ಒಟ್ಟು 183 ಕಡೆಗಳಲ್ಲಿ , 49 ದಾಸರು , 152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀ ವಾಮನಪ್ರಥಮ ಅಧ್ಯಾಯಶ್ರೀ ವಾಮನಪ್ರಾದುರ್ಭಾವಸಾರಭೂಮಾದಿ ಗುಣನಿಧಿಯೇಅನಘಮಂಗಳರೂಪವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖವಂದ್ಯ ಶರಣು ಸೌಭಾಗ್ಯದನೆಬ್ರಹ್ಮಾಂಡ ಬಹಿರಂತವ್ರ್ಯಾಪ್ತ ಸರ್ವೇಶ ಪಉದಿತಭಾಸ್ಕರ ನಿಭ ಸ್ವಕಾಂತಿಯಲಿ ಜ್ವಲಿಸುತಿಸುದರ್ಶನ ಗದಾ ಜ್ಞಾನಪ್ರದ ದರಾಹಸ್ತಪದುಮೆ ಸಹ ಅಜುವಿಷ್ಣು ಮಂತವ್ಯ ಸರ್ವಸ್ಥಶೃತಿವೇದ್ಯ ಅಜಸೇವ್ಯಪ್ರಣವಪ್ರತಿಪಾದ್ಯ1ಸರ್ವ ಸೃಷ್ಟಿ ಸ್ಥಿತಿ ಲಯ ನಿಯಮನ ಜ್ಞಾನಆವೃತಿ ಬಂಧ ಮೋಕ್ಷಕೆ ಮುಖ್ಯಕರ್ತಸುವರ್ಣಾಂಡವ ಪಡೆದು ವ್ಯಾಪಿಸಿ ಅದರೊಳುಅವತಾರಗಳ ಮಾಡಿ ಸಜ್ಜನರ ಕಾಯುವಿ 2ವೇದೋದ್ಧರಮತ್ಸ್ಯಸತ್ಯವ್ರತನಿಗೆ ಒಲಿದಿಮಂದರವ ಪಾಲ್ಗಡಲಲಿ ಪೊತ್ತಕೂರ್ಮಇಂದಿರಾಪತಿ ಅಜಿತ ಮೋಹಿನಿ ಧನ್ವಂತರಿದೈತ್ಯಹರ ಭೂಮಿ ಉದ್ಧರ ಭೂವರಾಹ 3ಪಾಪಘ್ನ ಪ್ರಹ್ಲಾದ ರಕ್ಷಕ ನೃಸಿಂಹನೇವಿಷ್ಟ ವಾಮನ ತ್ರಿವೃತ್ ಗೋಪಬಾಲಸುಪವಿತ್ರ ಜಮದಗ್ನಿಸುತ ಪರುಶುರಾಮಪ್ರಭಂಜನಸೇವ್ಯಶ್ರೀರಾಮಚಂದ್ರ4ಅಜ್ಞಾನ ಹೃತ್ತಿಮಿರಸೂರ್ಯವೇದವ್ಯಾಸನಿಜಭಕ್ತಜನ ಪಾಂಡವಪ್ರಿಯ ಕೃಷ್ಣದುರ್ಜನ ವಿಮೋಹಕ ಸುರಸುಬೋಧಕ ಬುಧ್ಧಸುಜನವಂದ್ಯನೆ ಧರ್ಮಸ್ಥಾಪಕನೆÀ ಕಲ್ಕಿ 5ಷಡ್ರೂಪ ಹಯವದನ ಮಹಿದಾಸ ತಾಪಸಕ್ಷಿಪ್ರವಸುಪ್ರದ ಶ್ರೀಕರ ಯಜÕ್ಯ ಕಪಿಲಅತ್ರಿಸುತ ವೃಷಭಾದಿ ಅನಂತಸುಖ ಚಿದ್ರೂಪಅಪ್ರತಿ ಮಹೈಶ್ವರ್ಯ ಪೂರ್ಣ ಏಕಾತ್ಮ 6ನಿವ್ರ್ಯಾಜ ಭಕ್ತಾಗ್ರಣಿಯು ಪ್ರಹ್ಲಾದನುಆ ಆರ್ಯನ ಸುತ ವಿರೋಚನನೆಂಬುವನುಆ ದೈತ್ಯನ ಪುತ್ರ ಬಲಿಮಹಾರಾಜನುಆಧಿಕ್ಯ ಹೊಂದಿದನು ಬಲಪೌರುಷದಲಿ 7ದೈತ್ಯೇಯ ಬಲಿರಾಜ ಬಲಉನ್ನಾಹದಿಂಜಗತ್ರಯವ ತನ್ನ ವಶ ಮಾಡಿಕೊಂಡಇಂದ್ರಾದಿಗಳು ಐಶ್ವರ್ಯ ಶ್ರೀಯಶಸ್ಥಾನವಿದುರರಾಗಲು ದೇವಮಾತೆ ಯೋಚಿಸಿದಳು 8ಸರ್ವಭೂತ ಗುಹಾವಾಸವಾಸುದೇವಜಗದ್ಗುರುಸರ್ವ ಜಗತ್ಪತಿ ಕೇಶವನಿಗೆ ಪ್ರಿಯವಾದಪಯೋವ್ರತವ ಭಕ್ತಿಯಿಂದಲಿ ಮಾಡುವುದೆಂದುದೇವಮಾತೆಗೆಪತಿಕಶ್ಯಪ ಪೇಳಿದನು9ಆದಿವರಾಹನೇ ಮಹಾಪುರುಷ ಸರ್ವ -ಭೂತ ನಿವಾಸನೇವಾಸುದೇವಸದಾ ಸರ್ವ ಸಚ್ಛಕ್ತಿ ಪರಿಪೂರ್ಣ ಸರ್ವವಿದ್ಯಾಧಿಪತಿ ಶುಭಮಂಗಳ ಸ್ವರೂಪ 10ಸರ್ವ ಜಗಜ್ಜ£್ಮ್ಞದಿಕರ್ತನೇ ಜಗದೀಶಸರ್ವ ಜಗತ್ರಾಣ ಚೇಷ್ಟಕ ನಿಯಾಮಕನೇವಿಶ್ವತೋ ಮುಖ ಆದಿದೇವ ನಿನಗೆ ನಮೋಶ್ರೀವರ ನಾರಾಯಣ ನರಹರೇ ಸ್ವಾಮಿ 11ಮರಗದ ಶ್ಯಾಮ ಅನಿರುದ್ಧ ಪ್ರದ್ಯುಮ್ನಸಿರಿಕಾಂತ ಸರ್ವೇಶ ಕೇಶವ ನಮಸ್ತೆಪುರುಟಾಂಬರಧಾರಿ ಸುರವರೇಣ್ಯನೇ ನಮೋಸರ್ವ ವರದನೇ ಶ್ರೀದ ಕರುಣಾಂಬುನಿಧಿಯೇ 12ಅದಿತಿ ದೇವಿಯು ಪಯೋವ್ರತವ ಮಾಡಿದಳುವಿಧಿಪೂರ್ವಕ ಭಕ್ತಿ ಶ್ರಧ್ಧೆಯಿಂದಆದಿ ಪೂರುಷ ಭಗವಂತ ಶಂಖ ಚಕ್ರಗದಾಧರನೇ ಅದಿತಿಗೆ ಪ್ರತ್ಯಕ್ಷನಾದಿ 13ಕಣ್ಣೆದುರಿಗೆ ನಿಂತ ನಿನ್ನ ನೋಡಿ ಅದಿತಿಆನಂದ ಬಾಷ್ಪವ ಸುರಿಸುತ್ತ ದೀರ್ಘಪ್ರಣಾಮವ ಮಾಡಿದಳು ಗದ್ಗದ ಕಂಠದಿಂನಿನ್ನ ಸ್ತುತಿಸಿದಳು ಆ ದೇವಮಾತೆ 14ತೀರ್ಥಪಾದನೇ ತೀರ್ಥಶ್ರವ ಶ್ರವಣ ಮಂಗಳನಾಮಧೇಯನೇ ಯಜÉÕೀಶ ಯಜÕಪುರುಷಅಚ್ಯುತನೇ ರಕ್ಷಿಸುವಿ ಪ್ರಪನ್ನಪಾಲಕ ನಮೋಶ್ರೀದ ಶ್ರೀಪತೇ ವಿಷ್ಣೋ ಧೀನನಾಥ 15ಅಖಂಡೈಕ ಸಾರಾತ್ಮ ವಿಶ್ವವ್ಯಾಪಕವಿಶ್ವಅಕಳಂಕ ಸರ್ವೋರು ಸಚ್ಚಕ್ತಿಪೂರ್ಣಏಕಾತ್ಮ ಸರ್ವಜÕ ಸುಖಜ್ಞಾನಪ್ರದ ಭೂಮನ್ನಿಖಿಳಗುಣ ಐಶ್ವರ್ಯಪೂರ್ಣ ಹರೇ ಶ್ರೀಶ 16ಅದಿತಿಯ ವ್ರತಾಚರಣೆ ಮೆಚ್ಚಿ ಕಮಲಾಕ್ಷ ನೀಅದಿತಿಯ ಸುತನೆನಿಸಿ ಭವಿಸುವಿ ಎಂದಿಮುದದಿ ಈ ರಹಸ್ಯವ ಪತಿಗೆ ಪೇಳ್ದಳು ಅದಿತಿಆ ದಂಪತಿ ಕೂಡಿ ನಿರೀಕ್ಷಿಸಿದರು ನಿನ್ನ 17ಜಗನ್ನಿವಾಸನೆ ನೀನು ದೇವಮಾತೆಯೊಳುಝಗಝಗಿಸಿಪೊಳೆದಿಯೋ ಉರು ಮಹಾತೇಜಪೊಗಳಲಳವೇ ನಿನ್ನ ಲೀಲಾವತಾರಗಳಅಗಣಿತಮಹಿಮೆಗಳ ದೇವ ದೇವೇಶ18ಸನಾತನನೇ ಅನಘನೇ ಅಜನೇ ಭಗವಂತನೇನೀನು ಅದಿತಿಯಲಿ ಅವತರಿಪುದರಿತುವನರುಹಾಸನ ಹಿರಣ್ಯಗರ್ಭನು ಬಂದುಶ್ರೀನಿಧಿಯೇ ಶ್ರೀಶ ನಿನ್ನನ್ನು ಸ್ತುತಿಸಿದನು 19ಜಯೋರುಗಾಯ ಭಗವನ್ ಉರುಕ್ರಮ ನಮೋಸ್ತುತೇತೋಯಜಾಸನ ಹೀಗೆ ಇನ್ನೂ ಬಹುವಿಧದಿ ಸ್ತುತಿಸಿದತೋಯಜಾಕ್ಷಶಿಪಿವಿಷ್ಟ ವಿಷ್ಣು ಸರ್ವೋತ್ತಮಅಚ್ಯುತಾನಂತೋರು ಶಕ್ತಿಮಯ ನಿನ್ನ 20ಪದುಮಭವ ಸನ್ನುತನೇಆನಂದಮಯನೀನುಪ್ರಾದುರ್ಭವಿಸಿದಿ ಅದಿತಿ ದೇವಮಾತೆಯಲಿಚತುರ್ಭುಜವು ಶಂಖಗದಾಅಬ್ಜಚಕ್ರಪೀತ ಕೆಂಪು ವಸನವನ್ನ ಧರಿಸಿದ್ದಿ 21ಅನುಪಮ ಸುಸೌಂದರ್ಯ ಚಾರ್ವಾಂಗ ಕಾಂತಿಯುನಳಿನಾಯತೇಕ್ಷಣ ಮಕರಕುಂಡಲವುಆನಂದ ಸುಪ್ರಚುರ ವದನಾರವಿಂದವುಏನೆಂಬೆ ಗಂಭೀರವಕ್ಷ ಶ್ರೀವಕ್ಷ 22ವನಮಾಲೆ ಸುಸ್ಫುರತ್ ಕಿರೀಟಾಂಗದಾದಿಗಳುವನಜಾಸನಾಶ್ರಿತ ಕೌಸ್ತುಭಮಣಿಯುಸುನೂಪುರ ತೊಟ್ಟ ಶುಭಮಂಗಳಪಾದನಿನ್ನ ಪ್ರಾದುರ್ಭಾವ ವರ್ಣಿಸಲು ಅರಿಯೆ 23ಸೌರಶ್ರಾವಣಸಿಂಹ ಚಾಂದ್ರ ಭಾದ್ರಪದನೀ ಪ್ರಾದುರ್ಭವಿಸಿದ್ದು ಸಿತಶ್ರಾವಣದ್ವಾದಶಿಚಿತ್ರ ವಾದ್ಯಗಳ ಘೋಷ ಸಿದ್ಧಿ ವಿದ್ಯಾಧರರುಸುರಗಾಯಕರುಗಳ ಗಾಯನ ನೃತ್ಯ 24ಜಯ ಜಯತು ಜಯ ಜಯ ವಾಮನ ವಟುರೂಪಜಯ ಜಯತು ಶಾಶ್ವತ ಸರ್ವಸ್ಥ ವಿಷ್ಣೋಜಯ ಜಯತು ಸರ್ವ ಜಗಜ್ಜನ್ಮಾದಿಕರ್ತಜಯ ಜಯಪರಮಪೂರ್ಣೈಶ್ವರ್ಯ ಜಯತು25ಸುಂದರವಟುವಾಮನ ನಿನ್ನ ನೋಡಿಮಂದಜಾಸನಮಹಾ ಋಷಿವರ್ಯರು ಬಹುಆನಂದಭರಿತರು ಆಗಿ ಸಂಸ್ಕಾರಅಂದದಿ ಚರಿಸಿದರು ವೈದೀಕ ರೀತಿಯಲಿ 26ಬ್ರಹ್ಮಾದಿದೇವರು ಮಹಾಋಷಿಗಳುಪರ-ಬ್ರಹ್ಮ ವಾಮನ ನಿನಗೆ ಉಪನಯನರೂಪಮಹಾಪೂಜೆ ಚರಿಸಿದರು ಮುದಭಕ್ತಿಯಿಂದಲಿಮಹಾರ್ಹನೇ ನಿನಗಿದು ಅವತಾರ ಲೀಲ 27ದೇವವರೇಣ್ಯ ಬ್ರಹ್ಮಣ್ಯದೇವನೇ ನಿನಗೆದೇವತಾವೃಂದವು ನೆರದಿದ್ದ ಮುನಿಗಳುಸಾವಿತ್ರೀಂ ಸವಿತಾ ಭ್ರವೀತ್ ಬೃಹಸ್ಪತಿ ಬ್ರಹ್ಮಸೂತ್ರಂಈ ವಿಧದಿ ಮುದಮನದಿ ಅರ್ಪಿಸಿದರು 28ಕಮಂಡಲ ವೇದಗರ್ಭನು, ಕೃಷ್ಣಾಜಿನಭೂಮಿ, ದಂಡ, ಸೋಮ,ಕುಶಸಪ್ತ ಋಷಿಗಳುಸುಮೇಖಳ ಕಶ್ಯಪ,ಕೌಪೀನಅದಿತಿಯುಉಮಾ ಭಗವತಿಬಿಕ್ಷಾಪಾತ್ರೆ ವಿತ್ತಪನು 29ಈ ರೀತಿ ಮೇಖಳಸೂತ್ರಆಚ್ಛಾದನಛತ್ರ ಕೃಷ್ಣಾಜಿನ ಕಮಂಡಲು ದಂಡಪಾತ್ರೆ ಅಕ್ಷಮಾಲಾದಿ ವಸ್ತುಗಳು ದರ್ಭೆಪರಿಪರಿ ದೇವತೆಗಳು ಅರ್ಪಿಸಿದರು 30ಮಹಾಪೂರುಷ ಶಿಪಿವಿಷ್ಟ ವಾಮನ ವಿಷ್ಣೋಮಹಾದುರ್ಗ ಭೂ ಶ್ರೀಶ ನಿನ್ನ ಉಪನಯನಮಹೋತ್ಸವದ ವೈಭವವು ಹೋಮ ಪೂಜಾದಿಗಳುಮಹಿಯಲ್ಲಿ ಅಸದೃಶವು ಸರ್ವಕಾಲದಲು 31ಸೂತ್ರಮೇಖಳಕೌಪೀನಆಚ್ಛಾದನಛತ್ರಮಾಲಾ ಕಮಂಡಲು ದಂಡಹಸ್ತಚಂದ್ರಾರ್ಕ ಕೋಟ್ಯಮಿತ ಜ್ಯೋತಿರ್ಮಯ ವಟುರೂಪಶ್ರೀರಮಣಪದ್ಮಭವರುದ್ರಾದಿವಂದ್ಯ32ಮಧ್ವಸ್ಥ ಪರ್ವಸ್ಥ ಮತ್‍ಸ್ಥ ವಿಧಿತಾತಜ್ಯೋತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುಕ್ ಪ್ರಸನ್ನ ಶ್ರೀನಿವಾಸಮುದಜ್ಞಾನಧನ ಆಯುರ್ಭಾಗ್ಯದನೇ ಶರಣು 33-ಇತಿ ಪ್ರಥಮಾಧ್ಯಾಯ ಸಂಪೂರ್ಣಂ -ದ್ವಿತೀಯ ಅಧ್ಯಾಯದಾನಪ್ರಕರಣಸಾರಭೂಮಾದಿ ಗುಣನಿಧಿಯೇಅನಘಮಂಗಳರೂಪವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖವಂದ್ಯ ಶರಣು ಸೌಭಾಗ್ಯದನೆಬ್ರಹ್ಮಾಂಡ ಬಹಿರಂತವ್ರ್ಯಾಪ್ತ ಸರ್ವೇಶ ಪಸರಸಿಜೋದ್ಭವ ಸುರವೃಂದ ಮಹಾಋಷಿಗಳುಮರೀಚಿಸುತ ಮೊದಲಾದ ಸುಧೀಗಳು ನಿನಗೆಚರಿಸಿದ ಉಪನಯನ ರೂಪಮಹೋತ್ಸವವಸ್ವೀಕರಿಸಿ ಜ್ವಲಿಸಿದಿ ಬ್ರಹ್ಮಣ್ಯದೇವ 1ನೋಡಿದ ಮಾತ್ರದಲೆಸುಜನವಿಶ್ವಾಸಿಗಳುಮಾಡಿದ ಪಾಪ ಪರಿಹರಿಪ ನರ್ಮದೆಯದಡ ಉತ್ತರದಲಿ ಯಜÕ ಶಾಲೆಕಟ್ಟಿದೊಡ್ಡಕ್ರತುಮಾಡುತ್ತಿದ್ದನು ಬಲಿರಾಜ2ಮೌಂಜಿಮೇಖಳ ಸೂತ್ರದಿಂದ ಬೆಳಗುತ್ತಸಜಲ ಕಮಂಡಲು ಸುದಂಡ ಛತ್ರಪ್ರಜ್ವಲಿಪ ಚಿನ್ಮಯ ಜಟಿಲ ವಾಮನವಿಪ್ರಯಜÕ ಶಾಲೆಯೊಳು ಪ್ರವೇಶ ಮಾಡಿದಿಯೋ 3ಜ್ವಲಿಸುವ ಸ್ವಕಾಂತಿಯುಕ್ಮಾಯಾಮಾಣವಕಬಾಲ ಸುಂದರ ಬ್ರಹ್ಮಚಾರಿಹರಿನಿನ್ನಬಲಿರಾಜ ಆಚಾರ್ಯ ಶುಕ್ರಾದಿಗಳು ನೋಡಿಬಲುಹರುಷದಲಿ ಎದ್ದು ಸ್ವಾಗತಮಾಡಿದರು 4ಭಗವಂತ ವಾಮನ ನಿನ್ನ ಪಾದದಿಬಲಿಬಾಗಿ ನಮಿಸಿ ಸ್ವಾಗತಂ ತೇ ನಮಸ್ತುಭ್ಯಂಹೀಗೆಂದು ತನ್ನ ಪಿತೃಗಳು ತೃಪ್ತರಾದರುತನ್ನ ಕುಲ ಪಾವಿತವಾಯ್ತೆಂದು ಪೇಳ್ದ 5ವನಜಜಾಂಡದ ಒಡೆಯ ರಾಜರಾಜೇಶ್ವರನೇನಿನ್ನ ಮುಂದೆಕರಮುಗಿದು ಬಲಿರಾಜಧೇನುಕಾಂಚನ ಗ್ರಾಮವಿಪ್ರಕನ್ಯಾದಿಗಳುಏನು ನೀ ವಾಂಛಿಸಿದರೂ ಕೊಳ್ಳಬಹುದೆಂದ 6ಸುಗಮಸುಹೃತ್ ಧರ್ಮಯುಕ್ ಈ ಮಾತಲ್ಲಿಭಗವಂತ ನೀ ಪ್ರೀತನಾದದ್ದು ಪ್ರಕಟಿಸಿಲೋಕದಲಿ ಪ್ರಖ್ಯಾತ ಬಲಿಯ ಕುಲಕೀರ್ತಿಯಪೊಗಳಿದಿಯೋ ಬ್ರಾಹ್ಮಣ ಮಹೇಜ್ಯ ಪರಮೇಶ 7ಆಕಾಶದಲಿ ಆಹ್ಲಾದಕರ ಉಡುಪನುಪ್ರಕಾಶಿಸುವಂತೆ ಪ್ರಹ್ಲಾದನ ಯಶಸ್ಸುಉತ್ಕøಷ್ಟವಾದದ್ದು ವ್ಯಾಪಿಸಿ ಜಗತ್ತಲ್ಲಿಪ್ರಕಾಶಿಸುತೆ ಆ ಕುಲೋತ್ಪನ್ನನು ಬಲಿಯು 8ಮಹಾ ಗದಾಯುಧದಾರಿ ದಿಗ್ವಿಜಯ ಶೂರನುಆ ಹಿರಣ್ಯಾಕ್ಷನ ಅಣ್ಣನು ಆದಪ್ರಹ್ಲಾದಪಿತ ಹಿರಣ್ಯಕಶಿಪು ವೀರನುಮಹೀಯಲ್ಲಿ ಖ್ಯಾತವು ಈ ದೈತ್ಯ ಕುಲವು 9ಆ ಜಗತ್ ಪ್ರಖ್ಯಾತ ಪ್ರದ್ಲಾದನಸುತದ್ವಿಜವತ್ಸಲ ತನ್ನ ಆಯುಷ್ಯವದ್ವಿಜವೇಷದಿ ಬಂದ ಸುರರಿಗೆ ಕೊಟ್ಟಿದ್ದುಮೂರ್ಜಗ ಅರಿವುದುಬಲಿಆ ಕುಲೀನ10ಇಂಥ ಕುಲದಲಿ ಬಂದ ಪ್ರಹ್ಲಾದ ಪೌತ್ರಈ ಧರ್ಮವಂತಬಲಿಎಂದು ನೀ ಪೇಳಿಪದಾನಿ ತ್ರೀಣಿ ದೈತ್ಯೇಂದ್ರ ಸಂಹಿತಾನಿಪದಾಮಮ ಎಂದು ಭೂಮಿ ಯಾಚಿಸಿದಿ 11ನಳಿನಜಾಂಡದ ದೊರೆಹರಿನಿನ್ನ ಮಾಯೆಯಿಂಬಾಲಿಶಮತಿಯೇ ಮೂರಡಿ ಯಾಕೆ ಕೇಳುತಿ ಎಂದಬಲಿಯು ತನ್ನಲಿ ಕೊಂಡವ ಪೂರ್ಣನಾಗುವಮತ್ತೆಲ್ಲೂ ಪುನರ್ಯಾಚಿಸನು ಎಂದು ಪೇಳಿದನು 12ಕರ್ಮಜ ದೇವತಾ ಕಕ್ಷದವ ಬಲಿರಾಜಕರ್ಮನಿಮಿತ್ತದಿ ಸಂಸಾರ ಸುಳಿಯಊರ್ಮಿಗಳಿಗೊಳಗಾದ ಭಕ್ತನಲಿ ಕರುಣಿಸಿದಿಧರ್ಮನೀತಿ ಪೇಳಿದಿ ಶ್ರೀಶ ಮುಕುಂದ 13ಇಂದ್ರಿಯ ಅಭಿಲಾಷೆ ಜಯಿಸದವನ ಆಶೆಗೆಮಿತಿಯಿಲ್ಲ ಬೆಳೆಯುವುದು ಮೇಲು ಮೇಲುಯದೃಚ್ಛಾಲಾಭ ಸಂತುಷ್ಟ ವಿಪ್ರನತೇಜಸ್ಸುವರ್ಧಿಸುವುದು ಮತ್ತು ಸುಖವೀವುದೆಂದಿ 14ಈ ರೀತಿ ಬಲಿರಾಜನಿಗೆ ಇನ್ನೂ ಪೇಳಿಮೂರಡಿ ಮಾತ್ರವೇ ಕೊಳ್ಳುವಿ ಎನಲುಧಾರೆ ಎರೆದು ಕೊಡಲು ಬಲಿಯು ನಿಶ್ಚೈಸಲುಅರಿತು ಶಿಷ್ಯನ ಎಚ್ಚರಿಸಿದ ಶುಕ್ರ 15ವೇದ ವೇದಾಂತಕೋವಿದಶುಕ್ರಾಚಾರ್ಯರುಬುದ್ಧಿ ವಿದ್ಯಾ ನಿಪುಣರು ಕುಶಲ ಕವಿವರರುದೈತ್ಯರಿಗೆ ಕುಲಗುರು ಶ್ರೀದ ಶ್ರೀಹರಿ ನಿನ್ನಭಕ್ತವರ್ಯರು ಎಂದು ನಮಿಪೆ ಸಂತೈಸು 16ಶಿಷ್ಯ ವೈರೋಚನನಿಗೆ ಪೇಳಿದನು ಶುಕ್ರಶ್ರೀಶ ಭಗವಂತನು ವಿಷ್ಣು ಅವ್ಯಯನೆಕಶ್ಯಪ ಅದಿತಿಯಲಿ ಭವಿಸಿ ದೇವತೆಗಳಕಾರ್ಯಸಾಧನಕಾಗಿ ಬಂದಿರುವ ಎಂದ 17ಮತ್ತು ಪೇಳಿದ ಈ ದಾನ ಕೊಡುವುದರಿಂದದೈತ್ಯರಿಗೆ ಅಕ್ಷೇಮ ಬಲಿಯ ಶ್ರೀ ಸ್ಥಾನ ಯಶಸ್ಸುಮೊದಲಾದ ಸರ್ವವೂ ಪೋಗುವವು ಸ್ವರ್ಗ ಸಂ -ಪತ್ತು ಅಧಿಪತ್ಯವ ಶಕ್ರನಿಗೆ ಕೊಡುವ 18ಇಂಥಾಮಾಯಾಮಾಣವಕಹರಿವಾಮನನುಪಾದಎರಡಲಿಧರೆದಿವಿ ಅಳೆದು ಮೂರ-ನೇದನುಬಲಿಕೊಡಲು ಆಗದೆ ನರಕ ಪೋಗು-ವದು ತಪ್ಪಿಸೆ ದಾನ ಕೊಡಬೇಡ ಎಂದ 19ಇನ್ನೂ ಬಹು ವಿಧದಲಿ ದಾನ ಬಗೆ ಶುಕ್ರತನ್ನ ಶಿಷ್ಯನಿಗೆ ಬೋಧಿಸಿದರೂ ಸಹಮನ ಸೋಲದೆ ಬಲಿರಾಜ ಧಾರೆ ಎರೆದುದಾನವ ಕೊಡುವೆನು ಎಂದ ವಿನಯದಲಿ 20ಗುರುಗಳ ಮಾತಲ್ಲಿ ಅನಾದರವ ತೋರಿಸಿದಆ ರಾಜನಿಗೆ ಶಾಪ ಇತ್ತರು ಶುಕ್ರರುಸಿರಿಸ್ಥಾನಾದಿಗಳು ನÀಷ್ಟವಾಗುವದೆಂದುಗುರು ಶಪಿಸಿದರೂ ಬಲಿಯ ಮನ ಚಲಿಸಲಿಲ್ಲ 21ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ಸ್ವಾಮಿಭೃತ್ಯವತ್ಸಲ ನೀನು ಬಲಿಯ ಉತ್ಕಷ್ಟಭಕ್ತಿ ಶ್ರದ್ಧೆ ಸತ್ಯ ಧರ್ಮ ತೋರ್ಪಡಿಸಿದಿಅಂತಃ ಪ್ರೇರಕನಾಗಿಬಲಿಶುಕ್ರರಲ್ಲಿ22ಒಳ್ಳೇ ಮೌಕ್ತಿಕ ಆಭರಣ ಮಾಲಾಧರಳುಶೀಲೆ ಪತ್ನಿ ವಿದ್ಯಾವಳಿ ದೇವಿ ಸಹಿತಬಲಿಸ್ವರ್ಣ ಕಲಶ ಜಲದಿಂದ ನಿನ್ನನಳಿನಪದಯುಗವ ಅವನಿಜಿಸಿದ ಮುದದಿ23ಅಚಲಿತ ಭಕ್ತಿಮಾನ್ ಈ ಮಹಾನ್ ಬಲಿರಾಜಅರ್ಚಿಸಿ ಉದಕದಿಂದಲಿ ಧಾರೆ ಎರೆದುಅಚ್ಯುತನೇ ಶ್ರೀಯಃಪತೇ ವಾಮನ ನಿನಗೆ ನೀಇಚ್ಚೈಸಿದ ದಾನ ಹರುಷದಿ ಕೊಟ್ಟ 24ಮುದಾನ್ವಿತರಾದ ದೇವಗಣ ಗಂಧರ್ವವಿದ್ಯಾದರ ಸಿದ್ಧ ಚಾರಣ ಕಿನ್ನರಾದಿಗಳುದೈತ್ಯೇಂದ್ರಬಲಿಕರ್ತೃಕದಾನ ಆರ್ಜವವಉದ್ಗಾಯನ ಮಾಡಿ ಪುಷ್ಪಮಳೆ ಕರೆದರು 25ಬಲಿನಿನ್ನ ಜಗತ್ಪಾವನ ಪಾದೋದಕವತಲೆಯಲಿ ತಾ ಧರಿಸಿ ಕೊಟ್ಟ ಮೂರಡಿದಾನಮಾಲೋಲ ಸರ್ವೇಶ ವಿಶ್ವರೂಪನೇ ವಿಷ್ಣುಲೀಲೆಯಿಂದಲಿ ಕೈ ನೀಡಿ ವಾಮನ ಸ್ವೀಕರಿಸಿದಿ 26ಮಧ್ವಸ್ಥ ಸರ್ವಸ್ಥ ಮತ್‍ಸ್ಥ ವಿಧಿತಾತಜ್ಯೋತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುಕ್ ಪ್ರಸನ್ನ ಶ್ರೀನಿವಾಸಮುದಜ್ಞಾನಧನ ಆಯುರ್ಭಾಗ್ಯದನೇ ಶರಣು 27-ಇತಿದ್ವಿತೀಯಅಧ್ಯಾಯ ಸಂಪೂರ್ಣಂ-ತೃತೀಯ ಆಧ್ಯಾಯಶ್ರೀ ತ್ರಿವಿಕ್ರಮವಿಜಯಸಾರಭೂಮಾದಿ ಗುಣನಿಧಿಯೇಅನಘಮಂಗಳರೂಪವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖವಂದ್ಯ ಶರಣು ಸೌಭಾಗ್ಯದನೆಬ್ರಹ್ಮಾಂಡ ಬಹಿರಂತವ್ರ್ಯಾಪ್ತ ಸರ್ವೇಶ ಪಕಿಂಪುರುಷಕಿನ್ನರಚಾರಣ ಗಂಧರ್ವಾದಿಸುಪರ್ವಾಣ ಗಾಯಕರ ಗೀತೆ ವಾದ್ಯಗಳುಶುಭಘೋಷ ಮಾಡುತಿರೆ ಬಲಿರಾಯ ದಾನವಅರ್ಪಿಸಿ ಕೃತಕೃತ್ಯದಿ ನೋಡಿದ ನಿನ್ನ 1ಉರು ಗುಣಾರ್ಣವ ಮಹೈಶ್ವರ್ಯ ನಿಜಸಚ್ಛಕ್ತಿಹರಿವಾಮನ ನೀನು ವರ್ಧಿಸಿ ಅದ್ಭುತದಿಸುಬೃಹತ್ ವಿಶ್ವರೂಪವ ಕಾಣಿಸಿ ನಿಂತಿನೀರುರುಹ ಜಾಂಡಾಂತರ್ ಬಹಿವ್ರ್ಯಾಪ್ತ ವಿಷ್ಣೋ 2ದೋಷದೂರ ನಿನ್ನ ಒಂದು ರೂಪದಿ ಉಂಟುದೋಷವಿಲ್ಲದ ಪೂರ್ಣ ಅಭಿನ್ನ ಅನಂತನಿನ್ನೀಶಶಕ್ತಿಯಿಂ ಎಲ್ಲವ ಅಡಗಿಸಿಅಕ್ಷೋಭ್ಯ ನೀ ಪ್ರಕಟ ಮಾಡುವಿ ಆಗಾಗ 3ಉತ್ತಮ ಮಹಾಮಹಿಮ ನಿನ್ನ ಈ ರೂಪದಿಭೂ ದಿವಿ ದಿಕ್ ಸರ್ವ ಅಧೋಧ್ರ್ವ ಲೋಕಸುತಪಸ್ವಿ ಮುನಿಗಳು ದೇವನರತ್ರಿರ್ಯಗ್ ಸರ್ವಪ್ರತಿಷ್ಠತವಾಗಿರುವುದು ಕಂಡನು ಬಲಿಯು 4ಈ ಮಹಾವಿಭೂತಿ ರೂಪದಿ ಕಂಡ ತನ್ನಆ ಮಹಾಕ್ರತು ಋತ್ವಿಕ್ಕುಗಳಾಚಾರ್ಯಆ ಮುಖದಿ ನೆರೆದಿದ್ದ ಸದಸ್ಯರನ್ನು ಕಂಡತನ್ಮಾತ್ರ ಭೂತೇಂದ್ರಿಯ ಜೀವಯುಕ್ತ 5ಅನಘಾಂಘ್ರಿ ಪದಯುಗದಿ ಜಲಮೇಘ ಅಧಸ್ ಭೂಮಿಕಣುಕಾಲು ಜಾನೂಲಿ ಮಹಾದ್ರಿ ಪಕ್ಷಿಗಳುಘನಉರುದ್ವಯದಿ ಮಾರುತಅಂಬುಕಣಗಳುವರ್ಣಜಾಲ ಮಿಂಚು ಗುಹ್ಯದಲಿ ಸಂಧ್ಯಾ 6ಜಘನದಲಿ ದೈತ್ಯರ ಗುಂಪುಗಳುಹೊಕ್ಕುಳಲಿನಭಕುಕ್ಷಿಯಲಿ ಸಪ್ತಸಿಂಧುನಕ್ಷತ್ರ ಜ್ಯೋತಿರ್ಮಯಮಾಲಾ ಉರದಲಿಅಕಳಂಕ ಹೃದಯದಲಿ ಧರ್ಮ 7ಸ್ತನದಲಿ ಸತ್ಯವು ಮನಸ್ಸಲಿ ಚಂದ್ರನುಅನುಪಮ ವಕ್ಷದಲಿ ಶ್ರೀ ಪದ್ಮಹಸ್ತಕಂಠದಲಿ ಸುಸ್ವರ ಶಬ್ದ ಸಾಮಾದಿಗಳುಕರ್ಣದಲಿ ದಿಕ್‍ಭುಜದಿ ಇಂದ್ರಾದಿಸುರರು 8ನಾಸಿಕ್ಕದಲಿ ಶ್ವಾಸವಾಯು ಕಣ್ಣಲಿಸೂರ್ಯಶಿರಸ್ಸಲಿ ಮೇಘವು ವದನದಲಿ ªಹ್ನಿರಸನದಿ ಜಲೇಶನು ವಾಣಿಯಲಿ ವೇದಗಳುನಿಷೇಧವಿಧಿಶಾಸನ ಹುಬ್ಬು ಎರಡಲ್ಲೂ9ರೆಪ್ಪೆಯಲಿ ಅಹೋರಾತ್ರಿ ಕ್ರಮಣದಲಿ ಯಜÕವುಸುಪುಷ್ಟದಿ ಅಧರ್ಮ ಸ್ಪರ್ಶದಿ ಕಾಮಲೋಭವು ಅದsÀರದಿ ಮಾಯೆಯು ಹಾಸದಲಿಕೋಪ ಲಲಾಟದಲಿಅಂಬುರೇತಸಲಿ10ಮೃತ್ಯು ಛಾಯೆಯಲ್ಲಿ ಓಷಧಿ ರೋಮದಲಿನದಿಗಳು ನಾಡಿಯಲಿ ಕಲ್ಲು ನಖದಲಿಇಂದ್ರಿಯಗಳಲ್ಲಿ ದೇವಗಣ ಋಷಿ ಸಮೂಹವುಬುದ್ಧಿಯಲ್ಲಿಅಜಗಾತ್ರದಲಿ ಚರಾಚರವು11ಉರುಕ್ರಮ ವಿಶ್ವಮೂರ್ತಿ ವಾಮನ ವಿಭೋಪರಮಪೂರುಷ ನೀನೀರೂಪತೋರಿಸಲುನೆರೆದಿದ್ದ ಅಸುರರು ವಿಸ್ಮಯದಿ ನೋಡುತ್ತಬೆರಗಾಗಿ ನಿಂತರು ಏನೂ ತೋರದಲೆ 12ಸುದರ್ಶನ ಚಕ್ರ ಪಾಂಚಜನ್ಯವು ಶಂಖಕೌಮೋದಕೀ ಗದಾಶಾಙ್ರ್ಗ ಮಹಾಧನುಸ್ಸುಬತ್ತಳಿಕೆಗಳುಅಕ್ಷಯಸಾಯಕವುಕತ್ತಿಖೇಟಕಮುಖ್ಯ ವಿಷ್ಣು ಆಯುಧಗಳು13ಅಸಹ್ಯ ತೇಜೋಯುತ ಚಕ್ರ ಮೊದಲಾದಈಶ ನಿನ್ನಯ ಆಯುಧಗಳು ಇರಲುಪಾಶ್ರ್ವದಿ ನಿಂತಿದ್ದರು ಆನಂದಾದಿಪಾರ್ಷದರು ಸಹ ಲೋಕಪಾಲಕರು ಎಲ್ಲಾ 14ಸ್ಫುರದ್ ಕಿರೀಟಾಂಗದ ಮೀನ ಕುಂಡಲವುಉರದಿ ಶ್ರೀವತ್ಸ ರತ್ನೋಜ್ವಲ ಮೇಖಳಾದಿಗಳುಪೀತಾಂಬರ ಮಾಲೆ ಧರಿಸಿ ಪ್ರಜ್ವಲಿಸಿದಿಉರುಕ್ರಮ ಹರೇ ಶ್ರೀಶ ಭಗವಂತ ವಿಷ್ಣೋ 15ರಾಜರಾಜೇಶ್ವರ ತ್ರಿವಿಕ್ರಮ ನಿನ್ನೊಂದುರಾಜೀವಪಾದದಿಂದಕ್ಷಿತಿಸರ್ವ ಅಳೆದಿಭುಜ ಶರೀರದಿ ಆಕ್ರಮಿಸಿದಿನಭದಿಕ್ಕುಹೇ ಜಗದೀಶನೇ ನಮೋ ನಮೋ ಶರಣು 16ದ್ವಿತೀಯಪಾದದಿ ನೀನು ದ್ಯುಲೋಕ ಸ್ವರ್ಗಾದಿಸತ್ಯ ಲೋಕೋ¥ರಿ ವ್ಯಾಪಿಸಿ ನಿಲ್ಲಲುತೃತೀಯ ಪಾದಕೆ ಸ್ಥಳ ಅಣ್ವತಿ ಇಲ್ಲವುಎಂದರಿತ ಆ ಮಹಾಬಲಿ ದಾನಶೂರ 17ತ್ರಿವಿಷ್ಟಪ ಮಹರ್ಜನೋ ತಪ ಸತ್ಯಲೋಕಗಳತ್ರಿವಿಕ್ರಮ ನಿನ್ನಯ ಪಾದವು ವ್ಯಾಪಿಸಿತೀವ್ರ ಸರಸಿಜಜಾಂಡಕಟಾಹಭೇದಿಸೆ ಬ್ರಹ್ಮಅವನಿಜಸಲಾ ಪಾದದಿಂ ಗಂಗೆ ಪಡೆದಿ 18ಸತ್ಯಲೋಕವು ನಿನ್ನನಖಕಾಂತಿಯಿಂದಜ್ಯೋತಿಯಲಿ ಮುಳುಗಲು ಬ್ರಹ್ಮದೇವಎದ್ದು ಬಂದು ಪಿತ ನಿನ್ನ ಪಾದವ ಕಂಡುಅತಿ ಮುದದಿ ಪೂಜಿಸಿದ ಪರಿವಾರ ಸಹಿತ 19ಬ್ರಹ್ಮಸಹ ವಂದಿಸಿದರು ನಿನ್ನ ಮರೀಜಾದಿಮಹಂತರು ಸನಕಾದಿಯೋಗಿಗಳು ಸರ್ವಮಹಾಪುರಾಣ ಸಂಹಿತ ವೇದ ವೇದಾಂಗದಿಮಹಾಸದಾಗಮ ದೇವತಾ ಸಮೂಹ 20ಕಮಂಡಲದಿ ಜಲ ಪೂರೈಸಿಹರಿನಿನ್ನಕಮಲಪಾದಕೆ ಆಘ್ರ್ಯಪಾದ್ಯಾದಿ ಪೂಜೆನೇಮದಿ ಅತಿಮುದ ಭಕ್ತಿಯಿಂದಲಿ ಜೀವೋ -ತ್ತಮ ಬ್ರಹ್ಮ ಮಾಡಿದನು ನಿಜ ಪುಣ್ಯಶ್ಲೋಕ 21ತ್ರಿವಿಕ್ರಮನೇ ನಿನ್ನಯ ಪಾದತೀರ್ಥವೇ ಗಂಗಾಪವಿತ್ರತಮವೆಂದು ತ್ರಿಲೋಕದಲಿ ಪ್ರಸಿದ್ಧದೇವ ದೇವೋತ್ತಮನೇ ಅದ್ಭುತ ಮಹಾಮಹಿಮಪೂರ್ವವೋಲ್ ನಿಂತಿ ವಾಮನ ರೂಪದಲಿ 22ಕಮಲಾಸನಾದಿಗಳು ಲೋಕಪಾಲಕರೆಲ್ಲತಮ್ಮ ತಮ್ಮ ಅನುಚರ ಸುರರ ಸಮೇತನರ್ಮದಾ ತೀರಸ್ಥ ಬಲಿಯಕ್ರತುಶಾಲೆಯಲಿವಾಮನನೆ ನಿನ್ನ ಬಳಿ ಬಂದು ತುಂಬಿದರು 23ಜಯ ಜಯ ಜಯತು ಅನಂತ ಮಹಿಮನೆ ನಿನ್ನತೋಯಜೋದ್ಭವ ಮೊದಲಾಗಿ ಸುರವರರುಅಘ್ರ್ಯಪಾದ್ಯ ಗಂಧ ಧೂಪ ದೀಪಮಾಲಾನೃತ್ಯಗಾಯನದಿ ಪೂಜಿಸಿದರು ಮುದದಿ 24ಆನಂದ ಉಕ್ಕುವ ಭಕ್ತಿಯಿಂದಲಿ ನಿನ್ನಅನಂತ ಮಹಾತ್ಮ್ಯ ಕೊಂಡಾಡಿ ಸುತ್ತಿಸಿಸುಧ್ವನಿಯಲಿ ಜಯಘೋಷ ಮಾಡಿದರುದುಂದುಭಿಭೇರಿಶಂಖಗಳ ಬಾರಿಸುತ25ಬ್ರಹ್ಮದೇವನ ಸುತ ಜಾಂಬವಂತನು ಆಗಮಹಾಭೇರಿ ಶಬ್ದಿಸಿ ದಿಕ್ಕು ವಿದಿಕ್ಕುಮಹಾರ್ಹ ವಾಮನ ನಿನ್ನ ವೈಭವ ಕೊಂಡಾಡಿದ್ದುಮಹೋತ್ಸವ ಎಂದರು ಮುದದಿ ಸಜ್ಜನರು 26ಸಜ್ಜನರು ಸುರರೆಲ್ಲಾನಂದ ಭರಿತರು ಆಗೆದುರ್ಜನ ದೈತ್ಯರು ನಿಂದಿಸಿ ವಾಮನನುದ್ವಿಜರೂಪಿ ಮಾಯಾವಿ ವಿಷ್ಣು ಸುರಕ್ಷಪಕ್ಷನುವಂಚಕನು ಎನ್ನುತ್ತ ಅರ್ಭಟಮಾಡಿದರು 27ಸತ್ಯಧರ್ಮನುಬಲಿತಡೆದರೂ ಮೀರಿದೈತ್ಯರು ಅಚ್ಯುತನ ಕೊಲ್ಲಲು ಬಾರೆಜಯವಿಜಯವಿಷಕ್ಸೇನಾದಿಸುರರುದೈತ್ಯರಲಿ ಬಹು ಜನರ ಕೊಂದುಹಾಕಿದರು 28ನಂದ ಸುನಂದಜಯವಿಜಯಬಲಪ್ರಬಲಪತತ್ರಿಪಕುಮುದಕುಮುದಾಕ್ಷ ಜಯಂತಶೃತದೇವ ಪುಷ್ಪದಂತ ವಿಷಕ್ಸೇನಸಾತ್ವತಾದಿ ಸರ್ವರ ಶೌರ್ಯ ಏನೆಂಬೆ 29ವಿಪ್ರಚಿತ್‍ಯಾದಿ ದೈತ್ಯರಿಗೆ ಪೇಳಿದಬಲಿಪ್ರಭು ಭಗವಂತನ ಇಚ್ಛಾನುಸಾರವೇಲಭಿಸುವುದು ಸರ್ವವು ಜಯವು ಅಪಜಯವುಲಭಿಸಲು ಜಯ ಈಗಕಾಲಅಲ್ಲವೆಂದು30ಸಾತ್ವಿಕ ಧರ್ಮವಾನ್ಬಲಿಇನ್ನೂ ಬೋಧಿಸಲುಯುದ್ಧದಲಿ ತಾಡಿತ ದೈತ್ಯರು ಪಾತಾಳಯೈದಿದರು ಬೇಗನೆ ಏನೆಂದು ವರ್ಣಿಸುವೆಸದ್ಧರ್ಮ ಸುಜ್ಞÕನಿ ಭಕ್ತಬಲಿಗುಣವ31ಪದುಮಜಾಂಡದ ಪ್ರಭುವೇ ನಿನ್ನಾಜÉÕಯಿಂ ಗರುಡಬಂಧಿಸಿದ ವರುಣ ಪಾಶದಲಿ ಬಲಿಯಬಂಧಿಸಲು ಮಹಾಧ್ವನಿ ಹಾಹಾಕಾರವುಎದ್ದಿತು ದಿಕ್ಕು ವಿದಿಕ್ಕು ಸರ್ವತ್ರ 32ಬ್ರಷ್ಟ ಶ್ರೀ ಸ್ಥಿರಪ್ರಜÕ ಮಹಾಯಶಸ್ವಿ ಬಲಿಯವಿಷ್ಣು ಪ್ರಭವಿಷ್ಣು ವಾಮನ ನೀ ಕೇಳ್ದಿಅಷ್ಟು ಸ್ಥಳಗಳು ಎರಡು ಪಾದದಲಿ ಅಡಗಿದವುಕೊಟ್ಟು ಪೂರೈಸು ಮೂರನೇಪಾದಎಂದು33ಹೇಳಿದಂತೆ ಕೊಡದಿದ್ದರೆ ನಿರಯದಲಿಬೀಳ ಬೇಕೆಂಬುವುದು ಗುರುಗಳೊಪ್ಪುವರುಹೇಳಿದಂತೆ ಕೊಡು ಮೂರನೇಪಾದಸ್ಥಳಇಲ್ಲದಿದ್ದರೆ ನರಕ ಹೋಗು ಎಂದಿ ಬಲಿಗೆ 34ಪದಂ ತೃತೀಯಂ ಕುರು ಸೀಷ್ರ್ಣ ಮೇ ನಿಜಂಎಂದು ಪೇಳುತಬಲಿವರುಣಪಾಶಬಂಧಕೂ ನಿರಯಕೂ ಶೋಕದಿ ಅಂಜುವನಲ್ಲಸಾಧುಸತ್ಯದ ಕೊರತೆಗೇವೆ ಅಂಜುವೆನೆಂದ 35ನೈವಾರ್ಥ ಕೃಛ್‍ರಾಧ್ ಭವತೋ ವಿನಿಗ್ರಹಾದ ಸಾಧು ವಾದಾದ್ ಭೃಷ ಮೃದ್ವಿಜೇಯಥಾಎನ್ನುತಬಲಿಮತ್ತು ತನ್ನ ಕುಲಹಿರಿಯರುನಿನ್ನೊಲಿಸಿಕೊಂಡ ವಿಧ ಸ್ಮರಿಸಿ ಪೇಳಿದನು 36ಉತ್ತಮ ಶ್ಲೋಕ ಹರೇ ಪರಮಗುರು ನಿನ್ನಭಕ್ತವರ್ಯನು ಸಾಧು ಪ್ರಿಯ ಸತ್ಯಧರ್ಮಪ್ರಹ್ಲಾದ ಸರ್ವ ಐಹಿಕ ವಸ್ತು ಸಂಸೃತಿಹೇತುಎಂದು ನಿನ್ನ ಪದ್ಮಾಂಘ್ರಿಯಲ್ಲೇ ರತನಾದ37ಇನ್ನೂ ಬಹುವಾಗಿಬಲಿಭಕ್ತಿಯಿಂ ಮಾತಾಡೆಶ್ರೀನಿಧಿ ನಿನ್ನ ಪ್ರಿಯ ಪ್ರೇಮಿ ಪ್ರಹ್ಲಾದಪೂರ್ಣೇಂದು ಉದಿಸಿದಂದದಿ ಬಂದು ನಿಂತನುಹೊನ್ನು ವಸನಾಬ್ಜಾಕ್ಷ ಸುಂದರ ವಿಗ್ರಹನು 38ಬಂಧಿತಬಲಿಪಿತಾಮಹ ಪ್ರಹ್ಲಾದನಿಗೆಮೂಧ್ರ್ನಾ ನಮಿಸಿದನು ನೇತ್ರಾಂಬು ತುಳಕೆಪದ್ಮಜ ಸುನಂದೇಶನಂದಾದ್ಯುಪಾಸಿತಇಂದಿರೇಶನೆ ನಿನಗೆ ನಮಿಸಿದ ಪ್ರಹ್ಲಾದ 39ಮೋದಬಾಷ್ಪದಿ ನಮಿಸಿ ಪೇಳಿದನು ನೀಬಲಿಗೆಇಂದ್ರಪದ ಕೊಟ್ಟಿದ್ದಿ ಕೊಂಡೀಗ ಅದನ್ನೇಘಾತಕ ಮೋಹಕ ಶ್ರೀ ಕಳೆದು ಅನುಗ್ರಹ ಮಾಡಿದಿಎಂದು ನಮಿಸಿದ ಜಗದೀಶ್ವರನೇ ನಿನಗೆ 40ನಾರಾಯಣಅಖಿಳಲೋಕ ಸಾಕ್ಷಿಯೇ ನಿನಗೆಈ ರೀತಿ ಪ್ರಹ್ಲಾದ ಪೇಳಿದ ತರುವಾಯವಾರುಣದಿ ತನ್ನಪತಿಕಟ್ಟಿಲ್ಪಟ್ಟಿದ್ದು ಕಂಡುಕರಮುಗಿದು ನಮಿಸಿದಳು ನಿನಗೆಬಲಿಜಾಯಾ41ಇಂದ್ರಸೇನ ಎಂಬ ಮತ್ತೊಂದು ಹೆಸರುಂಟುಬಂಧಿತ ಬಲಿರಾಜನಿಗೆ ತತ್ಪತ್ನಿವಿಂದ್ಯಾವಳಿ ದೇವಿ ಭಯ ಭಕ್ತಿಯಿಂದಉಪೇಂದ್ರ ನಿನಗೆ ಬಿನ್ನೈಸಿದಳು ನಮಿಸಿ 42ಆನಂದಮಯಪೂರ್ಣಕಾಮ ಪ್ರಭು ನೀನುವನರುಹಭವಾಂಡವ ಕ್ರೀಡಾರ್ಥ ಪಡೆದಿಅನನ್ಯಾಧೀನ ಸ್ವತಂತ್ರ ಸರ್ವೇಶನುನೀನೇವೆ ಸರ್ವಕರ್ತನು ಅನ್ಯರಲ್ಲ 43ನೀನೇವೇ ಬ್ರಹ್ಮಾಂಡ ದೊರೆಕರ್ತಆಗಿರಲುಅನ್ಯರಿಗೆ ಕರ್ತೃತ್ವ ಸ್ವಾಮಿತ್ವವಿಲ್ಲತಾನು ದೊರೆ ಕೊಂಡಿಹೆ ಕೊಟ್ಟಿಹೆ ಬಿಟ್ಟಿಹೆ ಎಂಬಹೀನ ಅಹಂಕಾರ ಮಾತು ಅಸಂಗತವು 44ದೇವ ದೇವನೇ ನಿನ್ನ ನಾಭಿಜ ಬಿನ್ನೈಸಿದಅವಿಕ್ಲವ ಮನದಿಂದ ಸರ್ವಸ್ಥ ನಿನಗೆನಿವೇದಿಸಿದಬಲಿರಕ್ಷಣಾರ್ಹನಾಗಿಹನುಸರ್ವಸ್ವಾಮಿಯೇ ಭೂತಭಾವನಭೂತೇಶ45ಮಂದನಾದರು ಅರ್ಪಿಸೆ ನಿನ್ನ ಪದಯುಗದಿಭಕ್ತಿಯಿಂ ದೂರ್ವಾಂಕುರ ಸಲೀಲವಾದರೂಉತ್ತಮ ಸೌಭಾಗ್ಯಗತಿ ಈವಿ ಅಂಥವಗೆಂದುಖ್ಯಾತ ಮೂರ್ಜಗದಿ ಕೊಂಡಾಡುತಿಹರೆಂದು 46ಪದ್ಮಜಗೆ ನೀ ಪೇಳ್ದಿ ಈಬಲಿಮಹಾರಾಜಅತಿ ಕಷ್ಟಕೊಳಗಾದ ಶತ್ರು ಪೀಡಿತನುಶಪ್ತನಾಗಿ ಸ್ಥಾನ ಕಳಕೊಂಡರೂ ಸಹಸತ್ಯವಾಕ್ ತ್ಯಜಿಸದ ಸದ್ಧರ್ಮವಂತ 47ಸುವ್ರತ ಈ ಬಲಿಗೆ ಅಮರರಿಗೂ ದುಷ್ಪ್ಮಾಪ್ಯಸಾವರ್ಣಿ ಮನು ಕಲ್ಪದಿ ಇಂದ್ರ ಪದವಈವಿ ನೀ ಎಂದು ಅವ ಆ ಕಾಲದವರೆಗಿರಲಿವಿಶ್ವಕರ್ಮ ನಿರ್ಮಿತ ಸುತಲಿದಿ ಎಂದಿ 48ಆಧಿ ವ್ಯಾಧಿ ಶ್ರಮ ಉಪದ್ರವಗಳಿಲ್ಲ -ದಂಥ ಸುತಲದಲಿ ಸುಖದಿಂದಿರಲಿಎಂದು ನೀ ಬ್ರಹ್ಮನಿಗೆ ಪೇಳಿ ಬಲಿಯನು ನೋಡಿಇಂದ್ರಸೇನ ಮಹಾರಾಜ ಭದ್ರಮಸ್ತುತೆ ಎಂದಿ 49ಸುತಲದಲಿ ಪರಿವಾರ ಸ್ವಜನರಿಂದೊಡಗೂಡಿಭದ್ರದಿ ಸೌಭಾಗ್ಯದಿ ವಾಸಮಾಡುದೈತ್ಯಶತ್ರುಗಳು ಕಾಟಕೊಟ್ಟರೆಅವರಕತ್ತರಿಸುವುದು ಸುದರ್ಶನವು ಎಂದಿ 50ಸದಾ ಸನ್ನಿಹಿತನಾಗಿದ್ದು ರಕ್ಷಿಸುವಿಸದಾ ನಿನ್ನ ದರ್ಶನ ಮಾಡಬಹುದುದೈತ್ಯರ ಸಂಗದಿಂ ಅಸುರಭಾವ ಬಂದರೆ ನಿನ್ನಸುದರ್ಶನದಿ ಅದು ಪೋಪುದು ಎಂದಿ 51ಮಹೈಶ್ವರ್ಯಪೂರ್ಣಹರಿನಿನ್ನ ಮಾತುಕೇಳಿಮಹಾನುಭಾವನು ಸಾಧುಪ್ರಿಯ ಬಲಿರಾಯಮಹಾನಂದ ಬಾಷ್ಪವ ಸುರಿಸುತ್ತ ಸ್ತುತಿಸಿದಮಹಾಕೃಪಾಂಬುಧೇ ಭಕ್ತವತ್ಸಲ ನಿನ್ನ 52ಅನತೇಷ್ಟಪ್ರದ ಪ್ರಪನ್ನಪಾಲಕ ವಿಭೋತನಗೆ ಪೂರ್ವದಿ ಲೋಕಪಾಲಕರ್ಗೆ ಸಿಕ್ಕದಅನುಗ್ರಹ ಮಾಡಿರುವಿ ಅಸುರನು ತಾನುಎನ್ನುವದು ಎಣಿಸದೆÀ ಕೃಪೆ ಮಾಡಿದಿ ಎಂದ 53ಕೃತಜÕ ಭಕ್ತನುಬಲಿಹರಿನಿನಗೆ ನಮಿಸಿದನುಪದುಮಭವಗೂ ಸದಾಶಿವಗೂ ನಮಿಸಿದನುಬಂಧಿಸಿದ ವರುಣಪಾಶವು ಬಿಟ್ಟು ಹೋಯಿತುಹೇ ದಯಾನಿಧೇ ನಿನ್ನ ಕರುಣದಿಂದಲ್ಲೆ 54ಈ ರೀತಿ ಹರಿವಾಮನ ನೀನು ಕ್ರೀಡಿಸಿದಿಶಕ್ತನಿಗೆ ಸ್ವರ್ಗಾಧಿಪತ್ಯ ಪುನರಿತ್ತಿಸುರಮಾತೆ ಅದಿತಿಗೆ ಪಯೋವ್ರತ ಫಲವಿತ್ತಿಸರ್ವಜಗತ್ತಿಗೆ ಸುಕ್ಷೇಮಒದಗಿಸಿದಿ 55ಸಿರಿಧರಾಪತಿ ವಿಷ್ಣು ಶಿಪಿವಿಷ್ಣು ವಾಮನಹರಿನಿನಗೆ ಮೂರಡಿ ಸ್ಥಳ ದಾನ ಕೊಟ್ಟುಮೂರನೇಪಾದತನ್ನ ಶಿರ ಮೇಲೆ ಇಡು ಎಂದಧೀರ ಬಲಿಗೆ ಭಾವಿ ಇಂದ್ರಪದವಿತ್ತಿ 56ಇನ್ನಾರಿಗೂ ಈ ಸಮಯದಿ ಸಿಕ್ಕದನಿನ್ನಯ ಮಹವಿಶೇಷ ಪ್ರಸಾದ ಕೊಟ್ಟಿರುವಿವನಜಭವ ಶಿವ ವಂದ್ಯಹರಿನೀನು ರಕ್ಷಕನುನೀನೆಲ್ಲಿ ನಾವು ಅಸುರರು ಎಲ್ಲಿ ಸ್ವಾಮಿ 57ಜಗತ್ ಸೃಷ್ಟ್ಯಾದಿಗಳ ಲೀಲೇಯಿಂದಲಿ ಮಾಳ್ಪಿಸರ್ವಗ ಸಮ ಅವಿಕ್ರಯ ವಿವಿಧಫಲದಹೀಗೆ ಇನ್ನೂ ಬಹು ತತ್ವನಿಬಿಡ ಸ್ತೋತ್ರಉಕ್ಕುವ ಭಕ್ತಿಯಲಿ ಮಾಡಿದ ಪ್ರಹ್ಲಾದ 58ವತ್ಸಪ್ರಹ್ಲಾದ ಭದ್ರಂತೇ ಎನ್ನುತಸುತಲಕೆಬಲಿಸಹ ಪೋಗಿ ಸುಖಿಸುವುದುಗದಾಪಾಣಿ ನಿನ್ನನ್ನುನಿತ್ಯನೋಡಿ ಮಹಾ-ನಂದ ಹೊಂದಿಕರ್ಮಕಳೆಎಂದು ಪೇಳ್ದಿ59ಸಾಧುಪ್ರಿಯ ಪ್ರಖ್ಯಾತ ಪ್ರಹ್ಲಾದ ಬಲಿರಾಜಪ್ರದಕ್ಷಿಣಿ ನಮಸ್ಕಾರ ಭಕ್ತಿಯಿಂ ಮಾಡಿಆದಿ ಪೂರಷ ನಿನ್ನ ಅನುಜÉÕೀಯ ಕೊಂಡುಪೋದರು ಸುತಲಕ್ಕೆ ಮಹಾಬಿಲ ದ್ವಾರ 60ಮಧ್ಯದಲೆ ತಡೆಯಾದ ಬಲಿಯಜÕ ಪೂರೈಸೆಯಜÉÕೀಶ ಯಜÕ ಪೂರುಷ ಭೂಮ ನೀನುಆಜÉÕ ಮಾಡಲು ಶುಕ್ರಾಚಾರ್ಯ ಬ್ರಾಹ್ಮಣರೊಡೆಯಜÕ ಕರ್ಮವ ಸಾಂಗ ಪೂರ್ಣ ಮಾಡಿದರು 60ಬ್ರಹ್ಮ ಶಿವ ದಕ್ಷ ಮನು ಬೃಗ್ ವಾಂಗೀರಾದಿಗಳುಕುಮಾರ ದೇವರ್ಷಿಗಳು ಪಿತೃ ಭೂಮಿಪ ಸರ್ವರುವಾಮನನೇ ಲೋಕೈಕಪತಿಪಾಲಕನೆನುತ ನಿನಗೆನಮಿಸಿ ತೋಷಿಸಿದನು ಅದಿತಿ ಕಶ್ಯಪರು 62ಸರ್ವಲೋಕಂಗಳಿಗೂ ಸರ್ವವೇದಂಗಳಿಗೂಸರ್ವದೇವತೆಗಳಿಗೂ ಧರ್ಮ ಯಶಸ್‍ಸಿರಿಗೂಸರ್ವಸುವ್ರತಗಳಿಗೂ ಸ್ವರ್ಗಾಪವರ್ಗಕ್ಕೂಸರ್ವವಿಭೂತಿಪತಿಮಂಗಳ ಉಪೇಂದ್ರ63ಪದುಮಜನು ಅನುಮೋದಿಸಿ ಇಂದ್ರ ಬೇಡಲುನೀ ದೇವಯಾನದಿ ಇಂದ್ರ ಸಹ ಕುಳಿತುತ್ರಿದಿವ ಸೇರಿದಿ ಇಂದ್ರೇಂದ್ರ ಉಪೇಂದ್ರ ಆ -ನಂದಮಯ ಜಗದೀಶ ಶ್ರೀಪತೇ ಭೂಮನ್ 64ಅದಿತಿ ದೇವಿಯ ಹೊಗಳಿ ವಿಷ್ಣು ವಾಮನ ನಿನ್ನಅದ್ಭುತ ಮಹಿಮೆ ಕೊಂಡಾಡಿ ಕೀರ್ತಿಸುತಪದುಮಭವ ಶಂಕರ ಭೃಗ್‍ವಾದಿಮುನಿಪಿತೃ ಸಿದ್ಧರು ಸ್ವಸ್ವಸ್ಥಾನಯೈದಿದರು 65ವಾಮನನು ವಿಶ್ವರೂಪ ಪ್ರಕಟಿಸಿ ದಾನವಸ್ತುಭೂಮಿ ದಿವಿಯ ಈರಡಿಗಳ ವ್ಯಾಪಿಸಿದ್ದುನೇಮಿ ವಿಪ್ರಚಿತ್ತಿ ಪೇಳಿದ ಮಾಯಾಜಾಲವು ಅಲ್ಲವಿಷಮ ವಸ್ತುವ ದೋಷ ಕಿಂಚಿತ್ತೂ ಅಲ್ಲ 66ಪ್ರಾಥಮಿಕವಾಗಿ ಶ್ರೀ ವಿಷ್ಣುರೂಪಒಂದೊಂದಲೂಅನಂತರೂಪಗಳು ಸುಖಜ್ಞಾನಾದಿ ಪೂರ್ಣವಾಗಿಶಶ್ವದೇಕ ಪ್ರಕಾರವಾಗಿ ಇಹುದೆಂದು ಶಾಸ್ತ್ರ ಸಾರುತಿವÉಸ್ವತಃ ಅವ್ಯಕ್ತಹರಿಪ್ರಕಟಿಸುವ ಸ್ವೇಚ್ಛೆಯಿಂ ಆಗಾಗ67ಅಣೋರಣಿಯಾನ್ ಮಹತೋ ಮಹೀಯಾನ್ತನ್ನ ವಾಮನ ರೂಪದಲ್ಲೇ ತನ್ನ ವಿಶ್ವರೂಪತಾನೇ ವ್ಯಕ್ತ ಮಾಡಿದನು ವಿಷ್ಣು ವ್ಯಾಪನಶೀಲಗುಣರೂಪ ಅಭಿನ್ನ ಅವ್ಯಯನು 68ಮತ್ತೂ ಬಲಿರಾಜನಿಗೆ ಶ್ರುಕ್ರಾಚಾರ್ಯರುಮೊದಲೇವೇ ಹೇಳಿದರು ವಾಮನನು ವಿಷ್ಣು ಅವ್ಯಯನುಇಂದ್ರನಿಗೆ ಪುನಃ ರಾಜ್ಯ ಕೊಡಲಿಕ್ಕೆ ದಾನಕೇಳಿಕ್ಷಿತಿದಿವಿ ಸರ್ವವ ಎರಡು ಪಾದದಿಂ ಅಳೆವನೆಂದು69ಈ ರೀತಿ ಬಲಿರಾಜ ದಾನಕೊಡುವ ಪೂರ್ವದಲೆಹರಿವ್ಯಾಪನಶೀಲ ವಿಷ್ಣುವೇವೇ ವಾಮನನೆಂದುಅರಿತೇವೇಶಕ್ರಸಾಧಕ ದಾನ ಕೊಟ್ಟಿಹನುಮುಚ್ಚುಮರೆ ವಿಷಯ ವಂಚನೆಗೆ ಸಿಲುಕಲಿಲ್ಲ 70ಮೋಸಕ್ಕೆ ಒಳಗಾಗಿ ಅಲ್ಲ ಮನಸಾ ತಿಳಿದೇಅಸುರರಿಪು ವಿಷ್ಣುಗೆ ಬಲಿರಾಜ ತಾನೇಈಶಾರ್ಪಣಜಗತ್ರಯದಾನ ಕೊಟ್ಟಿಹನುಎಂದು ಹೇಳಿ ಕೀರ್ತಿಸಿದರು ದೇವಗಾಯಕರು 71ಕಿನ್ನರಕಿಂಪುರುಷಗಂಧರ್ವರು ಕೊಂಡಾಡಿದರುಮನಸ್ವಿನಾನೇನ ಕೃತಂ ಸುದುಷ್ಕರಂವಿದ್ವಾನ್ ಅದಾದ್ ಯದ್ರಿಪವೇ ಜಗತ್ರಯಂಏಕೋನ ವಿಂಶತ್ ಅಧ್ಯಾಯ ಶ್ಲೋಕ ಇಪ್ಪತ್ತು 72ಬಲಿರಾಜನು ರಾಣಿ ವಿಂದ್ಯಾವಳಿಯುಅಲ್ಲಿ ಬಂದ ಪ್ರಹ್ಲಾದ ಮಹಾರಾಜನುಪ್ರಲಂಭನ ವೈಷಮ್ಯ ವಾಮನ ಮಾಡಲಿಲ್ಲಬಲಿಗೆ ಮಹಾ ಅನುಗ್ರಹ ಮಾಡಿದಿ ಎಂದು ತಿಳಿದಿಹರು 73ಶಿಪಿವಿಷ್ಟ ವಾಮನ ತ್ರಿವಿಕ್ರಮನೆ ನಿನ್ನಸುಪವಿತ್ರ ಚರಿತೆ ಇದುಕೇಳಿಪಠಿಸುವರ್ಗೆಪಾಪ ಪರಿಹಾರವುಶುಭಮಂಗಳವಿತ್ತುಸೌಭಾಗ್ಯಪ್ರದ ಶ್ರೀಶ ಸದ್ಗತಿ ಈವಿ 74ಮಧ್ವಸ್ಥ ಸರ್ವಸ್ಥ ಮತ್‍ಸ್ಥವಿಧಿತಾತಜ್ಯೋತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುಕ್ ಪ್ರಸನ್ನ ಶ್ರೀನಿವಾಸಮುದಜ್ಞಾನಧನ ಆಯುರ್ಭಾಗ್ಯದನೇ ಶರಣು 75- ಇತಿ ತೃತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಕೂರ್ಮ5ಪ್ರಥಮ ಅಧ್ಯಾಯಶ್ರೀಕೂರ್ಮಪ್ರಾದುರ್ಭಾವಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ತನು ಕೂರ್ಮರೂಪಪಾಲಾಬ್ಧಿಜಾಪತಿಅನಘಅಜಿತ ಧನ್ವಂತರಿಲೀಲಾ ಮೋಹಿನಿಅನಘಶರಣು ಮಾಂಪಾಹಿಪವೇದಾದಿ ಸಚ್ಛಾಶ್ರ(ಪ್ರ)ಮೇಯ ವೇದವತೀಶಪದುಮಜಾಂಡವ ಪಡೆದ ಜಗದೇಕಭರ್ತಾಅದ್ವಿತೀಯನು ಸ್ವಾಮಿ ಸಮರಧಿಕರಿಲ್ಲದವವೇಧಮುಕ್ಕಣ್ಣಾದಿ ಸುರಸೇವ್ಯಪಾಹಿ1ಸತ್ಯ ಜ್ಞÕನಾನಂತ ಭೂಮಾದಿ ಗುಣನಿಧಿಯೇಸತ್ಯಸೃಷ್ಟಿ ಮಾಳ್ಪಿ ಸತ್ಯನಾಮಾಪ್ರತ್ಯಕ್ಷ ಪ್ರಮಾಣ ಸಿದ್ಧವು ಈ ಜಗತ್ತುತತ್ಸøಷ್ಟಿ ಪಾಲನಾದಿಗಳೆಲ್ಲ ಸತ್ಯ 2ಸೃಷ್ಟಿ ಪ್ರವಾಹವು ಅನಾದಿಯೂ ನಿತ್ಯವೂಘಟಾದಿ ಕಾರ್ಯಗಳ ಉಪಾದಾನ ಕಾರಣಮೂಲ ಜಡಪ್ರಕೃತಿಯೂ ಅನಾದಿಯೂ ನಿತ್ಯವೂಸೃಷ್ಟ್ಯಾದಿಕರ್ತಾ ನಿನ್ನಾಧೀನವು ಎಲ್ಲಾ 3ಕಾರ್ಯಕಾರಣಾತ್ಮಕ ಜಗತ್ತು ಸರ್ವಕ್ಕೂತೋಯಜಾಕ್ಷನೇ ನೀನು ನಿಮಿತ್ತ ಕಾರಣನುನಿಯಾಮಕನು ನೀನೇವೇ ಚಿದಚಿತ್ ಅಖಿಳಕ್ಕೂಅನ್ಯರಿಗೆ ಸ್ವಾತಂತ್ರ್ಯ ಸಾಮಥ್ರ್ಯವಿಲ್ಲ 4ವಿಧಿಶಿವಾದಿ ಸರ್ವ ಸುರಾಸುರರುಗಳಿಗೆಸತ್ತಾಪ್ರತೀತಿ ಪ್ರವೃತ್ತಿಪ್ರದ ಹರಿಯೇಭೂತಭವ್ಯ ಭವತ್ಪ್ರಭುವು ವಿಷ್ಣು ನೀನೇವೇಚೇತನಾ ಚೇತನಾಧಾರ ಸರ್ವತ್ರ 5ದೂರ್ವಾಸರ ಶಾಪ ನಿಮಿತ್ತದಿ ಸ್ವರ್ಗದಐಶ್ವರ್ಯವು ಕ್ಷಿಣವು ಆಗಿ ಬಹುವಿಧದಿದೇವಶತೃಗಳ ಬಲ ಉನ್ನಾಹವಾಗಲುದೇವರಾಜನು ಬ್ರಹ್ಮನಲ್ಲಿ ಪೋದ 6ವಾಸವವರುಣಾದಿ ಸುರರ ಮೊರೆಕೇಳಿಬಿಸಜಸಂಭವ ಶಿವ ಶಕ್ರಾದಿಗಳ ಕೂಡಿಶ್ರೀಶನೇ ರಕ್ಷಕನು ಎಂದು ನಿನ್ನಲ್ಲಿ ಬಂದುಸಂಸ್ತುತಿಸಿದನುಪರಮಪೂರುಷ ನಿನ್ನನ್ನ7ಅವ್ಯಯನೇ ಸತ್ಯನೇ ಅನಂತನೇ ಅನಘನೇಶ್ರೀವರನೇ ಪೂರ್ಣೈಶ್ವರ್ಯ ಮಹಾಪುರುಷದೇವವರೇಣ್ಯ ನಿನ್ನಲ್ಲಿ ಸ್ತುತಿ ಬ್ರಹ್ಮಸುವಿನಯದಿ ಮಾಡಿದ ವೇದಾರ್ಥಸಾರ 8ಸಹಸ್ರಾರ್ಕೋದಯ ದ್ಯುತಿ ಸುಂದರರೂಪಮಹಾರ್ಹ ಭಗವಂತಹರಿಈಶ್ವರನೇ ನೀನುಬ್ರಹ್ಮಾದಿಗಳ ಸ್ತುತಿಗೆ ಪ್ರಸನ್ನನು ಆಗಿಮಹಾನುಭಾವ ನೀ ಒಲಿದಿ ಕೃಪೆಯಿಂದ 9ಪದುಮನಾಭನೇನಿರ್ವಾಣಸುಖಾರ್ಣವನೇಪದುಮಭವ ಸನ್ನಮಿಸಿ ಪೇಳಿದ್ದಕೇಳಿಸಿಂಧುವಮಥನಮಾಡಲಿಕೆ ಬೇಕು ಎಂದಿಅದರ ಬಗ್ಗೆ ಉಪಾಯವ ಅರುಹಿದಿ ವಿಭುವೇ 10ಕ್ಷೀರಾಬ್ಧಿಯಲಿ ವೀರು ತೃಣ ಲತೌಷಧಿ ಇಟ್ಟುಗಿರಿಶ್ರೇಷ್ಠ ಮಂದರವ ಕಡೆಗೋಲು ಮಾಡಿವರಸರ್ಪ ವಾಸುಕಿಯ ಹಗ್ಗ ಮಾಡಿ ಮಥಿಸಿಅಮೃತೋತ್ಪಾದನ ಯತ್ನಿಪುದು ಎಂದಿ 11ದೈತ್ಯ ದಾನವರೆಲ್ಲ ಶತೃಗಳು ಆದರೂಸಂಧಿಯ ಅವರೊಡೆ ಮಾಡಿ ಕೂಡಿಮಂದರವ ಸಿಂಧುವಲಿ ತಂದಿಟ್ಟು ಮಥಿಸುವುದುಸುಧೆಯ ಉತ್ಪಾದನಕೆ ಉಪಾಯ ಇದು ಎಂದಿ 12ದೈತ್ಯರ ಸಹಕಾರ ಬಗೆ ಯುಕ್ತಿಗಳ ಪೇಳಿಭೀತಿ ಪಡಬೇಡ ವಿಷ ಉಕ್ಕಿ ಬರುವಾಗಅದಿತಜರಿಗೇವೇ ಫಲ ಲಭಿಸುವುದು ಎಂದುದಿತಿಜರಿಗೆಕ್ಲೇಶಭವಿಸುವುದು ಎಂದಿ13ಪುರುಷೋತ್ತಮ ಜಗತಃಪತಿ ಅಜಿತನಾಮಾಸುರರಿಗೆ ಬೋಧಿಸಿದ ರೀತಿ ಅನುಸರಿಸಿಶಕ್ರಾದಿಗಳು ವೈರೋಚನಾದಿಗಳೊಡೆತ್ವರಿತ ಯತ್ನಿಸಿದರು ಕಡಲ ಮಥನಕ್ಕೆ 14ದೂರದಲ್ಲಿ ಇದ್ದ ಆ ಅತಿಭಾರ ಗಿರಿಯನ್ನಸುರರುದಾನವರೆತ್ತಿ ಸಮುದ್ರ ತಟಕೆತರಲು ಬಹು ಯತ್ನಿಸಿದರು ವ್ಯರ್ಥದಿಗಿರಿಯ ಭೂ ಮೇಲೆತ್ತೆ ಅಸಮರ್ಥರು 15ಮೇರುಗಿರಿ ಬದಿ ಇದ್ದ ಮಂದರಾಚಲವುರುದ್ರ ರುದ್ರವರ ಬಲಯುತವು ಎತ್ತಲು ಅಶಕ್ಯಸುರದಾನವರು ಬೆರಗಾಗೇ ಒಂದೇ ಕರದಿಂಗಿರಿಯ ನೀ ಎತ್ತಿ ಗರುಡನ ಮೇಲೆ ಇಟ್ಟಿ 16ಗರುಡನಿಂದ ತಮ್ಮ ಮೇಲೆ ಇರಿಸೆ ಪರಿಕ್ಷಾರ್ಥಭಾರತಾಳದೇ ಸುರಾಸುರರು ಹತರಾಗೇಕಾರುಣ್ಯ ನೋಟದಿ ಬದುಕಿಸಿದಿ ಮೃತರನ್ನತೀವ್ರ ಗಾಯಗಳನ್ನ ಸೌಖ್ಯ ಮಾಡಿದಿಯೋ 17ಲೀಲೆಯಿಂದಲಿ ಪುನಃ ಒಂದೇ ಹಸ್ತದಿ ಗಿರಿಯಮೇಲೆತ್ತಿ ಗರುಡನ ಹೆಗಲಲಿಟ್ಟು ಕುಳಿತುಪಾಲಸಾಗರದಲ್ಲಿ ಸ್ಥಾಪಿಸಿ ಮಥನಕ್ಕೆವ್ಯಾಳನ ಹಗ್ಗದಂದದಿ ಸುತ್ತಿಸಿದಿಯೋ 18ಪುಚ್ಛಭಾಗವು ಅಮಂಗಳವು ಬೇಡವೆಂದುಅಸುರರ ವಾದಾ ಮುಖಭಾಗ ಹಿಡಿಯೇವಾಸುಕಿಯ ಪುಚ್ಛಾಂಗ ದೇವತೆಗಳು ಹಿಡಿದುಶ್ರೀಶ ನೀ ಸಹಕರಿಸೆ ಮಥನವ ಮಾಡಿದರು 19ಪರಮಯತ್ನದಿ ಅಮೃತಾರ್ಥ ಪಯೋನಿಧಿಯಗಿರಿಯಿಂದ ಮಂಥನ ಸುರಾಸುರರು ಮಾಡೆಪರಮಗುರುತರಅದ್ರಿಆಧಾರವಿಲ್ಲದೆಸರಿದು ಮುಳುಗಿ ಬೇಗ ಕೆಳಗಡೆ ಹೋಯಿತು 20ಶೈಲವು ಮುಳುಗಲು ಸುಧಾಕಾಂಕ್ಷಿಗಳ ಮನವ್ಯಾಕುಲದಿ ಮುಖಕಾಂತಿ ಮ್ಲೌನವು ಆಯಿತುಎಲ್ಲಾ ಶ್ರಮವು ವ್ಯರ್ಥ ಎಂದು ಬೆರಗಾಗಿರೆಬಲು ಕೃಪೆಯಲಿ ನೀನು ಒದಗಿದಿ ಆಗ 21ಅದ್ಭುತ್ ಮಹತ್ ಕಚ್ಛಪ ರೂಪದಲಿ ನೀಅಬ್ಧಿಯಲಿ ಬೇಗನೇ ಬಂದು ಮೇಲೆಎಬ್ಬಿಸಿದಿ ಆ ಮಂದರಾಚಲಗಿರಿಯಸುಬಲ ಪೂರುಷ ನಮೋ ಚಿನ್ಮೋದಗಾತ್ರ 22ಚನ್ಮೋದಮಯ ಮಹಾಕೂರ್ಮರೂಪನೇ ನಿನ್ನಅಮಿತ ಸುಬಲ ಲಕ್ಷ ಯೋಜನ ವಿಸ್ತಾರಸುಮಹಾ ದ್ವೀಪದಂದಿರುವ ಪೃಷ್ಠದ ಮೇಲೆಆ ಮಹಾದ್ರಿಯ ಹೊತ್ತಿ ಪುನರ್ ಮಥಿಸಲೊದಗಿದಿ 23ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧೀಶಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀಪ್ರಸನ್ನ ಶ್ರೀನಿವಾಸಧನ್ವಂತರೀ ಶರಣು ಅಜಿತ ಸ್ತ್ರೀಕೂರ್ಮ24-ಇತಿ ಪ್ರಥಮಾಧ್ಯಾಯ ಸಂಪೂರ್ಣಂ-ದ್ವಿತೀಯ ಅಧ್ಯಾಯನೀಲಕಂಠವೃತ್ತಾಂತಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಸಿರಿವರಹರಿಕೂರ್ಮನ ಪೃಷ್ಠೋಪರಿನಿಂತಗಿರಿಯಿಂದ ಅಸುರರುಸುರರುಪುನರ್ಮಥಿಸೆಗಿರ್ಗಿರಿ ಗಿರಿ ಗಿರಿ ಎಂದು ಭ್ರಮಿಸಿತು ಗಿರಿಯುಪರಿಮಳ ಪೂ ಸುರಿಸಿದರು ಬ್ರಹ್ಮಾದಿಗಳು 1ವಾಸುಕಿತಾಳದೇ ಬುಸು ಬುಸು ಎಂದು ಮೇಲ್ಶ್ವಾಸದಿ ವಿಷಜ್ವಾಲೆ ಹೊರಗೆ ಬಿಡಲುಅಸುರಬಲಿಇಲ್ವಾದಿಗಳು ಬಿಸಿ ಸಹಿಸದೇಘಾಸಿಹೊಂದಿದರುದಾವಾಗ್ನಿಪೀಡಿತರ ಪÉೂೀಲ್2ದಿತಿಜರು ಅದಿತಿಜರು ಎಷ್ಟೇ ಯತ್ನಿಸಿದರೂಸುಧಾ ಇನ್ನೂ ಪುಟ್ಟದೇ ಇರುವುದ ಕಂಡುದಂತ ಶೂಕವ ಆಗ ಸ್ವಯಂ ನೀನೇ ಹಿಡಿದುಮಥನಮಾಡಿದಿ ಸ್ವಾಮಿ ಕಾರುಣ್ಯದಿಂದ3ಪೀತಾಂಬರಿ ಸುಖ ಚಿನ್ಮಾತ್ರ ಚಾರ್ವಾಂಗಸದಾ ನಮೋ ಶರಣಾದೆ ಲೋಹಿತಾಕ್ಷದಿತಿಜಾ ಅದಿತಿಜಾರೊಡೆ ನೀನು ಸಹಮಥಿಸಲುಲತಾ ಓಷಧಿ ಕಲುಕಿ ಉಕ್ಕಿತುಸಿಂಧು4ಹಾಹಾ ಭಯಂಕರವು ಇದೇನು ಲೋಕಗಳದಹಿಸುವಂದದಿ ಫೇಣ ಉಕ್ಕಿ ಬರುತಿದೆಯುಮಹಾ ವೀರ್ಯತರ ಹಾಲಾಹಲವೆಂಬ ವಿಷ ಇದುಮಹೀಭರ್ತಾ ಮಹಾದೇವ ಮಹಾದ್ರಿದೃತ್ಪಾಹಿ5ಅಸಮ ಸ್ವಾತಂತ್ರ್ಯ ನಿಜಶಕ್ತಿ ಪರಿಪೂರ್ಣವಿಶ್ವರಕ್ಷಕ ನೀ ವಿಷಭಯ ನಿವಾರಿಸೆಸ್ವಸಮರ್ಥನಾದರೂ ಭೃತ್ಯರ ಕೀರ್ತಿಯಪ್ರಸರಿಸೆ ಒದಗಿದಿ ಮಹಾದೇವ ಶಾಸ್ತ 6ಮಹತ್ ಎಂಬ ಬ್ರಹ್ಮನ ಸ್ವಾಮಿ ಆದುದರಿಂದಮಹಾದೇವ ಎಂಬುವ ನಾಮ ನಿನ್ನದೇವೇಮಹಾದೇವ ಶಿವ ಈಶ ರುದ್ರಾದಿ ಶಬ್ದಗಳುಮಹಾಮುಖ್ಯ ವೃತ್ತಿಯಲಿ ನಿನಗೇವೇ ವಾಚಕವು 7ಭಸ್ಮಧರ ದೇವನಿಗೆ ಮಹಾದೇವ ಎಂಬುವನಾಮ ಔಪಚಾರಿಕದಲ್ಲೇವೇ ರೂಢಬ್ರಹ್ಮನಾಮನು ನೀನೇ ಬ್ರಹ್ಮಾಂತರ್ಯಾಮಿಯುಬ್ರಹ್ಮನೊಳು ಇದ್ದು ನೀ ಭುವನಂಗಳ ಪಡೆವಿ 8ರುದ್ರ ನಾಮನು ನೀನೇ ರುದ್ರಾಂತರ್ಯಾಮಿಯುರುದ್ರನೊಳು ಇದ್ದು ನೀ ಸಂಹಾರವ ಮಾಡುವಿತತ್‍ತತ್ರಸ್ಥಿತೋ ವಿಷ್ಣುಃ ತತ್‍ಚ್ಛಕ್ತಿ ಪ್ರಬೋಧÀಯನ್ರುದ್ರನಿಂ ವಿಷಪಾನ ನಿನ್ನ ನಿಯಮನವೇ 9ಶಕ್ರಾದಿ ಸರ್ವರಿಗೂಗುರುಆಶ್ರಯನು ಶಂಕರನುಶಂಕರನಿಗೆ ಆಶ್ರಯನು ಗುರುಮುಖ್ಯವಾಯುಮುಖ್ಯವಾಯುಗಾಶ್ರಯ ಶ್ರೀಕಾಂತ ನೀನುಶ್ರೀಕಾಂತ ನೀನೇವೇ ಸರ್ವಾಶ್ರಯ ಅನೀಶ 10ಯಾವ ಮಹಾದೇವನೊಲಿಯದೇ ವಾಯು ಒಲಿಯಆ ವಾಯು ಒಲಿಯದೇಹರಿತಾನೂ ಒಲಿಯಆ ವಾಯು ಹರಿಒಲಿಯದಿರೆ ಬೇರೆ ಗತಿಇಲ್ಲಆ ವಾಯು ಹರಿಧಾಮ ಮಹಾದೇವ ಸ್ತುತ್ಯ 11ಸರ್ವಾಂತರ್ಯಾಮಿ ಯಾವನಲಿ ಪ್ರಸನ್ನನು ಆಗಿಯಾವನ ಮೂಲಕ ಶಕ್ರಾದಿಗಳ ಕಷ್ಟತೀವ್ರದಿ ಪೋಗುವುದೋ ಆ ಮಹಾದೇವನ ಸ್ತುತಿಸಿದರುಸುರರುಶಿವಾಂತರ್ಯಾಮಿ ಶ್ರೀಹರಿ ಮಹಿಮೆಗಳ ಕೂಡಿ 12ಕರತಲೀಕೃತ್ಯಹಾಲಾಹಲವಿಷವಶಕ್ರಾದಿ ಜನರಲ್ಲಿ ಕೃಪೆ ಮಾಡಿ ಉಂಡುಕರುಣಾಳು ಮಹಾದೇವ ಭೂತದಯಾಪರನು ಈಹರಿಭಕ್ತಾಗ್ರಣಿ ಶಿವ ಉಮೇಶನಿಗೆ ಶರಣು 13ಹರಿಬ್ರಹ್ಮ ಪಾರ್ವತಿ ಪ್ರಜೇಶ್ವರರುಹರನ ಈ ಮಹತ್ಸೇವೆ ಬಹು ಶ್ಲಾಘಿಸಿದರುಕರದಿಂದ ಕೆಳಗೆ ಪ್ರಸ್ಕನ್ನ ಗರವಾದ್ದುಸರೀಸೃಪ ವೃಶ್ಚಿಕಾದಿಗಳೊಳು ಸೇರಿತು 14ಗರವು ಭೂಷಣವಾಯಿತು ವೈರಾಗ್ಯಾಧಿಪ ಶಿವಗೆಸುಪ್ರಸಿದ್ಧನು ಆದ ನೀಲಕಂಠನೆಂದುಧೀರ ಕರುಣಾಂಬುನಿಧಿ ನಂಜುಂಡೇಶ್ವರನು ಈಗಿರಿಜೇಶನಿಗೆ ನಾ ನಮಿಪೆ ಶರಣೆಂದು 15ಈ ಕೃಪಾಕರ ನೀಲಕಂಠ ಕರತಲೀಕೃತ್ಯಆ ಕಾಲಕೂಟವಿಷ ಉಂಡ ಮಹತ್ಕಾರ್ಯಸಂಕೀರ್ತಿ ಪೇಳಿರುವುದು ಶ್ರೀ ಭಾಗವತದಿಬಾಕಿ ಬಹು ಮಹೋಲ್ಪಣ ವಿಷ ವಿಷಯ ಶೃತಿ ವೇದ್ಯ 16ಉರಗಭೂಷಣ ವಿಪ ಉರಗಪರುಗಳಿಗಿಂತನೂರುಗುಣ ಎಂಬುದಕೆ ಅತ್ಯಧಿಕ ಬಲಿಯುವರಮುಖ್ಯ ಪ್ರಾಣ ಜಗತ್ ಪ್ರಾಣಗೆ ಸಮರಿಲ್ಲನೀರಜಜಾಂಡದಿ ಎಲ್ಲೂ ಶರಣೆಂಬೆ ಇವಗೆ 17ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ18-ಇತಿ ದ್ವಿತೀಯಾಧ್ಯಾಯಂ ಸಂಪೂರ್ಣಂ -ತೃತೀಯ ಅಧ್ಯಾಯಶ್ರೀ ಇಂದಿರಾ ಆವಿರ್ಭಾವಸಾರಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಗರಪಾನವ ವೃಷಾಂಕನು ಮಾಡೆ ಇಂದ್ರಾದಿಸುರರುದಾನವರು ಪುನರ್‍ಮಥನವ ಚರಿಸೆಕ್ಷೀರಸಾಗರದಿಂದ ಉತ್ಪನ್ನವಾದವುಪರಿಪರಿ ವಸ್ತುಗಳ್ ಒಂದರ ಮೇಲೊಂದು 1ಯಜÉೂÕೀಪಯೋಗಿಗಳಪ್ರದ ಕಾಮಧೇನುಉಚ್ಛೈಶ್ರವನಾಮ ಸುಲಕ್ಷಣ ಅಶ್ವಸಚ್ಛಕ್ತಿ ಶ್ರೇಷ್ಠತರ ಐರಾವತನಾಮಗಜೇಂದ್ರ ನಾಲ್ಕು ಚಂದದಂತ ಭೂಷಿತವು 2ಸರಸಿಜೋದ್ಭವಸೇವ್ಯಶ್ರೀಶವರಾಹಹರಿನಿನ್ನ ವಕ್ಷ ಸಂಬಂಧದಿ ಹೊಳೆವಸುಶ್ರೇಷ್ಠ ಕೌಸ್ತುಭರತ್ನ ಎಂಬುವಂತಹಸುಭ್ರಾಜಮಣಿ ಬಂತು ಆ ಸಿಂಧುವಿನಿಂದ 3ಸುರಲೋಕ ವಿಭೂಷಣವು ಸರ್ವವಾಂಛಿತ ಪ್ರದವುಪಾರಿಜಾತವು ಉದ್ಭವವಾಯಿತು ತರುವಾಯಸ್ಫುರದ್ರೂಪ ರಮಣೀಯ ಸುಂದರಾಂಗಿಗಳುಹಾರವಸನಭೂಷಿತ ಅಪ್ಸರಸರು 4ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್‍ವಿದಿಕ್ಕುಗಳ ರಂಜಿಸುವರೂಪ -ದಿಂದ ಆವಿರ್ಭವಿಸಿದಳು ಸಾಕ್ಷಾತ್ ಶ್ರೀಇಂದಿರೆಅಲೌಕಿಕ ಸೌಂದರ್ಯಪೂರ್ಣೆ5ಸರ್ವದಾ ಸರ್ವವಿಧದಿ ನಿನ್ನ ಸೇವಿಸಿ ನುತಿಪಸರ್ವಜಗಜ್ಜನನಿಯೇಸಿಂಧುಕನ್ಯಾದೇವ ದೇವೋತ್ತಮ ರಾಜರಾಜೇಶ್ವರ ನಿನಗೆದೇವ ಶ್ರೀ ರಾಜರಾಜೇಶ್ವರಿನಿತ್ಯನಿಜಸತಿಯು6ಇಂದ್ರಾದಿ ದೇವತೆಗಳು ಮುನಿಜನರುಇಂದಿರೆಯನ್ನು ವಿಧಿಯುಕ್ತ ಪೂಜಿಸಿದರುಸಿಂಧುರಾಜನು ವರುಣ ಏನು ಧನ್ಯನೋ ಜಗನ್ -ಮಾತೆ ನಿರ್ದೋಷೆ ರಮಾ ಮಗಳಾಗಿ ತೋರಿಹಳು 7ಅಲೌಕಿಕ ಮುತ್ತು ನವರತ್ನದ ಮುಕುಟಒಳ್ಳೇ ಪರಿಮಳ ಹೂವು ಮುಡಿದ ತುರುಬುಪಾಲದಲಿ ಶ್ರೇಷ್ಠತಮ ಕಸ್ತೂರಿತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬಟ್ಟು 8ಅಂಬುಜಾಕ್ಷಗಳು ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯಪ್ರದ ಕೃಪಾನೋಟಕಂಬುಕಂಠದಿ ಮಂಗಳಸೂತ್ರ ಕರಯುಗದಿಅಂಬುಜಾವರಕೊಡುವ ಅಭಯಹಸ್ತಗಳು9ಕಂದರದಿ ಎಂದೂ ಬಾಡದಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟಿವಸ್ತ್ರ ರಾಜಿಸುವಂತಹ ಸ್ವರ್ಣಹಾರಗಳುಕಾಂತಿಯುಕ್ ಭಂಗಾರ ಸರ್ವಾಭರಣಗಳು 10ಆನಂದಮಯಅಜಿತನಾಮಾ ನಿನ್ನನು ಮನ-ಮಂದಿರದಿ ಪೂಜಿಸುತ ಇಂದಿರಾದೇವಿಬಂದು ಸಭೆಯಲಿ ಸಾಲು ಸಾಲಾಗಿ ಕುಳಿತಿದ್ದವೃಂದಾರಕರನ್ನ ಮಂದಹಾಸದಿ ನೋಡಿದಳು 11ಒಬ್ಬೊಬ್ಬ ದೇವತೆಯಲೂ ಗುಣವಿದ್ದರೂಅಬ್ಬಬ್ಬ ಏನೆಂಬೆ ದೋಷಗಳೂ ಉಂಟುಅದ್ಭುತ ಗುಣನಿಧಿನಿರ್ದೋಷಸರ್ವೇಶ-ಅಂಬುಜನಾಭ ನೀನೇವೇ ಎಂದು ನಮಿಸಿದಳು 12ಕ್ಷರರಿಗೂ ಅಕ್ಷರರಿಗೂ ಎಂದೆಂದೂ ಆಶ್ರಯನುಪುರುಷೋತ್ತಮಹರಿವಿಷ್ಣು ಸ್ವತಂತ್ರಸರಿ ಅಧಿಕರು ಇಲ್ಲದ ಅನಘನು ಸರ್ವಗುಣಪರಿಪೂರ್ಣನಿಗೇವೇ ಅರ್ಪಿಸಿದಳು ಮಾಲೆ 13ಉತ್ತಮ ಸುತೀರ್ಥಗಳಿಂದ ಅಘ್ರ್ಯ ಚಮನಪಾದ್ಯಾದಿ ಅರ್ಚನೆ ವಿಧಿಯುಕ್ತವಾಗಿಸುತಪೂನಿಧಿ ವಸಿಷ್ಠಾದೀಯರು ವೇದೋಕ್ತಮಂತ್ರ ಪಠಿಸೆ ವರುಣ ಹರಿಯ ಪೂಜಿಸಿದ 14ಆನಂದಪೂರ್ಣಅಜನಿತ್ಯಮುಕ್ತೆ ಮಗಳುಇಂದಿರೆಯಆನಂದಮಯಹರಿನಿನಗೆಸಿಂಧುಧಾರೆ ಎರೆದು ಮದುವೆ ಮಾಡಿಕೊಟ್ಟಆನಂದ ನಿತ್ಯದಂಪತಿ ರಮಾ ಮಾಧವರು 15ಪೀತಾಂಬರ ದಿವ್ಯ ಆಭರಣ ಪೊಳೆಯುತ್ತಮೋದಮಯ ನೀ ಸಿಂಧುಜಾ ಸಹ ದಿವ್ಯರತ್ನ ಖಚಿತ ಮಂಟಪದಲಿ ಕುಳಿತರೆಮುದದಿ ವರ್ಷಿಸಿದರು ಪೂಮಳೆಸುರರು16ಸಂಭ್ರಮದಿ ಮಂಗಳವಾದ್ಯ ಸುಧ್ವನಿಗಳುತುಂಬಿತುಅಂಬರಅಂಬುಧಿಎಲ್ಲೂಗಂಭೀರ ಸುಸ್ವರ ವೇದಘೋಷಗಳುತುಂಬರ ನಾರದಾದಿಗಳ ಗಾಯನವು 17ದೇವಗಾಯಕರುಗಳ ದಿವ್ಯ ಕೀರ್ತನೆಗಳುದೇವನರ್ತಕ ನರ್ತಕಿಯರ ನರ್ತನವುದೇವತೆಗಳ ಆಭರಣಾದಿ ಕಾಣಿಕೆಗಳದೇವಿ ರಮೆಗೂ ನಿನಗೂ ಅರ್ಪಿಸಿದರು ಮುದದಿಂ 18ವನಜಭವ ರುದ್ರಾದಿಗಳು ಮುನಿವೃಂದವುಸನ್ನುತಿಸುತ ಸರ್ವ ಕೀರ್ತನವನ್ನುಆನಂದ ಭಕ್ತಿಯಂ ಶ್ರೀ ಲಕ್ಷ್ಮೀಯನ್ನು ನೋಡಿಧನ್ಯರಾದರು ನಮೋ ವಿಷ್ಣುಗೆ ಶ್ರೀರಮೆಗೆ 19ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ20- ಇತಿ ತೃತೀಯ ಅಧ್ಯಾಯ ಪೂರ್ಣಂ -ಚತುರ್ಥ ಅಧ್ಯಾಯಶ್ರೀ ಧನ್ವಂತರಿ ಹಾಗೂ ಮೋಹಿನಿವೃತ್ತಾಂತಸಾರಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪವಿಸ್ತಾರವಾಗಿ ಫೇಣವು ವ್ಯಾಪಿಸಿರುವಆ ಸಮುದ್ರದಿಂದ ವಾರುಣಿಯು ಬರಲಾಗಅಸುರರನು ತಮಗೇವೆ ಬೇಕೆಂದು ಕೊಂಡರುಈಶ ನೀ ಅವರಿಗೆ ಅನುಮತಿ ಕೊಡಲು 1ಸುಧೆಗಾಗಿ ಸಿಂಧುವ ಮತ್ತೂ ಮಥನಮಾಡೆಉದಿಸಿದನುಪರಮಅದ್ಭುತ ಪುರುಷನುಸುಂದರ ವಿಗ್ರಹ ಕಂಬುಗ್ರೀವ ಅರುಣೇಕ್ಷಣಅಂದ ಸುದೀರ್ಘ ಪೀವರದೋರ್ದಂಡ 2ಸಗ್ನಧರ ಶ್ಯಾಮಲಸ್ತರುಣ ಸರ್ವಾಭರಣ -ದಿಂದ ಒಪ್ಪುವ ರತ್ನಖಚಿತ ಕುಂಡಲವುಪೀತವಾಸ ಮಹಾಸ್ಕಂಧ ಸುಶುಭಾಂಗನುಸ್ನಿಗ್ದ ಕುಂಚಿತ ಕೇಶ ಸಿಂಹ ವಿಕ್ರಮನು 3ಅನುಪಮಾದ್ಭುತ ಈ ಮಹಾಪುರುಷ ಸಾಕ್ಷಾತ್ವಿಷ್ಣು ನೀನೇವೆ ಮತ್ತೊಂದವತಾರಆನಂದ ಚಿನ್ಮಾತ್ರ ಹಸ್ತದಲಿ ಹಿಡಿದಿರುವಿಪೂರ್ಣವಾಗಿ ಅಮೃತ ತುಂಬಿರುವ ಕಳಸ 4ಆಯುರ್ವೇದ ಮಹಾಭಿಷಕ್ ಶ್ರೀ ಧನ್ವಂತರಿ ನೀನುಕೈಯಲ್ಲಿ ಪಿಡಿದ ಪಿಯೂಷ ಕುಂಭವನುದೈತ್ಯರು ನೋಡಿ ಬಹು ಇಚ್ಛೈಸಿ ಅಪಹರಿಸೆಶ್ರೀಯಃಪತಿಯೇಸುರರುನಿನ್ನಲ್ಲಿ ಮೊರೆಇಟ್ಟರು5ದೇವತಾವೃಂದವಿಷ್ಣಮನಸ್ಸಿಂದಲಿದೇವವರೇಣ್ಯಹರಿನಿನ್ನ ಶರಣು ಹೋಗಲುಯಾವ ಮನಖೇದವೂ ಬೇಡ ಅನುಕೂಲವನೇಮಾಡುವಿ ಎಂದು ನೀ ಅಭಯವನ್ನಿತ್ತಿ 6ಅಮೃತಕಲಶವು ಎಂದು ನೆನೆದು ಆ ಅಸುರರುನಾಮುಂಚಿ(ಚೆ) ನಾಮುಂಚಿ (ಚೆ) ನೀ ಮುಂಚಿ (ಚೆ) ಅಲಲ್ತಮ್ಮೊಳಗೆ ಈ ರೀತಿ ಪರಸ್ಪರ ಕಾದಾಡೇನೀ ಮೋಹಿನಿ ರೂಪದಲಿ ತೋರಿ ನಿಂತಿ 7ಪರಮಅದ್ಭುತ ಅನಿರ್ದೇಶ್ಯ ಸ್ತ್ರೀರೂಪವಧರಿಸಿ ನಿಂತಿಯೋ ಆ ಅಸುರರ ಮುಂದೆಅರಳಿದಮಲ್ಲಿಗೆ ಮುಡಿದ ಕುಂತಳವುವರಾನನ ಕರ್ಣಕುಂಡಲಕಪೋಲ8ಸುಗ್ರೀವ ಕಂಠಾಭರಣ ಸುಭುಜಾಂಗದಸ್ಫುರತ್ ನವ ಯೌವನಗಾತ್ರ ಸೌಂದರ್ಯಉರದಿ ಪೊಳೆಯುವ ನವರತ್ನಪದಕಗಳುಭಾರಿ ಪೀತಾಂಬರವುದಿವ್ಯಒಡ್ಯಾಣ9ಸರ್ವಅವಯವಗಳು ಅನುಪಮ ಸುಂದರವುಸರ್ವಾಭರಣ ವಿಭೂಷಿತ ಸೊಬಗುಸರ್ವಾಕರ್ಷಕ ಮಂದಗತಿ ನೋಟವುಸರ್ವ ಆ ದೈತ್ಯರೊಳು ಕಾಮ ಪುಟ್ಟಿಸಿತು 10ಅಮರರೊಳು ದೈತ್ಯರೊಳು ಗಂಧರ್ವ ನರರೊಳುಈ ಮಹಾ ಸೌಂದರ್ಯರೂಪ ಕಂಡಿಲ್ಲಸುಮೋಹಿತ ದೈತ್ಯರು ಸುಧಾ ವಿಷಯದಲಿತಮಗೂ ಸುರರಿಗೂ ನ್ಯಾಯಮಾಡೆ ಕೋರಿದರು 11ಮಾಯಾಯೋಷಿದ್ವಪುಷಅಮೃತ ವಿನಿಯೋಗನ್ಯಾಯವೋ ಸರಿಯೋ ಸರಿಯಲ್ಲವೋನೀ ಹ್ಯಾಗಾದರೂ ಮಾಡಲಿಕೆ ಒಪ್ಪಿದರುಮಾಯಾಮೋಹವೃತ ಆ ದೈತ್ಯಜನರು12ಉಪವಾಸ ಸ್ನಾನ ಹೋಮಾದಿಗಳು ಆಗಿದೀಪಾವಳಿಗಳ ಹಚ್ಚಿಟ್ಟು ಮುದದಿತಪ್ಪದೇಮುಕ್ತಆಚರಣೆ ತರುವಾಯಸುಪವಿತ್ರ ಸುಧೆಗೆ ಕಾದರು ಸುರಾಸುರರು 13ಸುಧೆಗೆ ಕಾದಿರುವ ಸುರಾಸುರರ ನೋಡಿಸುಧಾ ಕಲಶ ನಿಜವಾದ್ದನ್ನ ಹಿಡಿದಿಮಂದಗಜ ಗತಿಯಲ್ಲಿ ಶೃಂಗಾರ ಸುರಿಸುತ್ತಬಂದಳು ಮೋಹಿನಿ ಚಂದ ನವಯುವತಿ 14ಅಸುರರು ಅರಿಯರು ಯೋಷಿದ್ ವಪುಹರಿಯೇವೇಆ ಸ್ಫುರದ್ರೂಪಿಣಿ ಮೋಹಿನಿ ಎಂತಅಸುರರು ಲೋಲುಪಮರು ಸುಧಾ ಅನರ್ಹರು ಎಂದುಶ್ರೀಶ ನೀ ನಿಶ್ಚಯಿಸಿದಿ ದೇವ ದೇವ 15ದೇವತೆಗಳ ಪಂಕ್ತಿ ಒಂದು ಸಾಲು ಮತ್ತುದೇವಶತೃಗಳ ಪಂಕ್ತಿ ಮತ್ತೊಂದು ಸಾಲುದೇವತೆಗಳಿಗೇವೇ ನೀ ಸುಧ ಉಣಿಸಿದಿದೇವಶತೃಗಳಿಗೆ ಸುಧಾ ಉಣಿಸಲಿಲ್ಲ 16ಕೂರ್ಮರೂಪದಲಿ ನೀ ಮಂದರಾಗಿರಿ ಪೊತ್ತುಅಮರರ ಸಹಿತಸಿಂಧುಮಥಿಸಿದಿ ಅಜಿತಅಮೃತ ಕಲಶವ ತಂದಿ ಶ್ರೀಶ ಧನ್ವಂತರಿಸುಮನಸಸುಧಾಪ್ರದ ಮೋಹಿನಿರೂಪ17ಹರಿಪಾದಾಶ್ರಿತರಾಗಿರುವ ಸುರರಿಗೆ ಅಮೃತಹರಿಪರಾನ್ಮುಖ ದ್ವೇಷಿ ದೈತ್ಯರಿಗೆ ಇಲ್ಲಸುರಾಸುರಗಣಕೆ ಸಮ ಕರ್ಮೋಪಕರಣಗಳುಆದರೂ ಯೋಗ್ಯತೆಯಿಂದ ಫಲ ಬೇರೆ ಬೇರೆ 18ಜ್ಞಾನಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ19- ಇತಿ ಚತುರ್ಥ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಪಾದರಾಜರ ಅಣು ಚರಿತೆ103ಪ್ರಥಮ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪೊಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪಶ್ರೀ ಹಂಸ ಲಕ್ಷ್ಮೀಶನಾಭಿಭವಸನಕಾದಿಮಹಂತದೂರ್ವಾಸಾದಿಗಳಗುರುಪರಂಪರೆಯಮಹಾಪುರುಷೋತ್ತಮ ದಾಸ ಶ್ರೀ ಮಧ್ವವನ -ರುಹಪಾದಗಳಲಿನಾ ಶರಣು ಶರಣಾದೆ1ಕಲಿಯುಗದಿ ಸಜ್ಜನರು ದುರ್ಜನರ ದುಸ್ತರ್ಕಕಲುಷವಾದಗಳಲ್ಲಿ ಮನಸೋತು ಪೋಗೆಳಾಳುಕನ ಪರಮಪ್ರಸಾದ ಹೊಂದುವ ಜ್ಞಾನಇಳೆಯಲಿ ಮಧ್ವ ಬೋಧಿಸಿದ ಅವತರಿಸಿ 2ಭಾರತೀಪತಿ ವಾಯು ಭಾವಿ ಬ್ರಹ್ಮನೇ ಮಧ್ವಹರಿಆಜÉÕಯಲಿ ಸುಜನರನುದ್ದರಿಸೆ ಜನಿಸಿಪರಮಸತ್ತತ್ವವಾದ ಅರುಪಿ ಬದರಿಗೆತೆರಳಿದನು ತತ್‍ಪೂರ್ವ ಶಿಷ್ಯರ ನೇಮಿಸಿದ್ದ 3ವೈದಿಕ ಸದಾಗಮದಿ ಬೋಧಿತ ತಾತ್ವಿಕದ್ವೈತ ಸಿದ್ಧಾಂತದ ಆದಿಗುರು ಮಧ್ವಬದರಿಗೆ ತೆರಳಲು ಶ್ರೀಪದ್ಮನಾಭ-ತೀರ್ಥರಾರೋಹಿಸಿದರು ಮಧ್ವಮಠ ಪೀಠ 4ಈ ಆದಿಮಠಗುರುಪರಂಪರೆಯು ನರಹರಿತೀರ್ಥ ಮಾಧವತೀರ್ಥ ಅಕ್ಷೋಭ್ಯ ತೀರ್ಥಮಾಧ್ವಗ್ರಂಥಗಳಿಗೆ ಟೀಕೆಯ ಬರೆದಿರುವಜಗತ್‍ಪ್ರಖ್ಯಾತ ಜಯತೀರ್ಥ ಸಾಧು ಮುನಿವರ್ಯ 5ವಿದ್ಯಾಧಿರಾಜರು ಜಯತೀರ್ಥಜಾತರುವರ್ಧಿಸಿದರು ಈ ಆದಿ ಮಠವನ್ನಆದಿಮಠ ಭಿನ್ನಾಂಶ ಮಠಗಳುಪಂಕಜನಾಭಮಾಧವಾಕ್ಷೋಭ್ಯರಿಂ ಪುಟ್ಟಿ ಇಹುದು 6ಪದುಮನಾಭಾದಿ ಈ ಸರ್ವ ಗುರುಗಳಿಗೆ ನಾಆದರದಿ ಶರಣಾದೆ ಸಂತೈಪರೆಮ್ಮಪದುಮನಾಭರು ತಾವೇ ಸ್ಥಾಪಿಸಿದ ಮಠದಲ್ಲಿಮೊದಲನೇಯವರು ಶ್ರೀ ಲಕ್ಷ್ಮೀಧರರು 7ಶ್ರೀ ಲಕ್ಷ್ಮೀಧರ ತೀರ್ಥ ಸೂರಿಗಳ ವಂಶಜರುಮಾಲೋಲ ಶ್ರೀರಂಗನಾಥನ ಪ್ರಿಯಶೀಲ ಯತಿವರ ಸ್ವರ್ಣವರ್ಣತೀರ್ಥರುಅವರಜಲಜಕರಜಾತ ಶ್ರೀಪಾದರಾಜಾರ್ಯ 8ಶ್ರೀಲಕ್ಷ್ಮೀಧರ ತೀರ್ಥ ಮೊದಲಾದ ಸರ್ವರಕಾಲಿಗೆ ಎರಗುವೆ ಕರುಣಾಶಾಲಿಗಳುಶ್ರೀ ಲಕ್ಷ್ಮೀನಾರಾಯಣಾರ್ಯರ ಪ್ರಭಾವವುಬಲ್ಲನೆ ನಾನು ವರ್ಣಿಸಲು ಘನತರವು 9ಯತಿರಾಜರಿವರ ಮಹಿಮೆ ಬಹು ಬಹು ಬಹಳವೇದ್ಯ ಎನಗೆ ಅತಿ ಸ್ವಲ್ಪವೇವೇಅದರಲ್ಲೂ ಬಿಟ್ಟಿದ್ದು ಇಲ್ಲಿ ಪೇಳಿಹುದುಅತಿಕಿಂಚಿತ್ ಅಣುಮಾತ್ರ ಸುಜನರು ಆಲಿಪುದು 10ಕನ್ನಡ ಪ್ರದೇಶದಲಿ ಮಹಿಸೂರು ರಾಜ್ಯದಲಿಚೆನ್ನಪಟ್ಟಣಕೆರಡು ಕ್ರೋಶದೊಳಗೇವೇಸಣ್ಣ ಗ್ರಾಮವು ಅಬ್ಬೂರು ಎಂಬುದುಂಟುಕಣ್ವತೀರ್ಥಾಭಿಧ ಪುಣ್ಯನದೀತೀರ 11ವಿದ್ಯಾಧಿರಾಜರ ಕರಕಮಲೋತ್ಪನ್ನರುವೇದ ವೇದಾಂತ ಕೋವಿದರುಗಳು ಈರ್ವರುವಿದ್ಯಾಧಿರಾಜ ಈರ್ವರಲಿ ಪೂರ್ವಜರುವಾದಿಗಜ ಸಿಂಹ ರಾಜೇಂದ್ರ ಯತಿವರರು 12ರಾಜೇಂದ್ರ ತೀರ್ಥಜ ಜಯಧ್ವಜರಹಸ್ತಕಂಜಸಂಜಾತ ಪುರುಷೋತ್ತಮ ತೀರ್ಥರುರಾಜರಾಜೇಶ್ವರ ಪಟ್ಟಾಭಿರಾಮನ್ನಪೂಜಿಸುತ ಇದ್ದರು ಅಬ್ಬೂರಿನಲ್ಲಿ 13ಪುರುಷೋತ್ತಮಾರ್ಯರ ಮಹಿಮೆ ನರರಿಂದಅರಿವುದಕೆಸಾಕಲ್ಯಶಕ್ಯವು ಅಲ್ಲಶಿರಿವರನ ಪೂರ್ಣಾನುಗ್ರಹಕೆ ಪೂರ್ಣಪಾತ್ರರಾಗಿಹ ಈ ಕರುಣಿಗೆ ಶರಣು 14ಘೃಣಿಸೂರ್ಯಆದಿತ್ಯ ತೇಜಸ್ಸಲಿ ಬೆಳಗುವವಿನಯ ಸಂಪನ್ನ ಸುಬುದ್ಧಿಮಾನ್ ಬಾಲನ್ನತನ್ನ ಬಳಿ ಕರೆತರಿಸಿ ಬ್ರಹ್ಮಣ್ಯ ತೀರ್ಥಾಖ್ಯಅನಘನಾಮವನಿತ್ತುಪ್ರಣವಉಪದೇಶಿಸಿದರು15ವಾಜಿವಕ್ತ್ರನು ನರಸಿಂಹ ವಿಠಲನುಯಜÕವರಾಹಶ್ರೀರಾಮ ಯದುಪತಿಯಪೂಜಿಸುವ ಬಗ್ಗೆ ಮತ್ತೂಬ್ರಹ್ಮ ವಿದ್ಯಾ ಮಧ್ವಸಚ್ಛಾಸ್ತ್ರ ಬೋಧಿಸುತ್ತಿಹರು ಬ್ರಹ್ಮಣ್ಯರ್ಗೆ 16ಪುರುಷೋತ್ತಮರನ್ನ ಕಾಣಲು ಅಬ್ಬೂರನ್ನಕುರಿತು ಬರುತಿಹರು ಸ್ವರ್ಣವರ್ಣತೀರ್ಥರು ಆಗ ಸಾಯಂಕಾಲ ಇನ್ನೆಷ್ಟುದೂರವೋ ಎಂದು ಶಂಕಿಸಿದರು ಮನದಿ 17ಮಾರ್ಗದಲಿ ದನಗಳ ಮೇಸುವ ಬಾಲಕರೊಳುಅಕಳಂಕ ವರ್ಚಸ್ವಿ ಹುಡುಗ ಓರ್ವನ್ನತಾ ಕಂಡು ಪಲ್ಲಕ್ಕಿ ನಿಲ್ಲಿಸಿ ಕೇಳಿದರುಶ್ರೀಗಳು ಗ್ರಾಮಕ್ಕೆ ದೂರ ಎಷ್ಟೆಂದು 18ಅಹಸ್ಪ್ರಾಂತ ಗಗನಸ್ಥಸೂರ್ಯನ್ನ ನೋಡಿಬಹು ಸಣ್ಣ ವಯಸ್ಸಿನ ಎನ್ನನ್ನು ನೋಡಿಅಹಂಮಾಎಂದು ಕೂಗೋ ಧೇನುಗಳ ನೋಡಿಬಹು ಸಮೀಪವು ಗ್ರಾಮ ಎಂದು ಸೂಚಿಸಿದ 19ಕುಶಾಗ್ರ ಬುದ್ಧಿಯ ಸೂಕ್ಷ್ಮತ್ವವ ನೋಡಿಆ ಸ್ವಾಮಿಗಳಿಗೇ ಈ ಹುಡುಗ ಯಾರೆಂದುಭಾಸವಾಗಿ ಲೋಕರೀತಿಯಲಿ ಕೇಳಿದರುಹೆಸರು ಏನು ಯಾರ ಮಗ ಮನೆ ಎಲ್ಲಿ 20ನಮಿಸಿ ಸ್ವಾಮಿಗಳಿಗೆ ಕರಮುಗಿದು ಪೇಳಿದಅಮ್ಮಗಿರಿಯಮ್ಮನು ತಂದೆಯು ಶೇಷಗಿರಿಲಕ್ಷ್ಮೀನಾರಾಯಣಾಭಿದನು ತಾನೆಂದುಸಮೀಪಸ್ಥ ಹೊಲದಲ್ಲಿ ಮನೆಯ ತೋರಿಸಿದ 21ಕ್ರಮದಿ ಬರೆ ಓದುವಿದ್ಯೆಕಲಿಯದಿದ್ದರೂಸೂಕ್ಮ ಬುದ್ಧಿ ದೇಹಕಾಂತಿ ಮುಖ ವರ್ಚಸ್ಸಸುಮಹಾ ಪೂರ್ವಸಾಧನದಿ ಎಂದರಿತರುಈ ಮಹಾ ಸೂರಿವರ್ಯರು ಶ್ರೀಸ್ವಾಮಿಗಳು 22ಅಬ್ಬೂರು ಸೇರಿ ಪುರುಷೋತ್ತಮರ ಕೈಯಿಂದಉಪಚಾರಗಳನ್ನು ಕೊಂಡು ಬಾಲತಪೋನಿಧಿ ಬ್ರಹ್ಮಣ್ಯರ ಕಂಡು ಅವರಂತೆಒಬ್ಬ ಬಾಲನು ತಮಗೂ ಬೇಕೆಂದರು 23ತಥಾಸ್ತು ಎನ್ನುತಲಿ ಪುರುಷೋತ್ತಮರತಂದೆ ತಾಯಿಗಳನ್ನು ಕರೆತರಿಸಿ ಬೇಗಮುದದಿ ಮಾಡಿದರು ಲಕ್ಷ್ಮೀನಾರಾಯಣಗೆವೇದಾಧಿಕಾರ ಬರುವಂಥ ಉಪನಯನ 24ಬಹ್ಮೋಪದೇಶಾದಿ ಮಂತ್ರೋಪದೇಶಗಳುವಿಹಿತ ರೀತಿಯಲ್ಲಿ ಆದ ತರುವಾಯಬ್ರಹ್ಮಚಾರಿ ಆ ಬಾಲಕನಿಗೆ ಸಂನ್ಯಾಸಮಹಾಪ್ರಣವಉಪದೇಶ ಕೊಟ್ಟರು ಗುರುವು25ಗುರುಸ್ವರ್ಣವರ್ಣ ತೀರ್ಥರು ವಾತ್ಸಲ್ಯವಎರೆಯುತ್ತ ಲಕ್ಷ್ಮೀನಾರಾಯಣ ತೀರ್ಥಆಶ್ರಮೋಚಿತ ನಾಮ ಕೊಟ್ಟು ಬಾಲನ್ನಸೇರಿಸಿಕೊಂಡರು ತಮ್ಮ ಪರಂಪರೇಲಿ 26ಹಿಂದೆ ಶೇಷಗಿರಿಯಪ್ಪ ಗಿರಿಯಮ್ಮ ದಂಪತಿಯಕಂದನು ದನ ಮೇಸೋ ಲಕ್ಷ್ಮೀನಾರಾಯಣಇಂದುಲಕ್ಷ್ಮೀನಾರಾಯಣ ತೀರ್ಥರಾಗಿವೇದಾಂತ ಸಾಮ್ರ್ರಾಜ್ಯ ಯುವರಾಜನಾದ 27ವಿದ್ಯಾಧಿ ರಾಜ ರಾಜೇಂದ್ರ ಜಯಧ್ವಜ ಪುರು -ಷೋತ್ತಮ ಬ್ರಹ್ಮಣ್ಯರಿಗೆ ನಮೋ ಲಕ್ಷ್ಮೀಧರಾದಿ ಗುರುಗಳಿಗೂ ಸುವರ್ಣವರ್ಣರಿಗೂಸದಾ ನಮೋ ಲಕ್ಷ್ಮಿನಾರಾಯಣ ತೀರ್ಥರಿಗೂ 28ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 29 ಪ-ಪ್ರಥಮ ಕೀರ್ತನೆ ಸಂಪೂರ್ಣಂ-ದ್ವಿತೀಯಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪೀವಲ್ಲಭ ರಂಗ ಒಲಿದಿಹಮಹಂತಪಸ್ವರ್ಣವರ್ಣರೂ ಲಕ್ಷ್ಮೀನಾರಾಯಣರಿಗೆಆಮ್ನಾಯನಿಗಮಾಂತ ವಿದ್ಯೆಗಳ ಕಲಿಸೆಘನಮಹಾಪಾಂಡಿತ್ಯ ಪ್ರೌಢಿಮೆಯನು ಹೊಂದಿಸಣ್ಣ ಯತಿ ಪ್ರಖ್ಯಾತರಾದರು ಜಗದಿ 1ವಿಭುದೇಂದ್ರ ರಘುನಾಥ ಮೊದಲಾದ ಯತಿವರರುಈ ಬಾಲಯತಿಯ ಪಾಂಡಿತ್ಯ ಪ್ರಭಾವವಬಹು ಬಹು ಶ್ಲಾಘಿಸಿ ರಘುನಾಥರಿವರಿನ್ನ'ಶ್ರೀಪಾದ ರಾಜರು&ಡಿsquo; ಎಂದು ವರ್ಣಿಸಿದರು 2ಅಂದಿನಾರಭ್ಯ ಈ ಲಕ್ಷ್ಮೀ ನಾರಾಯಣರಮಂದಿಗಳು ವಿದ್ವಜ್ಜನರು ಸಜ್ಜನರು'ಆನಂದ ಉತ್ಸಾಹದಿ ಶ್ರೀಪಾದರಾಜ&ಡಿsquo;ರೆಂದು ಕರೆಯುವುದು ಅದ್ಯಾಪಿ ಕಾಣುತಿದೆ 3ರಂಗಕ್ಷೇತ್ರಕೆ ಬಂದು ಶ್ರೀ ಪಾದರಾಜ ಸಹರಂಗನಾಥನ್ನ ಕಂಡು ಸ್ಥಾಪಿಸಿ ಮಠವಭಂಗವಿಲ್ಲದೇ ಪೂಜಾ ಪ್ರವಚನವ ಗೈಯುತ್ತತುಂಗಯತಿ ಸ್ವರ್ಣವರ್ಣರು ಕುಳಿತರಲ್ಲೇ 4ವರುಷಗಳು ಜರಗಿತು ಶ್ರೀಪಾದರಾಜರುಊರು ಊರಿಗೆ ದಿಗ್ವಿಜಯವ ಮಾಡುತ್ತಪರಪಕ್ಷ ಕುಮತಗಳ ಛೇದಿಸಿ ಸತ್ತತ್ವಆರುಪಿದರು ಯೋಗ್ಯಾಧಿಕಾರಿಗಳಿಗೆ 5ಮುಳಬಾಗಿಲು ಎಂದು ಆಧುನಿಕರು ಕರೆವಂಥಒಳ್ಳೇ ಕ್ಷೇತ್ರಕ್ಕೆ ಬಂದು ಮಠದಲ್ಲಿ ಇರುತ್ತಬಾಲಕರು ವೃದ್ಧರು ಯತಿಗಳಿಗೂ ಸದ್ವಿದ್ಯಾಕಲಿಸುತ್ತಿದ್ದರು ತಾವೇ ಪಾಠ ಹೇಳುತ್ತಾ 6ಮುಳಬಾಗಿಲು ಕ್ಷೇತ್ರದಲ್ಲಿ ಹನುಮಂತಶ್ರೀ ಲಕ್ಷ್ಮೀಪತಿಯನ್ನು ಸೇವಿಸುತ ಇಹನುಬಾಲೇಂದು ಶೇಖರನು ಗಿರಿಜಾ ಸಮೇತಶೈಲ ತೋಟಗದ್ದೆ ಅಟವಿಗಳು ಇಹವು 7ಊರಿಗೆ ಕ್ರೋಶ ಮಾತ್ರದಿ ಇರುವ ಸ್ಥಳದಲಿವರಮಧ್ವಸಿದ್ಧಾಂತ ಜಯ ಶಿಲಾ ಲಿಖಿತಇರುವುದು ಅದ್ಯಾಪಿ ಕಾಣ ಬಹುದು ಅಲ್ಲೇಭಾರಿತರ ವಾದವು ನಡೆಯಿತು ಹಿಂದೆ 8ಶ್ವೇತಕೇತು ಉದ್ದಾಲಕರ ಸಂವಾದತತ್ವಮಸಿ ವಾಕ್ಯವೇ ವಾದ ವಿಷಯವಾದಿಸಿದರು ವಿದ್ಯಾರಣ್ಯ ಅಕ್ಷೋಭ್ಯರುವೇದಾಂತ ದೇಶಿಕರ ಮಧ್ಯಸ್ಥ ತೀರ್ಮಾನ 9ಛಾಂದೋಗ್ಯ ಉಪನಿಷತ್ತಲಿರುವ ವಾಕ್ಯಸ ಆತ್ಮಾ ತತ್ವಮಸಿ ಎಂಬುವಂಥಾದ್ದುಭೇದ ಬೋಧಕವೋ ಅಭೇದ ಬೋಧಕವೋಎಂದು ವಾದವು ಆ ಈರ್ವರಲ್ಲಿ 10ಆತ್ಮ ಶಬ್ದಿತ ನಿಯಾಮಕಗೂ ನಿಯಮ್ಯ ಜೀವನಿಗೂಭೇದವೇ ಬೋಧಿಸುವುದು ಆ ವಾಕ್ಯವೆಂದುಸಿದ್ಧಾಂತ ಅಕ್ಷೋಭ್ಯರು ಸ್ಥಾಪಿಸಿದರುಸೋತಿತು ವಿದ್ಯಾರಣ್ಯರ ಐಕ್ಯವಾದ 11ಮಧ್ಯಸ್ಥರಾಗಿದ್ದ ವೇದಾಂತ ದೇಶಿಕರುವಿದ್ಯಾರಣ್ಯ ಎಂಬುವ ಮಹಾರಣ್ಯವತತ್ವಮಸಿ ಅಸಿಯಿಂದ ಅಕ್ಷೋಭ್ಯರುಛೇದಿಸಿದರೆಂದು ಬರೆದಿಹರು ತಮ್ಮ ಗ್ರಂಥದಲಿ 12ಶ್ರೀಪಾದರಾಜರ ಮಠವು ಆ ಸ್ಥಳಕೆಸಮೀಪವೇ ಅಲ್ಲುಂಟು ನರಸಿಂಹ ತೀರ್ಥಸುಪವಿತ್ರತ್ರ್ಯೆ ಲೋಕ್ಯಪಾವನೆಗಂಗಾಸುಪ್ರಸನ್ನಳು ಇಲ್ಲಿ ತೋರಿಹಳು ಸ್ಮರಿಸೇ 13ದಿಗ್ವಿಜಯ ಕ್ರಮದಲ್ಲಿ ಕಾಶೀ ಪಂಢರೀಪುರಮುಖ್ಯ ಕ್ಷೇತ್ರಗಳಿಗೆ ಪೋಗಿ ಅಲ್ಲಲ್ಲಿಭಗವಂತ ಶ್ರೀಪತಿಯ ಒಲಿಸಿಕೊಳ್ಳುವಮಾರ್ಗಭಾಗವತಧರ್ಮ ಸಚ್ಛಾಸ್ತ್ರ ಬೋಧಿಸಿದರು14ಅಲ್ಲಲ್ಲಿ ವಾದಿಸಿದುರ್ವಾದಿಕುಮತಿಗಳಸುಳ್ಳು ಸೊಲ್ಲುಗಳನ್ನು ಬಳ್ಳಿಗಳ ತೆರದಿಸೀಳಿ ಛೇದಿಸಿ ಸ್ಥಾಪಿಸಿದರು ಮಧ್ವಮತಶೀಲತ್ವ ಔನ್ನತ್ಯ ವೇದ ಸನ್ನತಿಯ 15ಅಬ್ಬೂರಲ್ಲಿ ಶ್ರೀ ಸ್ವರ್ಣವರ್ಣ ತೀರ್ಥರುಶ್ರೀ ಪುರುಷೋತ್ತಮ ತೀರ್ಥರ ಕೈಯಿಂದಸುಪ್ರೌಢ ಪಾಂಡಿತ್ಯ ಹೊಂದಿ ಪೀಠವ ಏರಿಪರಿಪಾಲಿಸುತ್ತಿದ್ದರು ಯತಿ ಧರ್ಮ 16ಮಹಾಮಹಿಮ ಶ್ರೀ ಪರುಷೋತ್ತಮರು ತಮ್ಮಯಗುಹೆಯೊಳು ಕುಳಿತರು ಏಕಾಗ್ರ ಚಿತ್ತದಲಿಮಹಾರ್ಹ ಕೇಶವನ ಆರಾಧಿಸುತಿಹರುಬಾಹ್ಯ ಜನರ ಸಂಪರ್ಕವಿಲ್ಲದಲೇ 17ಬ್ರಹ್ಮಣ್ಯ ತೀರ್ಥರು ಉದಾರ ಕರುಣಿಗಳುಬ್ರಾಹ್ಮಣ ಶ್ರೇಷ್ಠನ್ನ ಬದುಕಿಸಿ ಅವನಗೃಹಿಣಿಗೆ ಮಾಂಗಲ್ಯ ಭಾಗ್ಯ ವರ್ಧಿಸಿಮಹಾತ್ಮ ಪುತ್ರನ ಹಡೆಯೆವರನೀಡಿದರು18ತಮಗೆ ಆ ಮಗುವನ್ನು ಕೊಡಬೇಕು ಎಂದುಬ್ರಹ್ಮಣ್ಯರು ಪೇಳಿದ್ದ ಅನುಸರಿಸಿಆ ಮಗುವ ದಂಪತಿಗಳ್ ನೀಡೆ ಶಿಶುವುಶ್ರೀ ಮಠದಿ ಬೆಳೆಯಿತು ಗುರುಗಳ ಪಾಲನದಿ 19ಶ್ರೀ ಹರಿಗೆ ಅಭಿಷೀಕ್ತ ಹಾಲುಂಡು ಶಿಶು ಬೆಳೆದುಶ್ರೀಹರಿನೈವೇದ್ಯದಿಂ ವರ್ಧಿಸಿ ಬಾಲವಿಹಿತ ವಯಸ್ಸಲ್ಲೇವೇ ಉಪನಯನವು ಆಗಿಬ್ರಹ್ಮಣ್ಯರ ಕರದಿ ಲಭಿಸಿತು ಸಂನ್ಯಾಸ 20ಸರ್ವೋತ್ತಮ ಇಜ್ಯಪೂಜ್ಯ ಹರಿಸಾರಾತ್ಮಸರ್ವೇಶ ಶ್ರೀವ್ಯಾಸ ಶ್ರೀಶನ ನಾಮವ್ಯಾಸತೀರ್ಥರು ಎಂದು ಈ ಬಾಲಯತಿವರಗೆಆಶ್ರಮ ನಾಮವಿತ್ತರು ಬ್ರಹ್ಮಣ್ಯರು 21ಪ್ರಣವಾದಿ ಮಂತ್ರಗಳ ತಾವೇವೇ ಬೋಧಿಸಿಘನಬ್ರಹ್ಮ ವಿದ್ಯಾದಿ ಸಚ್ಛಾಸ್ತ್ರ ಕಲಿಯೆಸಣ್ಣ ಯತಿವರ ಶ್ರೀ ಪಾದರಾಜರಲಿಬ್ರಹ್ಮಣ್ಯತೀರ್ಥರು ಕಳುಹಿಸಿದರು 22ಶ್ರೀ ಪಾದರಾಜರು ವ್ಯಾಸರಾಯರಿಗೆಸುಪ್ರೀತಿಯಲಿ ಸರ್ವ ವಿದ್ಯೆಗಳ ಕಲಿಸಿತಾಪೋದಕಡೆ ದಿಗ್ವಿಜಯದಿ ಕರದ್ಹೋಗಿಈ ಬಾಲ ಯತಿಗಳ ಪ್ರಭಾವ ಹರಡಿದರು 23ಶ್ರೀಪಾದರಾಜರು ಸ್ವಭಾವದಿ ಕೃಪಾಳುಗಳುಈ ಪುಣ್ಯ ಶ್ಲೋಕ ಶ್ರೀಗಳ ಮಹಿಮೆ ಏನೆಂಬೆಸರ್ಪಬಾಧೆಯು ವ್ಯಾಸರಾಜರಿಗೆ ಸೋಕದೆಕಾಪಾಡಿಹರು ಆ ಆಹಿಯ ಹೋಗೆಂದು 24ಶಂಖತೀರ್ಥದ ಮಹಿಮೆ ಶ್ರೀಪಾದರಾಜರುಶಂಕೆಇಲ್ಲದೇ ತೋರ್ಪಡಿಸಿಹರು ಜಗಕೆಮಂಕುತನದಲಿ ಬ್ರಹ್ಮಹತ್ಯೆ ಮಾಡಿದವನಕಳಂಕ ಕಳೆದರು ಶಂಖತೀರ್ಥ ಪ್ರೋಕ್ಷಣದಿ 25ಸಂದೇಹಪರಿಹರಿಸೆ ಮಠದಿ ಜನತಿಳಿವುದಕೆತಂದಿಟ್ಟ ಕಪ್ಪುವಸ್ತ್ರದ ಮೇಲೆ ಶಂಖತೀರ್ಥ ಪ್ರೋಕ್ಷಿಸಿ ಶುಭ್ರ ಬಿಳಿಯಾಗಿ ಮಾಡಿದರುಸದಾ ಶರಣು ಇವರಿಗೂ ಶಂಖತೀರ್ಥಕ್ಕೂ 26ಕಂಜಭವಪಿತ ಪಾಂಡುರÀಂಗನು ಶ್ರೀಪಾದರಾಜರಿಗೆ ತಾನೇ ಒಲಿದದ್ದೇ ಕ್ಷೇತ್ರದಮಂಜೂಷದಲಿ ಭಾಮಾ ರುಕ್ಮಿಣೀ ಸಮೇತರಾಜೀವೇಕ್ಷಣ ರಂಗವಿಠಲನು ಒಲಿದಿಹನು 27ಸಾಳುವ ನರಸಿಂಹಾದಿ ರಾಜರು ಪ್ರಮುಖರುಪಾಳೆಯಗಾರರು ಮಂಡಲೇಶ್ವರರುಕೇಳಿಈ ಗುರುಗಳ ಪ್ರಭಾವ ನೋಡಿಕಾಲಿಗೆ ಎರಗಿಹರು ಬಹುಭಕ್ತಿಯಿಂದ 28ಮುಳಬಾಗಿಲು ಮಠಕೆ ಐವತ್ತು ಕ್ರೋಶದೊಳುಸಾಳುವ ನರಸಿಂಹ ರಾಜನ ಅರಮನೆಯುಎಲ್ಲ ಕಾರ್ಯಗಳನ್ನು ಶ್ರೀಪಾದರಾಜರಲಿತಿಳಕೊಂಡುಅವರಆಜÉÕಯಿಂದ ಆಳಿದನು29ಚಂದ್ರಗಿರಿ ಎಂಬುವ ಪಟ್ಟಣದಿ ಆ ರಾಜಮಂದಿರವು ವೇಂಕಟಾಚಲಕೆ ಸಮೀಪಚಂದ್ರಸೋದರಿ ರಮಣ ವೇಂಕಟೇಶನ ಪೂಜೆನಿಂತು ಹೋಗದೆ ಏರ್ಪಾಡು ಮಾಡೆಂದ 30ಗುರುಸಾರ್ವಭೌಮರು ಶ್ರೀಪಾದರಾಜರುಆ ರಾಜನ ಬಿನ್ನಹವನ್ನು ಲಾಲಿಸಿತ್ವರಿತದಿ ಶ್ರೀ ವ್ಯಾಸರಾಜರ ಕಳುಹಿಸಿತಿರುಪತಿ ವೇಂಕಟನ ಪೂಜೆಗೈಸಿದರು 31ರಾಜನ ಪ್ರಾರ್ಥನೆಗೆ ಒಪ್ಪಿ ಶ್ರೀಪಾದರಾಜರು ಅರಮನೆಗೆ ಪೋಗಲು ಅಲ್ಲಿಗಜತುರಗವಿಪ್ರಜನ ಪೂರ್ಣಕುಂಭಾದಿ ಸಹರಾಜನು ಸ್ವಾಗತವ ನೀಡಿದನು ಮುದದಿ 32ವೇದ ಘೋಷಗಳೇನು ಮಂಗಳದ್ವನಿ ಏನುವಾದ್ಯಮೇಳಗಳ ಸುಸ್ವರವು ಏನುಬೀದಿಯಲಿ ತೋರಣ ಪುಷ್ಪ ಮಂಟಪವೇನುಆದರದಿ ಸ್ವಾಗತದ ವೈಭವ ಏನೆಂಬೆ 33ಸಾಳುವ ನರಸಿಂಹನು ತನ್ನ ಸಿಂಹಾಸನದಲ್ಲಿ ಶ್ರೀ ಶ್ರೀ ಪಾದರಾಜರನ್ನಕುಳ್ಳಿರಿಸಿ ಕನಕಾಭೀಷೇಕವ ಮಾಡಿದ್ದನ್ನಅಳವೇ ವರ್ಣಿಸಲಿಕ್ಕೆ ನೋಡಲಾನಂದ 34ಶಿರಿ ರಮಣ ಶಿಂಶುಮಾರನ ಪಾದದಲಿ ಸ್ಥಿರಆಶ್ರಿತರು ಆದುದರಿಂದ ಧರೆಯಲ್ಲಿಹರಿಸಮರ್ಪಿತ ಸರ್ವ ಭೋಗ್ಯಭಾಗ್ಯಂಗಳುಅರಣ್ಯದಲ್ಲಿದ್ದರೂ ಜನರಿಗೆ ದೊರೆಯುವವು 35ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 36ತೃತೀಯ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪದೀನ ದಯಾಳು ಶ್ರೀ ಪಾದರಾಜರುಜನರು ಭಾಗೀರಥೀಯಾತ್ರೆ ಮಾಡಲಿಕೆಹಣವು ತ್ರಾಣವು ಸಾಲದು ಎಂದು ಅರಿತುಜಾಹ್ನವಿಯ ತರಿಸಿದರು ನೃಸಿಂಹ ತೀರ್ಥದಲಿ 1ಶ್ರೀಮಧ್ವಿಷ್ಣಂಘ್ರಿನಿಷ್ಠಾಃ ಅತಿ ಗುಣಗುರುತಮಶ್ರೀಮದಾನಂದ ತೀರ್ಥಃ ಎಂದು ಸಂಸ್ತುತ್ಯಶ್ರೀಮಧ್ವಾಚಾರ್ಯರ ಪ್ರಿಯತಮರು ಕರೆದಲ್ಲಿಅಮರ ತಟಿನೀ ಬಂದದ್ದೇನು ಆಶ್ವರ್ಯ 2ಶ್ರೀ ಮಧ್ವಿಷ್ಣಂಘ್ರಿ ಸಂಭೂತೆಯು ತನ್ನಯವಿಮಲ ತೀರ್ಥವ ನರಸಿಂಹ ತೀರ್ಥದಲಿಧಿಮು ಧಿಮು ಎಂದು ಪ್ರವಹಿಸಲು ಜನಸರ್ವರೂಸಮ್ಮುದದಿ ಪೂಜಿಸಿದರು ವಿಹಿತ ರೀತಿಯಲಿ 3ಹಿಂದೆ ಇಂದ್ರನು ತನ್ನಯ ವಜ್ರದಿಂದಅದ್ರಿಗಳ ಪಕ್ಷಿಗಳ ಕಡೆದ ತೆರದಿಇಂದುಶ್ರೀಪಾದರಾಜರು ಕುಮತ ಹೀರಿ ಪಕ್ಷಗಳಛೇದಿಸಿದರು ತಮ್ಮ ವಾಗ್ವಜ್ರದಿಂದ 4ಆನಂದ ತೀರ್ಥರ ನಿಜಾನಂದಪ್ರದ ಶಾಸ್ತ್ರಬಂದು ಬೇಡಿದ ಭಾಗ್ಯ ಅಧಿಕಾರಿಗಳಿಗೆಕುಂದುಕೊರತೆ ಏನೂ ಇಲ್ಲದೆ ಬೋಧಿಸಿಇಂದಿರೇಶನ ಪ್ರಸಾದವ ಒದಗಿಸಿಹರು 5ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವಮೊದಲಾದ ಗ್ರಂಥಗಳ ರಚಿಸಿದ ಪ್ರಖ್ಯಾತವಾದಿಗಳಕೇಸರಿವ್ಯಾಸಮುನಿ ಮುಖ್ಯಮೇದಿನಿಸುರರಿಗೆ ವಿದ್ಯಾ ಕಲಿಸಿಹರು6ಶ್ರೀರಂಗ ವಿಠಲ ರುಕ್ಮಿಣೀ ಸತ್ಯಭಾಮಾತೋರಿ ತಾವೇ ತಮ್ಮ ಪ್ರತೀಕಗಳೊಳಗೆ ನಿಂತುಸೂರಿವರ ಶ್ರೀಪಾದರಾಜರ ಕೈಯಿಂದಭರದಿ ಪೂಜಾ ಸ್ತೋತ್ರ ಕೀರ್ತನೆ ಕೊಂಡಿಹರು 7ಅನುಪಮ ಅನುತ್ತಮ ಗುಣಗಣಾರ್ಣವ ರಮಾ -ನಾಥನು ಜಗಜ್ಜನ್ಮಾದ್ಯಖಿಲೈಕ ಕರ್ತಾವಿಷ್ಣು ಸರ್ವೇಶ್ವರ ಸ್ವತಂತ್ರಅನಘಮಹಿಮಾಕನ್ನಡ ನುಡಿಯಲಿ ಸಹಸ್ರಾರು ಹಾಡಿಹರು 8ಪ್ರತಿಒಂದು ಪದ ವಾಕ್ಯ ನುಡಿ ಪದ್ಯ ಕೀರ್ತನೆಯುಇಂದಿರಾಪತಿಯಲ್ಲಿ ನಿಶ್ಚಲ ಭಕ್ತಿಬಂಧಮೋಚಕ ಜ್ಞಾನ ಸಾಧನವಾಗಿರುವವುಆದರದಿ ಪಠಿಸೆ ಇಹಪರ ಸುಖಪ್ರದವು 9'ಸ್ಮರಿಸಿದವರನುಕಾವನಮ್ಮ ಸೂರ್ಯಾನೇಕ ಪ್ರಭಾವಸುರಮುನಿಗಳ ಸಂಜೀವ ಶ್ರೀ ವೆಂಕಟೇಶ ನಮ್ಮಪೊರೆವ&ಡಿsquo; ಎಂದಾರಂಭಿಸುವ ಕೀರ್ತನೆ ಪಠಿಸೆಸುಶ್ರವಣವು ಮಾಳ್ಪರ ಭಾಗ್ಯವೇ ಭಾಗ್ಯ 10ಶ್ರೀಪಾದರಾಜರು ಶಿರಿ ವೇಂಕಟೇಶನತಾಪೋಗಿ ಕಂಡು ಧ್ಯಾನದಿ ಸದಾ ನೋಡಿಸೌಭಾಗ್ಯ ಪ್ರದ ಈ ಕೀರ್ತನೆ ಹಾಡಿಹರುಸುಪುಣ್ಯ ಭಾಗಿಗಳೇ ಪಠಿಸಿ ಕೇಳುವರು 11ಭಕ್ತಿಯಿಂದ ಪಠಿಸುವ ಕೇಳುವ ಸಜ್ಜನರುಓದಿ ಕೇಳಿದ್ದು ಕೃಷ್ಣಗರ್ಪಿಸಲುಬದಿಯಲ್ಲೇ ತಾನಿದ್ದು ಯೋಗಕ್ಷೇಮವ ವಹಿಪಶ್ರೀದ ವೇಂಕಟ ಜನಾರ್ದನ ಕೃಷ್ಣ ಶ್ರೀಶ 12ಧನ ಧಾನ್ಯ ಆರೋಗ್ಯ ಆಯುಷ್ಯ ಕೀರ್ತಿಯಘನವಿಘ್ನಕಷ್ಟ ಪರಿಹಾರ ಜಯ ಎಲ್ಲೂಜ್ಞಾನ ಉದ್ಭಕ್ತಿ ಸಂತೋಷಹರಿಅಪರೋಕ್ಷಸಾಧನವು ಇವರ ಈ ಕೀರ್ತನೆ ಪಠನ 13ಜಯ ಜಯ ಜಗತ್ರಾಣ ಜಗದೊಳಗೆಸುತ್ರಾಣಅಖಿಲಗುಣಸದ್ದಾಮ ಶ್ರೀ ಮಧ್ವನಾಮಾಜಯಾಸಂಕರುಷಣ ಸಂಭೂತ ಮುಖ್ಯ-ವಾಯು ಹನುಮ ಭೀಮ ಮಧ್ವನ ಸ್ತೋತ್ರ 14ಈ ಮಧ್ವನಾಮಾಖ್ಯ ಸ್ತವರಾಜವನ್ನುನಮ್ಮ ಶ್ರೀಪಾದ ರಾಜಾರ್ಯ ರಚಿಸಿನಮಗೆಲ್ಲರಿಗಿತ್ತು ನಮಗೆ ಸೌಭಾಗ್ಯವಪ್ರೇಮದಿಂದಲಿ ಒದಗಿಸಿಹರು ಕರುಣಾಬ್ಧಿ 15ಸ್ಮರಿಸಲಾಕ್ಷಣ ಕಾಯ್ವಪುರಂದರದಾಸಾರ್ಯರಪರಂಪರೆ ವಿಜಯಾರ್ಯ ಗೋಪಾಲದಾಸಾರ್ಯಸೂರಿಗೋಪಾಲಾರ್ಯ ಶಿಷ್ಯರು ಜಗನ್ನಾಥದಾಸರಾಯರು ಫಲಶ್ರುತಿ ಬರೆದಿಹರು 16ವರಮಧ್ವ ನಾಮಕ್ಕೆ ಬರೆದಿರುವ ಫಲಶ್ರುತಿಯಭರದಿ ಪಠಿಸುವವರು ಶ್ರೀ ಮಧ್ವನಾಮಉತ್ಕøಷ್ಟ ಮಹಾತ್ಮ್ಯ ಉಳ್ಳದ್ದೆಂದರಿವರುಬರುವುದು ಅನುಭವಕೆ ಮಧ್ವನಾಮ ಓದಿ 17ಶ್ರೀ ಲಕ್ಷ್ಮೀನಾರಾಯಣ ರಾಮ ಹಯಶೀರ್ಷಭೈಷ್ಮೀ ಸತ್ಯಾಯುತ ರಂಗ ವಿಠಲಶ್ರೀ ಮದಾಚಾರ್ಯ ಪೂಜಿತ ಗೋಪೀನಾಥನ್ನಸಮ್ಮುದದಿ ಪೂಜಿಸುವ ಯೋಗಿವರ ಆರ್ಯ 18ಗಂಗೆ ಪ್ರತಕ್ಷ ತೋರಲು ಬಾಗಿನ ಕೊಟ್ಟುಜಗ ಜನ್ಮದ್ಯಖಿಳ ಕರ್ತನ್ನ ಪೂಜಿಸುತ್ತಜಗದೇಕ ಗುರುಮಧ್ವ ಸಚ್ಚಾಸ್ತ್ರ ಭೋದಿಸಿಝಗಿ ಝಗಿಪ ತೇಜಸ್ಸಲಿ ಹೊಂದಿದರುಸಮಾಧಿ19ಶಾಲಿಶಕ ಹದಿನಾಲ್ಕುನೂರೆಂಟನೆ ವರುಷಶುಕ್ಲ ಚತುರ್ದಶಿ ಜೇಷ್ಠ ಮಾಸದಲ್ಲಿಶೀಲತಮ ಭಾವದಲಿ ಳಾಳುಕನ ಧ್ಯಾನಿಸುತಕುಳಿತರು ಸಮಾಧಿಯಲಿ ಹರಿಪುರಯೈದಿದರು 20ಶಿಂಶುಮಾರಪುರವನ್ನಯೈದಿತಾ ಮತ್ತೊಂದುಅಂಶದಲಿ ಸುಪವಿತ್ರ ವೃಂದಾವನದಿ ಭಾಸಿಸುತ ಇರುತಿಹರುಬ್ರಹ್ಮ ವಿದ್ಯಾಲಯ - ಶ್ರೀಶಪ್ರಿಯನರಸಿಂಹ ತೀರ್ಥ ಮಂದಿರದಿ 21ದರ್ಶನವು ಪಾಪಹರ ಪ್ರದಕ್ಷಿಣೆ ಹರಿಯಾತ್ರೆವಿಶ್ವಾಸದಿಂದ ನಮಸ್ಕಾರ ಸರ್ವೇಷ್ಟಐಶ್ವರ್ಯ ಜ್ಞಾನಾದಿ ಫಲಪ್ರದವು ಯೋಗ್ಯರಿಗೆಸಂಸ್ಮರಿಸಲು ಸರ್ವ ಸಿದ್ಧಿದಾಯಕವು 22ಸಿಂಧೂರಅಜಮಿಳ ಸುಧಾಮ ಪ್ರಹ್ಲಾದಾದಿಭಕ್ತರ ಪರಿಪಾಲಕರನು ಶ್ರೀರಮಾಪತಿಯಸದಾ ಒಲಿಸಿಕೊಂಡಿಹಮಹಂತಗುರುವರಶ್ರೀಪಾದರಾಜರೇ ನಮೋ ನಮೋಪಾಹಿ23ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯು ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 24|| ಇತಿ ಶ್ರೀ ಪಾದರಾಜರ ಅಣು ಚರಿತೆ ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಭ್ರಾಂತಿ ಬಿಡದೊ ಭಾಗ್ಯ ಪುರುಷನೆವಿಷಯಂಗಳಜರಿದುಶಾಂತಚಿತ್ತನಾಗೋತನಕಕಾಲಕಾಲಕೆ ಹರಿಕಥಾಶ್ರವಣ ಗುರುಗಳ ಮುಖದಿಂದಪಾಂಚಜನ್ಯ ಅರಿಪಾಣಿ ಸರ್ವೇಶ ತದ್ರಾಣಿ ಲಕುಮಿ ವಿ-ಪೂರಕ ಕುಂಭಕ ರೇಚಕದಿಂದಲಿ ಹೃದಯಸ್ಥ ಭೌತಿಕಅಂಶಿ ಅಂಶ ವೇಷಾಧಿಷ್ಠಾನ ಅಂತರ್ಯಾಮಿಗಳಹಂಚುಹಾಟಕ ಸಮದರ್ಶಿ ಎನಿಸಿ ಶೀತೋಷ್ಣವ ಸಹಿಸಿವಿಷಯಾವಿಷಯಂಗಳ ರೂಪವ ತಿಳಿದು ವಶವಾಗದನ್ಯಸ್ವತಂತ್ರ ಅಸ್ವತಂತ್ರ ವಸ್ತು ವಿವೇಕವ ತಿಳಿದುಸಕಲೇಂದ್ರಿಯಗಳಿಂದ ಶ್ರೀಹರಿಯ ವ್ಯಕತತಿಗೆ ತಂದುಬಿಂಬಭಾವಕ್ರಿಯ ದ್ರವ್ಯಾ ದ್ವೈತವ ತಿಳಿದು ಸರ್ವಗತ
--------------
ಗೋಪಾಲದಾಸರು
ಮಲಗಯ್ಯ ಜಲಜನಾಭ ಪಆದಿಶೇಷ್ಟನು ಬಂದು ಹಾಸಿಗೆಯಾಗಿಹವೇದವಿನುತ ಜಗದಾದಿ ಪುರುಷ ಕೇಳೊ 1ಸಿರಿ ಭೂ ದುರ್ಗೆಯರು ತರುಣಿಯರು ಮೂವರುಚರಣವೊತ್ತಲಿಕೆ ಕೈಕಟ್ಟಿ ನಿಂತಿಹರು 2ಸರುವಜÕ ಮುನಿವಂದ್ಯ ಸರುವ ಸ್ವತಂತ್ರನೇಪರಮ ಸುಂದರ ಪುರಂದರವಿಠಲರಾಯಾ3
--------------
ಪುರಂದರದಾಸರು
ಯಾತರಭಿಜÕತೆ ಯಾತರ ಭಕುತಿ ಶ್ರೀನಾಥಾಂಘ್ರಿ ವಿಮುಖಾದ ಸೂತಕಿಗಯ್ಯ ಪ.ಕಪಟನಾಟಕಸೂತ್ರಅನಂತಗುಣನಿತ್ಯತೃಪುತಮುಕುತನಿತ್ಯಸ್ವತಂತ್ರಗೆಉಪಾಧಿಸಗುಣನೆಂದನಾದಿ ನಿರ್ಗುಣನೆಂದುಉಪಾಸನೆವಿಡಿದ ಸೋಹಂಭಾವದವಗೆ 1ಅಪುಶಾಯಿಅಗಣಿತಆನಂದ ಬ್ರಹ್ಮಾದಿತಾಪಸರರಸ ಪುರುಷೋತ್ತಮಗೆಉಪಚಾರಕ್ಹರಿಯೆಂದು ಹರಕರ್ಮ ರವಿಗಣಾಧಿಪರೆ ಉತ್ತಮರೆಂಬ ಕಪಟಮಾನಿಸಗೆ 2ಪೂರ್ಣಪ್ರಜÕರ ಮತ ನವಭಕುತಿಗಳನಿರ್ಣಯದಲಿ ತರತಮವಿಲ್ಲದೆಅರ್ಣವಕಲಿತೇನಿನ್ನಾಕಾಶ ಚರಿಸೇನುಪೂರ್ಣ ಪ್ರಸನ್ವೆಂಕಟೇಶನೊಪ್ಪಿರದೆ 3
--------------
ಪ್ರಸನ್ನವೆಂಕಟದಾಸರು
ವೃದ್ಧಾಚಲ ಶ್ರೀ ಈಶ್ವರ77ಮಂಗಳದಾಯಕ ವೃದ್ಧಾಚಲ ಶಿವ ಪಾರ್ವತಿ ರಮಣಪಾಲಯ ಮಾಂ ಪಭೂರ್ಭುವಃ ಸ್ವಹಃಪತಿಶ್ರೀ ಮುಷ್ಣವರಾಹಮಹಾಬಲ ಪ್ರೋಜ್ವಲ ನರಹರಿ ಪ್ರಿಯ ನಮೋ 1ವಿದ್ಯುದಶಿತ ಶಿತ ಲೋಹಿತ ಶ್ಯಾಮೋವದನತ್ರಿಲೋಚನಮೃತ್ಯುಂಜಯನಮೋ2ಬಾಲ ಬದರಧರ ಶೈಲ ಸುತಾಯುತಮೌಲಿ ಜಟಾ ಸ್ಫಟಕಾಮಲ ಕಾಂತಿಮಾನ್ 3ಇಂದಿರ ರಮಣ ಸ್ವತಂತ್ರ ಸರ್ವೋತ್ತಮಬಿಂದುಮಾಧವತವ ಮಂದಿರೇ ಭಾಸತಿ4ಸರ್ಪಾಭರಣ ತ್ರಿಶೂಲಿ ಧೂರ್ಜಟ ಮಮಪಾಪಂ ದ್ರಾವಯ ಕೃಪಯ ಸಂತತ 5ಶಂಭೋ ಶಕ್ರಾದ್ಯಮರ ಜಗದ್ಗುರೋಸುಪ್ರದರ್ಶಯ ಮಮ ಮನಸಿ ಶ್ರೀ ಯಃ ಪತೇಂ 6ಭಾಗ್ಯ ಸಂವೃದ್ಧಿ ದಾ ವೃದ್ಧಾಂಬಾ ಪತೇಯೋಗಕ್ಷೇಮಂ ವಹ ದಯಾಯಾ ಮಮ 7ದರ್ಶನಾರಭ್ಯ ಮದ್ ಹೃದಯೇ ವಿರಾಜಿಸಿಶ್ರೀಶಭಾರತಿಪತಿಸಹ ತ್ಪಂ ಕೃಪಾಳೋ8ವೃತತಿ ಜಾಸನ ಪಿತ ಪ್ರಸನ್ನ ಶ್ರೀನಿವಾಸಭೂತಿದ ಶಿವ ಪ್ರಿಯ ಶಿವತೇ ನಮೋ ನಮೋ 9
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗೋಪಾಲ ದಾಸಾರ್ಯವಿಜಯಶ್ರೀ ಲಕ್ಷ್ಮೀ137ಭಾಗಣ್ಣ ಗೋಪಾಲ ದಾಸಾರ್ಯರ್ ಪಾದಕ್ಕೆಬಾಗಿ ಶರಣಾದೆನು ಸತತ ನಿಶ್ಚಯದಿಜಗದಾದಿಕರ್ತಅಜಅಘದೂರ ಸುಗುಣಾಬ್ಧಿತುರಗಾಸ್ಯವಿಜಯಶ್ರೀನಿವಾಸ ಪ್ರಿಯತಮರು || ಭಾಗಣ್ಣಪನಾರಸುಗುಣಾರ್ಣವನು ಶ್ರೀರಮಾಪತಿ ಹಂಸಸರಿಸಿಜಾಸನಸನಕದೂರ್ವಾಸಇಂಥಾಪರಮೋತ್ಕøಷ್ಟಗುರುಪರಂಪರೆಗೆ ಶರಣೆಂಬೆಪುರುಷೋತ್ತಮಾಚ್ಯುತ ಪ್ರೇಕ್ಷರಿಗೆ ಶರಣು 1ಸದಾಗಮಾಮಾಯಗಳು ಬ್ರಹ್ಮ ಧಾಮವೆÉಂದುಉದ್ಘೋಷಿಸುತಿವೆ ಮುಖ್ಯವಾಯುದೇವಮಾತರಿಶ್ವಸೂತ್ರಪವಮಾನಮುಖ್ಯಪ್ರಾಣಪ್ರತಿರಹಿತ ಬಲಜ್ಞಾನರೂಪಹನುಮ ಭೀಮ ಮಧ್ವನ್ನ2ಪ್ರೋಚ್ಚಸುರವರ ವಾಯುವಿನ ತೃತೀಯಾವತಾರ ಮಧ್ವಅಚ್ಯುತಪ್ರೇಕ್ಷರಲಿ ಸಂನ್ಯಾಸಕೊಂಡುಪ್ರಚ್ಛನ್ನ ಬೌದ್ಧಾದಿ ಮತ ಪಂಕದಿ ಬಿದ್ದಿದ್ದಸಜ್ಜನರನ್ನುದ್ಧರಿಸಿ ಸತ್‍ಜ್ಞಾನವಿತ್ತ 3ಶ್ರೀ ಮಧ್ವಗುರು ವಂಶಸ್ಥಪದ್ಮನಾಭನರಹರಿಮಾಧವಾಕ್ಷೋಭ್ಯಜಯ ವಿದ್ಯಾಧಿರಾಜವಿದ್ಯಾಧಿರಾಜರ ಶಿಷ್ಯರು ಈರ್ವರುಸಾಧು ಉತ್ಕøಷ್ಟರೀ ತೀರ್ಥರ್‍ಗಳಿಗೆ ಶರಣು 4ಶ್ರೀ ವಿದ್ಯಾಧಿರಾಜರ ಪ್ರಥಮ ಶಿಷ್ಯ ರಾಜೇಂದ್ರಹಸ್ತಪದ್ಮ ಜಾತರು ಜಯಧ್ವಜಾರ್ಯಮಾಧವನ ಏಕಾಂತ ಭಕ್ತ ಪುರುಷೋತ್ತಮರುತತ್ಸುತ ಬ್ರಹ್ಮಣ್ಯರೀ ಸರ್ವರಿಗೂ ಶರಣು 5ಪದ್ಮನಾಭತೀರ್ಥಜ ಲಕ್ಷ್ಮೀಧರರ ವಂಶಜಾತ ಸುವರ್ಣವರ್ಣ ತೀರ್ಥಾಭಿದರಸುತಲಕ್ಷ್ಮೀ ನಾರಾಯಣ ಯತಿವರ್ಯ ಶ್ರೀಪಾದರಾಜರು ಈ ಸರ್ವರಿಗೂ ಶರಣು 6ಶಿಂಶುಮಾರಪುಚ್ಛಶ್ರಿತರ ಅವತಾರರೇವಸುಮತೀಖ್ಯಾತ ಶ್ರೀಪಾದರಾಜರಲಿಭಾಷ್ಯಾಧಿಗಳ ಕಲಿಯೇ ಬ್ರಹ್ಮಣ್ಯ ತೀರ್ಥರಶಿಷ್ಯವರ್ಯ ವ್ಯಾಸರಾಜರು ಸೇರಿದರು 7ವಾದಿಗಜಕೇಸರಿಮಧ್ವಮತೋದ್ಧಾರರುಮೇದಿನೀ ಪ್ರಖ್ಯಾತ ಮಹಾಭಾಗವತರುಸಾಧುಜನ ಆಹ್ಲಾದ ಶ್ರೀ ವ್ಯಾಸರಾಜರಲಿಸದಾ ಶರಣು ಪಾಲಿಪರುಪ್ರತಿಕ್ಷಣ ದಯದಿ8ಆನಂದ ಮುನಿಕರ ಅರವಿಂದ ಸಂಜಾತವಿಷ್ಣುತೀರ್ಥ ವಂಶಜ ವಾಗೀಶರಹಸ್ತವನರುಹೋತ್ಪನ್ನರು ಸುಮಹಾಮಹಿಮರುಘನದಯಾನಿಧಿ ವಾದಿರಾಜ ಸ್ವಾಮಿಗಳು9ಯುಕ್ತಿಮಲ್ಲಿಕಾ ಮೊದಲಾದ ತತ್ವಬೋಧಕವಾದಗ್ರಂಥ ಪದ್ಯ ಕೀರ್ತನೆಗಳ್ ಸಜ್ಜನರಿಗಿತ್ತುಸೋದೆಯಲ್ಲಿ ತ್ರಿವಿಕ್ರಮಮೂರ್ತಿ ನಿಲ್ಲಿಸಿಹರುಭೂಧರಹಯಾಸ್ಯಪ್ರಿಯತಮ ಶ್ರೀ ವಾದಿರಾಜಾರ್ಯ10ತೀರ್ಥಪಾದ ಶ್ರೀಪತಿಯು ಬ್ರಹ್ಮ ಶಿವಾದ್ಯಮರ ಸಹಸದಾ ಸನ್ನಿಹಿತವಾಗಿರುವ ಮತ್ತುತೀರ್ಥವನ ಕ್ಷೇತ್ರಗಳೊಳುತ್ತಮ ವೃಂದಾವನದಿಅತ್ಯಕ್ತ ದೇಹದಿ ಕುಳಿತಿಹರು ಗುರುರಾಟ್ 11ಬುಧರು ತಿಳಿದಂತೆಯೇ ಬ್ರಹ್ಮಾಂಡ ಪುರಾಣದಲ್ಲಿವಾದಿರಾಜರು ಭಾವೀಕಲ್ಪ ಮುಖ್ಯವಾಯುಎಂದು ಪ್ರಸಿದ್ಧರೀ ಸುದುಪಾಸ್ಯ ಮದ್ಗುರುವರ್ಯರಲ್ಲಿ ಶರಣಾದೆಸದಾನಮೋ ಲಾತವ್ಯಾಚಾರ್ಯ ಕರುಣಾಬ್ಧೆ 12ವಿದ್ಯಾಧಿರಾಜರ ಎರಡನೇ ಶಿಷ್ಯರುಕವೀಂದ್ರ ಪೀಳಿಗೆಯ ಶ್ರೀರಾಮಚಂದ್ರದ್ವಿತೀಯಶಿಷ್ಯ ವಿದ್ಯಾನಿಧಿ ವಂಶಜಾತರುಆದ್ಭುತಮಹಿಮರು ಕರುಣಿ ರಘೋತ್ತಮರು 13ಕಾಮಿತಪ್ರದ ಟೀಕಾಭಾವ ಬೋಧಾರ್ಯರುಎಮ್ಮಪಾಲಿಪ ರಘೋತ್ತಮರಿಗೆ ಶರಣುರಾಮಚಂದ್ರರ ಮೊದಲನೆ ಶಿಷ್ಯ ವಿಬುಧೇಂದ್ರಈ ಮಹಾತ್ಮರ ವಂಶಜರು ಸರ್ವರಿಗೂ ನಮಿಪೆ 14ದುರ್ಜನರ ಕುಮತಗಿರಿವಜ್ರ ವಿಜಯೀಂದ್ರರುಸಜ್ಜನರುದ್ಧಾಕರು ಸುಧೀಂದ್ರಸೂರಿನಿಜವಿರಾಗಿ ಯಾದವೇಂದ್ರ ವಿಜ್ಞಾನಿಯುಭಜಕಜನಸುರಧೇನುರಾಘವೇಂದ್ರಾರ್ಯ15ಯಾರುಹಿಂದೆ ಏಡಮೂಕ ಬ್ರಾಹ್ಮಣನಾಗಿದ್ದಾಗಯಾರದ್ವಾರಾ ಶ್ರೀ ವಾದಿರಾಜರು ಸ್ವಪ್ನದಲ್ಲಿಉತ್ಕøಷ್ಟ ಶುಭತಮ ವೃಂದಾವನಾಖ್ಯಾನ ತಾವೇ ಹೇಳಿದರುಆಸೂರಿ ವಿಶ್ವಪ್ರಿಯಾರ್ಯರಿಗೆ ಶರಣು 16ಸೂರಿಕುಲತಿಲಕರು ವಾದಿಕರಿಹರಿ ಖ್ಯಾತಸಿರಿವ್ಯಾಸರಾಯರಲಿ ಮುದ್ರಿಕೆಯಕೊಂಡನಾರದರ ಅವತಾರರೆಂದು ಪ್ರಸಿದ್ಧರುಪುರಂದರದಾಸಾರ್ಯ ಕರುಣಾಂಬುಧಿಗೆ ಆನಮಿಪೆ17ನಿರ್ಝರ ವೃಂದ ಋಷಿ ಭೃಗುಮುನಿಯೇ ಧರೆಯಲ್ಲಿವಿಜಯದಾಸಾರ್ಯರಾಗಿ ಮೆರೆದವರ್ಗೆ ಶರಣುವಿಜಯವಿಟ್ಠಲನೊಲಿಯೆ ಜ್ಞಾನ ಭಕ್ತಿಸತ್ತತ್ವಸಜ್ಜನರಿಗೆ ಬೋಧಿಸಿದ ನಿವ್ರ್ಯಾಜ ಕರುಣಿ 18ಆಲಸ್ಯದಿನಾ ಮೈಥಿಲೀಪತಿ ಪಲ್ಲಿಯಲ್ಲಿಮಲಗಿರಲು ಶ್ರೀ ಗೋಪಾಲದಾಸಾರ್ಯರುಬಲುಕರುಣದಲ್ಲಿ ಮುಂದೆ ನಿಂತು ಯತಿಕೃತಮಾಲೋಲ ಪೂಜೆನೋಡಿ ಒದಗಿದ ಗುರುವರ್ಯ 19ಉಮಾಸೂನು ವಿಘ್ನಹರ ಕ್ಷಿಪ್ರಪ್ರಸಾದನುಈ ಮಹೀಯಲ್ಲಿ ಗೋಪಾಲದಾಸರಾಗಿರಮಾಪತಿಯ ಸೇವಿಸಿ ಸಜ್ಜರನ್ನುದ್ಧರಿಸಿಹರುನಮಿಸಿ ಶರಣಾದೆ ಈ ಉದಾರ ಕರುಣಿಗೆ 20ಸುಪವಿತ್ರೆ ಸೌಭಾಗ್ಯಪ್ರದ ಮಂತ್ರಗಳನೆಗೆಉಪದೇಶಮಾಡಿದ ಕಪಿಗೋತ್ರದವರುಸುಪುಣ್ಯ ಶೇಶ್ಲೀಕರು ಉದಾರ ಸಾತ್ವಿಕರುಶ್ರೀಪತಿ ಕೃಷ್ಣಪ್ರಿಯ ಶ್ರೀರಾಮಾಚಾರ್ಯರಿಗೆ ಶರಣು 21ತರುಣತನಾರಭ್ಯ ಹರಿದಾಸತ್ವ ಒದಗಿಸಿಪರಿಪರಿ ವಿಧದಲ್ಲಿ ಔದಾರ್ಯದಿಂದಕಾರುಣ್ಯಬೀರಿ ಕಾಪಾಡುತಿರುವಂಥಾ ಈಹರಿಪ್ರತಿಮಾರೂಪ ಗುರುಸರ್ವರಿಗೂತಂದೆ ತಾಯಿಗೂ ಶರಣು 22ದಧಿಶಿಲಾ ಎಂಬುವರು ಆಡಂಬರ ಪ್ರಿಯರುಮಂದಿಗಳು ಮೊಸರು ಕಲ್ಲೆಂದು ಕರೆಯುವರುಸಾಧುವೈಷ್ಣವವಿಪ್ರಮುರಾರಿರಾಯರುಸಾಧ್ವಿ ವೆಂಕಮ್ಮ ದಂಪತಿ ಇದ್ದ ಕ್ಷೇತ್ರ 23ಪುತ್ರ ರತ್ನಗಳು ನಾಲ್ಕು ಈ ದಂಪತಿಗೆಅಗ್ರಜಭಾಗಣ್ಣ, ಸೀನಪ್ಪ, ದಾಸಪ್ಪತರುವಾಯ ರಂಗಪ್ಪ ನಾಲ್ಕನೆಯವನಾಗಿಗೌರವದಿ ಚರಿಸಿತು ಮುರಾರಿರಾಯರ ಕುಟುಂಬ 24ಸಂಸಾರಾವಸ್ಥೆಯಲ್ಲಿ ನಶ್ವರ ಸುಖ ದುಃಖಮಿಶ್ರವಾಗಿಯೆ ಉಂಟು ಆ ನಿಯತಿಯಲ್ಲಿಭೂಸುರವರ್ಯರು ಮುರಾರಿರಾಯರು ಸ್ವರ್ಗತಾ ಸೇರಿದರುಸತಿಸುತರನ್ನು ಬಿಟ್ಟು25ಬಾಲಕರನ್ನು ಪ್ರಿತ್ರವ್ಯರು ಲೆಕ್ಕಿಸದಿರಲುಮಾಲೋಲ ಪಾಲಿಸುವ ಕರ್ತನ್ನೇ ನಂಬಿಶೀಲೆ ವೆಂಕಮ್ಮ ಮಕ್ಕಳನ್ನ ಕರಕೊಂಡುಒಳ್ಳೆಯ ಜನಪದ ಶಂಖಪುರವೈದಿದಳು 26ಶಂಖಪುರ ಹತ್ತಿರವೇ ಹನೂಮಂತನ ಗುಡಿಮಕ್ಕಳ ಸಹ ಅಲ್ಲಿ ವಾಸಮಾಡಿಮುಖ್ಯ ಪ್ರಾಣದೇವರ ಸೇವಿಸಿದ ಫಲವಾಗಿಚಿಕ್ಕ ಜಮೀನು ಕೊಂಡಳು ದಾನವಾಗಿ 27ದಾನ ಕೊಟ್ಟವನಿಗೆ ಬಲು ಪುಣ್ಯ ದೊರೆಯಿತುದಾನಿಗಳುಭಾಗವತಶ್ರೇಷ್ಠರಾದ್ದರಿಂದಹನುಮ ಗೋಪಾಲಾನುಗ್ರಹದಿಂದ ಐವರೂಧಾನ್ಯಸಮೃದ್ದಿ ತೊರೆದರು ಆತಂಕ 28ಕುಲ್ಕರ್ಣಿ ಎಂಬಂಥ ಸರ್ಕಾರ ಅಧಿಕಾರಿವೆಂಕಮ್ಮನಲ್ಲಿ ಮಾತ್ಸರ್ಯ ದ್ವೇಷ ಬೆಳೆಸಿಸರ್ಕಾರ ಕೆರೆ ನೀರು ಕದ್ದು ಹೊಯಿಸಿದಳೆಂದು ಆಚಿಕ್ಕ ಜಮೀನ ಒಡಮೆ ಕಿತ್ತಿಕೊಂಡ 29ಸಾಧ್ವೀ ವೆಂಕಮ್ಮನಿಗೂ ಮಹಾತ್ಮ ತತ್ಪುತ್ರರಿಗೂಅಧಮ ಅಧಿಕಾರಿ ಮಾಡಿದ ದ್ರೋಹದಿಂದಪುತ್ರ ಸಂತಾನ ವಂಶಕ್ಷೀಣವಾಯಿತು ಅವಗೆಅಂದಿನಿಂದ ಕೆರೆ ಅದ್ಯಾಪಿ ನೀರಿಲ್ಲ ಆ ಕೆರೆಯಲ್ಲಿ 30ದೀನರಿಗೂ ಸಾಧು ಮಹಾತ್ಮರಿಗೂ ಮಾಳ್ಪಸಣ್ಣದೋ ದೊಡ್ಡದೋ ದ್ರೋಹಕ್ಕೆ ದಂಡನಾಅನುಭವ ಕ್ಷಿಪ್ರದಲ್ಲೋ ಮೆಲ್ಲಗೋ ಅಪರಾಧಿ ಮೂರ್ಖಗೆದೀನ ರಕ್ಷಕ ಸತ್ಪತಿ ಶ್ರೀಹರಿಈವ31ಭಾಗಣ್ಣ ಸೀನಪ್ಪ ದಾಸಪ್ಪ ರಂಗಪ್ಪಲೌಕಿಕ ವಿದ್ಯಾ ಕಲಿತು ಉಪಾಧ್ಯಾಯರಲ್ಲಿಭಾಗಣ್ಣನಿಗೆ ಶಾನುಭೋಗ ಮುಂಜಿಮಾಡಿಭಗವದ್ವಿಷಯ ಕಲಿತರೂ ಭಾಗಣ್ಣ 32ತತ್ಕಾಲ ಲೌಕಿಕ ಶ್ರೀತನ ಕೊರತೆ ನೋಡಿಬಂಧುಗಳಿವರನ್ನುದಾಸೀನಮಾಡಿದರುಇಂದಿರಾಪತಿವೆಂಕಟಕೃಷ್ಣಗೋಪಾಲಬಂದು ಶ್ರೀ ಒದಗಿಸಿದ ಕ್ಷಿಪ್ರದಲೆ ಇವರ್ಗೆ 33ಬ್ರಹ್ಮಚಾರಿ ಭಾಗಣ್ಣ ಗಾಯತ್ರೀ ಮಂತ್ರವಅಹರಹ ಸೂಕ್ಷ್ಮಾರ್ಥಅನುಸಂಧಾನವಿಹಿತ ಶ್ರದ್ಧಾ ಉದ್ಭಕ್ತಿಪೂರ್ವಕ ಜಪಿಸೆಶ್ರೀ ಹಯಾಸ್ಸ ನಾರಾಯಣನು ಒಲಿದ ಕ್ಷಿಪ್ರದಲೆ 34ವೇದೋಚ್ಚಾರಣವೇ ಗಾನವು ಜಗದ್ರಕ್ಷಣೆಯೇ ತ್ರಾಣವುಮಾಧವನೇ ಗಾಯತ್ರಿನಾಮ ಹಯಗ್ರೀವಭೂತಪೂರ್ಣವಾಗ್ವಶ್ರೀ ಪೃಥ್ವೀ ಆಶ್ರಯ ಶರೀರವ್ಯಾಪ್ತನುಹೃದಯ ಪ್ರಾಣಾಧಾರದಿವ ಪರಸ್ವರೂಪಪಾದತ್ರಯವು ಜಗತ್ಪಾದಸದೃಶ35ಜ್ಞಾನಸುಖ ಬಲಪೂರ್ಣ ಸರ್ವ ಜಗದಾದಿಕರ್ತದಿನಪತೇಜ ಸ್ಫೂರ್ತಿದ ಚೇಷ್ಟಕಾಧಾರಶ್ರೀ ನಾರಾಯಣದೇವ ನಿನ್ನ ಚಿಂತಿಪೆ ಭಜಿಪೆಅನುಪಮ ಸರ್ವೋತ್ತಮ ನಮೋ ಕೇಶವಾದಿ ನಾಮ 36ಲೌಕಿಕ ವಿಷಯಗಳೊಳ್ ಮನವಾಕ್ಕು ಚಲಿಸದೆಏಕಚಿತ್ತದಿ ಗಾಯತ್ರೀ ಪ್ರತಿಪಾದÀ್ಯಶ್ರೀ ಗಾಯತ್ರೀನಾಮ ನಾರಾಯಣನನ್ನಭಾಗಣ್ಣ ಜಪಿಸಿದರು ಕಂಡರು ಶ್ರೀಕರನ್ನ 37ಏಕಾಂತದಲ್ಲಿ ವೃಕ್ಷಮೂಲದಲ್ಲಿ ಕುಳಿತಿದ್ದಭಾಗಣ್ಣನ ಜಪಕೆಡಿಸಿ ಓರ್ವ ದುಷ್ಟಹಾಕಿದನು ಕುದಿನೀರು ಬೊಬ್ಬೆಗಳ್ ಅವನ ಮೇಲೆದ್ದವುಚಿಕಿತರಾಗಿ ಜನರು ಹೊಗಳಿದರು ಭಾಗಣ್ಣನ 38ಮತ್ತೊಂದುದಿನ ಇದಕೆÀ ಮುಂದೆಯೋ ಹಿಂದೆಯೋಸುತ್ತಿ ಭಾಗಣ್ಣ ವೃಕ್ಷಮೂಲದಲಿ ಸರ್ಪಹಿತದಿ ಆಶೀರ್ವದಿಸಿ ಪೋದಂತೆ ಪೋಯಿತುಇದು ನೋಡಿ ಜನರು ಕೊಂಡರು ಭೀತಿ, ಆಶ್ಚರ್ಯ ಮರ್ಯಾದೆ 39ಅಂದು ಮೃತಸರ್ಪ ಅರಿಯರಿಯರು ಶಮೀಕರು ಸಮಾಧಿಯಲಿಇಂದುತನ್ನ ಸರ್ಪ ಸುತ್ತಿರುವುದು ಭಾಗಣ್ಣ ಅರಿಯರುಇಂದಿರೇಶ ಒಲಿದವನಿವನೆಂದು ಶೇಷನೇ ಆಲಿಂಗಿಸಿದನೋಸ್ಕಂಧ ತನ್ನಯ ಸಹೋದರನೆಂದಪ್ಪಿ ಕೋಂಡನೋ 40ತತ್ವಮಾತೃಕಾನ್ಯಾಸಗಳ ಚರಿಸಿಮಂತ್ರ ಮೂಲಪ್ರಣವಅಷ್ಟಾಕ್ಷರೀ ಗಾಯತ್ರೀಭಕ್ತಿ ಪೂರ್ವಕ ಜಪಿಸಿ ಹೊರ ಒಳಗೆ ಶ್ರೀಹರಿಯವ್ಯಾಪ್ತಿವಿಜ್ಞಾನಪುಟ್ಟಿತು ಈ ಚೌತಾಪರೋಕ್ಷಿಗೆ41ವ್ಯಾಪ್ತಿ ದರ್ಶಿಯು ಇವರು ಶ್ರೀ ವಿಷ್ಣು ಅನುಗ್ರಹದಿಇಂದಿನ ಹಿಂದಿನ ಮುಂದಿನ ವಿಷಯ ಜ್ಞಾನವೇದ್ಯವಾಯಿತು ಹರಿಸ್ಮರಣಾ ಪೂರ್ವ ಆಲೋಚನದಿಬಂದು ಕೇಳುವವರಿಗೆ ಯೋಗ ಪೇಳಿದರು 42ಯೋಗಕ್ಷೇಮ ಸರ್ವಕೂ ನಿಯಾಮಕನು ಹರಿಯೇವೆಭಾಗಣ್ಣ ಈತತ್ವಜ್ಞಾನ ಪೂರ್ವಕದಿಲೌಕಿಕ ಧನ ಅಪೇಕ್ಷಿಸದಿದ್ದರೂ ಜನರುಬಾಗಿ ದ್ರವ್ಯಗಳಿತ್ತು ಬೇಡಿದರು ಸ್ವೀಕರಿಸೆ 43ಭವಿಷ್ಯ ಪೇಳುವುದರಲ್ಲಿ ಖ್ಯಾತಿ ಹರಡಿದ್ದಲ್ಲದೆಸರ್ವೇಶನ ಸ್ತೋತ್ರಕವನ ಪಟು ಎಂದುಸರ್ವರೂ ಕೊಂಡಾಡಿ ಆ ಊರಿಗೆ ಬಂದ ಪ್ರಖ್ಯಾತಕವಿಯನ್ನ ನಿಗ್ರಹಸಿ ಓಡಿಸಿದರು ಧೀರ 44ದಿಗ್ವಜಯ ಜಯಶೀಲನೆಂದು ಖ್ಯಾತ ಆಕವಿಭಾಗಣ್ಣ ಸೋಲಿಸಿ ಓಡಿಸಿದ್ದುಭಾಗಣ್ಣನ ಪ್ರಭಾವವ ಹರಡಿಸಿತು ನಾಡಲ್ಲಿಭಾಗಣ್ಣಗೆ ಸನ್ಮಾನ ಮಾಡಿದರು 45ಗದ್ವಾಲರಾಜನು ಇನ್ನೂ ಬಹು ಪ್ರಮುಖರುಬಂದು ನೇರವಾಗಿ ಭಾಗಣ್ಣನಲ್ಲಿವಂದಿಸಿ ಸನ್ಮಾನ ಪ್ರಶಸ್ತಿಗಳ ಅರ್ಪಿಸಿಪೋದರು ಶ್ಲಾಫಿಸುತ ತಮ್ಮ ತಮ್ಮ ಸ್ಥಳಕೆ 46ಹಿಂದೆ ದ್ರವ್ಯ ಹೀನನಾಗಿದ್ದ ಭಾಗಣ್ಣನಿಗೆಇಂದುಶ್ರೀಕೃಷ್ಣನ ಒಲುಮೆಯಿಂದಬಂದು ಸೌಭಾಗ್ಯ ಶ್ರೀ ದ್ರವ್ಯಗಳುಔದಾರ್ಯದಿ ದಾನಾದಿಗಳ್ ಮಾಡಿದರು 47ಇಷ್ಟರಲ್ಲೇ ಸೀನಪ್ಪ ದಾಸಪ್ಪ ರಂಗಪ್ಪಪ್ರೌಢವಯಸ್‍ಐದಿ ಗದ್ವಾಲು ಹೋಗೆ ಅಲ್ಲಿಮೌಢ್ಯ ಮಾತ್ಸರ್ಯದಿ ರಾಜ್ಯಾಧಿಕಾರಿಗಳುಕಡು ನಿರೋಧ ಮಾಡಿದರು ಮೂವರನ್ನು 48ವೆಂಕಟೇಶನ ಇಚ್ಛಾ ಈಮೂವರು ಅಣ್ಣಭಾಗಣ್ಣ ನಾಶ್ರಯದಲ್ಲೇವೆ ಇದ್ದುಅಗಲದೆ ಶ್ರೀಹರಿಗುಣಾನುವರ್ಣನಾಗಳಸುಗಾನ ಮಾಡುತ್ತಾ ಇರಬೇಕು ಎಂದು 49ಭಾಗಣ್ಣ ಅರ್ಯರು ಗದ್ವಾಲಿಗೆ ಪೋಗಿಸುಗುಣವಂತ ತಮ್ಮಂದಿರನ್ನ ಕರೆತಂದುಅಗಣಿತಗುಣಾರ್ಣವ ಶ್ರೀಯಃ ಪತಿಯ ಸೇವೆಗೆಯೋಗ್ಯೋಪದೇಶ ಪೂರ್ವಕ ತಯಾರು ಮಾಡಿದರು 50ದಾಸಪ್ಪ ಸೀನಪ್ಪ ರಂಗಪ್ಪ ತಮ್ಮ ಜ್ಞಾನಭಕ್ತಿಕಾಶಿಸಿ ವರ್ಧಿಪುದು ದಿನೇ ದಿನೇ ಹೆಚ್ಚಿಶ್ರೀ ಶ್ರೀನಿವಾಸನ ಪ್ರೀತಿಗೆ ಭಾಗಣ್ಣಚರಿಸುವ ಅನ್ನದಾನಾದಿಗಳಲ್ಲಿ ಸೇವಿಸಿದರು 51ದ್ರವ್ಯ ಧಾನ್ಯರಾಶಿಗಳು ತುಂಬಿದ್ದು ಕಂಡುದೇವ ಬ್ರಾಹ್ಮಣ ಸೇವೆಗೆ ಅಕ್ಕಿ ಹೆಚ್ಚು ಬೇಡೆಂದುಯಾವರೂ ಕಾಣದೆ ವೆಂಕಮ್ಮ ಮುಚ್ಚಿಡಲುಯಾವತ್ತೂ ಅಕ್ಕಿಯು ಹುಳುವಾಯ್ತು ಮರುದಿನ 52ಹರಿಬಲುಮೆಯಿಂದ ಭಾಗಣ್ಣ ಈ ರೀತಿ ತೋರಿಸಲುಹರಿಭಕ್ತಿ ವೈರಾಗ್ಯ ಹೆಚ್ಚಿತು ಮಾತೆಗೆಭಾರಿತರ ಕೀರ್ತನಾ ಸೇವೆ ಅತಿಶಯ ಚರ್ಯಅರಿತು ನಾಡೆಲ್ಲವೊ ಕೊಂಡಾಡಿತು ಭಾಗಣ್ಣನ 53ಉತ್ತನೂರು ಸಮೀಪವು ಐಜೀ ಎಂಬುವ ಗ್ರಾಮಉತ್ತಮ ಬ್ರಾಹ್ಮಣ ವೇಂಕಟನರಸಿಂಹಾಚಾರ್ಯದಂಪತಿಗೆ ಪುತ್ರರತ್ನ ವೇಂಕಟರಾಮಾಚಾರ್ಯಮಂದತನ ತೋರಿಸಿದ ಪುಸ್ತಕ ವಿದ್ಯೆಯಲ್ಲಿ 54ಭಾಗಣ್ಣ ಆರ್ಯರ ಪ್ರಭಾವದಲಿ ಆದರವೇಂಕಟನೃಸಿಂಹಾರ್ಯರ ಭಾರ್ಯೆಗೆ ಉಂಟುಭಾಗಣ್ಣನಲಿ ಪೋಗಿ ಮಗನ ತಿದ್ದುವ ಬಗೆಹೇಗೆಂದು ಅರಿಯಿರಿ ಎಂದಳು ಸಾಧ್ವೀ 55ಸಾಧ್ವೀ ಆಸ್ತ್ರೀರತ್ನಳಿಗೆ ಭಾಗಣ್ಣನುಔದಾರ್ಯದಿ ಒದಗುವ ಜ್ಞಾನಿವರ್ಯನೆಂದುಸುದೃಢದಿ ನಂಬಿದರೂ ಆಚಾರ್ಯ ಅರ್ಧಮನಸಿಂಪೋದರು ಕಂಡರು ಭಾಗಣ್ಣನ ಗುಡಿಯಲ್ಲಿ 56ವೇಂಕಟನೃಸಿಂಹಾರ್ಯ ತನ್ನ ಪಾಂಡಿತ್ಯ ಗುರುತನ ನೆನದುಆಕಸ್ಮಿಕ ಬೇಟಿಯಂತೆ ತೋರ್ಪಡಿಸಿವೇಂಕಟೇಶ ತುಳಸೀ ಸನ್ನಿಧಾನದಿ ಸಂಭಾಷಿಸಲುಶೀಘ್ರ ಕಂಡರು ಭಾಗಣ್ಣನ ಜ್ಞಾನಪ್ರಭಾವ 57ಭಾಗಣ್ಣ ಅಭಯವನಿತ್ತು ಆಚಾರ್ಯರನ್ನಹೋಗಿ ಬನ್ನಿ ಆತಂಕಬೇಡ ಮಹಾತ್ಮಮಗ ಸೂರಿಕುಲ ರತ್ನನು ವೇಂಕಟರಾಮಪ್ರಕಾಶಿಪುದು ಆತನ ಜ್ಞಾನಕ್ಷಿಪ್ರದಲೇ ಎಂದರು 58ಭಾಗಣ್ಣ ಆರ್ಯರು ಹೇಳಿದ ರೀತಿಯಲ್ಲೇವೇಂಕಟರಾಮಾರ್ಯ ಏಕವಾರ ಶ್ರವಣದಲ್ಲೇವೇಂಕಟನರಸಿಂಹಾಚಾರ್ಯ ಚಕಿತರಾಗುವಂತೆಅಕಳಂಕ ಪಾಂಡಿತ್ಯಪ್ರೌಢಿಮೆ ತೋರಿಸಿದ 59ಪ್ರತಿದಿನ ಐಜಿಯವರು ಭಾಗಣ್ಣ ದಾಸರೂ ಈರ್ವರುತತ್ವ ವಿಚಾರ ಹರಿಭಜನೆ ಮಾಡಿಒಂದು ದಿನ ಬ್ರಹ್ಮ ಜಿಜ್ಞಾಸ ಸ್ವಾರಸ್ಯದಲಿ ಸಾಯಂಸುಧ್ಯಾಕಾಲ ಅತಿಕ್ರಮವು ಆಯಿತು 60ಸೂರ್ಯಾಸ್ತ ಮನಃಪೂರ್ವಕರ್ತವ್ಯಕರ್ಮಬಿಟ್ಟದೋಷಪ್ರಾಯಶ್ಚಿತ್ತಾಘ್ರ್ಯ ಕೊಡಲಿಕ್ಕೆ ಇರಲುಭಯಬೇಡ ದೋಷವಿಲ್ಲ ಎಂದು ಭಾಗಣ್ಣಾರ್ಯಸೂರ್ಯನ್ನ ತಾನು ನೋಡಿ ತೋರಿಸಿದರು ಐಜೀಗೆ 61ಇಂದ್ರಜಾಲವಲ್ಲವು ಕ್ಷುದ್ರೋಪಾಸನಾದಿಗಳಿಂದಲ್ಲಅರ್ಧರಾತ್ರಿಯಲಿ ಸೂರ್ಯನ್ನ ನೋಡಿ ನೋಡಿಸಿದ್ದುಮಾಧವಶ್ರೀ ಮುಖ್ಯ ವಾಯುದೇವರು ರುದ್ರಸದಾ ಒಲಿದಿರುವ ಭಾಗಣ್ಣಗೆ ಇದು ಆಶ್ಚರ್ಯವಲ್ಲ 62ತೇಜೋಜಲ ಪೃಥ್ವೀಮುನಿಗಳು ಶ್ರೀ ಪ್ರಾಣರುದ್ರರುವಜ್ರ, ಅಗ್ನಿ, ವರುಣ ಪೃಥಿವ್ಯಾದಿ ಸರ್ವರೊಳಗೊರಾಜನೆ ನಿಯಮಿಸುವ ಅನಿರುದ್ಧ ಜಗದೀಶಜಗಜ್ಜನ್ಮಾದಿಕರ್ತ ಗಾಯತ್ರೀ ಭರ್ಗಸರ್ವಗನು 63ತೀರ್ಥಯಾತ್ರೆಯ ತೀರ್ಥರೂಪ ಭಾಗಣ್ಣ ತನ್ನಭ್ರಾತರೊಡಗೂಡಿ ಹೊರಟಿಹರುಮಂತ್ರಾಲಯ ವೇಂಕಟಗಿರಿ ಘಟಿಕಾದ್ರಿಹಸ್ತಿವರದಕಂಚಿ ಮೊದಲಾದ ಕ್ಷೇತ್ರ64ವೇಂಕಟ ಕೃಷ್ಣನ ಮುದ್ರೆಯಿಂ ಕವನಗಳಉತ್ಕøಷ್ಟ ರೀತಿಯಲ್ಲಿ ರಚಿಸಿ ಭಜಿಸುತ್ತಾಭಾಗಣ್ಣ ಆದವಾನೀಯಲ್ಲಿ ತಿಮ್ಮಣ್ಣಾರ್ಯರಲ್ಲಿಮುಕ್ಕಾಮು ಹಾಕಿದರು ಸ್ವಲ್ಪಕಾಲ 65ದಿವಾನು ತಿಮ್ಮಣ್ಣ ರಾಯರ ಉಪಚಾರಸರ್ವ ಅನುಕೂಲ ಆತಿಥ್ಯಕೊಳ್ಳುತ್ತಾದಿವ್ಯಮಾರುತೀ ಗುಡಿಗೆ ಪ್ರತಿದಿನ ಪೋಗಿಸೇವೆಸಲ್ಲಿಸಿದರು ಭಾಗಣ್ಣ ಶ್ರೀಹನುಮನಿಗೆ 66ಶ್ರೀ ವಿಜಯದಾಸಾರ್ಯರು ಶ್ರೀ ವ್ಯಾಸದೇವರ ಕಂಡುಶ್ರೀವರ ಒಲಿದು ಪುರಂದರಾರ್ಯರ ಕೈಯಿಂದದಿವ್ಯನಾಮಾಂಕಿತ ಬೀಜಾಕ್ಷರಗಳ ಹೊಂದಿಭುವಿಯಲಿ ಪ್ರಖ್ಯಾತರಾಗಿ ಬಂದಿದ್ದರಾಗ 67ವಿಜಯವಿಟ್ಠಲದಾಸರಾಯರು ತಮ್ಮನಿಜ ಶಿಷ್ಯವೃಂದದಲಿ ವ್ಯಾಸವಿಜಯಸಾರಥಿಗೋಪಾಲಹಯವದನಭಜನೀಯ ಈ ಮೂರು ಅಂಕಿತಕೊಡಬೇಕಾಗಿತ್ತು 68ಗೋಪಾಲವಿಠ್ಠಲಸುನಾಮಭಾಗಣ್ಣಗೆಸುಪ್ರಿಯ ಮನದಿಂದ ಇತ್ತು ಹಯವದನಸುಪವಿತ್ರ ಅಂಕಿತ ಚೀಕಲಪರವಿ ಆನಂದನಿಗೆಕೃಪಾಂಬುಧಿ ವಿಜಯದಾಸಾರ್ಯ ಇತ್ತರು 69ಶ್ರೀಪುರಂದರದಾಸಾರ್ಯರನುಗ್ರಹದಲಿಸುಪುಣ್ಯವಂತನು ಸಹನ ಶಾಲಿಯಾದಶ್ರೀಪಪ್ರಿಯ ತಿಮ್ಮಣ್ಣ ವೇಣುಗೋಪಾಲನಾಮತಾಪೊಂದಿದ ವಿಜಯದಾಸರು ಕೃಪದಿ ಕೊಡಲು 70ಶೋಭನ ಜ್ಞಾನಪ್ರದ ವ್ಯಾಸ ನಾಮಾಂಕಿತವಸುಬ್ಬಣ್ಣ ಕಲ್ಲೂರು ಪಂಡಿತೋತ್ತಮಗೆಲಭಿಸುವಂತೆ ವಿಜಯದಾಸ ಮಹಂತರುಕೃಪೆಯಿಂದ ಒದಗಿಸಿದರು ಔದಾರ್ಯನಿಧಿಯು 71ಗೋಪಾಲ ವಿಟ್ಠಲಾಂಕಿತದಲಿ ಭಾಗಣ್ಣಶ್ರೀಪಪ್ರಿಯತಮ ಪದ್ಯ ಸುಳಾದಿಗಳ ರಚಿಸಿಸುಪುಣ್ಯವಂತ ಸೀನಪ್ಪ ದಾಸಪ್ಪ ಈರ್ವರಿಗೂಉಪದೇಶ ಮಾಡಿದರು ಮಂತ್ರೋಪೇತ ನಾಮಾಂಕಿತಗಳನ್ನು 72ಕರಿರಾಜವರದನು ಗರುಡವಾಹನಸಿರಿವರವಾಸು ದೇವನೇ ವರದರಾಜನೆಂದೂಧರೆಯಲುತ್ತಮ ಕಂಚೀಪುರದಿ ಇರುವವನು ನಾಮವರದಗೋಪಾಲ ವಿಟ್ಠಲನಾಮ ಶ್ರೀನಿವಾಸನಿಗೆ 73ಇತರಾದೇವಿಯ ಸುತನೆನಿಸಿ ಮಹಿದಾಸನಾಮದಲಿಪ್ರಾದುರ್ಭವಿಸಿದ ಶ್ರೀಯಃಪತಿಗೆ ಪ್ರಿಯತಮವುಬೃಹತೀ ಸಹಸ್ರದಲಿ ವಿಷ್ಣು ನಾಮ ವಿಶ್ವಶಬ್ದಕ್ಕೆವಾಯುದೇವಾಂತರ್ಗತನು ಎಂದು ಜೆÕೀಯ 74ಮಧ್ವಾ ್ಯಖ್ಯ ವಾಯುದೇವರಗುರುಮಹಿದಾಸವೇದವ್ಯಾಸ ಹಂಸಾಖ್ಯ ಕಪಿಲ ಶ್ರೀಪತಿಯಉತ್ತಮನಾಮ ಗುರುಗೋಪಾಲ ವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 75ಭಂಗಾರದಂಥ ವೈಷ್ಣವ ಸಂತತಿಯ ಪಡೆದುರಂಗನಾಥನನುಗ್ರಹದಿ ಪಾಲಿಸುವಂಥಾರಂಗಪ್ಪರಾಯರಿಗೆ ತಂದೆ ಗೋಪಾಲವಿಟ್ಠಲನಾಮಅಕಳಂಕ ಯದುಪತಿಯ ನಾಮವ ಕೊಟ್ಟರು 76ವಿಜಯರಾಯರ ಪರಮಭಕ್ತಾನುಗ್ರಹಿವಿಜಯಸಾರಥಿಪ್ರಿಯ ಗೋಪಾಲರಾಯರುವಿಜಯಾರ್ಯರ ಸುಪ್ರಸಾದದ ಬಲದಿಂದಅನುಜರಿಗೆ ಒದಗಿಸಿದರುಅಪರೋಕ್ಷ77ಗೋಪಾಲ ವರದಗುರು ಗೋಪಾಲದಾಸರ್ಗಳಅಪರೋಕ್ಷಮಹಿಮೆಗಳ ಸಾಧು ಸಜ್ಜನಗಳತೋರ್ಪಡಿಸಿ ಬೇರೆ ಬೇರೆಯಾಗಿಟ್ಟು ಮೂವರನ್ನುಶ್ರೀಪಪ್ರಿಯ ಕವನವ ರಚಿಸಿಗುರುಹೇಳಿದರು78ಗುರುಅಂತರ್ಗತನಾದ ಗೋಪಾಲನೃಹರಿಯಸ್ಮರಿಸಿ ಮೂವರೂ ಗುರುನಾಮವೂ ತದಂತಸ್ಥಹರಿಗೆ ಸುಪ್ರೀತಿಕರಯೆಂದು ರಚಿಸಿದರುಗುರುಸತ್ಯಬೋಧರ ಪ್ರಭಾವತೋರ್ಪಡಿಸಿ79ಸೂರಿಗಳುಗೋಪಾಲದಾಸಾದಿ ಮೂವರೂಬರೆದ ಕೀರ್ತನೆಯಲ್ಲಿ ಸತ್ಯಬೋಧಾರ್ಯರಸ್ವರೂಪವ ಸೂಕ್ಷ್ಮದಲಿ ಸೂಚಿಸಿಹರು ಎಂದುಅರಿವರು ಜ್ಞಾನಿಗಳು ಬಲ್ಲೇನೇ ನಾನು? 80ನೆರೆÀದಿದ್ದ ಜನರೆಲ್ಲ ಆಶ್ಚರ್ಯ ಚಕಿತರುಪರಿಪರಿ ವಿಧದಲ್ಲಿ ಮೂವರನ್ನು ಕೊಂಡಾಡೆಗುರುಸತ್ಯಬೋಧರು ಯುಕ್ತ ರೀತಿಯಲ್ಲಿಭಾರಿತರ ಭೂಷಣಾನುಗ್ರಹ ಮಾಡಿದರು 81ತಂದೆ ಗೋಪಾಲದಾಸಾರ್ಯರು ಮನೆಯಲ್ಲೇನಿಂದುಸತಿಸುತರಿಗೆ ಹರಿಸೇವೆಯನ್ನಒದಗಿಸುತ ಮಾತ್ರಂತರ್ಯಾಮಿ ಹರಿಯನ್ನ ತಾನುಭಕ್ತಿಪೂರ್ವಕ ಮಾಡುತ್ತಿದ್ದರು ಸೇವಾ ಸುಧ್ಯಾನ ಪರರು 82ಹರಿಕ್ಷೇತ್ರ ಹರಿತೀರ್ಥಯಾತ್ರೆಯಗೈಯ್ಯಲುಸಿರಿವಿಜಯರಾಯರ ಅನುಗ್ರಹ ಕೊಂಡುಹೊರಟರು ಗೋಪಾಲದಾಸಾರ್ಯರುವರದಗುರುಗೋಪಾಲದಾಸರ ಸಮೇತ83ಉಡುಪಿಕ್ಷೇತ್ರಸ್ಥ ಹರಿಮೂರ್ತಿಸ್ಥ ತೀರ್ಥಸ್ಥಕಡಲಶಯನನ್ನ ನೋಡಿ ಸೇವಿಸಲಿಕ್ಕೆಒಡಹುಟ್ಟಿದವರ ಸಹ ನಡೆಯುತ್ತಿರುವಾಗಅಡ್ಡಗಟ್ಟಿದ ಕ್ರೂರನು ಭೀಮಾಭಿದನು 84ಶ್ರೀ ವಿಜಯದಾಸರಿಂ ಮೊದಲೇ ಅನುಗ್ರಹೀತಭಾವುಕಾಗ್ರಣೀ ಗೋಪಾಲಾರ್ಯರು ಹರಿಗುರುಗಳಿತ್ತದಿವ್ಯ ಸಾಮಥ್ರ್ಯದಿಂ ಸಸೈನ್ಯ ಭೀಮನ್ನತೀವ್ರ ನಿಶ್ಚೇಷ್ಟಗೈಸಿ ಶರಣರ ಮಾಡಿದರು 85ಉಡುಪಿಸುಕ್ಷೇತ್ರದಲ್ಲಿ ಗೋಪಾಲಾರ್ಯರುಮಾಡಿದ್ದು ವರ್ಣಿಸಲು ಬಲ್ಲೆನೇ ನಾನು ?ಆಟದಲಿ ಜಗಪಡೆವ ಕೃಷ್ಣ ತಾಸುತನಂತೆಆಟವಾಡಿದ ಬಾಲರೂಪದಿ ಕೃಪಾಳು 86ಪೂರ್ವ ದಕ್ಷಿಣ ವರುಣ ದಿಶೆಯಾತ್ರೆಮಾಡಿಶ್ರೀ ವೇಣೀಸೋಮಪುರಕೆ ಮರಳಿ ಬಂದುಕೋವಿದಕುಲರತ್ನ ವಾಸುದೇವವಿಟ್ಠಲ ರಾಮಶ್ರೀವೇಂಕಟರಾಮಾರ್ಯರನ್ನು ಕಂಡರು 87ಉತ್ತನೂರು ಪೋಗಿ ವೇಂಕಟಕೃಷ್ಣನ್ನವಂದಿಸಿ ಬಂಧುಗಳ ಕೂಡ ತಾ ಇದ್ದುಒಂದುದಿನ ನಿಶ್ಚೈಸಿದರು ಪಂಡರೀಪುರಕ್ಕೆ ಪೋಗಿಇಂದಿರಾಪತಿಯನ್ನ ನೋಡಿ ಸೇವಿಸಲು 88ಪತ್ರಪೂ ಪಲ್ಲವ ಫಲವೃಕ್ಷ ದೇಶವುಸುಪವಿತ್ರ ಶ್ರೀ ತುಳಸೀ ಉತ್ಕøಷ್ಟವನದಿಸುಪುಣ್ಯ ಶ್ಲೋಕ ಶ್ರೀದಾಸಾರ್ಯರನ್ನ ಸುತ್ತಿ ಅಟ್ಟಿಶ್ರೀಪತಿ ಕೇಳ್ದ ಅಲೇನಾಹಿ ಎಂದು 89ಶ್ರೀಹರಿ ಸ್ವೇಚ್ಛೆಯಿಂ ಪ್ರಕೃತಿ ಕ್ಷೋಭಿಸಿ ತ್ರಿಗುಣ ಬೆರೆಸಿಮಹದಹಂಕಾರಾದಿ ತತ್ವ ಸೃಷ್ಟಿಗೈದುಬ್ರಹ್ಮಾಂಡ ನಿರ್ಮಿಸಿ ತದಾಶ್ರಯನಾಗಿ ಇಪ್ಪವನು ತಾನೇಮಹಾದ್ಭುತ ಕುದುರೆ ಸವಾರನಾಗಿ ತೋರಿ ಮರೆಯಾದ 90ಆಲೋಚಿಸಿ ತಿಳಿದು ವಿಟ್ಠಲನೇ ಬಂದವನೆಂದುನೀಲಕುದುರೆ ಎಂಬ ಸ್ತೋತ್ರ ಮಾಡಿದರುಪೇಳ್ವರು ವ್ಯಾಪ್ತೋಪಾಸಕ ಜ್ಞಾನಿಗಳು ಇದರ ರ್ಥಮೊದಲನೇ ನುಡಿಯು ಮೇಲೆ ಹೇಳಿದಹರಿಮಹಿಮೆಯೆಂದು ಬಲ್ಲೆನೇ ನಾನು 91ಭೀಮರಥಿ ಸ್ನಾನವು ಪುರಂದರಾರ್ಯರ ನಮಿಸಿಭೂಯಾದಿ ಗುಣಗಣಾರ್ಣವ ವಿಟ್ಠಲನ್ನಪ್ರೇಮೋತ್ಸಾಹದಲಿ ಸನ್ನಮಿಸಿಸ್ತುತಿಸಿರಮ ರುಕ್ಮಿಣಿಯ ನಮಿಸಿದರು ದಾಸಾರ್ಯ 92ಕೋಲ್ಹಾಪುರ ಪೋಗಿ ಮಹಾಲಕ್ಷ್ಮಿ ಮಂದಿರದಿಶೀಲ ಪರಮಾದರದಿ ಲಕ್ಷ್ಮೀನಾರಾಯಣರನ್ನಕೀಲಾಲಜಾದಿ ಪುಷ್ಪಾರ್ಚನೆಗೈದು ಕಾಪಾಡೆಂದು ಕೀರ್ತನೆಗಳಿಂದ ಸ್ತುತಿಸಿದರು 93ಇನ್ನು ಬಹು ಬಹು ಕ್ಷೇತ್ರಯಾತ್ರೆ ಸೋದರರ ಕೂಡಿಅನವರತಸುವ್ರತ ಧ್ಯಾನಪರರಾಗಿಘನಮಹಿಮ ಗೋಪಾಲ ವಿಟ್ಠಲನ ಸ್ತುತಿಸುತ್ತವೇಣೀ ಸೋಮಪುರಕ್ಕೆ ಬಂದರು ತಿರುಗಿ 94ಗುರುಗಳು ವಿಜಯದಾಸಾರ್ಯರ ದ್ವಾರಾಯಾತ್ರಫಲ ಕೃಷ್ಣನಿಗೆ ಸಮರ್ಪಿಸಿಉದ್ದಾಮಪಂಡಿತವೇಂಕಟರಾಮಾರ್ಯರಲಿಇದ್ದು ಪೋದರು ಉತ್ತನೂರ ಸ್ವಕ್ಷೇತ್ರ 95ಉತ್ತನೂರು ವೇಂಕಟಕೃಷ್ಣನಾಲಯ ಮುಂದೆನಿಂತು ತುಳಸೀ ವನದಿಂದ ಸುಳ್ಳಿ ತೆಗೆವಾಗಬಂದರು ಭ್ಯಾಗವಟ್ಟಿ ಶ್ರೀನಿವಾಸಾಚಾರ್ಯವಂದಿಸಿ ನಿಂತರು ಕೈಮುಗಿದು ವಿನಯದಿ 96ಜ್ಞಾನದಲಿ ಋಜುಮಾರ್ಗ ಗರ್ವದಲ್ಲಿನಿತ್ಯಸಂಸಾರಿಮಾರ್ಗಜ್ಞಾನ ಬೋಧಿಸುವುದರಲ್ಲಿ ಪಂಡಿತರಮಾರ್ಗಮಾನುಷಾನ್ನವನುಂಡು ಮಂದಧೀಯಲ್ಲಿ ಗುರುನಿಂದಾಈ ಶ್ರೀನಿವಾಸಾಭಿದನು ಮಾಡಿ ನರಳುತಿದ್ದ 97ಭಾಗಣ್ಣ ಆರ್ಯರು ಶ್ರೀನಿವಾಸಾಚಾರ್ಯಗೆಅಘನಾಶವಿಜ್ಞಾನಲಭಿಸುವ ಸಾಧನವುನಿಗಮಾರ್ಥ ಬೋಧಕ ಉಪದೇಶ ಮಾಡಿ ಪಂಡರಿಪುರ ಪೋಗಿರಿಜಗನ್ನಾಥ ವಿಟ್ಠಲ ಒಲಿದು ಕಾಂಬ ಎಂದರು 98ಶ್ರೀನಿವಾಸಾಚಾರ್ಯರು ದಾಸಾರ್ಯಾರ್ ಹೇಳಿದಂತೆಸುನಿರ್ಮಲ ಭೀಮ ರಥಿಯಲ್ಲಿ ಸ್ನಾನಗೈದುಇನನಲಿ ಅನಿಲಾಂತರ್ಗತ ನಾರಾಯಣನ್ನಧ್ಯಾನಿಸಿ ಭಕ್ತಿಜ್ಞಾನದಿಂದ ಕೊಟ್ಟರು ಅಘ್ರ್ಯ 99ಐದೆರಡು ಸಾಧು ಭಕ್ತಿ ಪ್ರತಿಪಾದ್ಯ ಶ್ರೀ ನಾರಾಯಣನುವಾಗ್ದೇವಿವರವಾಯುಗಳಿಂದ ಋಕ್‍ಸಾಮದಿಂಸ್ತುತಇಪತ್ತೆರಡಕ್ಷರದಲ್ಲಿ ಎರಡನೇ ಮೂರಕ್ಷರ ಬೋಧಿತಆದಿತ್ಯಸ್ಥ ವಾಯುಸ್ಥನ್ನ ಸ್ಮರಿಸಿಕೊಟ್ಟರು ಅಘ್ರ್ಯ 100ಜಗನ್ನಾಥದಾಸರ್ಗೆ ಗೋಪಾಲದಾಸಾರ್ಯಗುರುಜಗತ್ತಲ್ಲಿ ಕಂಡಿಲ್ಲದ ಉದಾರದಲಿತೆಗೆದು ತನ್ನಾಯುಷ್ಯದಿಂ ಚತ್ವಾರಿವರ್ಷಕೊಟ್ಟರುಗುರುಗ ಶ್ರೀವಿಜಯಗೋಪಾಲ ಶ್ರೀನಿವಾಸನ ಪ್ರೀತಿಗೆ101ಭಕ್ತಿಯಲ್ಲಿ ಭಾಗಣ್ಣನೆಂದು ಸುಪ್ರಖ್ಯಾತಭಕ್ತ ಶಿರೋಮಣಿಯು ಗೋಪಾಲ ದಾಸಾರ್ಯಬೀದಿಯಲಿ ಜರುಗದ ರಥಕೂಢನ್ನ ಬಾರೈಯ್ಯಎಂದು ಸ್ತುತಿಸೆ ರಥ ಓಡೋಡಿ ಬಂತು 102ತಿರುಪತಿ ಶ್ರೀ ಶ್ರೀನಿವಾಸನ ರಥವುಸರಸರ ಬಂದದ್ದು ಜನರು ನೋಡಿಹರಿಭಕ್ತಾಗ್ರೇಸ ಗೋಪಾಲ ದಾಸರನ್ನಪರಿಪರಿ ವಿಧದಿ ಕೊಂಡಾಡಿದರು ಮುದದಿ 103ಕಂಚೀ ವರದರಾಜನ ದೇವಾಲಯದಲ್ಲಿಕಿಚ್ಚು ಸೋಕಿ ಚೀಲ ಉರಿಯಲು ಅದನ್ನದಾಸವರ್ಯ ದೂರದೇಶದಲಿದ್ದರೂ | ತನ್ನ ಚೀಲ |ಕಸಕಿ ಶಾಂತ ಮಾಡಿದರು ಕಂಚಿಯ ಉರಿಯ 104ದಾರಿದ್ರ್ಯ ಋಣರೋಗ ಅಪಮೃತ್ಯು ಅಪಿಚಾರಪರಿಪರಿ ಕಷ್ಟೋಪಟಳ ವಿಘ್ನಗಳಗುರುವಿಜಯರಾಯಾಂತರ್ಗತ ಗೋಪಾಲನ ಒಲುಮೆಯಿಂದಎರಗುವರ್ಗೆ ಕಳೆದಿಹರು ಅದ್ಯಾಪಿ ಒದಗುತಿಹರು 105ಗೋಪಾಲದಾಸರಿಗೆವಿಜಯದಾಸರಲ್ಲಿಇಪ್ಪ ಭಕ್ತಿಯ ವರ್ಣಿಸಲಶಕ್ಯಗೋಪಾಲ ದಾಸರನ್ನು ನಂಬಿದವರನ್ನ ವಿಜಯಾರ್ಯ ಕೈ ಬಿಡರುಗೋಪಾಲವಿಜಯವಿಟ್ಠಲ ಬಂದು ತಾನೇ ಒಲಿವ106ಗೋಪಾಲ ದಾಸಾರ್ಯರೇ ನೀವು ವಿಜಯಾರ್ಯರಲ್ಲಿತಪ್ಪದೇ ಮಾಡಿದ ಭಕ್ತಿಯಿಂದದಿ ಎನಗೆಸ್ವಲ್ಪವಾದರೂ ನಿಮ್ಮಲ್ಲಿ ಪುಟ್ಟುವಂತೆ ಮಾಡಿರಿಗೋಪಾಲ ಪ್ರಿಯತಮರೇ ಪಾಹಿಮಾಂ ಶರಣು 107ಹೆಳವನಕಟ್ಟೆ ಗಿರಿಯಮ್ಮ ಮೊದಲಾದಶೀಲ ಶಿಷ್ಯರು ಬಹುಮಂದಿಗಳುಬಲು ಭಕ್ತಿಶ್ರದ್ಧೆಯಿಂ ಉಪದೇಶಗೊಂಡುಜಲಜನಾಭನ ಒಲುಮೆ ಪಾತ್ರರಾಗಿಹರು 108ಜ್ಞಾನ ಭಕ್ತಿ ವೈರಾಗ್ಯವಂತಳು ಗಿರಿಯಮ್ಮಕ, ೃಷ್ಣ ಮಂತ್ರ ಉಪದೇಶ ದಾಸಾರ್ಯರಿಂದಕೊಂಡು ಶ್ರೀ ರಂಗವಿಟ್ಠಲ ಕೃಷ್ಣನ್ನ ಪ್ರತ್ಯಕ್ಷಕಾಣುವಂಥ ಸೌಭಾಗ್ಯ ಶಾಲಿಯಾಗಿಹಳು 109ಅದ್ವಿಜನು ಶೈವನು ಪತ್ನಿ ಸಹಸೇವಿಸಿಮಂತ್ರಾಲಯ ಗುರುಗಳಿಂ ಅನುಕೂಲ ಹೊಂದಿಕೃತಜÕಭಾವದಿ ಲಕ್ಷ ಬ್ರಾಹ್ಮಣ ಭೋಜನ ಮಾಡಿಸುವೆನುಎಂದು ಹರಕೆ ಮಾಡಿಸಲಿಕ್ಕಾಗಲಿಲ್ಲ 110ಸ್ವಪ್ನದಲಿ ಹೇಳಿದರು ಕರುಣಿ ಶ್ರೀ ರಾಘವೇಂದ್ರಗುರುತಪ್ಪದೇ ಹರಕೆ ಸಲ್ಲುವುದು ಮೂವರು ಬ್ರಾಹ್ಮಣರುಸುಪುಣ್ಯವಂತರು ಮಹಾತ್ಮರು ಮರುದಿನ ಬೆಳಿಗ್ಗೆಈ ಪಥದಿ ಬರುವರ್ಗೆ ಭೋಜನ ಮಾಡಿಸೆಂದು 111ವರದಗುರುಗೋಪಾಲದಾಸರು ದಾಸಾರ್ಯರುಅರಿತುಅಪರೋಕ್ಷಸಾಮಥ್ರ್ಯದಿ ಈ ಸ್ವಪ್ನನೇರಾಗಿ ಬರಲಾಗ ಆಶೈವಗುರುಭಕ್ತನುನಾರೀ ಸಹನಮಸ್ಕರಿಸಿ ಸ್ವಾಗತವನಿತ್ತ 112ಮೂವರಿಗೂ ಅಧಿಕವಾದ ಪದಾರ್ಥಗಳನರ್ಪಿಸಿದೇವರ ನೈವೇದ್ಯ ಮೂವರಿಗೂ ಭೋಜನದೇವಗುರುಬ್ರಾಹ್ಮಣ ಪ್ರೀತಿಯಾಗಲಿ ಎಂದು ನಮಿಸಿದರುಶೈವ ಕುಲೀನ ದಂಪತಿ ಭಕ್ತಿ ಪೂರ್ವಕದಿ 113ಅಂದು ರಾತ್ರಿ ಆ ಭಕ್ತ ದಂಪತಿಗೆ ಸ್ವಪ್ನದಲಿಪ್ರೀತಿ ಆಯಿತು ಕೃಷ್ಣನಿಗೆ ಹರಕೆ ಪೂರ್ಣ ಆಯ್ತುಎಂದು ರಾಘವೇಂದ್ರ ತೀರ್ಥ ಸ್ವಾಮಿಗಳು ಹೇಳಿಮುದದಿ ದಂಪತಿಯ ಕೃತ ಕೃತ್ಯ ಮಾಡಿದರು 114ಮೊದಲು ಆದರ ರಹಿತ ವೆಂಕಟನೃಸಿಂಹಾರ್ಯನಿಂದುಗೋಪಾಲ ದಾಸಾರ್ಯರಹರಿಪೂಜಾಪದ್ಧತಿಯ ನೋಡುತಿರೆ ಹನುಮಂತ ದೇವರುಮೂರ್ತಿಮತ್ ಕುಳಿತಿದ್ದುದು ಕಂಡರು 115ಬಂದು ವೆಂಕಟ ನೃಸಿಂಹಾಚಾರ್ಯರು ಮತ್ತುನಿಂದಿಸಿದ ವೈದಿಕರು ತತ್ವ ಕೀರ್ತನೆಗಳಅದ್ಭುತ ಸುಳಾದಿಕೇಳಿನಿರ್ಮತ್ಸರರಾಗಿಬಂದು ಶಿಷ್ಯತ್ವ ಬೇಡಿದರು ಆರ್ಯರಲಿ 116ವೈರಾಗ್ಯನಿಧಿ ಗಂಗಾಧರನ ಅನುಗ್ರಹದಿವೈರಾಗ್ಯ ಯುಕ್‍ಜ್ಞಾನಹರಿಭಕ್ತಿ ಲಭಿಸಿದ್ದಸೂರಿವರ ಗೋಪಾಲ ದಾಸಾರ್ಯ ಜರಿಗೆ ಶಾಲು ರೇಷ್ಮೆಭಾರಿ ಪಲ್ಲಕ್ಕಿ ವೈಭವದಿ ಮೆರೆದರುಹರಿಪ್ರೀತಿಗಾಗಿ117ಪನ್ನಗಾಚಲಶ್ರೀ ಶ್ರೀನಿವಾಸನ ಭಕ್ತಅನಿಮಿಷಾಂಶರು ಗೋಪಾಲ ದಾಸಾರ್ಯಶ್ರೀನಿವಾಸನಪ್ಪಣೆಕೊಂಡು ಊರಿಗೆ ಬಂದುಅವನೀಸುರರಿಗೆ ಔತಣವಿತ್ತು ಧ್ಯಾನದಿ ಕುಳಿತರು 118ಮುಖ್ಯಕಾರಣ ವಿಷ್ಣು ಸ್ವತಂತ್ರ ಎಂದುತಾ ಭಜಿಸಿಶಿಷ್ಯರಿಗೆ ಬೋಧಿಸಿ ಸಜ್ಜನರ ಪೊರೆದುಪುಷ್ಯ ಬಹುಲಾಷ್ಟಮೀಯಲ್ಲಿ ಪೂಷಯದುಪತಿಧಾಮಕೃಷ್ಣ ಭಕ್ತಿರಿಗೌತಣವಿತ್ತು ಐದಿದರು 119ಗದ್ವಾಲ ರಾಜ ಮೊದಲಾದ ರಾಜ ಪ್ರಮುಖರಿಂದಮೇದಿನೀ ಪ್ರಖ್ಯಾತ ಯತಿಗಳು ಪಂಡಿತರಿಂಎದುರಿಲ್ಲದಸೂರಿಐಜೀಯವರಿಂದಲುಸದಾ ಮರ್ಯಾದೆ ಕೊಂಡವರು ದಾಸಾರ್ಯ 120ವಿಜಯದಾಸಾರ್ಯ ಪೂಜಿಸಿದಹರಿಮೂರ್ತಿವಿಜಯವಿಟ್ಠಲ ಪ್ರತಿಮೆ ಅಂತರ್ಗತನ್ನವಿಜಯಸಾರಥಿಪ್ರಿಯ ಗೋಪಾಲ ದಾಸರು ಪೂಜಿಸಿರಾಜಿಸುತಿಹ ಮೂರ್ತಿಇಹುದುಅವರಮನೆಯಲ್ಲಿ121ಜ್ಞಾನ ಸುಖ ಬಲ ಪೂರ್ಣ ಜನ್ಮಾದಿಕರ್ತಅಜವನರುಹಜ ಪಿತ ಶ್ರೀಶಪ್ರಸನ್ನ ಶ್ರೀನಿವಾಸಅನಘಹಯಮುಖವಿಜಯಗೋಪಾಲ ಸರ್ವಗಗೆಘನ್ನ ಪ್ರಿಯ ಗೋಪಾಲ ದಾಸಾರ್ಯ ಶರಣು 122|| ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಶ್ರೀನಿವಾಸದೇವರು33ಸರ್ವಾಂತರ್ಯಾಮಿ ಸ್ವತಂತ್ರ ಶ್ರೀನಿವಾಸ ಸರ್ವಾಂತರ್ಯಾಮಿ ಸ್ವತಂತ್ರಸರ್ವಾಂತರ್ಯಾಮಿಹರಿಸುಂದರ ಜ್ಞಾನಾನಂದಇಂದಿರೆಕಾಂತ ಅರಿವಿಂದಸಂಭವನಯ್ಯ ಪಅದ್ಭುತ ಅಚಿಂತ್ಯ ಶಕ್ತ ಅಮ್ಮ ಲಕುಮಿಯಅಮಲ ಪ್ರೇಮದಿ ಇವನ ಆಡಿಗಳಿಗೆರಗುವರಅಘಕೂಟ ತೊಲಗಿಸಿ ಅಪವರ್ಗವೀವ ಸ್ವಾಮಿಚಿಂತಿಸಿ ವಂದಿಪ ಸುಜನರ ಮನದೊಳುಚಂದಿರನಂದದಿ ನಿಂದಿವ ಪೊಳೆಯುತಹಿಂದಿನ ಮುಂದಿನ ಕರ್ಮವ ಕಳೆದಿನಕುಂದದಾನಂದವನೀವ ಮುಕುಂದನು 1ಜನ್ಮಾದಿ ಮುಖ್ಯ ಕಾರಣ ಜಾನಕೀಶ ಜಲಜಸಂಭವನಯ್ಯಜಿಹ್ವಾದ್ವಯನುದ್ವಿಜಜಲಧರ ಮೊದಲಾದಜನರೊಳು ಇದ್ದು ಕಾಣದೆ ಜಾಣತನದಿ ಚರಿಪನುಶೀಘ್ರದಿ ಒಲಿವನು ಸೇವಿಪ ಜನರಿಗೆಸುಗ್ರೀವನಸಖಲಕ್ಷ್ಮಣನಗ್ರಜಜಾಗೃತ ಸ್ವಪ್ನ ಸುಷುಪ್ತಿ ಪ್ರವರ್ತಕವಿಗ್ರಹ ರೂಪದಿ ನಿಂತಿಹನಿಲ್ಲಿ 2ಆಲೋಚನೆಗೂಶಾಸ್ತ್ರದಿಂದಲೆ ಗೋಚರ ಸಾತ್ಯವತಿಶಾಸ್ತ್ರವೆಲ್ಲಕೂ ಅತೀತಸರ್ವಾಶ್ರಯನು ಇವ ಶಂಭೂ ಶಂಕರನುತಸರ್ವತ್ರ ವ್ಯಾಪ್ತ ಅಮಲ ಸರ್ವ ವಿಲಕ್ಷಣ ಹರಿಯುಸರಿಪರರಿಲ್ಲವು ಇವಗೆಲ್ಲೆಲ್ಲು ಹರವಿಧಿಸುರಮುನಿಸನ್ನುತಶ್ರೀಶನುವರವರ ವೆಂಕಟನಿಂತಿಹನಿಲ್ಲಿ ಸರಸಿಜಭವತಾತಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಆನಂದಮಯಸ್ತೋತ್ರ40ಪೂರ್ಣ ಸುಗುಣಾರ್ಣವನೆಅನಘಪರಮೇಶ್ವರನೆಆ ನಮಿಪೆ ಶ್ರೀರಮಣಆನಂದಮಯವಿಷ್ಣುಪನಿನ್ನಯ ಸುಮಹಿಮೆಗಳ ನಿನ್ನಿಚ್ಛೆಯಿಂದಲೇಚೆನ್ನಾಗಿ ತಿಳಿಸಿ ಅಚ್ಛಿನ್ನ ಭಕ್ತಿಯನೀಯೊ ಅಪಸುಖರೂಪ ಪಾಲನಾಲಯಕರ್ತ ಲಕ್ಷ್ಮೀಶನಿಷ್ಕಳನು ನೀ ಸದಾಕೈವಲ್ಯಸುಖದಆಗಮಸುಶಾಸ್ತ್ರೈಕ ವಿಜÉÕೀಯ ಪರಬ್ರಹ್ಮಅಂಗಾಂಗ್ಯಭಿನ್ನ ಆನಂದ ಸಂಪೂರ್ಣ 1ಬ್ರಹ್ಮಶಬ್ದದಿ ಮುಖ್ಯವಾಚ್ಯ ಬಹು ಆವರ್ತಿಬ್ರಹ್ಮಆನಂದಮಯನೀ ಇತರರಲ್ಲಬ್ರಹ್ಮಪರಿಪೂರ್ಣಹರಿಸರ್ವನಾಮದಿ ನೀನೆಬಹುರೂಪ ಸರ್ವಸ್ಥ ಈಶ್ವರಆನಂದಮಯ2ಚಿತ್ಪ್ರಕೃತಿ ನಾಲ್ಮೊಗನು ಅಷ್ಟಮೂರುತಿ ಎಂಬರುದ್ರನು ದೇವೇಂದ್ರ ಸುರಗುರುವಿಪ್ರಇಂಥ ಯಾರೂ ವಸ್ತು ಯಾವುದೊ ಅಲ್ಲವುಆನಂದಮಯನೀನು ವಿಷ್ಣು ಪರಬ್ರಹ್ಮ3ಪ್ರಕೃತಿ ಪ್ರಜಾಪತಿ ಸದಾನಂದ ದಶಪ್ರಮತಿರುದ್ರಾಷ್ಟಮೂರ್ತ್ಯಾದಿ ಸರ್ವ ಶಬ್ದಂಗಳುಪರನೆ ಬ್ರಹ್ಮನೆ ವಿಷ್ಣು ಮುಖ್ಯ ವಾಚಕ ನಿನಗೆಇರುವ ಈ ಸರ್ವರೊಳು ಸುಖಪೂರ್ಣ ಸ್ವಾಮಿ 4ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯಆನಂದಮಯಎಂಬ ಐದು ಶಬ್ದಂಗಳು 1ಆನಂದಮಯಶಬ್ದದಿಂದ ಗ್ರಹಿಸಲುಬೇಕುಆನಂದಮಯಬ್ರಹ್ಮ ನೀನೆ ಇತರರು ಅಲ್ಲ5ಶಿರ ಬಾಹುದ್ವಯ ಮಧ್ಯಚರಣಅಂಗಾಂಗಗಳುಪೂರ್ಣಆನಂದಮಯಎಂದೂ ಅಭಿನ್ನಉರು ಸುಗುಣ ಪರಿಪೂರ್ಣ ವಿಷ್ಣು ಆತ್ಮನು ಬ್ರಹ್ಮಶೃತಿಯು ಬಹುಸಾರುತಿದೆ ಸುಖಮಯನು ಎಂದು 6ಅನ್ನಮಯ ಅನಿರುದ್ಧ ಪ್ರಾಣಮಯ ಪ್ರದ್ಯುಮ್ನಮನೋಮಯ ಸಂಕರ್ಷಣನು ವಿಜ್ಞಾನಮಯನುಅನಘಮಾಯಾರಮಣ ಪರವಾಸುದೇವ ನೀಆನಂದಮಯಶ್ರೀಶ ನಾರಾಯಣ ಬ್ರಹ್ಮ7ಪಂಚ ಕೋಶಂಗಳಲಿ ತನ್ನಾಮ ತದ್ಭಿನ್ನಕಿಂಚಿತ್ತು ಲೇಪವಿಲ್ಲದೆ ಇದ್ದು ನಿಯಮಿಸುವೆಪಂಚ ಸುಖರೂಪದಿಂ ಪಂಚವರ್ಣದಿ ಜ್ವಲಿಪೆಸಂಚಿಂತಿಪರ್ಗೆ ಸುಖವೀವೆ ಸುಖಮಯ ಬ್ರಹ್ಮ 8ಅಧಿಕಾರಿ ಆನಂದಪ್ರಚುರಬಹುರೂಪ ನೀಸರ್ವರೂ ನಿನ್ನಿಂದ ಉಪಜೀವ್ಯರೊ ಸ್ವಾಮಿಸರ್ವರಿಗು ಪ್ರೇರಕನು ಸತ್ತಾಪ್ರವೃತ್ತಿದನುಸರ್ವೇಶ ಸುಖಪೂರ್ಣ ಸರ್ವವ್ಯಾಪಿಯೆ ದೇವ 9ಆನಂದಮಯನೀನೆ ಆನಂದೋದ್ರೇಕದಿಂಪ್ರಾಣಿಗಳ ಧರ್ಮಗಳ ಪ್ರವೃತ್ತಿ ಮಾಡುವೆಯೊಆನಂದೋದ್ರೇಕದಿಂ ಸರ್ವತ್ರವ್ಯಾಪ್ತ ನೀಆನಂದಮಯಇತರ ಲೋಕಚೇಷ್ಟಕರಿಲ್ಲ10ಅಂಗಾಂಗಿತ್ವದಿ ಭಗವಂತ ನೀ ಕ್ರೀಡಿಸುವೆರಂಗ ನೀ ಸತ್ಯಂ ಜ್ಞಾನಮನಂತಂ ಬ್ರಹ್ಮನೆಂದುಹೊಗಳುತಿದೆ ಶೃತಿಯು ಸುಖಸಾರಾತ್ಮ ಚಿನ್ಮಾತ್ರಚಾರ್ವಾಂಗ ನಿನ್ನ ತಿಳಿಯದೆ ಬೇರೆ ಗತಿಯಿಲ್ಲ 11ಸತ್ಯ ಸತ್ಸøಷ್ಟಿಕರ್ತ ಜೀವನಪ್ರದನುಸರ್ವ ಪ್ರವರ್ತಕನು ಸಂಹಾರಕರ್ತಅಶೇಷಸಾಮಾನ್ಯ ವಿಶೇಷಜ್ಞಾನವು ಜ್ಞಾನದೇಶಾದಿಪರಿಚ್ಛೇದ ಶೂನ್ಯವು ಆನಂತ 12ಅನ್ನಮಯದಿಂ ಸೃಷ್ಟಿ ಸಂಹಾರಜೀವನವುಪ್ರಾಣಮಯ ಶಬ್ದ ಸಹ ಜೀವನಪ್ರದವುಮನೋಮಯ ಶಬ್ದದಿಂ ಸಾಮಾನ್ಯಜ್ಞಾನವುವಿಜ್ಞಾನಮಯ ಶಬ್ದದಿ ವಿಶೇಷಜ್ಞಾನ 13ಆನಂದಮಯಶಬ್ದದಿಂದಲಿ ಜÉÕೀಯವುಆನಂದಾದ್ಯಖಿಳಗುಣ ಅಪರಿಚ್ಛಿನ್ಮತ್ವಅನ್ನಮಯ ಪ್ರಾಣಮಯ ಸತ್ಯಂ ಬ್ರಹ್ಮಮನೋಮಯ ವಿಜ್ಞಾನಮಯ ಜ್ಞಾನಂ ಬ್ರಹ್ಮ 14ಆನಂದಮಯಆನಂತಂ ಬ್ರಹ್ಮ ಎಂದೀ ರೀತಿಮಂತ್ರವರ್ಣೋಕ್ತ ಶಬ್ದಗಳಿಗೇಕಾರ್ಥಆನಂದಮಯಮೊದಲಾದ ಶಬ್ದಗಳಿಂದಆನಂದಪರಿಪೂರ್ಣ ವಿಷ್ಣು ನೀನೇ ವಾಚ್ಯ 15ಆತ್ಮ ನೀಆನಂದಮಯಇತರರು ಅಲ್ಲಆನಾತ್ಮರು ಸಂಪೂರ್ಣಸ್ವತಂತ್ರರು ಅವರುಚೇತನಾಚೇತನದಸತ್ತಾನಿನ್ನಿಂದಲೇಆನಂತ ನೀ ಸರ್ವಗನು ಆಸಮ ಪ್ರಭು ಐರ 16ಬ್ರಹ್ಮ ವಿದಾಪ್ನೋತಿ ಪರಂ ಎಂದು ಉಪನಿಷದ್ವಾಕ್ಯಬ್ರಹ್ಮಾಪರೋಕ್ಷವೇ ಮೋಕ್ಷಕ್ಕೆ ಕಾರಣಬ್ರಹ್ಮೇತರ ವಿರಿಂಚಾದಿ ಜೀವರ ಜ್ಞಾನಮೋಕ್ಷಕೊಡಲು ಎಂದು ಶೃತಿಯು ಪೇಳುತಿದೆ 17ತಮೇವಂ ವಿದ್ವಾನಮೃತ ಇಹಭವತಿನಾನ್ಯಃ ಪಂಥಾ ಅಯನಾಯ ವಿದ್ಯತಾಎಂಬ ಶೃತ್ಯನುಸಾರ ನಿನ್ನಾಪರೋಕ್ಷ ವಿನಾಮುಕ್ತಿಯು ಲಭಿಸದು ಅನ್ಯಜ್ಞಾನದಿ ಎಂದೂ 18ಆನಂದಪ್ರಚುರ ಪೂರ್ಣಾನಂದಮಯ ನೀನೆಆನಂದ ತರತಮದಿ ಜೀವರಲಿ ಉಂಟುಅತ್ಯಂತ ಭೇದವು ನಿನಗೂ ಜೀವರಿಗೂಅನಂತ ಅಪರಿಮಿತ ಆನಂದಿ ನೀನೆ 19ರುದ್ರನ ಶತಗುಣಿತ ಆನಂದ ನಾಲ್ಮೊಗನಒಂದು ಆನಂದವು ಎಂಬುವುದು ಶೃತಿಯುಆನಂದ ಪರಿಮಿತವು ಜೀವರಿಗೆ ಈ ರೀತಿಆನಂದ ಅಪರಿಮಿತ ನಿನ್ನಯ ಸ್ವರೂಪ 20ಸುಖಮಯ ನಿನ್ನಪರಿಮಿತಾನಂದಾದಿಗಳನುಸಾಕಲ್ಯತಿಳಿದವರು ಇಲ್ಲವೇ ಇಲ್ಲಸಾಕಲ್ಯಶಬ್ದಗಳು ಪೊಗಳಲರಿಯವು ನಿನ್ನಏಕಸುಖಮಯ ನೀನು ಜೀವರಿಗೆ ಭಿನ್ನ 21ತತ್ವಮಸ್ಯ ಹರಿಬ್ರಹ್ಮಾಸ್ಮಿ ಪುರುಷಯೇ ವೇದಂಸರ್ವಂ ಎಂಬಂಥಾ ಇಂಥ ಶೃತಿ ಮಾತುಗಳುಜೀವೇಶ ಐಕ್ಯವನು ಬೋಧಿಸುವವಲ್ಲವುಸರುವಿಚಾರ ನಿರ್ಣಯದಿ ಭೇದಬೋಧಕವೆ 22ಜೀವರಿಗೆ ಜನ್ಮಜೀವನಸತ್ತಾದಾತನುಸರ್ವಾಶ್ರಯ ಸರ್ವನಿಯಾಮಕನು ಆತ್ಮಜೀವರು ಪರಬ್ರಹ್ಮಜ್ಞಾನದಿಂ ಪೊಂದುವಸೋಚಿತಪೂರ್ಣತ್ವ ಕೊಡುವ ನೀ ಬ್ರಹ್ಮ 23ಸರ್ವಕ್ಕೂ ಭಿನ್ನ ನೀ ಸರ್ವತ್ರ ಸರ್ವದಾಸರ್ವದೊಳು ಇರುವಂಥ ಸರ್ವೇಶ್ವರಸರ್ವ ಸತ್ತಾದಿ ಪ್ರದತ್ವ ಸ್ವಾಮಿತ್ವದಿಂಸರ್ವ ನೀನೆಂದೆನಿಸಿಕೊಂಬೆಯೊ ದೇವ 24ಸರ್ವವಂದ್ಯನು ವಿಷ್ಣು ಸರ್ವಾಂತರ್ಯಾಮಿಯುಸ್ವತಂತ್ರ ಈಶನು ಸರ್ವಜೀವರಿಗೆ ಭಿನ್ನಸರ್ವಸ್ವಾಮಿಯು ನೀನು ಎಂದರಿತು ಭಜಿಪರಿಗೆಸರ್ವಶೋಕವ ಬಿಡಿಸಿ ಮೋಕ್ಷಸುಖವೀವೆ 25ಸರ್ವಜಡ ಚೇತನದಿ ಅಂತರ್ನಿಯಾಮಕನುಸರ್ವಜಗದಾಧಾರ ಏಕ ಬಹುರೂಪತ್ವಂ ಅಸೌ ಅಹಮೆಂದು ಸರ್ವನಾಮದಿ ವಾಚ್ಯಸರ್ವಜಡ ಚೇತನಕೆ ವಿಲಕ್ಷಣನು ಸ್ವಾಮಿ 26ಅತೀಂದ್ರಿಯವು ಬ್ರಹ್ಮವಿಷಯಕ ಜ್ಞಾನಶೃತ್ಯನುಸಾರವಿಲ್ಲದ ಅನುಮಾನದುಸ್ತರ್ಕದಿಂದಲಿ ಲಭಿಸದು ಯಾರಿಗೂಮೋದಮಯ ಶ್ರೀ ವಿಷ್ಣು ಜೀವರಿಂ ಭಿನ್ನ 27ಬದ್ಧರೊಳು ಮುಕ್ತರೊಳು ಇದ್ದು ನೀ ನಿಯಮಿಸುವೆಬದ್ಧರಂತೇ ಮುಕ್ತಜೀವರಿಗೂ ಭಿನ್ನಮುಕ್ತರಿಗೆ ಅವರವರ ಆನಂದ ಅನುಭವವುಅಧೀನ ನಿನ್ನಲ್ಲಿಆನಂದಮಯಶ್ರೀಶ28ಸದಮಲ ಬ್ರಹ್ಮ ನಿನ್ನ ಪರೋಕ್ಷಜ್ಞÕನಿಗೆಪದುಮಸಂಭವ ಸಹ ನೀನು ಸಹ ಇದ್ದುಒದಗಿಸುವೆ ಸೋಚಿತ ಮೋಕ್ಷಸುಖ ಅವರಿಗೆಹೇ ದಯಾನಿಧೇ ನಮೋ ಆನಂದಪೂರ್ಣ 29ಅನ್ನ ಪ್ರಾಣ ಮನೋವಿಜ್ಞಾನಆನಂದಮಯಪರಿಣಾಮ ಅಭಿಮಾನರಹಿತ ಅಧಿಕಾರಿಆನಂದ ಪ್ರಚುರನೇ ಲೋಕಚೇಷ್ಟಕ ನೀನೆಮಂತ್ರವರ್ಣೋಕ್ತ ಮಹಾಮಹಿಮ ಸುಖಪೂರ್ಣ 30ವನಜಾಸನಾದಿಗಳು ಆನಂದಮಯರಲ್ಲನಿನ್ನಿಂದ ಉಪಜೀವ್ಯ ಭಿನ್ನರು ಅವರುಆಮ್ನಾಯದಿಂ ವೇದ ದುಸ್ತರ್ಕಕತಿ ದೂರಆನಂದಮಯವಿಷ್ಣು ಮುಕ್ತರಿಗೂ ಆಶ್ರಯನು31ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಎನ್ನ ಒಳಹೊರಗಿದ್ದು ನೀನೆ ನುಡಿದೀ ಗ್ರಂಥನಿನಗೆ ಅರ್ಪಣೆ ಸುಹೃದನಿತ್ಯಸಂತೃಪ್ತ32
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀರಾಮಮಂತ್ರ22ಶ್ರೀರಾಮ ಸೀತಾರಮಣ ಮಾಂಪಾಹಿಪಉರು ಜ್ಞಾನ ಸುಖರೂಪ ನಮೋವಾಸುದೇವಅ.ಪಶ್ಯಾಮ ರಮಣೀಯ ಉರು ಆಮ್ನಾಯಕೂ ಅಮಿತರಮೆ ಸೀತಾಯುತ ನಮೋ ಹನುಮಾದಿಸೇವ್ಯವಾಮಹಸ್ತದಿಚಾಪಚಿನ್ಮುದ್ರೆ ಶರಬಲದಿಅಮಿತಾರ್ಕಸೋಮ ಸ್ವಕಾಂತಿ ಶ್ರೀರಾಮ 1ಪರಮೇಶ ಏಕಾತ್ಮಅರದೂರಪರಿಪೂರ್ಣಉರು ಸುಗುಣವಾರಿನಿಧಿ ನೀನೇ ಸ್ವತಂತ್ರಅರವಿಂದಜಾಂಡಾದಿ ಜಗತ್ಸರ್ವ ಕರ್ತಜಸುರರ ಮೊರೆಕೇಳಿದಶರಥನ ಸುತನಾದೆ2ಚತುರ್ವದನ ಸಂಸೇವ್ಯ ಹಯವದನ ಷಡ್ರೂಪಚತುರ್ವಿಂಶಾಕ್ಷರ ಸುಮಂತ್ರ ಪ್ರತಿಪಾದ್ಯತ್ರಾತಪ್ರೇರಕಸ್ವಾಮಿ ರಾಮನೇ ಎಂದರಿತುಸಂಧ್ಯಾಸುಮಂತ್ರ ಋಷಿ ಬಂದು ಪ್ರಾರ್ಥಿಸಿದ 3ಸುದುಪಾಸ್ಯ ನಿನ್ನ ಋಷಿ ಆಶ್ರಮಕೆ ಕರದೊಯ್ಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯಪ್ರತ್ಯಕ್ಷ ಅವತಾರರೂಪ ನೀನೆಂದರಿತುಸಿದ್ಧರು ಭಕ್ತಿಯಿಂದಲಿ ವಂದಿಸಿದರು 4ತತ್ರ ತತ್ರ ಸ್ಥಿತೋ ವಿಷ್ಣುಃ ತತ್ತಚ್ಛಕ್ತಿ ಬೋಧಯನ್ಅಸ್ತ್ರದೇವತೆಗಳೀ ತತ್ವವನು ಅರಿತುಸತ್ತಾದಿದಾತನೇ ಶಾಸ್ತ್ರಸ್ವಾಮಿ ವಿಷ್ಣೋಪ್ರತ್ಯಗಾತ್ಮನೆ ರಾಮ ನಿನಗೆ ನಮಿಸಿದರು 5ಯಜÕಗೆ ಯಜÕಗೆ ವಿಶ್ವಾಮಿತ್ರಗೆ ನಮೋಯಜÕಭುಕ್ ಯಜಮಾನ ಯಜÕ ಯಜೆÕೀಶಇಜ್ಯ ಪೂಜ್ಯಗೆ ಸ್ವಾಮಿ ಮನ್ಮನೋವಾಕ್ಸಂಸ್ಥಯಜÕಸ್ಥಯಜÕ ಮಾಂಪಾಹಿನಮೋ ನಮಸ್ತೆ6ವೇದವತಿತ್ವದಧೀನೆ ಸರ್ವಜಗದಾಧಾರೆಭೂದೇವಿ ಸುಖಪೂರ್ಣೆ ಅಜೆ ನಿತ್ಯಮುಕ್ತೆವೈದೇಹಿ ಜಾನಕಿ ಸೀತಾನಾಮದಿ ತಾನೆಈ ಧರೆಯೊಳ್ ತೋರಿಹಳು ನಿನ್ನನನುಸರಿಸಿ 7ಸುರಾಜಗಜಇಕ್ಷುಜಲ್ಲೆಯನು ಮುರಿವಂತೆಪರಫಲಿಬಲಿನೀನು ಶಿವಚಾಪ ಮುರಿಯೆಸುರರುನರವರ್ಯರು ಹರುಷದಿಂದಲಿ ನೋಡೆಸಿರಿಸೀತೆ ವರಮಾಲೆ ನಿನಗೆ ಹಾಕಿದಳು8ಶರಭಂಗಶಬರಿ ಜಟಾಯು ಮೊದಲಾದವರವರಭಕ್ತಿಗೆ ಮೆಚ್ಚಿ ಯೋಗ್ಯ ಗತಿಯಿತ್ತೆಮಾರುತಿಗೆ ಪ್ರಿಯರೆಂದು ರವಿಜಗೆ ವಿಭೀಷಣಗೆಕರುಣಿಸಿದೆ ನಿರಪೇಕ್ಷ ನೀ ಪೂರ್ಣಕಾಮ 9ಕ್ರೂರ ಪೌಲಸ್ತ್ಯಾದಿ ರಕ್ಕಸರ ತರಿದು ನೀಧರೆಯಲಿ ಸುಕ್ಷೇಮ ಧರ್ಮ ಸ್ಥಾಪಿಸಿದೆಸರಸಿಜಾಸನ ಲೋಕದಂತಾಯಿತೀ ಲೋಕವರವಿಷ್ಣುಭಕ್ತಿಯು ಸೌಖ್ಯ ಎಲ್ಲೆಲ್ಲೂ 10ಸರಸಿಜಾಸನ ಪಿತ ಪ್ರಸನ್ನ ಶ್ರೀನಿವಾಸನೆಸರಿ ಮಿಗಿಲು ನಿನಗಿಲ್ಲ ಯಾರು ಎಂದೆಲ್ಲೂಸಿರಿಸೀತಾಯುತರಾಮ ಎಂದೂನು ಎಲ್ಲೆಲ್ಲೂಮಾರುತಿ ಸೌಮಿತ್ರಿ ಭರತಾದಿಸೇವ್ಯ11
--------------
ಪ್ರಸನ್ನ ಶ್ರೀನಿವಾಸದಾಸರು
ಸಜ್ಜನರ ನಡತಿದೊ ಶ್ರೀ |ಅರ್ಜುನ ಸಖನ ಪದಾಬ್ಜ ಭಜಿಸುವದೆ ಪಕುಹಕರ ಸಂಗವ ಮಾಡದೆಖೇಚರ|ವಹನನಾಳುಗಳ ಆಳಾಗೀ ||ಅಹರ್ನಿಶಿಯಲಿ ತತ್ವ ವಿಚಾರಿಸುತಲಿ |ಅಹಲ್ಲಾದವ ಮನದಲಿ ಬಿಡುತಿಪ್ಪುದೆ 1ನೀಚ ಸುರ ನರರ ಸೇವಿಸಿ ವರಶನ |ಯಾಚಿಸದೆ ಸ್ವಧರ್ಮವ ಬಿಡದೇ ||ಖೇಚರಜ ಮತವ ಪೊಂದಿಸು ಕರ್ಮಗ- |ಳಾಚರಿಸುತವಿಜ್ಞಾನಘಳಿಸುವದೆ 2ಪದ್ಮಜಮುಖರಿಗೆ ಕ್ಷಣ ಕ್ಷಣದಲಿ ಶಿರಿ |ಬುದ್ಧಿಯ ಪ್ರೇರಿಸುವಳು ಆರೇ ||ಪ್ರದ್ಯುಮ್ನನು ಮಾಡುವ ಲೀಲಿಯು ಬಳಿ |ಇದ್ದರು ಒಂದನು ಅರಿಯಳು ಎಂಬುದೆ 3ತತ್ವಭಿಮಾನಿಗಳೆಲ್ಲಸಮೀರಪ್ರ- |ವರ್ತಿಸಿದಂದದಿ ವರ್ತಿಪರೂ ||ಸತ್ಯವತಿ ಜಗತೊಬ್ಬನೆ ಅಚ್ಛಿನ್ |ಭೃತ್ಯಶಿವಾದ್ಯರು ಛಿನ್ನರು ಎಂಬುದೆ 4ಮೂಲದಲಿದ್ದ ಮಹತ್ಮಿ ನಿರುತ ಶ್ರೀ |ಲೋಲನ ಅವತಾರದೋಳುಂಟೂ ||ಕಾಳೀಶಗೆ ಕೊಂಡರೆ ಬರುತಿಪ್ಪುದು |ನೀಲಕಂಠ ಪ್ರಮುಖರಿಗಿಲ್ಲೆಂಬುದೆ 5ಚೇತನಚೇತನವಾದ ಜಗತ್ಯವು |ವಾತನಧೀನದೊಳಿರುತಿಹದೂ ||ಆತನು ರಮೆಯಧೀನವಳುಹರಿ|ದೂತಳೆಂದು ನಿಶ್ಚಯ ತಿಳಕೊಂಬುದೆ 6ಎಲ್ಲ ದಿವಿಜರವಲಕ್ಷಣ ಯುಕ್ತರು |ಬಲ್ಲಿದಹರಿಮಾರುತ ಮಾತ್ರಾ ||ಸಲ್ಲಕ್ಷಣರೆನುತಲಿ ತಿಳಿದು ಗಿರಿಜ |ವಲ್ಲಭಪ್ರಮುಖರಿಗೊಂದಿಸುತಿಪ್ಪುದೆ 7ಅಂಬುಜಭವ ಮೊದಲಾದವರಿಗೆ ಪೀ- |ತಾಂಬರತನ ಪೆಸರಿತ್ಯಹನೂ ||ಕಂಬಸದನ ತೊಲಿ ಜಂತಿಯು ಮಾಳಿಗಿ |ಎಂಬ ಶಬ್ದವಾಚ್ಯನುಹರಿಎಂಬುದೆ 8ಅರಸುಗಳಾದವರನುಗರ ಕೈಯಲಿ |ನರರ ಶೀಕ್ಷಿ ಮಾಡಿಸುವಂತೇ ||ಹರಿವಿಧಿಶಿವರೊಳು ತಾನಿಂತಾವಾಗ |ಮರಿಯಾದಿಗಳು ನಡಿಸುತಿಹ್ಯನೆಂಬುದೆ 9ಸೃಜಿಸುವ ಜನೊಳಿದ್ದು ಜಗವ ಪೊರವನು |ಭುಜಗಭೂಷಣನೊಳಿದ್ದು ಲಯಾ ||ದ್ವಿಜರೂಪಿಯೆ ಮಾಳ್ಪನು ಎಂತಿಳಿಯದ |ಕುಜನರು ನರಕವ ಐದುವರೆಂಬುದೆ 10ವಂದೊಂಧರಿ ನೇಮದಿ ಬಲ್ಲರು ಮರ |ಳೊಂದನರಿಯರಜಾದಿಗಳೂ ||ಮಂದರಧರಬಹು ಬಲ್ಲನು ಜೀವರ |ಬಂಧಕ ಶಕುತಿಯೊಳಿರಿಸಿಹನೆಂಬುದೆ 11ಜ್ಞಾನಾನಂದಾದಿ ಗುಣಭರಿತಹರಿ|ಹೀನತನವನೆಂದಿಗ್ಯು ಅರಿಯಾ ||ಕಾಣಿಸಿಕೊಳ್ಳನು ಎಂದಿಗು ಅಧಮರಿ- |ಗೇ ನಳಿನಾಕ್ಷನು ಎಂದುಚ್ಚರಿಪುದೆ 12ಝಷಮೊದಲಾದವತಾರವು ಮಿಥುನೀ |ದೆಶೆಯಿಂದಲಿ ಆಗಿಲ್ಲನಳಾ ||ಮಸಿಯಲು ಕಾಷ್ಠದಿ ತಾ ತೋರ್ವಂದದಿ |ವಸುದೇವಜನವ್ಯಕ್ತನು ಯಂದರಿವದೆ 13ಆಪಗ ವನಧಿಯನಳನಿಳಶಶಿರವಿ|ಈ ಪೊಡವೀವನನಿರಂತರದೀ ||ಶ್ರೀಪತಿಕಟ್ಟಲಿಯೊಳಗಿಹದೆಂದು ಪ- |ದೆ ಪದೆ ನೆನದು ಸುಖಬಡುತಲಿರುವುದೆ 14ನಿಶಿಯಲಿ ಕಂಡಿಹ ಸ್ವಪ್ನವು ನಿಶ್ಚಯ |ಅಸಮ ಸೃಜಿಸಿದ ಜಗತ್ಯವನೂ ||ಹುಸಿಎಂಬವ ಕುಲಭ್ರಷ್ಟನು ಎಂದಿಗು |ಹಸಗತಿ ಅವನಿಗೆ ಇಲ್ಲಿಲ್ಲೆಂಬುದೆ 15ಪ್ರಾಣಿಗಳೊಳಗಿದ್ದೆಲ್ಲ ಕೆಲಸವನು |ತಾನೆ ಮಾಡಿ ಮಾಡಿಸಿ ಫಲವಾ ||ಏನು ನೋಡೆ ನಿರ್ಮಲನಾಗಿಹಹರಿ|ಭಾನುಸಖ ಜಲದೊಳಿರುವಂತೆಂಬುದೆ16ತಾ ಬಂಧಿಸುತಿಹ ಸರ್ವ ಜಗತ್ಯವ |ನೂ ಬದ್ಧನು ಅಲ್ಲವು ಊರ್ಣಾ ||ನಾಭಿಯ ಜಾಲಿಯ ಹೊರಗಿರುವಂದದಿ |ಶ್ರೀ ಭಗವಂತನು ಇರುತಿಹನೆಂಬುದೆ17ಭಕ್ತಿಗೆ ಭೇದವು ಜ್ಞಾನಕೆ ಭೇದವು |ಮುಕ್ತಿಗೆ ಭೇದವು ಯಂತಿಳಿದೂ ||ಸುತ್ಪುರುಷರ ಸ್ನೇಹವ ಸಂಪಾದಿಸಿ |ಮತ್ತೊಂದೊಲ್ಲೆನು ಯಂದಿರುತಿಪ್ಪುದೆ 18ಸಾಧನತ್ರಯ ಫಲಗಳನು ವಿಚಾರಿಸಿ |ಮಾಧವನಗುಣಮಹತ್ಮಿಯನೂ ||ಸಾದರದಿಂ ಜ್ಞಾನಿಗಳ ಮುಖದಲಿ ದಿ- |ನೇ ದಿನೇಕೇಳಿವಿಜ್ಞಾನಘಳಿಸುವದೆ 19ಕಾಲಿಲ್ಲದೆ ನಡಿಯಲು ಬಲ್ಲನುಹರಿ|ಕೇಳುವ ಕಿಂವಿಯಿಲ್ಲದೆ ತನ್ನಾ ||ಲೀಲಿಯು ಹೀಂಗದೆ ಯಂದು ತಿಳಿಪುದಕೆ |ಈ ಲೋಕದಿಅಹಿಮಾಡಿಹನೆಂಬುದೆ 20ಚೇತನ ಕೃತ್ಯವ ಮಾಡುತಲಿಪ್ಪವ |ಚೇತನಗಳು ಚಿಂತಾಮಣಿ ದೇ- ||ವಾತರು ಸಂಜೀವನ ಪರ್ವತ ಶ್ರೀ-ನಾಥನ ಆಜÕವು ಯಿದು ಎಂದರಿವುದೆ 21ಸತ್ವಾದಿ ಗುಣರಹಿತ ಪರಮಾತ್ಮನು |ಚಿತ್ತು ಜ್ಞಾನಬಲ ಸುಖ ಪೂರ್ಣಾ ||ಮೃತ್ಯುಂಜಯಸಖಗುಣಶೂನ್ಯಂಬ ಪ್ರ- |ವರ್ತಕ ಹೀಗೆಂದೂ ತಿಳಿದೀಹದೆ 22ಯೇಸು ಯೇಸು ಕಲ್ಪಗಳಾದರು ಶ್ರೀ- |ವಾಸುಕಿಶಯನಗೆ ಎಂದೆಂದೂ ||ನಾಶವಿಲ್ಲ ವಿಶೋಕರು ಧರಿಯೊಳು |ಶ್ರೀಶನ ವ್ಯತಿರಿಕ್ತಾರಿಲ್ಲೆಂಬುದೆ 23ಬ್ರಹ್ಮಾದಿಗಳಿಗೆ ಜನಕನು ಶ್ರೀಪರ|ಬ್ರಹ್ಮಗೆ ಒಬ್ಬರು ಸರಿಯಿಲ್ಲಾ ||ಒಮ್ಮಿಗು ಅಧಿಕರು ಇಪ್ಪರೆ ಶೃತಿಯಲಿ |ಸಮ್ಮತವಾಗದೆ ಈ ನುಡಿಯಂಬುದೆ 24ಶತಸುಖಿ ವಿಧಿ, ಕೋಟಿ ಸುಖಿ ರಮಾ, ಪರಿ- |ಮಿತಯಿಲ್ಲದ ಸುಖಿ ಕೇಶವನೂ ||ಕ್ಷಿತಿಯೊಳು ಪರಮೇಶ್ವರನೈಶ್ವರ್ಯಕೆ |ಇತರರು ಆರುಂಟು ಸಮಾನೆಂಬುದೇ 25ತಾರಿಯು ಗಗನದೊಳೀಸವೆ ಯಂಬುದು |ಧಾರುಣಿಯೊಳಗೆಣಿಸಲಿ ಬಹುದೂ ||ನಾರಾಯಣನ ಮಹತ್ಮಿ ಗಣಣಿಯನು |ಆರಾರಿಲ್ಲವು ಬಲ್ಲವರೆಂಬುದೆ 26ವಿಶ್ವಾಸದಿ ದೂರ್ವಿಯ ದಳವಿತ್ತರೆ |ವಿಶ್ವಕುಟುಂಬಿಯು ಕೈಕೊಂಬಾ ||ಅಶ್ವಾದಿ ಮುಖದಿಂ ಪೂಜಿಸಲು ಅ |ವಿಶ್ವಾಸದವರು ಕೊಳ್ಳನು ಎಂಬುದೆ27ಗೋವಿಂದಗೆ ನಿಜ ನಾಮೆನಿಸುತಿಹವು |ಐವತ್ತೊಂದೂ ವರ್ಣಗಳೂ ||ಈ ವಿವರವು ತಿಳಿದೂ ನಿಂದಾಸ್ತುತಿಗಳು |ದೇವನ ಗುಣಕಥನಗಳೆಂದರಿವದೆ 28ದುರ್ಜನರಿಗೆ ಎಂದಿಗೂ ದಯಮಾಡನು |ನಿರ್ಜರೇಶ ಸಂತರಿಗೊಲಿವಾ ||ದುರ್ಜಯವಾದ ಮನಸು ನಿಶ್ಚೈಸುತ |ಅಬ್ಜದಳಾಕ್ಷನ ಒಲಿಸಿರೊ ಎಂಬುದೆ 29ಯಮ ನಿಯಮಾದಿಗಳಲಿ ದಾರಢ್ಯದಿ |ಕಮಲಾ ಸ್ವಸ್ತಿಕದಾಸನದೀ ||ಸಮಚಿತ್ತದಿ ರೇಚಕ ಪ್ರಮುಖದಲಿಂ |ಸಮಿರನ ಬಂಧಿಸಿ ಜಪವನು ಮಾಳ್ಪುದೆ 30ಸ್ವಾಗರ್ಭಕ ಆಗರ್ಭಕ ಎಂಬುವ |ಯೋಗದ ಲಕ್ಷಣ ತಿಳಕೊಂಡೂ ||ಮೂಗಿನ ತುದಿಯನೆ ಈಕ್ಷಿಸುತಲಿ ಶ್ರೀ |ಭಾಗೀರಥಿ ಪಿತನ ಸ್ಮರಿಸುತಿಪ್ಪುದೆ31ಅಂಗುಷ್ಠಾರಂಭಿಸಿ ಮಸ್ತಕತನ |ಕಂಗಜ ಜನಕನ ರೂಪವನೂ ||ಹಿಂಗದೆ ಧೇನಿಸಿ ಮೈರಧರುಷದಿ |ಕಂಗಳಿಂದುದಕ ಸೂಸುತಲಿಪ್ಪುದೆ 32ಈ ಕರ್ಮವ ಮಾಡಿದೆ ಯನಗೀಪರಿ|ಸಾಕಲ್ಲ್ಯೆವು ಆಯಿತು ಎಂದೂ ||ಲೋಕಕೆ ತಿಳಿಸದೆ ತನ್ನಯ ಭಾವವ |ಜೋಕಿಲಿ ಬಚ್ಚಿಟ್ಟೂಕೊಂಡಿರುವದೆ 33ಧ್ಯಾನಕೆ ಕುಳಿತರೆ ಮನ ಹರಿದೋಡಲು |ಜಾನಕಿರಮಣನ ಮೂರುತಿಯಾ ||ತಾನೀಕ್ಷಿಸುತಲಿ ಸರ್ವದ ತತ್ವದ |ರೇಣುದೊಳಗೆ ಮುಣಿ ಮುಣಿಗಿ ಯೇಳುವದೆ 34ಅಸುರರನಳಿಯಲು ಶಕ್ತನು ಶ್ರೀಹರಿ |ದಶರೂಪವ ತಾಳಿದನ್ಯಾಕೇ ||ವಸುಧಿಯೊಳಗೆ ಪಾಪಿಷ್ಠ ಜನರ ಮೋ- |ಹಿಸುವದಕೀಪರಿಲೀಲಗಳೆಂಬುದೆ 35ಅನ್ಯತ್ರದಿ ಇಂದ್ರಿಯಗಳ ಚಲಿಸದೆ |ತನ್ನೊಶದೊಳಗಿರಿಸನುದಿನದೀ ||ಪನ್ನಗಶಯನನ ಪೂಜಿಯ ಮಾಡುತ |ಧನ್ಯನು ಈ ನರನೆನಿಸುತಲಿಪ್ಪುದೆ 36ಕೋಪವ ಬಿಟ್ಟು ನಿರಂತರ ಜ್ಞಾನಿಗ- |ಳಾ ಪದ ಭಜಿಸುತ ಹರಿದಿನದೀ ||ಲೋಪವ ಮಾಡದೆ ನಿರ್ಜಲ ಜಾಗರ- |ವಾಪರಮಮುದದಿ ನಡಸುತಲಿಪ್ಪುದೆ 33ಋಣಕೆ ಕಾಳಕೂಟವ ಕುಡಿವಂತೆ ಮ- |ರಣದಂದದಿ ಸನ್ಮಾನಕ್ಕೇ ||ಕುಣುಪದಂತೆ ಪರಸ್ತ್ರೀ ನೋಡಲ್ ಭಯ |ವನು ಬಡುವನು ಬ್ರಾಹ್ಮಣನೆಂದರಿವದೆ 38ಶತಮಖನಿಗೆ ಈಶಬಲ ಅವಗೆ ಬಲ ಮ- |ರುತವಗೆ ಬಲಹರಿಅವಗೆಂದೂ ||ಇತರರ ಬಲ ಬೇಕಿಲ್ಲ ಸ್ವತಂತ್ರ |ಚ್ಯುತಸರ್ವಜÕ ಸುಗುಣ ಪೂರ್ಣೆಂಬುದೆ 39ಸಂಸಾರವ ಹೇಯಿಸಿಕೊಂಡಾವಗ |ಕಂಸಾಂತಕನೂಳಿಗವನ್ನೂ ||ಸಂಶಯವಿಲ್ಲದೆ ಮಾಡುತೊಂದಧಿಕ |ವಿಂಶತಿ ಕುಲ ಉದ್ಧಾರ ಮಾಡುವದೆ 40ಪ್ರಥಮ ವಯಸದಲಿ ವಿದ್ಯಾಭ್ಯಾಸವು |ದ್ವಿತಿಯದಲ್ಲಿ ಗೃಹಕರ್ಮವನೂ ||ತೃತಿಯದಿ ಸತ್ತೀಥ್ರ್ಯಾತ್ರಿಗಳನುಮಾ|ಡುತಲಲ್ಲೆಲ್ಲಿಹ ಮಹಿಮಿ ಕೇಳುವದು 41ಘೋರತರ ಕುಸಂಸಾರವೆಂಬ ಈ |ವಾರಿಧಿತ್ವರದಾಟುವದಕ್ಕೇ ||ಮಾರಮಣನ ನಾಮೋಚ್ಚಾರವೆ ನವ |ತಾರಕವೆಂದುಪದೇಶ ಮಾಡುವದೆ 42ಜಲದೊಳಗುದ್ಭವಿಸಿದ ಮುತ್ತುದಕ ಮ- |ರಳೆ ಹ್ಯಾಂಗಾಗದೊ ಅದರಂತೇ ||ಕಲಿಕ್ಯವತಾರನ ಶರಣರು ಎಂಬರು |ಇಳಿಯೊಳು ನರರೆಂದೆನಿಸಲು ಯಂಬುದೆ 43ದ್ವಾದಶ ನಾಮವ ಪಂಚಮುದ್ರಿಗಳು |ಆದರದಲಿ ಧರಿಸುತ ಪಂಚಾ ||ಭೇದವ ತಿಳಿದು ನಿರಂತರದಲಿ ದು- |ರ್ವಾದಿಗಳ ಮತವ ಹಳಿವುತಲಿಪ್ಪುದೆ 44ಮಧ್ವಮತದ ಸರಿ ಮತಗಳು ಸಪ್ತ ಸ- |ಮುದ್ರತನಕ ಹುಡುಕಿದರಿಲ್ಲಾ ||ಬುದ್ಧಿವಂತರೆಲ್ಲೀತನ ಸೇವಿಸಿ |ಸದ್ವೈಷ್ಣವರೆಂದೆನಿಸಿರೊ ಎಂಬುದೆ 45ಮಾತಾಪಿತೃರ ಆರಾಧನಿ ಬಲು |ಪ್ರೀತಿಲಿ ಮಾಡುತ ಭಾಸ್ಕರಗೇ ||ಪ್ರಾತರಾದಿ ಸಂಧ್ಯಾಘ್ರ್ಯವ ಕೊಡುತಲಿ |ಆ ತರುವಾಯ ಜಪಂಗಳ ಮಾಳ್ಪುದೆ 46ಗುರುಹಿರಿಯರ ಚರಣವ ವಂದಿಸುತಲಿ |ಪರರಿಗೆ ಉಪದ್ರವನು ಕೊಡದೇ ||ಮರುತಾಂತರ್ಗತನೋಲ್ಗವನಲ್ಲದೆ |ನರಸ್ತೋತ್ರವ ಸ್ವಪ್ನದಿ ಮಾಡದಿಹದೆ 47ನಡಿಯಲು ದಾರಿಯ ಮನಿಯೊಳಗಿದ್ದರು |ನುಡಿ ನುಡಿಗನಿರುದ್ಧನ ನೆನದೂ ||ಬಡವರೆ ಗೋಪಾಲನ ಹೊಂದಿದವರು |ಅಡವಿಯೊಳಿದ್ದರು ಧೊರಿಗಳೆ ಎಂಬುದೆ 48ಪರಮಾಣುಗಳೊಳು ತಾನಿಹ್ಯ ತನ್ನೊಳ- |ಗಿರಸಿಹನಗಣಿತ ಬೊಮ್ಮಾಂಡಾ ||ಶಿರಿಗೆಂದೆಂದಿಗಸದಳವು ತಿಳಿಯಲು |ಕರಿವರದಿಂಥ ಮಹತ್ಮನು ಎಂಬುದೆ 49ಹೊತ್ತರಾದಿನಿಶಿಪ್ರಹರಾಗುವನಕ |ಮೃತ್ತಿಕಿ ಶೌಚಾದಿ ಸುಕರ್ಮಾ ||ತತ್ತಲವಾಗದೆ ಶ್ರೀ ಮುದತೀರ್ಥರ |ಉಕ್ತ್ಯನುಸಾರಾಚರಿಸುತಲಿಪ್ಪುದೆ 50ಹಾನಿ ಲಾಭ ಜಯ ಅಪಜಯ ಮಾನಪ- |ಮಾನಸುಖಾಸುಖ ಸಮ ಮಾಡೀ ||ಈ ನರರಿಗೆ ತನ್ನಿಂಗಿತ ತೋರದೆ |ಪ್ರಾಣೇಶ ವಿಠಲನ ಕರುಣವ ಪಡೆವದೆ 51
--------------
ಪ್ರಾಣೇಶದಾಸರು
ಸಮಸ್ತ ನಾಮಮಣಿಗಣ ಷಟ್ಚರಣ ಪದ್ಯಮಾಲಾಶ್ರೀ ರಮಾವರ ಶ್ರುತಿವಿನುತ ಸುಖಸಾರಗೃಹಕೆ ಸರ್ವೇಶ ಸುರದ್ರುಮವಾರಿಜಾಕ್ಷ ಮುಕುಂದಮುರಹರನಾರಸಿಂಹ ನಮೋಪ.ಗರುಡಗಮನ ಗುಡಾಳಕಾಖಿಳಶರಣಜನಸುರಧೇನುಸುರಮಣಿಕರುಣಸಾಗರ ಕಾಮಿತಾರ್ಥದದುರಿತಗಜಸಿಂಹಾಸರಸಿಜಾಸನಸೇವ್ಯಮುಕ್ತಾಭರಣನಮಿತ ಸುರೇಶ ನಿಶಾಚರಹರಣಶೀಲ ಸದಾಗಮ ಜೆÕೀಯಾದಿ ಪುರುಷ ನಮೋ 1ವಿಶ್ವಗರ್ಭ ವಿಚಿತ್ರಚರಿತ ಶುಭಾಶ್ವವದನ ವಿಶಾಲವಿಕ್ರಮಶಶ್ವದೇಕ ಸುವ್ಯಾಪ್ತ ಜ್ಞಾನಾನಂದ ಬಲಪೂರ್ಣನಶ್ವರೇಶ್ವರ ಸವಿತರೇಶ್ವರಈಶ್ವರೇಶ್ವರವೇದಗೋಚರಸುಸ್ವಭಾವ ನವಾಂಬುದಾಂಗ ಕೃಪಾಳು ಕೃಷ್ಣ ನಮೋ 2ಜನಪಮುನಿನುತ ತಾಟಕಾಂತಕಜನಕಜಾವರ ಲಕ್ಷ್ಮಣಾಗ್ರಜಜನಕ ವಾಗ್ವರ ಇಂದ್ರಪೂಜಿತ ಸೂರ್ಯಸುತಪಾಲದಿನಪ ಕುಲಪತಿ ದೀನವತ್ಸಲವನಧಿಬಂಧ ವಿಹಾರದಶಶಿರಹನನಕಾರಣ ಭರತಪಾಲಕ ರಾಮರಾಜ ನಮೋ3ಪೂತನಾಂತಕ ಶಕಟಮಾರಕವಾತಚಕ್ರಾನಿಷ್ಟಹರ ನವನೀತ ಪ್ರಿಯ ದಧಿಸಾರ ಭೋಜಕ ಗೋಪವಧುಲೋಲಶೀತಕರ ಕುಲತಿಲಕ ಶ್ರುತಿವಿಖ್ಯಾತಕರಿಚಾಣೂರ ಬಕಹರ&ಟsquo;ಮಾತುಳಾಂತಕ ಪಾರ್ಥಸ್ಥಾಪಕ ಕೌರವಾಂತ ನಮೋ 4ಚಕ್ರ ಶಂಖ ಗದಾಬ್ಜಧರ ತ್ರಿವಿಕ್ರಮಾಚ್ಯುತ ವರಹ ವಾಮನನಕ್ರಶಿಕ್ಷಕ ನಾಗರಕ್ಷಕ ನಿತ್ಯತೃಪ್ತ ಹರೇಶಕ್ರಗಿರಿಶಾರ್ಚಿತ ಪದಾಬ್ಜ ತ್ರಿವಕ್ರವಧು ಸೌಂದರ್ಯದಾಯಕಅಕ್ರುರಾಭೀಷ್ಟದ ವಿದುರ ಉದ್ಧವವರೇಣ್ಯ ನಮೋಮ 5ಮಧುಮಥನ ಕೈಟಭವಿದಾರಣಕುಧರವರ ಆನಂತವರ್ಣಾಭಿಧ ಜನಾರ್ದನ ಸಾಮಗಾಯನ ವೇದ್ಯಅನವದ್ಯವಿಧಿನಿಷೇಧಾಲಿಪ್ತ ಸತತ ವಿಬುಧನಿಯಾಮಕ ನಿರ್ಭಯಾತ್ಮ ತ್ರಿವಿಧ ಜನಾಶ್ರಯ ಕುಶಶಯನ ಶಾರಙ್ಗಪಾಣಿ ನಮೋ 6ವಾಸುದೇವಕುಭಾರವಾಹಕವಾಸವೇಯ ಕಪಿಲ ಋಷಭಮಹಿದಾಸ ಯಜ್ಞಾದತ್ತ ನಾರಾಯಣ ನಿರಾಮಯ ಭೋಶ್ರೀಸನಾತನ ಸಕಲಭುವನ ನಿವಾಸ ಸಂಕರುಷಣ ಸದಾಸ್ಮಿತಹಾಸ ದಿವಾಕರೇಕ್ಷಣಸ್ವಪ್ರಕಾಶನಮೋ7ಶೇಷಶಯನ ಜಗಚ್ಚರಾಚರಪೋಷಕಾಧಾರಕ ಸ್ವಜನ ಹೃದ್ಭೂಷಣಾಪರಿಚ್ಛಿನ್ನ ಅಪ್ರಮೇಯಾದಿ ಶ್ರುತಿವಕ್ತಘೋಷ ವರ್ಣ ಸುಪೂರ್ಣ ವಾಚ್ಯಾಶೇಷದೋಷವಿದೂರ ಖಳಜನಭೀಷಣಾಪ್ರಾಕೃತ ಅನುಪಮ ಪರಮಪುರುಷ ನಮೋ 8ಇಹದ್ಭಯ ಕ್ಷಯಕರ ಗುಣತ್ರಯರಹಿತ ವೃದ್ಧಿ ಹ್ರಾಸವರ್ಜಿತವಿಹಗತೈಜಸಪ್ರಾಜÕವಿಶ್ವಾವಸ್ಥತ್ರಯದಾತಾಅಹಿತನಾಶ ಪರೇಶ ಗಹನಾತ್ಗಹನಅವ್ಯಯಅತಿಶಯಾದ್ಭುತಬಹುಳ ಜೀವಾಂತರಿಯ ಅಂತರ್ಬಹಿಃಸ್ವತಂತ್ರ ನಮೋ 9ಪೂರ್ಣ ಕಾಮಾಂಬೋಧಿ ಶ್ರೀವಟಪರ್ಣತಲ್ಪ ಪರಾತ್ಪರಾಪ್ರತಿವರ್ಣ ನಿಗಮಾಗಮ ಅತಕ್ರ್ಯಾನಂತ ಸದ್ಗುಣ ಧೇನಿರ್ಣಯಾತೀತಾನಿರುದ್ದ ಸುಖಾರ್ಣವಾಚ್ಯುತ ಸೌಖ್ಯಕರ ನವಕೀರ್ಣ ವಿಗ್ರಹಪದ್ಮನಾಭಉದಾರಲೀಲ ನಮೋ10ಮೋಕ್ಷವಲ್ಲಭ ಭವಮಲಘ್ನ ಮುಮುಕ್ಷುವರದ ಮುನೀಂದ್ರ ಸುಮನೋಧ್ಯಕ್ಷ ದಾಮೋದರ ದಯಾಪರ ಜಿತದಿತಿಜ ಸಮರಭಿಕ್ಷುಕಾನ್ವಯಪ್ರಿಯ ಸಮಾಧಿಕಪಕ್ಷ ಸೃಷ್ಟ್ಯಾದ್ಯಷ್ಟ ಕಾರಣದಕ್ಷಾಧ್ವರಹರ ಬ್ರಹ್ಮ ನಿವಹಾದ್ಭಿನ್ನರೂಪ ನಮೋ 11ಕಂಠಕೌಸ್ತುಭಭೂಷಣಾಂಶಾಕುಂಠಿತಾತ್ಮೈಶ್ವರ್ಯ ಅಶುಭವಿಲುಂಠಕಾಧೋಕ್ಷಜ ಉಪೇಂದ್ರನೆ ಶ್ರೀಶ ಅನಿರುದ್ಧಕುಂಠಿತ ಜನನ ಮರಣ ಶಿರಿ ವೈಕುಂಠಪಾಬ್ಜಾಮ್ಲಾನ ತುಲಸೀಕಂಠಮಾಲಾನ್ವಿತ ಸುಗಂಧ ಜ್ಞಾನಕೋಶ ನಮೋ 12ನಿರ್ಜರೇಷ್ಟದ ನೀತಫಲದನೆದುರ್ಜನಾರ್ದಕ ದೂಷಣಾಂತಕನಿರ್ಜಿತಾಖಿಳ ಸುಜನಪಾಲಕ ನಿಶಾಚರೌಘಹರವರ್ಜಿತಕಲುಷನಿತ್ಯವಿಬುಧರಊರ್ಜಿತರ ಚಾರಿತ್ರವಿಮಲ ಗುಣಾರ್ಜಿತೋದಧಿ ವಿಪದಧ್ವಜ ವೈರಾಗ್ಯ ಪುರುಷ ನಮೋ 13ಅಪುಶಯನ ಆದ್ಯಾಪ್ತ ಇಷ್ಟಜನ ಪರಗತಿಪ್ರದ ಈಶ ವರನುತಉಪಮವಿರಹಿತ ಊಧ್ರ್ವಗಪ್ರಿಯ ಋಜು ಭೃನ್ರೂಪಧರಲುಪತ ದುಷ್ಕøತ ಲೋಕ ಮೋದಕಚಪಲ ಏಕಾನೇಕ ವಿಗ್ರಹಸ್ವಪರ ಐಶ್ವರ್ಯೋಜ ಔದಾರ್ಯ ಸಹಸ್ರ ನಮೋ 14ಕರುಣನಿಧಿ ಖಳಹರ ಗರಾದಪಘರಘರಧಿ ಸಮ್ಯಙ್ಞ್ನಮಕ ಸುಚರಿತಪ್ರಾಕೃತಛವಿರಹಿತ ಜನಪಾಲಝಷಋಷಭಾಞುರು ಜಗತ್ಪರ್ಯಟನಕಮಠಡಮರ ಧರೇಢ್ಯನೆ ಗೂಢ ಗುಣಚಿತ್ಪರಕುಧರಧಿಕೋಚ್ಚರ ಜಾರಗ ಧನುಹನ್ಧನದನಮೋ15ನರಸಖಾಮಿತಪಶುಪಫಣಿಮದಹರ ಬಲಾನುಜಭರಿತವಿಕ್ರಮಮರುತ ಕಾಂಗಯರುಘ್ನ ನೆರಲೇಶ್ವಶುರ ಲಕ್ಷ್ಮೀಶಾವರದರಾಟ್ ಶಶಿವದನ ಷಕೃಸನಿರುತ ಸರ್ವಭುಕ್ ಯಜÕ ಹವ್ಯೇಶ್ವರ ಸ್ವತೃಪ್ತ ಸ್ವಪೂರ್ಣಲಕ್ಷ್ಮೀಧರ ಯಜ್ಞಾಂಗ ನಮೋ 16ಕಪಟನಾಟಕಕಾಲಕಿತವಭಯಪರಿಹರ ಕೀಚಕರಿಪುಪ್ರಿಯಕುಪುರುಷಾಂತಕ ಕೂಬಕೇಶನೆ ಕೈವಲ್ಯಕೀಶವಿಪುಲಕೋಶನೆ ಕೌಶಿಕಮುನಿ ಮಖ ಪರಿಪೋಷಕಕಂಬುಕಂಧರತÀಪನ ಕೋಟಿಪ್ರಕಾಶ ಕಶ್ಯಪಸುತ ಸುರೇಂದ್ರ ನಮೋ 17ಖರವಿದಾರಕ ಖಾದಿ ಪಂಚಕಭರಿತನಖಿಳ ವ್ರಜಸಖೀಮನೋಹರ ಸುಖುರಪುಟ ಶೋಭಿತ ಖಡ್ಗ ಖೂಚ್ರ್ಛ ಇಷುಪಾಣಿಸುರಸಖೇಳನ ಪರಸುಖೈಕ ಶರಿರ ವಿಶಿಷ್ಟ ಸುಖೋದಯಾಂಕುರವರಸುಖೌಘಾಖಂಡಪರಶೋ ದುಃಖಹರಣ ನಮೋ18ಗಗನನಾಭಾಗಾಧ ಚರಿತ ಗಿರಿಗಣಸೇವ್ಯ ಸುಗೀತಪ್ರಿಯ ಗುಪ್ತಗುಣ ಗೂಢಧಿ ಗೇಹ್ಯತ್ರಯಯುತ ಗೈದಿಹನೆ ಗೋಪ್ತಾಸ್ವಗತ ಗೌರವ ಗಂವ್ಹರಾಂಕಿತಸುಗಃನೋತ್ತರ ಶುಭಸುಖಾಕರಸುಗಮಸೂಕ್ಷ್ಮ್ಮ ಸುದುರ್ಗಮಾಲಯ ವಿಜಿತರೋಷ ನಮೋ19ಘಟಶ್ರವಣ ಘಾತಕ ಲಘಿಮಯುಕ್ಚಟುಲಗಾತ್ರಾ ಘೀಜನಹರಣಪಟು ರಘುದ್ವಹ ಪಿಶಿತಭೋಜಕ ಘೂಕಖದ್ಯೋತಕಠಿಣ ಘೇರಟಮಾನಖಳಸಂಕಟ ನಿವಾರಕಘೋರಯೋಧಕನಟಕಾಘೌಘ ವಿದಾರ ಘಂಟಾಚಾಪ ದೀರ್ಘ ನಮೋ 20ಚಕ್ಷುಷಾಲಯ ಚಾರುಗುಣಚಿತ್ಕುಕ್ಷ್ಷೆ ಚೀರದ್ವಯ ಚುತೇತರರಕ್ಷ ಚೂಡಾಚೇಷ್ಟ ಚೈದ್ಯಹರಾದ್ಯ ಚೋರಾರೇರಿಕ್ಷಜಾತಾವರ ಚೌರಾಶಿತಿಲಕ್ಷ ಪ್ರತಿಮಾದ್ಯಕ್ಷಚಂದನವಕ್ಷ ವನಸ್ರಗ್ಧರ ಋಚಃಸ್ವನ ಪ್ರೀಯಪುರುಷ ನಮೋ 21ಛತ್ರಯುಕ್ ಛಾಯಘ್ನ ಛಿಧ್ವರಕ್ಷುತೃಷಾರ್ದಕ ಛೇದವರ್ಜಿತ* * * ಸ್ವೇಚ್ಚೈಕಚರ ಇಚ್ಛೋದ್ರೇಕ ಮಾಂದ್ಯಹರಶತ್ರುಭಿತ್ಸಚ್ಛೌರ್ಯ ಭೂಷಿತಸತ್ರಭುಕ ಛಂದೋಮಯಾತ್ಮಕಪುತ್ರ ಪೌತ್ರ ಪ್ರಪೌತ್ರ ಶೋಭಿತ ಸ್ವಚ್ಛಃ ವರ್ಣ ನಮೋ 22ಜಯತರಾನನ ಜಾಡ್ಯಹರಜಿತಭಯನಿಚಯ ಜೀವೌಘರಕ್ಷಯಜುರ್ಯಜಾಸುರ ಜೂಕನುತ ಸುರಜೇಷ್ಠ ಜೈನಧಿಹನ್ಲಯ ಜಲಾಶ್ರಯ ಜೋತಿರ್ಮಯ ತನುವ್ಯಯ ವ್ರಜೌಕಸ ವಂದ್ಯ ಜಂಬುನಿಲಯ ಕುವಲಯನಯನ ಅಜಸ್ರಾನಂದ ಬಲಗ ನಮೋ 23ಝಡಿತಿಚರ ಝಂಝಾಮರುಚ್ಚರಝಡುಪಚರ ಝಿಲ್ಲಿಕ ವನೇಚರಜಡಧಿಚರ ಝೀರಿತ ಸುರ ಝುಂಟಾವಲಯ ಝೂಣಿಚರ ?ಒಡನೆ ಝೇಂಕರಿಸುತಲಿ ಝೈಡಿಯುದೃಢದಿ ಝೋಂಡಿಯೋಳ್ಚ್ಚರಿಸಿ ಝೌಂಕರಿಸ್ಯೊಡಲಿನೊಳು ಝಂಕಾರಪೂರ್ಣನೆ ಝಷಪತಿಯೆ ನಮೋ 24ಪಟಲಹೈಮಕಟಾಹಭಂಜಕನಿಟಿಲದೃಕ್ ಟೀಕಾರ್ಥಸುಪ್ರಿಯಕಟುಮತಿಘ್ನ ಭವೇಡ್ಯಾ ಟಂಕಾನ್ವಿತ ಕರಾಬ್ಜೇಕಾಜಠರಜಡಹ ಕುಠಾರಧರಸತ್ಕಠಿಣಕರ ಸುಕಠೋರ ಯೋಧ ಕಮಠವಿಕಾರ ಶಠೌಘಸಂಹರ ನೃಹರೆ ಭೃಗುಜ ನಮೋ 25ಕುಂಡಲೀಶ ಷಡಾಸ್ಯಸನ್ನುತಪಂಡಿತಾರ್ಚಿತ ಪಾಂಡುರಾಂಬರಮಂಡಲೇಶ ಬಿಡೌಜನುತ ನೃವಿಡಂಬನ ಚರಿತ್ರಪಂಢರಾಪುರ ರಾಜವಿಠಲಾಖಂಡಮತಿ ಪಾಖಂಡ ದೂಷಕಖಂಡಮರಕ ಪ್ರಭುಘ್ನಮುನಿ ಪುಂಡರೀಕವರದ ನಮೋ 26ಪ್ರಣತಪ್ರಿಯ ಪ್ರಣಾಯ್ಯಪ್ರಿಯ ವಿಪಫಣಿಪಪ್ರಿಯ ವಾಣೀಧವಪ್ರಿಯಅಣುಮಹದ್ರೇಣೂಸ್ಥಪ್ರಿಯ ಸುಗಣೇಶ ಪ್ರಿಯಕರನೇಕ್ಷಣ ಕ್ಷಣೈಕ್ಯ ಸುವ್ಯಕ್ತಧಾರಣಗುಣಗಣೋತ್ಪಾಟಣ ರಣೌಘಾಂಗಣ ಭಯೋಚ್ಚಾಟಣ ಗುಣಾಂಕ ಶರಣ್ಯಸುಖದ ನಮೋ 27ತÀಥ್ಯವ್ರತ ಸತ್ತಾತ್ವಿಕಾಗಮಕಥ್ಯ ತಿಲಮಾತ್ರಾರ್ಪಕೇಷ್ಟದಮಿಥ್ಯದೂಷಕ ತೀರ್ಥಶ್ರವ ತುರ್ಯಾತ್ಮಾತೂರ್ಣಪ್ರಿಯನಿತ್ಯತೇಜಸ ತೈತ್ತಿರಿಯಶ್ರುತಿಸ್ತುತ್ಯ ತೋಯಾಯನ ಧೃತೌಷಧಪಥ್ಯ ತಾಂತ್ರಿಕಪರಮಚೇತಃಪರಮಕಾಲ ನಮೋ28ಪ್ರಥಮಪುರುಷ ಪೃಥಾತ್ಮಜಾನ್ವಗಮಥಿತವೀರ್ಯ ರಥೀಂದ್ರ ಪರಿಚರಪೃಥಿವಿ ಪೂಜಿತ ಸ್ಥೂಲಕೃತ್ಯಥೇಚ್ಛ ಸ್ಥೈರ್ಯಮತೇಪಥಿಕಸದನ ಯಥೋಕ್ತ ಫಲದ ವಿಪಥರಥೌಘಪ ಸುರಥಚರಣ ಕುಪಥಗÀ ದೂರಕ ಬ್ರಹ್ಮಸ್ತಂಭಾಂತಸ್ಥ ಸ್ವಸ್ಥಃ ನಮೋ 29ದಹರ ವ್ಯೋಮಗ ದಾತೃ ದಾಂತ ಹೃದ್ಗುಹಸದನ ಕರ್ತ ತುಹಿನಬಿಂಬಗಅಹಿಪದೀಪ್ತ ಮಯೂಖ ದುರ್ಗಾವ್ಯಾಕೃತಾಂಬರಗಾಅಹಿತದೂಷಕ ದೇವ ದೈತ್ಯರದೋಹನ ಕಾರ್ಯಗ ದೌತ್ಯಕರ್ಮಗದ್ರುಹಿಣದೇಹ್ಯಗ ದಂಡಕಾರಕ ದರ್ಪಕಸಹ ನಮೋ 30ಧÀರ್ಮನಿಚಯಪ ಧಾತು ಸಮುಹಪಕರ್ಮಧಿಷÀಣಪ ಧೀರಪ್ರಜÕಪನರ್ಮವಾಗ್ಮಿಪ ಧುನಿಕದಂಬಪ ಧೂರ್ಜಟಾಂಕಿತಪಚÀರ್ಮಖಡ್ಗಪಧೇನುವಿಪ್ರಪಮರ್ಮ ಧೈರ್ಯಾಂಕಿತನಧೋಕ್ಷಜನಿರ್ಮಲಾತ್ಮಕ ಧೌಮ್ಯಗರ್ಗಪ ಧನ್ಯಧನಪ ನಮೋ 31ನಗವಿಧೃತಕರ ನಾಗಗರ್ವಹನ್ನಿಗಮರಿಪುನಾಶಕ ನೀತಪ್ರಭುಸುಗುಣಸೇವ್ಯ ನುತಜನಮಂದಾರ ನೂತನಾಬ್ಜಾಂಘ್ರೀಯುಗ ಯುಗಾಂತಕ ನೇಮನೈಷ್ಟಿಕಸುಗುಣನೋದಧಿ ನೌಗ ನಂದಕವಿಗತ ಸ್ನೇಹವಿನಷ್ಟ ಜಗದೋದ್ಧರಣಶೀಲ ನಮೋ 32ಪವನ ಮತಿ ಪರಿಪಾಕ ಬಿಂಬಸ್ತವನನಿರತ ಪಿನಾಕಿಮೋಹನಸುವಧು ಪೀಯೂಷಧರ ಪುಷ್ಪವಿಹಾಸ ಪೂರ್ಣಪ್ರಭಾಕವಿವರದ ಪೇಶಲ ಜಟಿಲ ಪೈಲವಿನುತ ಶುಕವಿಪೋಷ ಪೌರಾಣವಿರಚಕ ಪಂಚನಿಶಿ ಭಾರತ ಸೂತ್ರಕರ್ತ ನಮೋ 33ಫಲಿತ ಸದ್ರಸ ಫಾಲಲೇಖಕಲಲಿತ ಸ್ಫೀತಾತ್ಮಕ ಸ್ಫುಟಥಭೃಜ್ವಲ ಮರುತ ಪಯಫೇನ ಭುಕ್ಷತ ಸ್ಫೋಟಾತಂಕಹಾಬಲಬಲದ ಬಾಣಘ್ನ ಬಿಲಗಿರಿನಿಲಯಮುನಿ ಹೃನ್ನಿಲಯಬುಧಮಂಡಲ ವಿರಾಜಿತ ಬೋಧಯುತಕರ ಬಂಧಮೋಕ್ಷ ನಮೋ 34ಭದ್ರಪದ ಭಾವಕ ಭಿಷಗ್ವರರುದ್ರಭೀಕರ ಭುಕ್ತಿದಾ ದಾರಿದ್ರ್ಯದೂರಕ ಭೂರಿಭೂತಿದ ಭೇದವಾದೀಶಾಹೃದ್ರುಜಹನ್ ಭೈಷ್ಮೀಶ ಭೋಜೇಶಾದ್ರಿಕುಲಿಶಕುಶಸ್ಥಳೋಕ ಸುಪದ್ರವಾರ್ದಕ ಭೌಮವರಪ್ರದ ಭಂಗರಹಿತ ನಮೋ 35ಮಕರಧ್ವಜಜಿತ ಮಾಸಖಾಮಿತಭುಕುಲಜೀವನ ಮೀನ ಮುರಲಿಧರಕರ ಮೂಲಕವೀಂದ್ರ ಮೇಧ್ಯಚರಿತ್ರ ಮೈಥುಳಪಾಸುಕರಮೋಹಕ ಮೌನಿಪೂಜಕಚಕಿತಕರ ದನುಜೇಂದ್ರ ಕಷಣಾಂಬಕ ಬಕಾಂತಕ ಮಂಜುಹಾಸ ಮಹಾಧಿರಾಜ ನಮೋ 36ಯಜÕ ಭಿಕ್ಷುಕ ಯಾಜÕರತ ಯಿಂದ್ರಾಜÕ ದೂಷಕ ಯೀಷಣಾರ್ದಕಸುಜÕರಾಡ್ಯುಗ ಯೂಗಸಂಭವ ಯೂಥಪೋತ್ತಂಸಅಜÕಭಿದ್ಯೇಕೇಶ ಮೌನಿಗಣಜÕ ಯೌವನ ಪುಂಸಯಂತ್ರಾರ್ಥಜÕ ಪೋಷಕ ಕಿಂಕರೋಧೃತ ಕಾಮುಕಾಷ್ಟ ನಮೋ 37ರಸಿಕರಾಜಪ ರಾಜ್ಯಚಕ್ರಪವಸುಪ ವೃಕ್ಷಪ ಕುಲಪರೀಕ್ಷಿಪಪ್ರಸರಪಾಂಥಪ ರುಚಿಗುಣೌಘಪರೂಪಬಹುರೂಪಾಅಸುಪ ರೇತೋದ್ಭವಪ ರೈಗಪರಸಪ ರೋಷಪ ರೌಪ್ಯನಗಪಪಕುಸುಮಬಾಣಪ ರಂಗಕ್ಷೇತ್ರಪ ರಹಸ್ಯಪಾಲ ನಮೋ 38ಲವಜನಕ ಲಾಘವ ಕರಾಬ್ಜ ಲಿಪ್ತವಿಮಲ ಶ್ರೀ ಚಂದನಾಂಗ ಸುಕವಿನಚರಲುಬ್ಧ ವಧು ಪೂಜ್ಯನುಲೂಖ ಲೋಧಕನೇಭವಜಪಾಕ್ಷರ ಲೇಶ ಮೋಹ ಮದವಿರಹಿತ ಲೋಭಘ್ನ ಲೌಕಿಕಪ್ರವಹೇತರ ಲಂಕೌಕಸಾರ್ದಕ ಲಬ್ಧತುಷ್ಟನಮೋ39ವಕ್ತøವರ ವಾಲ್ಮೀಕಿ ಕೃತೀಶ ವಿವಿಕ್ತಮತಿ ಪದವೀಶಗತಿದನೆವುಕ್ತ ಸುಚರಿತ ಊಧ್ರ್ವಪಟ ಪ್ರಸ್ಥಾಪ ವೇದ್ಯ ನಮೋರಿಕ್ತಭಯ ವೈದೇಹಿ ಮನೋಹರತ್ಯಕ್ತಪ್ರಾಕೃತವೋಂ ವೌಷಡಾದ್ಯುಕ್ತಿವಾಚಕ ವಂದ್ಯವಂದಿತ ವಹಕ ವಾಹಕ ನಮೋ 40ಶಮಯುತಾಗ್ರಣಿ ಶಾಮಶಿವಕರಗಮನಶೀಘ್ರಗ ಶುದ್ಧ ವಿದ್ಯೋದ್ಯಮ ಶುಚಿವ್ರತ ಶೂರ್ಪನಖಿ ಮದಹರ್ತ ಶೇಷಸಹಯಮ ದಯಾಂಬುಧೆ ಶೈಲಗ್ರಹ ಸಂಯಮಿ ಗಣಾರ್ಥಿತ ಶೋಕತಾಪ ಪ್ರಶಮನ ಶೌಚಾಚಾರಯುತ ಪ್ರಭೊ ಶಾಂತ ಶಸ್ತ ನಮೋ 41ಷಡ್ವಿಭೂತೆ ನಿಷಾದ ಭಯಹರಷಡ್ವಧೂಧವ ಋಷಿವಧೂಸಖಶಾಡ್ವಲಚರ ಇಷೀಕ ಇಷುಧರ ಕಾಂಡ ಸುವಿಹಾರಾಷಡ್ವಿಕಾರಾತೀತ ವಿಜಿತಾನಡ್ವಷೇಚಿತ ಸೌರಭೇಯ ಭೂವಿಡ್ವರಘ್ನ ವೃಕ್ಷೌಘಘ್ನ ಸ್ವರ್ಣ ನಿಷಂಗಚಾಪನಮೋ42ಸರಸಿಜಾನನ ಸಾಧ್ಯ ಸಿದ್ಧನಿಕರಕರಾರ್ಚಕ ಸೀಕ್ಷರಕ್ಷಕಸುರಹೃನ್ಮಂದಿರಸೂರಿಹೃದ್ಗುಹಸೇವ್ಯ ಸುರಮೌಳಿನಿರುಜ ಸೈಂಧವಕಾಸ್ತø ಸೋಮಾಭರಣತೋಷಕ ಸೌಮ್ಯ ರತ್ನಾಕರನಿರಂಜನಸಂಜಯೋತ್ಸವ ಸಹಜಶೂರ ನಮೋ43ಹಲಿ ಸಹಗ ಹಾರ್ದಿಕ ಮನೋಗತಫಲ ಹಿರಣ್ಮಯವಸನ ಹೀರಾವಲಯ ಹುತ ಭುಗ್ಬಲದ ಹೂಣಪವಿತ್ರ ಹೇತ್ವರ್ಥಜಲಧಿಪುರಪತೆ ಹೈಮರಾಶಿದಬಲಿದ ಹೋಮದ ಹೋತ್ರಭಾಗದಸುಲಲಿತೋದನ ಪರಮಹಂಸ ಸತ್ಕುಲ ಹರುಷ ನಮೋ 44ಪಳಲವಾಂತ ಕಳಾಢ್ಯ ಯಜ್ಞಾವಳಿ ಕೃತಾದರ ನಿವ್ರ್ಯಳೀಕ ನಿಖಿಳ ಕೃಪಾಳುವರೇಣ್ಯಜೀವ ಜಿಳೂಕ( ಜಾಳಕ?) ತೃಪ್ತಿಕರಸ್ಥಳಕಳೇವರಭರಿತ ಬ್ರಹ್ಮ ವಿಪುಳ ಕಳೈಕ್ಯ ತಳೋಧ್ರ್ವಮದ ವಿಹ್ವಳ ಬಳೌಘನೆ ನಿಷ್ಕಳಂಕ ಕಳಾಪ್ರವೀಣ ನಮೋ 45ಕ್ಷತರಹಿತ ಕ್ಷಾರಾಬ್ಧಿ ಬಂಧಕಕ್ಷಿತಿಭರಹರ ಕ್ಷೀರನಿಧಿಗ್ರಹಅತುಳಗ್ರಹ ಕ್ಷುದ್ರಾರೆ ಕ್ಷೂರಾಯುಧನೆ ಕ್ಷೇಮೇಶಗತಿಗತೇ ದೀಕ್ಷೈಕ್ಯಕ್ಷೋಣಿಪತಿಪತೇ ಕ್ಷೌಮರಥ ಕ್ಷಾಂತಿಭರಿತ ನೃಗೋದ್ಧರ ಕ್ಷತ್ರವಲ್ಲಭ ಕ್ಷತ್ರವೇಷ ನಮೋ 46ಏಕರಾಡ್ ವಿಶ್ವೇಕಕಾರಕಏಕವ್ಯಾಪಕ ಏಕಸ್ಥಾಪಕಏಕಭೋಜಕ ಏಕಯಾಜಕ ಏಕತೋಕಾತ್ಮಏಕಸೃಜ ಭುವನೈಕವರ್ಧಕಏಕಮಾರಕ ಏಕತಾರಕಏಕಯಾಚಕ ಏಕಸೂಚಕ ಏಕಪತ್ರನಮೋ 47ದ್ವಯಕ್ರಿಯೇಶ್ವರ ದ್ವಯಪಥೇಶ್ವರದ್ವಯಸುವಿಸ್ತರ ದ್ವಯವಿಗೋಚರದ್ವಯನಿವಾರಕ ದ್ವಯಪ್ರದಾಯಕ ದ್ವಯಸಮಯಪೂರ್ಣದ್ವಯ ಪ್ರವಾಹಕ ದ್ವಯನಿಯಾಮಕದ್ವ್ವಯನಿರಂತರ ದ್ವಯದ್ವಯೇತರದ್ವಯಸುಬೋಧಕ ದ್ವಯಪ್ರಸ್ಥಾಪಕ ದ್ವಯಭಯಘ್ನ ನಮೋ48ತ್ರಯ ಸುವಿಗ್ರಹ ತ್ರಿಪದಕಾಲತ್ರಯಗ ತ್ರಿದಿವಪ ತ್ರಿಪಥಗಪಿತ ತ್ರಿನಯನಾರಿಹನ್ ತ್ರಿಪುರಮೋಹಕ ತ್ರಯ ಸ್ತ್ರಿಂಶತ್ ಸುರಪತ್ರಿಯುಗುದಿತ ತ್ರಿಗುಣೇಶ ಸಾಗರತ್ರಯಪ ಪಂಚಕತ್ರಿವಿಧಭಾಷ್ಯನಿಚಯಕಚಕ ತ್ರಿದಶಾರ್ಚ ತ್ರಿಜಗದ್ಧರಣಮಾರ್ಗನಮೋ49ಚತುರ್ವಿಧಾತ್ಮಾ ಚತುರ್ಭುಜಾಂಚಿತಚತುರ್ಮುಖಾಧಿಪ ಚತುರ್ವಿಧಾರ್ಥದಚತುರ್ವರ್ಣಾಶ್ರಯ ಚತುರ್ಮುಕ್ತಿ ಚತುಷ್ಟಯೇಶ್ವರ ತೇಚತುಃಸಮುದ್ರಗ ಚತುರತರಮತಿಚತುರ್ವಿಧಾಯಥ ಚತುರ್ಬಲಾಂಬುಧಿಚತುರವೇದಾರ್ಥಿತಚರಣ ಚತುಶ್ಯಾಸ್ತ್ತ್ರಪೂಜ್ಯನಮೋ 50ಪಂಚಮುಖಮುಖ ಪಂಚಮುಖನುತಪಂಚಜನರಿಪು ಪಂಚಮೋಕ್ಷದಪಂಚಪಾಂಡವಪ್ರಾಣ ವರಪಂಚಾಕೃತಾವ್ರಾತಪಂಚಶರಪಿತ ಪಂಚವ್ಯೂಹ ಸುಪಂಚಭಿದಮತ ಪಂಚಪರ್ವಹಪಂಚಕಾಲಜÕ್ಯಜÕ ಸಂಭೃತಪಂಚಬಾಣನಮೋ51ಷಟ್ಸಹೋದರ ಷಟ್ಚರಣಚರಷಟ್ಸಪತ್ನಹನ್ ಷಡೂರ್ಮಿಹರಷಟ್‍ಶಕ್ತ್ಯಾತ್ಮಕ ಷಡ್ಗುಣೋತ್ತರ ಷಡೃತುಪ್ರವಹಷಟ್ಕರಾಭಿದ ಷಟ್ಪರೋಕ್ಷದಷಟ್ಕ್ಕ್ರಯುಗ ಷಟ್ಶಾಸ್ತ್ರಪ್ರಿಯತಮ ಷಟ್ಕಸಹಗÀ ನಮೋ 52------------------------- 53ಅಷ್ಟಕಾರಣ ಶ್ಲಿಷ್ಟ ಮಹಿಷಿಯರಷ್ಟಕಾಶ್ರಯ ಅಷ್ಟಮದಹರಅಷ್ಟಕಾಷ್ಟಿಗ ಅಷ್ಟಭೂತಿದ ವ್ಯಷ್ಟಸೃತ್ಯಹಅಷ್ಟದಂಶಕ್ಷೋಣಿಪ್ರಜಹರಅಷ್ಟನಾಗಪ ಅಷ್ಟಭುಜಧರಅಷ್ಟ ಆಯುಧ ಸಂಭೃತಾಷ್ಟೌಷಧ ತ್ರಿಭಂಗ ನಮೋ 54ನವಸುರತ್ನಾಭರಣಯುಕ್ ತ್ರಿರ್ನವಕಪ್ರಿಯ ನವದ್ವಾರಪುರ ಪ್ರಭೊನವಶಯುಕ್ತ್ಯಾತ್ಮಕ ನವಗ್ರಹ ನವದೃಯಾಗದ್ರುಣನವರಸೇಶ್ವರ ನವಪ್ರಜೇಶಪನವನಿಧೀಶ ನವಾರ್ಥದೆ ದಾನವರಿಪುವೆ ನವಕೋಟ್ಯಮರರಿಂ ನಮಿತಚರಣ ನಮೋ 55ದಶಶತಾನನ ದಶಶತಾಂಬಕದಶಶತ ಸುತೋರ್ದಂಡ ದರಕಳದಶದಶಾಭಿದ ದಶಶತಾಭಿದ ದಶಖಗಾಮರಪದಶವರೂಥಜ ದಶಮುಖಘ್ನ ತ್ರಿದಶ ಭಯಾಂತಕ ದಶಕಕುಭ ಹಸತ್ದಶನ ದಶಮತಿಭಾಷ್ಯ ಋತದಶನೀಶದ್ರಕ್ಷ ನಮೋ 56ಶತಸುಖಾರ್ಥಿ ಶತಾಬ್ದಶಯನ ಸುಶತಮಖಾರ್ಚಿತ ಶತಗೋಪಿಪತೆಶತಸೋಮನೃಪಶತಕ ಸ್ಥಾಪಕ ಶತಶತಾಂಶುಧರಾಶತಕುರುಜಹನ್ ಶತಕುಲೋದ್ಧರಶತಾಯುಃಪ್ರದ ಶತಾಪರಾಧಿಪಶತಸಹಸ್ರಾರ್ಕಭ ಶತಪತ್ರಾಕ್ಷ ಸುಖದ ನಮೋ 57ಕ್ಷಿತಿಪ್ಲವೋದ್ಧರಕ್ಷಿತಿಭೃತೋದ್ಧರಕ್ಷಿತಿತಳೋದ್ಧರಕ್ಷಿತಿಚಲನಕರಕ್ಷಿತಿತ್ರಿಪದಧರ ಕ್ಷಿತಿಪಕ್ಷಯಕರ ಕ್ಷಿತಿಕನ್ಯಾಸುವರಕ್ಷಿತಿಜನಾಶಕ್ಷಿತಿಖಳಮೋಹಕಕ್ಷಿತಿಭರಾರ್ದಕ ಕ್ಷಿತಿಪಾಲನಪರಕ್ಷಿತಿವಲಯಚರ ಕ್ಷಿತಿಜನೇತರ ಕ್ಷಿತಿಸುರೇಶ ನಮೋ 58ಅಂಬುಗಮನ ಪಯೋಂಬುಮಥನ ಲಯಾಂಬು ತಳಗಾರುಣಾಂಬು ಸಟ ಬಾಹ್ಯಾಂಬುವಾಹಕ ಅಂಬುಶೋಷಕ ಅಂಬುಧಿಮದಘ್ನಅಂಬುಗೃಹ ಮೋಹಾಂಬುಧೆ ಧರ್ಮಾಂಬು ಶ್ರೀಮತ ಅಂಬುಜೇಶ ಸುಧಾಂಬುಧಿ ಸಮಾನೋದರಾಂಬುದಗಾತ್ರ ಕಪಿತ ನಮೋ 59ಅಗ್ನಿನಿಭ ಅಬ್ಧ್ಯಾಗ್ನಿ ಸಹಚರಅಗ್ನಿಮಯ ಪ್ರಳಯಾಗ್ನಿಲೋಚನಅಗ್ನಿಕಾರ್ಯಜ್ಞಾಗ್ನಿ ಪೂಜಿತ ಅಗ್ನಿ ಹೋತ್ರಯುತಾಅಗ್ನಿ ರುಧನ್ನಾಗ್ನಿಕೋಪನಅಗ್ನಿಸ್ಥಾಪಕ ಅಗ್ನಿವ್ಯಾಪಕಅಗ್ನಿವರ್ಧಕ ಅಗ್ನಿದೀಪಕ ಅಗ್ನಿವರ್ಣ ನಮೋ 60ವಾತಜನಕನೆ ವಾತಸಮಭ್ರಮವಾತಪಾಗ್ರಜ ನಾಸಿಕಜಲಯವಾತಸಮ ಕ್ವಾಶಾಂಕ ವಾತಭ್ರಾತೃ ಹಿತಕರಣಾವಾತಸಖಗತ ವಾತಭವನುತವಾತಸುತನುತ ವಾತರಶನ ಸುವಾತಸಮ ಹರಿಗಮನಸೂತ್ರಸುವಾತಜನಕ ನಮೋ61ಅಂಬರ್ವಾನರಜಾರ್ಚಿತ ನಗಾಂಬರಾಂಬರ ಕ್ರೀಡಾಂಬರಾಳಕಸಂಭಜಿತ ಸ್ವಾಂಬರಭರಿತಪದ ಅಂಬರೇಣುಕಹನ್ಅಂಬರಗ ವಂಶೇಂದ್ರ ಗೋವಧ್ವಾಂಬರಾಪಹರಾಂಬರಾಂಬರಅಂಬರಗ ಹಯಗಾಂಬರಪ ಪಾಂಬರ ಸುನಾಭಿ ನಮೋ 62ಶಬ್ದಬೋಧಕ ಶಬ್ದಕಾರಕಶಬ್ದಘರ್ಘರ ಶಬ್ದಹುಂಕರಶಬ್ದಪಾರಗ ಶಬ್ದ ವೀರಗಭೀರ ಶಬ್ದಾಂಕಾಶಬ್ದಶೋಧಕ ಶಬ್ದದೂಷಕಶಬ್ದಸ್ಥಾಪಕ ಶಬ್ದವಿಸ್ತøತಶಬ್ದ ಬ್ರಹ್ಮಜೆÕೀಶ ಶಬ್ದಾತೀತ ಶಬ್ದ ನಮೋ 63ವೃಷಭಗೇಷ್ಟ ಮಿಥುನ ಕುಜಾರ್ದಕವಿಷಮಕರ್ಕಶಮೃತ್ಯು ಕರಿಹರಿವಿಷರದನ ಕನ್ಯಾಪತಿಸಖ ವೃಶ್ಚಿಕಾಭಾಂಗಾವಿಷಪಧನುಹರಮಕರಕುಂಡಲವಿಷಕುಂಭ ಸ್ತನಪಾನ ತತ್ಪರವಿಷಯಸುಖಮಾಯ ಮೀನ ಮೇಷಾರೂಢಸೇವ್ಯನಮೋ64ಅಶ್ವರೂಪ ಮಹಾಭರಣಿಸಖವಿಶ್ವಕೃತ್ತಿಕಾಯಂಗಿ ವರರೋಹಿಣೇಶ್ವರೋದ್ಭವ ಮೃಗಮದಾಂಕಾರಿದ್ರವಿಣ ಹರಣಾನಿಸ್ವಜನ ಪುನರ್ವಸುದ ಗುರುಗಣಹೀಶ್ವರಾಸನ ಪಿತೃಚಯಾರ್ಚಿತಸ್ವ ಸ್ವಭಾಗ್ಯ ಸುಪೂರ್ಣ ಅಮೃತೋತ್ತರ ಸುಹಸ್ತ ನಮೋ 65ಚಿತ್ರರಥ ಸ್ವಾತಿಶಯದೂರ ಮರುತ್ತವೇಶಾನುರಾಧಕೋದ್ಧರಗೋತ್ರಿ ಸುಖಕರ ಮೂಲರಾಕ್ಷಸವಂದ್ಯ ಜಲರೂಪಶತ್ರು ಶ್ರವಣರಹಿತ ಧನಿಷ್ಠ ನಕ್ಷತ್ರ ಶತಪತಿ ಕುಲಜ ಮಧ್ಯ ಪೂರ್ವೊತ್ರ ಭದ್ರಪದೇಶ ರೇವತಿ ರಮಣಾವರಜ ನಮೋ 66ಕತರಕರ್ಚಿತ ಕಿತವಹರ ಸತ್ಯವ್ರತಪ ಕ್ರೀಡಾಪರಕುಧರಕೂಜಿತನಿಗಮಕೇಡ್ಯ ಕೋಟರಮುಖ ಕೌಶಲ ಜವಗಮಾಶ್ರುತಿಹರಹರ ಕಂಠರೇಖಾಂಕಿತ ಕಶ್ಯಪಸುತ ಕರುಣಭಾಷಕಶತಸುಖೋದ್ಧರ ಸಿತತರೋದರ ಶಫರಿರೂಪ ನಮೋ 67ಕಮಠಕಾಲಯ ಕಿಲ್ಬಿಷೋದರವಿಮಲ ಕೀಲಾಲೇಷ್ಟ ಕುಲಗಿರಿಭ್ರಮಣಕರ ಕುಪರ ಕರ್ಮೇತರ ಕೇಶ್ವರೇಷ್ಟಕರಅಮಿತ ಕೈತವಾನಿಷ್ಟ ಕೋಮಲವಿಮಲಜಠರಕಠಿಣವಪುಃ ಕೌರ್ಮ ಮಹತ್ಸ್ಮøತಿಪ್ರಿಯ ಕಂಠಲಂಬ ಕಚ್ಛಪಾತ್ಮ ನಮೋ 68ಕನಸಭವ ಕಾಪುರುಷಮಥನಕಿಟಿನಟ ಕೀರ್ತಿತಯಜÕ ಕುಶಮಯತನೋ ಶ್ರೀ ಕುಧವ ಕೆಗಕ್ರೋಡ ಕೈಶೋರ ಕುಜವರದಘನಸಮಸ್ವನಕೋಲಘರ್ಘರಮನುಸನಕನುತ ಕೌತುಕಾಟಣಕನಕಗಿರಿಚರ ಕಂಜಭವನುತ ಕಷ್ಟಹರಣ ನಮೋ 69ಮಧ್ವವಲ್ಲಭ ಮಧ್ವತೀರ್ಥಗಮಧ್ವಮತಪರ ಮಧ್ವಪತೆ ಮುನಿಮಧ್ವರಮಣ ಶ್ರೀಮಧ್ವಯತಿನುತ ಮಧ್ವಪುಷ್ಕರಪಾಮಧ್ವಪೋಷಕ ಮಧ್ವಭಾಷಕಮಧ್ವತೋಷಕ ಮಧ್ವರಿಪುಹರಮಧ್ವಕಾಮದ ಮಧ್ವಹೃದ್ಗುಹ ಮಧ್ವವಿಭವ ನಮೋ 70ಪ್ರಸನ್ನವದನ ಪ್ರಸನ್ನಲೋಚನಪ್ರಸನ್ನಭವನ ಪ್ರಸನ್ನಭಾಷಣಪ್ರಸನ್ನಕಾರ್ಯ ಪ್ರಸನ್ನಗುಣನಿಧೆ ಪ್ರಸನ್ನತರ ಮೂರ್ತೆಪ್ರಸನ್ನಪುರುಷ ಪ್ರಸನ್ನ ಸೋಂಕಿತಪ್ರಸನ್ನಕಥನ ಪ್ರಸನ್ನಭೂಷಣಪ್ರಸನ್ನಚರಿತ ಪ್ರಸನ್ನವೆಂಕಟ ಪ್ರಸನ್ನಕೃಷ್ಣ ನಮೋ 71
--------------
ಪ್ರಸನ್ನವೆಂಕಟದಾಸರು
ಸರ್ವ ಸ್ವತಂತ್ರನುಹರಿನಿಜವಾದ ದಾರಿಪ.ಸರ್ವಜೀವ ಹೃದಯಾಕಾಶವಿಧಿಶರ್ಮಾದಿ ಸುರ ಕೈವಾರಿಸರ್ವ ನಾಮಕಸದೋದಿತಶೌರಿಸರ್ವವಿಭೂತಿವಿಹಾರಿ1ಸತ್ಪಾದಿಗುಣ ಪ್ರವರ್ತನಕಾರಿ ಸುಹೃತ್ತಮ ದುರಿತಾಪಹಾರಿತತ್ವೇಶ ನಿಚಯಸ್ತುತ್ಯ ಮುರಾರಿ ಸತ್ಯಾತ್ಮಕ ನಿರ್ವಿಕಾರಿ 2ಲಕ್ಷ್ಮೀನಾರಾಯಣ ನಿರ್ಗುಣ ಸುವಿಲಕ್ಷಣ ದೀನೋದ್ಧಾರಿಮೋಕ್ಷಾಶ್ರಯ ಕಲಿಕಲುಶನಿವಾರಿಸಾಕ್ಷಿರೂಪ ಗಿರಿಧಾರಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಾಧನ ದೇಹವಿದು62-3ಸಾzನ ದೇಹವಿದುಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪವಿಹಿತಾವಿಹಿತವು ಈರ್ವಿಧ ಕರ್ಮದಿವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿಅಹಿಪಶಯ್ಯನ ಸನ್ಮಹಿಮೆಗಳರಿತು ವರಾಹನ ದಯದಲಿ ಪರಸುಖ ಪೊಂದಲು 1ಬೇಸರ ತೊರೆದು ಸುಶಾಸ್ತ್ರವನೋದಿಸಾಸಿರ ನಾಮನಭಾಸುರಗುಣಕ್ರಿಯರೂಪಗಳಈಶನ ದಯದಿ ಸದ್ಯೋಚಿಸಿ ಹಿಗ್ಗುತವಾಸುದೇವನೆ ಸರ್ವೇಶನೆಂದರಿಯಲು 2ವಿಷಯೀಕ್ಷಣಗಳು ಕ್ಷಣಸುಖವೀವುವುಶೇಷಗಿರೀಶನೆ ಅಕ್ಷಯಸುಖದನು ಸುಖಮಯನುದೋಷದೂರ ಶ್ರೀ ಲಕ್ಷ್ಮಿಯ ರಮಣನೆಪೋಷಕ ಮನೋಗತ ತಿಮಿರಕೆ ಪೂಷನು 3ತಾರಕಗುರುಉದಾರ ಸುಮನದಲಿದಾರಿಯ ತೋರಿಸಿ ಉದ್ಧರಿಸಲು ಬಹು ದಯದಿವಿಧಾತೃಸಮೀರಸುಮೇಧರು ಚಿಂತಿಪವಾರಿಧಿಶಯ್ಯ ಪರೇಶನು ತೋರುವ 4ಸಪ್ತ ಸುಸ್ಥಾನದಿ ಮರುತಾದಿಗಳೊಡೆಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನುಸುಪ್ತಿಜಾಗೃತ ಸ್ವಪ್ನಾದಿ ಕಾಲದಿ ಕಾಯುವಆಪ್ತ ಸುಹೃದನಿವಗಾರು ಈಡಿಲ್ಲವು 5ಪಂಚ ಸುನಾಡಿಯೋಳ್ ಪಂಚ ಸುವರ್ಣದಿಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯುವಿರಿಂಚಸಮೀರಸುಮೇಧರು ಬಹು ವಿಧಚಿಂತಿಸಿ ನಮಿಪ ಪ್ರಪಂಚದ ಒಡೆಯನು 6ಪದುಮದ ದಳಗಳು ಐದು ಮೂರುಂಟುಅದರ ಮೂಲದಿ ಇಹ ಸದಮಲ ಲಕ್ಷ್ಮೀಶಬಾಧಿಪ ಕರ್ಮವ ಸುಡುವ ಸಂಕರುಷಣಸದಮಲ ಪೊರೆಯುವ ಒಳಹೊರಗೆ 7ಶ್ರವಣ ಮನನ ಸುಧ್ಯಾನದ ಬಲವುಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿಶ್ರೀಶನ ಮಹಿಮೆಗಳರಿತು ಸದೃಷದಿಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದುಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯವಿಕಸಿತಾಬ್ಜಜತಾತಪ್ರಸನ್ನ ಶ್ರೀನಿವಾಸಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9
--------------
ಪ್ರಸನ್ನ ಶ್ರೀನಿವಾಸದಾಸರು