ಒಟ್ಟು 857 ಕಡೆಗಳಲ್ಲಿ , 79 ದಾಸರು , 733 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ಕರಿಗಿರಿ ದುರ್ಗ ನಿವಾಸಾ | ದಯಾಪರಿಪೂರ್ಣ ಪೊರೆಯನ್ನ ಅನಿಶ ಪ ಶಿರಿ ಅಜಭವ ವಿಪಗೇಶಾ | ಹೃತ್‍ಸರಸಿಜ ವಾಸ ಲಕ್ಷ್ಮೀಶಾ ಅ.ಪ. ಗಜ ಬಿಸಜ ಕಿಂಜಲ್ಕದ ಯಸಳು ರಜವ ಶಿರಸಿಯೊಳಗೆ ನೀನಿರಿಸೋ 1 ಮೇಶ ಬ್ರಹ್ಮೇಶ ನಾಶವ ಗೈವೆ ಸಶೇಷಶೇಷಶಯ್ಯ ಜೀವಾದ್ಯರ ಪೋಷಾಈ ಸಮಸ್ತ ಜಗ ನಿನ್ನುದರದಿ ವಾಸಾಕೇಶಾಸುರಪಾದೀಶ ಪರೇಶನೆ ವ್ಯಾಸಾಈಶಿತವ್ಯ ತವ ದಾಸರಿಗೆಲ್ಲ ಉಪದೇಶಿಸು ಶಾಸ್ತ್ರ ವಿಶೇಷ ರಹಸ್ಯ ಮಹಿದಾಸ ಕುಶೇಶಯ ವಿಷಯ ವಿಲಾಸದಿಪೋಷಿಸು ಮನ ಮಧ್ವೇಶ ಮಹಾಪ್ರಭೋ 2 ಕರಿವರ ವರ ಶರಣಾಗತ ಪಾಲಾತರಳೆಗಿತ್ತೆ ನವ ನವ ಸೀರೆಯ ಜಾಲಾವರಸ್ತಂಭೋದಿತ ಹರಿಭಕ್ತಿ ಸುಪಾಲಾಗುರು ಗೋವಿಂದ ವಿಠ್ಠಲಾ ಕಾಲಾಸುರಪಾದಿಯ ತನು ವರ ರಥ ರೂಢ ಪು-ರಾರಿ ಭಯಹರ ಮುರಾರಿ ಮಹ ಭವತರಿ ಎನಿಸಿಹ ಸುಖ ತೀರಥ ಸನ್ಮತಧರಿಸಿಹೆ ಕಣ್ಣೆದುರಿಲಿ ನೀ ಕುಣಿಯೋ 3
--------------
ಗುರುಗೋವಿಂದವಿಠಲರು
ಕರುಣದಿ ಪೊರೆಯೆನ್ನ ಪ್ರಭುವೇ ಮೂಲ ಗುರುವೆ ಪ ಪರಮ ದಯಾನ್ವಿತ ಸುರಕಲ್ಪತರುವೆ ಅ.ಪ. ಅಂಗಜಪಿತನಾಜ್ಞೆ ಹಿಂಗಾದೆ ನೀಯಾಂತು ಅಂಗನೆ ಸೀತೆಯ ಅರಸುತ್ತ ಪೋದೆಯೊ ತುಂಗವಿಕ್ರಮ ನೀನು ಮಂಗಳಾಂಗಿಯ ಕಂಡು ಶೃಂಗಾರವನವನ್ನೆ ಭಂಗಮಾಡಿದೆಯೊ 1 ಕರಿಪುರದರಸನ ವರಪುತ್ರ ನೀನಾಗಿ ಕರಿರಾಜವರದಗೆ ಭಾವನಾಗಿ ಧರಣಿ ಭಾರವೆಲ್ಲ ಹರಿಸಿದೆ ನೀನು 2 ಯತಿಯ ರೂಪವ ತಾಳಿ ಕ್ಷಿತಿಯೊಳು ಚರಿಸುತ ದಿತಿಜರ ಬಾಯ್ಗಳ ಬಡಿಯುತಲಿ ಪತಿತ ಪಾವನ ಶ್ರೀ ರಂಗೇಶವಿಠಲನೆ ಪ್ರತಿಯಿಲ್ಲವೆಂತೆಂಬ ಮತಿಯಿತ್ತದೇವ 3
--------------
ರಂಗೇಶವಿಠಲದಾಸರು
ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಾದಿ ಪೊರೆಯನ್ನ ಪಾರ್ವತೀರಮಣ ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ ಅನುದಿನ ಅ.ಪ ದುರಿತ ಗಜ ಪಂಚಾಸ್ಯ ಕರಮುಗಿವೆ ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ ಗೂಗಲ್ಲಪ್ರಭುವೆ 1 ಭಾಗವತಸು ತಿಳಿಸೆನ್ನ ಮನಕೆ ಜಿತ ಮನೋಜಾತ 2 ಪರಿಪಾಲಿಸಲು ಶಿವನೆ ರಾಜಿಸುವ ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ ಪಾದ ಸುವಿಶಾಲ ಮಹಿಮನೇ 3 ನೀಡಿದೆಯೊ ಗೌತುಮ ಮನಮಂದಿರದಿ ಗೋ- ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4 ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ ಸಿರಿವ್ಯಾಸಕುವರನೇ5
--------------
ಕಾರ್ಪರ ನರಹರಿದಾಸರು
ಕರುಣಾಸಾಗರ ಬಾ ಗುರುವೆ | ಚರಣ ಕಮಲವನು ಸಾರಿದೆನೈ ಸ್ವಾಮಿ ಪ ಏನೆಂದು ಬಣ್ಣಿಪೆ | ದೀನವತ್ಸಲಪ್ರಭುವೆ | ಸಾನುರಾಗದಿ ನಿನ್ನ ಧ್ಯಾನಿಪೆನೈ ಜೀಯ1 ಗುರುರಾಘವೇಂದ್ರನೆ | ಶರಣರ ಸುರತರುವೆ | ನಿರುತ ಎಮ್ಮೊಳು ಕೃಪೆಯ ತೋರಿದಿರೈ ಸ್ವಾಮಿ 2 ಶ್ರೀ ಸುಧೀಂದ್ರಾರ್ಯರ | ಭಾಸುರಪ್ರಿಯತನಯ | ಶ್ರೀಶಕೇಶವನೊಲುಮೆ ಯಾಚಿಸುವೈ ಪ್ರಭುವೆ 3
--------------
ಶ್ರೀಶ ಕೇಶವದಾಸರು
ಕರುಣಿಸು ಪ್ರಭುತಂದೆ ತರಳಂಗೆ ದಯವ ಪ ಹರಿ ನೀನೆ ಅವತರಿಸೀಪರಿಭವಶರಧಿಯ ಪರಿಹಾರಗೊಳಿಸುವ ಪರಮಪಾವನರೂಪ 1 ಅರಿವಿಟ್ಟು ಭಜಿಸುವೆ ಮರೆಯದೆ ಮಗನ್ವಚನ ಕರುಣದಿ ಆಲಿಸಿ ವರದಹಸ್ತವ ಶಿರಕೆ 2 ಹಿಂಸೆಬಿಡಿಸು ಮಹ ಸಂಸಾರದುರಿಯನ್ನು ಧ್ವಂಸಗೈಯುವ ಶರಣರಾಂಶದ ಪ್ರಸನ್ನತೆ 3 ದುರಿತ ದೂರೀಕರಿಸಿ ಪರಮಾನಂದದಲಿರುವ ಸಿರಿ 4 ಮರೆಯ ನಿನ್ನಡಿಯಿನ್ನು ಸರುವೇಶ ಮೊರೆಕೇಳಿ ಗುರುವಾಗಿ ಶ್ರೀರಾಮ ಸ್ಥಿರಮೋಕ್ಷ ಸಂಪದವ 5
--------------
ರಾಮದಾಸರು
ಕರುಣಿಸು ಶ್ರೀ ರಾಮಾ ಪ ವಾರಿರುಹನಯನ ಜೀಮೂತ ಶ್ಯಾಮಾ | ಪೂರಿತ ಮನೋಕಾಮಾ 1 ದೀನೋದ್ದರಣಾ ಸದ್ಗುಣ ಧಾಮಾ | ಶ್ರೀನಿಧೀ ಸಾರ್ವಭೌಮಾ2 ಗುರುಮಹಿಪತಿ ಸುತ ಪ್ರಭು ಸರ್ವಾತ್ಮಾ | ಸುರಮುನಿ ವಿಶ್ರಾಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕವಿ ಕವಿದು ಪೊಳೆವ ಭುವನಪಾವನ ಚರಿತ ಇಂದೀವರಾಕ್ಷ ಪ ತವಪೂರ್ಣ ನಿಜ ಒಲಿಮೆ ಪ್ರಭುಪೂರ್ಣ ಕವನದಲಿ ಮೋದ ಕರಿವರದ ಭವಭಂಗ ಪರಿಹಾರ ಕವನ ವೋದಿದ ಮಾತ್ರ ಧವಳ ಕೀರುತಿ ಬೆಳುದಿಂಗಳನು ಮೀರಿಹುದೊ 1 ತವಪೂರ್ಣ ಗುಣ ಕ್ರಿಯೆ ರೂಪ ಘನ ಭಾವಗಳು ಲವಲವಿಕೆ ಎಮ್ಮ ಚೇತನಕೆ ಕೊಟ್ಟು ಭವಭೀತಿಗೆ ಭೀತಿ ತಂದೊಡ್ಡುವುದೊ ಕಮಲೇಶ ಸವಿದುಣ್ಣುವಾ ಜನಕೆ ಜಡದಲ್ಲೂ ನೀ ಬರುವೆ 2 ಶ್ರವಣ ಮಾತ್ರಕೆ ಮೈಮರೆಸುವುದು ಮಹಸಿರಿಯು ಶುಕ ಪಿತ ಸವಿದ ರುಚಿಯು ಇಹುದು ಪವಮಾನ ಕೃಷ್ಣಾರ್ಯ ರಾಮಾರ್ಯರತಿ ವಲುಮೆ | ಶ್ರವಿಸುವುದು ಪಠಿಪರನು ಭಕ್ತಿಮತ್ತರ ಮಾಡಿ 3 ಕವಲುಮತಿಯಲಿ ಮುಳುಗಿ ಚಲಿಸದಿರು ಇದರಿಂದ ಭವಮೂಲಕುನ್ಮೂಲ ಇದರ ಮಹಿವi ಅವಲಿಯನು ತಿಂದವನು ಅಗಲಿರದೆ ಒಡನಿಹನು ಜವನ ದೂತರು ತಲೆಮಣಿದು ಓಡುವರೊ 4 ತತ್ವಾಭಿಮಾನಿಗಳಿಗಾಹಾರವಿದು ಸತ್ಯ ತತ್ವಾರ್ಥ ಬಲು ಸುಲಭದಲ್ಲೆ ಮನಕವಗಾಹ್ಯ ಸತ್ಕøತಿಯ ಮಾಡಿ ಚಿತ್ಸುಖವ ಉಣು ನಿತ್ಯ ವಾತಾತ್ಮ ಗುರು ಶ್ರೀ ಜಯೇಶವಿಠಲನ ನೋಡು 5
--------------
ಜಯೇಶವಿಠಲ
ಕಳ್ಳನ ಹೆಜ್ಜೆಯನು | ಜಗದೊಳು ಕಳ್ಳನೇ ತಾ ಬಲ್ಲ | ಎಲ್ಲರಿಗಿದು ತಾನು | ಭೇದಿಸಿ | ನೋಡಲು ಅಳವಲ್ಲಾ ಪ ನಡುಮನಿಯೊಳು ಬಂದಾ | ಮಂದಿರಕನ್ನವ ಕೊರೆದಾ 1 ಸ್ವಪ್ರಭೆಯಲ್ಲಿ ಮೆರೆವಾ | ಅಲ್ಲಿಯ ಚಿದ್ರತ್ನವ ಕದ್ದಾ | ಸ್ವಾನುಭವದಿ ಮೆದ್ದಾ 2 ಕಳ್ಳರ ಸಂಗತಿಯಾ | ಮಹಿಪತಿ | ನಂದನ ತಾ ಮಾಡಿ | ಕದಿಯುತ ನೋಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಗಿಣಿ ತೀರದ ಯೋಗಿವರ್ಯ ಗುರುವೇ | ನಿನ್ನಲಿ ಮೊರೆಯಿಡುವೆ ಪ ಭೋಗಿಶಯನ ಗುಣ ಯೋಗದಿಂದ ಭಜಿಪಾ | ಹರಿ ಪದಾಬ್ಜ ಮಧುಪಾ ಅ.ಪ. ಸಿಂಗರವೆನಿಸಿದ ಮಂಗಳವೇಡಿಯಲಿ |ನೀನುದಿಸುತಲಲ್ಲೀಸಿಂಗರಿಸಿಹ ಬಲು ರಂಗ ಕುದುರೆ ನೇರಿ | ರಾವುತರೊಡಸೇರೀ ||ಕಂಗೆಡುತಲಿ ಬಲು ತುಂಗೆ ಕಾಗಿಣೀಯಾ | ಸಾರುತ ತನಹಯಾ ಹಿಂಗದೆ ನದಿಯಲಿ ಮಂಗಳ ಹಯವೇರಿ | ನೀರ್ಗುಡಿದ ಬಾಯಾರಿ 1 ಆಚೆ ತಟದಿ ಅಕ್ಷೋಭ್ಯಮುನಿಪ ನೋಡಿ | ಸ್ವಪ್ನದರ್ಥ ಮಾಡೀಸೂಚಿಸಿದನು ತವ ಶಿಷ್ಯನ ಕೈಯಲ್ಲೀ | ಬಂದ ಸಾದಿ ಅಲ್ಲೀ ||ಯಾಚಿಸಿದನು ಮುನಿ ಪದಕೇ ಬಾಗೀ | ತುರ್ಯಾಶ್ರಮಕಾಗೀಖೇಚರ ವಹನಾಜ್ಞೆಯೆಂದು ತ್ವರ್ಯಾ | ಮಾಡ್ದ ಸಾದಿ ಯತಿಯಾ 2 ತಂದೆ ಬಹು ಕೋಪದಿಂದ ಬಂದೂ | ಯತಿಯ ನಿಂದಿಸ್ಯಂದೂತಂದು ಮಗನ ಏಕಾಂತ ಗೃಹಕೆ ಆಗ | ಸತಿಯನು ಕೂಡಿಸಿ ವೇಗ ||ಅಂದು ಕಂಡು ಸರ್ಪಾಕೃತಿ ಪತಿಯಾ | ಚೀರಿದಳ್ ಬಲ್ಪರಿಯಾತಂದೆ ಕೊಂಡು ಮಗನರ್ಪಿಸಿದನುಯತಿಗೇ | ಕ್ಷಮೆ ಬೇಡಿದನಾಗೇ 3 ತ್ರ್ಯಕ್ಷನಂಶ ಅಕ್ಷೋಭ್ಯ ಮುನಿಪ ಆಗ | ಸನ್ಯಾಸ ವೇಗಭಿಕ್ಷುಕ ಮಧ್ವರ ಗ್ರಂಥ ಪೊತ್ತ ವೃಷಭ | ಎನುತೀತನ ಪ್ರಭಾ ||ಲಕ್ಷಿಸಿವರ ಕರೆದನೂ ನಾಮಾನ್ವರ್ಥ | ಯತಿಯನೆ ಜಯತೀರ್ಥಕುಕ್ಷಿಲಿ ಮೆರೆವರಗೋಳ ಗುಹೆಯು ಅಲ್ಲೀ | ರಚಿಸಿದ ಟೀಕೆಗಳಲ್ಲೀ4 ಮಧ್ವಭಾಷ್ಯಕೇ ರಚಿತ ಟೀಕಾ ಗ್ರಂಥಾ | ನೋಡಿದ ಮುನಿ ಮತ್ತವಿದ್ಯಾರಣ್ಯರ ಗೆದ್ದ ಆರ್ಯ ಧೀರಾ | ಅಕ್ಷೋಭ್ಯರ ಕುವರ ||ಅದ್ವೈತಾದಿಗಳೇಕವಿಂಶ ಪಂಥ | ಗೆಲ್ಲುತ ಸುಧೆ ಗ್ರಂಥಅದ್ವಿತೀಯ ಗುರುಗೋವಿಂದ ವಿಠ್ಠಲಗೇ | ಅರ್ಪಿಸಿದನು ಆಗೇ 5
--------------
ಗುರುಗೋವಿಂದವಿಠಲರು
ಕಾಣಲಿಲ್ಲೇ ದೇವರ ನೋಡಲಿಲ್ಲೇ ಪ ವಿಶ್ವದೋಲಾಡುವ ವಿಶ್ವಂಭರಿತ ಹರಿ1 ದೂರಿಹನೆ ನ್ನದೆ ಸಾರೆವೆ ಭಾವಿಸಿ 2 ಗುರುಮಹಿಪತಿ ಪ್ರಭುಗುರುತಕತದೊಮ್ಮೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಪಾಡೆಲೊ ದೇವ ಕರುಣಾರ್ಣವ ಪ ನಾ ಪಾಪಿಯು ಎಂದು ನೀ ಪರಿ ಪಾಲಿಸದೀಪರಿಗೈದರೆ ಆಪದ್ಭಾಂಧವ ಅ.ಪ. ಮೊರೆಯಿಡುವೆನು ಇನ್ಯಾರಿಗೆ | ನೀನಿಲ್ಲದೆ ಪೊರೆವ ಪ್ರಭುವಾರೆನಗೆ | ಶರಣ ಮಂ ದಾರನೆಂದರಿತು ನಿನ್ನಯ ಪಾದ ನೆರೆ ನಂಬಿದೆನು ಇನ್ನು ಪೊರೆಯಬೇಕೆನ್ನನು 1 ಕರಿರಾಜನ ಭಯ ಪರಿಹರಿಸಿದ | ವರ ಗರುಡಗಮನ ಸಿರಿವರದ | ಜನಾದರ್Àನ ಪರಮ ಪುರುಷ ಶ್ರೀ ಕರಿಗಿರಿ ಮಂದಿರ ನರಹರಿ ನಮಿಪೆನು ಚರಣ ಸರಸಿಜಕೆ 2
--------------
ವರಾವಾಣಿರಾಮರಾಯದಾಸರು
ಕಾಮಿತ ಪ್ರದಾಯಕಧರ ಸೋಮ ಪ ಪೂಜಿಸಿದ ನಿನ್ನ ಗಡ ರಘುರಾಮ ನೀ ಜಪ ಮಾಡುವೆ ಅವನ ದಿವ್ಯನಾಮ1 ಸಾಧು ಶಿರೋಮಣಿ ಸರ್ವೇಶ ಮೋದದಾಯಕ ಕೈಲಾಸವಾಸ 2 ಕೈರಾತವೇಷ ದಿವ್ಯಪ್ರಭಾವ 3 ಚರ್ಮಧಾರಿಯೆ ಷಟ್ಕರ್ಮನಿರತರು ನಿರ್ಮಲರರಿವರು ನಿನ್ನ ಚಿದ್ವಿಲಾಸ 4 ಸಂಕರ್ಷಣಮೂರ್ತಿ ನೀ ಸಚ್ಚರಿತ್ರ ಪಂಕಜಾಕ್ಷ ಗುರುರಾಮ ವಿಠಲ ಮಿತ್ರ 5
--------------
ಗುರುರಾಮವಿಠಲ