ಒಟ್ಟು 44128 ಕಡೆಗಳಲ್ಲಿ , 139 ದಾಸರು , 10983 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಹರಿಯೆ | ಕರುಣ ವಾರಿಧಿಯೆ | ಧೊರೆಯೇ |ವರ ಚರಣ ಸೇವೆಯನು ಕೊಡು ಹರಿಯೇ ಪ ಗಾಂಗೇಯ | ಶರದಿ ಸೆಣೆಸಲು ಅಂದುಸರಸದಲಿ ನೀ ಅವನ | ಪೊರೆಯಲಿಲ್ಲವೆ ಎಂದು 1 ದುರುಳ ದುಶ್ಯಾಸನ | ಸೀರೆ ಸಭೆಯಲಿ ಸೆಳೆಯೇತರಳೆ ಪಾಂಚಾಲೆ | ಓಲೆ ಕಳುಹಿದಳೆ ಹರಿಯೆತರುಳೆ ಕೈಗಾಯ ಬೇಕೆಂದು | ನಿನ್ನ ಧೊರೆಯೇಎರಳಾಕ್ಷಿಗಕ್ಷಯ್ಯ | ವಸನಿತ್ತೆ ಹರಿಯೇ 2 ಅಂದು ಬಲತಾಯಿ ಬಾಲಕನ | ತೊಡೆಯಿಂದ ನೂಕೇ |ಬಂದು ಕಾನನಕೆ ತಪಗೈದ | ತರಳನನು ಕಾಯ್ದೇ |ಇಂದು ನಾ ಮಾಡಿದಪರಾಧ | ವೇನಯ್ಯ ಹರಿಯೇ |ಕಂದನಪರಾಧ ಎಣಿಸುವಳೆ | ತಾಯಿ ಧೊರೆಯೇ3 ಗೌತಮರ ಮಡದಿಯನು | ಕಾಯಲಿಲ್ಲವೆ ಹರಿಯೆಔತಣವ ಕೊಟ್ಟು ಬರ | ಹೇಳಿದಳೆ ಧೊರೆಯೇ ||ವೀತಶೋಕನೆ ಎನ್ನ | ಮೊರೆ ಕೇಳಿಸದೆ ಹರಿಯೇಔತಪ್ರೋತ ನೀನೆಲ್ಲವನು | ತಿಳಿದಿರುವೆ ಧೊರೆಯೇ 4 ಬಲಿಯ ಯಾಚಿಸುತ | ನೀ ಅವನ ವಂಚಿಸಿದಿ ಹರಿಯೆತಲೆ ಬಾಗಲಲಿ ನಿಂದು | ನೀ ಅವನ ಪೊರೆದೆ ಧೊರೆಯೆಸಲೆ ಬೀದಿ ಬೀದಿಯಲಿ | ನಾ ಕೀರ್ತಿಸುವೆ ಹರಿಯೇಬಲು ದಯಾಪರ ಗುರು | ಗೋವಿಂದ ವಿಠಲೆಂದು ಧೊರೆಯೆ 5
--------------
ಗುರುಗೋವಿಂದವಿಠಲರು
ಹರಿಯೆ ನಿನಗೆ ಮೊರೆಯನಿಡುವೇ ಪ. ದುರಿತ ಪರಿಹಾರ ನಿನ್ನ | ಸ್ಮರಣೆ ಎನಗೀಯೋ ಅ.ಪ. ಜ್ಞಾನ ಜ್ಞೇಯ ಜ್ಞಾತೃವೆಂಬಭಿಧಾನದಿಂದ ಕರೆಸುವಿಯೋನಾನು ನನ್ನದು ಎಂಬ ದುರಭಿ | ಮಾನವನ್ನೆ ಪರಿಹರಿಸೋ 1 ಮೂರ್ತಿ 2 ಆಳು ನಿನ್ನವನೆಂದು ತಿಳಿಯೋ | ಪಾಲಿಸೊಲಿಮೆ ನಿನ್ನ ಪದದಿಪಾಲ ಸಾಗರ ಶಯ್ಯ ಕೃ | ಪಾಲು ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಹಲವು ಸಂಭ್ರಮಗಳಿಂ ಮನೆ ಕಟ್ಟಿದೀ ದೇವ ಪ ನೆಲೆಗೆಡಿಸಿ ಅದನಿಂದು ಕೆಡಹುತಿರುವೀ ಅ.ಪ ಪ್ರಾರಬ್ಧಕರ್ಮವೆಂತೆಂಬ ಹಳ್ಳವ ತೋಡಿ ಆರು ಜನ ಕೆಲಸಗಾರರನಲ್ಲಿ ಕೂಡಿ ಮೀರಿ ಮಾಯೆಯ ಭಾರಿ ಕಲ್ಕೆಸರುಗಳ ಹೂಡಿ ಭಾರಿನೆಲಗಟ್ಟು ರಚಿಸಿದರೊಂದುಗೂಡಿ 1 ಎಲುವಿನ್ಹಂದರ ಹರಹಿ ಬಲಿದ ಮಾಂಸದ ಗೋಡೆಗಳ ಮೇಲೆ ಚೆÀಲುವ ಚರ್ಮ ಹೊದ್ದಿಸಿ ಜಲರಕ್ತ ಕಾಲ್ವೆಗಳ ಹರಿಸಿ | ಸ್ವಚ್ಛತೆಯಿರಿಸಿ ಬಲುಉಸಿರುಬಲದಿಂದಲದ ಚಲನಗೊಳಿಸಿ 2 ಐದು ಇಂದ್ರಿಯಗಳೇ ದ್ವಾರ ಕಿಟಕಿಗಳಾಗೆ ಐದುಬಗೆ ವಿಷಯಗಳು ಆಹಾರವಾಗೆ ವೈದು ಯಮಪುರಿಗೆ ತಲ್ಪಿಸÀಲುಣಿಸನಿದನುಂಡು ಐದಿದುದು ನರಕಕೂಪಕೆ ಜೀವದಂಡು 3 ಕ್ಷೇತ್ರಜ್ಞ ನೀನು ನಿನ್ನಯ ಕಣ್ಣಮುಂದಿಂತು ಗಾತ್ರದಲಿ ವಾಸಿಪ ಜೀವನು ನಿನ್ನ ಮರೆತು ಕ್ಷೇತ್ರಘಾತಕಕಾರ್ಯವೆಸಗುತಿರಲಂದಂದೆ ನೇತ್ರ ಹಸ್ತಗಳ ಛೆÉೀದಿಸದೆ ಉಳುಹಿದೆಯೆಂತು 4 ಸರ್ವಸ್ವತಂತ್ರನೀ ಜೀವ ಪರತಂತ್ರನವ ಗರ್ವ ಅಜ್ಞಾನ ಅಂಧತೆಗಳಲಿ ಸಿಲುಕಿ ಸರ್ವ ದುಷ್ಕರ್ಮಗಳ ನಡೆಸಿ ಕೆಡಸಿಹನಿದನು ಸರ್ವದಾ ಕ್ಷಮಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
ಹೂವ ಕೊಡೆ ದೇವಿ ಹೂವ ಕೊಡೆಯಾವಾಗಲೂ ನಿಮ್ಮ ಸಿರಿಮುಡಿಯೊಳಗಿರ್ಪ ಪ ವರಮಹಾಲಕ್ಷ್ಮಿ ನಿಮ್ಮ ಸಿರಿಮುಡಿಯನೆ ಕಟ್ಟಿಪರಿ ಪರಿ ಧೂಪ ಧೂಮಗಳನಿಕ್ಕಿಪರಿಮಳಿಸುವ ಸಂಪಿಗೆಯ ಪೂಸರವ ಸಿಂ-ಗರಿಸಿರಲಾಮಾಳಿಕೆಯೊಳು ಸಂಪಿಗೆ ಹೂವ 1 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸರಸಿಜ ಮೊದಲಾದ ಕುಸುಮದಿಂದಪರಿಮಳಿಸುವ ನಿಮ್ಮ ಸಿರಿಮುಡಿಯೊಳಗಿರ್ಪಅರಳಿದ ಮಲ್ಲಿಗೆ ಹೂವ ಕಂಡೆ ಹೂವ 2 ವ್ಯೋಮಗಂಗೆಯೊಳಿಂದ ಹೇಮಕಾಮರಸವಕಾಮಿನಿಯರು ಕೊಯ್‍ತಂದದನುಶ್ರೀ ಮಹಾದೇವಿ ನಿಮ್ಮ ತುರುಬಿಗೆ ಮುಡಿಸಿರ-ಲಾ ಮಹಾಕುಸುಮ ಮಾಲಿಕೆಯೊಳು ತಾವರೆ ಹೂವ 3 ಮುತ್ತಿನ ಲಹರಿಯ ರತ್ನದ ರಾಗಟೆಯಸುತ್ತ ಮುತ್ತಲೂ ರಾರಾಜಿಸುವಪುತ್ಥಳಿಯ ಚಿನ್ನದಂತೆ ಘಮಘಮಿಸುವಉತ್ತಮವಾದ ಸುವರ್ಣದ ಕೇದಗೆ ಹೂವ 4 ಜಾತಿ ರತ್ನದ ನಡುವೆ ಜ್ಯೋತಿಯ ತೆರನಂತೆನೂತನವೆನಿಸಿ ಪ್ರಜ್ವಲಿಸುತಿಹಶಾತಕುಂಭದ ಚೌರಿಯ ಮೇಲೆ ಮುಡಿಸಿದಜಾತಿಮಲ್ಲಿಗೆ ಸಂಪಿಗೆ ಸೇವಂತಿಗೆ ಹೂವ 5 ಇಂದೀವರದಳನಯನೆ ಶುಭಪ್ರದೆಇಂದು ನಿಭಾನನೆ ಹೂವ ಕೊಡೆಮಂದಗಮನೆ ನಿಮ್ಮ ತುರುಬಿನೊಳೊಪ್ಪುವಮಂದಾರದ ಮೋಹನ ಮಾಲಿಕೆಯೆಂಬ ಹೂವ 6 ಚಂದ್ರಗಾವಿಯ ಸೀರೆ ಚೆಲುವ ಮುತ್ತಿನಸರದಿಂದಲೆಸೆವ ದೇವಿಹೂವ ಕೊಡೆಮುಂದಲೆ ಮುತ್ತಿನ ಸರದ ಮೇಲೊಪ್ಪುವಬಂಧುರಪೂಗಪುನ್ನಾಗ ಪಾರಿಜಾತದ ಹೂವ 7 ದೇವಿ ನಿಮ್ಮನು ಪೂಜೆಗೈದು ಮೆಚ್ಚಿಸಬಲ್ಲನಾವನೀ ಧರೆಯೊಳುಹೂವ ಕೊಡೆಪಾವನಾತ್ಮಕಿಯ ಪರಾಕ ಮಾಡದೆ ವರ-ವೀವ ಸಮಯವಿದು ಹೂವ ಕೊಡೆ ಹೂವ 8 ಮುತ್ತೈದೆತನವನು ನಿತ್ಯ ಸೌಭಾಗ್ಯವಉತ್ತಮ ಧನಕನಕಾಂಬರವಪುತ್ರ ಸಂತಾನವ ಕೊಡುವೆನೆನುತ ಕರ-ವೆತ್ತಿ ಅಭಯವಿತ್ತು ಹೂವ ಕೊಡೆ ಹೂವ 9 ಎಂದೆಂದೂ ಈ ಮನೆಗೆ ಕುಂದದ ಭಾಗ್ಯವಚಂದವಾಗಿಹ ಛತ್ರಚಾಮರವಚಂದ್ರ ಸೂರ್ಯರ ಪೋಲ್ವ ನಂದನರನುದಯ-ದಿಂದಲಿ ಕೊಟ್ಟು ರಕ್ಷಿಪನೆಂದು ಸೂಡಿದ ಹೂವ10 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮ ಪಟ್ಟದ ರಾಣಿ ಪಾರ್ವತಿ ನಿಮ್ಮಯಸಿರಿಮುಡಿಯೊಳಗಿರ್ಪ ಹೂವ ಕೊಡೆ ಹೂವ 11
--------------
ಕೆಳದಿ ವೆಂಕಣ್ಣ ಕವಿ
ಹೇಮವತಿಯ ತೀರವಾಸನೇ | ನಾರಸಿಂಹಪ್ರೇಮದಿಂದ ಕಾಯೋ ಬೇಗನೇ ಪ ನಾಮಮಾತ್ರ ಸಲಹುತಿರುವ | ಸ್ವಾಮಿ ನಿಮ್ಮ ಕಂಡು ಭಜಿಸೆಕಾಮಿತಾರ್ಥವಿತ್ತು ಪೊರೆವೆ | ಕಾಮ ಜನಕ ಕಮಲನಾಭ ಅ.ಪ. ಭವದೊಳಾನು ಬಳಲಿ ಬಂದೆನೋ | ಭವ್ಯರೂಪಿಹವಣೆ ತಿಳಿಸಿ ಭವವ ಕಳೆಯಲೋಪವನ ಮತದಿ ಉದಿಸಿಹೇನು | ಭುವನ ಧರಿಸಿ ಮೆರೆಯುವಾನರವಿಯ ಕಂಡು ಹಾರಿದವನ | ಪವನರಾಯನ ಕಾಣೆ ನಾನು 1 ತನುವು ಮನವು ಧನದ ಆಶೆಯೂ | ಪೋಗಲಿಲ್ಲಘನ ಸುಜ್ಞಾನ ಭಕ್ತ್ಯಿ ಭಾವವೂಕನಸಿಲಾದರೊಮ್ಮೆ ಎನ್ನ | ಮನಸ್ಸು ನಿಮ್ಮ ಚರಣ ದ್ವಂದ್ವವನಜದಲ್ಲಿ ನೆಲೆಸಲಿಲ್ಲ | ಅನಘ ನೀನೇ ದಯವ ಬೀರೊ 2 ವನಧಿ ಹರಿಯೆ | ಗುರು ಗೋವಿಂದ ವಿಠ್ಠಲಾನೆ 3
--------------
ಗುರುಗೋವಿಂದವಿಠಲರು
ಹೇಸಿಕಿಲ್ಲವೊ | ಎನಗೆ ಹೇಸಿಕಿಲ್ಲವೋ ಪ ಮೀಸಲೆನಿಸಿ ಮನವ ನಿನ್ನ | ಆಶೆಯಲ್ಲಿ ಇರಿಸದಾಲೆ ಅ.ಪ. ವೈರಿ ಕಾಡುತಿಹನು 1 ವಿಷಯದಾಶೆ ಪೋಗಲಿಲ್ಲ | ಹಸಿವು ತೃಷೆಯು ಮೀರಲಿಲ್ಲಕುಸಿಯುತಿದೆ ದೇಹವೆಲ್ಲ | ಎಸೆವ ವ್ರತವ ಚರಿಸಲಿಲ್ಲ 2 ನಾನು ನನ್ನದೆಂಬ ಮಮತೆ | ಹೀನವೆಂದು ತಿಳಿದು ತಿಳಿದುಗೇಣು ಎಂಟು ದೇಹಕಾಗಿ | ಹೀನ ವಿಷಯದಾಶೆ ಇಹುದು 3 ಸಂದು ಪೋದ ಜನ್ಮ ತಿಳಿಯೆ | ಮುಂದೆ ಬಾಹುದೆಂತೊ ಕಾಣೊಇಂದಿರೇಶ ನೀನೆ ಗತಿಯೊ | ಮಂದಹಾಸ ಬೀರಿ ಪೊರೆಯೊ 4 ನಿನ್ನ ಕಾಣಧಾಂಗೆ ದೇಹ | ಇನ್ನೂ ಪೋಗದಂತೆ ಮಾಡಿ |ಘನ್ನ ಮಹಿಮ ರೂಪ ತೋರೊ | ಚೆನ್ನ ಗುರು ಗೋವಿಂದ ವಿಠಲ5
--------------
ಗುರುಗೋವಿಂದವಿಠಲರು
ಹೊರೆಯಲು ಸರ್ವಸ್ವವನು ನುಂಗಿತು ಪ ಚಿನ್ನ ಚಿಗುರು ಕಂಚು ತಾಮ್ರವನು ನುಂಗಿತು ಮಣಿ ಮುರುಗಳ ನುಂಗಿತು ಬಣ್ಣ ಬಂಗಾರವ ನುಂಗಿತು ಹೊಟ್ಟೆಗೆ ಸಣ್ಣ ಹೆಣ್ಮಕ್ಕಳ ನೆರೆ ನುಂಗಿತು 1 ಮಡದಿ ಮಕ್ಕಳ ಮೇಲಣಾಸೆಯ ನುಂಗಿತು ಜಡದಿ ಜನರ ಸತ್ವಗಳ ನುಂಗಿತು ಬಡವ ಬಲ್ಲಿದರನು ಬಿಡದಪ್ಪಿ ನುಂಗಿತು ಪೊಡವಿ ಯೊಳಗಿರುವಾಸೆಯನು ನುಂಗಿತು 2 ಎಡಬಲದವ ರೊಡವೆಯ ಕದ್ದು ನುಂಗಿತು ಕಡಕಟ್ಟ ತಂದು ಕೊಡದೆ ನುಂಗಿತು ಕೊಡುವ ಬಿಡುವ ಧನಿಯರ ಕೈಯ ನುಂಗಿತು ಕಡಲೋಭಿ ವಿತ್ತವನೆಲ್ಲ ನುಂಗಿತು 3 ದುಡ್ಡಿಗೆ ಪಾವಕ್ಕಿಯ ತಂದು ರಾಗಿಯ ದೊಡ್ಡಂಬಲಿ ಕಾಸಿದರೆ ನುಂಗಿತು ಗುಡ್ಡದಂತವರೆಲ್ಲ ಮಣಿಗೆ ಮಂಡಿಸಿಕೊಂಡು ದೊಡ್ಡಪ್ಪಗಳಿಗೆಲ್ಲ ಸುರಿದುಂಡಿತು4 ಮುನ್ನ ಮಾಡಿದ ಹೊಲ ಮನೆಯನ್ನು ನುಂಗಿತು ಜನ್ನೆ ಆಕಳ ಮಹಿಷಿಯ ನುಂಗಿತು ಅನ್ನವೆ ನುಂಗಿತು ಜನರನ್ನು ಲಕ್ಷ್ಮಿಯನಾಳ್ದ ವನದಾಸರಿಂಗೊಲಿಯಿತು 5
--------------
ಕವಿ ಪರಮದೇವದಾಸರು
ಹ್ಯಾಗೆ ಸದ್ಗತಿ ಆಗುವುದೆನಗೆ ಯೋಗಿಗಳ ಒಡೆಯ ಹರಿಯೆ ಈಗಾಗಲೆ ತಿಳಿಸಿ ಸಾಗುವಂತೆ ಸಾಧನ ಬ್ಯಾಗ ಮಾಡಿಕೊ ನಾಗತಲ್ಪನೆ ಪ ಮೇಲಧಿಕಾರಿಯು ಕೊಂಡಾಡಲು ಕುಲ ಉದ್ಧಾರವೆಂದು ಹಿಗ್ಗುವೆ ಕಲುಷ ಕಂಡಾಗÀಲು ಅಳುತ ಧರೆಗೆ ಇಳಿವೆನೊ ನಾನು 1 ಶಿಕ್ಷ ರಕ್ಷ ಸಧ್ಯಕ್ಷ ಲಕ್ಷ್ಮೀಪತಿಯೆಂದರಿಯದೆ ಕುಕ್ಷಿ ಭರಣಕೆ ಯೋಚಿಸುವೆ ಪಕ್ಷಿವಾಹನನಲ್ಲಿ ಲಕ್ಷ್ಯವಿಲ್ಲದೆ ಬಕ ಪಕ್ಷಿಯಂತೆ ಧೇನಿಸುವೆ ನಾ 2 ನಷ್ಟ ದೇಹ ಪುಷ್ಟಿಗಾಗಿ ದುಷ್ಟರಿಗೆ ಎನ್ನ ಕಷ್ಟ ಪೇಳಲು ದೃಷ್ಟಿಸಿ ನೋಡಿದರೆ ಬೆಟ್ಟ ಮೇಲಿದ್ದಂತೆ ಕಂ ಗೆಟ್ಟು ಮೊರೆಯಿಸುವೆ 3 ಒಂದು ಲಾಭವಿಲ್ಲದೆ ಮಂದಿ ನೆರಹಿ ಸಂದಿಗೊಂದ್ಹರಿದ್ಯಾಡಿ ಸಂದು ಹೋಯಿತÀು ಹೊತ್ತಯೆಂದು ಆಸ್ಥಾನಕೆ ಮಿಂದು ಬ್ಯಾಗನ್ನ ತಿಂದೋಡುವೆನೊ 4 ಮಾನನೀರ ಚೆಲ್ವಿಕೆಗೆ ಮನಸೋತು ನೆನೆನೆನೆದು ಬೆಂಡಾಗುವೆ ಹೀನರಾ ಕೂಡಿಕೊಂಡು ದೀನರಾ ಬಾಯಿಬಡಿದು ಧನ ಸಾಧಿಸಿದ್ದು ಕೊನೆಗೆ ಸಾಯುವ ನರಗೆ 5 ಉದಯದಲೆದ್ದು ನದಿಗೆ ಪೋಗಿ ನಾ ಮುದದಿಂದ ಮಿಂದು ಉದಯಾರ್ಕಗಘ್ಯ ಒದಗೀಸಿ ಕೊಡದ ಮದಡನಾಗಿದ್ದವಗೆ 6 ವರ ಸುದರ್ಶನ ಗ್ರಂಥಗಳ ಗುರುಗಳಲ್ಲಿ ನಿರುತ ಪಠಿಸಲಿಲ್ಲ ಭಾಗವತ ಪುರಾಣಗಳು ಪರಮ ಭಕ್ತೀಲಿ ಕೇಳಲಿಲ್ಲ 7 ಭಾವ ಶುದ್ಧಿಯಿಂದ ದೇವತಾರ್ಚನೆ ಆವ ಕಾಲಕು ಮಾಡಲಿಲ್ಲ ಪವನಸಖ ಮಖದೊಳಾಹುತಿನಿತ್ತು ಕವಿಗಳಿಗನ್ನ ಕೊಟ್ಟವನಲ್ಲ 8 ಧ್ಯಾನ ಮಾಡುವುದನ್ನು ಮೌನಿಗಳ ಕೇಳಿ ಮನನ ಮಾಡಲಿಲ್ಲ ಪಾದ ಕನಸಿನಲಾದರೂ ಒಮ್ಮೆ ನೋಡಲಿಲ್ಲ 9
--------------
ವಿಜಯ ರಾಮಚಂದ್ರವಿಠಲ
(1) ನಿಂದಾಸ್ತುತಿಗಳು ಏನುಂಟು ನಿನ್ನೊಳಗೆ ನಾ ಬೇಡಲು ಏನು ಕೊಡುವೆ ಎನಗೆ ಪ ಶ್ರೀನಿವಾಸನೇ ಬಲು ದೀನನೊಳವಲಕ್ಕಿ ಮಾನವ ನೋಡದೆಅ.ಪ ತಿರುಕನಾಗಿ ತಂದೆ ಧರೆಯ ಕಶ್ಯಪನೆಂಬ ತಿರುಕ ಹಾರುವನಿಗೆ ಗುರಿಮಾಡಿದೆ ಸಿರಿಯನು ರಜಕನ ಪರಿವಾರದಿ ಬಿಟ್ಟು ಗರಳ ಹಾಸಿನೊಳೊರಗಿದೆ ಕೃಷ್ಣ 1 ಧನಕನಕಂಗಳು ನಿನಗಿರೆ ಸತ್ರಾಜಿ ತನ ಮಣಿಯನು ನೀಗಣಿಸುವೆಯಾ ಅನುವಾದ ಮನೆಯಿರೆ ಮುನಿಮನವೇತಕೆ ಮನೆವಾರ್ತೆಯುಳ್ಳರೆ ವನವಾಸಬೇಕೆ 2 ಕಾಮಧೇನುವು ಕಲ್ಪನಾಮಕ ತರುವು ಚಿಂ ತಾಮಣಿಗಳನು ಸುತ್ರಾಮಗಿತ್ತು ಗೋಮಯರಸಗಳ ಕಾಮಿಸಿ ಕದ್ದು ನೀ ದಾಮೋದರನಾದೆ ತಾಮರಸಾಕ್ಷ 3 ಖ್ಯಾತಿ ನೋಡದೆ ರಣ ಭೀತಿಯೊಳೋಡಿದೆ ಜಾತಿ ನೋಡದೆ ಜಾಂಬವತಿಗೂಡಿದೆ ನೀತಿಯ ನೋಡದೆ ಕೋತಿಯೊಳಾಡಿದೆ ಮಾತು ನೋಡದೆ ಬರಿ ಮಾಯೆಯ ಪಿಡಿದೆ 4 ಗತಿಹೀನರಿಗೆ ವರ ಗತಿಯ ತೋರಿಪನಾಮ ಸ್ಮøತಿಯೊಂದಿತ್ತರೆ ಸಾಕೆನಗೆ ಅತಿಶಯವಿದು ಎನ್ನ ಮತಿಯೊಳು ನಿನ್ನಯ ರತಿಯನ್ನು ಪಾಲಿಸು ವರದವಿಠಲರಾಮ 5
--------------
ವೆಂಕಟವರದಾರ್ಯರು
(2) ಉಡುಪಿ ಕೃಷ್ಣ ಕಂಡೇ ಕಡೆಗೋಲ ಪಿಡಿದನ ಉಡುರಾಜ ವದನನ ಮಂಡೆಯೊಳ್ ಮಯೂರ ಪಿಂಛವನಿಟ್ಟನ ಪ ಪಡುಗಡಲೆಡೆ ಉಡುಪಿಯೊಳಗಿಹ ಕಡಲಣುಗಿಯ ಒಡೆಯಕೃಷ್ಣನ ಕಂಡೇ ಅ.ಪ ಶ್ರಾವಣ ಕೃಷ್ಣ ಪ್ರಪಂಚಗುರುವ ಸುಮಶರಪಿತ ಸುಮನೋಹರ ಶ್ಯಾಮಸುಂದರನ ಸ್ವಪ್ನದಿ 1 ಸತ್ಯವಂತರ್ಗಾಂ ಸತ್ಯಂ ಮುಕ್ತಿನಾಥಂ ಉತ್ತಮತರಚಿತ್ತರಾದ ಭಕ್ತರ ಕಾಯವೆನೆಂದನ 2 ಸುಳ್ಳು ಸುಳ್ಳೆಂದು ಪೇಳುವ ಪೊಳ್ಳನ ಪಾಪಿಯ ತಳ್ಳುವೆ ಸುಖವಿಲ್ಲದಿರುವ ಖುಲ್ಲರ ಜತೆಯೊಳಗೆಂದನ3 ಹರಿಶ್ಚಂದ್ರ ನಳರೊಲು ಕೀರ್ತಿಯನು ಪರ್ಬಿಸಿ ಶರಣರ ಸುಖಸರಣಿಯಲ್ಲಿ ಕರುಣದಿಂದ ಕಾವೆನೆಂದನಾ4 ಕನಸುಮನಸಿನಲ್ಲಿಯೂ ಅನವರತ ತನ್ನಯ ಘನಪದಯುಗವನಜ ತೋರಿ ಅನುವನೀವ ಜಾಜೀಶನ 5
--------------
ಶಾಮಶರ್ಮರು
(ಅ) ಏನೆಂದು ಪೇಳಲೋ ರಾಮ ನಿನ್ನಾ ದೀನವತ್ಸಲತೆಯ ಆಶ್ರಿತ ಪ್ರೇಮ ಪ ಕಲ್ಲಾಗಿ ಪಥದಲ್ಲಿ ಬಿದ್ದ | ಮುನಿ ವಲ್ಲಭೆಯನು ಸಲಹಿದ ಸುಪ್ರಸಿದ್ಧ ಕಲ್ಲೆದೆಯವ ನಾನು ಸಿದ್ಧ | ಎನ್ನ ಅನಿರುದ್ಧ 1 ಪಶುಜಾತಿ ಸುಗ್ರೀವ ಮುಖರ | ನೀ ಹಸನಾಗಿ ಪೊರೆದದ್ದು ಕೇಳಿದೆ ವಿವರ ವಶವಲ್ಲದಿಂದ್ರಿಯನಿಕರವುಳ್ಳ ಪಶುಪ್ರಾಯ ನಾನಯ್ಯ ರಕ್ಷಿಸೋ ಚತುರ 2 ಚೆಂಡಾಲನಾದ ಗುಹನ | ಕೈ ಗೊಂಡು ಕಾಪಾಡಿದೆ ಕುರುಣದಿಂದವನ ಖಂಡಿತ ಪೇಳುವೆ ಘನ್ನ | ಕರ್ಮ ಚೆಂಡಾಲ ನಾನು ಶ್ರೀ ಕಾಂತ ಪ್ರಸನ್ನ 3
--------------
ಲಕ್ಷ್ಮೀನಾರಯಣರಾಯರು
(ಅ) ಗುರುರಾಯರ ನಂಬಿದೇ - ಶ್ರೀ ರಾಘವೇಂದ್ರ ಪ ವರಮಂತ್ರಾಲಯದಲ್ಲಿ ಇರುತ ಸೇವೆಯಗೊಂಬ ಅ.ಪ ಗ್ರಾಸ ಬೇಡಿದ ಮುನಿಯಾಶೆಯ ತಣಿಸಿದ ದಾಶರಥಿಯ ಭಕ್ತ ದೇಶಿಕವರ್ಯರ 1 ಸಂತಾನಸೌಭಾಗ್ಯ ಚಿಂತಿತಾರ್ಥವನೀವ ಪಾದ ಸ್ವಾಂತದಿ ಭಜಿಸುವ 2 ಅಜ್ಞಾನ ತಿಮಿರಕ್ಕೆ ಸುಜ್ಞಾನಪರಿಪೂರ್ಣ ಪ್ರಜ್ಞರ ಗುರುವ್ಯಾಸರಾಜ್ಞಾಧಾರಕರಾದ 3
--------------
ಲಕ್ಷ್ಮೀನಾರಯಣರಾಯರು
(ಅ) ಗೋಪಾಲಕುಲ ಬಾಲ ಗೋವಿಂದ ಗುಣಶೀಲ ನೀ ಪಾಲಿಸೆನ್ನನು ದೇವ ಪ ಶರನಿಧಿ ಸಂಚಾರ ವರ ಮಂದರೋದ್ಧರ ಪರಮಾತ್ಮ ಭೂಧರ ದೇವ 1 ನರಭಕ್ತ ಭಯಹಾರ ಸುರಕಾರ್ಯಕೃತ ಧೀರ ಧರಣೇಸುರೇಶ್ವರ ದೇವ 2 ಸಕಲಾರ್ತಿಹರ ಶÀೂರ ಕುರುತೇಷ್ಟದಾತಾರ ವಿಕಟಾರ್ತ ಶ್ರೀಕರ ದೇವ 3 ಕಲಿದೋಷ ಪರಿಹಾರ ಸಲೆ ಧರ್ಮವಿಸ್ತಾರ ಜಲಧೀಶ ಮಂದಿರ ದೇವ 4 ಶ್ರೀಕಾಂತ ಶ್ರೀಮಂತ ಶ್ರೀಕೃಷ್ಣ ಜಯವಂತ ನೀ ಪಾಲಿಸೆನ್ನನು ದೇವ 5
--------------
ಲಕ್ಷ್ಮೀನಾರಯಣರಾಯರು
(ಅ) ತಂದೆ ಮುದ್ದುಮೋಹನ ದಾಸರೆನಿಸಿದ ತಂದೆ ಶ್ರೀ ಗುರುವರ್ಯರೆ ಪ. ತಂದಿರಿ ಜ್ಞಾನಾಂಬುಧಿ ಮಧ್ಯದೊಳಗೀಗ ತಂದಿಹ ಎನ್ನ ದುಷ್ಕರ್ಮವ ತರಿಯುತ ಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಮಂದಮತಿಯಿಂದ ಜಗದೊಳಗೆ ಕುಂದುಗಳೆಣಿಸದೆ ಬಂದು ದರ್ಶನವಿತ್ತು ಕಂದನಂದದಿ ದಯದಿಂದ ಪಾಲಿಸಿದಿರಿ 1 ಯೋಗಿಗಳೆನಿಸಿದ ಭೋಗಿವರರೆ ಶಿರ ಬಾಗಿ ನಮಿಸುವೆ ಈಗ ನಾನು ನಾಗಶಯನನ ತೋರಿ ಬೇಗ ಪಾಲಿಸಿರಿ ಪೋಗುತಿದೆ ದಿನ ಜಾಗು ಮಾಡದೆ ಮುನ್ನ 2 ನರಸಿಂಹನನು ಹೃತ್ಸರಸಿಜದಲಿ ಕಾಂಬ ಗುರುವರ ನಿಮ್ಮಂಘ್ರಿಗೆರಗುವೆನು ಪರಿಪರಿ ತಾಪವ ಹರಿಸಿ ಎನ್ನ ಮನ ಹರಿಗುರು ಚರಣದೊಳಿರುವಂತೆ ಕೃಪೆಗೈದೆ 3 ಪರಮ ಗುರುಗಳಿಗೆ ಪ್ರಿಯರಾಗಿ ಇಳೆಯೊಳು ಚರಿಸಿ ಸುಜನರ ಪಾವನಗೈದು ಪರಮ ಗುಪ್ತದಿಂದ ಹರಿಯ ಧ್ಯಾನಿಸುತ್ತ ಧರೆಯೊಳಗಿರುವ ಪಾಮರರ ಮೋಹಿಸುವಂಥ 4 ಕಷ್ಟವ ಬಿಡಿಸಿರಿ ತುಷ್ಟರಾಗಿ ನೀವೆ ಇಷ್ಟು ಪರಿಯಿಂದ ಬೇಡಿಕೊಂಬೆ ಇಷ್ಟದೈವರು ನೀವೆ ಶ್ರೇಷ್ಠ ಶ್ರೀ ಗೋಪಾಲ ಕೃಷ್ಣವಿಠ್ಠಲನ ಉತ್ಕøಷ್ಟದಿ ತೋರಿರಿ5
--------------
ಅಂಬಾಬಾಯಿ