ಒಟ್ಟು 200 ಕಡೆಗಳಲ್ಲಿ , 43 ದಾಸರು , 184 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸನ್ನುತ ನಮೋಸ್ತು ಜಗದಾಧಾರಾ ಪ ನಮೋಸ್ತು ಮೀನ ಶರೀರಾ ಅ.ಪ ನಮೋಸ್ತು ಕೌಸ್ತುಭಧರಾ ಕೂರ್ಮ ಶರೀರಾ 1 ಮೃಗೇಂದ್ರ ಸದ್ಯುಶಾ ಶ್ರೀಪತೇ ವರಾಹ ರೂಪ ನಮೋಸ್ತುತೇ 2 ತಲ್ಪ ವಿರಾಜಿತೇ ಸನ್ನುತ ನೃಸಿಂಹರೂಪ ನಮೋಸ್ತುತೇ 3 ಪುರಂದರ ಫಲಪ್ರದಾ ಸಕಲೇಷ್ಟದಾ ನಮೋಸ್ತು ವಾಮನ ಶ್ರೀಕರಾ4 ರಮಾಮನೋಹರ ಶ್ರೀಹರೇ ಭಂಜನ ನಮೋಸ್ತು ಪರಶುಧರಾಹರೇ 5 ಪ್ರದೀಪ ಹನುಮತ್ಸೇವಿತ ಭವ ವಿನಾಶ ಭೂಮಿಸುತಾನ್ವಿತಾ 6 ಕೃಪಾಕರಾ ಪಶುಪಾಲಕಾ ಪ್ರವೀಣ ಗೋಪಬಾಲಕಾ 7 ಪಿತಾಯ ವ್ರತ ನಿರ್ಮೂಲತೇ ಬುದ್ಧ ಶರೀರತೇ 8 ಧರ್ಮೋದ್ಧರಾಯ ತುರಂಗ ವಿರಾಜತೇ ಗಮನ ಸುರೇಶ ಕಲ್ಕಿ ಮಹಾತ್ಮತೇ 9 ಪರ್ವತಧರ ಧರಾಯ ನೃಸಿಂಹತೇ ಪ್ರಬುದ್ಧಕಲ್ಕಿ ದಿಶಾಕಲತೇ 10 ಶುಭಾಂಗ ಗರುಡ ತುರಂಗತೇ ನಾರಾಯಣಾಯ ಭಕ್ತೋದ್ಧಾರತೇ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸರ್ವ ವಿಪತ್ ಪರಿಹಾರ ಸ್ತುತಿ ಕರ್ಮ ಫಲದಾತನು ಶೂನ್ಯ ಪ ವಾಹನ ಪತನ ಉಕ್ಕಿ ಪ್ರವಹಿಸುವ ನದಿ ಮೊದಲಾದ್ದರಿಂದ ಏಕ ಕಾಲದಿ ಸಂಗ ಮರಣ ಸಂಭವಿಸುವುದು ಏಕೆಂದು ಶಂಕಿಸುತಿ ಕೇಳು ಶ್ರದ್ಧಾಳು 1 ಏಕ ಕಾಲದಿ ನಾನಾ ಜನರು ಸಂಗದಿ ಕೂಡಿ ಮಂದ ಮಾರುತ ಪುಷ್ಪವನದಿ ಶ್ರೀಕರ ಕಥಾ ಶ್ರವಣ ನಾಟಕ ಕೇಳಿಕೆಯು ಹೀಗೆ ಜನ ಸಂಘದಲಿ ನಾನಾ ಸಂಭವವು 2 ಒಂದೊಂದು ಮನುಜನಿಗು ಇಂಥಾ ಕಾಲದಿ ಇಂಥಾ ರೀತಿಯಲಿ ಇಂಥಾ ಸ್ಥಳದಲ್ಲಿ ಇಂಥಾ ಹಿತಕರವೊ ಅಹಿತವೊ ಕರ್ಮಗತಿ ಸಂಭವವು ಶ್ರೀದ ನಿಯಮಿಸುವ ವೈಷಮ್ಯವಿಲ್ಲದಲೆ 3 ಮಳೆ ಬಿಸಿಲುಭೂಕಂಪ ಚಂಡಮಾರುತ ಸುಳಿಸುಳಿದು ಪ್ರವಹಿಸುವ ನದಿ ಹರಡುವ ದಾವಾಗ್ನಿ ಎಲ್ಲ ಇಂಥಾ ಅಹಿತ ಸಂಭವದಿ ಸಿಲುಕುವರು ಅಲ್ಲಲ್ಲಿ ಬಹುಜನರು ಕರ್ಮಗತಿಯಲ್ಲಿ 4 ಘೋರ ಭೂಕಂಪದ ಪೀಡೆಗೆ ಯೋಗ್ಯರು ಯಾರು ಯಾರೊ ಒಳ್ಳೆವರೋ ಕೆಟ್ಟವರೊ ಹರಿಯು ಆ ಜನರನ್ನು ಕಂಪನಕೆ ಒಳಮಾಡಿ ಮರಣಾಂಗ ಹೀನತೆಯು ರಕ್ಷಣೆಯು ಈವ 5 ಭಿನ್ನ ಜೀವರು ಭಿನ್ನ ಕರ್ಮಗತಿ ಉಳ್ಳವರು ಭಿನ್ನ ಫಲಯೋಗ್ಯರು ಆದ ಕಾರಣದಿ ಕ್ಷೋಣಿ ಕಂಪನದಲ್ಲಿ ಮರಣ ಕೆಲವರಿಗೆ ಅಂಗ ಹೀನತೆ ಕೆಲವರಿಗೆ ರಕ್ಷಣೆ ಕೆಲವರಿಗೆ 6 ಘೃಣಿ ಹರಿಯು ಭೂಕಂಪ ಆಗುವ ಪೂರ್ವದಲೆ ಜನರು ಕೆಲವರನ್ನು ಬೇರೆ ಊರಿಗೆ ಕಳುಹಿ ಹಾನಿಗೊಳಿಸುವ ಕಂಪನಕೆ ಸಿಲುಕದಂತೆ ಇನ್ನು ಕೆಲವರನ್ನು ಅಲ್ಲಿ ಬಾರದೇ ಮಾಳ್ಪ 7 ಸಿಂಧು ವಿಜ್ಞಾನಂದ ಹರಿಯೇ ಕರ್ಮಾಧ್ಯಕ್ಷನು ಕರ್ಮಫಲದಾತ ಕರ್ಮ ಕೊಡದು ಫಲ ಕರ್ಮಾಧ್ಯಕ್ಷ ಶ್ರೀಹರಿಯೇ ಫಲದಾತ 8 ಸಂಘ ದುಃಖ ಪ್ರಾಪ್ತಿಯು ಹಾಗೆ ಭವಿಸುವುದು ಐಹಿಕ ವಿಷಯಜವು ಉದಾನಿಸಿ ಅಘದೂರ ಗುರುಗ ಶ್ರೀ ಹರಿಯ ಸ್ಮರಿಸು 9 ನರಜನ್ಮ ಹೊಂದಿದವ ಹರಿನಾಮ ಸರ್ವದಾ ಸ್ಮರಿಸುವುದು ಕರ್ತವ್ಯ ದೊರಕಿದ ಸ್ಥಳದಿ ಹರಿನಾಮ ಭಕ್ತಿ ಪೂರ್ವಕದಿ ನುಡಿಯಲೇ ಬೇಕು ನರಪಶÀು ಜಡಮತಿ ಮೂಢನು ನುಡಿಯ 10 ಹರಿಯೇ ಸರ್ವೋತ್ತಮನು ಮುಖ್ಯಕಾರಣ ವಿಷ್ಣು ಶ್ರೀರಮಾಪತಿಯೇ ಸ್ವತಂತ್ರ ಜಗನ್ನಾಥ ಸರಸಿಜೋದ್ಭವ ಶಿವ ಶಕ್ರಾದಿ ಸರ್ವರಿಗೂ ಪ್ರೇರಕನು ಸ್ವಾಮಿಯು ಚಿತ್ ಅಚಿತ್ ನಿಯಂತ 11 ವಿಹಿತ ಸಾಧನಕ್ಕೊದಗೆ ನ್ಯಗ್ರೋಧೋದುಂಬರ ಹರಿ ದೇಹ ಬೆಳಸುವ ಪೋಷಿಸುವ ರಕ್ಷಿಸುವನು ಅಹರ್ನಿಶಿ ಪಾಲಿಸುವ ಭಕ್ತವಾತ್ಯಲ್ಯದಿ ಮಹಾರ್ಹರ ರಕ್ಷಿಸಿದ ಪ್ರಹ್ಲಾದ ಗಜಪತಿಯ 12 ಹರಿಯ ಪಾದಕೆ ಅಭಿಷೇಕ ಮಾಡಿದ ಬ್ರಹ್ಮ ಹರನು ಕೈಲಾಸ ವಾಸನು ಆ ತೀರ್ಥ ಸಹಸ್ರನಾಮ ಬೃಹತೀ ಸಹಸ್ರ ಸಹ ಪಠಿಸುತ್ತಾ ಸತಿ ಪಾರ್ವತಿಗೆ ಎರೆದ 13 ಹರಿನಾಮ ಸಂಸ್ಮರಣೆ ಪೂರ್ವಕದಿ ಈ ನುಡಿಯ ಬರೆಯುವ ಪಠಿಸುವ ಕೇಳುವ ಭಕ್ತರನ್ನು ಶ್ರೀರಮಾಯುತ ಹರಿ ಸುರವೃಂದ ಸಹ ಬಂದು ಸಂರಕ್ಷಿಸುವ ಸರ್ವವಿಪತ್ ದೂರ ಮಾಡಿ 14 ವರಾಹ ನರಸಿಂಹ ಭೂತಿದ ದಯಾಬ್ಧಿ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಸದಾ ಶರಣು ಮಾಂಪಾಹಿ ಸಜ್ಜನರ 15
--------------
ಪ್ರಸನ್ನ ಶ್ರೀನಿವಾಸದಾಸರು
ಸಾಕು ನೀನೋಬ್ಬನೆ ಲೋಕನಾಯಕನೆ ಯಾಕನ್ಯ ದೈವವ ಭಜಿಸುವ ಸುಮ್ಮನೆ ಪ. ಸೂನು ಪರಮಾದರದಿಂದ ನೀಕರಿಸುತ ಯದು ಬಲಿ ಸಹಾಯವನು ಶ್ರೀಕರ ನೀನೊಬ್ಬನೆ ಸಾರಥಿಯಾಗೆ ಸಾಕೆಂದವರ ಬೊಮ್ಮನೆ ವೈರಿಗಳನ್ನು ವ್ಯಾಕುಲಗೊಳಿಸಿ ಭೂಮಿಪನಾದ ಸುಮ್ಮನೆ 1 ನಿಖಿಳ ದೈವಗಳೆಲ್ಲ ತಾನಾಗಿ ಪರಮಾನುಕೂಲರಾಗುವರು ಏನೆಂದು ಪೇಳ್ವದಿನ್ನು ಸಕಲ ಸುರ ಪಾದ ಪದ್ಮ ಧ್ಯಾನ ಮಾನವನಿತ್ತು ಪಾಲಿಸೆನ್ನನು 2 ಅಖಿಳಾಂಡಕೋಟಿ ಬ್ರಹ್ಮಾಂಡ ನಾಯಕನೆಂದು ನಿಖಿಳ ದೈವಗಳು ನಿನ್ನನೆ ಪೊಗಳುವವು ಸಕಲಾರ್ಥದಾಯಿ ನೀನು ನಾಮ ಸ್ಮøತಿ ಸುಖವನ್ನೆ ಪಾಲಿಸಿನ್ನು ಉದಯಗಿರಿ ಶಿಖಿರ ಸಂವಾಸನುಮಾನವ್ಯಾಕಿನ್ನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಾಕು ಸಾಕು ಬಿಡು ಬಡಿವಾರಾ ನಮ್ಮ ಶ್ರೀಕರ ದಾಸರ ಬಿಡಲಾರಾ ಪ. ಚಂಚಲಾಕ್ಷಿಯೊಳ್ ಚದುರತೆ ತೋರುತ ಮಂಚದ ಮೇಲ್ಕುಳ್ಳಿರಲಂದು ಮಿಂಚಿದ ಮೊರೆ ಕೇಳಿ ಮದಗಜನನು ಕಾಯ್ದ ಪಂಚ ಬಾಣ ಪಿತ ವಂಚಿಸನೆಂದಿಗು 1 ಶಂಭುಮುನಿಯು ಕೋಪಾಡಂಬರವನು ತೋರಿ ಅಂಬರೀಷಗೆ ಶಾಪವ ಕೊಡಲು ನಂಬಿದ ಭಕ್ತ ಕುಟುಂಬಿ ಸುದರ್ಶನ ನೆಂಬಾಯುಧದಿಂದ ಸಂಬಾಳಿಸಿದನು 2 ಎಲ್ಲ ವೇದಶಿರಗಳಲಿ ನೋಡೆ ಸಿರಿ- ನಲ್ಲ ವೆಂಕಟಗಿರಿವರ ಹರಿಗೆ ಎಲ್ಲವು ಸರಿಮಿಗಿಲಿಲ್ಲದೆ ತೋರುವ ಖುಲ್ಲ ದೈವಗಣವಿಲ್ಲೆ ಸೇರುವವು 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಾಕೇತಾಧಿಪ ಸತ್ವಸ್ವರೂಪ ಶ್ರೀಕರರೂಪ ಜಿತಕೋಪ ಪ ಕರಧೃತಚಾಪ ಖಂಡಿತತಾಪ ಪರಂತಪ ಪಾಹಿ ಕವಿಜನಾಲಾಪ 1 ಅರಿಜನ ಭೀಕರ ಕರಿವರ ಶ್ರೀಧರ ವರದಾಭಯಕರ ಪರಮಕೃಪಾಕರ 2 ಇನಕುಲಮಂಡನ ಭಕ್ತಾರ್ತಿಭಂಜನ ವನರುಹಲೋಚನ ಭವಬಂಧಮೋಚನ 3 ಕ್ಷಿತಿನಾಥ ರಾಘವ ಸತತ ಸುವೈಭವ ನುತಶೇಷಗಿರೀಧವ ವಿಜಿತಮನೋಭವ 4
--------------
ನಂಜನಗೂಡು ತಿರುಮಲಾಂಬಾ
ಸುಬ್ಬರಾಯ ಸುಜನಪ್ರಿಯ ಕರ್ಬುರಾಂತಕ ನಿರ್ಭಯವನು ಪಾಲಿಸಯ್ಯ ನಿರ್ಗತಮಾಯ ಪ. ಗೌರೀಕುಮಾರ ಪಾರಾವಾರಗಭೀರ ಮಾರನವತಾರ ತಾರಕಾರಿ ಶ್ರೀಕರ1 ಪಂಕಜಾಕ್ಷ ಪಾಹಿಮಾಂ ಶ್ರೀಶಂಕರಾತ್ಮಜ ಕುಂಕುಮಾರುಣವರ್ಣ ಪೂರ್ಣಾಲಂಕೃತ ವಿರಜ2 ಪೃಥ್ವಿಗುತ್ತಮ ಪಾವಂಜಾಖ್ಯ ಕ್ಷೇತ್ರಮಂದಿರ ಕರ್ತ ಲಕ್ಷ್ಮೀನಾರಾಯಣಭೃತ್ಯ ಸುಂದರ3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸಿರೊ ನಮ್ಮ ನರನ ಸಾರಥಿಯ ಪರಿಹರಿಸುವನು ತಾಪತ್ರಯ ವ್ಯಥೆಯ ಪ. ರಣಮಂಡಲದಲ್ಲಿ ಗುಣಗುವ ಕುಂತಿಯ ತನುಜನ ನೋಡುತ ವಿನಯದಿಂದ ಘನತತ್ವವನು ಪೇಳಿ ಅಣುಮಹದ್ಗತ ವಿಶ್ವ- ತನುವ ತೋರಿದ ಸತ್ಯ ವಿನಯ ಶ್ರೀ ಕೃಷ್ಣನ 1 ಸುರನದೀ ತನುಜನ ಶರದಿಂದ ರಕ್ತವ ಸುರಿವಂದ ತೋರಿ ಶ್ರೀಕರ ಚಕ್ರವ ಧರಿಸಿ ಓಡುತ ತನ್ನ ಚರಣ ಸೇವಕನೆಂಬ ಹರುಷ ತಾಳಿ ಬೇಗ ತಿರುಗಿ ಬಂದವನ 2 ವಿಜಯ ಸಾರಥಿಯಂದು ಭಜಿಸುವ ದಾಸರ ವಿಜಯ ಪೊಂದಿಸುವನಂಡಜ ರಾಜಗಮನ ಅಜ ಭವವರದ ಕಂಬುಜನಾಭ ಕಮಲೇಶ ಭುಜಗ ಧರಾಧೀಶ ಭಜನೀಯಪಾದನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸೆಲವೋ ಸ್ಮರಿಸೆಲವೋ ಮನವೇ | ನಿರುತದಿ ಗುರುಮಹೀಪತಿ ಪಾದಾ ಪ ಆದ್ಯಾತ್ಮದಘನ ವಿದ್ಯೆಯ ಸಾಧಿಸಿ | ಸಿದ್ಧರ ನಡುವೆ ಪ್ರಸಿದ್ಧರಾದವರ 1 ನೆಟ್ಟನೆ ಶರಣರ ಪುಟ್ಟಿಸಿರಧಿಕಾ | ಬಿಟ್ಟುಪದೇಶವ ಕೊಟ್ಟು ಸಾಕುವರಾ 2 ಧಾರುಣಿಯೊಳು ಸಂಸಾರ ಮಾಡಿದರ | ಸಾರಸಜಲದಂತೆ ರಚಿಸಿದರಾ 3 ಯೋಗಧಾರುಣದಿ ಸಾಗಿಪದಿನಗಳು | ಭಾಗವತಾಗ್ರಣಿ ಎನಿಪಶ್ರೀಗುರುಪಾದಾ4 ವಿತ್ತಜನರು ತಂದಿತ್ತರೆ ಹಿಡಿಯದೆ | ನಿತ್ಯವ್ಯಯವ ಪವಡಿಸುತಿಹರವರಾ5 ಯುಕ್ತದಿ ವಿಷಯಾಸಕ್ತಿಯತ್ಯಜಿಸಿ | ವಿ ರಕ್ತಿ ಬೆಳಿಸಿ ಸುಮುಕ್ತಿ ಪಡೆದವರಾ 6 ಸ್ವಸ್ಥದಿ ನಾಲ್ಕು ಅವಸ್ಥೆಯ ಮೀರಿ | ಸ ಮಸ್ತರಲಿ ನಿಜ ವಸ್ತು ಕಂಡವರಾ7 ಕಾಖಂಡಕಿ ಸ್ಥಳ ಶ್ರೀಕರವಂದ್ಯೆ | ನಿ ರಾಕರಿಸದೆ ಅಂಗೀಕರಿಸಿದರಾ 8 ಎಂದೆಂದಿಗೂ ಹೊರಗೊಂದಿನ ಹೋಗದೆ | ಮಂದಿರದೊಳಗಾನಂದದಲಿಹರಾ9 ತಾಪತೃಯದಾ ಭವಪರಿಹರಿಸುತ | ತಾಪೋರೆದನು ಗುರು ಶ್ರೀಪತಿಗುರುಪಾದಾ 10 ಅಂಕಿತ-ಗುರುಶ್ರೀಪತಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ವೀಕರಿಸೈ ವೀಳ್ಯಮಿದನು ಶ್ರೀಕರಾಬ್ಜಪಾಣಿಯಿಂ ಪ. ಲೋಕನಾಥ ಪಾಲಿಸೆನ್ನ ಶ್ರೀಕಟಾಕ್ಷದಿಂದಲೆ ಅ.ಪ. ಪಚ್ಚಕರ್ಪೂರಯಾಲದಿಂದ ಹೆಚ್ಚು ವಾಸನೆಯನುತಳೆದ ಅಚ್ಯುತನೆ ವೀಳ್ಯಮಿದನು ಮೆಚ್ಚಿ ನೀಡುತಿರುವೆನು 1 ತಟ್ಟೆಯನ್ನು ಪಿಡಿದು ಎನ್ನ ರಟ್ಟೆಗಳಿದು ನೊಂದವೈ ಸಿಟ್ಟುಮಾಡದೀಗ ದಯದಿ ದಿಟ್ಟಿಸೈ ಮದೀಶನೇ 2 ಲಲಿತಗಾತ್ರ ಎನ್ನೊಳಿಂತು ಚಲಮಿದೊಳ್ಳಿತೇನೆಲೈ ಜಲಜನೇತ್ರ ಶೇಷಶೈಲನಿಲಯ ನಿನ್ನ ನಮಿಪೆನೈ 3
--------------
ನಂಜನಗೂಡು ತಿರುಮಲಾಂಬಾ
ಹನುಮ ಮಧ್ವಾಧಿಪತೇ ನಮೋ ನಮೋ ಪ ಹನುಮ ಮಧ್ವಾಧಿಪತೇ ಘನಶ್ರೇ ಷ್ಠನುಪಮಮುನಿವರನೆನಿಸಿದ ಅ.ಪ ಉದ್ಧರಿಸೆಂದು ಮರೆಬಿದ್ದ ಭಕ್ತನಂ ಮುದ್ದಿಟ್ಟೆತ್ತೆ ನಿರ್ಧಾರದಭಯವಿತ್ತು ಪದ್ಮನಾಭ ನಿಂದುದ್ಧರಿಸಿದಿ ಪರಿ ಶುದ್ಧಮೂರುತಿ ಪ್ರಸಿದ್ಧನೆನಿಸಿದಂಥ 1 ಶಕ್ತಿಯಿತ್ತ ಮಹ ಮೌಕ್ತಿಕ ಮಾಲೆಯ ಸುತ್ತಿ ಶಿಲೆಯ ಮೇಲೆತ್ತಿ ಹೊಡೆದು ಘನ ಭಕ್ತಿತೋರಿ ಹರಿಚಿತ್ತ ತೃಪ್ತಿಬಡಿಸ ತ್ಯುತ್ತಮ ನಿಜಭೃತ್ಯನೆನಿಸಿದಂಥ 2 ಸುದತಿ ಸೀತೆ ತನ್ನ ಸದಯನ ನೆನೆಯಲು ಎದೆಸೀಳಿ ತೋರಿಸಿ ಸದಮಲನಂಘ್ರಿಯ ಸದಮಲಾಂಗಿ ವ್ರತ ಮುದದಿ ತೀರಿಸಿ ನಿಜ ಸದಮಲ ಭಕ್ತ ನೀನಹುದುಹುದೆನಿಸಿದ 3 ಶ್ರೀಕರನಪ್ಪಣೆ ಪಡೆದು ಅಸಮಬಲ ದೇಕ ಕಾಲದ್ಹಾರಿ ಹುಡುಕಿ ಕಾಶಿಯಿಂ ಏಕಾಗ್ರಚಿತ್ತದಿ ತಂದು ಲಿಂಗ ಮೂ ಲೋಕ ಮೋಹನನಿಂ ಲೋಕಪೂಜ್ಯೆನಿಸಿದ 4 ಮೀರಿದ ಗರುಡನಪಾರ ಗರುವಮಂ ಸೂರಗೈದು ದ್ವಾಪರ ಯುಗದಿಅ ಪಾರ ಮಹಿಮ ಶ್ರೀ ಧೀರ ಶ್ರೀರಾಮನ ಚಾರುಚರಣ ಕಂಡು ನಿರುತನೆನಿಸಿದಂಥ 5
--------------
ರಾಮದಾಸರು
ಹರಿಯೆ ಪೊರೆಯೊ ಪರತರ ಮರೆಯ ಹೊಕ್ಕೆ ಕರುಣಾಕರ ಶ್ರೀಕರ ಪ ಸರುವತಾಪದಿಂದ ಗೆಲಿಸಿ ಸರುವವಿಷಯದಿದ ಉಳಿಸಿ ಪರಮ ನಿಮ್ಮ ಕರುಣ ಬರೆಸಿ ಕರವ ಪಿಡಿದು 1 ಘೋರ ಭವಕಡಲವ ಘೋರ ಬಟ್ಟು ಈಸಿಸಭವ ಸೈರಿಸದೆ ನಿಮ್ಮ ಪಾದವ ಸೇರಿದೆ ಸಲಹು ಪರಮಕರುಣ ಸಿರಿಯರಮಣ2 ಮಾಯಮೋಹಗಳ ಬಿಡಿಸಿ ಕಾಯಕರ್ಮಗಳನು ಕೆಡಿಸಿ ತೋಯಜಾಕ್ಷೆನ್ನಯ್ಯ ರಾಮ ಸಿಂಧು 3
--------------
ರಾಮದಾಸರು
ಹಿರಿಯ ಮಗಳಿಂದ ಶ್ರೀಕರನಪದ ಸೇರೊ ಬರಿದೆ ಯೋಚನೆಯಿಂದ ಬೇಸರಗೊಳದಿರು ಪ. ಕಾಮಕ್ರೋಧಗಳನ್ನು ಭೌಮಿಯಲಿ ದೂಡುವಳು ವ್ಯಾಮೋಹ ಮದಲೋಭ ಮತ್ಸರಗಳಿಂ ಸೀಮೆಯಿಂಧೊರಗ್ಹಾಕಿ ಡಂಭಹಿಂಸಾನೃತದ ನಾಮವಡಗಿಸಿ ಪೂರ್ಣ ಕಾಮನನು ತೊರೆವ 1 ಭಾವ ಶುದ್ಧಿ ವಿವೇಕ ಬಾಲಕರನೆತ್ತುವಳು ಪಾವನತ್ವವ ಮಾಡಿ ತೂಗುತಿಹಳು ದಾವ ಕುಲಕು ದಶೇಂದ್ರಿಯ ದುಷ್ಟ ತುರಗಗಳ ಭಾವ ಕೆಡದಂದದಲಿ ಕಾವ ಕಮಲಾನನದ 2 ತನುವೆಂಬ ಮನೆಯ ಶುದ್ಧಿಯ ಗೈದು ಸುಜ್ಞಾನ ವೆನಿಸುತಿಹ ದೀವಿಗೆಯ ತೋರುತಿಹಳು ಮೂರ್ತಿ ಮನದೊಳಗೆ ನೆಲೆತೋರ್ಪ ವಿನಯ ವೆಂಕಟಪತಿಯ ನೆನವೆನಿಪ ಹರಿಭಕ್ತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
130-1ದ್ವಿತೀಯ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪದ್ವಿತೀಯಾಶ್ರಮವನ್ನು ಯುಕ್ತ ಕಾಲದಿ ಕೊಂಡುಸದ್ಧರ್ಮ ಆಚರಿಸಿ ಗೃಹಕೃತ್ಯದಲ್ಲಿಇದ್ದರು ಜಯತೀರ್ಥ ಆಚಾರ್ಯ ಆದರುಸದಾ ಹರಿಯಲ್ಲೇ ಧಾವಿಸಿತು ಮನಸ್ಸು 1ಕ್ಷೀರಫೇಣವೊಲ್ ತೂಲಿಕ ಹಂಸ ತಲ್ಪವುಶುಭ್ರ ಕನ್ನಡಿ ಚಿತ್ರಾಲಂಕಾರಗಳುಕೊರತೆ ಏನೂ ಇಲ್ಲ ಐಹಿಕ ಸಂಪತ್ತಿಗೆಸ್ಪುರದ್ರೂಪಿಣಿಸತಿಸುಶೀಲೆ ಸುಗುಣೆ2ಪ್ರಾರಬ್ಧ ಕರ್ಮನಿಮಿತ್ತ ಶ್ರೀಹರಿಯೇವೆಪರಿಪರಿಭೋಗಗಳ ಒದಗಿಸಿದ್ದೆಲ್ಲಹರಿಗೆ ಅರ್ಪಿಸುತ ಅನುಭವಿಸುತಿರಲಾಗಹೊರಗಿಂದ ಓರ್ವನು ಹಾಡಿದನು ನುಡಿಯ 3ಮಂಚಬಾರದು ಮಡದಿಬಾರಳು ಕುಂಚುಕನ್ನಡಿ ಬಾರದುಸಂಚಿತಾರ್ಥವು ಮತ್ತೆ ಬಾರದು ಮುಂಚೆ ಮಾಡಿರಿ ಧರ್ಮವಕಂಚಿನ ಗಂಟೆ ಧ್ವನಿ ಅಂದದಿ ಈ ನುಡಿಕೇಳಿಮಂಚದಿಂದಿಳಿದರು ಕುಳಿತರು ಚಿಂತೆಯಲಿ 4ಅಕಳಂಕ ಗುಣನಿಧಿ ನಾರಾಯಣ ಮಾಯೇಶಸಂಕರುಷಣ ಪ್ರದ್ಯುಮ್ನ ಅನಿರುದ್ಧಶ್ರೀಕರಾರ್ಚಿತ ಪಂಚರೂಪನ ಪ್ರೇರಣೆಯೆಂದುಮಾಕಳತ್ರನ ಸ್ಮರಿಸಿ ಹೊರಟರು ಹೊರಗೆ 5ಲೌಕಿಕ ವಿಷಯ ವಿಜೃಂಭಣಾಡಂಬರವಲೆಕ್ಕಿಸದೆ ವೈರಾಗ್ಯ ಮನಪಕ್ವದಿಭಕುತಿ ಉನ್ನಾಹದಿ ಅವಧೂತಚರ್ಯದಿಶ್ರೀಕರ ನಾರಾಯಣನ ಸೇವಿಸಿದರು 6ತೀರ್ಥಕ್ಷೇತ್ರಾಟನ ಮಾಡಲಿಕೆ ಹೊರಟರುಹಾದಿಯಲಿ ಸರ್ಪವು ಅಡ್ಡ ಬರಲುವೇದ್ಯವಾಯಿತು ಜಯತೀರ್ಥ ಮುನಿಗಳು ತಾವೇಬಂದು ತಡೆದರು ಸರ್ಪರೂಪದಲಿಯೆಂದು 7ಈ ಪುಣ್ಯ ಶ್ಲೋಕರು ಜಯತೀರ್ಥವಿಪ್ರಸರ್ಪರೂಪಶೇಷದೇವರ ಜಯಮುನಿಗಳಅಭಿಪ್ರಾಯವನ್ನರಿತು ಶಾಸ್ತ್ರಪ್ರವಚನಶಿಷ್ಯೋಪದೇಶದಿ ಹರಿಯ ಸೇವಿಸಿದರು 8ಮಲಾಪಹಾರಿಣಿ ತೀರಸ್ಥ ಮುನವಳ್ಳಿಶೀಲತಮ ಅಡವಿ ಪ್ರದೇಶ ಗ್ರಾಮದಲಿಕುಳಿತು ಶಿಷ್ಯರಿಗೆ ಸುಧಾದಿಗಳ ಪೇಳಿದರುಪೊಗಳ ಬಲ್ಲೆನೆ ಇವರ ಮಹಿಮೆಸಾಕಲ್ಯ9ಸುಮಧ್ವವಿಜಯ ಪಾರಾಯಣ ಮಾಡುತ್ತಕಲ್ಮಷ ಕಿಲುಬು ಹತ್ತಿದ ಪಾತ್ರೆಯನ್ನಕಲ್ಮಷ ಕಿಲಬನ್ನ ತ್ವರಿತದಿ ನೀಗಿಸಿಹೇಮಮಯ ಮಾಡಿದರು ಜನರು ಕಂಡಿಹರು 10ಹನ್ನೆರಡುಬಾರಿಸುಧಾದಿಗಳ ಪ್ರವಚನ ಮಾಡಿವಿನಯ ಸಂಪನ್ನಶ್ರದ್ಧಾಳು ಶಿಷ್ಯರಿಗೆಹನ್ನೆರಡಾವರ್ತಿ ಸುಧಾ ತತ್ವ ಪ್ರಕಾಶಿಕ ಪೇಳಿಘನಮಹಿಮ ಟಿಪ್ಪಣಿ ಮಾಡಿಹರು ಎರಡಕ್ಕೂ11ಭುಜಗಶಾಯಿ ಕ್ಷೀರಾಬ್ಧಿವಾಸನ ಪ್ರೀತಿಗೂಸುಜನಅಧಿಕಾರಿಗಳ ಉದ್ಧಾರಕ್ಕುರಚಿಸಿ ಗ್ರಂಥಗಳನ್ನ ಕೃತಕೃತ್ಯ ಮನದಲ್ಲಿರಾಜರಾಜೇಶ್ವರಿ ಶ್ರೀ ಹರಿಗರ್ಪಿಸಿದರು 12ಸತ್ಯಸಂಧಾರ್ಯರ ಹಸ್ತಪದ್ಮೋತ್ಪನ್ನಸತ್ಯವರ ತೀರ್ಥರ ಕರಕಂಜದಿಂದಜಯತೀರ್ಥಾಚಾರ್ಯರು ಕೊಂಡರು ತುರ್ಯಾಶ್ರಮತೋಯಜಾಕ್ಷಶ್ರೀ ವಿಷ್ಣುತೀರ್ಥ ನಾಮದಲಿ13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ನಮಹಾಭಕ್ತ ಶ್ರೀ ವಿಷ್ಣು ತೀರ್ಥಾರ್ಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-4ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಗುರುಗಳು ಏಕಾಂತದಲ್ಲಿ ಇತ್ತ ಉಪದೇಶಮರೆಯದೇ ಅನುಸರಿಸಿ ಭೀಮರತಿಯನ್ನುಸೇರಿ ವಿಹಿತದಿ ಸಂಕಲ್ಪಾದಿಗಳ ಮಾಡಿನೀರಲ್ಲಿ ಇಳಿದರು ಶ್ರೀನಿವಾಸಾಚಾರ್ಯ 1ಸರ್ವ ಜಗತ್ಪಾಲ ಶ್ರೀ ಪಾಂಡುರಂಗವಿಠ್ಠಲನುಪ್ರವಾಹ ಸುಳಿಯಿಂದ ಬಡುಗಾತ್ರ ಭಕ್ತನ್ನಕಾಯ್ವುದಕೆ ಗಂಡಾ ಶಿಲಾ ನಿರ್ಮಿಸಿದ ಅಲ್ಲಿದೇವಗುರುಸ್ಮರಣೆಯಿಂ ಇಳಿದರಾಚಾರ್ಯ2ನರಸಿಂಹ ವಿಠ್ಠಲದಾಸರು ತಂದೆಯಗುರುಗಳು ಗೋಪಾಲ ವಿಠ್ಠಲ ದಾಸರಪರಮಗುರುಗಳುವಿಜಯವಿಠ್ಠಲ ದಾಸರಪುರಂದರದಾಸರಾಜರ ಸ್ಮರಿಸಿದರು3ತೀರ್ಥಾಭಿಮಾನಿಗಳ ಭಾರತೀಪತಿಯಪದುಮೆ ಪದ್ಮೇಶ ಫಂಡರಿ ನಾಥ ಹರಿಯಮೋದಚಿನ್ಮಯ ಜಗನ್ನಾಥನ ಸ್ಮರಿಸುತ್ತಉದಕಪ್ರವಾಹದೊಳು ತನುವ ಅದ್ದಿದರು4ಸೀನಪ್ಪ ಶ್ರೀನಿವಾಸ ಶ್ರೀನಿವಾಸಪ್ಪ ಈಶ್ರೀನಿವಾಸಾಚಾರ್ಯ ಒಂದು ಸಲ ಮುಳುಗೇಳೆತನುಗತ ಒಳ ಹೊರಗಿನಕಲುಷಕಳೆದವುಪುನಃ ಮುಳಗೇಳಲು ಸುಪವಿತ್ರರಾದರು 5ಪುನಃ ಮುಳುಗಿ ಎದ್ದು ಅ ಘ್ರ್ಯವ ಅರ್ಪಿಸಲುಇನನ ಮಂಡಲದಿ ವರವಾಯು ಅಧಿಷ್ಠಾನದಲಿಶ್ರೀ ನಾರಾಯಣ ಸರ್ವಜನ ಹಿತಕರನಆನಂದ ಚಿನ್ಮಾತ್ರ ವಪುಷನ್ನ ಸ್ಮರಿಸಿದರು 6ಋಕ್ಸಾಮ ವೇದಗಳಿಂದ ವಾಣೀವಾಯುಸುಖಪೂರ್ಣ ನಾರಾಯಣನ ಸ್ತುತಿಸುವರುಆಕಳಂಕ ಉನ್ನಾಮಸಾಮನಾಮ ಹೀಂಕಾರಶ್ರೀಕೃತಿಪತಿ ಪ್ರದ್ಯುಮ್ನಾದಿ ಸ್ವರೂಪ 7ಸಪ್ತಕಾಲದಿ ಸಪ್ತಸಾಮ ಪ್ರತಿಪಾದ್ಯನುಸಪ್ತಸ್ವರೂಪನು ಆದಿತ್ಯಾಂತಸ್ತಪ್ರದ್ಯುಮ್ನವಾಸುದೇವವರಾಹನಾರಾಯಣಅನಿರುದ್ಧ ನರಸಿಂಹ ಸಂಕರುಷಣ 8ಪರಮಗುರುವಿಜಯದಾಸಾರ್ಯರ ಪ್ರೇರಣೆಯಿಂದಗುರುಗಳು ಗೋಪಾಲದಾಸಾರ್ಯರುಅರುಪಿದಅನುಸಂಧಾನಕ್ರಮದಿಂದಲೇಗುರುತಮ ಸಮೀರನಲಿ ಹರಿಯ ಸ್ಮರಿಸಿದರು 9ಸೂರ್ಯನೊಳಿಪ್ಪಸಮೀರಅಧಿಷ್ಠಾನಸ್ಥಸೂರಿಜನ ಪ್ರಾಪ್ಯ ಋಕ್ ಸಾಮಾದಿಸ್ತುತ್ಯಸೂರ್ಯತೇಜಃ ಪುಂಜ ಸ್ಫೂರ್ತಿದ ಜಗತ್ಕರ್ತ ಶ್ರೀಶ್ರೀನಾರಾಯಣಗಘ್ರ್ಯ ಅರ್ಪಿಸಲು ಒಲಿದ 10ಝಗಝಗಿಪ ತೇಜಸ್ಸು ಶಿರೋಪಕಂಡರುಮೂಗಿನಿಂದೊಂದಡಿ ಶಿರದ ಮೇಲೆಜಗನ್ನಾಥವಿಠ್ಠಲ ಎಂದು ಪ್ರಜ್ವಲಿಸಿತುಹೇಗೆ ವರ್ಣಿಸುವೆ ಆ ಅದ್ಭುತ ದೃಶ್ಯ 11ಸರ್ವ ಜಗದ್ರಕ್ಷಕ ವಿಠ್ಠಲನು ತತ್ಕಾಲಪ್ರವಾಹವ ತಡೆಯಲು ನಿರ್ಮಿಸಿದ ಶಿಲೆಯುಪ್ರಜ್ವಲಿಪ ಈ ದಿವ್ಯ ಹರಿನಾಮ ಅಂಕಿತಕ್ಕೆಐವತ್ತು ಅಂಗುಲ ಹಿಂದೆ ನಿಂತಿತ್ತು 12ಕ್ಷಣಮಾತ್ರದೊಳಗೆ ಈತಟಿತ್ಕೋಟಿನಿಭಜ್ಯೋತಿಫಣೆಮುಂದೆ ನಿಂತಿತು ಆಗ ಆಚಾರ್ಯಚೆನ್ನಾಗಿ ನೋಡಿದರುಹರಿಇಚ್ಛಾಶಕ್ತಿಯಿಂಶ್ರೀನಿವಾಸವಿಜಯಗೋಪಾಲ ವಿಠ್ಠಲನ13ಶ್ರೀ ಶ್ರೀನಿವಾಸನೇವಿಜಯವಿಠ್ಠಲನಾಗಿಶ್ರೀ ಶ್ರೀನಿವಾಸ ಗೋಪಾಲ ವಿಠ್ಠಲನಾಗಿಶ್ರೀ ಶ್ರೀನಿವಾಸ ಶ್ರೀ ಜಗನ್ನಾಥ ವಿಠ್ಠಲನಾಗಿಶಿರಿ ಜಗನ್ನಾಥ ದಾಸಾರ್ಯರು ನೋಡಿದರು 14ಶ್ರೀ ಶ್ರೀನಿವಾಸನೆ ಪ್ರಸನ್ನನು ಆಗಿತೋರಿಹನು ಜಗನ್ನಾಥ ವಿಠಲನೆನಿಸಿತಿರುಪತಿ ಶ್ರೀನಿಧಿಯೇ ಪಂಡರಿ ವಿಠ್ಠಲನುಸೂತ್ರನೋಡಿ ನಸ್ಥಾನ ತೋಪಿ15ಶ್ರೀ ರುಕ್ಮಿಣೀಪತಿ ಪರಂಜ್ಯೋತಿ ಪರಂಬ್ರಹ್ಮಉರುಅಖಿಳಸಚ್ಛಕ್ತ ಜಗನ್ನಾಥ ವಿಠ್ಠಲಶಿರಿ ಜಗನ್ನಾಥದಾಸರ ಹೃದಯ ¥ದ್ಮದೊಳುಸೇರಿದನು ಜ್ವಲಿಸುತಿಹ ಸರ್ವೋತ್ತಮ ಅಲ್ಲಿ 16ಎಂಟುಅಕ್ಷರಮೂಲಮಂತ್ರದಿ ನಾರಾಯಣನವಿಠ್ಠಲ ಹಯಗ್ರೀವ ವೆಂಕಟೇಶಾದಿಷಡಕ್ಷರಿ ವಿಷ್ಣು ರಾಮ ಕೃಷ್ಣಾದಿಗಳಕ್ರೋಡನರಸಿಂಹಾದಿಗಳನು ಜಪಿಸಿದರು17ಗುರುಪರಮಗುರುಪೇಳ್ದ ರೀತಿಯಲಿ ಜಪಚರಿಸಿಶ್ರೀ ರುಕ್ಮಿಣಿ ವಿಠ್ಠಲ ಮಂದಿರಕೆ ಪೋಗಿಪುರಂದರಾರ್ಯರ ನಮಿಸಿಗುರುಪರಮಗುರುಗಳಸ್ಮರಿಸಿ ಒಳಪೊಕ್ಕರು ವಿಠ್ಠಲನ್ನ ನೋಡೆ 18ಶ್ರೀ ಮಧ್ವರಮಣ ನಿನ್ನ ಅದ್ವಿತೀಯ ಮಹಿಮೆಈ ಮಹೋತ್ತಮಕೃತಿಪುರಂದರದಾಸರದುಅಮಲ ಭಕ್ತಿಯಲ್ಲಿದನ್ನ ಅರ್ಥ ಅರಿತು ಪಠಿಸಿಶ್ರೀಮಂದಿರದೊಳು ಪ್ರವೇಶ ಮಾಡಿದರು 19ತ್ರಿಜಗದೀಶನಪಾದಪದ್ಮಗಳ ನೋಡುತ್ತನಿಜಭಕ್ತಿ ಭಾವದಲಿ ಸಾಷ್ಟಾಂಗ ನಮಿಸಿಅಜಭವೇಂದ್ರಾದಿ ಸುರವಂದ್ಯನ್ನ ಕೇಶಾದಿರಾಜೀವಪಾದಾಂತ ದರುಶನ ಮಾಡಿದರು20ಜ್ವಲಿಸುವ ಕಿರೀಟ ಸುಳಿಗುರುಗಳು ಫಣಿಯ ತಿಲಕಬಿಲ್ಲುವೋಲ್ ಸುಂದರ ಭ್ರೂ ಮುಖಕಮಲಜಲಜೇಕ್ಷಣ ಮುಗುಳುನಗೆಯು ತಟಿದಂದಿಪೊಳೆವ ಕುಂಡಲಕರ್ಣ ಕಂಬುಗ್ರೀವ 21ವನಮಾಲೆ ಎಳೆ ತುಳಸಿದಳ ಹಾರ ಕೊರಳಲ್ಲಿಘನಬಾಹು ವಿಸ್ತಾರವಕ್ಷ ಶ್ರೀವತ್ಸಸ್ವರ್ಣಮಣಿ ಗ್ರೈವೇಯಕೌಸ್ತುಭರತ್ನವುಕಣ್ಣಾರ ಕಾಣಲಾನಂದ ಸೌಂದರ್ಯ 22ಮೂರುಗೆರೆ ಉದರದಲಿವನರುಹನಾಭಿಯುಕರಗಳು ಕಟಿಯಲ್ಲಿ ಶಂಖಾರವಿಂದಪುರುಟಮಣಿ ಗಣಸೂತ್ರ ಪೀತಾಂಬರ ಉಡಿಸ್ಫುರದ್ರತ್ನ ನೂಪುರ ಸಮಪಾದದ್ವಯವು 23ತಟಿತ್ಕೋಟಿನಿಭ ತನ್ ಕಾಂತಿಯಲಿ ಜ್ವಲಿಸುವಸಾಟಿಯಿಲ್ಲದ ಸುಂದರಾಂಗ ಶ್ರೀರಮಣವಿಠ್ಠಲ ಕೃಪಾನಿಧಿ ಶರಣಜನ ಪಾಲನ್ನಹಾಡಿ ಸ್ತುತಿಸಿದರು ಜಗನ್ನಾಥ ದಾಸಾರ್ಯ 24ಫಣಿಪಶಾಯಿಯ ಅನಂತ ಪದ್ಮನಾಭನು ತನ್ನಆನಂದಲೀಲೆಯಲಿ ಜಗವ ಪಡೆಯುವನುಆನಂದಲೀಲೆಯಲಿ ಅವತಾರ ರೂಪಗಳತಾನೇ ಪ್ರಕಟಿಸಿ ಸಜ್ಜನರ ಪಾಲಿಸುವ 25ದೇಶಗುಣಕಾಲ ಅಪರಿಚ್ಛಿನ್ನನು ಅನಂತನುಶ್ರೀಶಸರ್ವೇಶ ಚಿನ್ಮಯನುಅನಘಐಶ್ವರ್ಯ ಪೂರ್ಣಜಗದೇಕ ಪಾಲಕನುಅಸಮ ಸರ್ವೋತ್ತಮನು ಸುಖಮಯನು ಸುಖದ 26ಮೀನಕೂರ್ಮಸ್ತ್ರೀ ಅಜಿತ ಧನ್ವಂತರಿಕ್ರೋಢಶ್ರೀನಾರಸಿಂಹ ವಟುಭೃಗು ರಾಮರಾಮಕೃಷ್ಣ ಜಿನಸುತ ಕಲ್ಕಿ ಠಲಕ ವೆಂಕಟರಮಣಆನಂದಚಿತ್ತನು ಅನಂತ ಅವತಾರ 27ದಾಸೋಹಂ ತವ ದಾಸೋಹಂ ಎಂದುದಾಸವರ್ಯರು ಬಿನ್ನೈಸಿ ಸ್ತುತಿಸಿದರುನಸುನಗುತ ವಾತ್ಸಲ್ಯದಿಂದ ವಿಠ್ಠಲನುವಿಶೇಷಾಪರೋಕ್ಷ ಅನುಗ್ರಹಿಸಿದನುದಯದಿ 28ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್ಕು ವಿದಿಕ್ಕುಗಳ ರಂಜಿಸುವರೂಪದಿಂದ ಪಾಲ್ಗಡಲಲಿ ಆವಿರ್ಭವಿಸಿದ ಶ್ರೀಇಂದಿರೆಯೆ ರುಕ್ಮಿಣಿ ಸೌಂದರ್ಯಪೂರ್ಣೆ 29ಮಾಯಾಜಯಾಕೃತಿಶಾಂತಿ ಸೀತಾಲಕ್ಷ್ಮಿತೋಯ ಜಾಲಯ ಚಿತ್ಪ್ರಕೃತಿ ಭೂದುರ್ಗಾತೋಜಯಾಕ್ಷಿವೇದವತಿದಕ್ಷಿಣಾ ಶ್ರೀಜಯಂತಿ ಸತ್ಯಾರುಕ್ಮಿಣಿ ಸುಂಧುಕನ್ಯಾ 30ಸರ್ವ ಜಗಜ್ಜನನಿಯು ಸರ್ವ ವಿಧದಲಿ ಹರಿಯಸೇವಿಸುತಿಹಳು ಸದಾ ನಿತ್ಯಾವಿಯೋಗಿನಿದೇವದೇವೋತ್ತಮ ರಾಜರಾಜೇಶ್ವರನು ವಿಠ್ಠಲನುದೇವಿ ಶ್ರೀ ರಾಜರಾಜೇಶ್ವರಿಯು ರುಕ್ಮಿಣಿಯು 31ಜ್ವಲಿಸುವ ಮುತ್ತು ನವರತ್ನದಿ ಕಿರೀಟಒಳ್ಳೆ ಪರಿಮಳ ಹೂವು ಮುಡಿದಂತ ತುರುವುಫಾಲದಲಿ ಶ್ರೇಷ್ಠತಮ ಕಸ್ತೂರಿ ತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬೊಟ್ಟು 32ಅಂಬುಜಾಕ್ಷಿ ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯದ ಕೃಪಾನೋಟಕಂಬುಕಂಠದಿ ಮಂಗಳಸೂತ್ರಕರಯುಗದಿಅಂಬುಜವರಕೊಡುವಅಭಯಹಸ್ತಗಳು33ಕಂಧರದಲಿ ಪರಿಮಳಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟೆವಸ್ತ್ರವು ಸ್ವರ್ಣಸರ್ವಾಭರಣ ಭೂಷಣವುಪಾದಉಂಗುರ ಪೆಂಡೆ ಕಂಡು ನಮಿಸಿದರು34ಜಗನ್ನಾಥ ವಿಠ್ಠಲನೂ ಜಗನ್ಮಾತೆ ರುಕ್ಮಿಣಿಯೂಜಗನ್ನಾಥದಾಸರಿಗೆ ಔತಣ ಮಾಡಿದ್ದುಜಗತ್ತಲ್ಲಿ ಭಕ್ತಜನರೆಲ್ಲ ಪೇಳ್ತಿಹರುಜಗದೀಶ ಪಂಢರೀ ವಿಠ್ಠಲನ ಮಹಿಮೆ 35ಕೇಶವ ನಾರಾಯಣಮಾಧವಗೋವಿಂದಶ್ರೀಶ ವಿಷ್ಣು ಮಧುಸೂದನ ತ್ರಿವಿಕ್ರಮಈಶ ವಾಮನ ಶ್ರೀಧರ ಹೃಷಿಕೇಶರಮೆಯರಸಪದ್ಮನಾಭದಾಮೋದರ36ಸಂಕರುಷಣ ವಾಸುದೆವ ಪ್ರದ್ಯುಮ್ನ ನಮೋಅಕಳಂಕ ಅನಿರುದ್ಧ ಪುರುಷೋತ್ತಮನಿಷ್ಕಳಅಧೋಕ್ಷಜನರಸಿಂಹಅಚ್ಯುತಶ್ರೀಕರ ಜನಾರ್ದನ ಉಪೇಂದ್ರ ಹರಿಕೃಷ್ಣ 37ರಮಾಪತಿ ರಮಾಯುತನು ಶ್ರೀಹರಿಯ ರೂಪಗಳಬ್ರಹ್ಮವಾಯು ವಾಣೀಭಾರತಿ ಉಮೇಶಉಮಾ ತತ್ವದೇವದಿಕ್ಪಾಲಕರು ಗಂಗಾಕರ್ಮಮಾನಿ ಪುಷ್ಕರಾದಿಗಳೊಳ್ ತಿಳಿದರು 38ಭೋಜನ ಪದಾರ್ಥದಲು ತದ್ಗತ ಶಬ್ದಂಗಳಲುಭೋಜ್ಯಗಳ ಬಡುಸುವರಲ್ಲೂ ಕ್ಷೇತ್ರದಲ್ಲೂಭೋಜಭಿಮಾನಿಗತ ಖಂಡಾಖಂಡಗನುಭಜನೀಯ ಸ್ಥೂಲಭುಕ್ ಅವ್ಯಯನ ಕಂಡರು 39ಕರುಣಾಬ್ಧಿ ಶ್ರೀ ಹರಿಯ ಔದಾರ್ಯ ಏನೆಂಬೆಶ್ರೀ ಶ್ರೀನಿವಾಸನು ಅಂದು ತಿರುಪತಿಯಲ್ಲಿಶಿರಿ ವಿಜಯಾರ್ಯರ ರೂಪದಿ ಪ್ರೇರಿಸಿಧಾರೆಯೆರಿಸಿದ ಆಯಸ್ ಗುರುಗಳ ಕೈಯಿಂದ 40ಶ್ರೀ ಶ್ರೀನಿವಾಸನ ಮಹಾದ್ವಾರಕೆದುರಾಗಿಹಾರೆ ಕಲ್ಲುಮಂಟಪ ಆಗ್ನೇಯ ದಿಕ್ಕುಎರಡನೆಯದೋ ಮೂರನೆಯದೋ ಅಂಕಣದ ಖೋಲಿಹರಿದಾಸರು ಇದ್ದ ಮುಖಾಮಿ ಬಿಡಾರ 41ಎಳೆಕೆಂಪು ರೋಜ ಊದಾವರ್ಣದಿ ಅಂಚುಬಿಳಿರೇಷ್ಮೆ ವಸ್ತ್ರವ ಮೇಲ್ ಹೊದ್ದುಕೊಂಡುಮಲಗಿ ಚಲಿಸದೆ ನಿತ್ರಾಣನಾಗಿದ್ದವಗೆಒಲಿದು ಆಯುರ್ದಾನ ಮಾಡಿಸಿದ ಕರುಣಿ 42ಗುರುಗಳು ಗೋಪಾಲದಾಸರ ರೂಪದಿಂದ ಬಂದುಶಿರಿವರನು ತಾನೇನೆ ಅನ್ನಪ್ರಸಾದಕರದಲ್ಲಿ ಇತ್ತನು ಅವನೇವೆಇಂದುಶಿರಿಸಹ ಅಮೃತಾನ್ನ ಔತಣವನ್ನಿತ್ತ 43ಶಿರಿಯ ವಾತ್ಸಲ್ಯ ದಯೆ ಏನೆಂದು ಪೇಳಲಿಚಾರುದೇಷ್ಣಾಹ್ವಯ ತನ್ನಸುತ ಈಗವರಗೋಪಾಲದಾಸರುಅವರಶಿಷ್ಯರಿವರೆಂದು ಪ್ರೀತಿಯಲಿ ಔತಣ ಮಾಡಿಹಳು 44ಈ ರೀತಿ ಹರಿಶಿರಿ ಇತ್ತ ಔತಣ ಮತ್ತುಹರಿಯ ಕೈಯಿಂದ ಹರಿಗರ್ಪಿತ ಮಾಲಾದಿಹರಿಪ್ರಸಾದವ ಕೊಂಡು ಫಂಡರಿಪುರದಿಂದಹೊರಡಲಾದರು ಜಗನ್ನಾಥದಾಸಾರ್ಯ 45ನರಸಿಂಹಾದಾಸಾರ್ಯರಾದ ತನ್ನ ತಂದೆಗೆಗುರುಗಳುಪುರಂದರದಾಸಾರ್ಯರೆಂದುಪರಮಗುರುವಿಜಯದಾಸಾರ್ಯರ ಗುರುಯೆಂದುಚರಣವಂದಿಸಿ ಹೊರಡೆ ಅಪ್ಪಣೆ ಕೊಂಡರು46ಪರಮಗುರು ವಿಜಯದಾಸಾರ್ಯರ ಸ್ಥಳಕೆಸ್ಮರಣೆ ಪೂರ್ವಕ ಮನಸಾ ಪೋಗಿ ಸನ್ನಮಿಸಿಗುರುಗಳಚರಣಆಕಾಂಕ್ಷಿಗಳು ತ್ವರಿತದಿಹೊರಟರು ಶ್ರೀ ಜಗನ್ನಾಥನ್ನ ಸ್ಮರಿಸುತ್ತ 47ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 48- ಇತಿ ಪಂಚಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು