ಒಟ್ಟು 1056 ಕಡೆಗಳಲ್ಲಿ , 101 ದಾಸರು , 898 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲಕಮಲಾಧರನೆ ಕಮಲಭವ ವಂದಿತನೆ ಕಮಲ (?) ನುತನೇ ಕಮಲಶತ ಹಿತಕರನೆ ಪ ಕಮಲಬಾಣನ ಪಿತನೇ ಕಮಲದಳ ಲೋಚನನೇ ಕಮನೀಯನುಪ್ಪವಡಿಸಾ ಹರಿಯೇ ಅ.ಪ ಸಲಹಲೀ ಲೋಕಗಳ ಬಹುವೆನಿಪ ದಾನವರ ಗೆಲಿದು ಪಾಲ್ಗಡಲ ನಡುವಲದ ನೆಲೆವನೆಯ ತಲೆವಣಿಯ ಕಾಂತಿಗಳ ಮಿಗೆ ಜ್ವಲಿಪ ಬೆಳಗುಗಳಿಂದ ಫಲಿತ ಪುಳಕಗಳು ಮಿಗೆ ಬಲಿದ ನಿದ್ರೆಗಳ ಶ್ರೀಲಲನೇಶನುಪ್ಪವಡಿಸ1 ಸಿರಿ ಮುರಿಯುತಿದೆ ಶರಧಿಯೇಳ್ಗೇ ಉದಯಕೆ ಕರೆಯುತಿದೆ ಗಿಳಿವಿಂಡು ಕೊರುಗುತಿವೆ ಕೋಕಗ ಗರೆಯುತಿದೆ ಕೋರಕಂ ವೋಲಗಕೆ ಕರುಣಾಳು ಉಪ್ಪವಡಿಸಾ 2 ತೋರುತಿದೆ ಇನಬಿಂಬ ದೂರುತಿದೆ ಕುಮುದ ಸೊಂ ಪೇರುತಿದೆ ವನರುಹಂ ಬೀರುತಿದೆ ಕಡು ಚೆಲ್ವ ಸೋರುತಿದೆ ಮಕರಂದ ತೋರುತಿದೆ ತನಿಗಂಪ ಪಾರುತಿವೆÉ ಭ್ರಮರಂಗಳೂ ಚೀರುತಿವೆ ಪಕ್ಷಿಗಳು ಮೀರುತಿವೆ ಜನರವಂ ಪೂರ್ಣಧನು ಉಪ್ಪವಡಿಸಾ3 ಆಡುವರೆ ನರ್ತನವ ಪಾಡುವರೆ ಗಾನಗಳ ನೀಡುವರೆ ಪನ್ನೀರ ತೀಡುವರೆ ಸುರಭಿಗಳ ಮಾಡುವರೆ ಸಿಂಗರವ ಪೂಡುವರೆ ಹಾರಗಳನೂ ಕೋಡುವರೆ ಕಾಣಿಕೆಯ ಬೇಡುವರೆ ಸಂಪದವ ಸೂಡುವರೆ ಕುಸುಮಗಳ ನೋಡುವರೆ ಸಮಯಗಳ ಗಾಡಿಮಿಗಲುಪ್ಪವಡಿಸಾ 4 ದೇವ ಸಂಸ್ತುತಲೀಲ ದೇವ ಮುನಿನುತ ಶೀಲ ದೇವತತಿಗನುಕೂಲ ದೇವರಿಪುವನಜಾಲ ಚೇಲ ದೇವ ಗುಣಗಣಜಾಲ ದೇವಪುರಿ ಶ್ರೀಲೋಲ ದೇವ ನಲಿದುಪ್ಪವಡಿಸಾ 5
--------------
ಕವಿ ಲಕ್ಷ್ಮೀಶ
ಕಮಲಾಕ್ಷಿ ತಾಯೆ ಕಾಮಿತ ದಾಯೆ ಕೋಮಲಕಾಯೆ ನಮಿಪೆ ನಾಂ ಪೊರೆಯೆ ಪ ಕಮಲ ಸುಪಾಣಿ ಭಾನುಮತಿ ವಿಮಲೆ ಕಮಲೆ ಶೀಲೆ 1 ಕರುಣ ಕಟಾಕ್ಷದಿ ನಿರುಕಿಸೆ ನೀನು ನೀರೇರುಹ ಭವನೆ ಅಹನೆ ಕಾಣೆ 2 ಭ್ರಕುಟಿ ವಿಲಾಸದಿ ಸಕಲರ ಕಾಯ್ವ ಶ್ರೀಕಾಂತನ ರಮಣಿ ಸುಮಣಿ ತ್ರಾಣಿ 3
--------------
ಲಕ್ಷ್ಮೀನಾರಯಣರಾಯರು
ಕರ ಮುಗಿವೆ ಶರಜನೇ ಪ ಕರಗಳ ಮುಗಿವೆನು ಕರುಣಿಗಳರಸನೇ ಕರಮುಗಿವೆ ಅ.ಪ ಕಾಲಕಾಲನ ಪ್ರಿಯ ಬಾಲ ಕುಮಾರ | ಶೀಲ ಸುಗುಣ ರತ್ನಾಮಾಲ ಗಂಭೀರ | ಕರಮುಗಿವೆ 1 ಬೆನಕನನುಜ ಗುಹ ದಿನಪನ ತೇಜಾ ರಣದÀಲಿ ಸೇನಾನಿ ಸನಕಾದಿ ಪೂಜಾ | ಕರಮುಗಿವೆ2 ಚರಣ ದಾಸರಿಗಿಷ್ಟ ಕರುಣಿಸಿ ಕೊಡುವಾ ಸುರವರ ಪಾವಂಜೆ ಪುರದ ಶ್ರೀ ದೇವಾ | ಕರಮುಗಿವೇ 3
--------------
ಬೆಳ್ಳೆ ದಾಸಪ್ಪಯ್ಯ
ಕರವ ಮುಗಿದು ಸತತ ಲಕುಮಿಪತಿಯ ಭಕುತಿ ಒಂದೇ ಇರಲಿ ಪ ಮದನಶರ ತಿಮಿರಾರ್ಕ ಸುಜನವಾರ್ಧಿಗೆ ಪೂರ್ಣ ಬದರಮಂಗಳಗಾತ್ರ ಬಲು ಸುಲಭ ಬುದ್ಧನಾಗಿ ಶಿಷ್ಯರ್ಗೆ ಸುಧಿಯ ಪೇಳುವ ಮೌನಿ ಎದಿರಿಲ್ಲ ನಿಮಗೆಲ್ಲಿ ಗುರುವೆ ಸುರತರುವೆ 1 ಅಂದವಾದ ಕಾವ್ಯ ಸಾಮಥ್ರ್ಯಧೀರುವೆ ಮಂದಹಾಸದಿ ನೋಳ್ಪ ಭಕುತ ಜನರ ಒಂದೊಂದು ಪದಾರ್ಥ ಪಿಡಿವ ಗಂಟಲೆ ರಾಹು ನಿತ್ಯ 2 ವಾದಿಗಳೆದೆಯ ಶೂಲ ಸತ್ಯಪ್ರಿಯ ಕರಜಾತ ಸಾಧು ಸಜ್ಜನಗೇಯ ಸತ್ಯಬೋಧ ಮೋದಿ ಹಯವದನ ರಾಮ ವಿಜಯವಿಠ್ಠಲ ನಾದಿದೈವವೆಂದು ಎಣಿಸುವ ಜಪಶೀಲ 3
--------------
ವಿಜಯದಾಸ
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿ ಬಲಿ ಧ್ರುವ ಪ್ರಹ್ಲಾದನಲ್ಲಿ ಬಂದಂತೆ ಎನ್ನಲ್ಲಿ ಪ ನಿನ್ನಾಗಮನಕೆ ಹೃದಯ ಮನ ಬುದ್ಧಿ ಅರಳುವುದು ಸರ್ವದಾ ನಿನ್ನಾಗಮನಕೆ ಸರ್ವ ಮಾನಿಗಳೆಲ್ಲ ಕಾದು ನಿಂದಿಹರು ನಿನ್ನಾಗಮನಕೆ ಸರ್ವ ಕಾಲಾಕರ್ಮ ಅನುಕೂಲವಾಗಿಹವು ನಿನ್ನಾಗಮನಕೆನೇನೆ ಸರ್ವತ್ರ ಅನುಕೂಲ1 ಸೊಲ್ಲು ಲಾಲಿಸಬೇಕು ಶೀಲರುಕ್ತಿಬಲ್ಲಿದ ಮಹದೇವನೊಡೆಯ ಶುಕತಾತ ಹಲ್ಲಲ್ಲು ಕಿರಿದು ಕಾದು ನಿಂದಿಹರೊ2 ಕರಿಗಿರಿ ಮುದಮಯ ಗುರುತಂದೆವರದಗೋಪಾಲವಿಠಲಹೆದ್ದೈವ ಪಾಂಡುರಂಗಾ ವೆಂಕಟತಡವ್ಯಾಕೆ ಬರಲು ಯೋಚಿಪುದು ಏಕೆ ಬಾರಯ್ಯ ಭಕ್ತ ಬಂಧು ನಿನ್ನವರೆ ನಿಜ ಬಂಧೊ 3
--------------
ಗುರುತಂದೆವರದಗೋಪಾಲವಿಠಲರು
ಕರುಣದಿ ಕಾಯೊ ಕರುಣದಿ ಕಾಯೊ ಕಮಲನಯನ ಎನ್ನ ಪ ಪರಮಪುರುಷ ಹರೆ ಸರಸಿಜನಾಭನೆ ಅ.ಪ ನೀನೆ ತಂದೆಯು ಎಂದು ಜ್ಞಾನದಿಂದಲಿ ಬಂದು ಧ್ಯಾನಿಸುವೆನು ಈಗ 1 ತಾಯಿ ನೀನೇಯೆಂದು ಬಾಯಿಗೆ ಬಂದಂತೆ ಜೀಯ ನಿನ್ನನು ನೆನೆವೆ 2 ಜಗದೊಳಗೆಲ್ಲ ನೀನೆ ಸುಗುಣ ಶೀಲನು ಎಂದು ಮುಗಿಲು ಮುಟ್ಟುತಲಿದೆ3 ಸಂಗತಶ್ರಮವನು ಭಂಗವಗೈದ ಭು- ಜಂಗ ಗಿರಿಯ ವಾಸ 4 ಲೀಲೆಯಿಂದಲಿ ವ್ಯಾಘ್ರಶೈಲದಲಿರುವ ಶ್ರೀ ಲೋಲ ವರದವಿಠಲ 5
--------------
ವೆಂಕಟವರದಾರ್ಯರು
ಕರುಣದೆನ್ನ ಕರಪಿಡಿ ಕಾಯೋ ಪ ಸಿರಿನಾರಾಯಣ ಶರಣೆಂಬೆ ಅ.ಪ ಮೇಲ್ ಮೇಲ್ ಗುಣಗಾನವ ಮಾಡೆ ಬಾಲ್ಯಮೊದಲು ಮುದಿತನ ದೊಳಗುಂ ಸೌ ಶೀಲ್ಯ ಸ್ತುತಿಪೆ ಶುಕನುಡಿಯಂತೆ 1 ದಶರೂಪಗಳಂ ಧರಿಸುತ ಮರೆಸಲು ವಿಶ್ವವ್ಯಾಪಕಗುರು ತರವೇ ಕೃಷ್ಣನಾಮನಾವೆಯೊಳು ಬಹೇ 2 ವೈನತೇಯನನೊಡಗೊಂಡು ಬಹೆ ನಿನ್ನ ಸೆರಗ ಪಿಡಿಯುತ ಬರುವೆ3 ಸುಮನಸ ಪೂಜಿತ ನಮಿಸುವೆ ನಾಂ ಭ್ರಮೆಗಳ ಬಿಡಿಸುತ ಭವಭಯ ಹರ¸ ಕಮಲನಯನ ಹೆಜ್ಜಾಜೀಶ 4
--------------
ಶಾಮಶರ್ಮರು
ಕರುಣವ ತೋರೋ ಕರುಣಗುಣಾಂಬುಧಿ ಕರುಣವ ತೋರೋ ರಂಗಯ್ಯ ಪ ಕರುಣದಿ ಬಾರೋ ಬಾರೋ ಕರುಣ ತೋರಿ ಎನ್ನ ಕರುಣದಪ್ಪಿ ಪೊರಿ ಕರುಣವ ತೋರೋ ಅ.ಪ ಪರತರಮಹಿಮ ಹರಸುರಬ್ರಹ್ಮರ ಮೊರೆಯ ಕೇಳಿದ ಕರುಣವ ತೋರೋ ರಂಗಯ್ಯ ಧರೆಗೆ ಇಳಿದು ಶೇಷಗಿರಿಯಲಿ ನಿಂತು ನರಸುರರಿಗೆ ವರವಿತ್ತ ಕರುಣವ ತೋರೋ ರಂಗಯ್ಯ ಪುರದಿ ಬಂದು ನಿಂತ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಚರಣವಿಟ್ಟು ನಾರಿಕುಲವನು ದ್ಧರಿಸಿದಿ ಕರುಣವ ತೋರೋ 1 ಅಂಬುಜನಯನ ಕಂಬದಿ ಬಂದು ಭಕ್ತ ಗಿಂಬುಕೊಟ್ಟು ಕಾಯ್ದ ಕರುಣವ ತೋರೋ ರಂಗಯ್ಯ ನಂಬಿಕೊಟ್ಟ ಕಮಲಾಂಬಕಿಯೆಂಜಲ ಸಂಭ್ರಮದಿಂ ಮೆದ್ದ ಕರುಣವ ತೋರೋ ರಂಗಯ್ಯ ನಂಬಿದ ಅಸುರಗೆ ಬೆಂಬಲಗೊಟ್ಟು ಸ್ಥಿರ ಕುಂಭಿನಿಪಟ್ಟವಿತ್ತ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಅಂಬರೀಷನ ಮೊರೆ ಕೇಳಿ ಶೀಘ್ರದಿಂದ ಕರುಣವ ತೋರೋ 2 ನಿರುತ ನಂಬಿ ನಿನ್ನ ಮರೆಹೊಕ್ಕ ಬಾಲಗೆ ಸ್ಥಿರಪದವಿಯನಿತ್ತ ಕರುಣವ ತೋರೋ ರಂಗಯ್ಯ ಗರುಡನೇರಿ ಬಂದು ಕರಿಯ ವಿಪತ್ತನು ಪರಿಹರಿಸಿದ ಮಹಕರುಣವ ತೋರೋ ರಂಗಯ್ಯ ಹರಿಹರಿ ಎಂದೊದರಿದ ತರಣಿಭಕ್ತಿಗೆ ಮೆಚ್ಚಿ ನಿರುತ ಮೈಗಾವಲಾದ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಪರಮ ನಿರ್ಜರರಿಗೆ ಅಮೃತವುಣಿಸಿದ ಕರುಣವ ತೋರೋ3 ದುರುಳಕೋಟಿಯಾಚರಿಸಿದ ದುರುಳಗೆ ಪರಮ ಕೈವಲ್ಯವಿತ್ತ ಕರುಣವ ತೋರೋ ರಂಗಯ್ಯ ಕಿರಿಕುಲದವನ ಕರದಿಂ ಪರಮಾ ದರದಿ ಉಂಡ ಮಹಕರುಣವ ತೋರೋ ರಂಗಯ್ಯ ನೀರು ಕೊಟ್ಟ ನಿಜಕರುಣವ ತೋರೋ ರಂಗಯ್ಯ ಕರುಣದಿ ಬಾರೋ ಬಾರೋ ಚರಣದಾಸ ವರ ಕನಕನಿಗೊಲಿದ ಕರುಣವ ತೋರೋ 4 ಹಿಡಿ ಅವಲಕ್ಕಿಯ ಕೊಡಲು ಒಪ್ಪಿ ನೀ ಕಡು ಸಂಪದವಿತ್ತ ಕರುಣವ ತೋರೋ ರಂಗಯ್ಯ ಮಡಿದ ಬಾಲಕನಂ ಕಡುದಯದೆಬ್ಬಿಸಿ ಪಿಡಿದು ಕಾಪಾಡಿದ ಕರುಣವ ತೋರೋ ರಂಗಯ್ಯ ದೃಢಕರ ಬೆಂಬಲ ಬಿಡದೆಯಿರುವ ನಿನ್ನ ಕಡುದಿವ್ಯ ಮೂರ್ತಿಯ ಕರುಣವ ತೋರೋ ರಂಗಯ್ಯ ಕರುಣದಿ ಬಾರೋ ರಂಗ ಒಡೆಯ ಶ್ರೀರಾಮ ಎ ನ್ನೊಡಲಗಲದೆ ನಿಂತು ಕರುಣವ ತೋರೋ 5
--------------
ರಾಮದಾಸರು
ಕರುಣಾಕರ ದೇವಾ ಶೀತಾ ಚರನೋಕೆ ಕೇಶವಾ ಪ ಪಾತಕಾರಿ ವೋಂ ಪ್ರಸನ್ನಹನುಮನೆ ಪ್ರೀತಿಯೊಳಿರಿಸೆನ್ನಂ ನುತಿಸುವನಾ ನಿನ್ನಂ ಶರಣಂ 1 ಲಂಕಾಪುರದೀ ಕಿಂಕಿಣಿಧಾರಿ ಲಂಕಿಣಿಕೆ ಸಂಹಾರಿ ವಾಹನ ಹೌರ ಬ್ರಹ್ಮಚಾರಿ ಶರಣ ಕರು 2 ಪರಾಂಧಮ ತುಮ ಪ್ರಹ್ಲಾದಾರ್ಚಿತ ಪರಂದೇಹಿ ಸನ್ನಾಸಿ ಗೀರ್ವಾಣಭಾಷಿ | ಶರಣಂ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರುಣೆ ಬಾರದೇಕೊ ಕಂಜಜನಯ್ಯಾ ಪ ಶರಣು ಮಾಡುವೆ ತರುಣೀವರದನೇ ಅ.ಪ ಕರವನೆ ನೀಡೆಲೊ ರಂಗಾ ನಿನಗಿದು ತರವೆ ನೋಡೆಲೊ 1 ದಾಸವಾರ್ಚಿತಾ ಮಮದೇಶ್ವಿಕ್ಕ ತುಲಶೀರಾಮಾ ದಾಸನಾದೆನೊ ಪೋಷಿಸೊ ಪರದೇವಾ ದಾಸನಾದೆನೊ 2
--------------
ಚನ್ನಪಟ್ಟಣದ ಅಹೋಬಲದಾಸರು