ಒಟ್ಟು 2158 ಕಡೆಗಳಲ್ಲಿ , 105 ದಾಸರು , 1685 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಆತನೇ ದಾತನು ಯೆತ್ತಿಕೊಡುವವನು ಭೂತದಯೆಯುಳ್ಳಂಥ ಪುಣ್ಯಾತ್ಮನು ಪ ನಿಂದು ಕೀರ್ತಿಯೆ ಪಾಡೆ ದೇಹಿಯನ್ನುತ ಬೇಡೆ ಸಿಂಧು ಜಲದಲಿ ಮಿಂದು ಭಜಿಸಲಾಗ ಬಂಧನವ ಪರಿಹರಿಸಿ ಬಹು ಪ್ರೀತಿಯಿಂದೆನಗೆ ಬಂದಿರುವ ಕಷ್ಟಗಳ ನೀಗುವರು ಯಾರೋ 1 ನಿತ್ತು ಶ್ರೀ ಹರಿಭಜಿಸೆ ಕೂತು ಶ್ರೀ ಹರಿಸ್ಮರಿಸೆ ತಾತನೇ ಗತಿಯೆಂದು ಪಾದದಲಿ ಬೀಳೇ ಹೊತ್ತು ನೋಡದೆ ಮುದದಿ ಭಿನ್ನವೆಣಿಸದೆಯನಗೆ ಯೆತ್ತಿ ಮೋಕ್ಷವ ಬೇಗನೀವ ನಾರೋ 2 ನಾನು ಬಡವನು ಜಗದಿ ದೀನಹೀನನು ಹರಿಯೆ ಏನು ಗತಿಯೆಂದೆನುತ ಚರಣ ಮರೆ ಹೊಕ್ಕೇ ಪಾನ ಮಾಡುತಲೆನ್ನ ಅವಗುಣವ ನೀಗೆನಗೆ ತಾನೆ ಭಿಕ್ಷವು ಬೇಗನೀವ ನಾರೋ 3 ಭಜನೆ ಸ್ತೋತ್ರಗಳರಿಯೆ ಪೂಜೆ ವಿಧಿಯನು ತಿಳಿಯೇ ಅಜನ ಪಿತ ಶ್ರೀಹರಿಯ ಮೆಚ್ಚಿಸಲು ಅರಿಯೇ ಸುಜನರನು ಪೊರೆವಂತೆ ಸಲಹುವನು ಯಾರೋ 4 ನಾನು ಪಾಪಿಯು ಋಣಿಯು ಕ್ಲೇಶವನು ತೊರೆದೀಗ ಇನ್ನು ಮರೆಯದೆ ನಿನ್ನ ದಾಸನಾಗುವೆನು ಚನ್ನಕೇಶವ ಸ್ವಾಮಿ ರಕ್ಷಿಸೆಂದೊದರುತಿರೆ ಪ್ರಾಣವನು ಯತ್ತೆನ್ನ ಸಲಹುವನು ಯಾರೋ 5
--------------
ಕರ್ಕಿ ಕೇಶವದಾಸ
ಆತ್ಮನಿವೇದನೆ ಏನು ಕಾರಣವೆನಗೆ ತಿಳಿಯಲಿಲ್ಲದೀನ ರಕ್ಷಕನಾದ ಹರಿಯೆ ತಾ ಬಲ್ಲ ಪ ಕಾನನದೊಳಗೆ ಕಡುತಪಿಸಿ ತೃಷಿಯಾದವಂಗೆತಾನಾಗೆ ಮೋಡೊಡ್ಡಿ ಮೇಘ ಕವಿದುನಾನು ಧನ್ಯನೆಂದು ನರ್ತಿಸುವ ಸಮಯದಲಿಕಾಣದೇ ಪೋಯಿತು ಬಿಂದು ಮಾತ್ರ 1 ಪಾದ ಭಜನೆಯನ್ನುಹರುಷದಲಿ ಪಾಡಿ ಹಗಲಿರುಳು ಪ್ರಾರ್ಥಿಸುವಂಗೆಪುರುಷಾರ್ಥ ಪೂರೈಸಿ ಬಾರದಿಪ್ಪ ಬಗಿಯು 2 ಅನ್ನಾದಿಯಿಂದ ಅನ್ನಂತ ಜನ್ಮದಿ ಬಂದುಉನ್ನಂತ ಮಾಡಿದ ಪಾಪರಾಶಿ-ಯನ್ನು ಉಣದನಕ ಭೂವನ್ನದೊಳು ಮತ್ತೆ ಪಾ-ವನ್ನರಾ ಪಾದಗಳು ಪಡೆಯಲರಿಯದೊಯೇನೊ 3 ಅನ್ನಾಥ ಬಂಧು ಹರೆಯೆನ್ನುವಾ ಬಿರುದಿಗೆನಿನ್ನಂಥ ಮಹಿಮನಾ ಕರೆದು ವೊಂದೂಎನ್ನಂಥ ಪರಮ ಪಾತಕಿಯನುದ್ಧರಿಸಿತಾ-ಸನ್ನಗೊಳಿಸಿ ಸತತ ಸಲಹದಿಹುದು ಏನು 4 ಅರಸಿನಾಲೋಚನಿಯು ಸತತ ಸನ್ನಿಧಿಯೊಳನು- ಸರಿಸಿದ ಆಳುಗಳು ಬಲ್ಲ ತೆರದಿಸರಸಿಜ ನಯನ ವೆಂಕಟ ವಿಠಲನ ಪಾದಸರಸಿಜದಿ ಸರಸರೊಳು ನಲಿದು ನೀ ಬಾರದಿಹುದು 5
--------------
ವೆಂಕಟೇಶವಿಟ್ಠಲ
ಆತ್ಮನಿವೇದನೆ ಕರುಣದಿಂದಲಿ ಪೊರೆಯೊ ನೀ ಎನ್ನ| ನರಹರಿಯೆ ಮುನ್ನ | ಚರಣಕಮಲವ ಸ್ಮರಿಸುವೆನು ನಿನ್ನ ಪ ಪೊರೆಯಬಾರದೆ ಶರಣು ಶ್ರೀಹರಿಅ.ಪ ಗೋಪಾಲಕೃಷ್ಣ| ಗೋಪಸ್ತ್ರೀಯರ ಹರುಷಗೊಳಿಸಿದೆ|| ವೃಂದದಿ ನಲಿದು ಮೆರೆದೆ| ದ್ರುಪದ ಸುತೆಯಳಿಗಿತ್ತ ಶ್ರೀಹರಿ 1 ಗೋವೃಂದ ಸಲಹಿ| ಗೋವಿಂದಾಭಿಧಾನವನು ಪಡೆದೆ|| ರವನು ಹೀರಿದ ಕರುಣಿ ಶ್ರೀಹರಿ 2 ಇಂದೀವರಾಭನೆ| ಬಂಧುಬಾಂಧವರಾರು ಹಿತರಲ್ಲ|| ಇಂದಿರೇಶನೆ ನಿನ್ನ ಚರಣ| ದ್ವಂದ್ವದೊಳು ಮನವಿತ್ತೆನಾಪ | ದ್ಬಂಧುವಾದರೆ ಪ್ರೇಮವಿರಿಸುತ || ಬಂಧಗಳ ಪರಿಹರಿಸುತೆನ್ನನು 3 ಪತಿತಪಾವನ ಈಶ ಸರ್ವೇಶ| ಮಹಶೇಷಶಯನ | ಹಿತವಿಧಾಯಕ ಸರ್ವಭೂತೇಶ|| ದೊರಕುವ ತೆರದೊಳನುದಿನ 4 ಶ್ರೀಕಾಂತ ಸಲಹೈ| ಲೋಕಭರಿತನೆ ಸುಖವಿಧಾಯಕನೆ|| ಲೋಕವಂದಿತ ಲೋಕನಾಥಾ | ನಾಕಿವಂದಿತ ಭಕ್ತವತ್ಸಲ 5 ನಿನ್ನ ಪಾದವ ನಂಬಿ ನಾನಿಹೆನು| ದೇವಾದಿದೇವಾ| ನಿನ್ನ ನಾಮಾವಲಿಯ ಸ್ಮರಿಸುವೆನು|| ಮುನ್ನ ಮಾಡಿದ ಪಾಪವೆಲ್ಲವ| ನಿನ್ನ ನಾಮ ಸ್ಮರಣದಲಿ ಸಂ| ಪೂರ್ಣ ಪರಿಹರಗೊಳಿಸಿ ನಿನ್ನಯ| ಸನ್ನುತಾಂಘ್ರಿಯ ಸೇವೆಗಿರಿಸುತ 6
--------------
ವೆಂಕಟ್‍ರಾವ್
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಆದಿದೇವ ನಿನ್ನೊಲುಮೆಯೊಂದಾದರೆ ಮೇದಿನಿ ವೈಕುಂಠ ಎನ್ನಿಸದೆ ಪ ವೇದವೇದ್ಯ ನಿನ್ನಾದರವಿರದಲೆ ಮೇದನಿ ಬೂದಿಯಾಗದಿಹುದೇ ಅ.ಪ ಹೂವಿಗೆ ಗಂಧವ ಎರೆದವರಾರೋ ಬೇವಿಗೆ ಕಹಿಯನು ಕೊಟ್ಟವರಾರೋ ಜೀವಿಗಳೆಲ್ಲಾ ಸಲಹುವರಾರೋ ಸಾವು ನೋವುಗಳ ಬಿಡಿಸುವನಾರೋ 1 ದೇವರಿಗಮೃತವ ಕೊಟ್ಟವನಾರೋ ಹಾವಿನ ಹಾಸನು ಪಡೆದವನಾರೋ ಭಾವದನೆಲೆಯ ಮಾಂಗಿರಿಪತಿಯೆಲೆ ಕಾವನು ಕೊಲ್ವನು ನೀನಲ್ಲದಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆದಿಮೂಲ ಪಾಲಯಾ ಮಾಂ ಪ ವೇದವೇದ್ಯ ಕರುಣೋದಧಿ ಎನ್ನಪ- ರಾಧಗಳೆಣಿಸದೆ ಮೋದದಿ ಸಲಹೊ ಅ.ಪ. ಜಗದುತ್ಪತ್ತಿ ಸ್ಥಿತಿಲಯ ಕಾರಣ ಅಘಹರ ಅನಿಮಿಷ ಪೂಜಿತ ಚರಣ1 ಪರಮ ಪುರುಷ ಪರಮಾತ್ಮ ಪರಾತ್ಪರ ದುರಿತ ವಿದೂರ 2 ಸಕಲ ವ್ಯಾಪಕ ಸುಖನಿರವಧಿಕ ಮುಕುತಿದಾಯಕ ಮೂರ್ಜಗನಾಯಕ 3 ಆರ್ತಬಂಧು ಲೋಕೋತ್ತರ ಮಹಿಮ ಕೃ- ತಾರ್ಥನ ಮಾಡು ಪವಿತ್ರ ಚರಿತ್ರ 4 ಪರಿಪರಿ ಜನ್ಮದ ಪರಿಭ್ರಮಣೆಯ ನೀ ಪರಿಹರಿಸೈ ಶ್ರೀ ಕರಿಗಿರೀಶನೇ 5
--------------
ವರಾವಾಣಿರಾಮರಾಯದಾಸರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನಂದಕರಮಾದ ಇಂದಿರಾರ್ಯ ತವ ಧ್ಯಾನಾನಂದೆನಗೆ ದಯಪಾಲಿಸು ಪ ನೊಂದೆ ಭವದೊಳು ಬಿದ್ದು ಮಂದನಾಗಿ ತಿಳಿಯದೆ ಅಂದಮಾದ ತವ ಮಹಿಮೆಯ ದೇವ ಅ.ಪ ಕಾಣುವ ಜಗವೆಲ್ಲ ಏನೆಂಬ ನಿಜತವನು ನಾನರಿಯದೊರಲುತಿಹೆನು ನಾನಿಲ್ಲದಮೊದಲು ಏನಿತ್ತು ಎಂಬುದನು ನಾನೆಂತು ತಿಳಿಯುವೆನು ನಾನು ಯಾರೆಂಬ ನಿಜ ಖೂನವರಿಯದೆ ಬಲು ಹೀನತೆಗೆ ಬಂದಿದ್ದೆನು ನೀನೆ ಸ್ವತಂತ್ರಖಿಲ ದೀನಗರಿವಿಕೆ ನೀಡಿ ಜ್ಞಾನದಿಂ ಪೊರೆ ದಯದಿ ಜವದಿ 1 ಎಲ್ಲಿರ್ದೆಮೊದಲು ನಾನೆಲ್ಲಿಂದ ಬಂದೆ ಮ ತ್ತೆಲ್ಲಿಗೆ ಪೋಗುವೆನು ಎಲ್ಲಿರುವೆ ಈಗ ನಾನೆಲ್ಲಿಂದ ನುಡಿಯುವೆನು ಎಲ್ಲಿಗೆ ಕೊಡುವೆನು ಎಲ್ಲನಿಂದಿದರೊಳಗೆ ಇಲ್ಲದ್ದು ಕಲ್ಪಿಸಿ ಎಲ್ಲಿಂದ ಕಾಂಬುವೆನು ಎಲ್ಲಿಟ್ಟಿರುವಿದರ ಸಲ್ಲಲಿತ ಸೂತ್ರವನು ಪುಲ್ಲನಾಭ ದಯಪಾಲಿಸು ತಿಳಿಸು 2 ಆರೊಂದುಗೇಣಿನಾಪಾರ ಸೂತ್ರದಗೊಂಬೆ ಆರಿಂದಲಾಗಿಹ್ಯದು ಸೋರುತಿಹ್ಯ ಒಂಬತ್ತು ದ್ವಾರಹಚ್ಚಲು ಇದರ ಕಾರಣವೇನಿಹ್ಯದು ತೋರುವುವು ಇದರೊಳಗೆ ಮೂರುವಿಧಮಾಗಿ ಆರಸಾಕ್ಷದಕ್ಕಿಹ್ಯದು ತೋರದೇನೇನಿದರ ತಾರತಮ್ಯಜ್ಞಾನ ಸುವಿ ಚಾರ ಎನಗೊಲಿದು ತಿಳುಹು ಸಲಹು 3 ಕಾಲು ಕಯ್ಯಿಗಳಾಡಿ ಬೀಳುವೇಳುವ ಮೂಲ ಕೀಲಿಯೆಲ್ಲಿರುತಿಹ್ಯದು ಜ್ಯಾಲದಂದದಿ ಹರಕು ಚೀಲದೊಳು ತುಂಬಿರುವ ಗಾಳ್ಯೆಂತುನಿಂತಿಹ್ಯದು ಕಾಲಮಹಿಮ ನೀ ಗೈದ ಮೇಲುಯಂತ್ರದಿ ಇಂದ್ರ ಜಾಲವೇ ತುಂಬಿಹ್ಯದು ಕಾಲಚಕ್ರನ ಮಹ ದಾಳಿಯನು ಗೆಲಿಸಿ ತವ ಲೀಲೆಯೊಳೆನ್ನಾಡಿಸು ಪಾಲಿಸು 4 ಬಂಧರೂಪಕಮಾದ ದಂದುಗದ ಭವವು ದಾ ರಿಂದಲುತ್ಪತ್ತಿ ಯಾಯ್ತು ಸತಿ ಸುತರು ಬಂಧಬಳಗ ಎ ಲ್ಲಿಂದ ಬಂದಿವಗೆ ಜೊತೆಗೂಡಿತು ಒಂದಕ್ಕೊಂದರ ಸಂಬಂಧವೇ ಇಲ್ಲಿವಗೆ ಬಂಧ ಮತ್ತೆಲ್ಲೊದಗಿತು ನಿಂದುನೋಡಲು ಸಕಲ ತಂದೆ ಶ್ರೀರಾಮ ನಿನ್ನಿಂದ ಕಂಡು ನಿನ್ನೊಳೈಕ್ಯ ಮಾಯ ಖರೆಯ 5
--------------
ರಾಮದಾಸರು
ಆನಂದನಿಲಯ ವಿಠ್ಠಲನೆ | ನೀನಿವಳ ಸಲಹಬೇಕೊಜ್ಞಾನಗಮ್ಯನೆ ದೇವ | ಮೌನಿಮಧ್ವರ ಹೃದಯಾ ಪ ಪಾದ ಸೂಸಿ ಸೇವಿಪಳೋ |ವಾಸುಕೀಶಯನ ಮ | ಧ್ವೇಶ ತವಪದ ಕಮಲದಾಸಳೆಂದೆನಿಸುತ್ತ | ನೀ ಸಲಹೊ ಹರಿಯೇ 1 ಉದ್ಯೋಗ ವ್ಯವಹಾರ | ವಿದ್ಯೆಯಲಿ ಚಾತುರ್ಯಮಧ್ಯೆ ಮಧ್ಯೇ ಬರುವ | ಹೃದ್ರೋಗಗಳು ಸರ್ವಪ್ರದ್ಯುಮ್ನ ತವ ಸೇವೆ | ಎಲ್ಲ ಇವು ಎಂಬಂಥಶುದ್ಧ ಜ್ಞಾನವಿತ್ತು | ಉದ್ಧರಿಸೊ ಹರಿಯೇ 2 ಭವ ಕಳೆಯೋಈರ ಕರುಣಾ ಪಾತ್ರ | ಗೌರಿಪತಿ ಶಿವವಂದ್ಯಗೌರಿದೇವಿಯ ಅಭಯ | ತೋರ್ದೆ ಸ್ವಪ್ನದಲೀ3 ಪತಿಸೇವೆ ಇತ್ತಿವಳ | ಕೃತಕಾರ್ಯಳೆಂದೆನಿಸುಹಿತಮಿತ್ರ ಪಿತೃಮಾತೃ | ಬಂಧು ಬಳಗದಲೀ |ಕೃತಿಪತಿಯು ಸರ್ವರಲಿ | ವ್ಯಾಪ್ತನಾಗಿಹನೆಂಬಮತಿಯಿತ್ತು ಸಲಹಿವಳ | ಗತಿ ಪ್ರದನೆ ಹರಿಯೇ 4 ಗುರುಧರ್ಮ ಗುರುಸೇವೆ | ಪರಮ ಭಕುತಿಯಲಿಂದಚರಿಪ ಸನ್ಮತಿಯಿತ್ತು ಕರುಣದಲಿ ಕಾಯೋಗುರುವಂತ ರಾತ್ಮನನ | ತೋರೆಂದು ಪ್ರಾರ್ಥಿಸುವೆಪರಮ ಪುರುಷನೆ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಆನಂದಾದ್ರಿ ವಾಸ | ವಿಠಲ ಪೊರೆ ಇವನಾ ಪ ಮಾನಮೇಯ ಜ್ಞಾನ | ಸಾನುಕೂಲಿಸಿ ಇವಗೆನೀನಾಗಿ ಪೊರೆಯೊ ಹರಿ | ಕೋನೇರಿವಾಸಾ ಅ.ಪ. ಚಿತ್ರ ಚಾರಿತ್ರ | ಶುಭಗಾತ್ರನೇ ಶತಪತ್ರನೇತ್ರಕರವಾದ ದ್ವಂದ್ವ | ಸೂತ್ರಾಂತರಾತ್ಮ |ಮಿತ್ರನಾನುಗ್ರಹಕೆ | ಪಾತ್ರನ ಸಲಹೊ ಮಾಕಳತ್ರನೇ ನಿನ್ನ ಸುಪ | ವಿತ್ರ ಪದ ನಮಿಪೇ 1 ಕರುಣವೆಂತುಟೊ ನಿನಗೆ | ಶರಣಜನ ವತ್ಸಲನೇಕರೆದೊಯ್ದು ಸ್ವಪ್ನದಲಿ | ಹರ ಗಿರಿಜೆ ತೋರೀ |ಮರಳಿ ಬ್ರಹ್ಮನ ಲೋಕ | ದರುಶನಾನಂದದಲಿಕರೆದೊಯ್ದು ಕರುಣಾಳು | ಸುರಸೇವ್ಯ ಬದರಿಗೆ 2 ದಶಮತಿಗೆ ಬೋಧಿಸುವ | ವ್ಯಾಸದರ್ಶನ ಭಾವಿದಶಮತಿಯ ಸಹವಿರುವ | ವ್ಯಾಸ ಭಕ್ತನ್ನಾ |ಹಸನಾಗಿ ತೋರಿ ನೀ | ವಸುಮತಿಗೆ ಕರೆತಂದುಬೆಸಸಿದೆಯಾ ಫಲದೈವ | ದರ್ಶನಕೆ ಇವನಾ 3 ಬದ್ಧನಾದರು ಇಹದಿ | ಶುದ್ಧ ಸಂಸ್ಕøತನಿಹನುಮಧ್ವಮತ ದಾಸತ್ವ | ಶ್ರದ್ಧೆಯುಳ್ಳವನೇಬುದ್ಧಿಯಲಿ ಎನಗೆ ಉ | ದ್ಬುದ್ಭವನೆ ಮಾಡ್ದ ಪರಿತಿದ್ದಿ ಅಂಕಿತವಿತ್ತು | ಬುದ್ಧಿ ಪೇಳಿಹೆನೋ 4 ಸಂಚಿತ ಕರ್ಮ | ತೀವ್ರದಲಿ ದಹಿಸೇಗೋವುಗಳ ಪಾಲ ಗುರು | ಗೋವಿಂದ ವಿಠ್ಠಲನೆಭಾವದಲಿ ಬಿನ್ನವಿಪೆ | ನೀ ವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಆನಂದಾನಂತ ವಿಠಲ ನೀನಿವನ ಸಲಹೊ ಪ ಜ್ಞಾನಿಜನ ಸುಪ್ರೀಯ ನೀನೆಂದು ಭಿನ್ನವಿಪೆ ಅ.ಪ. ಪ್ರಾಚೀನ ದುಷ್ಕರ್ಮ ನಿಚಯದಿಂದಲಿ ಬಳಲಿಸ್ವೋಚಿತ ಸುಕರ್ಮಕ್ಕೆ ಅವಕಾಶ ವಿರದೇ |ವಾಚಿಸುತಲೀ ನಿನ್ನ ನಾಮಾಮೃತವ ಸವ್ಯಸಾಚಿ ಸಖನೇ ನಿನ್ನ ಮೊರೆಯ ಹೊಕ್ಕವನಾ 1 ಕರ್ಮ ಆಧೀನ ನಿನದಲ್ಲೆ |ನೀದಯದಿ ಸಂಚಿತವ ಮೋದದಲಿ ಕಳೆದು |ವೇದಗಮ್ಯನೆ ಹರಿಯೆ ಭೇದಮತ ಸುಜ್ಞಾನ ಭೋದಗೈವುದು ಎಂದು ಪ್ರಾರ್ಥಿಸುವೆ ನಿನ್ನಾ 2 ಮಂತ್ರನಿಲಯರ ನಿರುತ ಸ್ವಾಂತದಲಿ ಭಜಿಸುತ್ತಸಂತ್ರಸ್ತಸಜ್ಜನರ ಪೊರೆಯೆ ಮೊರೆಯಿಡುತ |ಭ್ರಾಂತ ಮಾಯಾತ್ಮ ತೊರೆದು ಅಂತರಂಗದಿ ಮಧ್ವಅಂತರಾತ್ಮನ ಭಜಿಪ ಸಂತದಾಸನ್ನಾ 3 ಅಂಬರ ಸುವಾಣಿಯಿಂದಂಬೆ ರಮಣನು ರುದ್ರಬಿಂಬ ನರಹರಿ ನೀನೆ ಇಂಬಿನಂಕಿತವನಂಬಿ ಬಂದಿಹಗಿತ್ತು ಸಂಭ್ರಮದಿ ಕರುಣಿಸಿಹೆಬಿಂಬ ಕ್ರಿಯ ಸುಜ್ಞಾನ ತುಂಬು ಇವನಲ್ಲೀ 4 ದೋಷದೂರನೆ ಹರಿಯೆ ದಾಸನ ಸದ್‍ಹೃದಯ ದಾಶಯದಿ ತವರೂಪ ಲೇಸು ತೋರೆಂಬಾ |ಮೀಸಲು ಪ್ರಾರ್ಥನೆಯ ಸಲಿಸೆಂದು ಭಿನ್ನವಿಪೆವಾಸುಕೀ ಶಯನ ಗುರು ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆನೆಯ ನೋಡಿರಯ್ಯ ನೀವೆಲ್ಲರುಆನಂದ ಪಡೆಯಿರಯ್ಯ ಪ ತಾನು ತನ್ನವರೆಂಬ ಮಾನವರ ಸಲಹಿದಅ ಪಾಂಡು ಚಕ್ರೇಶನ ಸುತರಿಗೊಲಿದಾನೆಗಂಡುಗಲಿ ಮಾಗಧನ ಒರಸಿದಾನೆಹಿಂಡು ಗೋವಳರೊಳಗೆ ಹಿರಿಯನ ಕಳೆಯದಾನೆಲಂಡರಿಗೆ ಎದೆಗೊಡುವ ಪುಂಡಾನೆ 1 ಬಾಲಕನ ನುಡಿಗೇಳಿ ಖಳನ ಸೀಳಿದಾನೆಪಾಲುಂಡು ವಿದುರನ ಸಲಹಿದಾನೆಲೋಲಾಕ್ಷಿ ಮಾನಭಂಗಕ್ಕೊದಗಿದಾನೆಖೂಳ ಶಿಶುಪಾಲನನು ಸೀಳಿದಾನೆ2 ಅಜಮಿಳನಿಗೆ ನಿಜಪದವಿಯ ಕೊಟ್ಟಾನೆಕುಜನರೆಲ್ಲರನು ಒರಗಿಸಿದಾನೆಅಜಪಿತ ಕಾಗಿನೆಲೆಯಾದಿಕೇಶವಾನೆತ್ರಿಜಗವಲ್ಲಭ ತಾನು ಭಜಕರ ವಶವಾನೆ 3
--------------
ಕನಕದಾಸ
ಆಪನ್ನ ರಕ್ಷಕ ಎನ್ನ ಪಾಲಿಸೊ ಪ. ಪನ್ನಗಾದ್ರಿನಿವಾಸ ಸಂಪನ್ನ ಶ್ರೀಶಾ ಶ್ರೀನಿವಾಸ ಅ.ಪ. ಆದಿ ಮೂರುತಿ ವೇದ ವಂದ್ಯ ಪಾದ ನಂಬಿದೆ ಅಗಾಧರೂಪ ನಾರಸಿಂಹ ಆದರದಿಂದ ಮೋದ ಕೊಡುತ ಎನ್ನ ಪಾಲಿಸು 1 ನೊಂದೆನಯ್ಯ ಈ ಭವದಿ ಸಿಲುಕಿ ತಂದೆ ಎನ್ನ ಕಾವರಿಲ್ಲ ಬಂಧ ಬಿಡಿಸಿ ಈ ಭವದಿಂದ ನಿನ್ನ ಸಂದರುಶನವಿತ್ತು ಸಲಹಿ ಎನ್ನ 2 ನಿನ್ನ ನಂಬಿದ ಭಕ್ತರ ಪೊರೆಯೆ ಇನ್ನು ಸಂಶಯವ್ಯಾಕೊ ದೇವಾ ಚೆನ್ನಗಿರಿಯ ವೆಂಕಟೇಶಾ ಮನ್ನಿಸೆನ್ನ ಶ್ರೀ ಶ್ರೀನಿವಾಸ ಎನ್ನ 3
--------------
ಸರಸ್ವತಿ ಬಾಯಿ