ಒಟ್ಟು 363 ಕಡೆಗಳಲ್ಲಿ , 67 ದಾಸರು , 336 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸವರವರದ ವಿಠಲ | ಸಲಹೊ ಇವಳಾ ಪ ಈಶಾದಿ ದಿವಿಜೇಡ್ಯ | ವಾಸವಾನುಜನೇ ಅ.ಪ. ಕ್ಲೇಶನಾಶನನೆ ಮ | ಧ್ವೇಶ ನಿನ್ನಡಿ ದಾಸ್ಯಆಶಿಸೂವಳ ಬಿಡದೆ | ಶ್ರೀಶ ಕೈಪಿಡಿದೂದೋಷರಾಶಿಯ ಕಳೆದು | ಪೋಷಿಸಲು ಬಿನ್ನವಿಪೆಹೇಸದಾಶಿವ ವಂದ್ಯ | ಮೇಶ ಮಹಿದಾಸಾ 1 ಪತಿಸೇವೆ ಗುರುಸೇವೆ | ಹಿತದಿಂದ ಮಾಳ್ಪಂಥಮತಿಯನೆ ಕರುಣಿಸುತ | ಕ್ಷಿತಿರಮಣ ನಿನ್ನಾಸ್ಮøತಿಯ ಕೊಡು ಸತತ ಸಂ | ಸೃತಿಯನೇ ಕಳೆಯಲ್ಕೆಗತಿಗೋತ್ರ ನೀನಾಗಿ | ಪಥದೋರೊ ಹರಿಯೇ 2 ಏಕಮೇವನೆ ದೇವ | ಪ್ರಾಕ್ಕು ಕರ್ಮವ ಕಳೆದುನೀ ಕೊಡುತ ಸುಜ್ಞಾನ | ಭಕುತಿ ವೈರಾಗ್ಯಕಾಕು ಸಂಗವ ಕೊಡದೆ | ನೀಕೊಟ್ಟು ಸತ್ಸಂಗಮಾಕಳತ್ರನೆ ಸಲಹೊ | ಈಕೆ ಕೈ ಪಿಡಿದೂ 3 ಖೇಚರೋತ್ತಮ ವಾಹ | ಕೀಚಕಾರಿ ಪ್ರಿಯನೆಮೋಚಕೇಚ್ಛೆಲಿ ಸವ್ಯ | ಸಾಚಿಸಖಕೃಷ್ಣಾ |ವಾಚಾಮಗೋಚರನೆ | ನೀಚೋಚ್ಚ ತರತಮವವಾಚಿಸುತ ಇವಳಲ್ಲಿ | ಮೋಕ್ಷಪ್ರದನಾಗೋ 4 ದೇವವರ ಭವ್ಯಾತ್ಮ | ಭಾವಕೊಲಿಯುವ ಹರಿಯೆನೀವೊಲಿಯದಿನ್ನಿಲ್ಲ | ಆವ ಈ ಜಗದೀ |ಕಾವುದಿವಳನು ಎಂದು | ಭಾವದಲಿ ಭಿನ್ನೈಪೆಭಾವುಕರ ಪಾಲ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದಾಸವರ್ಯ ಪೋಷಿಸೆನ್ನನು ಪ್ರಾರ್ಥಿಸುವೆ ಶೇಷ ದಾಸವರ್ಯ ಪೋಷಿಸೆನ್ನನು ಪ ತರಿದು ಇಂದಿ- ರೇಶನಂಘ್ರಿಧ್ಯಾನವ ಪ್ರತಿವಾಸರದಲಿ ಒದಗುವಂತೆಅ.ಪ ದೇಶ ದೇಶಗಳಲಿ ಭಜಿಪ ದಾಸ ಜನರ ಮನದ ಅಭಿ- ಲಾಷೆಗಳನು ಸಲಿಸುತಲಿ ಸುರೇಶನಂತೆ ಮೆರೆದ ಶೇಷ 1 ಭಜಿಸೆ ಜಗದಿ ಪ್ರಾಜ್ಞ- ಸುಜ್ಞಾನವಿತ್ತು 2 ಮಾತ್ರದಿ ಭೂತ ಪ್ರೇತಗ- ದುರಿತ ಘನಕೆ ಮರುತರೆನಿಪ 3 ಪದದಿಂದೆ ತ್ರಿಪಥ ಗಾಮಿನಿಯಳ ತೋರಿ ಸ್ವಜನ ಕಾಮಿತವ ಪೂರೈಸಿದಂಥ4 ಶೇರಿದ ಪರಿವಾರಕೆ ಸುರ ಭೂರುಹವೆಂದೆನಿಸುವಂಥಾ ನೊಲಿಸಿದಂಥ 5
--------------
ಕಾರ್ಪರ ನರಹರಿದಾಸರು
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ಧನ್ಯ ಧನ್ಯ ಧನ್ಯ ಧನ್ಯ ಗುರುವರಾ ಧನ್ಯ ತಂದೆ ಮುದ್ದುಮೋಹನ್ನ ಗುರುವರಾ ಪ. ಮಾನ್ಯ ವಿಭುದ ಮಾನ್ಯ ಜಗದ್ಮಾನ್ಯ ಗುರುವರಾ ಅ.ಪ. ಪುಟ್ಟಿದಂದಿನಿಂದಿನ್ವರೆಗೆ ತೊಟ್ಟು ದಾಸತ್ವ ದೀಕ್ಷೆ ಕರ್ಮ ಜಪತಪಂಗಳಾ ಕರ್ಮ ಮಾಡಿ ಮುಗಿಸಿ ಶ್ರೇಷ್ಠ ಜ್ಞಾನ ಕವಚ ತೊಟ್ಟು ದಿಟ್ಟತನದಿ ಮೆರೆದ ಗುರುವು ಮುಟ್ಟಿದರೀಗ ಹರಿಯ ಪುರವ 1 ಭಕ್ತಿ ಭೂಷಣ ತೊಟ್ಟು ವಿರಕ್ತಿ ಖಡ್ಗ ವರೆಯಲ್ಲಿಟ್ಟು ಮುಕ್ತಿ ಮಾರ್ಗಕೆಲ್ಲ ದೀಕ್ಷೆ ಇತ್ತು ಸುಜನಕೆ ವ್ಯಕ್ತಾವ್ಯಕ್ತ ಮಹಿಮೆಯಿಂದ ವ್ಯಕ್ತಿತ್ವವನು ತೋರಿಕೊಳದೆ ಉಕ್ತಿಗೊಶರಮಾಡಿಕೊಂಡ ಶಕ್ತಿ ಪೇಳಲಳವೆ ಎನಗೆ 2 ಕರ್ಮ ಕುರುಹನರುಹಿ ನಮ್ಮ ಮಧ್ವಮತಕೆ ದಿವ್ಯ ಸಮ್ಮತವಾಗಿ ವಮ್ಮನದ ಸುಜ್ಞಾನ ಬೆಳಕು ತಮ್ಮ ನಂಬಿದರಿಗೆ ತೋರಿ ಬÉೂಮ್ಮನೈಯ್ಯನ ಪುರಕೆ ಸಾರ್ದ ನಮ್ಮ ಗುರುವರಾ 3 ದಾಸಕೂಟ ಸಭಾಸ್ಥಳದಿ ದಾಸ ಪ್ರಾಣರಾಯನ ನಿಲಿಸಿ ದಾಸಜನಕೆ ಮುಕ್ತಿ ಸ್ಥಾನ ಕರಿಗಿರಿ ಎನಿಸಿ ವ್ಯಾಸತೀರ್ಥರಿಂದ ಬಂದ ದಾಸಕೂಟ ನಿಜವೆಂದೆನಿಸಿ ದಾಸಜನರ ಮೆರಸಿ ನೃಹರಿ ದಾಸಕೂಟ ಸಭಾಸ್ಥಾಪಕ 4 ವ್ಯಾಳಶಯನನಾದ ಗೋಪಾಲಕೃಷ್ಣವಿಠ್ಠಲನ್ನ ಲೀಲೆಯಿಂದ ಯನ್ನ ಹೃದಯದಲ್ಲಿ ನಿಲ್ಲಿಸೀ ಕಾಲ ಕಾಲಕ್ಕೆ ಇತ್ತು ಪಾಲಿಸಿದಾ ಪರಮ ಪ್ರಿಯ ಕೃಪಾಳೂ ಗುರುವರಾ 5
--------------
ಅಂಬಾಬಾಯಿ
ಧನ್ಯಗೈಸಿದೆನಗ ಗುರು ಮಹಿಪತಿ ತಾನು ಪ ವಿಜಯಗ್ಹೇಳಿದ ಹರಿಗೀತೆಯಲಿ | ಸುಜನ್ಮಾಹುದು ಸಂತರಲ್ಲಿ ದುರ್ಭರದ 1 ಕಿವಿಯೊಳು ಸುಜ್ಞಾನ ಗುಟ್ಟು 2 ದೊಡ್ಡದರೊಳಿಹ ಚಿದ್ಘನ ವಾ ದೋರಲಿ 3 ಇಂಬಾಗಿರಲು ಗುರುದಯ ಕಾಮಧೇನು 4 ಕಂದಗೊಲಿದನು ಇಹಪರಗತಿಯಾ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧನ್ವಂತ್ರಿ ನಾ ನಿನ್ನ ಅಣುಗನೋ - ತ್ರೈಗುಣದೂರ ಅಣುಗಣು ಘನಘನಾ ಪ ಭವ ಹಂತ್ರಿ 1 ಭವ ಹಂತ್ರೀ 2 ಸ್ನಾನ ಸಂಧ್ಯಾವಿಲ್ಲ ಧನ್ವಂತ್ರೀ | ಸೂಕ್ಷ್ಮಸ್ನಾನಾನು ಸಂಧಾನ ಧನ್ವಂತ್ರೀ |ಜ್ಞಾನಾವೆ ಪಾಲಿಸೊ ಧನ್ವಂತ್ರೀ | ಈಸುಜ್ಞಾನವೇ ಸ್ಥಿರವಿರಲಿ ಭವಹಂತ್ರೀ 3 ಸತಿಸುತರ ಪ್ರಾರ್ಥನೆಗೆ ಧನ್ವಂತ್ರೀ | ಅತಿಹಿತದಿಂದ ಸಲಹೀದೆ ಧನ್ವಂತ್ರೀ |ಗತಿಪ್ರದ ಬಿರುದಾಂಕ ಧನ್ವಂತ್ರೀ | ಮಮರತಿ ಇರಲಿ ತವ ಪದದಿ ಭವಹಂತ್ರೀ 4 ಭೇಷಜ ಧನ್ವಂತ್ರೀ | ಎನ್ನಅವಗುಣವೆಣಿಸೋರೆ ಧನ್ವಂತ್ರೀ |ಧೃವ ಬಲಿ ಕರಿವರದ ಧನ್ವಂತ್ರೀ | ಗುರುಗೋವಿಂದ ವಿಠಲನೇ ಧನ್ವಂತ್ರೀ 5
--------------
ಗುರುಗೋವಿಂದವಿಠಲರು
ಧ್ಯಾನ ಮಾಡಿರೊ ರಂಗಯ್ಯನ ಪ ಗಾನ ವಿಲೋಲನ ದೀನಾರ ಪೊರೆವೊನ ಅ.ಪ. ಮೀನ ರೂಪವ ತಾಳಿ ದಾನವಾಖ್ಯನ ಸೀಳಿ ಮಾನವ ಪೊಂದಿದ ಜಾಣ ರಂಗೈಯ್ಯನ 1 ಕೂರ್ಮ ತಾನಾಗಿ ಗಿರಿಯ ಬೆನ್ನಲಿ ಪೊತ್ತು ಸುರರನ್ನೆ ಪೊರೆದ ಗಂಭೀರ ರಂಗೈಯ್ಯನ 2 ವರಾಹ ರೂಪದಿ ಕೋರೆಯ ಕೊನೆಯಲಿ ಧರಣಿಯನೆತ್ತಿದ ಶೂರ ರಂಗೈಯ್ಯನ 3 ನರಹರಿ ರೂಪದಿ ಘೋರ ದೈತ್ಯನ ಸೀಳಿ ತರಳನ ಸಲಹಿದ ಕರುಣಿ ರಂಗೈಯ್ಯನ 4 ಪುಟ್ಟ ಹಾರುವನಾಗಿ | ದಿಟ್ಟ ಬಲಿಗೆ ಒಲಿದು ಕೊಟ್ಟ ವರಗಳ ದಿಟ್ಟ ರಂಗೈಯ್ಯನ 5 ಪರಶು ಪಿಡಿದು ಭೂವರರ ಗೆಲಿದು ಭೂ ಸುರರನ್ನೆ ಸಲಹಿದ ಧೀರ ರಂಗೈಯ್ಯನ6 ಮಾನವ ರೂಪದಿ ದಾನವಾಂತಕನಾಗಿ ದೀನರ ಪೊರೆದ ಸುಜ್ಞಾನಿ ರಂಗೈಯ್ಯನ 7 ಕಂಸನ ವಂಶ ನಿರ್ವಂಶಾಕೋಸುಗ ಯದು ವಂಶದೊಳು ತಾನು ಜನಸಿದನು ಹಿಂಸೆ ಮಾಡುತಲಿರ್ದ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಮುರಧ್ವಂಸಿ ಕೃಷ್ಣಗೆ 8 ಸತಿಯರ ವ್ರತದಿಂದ ಪತಿತರಳಿಯದಿರೆ ಗತಿ ತೋರದೆ ಭವಕಾತರಿಸೆ ಅತಿ ನಗ್ನದಿ ಬಂದು ವ್ರತಭಂಗ ಮಾಡಿದ ಸಿರಿ ಕಂಠÀನುತನಾದ ಸಿತವಾಹನ ಸಖನ 9 ವೇದ ಬಾಹಿತರನ್ನು ಭೂದೇವಿ ಧರಿಸದೆ ಮಾಧವ ಪೊರೆಯೆಂದು ಮೊರೆಯಿಡಲು ಚದುರತನದಿ ಸತಿಯ ಕುದುರೆಯ ಮಾಡಿತಾ ಕೊಂಡ ಕದನದಿ ಕೊಂದವನ 10 ಮಂಗಳ ಮಹಿಮನ ಶೃಂಗಾರ ಪ್ರಿಯನ ಅಂಗಜಾರಿಯ ಧನುರ್ಭಂಗನ ಅಂಗಳದೊಳು ಮೂರ್ಲೋಕಂಗಳ ತೋರಿದ ತುಂಗ ವಿಕ್ರಮನಾದ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ಧ್ರುವತಾಳ ಬಂದೆನ್ನ ಕಾಯೊ ಕರುಣದಿಂದ ಕೈಪಿಡಿದು ದೀನ ಬಂಧುವೆ | ಒಂದೂರು ಮಂದಿರಾರ್ಯ | ಸಂದೇಹವ್ಯಾಕೆ ನಿನ್ನ ಪೊಂದಿದ ಸತ್ಯಶಿಷ್ಯವೃಂದದೊಳಗೆ ನಾ ಕಡೆಯವನೋ ತಂದೆ ನೀನಗಲಿದಕೆ ನೊಂದೆನೊ ನಾ ಭವ ಬಂಧದೊಳಗೆ ಬಿದ್ದು ಬಹುವಿಧದಿ ನಮಗಿನ್ನು ಹಿಂದು ಮುಂದು ಮನಕೆ ನೀ ತಾರದಲೆ ಕಣ್ಣೆರೆದು ಈಕ್ಷಿಸಿ ಎನ್ನೊಳಿದ್ದ | ಮಂದಮತಿಯ ಬಿಡಿಸಿ ಮಧ್ವಶಾಸ್ತ್ರವ ತಿಳಿಸೋ | ಮಂದರಕುಜ ಭಕ್ತಸಂದೋಹಕೆ | ಹಿಂದೆ ವರದಾತನೆಂದೆನಿಸಿದ ಕರ್ಮಂದಿಗಳರಸರ ಕ್ಷೇತ್ರದಲ್ಲಿ | ಬಂದ ಸಮಯವೆನ್ನ ಬಿನ್ನಪ ಚಿತ್ತಕೆ | ತಂದು ತವಕದಿಂದ ಭೂಸುರರ ಸಂದಣಿಯಲ್ಲಿ ನಿನ್ನ ಮಹಿಮೆ ಪ್ರಕಟಿಸಿ ಇಂದುವಿನಂತೆ ಪೊಳೆದು ಮೆರೆದ ಕರುಣೀ ಅಂದಿನಾರಭ್ಯ ನೀನೆ ಸ್ವರೂಪೋದ್ಧಾರಕರ್ತನೆಂದು ದೃಢನಾಗಿ ನಂಬಿ ತ್ವತ್ವಾದಕೆ ವಂದಿಸಿ ಮೊರೆ ಇಡೆ ಇಂದು ನೀನು ನಮ್ಮ ಛಾತ್ರಮಾಲೆಯಲ್ಲಿ ಸಂದವನೆಂದು ಮನದಿ ಭಾವಿಸಿದೆವು | ಎನುತ ಛಂದದಿ ಸಿಂಧು ಪೋಲುವ ಕರುಣಿ ಸುಜ್ಞಾನ ಸದ್ಭಕ್ತಿ ಕುಂದದ ವೈರಾಗ್ಯ ಭಾಗ್ಯವ ಕೊಟ್ಟು ಧಾಮ ಶಾಮಸುಂದರವಿಠಲನ ಒಂದೇ ಮನದಿ ಭಜಿಪಾನಂದ ಭಾಗ್ಯವ ನೀಡೋ 1 ಮಟ್ಟತಾಳ ಅನುಪಮಸುಚರಿತ್ರ | ಅನುದಿನದಲಿ ಎನ್ನ ಅಣುಗನೆಂದರಿತೊಂದು ಕ್ಷಣವಗಲದೆ ಇದ್ದು ಬಿನುಗು ಬುದ್ಧಿಯ ಕಳದು | ಧನದಾಶೆಯ ಕಡಿದು ಮನದ ಚಂಚಲ ಬಿಡಿಸಿ | ಹನುಮ ಭೀಮಾನಂದ ಮುನಿಕೃತ ಪಾದವನಜ ಸೇವಿಪುದಕೆ ತನುವಿಗೆ ಬಲವಿತ್ತು ದಿನದಿನದಲಿ ನೆನೆಯುವ ಸಂಪದ ಗುಣನಿಧಿಯನುಗ್ರಹಿಸೋ 2 ತ್ರಿವಿಡತಾಳ ಭವ ಮೊದಲಾದ ಬುಧರು ಹರಿಯಾಜ್ಞೆಯಲಿ ಮದಡಾರುದ್ಧರಿಸಲು ಜಗದಿ ಬಂದು | ಸುಧೆಯಂತೆ ಸವಿಯಾದ ಮಧುರ ಕನ್ನಡದಲ್ಲಿ | ಮುದದಿ ರಚಿಸಿದಂಥ | ಪದಸುಳಾದಿಗಳಲ್ಲಿ ಹುದುಗಿದ ವೇದಾರ್ಥ ತ್ವತ್ವಾದಾಶ್ರಿತರಿಗೆ | ವಿಧ ವಿಧದಿಂದಲಿ ಬೋಧಿಸುತಾ | ವದಗಿದ ಅಜ್ಞಾನ ಸದೆದು ಸುಮತಿ ಕೊಟ್ಟು ಸದಾಚಾರ ಸಂಪನ್ನನೆನಿಸಿ | ಅವರ ಬದಿಗನು ನೀನಾಗಿ ಸುಕ್ಷೇಮ ಚಿಂತಿಸಿ | ಅಧಮರಿಂದಲಿ ಬಾಧೆ ಬಾರದಂತೆ ಸದಯನೆ ಸಲಹಿದ ಕಾರಣದಿಂದಲಿ | ವಿದಿತವಾಯಿತು ನಿನ್ನ ಮಹಿಮೆ ಮನಕೆ ಪದೆ ಪದೆ ಪ್ರಾರ್ಥಿಪೆ ಸದಮಲಗಾತ್ರನೆ ಅಧೋಗತಿ ತಪ್ಪಿಸಿ ಬಿಡದೆ ಒಲಿದು | ಯದುಕುಲೋದ್ಭವ ಪೊಳೆವಂತೆ ಕೃಪೆಮಾಡು 3 ಅಟ್ಟತಾಳ ಗುರುವರ ಶ್ರೀ ನರದ್ವಿರದಾರಿ ನಾಮಕ | ವರ್ಣಿಸಲಳವಲ್ಲ ನಿನ್ನುಪಕಾರವು | ಜ್ವರಬಹುಜನರಿಗೆ ಪರಿಹಾರ ಮಾಡಿದಿ ತುರಗ ಕಚ್ಚಿದ ಘಾಯ ತಕ್ಷಣ ಮಾಯಿಸಿದಿ | ಶರಣಗೆ ಬಂದಪಮೃತ್ಯು ಓಡಿಸಿದಿ | ಅರಿಯದರ್ಭಕಿ ಹೋಮಕುಂಡದಿ ಬೀಳೆ | ತ್ವರಿತಭಿಮಂತ್ರಿಸಿ | ಭಿಸ್ಮವಲೇಪಿಸಿ ಉರಿತಂಪುಗೈಸಿದಿ || ಪುರದವರ ಮೊರೆ ಕೇಳಿ ಮಾರಿಯ ಭಯ ಕಳೆದಿ | ತರುಳರು ದಕ್ಕದ ದೀನಕುಟುಂಬಕ್ಕೆ ಚಿರಕಾಲ ಬಾಳುವ ಸಂತಾನ ನೀಡಿದಿ | ಸ್ಮರದೂರ ನಿಮ್ಮಾಜ್ಞೆ ಮೀರದ ಕಿಂಕರನ ತರುಣಿಗೆ ಸೋಂಕಿದ ಭೂತವ ಬಿಡಿಸಿದಿ | ನೆರೆನಿನ್ನ ಪದವನುಸರಿಸೀದ ಸುಜನಕ್ಕೆ ವರಭಾಗವತಶಾಸ್ತ್ರ ಅರುಹೀದಿ ಸಲುಹೀದಿ | ಹರಿಕಥಾಮೃತಸಾರವ ಸಾರೀದಿ | ತರತಮದ ಭೇದಜ್ಞಾನವ ಬೀರಿದಿ | ವರದಾಯಕ ಸತ್ಯದೇವನ ಪಾವನ ಚರಿತೆ ವಿಚಿತ್ರವಾಗಿ ಪರಿಪರಿ ಪೇಳುತ್ತ ಪೊರೆದೆ ನಿನ್ನವರನ್ನು ಧರೆ ಋಣ ತೀರಿದ ಕುರುಹು ಅರಿತು ಒಬ್ಬರಿಗೆ ಸೂಚಿಸದೆ ಪರಲೋಕಯಾತ್ರೆಗೆ ತೆರಳಿದದಕೆ ನಿನ್ನ ಪರಿವಾರದ ನಾವೆಲ್ಲರೂ ನಿತ್ಯಸಿರಿಯ ಕಳೆದುಕೊಂಡ ಲೋಭಿಗಳಂದದಿ ಶರಧಿ ಕಾಯ ತೊರೆದರೇನಾಯಿತು ಮರೆಯಾದೆ ಗೋವತ್ಸನ್ಯಾಯದಂತೆ ನೀ ದರುಶನ ಸ್ವಪ್ನದಿಗರೆದು ಸಂತೈಸುತ ನಿರಯಕೆ ನಮ್ಮನು ಗುರಿಮಾಡದೆ ಪೊರೆ ತರುಳಗೊಲಿದ ಶಾಮಸುಂದರವಿಠಲ ಸರಸಿಜಾಂಘ್ರಿಯುಗ್ಮ ಮಧುಪನೆಂದೆನಿಸಿ 4 ಆದಿತಾಳ ಭೂಮಿ ವಿಬುಧವರ ರಾಮವಿಠಲಾರ್ಯರ ಶ್ರೀ ಮುಖದಿಂದ ಸಕಲಶಾಸ್ತ್ರಮನನಮಾಡಿ | ಶ್ರೀಮತ್ಸು ಶೀಲೇಂದ್ರಸ್ವಾಮಿಗಳಿಂದಲಿ ನೀ ಮಾನಿತನಾಗಿ ಕಾಮಿತಫಲಪ್ರದ ರಾಯರ ದಯಪಡೆದು ಕಾಮಾದಿ ಷಡ್ರಿಪುವರ್ಗ ಜಯಿಸುತಲಿ | ನೇಮನಿಷ್ಟೆಯಲಿ ಜಪತಪಾಚರಿಸುತ ಹೇಮರಜತಧನ ತೃಣಸಮಾನೆನಿಸುತ ಸಾಮಜವರದನ ಕಳೆಯದೆ ಪಾಮರ ಜನರನು ಪ್ರೇಮದಿಂದದ್ಧರಿಸಿ | ಸಾಮಗಾನಪ್ರೇಮ ಶಾಮಸುಂದರನ ಧಾಮವ ಸೇರಿದ ಹೇ ಮಹಾಮಹಿಮನೆ 5 ಜತೆ ನಿನ್ನೊಡೆಯನ ದ್ವಾರಾ ಶ್ರೀ ಶಾಮಸುಂದರನ ಎನ್ನಂತರಂಗದಿ ನೋಳ್ವಂತೆ ಕರುಣಿಸೋ ||
--------------
ಶಾಮಸುಂದರ ವಿಠಲ
ನಂಬಿದೆ ತವ ಚರಣ ಸಲಹೋ | ಅಂಬುಧಿಸುತೆ ರಮಣ ವಿನುತ ಮನ | ದ್ಹಂಬಲವನು ಸಲಿಸೆಂದು ನಿರುತ ನೆರೆ ಪ ತಾವರೆದಳನಯನಾ ಭವಹರಣ ತವಕದಿ ಸುಜ್ಞಾನವಗರೆಯೋ 1 ತಂದೆ ನಾ ಜನಿಸುತ ಭೂಸುರ ಜನ್ಮದಿ ಹಿಂದಿನ ಸುಕೃತದಲಿ ಬಂದೆನೊ ಭುವಿಯೊಳ್ ನೊಂದೆನೋ ಕರುಣಿಸು 2 ಹೇಸಿ ಸಂಸಾರದ ಪಾಶÀವ ಬಿಡಿಸುತ ಶ್ರೀಶಾಮಸುಂದರವಿಠಲನೆ ದೋಷವ ನೋಡದೆ | ಪೋಷಿಸು ಮರೆಯದಲೆ ವಾಸುಕಿಶಯನನೆ 3
--------------
ಶಾಮಸುಂದರ ವಿಠಲ
ನಂಬಿದೆ ನಿನ್ನ ಗಣೇಶ ಜಗ- ದಂಬಿಕಾತನಯ ವಿಶ್ವಂಭರದಾಸ ಪ. ಲಂಬೋದರ ವಿಘ್ನೇಶ ಶರ- ಣೆಂಬುದು ಸುರನಿಕುರುಂಬ ಮಹೇಶ ಅ.ಪ. ತರುಣಾದಿತ್ಯಪ್ರಕಾಶ ನಿನ್ನ ಶರಣಾಗತನಾದೆ ಮೋಹನ ವೇಷ ಸುರುಚಿರ ಮಣಿಗಣ ಭೂಷ ಜಗ ದ್ಗುರುವೆ ಗುಹಾಗ್ರಜ ಪೊರೆಯೋ ನಿರ್ದೋಷ 1 ಸಂತಜನರ ಮನೋವಾಸ ಮೋಹ ಭ್ರಾಂತಿಯಜ್ಞಾನಧ್ವಾಂತವಿನಾಶ ಶಾಂತಹೃದಯ ಸುಗುಣೋಲ್ಲಾಸ ಏಕ ದಂತ ದಯಾಸಾಗರ ದೀನಪೋಷ 2 ಲಕ್ಷ್ಮೀನಾರಾಯಣನೆ ವ್ಯಾಸ ಗುರು ಶಿಕ್ಷಿತ ಸುಜ್ಞಾನ ತೇಜೋವಿಲಾಸ ಅಕ್ಷರ ಬ್ರಹ್ಮೋಪದೇಶವಿತ್ತು ಹುತಾಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಮಿಸುವೆನಾಂ ಶ್ರೀ ಹಯವದನಾ ನಿನ್ನ ನಮಿಸುವೆನಾಂ ಪ. ಕಾಮಜನಕ ಸದಾಶಿವಸನ್ನುತ ಕಾಮಿತ ಶುಭಫಲದಾ ವರದಾ ಅ.ಪ. ಸಾರಸ ಸಖ ನಿಭ ವದನಾ ಸರಸಿಜನಯನಾ ಶ್ರೀನಾರೀಮಣಿ ಸದನ ಸಾರಸಭವನುತ ಚರಣ ಮುರಮದ ಹರಣ ಭೂರಿ ಪೂರಿತ ಲೋಚನ ಶರಣಾಗತ ಜನಾರ್ತಿ ಹರಣ ಚಾರುತರ ಸುಜ್ಞಾನದಾಯಕ ಧೀರ ಗುಣ ಗಂ ಭೀರ ಸುಮನೋಹರ ಶ್ರೀಹಯವದನಾ 1 ಕೌಸ್ತುಭ ಮಣಿಹಾರ ಪುಸ್ತಕಧÀರ ಶ್ರೀಕರ ಶ್ರೀ ವತ್ಸಾಂಕಿತ ವಕ್ಷ ಸುಂದರ ಪಕ್ಷಿಗಮನ ಪುರು ಷೋತ್ತಮ ನಮಪೂರ್ಣಕಾಮ ಭಕ್ತಿವರ್ಧನ ನಿಲಯಾಪ್ರಮೇಯ ಭಕ್ತಿ ಜ್ಞಾನ ಪ್ರದಾಯಕ ಮುಕ್ತಿ ಮಾರ್ಗ ಪ್ರದರ್ಶಕ ನಕ್ತÀಂ ಚರರಾಜತಮೋಮಿಹಿರ ಶ್ರೀಹಯಾಸ್ಯ 2 ಶ್ರೀಶ ಜನಾರ್ದನ ಛಿದ್ವಿಲಾಸ ಕಮನೀಯವೇಷ ಶ್ರೀ ಶೇಷಾದ್ರಿ ನಿವಾಸ ದಾಸಜನ ಹೃತ್ಪದ್ಮ ವಿ ಕವಿ ಮನೋಲ್ಲಾಸ ಭಾಸ್ಕರಕೋಟಿ ದ್ಯುತಿಭಾಸ ಹಯವದನಾ ನಿನ್ನ ನಮಿಸುವೆನಾ 3
--------------
ನಂಜನಗೂಡು ತಿರುಮಲಾಂಬಾ
ನಲಿನಲಿದು ಬಾ ತ್ರಿಜಗದಾಂಬೆ ಪ. ಮಾನಸದೊಳು ಸುಜ್ಞಾನಬೋಧಳಾಗಿ ಆತನದೇವಕದಂಬೆ ಅ.ಪ. ವಿದ್ಯಾ ಬುದ್ಧಿ ವಿನಯ ಮಂಗಳಗಳ ಸಾಧ್ವಿ ನಿನ್ನಲಿ ಬೇಡಿಕೊಂಬೆ 1 ನಲಿದೆನ್ನಯ ಜಿಹ್ವಾಗ್ರದಿ ನೆಲಸುತ ಸುಲಭದೋರೆಯೆ ಸುಲಲಿತವ ಶಿವೆ 2 ಧೀರ ಲಕ್ಷ್ಮೀನಾರಾಯಣಾಶ್ರಿತೆ- ಪರಮೇಷ್ಠಿಪರಿರಂಭೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಳಿನನಾಭ ಸುಂದರ ಸುಗುಣಾಕರ ಕಮಲೇಶ ಜಗದೀಶ ಪ ಚಲಿಸಬಲ್ಲರೇ ನಿನ್ನ ಬಲವಿಲ್ಲದಿರಲು ಸಕಲ ಸುರನರರು ಅ.ಪ ಬ್ರಹ್ಮಾದಿಗಳು ನಿನ್ನ ಸಮ್ಮತಿಯಲಿ ಈ ಬ್ರಹ್ಮಾಂಡದಲಿ ತಮ್ಮ ಕರ್ಮರಚಿಸಿ ನಿನ್ನ ಮರ್ಮವನರಿಯಲು ತಮ್ಮ ಕಾಲವ ಕಳೆಯುವರು 1 ಅಜ್ಞಾನದೂರನೆ ಸುಜ್ಞಾನ ಮೂರುತಿ ಯಜ್ಞನಾಮಕ ಪರಮಾತ್ಮ ನಿನ್ನ ಜಿಜ್ಞಾಸದಿಂ ಸುಪ್ರಜ್ಞೆಯ ಪೊಂದದ ಅಜ್ಞಾನಿ ಇದನರಿಯುವನೇ 2 ಸರ್ವತ್ರ ವ್ಯಾಪ್ತನೆ ಸರ್ವಾಗಮಾರ್ಥನೆ ಸರ್ವ ಪ್ರೇರಕ ಸರ್ವೇಶ ಗರ್ವ ತೊರೆದು ನೀನೋರ್ವ ಸ್ವತಂತ್ರನೆಂ ದರಿವ ಜನಕೆ ಸುಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ನಾಮತ್ರಯ ನೆನೆಯಿರೊ ಕಾಮಕ್ರೋಧವು ಹರಿದು ಬೈಲಾಗಿ ಪೋಗುವುದು ಪ ಅಚ್ಯುತಾ ಅಚ್ಯುತಾ ಎಂದು ಸ್ಮರಣೆಯನು ಮಾಡಿದರೆ ದುಶ್ಚರಿತವೆಂಬ ಮಹ ಕಾನನಕ್ಕೆ ಕಿಚ್ಚಾಗಿ ದಹಿಸುವುದು ನಿಮಿಷದೊಳಗೆ ಶುದ್ಧ ನಿಚ್ಚಳವಾಗಿದ್ದ ಸುಜ್ಞಾನ ಪಾಲಿಪದು1 ಅನಂತ ಅನಂತ ಎಂದು ಮನದಲ್ಲಿ ನೆನೆಯೆ ನಾನಾ ಭವಬಂಧ ದುಷ್ಕರ್ಮದಿ ಹೀನಾಯವನು ಕಳೆದು ಹಿತದಿಂದಲಿ ವೊಲಿದು ಆನಂದ ಆನಂದವಾದ ಫಲ ಕೊಡುವುದು. 2 ಗೋವಿಂದ ಗೋವಿಂದ ಎಂದು ಧ್ಯಾನವ ಮಾಡೆ ಗೋವಿಂದ ಕಡೆಹಾಕಿ ಸಾಕುವದು ದೇವೇಶ ಶಿರಪತಿ ವಿಜಯವಿಠ್ಠಲೇಶನ ಸೇವೆ ಸತ್ಕಾರ್ಯದಲಿ ಪರಿಪೂರ್ಣವಾಗಿಹುದು 3
--------------
ವಿಜಯದಾಸ
ನಾಮರೆತರು ನೀಮರೆವರೆ ಹರಿಯೇ ಪ ಅಭಿ | ರಾಮಪೂರ್ಣ ಕಾಮದುಷ್ಟರಾಕ್ಷಸಾಂತಕಅ.ಪ ಸರ್ವತ್ರ ಸರ್ವವಾಗಿ ವ್ಯಾಪಿಸಿನೀನಿರುವೇ ಸರ್ವೇಶ ಸರ್ವಾಧಾರಣಶರಣಜನ ಸುರತರುವೇ 1 ಸುಜ್ಞಾನಮಯ ಸ್ವರೂಪಾಂತರ್ಯಾಮಿಯು ನೀನು 2 ಪರಿ ಎಲ್ಲ ಭಕ್ತರಾ ತ್ವರ | ದಿಂದ ಬಂದು ಪೊರೆವೆ ನೀ ಕರುಣಾ ಸಾಗರಾ 3 ಶುಕ | ಶೌನಕಾದಿ ಮೌನಿ ಹೃದಯ ಪದ್ಮಮಿತ್ರನೆ ನಿನ್ನ | ಧ್ಯಾನ ಮಾಳ್ಪಗುಂಟೆ ಹಾನಿ ದೇವದೇವನೆ 4 ಕರೆದರೆ ಬರದಿರÀಲು ನಮ್ಮ ಕಾವರ್ಯಾರೆಲಾ ವಿಧಿ | ಹರಮುಖಾಮರವಂದಿತ ಗುರುರಾಮ ವಿಠ್ಠಲ 5
--------------
ಗುರುರಾಮವಿಠಲ