ಒಟ್ಟು 159 ಕಡೆಗಳಲ್ಲಿ , 51 ದಾಸರು , 153 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನೋಡಿ ಧನ್ಯನಾದೆನೊ ಶ್ರೀಕೃಷ್ಣ ದಯದಿಮನ್ನಿಸಯ್ಯ ಮರೆಯ ಹೊಕ್ಕೆನು ಪಅನ್ನಪಾನದಿಂದ ಬೆಳೆದ ತನುವು ಸ್ಥಿರವಿದೆಂದು ನಂಬಿಮುನ್ನ ಮತಿಹೀನನಾಗಿ ನಿನ್ನ ಸ್ಮರಣೆ ಮರೆತೆ ಅ.ಪಮಾಯ ಪಾಶದಲಿ ಸಿಲುಕಿದೆಯನ್ನನಗಲಿ ಅಳಿದ ತಾಯಿತಂದೆಯರಿಗೆ ಮರುಗಿದೇ ಪ್ರಿಯಮಡದಿ ಪರಸ್ತ್ರೀಯರಲಿ ಮೋಹವೆರಸಿಮರುಳನಾದೆಕಾಯಸುಖವನೆಣಿಸಿಸರ್ವೇ ನ್ಯಾಯ ತಪ್ಪಿ ನಡೆದೆ ಕೃಷ್ಣಾ 1ಹಲವು ಜನ್ಮವೆತ್ತಿ ತೊಳಲಿದೇ ತರಳನೆನಿಸಿಹಲವು ಜಾತಿ ಮೊಲೆಯ ಭುಜಿಸಿದೆಹಲವು ದೇಶಗಳನು ಸುತ್ತಿ ಹಲವುಕ್ರೂರಕೃತ್ಯ ಗೈದೆ ತಲೆಯ ಹಿಂದೆಇರುವ ಮೃತ್ಯು ನೆಲೆಯನರಿಯದಿರ್ದೆ ಕೃಷ್ಣಾ 2ಆಶಾಪಾಶಗಳಲಿ ಸರ್ವ ದೋಷ ಮೋಸವೆಣಿಸದಾದೆಲೇಸ ಕಾಣೆ ಮುಂದೆ ಯಮನ ಪಾಶಕರ್ಹನಾದೆ ಕೃಷ್ಣಾ3ಅರಿಗಳಾರು ಮಂದಿ ದೇಹದಿ ನೆಲಸಿರ್ದು ಎನ್ನಮರುಳುಗೊಳಿಸೆ ಇಂದ್ರಿಯ ಸಹಾಯದಿನರವು ಮಾಂಸ ಅಸ್ಥಿಯಿಂದ ವಿರಚಿಸಿದ ದೇಹವಿದನುಪರಿಪರಿಯ ಶೃಂಗರಿಸುತ ಸ್ಮರನ ತೆರದಿ ಮೆರೆದೆ ಕೃಷ್ಣಾ 4ಒಂದು ದಿನವು ಸುಖವ ಕಾಣೆನೂ ಈ ಜೀವನಸಂಬಂಧಿಗಳ್ಯಾರೆಂಬುದನರಿಯೆನೂಬಂಧು ನೀನೇ ಸರ್ವಪ್ರದನು ಮುಂದೆ ಜನುಮವೆತ್ತದಂತೆಬಂದು ಎನ್ನ ಸಲಹೋ ಗೋವಿಂದದಾಸನೊಡೆಯ ಕೃಷ್ಣಾ 5
--------------
ಗೋವಿಂದದಾಸ
ನೆಚ್ಚಿದಿರೋ ಪ್ರಾಣಿ ಸಂಸಾರ ಸ್ಥಿರವೆಂದುಹುಚ್ಚು ಬುದ್ದಿಯಲಿ ನೀ ಕೆಡಬೇಡ ಪ.ಎಚ್ಚರಿತುಕೊಂಡು ಧರ್ಮದಿ ನಡೆ ಕಣ್ಣನುಮುಚ್ಚಿದ ಮೇಲುಂಟೆ - ನರಜನ್ಮ ಸ್ಥಿರವಲ್ಲ ಅಪಅಷ್ಟಕಂಬವನಿಕ್ಕಿ ತಾಕದುಪ್ಪರಿಗೆಯಕಟ್ಟಿದ ಮನೆ ಇದ್ದಂತಿಹುದುಹೊಟ್ಟೆತುಂಬ ಉಣದೆ ಧನವ ಗಳಿಸಿ - ಬಚ್ಚಿಟ್ಟಲ್ಲಿರದೆ ಸಂಗಡ ಬಾಹೋದಲ್ಲ 1ಅತಿ ಪ್ರೀತಿಯಿಂದ ಮದುವೆಯಾದ ಮೋಹದಸತಿ ತನ್ನ ಮರಣದ ಕಾಲಕ್ಕೆಗತಿಯಾವುದೆನುತಲೆ ಮರುಗಿದಪ್ಪಳಲ್ಲದೆಜತೆಯಾಗಿ ನಿನ್ನ ಸಂಗಡ ಬಾಹಳಲ್ಲ 2ಒಂದೊಂದು ಪರಿಯ ಬುಧ್ಧಿಯ ಪೇಳಿ ಸಲುಹಿದಕಂದ ನಿನ್ನಾವಸಾನ ಕಾಲಕೆಮುಂದೇನು ಸಂಸಾರ ನಡೆಸಲುಪಾಯವೇನೆಂದು ಚಿಂತಿಸುವ ಸಂಗಡ ಬಾಹನಲ್ಲ 3ನಾಟರಿಷ್ಟರು ಬಂಧು - ಬಳಗವುಹರಿ ಕೊಟ್ಟುದುಂಟಾದರೆ ಬಂದು ಉಣ್ಣುವರುಕಂತಕ ಬಂದರೆ ಹೊತ್ತು ಕಾಷ್ಠದೊಳಿಟ್ಟುಕಂತಿಯ ತಂದೊಟ್ಟಿ ಸುಡುವರು ಕಾಣೊ 4ಇಂತಿದು ಒಂದು ಪ್ರಯೋಜನ ನಿನಗಿಲ್ಲಅಂತ್ಯಕಾಲಕ್ಕೆ ಸಂಗಡ ಬಾಹುದುಕಂತುಜನಕ ನಮ್ಮ ಪುರಂದರವಿಠಲನಸಂತತ ಧ್ಯಾನದೊಳಿರು ಕಾಣೋ ಮನುಜಾ 5
--------------
ಪುರಂದರದಾಸರು
ಪಾಲಿಸು ಭಕ್ತವತ್ಸಲನೇ ನಿನ್ನಬಾಲಕನಂತೆನ್ನ ಸಲಹೋ ಶ್ರೀವರನೇ ಪಬಾಲ ಪ್ರಹ್ಲಾದ ಧ್ರುವನು ಚಂದ್ರಹಾಸಮೇಲಾದ ಮುಚುಕುಂದನಂತೆನ್ನ ಸತತ ಅ.ಪಸುರರುನಾರದರು ಕಿನ್ನರರುಮುನಿವರರು ವಸಿಷ್ಠ ವಾಲ್ಮೀಕಿ ಗೌತಮರುಗರುಡ ಗಂಧರ್ವ ಗಾಯಕ ಯಕ್ಷವಾಸುಕಿತರಣಿನಂದನ ಆಂಜನೇಯ ಜಾಂಬವರಂತೆ 1ನಳ ನಹುಷ ಸಗರಂಬರೀಷ ನಿನ್ನ ಒಲಿಸಿಭಗೀರಥ ಬಲಿಯುನಾಕೇಶಸಲಹೆಂದು ಹರಿಶ್ಚಂದ್ರರುಕ್ಮಾಂಗದ ವಿಭೀಷಣಗೊಲಿದಧರ್ಮಜ ಪಾರ್ಥ ಕರಿರಾಜನಂತೆ 2ಚರಣದಿ ಅಹಲ್ಯೆಯನು ಕಾಯ್ದೆ ನೀನುಪೊರೆದೆ ಶಬರಿಯನ್ನು ಕುಬುಜೆಯನೆನದೆಹರುಷದಿ ಎರಡೆಂಟು ಸಾವಿರ ತರುಣಿಯರೊಡಗೂಡಿಸೆರಗಿಗೆ ವರವಿತ್ತೆ ದ್ರುಪದನಂದನೆಗೆ 3ಸಿಂಧುಶಯನ ನಿನ್ನ ಕರುಣ ಎನ-ಗೆಂದಿಗೆ ತೋರುವೆ ಶ್ರೀಲಕ್ಷ್ಮೀರಮಣಮಂದರಧರಅರವಿಂದವದನಹರಿನಂದನ ಕಂದ ಗೋವಿಂದನೆ ದಯದಿ 4
--------------
ಗೋವಿಂದದಾಸ
ಬಾರೆ ವೈಯ್ಯಾರಿದೊಡ್ಡಮಾರಿ ಸಂಚರಿಸುವಾಗಫೋರರಾತ್ರಿಲೆ ಬರಬಹುದೆ ಪ.ಮಂದಗಮನೆ ನೀ ಮದನಜ ನೈಯ್ಯನಬದಿಯಲೆ ಬೆರೆದ ಬಗೆ ಹ್ಯಾಂಗಬಗೆಹ್ಯಾಂಗನಿನ್ನ ಕೀರ್ತಿಅದ್ಭುತವಮ್ಮಾ ಜಗದೊಳು 1ಧರ್ಮನ ಒಂದು ವರುಷ ರಮ್ಮಿಸಿ ಕರೆದೆಲ್ಲಧರ್ಮ ತಾ ಹೇಸಿ ಜರಿದನುಧರ್ಮ ತಾ ಹೇಸಿ ಜರಿದನು ಅದಕೇಳಿಬ್ರಮ್ಹಾದಿಗಳೆಲ್ಲ ನಗುತಾರೆ 2ಭೀಮನ ಒಂದು ವರುಷ ಕಾಮಿಸಿ ಕರೆದೆಲ್ಲಭೀಮತಾ ಹೇಸಿ ಜರಿದನುಭೀಮತಾ ಹೇಸಿ ಜರಿದನು ಅದಕೇಳಿಭೂಮಿ ಪಾಲಕರು ನಗುತಾರೆ 3ಮಿತ್ರಿ ಇಬ್ಬರ ಸಂಗ ತೃಪ್ತಿಯ ಗೈಯದೆಪಾರ್ಥನ ವರುಷ ಕರೆದೆಲ್ಲಪಾರ್ಥನ ವರುಷ ಕರೆದೆಲ್ಲಅವಜರಿದುಯಾತ್ರೆಗೆ ನಡೆದ ಬಿಡಳೆಂದು4ಸಕಲರ ಕರೆಯಲುಕಕುಲಾತಿತೀರದೆನಕುಲನ ವರುಷ ಕರೆದೆಲ್ಲನಕುಲನ ವರುಷ ಕರೆದೆಲ್ಲಅವಜರಿದುಯುಕ್ತಿಲೆಬ್ಯಾಗಕಡೆಯಾದ5ಸಹದೇವನೊಂದು ವರುಷ ಮೋಹಿಸಿ ಕರೆದೆಲ್ಲಸಹದೇವ ಹೇಸಿ ಜರೆದನುಸಹದೇವ ಹೇಸಿ ಜರೆದನುಆದೆಲ್ಲ ಹಲ್ಲಿ ಮರಿಯಂತೆ 6ಎಲ್ಲರ ಕರೆಯಲು ಒಲ್ಲದೆ ಜರೆದರುಅಲ್ಲವತಿಂದ ಇಲಿಯಂತೆಅಲ್ಲವತಿಂದ ಇಲಿಯಂತೆ ಮರುಗಲು
--------------
ಗಲಗಲಿಅವ್ವನವರು
ಭಯ ನಿವಾರಣವು ಶ್ರೀ ಹರಿಯ ನಾಮ |ಜಯಪಾಂಡುರಂಗವಿಠಲ ನಿನ್ನ ನಾಮ ಪಧಾರಿಣೀದೇವಿಗಾಧಾರವಾಗಿಹ ನಾಮ |ನಾರದರು ನಲಿನಲಿದು ನೆನೆವ ನಾಮ |ಘೋರಪಾತಕಿ ಅಜಾಮಿಳನ ಸಲಹಿದ ನಾಮ |ತಾರಕವು ಬ್ರಹ್ಮ - ಭವರಿಗೆ ನಿನ್ನ ನಾಮ 1ಮೊರೆಯಲಾಲಿಸಿ ಮುನ್ನ ಗಜವ ಸಲಹಿದ ನಾಮ |ಕರುಣದಿಂ ದ್ರೌಪದಿಯ ಕಾಯ್ದ ನಾಮ |ಮರುಗುತಿಹ ಧ್ರುವನ ಉನ್ನತನ ಮಾಡಿದ ನಾಮ |ಪರತತ್ತ್ವ ಇಹಕಲ್ಲವೇ ನಿನ್ನ ನಾಮ 2ಚರಣದಲಹಲ್ಯೆಯನು ಸೆರೆಯ ಬಿಡಿಸಿದ ನಾಮ |ಕರುಣದಲಿ ಪ್ರಹ್ಲಾದನನು ಕಾಯ್ದ ನಾಮ |ತೊರೆಯಲಕ್ರೂರನಿಗೆ ನಿಜವ ತೋರಿದ ನಾಮ |ಸ್ಮರಿಸ ಜನರಿಗೆ ಸಮಸ್ತವನಿತ್ತ ನಾಮ 3ಚಂದ್ರಶೇಖರ ಗಿರಿಜೆಗೊರೆದ ಸಿರಿಹರಿನಾಮ ||ಬಂದಾ ವಿಭೀಷಣನ ಪಾಲಿಸಿದ ನಾಮ |ಕಂದಮುಚುಕುಂದನಿಗೆ ಕಾಮಿತವನಿತ್ತ ನಾಮ |(ಸಂದ ಪಾಂಡಪಕ್ಷ ಪಾವನವು ನಾಮ ) 4ಅಖಿಳವೇದಪುರಾಣ ಅರಸಿಕಾಣದ ನಾಮ |ಸಕಲಯೋಗಿ - ಜನಕೆ ಸೌಖ್ಯ ನಾಮ ||ಪ್ರಕಟಿಸಲು ಜಗವ ಪಾವನವ ಮಾಡಿದ ನಾಮ |ರುಕುಮಿಣೀಯರಸ ವಿಠಲ ನಿನ್ನ ನಾಮ 5ಭಕ್ತಿಯಲಿ ನೆನೆವರನು ಎತ್ತಿ ಸಲಹುವ ನಾಮ |ಮುಕ್ತಿ ಮಾರ್ಗಕೆ ಯೋಗ್ಯಹರಿ ನಿನ್ನ ನಾಮ |ಎತ್ತರಕೆ ಏರಿಪುದು ಸ್ವಾಮಿ ನಿನ್ನಯ ನಾಮ |ಚಿತ್ತಜನ ಪೆತ್ತ ಶ್ರೀ ಹರಿಯ ನಾಮ 6ವಾರಿಜಾನನೆ ತುಳಸಿಗೊಲಿದ ಹರಿನಾಮ ಕಾ - |ವೇರಿ ಮಧ್ಯದಲಿ ನೆಲಸಿದ ನಿನ್ನ ನಾಮ ||ಕ್ಷೀರಸಾಗರದಲ್ಲಿ ಶಯನವಾಗಿಹ ನಾಮ |ನಾರಾಯಣಾ ಕೃಷ್ಣಹರಿ ನಿನ್ನ ನಾಮ7ಹೊಂದಿದ್ದ ಭಕ್ತವೃಂದವ ಸಲಹಿದಾ ನಾಮ |ತಂದು ಅಮೃತವ ಸುರರಿಗೆರೆದ ನಾಮ ||ಅಂದಂಬರೀಷನನು ಕಾಯ್ದ ಶ್ರೀ ಹರಿನಾಮ |ತಂದೆ ಪುರಂದರವಿಠಲಹರಿ ನಿನ್ನ ನಾಮ8
--------------
ಪುರಂದರದಾಸರು
ಮನವೆ ಮಾಧವನ ಮರೆಯದಿರೆಂದೆ ದಣುವಾಯಿತು ಹಿಂದೆಕ್ಷಣವೊಂದು ಬಿಡದಿರು ಕೃಷ್ಣನ ಮುಂದೆ ಪ.ಘನವಿಷಯಂಗಳ ನೆನವಿಲಿ ಪುನ:ಪುನ:ತನುವ ವಹಿಸಿಭವವನವನ ಚರಿಸದೆಅ.ಪ.ಹರಿವಾರ್ತೆಯನು ಕೇಳು ಕೇಳಿದ್ದೆ ಕೇಳು ಅರಿಅರುವರನಾಳುಅರಿವಿಂದ ಗರುವದ ಮೂಲವ ಕೀಳುಹೆರವರ ಹರಟೆಗೆ ಪರವಶನಾಗದೆಕರಿವರವರದನ ವರವನೆ ಬಯಸು 1ಹರಿಗುರುವಿಗೆರಗು ಅರಿತರಿತೆರಗು ತಪವೆರಡಲಿ ಸೊರಗುಸೊರಗಿದವರ ಕಂಡು ಕರಗು ಮರುಗುತಿರುಗ್ಯೊಡಲುರಿಗೆ ಮುಳ್ಳ್ಹೊರೆಗೆ ಸ್ಮರಾಸ್ತ್ತ್ರಕೆಗುರಿಯಾಗದೆ ಹರಿಸೆರಗ ಬಿಡದಿರು 2ಹರಿವಿಗ್ರಹನೋಡುನೋಡಿದ್ದೆನೋಡುಮಮಕಾರವೀಡಾಡುಸ್ಥಿರವೊಂದನೆ ಬೇಡಸ್ಥಿರವ ಬಿಸಾಡುಸಿರಿವಂತರಸಿರಿಪರವಧುಗಳ ಸಿಂಗರವೆಣಿಸದೆ ಸಿರಿವರನ್ನೆನೋಡು3ಹರಿಪ್ರಸಾದವನುಣ್ಣು ನೆನೆನೆನೆದುಣ್ಣು ಶ್ರೀಹರಿ ಪ್ರೀತ್ಯೆನ್ನುಹರಿಪ್ರೇರಕ ನೇಮಕ ಸಾಕ್ಷಿಕನೆನ್ನುಹರಿಪ್ರಿಯವಲ್ಲದನರುಪಿತ ಪರಿಪರಿಚರುಪವ ಚರಿಸದೆ ಹರಿಯಚರಿಸು4ಹರಿಯಂಘ್ರಿ ಪರಾಗವ ಗ್ರ್ರಹಿಸಾಘ್ರಾಣಿಸು ಹರಿಯವರಿಗೆ ಉಣಿಸುಹರಿಭಕ್ತಿ ಜ್ಞಾನ ವೈರಾಗ್ಯವ ಗಳಿಸುಹರಿಪ್ರಿಯ ಪ್ರಭು ಮಧ್ವಾಚಾರ್ಯರ ಪ್ರಿಯ ಮೇಲ್ಗಿರಿ ಪ್ರಸನ್ವೆಂಕಟ ದೊರೆಯನೆ ನಂಬು 5
--------------
ಪ್ರಸನ್ನವೆಂಕಟದಾಸರು
ಮಾಯೆಯು ಎಂತಿಹುದೆಂಬೆಯ ಮಗನೆಮಾಯೆಯು ಸ್ತ್ರೀಯೇಮಾಯೆಮಾಯೆಯಗುರುಕರುಣದಿ ತಾಗೆ ಅದರೆಮಾಯೆಯೆಲ್ಲವೂ ನಿರ್ಮಾಯೆಪಎಸಳಿನ ಕಂಗಳ ಓರೆನೋಟಕೆಎದೆಗುಂದುವುದೇಮಾಯೆಮುಸುಕನೇ ಹಾಕಿ ಹಲ್ಲನು ತೆರೆಯಲುಮುಂದುಗೆಡಿದುವುದೇಮಾಯೆಕುಸುಮದ ಸೂಡಿದ ಮುಡಿಯಾಭಾವಕೆಕುಸಿಯುತಲಿಹುದೇಮಾಯೆಮುಸಿ ಮುಸಿ ನಗುತ ಮುದ್ದು ಮಾತಾಡಲುಮರುಳಾಗುವುದೇಮಾಯೆ1ಚೆಳ್ಳು ಪುಳ್ಳು ಎಂದೆಂಬ ಅಂದುಗೆಗೆಚಿತ್ತುಡುಗುವುದದೇಮಾಯೆಬಳ್ಳಿಯ ತೆರದಲಿ ಬಳುಕುವ ತನುವಿಗೆಬಾಯಿ ಬಿಡುವುದೇಮಾಯೆಮೆಲ್ಲನೆ ಹೆಜ್ಜೆಗೆ ಜಗ್ಗುವ ನಡಿಗೆಗೆಮರುಗುತಲಿಹುದೇಮಾಯೆಗಲ್ಲದ ನುಣುಪಿಗೆ ಚಿಬುಕದ ಸಿರಿಗೆವಶವಾಗುವುದೇಮಾಯೆ2ಮೋರೆಯ ಮುರುಕಿಸೆ ಹುಬ್ಬನು ಏರಿಸೆಮುಳುಗಿಹೋಗುವುದೇಮಾಯೆತೋರ ಹರಡಿಯ ತಿರುಹುವ ಬಗೆಗೆದೃಢಗೆಡುವುದೆಮಾಯೆಸೀರೆ ಸಿಂಗಾರಕೆ ಒಲವು ಒಯ್ಯಾರಕೆಸಿಕ್ಕಿಹೋಗುವುದೇಮಾಯೆಹಾರವ ಎತ್ತಿ ಎದೆ ಬದಿ ತೋರಿಸೆಹುಚ್ಚನಾಗುವುದೇಮಾಯೆ3ಕಂಚುಕಿ ತೆರೆದು ನಡುವನು ಸಡಿಲಿಸೆಕಾಲುಡುಗುವುದೇಮಾಯೆಚಂಚಲ ದೃಷ್ಟಿಯ ಆಲಿಯ ಹೊರಳಿಸೆಚೇತನಗುಂದುವುದುಮಾಯೆಗೊಂಚಲ ನಾಗೋತ್ತರ ಚಳತುಂಬಿಗೆ ಮಾರುಹೋಗುವುನೇಮಾಯೆಮಿಂಚುವ ಮೋರೆಯ ಮೀಟಿನ ಬಣ್ಣಕೆಮುಳುಗಿಯಾಡುವುದೇಮಾಯೆ4ಸತಿಯಿಂದಲಿಸುತ ಸುತನಿಂದಲಿ ಸೊಸೆಸರಗೊಳಿಸುವುದೇಮಾಯೆಮಿತಿಯಿಲ್ಲದೆ ವಾಸನೆಯಲಿ ಜನ್ಮವಮುಂದುವರಿಸುವುದೇಮಾಯೆಪಥಗಾಣದೆ ಅನಂತ ಯೋನಿಯಲಿಪುಡಿಯಾಗುವುದೇಮಾಯೆಚಿದಾನಂದನ ತಿಳುವಿಗೆ ಮುಳುಗಿಸಿಪಸರಿಸಿ ಇಹುದೆಮಾಯೆ5
--------------
ಚಿದಾನಂದ ಅವಧೂತರು
ಮುಳಿದು ಮಾಳ್ವುದೇನು ಜನರುಜ್ಞಾನಿಪುರುಷನತನು ಗುಣಂಗಳೆಂಬುವನ ಮುಟ್ಟದಿದ್ದ ಬಳಿಕಪಸುಖವುಬರೆ ಹಿಗ್ಗಲಿಲ್ಲ ದುಃಖದಿಂದ ಕುಗ್ಗಲಿಲ್ಲನಿಖಿಳಪ್ರಪಂಚದಲ್ಲಿ ವಾಸನಿಲ್ಲವೋಸಕಲ ವಿಷಯ ಸಂಗವಿಲ್ಲ ಶಠದಭಾವವೆಂಬುದಿಲ್ಲಪ್ರಕಟ ಪರಮಾತ್ಮನಾಗಿ ಮುಕುತಿ ಪತಿಯು ಆದ ಬಳಿಕ1ನಿಂದೆ ಸ್ತುತಿಗೆ ಮರುಗಲಿಲ್ಲ ಬಂದುದನ್ನು ಕಳೆಯಲಿಲ್ಲಕುಂದುಗಳಿಗೆ ನೊಂದು ಮನಸು ಮಿಡುಕಲಿಲ್ಲವೋಹಿಂದಣದನೆನೆಯಲಿಲ್ಲ ಬೆಂದ ಒಡಲಿನಾಸೆಯಿಲ್ಲಸುಂದರಾತ್ಮತಾನೆಯಾಗಿ ಬಿಂದು ಸಾಕ್ಷಿಯಾದ ಬಳಿಕ2ಅರಿವುಮರೆವು ಎಂಬುದಿಲ್ಲ ಪರರ ಜರೆದು ನುಡಿಯಲಿಲ್ಲಇರುಳು ಹಗಲು ಎಂಬುವಾವು ತೋರಲಿಲ್ಲವೊಮರಣ ಭಯದ ಚಿಂತೆಯಿಲ್ಲ ದುರುಳತನದ ಚರ್ಚೆಯಿಲ್ಲಶರಣ ಸರ್ವಕಾಲ ಕರಣ ದೂರನಾದ ಬಳಿಕ3ಮೋಹದಲ್ಲಿ ಸಿಲುಕಲಿಲ್ಲ ತಾಮಸದಲ್ಲಿ ತೊಡಗಲಿಲ್ಲಕಾಮ ಬಾಧೆ ಎಂಬುವಾವು ಕಾಡಲಿಲ್ಲವೋನೇಮನಿತ್ಯಮೊಳೆಯಲಿಲ್ಲ ಕಾಮಿತಕ್ಕೆ ಕೂಡಲಿಲ್ಲಪ್ರೇಮಾನಂದನಾಗಿನಿತ್ಯವ್ಯೋಮಾತೀತನಾದ ಬಳಿಕ4ತನ್ನವರು ಎನ್ನಲಿಲ್ಲ ತನ್ನ ತಾನು ಹೊಗಳಲಿಲ್ಲಮನ್ನಣೆ ಎಂಬುದದಕೆ ಹಿಗ್ಗಲಿಲ್ಲವೋಭಿನ್ನ ಭಾವವೆಂಬುದಿಲ್ಲ ನನ್ನ ನಿನ್ನದೆಂಬುದಿಲ್ಲಚೆನ್ನ ಚಿದಾನಂದ ಚೇತನಾತ್ಮತಾನಾದ ಬಳಿಕ5
--------------
ಚಿದಾನಂದ ಅವಧೂತರು
ವಾಸವನೆ ಮಾಡಿರೋ ಕಾಶಿಯಲಿ ಪವಾಸವನೆ ಮಾಡಿ ಕಾಶಿಯಲಿ ವಸುಧೆಯ ಜನರು |ಏಸುಜನ್ಮದ ಪಾಪವನೆ ಕಳೆದು ಯಮಪುರಿಯ ||ಹೇಸಿಕೆಯ ರಾಶಿಗಳ ಒದೆದು ಹೆಚ್ಚಳವಾದ |ಮೀಸಲಳಿಯದಪದವಿಸಾರಿರಯ್ಯಅಪಶ್ರೀ ವಿಷ್ಣು ಸಿರಿಸಹಿತ ಗರುಡ ವಾಹನನಾಗಿ |ಜೀವಿಗಳ ಸ್ಥಿತಿಯ ನೋಡುತ ಬರಲು ಮರುಗಿ ಆ |ದೇವಿ ಬಿನ್ನಹ ಮಾಡಲಾಗ ಕರುಣಾಕರನು |ಭಾವಿಸಿದನೀ ಕೃತಿಯನು |ದೇವತ್ರಿಧಾಮನವ ದಿವ್ಯ ವೈಕುಂಠದೊಳು |ಪಾವನಸ್ಥಳವಿದೆಂದೊರೆದ ಧರೆಯೊಳು ಕಾಶಿ |ಶ್ರೀ ವಾರಣಾಸಿ ಪಂಚಕ್ರೋಶಮಿತಿಯಲ್ಲಿಆ ವಿಪುಳ ಮಣಿಕರಣಿಕೆ 1ಬಲಿಯ ಬಳಿ ಮೂರಡಿಯ ಭೂದಾನವನೆ ಬೇಡಿ |ನೆಲನಳೆಯ ಈರಡಿಗೆ ಸಾಲದಿರೆ ಬ್ರಹ್ಮಾಂಡ |ಬಲಪದದ ನಖದಿ ಸೀಳಲ್ಕೆ ಬಹಿರಾವರಣ |ಜಲಸುರಿಯೆ ಅಂಗುಟದಲಿ ||ಸಲೆ ತೀರ್ಥವೆಂದಜ ಕಮಂಡಲದೊಳಗೆ ಧರಿಸಿ |ತೊಳೆದನಾ ಚರಣಗಳ ಬಲು ಗಂಗೆ ಬರಲು ಜಡೆ - |ತಲೆಯೊಳಿಟ್ಟಾ ಶಿವ ಭಗೀರಥನ ಯತ್ನದಿಂ |ದಿಳಿದಿಹಳು ಕಾಶಿಯಲ್ಲಿ 2ಪರಮನಿರ್ಮಲ ಶುಭ್ರತರದ ಭಾಗೀರಥಿಯನಿರಜೆ ನೀಲಾಭೆ ಯಮುನೆಯ ಮಧ್ಯದಲಿ ಕಾರ್ತ |ಸ್ವರವರ್ಣದಿಂದಲ್ಲಿ ಗುಪ್ತಗಾಮಿನಿಯಾದ |ಸರಸತಿಯ ಸಂಗಮದಲಿ ||ಮೆರೆಯುವ ತ್ರಿವೇಣಿಯೆನಿಸುವ ತೀರದಲ್ಲಿ ವಟ - |ತರುಛಾಯೆಯಲ್ಲಿಹುದು ದೇವ ಋಷಿ - ಮೌನೀಗಣ 3
--------------
ಪುರಂದರದಾಸರು
ವಿವೇಕವ ಪಡೆಯಿರೋ ವಿಭುಗಳ ಕೃಪೆಯಿಂದವಿವೇಕವ ಪಡೆದರೆ ಈಶ್ವರಗಿಂ ಮಿಗಿಲಯ್ಯಪಮನವು ನಿಲ್ಲದು ಎಂದು ಮರುಗುವಿರೇಕಯ್ಯಮನವು ನಿಲ್ಲಲಿಕೆ ನಿಮ್ಮಧೀನವೆಮನವು ಆದಾತನಾನೇ ಮಹತ್ತು ಆದಾತನಾನೇಮನಕೆ ವಿರಹಿತುಮಾಪತಿಯು ತಾನೆಂದು1ಪಾಪವ ಮಾಡಿದೆನೆಂದು ಹಿರಿದು ಮರುಗಲದೇಕೆಪಾಪ ಪುಣ್ಯವು ಪ್ರಕೃತಿಯಲಾದವುಪಾಪವೆಲ್ಲಿಹವೆಲೆ ಪುಣ್ಯವೆಲ್ಲಿಹವೆಂದುಪರಪುರುಷ ತಾನಾಗದೆಂದೂ2ಆತ್ಮನರಿಪೆನೆಂದು ಅತಿ ಕಷ್ಟಬಡಲೇಕೆಆತ್ಮನ ವಿವರಿಸೆ ಅವನಲ್ಲವೆಆತ್ಮನೇ ತಾಕಂಡ್ಯಾಅಗಣಿತಮಹಿಮನುಆತ್ಮ ಅನಂತನಾಮನೆ ತಾನೆಂದು3ಅರಿವುಮರೆವೆ ಎಂಬ ಅಜ್ಞಾನವೇತಕೆಅರಿವುಮರೆವುಅಂಗದಧರ್ಮವುಅರಿವುಮರೆವೆಯುಂಟೆ ಆತ್ಮತಾನಾದವನಿಗೆಅರಿವುಮರೆವುಅಂಬುಧಿತೆರೆಯುಂಟು4ಇಂತು ವಿವೇಕವನ್ನು ವಿಭುಗಳಿಂದಲರಿದುಚಿಂತೆ ಹರಿದು ಚಿದಾನಂದ ಗುರುವಾಮುಂತೆ ದೃಷ್ಟಿಸಿಕೊಂಡು ಮರೆತು ತನುವನು ನಿ-ಶ್ಚಿಂತ ರಾಗಿಯೆ ನಿಜವಿದೆಯಂತೆಂದು5
--------------
ಚಿದಾನಂದ ಅವಧೂತರು
ಶ್ರೀ ರಾಜಸೂಯಾ ಅಗ್ರಪೂಜಾ ಸ್ತೋತ್ರ59ರಾಜನ ಭಾಗ್ಯವಿದು | ಧರ್ಮರಾಜನ ಭಾಗ್ಯವಿದು ಪರಾಜೀವಜಾಂಡದ ಏಕಸ್ವರಾಟ್ ಶ್ರೀಕೃಷ್ಣನರಾಜೀವಅಂಘ್ರಿಸುಯುಗ್ಮವರಾಜಸೂಯದಿ ತಾ ಪೂಜಿಸಿದ ಅ.ಪಚಿತ್ರವಿಚಿತ್ರವು ಸ್ತಂಭತೋರಣಗಳುರತ್ನ ಮಾಣಿಕ್ಯ ಮರುಗದದಿಚಂದ ಹೊಳೆವ ಸಭೆ ರಾಜರು ಸುತಪೋಧನರು ಕುಳಿತಿರೆ ಮಾಧವಗೆಮೊದಲು ಪೂಜೆಯ ಮಾಡಿ ಯಜÕವಾಚರಿಸಿದವಿಧಿಪೂರ್ವಕದಿ ಶ್ರಧ್ಧೆಯಲಿ1ಶಂತನುಸುತ ಗಾಂಗೇಯರು ನೆರೆದಿದ್ದಸಾಧು ಸನ್ಮುನಿಜನ ಮನದಂತೆಇಂದಿರೆಯರಸ ಶ್ರೀ ಕೃಷ್ಣಗೆ ಸಮರುಅಧಿಕರು ಇಲ್ಲದ ಜಗದೀಶವಿಧಿಈಶಾನದಿ ಸರ್ವನಿಯಾಮಕಕೃಷ್ಣನೇ ಪೂಜ್ಯನು ಎಂದರು ದೃಢದಿ 2ಗಂಗಾಜಲವ ಜಾಂಬೂನದ ಕಲಶದಿಮಾದ್ರೇಯನು ತಾ ತಂದೀಯೇಗಂಗಾಜನಕವರಾಂಗಿ ಸುವಕ್ಷ ಐಶಂಗವಾಸನ ಅರಿಶಂಖವ ಪಿಡಿದವನಅಂಘ್ರಿಸುಕಂಜದ್ವಯವ ಯುದಿಷ್ಠಿರಅವನೀಜನಗೈದ ಭಕ್ತಿಯಲಿ 3ಮನುಷ್ಯವತ್ ಲೀಲಾ ದ್ವಿಭುಜನು ಚಿನ್ಮಯಭಜಕಗೆ ಚತುರ್ಭುಜ ಕಾಣಿಸುವಜ್ಞಾನರೂಪದಿಹರಿವನಜಸಂಭವನಲಿಇಹ ಕ್ರಿಯಾರೂಪದಿ ವಾಯುನಲಿವಾಣೀ ಭಾರತಿಯಲಿ ಇಚ್ಚಾಶಕ್ತಿರೂಪದಿ ಪ್ರಚುರನು ಸರ್ವೇಶ 4ರಥನಾಭಿಯಲಿ ಅರಗಳ ತೆರದಿಸಮಸ್ತವು ಪ್ರತಿಷ್ಠಿತ ವಾಯುನಲಿಕ್ಷಿತಿಯಲಿ ಸ್ವಯಮೇವ ವಾಯುವೆಜನಿಸಿ ಜಗದಂತರಾತ್ಮ ಭೀಮನಾಗಿಯುಧಿಷ್ಠಿರನಲಿ ಸಮಾಭಿಷ್ಟನಾಗಿಹ ಸೌಮ್ಯರೂಪದಿ ಕೃಷ್ಣನ ಸೇವಿಸಲು 5ಸೌಮ್ಯರೂಪದಿ ಒಳಗಿದ್ದು ಶ್ರೀ ಕೃಷ್ಣಗೆಅಗ್ರ ಪೂಜಾದಿ ರಾಜಸೂಯತಾ ಮಾಡಿ ಸ್ವಯಂ ತನ್ನ ಅವತಾರಭೀಮಗೆ ಅಣ್ಣನೆಂದೆನಿಸುತಿಪ್ಪಧರ್ಮರಾಜನ ಕೈಯಿಂದ ಮಾಡಿಸಿದನುಭಕ್ತಾನುಕಂಪಿ ಶ್ರೀಹರಿಯ ಪ್ರೀತಿಸಿದ 6ಮನಶುಚಿಯಲಿ ಈ ನುಡಿಗಳ ಪಠಿಸುವಶ್ರವಣವ ಮಾಡುವ ಸುಜನರಿಗೆವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪಾಂಡವ ಪ್ರಿಯ ಶ್ರೀ ರುಕ್ಮಿಣೀಶಮನಶೋಕಾದಿ ತಾಪತ್ರಯ ನೀಗಿಸಿಯೋಗ್ಯವಾಂಛಿತವೀವ ಬಹುದಯದಿ 7
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣು ಸ್ಮರಣೆಯಿಂ ಸಾಧು ಸಂಸರ್ಗಶ್ರೀ ವಿಷ್ಣು ಸ್ಮರಣೆಯೆಂಬುದೆಅಪವರ್ಗಶ್ರೀ ವಿಷ್ಣು ಸ್ಮರಣೆಲಿ ಸದ್ಬುದ್ಧಿ ದೀರ್ಘಶ್ರೀ ವಿಷ್ಣು ಸ್ಮರಣೆಗೆಚ್ಚರ ಬುಧವರ್ಗ ಪ.ಶೀತಲವಾಯ್ತುಹಾಲಾಹಲಹರಗೆಮಾತೆ ದ್ರೌಪದಿ ಲಜ್ಜೆ ಕಾಯಿತು ಮರುಗೆಪಾತಕಿಅಜಾಮಿಳನ ಪಾಪವು ಕರಗೆಪೂತರಾಗ್ವರು ಸುಜನರು ಒಳಹೊರಗೆ 1ಸಿರಿಅರ್ಥ ಮಾಡಲಚ್ಚರವಾದ ಸ್ಮರಣೆಪರಸೋದ್ವಾಪರಿಯೆಂಬುವ ಗುಹ್ಯಸ್ಮರಣೆವಿರಿಂಚಿಗೆ ತೃಪ್ತಿಯಾಗದ ನಾಮಸ್ಮರಣೆಉರಗೇಶನ ಜಿಹ್ವೆಗೆ ನಿಲುಕದ ಸ್ಮರಣೆ 2ತ್ಯಾಗಭೋಗಯೋಗ ಛಿದ್ರ ಮುಚ್ಚುವುದುಭೂಗಗನಸ್ಥರ ಪುಣ್ಯ ಹೆಚ್ಚುವುದುಕೂಗ್ಯಾಡಿ ಕುಣಿವರಾನಂದ ಫಲವಿದುಶ್ರೀ ಗಂಗಾಜನಕನ ತಂದು ತೋರುವುದು 3ಭೂಪ್ರದಕ್ಷಿಣೆ ತೀರ್ಥಯಾತ್ರೆಗೆ ಮಿಗಿಲು ಅಸಂಪ್ರಜ್ಞಾತಸ್ಥರಿಗೆ ಹರಿಗೋಲುಸುಪ್ರಾಪ್ತ ಮುಕ್ತರುಂಬಮೃತ ಕಣಗಳುಶ್ರೀ ಪ್ರಾಣನಾಥನ ನಾಮಾವಳಿಗಳು 4ಸ್ವಾದನ್ನದೊಟ್ಟಿಲು ಹರಿನಾಮಸ್ಮರಣೆಮಧ್ವಶಾಸ್ತ್ರಜÕರ ವಚನಾಗ್ನಿಗೆ ಅರಣಿಅದ್ವೈತಮತಧ್ವಾಂತಕ್ಕುದಿತ ಸತ್ತರಣಿ ಶ್ರೀಮದ್ವಿಷ್ಣು ಪ್ರಸನ್ವೆಂಕಟನ ಸ್ಮರಣೆ 5
--------------
ಪ್ರಸನ್ನವೆಂಕಟದಾಸರು
ಸಂಸಾರ ಶರಧಿಯೊಳು ಮುಳುಗಿ ಮುಳುಗಿ ಸಂಶಯವಿಲ್ಲದೆಬಳಲುತಿಹ ಮರುಗಿ ಮರುಗಿಪಅಜ್ಞಾನ ತಿಮಿರವೆಂಬ ವ್ಯಾಪಾರದೊಳೋಡಾಡಿಸುಜ್ಞಾನ ಜ್ಯೋತಿಯ ಬಿಡುಗಡೆಯ ಮಾಡಿಭಗ್ನ ಮಾಡಿಯೆ ಶಾಂತ ಬುದ್ಧಿಗಳನೇ ನೋಡಿಪ್ರಾಜÕನಾಗದೆ ಕೆಡುವೆ ನರಕವನು ಕೂಡಿ1ಕಾಲವಿಪರೀತದಿಂದ ಕೇಡುಬರೆ ನೀನದನುಕಾಲಲೊದೆಯದೆ ಬಹಳ ಚಿಂತೆಯನು ಮಾಡಿಓಲಗಿಸಿ ಮನದೊಳಗೆ ತಾ ಕೆಟ್ಟೆಯೆನ್ನುವನುಪಾಲಿಸುವರಿಲ್ಲೆಂದು ಸೇರುವೆಯ ನರಕವನು2ಬೇಡ ಮನದೆ ಇನ್ನುಖುಲ್ಲಗುಣಗಳ ಬಿಟ್ಟುಖೋಡಿಸಂಸಾರವೆಂಬುದನು ಸುಟ್ಟುಗೂಢ ಚಿದಾನಂದಾವಧೂತನೊಳು ಅಳವಟ್ಟುಕೂಡು ಕೆಲಸಾರದಲೆ ದೃಷ್ಟಿ ಆತ್ಮನಲಿಟ್ಟು3
--------------
ಚಿದಾನಂದ ಅವಧೂತರು
ಸಾಕ್ ನಿನ್ನ ಸಂಸಾರವೂ ಓ ಮನವೇಯಾಕ್ ನಿನಗೀ ವ್ಯಾಪಾರವೂಪಬೇಕ್ ಬೇಕಾದುದ ತಂದುಹಾಕಿದುದೆಲ್ಲವ ತಿಂದು ಕಾಗೆ-ಯಂತೆ ಕೂಗುವರುಜೋಕೆಜೋಕೆಪೋಕಮನವೇಅ.ಪಯಜಮಾನ್ನೆ ಸಿಕ್ಕೀತೆಂದು ಪೌರುಷವ್ಯಾಕೋಅಜಪಟ್ಟಕ್ಕೊಡೆಯನೆಂದು ಟ್ರೆಜರಿ ಖಜಾನಿ ಕೀಲಿಕೈಸಿಕ್ಕಿತೆನುತ್ಹಿಗ್ಗಿಸುಜನಸಜ್ಜನರ ಮನ್ನಿಸದ ನಿ-ನ್ನೆಜಮಾನ್ಕೆ ಸುಡುವುದು ಮನವೇ1ಹೊಟ್ಟೆಗೂ ಸಮ ತಿನ್ನದೇ ಒಳ್ಳೆಯದೊಂದುಬಟ್ಟೆಸಹ ಹೊದೆದುಕೊಳ್ಳದೆಕಷ್ಟ ಪಟ್ಟು ಹಣ ಗಳಿಸಿಟ್ಟು ಮರುಗದೆದುಷ್ಟ ಮಕ್ಕಳು ಜುಗಾರಾಡಿ ಕಳೆದರೆಂದುಕೆಟ್ಟ ಪಾಪಿ ಮನವೇ2ಋಣ ರೂಪಸಂಸಾರಕೇ ನಿನಗೆ ಕೈಲಿ ಹಣಇಲ್ದೀ ವ್ಯಾಪಾರ್ಯಾಕೆ ಗುಣವಿಲ್ಲದ್ಹೆಂಡತಿಬಿನವಿಲ್ದ ನೆಂಟರುಬಣಗುಮಕ್ಕಳಿಗಾಗಿದಣಿವುದ್ಯಾತಕೊ ವ್ಯರ್ಥ ಹೆಣದತ್ತ ಮನವೇಬಂಧು ಬಾಂಧವರೆಲ್ಲರೂ ಸಂಪದವಿರೆಬಂದು ಸೇವಿಸಿ ಹೊಗಳ್ವರುಇಂದುನೀ ಗತಿಹೀನನೆನಿಸಲು ಜಗಳವಸಂಧಿಸಬೇಕಾಗಿ ನಿಂದಿಸುವರುಹಿಂದಿನಿಂದಲಿ ಪರಿಪರಿ ಮಂಗಬುದ್ಧಿ ಮನವೇ3ಯಾರಿಗೋಸುಗ ಬಂದಿಲ್ಲಿ ದಣಿವೆ ಸಂಗ-ಡ್ಯಾರೂ ಬರುವರ್ ಕಡೆಯಲಿಯಾರು ಯಮನ ಶಿಕ್ಷೆ ತಡೆವೆನೆಂಬರು ಪೇಳ್ವಾರಿಜನಾಭಗೋವಿಂದನಲ್ಲದೆ ಮುಂದೆಯಾರಿಗ್ಯಾರುಳಿಂಬ್ಹೇಳು ಮನವೇ4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಸ್ಥಿರವಲ್ಲೀಕಾಯಸ್ಥಿರವಲ್ಲ ಹೀಗರಿವಿದ್ದು ಹರಿಪಾದ ಮರೆವರೆ ಪ್ರಾಣಿ ಪ.ಅಟ್ಟಡಿಗೆಎರವುಉಟ್ಟುಡುಗೆಎರವುಇಟ್ಟರೆ ಸಂತತಿಸಿರಿಎರವುಕಟ್ಟೊಡೆದು ಬೆಮರಿಡಿಸಿ ಜವನವರೊಯ್ಯೆಇಟ್ಟಿರುವ ಧಾನ್ಯ ಧನವೆಲ್ಲೊ ಪ್ರಾಣಿ 1ಕೃಪಣತೆಯೊಳಗಿನ ನಿಪುಣತೆ ಬಾರದುಸ್ವಪನ ಸುಖ ಭೋಗಕೆ ಬಾರದುವಿಪಿನದಹನ ಮೃಗದಂತಾಪ್ತರು ಬರರುನೃಪನಾರಾಧನೆ ಫಲವು ಸ್ಥಿರವೆಲೊ ಪ್ರಾಣಿ 2ಹರಿಕೊಟ್ಟಾಗಲೆ ಧರ್ಮ ದೊರಕಿಸಬೇಕುಸರಕಿದ್ದು ತಿರುಕಬುದ್ಧಿಯನು ಬಿಡುಅರಿವುಳ್ಳವರ ಕೂಡಿ ಕೋಟೆಜತನಮಾಡುಮರುಗಲಿ ಬೇಡ ಮುತ್ತಿಗೆ ಬಂತು ಪ್ರಾಣಿ 3ಹವಳ ಮುತ್ತಿನಂಥ ಅವಳಿ ಮಕ್ಕಳ ನಂಬಿಕುವಲಯೇಶನ ಪ್ರಿಯಕುಲೇಶನ ಪುರದಲವಲವಿಕೆಯಲಿ ನಿರಯವಾರ್ತೆ ಜರೆವರೆ ತನ್ನವಳೆ ತನಗೆ ಓಕರಿಸುವಳೊ ಪ್ರಾಣಿ 4ಫಣಿತಲ್ಪಗೊಪ್ಪಿಸಿ ಹಣ ತೃಣ ಮಾಡದಹೆಣ ತನ್ನ ತಾನೆ ಹೊಗಳಿಕೊಂಡರೆಎನಿತುಕಾಲಕೆ ಮೆಚ್ಚ ಪ್ರಸನ್ವೆಂಕಟಪತಿಘನತಪ್ಪ ಕಾಯೆ ತನ್ನವರನು ಪ್ರಾಣಿ5
--------------
ಪ್ರಸನ್ನವೆಂಕಟದಾಸರು