ಒಟ್ಟು 381 ಕಡೆಗಳಲ್ಲಿ , 63 ದಾಸರು , 324 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮೌಷಧಿ ಸಿಕ್ಕಿತು ಪರಿಪರಿರೋಗ ಪರಿಹಾರಕಿದು ದಕ್ಕಿತು ಪ ಜ್ವರದ ಬೇಗೆಗೆ ದಾಹ ಕರುಳ ಕುಂದಿಸಿಯೆನ್ನ ನರಳಿಸಿದಾಗ ಮಾಂಗಿರಿರಂಗಾ ಎಂದೆಂಬ ಅ.ಪ ಸುರನರೋರಗ ಗರುಡ ಚರಣ ಗುರು ದಿವಾಕರ ಕಿನ್ನರಾಪ್ಸರ ಶರಣಜನ ಕರುಣಾಕರ ಶ್ರೀ ಧರ ಸುಖಂಕರ ಶೌರಿಯೆಂಬಾ1 ಪಿತ್ತವು ತಲೆಗೇರಿತು ಸುತ್ತಲು ಕಣ್ಗೆ ಕತ್ತಲೆ ಮುಸುಕಿದ್ದಿತು ಚಿತ್ತಪಲ್ಲಟಿವಾಗಿ ಮತ್ತನಾಗಿರಲಾಗ ನೆತ್ತಿಯೊಡೆದ ಎನ್ನ ಕುತ್ತಿಗೋಂಕಾರ 2 ಚಿತ್ತ ಮಸ್ತಕ ನೆತ್ತಿಗಳ ಬೆಂಬತ್ತಿ ಮತ್ತತೆಯಿತ್ತ ಪತ್ತದ ಕತ್ತಲೆಯನುತ್ತರಿಸಿದುತ್ತಮ ಚಿತ್ತಜನಪೆತ್ತಚ್ಯುತಾ ಯೆಂಬ 3 ಉಸಿರು ಉಗ್ಗಡಿಪಾಗ ವಸುದೇವ ಸುತಯೆಂಬ 4 ರಸರಸಂಗಳೊಳೆಸೆದು ವಾಸಿಸಿ ಉಸಿರು ಬಸಿರನು ವಸುವಿಲಾಸದೊಳೆಸೆದು ಪೊಸ ಪೊಸ ಎಸಕದಿಂ ಸುಖ ರಸವನೀಯುವ ರಾಮಯೆಂಬಾ 5 ಕರ ನೇತ್ರಗಳು ತಂಪಿಂಪಿನ ಸವಿ ಬಲೆಯೊಳು ಬಿದ್ದುವು ಜವ ನೇಣೆಸೆದಾಗ ಭವದೂರಹರಿ ಯೆಂಬ 6 ಶಿವ ಭವಾಮರಪವನಪಾವಕ ಜವ ಶಶಾಂಕವಾಕರಾನಕ ಶ್ರೀಧರ ಹರೇ ಭವದೂರನೆಂಬಾ 7 ಲಕ್ಷನಾಮಗಳೆಲ್ಲ ಲಕ್ಷಣವಾದ [ತು ರಕ್ಷೆಯೀಯುವಗುಳಿಗೆ] ಮಾತ್ರಾ ಮೋಕ್ಷಸುಖವನಿತ್ತು ರಕ್ಷಿಪುದೆಂಬುದ ದಕ್ಷಸುತೆಗೆ ಫಾಲಾಕ್ಷ ತಾಂ ಪೇಳಿದ 8 ಅಕ್ಷಯಾತ್ರವಿಪಕ್ಷ ರಾಕ್ಷಸ ಶಿಕ್ಷ ಸುಜನರಕ್ಷ ಪ್ರದವ ಅ ಧ್ಯಕ್ಷ ನುತಕಮಲಾಕ್ಷ ಶರಣಕಟಾಕ್ಷ ಲಕ್ಷ್ಮೀಪಕ್ಷ [ಮೂಂಗಿರಿರಂಗ] ಯೆಂಬಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪವಮಾನಾ ಮದ್ಗುರವೆ ಪವಮಾನಾ ಪ ಪರಾಕು | ನಾನು | ವಾಕು || ಆಹಾ | ತವಕದಿಂದಲಿ ಸಂಭವಿಸುವ ಮತಿಯಿತ್ತು | ಭವದಿಂದ ಕಡೆಗಿತ್ತು ಅ.ಪ. ಆಶ್ರಿತಜನ ಕಲ್ಪವೃಕ್ಷಾ | ನಿನ್ನ | ಆಶೆಮಾಡಿದೆ ಬಲು ದೀಕ್ಷಾ | ಗುಣರಾಶಿವಿರಾಗ ಪ್ರತ್ಯಕ್ಷ | ವಾಗಿ | ದಾಸತ್ವ ಕೊಡು ಬಲುದೀಕ್ಷಾ || ಆಹಾ || ಏಸು ಜನ್ಮಗಳಿಂದ | ದೋಷವ ಕಳೆದು ಸಂ | ಕರ್ಣ | ಭೂಷಣ ಕೃಪೆ ಮಾಡೊ 1 ಜ್ಞಾನ ಪ್ರಾಣೋತ್ತಮ ರೂಪ | ನಿನ್ನ | ನಾನು ನಂಬಿದೆನೊ ಪ್ರತಾಪ | ಸುರ | ಧೇನು ಭಕ್ತರಿಗೆ ಸಮೀಪ | ಜಗ | ತ್ರಾಣ ಕಪಿಕುಲ ದೀಪ || ಆಹಾ || ಆನಾದಿಯಲಿ ಬಂದು | ಙÁ್ಞನವ ನೋಡಿಸಿ | ಮಾನಸದಲಿ ಭೇದ | ವನ್ನು ಕರುಣಿಸು ನಿತ್ಯಾ 2 ಹರಿದಾಸರೊಳು ಅಗ್ರಣಿಯೆ | ನೋಡು | ಸುರರೊಳು ನಿನಗಾರು ಯೆಣೆಯಾ | ಚಿಂತಿ | ಪರಿಗೆ ಆವಾವಾ ಹೊಣೆಯೇ | ಆಹಾ | ಕರವ ಮುಗಿವೆ ಸಂ | ತೈಸು ಸ್ವಧÀರ್ಮವ | ಮೊರೆ ಹೊಕ್ಕವರ ವಿ | ಸ್ತರವಾಗಿ ಪ್ರತಿದಿನ 3 ತತ್ವೇಶ ಜನರೆಲ್ಲ ನೆರೆದು | ಅಹಂ | ಮತಿಯಲ್ಲಿ ಸತ್ಕರ್ಮ ಮರೆದು | ನಿನ್ನ | ನುತಿಸದೆ ಅತಿಶಯ ಜರೆದು | ತಮ್ಮ | ಗತಿಯೆಲ್ಲ ಅಲ್ಲಲ್ಲೆ ಮರೆದು || ಆಹಾ || ಚತುರಾನನ ಶ್ರೀ | ಪತಿನೋಡುತಲಿರೆ | ಪ್ರತಿಕಕ್ಷಿಯಲ್ಲಿ ಸಂ | ತತಿಯೆನಿಸಿಕೊಂಡೇ 4 ಇಂದ್ರಿಯಂಗಳ ನಿಯಾಮಕನೇ | ಗುಣ | ನಿರ್ಜರ ನಾಯಕನೆ | ಪಾಪ | ಸಿಂಧು ಬತ್ತಿಪ ಪಾವಕನೆ | ನಿಜ | ಬಂಧು ಸಂಶ್ರಿತ ತಾರಕನೇ ||ಆಹಾ || ಇಂದು ಮಹಾದಯ | ಕರ | ತಂದು ಉದ್ದರಿಸಿದ | ಇಂದ್ರಪ್ರಸ್ತನೇ 5 ವಾಕು | ದೇವ | ಯೆನ್ನ ಕುತ್ಸಿತ ಮನ ನೂಕು | ಮುನ್ನೆ | ಘನ್ನ ಭಕುತಿಯ ನೀಡಬೇಕು | ಇಂತು | ಪುಣ್ಯಮಾಡಿಸಿ ಬಿಡದೆ ಸಾಕು ||ಆಹಾ || ಕಣ್ಣುಕಾಣದೆ ಘೋರಾ | ರಣ್ಯದಿ ಬಿದ್ದಿಹೆ | ಬನ್ನ ಬಡಿಸುವದು | ನಿನ್ನ ಧರ್ಮವಲ್ಲಾ 6 ಎಣೆಗಾಣೆನೊ ನಿನ್ನ ಪ್ರೇಮ | ಅನು | ಗುಣ್ಯವಾಗಲಿ ನಿಸ್ಸೀಮ | ಸುಪ್ರ | ಧಾಮ | ಗುಣ | ಪೂರ್ಣ ಮಧ್ವ ಹನುಮ ಭೀಮ ||ಆಹಾ|| ಪನ್ನಂಗಾರಿ ವಾ | ಹನ್ನ ವಿಜಯವಿಠ್ಠ | ಲನ್ನ ಮೂರುತಿಯನ್ನು |ನಿನ್ನೊಳು ತೋರಿಸೋ7
--------------
ವಿಜಯದಾಸ
ಪಾತಕಗೆ ಪರತರದ ಗುರುಬೋಧವ್ಯಾಕೆ ಸೂತಕವ ಬಿಡದವಗೆ ಪರತತ್ವವ್ಯಾಕೆ ಪ ಮಾತುತಪ್ಪಿ ನಡೆಯುವಗೆ ನೀತಿ ವಚನಗಳ್ಯಾಕೆ ಜಾತಿಲ್ಲದವನಿಗೆ ಜ್ಯೋತಿಷ್ಯವ್ಯಾಕೆ ಭೂತಬಡಿದವನಿಗೆ ಭೀತಿಯು ಯಾತಕ್ಕೆ ಆತುರಗೆ ಯಾತಕ್ಕೆ ಕೀರ್ತಿ ಅಪಕೀರ್ತಿ 1 ಮಂಗನಿಗೆ ಮಾಲ್ಯಾಕೆ ಅಂಗನೆಗಧಿಕವ್ಯಾಕೆ ಮುಂಗಾಲಿಲ್ಲದವಳಿಗೆ ಶೃಂಗಾರವ್ಯಾಕೆ ಬಂಗಾರದೊಡವ್ಯಾಕೆ ಕಾಡಡವಿನಿವಾಸಗೆ ಕಂಗಳಿಲ್ಲದವನಿಗೆ ಕರಕನ್ನಡ್ಯಾಕೆ 2 ಪತಿಗಂಜದವಳಿಗೆ ವ್ರತನೇಮಗಳು ಯಾಕೆ ಸತಿಗಂಜಿ ನಡೆಯುವಗೆ ಶಸ್ತ್ರಾಯುಧ್ಯಾಕೆ ಸುತರಿಲ್ಲದವನಿಗೆ ಅತಿಭಾಗ್ಯ ಯಾತಕ್ಕೆ ಮತಿಯಿಲ್ಲದವಗ್ಹರಿಕಥೆಕೀರ್ತನ್ಯಾಕೆ 3 ಮಾನಹೀನನಿಗೆ ಬೇರೆ ಮರಣಬರಲೇಕೆ ಅ ಜ್ಞಾನಿಗ್ಯಾತಕ್ಕೆ ಜಾಣಜನಸಂಗ ಗೋಣೆಹೊರುವವಗ್ಯಾಕೆ ವಾಹನದ ಗೋಷ್ಠಿಯು ಬಾಣ ಬತ್ತಳಿಕ್ಯಾಕೆ ಕರವಿಲ್ಲದವಗೆ 4 ಪರನಿಂದೆ ಮಾಳ್ಪನಿಗೆ ಶರಣತ್ವ ಯಾತಕ್ಕೆ ಕರುಣವಿಲ್ಲದವನಿಗೆ ಗುರುಸೇವೆ ಯಾಕೆ ಧರೆಗಧಿಕ ಶ್ರೀರಾಮಚರಣಸ್ಮರಣಿಲ್ಲದ ಪರಮಪಾಪಿಗೆ ಶಿಷ್ಟನರಜನ್ಮವ್ಯಾಕೆ 5
--------------
ರಾಮದಾಸರು
ಪಾಪೇಂದ್ರಿಯಗಳಿಗೆರಗಿ ಪರಹಿತಾರ್ಥವ ಮರೆದು ವ್ಯಾಪಾರ ವಿಷಯಂಗಳಲ್ಲಿರೆ ಯಮನೊಯ್ದು ಕೋಪಾಟೋಪದಲಿಂದ ದಂಡಿಸಿ ತಮಸಿನ ಕೂಪದಲ್ಲಿ ಹಾಕದಲೆ ಬಿಡುವನೆ ಮರುಳೆ ಪ ಉಡಿಗೆ ತೊಡಿಗೆ ಇಡಲು ಮಡದಿಯಳ ಮುಖ ನೋಡಿ ಕಡು ಹಿಗ್ಗಿ ಹುಗ್ಗಿ ಪಡಗದಂತೆ ಹಿರ್ರನೆ ಪಿಡಿದು ಗಲ್ಲವ ಮುಟ್ಟಿ ಮುಡಿಗೆ ಮುಡಿವಾಳವನು ತಡಿಯದಲೆ ಮುಡಿಸುತ್ತಲಿ ಕಕ್ಕಸ ಕುಚ ವಡನೊಡನೆ ನೋಡಿ ಸುಖಬಡುತಾ ಬಿಡದೆ ಕಾಳ್ಯಾಡುವುದು ಸುಡುಸುಡು ಮಾಡಿದರಿನ್ನಾವ ಗತಿ ಮರುಳೇ 1 ನೆಂಟರು ಮನೆಗೆ ಬರಲು ವಂಟಿಯಂತೆ ಮೊಗವ ಸೊಂಟ ಮಾಡಿಕೊಂಡು ಕಂಠವನು ತರ್ಕೈಸಿ ಕುಂಟವಾರ್ತೆಯ ಕೇಳಿ ಬಂಟನು ನಾನೆಂದು ತೊಂಟತನ ಬಗೆ ತೋರುತಾ ಉಂಟಾದ ಗೋಧಿಯ ಸೊಂಟೆ ಬೆಲ್ಲನು ತಂದು ಹೆಂಟಿಯಂತೆ ಹದಿನೆಂಟು ಕಡುಬನೆ ಕೊರಿಸಿ ವಂಟಿಲಿ ಕುಳಿತು ಸುಂಡಿಗೆಯನ್ನು ಚಾಚುತ್ತಾ ಎಂಟು ಮಡಿಸದೆ ವಾರ್ತಿ ಪೇಳುತಲಿ ಮರುಳೇ 2 ಇಂದು ನಮ್ಮನೆ ಪ್ರಸ್ತÀವೆಂದು ಆರಾದರೂ ಬಂದು ಪೇಳಲು ಊರ ಹಂದಿಯಂತೆ ಕಾಯಿದು ಒಂದು ಕಾಳು ತಿನದೆ ಸಂದಿಗೊಂದಿ ಸುತ್ತಿ ಸಂಧ್ಯಾಕಾಲ ವಾನರಾಗುತ್ತ ಚಂದದಿಂದ್ಯುಕ್ತಿಯೊಳು ದ್ವಂದ್ವದಲಿ ಕುಳಿತಿವರು ತಂದೆ ತಾಯಿ ಕಡೆ ಬಂಧುಬಳಗವೆಂದೂ ಒಂದಿಷ್ಟು ಕಡಿಮೆ ತಿನ್ನದೆ ಪರರ ಒಡವೆಯನು ತಿಂದು ಡರ್ರನೆ ತೇಗಿ ನಸುವ ನಗುವ ಮರುಳೇ3 ನಾಡಾಡಿ ಚಾಡಿ ಮಾತಾಡಬೇಕಾದರೆ ಖೋಡಿ ನಾಲಿಗೆ ದೊಡತಾಗಿ ಬಾಹಿನೀ ನಿಡಿ ಲಟಲಟವೆನುತಾ ಕೋಡಗದಂತೆ ಕುಳಿತು ಹೇಡಿ ಪರನಿಂದೆಗಳಿಗೆ ಬಾಡದಲೆ ಬತ್ತದಲೆ ಮಾಡಿದ ಮಹಾಪುಣ್ಯ ಕಾಡಿಗೊಪ್ಪಿಸಿ ಕೊಟ್ಟ ಮೂಢ ಗಾರ್ಧಬನಂತೆ ಓಡಾಡಿ ಬಳಲಿ ನಾಡಾಡಿ ಸುದ್ದಿಗಳಿಗೆ ಬಿಡಿ ಬಿಡಿಂದಾ ತಿರುಗುವಾ ಹೀನ ಮರುಳೇ 4 ಸಂಸಾರವೆಂಬಾ ಸಾರಾ ಸಾಗರ ಮಧ್ಯ ಹಿಂಸನಾಗದೆ ಬಿಟ್ಟು ಇದರಂತೆ ಭಕುತಿ ಮರು ದಂಶ ಗುರು ಮಧ್ವಮುನಿರನ್ನನಾ ಶ್ರೀ ಚರಣ ಸಂಶಯವಿಲ್ಲದಲೆ ನಂಬಿ ಸಂಸಾರ ಉತ್ತರಿಸು ಸಂದೇಹ ಇದಕಿಲ್ಲ ಕಂಸಾಸುರನ ಪ್ರಾಣಹರ ಎನ್ನ ಮನಸ್ಸಾ ಹಂಸ ಶ್ರೀ ವಿಜಯವಿಠ್ಠಲನ್ನ ಪಾದದಾ ಪಾಂಶವೊ ಮಾಡಿ ಗತಿಯಲಿ ಬಾಳು ಮರುಳೇ5
--------------
ವಿಜಯದಾಸ
ಪಾಲಿಸು ನಮ್ಮನು ಪರಬ್ರಹ್ಮ ಶ್ರೀ- ಲೋಲಾನಂತ ಗುಣಾಲಯನೇ ಪ. ನೀಲಾಭ್ರದಾಭ ಕಾಲನಿಯಾಮಕ ಮೂಲೇಶ ಪುರುಷ ಮೂರ್ಲೋಕಾಧಿಪ ಅ.ಪ. ಉತ್ತಮ ಗುಣಗಳು ಬತ್ತಿಪೋದುವೈ ದೈತ್ಯರ ಗುಣವು ಪ್ರವರ್ಧಿಪುದು ಚಿತ್ತಸಾಕ್ಷಿ ತವ ಭಕ್ತಿಕಥಾಮೃತ ನಿತ್ಯ ಸವಿಸುತ್ತ ಹಿಂಬಾಲಿಸೆ1 ಭಾಗವತ ಜನರ ಯೋಗಕ್ಷೇಮ ಸಂ ಯೋಗೋದ್ಯೋಗಿ ನೀನಾಗಿರಲು ಕೂಗುವಾಸುರರ ಕೂಡೆ ಕೂಡಿಸದೆ ಭೋಗಿಶಯನ ಭವರೋಗಭೇಷಜನೆ2 ಪಾವನಕರ ನಾಮಾವಳಿ ವರ್ಣಿಪ ಸೇವಕ ಜನರ ಸಂಭಾವಿಸುವ ಕೇವಳಾನಂದ ಠೀವಿಯ ಪಾಲಿಸು ಶ್ರೀವಾಸುದೇವ ದೇವಕೀತನಯ]3 ಶುದ್ಧತಮೋಗುಣಬದ್ಧ ದೈತ್ಯ ಪ್ರ- ಸಿದ್ಧರಾಗಿಹರು ಮದ್ಯಪರು ಬುದ್ಧಿಜ್ಞಾನ ಸಮೃದ್ಧಿ ಭಕ್ತಿಯಿಂ- ದುದ್ಧರಿಸೈ ಗುರು ಮಧ್ವವಲ್ಲಭನೆ4 ಕೇಶವಾಚ್ಯುತ ಪರೇಶ ಹೃದ್ಗುಹನಿ- ವಾಸ ವಾಸವಾದ್ಯಮರನುತ ಶ್ರೀಶ ಶ್ರೀವೆಂಕಟೇಶ ಭಕ್ತಜನ ರಾಶ್ರಯಸ್ಥಿತ ದಿನೇಶ ಶತಪ್ರಭ 5 ಮಂಗಲ ಜಗದೋತ್ತುಂಗರಂಗ ಮಾ ತಂಗವರದ ನೀಲಾಂಗ ನಮೋ ಅಂಗಜಪಿತ ಲಕ್ಷ್ಮೀನಾರಾಯಣ ವಿಹಂಗ ತುರಂಗನೆ 6
--------------
ತುಪಾಕಿ ವೆಂಕಟರಮಣಾಚಾರ್ಯ
ಪುಟ್ಟ ಪುಟ್ಟ ಶ್ರೀನಿವಾಸ ಬೇಗ ಬಾರೊ | ಬಹು ಪಾದ ಎನಗೆ ತೋರೋ ಪ. ಸಿಟ್ಟಿನಿಂದಲಿ ನೀನು ಕೆಟ್ಟ ದೈತ್ಯನ | ಕೊಂದು ಪುಟ್ಟ ಬಾಲನ ಕಾಯ್ದ ನಾರಸಿಂಹ ಅ.ಪ. ಬಿಟ್ಟ ಕಣ್ಣು ಬೆಟ್ಟ ಬೆನ್ನು ಸೊಟ್ಟಕೋರೆ | ಬಹು ದುಷ್ಟ ಘೋರರೂಪಿ ನೀನು ಪುಟ್ಟ ಬಾಲ ದುಷ್ಟ ರಾಜರ ಕೊಂದ ದಿಟ್ಟ ರಾಮನೆ | ಕೃಷ್ಣ ಬಿಟ್ಟ ವಸ್ತ್ರವ ದುಷ್ಟ ಹನನ ಕಲ್ಕಿ 1 ಭಾರ ಪೊತ್ತು ಕೋರೆ ತೋರ್ದೆ | ಬಹು ಘೋರಕಾರ ಬಾಲರೂಪಿ ಕ್ರೂರ ರಾಮ ಜಾರ ಚೋರನು | ಆಗಿ ವಿೂರಿ ಬತ್ತಲೆ ನಿಂದು ಏರಿ ಕುದುರೆ 2 ಅಮೃತ ದಿಟ್ಟ ವರಹ | ಹರಿ ಸಿಟ್ಟು ನಿನಗೆ ಪುಟ್ಟಿ ಭಾರ್ಗವ ಶ್ರೇಷ್ಠ ಶ್ರೀ ರಾಮ ಬುದ್ಧ ಕೆಟ್ಟ ಕಲಿಯ | ಗೆದ್ದ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲ ಈಗ 3
--------------
ಅಂಬಾಬಾಯಿ
ಪುಟ್ಟಿದನು ಮಗನೂ ಮಾದಮ್ಮಗೇ ಪ ಪುಟ್ಟಿದ ವೈಶ್ಯ ಮಾದಮ್ಮಗೆ ಮಗ ರಂಡೆವಿಠ್ಠಲ ಎಂತೆಂದು ಪೆಸರಿಟ್ಟು ಕರೆದರೂ ಅ.ಪ. ನಗು ನಗುತಲೇ ನಾನು ಶ್ರೀಹರಿಗೆ ಕೈಮುಗಿದು ಬೇಡಿಕೊಂಡೇನು ||ನಗಧರ ಮಾಡಿದ ಮಾಡಿದ ಪ್ರಪಂಚವುಜಗದಿಂದಲೇನಹುದೆಂದು ನುಡಿದಳು 1 ನದಿಯ ಮಳಲು ಸರೀ ಪ್ರಜೆಗಳು ಬದಿಯೊಳಗೆ ಕೈಕಾಲು ಮುರುಕೊಂ-ಬದರಿಯದೆ ಒದಗಿರಲು ಮುದದಿಂದಮಾದಮ್ಮ ಸುತ್ತ ಮುತ್ತಿತು ಲೋP À 2 ಆ ರಂಡೆ ವಿಠಲಾನ ಗುಡಿಯೊಳಗಿಟ್ಟುಶ್ರೀ ರಮಣಗೇ ಒಪ್ಪಿಸೇ ||ನೀರೆಣ್ಣೆ ನಾರು ಬತ್ತಿಯ ದೀಪ ಉರಿಯಲುಮೂರು ಲೋಕಕೆ ಆಶ್ಚರ್ಯವಾಯಿತು 3 (ನಾಲ್ಕನೆಯ ನುಡಿ ಸಿಕ್ಕಿಲ್ಲ) ಭ್ರಷ್ಟಳ ಆರುತಿಯ ಮೋಹನ್ನವಿಠಲ ಕೈಗೊಂಡ ||ದೃಷ್ಟಾಂತವಾದುದು ಶಿಷ್ಟ ಜನರಿಗೆಲ್ಲಶ್ರೇಪ್ಠಳಾದರು ಇಹಪರದಲ್ಲಿ ಎಂದರು 5
--------------
ಮೋಹನದಾಸರು
ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ. ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1 ತಾಪ | ಎತ್ತಿವಳ ಸಲಹೋ 2 ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3 ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4 ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುಷ್ಯೋತ್ಸವ ಗೀತೆ ಮಕರಪುಷ್ಯದ ಶುದ್ಧ ಷಷ್ಟಿಯಲಿ ನಗರಶೋಧನೆ ಮಾಡಿ ಮಂತ್ರಿಯು 1 ಮೊದಲು ದಿವಸದಿ ಧ್ವಜವನೇರಿಸಿ ಭೇರಿಯಿಡೆ ಸುರರ ಕರೆದರು 2 ಯಾಗಶಾಲೆಯ ಪೊಕ್ಕು ರಂಗನು ಯಾಗಪೂರ್ತಿಯಾ ಮಾಡಿ ನಿಂದನು 3 ಯಾತ್ರದಾನವ ಬೇಡಿ ಹರುಷದಿ ಸೂತ್ರ ಧರಿಸಿದಾ ಧಾತ್ರಿಗೊಡೆಯನು 4 ಕಂದರ್ಪನಾಪಿತ ದರ್ಪಣಾಗ್ರದಿ ಹ ನ್ನೊಂದು ದಿನದಲಿ ನಿಂದ ಹರುಷದಿ 5 ಸೂರ್ಯಚಂದ್ರರು ಹಂಸಯಾಳಿ[ಸಹಿತ] ಏರಿ ಬಂದನು ಸಿಂಹ ಶರಭವ 6 ಸರ್ಪವಾಹನ ಕಲ್ಪವೃಕ್ಷವು [ಗರು ಡ] ಪಕ್ಷಿ ಹನುಮನ ಏರಿ ಬಂದನು 7 ಏಳು ದಿವಸದಿ ಚೂರ್ಣಾಭಿಷೇಕವ ಸೀಳೆಸಹಿತಲೆ ಗ್ರಹಿಸಿ ಮಿಂದನು 8 ಎಂಟು ದಿವಸದಿ ಏರಿ ತೇಜಿಯ ಬಿಟ್ಟನು ಪೇರಿ ತೇರಿನಿದಿರಲಿ 9 ಒಂಬತ್ತು ದಿನದಲಿ ಶೃಂಗರಿಸಿದಾರು ಸಂಭ್ರಮದಿಂದಲೆ ಬೊಂಬೆರಥವನು 10 ಪುನರ್ವಸುವಿನಲ್ಲಿ ಪುರುಷೋತ್ತಮನು ರಥ ವನೇರಲು ಪೊರಟುಬಂದನು11 ಸಿಂಧುಶಯನನ ಹಿಂದೆಬಂದರು 12 ಅಷ್ಟಪತಿಯನು ಅಷ್ಟು ಕೇಳುತಾ ಸೃಷ್ಟಿಗೀಶ್ವರ ರಥವನೇರಿದ 13 ಪತ್ನಿ ಸಹಿತಲೇ ಹತ್ತಿ ರಥವನು ಉತ್ತರಬೀದಿಯ ಸುತ್ತಿಬಂದನು 14 ಇಂದಿರಾಪತಿ ಇಳಿದು ರಥವನು ಚಂದ್ರಪುಷ್ಕರಿಣಿಯಲಿ ತೀರ್ಥವಿತ್ತನು 15 ಕರೆತಂದರು ಕರಿಯಮೇಲಿಟ್ಟು ಚ ದುರಂಗಗೆ ನಜರು ಕೊಟ್ಟರು 16 ಸಪ್ತಾವರಣವ ಶಬ್ದವಿಲ್ಲದೆ ಸುತ್ತಿಬಂದನು ಭಕ್ತವತ್ಸಲ 17 ಸುತ್ತಿ ಲಕ್ಷ್ಮೀಗೆ ಇತ್ತು ಸೇವೆಯ ಭಕ್ತ ಭಾಷ್ಯಕಾರರಿಗೆ ಒಲಿದು ನಿಂದನು 18 ತನ್ನ ಚರಿತೆಗಳನು ಕೇಳುತ ಪನ್ನಗಶಯನನು ಪರಮ ಹರುಷದಿ 19 ಬಂದ ಸುರರ ಆನಂದದಿಂದಲೇ ಮಂದಿರಕ್ಕೆ ತಾ ಕಳುಹಿ ರಂಗನು 20 ಬಿಚ್ಚಿ ಕಂಕಣ ನಿಂದ ಹರುಷದಿ ಅರ್ಥಿಯಿಂದಲೆ ಅಚ್ಚುತಾನಂತ 21 ಏರಿ ಆಳಂಪಲ್ಲಕ್ಕಿ ಹರುಷದಿ ಒ ಯ್ಯಾರದಿಂದ ಬಂದ ರಂಗನು 22 [ಮೋಕ್ಷ] ಕೊಡುವನು ಮುದ್ದುವೆಂಕಟರಂಗನು 23
--------------
ಯದುಗಿರಿಯಮ್ಮ
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಬತ್ತಿಗೆ ಹತ್ತದ ಜ್ಯೋತಿಯು ನಡು ನೆತ್ತಿಯೊಳಿಂ ಬಿಟ್ಟು ಜತನ ಮಾಡಣ್ಣಾ ಪ ತೈಲ್ಯವು ಸರಿಯಾಗದು ನೋಡು ಅಶುದ್ಧ ಮೈಲಿಗೆಯಿದ್ದರೆ ಕಳದೀತು ಕೈಲಾಸಪತಿಯ ಧ್ಯಾನವ ಮಾಡು ಬಟ್ಟ ಬೈಲಲ್ಲಿ ಬೆಳಗಾಗುತಿದೆ ಮುಂದೆ ನೋಡು 1 ಕತ್ತಲೆ ಬೆಳಕಲ್ಲಿ ಉಳಿಯದು ಮಾಯಾ ಮೃತ್ಯುಪಾಶಗಳಲ್ಲಿ ಸುಳಿಯದು ನಿತ್ಯ ನಿರ್ಮಲವೆಂಬ ಗೆಲವದು ಪರ ವಸ್ತುವಿನೊಳಗೆ ಕೂಡಿರುವುದು ಅಣ್ಣಾ 2 ನಿಂದಿಹ ನಿಜಕೆ ತಾ ನಿಲುವದು ಪರ ದ್ವಂದ್ವಾಕಾರಗಳೆಲ್ಲ ಗೆಲುವದು ಕುಂದು ದುಷ್ಕರ್ಮವ ಕೊಲುವದು ವಿಮಲಾ ನಂದನ ಚರಣಕೆ ಸಲುವದು ಅಣ್ಣಾ 3
--------------
ಭಟಕಳ ಅಪ್ಪಯ್ಯ
ಬರಹೇಳಮ್ಮಾ ಭಾವೇ ಮನೆಗೆ ಬಿರದಂಕ ಹರಿಯಾ| ಚರಣವನ್ನು ಗಾಣದೆನ್ನ ಚಿತ್ರನೆಲೆ ಗೊಳ್ಳದಮ್ಮಾ ಪ ಬಾಲೆಕೇಳೆ ಕುಂತಳೆ ಬೇಸರ ವಿದೇನೇ| ಪಾಲಗಡಲ ಮನೆಯಾ ಬಿಟ್ಟು ಪವನಾಹಾರನ ಪರ್ಯಂಕವನು| ಜಾಳಿಸಿ ತಾನ್ಯಾಕ ಪೋದನೇ ಜಲರುಹ ನಾಭ| ಕಾಲಿಲಲ್ಲದವನಾಗಿ ಕೊಂದು ತಮನನೀಗಿ| ಮ್ಯಾಲಗಿರಿಯ ಪೊತ್ತ ಮರರಿಗ ಮೃತವಿತ್ತಾ| ಭೂಲಲನೆ ಬಡಿಸಿ ಭೂವರಾಹೆನಿಸಿ| ಬಾಲಕರಿಯಲು ರೂಪ ಬೆಡಗಾ ವಿಡಿಸು 1 ಉಡುರಾಜದವನೆ ಕೆಳದೀ ಉನ್ನತಿಯ ನೋಡೇ| ಷಡ್ಗುಣೈಶ್ವರ್ಯವುಳ್ಳಾ ಸುರಮುನಿಸೇವಿತ ಪಾದಾ| ಬೇಡಿ ಭಾಗ್ಯವ ನೀಡುವ ಬಲುದೊರೆ ತಾನಾಗಿ| ಬಡಹಾರುವನಂತೆ ಭೂಮಿ ಬೇಡಿದನಂತೆ| ಕೊಡಲಿಪಿಡಿದರೆ ಸಕುಲ ಮಾಡಿದ ನಾಶಾ ವಡನೆ ವಾನರ ಸಂಗ ವಿರಹರಿಸಿ ಸುರತುಂಗಾ| ತುಡುಗತನದಿ ಬೆಣ್ಣೆತಿನ್ನುವರೆ ರನ್ನೆ 2 ಕರಿರಾಜ ಗಾಮಿನೀ ಕಿರೀಟ ಕುಂಡಲದಾ ಶಿವತ್ವಕುಂಡಲದಿಂದಾ| ಪರಮಪುರಷದೇವನು ಪೀತಾಂಬರಧಾರೀ| ಬರಿಯ ಬತ್ತೆಲೆಯಾಡಿ ಬೌದ್ಯರೋಳಗ ಕೂಡೀ| ತುರಗೀರಿಯ ವನರ ತುಳಿಸುತ ಸುರವರ ಮೊರೆಗೇಳಿ ಬಂದನು ಮನದೊಳು ನಿಂದನು| ಗುರು ಮಹಿಪತಿ ಪ್ರೀಯಾ ಗುಣಗಣನಿಲಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬರಿದೆ ಮೋಹದೊಳು ಬೆರೆದೆ ನಮ್ಮ ಗುರುವಾದಿರಾಜಾರ್ಯ ಚರಣಗಳ ಮರೆದೆ ಪ. ಸರ್ವಜ್ಞಗುರುಮತವ ನಿರ್ವಹಿಸಿ ಮಾಯಿಗಳ ಗಣಪತಿಶಕ್ತಿ ಪೂರ್ವದೇವತೆಗಳನು ಸರ್ವ ಪರರೆಂದೊರೆವ ದುರ್ವಾದಿಗಳ ಭಂಗಿಸಿ ಹಯವದನ- ಪರ ದೈವವೆನಿಸಿ ಮೆರೆವಂಥ ಪಾರ್ವತೀವರವಂದ್ಯಪದ ಪಾತ್ರನೆನಿಸದೆ 1 ಅಂತರ್ಬಹಿಃಶತ್ರು ಸಂತತಿಯ ಗೆಲುವ ತೋರಿಸುವ ಚಂತಿತಾಭೀಷ್ಟಗಳ ಪರಮಾಂತರಂಗದಿ ಕೊಡುವ ಕಂತುಕೃತ ಬಾಧೆಯನ್ನು ನಿಲದಂತೆ ಸಂತೈಸಿಸುವರನ್ನು ಕಾವ ಕ- ಲ್ಪಾಂತದಲಿ ಪವಮಾನನಾಗುವನ ಮರೆದೆ 2 ಮೂರಾರು ಎಂಬತ್ತು ಭಾರಿ ಕಲ್ಪಗಳಲ್ಲಿ ಶ್ರೀ ರಮಾರಮಣಪದ ವಾರಿಜಗಳನು ಭಜಿಸಿ ತೋರಿ ವೈಷ್ಣವ ತತ್ವ ಸಾರವನು ಸಮಧರಿಸಿ ಮಾರುತನ ಮತವೆ ಮಧುವೈರಿಪ್ರಿಯಕರವೆನಿಸಿ ಧೀರ ಕವಿ ಶುಭಕರವಜ್ಞಾನ ಸುಖ ಸಾರ ವೆಂಕಟಪತಿಯ ಮನದಿ ಧರಿಸಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾ ಬಾ ರಾಘವ ಬಾ ವೀರ ರಾಘವ ಪ ಮತ್ಸ್ಯರೂಪನಾಗಿ ಹೆಚ್ಚಿದ ದೈತ್ಯನ ಇಚ್ಛೆಯಿಂದಲಿ ಕೊಂದ ಅಚ್ಯುತರಾಯನೆ 1 ಕೂರ್ಮರೂಪನಾಗಿ ಅಮರರಿಗೊಲಿದು ನೀ ಕಾಮಜನಕ ಸುಪ್ರೇಮಾವನಿತ್ಯಂತೆ4 2 ವರಹರೂಪನಾಗಿ ಧರಣಿಯ ಚೋರನ ಶಿರವ ತಂದು ನೀ ಜಗವ ಪೊರೆದ್ಯಂತೆ 3 ದುರುಳ ರಕ್ಕಸನ ಕರುಳ ತೆಗೆದು ನಿನ್ನ ಕೊರಳೊಳಗಿಟ್ಯಂತೆ 4 ಚೆಲುವತನದಿ ಪೋಗಿ ಬಲಿಯದಾನವ ಬೇಡಿ ಕಲುಷ ಹರಿಸಿ ಅವನ ಪಾತಾಳಕ್ಕೊತ್ತಿದ್ಯಂತೆ 5 ಕೊಡಲಿಯ ಪಿಡಿಯುತ ದುಗುಡ ರಾಯರುಗಳ ಸೊ ಗಡು ಮುರಿದು ನೀ ಸಡಗರ ಪಟ್ಯಂತೆ 6 ಸೀತೆಗೋಸ್ಕರ ಪೋಗಿ ಸೇತುವೆಯನೆ ಕಟ್ಟಿ ಭೂತ ರಾವಣನ ಖ್ಯಾತಿಯಿಂದಲಿ ಕೊಂದ 7 ವಾರಿಜಾಕ್ಷಿಯರ ಕೂಡಿ ನೀರಾಟದೊಳು ಪೊಕ್ಕು ನೀರೆಯರ1 ಮನ ಅಪಹಾರಮಾಡಿದ ಕೃಷ್ಣ 8 ಚಿತ್ತಜಪಿತ ನೀನು ಬತ್ತಲೆಯೊಳು ಬಂದು ಉತ್ತಮ ಸ್ತ್ರೀಯರ ವ್ರತಗಳಳಿದ್ಯಂತೆ 9 ಸುಂದರ ವಾಜಿಯ ಚೆಂದಾದಿಂದೇರುತ ಮಂದಗಮನೆಯರ ನಂದವಳಿದ್ಯಂತೆ 10 ದೋಷರಹಿತ ನಮ್ಮ ಶೇಷವಿಠ್ಠಲನೆ ಬ್ಯಾಸರವಿಲ್ಲದೆ ಪೋಷಿಸಿ ಸಲಹಲು 11
--------------
ಬಾಗೇಪಲ್ಲಿ ಶೇಷದಾಸರು