ಒಟ್ಟು 923 ಕಡೆಗಳಲ್ಲಿ , 87 ದಾಸರು , 595 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಜನನೀ ತ್ರಿಜಗತಿ ಜನಾರ್ದನೀ ಜನನೀ ಜಯತು ಶ್ರೀಪದ್ಮಾವತೀ ಪ. ಗುಣಗಣಾರ್ಣವೆ ವಿಶ್ವಪೂಜಿತ ಜನನಮರಣವಿದೂರೆ ಪದ್ಮಾಸನೆ ಘನಗಗನಭೂಪಾಲನಂದಿನಿ ಅ.ಪ. ಶ್ರೀನಿವಾಸನ ರಾಣಿ ಸರ್ವಾರ್ಥ ನಿ- ದಾನಾಂಬುಜಪಾಣಿ ಭಾನುಕೋಟಿಸಮಾನ ತೇಜೆ ಸ- ದಾನುರಾಗಪ್ರದಾನೆ ವಿಬುಧ- ಶ್ರೇಣಿನುತೆ ಮಹದಾದಿಮಾಯಾ- ಮಾನಿ ಮಾಧವಮನವಿಲಾಸಿನಿ 1 ಸುಂದರಿ ಸುಮನೋಹರಿ ಸುಜ್ಞಾನಾ- ನಂದೆ ಸಿಂಧುಕುವರಿ ಚಂದ್ರವದನೆ ಚರಾಚರಾತ್ಮಕಿ ವಂದನೀಯೆ ಪರೇಶಪರಮಾ- ನಂದರೂಪೆ ಸನತ್ಸುಜಾತ ಸ- ನಂದನಾದಿಮುನೀಂದ್ರವಂದಿತೆ 2 ಅಂಬೆ ಶ್ರೀಹರಿಪ್ರೀತೆ ಶಂಭುಸಂಭಾವಿತೆ ತ್ರಿಲೋಕಾ- ರಂಭಸೂತ್ರೆ ಪವಿತ್ರೆ ವಿಶ್ವಕು- ಟುಂಬೆ ಕಮಲಯನೇತ್ರೆ ಸಾಧ್ವೀಕ- ದಂಬಮಸ್ತಕಮಣಿಪ್ರಭಾಶಿನಿ 3 ಪದ್ಮ ಸರೋವಾಸಿನೀ ಪಾವನಹೃ ತ್ಪದ್ಮನಿತ್ಯಭಾಸಿನಿ ಪದ್ಮನವಕ್ರೀಡಾವಿಲಾಸಿನಿ ಮ- ಹನ್ಮನೋಧ್ಯಾನಾಧಿರೂಢೆ ಸು- ಪದ್ಮಹಸ್ತೆ ನಮಸ್ತೆ ಪಾವನೆ ಪದ್ಮನಾಭನರಮಣಿ ಕರುಣಿ 4 ವರಲಕ್ಷ್ಮೀವಾರಾಯಣಿ ಕಲ್ಯಾಣಿ ಶ್ರೀ- ಕರೆ ಕಾಳಾಹಿವೇಣಿ ಧರೆಯೊಳುತ್ತಮ ಕಾರ್ಕಳದಿ ಸು- ಸ್ಥಿರನಿವಸವ ಗೈದೆ ಕರುಣಾ- ಶರಧಿ ಭಕ್ತರ ಪ್ರಾರ್ಥನೆಯ ಸ್ವೀ- ಕರಿಸಿ ಪೊರೆವಿಷ್ಟಾರ್ಥದಾಯಿನಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಕಾರ್ತಿಕೇಯ | ದಾಮೋದರ ಪ್ರಿಯ ಪಾರ್ವತೀ ತನಯ ಪ ಮಯ ಸದಾನಂದಅ ನೀಲಕಂಠನ ಸುಧ್ವಜ ಚಂಪಕನಾಸ ಬಾಲಾರ್ಕ ಕೋಟಿ ತೇಜಾ ಕಾಲಾಂತಕ ದೇವ ಶಿವನ ಬಾಲ ಬಾಹುಲೇಯ ಜನಲೋಲ ಸಜ್ಜನ ಪಾಲ ರತ್ನಮಾಲ ಕುಮಾರ 1 ಖುಲ್ಲ ವಿಶ್ವ | ವಲ್ಲಭ ಗುಹಾ 2 ಪಾವಂಜೆ ಕ್ಷೇತ್ರವಾಸಾ | ರಕ್ಷಕ ದಾಸ ಕೋವಿದರೊಡೆಯ ಈಶಾ | ದೇವಸೇನೆಯಾ ರಮಣ ದೇವಾಧಿದೇವನುತ ಪಾವನ ಮೂರುತಿ | ಪಾವಕೋದ್ಭೂತಾ 3
--------------
ಬೆಳ್ಳೆ ದಾಸಪ್ಪಯ್ಯ
ಜಯ ಜಯ ಕರುಣಾಕರ ಗುರುದೇವ ವಾಸುದೇವ ಧ್ರುವ ಮುನಿಜನ ಪಾಲಕ ದೀನ ದಯಾಳ ಅನಾಥ ಬಂಧು ಶರಣಾಗತ ವತ್ಸಲ ಸನಕಾದಿಗಳೊಂದಿತ ಸಿರಿಸುಖಲೋಲ ಅನುದಿನ ಅಣುರೇಣುಕ ನೀನೆ ಸುಕಾಲ 1 ಪತಿತ ಪಾವನ ಪರಮ ಉದಾರ ಭಕ್ತವತ್ಸಲ ಮಾಮನೋಹರ ಅತಿಶಯಾನಂದ ಸುಜ್ಞಾನಸಾಗರ ಚತುರ್ದಶ ಭುವನಕೆ ನೀ ಸಹಕಾರ 2 ದೇಶಿಕರಿಗೆ ದೇವ ನೀನೇ ನಿಧಾನ ವಿಶ್ವಪಾಲಕ ಸ್ವಾಮಿ ನೀ ಸುಗುಣ ಭಾಸ್ಕರ ಕೋಟಿ ತೇಜ ನೀನೇ ಪೂರ್ಣ ಲೇಸಾಗ್ಹೊರಿಯೊ ದಾಸ ಮಹಿಪತಿ ಪ್ರಾಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಸ್ವರಸತಿ ಜಯವರ ಪೂರಣಮತಿ ತ್ರಯಲೋಕ್ಯದಲಿ ಖ್ಯಾತಿ ಜಯ ಸುಕೀರ್ತಿ ಧ್ರುವ ವಿದ್ಯಾವರದಾಯಿನಿ ಸಿದ್ಧಿಗೆ ಶಿಖಾಮಣಿ ಬುದ್ಧಿ ಪ್ರಕಾಶಿನಿ ಸದ್ಭೂಷಿಣಿ 1 ಕರಕಮಲದಲಿ ವೀಣೆ ಸುರಸ ಅಮೃತವಾಣಿ ವರವಿದ್ಯದಲಿ ದಾನಿ ಸುಪ್ರವೀಣೆ 2 ಪ್ರಸನ್ನವದನಿ ವಿಶ್ವದಲಿ ನೀ ಪೂರ್ಣೆ ಹಂಸವಾಹಿನಿ ಪೂರ್ಣಿ ಸ್ವಸಿದ್ಧಿಣಿ 3 ಸದಾ ಸದ್ಗುರುಸ್ತುತಿ ಒದುಗುವ್ಹಾಂಗ ಸ್ಫೂರ್ತಿ ಇದೇ ಮಹಿಪತಿ ಕುರ್ತಿ ಬೋಧಿಸುವ ಮತಿ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣ ಜಯ ಪಾವನ ದಿವ್ಯಚರಣ ಪ. ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯ ಪೂರ್ವಾಮರಪುರದಹನ ಪೂರ್ಣಗುಣಗಣ 1 ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನ ತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2 ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣ ಲಕುಮಿನಾರಾಯಣಶರಣ ಬಕವಿದಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯಾನಂದ ಕಂದ ಜಯ ನಿರ್ಗುಣ ನಿದ್ರ್ವಂದ್ವ ಧ್ರುವ ಒಳಗೆ ಹೊರಗೆ ನೀನೆ ಪೂರ್ಣ ಬೆಳಗಿ ಬೆಳಗಾಗಿಹುದ ಥಳಥಳಿಸುವ ಗುಣ ಹೊಳವು ಸುಳವು ಪಾವನ 1 ದೇವಾಧಿದೇವ ದೇವ ಭುವನತ್ರಯಕೆ ಜೀವ ಭಾವಿಕರಿಗೆ ಕಾವ ಭವನಾಶಗೈಸುವ 2 ಅಜ ಸುರವರ ಮುನೀಂದ್ರ ನಿಜಘನಸುಖಮುದ್ರ ರಾಜ ರಾಜರಾಜೇಂದ್ರ 3 ಮುನಿಜನರ ಪ್ರಾಣಪದಕ ಅನುಭವದ ನಿಜಸುಖ ಖೂನ ವಿಶ್ವತೋಮುಖ ಅಣುರೇಣು ವ್ಯಾಪಕ 4 ಮೂರು ಗುಣಕೆ ರಹಿತ ಗುರುಮೂರ್ತಿ ಸಾಕ್ಷಾತ ತರಳ ಮಹಿಪತಿದಾತ ಹೊರಿಯೊ ನೀ ಸದೋದಿತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ನಿರಂಜನ ಭಂಜನ ಗುರು ತಾರಕ ಋಷಿಮುನಿ ಜೀವನ ಧ್ರುವ ಅನಂತ ಗುಣ ಪರಿಪೂರ್ಣ ಅನಂದಮಯ ಘನ ಸ್ವಾನಂದ ಸದೋದಿತ ಸದ್ಗುರು ನಿಧಾನ ಅನಾದಿ ಮಹಿಮಾನಂದ ಸುಙÁ್ಞನಾಂಜನ ಅನೇಕ ಸಕಲಾಗುಮಪೂಜಿತ ಸೇವಿತ ತ್ರಿಭುವನ 1 ಕಲ್ಪತರು ಚಿಂತಾಯಕ ಅನಾಥ ರಕ್ಷಣ ತ್ರಿಜಗ ಜೀವನ ಅತೀತ ಸುಙÁ್ಞನ ಭಕ್ತ ಕೃಪಾನಿಧಿ ವಿಶ್ವವಂದನ 2 ಸಜ್ಜನ ಸಂಜೀವನ ಸದ್ಗುರು ಚಿದ್ಫನ ಸಗುಣ ನಿರ್ಗುಣ ಸಹಕಾರ ಸುರಮುನಿ ರಂಜನ ಮಹಿಪತಿ ತಾರಕ ಗುರು ಪತಿತಪಾವನ ಸದ್ಬ್ರಹ್ಮಾನಂದ ಸದೋದಿತ ಸದ್ಗತಿ ಸಾಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ವರ ಗುರುಮೂರ್ತಿ ಜಯ ಜಯವೆಂದು ಬೆಳಗುವೆ ಬೆಳಗುವೆ ಮನದಾರ್ತಿ ಧ್ರುವ ಜ್ಯೋತಿಗೆ ಸ್ವಜ್ಯೋತಿ ಘನಪರಂಜ್ಯೋತಿ ನೇತಿ ನೇತಿಯೆಂಬುದು ನೋಡಲು ಘನಶ್ರುತಿ ಶ್ರುತಿಸ್ಮøತಿಗೆ ತಿಳಿಯ ನೀ ಅಪ್ರತಿ ಅತಿಸೂಕ್ಷ್ಮ ನಿನ್ನರಿವುದು ಸದ್ಗುರು ದಯಕೀರ್ತಿ 1 ರಾಜಿಸುತಿಹ ನಿಜ ವಿಶ್ವದ ನೀ ಬೀಜ ರಾಜತೇಜೋನಿಧಿ ಸಹಜೆ ಸಹಜ ಅಜ ಸುರವಂದ್ಯ ಸುಜನರಾತ್ಮದ ನೀಗ್ರೂಜ ರಾಜಮಹಾರಾಜ ಸದ್ಗುರು ಸುಭೋಜ 2 ಮಗುಟ ಸ್ವಾನುಭವಕೆ ನೀಟ ಜ್ಞಾನರಹಿತ ಕೂಟ ಘನ ದಯನೋಟ ಅನುವಾಗಿದೋರಿತು ನೀಟಕೆ ನಿಜನೀಟ ದೀನಮಹಿಪತಿಸ್ವಾಮಿ ನೀನೆ ಘನಪ್ರಗಟ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯದೇವ ಜಯದೇವ ಜಯ ಚಿದಾನಂದಜಯ ಜಯತು ಜಯ ಜಯತು ಜಯ ನಿತ್ಯಾನಂದ ಪ ದೃಶ್ಯಾ ದೃಶ್ಯವಿದೂರ ದೂರ ಪರತತ್ವಾಮಿಕ್ಕು ಮೀರಿಹ ತೇಜ ತೇಜ ಮಹತ್ವಾಪೊಕ್ಕು ನೋಡಿಯೆ ಕಂಡು ನಿನ್ನ ನಿಜತ್ವನಕ್ಕು ನಿಜದಲಿ ಮಾಳ್ವೆ ಪಂಚೋಪಚಾರತ್ವ 1 ತಾನೆ ತಾನಾದ ಸುವಸ್ತು ನಿರ್ಲೇಪಧ್ಯಾನ ಮೌನ ಸಮಾಧಿಗೆ ತೋರ್ವರೂಪಏನ ಬಣ್ಣಿಸುವೆನು ಈ ಜಗವ್ಯಾಪಾನಾನರ್ಪಿಸುವೆ ನಿನಗೆ ಗಂಧಾನುಲೇಪ 2 ದುರಿತ ಕುಠಾರ ನೀನೆನಿಪೆಭರ್ಗಾ ಶ್ರೀವತ್ಸ ವೀಥಿಗಳ ರಕ್ಷಿಸುವೆಸರ್ಗಾದಿ ಮಹಾಪುಷ್ಪ ನಿನಗೆ ನಾನರ್ಪಿಸುವೆ3 ವಾಸನಕ್ಷಯದ ನಿರ್ವಾಸನ ಸ್ಪೂರ್ತಿಭಾಸಮಾನದಿ ತೋರುತಿದೆ ನಿನ್ನ ವಾರ್ತೆಈಶ ತಾಪಸರುಗಳು ನಿನ್ನ ಮೂರ್ತಿದೇಶಿ ಕೋತ್ತಮ ನಿನಗರ್ಪಿಸುವೆ ಧೂಪಾರತಿ4 ವಿಶ್ವ ವಿಶ್ವ ಸೂತ್ರ ವಿಖ್ಯಾತವಿಶ್ವ ಪೂರಿತ ತಂತ್ರ ವಿಶ್ವಾತೀತವಿಶ್ವ ಜ್ಯೋತಿಯನರ್ಪಿಸುವೆ ಗುರುನಾಥ 5 ನಿತ್ಯ ಸಂತುಷ್ಟ ಶಿರೋಭಾಗಅತ್ಯಂತ ಆನಂದವಹ ಸದಾಭೋಗಪ್ರತ್ಯಗಾತುಮತರ ಪುಷ್ಪಪರಾಗಅರ್ಥಿಯಲಿ ಅರ್ಪಿಸುವೆ ನೈವೇದ್ಯ ನಾನೀಗ6 ಇಂತುಪಚಾರಪಂಚದ ಪೂಜೆಯನೀಗಅಂತರಂಗದಿ ಚಿದಾನಂದನಿಗೆ ಈಗ ಸಂತಸದಿಂದ ನಾ ಮಾಡುತಲಾಗಎಂತು ಎನಲಿ ತಾನೇ ತಾನಾದ ಬೇಗ7
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಶ್ರೀ ರಾಮನ ಜಾನಕಿ ಪ್ರೇಮನ ಅನುದಿನ ಪ ಶುಭ ಕಲ್ಯಾಣನ ಮಾಧವ ಮುಕುಂದನ 1 ವಿಶ್ವ ಪ್ರಕಾಶನಾ --ನಂದದಿ ಹೃದಯ ಗೋವಿಂದನ ಬಿಡದಿನ್ನು 2 ಕಂದರ್ಪ ಜನಕನ ಕರಿರಾಜ ವರದನ ಸಿಂಧುಶಯನ ಹರಿ ಶ್ರೀ ಜಗನ್ನಾಥನ 3 ಸೌಂದರ್ಯ ರೂಪನ ಪುರುಷೋತ್ತಮನ ಕುಂದರದನ ಹರಿ ಕೋಮಲಾಂಗನ 4 ಪರಮ ಪುರುಷನ ಪತಿತಪಾವನನ ನರಹರಿರೂಪನ ನಾರಾಯಣನ 5 ಗರುಡಾರೂಢನ ಕರುಣಾಸಾಗರನ ಉರದಲಿ ಲಕ್ಷ್ಮಿಯ ಧರಿಸಿ ಕೊಂಡಿಹನ 6 ಉರಗಾದ್ರಿ ವಾಸನ ವಸುದೇವಸುತನಾ ಭವಪಾಪ ಸಂಹಾರನ 7 ಶರಣರ ಕಾಯುವನ ಶ್ರೀನಿವಾಸನ ಉರಗಶಯನನ ಹರಿವಾಸುದೇವನಾ 8 ಮಂಗಳಮೂರುತಿ ಮಹಾನುಭಾವನ ಗಂಗೆಯ ಪಡೆದನ ಘನ ಗಂಭೀರನ9 ಶೃಂಗಾರ ಭೂಷಣನ ಸುಗುಣ ಪ್ರತಾಪನ ಅಂಗನೆಯರೆಡ ಬಲದಲಿರುವನ 10 ರಂಗನಾಯಕನ ರಾಜಾಧಿರಾಜನ ಮಂಗಾರಮಣನ ಮಧುಸೂದನನಾ 11 ರಂಗವುಳ್ಳ ಪೀತಾಂಬರ ಧರನಾ ಕಂಬು ಕಂಧರನಾ 12
--------------
ಹೆನ್ನೆರಂಗದಾಸರು
ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜಾಹ್ನವಿ ಜಗತ್ರಯ ಪಾವನಿ ಪ್ರಣತಕಾಮದೆ ಪದ್ಮಜಾಂಡ ಸಂಭೂತೆ ಪ ಸೃಷ್ಟೀಶ ಪದಜಾತೆ ವಿಶ್ವಮಂಗಳ ಮಹೋ ತ್ಕøಷ್ಟ ತೀರ್ಥಗಳೊಳುತ್ತಮಳೆನಿಸುವೇ ಕಷ್ಟವರ್ಜಿತವೆನಿಪ ತ್ರಿಪಥಗಾಮಿನಿ ದಯಾ ದೃಷ್ಟಿಯಿಂದಲಿ ನೋಡು ಪ್ರತಿದಿನದಿ ಎನ್ನಾ 1 ಕರ್ಮ ಸಾಕ್ಷಿಯೆನಿಸುತಿಹ ಅರ್ಕದೇವನು ಬಂದ ಸಮಯದಲ್ಲಿ ಶರ್ಕರಾಹ್ವರು ಸ್ನಾನಗೈಯೆ ದುರಿತಗಳು ಸಂ ಪರ್ಕವಾಗದ ತೆರದಿ ಸಂತೈಪೆ ದಯದಿ 2 ಕಾರುಣಿಕ ಬಹಿರಾವರಣದಿಂದ ನೀ ಪೊರಟು ವಾರಾಹಿಯೊಡಗೂಡಿ ಭಕ್ತಜನರ ಪ್ರಾರಬ್ಧ ಕರ್ಮಗಳನುಣಿಸಿ ಮುಕ್ತರನ ಮಾಳ್ಪೆ ದೂರಗೈಸುವೆ ಸಂಚಿತಾಗಾಮಿಗಳನೂ 3 ನಂದಿನೀ ನಳಿನಿ ಸುಸೀತಾ ಮಲಾಪಹರ ಳೆಂದ ಮಾತ್ರದಿ ಪುನೀತರನು ಮಾಳ್ಪೆ ಸಂದರುಶನ ಸ್ವರುಶನ ಸ್ನಾನಗಳ ಫಲ ಪು ರಂದರಾರ್ಯರೆ ಬಲ್ಲರಲ್ಪರು ಅರಿಯರು 4 ಮಾತೆ ವಿಜ್ಞಾಪಿಸುವೆ ಬಿನ್ನಪವ ಕೇಳು ಸಂ ಪ್ರೀತಿಯಿಂದಲಿ ಕರುಣಿಸೆನಗೆ ಇದನೆ ಶ್ರೋತವ್ಯ ವಕ್ತವ್ಯ ಮಂತವ್ಯ ಸ್ತವ್ಯ | ಜಗ ನ್ನಾಥ ವಿಠ್ಠಲನೊಬ್ಬನೆಂದು ತಿಳಿವಂತೇ5
--------------
ಜಗನ್ನಾಥದಾಸರು
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ