ಒಟ್ಟು 515 ಕಡೆಗಳಲ್ಲಿ , 73 ದಾಸರು , 405 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸನಾಗು ಹರಿಯ ದಾಸನಾಗು ಮೋಸಹೋಗದೆ ಭವಕೆ ಬ್ಯಾಸರಾಗು ಪ ಭಾನುಮಂಡಲ ಕಂಡು ಶ್ವಾನನುಬ್ಬರಿಪಂತೆ ಭೂನಾಥನಡಿವಿಡಿದು ಬಾಳ್ವೆ ನಿನಗೆ ಹೀನಮಾನವ ಕಂಡಣಕೆ ನುಡಿದರು ಸರಿಯೆ ಜ್ಞಾನನಿಧಿ ಹರಿಭಕುತಿಯ ಲೆಕ್ಕಿಸದೆ ಮಾಡು1 ಕಾಳುವೆಗ್ಗಳವಾಗೆ ಸುಮತಿ ಸಂಗ್ರಹಿಪಂತೆ ಬಾಳುವೆಯೊಳ್ಹರಿಸೇವೆ ಬಲು ಅಗ್ಗವಂತೆ ಕೀಳು ಜನರಲ್ಲಿ ಲೌಕಿಕತೆ ಮರುಳಾಗಿ ಸಂತೆ ಕೇಳುವವರಾರು ಹರಿಭಕುತಿ ಮಾಡುವವರು2 ಮಾರಿಗಾಹುತಿಯಾಗ್ವ ಕುರಿಮೇಕೆ ತೆರನಂತೆ ಘೊರ ಜವನನು ಮರೆತು ಕೊಬ್ಬುವವರಂತೆ ಶೇರು ನರಸಿಂಹವಿಠ್ಠಲನಂಘ್ರಿಕಮಲವಾ ಆರಾರು ಬಾಧೆಯಿಲ್ಲದೆ ಗತಿಯ ಕೊಡುವಾ 3
--------------
ನರಸಿಂಹವಿಠಲರು
ದಾಸನಾದಮೇಲಿ ನಿನಗಾ ಯಾಸವ್ಯಾಕೊ ಮರುಳೆ ಪ ಮೋಸಪಾಶಗಳ ನಾಶಮಾಡುವಂಥ ದಾಸರ ಪ್ರಾಣ ಲಕುಮೀಶನ ಚರಣಅ.ಪ ಚಿಂತೆಗೈವುದ್ಯಾಕೊ ಹಲವು ಭ್ರಾಂತಿಗಳಿನ್ಯಾಕೊ ಕಂತುಜನಕ ಅಂತರಂಗ ನಿ ಪಾದ 1 ಮಿಡುಕುವುದಿನ್ಯಾಕೊ ನಿನಗೆ ಬಡತನಗೊಡವ್ಯಾಕೊ ಬಡವರ ಭಾಗ್ಯನೆಂದು ದೃಢದಿ ಪಾಡ್ವರ ಬೆಂ ಪಾದ 2 ಹಾರೈಸುವುದ್ಯಾಕೋ ನೀ ಬಲು ಘೋರಬಡುವುದ್ಯಾಕೊ ಬಾರಿಬಾರಿಗೆ ಸೇರಿ ಭಜಿಪರ ಭಾರಹೊತ್ತು ಕಾಯ್ವ ಧೀರ ಶ್ರೀರಾಮಪಾದ 3
--------------
ರಾಮದಾಸರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದೇಹದ ಒಳಗಿಹ್ಯ ದೇವರ ತಿಳಿದಿಹ ಆತನೆ ದೇಹಾತೀತನು ಮಾ 1 ಆತನೇ ಶ್ರೀಹರಿಭಕ್ತನು ಮಾ2 ಲಿಂಗವಂತನು ಮಾ3 ಷಟಸ್ಥಳ ಶೋಧಿಸಿ ಸಾಧಿಸಿ ತಿಳದಿಹ ಆತನೆ ಶೀಲವಂತನು ಮಾ 4 ಶುದ್ಧಾತ್ಮ ಶಿವತತ್ವ ಸೂತ್ರವ ತಿಳದಿಹ ಆತನೆ ಶಿವಭಕ್ತನು ಮಾ 5 ದೃಢ ನಿರ್ವಾಣೆಯು ಮಾ 6 ಆತನೆ ಮಹಾಪಂಡಿತನು ಮಾ 7 ಆತನೆ ಆಚಾರ ನಿಷ್ಠನು ಮಾ 8 ಐದು ತತ್ವದ ಗತಿಗಳ ತಿಳದಿಹ ಆತನೆ ಮಹಾ ವೈದಿಕನು ಮಾ 9 ಪಂಚ ಮುದ್ರೆಯ ಸ್ಥಾನವು ತಿಳದಿಹ ಆತನೆ ಸುಬ್ರಾಹ್ಮಣನು ಮಾ 10 ಗುರುವೆಂದರುವದು ಮಾ 11 ಆತನೆ ಸಿದ್ದ ಶರಣನು ಮಾ 12 ಆತನೆ ಮಹಾ ಸತ್ಪುರುಷನು ಮಾಟ 13 ಆತನೆ ವರಗುರು ಮೂರ್ತಿಯು ಮಾ 14 ಅವತಾರ ಮಹಿಮನು ಮಾ 15 ಆತನೆ ಸಾಧು ಸಂತನು ಮಾ 16 ಸದ್ಗುರು ಮೂರ್ತಿಯು ಮಾ 17 ಮಹಾ ಜ್ಞಾನಿಪುರುಷನು ಮಾ 18 ಮರುಳಮಂಕ ಮನುಜರು ಮಾ 19 ಆತನೆ ಶ್ರೀ ಗುರುದಾಸನು ಮಾ 20 ಮಹಿಪತಿ ಭವನಾಶವಾಯಿತು ಮಾ 21
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧುರಧೀರನಿವನೆಂದು ನೆರೆವೆರೆಯಲೈತಂದು ಮರುಳಾದೆ ನಾನಿಂದು ಮುಂದೆ ನಿಂದು ನಾರ್ವಟ್ಟೆಯುಟ್ಟಿರುವ ಅರಣ್ಯದೊಳಗಲೆವ ನಾರುಬೇರನೆ ಮೆಲುವ ಅರರೆ ಚಲುವ ಜನಪನಂದನನೆನಿಸಿ ಮುನಿಜನರ ತಾವೆರಸಿ ವನವನದಿ ಸಂಚರಿಸುತಿರುವ ಸಹಿಸಿ ಲಲನೆಯನು ಕರೆತರಲು ಪಲವು ಕಪಿಗಳನೆರೆದು ಜಲಧಿಯನು ಬಂಧಿಸಿದನಲಘುಬಲನೆ ಇನಿತು ಸಾಹಸವುಳ್ಳ ಸುಗುಣನಿಧಿಗೆ ಮನವೊಲಿದು ನಾ ಬಂದು ಮೋಸಪೋಗೆ ಮಿಣುಕಿ ಫಲವೇನಿನ್ನು ಮಿಂಚಿದುದಕೆ ಧಣಿಯೆನಗೆ ಶೇಷಾದ್ರಿವರನೆ ಸಾಕೆ
--------------
ನಂಜನಗೂಡು ತಿರುಮಲಾಂಬಾ
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಡೆಯ ಬೇಕೆಲ್ಲೋರಂಗಾ ವಳಮನಿಗೆ | ತಡವಾಯಿತು ಬಂದು ಸಭೆಯೊಳಗೆ ಪ ಭಕುತರು ತಾಳ ಮೃದಂಗ ವೀಣೆಗಳಿಂದ | ನಿಗಮಗೋಚರ ನಿಮ್ಮಚರಿತವನು | ಬಗಿ ಬಗಿಯಲಿ ಪಾಡುವದಕೆ ಮರುಳಾಗಿ | ನಗಧರನಿಂತೀ ಸಕಲ ಮರೆದು 1 ಹೊನ್ನು ಮಯದ ತೂಗು ತೊಟ್ಟಿಲ ವಂಬರ | ಬಣ್ಣಬಣ್ಣದ ಪುಷ್ಪವಹಾಸಿ | ರನ್ನ ದೀಪದ ಎಡಬಲಲಿಂದಿರೆದೇವಿ | ನಿನ್ನ ಮಾರ್ಗವ ನೋಡುತಿಹಳಯ್ಯಾ | 2 ಬಂದ ಭಾಗವತರಿಗೆಲ್ಲ ಬೇಡಿದ್ದು ಕೊಟ್ಟು | ಮಂದ ಹಾಸದ ಉಚಿತದಿ ಕಳುಹಿ | ಸಾರಥಿ | ಛಂದದಿ ಬಿನ್ನಹ ಅವಧರಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದ ವೃಜ ಮಧುರಿ ದ್ವಾರಕೀಯೊಳಾಡಿದ ಕೂಸೆಎಂದು ಬಾಹುವಿ ಇಲ್ಲಿಗೆ ಪ ಮಧುರೆಯಲಿ ನೀಪುಟ್ಟಿ ಪಿತೃಗಳ ರಕ್ಷಿಸಿದಿಹಿತದಿಂದ ಯಾದವರ ತಲೆಯ ಕಾಯ್ದಿಮೃತವಾದ ಮಗುವನು ಗುರುಸತಿಯ ಮಾತಿಗೆ ಕೊಟ್ಟೆಪ್ರತಿಗಾಣೆನೊ ನಿನ್ನ ಬಲಕೆ ಛಲಕೆ 1 ವೈರಿ ಬಾಧೆಯ ಬಿಡಿಸಿಭೂರಿ ಸುಖವಿತ್ತು ಪೊರೆದಿ ಭರದಿ 2 ಸರಯು ತೀರದಿ ಅಯೋಧ್ಯಾ ಪುರದೊಳಗೆ ಕಾಂಚನದಪರಮ ಪೀಠದಿ ಕುಳಿತು ಸೀತೆಯೊಡನೆಹರಳು ಕೆತ್ತಿದ ನಾನಾ ಭೂಷಣಂಗಳನಿಟ್ಟುಮರುಳು ಮಾಡುವಿ ನಮ್ಮನೂ ನೀನು 3 ನಂದ ಗೋಕುಲದಿ ರವಿ ನಂದನೀಯ ತೀರದಲ್ಲಿಚಂದದಿಂದಲಿ ನಿಂತು ಕೊಳಲನೂದಿಮಂದಗಮನಿಯರ ಮನಸು ಮರುಳು ಮಾಡುತ ಸುಖವು ದ್ವಂದ್ವಲೋಕದಿ ಕೊಟ್ಟಿ ಭೆಟ್ಟಿ 4 ಸಿರಿ ಸಂಪತ್ತು ಬಲ್ಲೆಇಂದಿರೇಶನೆ ಎನ್ನ ಚಿತ್ತ ಮಂದಿರದೊಳು ನಿನ್ನಸುಂದರಾನನ ತೋರೋ ಬಾರೋ5
--------------
ಇಂದಿರೇಶರು
ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಂಬಿಗೆಯೆ ಕಾರಣವು ತಿಳಿಯೊ ಇದ ನುಂಬದೇ ಹಸಿವಲ್ಲೊ ಚೀ ಮಂಕುಮರುಳೇ ಪ ಜಂಭವÀನರಡಿದ ವಿಶ್ವಂಭರನು ಮೂಢಾ 1 ಅಲ್ಲವೆಂದೆನಿಸದೆ ನಿಲ್ಲು ಗುರುಪಾದ ಬಲ್ಲ ಬೆಡಗಿನ ಬೆಳಕು ಅಲ್ಲಿ ಕಾಣುವೆ 2 ಅರಮನೆಯೊಳಿರುತಿಹ ವುರುಗನನು ತೋರಿದಾ ಪರಮಗುರು ಶ್ರೀ ತುಳಶಿರಾಮದಾಸನನು ಯೀತ 3
--------------
ಚನ್ನಪಟ್ಟಣದ ಅಹೋಬಲದಾಸರು
ನಂಬು ನಂಬು ನಂಬು ಮನವೆ ಅಂಬುಜಾಕ್ಷನ ಪ್ರಭುವ ಪಾದ ಇಂಬು ನಿನಗೆ ದೊರಕುವುದು ತುಂಬಿ ಮಂಗಳ ಪ ದುಷ್ಟ ಅನ್ನ ದುಷ್ಟ ಸಂಗ ಭ್ರಷ್ಟ ಭಾವದಿಂದ ಮನವು ಕೆಟ್ಟು ಬೆದರಿ ಸವಿಯುಗೊಳ್ಳದು ಶಿಷ್ಟರನುಭವ 1 ಸತ್ಯಹರಿಯು ಜಗದ್ಗುರುವು ಸತ್ಯ ಮಧ್ವಶಾಸ್ತ್ರ ಫಲವು ಸತ್ಯ ಮಹಿಮ ಗುರುಕರುಣ ಸತ್ಯ ನಿತ್ಯದಿ 2 ಭಾರತ ಭಾಗವತವ ಕೇಳು ಭರತನಣ್ಣನ ಚರಿತೆ ಕೇಳು ಖರೆಯು ಹರಿಯ ಭಕ್ತರೀಗೆ ನಿರುತ ಮಂಗಳ 3 ನಿರುತ ವಿದಯ ಲೋಭಿಗಳ ದುರುಳ ದುರ್ಬಲ ಭಾವ ತಿಳಿದು ಹರಿಯ ಮೆರೆಯೆ ಸಕಲ ಭಯವು ಮರುಳು ಮಾಳ್ಪವು 4 ಕರಿಯ ಧ್ರುವನ ಅಸುರ ಬಾಲನ ನರನ ಸತಿಯು ಭೀಷ್ಮ ಕುಚೇಲ ವರದ ದೇವನ ದಾಸರ ಭಜಿಸು ನಿರುತ ದೃಢದಲಿ 5 ಹಿಂದೆ ಎಷ್ಟೊ ಕಾಲದಿಂದ ಕುಂದು ನೋಡದೆ ನಿನ್ನ ಬಿಡದೆ ಮುಂದು ತಂದ ಬಗೆಯ ತಿಳಿಯೊ ಸಂದೇಹ ಪೋಪದು 6 ಕಾಲಿಗೆ ಬಿದ್ದ ದೀನರನ್ನು ಕರ್ಮ ಮೀರಿ ಪೊರೆವ ಬಾಳ ಕರುಣಿ ಮಹಾ ವಿಜಯ ರಾಮಚಂದ್ರನು7 ಹಿಂದೆ ಪೇಳ್ದ ವಾಕ್ಯವೆಲ್ಲಿ ಇಂದು ಬಿಡದೆ ಫಲಿಸುವೋವು ಮಂದನಾಗದೆ ಪ್ರಭುವ ಪಾದ ದ್ವಂದ್ವ ಬಿಡದಿರು 8 ನಿತ್ಯ ಹನುಮ ಭೀಮ-ಮಧ್ವ ಭೃತ್ಯರ ಶಿರೋರತನುನಿವನು ಸತ್ಯ ಮಹಿಮ ಜಯೇಶವಿಠ- ಲಾಪ್ತ ಸತ್ಯವು 9
--------------
ಜಯೇಶವಿಠಲ
ನಮಿಪೇ ನಮಿಪೇ ನಮಿಪೇ ಶ್ರೀ ಗುರುದೇವಾ ಜ್ಞಾನಬೋಧಾ ನೀಡಿ ಮನದಾ ದೀನತನ ಬಿಡಿಸಿ ನೀನೆ ಆ ಪರಮಾತ್ಮನೆನುವಾ ಸ್ವಾನುಭವ ಹಿಡಿಸಿ ಹೀನವಿಷಯಾಸಕ್ತಿಯಾ ನೀಗಿಸಿ ಎನಗಾಗಿ ಜಗದಸುಖದ ಮರುಳು ಬಿಡಿಸಿ ಸೊಗಸ ತೋರಿಸಿದಿ ಅಘವನಳಿದು ಸೊಗಸಿನೊಳಗೆ ಖಗೆಯ ನಿಲಸಿದಿ ನೀ ಬಗೆಯ ರೋಗವೆಲ್ಲವ ನೀಗಿಸಿ ಎನಗಾಗಿ
--------------
ಶಂಕರಭಟ್ಟ ಅಗ್ನಿಹೋತ್ರಿ
ನರದೇಹ ನಿತ್ಯವಲ್ಲ ನಾಳೆ ಮೃತ್ಯು ಬಿಡುವದಲ್ಲ ಪ ಮರುಳುಮನವೆ ಕೇಳು ಸೊಲ್ಲ ಹರಿಯ ಮರೆವುದುಚಿತವಲ್ಲ ಅ.ಪ ಹಿಂದಿನವರು ಪಟ್ಟಪಾಡು ಇಂದು ನೀನು ತಿಳಿದು ನೋಡು ಸಂದೇಹಗಳೀಡಾಡು ಒಂದೇ ಮನದಿ ಹರಿಯ ಕೊಂಡಾಡು 1 ಹರಿ ನಮಗನಾದಿ ಮಿತ್ರ ವರಶೋಭನ ಚಾರಿತ್ರ ಪೊರೆವದೇನು ನಮ್ಮ ಚಿತ್ರ ಕರುಣಿಸುವನು ಕಮಲನೇತ್ರ 2 ಹೊನ್ನು ಹೆಣ್ಣು ಮಣ್ಣು ಮೂರು ನಿನ್ನದೆಂದು ಹಿಗ್ಗದಿರು ಬೆನ್ನು ಹೊಡೆವರು ಯಮನವರು 3 ಏನು ಸುಖವು ಕಾಣಲೇಶ ಜೋಕೆ ಬಿಡುಬಿಡು ದುರಾಶಾ ಬೇಕು ಸುಜನರ ಸಹವಾಸ 4 ಗುರುರಾಮವಿಠಲ ಮುಕುಂದ 5
--------------
ಗುರುರಾಮವಿಠಲ