್ನುತ್ತೀರ್ಣಾಗುವರೋ | ಭೋಕ್ತ ಗುರು ಮಹಿಪತಿ ನಿಮ್ಮ ಶರಣರು ಪ ಒಡಲೊಳಗಿದ್ದ ಶಿಶು ಹೊರಗ ಬಂದ ಮ್ಯಾಲ ಒಡ ಮೂಡುವದು ನೋಡಿ ಜನನಿ ಮೋಹಾ ಪೊಡವಿಯೊಳಿಹನ ಕರೆದೊಡಲೋಳಿಟ್ಟುಕೊಂಡು ಕುಡಿಸಿ ಬೋಧಾಮೃತವ ಸಲಹುವ ಗುರುಮಾತಾ 1 ಸತಿಯಲಿ ವೀರ್ಯವನಿಟ್ಟು ಬೆಳಸಿ ಘನ ಯುತನಾದರಾಗ ತಂದೆಯ ಮೋಹವು ಕ್ಷಿತಿಯೊಳು ನಿಜವೀರ್ಯ ಕಳಿಯದೆ ಮೂಢ ಭಕ್ತಿರಿಗೊಲಿದು ಬೀರುವ ದಯ ಗುರು ತಂದೆ 2 ತನುವ ನಿರ್ಮಿಸಲು ತಾ ತನುವಿನೊಡೆಯ ನೀನು ಮನವ ನೀಡಲು ಚೇತನಾತ್ಮ ನೀನು ಧನವ ನೀಡಲು ಇಹ ಪರವೀವ ಧೊರಿ ನೀನು ನೆನೆವರ ಶ್ರಯಧೇಯ ಕಾಯೋ ನಂದನ ಪ್ರಭು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವದಿದು ಜ್ಞಾನ ಪ ಆವದಿದು ಜ್ಞಾನಾ ಬಲ್ಲವಿಕೆ ಜಾಣಾ | ಭಾವದುಗಮ ವರಿಯದೆವೆ ಜರಿದಿ ನಿಜ ಖೂನಾ 1 ಅರಹು ಆಗಲೆಂದು ಕುರುಹ ದೋರಿದೊಂದು | ಕುರುಹವಿಡದ ಕೊಡ ತಿರುಗಿ ಅರಹು ಮರದಿಂದ 2 ಕಲಿತು_ವಾಡುದು ಸೊಲ್ಲಾ ಗುಣಕ ಬಾಹುದಲ್ಲಾ | ಕಳೆದು ಅನುಮಾನ ಶಾಂತಿ ಸುಖವ ಪಡೆಯಲಿಲ್ಲಾ 3 ಅರಿಯದಿದ್ದರ ಕೀಲು ಸಾಧು ಸಂತರು ಕೇಳು | ಗರುವತನವ ನೀಗಿ ಯಲ್ಲರ ಕಿರಿಯನಾಗಿ ಬಾಳು 4 ಸಾರಥಿ | ಹೊಂದಿದವರ ನೋಡಿ ಕೊಡುವ ಮತಿ ಸ್ಫೂರ್ಥಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1 ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2 ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ3 ಕೊಂಡ ಎನ್ನಿ ಭೂಷಣವಿಡುವುದು ಹರಿಯೆ ಎನ್ನಿ ಲೇಸು ಬಯಸುವುದು ಹರಿಯೆ ಬಯಿಪನೆನ್ನಿ ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4 ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ ಹಿತವಾಗಿಪ್ಪದು ಹರಿಯೆ ಎನ್ನಿ ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5 ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ ಸುಲಭನಾದರೆ ಹರಿಯಾದನೆನ್ನಿ ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ ಸುಳಿದಾಡುವುದೆಲ್ಲ ಹರಿಯೆ ಎನ್ನಿ 6 ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ ಅನಂತಕಾಲಕ್ಕೂ ಎಲ್ಲಿದ್ದರು ಕಾಯ ವಿಜಯವಿಠ್ಠಲರೇಯ ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
--------------
ವಿಜಯದಾಸ
ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1 ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2 ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3 ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4 ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5
--------------
ಕನಕದಾಸ
ಆಸೆಪಡಬೇಡ ಮನುಜ ತಿಳಿಯದೆ ದುರಾಸೆ ಪಡಬೇಡ ಪ ಮೋಸ ಮಾರ್ಗಪಿಡಿದು ಮೂಢರನ್ನು ನೋಡಿ ನೋಡಿ ಅ.ಪ ಚಿಂತಿಸಿ ಭ್ರಾಂತನಾಗಿ ಸಂತೋಷವಿಲ್ಲದೆ ಸದಾ ಶಾಂತಚಿತ್ತರ ಕೂಡದೆ ಸಂತೆ ಕೂಟವನ್ನು ನಂಬಿ 1 ಮುಂದಿನ ಗತಿ ಗೋತ್ರವು ಸಂದೇಹವಾಗುವದೆಲೊ 2 ಶರಣರನಾಶ್ರಯಸದೆ ಕರೆ ಕರೆ ಸಂಸಾರದಿ3
--------------
ಗುರುರಾಮವಿಠಲ
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇಕ್ಕೊ ಇಲ್ಲೆ ನೋಡಿ ಸಿಕ್ಕುತ್ತದೆ ನಿಜಗೂಡಿ ಧ್ರುವ ತಿಳಿಯಲು ತನ್ನ ಅಳುವುದು ಭಿನ್ನ ಒಳಹೊರಗದೆ ಪ್ರಸನ್ನ ಬೆಳಗು ಅಭಿನ್ನ ಹೊಳೆವದು ಸುಳಹು ಸದ್ಗುರು ಪಾವನ್ನ 1 ತನ್ನೊಳು ತಿಳಿದವನೆ ತಾನುಳಿದ ಉನ್ಮನಿವಸ್ತಿಯೊಳಳಿದಾ ಮುನ್ನಿನ ಕರ್ಮವ ನಿಲ್ಲದೆದೊಳದಾ ಚನ್ನಾಗವೆ ಭವಗಳೆದಾ 2 ಇದು ನಿಜ ಖೂನ ಸಾಧಿಸು ಙÁ್ಞನ ಬುಧ ಜನರ ಸುಪ್ರಾಣ ಭೇದಿಸು ಮಹಿಪತಿ ನಿನ್ನೊಳು ಪೂರ್ಣ ಇದೇ ಸದ್ಗುರು ಕರುಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು