ಒಟ್ಟು 422 ಕಡೆಗಳಲ್ಲಿ , 73 ದಾಸರು , 370 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಶ್ರೀಹರಿಯೆ ಯದುಭೂಮಿಪತಿಯೆ ಪ ಬಾಲಾರ್ಕ ಸಮಮುಖ ಲೋಲ ಮುರಳೀಧರ ಅ.ಪ. ನಂದ ನಂದನ ದಿವ್ಯ ಸುಂದರ ರೂಪನೆ ಬಂಧುರಾಲಕ ವರ ಮಂದಹಾಸನೆ 1 ಗೋಪ ಸುಂದರೀಗಣ ದೀಪವಿರಾಜಿತ ತಾಪಿಂಛ ಪಲ್ಲವ ನೂಪುರ ಶೋಭಿತ2 ಕಾಳೀಯ ಮರ್ದನ ನೀಲಾಂಬುದ ಪ್ರಭ ನಾಳೀಕಾನನ ಚಿತ ಲೋಲಾಕ್ಷಿ ಚಿತ್ತನೆ3 ಭವ ಭಂಗ ಮಾನುಷ ವೇಷ ಶೃಂಗಾರ ಶೋಭಿತ ಭೃಂಗಾಲಕಾರ್ಚಿತ 4 ಧೇನುನಗರ ದೊರೆ ಸಾನುರಾಗದಿ ಪೊರೆ ಗಾನ ವಿನೋದ ಹರೆ ಭಾನುಸನ್ನಿಭ ಶೌರೆ 5
--------------
ಬೇಟೆರಾಯ ದೀಕ್ಷಿತರು
ಪಾಲಿಸೆನ್ನನು ಪಂಪಾಕ್ಷೇತ್ರವಾಸ ಫಾಲಲೋಚನ ಶಂಭೋ ವ್ಯೋಮಕೇಶ ಪ ನೀಲ ಲೋಹಿತ ವೀತ | ಚೈಲ ಭೂಷಿತ ಭಸಿತ ಕಾಲಾರಿ ಶಿವ ದ್ರೌಣಿ | ಶೂಲ ಪಾಣಿ || ಕಾಲ ಕೂಟವ ಮೆದ್ದು ಕೊಂಡ ಮೇತೌಷಧವನಿತ್ತು 1 ವ್ಯಾಧರೂಪದಿ ರಣದಿ ಕಾದು ಪಾರ್ಥಗೆ ಸೋತು ನೀದಯದಿ ದಿವ್ಯಾಸ್ತ್ರ ಕರುಣಿಸಿದೆಯೋ ಮೇದಿನೀಶಗೆ ಶಾಸ್ತ್ರ ಬೋಧಿಸಿದ ಮುನಿವರ್ಯ ವೇದನಂದನ ನಿನ್ನ ಪಾದಕ್ಕೆ ನಮಿಸುವೆನು 2 ಕಾಮಾರಿ ಸುಪವಿತ್ರ | ಸೋಮಾರ್ಕಶಿಖಿ ನೇತ್ರ ಶಾಮಸುಂದರವಿಠಲ ಸ್ವಾಮಿ ಮಿತ್ರ ಭೀಮ ಪಾವನಗಾತ್ರ ಪ್ರೇಮಾಬ್ಧಿ ಸುಚರಿತ್ರ ಕಳತ್ರ | ಮಹಿಮ ಚಿತ್ರಾ 3
--------------
ಶಾಮಸುಂದರ ವಿಠಲ
ಪಾಲಿಸೊ ಜಗನ್ನಾಥ ದಾಸಾ | ವರ್ಯಕಳೆಯೊ ಯನ್ನ ಕಲಿಕಲ್ಮಷ ಪ ಶೀಲ ಗೋಪಾಲನ ದಾಸಾರ್ಯರ ಕರಜನೆಲಾಲಿಸೋಗುಣನಿಧಿ ಬಾಲನ ಬಿನ್ನಪ ಅ.ಪ. ಹರಿಕಥಾಮೃತ ವಕ್ತಗುರುವೇ | ಕಾಯೊಪರಮ ಭಕ್ತರ ಕಲ್ಪತರುವೆ |ಹರಿಗುರು ಕರುಣ ಸಂಪೂರ್ಣಪಾತ್ರನೆ ಭವಸೆರೆಯ ಬಿಡಿಸಿ ಕಾಯೊ ಪರಮ ಪವಿತ್ರ1 ಅದ್ವೈತ ಗಜಸಿಂಹ 2 ಭವಜಲಧಿ ನವಪೋತ ಹರಿಯಾ | ಗುರುಗೋವಿಂದ ವಿಠಲನ ಪದವಾ |ಅವಿರತ ಹೃದಯದಿ ನೋಡುವ ಸೌಭಾಗ್ಯಜವದಿ ಪಾಲಿಸೊ ಜಗನ್ನಾಥ ದಾಸಾರ್ಯನೆ 3
--------------
ಗುರುಗೋವಿಂದವಿಠಲರು
ಪಾಲಿಸೊ ಶ್ರೀನಿವಾಸ ಪಾಲಿಸೊ ಶ್ರೀನಿವಾಸ ಪಾಲಾಬ್ಧಿಶಯನ ಕಾಪಾಲಿಯ ಕಾಯ್ದ ಗೋ ಪಾಲ ಹರಿ ವಿಶ್ವರೂಪ ಲೋಕಾಧೀಶ ಪಾಲಯವಾಗೆನ್ನ ಪಾಲಿಲಿದ್ದ ಶಿಶುಪಾಲಕ ಎನ್ನ ಕಾಯನ್ನಾ ಪ ಮನೆ ನಿನಗಾಗಿ ದೇಹಾ ಸುಮ್ಮನೆ ಪೇಳುವುದಿಲ್ಲ ಹ ಮ್ಮನೆ ಬಿಡಿಸುವುದು ಘಮ್ಮನೆ ಬಂದು ಒಲಿದು ನಿ ಮ್ಮನೆ ಭಕ್ತರ ಕೂಡ ನೆಮ್ಮನೆ ಕೊಟ್ಟ ಬಲನ ತ ಮ್ಮನೆ ನಡಿಸುವುದು ತಿಮ್ಮನೆ ಅಜಿತಾನಂತ ನಾ ಸಾರ್ವಭೌಮನೆಯಾಗಿ ಪುಟ್ಟಿ ಭೀ ಮನೆ ಗುರು ನಿತ್ಯಾ ಸಮನೆ ಎಂದು ಪೇಳಿದಾ ಮನೆಯಲ್ಲಿ ಇಡು ಮಾಮನೆಯುಳ್ಳಾ ಮಹಿಮನೆ ವೆಂಕಟೇಶಾ1 ಮನ ದುರ್ವಿಷಯಕೆ ಗಮನವಾಗಿ ಪೋಗುತಿದೆ ಕಾಮನ ಸಂಬಂಧವುಪಶಮನ ಮಾಡು ಬೇಗ ಸುಧಾ ಮನ ಮಿತ್ರ ಪವಿತ್ರ ಸುಮ್ಮನಸಕೊಡಿಯಾ ವಾ ಮನ ಮೂರುತಿಯೆ ಮನಸಂಹಾರ ಬಮ್ಮನ ಬಿಡಿಸಿದಾ ಹಿ ಮನ ಭಾವನೆ ನಿನ್ನ ಮನನಾದಿ ದಿನಯಸ್ತ ಪರಿಯಂತ ನೇಮನ ಚಿಂತಿಸುವಂತೆ2 ಜನನ ಮರಣ ಶೂನ್ಯಾ ಜನಕಾದ್ಯನಂತಗಂಗ ಜನಕಾಯಿದಾನಾದಿ ದೈವ ಅ ಜನನಯ್ಯ ಸ್ವರ್ಣ ಕಾಯಂ ಜಿನೆ ಪುತ್ರಪ್ರಿಯ್ಯಾ ದುಷ್ಟ ಜನಮರ್ದನಾ ಬಲು ಯೋಜನ ಮೆರೆವ ದೇವ ಸು ಜನಪಾಲ ಗುಣಶೀಲಾ ಜನುಮ ಜನುಮಕ್ಕು - ಜನಮತಿ ಕಳೆದು ರಂ ಜನವಾದಾ ಜ್ಞಾನ ಪುಂಜಿನ ಮಾಡು ದನುಜ ಭಂ ನಿರಂಜನ ನಿರ್ಮಳ ಅಂಜನ ಗಿರಿವಾಸಾ 3
--------------
ವಿಜಯದಾಸ
ಪಾಲಿಸೋ ಫಂಡರಿಪುರಾಯಾ ಪಾವನ ಕಾಯಾ ಪ ಶ್ಲೋಕÀ : ತರುಣ ತುಲಸಿಮಾಲಾ ತಪ್ತಗಾಂಗೇಯ ಚೇಲಾ ಶರಧಿ ತನಯಲೋಲಾ ಶಕ್ವರೀಕಾರಿ ಫಾಲ ಶಿರಿ ಅಜಭವ ಮೂಲಾ ಶುದ್ಧ ಕಾರುಣ್ಯ ಲೀಲಾ ವೈಜಯಂತಿ ಮಾಲಾ ಕುಂಡಲ ಕೇಯೂರ ಕೌಸ್ತ್ತುಭ ಲೋಕದಿ ವ್ಯಾಪ್ತಾ ದೋಷ ಸಿರ್ಲಿಪ್ತ ದೇವರ ದೇವಾ ಧರುಮಾದ್ಯರ ಭಾವಾ 1 ಅಮಿತ ಸುಗುಣಧಾಮಾ ಆತ್ಮಭೂಪೂರ್ಣ ರಾಮಾ ಅಮರಕುಲಲಲಾಮ ಅಬ್ಜಧಾಮಾಭಿರಾಮಾ ಯಮಿಕುಲೋದಧಿ ಸೋಮ ಯಜ್ಞ ಭೃದ್ಯಜ್ಞ ನಾಮಾ ಕರ್ಮ ಸಂರಕ್ಷಿತ ಸರ್ವ ಲೋಕಾ ವಿತತ ಮಹಿಮ ವಿಶ್ವನಾಟಕ ವತ್ಪ್ರ ಘೋಟಕಾ ಶೋ ನಳಿನ ಜಾಂಡೋದರಾ ಸರ್ವರಾಧಾರಾ ಸಂತತ ನಿರ್ವಿಕಾರಾ ಮತಿ ಮಂದನಾಗಿ ನಿನ್ನನು ಬಿಟ್ಟೆ ಮ ಬಟ್ಟೆ 2 ಶ್ಲೋಕ : ಜನನ ಮರಣ ದೂರ ಜಂಗಮಾಚಾg ವಿಹಾರಾ ದನುಜವನ ಕುಠಾರಾ ದೀನಮಂದಾರ ಧೀರಾ ಪ್ರಣತ ಭಯ ವಿಹಾರಾ ಪ್ರಾಕೃತಾತೀತ ಸಾರಾ ದಿನಪನಿಭ ಶರೀರಾ ದುಃಖವಾರಿಹ ಸಮೀರಾ 3 ವನಧಿ ಜಿತಾಸುರಯೂಥ ನಿರ್ಮಲ ಶ್ರುತಿಗಾಥಾ ಎನ್ನ ಸಂತತ ಸಂಪ್ರಸನ್ನಾ ಜೀಯ ಕರಣಾದಿ ಪಿಡಿಕಯ್ಯಾ ಗೋಪಕುಮಾರಾ 3 ಕಮಠ ಕೋಲಾ ಶತ್ರುಕಾಶ್ಯಪಿಬಾಲಾ ನೃಪಕುಲ ಈರವಾಳಾ ನೀಲಕಂಠಾಸ್ತ್ರಕಾಲಾ ದ್ರುಪದತನಯ ಪಾಲಾ ದುರವರ್ಜಿತದುಕುಲಾ ನಿರ್ಮಲ ಓಂಕಾರಾ ಪರಮ ಪ್ರೀಯ ಜಾಮಿ ಕಳೆದ್ಯೊ ತಾಪವಾ 4 ಶ್ಲೋಕ : ನಗಧರ ನಳಿನಾಕ್ಷ ನಾಕನಾಥಾದ್ಯ ಪಕ್ಷ ನೃಗ ನಗಪತಿ ಶಾಪಾ ನಿರ್ವಹಕಾರ ಶ್ರೀಪಾ ಭೃಗು ಮುನಿಗೇಯಾ ಭೂತನಾಥ ಸಹಾಯ ಅಗಣಿತ ಅಹಿತರನಳುಹಿದಾ ತೋರಿದೆ ಸತ್ಪುತ್ರರಾ ವಒತ್ತಿ ಕುಂತಿನಂದನಾ ಖಂಡ್ರಿಸಿದ್ಯೊ ಕೃಪಾಳು 5 ಶ್ಲೋಕ :ಶುಭತಮ ಸುಖತೀರ್ಥಾರಾಧ್ಯ ಸದ್ದಾನಪಾತ್ರಾ ಇಭವರರಿಪು ಹತಾನ ವಿಶ್ವಜನ್ಮಾವಿಕರ್ತಾ ಯುಗ್ಮ ಪ್ರಸಾದಾ ತರುಜನ್ಮ ವಿದೂರಾ ನಿರ್ಗುಣ ನಿರಂಜನಾ ಗೋಪರೊಡಗೂಡಿ ಮೆದ್ದೆ ತೋರಿದೆ ದಯಸಿಂಧೂ 6 ಶ್ಲೋಕ :ಅತಿವಮಲಸುಗಾತ್ರ ಅಖಿಳಲೋಕೈಕ ಪಾತ್ರಾ ಷತತಿಜದಳನೇತ್ರಾ ವೃತ್ತಹಾದ್ಯ ಮರಮಿತ್ರಾ ಶ್ರುತಿಕಮಂಜ ಸೂತ್ರಾ ಸ್ತುತ್ಯ ಪಾವನ ಪವಿತ್ರಾ ಕಳತ್ರ ನಿನ್ನಯ ದಿವ್ಯ ಖ್ಯಾತಿ ಈ ನಿತ್ಯ ಸುಖಿಸೋರು ಆನಂದಾಬ್ಧಿ ಸದ್ಗತರೋ ಮಾನವ ಜನಕ್ಲೇಶ ಭಂಜನಾ ಭಾಷಾ ಎನ್ನಯ ಅಭಿಲಾಷಾ 7 ಶ್ಲೋಕ :ವನರುಹಭವತಾತಾ ವೀತ ತನ್ಮಾತ್ರಭುತ ದ್ಯುನದಿ ಜಲವಿಧೂತ ದಿವ್ಯ ಪಾದಾಂಬುಜಾತಾ ಅನಿಲತನಯ ಪ್ರೀತಾ ಅತ್ರಿಸದ್ವಂಶಜಾತಾ ಅನಿಮಿಷಜಯಸೂತಾ ಆನತೇಷ್ಟಪ್ರದಾತಾ ಮಂಗಳಶ್ರೇಣಿ ಲೋಕೈಕಸತ್ರಾಣಿ ಶರಣು ಹೊಕ್ಕರ ಕಾಯುವ ಛಲದಂಕಾ ಕಾಳಿಂಗನ ಬಿಂಕಾ ಬಿಡಿಸಿದ್ಯೊ ನಿಷ್ಕಳಂಕಾ ಮುರ ದಂತವಕ್ತ್ರಾದ್ಯರ ಹಿಂಸಾ ಬಿಡಿಸಿದೆಯೋ ಓಜಿಷ್ಠಾ 8 ಶ್ಲೋಕ :ಹನುಮನತ ಪಾದಾಬ್ಜಹಂಸ ಸಂವಕ್ತ್ರುಕುಬ್ಜಾ ತನುವಿಕೃತ ವಿನಾಶಂ ಕಾಳಿ ಜಿಹ್ವಾಶುದೇಶಂ ದನುಜವಿಕರಾಳ ಮತ್ತೆ ಪೌಂಡ್ರೇ ಶೃಗಾಲಂ ಮೋದ ಸುಪದ ಮೂರುತಿಯನ್ನು ತೋರು ಮಾತಾ ಲಾಲಿಸು ಜಗನ್ನಾಥ ನಿನ್ನವರಿಗೀಯೋ ಶ್ರೀಶಾ 9
--------------
ಜಗನ್ನಾಥದಾಸರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಸನ್ನ ಶ್ರೀ ಕಲ್ಕಿ ಅಮಿತ ವಿಕ್ರಮ ಕಲ್ಕಿ ಅನಘ ಲಕ್ಷ್ಮೀರಮಣ ಶರಣು ಮಾಂ ಪಾಹಿ ಕೃಷ್ಣ ನರಹರಿ ಕಪಿಲ ತಿಲಕ ವೇಂಕಟರಮಣ ಪ್ರಾಣ ಹೃದ್‍ವನಜಸ್ಥ ರಕ್ಷಮಾಂ ಸತತ ಪ ಶ್ರೀ ದುರ್ಗಾಭೂರಮಣ ವಿಷ್ಣು ರುದ್ರ ಬ್ರಹ್ಮ ಮಾಯಾ ಜಯಾ ಕೃತಿ ಕೂರ್ಮ 1 ಧನ್ವಂತರಿ ಶರಣು ಅಜಿತ ಸ್ತ್ರೀರೂಪನೇ ಘನಭೂಮಿಧರ ನಾರಸಿಂಹ ವಾಮನ ತ್ರಿಪದ ರೇಣುಕಾತ್ಮಜರಾಮ ವೇಣುಗೋಪಾಲ ನಮೋ ಬುದ್ಧ ಸುಜನಪ್ರಿಯ ಕಲ್ಕಿ 2 ವೃಷಭ ತಾಪಸ ಯಜ್ಞ ದತ್ತ ವಡವಾವಕ್ತರ ಕೃಷ್ಣ ಹರಿನಾರಾಯಣ ವೇದವ್ಯಾಸ ಶಿಂಶುಮಾರ ಸುಗುಣಾರ್ಣವನೆ ಶ್ರೀಶ ಸರ್ವಾಶ್ರಯ ಅನಂತ ಸುಖರೂಪ 3 ಭೂಲೋಕದಲಿ ಮಣಿಮಂತಾದಿ ಅಸುರರು ಶೀಲ ಹರಿಭಕ್ತರನ ಕಂಡು ಸಹಿಸದಲೆ ಬಾಲ ಶಶಿಶೇಖರನ ಸ್ತುತಿಸಿ ವರಗಳ ಪಡೆದು ಇಳೆಯಲಿ ಜನಿಸಿದರು ತತ್ವಜ್ಞಾನಿಗಳ ವೋಲ್ 4 ಸೂತ್ರ ವಿರುದ್ಧ ಭಾಷ್ಯಗಳ್ ಮಾಡಿ ವೇದೋಪನಿಷದ್‍ಗಳಿಗೆ ಅಪ ಅರ್ಥ ಪೇಳಿ ಸಾಧುಗಳ ಮನಕೆಡಿಸೆ ಮಧ್ವಾಖ್ಯ ಸೂರ್ಯನು ಉದಿಸಿ ಸಜ್ಜನರ ಹೃತ್ತಿಮಿರ ಕಳೆಯೆ 5 ಶ್ರೀಪತಿ ವಿಷಯಕ ಜ್ಞಾನ ಮರೆ ಮಾಡುವ ಇಪ್ಪತ್ತು ಮೇಲೊಂದು ಅಪದ್ದ ದುರ್ಭಾಷ್ಯ ಅಪವಿತ್ರ ಅಚರಣೆ ದುಸ್ತರ್ಕ ದುರ್ವಾದ ಈ ಪರಿಸ್ಥಿತಿಯ ನೆಟ್ಟಗೆ ಮಾಡಿದಾ ಮಾಧ್ವ 6 ಇಪ್ಪತ್ತಿ(ತ್ತು) ಎರಡನೇ ಭಾಷ್ಯಾ ಸಿದ್ಧಾಂತವ ಉಪನಿಷದ್ ದಶಕಕೆ ಸರಿಯಾದ ಭಾಷ್ಯಗಳ ಸಪ್ತ ತ್ರಿಂಶತ್ ಒಟ್ಟುಗ್ರಂಥ ಸುರಧೇನುವ ಅಪವರ್ಗಾನಂದ ಒದಗಿಸಿದ ಯೋಗ್ಯರಿಗೆ 7 ಸದ್ಧರ್ಮ ಆಚರಣೆ ಯೋಗ್ಯ ಉಪಾಸನಾ ಭಕ್ತಿ ಸವೈರಾಗ್ಯ ಜ್ಞಾನ ಉನ್ನಾಹ ಅಧಿಕಾರಿಗಳು ಈ ಪರಿಯಲಿ ಸುಖಿಸಲು ಕ್ಷಿತಿಯ ಜನರಿಗೆ ಲಭಿಸಿತು ಕ್ಷೇಮ 8 ಕಾಲವು ಜರುಗಿತು ದೈತ್ಯರು ನೋಡಿದರು ಮೆಲ್ಲಮೆಲ್ಲನೆ ಪುನಃ ವಿಷಮ ಮಾಡಿದರು ಶೀಲರ ಹಿಂಸಿಸಿ ಸದ್ಧರ್ಮ ಕೆಡಿಸಿದರು ಖಳರು ಕ್ರೌರ್ಯವ ವರ್ಧಿಸಿದರು ದಿನ ದಿನದಿ 9 ಮಹಾಭಯಂಕರ ದೈತ್ಯ ಸಮೂಹವ ಸಂಹನನ ಮಾಡಿದಳು ಮಹಾದುರ್ಗಾದೇವಿ ಬ್ರಾಹ್ಮಣಕುಲದಲಿ ಪ್ರಾದುರ್ಭವಿಸಿದ ದೇವಿ ಮಹಾದುರ್ಗಾ ಜಗದಾಂಬಾ ಶರಣು ಮಾಂಪಾಹಿ 10 ಮಾಸ ಋತು ವರುಷಗಳು ಕಾಲ ಪ್ರವಹಿಸಿತು ಜನಗಳು ಕಲಿಯುಗದ ಕಡೇ ಭಾಗ ಬರಲಾಗ ಹೀನ ಕರ್ಮಂಗಳಲಿ ಆಸಕ್ತರಾದರು 11 ಪುರಾಣಂಗಳಲಿ ಕಲಿಯಗದ ಸ್ಥಿತಿಗತಿಯು ವಿವರಿಸಿದಂತೆಯೇ ನೆನೆಯಲೂ ಭೀತಿ - ಕರ ಪಾಪಕರ್ಮದಲಿ ಜನರು ರತರಾಗಿರಲು ನರಪರ ಕ್ರೂರತನ ದಿನ ದಿನ ಹೆಚ್ಚಿತು 12 ಜ್ಞಾನಾದಿ ಸಂಪತ್ತು ಕಳಕೊಂಡ ಜನರು ವಿಷ್ಣು ದ್ವೇಷಿಗಳಾಗಿ ಬಹು ಬಹು ನೀಚ- ತನದಲಿ ಇರುತಿರಲು ದೇವತಾವೃಂದವು ನಿನ್ನ ಬೇಡಿದರು ಪುನಃ ಧರ್ಮಸ್ಥಾಪಿಸಲು 13 ಯದಾಯದಾಹಿ ಸದ್ಧರ್ಮಕ್ಕೆ ಹಾನಿಯು ಅಧರ್ಮಕ್ಕೆ ವೃದ್ಧಿಯು ಆಗುವದೋ ಆಗಾಗ ಸಾಧುಗಳ ರಕ್ಷಣೆಗೆ ಪಾಪಿಗಳ ಹನನಕ್ಕೆ ಸದ್ಧರ್ಮ ಸ್ಥಾಪನೆಗೆ ಅವತಾರ ಮಾಳ್ಪಿ 14 ಭೂಮಿಯಲಿ ಸುಪವಿತ್ರ ಶಂಭಳ ಗ್ರಾಮದಲಿ ಬ್ರಾಹ್ಮಣ ಮಹಾತ್ಮ ವಿಷ್ಣು ಯಶಸ್ ಭವನದಲಿ ಅಮಿತ ಪೌರುಷಜ್ಞಾನ ಆನಂದಮಯ ನೀನು ವಿಮಲ ಕಲ್ಕ್ಯವತಾರ ಮಾಡಿದಿ ಮಹೋಜ 15 ಕ ಎಂದರಾನಂದ ಕಲ್ಕೆಂದರೆ ಜ್ಞಾನ ಆನಂದ ರೂಪ ಶೂಲಿ ವಜ್ರಿಗಳಿಗೆ ಸುಖಜ್ಞಾನ ಬಲ ಕೊಡುವ ಠಲಕನಮೋ ಪಾಪಹರ ಸೌಭಾಗ್ಯದಾತ 16 ಲೋಕವಿಲಕ್ಷಣ ಸುಪ್ರಭಾಶ್ವ ಏರಿ ನಿಖಿಳ ದುರ್ಮತಿ ಭೂಪಾಲ ಚೋರರನ್ನ ಅಖಿಳ ಪಾಪಿಗಳ ಅಧರ್ಮ ಆಚರಿಸುವರ ಶ್ರೀಕಾಂತದ್ವೇಷಿಗಳ ಕತ್ತರಿಸಿ ಕೊಂದಿ 17 ಸತ್ಯವ್ರತ ಸುರವೃಂದ ವಸುಮತಿ ಪ್ರಹ್ಲಾದ ಶತಮಖ ಪ್ರಜೆಗಳು ವಿಭೀಷಣ ಸುಗ್ರೀವ ಪಾರ್ಥಸುಧಾಮ ರಕ್ಷಕನೇ ಸುರಬೋಧಕನೇ ಸತ್ಯಧರ್ಮರ ಕಾಯ್ವ ಕರುಣಾಳು ಕಲ್ಕಿ 18 ಜ್ಞಾನಸುಖ ಭೂಮದಿ ಗುಣಪೂರ್ಣ ನಿರ್ದೋಷ ವಿಷ್ಣು ಪರಮಾತ್ಮ ಹರಿ ಉದ್ದಾಮ ಬ್ರಹ್ಮ ಪೂರ್ಣಪ್ರಜ್ಞಾರ ಹೃಸ್ಥ ವನಜಭವಪಿತ ಕಲ್ಕಿ ಪ್ರಸನ್ನ ಶ್ರೀನಿವಾಸ ಶರಣು ಮಾಂಪಾಹಿ 19 -ಇತಿ ಕಲ್ಕ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವರಾಹ ಆದಿವರಾಹ ಸಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರಧ್ಧೇಶ ವಂದ್ಯ ಬದರಶೇಖರ ಮುಖ ಸುರವಿನುತ ವಾಂಛಿತದ ಮೋದಚಿನ್ಮಯ ಭೂವರಾಹ ಯಜÉ್ಞೀಶ ಪ ಅದ್ವಿತೀಯನು ನೀನೇ ಪದುಮಜಾಂಡದ ಒಡೆಯ ಪದುಮಭವನೊಳಿದ್ದು ಭುವನಗಳ ಸೃಜಿಸಿ ಕೃತಿ ನಡೆಸುತ್ತ ಒದಗುವಿ ಸುಖಜ್ಞಾನ ಬಲಪೂರ್ಣ ಹರಿಯೇ 1 ಅಂದು ಸ್ವಾಯಂಭುವ ಮನು ವೇನಗರ್ಭನಲಿ ಬಂದು ನಮಿಸಿ ಭಿನ್ನಹವ ಮಾಡೆ ವಿಧಿ ಹೇಳಿದ ಜನಾದರ್Àನ ಯಜ್ಞಪರಮಾತ್ಮ ಶ್ರೀದ ಭದ್ರದ ಈಜ್ಯ ಪೂಜ್ಯ ನೀನೇ ಎಂದು 2 ಸ್ವಾಯಂಭುವ ಸಾಮ್ರಾಟ್ ಪೇಳಿದ ಮಹಾ ಈ ಭೂಮಿ ಇರುವುದು ಉದ್ಧರಿಸಿ ಸ್ಥಾನವ ತನ್ ಪ್ರಜೆಗಳಿಗೆ ಒದಗಿಸಬೇಕು ಎಂದ 3 ಇರುವುದಕೆ ಸ್ಥಳ ಪ್ರಜೆಗಳಿಗೆ ಒದಗಿಸಲು ಪರಮೇಷ್ಟಿರಾಯ ತನ್ನ ಹೃದ್ ವನಜದಿ ಸುಪ್ರಕಾಶಿಪ ಪರಮ ಪೂರುಷ ನಿನ್ನನ್ನು ಪರಮಾದರದಲ್ಲಿ ಧ್ಯಾನಿಸಿದನು 4 ಮಹಿಶಿರಿಕಾಂತ ನಿನ್ನನು ಧ್ಯಾನಿಸುತಲಿದ್ದ ಬ್ರಹ್ಮನ ಮೂಗಿಂದ ಹರಿ ಅನಘ ನೀನು ವರಾಹ ಮರಿ ಅಂಗುಷ್ಟ ಮಾತ್ರ ಪ್ರಮಾಣದಿ ಬಹಿರ್ಗತನು ಆದಿಯೋ ಚಿದಾನಂದರೂಪ 5 ಒಂದೇ ಕ್ಷಣದಿ ಗಜಮಾತ್ರ ವರ್ಧಿಸಿದಿಯೋ ಅದ್ಭುತ ಈ ರೂಪ ಕಂಡು ಅಲ್ಲಿ ಇದ್ದ ಮರೀಚಿ ಪ್ರಮುಖ ವಿಪ್ರರು ಮನು ಮೊದಲಾದವರು ಬಹು ಬೆರಗಾದರಾಗ 6 ಸೂಕರ ರೂಪ ಕಂಡಿಲ್ಲ ಎಲ್ಲೂನು ಇದು ಮಹಾಶ್ಚರ್ಯ ಗಂಡ ಶಿಲಾವೋಲ್ ಕ್ಷಣ ಮಾತ್ರದಲಿ ಚಂಡ ಈ ಕ್ರೋಡವು ದೊಡ್ಡದಾಗಿಹುದು 7 ಸೂಕರ ರೂಪವ ನೋಡುತ್ತ ಮುನಿಗಳು ತರ್ಕಿಸಿ ಮೀಮಾಂಸ ಮಾಡೆ ಅನಿಮಿತ್ತಬಂಧು ಹರಿ ಒಲಿದು ಬಂದಿರುವಿ ಎಂದು ವನಜಸಂಭವ ಸಂತೋಷ ಹೊಂದಿದನು 8 ಮಹಾವರಾಹ ರೂಪನೇ ವಿಭೋ ನೀನು ಮಹಾಧ್ವನಿಯಲಿ ಗರ್ಜಿಸಿದಿ ಆಗ ಆ ಹೂಂಕಾರವು ದಿಕ್ಕು ವಿದಿಕ್ಕುಗಳ ಮಹಾಂಬರವ ತುಂಬಿತು ಪ್ರತಿಧ್ವನಿಯಿಂದ9 ಅಪ್ರತಿ ಮಹಾಮಹಿಮ ಉರುಪರಾಕ್ರಮ ನೀನು0 ಅಂಬುಧಿಯೊಳು ಲೀಲೆಯಿಂದಲಿ ಪೊಕ್ಕು ಸುಪವಿತ್ರತಮ ನಿನ್ನ ದಂಷ್ಟ್ರದ ಮೇಲಿಟ್ಟುಕೊಂಡು ಕ್ಷಿಪ್ರದಲಿ ನೀರಮೇಲ್ ತಂದಿ ಭೂಮಿಯನು 10 ನೀರೊಳಗಡೆ ತಡೆದ ಆದಿದೈತ್ಯನ ಕೊಂದು ನೀರಮೇಲ್ ಇರಿಸಿದಿ ಭೂಮಿಯ ಎತ್ತಿ ಸರಸಿಜೋದ್ಭವ ಮುಖ್ಯಸುರಮುನಿ ವೃಂದವು ಕರಮುಗಿದು ಸ್ತುತಿಸಿದರÀು ಕೃತಜ್ಞ ಭಕ್ತಿಯಲಿ 11 ಎಂದು ಜಯಷೋಷವ ಮಾಡಿ ಮುದದಿ ಸುತಪೋನಿಧಿಗಳು ಸ್ತುತಿಸಿ ನಮಿಸಿದರು ವೇದವೇದ್ಯನೇ ಸೂಕರರೂಪ ನಿನ್ನನ್ನ 12 ಅಖಿಳ ಮಂತ್ರದೇವತಾ ದ್ರವ್ಯಾಯ ಸರ್ವಕೃತವೇ ಕ್ರಿಯಾತ್ಮನೇ ವೈರಾಗ್ಯ ಭಕ್ತ್ಯಾತ್ಮಜಯಾನುಭಾವಿತ ಜ್ಞಾನಾಯ ವಿದ್ಯಾ ಗುರುವೇ ನಮೋ ನಮಃ13 ಈ ರೀತಿ ಇನ್ನೂ ಬಹುವಾಗಿ ಸ್ತುತಿಸಿದರು ಹರಿ ವರಾಹನೇ ಭೂದರ ಧರೋದ್ಧಾರ ನರಸುರರು ಶುಚಿಯಿಂ ಪಠಿಸಿ ಎಲ್ಲರೂ ಕೇಳೆ ಸುಪ್ರಸನ್ನನು ಆಗಿ ಭದ್ರÀವನು ಈವಿ 14 ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 15 -ಇತಿ ಪ್ರಥಮ ಅಧ್ಯಾಯ ಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಾಕ್ಷ ಸಂಹಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರದ್ಧೇಶ ವಂದ್ಯ ಬದರಶೇಖರ ಮುಖ ಸುವಿನುತ ವಾಂಛಿತದ ಮೋದ ಚಿನ್ಮಯ ಭೂವರಾಹ ಯಜÉ್ಞೀಶ À ಜ್ಞಾನಸುಖ ಭೂಮಾದಿ ಗುಣಪೂರ್ಣ ನಿರ್ದೋಷ ಪೂರ್ಣಬಲ ಹರಿ ಯಜ್ಞಮೂರುತಿ ವರಾಹ ಹನನ ಮಾಡಿ ಆದಿದೈತ್ಯನ ನೀರಿಂದ ಕ್ಷೋಣಿಯ ನಿನ್ ದಂಷ್ಟ್ರ ಮೇಲಿಟ್ಟು ತಂದಿ 1 ಭೂಮಿ ಉದ್ಧರಿಸಲು ಮಾತ್ರವಲ್ಲದೇ ಆ ಹೇಮಾಕ್ಷ ಅಸುರನ್ನ ಸಂಹಾರ ಮಾಡೆ ನೀ ಮಹಾಕ್ರೋಡರೂಪವÀ ಪ್ರಕಟಿಸಿದಿ ವಿಭೋ ಅಪ್ರಾಕೃತ ಚಿನ್ಮಯ ವಪುಷ 2 ಏಕದಾ ಬ್ರಹ್ಮನ ಸುತರು ಸನಕಾದಿಗಳು ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೆ ತಡೆದರು ದ್ವಾರಪಾಲಕರು 3 ಜಯವಿಜಯರೆಂಬುವ ಆ ದ್ವಾರಪಾಲಕರಿಗೆ ಮಾಯೇಶ ಹರಿ ಪ್ರಿಯತರ ಮುನಿಶ್ರೇಷ್ಠರು ಈಯಲು ಶಾಪವ ಆ ವಿಷ್ಣು ಪಾರ್ಷದರು ದೈತ್ಯಜನ್ಮವ ಹೊಂದಿದರು ಪತನವಾಗಿ 4 ಪತಿ ಕಶ್ಯಪ ಮುನಿ ಅಹ್ನೀಕದಲಿ ಇರಲು ದಿತಿ ದೇವಿ ಬಂದು ಅಪತ್ಯಕಾಮದಲಿ ಸಂಧ್ಯಾಕಾಲದಿ ಇಚ್ಛಿಸಿ ನಿರ್ಬಂಧಿಸಿ ವಿಧಿ ವಿರುದ್ಧದಲಿ 5 ಸುತಪೋನಿಧಿ ಕಶ್ಯಪ ತೇಜೋಲ್ಬಣದಿ ದಿತಿದೇವಿ ಜಠರದಲಿ ವಿಷ್ಣುಪಾರ್ಶದರು ಪತಿತ ಆ ಜಯವಿಜಯರು ಪ್ರವೇಶಿಸಿದರು ಆ ಆದಿದೈತ್ಯನು ಸಹ ಮೊದಲೇ ಅಲ್ಲಿ ಹೊಕ್ಕಿದ್ದ 6 ಅಬ್ಧಿಯಿಂ ನೀ ಭೂಮಿ ಎತ್ತೆ ತಡೆದು ಹತ - ನಾದ ಆ ದೈತ್ಯನು ಅಬ್ಜದೋದ್ಭವನು ಶ್ರೀದ ನಿನ್ ಪಾರ್ಶದನು ಆವಿಷ್ಟನಾದ 7 ಆದಿ ಹೇಮಾಕ್ಷನೊಳು ವಿಷ್ಣು ದ್ವಾರಪ ವಿಜಯ ದಿತಿದೇವಿ ಅವರ ಸುತ ಹಿರಣ್ಯಾಕ್ಷನೆಂದು ಉದಿಸಿದನು ಅಣ್ಣ ಜಯ ಹಿರಣ್ಯಕಶಿಪು ಸಹ ಅತಿಪರಾಕ್ರಮಯುತನು ಲೋಕಕಂಟಕನು 8 ಗದೆ ಹಿಡಿದು ಹಿರಣ್ಯಾಕ್ಷ ದಿಗ್ವಿಜಯ ಮಾಡಿ ಭೀತಿ ಪಡಿಸಿದ ದೇವತಾ ಜನರನ್ನೆಲ್ಲ ಅತಿಬಲಯುತನಿವ ಧರೆಯ ಸೆಳಕೊಂಡು ಉದಧಿಯೊಳು ಹೊಕ್ಕನು ಆರ್ಭಟಮಾಡುತ್ತ 9 ಸುರರು ನಿನ್ನಲಿ ಮೊರೆ ಇಡಲು ವರಾಹ ಹರಿ ನೀನು ನೀರೊಳು ಲೀಲೆಯಿಂದಲಿ ಪೊಕ್ಕು ಆ ದೈತ್ಯ ಹಿರಣ್ಯಾಕ್ಷನ ಸಹ ಯುದ್ದ ಮಾಡಿದಿಯೋ 10 ಸುರವೃಂದ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಆ ದೈತ್ಯನ ಕೊಂದು ಧರೆಯನುದ್ಧರಿಸಿ ನೀ ಮೇಲೆತ್ತಿ ತಂದಿಯೋ ಉರುಪರಾಕ್ರಮ ಭಕ್ತವತ್ಸಲ ಕೃಪಾಳೋ 11 ವರಾಹ ಹರಿ ನಿನ್ನ ಕೃತಜ್ಞ ಮನದಿ ಸನ್ನಮಿಸಿ ಸ್ತುತಿಸಿದರು ಉದಾರ ವಿಕ್ರಮ ಹಿರಣ್ಯಾಕ್ಷನ್ನ ನೀನು ಕೊಂದ ನಿನ್ನಯ ಕ್ರೀಡಾ ವರ್ಣಿಸಲಶಕ್ಯ 12 ಕಮಲಾರಮಣ ಶ್ವೇತವರಾಹ ಮೂರುತಿ ನಮೋ ಶಾಮಚಾರ್ವಾಂಗ ನಮೋ ಭೂವರಾಹ ಬ್ರಹ್ಮ ಪವಮಾನರಿಂದಲಿ ಸದಾ ಪೂಜ್ಯನೇ ಸ್ವಾಮಿ ಕರುಣಾಂಬುಧಿಯೇ ಶರಣು ಮಾಂಪಾಹಿ 13 ಕೂರ್ಮ ಕ್ರೋಢ ನರಸಿಂಹ ವಾಮನ ರೇಣುಕಾದೇವಿಯ ಸುತ ರಾಮಚಂದ್ರ ಬುದ್ಧ ಕಲ್ಕಿ ವ್ಯಾಸ ಹಯಗ್ರೀವ ಆನಮಿಪೆ ಅವನೀಶ ಭೂ ಶ್ರೀಶ ಪಾಹಿ 14 ವರಾಹ ನಮೋ ಸದಾನಂದಮಯ ಜಗಜ್ಜ£್ಮÁದಿ ಕರ್ತ ನಿರ್ದೋಷ ಗುಣಪೂರ್ಣ ಅನಿಷ್ಟ ಪರಿಹರಿಸಿ ವರ್ಧಿಸುವಿ ದಯದಿ 15 ಶ್ಯಾಮ ಅರಿಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನೇ ಮನ್ಮನದಿ ಸರ್ವದಾ ಹೊಳೆಯೋ ಕರುಣಾಳು 16 ಗುರು ಗುರೋರ್ಗುರು ಗುರೋರ್ಗುರುವಿನ ಗುರು ಶ್ರೀ ರಾಘವೇಂದ್ರ ಗುರುರಾಜ ಲಾತವ್ಯ ಋಜುವರ್ಯ ಮಧ್ವ ವಾರಿಜಾಸನ ಸರ್ವಹೃದ್ವನಜ ಅಂತಸ್ಥ ವರಾಹ ನಮೋ ಶರಣು 17 ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸ ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 18 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣಾ - ದೇವನೇ | ಸಕಲ ಜಗ | ತ್ರಾಣ ನಾದನೇ ಪ ರೇಣು ವಂತಿರಿಸೊ ಅ.ಪ. ಪಂಚ - ರೂಪನೇ | ಪ್ರಾಣಾದಿ | ಪಂಚ ಕಾರ್ಯನೇ |ವಂಚಿಸಿ ದೈತ್ಯರ | ಸಂಚುಗೊಳಿಸಿ - ನಿ-ಷ್ಕಿಂಚಿನ ಜನಪ್ರಿಯ ಸಂಚಿಂತನೆ ಕೊಡು 1 ಹಂಸ ನಾಮವಾ | ಪ್ರತಿದಿನ | ಶಂಸಿಪೆ ಪವನಾ |ಹಂಸ ಮಂತ್ರವೇಕ | ವಿಂಶತಿ ಸಾಸಿರ ಶಂಸಿಸಿ ಷಟ್ಯತ | ಹಂಸನಿಗೀವೆ 2 ವಿಧಿ | ಪೂರ್ವಕ ಸಾಧನನಿರ್ವಹಿಸುವ ತೆರ | ತೋರ್ದನು ನೀನೇ 3 ವಿಶ್ವ-ವ್ಯಾಪಕಾ | ಹರಿಗೆ ಸಾ | ದೃಶ್ಯ ರೂಪಕಾ |ಅಶ್ವರೂಪ ಹರಿ | ವಶ್ಯನೆನಿಸಿ ಬಹುವಿಶ್ವಕಾರ್ಯ ಸ | ರ್ವಸ್ವ ಮಾಳ್ಪೆಯೊ 4 ದೇವ-ಋಷೀ-ಪಿತ | ನೃಪರು-ನರ | ರೈವರೊಳಗಿರುತಾ |ಜೀವರುಗಳ ಸ್ವ | ಭಾವ ವ್ಯಕುತಿಗೈ ದೀವಿರಿಂಚಾಂಡವ | ನೀ ವಹಿಸಿದೆಯೋ 5 ಶುದ್ಧ-ಸತ್ವಾತ್ಮದ | ದೇಹದೊ | ಳಿದ್ದರೂ ಲಿಂಗದ |ಬದ್ಧ ವಿಹೀನನೆ | ದಗ್ದ ಪಟದ ಪರಿಸಿದ್ಧ ಸಾಧನ ಅನ | ವವ್ಯ ನೆನಿಸುವೇ 6 ಹೀನ-ಸತು ಕರ್ಮವಾ | ಪವಮಾನ | ತಾನೇ ಮಾಡುವಾ |ಜ್ಞಾನದಿಂದಲೇ | ನೇನು ಮಾಳ್ಪುದನುಪ್ರಾಣಪಗೊಂಡು ಕು | ಯೋನಿಯ ಕಳೆವ 7 ಕ | ವಾಟ ಅಹಿಪವಿಪ ಲ-ಲಾಟ ನೇತ್ರಗೆ | ಸಾಟಿ ಮೀರ್ದನೇ 8 ವಾಙ್ಮನೋ-ಮಾಯನೇ | ದೇವ | ಸ್ತೋಮ ದೊಳಗಿಹನೇ |ಶ್ರೀ ಮಹಿನುತ ಶ್ರೀ | ರಾಮಚಂದ್ರ ಗುಣಸ್ತೋಮ ಪೊಗಳ ನ | ಮ್ಮಾಮಯ ಹರ9 ಮೂಲೇಶ ಪದವ | ಪಿಡಿದಿಹ | ಪ್ರಾಣನ ಚರಣಾಕಿಲಾಲಜವನು | ಓಲೈಸುತಲಿಹಕಾಲ ಕರ್ಮದಿಹ | ಕೀಳು ಜೀವನ ಪೊರೆ 10 ಭಾವಿ ಬ್ರಹ್ಮನೇ | ಜೀವರ | ಸ್ವಭಾವ - ವರಿತನೇ ಕಾವ ಕಾಲ್ಪ ಗುರು | ಗೋವಿಂದ ವಿಠಲನಪಾವನ ಚರಣವ | ಭಾವದಿ ತೋರೈ 11
--------------
ಗುರುಗೋವಿಂದವಿಠಲರು
ಪ್ರಾಣೇಶನೆನ್ನೊಳಗೆ ಕೇಣವಾಂತಿಹನೇಕೆ ಗೋಣಬಿಗಿವಂತಾಗೆ ನಾಣದೇಕೆ ಇಲ್ಲದುದನಿವನೊಳಾಂ ಸೊಲ್ಲಿಸಿದೆನೇನಮ್ಮ ಕಲ್ಲೆದೆಯಿದೇವೆಳ್ವೆ ನಲ್ಲನಿವಗೆ ಕಂಡಸುದ್ದಿಯ ಪೇಳೆ ಕೆಂಡದಂತಾಗುವರೆ ಕಂಡುದಿಲ್ಲಕ್ಕಟೀ ಭಂಡತನವ ನ್ಯಾಯವನು ಸೂಚಿಸಲು ನೋಯುವಂತಾಡುವರೆ ಜಾಯೆಯೊಳಗೀತೆರದನ್ಯಾಯಮರರೆ ಕಪಟನಾಟಕ ಸೂತ್ರಧಾರನಿವನೆ ಸುಪವಿತ್ರ ಕೇಳೆನ್ನ ಪ್ರಾಣಸಖನೆ ತಪನವಂಶಾಬ್ಧಿ ರಾಕೇಂದುವಿವನೆ ವಿಪುಲ ಶೇಷಾದ್ರೀಶನೆನಿಪ ವರನೆ
--------------
ನಂಜನಗೂಡು ತಿರುಮಲಾಂಬಾ
ಪ್ರಾರ್ಥಿಸುವೆ ರಘುನಾಥತೀರ್ಥರ ಪ್ರಾರ್ಥಿಸುವೆ ಪುರುಷಾರ್ಥಪ್ರದರ ಪ ಸಾರ್ಥಕವಾಗಲು ಪಾರ್ಥಿವ ದೇಹವು ಜಗದಲಿ ಕೀರ್ತಿಗಳಿಸಿದವರ ಅ.ಪ ನೇದೃಶಂ ಸ್ಥಲಿಮಲಂ ಶಮಲಘ್ನಂ ನಾಸ್ಯತೀರ್ಥಂ ಸಲಿಲಸ್ಯಸಮಂ ವಾಃ ನಾಸ್ತಿ ವಿಷ್ಣುಂ ಸದೃಶಂ ನನುದೈವಂ ಸತ್ಯ ವಚನಗಳಿವೆಂದು ಸೂಚಿಸುತ ಆಸ್ತಿಕ ಜನಮನ ರಂಜಕ ತ್ರಿಮಕುಟ ಕ್ಷೇತ್ರನಿವಾಸ ಪವಿತ್ರತಮ ಚರಿತರ 1 ವ್ಯಾಸರಾಜ ಗುರುವರ್ಯ ರಚಿತ ತಾ ತ್ಪರ್ಯ ಚಂದ್ರಿಕಾ ಗ್ರಂಥವನು ವಾಸುದೇವ ನರಹರ್ಯನುಗ್ರಹದಿ ಉರ್ವರಿತವ ವಿರಚಿಸಿ ಮೆರೆದ ಶೇಷಚಂದ್ರಿಕಾಚಾರ್ಯರೆಂಬೊ ಗುರು ವ್ಯಾಸರಾಜರ ಪರಾವತಾರರ 2 ರಾಗ ದ್ವೇಷಗಳ ತೊರೆಯುತ ತ ನ್ನನು ರಾಗದಿಂದ ಭಜಿಸುವ ಜನಕೆ ಭೂಗಕಲ್ಪ ತರುವಂತೆ ಅರಿಷ್ಠವ ನೀಗಿ ಸಾಧು ಭೋಗಗಳೀವ ಯೋಗಿಜನ ಮನೋನಯನ ಪ್ರಸನ್ನ ಶ್ರೀ ರಾಘವೇಂದ್ರರಪರಾವತಾರರ 3
--------------
ವಿದ್ಯಾಪ್ರಸನ್ನತೀರ್ಥರು
ಬನ್ನಿ ಮಹಂಕಾಳಿ ಜಯವ ನೀಡಮ್ಮ ಮನ್ನಿಸಿ ಬಾಲಗೆ ಪ ನಿನ್ನ ನಂಬಿಕೊಂಡು ಕೆನ್ನೆಯೋಳ್ಮುಡಿವರ ಬನ್ನ ಕಳೆದು ಜಯವನ್ನು ಕೊಟ್ಟು ನೀ ಭಿನ್ನವಿಲ್ಲದೆ ಮನ್ನಿಸಿ ಸಲಹು ಪನ್ನಂಗವೇಣಿಯೆ ಉನ್ನತ ಕರುಣಿ 1 ಪರಮ ಪವಿತ್ರಳೆಂದು ಪರಮ ಪ್ರೀತಿಯಿಂದ ಹರನು ಬಿಡದೆ ನಿನ್ನ ಶಿರದಿ ಧರಿಸಿಕೊಂಬ ಪರಮಮಹಿಮ ನಿನ್ನನರಿನು ಪೇಳುವೆನಾ ತರಳನ ಮೊರೆ ಕೇಳೆ ಕರುಣಿ ಶುಭಕರಿ2 ನೇಮದಿ ಭಜಿಪೆ ನಿಸ್ಸೀಮೆ ನಿರಾಮಯೆ ಕ್ಷೇಮಶರಧಿ ತ್ರಿಭೂಮಿಜಯಂಕಾರಿ ಈ ಮಹಭವನಿಧಿ ಕ್ಷೇಮದಿ ಗೆಲಿಸು ಶ್ರೀ ರಾಮನಾಮ ಪ್ರಿಯೆ ಕೋಮಲಹೃದಯೆ 3
--------------
ರಾಮದಾಸರು
ಬಾರೆಂದು ಹಸೆಗೆ ಕರೆವೆÀನು ಕ್ಷೀರಾಬ್ಧಿಶಯನನೆ ಸಾರಸನಯನನೇ ಪ. ಕ್ಷೀರಾಬ್ಧಿಜಾವರ ಮೇರುಗಂಭೀರನೆ ನೀರಜಭವಪಿತ ಮಾರಹರಾರ್ಚಿತ ಚಾರುನೀರದಗಾತ್ರ ಪರಮ ಪವಿತ್ರ ಅ.ಪ ಧರಣೀಸುರರ ಮೊರೆಗಳನಾಲಿಸಿ ಧರೆಯೊಳಗವತರಿಸಿ ನರರೂಪಧರಿಸಿ ಧರಣಿಪ ದಶರಥತರಳನೆಂದೆನಿಸಿ ಧರೆಯ ಭಾರವನಿಳಿಸಿ ಕರುಣಿಸು ಮನವೆರಸಿ 1 ಅಸುರೆ ತಾಟಕಿಯ ಅಸುವನಳಿದು ದುಷ್ಟ ನಿಶಿಚರರನು ಸದೆದು ಅನುಜನೊಡಗೊಂಡು ಕುಶಿಕನಂದನನ ಕ್ರತುವನು ತಾ ಕಾಯ್ದು ಅಸಮ ಶೂರನೆನಿಸಿ ಅಮರರ ಮನತಣಿಸಿ 2 ಶಿಲೆಯ ಶಾಪವಕಳೆದು ಲಲನೆಯ ಪೂಜೆಗೊಲಿದು ಬಲುಹಿನಿಂದಲೆ ಬಂದು ಹರಧನು ಮುರಿದು ಲಲನೆ ಜಾನಕಿಯ ನಲವಿನಿಂ ಕೈಪಿಡಿದು ಬಲುಗರ್ವಿತ ಭಾರ್ಗವ ಮದಮುರಿದೆ ಸಲಹೆನ್ನ 3 ಈಶವಿನುತ ಶ್ರೀ ಶೇಷಾಚಲ ನಿಲಯನೆ ದಾಸರಮನದೊಳು ವಾಸವಾಗಿಹನೇ ವಾಸವಾದ್ಯಮರ ಪೋಷಕನೆನಿಸಿಹನೆ ಭಾಸುರವದನನೆ ಶ್ರೀಸತೀಸದನನೆ ನೀಂ ನಲಿದು 4
--------------
ನಂಜನಗೂಡು ತಿರುಮಲಾಂಬಾ