ಒಟ್ಟು 950 ಕಡೆಗಳಲ್ಲಿ , 91 ದಾಸರು , 743 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಏನಿದು ಬಯಲ ಪಾಶ ನೋಡಿದರಿಲ್ಲಿ ಏನು ಹುರುಡುಗಾಣೆನೊ ನಾನಾಜನ್ಮದಿ ಬಂದು ಹೊಂದಲಾರೆನು ನಿನ್ನ ಧ್ಯಾನವ ಕೊಡೊ ಅಭಿಮಾನದೊಡೆಯ ರಂಗ ಪ. ನೀರಬೊಬ್ಬುಳಿಯಂದದ ದೇಹವ ನೆಚ್ಚಿ ದೂರ ಹೊತ್ತೆನು ಹರಿಯೆ ಯಾರು ಎನಗೆ ಸರಿಯಿಲ್ಲೆಂಬಹಂ- ಕಾರ ಪ್ರಪಂಚದ ಬಂಧನದೊಳು ಸಿಲುಕಿ ನೊಂದೆನೊ ಸದ್ಗತಿ ತೋರೊ 1 ಬಡವರಾಧಾರಿ ಕೇಳೊ ಸಂಸಾರದ ಮಡುವಿನೊಳಗೆ ಧುಮುಕಿ ಕಡೆಹಾಯಿಸೊ ಕೈಪಿಡಿದು ಕೃಪೆಯೊಳೆನ್ನ ದಡವ ಸೆÉೀರಿಸೊ ಜಗದೊಡೆಯ ಶ್ರಿರಂಗಯ್ಯ 2 ಸುತ್ತೆಲ್ಲ ಬಂಧು ಬಳಗ ನವಮಾಸದಿ ಹೊತ್ತು ಪಡೆದ ಜನನಿ ಪುತ್ರ ಸಹೋದರರ ಘಳಿಗ್ಯಗಲಲಾರದೆ ಮತ್ತೆ ಯಮನವರೊಯ್ವಾಗ ಯಾರು ಸಂಗಡ ಇಲ್ಲ 3 ಆಸೆಯೆಂಬುದು ಬಿಡದು ಈ ಭುವನದೊಳ್ ಲೇಸುಗಾಣೆನು ಹರಿಯೆ ಭಾಷೆಯ ಕೊಡು ಮುಂದೆ ಜನುಮಬಾರದ ಹಾಗೆ ಈಶಸನ್ನುತ ಹೆಳವನಕಟ್ಟೆರಂಗಯ್ಯ 4
--------------
ಹೆಳವನಕಟ್ಟೆ ಗಿರಿಯಮ್ಮ
ಏನಿದು ಸಂಸಾರ ನೋಡಿದರಿದುವೆ ಮಹಾಘೋರ ಪ ನೀರೊಳು ಕೈಬಿಟ್ಟಂತೆ ಅ.ಪ ಒಂದು ಲಾಭ ಬರಲು ನಷ್ಟ ವೆರ- ಡೊಂದಾಗುವುದಿದರೊಳ್ ಹಿಂದಿನ ಬವಣಿಯ ಮರೆತೆಲ್ಲರು ತಾವು ಮುಂದೆ ಸುಖವಪಡುವೆವೆಂದರಿತಿರುವರು 1 ತನ್ನಿಂತಾನಾಯಿತೆಂಬರು ಕುನ್ನಿಗಳರಿಯದೆಲೆ ಬನ್ನಬಡುವರೆಲ್ಲ ಬ್ರಹ್ಮರಾದರೆ ಇನ್ಯಾತಕೆ ಶೃತಿ ಸ್ಮøತಿ ಪುರಾಣಗಳು 2 ಕರುಣದಿ ಪ್ರೇರಿಸುವವನ ತಿಳಿದರೆ ಬರುವುದು ಲೆಕ್ಕಾಚಾರಕೆ ಸರ್ವವು 3
--------------
ಗುರುರಾಮವಿಠಲ
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಬರುವುದೊ ಸಂಗಡೇನು ಬರುವುದೊ ಪ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜಅ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ1 ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ2 ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು ಮಾಡಿ ಹೊತ್ತುಗಳೆವರುಸತ್ತರಿಲ್ಲ ಅತ್ತರಿಲ್ಲ ಹೊತ್ತುಕೊಂಡು ಹೋಹರಿಲ್ಲಿಮತ್ತೆ ದೇಹ ಮಣ್ಣುಗೂಡಿದಂತೆ ಕೆಡಲು ಬೇಡ ಮನುಜ3 ಬಟ್ಟೆ ನಿನಗೆ ಹೊಂದಲಿಲ್ಲಕಟ್ಟ ಕಡೆಗೆ ದೃಷ್ಟಿ ನೋಟ ಬಟ್ಟ ಬಯಲು ಆಗುತಿಹುದು 4 ಕಾಲ ಕಳೆದೆ - ಮುಂ-ದರಿದು ನೋಡು ನರರ ತನುವು ದೊರಕಲರಿಯದುನೆರೆ ಮಹಾಮೂರ್ತಿ ಒಡೆಯ ಬಾಡದಾದಿಕೇಶವನಲಿಟ್ಟು ಭಕುತಿಚರಣ ಭಜಿಸಿ ಚಂಚಲಳಿಸಿ ವರವ ಪಡೆದು ಹೊಂದು ಮುಕುತಿ 5
--------------
ಕನಕದಾಸ
ಏನು ಬಲ್ಲಿದನೋ ಹನುಮಂತ ನೀನು ಏನು ಬಲ್ಲಿದನೋ ಪ ಏನು ಬಲ್ಲಿದನಯ್ಯ ನೀನು ಜ್ಞಾನಮೂರುತಿ ಜಾನಕೀಶನ ಧ್ಯಾನ ಸುಖಸಾಮ್ರಾಜ್ಯದಲ್ಲಿ ಲೀನನಾಗಿ ಸುಖಿವೆ ಬಲವಂತ ಅ.ಪ ಶರಧಿ ಜಿಗಿದವನೋ ಭರದಿ ದುರುಳನ ಪುರವ ಸೇರಿದನೋ ನಿರುತ ದೊರೆಮಾತೆ ದರುಶನಾದನವನೋ ಪರಮವೀರನೋ ಧರೆಯ ಮಾತೆ ಕೃಪಾಪಾತ್ರನಾಗಿ ಪರಮಪಾವನ ವರವ ಪಡೆದು ಮರಳಿ ದುರುಳನ ವನವ ಸೇರಿ ಧುರವ ಜೈಸಿದಿ ಧೀರಮಾರುತಿ 1 ತಿರುಗಿ ಅಂಗದನ ಬಲವನ್ನು ಸೇರಿ ಸಾರ ಕಥನವನ್ನು ಅರುಹಿ ಮುಂದೆ ಪರಮಪಾವನನ ಚರಣಕಂಡಿನ್ನು ಇರಿಸಿ ಹರಿಯಾಜ್ಞಂಗೀಕರಿಸಿ ತ್ವರದಿ ದಕ್ಷಿಣಶರಧಿ ಹೂಳಿಸಿ ಭರದಿ ಲಂಕೆಗೆ ಮುತ್ತಿಗಿತ್ತಯ್ಯ 2 ಬುದ್ಧದೇಹದ ಕುಂಭಕರ್ಣನ ಕ್ಷುದ್ರ ಇಂದ್ರಜಿತುನ ಮತ್ತವನ ತಂದೆ ಬುದ್ಧಿಹೀನನ್ನ ಹತ್ತು ತಲೆಯವನ ಯುದ್ಧದಿಂದ ಬದ್ಧರಕ್ಕಸ ರೊದ್ದು ಬೇಗನೆ ಛಿದ್ರ ಮಾಡಿ ಜ ಗದ್ರಕ್ಷ ಶ್ರೀರಾಮ ಪಾದಪದ್ಮಕ್ಕೆ ಮುದ್ದು ಮುಖಿಯನು ತಂದುಕೊಟ್ಟೆಯ್ಯ 3
--------------
ರಾಮದಾಸರು
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನು ಸುಖವಯ್ಯ ಪ ಇನ್ನೇನು ಪರಗತಿಯಹುದು ಮುಂದೆಅ.ಪ ನಾನಾವಿಧ ದುಃಖಗಳಲಿ ಜ್ಞಾನಶೂನ್ಯನಾಗುತ ವಿಷ- ಯಾನುಭವದಿ ವ್ಯಥೆ ಪಡುವವಗೆ 1 ಮಾಳಿಗೆ ಮೇಲೋಡಾಟವು ನಾಳೆಬಹುದು ಕಷ್ಟವು ಎಂ- ಕೇಳದೆ ಗರ್ವಿಸಿ ಮೆರೆವವಗೆ 2 ಭದ್ರವು ತನಗೆಂದು ತಿಳಿದು ಕ್ಷುದ್ರ ಮಾರ್ಗದಲಿ ತಿರುಗಿದ ದ- ರಿದ್ರದಿ ಹಂಬಲಿಸುವವಗೆ 3 ಮಡದಿ ಮಕ್ಕಳೆಂತೆಂಬುವ ತೊಡರೊಳು ಬಾಯ್ಬಿಡುತಿರುವವಗೆ 4 ಹರಿಕೊಟ್ಟ ಮಹಾಭಾಗ್ಯದಿ ಪರಮತೃಪ್ತನಾಗಿರದಲೆ ಗುರುರಾಮವಿಠಲನ ಮರೆದು ಇರುಳು ಹಗಲು ಚಪಲ ಪಡುವಗೆ 5
--------------
ಗುರುರಾಮವಿಠಲ
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಏಳು ಏಳೆನುತ ಭಾನು ಬರುತಿಹ |ಹೇಳುವರ್ಯಾರಿಲ್ಲ ನಿಮಗೆ ಜ್ಞಾನವ ಪ ಇರುಳೆಲ್ಲ ನೀವಿನ್ನು ವಿಷಯಕೆ ಮರುಳಾಗಿ |ಹರಟಿಯೊಳಗೆ ಸೊರಗುತಿಹರೀ ||ತರಳಾಕ್ಷಿಯರ ಅಂಗಸಂಗಕೆ ಬೆಂಡಾಗಿ |ಬರದ ಆಯುಷ್ಯ ಬರಿದೇ ಕಳೆವಿರೀ 1 ಮಾಡಲಿಲ್ಲವು ಧ್ಯಾನ ಯೋಗ ಜಪ ತಪ |ನೀಡಲಿಲ್ಲವು ದಾನ ಧರ್ಮವ ||ನೋಡಲಿಲ್ಲವು ಸಾಧುಸಂತರ ನಡತೆಯ |ಕೇಡ ಬಂದಿತು ಮುಂದೆ ನೋಡಲು 2 ತಂದೆ ಭವತಾರಕನೆ ಹಿಂದಾದುದಾಗಲಿ |ಮುಂದಾರ ನೀವಿನ್ನು ಒಂದು ನಿಮಿಷವು |ಗೊಂದಲ ಬಿಟ್ಟು ಅರಿತು ಕೊಂಡು | ಹೊಂದಿರಿ ಪೂರ್ಣ ಆನಂದವನೆಂದು 3
--------------
ಭಾವತರಕರು
ಏಳು ಬೆಳಗಾಯಿತು ಯದುಕುಲೋತ್ತಮ | ಪರಮೇಷ್ಠಿ ಹರ ಸುರಪಾಲಕರು ಪ ಆಳುಸಹಿತದಲಿ ರಂಗಾಅ.ಪ. ವೇದವನು ತಮ ಕದ್ದು ಒಯ್ದನು | ಆಧಾರಾಗದೆ ಅದ್ರಿ ಮುಣಗಿತು || ಮೇದಿನಿಯ ಬಳಕೊಂಡು ಹೋದನು | ಅದಿತಿಯ ಸುತನು ಭಾದಿಗಾಗದಲೆ ಬಂದು ಸಕಲರು || ಆದರಣೆಯಿಂದ ಕೈಯ ಮುಗಿದು ನೀ | ದಯಾನಿಧಿ ಎಂದು ಹೊರಗೆ ಕಾದು ಐದಾರೆ ರಂಗ 1 ಅಟ್ಟುಳಿ ಹೆಚ್ಚಿತು ವೆ ಗ್ಗಳಿಸಿದರು ಛತ್ರಿಯರು ಈರೈದು ತಲೆಯವನು || ಬಲವಂತನಾದನು ಆರಿಗೊಶವಿಲ್ಲ | ಇಳೆಗೆ ಭಾರವು ತೂಕವಾಯಿತು ಕಳ-| ವಳಗೊಳಲಾರೆವೆನುತಲಿ ಅಳುಕಿ ಭಯದಲಿ | ನಿಮ್ಮ ಬಾಗಿಲ ಬಳಿಯ ಸಾರಿದರೊ ರಂಗಾ2 ಮೂರು ಪುರದವರೀಗ ನಮ್ಮನ್ನ ಮೀರಿದರು | ಕಲಿಪುರುಷ ಸುಜನರ ಮೇರೆದಪ್ಪಿಸಿ ನಡೆಸಿ || ಬಲು ವಿಕಾರ ಮಾಡಿದನು ಈ ರೀತಿ ಶ್ರಮವೆಂದು | ಸಿರಿ ವಿಜಯ- || ವಿಠ್ಠಲ ಕಾರಣಾರ್ಧವ ಕಳೆದು | ಮುಂದೆ ಉದ್ಧಾರ ಮಾಡಿದನು 3
--------------
ವಿಜಯದಾಸ
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ