ಒಟ್ಟು 206 ಕಡೆಗಳಲ್ಲಿ , 62 ದಾಸರು , 194 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ಲೋ||ಶª-Àುದಮ ಸಹಿತೇನಸ್ವಾನುಭಾವೇನ ನಿತ್ಯಂಸಮಮತಿಮನುಯವ್ಯಣ ಸರ್ವದಾ ಸೇವಕಾನಾಂಯಮ ನಿಯಮ ಪರಾಣಾಮೇಕ ತತ್ಪಾದರಾಣಾಮಮಿತನಿಜ ಮಹಿಮ್ನಾ ದೇಶಿಕೇಂದ್ರೊ ವಿಭಾತಿಯೇನು ವಿಚಿತ್ರ ಪೇಳೆ ಯೇ ಮತಿಯೆ ನಿದಾನವನೆನ್ನೊಡನೆಮಾನಸ ವೃತ್ತಿಯಾತ್ಮನ ಕೂಡಿಬರಲೊಂದು ಗಾನ ತೋರುವುದಿದೇನೆ ಪಎಲ್ಲವನುಳಿದೀಗಲೂ ಬಗೆಗೊಂಡು ಮುದದಿಂದ ಬಂದು ನಿಂದುಸಲ್ಲಲಿತಾನಂದ ಪದವ ನೋಡುವೆನೆಂದು ಸವರಿಸಿ ಬರಲು ಮುಂದುಇಲ್ಲ ಮತ್ತೊಂದಾತ್ಮನಿಂದಧಿಕವೆಂದು ನಿಲ್ಲದೆ ಧ್ಯಾನಿಸಲುಝಲ್ಲನೆ ಜಲಧಿಯ ಮೊರವಿನಂದದಿ ತೋರಲಲ್ಲಿ ನಾ ಬೆರಗಾದೆನು 1ಅಂಜದೆ ಚಿಂತಿಸಲು ಮುರಜ ಭೇರಿ ಮಂಜುಳ ವೀಣೆಗಳಸಿಂಜಿತಗಳು ಮೇಘನಾದ ಮುಂತಾದವು ಸಂಜನಿಸಿದವೊಳಗೆರಂಜನೆುಂದವನು ಕೇಳುತ ಹೃತ್ಕಂಜದೊಳ್ಬೋಧೆಯೆಂಬಅಂಜನವಚ್ಚಲು ಬಿಂದು ಪೊಳೆುತು ನಿರಂಜನ ರೂಪಿನಲಿ 2ಮತ್ತೆ ಮುಂದೆ ನೋಡಲು ಬಿಂದುವೆಂಬುತ್ತಮ ಹಿಮಕರನಕತ್ತಲೆಗವಿದುದು ಅದ ನೋಡುತ ಮನ ತತ್ತರಿಸಿತು ನಿಲ್ಲದೆಚಿತ್ತವನಲುಗದೆ ಗುರುಪಾದವ ಧೃತಿವೆತ್ತು ಚಿಂತಿಸುತಿರಲುಕತ್ತಲೆ ಪರಿದು ಕಳಾ ವಿಶೇಷ ನೋಡಲೆತ್ತಲೆತ್ತಲು ತುಂಬಿತು 3ಛಂದದಿತೇಜವನು ನೋಡುತಲದರಿಂದಲಧಿಕ ಸುಖವೂಮುಂದೆ ಪುಟ್ಟಲದರನುಭವದಲಿ ಹಿಗ್ಗಿ ನಿಂದು ಜುಂಮುದಟ್ಟಲುಎಂದೆಂದು ಕಾಣದ ಸುಖದೊಳು ಮನ ಬಳಿಸಂದು ಲಯವನೈದಲುಒಂದಲ್ಲದೆರಡಿಲ್ಲದ ನಿಜ ನಿತ್ಯಾನಂದವೆ ನಾನಾದೆನೂ 4ತಾಪತ್ರಯಗಳಡಗಿ ಕರ್ಮಕಲಾಪವಿಲ್ಲದೆ ಪೋದುದುಗೋಪಾಲಾರ್ಯರ ಕೃಪೆುಂದ ಭವಬಂಧವೀ ಪರಿ ಬಯಲಾದುದುವ್ಯಾಪಾರವೆಲ್ಲವನಿತ್ಯವಾದವು ನಿರ್ಲೇಪತೆಯೆನಗಾದುದುದೀಪಿತ ವಿಜ್ಞಾನ ರತ್ನವೆಂದೆನಿಸುವ ದೀಪ ಸುಸ್ಥಿರವಾುತೂ 5
--------------
ಗೋಪಾಲಾರ್ಯರು
ಷಟ್ಪದಿ ಕೂಟವಾಳುವ ಶ್ರೇಷ್ಠ ಶಾರದೆ | ಕೈಟ ಭಾರಿಯ ಭಕ್ತಿ ವೃಕ್ಷವ| ನಾಟಿ ಹೃದಯದಿ ಬೆಳಸೆ ಶುಭಗುಣ ಖಣಿಯೆ ಮಂಗಳೆಯೆ 1 ಪೋಲ್ವ ಮೂಢನ | ಭಾರ ನಿನ್ನದೆ ದೀನ ವತ್ಸಲೆ ಯೆ| ಶುಭಮರ್ಮ ಕಳಿಸುತ | ಶ್ರೀನಿವಾಸನ ಭಕ್ತಿ ಜ್ಞಾನವಿರಕ್ತಿ ಕೊಡಿಸಮ್ಮ 2 ವೇಣಿ ವೀಣೆಯ | ಗಾನ ನುಡಿಸುವ ಜಾಣೆ ವಿಧಿಮನ ಹಾರಿ ಕೋಮಲೆಯೆ | ಶೂನ್ಯ ಮೂರು ರೂಪಳೆ | ಸಾನುರಾಗದಿ ವಲಿದು ಹರಿಪಥ ಸಿಗಿಸಿ ಪೊರೆಯಮ್ಮ 3 ರಮ್ಯರೂಪಗಳಿಂದ ನಾ ನಾ | ರಮ್ಯಸೃಷ್ಟಿಗಳಿಗನುವಾಗುತ ಹರಿಯ ಸೇವಿಸಿದೆ | ನುಡಿಸಿ ಕರಿಸುವಿ | ಯಮ್ಮ ಜಗದಿ ಸರಸ್ವತೀಯಂತೆಂದು ವಿಪಮಾತೆ 4 ಮಾಯ್ಗಳ ಗೆಲ್ವ ಬಗೆ ತೋರು | ಮಾತೆ ಯೆನಿಸಿಹೆ ವಿಕಟ ಜಗದವತಾರ ವರ್ಜಿತೆ ಶರಣು ಶ್ರೀ ಸೊಸೆಯೆ 5 ಕೃತಿ ಸುತೆಸು | ಮಧ್ವಶಾಸ್ತ್ರದಲಿ ಮನದಕು| ಬುದ್ದಿಗಳ ಕಡಿಸಿ ಪ್ರಸಿದ್ಧಿಯ ನೀಡಿ ಸಾಕಮ್ಮ | ಪದ್ಮನಾಭನ ವೇದ ಸಮ್ಮತಿ | ಯಿಂದ ಪಾಡುತ ಭಾಗ್ಯವಾಹುದೆ | ಎಂದಿಗಾದರು ನೀನೆ ಮನದಲಿ ನಿಂತು ನುಡಿಸದಲೆ 6 ವಿನೋದ ಗೊಷ್ಠಿಯ | ಹಾದಿ ಹಿಡಿದವಿವೇಕಿ ನಾನಲೆ ಕೇಳು ವಿಪತಾಯೆ | ಮಾಧವನು ಸಿಗನಮ್ಮ | ಆದರದಿ ಸಾರಿದೆನು ಕವಿಜನಗೇಯೆ ವಿಧಿಜಾಯೆ 7 ನೀರಜ ರುದ್ರರ ಬಿಂಬೆ ಭಕ್ತರ | ಸ್ತಂಭೆ ಶಾಂಭವಿ ವಂದ್ಯೆ ನಿತ್ಯದಿ | ಉಂಬೆ ಸುಖಗಳನೂ | ಸಾರ ಕೈಗೊಡಿಸಮ್ಮ ಸಮೀರ ಗ್ಹೇಳುತಲಿ 8 ಭೃತ್ಯ ನಿತ್ಯ ಭಕ್ತಳೆ | ವಿತ್ತ ವನಿತಾ ವ್ಯಾಧಿ ಹರಿಸುತ ಚಿತ್ತ ಶುದ್ಧಿಯನು | ಸಪ್ತ ಶಿವಗಳ ಮರ್ಮ ಬೇಗನೆ ವತ್ತಿ ಮಿಥ್ಯಾಜ್ಞಾನ ತಿಮಿರವ ಭಕ್ತಿ ಭಾಸ್ಕರಳೆ 9 ಸುಖಗಳನುಂಬೆ ಭುಜಿವಿದಿ| ತಳಿಹೆ ಪತಿತೆರದ್ವಿಶತ ಕಲ್ಪಗಳಲ್ಲಿ ಸಾಧನೆಯು | ಶಾಪವ ಶ್ಯಾಮಲಾಶಚಿ | ಗಳಿಗೆ ದ್ರೌಪತಿ ಇಂದ್ರ ಸೇನಾಕಾಳಿ ಚಂದ್ರಾಖ್ಯೆ 10 ನಿಂತು ಶಶಿಯಿಲ್| ಭೂತ ಗುಪಚಯವಿತ್ತು ಸೃಷ್ಠಿಯ ಕಾರ್ಯಗನುವಾಹೆ | ಪತಿ ನಿನಗಹುದಮ್ಮ ಕೊರತೆಯು | ಯಾತರಿಂದಲು ಯಾವಕಾಲುಕು ಇಲ್ಲರಯಿ ನಿನಗೆ 11 ಕವಚ ತೊಡಿಸುತ | ಶ್ರೀನಿವಾಸನಭಕ್ತನಿಚಯಕ್ಕೆ ಕೈಮುಗಿದು ಆನತಾಮರಧೇನು ಮುಖ್ಯ | ಪ್ರಾಣಮಂದಿರನಾದಶುಭಗುಣ ಪೂರ್ಣಪೂರ್ಣಾನಂದ ತದ್ವನ ಬಾದರಾಯಣಗೆ 12 ದೈನ್ಯ ದಿಂದಸಮರ್ಪಿಸುತ ಪವಮಾನರಾಯನ ಕರುಣವೆಲ್ಲೆಡೆ ಅನ್ಯ ವಿಷಯವ ಬೇಡದಂದದಿ ಮಾಡುತಲಿಯನ್ನ | ಜ್ಞಾನ ಭಕ್ತಿ ವಿರಕ್ತಿ ಸಂಪದ | ನೀನೆ ನೀಡುತ ಸಲಹೆ ಕೃತಿಸುತೆ | ನೀನೆ ಸಾಸರಿ ನಮಿಪೆ ಬೃಹತೀಖ್ಯಾತ ಭಾರತಿಯೆ 13 ಸೇರಿ ತಾಂಡವ ಮಾಡಿ ಪಾದ ಪಂಕಜವ ಸೂರಿ ಸಮ್ಮತ ವೇದ ಗಾನದಿ | ಸಾರಿ ಸಾರಿಸೆ ಸೇರು ವದನದಿ | ನೀರ ಜಾಕ್ಷನ ಸೊಸೆಯೆ ಶುಚಿಶತಿ ನಮಿಪೆ ಭೂಯಿಷ್ಠ 14
--------------
ಕೃಷ್ಣವಿಠಲದಾಸರು
ಸಂಕ್ಷಿಪ್ತ ವಿರಾಟಪರ್ವ ಕೇಳು ಜನಮೇಜಯರಾಜ ಭೂಮಿ- ಪಾಲ ಪಾಂಡವರ ಸತ್ಕಥೆಯಪ. ಭೂರಿ ವ- ನಾಳಿಯನು ಸಂಚರಿಸಿ ಸಜ್ಜನ ಕೇಳಿಯಲಿ ವನವಾಸದವಧಿಯ ಕಾಲವನು ಕಳೆಕಳೆದು ಬಂದರುಅ.ಪ. ದರ್ವೀಧರಹಸ್ತನಾಗಿ ಮಹಾ ಪರ್ವತದಂತುರೆ ಮಸಗಿ ನಿರ್ವಹಿಸಿ ಸೂದತ್ವವನು ಸಲೆ ಗರ್ವಿತಾಧಮ ಕೀಚಕನ ಕುಲ ಸರ್ವವನು ಸಂಹರಿಪ ಭೀಮ ಪೆ- ಸರ್ವಡೆದ ಗುರುವರ್ಯ ಬಂದನು 1 ಕಡುಗಲಿ ಕಲಿಮಲಧ್ವಂಸ ಎದ್ದು ನಡೆದು ಬಂದನು ಪರಮಹಂಸ ನಿಡುಕಿ ಮನದಿ ವಿರಾಟರಾಯನ ಪೊಡವಿಗಿಡೆ ಪದ ಕೀಚಕಾಖ್ಯನ ಎಡದ ಭುಜ ಕಂಪಿಸಿತು ಮೂಜಗ ದೊಡೆಯನುಡುಪತಿಕುಲಶಿಖಾಮಣಿ2 ಗಂಗಾದಿ ನದಿಗಳ ತೀರ ಪಟ್ಟ ಣಂಗಳ ಗೈದ ಸಂಚಾರ ತುಂಗಬಲ ಮಲ್ಲರುಗಳನು ಸಲೆ ಸಂಘಟಿಸಿ ಜೀಮೂತವೀರಪ್ಪ ಸಂಗದಲಿ ವೈರಾಟಪುರ ರಾ ಜಾಂಗಣಕೆ ಭದ್ರಾಂಗ ಬಂದನು3 ಇಂತು ಮಲ್ಲರನೆಲ್ಲ ಸದೆದು ಬಲ ವಂತರಿರಲು ನೃಪಗೊಲಿದು ಸಂತಸವ ಬಡಿಸುತ್ತಲಿರಲ್ವಾ ಕುಂತಿತನಯರು ಹರಿಯ ನಾಮವ ಚಿಂತಿಸುತ ದಶಮಾಸ ಕಳೆದಾ ನಂತರದ ವೃತ್ತಾಂತವೆಲ್ಲವ4 ಕಥೆಯಂತೆ ಹಿಂದೆ ರಾವಣನ ಕೆಟ್ಟ ಗತಿಗನುಚರ ಕೀಚಕನ ಸ್ಥಿತಿಯು ದ್ರುಪದಜೆಗಾದ ಮಾನ ಚ್ಯುತಿಗೆ ಕಾರಣನಾದ ಜಡ ದು- ರ್ಮತಿ ಖಳಾಧಮನೊಂದು ದಿನ ನೃಪ ಸತಿಸಭೆಗೆ ಅತಿ ಹಿತದಿ ಬಂದನು5 ಪಾಪಿ ಕೀಚಕನಿಗಿಂತುಸುರಿ ದ್ರುಪದ ಭೂಪಾಲಕನ ಕಿಶೋರಿ ಶ್ರೀಪತಿಯ ನಾಮವನು ಸ್ಮರಿಸುತ- ಲಾ ಪತಿವ್ರತೆ ತೊಲಗಲಂಗಜ ತಾಪತಪ್ತಾಂತಃಕರಣ ನಾ ಪರಿಯ ಮತಿ ವ್ಯಾಪಿಸಿದನು6 ಲಾಲಿಸಿ ಮಾಲಿನಿವಚನ ತೋಷ ತಾಳಿದ ದುರ್ಗುಣಸದನ ಕಾಲಪಾಶದಿ ಬಿಗಿವಡೆದು ಹೇ- ರಾಳ ಮುದಕೀಲಾಲ ಸಲೆ ಕ- ಲ್ಲೋಲಜಾಲದಿ ಮುಳುಗಿ ನರ್ತನ ಶಾಲೆಗಾಗಿ ಕರಾಳ ಬಂದನು7 ಮಥಿಸಿ ಕೀಚಕನ ಮಂಟಪದಿ ದ್ರುಪದ ಸುತೆಗೆ ತೋರಿಸಲತಿ ಮುದದಿ ಸತಿಶಿರೋಮಣಿ ಕಂಡು ಮನದೊಳ- ಗತುಳ ಹರುಷವನಾಂತು ಸರ್ವೋ ನ್ನತಭುಜನ ಚುಂಬಿಸಿದಳು ಪತಿ ವ್ರತೆಯರ ಶಿರೋರತುನೆ ಪಾವನೆ8 ಇತ್ತ ವಿರಾಟನಗರದ ಸರ್ವ ವೃತ್ತಾಂತವೆಲ್ಲವ ತಿಳಿದ ಧೂರ್ತ ದುರ್ಯೋಧನ ದುರಾಗ್ರಹ ಚಿತ್ತಗ್ರಹಿಸಿದ ಕಾರ್ಯಕಾರಣ ವೃತ್ತಿಯಲ್ಲಿ ಪಾಂಡವರು ನಿಜವೆಂ- ದಾಪ್ತಜನರೊಳು ವಿಸ್ತರಿಸಿದನು9 ಕರ್ಣ ದ್ರೋಣ ಕೃಪಾ ದ್ಯರು ಕೂಡಿ ಕುಜನಪ್ರವೀಣ ಪೊರಟ ಪರಮೋತ್ಸಾಹ ಸಾಹಸ ಭರತಿ ಕೌರವರಾಯ ಮತ್ಸ್ಯನ ಪುರವರ ಸಮೀಪದಿ ಸುಶರ್ಮನ ಕರೆದೊರೆದ ಭೂವರ ನಿರ್ಧರ10 ನುಡಿಯ ಕೇಳುತಲಿ ಸುಶರ್ಮ ನಿಜ ಪಡೆಯ ನೆರಹಿ ವೈರಿವರ್ಮ ದೃಢಕರಿಸಿ ದಿನಮಣಿಯು ಪಶ್ಚಿಮ- ಕಡಲ ಸಾರುವ ಸಮಯ ಗೋವ್ಗಳ ಪಿಡಿದು ಗೋಪರ ಕೆಡಹಿ ಬೊಬ್ಬಿ- ಟ್ಟೊಡನೊಡನೆ ಪಡಿಬಲವನರಸಿದ11 ಹಾರಿಸಿದನು ರಥ ಪಾರ್ಥ ನರ ನಾರಿವೇಷದ ಪುರುಷಾರ್ಥ ತೋರಿಸುವೆನೆಂಬುತ್ಸಾಹದೊಳು ಬ್ಬೇರಿ ಮನದೊಳು ಕೃಷ್ಣನಂಘ್ರಿಸ- ರೋರುಹಕೆ ಮಣಿದುತ್ತರನ ಸಹ ಸೇರಿ ನಗರದ್ವಾರ ದಾಟಿದ12 ಭೀತಿಯ ಬಿಡು ಬಾರೆಂದು ಪುರು ಹೂತಸುತನು ಎಳತಂದು ಘಾತಿಸುವೆ ರಿಪುಬಲವನೆಂದು ವ- ರೂಥದಲಿ ಕುಳ್ಳಿರಿಸಿ ನೃಪತನು ಜಾತಸಹ ಪಿತೃವನದ ಮಧ್ಯ ಶ- ಮೀತರುವಿನೆಡೆಗೋತು ಬಂದರು13 ಇಂತು ತಿಳಿಸುತಲರ್ಜುನನು ಬಲ ವಂತನು ಧನುಶರಗಳನು ತಾಂ ತವಕದಿಂ ಧರಿಸಿ ವಿಜಯ ಮ- ಹಾಂತ ವೀರಾವೇಶಭೂಷಣ ವಾಂತು ಶಂಖನಿನಾದದಿಂ ರಿಪು ತಿಂಥಿಣಿಯ ಭಯಭ್ರಾಂತಗೊಳಿಸಿದ 14 ಹೂಡಿ ಬಾಣವನುರ್ಜುನನು ಚೆಂ- ಡಾಡಿದ ರಿಪುಬಲವನ್ನು ಮೂಢ ದುರ್ಯೋಧನನ ಕಣೆಗಳ ಜೋಡಣೆಗಳಿಂ ಬಿಗಿದು ತನ್ನೋಶ ಮಾಡಿಕೊಂಡನು ಗೋಪಗೋವ್ಗಳ ನಾಡಲೇನದ ಪ್ರೌಢತನವನು15
--------------
ತುಪಾಕಿ ವೆಂಕಟರಮಣಾಚಾರ್ಯ
ಸತತ ಪಾಲಿಸೋ ಎನ್ನ | ಯತಿ ರಾಘವೇಂದ್ರ | ಪತಿತ ಪಾವನ ಪವನ | ಸುತಮತಾಂಬುಧಿ ಚಂದ್ರ ಪ ನಂಬಿದೆನು ನಿನ್ನ ಚರಣಾಂಬುಜವ ಮನ್ಮನದ ಹಂಬಲವ ಪೂರೈಸೊ ಬೆಂಬಿಡದಲೆ || ಕುಂಭಿಣೀಸುರ ನಿಕುರುಂಭ ವಂದಿತ ಜಿತ ಶಂಬರಾಂತಕ ಶಾತಕುಂಭ ಕಶ್ಯಪ ತನಯ 1 ಕ್ಷೋಣಿಯೊಳು ನೀ ಕುಂಭಕೋಣ ಕ್ಷೇತ್ರದಿ ಜನಿಸಿ ವೀಣ ವೆಂಕಟ ಅಭಿದಾನದಿಂದ ಸಾನುರಾಗದಿ ದ್ವಿಜನ ಪ್ರಾಣ ಉಳುಹಿದ ಮಹಿಮೆ | ಏನೆಂದು ಬಣ್ಣಿಸಲಿ ಜ್ಞಾನಿ ಕುಲತಿಲಕ2 ಮಂದಮತಿಗಳ ಸಂಗದಿಂದ ನಿನ್ನಯ ಚರಣ ಇಂದಿನ ತನಕ ನಾ ಪೊಂದಲಿಲ್ಲ ಕುಂದು ಎಣಿಸದೆ ಕಾಯೊ ಕಂದರ್ಪಪಿತ ಶಾಮ ಸುಂದರನ ದಾಸಕರ್ಮಂದಿ ಕುಲವರ್ಯ 3
--------------
ಶಾಮಸುಂದರ ವಿಠಲ
ಸನ್ನುತ ನಮೋಸ್ತು ಜಗದಾಧಾರಾ ಪ ನಮೋಸ್ತು ಮೀನ ಶರೀರಾ ಅ.ಪ ನಮೋಸ್ತು ಕೌಸ್ತುಭಧರಾ ಕೂರ್ಮ ಶರೀರಾ 1 ಮೃಗೇಂದ್ರ ಸದ್ಯುಶಾ ಶ್ರೀಪತೇ ವರಾಹ ರೂಪ ನಮೋಸ್ತುತೇ 2 ತಲ್ಪ ವಿರಾಜಿತೇ ಸನ್ನುತ ನೃಸಿಂಹರೂಪ ನಮೋಸ್ತುತೇ 3 ಪುರಂದರ ಫಲಪ್ರದಾ ಸಕಲೇಷ್ಟದಾ ನಮೋಸ್ತು ವಾಮನ ಶ್ರೀಕರಾ4 ರಮಾಮನೋಹರ ಶ್ರೀಹರೇ ಭಂಜನ ನಮೋಸ್ತು ಪರಶುಧರಾಹರೇ 5 ಪ್ರದೀಪ ಹನುಮತ್ಸೇವಿತ ಭವ ವಿನಾಶ ಭೂಮಿಸುತಾನ್ವಿತಾ 6 ಕೃಪಾಕರಾ ಪಶುಪಾಲಕಾ ಪ್ರವೀಣ ಗೋಪಬಾಲಕಾ 7 ಪಿತಾಯ ವ್ರತ ನಿರ್ಮೂಲತೇ ಬುದ್ಧ ಶರೀರತೇ 8 ಧರ್ಮೋದ್ಧರಾಯ ತುರಂಗ ವಿರಾಜತೇ ಗಮನ ಸುರೇಶ ಕಲ್ಕಿ ಮಹಾತ್ಮತೇ 9 ಪರ್ವತಧರ ಧರಾಯ ನೃಸಿಂಹತೇ ಪ್ರಬುದ್ಧಕಲ್ಕಿ ದಿಶಾಕಲತೇ 10 ಶುಭಾಂಗ ಗರುಡ ತುರಂಗತೇ ನಾರಾಯಣಾಯ ಭಕ್ತೋದ್ಧಾರತೇ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಂಪ್ರದಾಯದ ಹಾಡುಗಳು ಅವಳೊಡನೆ ಮುನಿವ ಬಗೆಯೇನೋ ಪೇಳೋ ಪ ಸಿರಿಮುಡಿಗೆ ಸಂಪಿಗೆಯ ಕೊರಳ್ಗೆ ಕಸ್ತೂರಿಯನುವರಫಾಲದೆಡೆಗೆ ಕುಂಕುಮ ರೇಖೆಯಧರಿಸಿ ಪಾಟೀರ ಕರ್ದಮವನಂಗಕೆ ತಿವುರಿಕರದಿ ವೀಣೆಯ ಪಿಡಿದು ನಲಿದು ಪಾಡುವಳು1 ವರರತ್ನ ಕಂಕಣವು ಬಾಹು ಭೂಷಣವಾಯ್ತುಮಿರುಪಮುದ್ರಿಕೆ ಸ್ವರ್ಣ ಕಟಕವಾಯ್ತುಕರದ ಕೊನೆಯೊಳಗೆ ದೋರೆಯವನಿಟ್ಟಳು ತನ್ನಬೆರಳ್ಗೆ ವೈಢೂರ್ಯದುಂಗುರವ ಧರಿಸಿದಳು 2 ಸುರರ ದಾನವರ ತೌರವರನಾಕಾಶವನುಉರಗತತಿಯನು ಕುಂಭಸಂಭವನನು ಹರನಹರಸುತರ ಸುರಗಿರಿಯ ಕೋಪಿಸಿ ಕೆಳದಿಪುರದ ರಾಮೇಶ ನಿನ್ನ ಬರವ ಹಾರೈಸುವಳು 3
--------------
ಕೆಳದಿ ವೆಂಕಣ್ಣ ಕವಿ
ಸರಸ್ವತಿ ಕಮಲಭವನ ಪ್ರಿಯ ರಾಣಿ ಪ ಅಂತರಂಗದ ತಂತಿಯ ಮಿಡಿಸೌನಿಂತು ಜಿಹ್ವೆಯಲಿ ಹರಿ ಗುಣ ನುಡಿಸೌಕಂತುಜನಕನ ದಯವನು ಕೊಡಿಸೌಸಂತತ ಶಾರದೆ ವೀಣಾ ಪಾಣಿ 1 ಪನ್ನಗ ವೇಣಿ 2 ಪ್ರೇರೆರಿಸರ್ಥಗರ್ಭದ ನುಡಿಗಳನುತೋರಿಸು ಪದ್ಯವ ರಚಿಪ ರೀತಿಯನುಚಾರು ಚರಣಗಳಿಗೆರಗುವೆ ಗದುಗಿನವೀರನಾರಾಯಣನ ಸೊಸೆಯೆ ಸುವಾಣಿ 3
--------------
ವೀರನಾರಾಯಣ
ಸರಸ್ವತಿ ನಲಿಯೆ ನೀ ಜಿಹ್ವೆಯಲಿ ಚತುರಾನನ ಪ್ರಿಯ ರಾಣಿ ನಾನಾ ಧನಕನಕಾದಿ ವಿಭವಗಳು ಹಿರಿದುಕ್ಕುತಲಿರಲು ಪ ನೀನೊಲಿಯದಿರಲು ಮಾನವನಿಗೆ ಸ ನ್ಮಾನವೆಂತು ಬರುವುದು ಜಗದೊಳಗೆ ಅ.ಪ ಕರ ಧೃತ ವೀಣಾಪಾಣಿ ಉನ್ನತ ಮಹಿಮ ಪ್ರಸನ್ನ ಹರಿಗೆ ಸತಿ 1
--------------
ವಿದ್ಯಾಪ್ರಸನ್ನತೀರ್ಥರು
ಸರಸ್ವತಿ ಮಂಗಳಾರುತಿಯನೆತ್ತೀರೆ ವಾರಿಜಭವಮುಖಿಗೆ ಮಂಗಳಾರುತಿಯನೆತ್ತೀರೆ ಪ ಇಂದು ಬಿಂಬ ಸದೃಶ ವದನೆಗೆ ಲಾವಣ್ಯ ಖಣಿಗೆ ಅಂದ ಕುಂಕುಮಭೂಷಿತ ಫಣೆಗೆ ಹರಿದ್ರ ಭೂಷೆಗೆ ಸಂದ ಮೌಕ್ತಿಕ ಚಂಪಕ ನಾಸಿಕೆಗೆ ಚಂದ ಕರುಣಾಭರಣ ಭೂಷಿತೆಗೆ ಚಾಪ ಇಂದು ಛವಿಯ ಕಿರೀಟ ಭೃತೆಗೆ ಹಿಂದೆ ಜೋಲ್ವ ಕನಕವೇಣಿಗೆ ಮಂಗಳಾರುತಿಯನೆತ್ತಿರೆ 1 ಚಾರುವಸನ ಭೂಷಿತಾಂಗೆಗೆ ವಿದ್ಯುತ್ಸುಕಾಂತೆಗೆ ಹಾರಪದ ಶÀಮಿರೂಪ ಕಂಠೆಗೆ ಸುಕಂಬು ಶ್ರೀದೇವಿಗೆ ಸಾರ ವೇದಾಂಗ ಭೂತೆಗೆ ನೀರಜ ಪಲ್ಲವಗಾತ್ರೆಗೆ ಸಾರಸಾಕ್ಷಿ ಶಿರಿವಂತೆಗೆ ಮಂಗಳಾರುತಿಯನೆತ್ತಿರೆ2 ಕರದಿ ವೀಣೆ ಧರಿಪ ದೇವಿಗೆ ಪಾವನ್ನಗಾತ್ರೆಗೆ ಧರೆಯ ಸೃಷ್ಟಿಕರ್ತನರಸಿಗೆ ಮಂಗಳ ವಾಣಿಗೆ ಪರಿಪರಿಯಲಂಕಾರ ಭೂಷಿತೆಗೆ ಸರಸ ಕೋಮಲ ಪದ್ಮಪಾತೆಗೆ ಮರಕತಭೂಷಣ ಭಾಸೆಗೆ ನಿರುತ ಜನಕೆ ವಿದ್ಯಪ್ರದೆಗೆ ನರಸಿಂಹವಿಠ್ಠಲನ ಬಾಲೆಗೆ ಮಂಗಳಾರುತಿಯನೆತ್ತಿರೆ 3
--------------
ನರಸಿಂಹವಿಠಲರು
ಸರಸ್ವತಿ ಸ್ತುತಿ ವಾಣಿ ಪಲ್ಲವ ಪಾಣಿ ನಾಗ- ವೇಣಿ ಹಂಸಗಾಮಿನೀ ಪ ವೇಣಿ ಹಂಸಗಾಮಿನೀ ಸು- ವೀಣಾ ಪುಸ್ತಕ ಧಾರಿಣಿ ಅ.ಪ ಶಾರದೆ ಶ್ರುತಿ ಸಾರನಿಧೇ ವಾರಿಜಾಕ್ಷಿ ಭಾರತೀ ಮಮ- ಕಾರ ಮೋಹಗಳಜಿತೀ 1 ನಾಕಾಧೀಶ ಪೂಜಿತೇ ವಿ- ವೇಕ ಜ್ಞಾನ ಸಂಧೃತೇ 2 ದಾಸರಿಷ್ಟವೀವ ಪಾವಂ ತೋಷವೀಯೇ ಸನ್ಮತಿ ವಾಣಿ3
--------------
ಬೆಳ್ಳೆ ದಾಸಪ್ಪಯ್ಯ
ಸರಸ್ವತಿ-ಭಾರತಿ ನಿತ್ಯ ಕಾವುದೆಮ್ಮನು ಪ ನಿತ್ಯ ಪಾವಿತರನ್ನ ಮಾಡುವಿ ನೋವ ಕೊಡದಲೆ ಕಾಯೇ ಅ.ಪ ಪದ್ಮನಾಭನ ನಾಭಿ ಪದ್ಮಜನ ಸಹ ಹೃ ತ್ಪದ್ಮದೊಳಗೆ ನೆಲಸಿ ಛದ್ಮವ ಕಳೆಯೆ ನಿರುತ 1 ಮಾರಮಣನ ದಿವ್ಯ ಚರಣ ಸರೋಜವ ತೋರಿ ಕರುಣವ ಮಾಡೆ ವಾರಿಜಾಸನನ ರಾಣಿ2 ಲಕುಮೀ ನಾರಾಯಣನ ಸುಕುಮಾರ ಚತುರ್ಮುಖ ನ್ವಾಕಿಗಾಗಿ ಬ್ರಾಹ್ಮೀ ಎನಿಸಿ ಸಾಕುವಿ ಲೋಕವ ಕಾಯೆ 3 ವಾಸುದೇವ ಕಾಲ ಪುರುಷರ್ಗೆ ಗಾಯಿತ್ರಿ ಸಾವಿತ್ರಿಯಾಗಿ ತೋಯಜಾಸನ ವಿಹಾರಿ 4 ಸನ್ನುತ ಜಯಾ ಸಂಕರುಷಣನ್ನ ಪಾದ ಕಿಂಕರನ್ನ ಮಾಡಿ ಎನ್ನ ಸಂಕಟ ಪರಿಹಾರ ಮಾಡೆ 5 ಕೃತಿಪತಿ ಪ್ರದ್ಯುಮ್ನನ ಸುತೆ ನುತಿಪೆನು ಸದಾ ಖ್ಯಾತಿಯನ್ನಿತ್ತನ್ಯಥಾ ಖ್ಯಾತಿಯ ಕಳೆಯೆ ಮಾತೆ 6 ಶಾಂತಿಪತಿ ಅನಿರುದ್ಧನಾಂತುದಿಸಿ ವಿರಂಚಿ ದುರಿತ ತರಿದು ಶಾಂತ ಮನಸನು ಕೊಡೆ7 ವಾಣಿ ವೀಣಾಪಾಣಿಯೇ ಕಾಣಿಸನುದಿನವೆನಗೆ ಮೃಡ ಇಂದ್ರಮುಖ ಗಣರಾರಾಧಿತಳೇ ತಾಯೆ 8 ಹೀನಗುಣವೆಣಿಸದೆ ಜ್ಞಾನ ಭಕ್ತಿ ವೈರಾಗ್ಯವ ಸಾನುರಾಗದಲಿ ಇತ್ತು ಶ್ರೀ ನರಹರಿಯ ತೋರೆ 9
--------------
ಪ್ರದ್ಯುಮ್ನತೀರ್ಥರು
ಸರಸ್ವತಿದೇವಿ ಗಾಯಿತ್ರಿ - ಶುಭಗಾತ್ರಿ ಪ ಪತಿ | ವೀರ್ಯಜಾತ ಶುಭಕಾಯ ಪುಮಾಭಿಧ | ಆರ್ಯನ ಪ್ರಿಯಸತಿಅ.ಪ. ವೀಣೆ ಧರಳೆ ಹರಿ | ಗಾನ ಗುಣಂಗಳಜಾಣೆಯೆ ಈ ತನು | ವೀಣೆಯಂತೆಸಗು 1 ನೀರಜಾಕ್ಷಿ ನಿನ | ಗಾರಿಲ್ಲವು ಸಮಮೂರು ಲೋಕದಲಿ | ಮುರಾರಿಯನುತೆ 2 ಕಾವ ಕೊಲ್ವ ಗುರು | ಗೋವಿಂದ ವಿಠಲನಓವಿ ಹೃದಂಬರ | ಠಾವಿಲಿ ತೋರಿಸು 3
--------------
ಗುರುಗೋವಿಂದವಿಠಲರು
ಸರಸ್ವತಿದೇವಿ ಸ್ತುತಿ ಶುಕ ವಾಣಿ ಪ ಪ್ರೀಯಳೇ ಹರಿಯಾ |ನವ ವಿಧದಿ ಭಜಿಸುವಾ ||ಕವಿಗಳೊಳಿಡಬೇಕು | ನಿನ್ನನೇ ಒಂದರಿಯಬೇಕು1 ವೀಣಾಪಾಣಿಯೆ ಪಿತನಾ |ಧ್ಯಾನಾದೊಳಿರಿಸೆನ್ನ |ಹೀನಾ ವೈಷಿಕಗಳನ |ನಾನೊಲ್ಲೆನನುಗಾಲಾ 2 ಗುರುಪ್ರಾಣೇಶವಿಠ್ಠಲಾ |ತ್ವರಿತಾ ತಾನೊಲಿವಂತೆ ||ವರಮತಿಯನಿತ್ತೆಮ್ಮ |ಪೊರಿಯಲಿ ಬೇಕಮ್ಮಾ3
--------------
ಗುರುಪ್ರಾಣೇಶವಿಠಲರು
ಸರಸ್ವತಿಮಾತೆ ಪರತರಚರಿತೆ ವರ ಪುಣ್ಯನಾಮಳೆ ಪ ಕರುಣಿಸಿವರವ ಕರುಣಾಕರಳೆ ಕರುಣದಿ ಕಾಯೆ ಅ.ಪ ಪದುಮಾಸನನ ಸುವದನ ನಿವಾಸೇ ತ್ರಿಭುವನಾರ್ಚಿತೆ ಸತತವಾಗಿ ಸುದಯೆ ಹೃದಯೆ ಸ್ಥಿರ ಸದುಮತಿ ಪಾಲಿಸೆ ಪರಮದಯದಿ ಪದುಳಂಗೆ ದಯದಿ 1 ವೀಣಾಧರಿ ಸುವಾಣಿ ಕಲ್ಯಾಣಿ ಮಾನಿನಿ ಬ್ರಹ್ಮನ ಜನನಿಯೆ ಜಗದಜಾಣೆ ಸುತ್ರಾಣೆ ನಿಜ ಜ್ಞಾನಾಧಿಕಾರಿ ಜ್ಞಾನವ ನೀಡೆ ಮಾಣದೆ ಎನಗೆ 2 ಪಾಮರತನ ನಿವಾರಣೆಗೊಳಿಸೆ ಪ್ರೇಮದೆನಗೆ ಸುಜಾಣೆ ನುಡಿಗಲಿಸಿ ವಿಮಲೆ ಅಮಲಸುಖ ಗಮಕದಿ ನೀಡ್ವೆ ಭುವಿಜಪತಿ ಶ್ರೀರಾಮನ ಸೊಸೆಯೆ 3
--------------
ರಾಮದಾಸರು