ಒಟ್ಟು 455 ಕಡೆಗಳಲ್ಲಿ , 67 ದಾಸರು , 412 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವನಿರೂಪಣೆ ಆಟವಾಡುವ ಕೂಸು ನಾನು | ಕೃಷ್ಣ ಕಾಟಬಡಿಸುವೆ ನಿನ್ನ ಸಾಧನವ ನೀಡೊ ಪ. ಗುರುಗಳು ತಂದು ನಿನಗೊಪ್ಪಿಸಿದರೆಲೊ ದೇವ ಸರಿಯ ಸಖನೆಂದು ಅನುಗಾಲವೂ ಸಿರಿಯರಸ ಕೇಳಿನ್ನು ಹಿರಿಯನೆ ನೀನಹುದೊ ಕಿರಿಯತನದಿಂದ ನಾ ಆಟವಾಡುವೆನೊ 1 ಹೃದಯವೆಂಬೋ ಪುಟ್ಟ ಮನೆಯ ಕಟ್ಟಿ ಅಲ್ಲಿ ಮುದದಿಂದ ಅಷ್ಟದಳ ಪದುಮ ರಚಿಸಿ ಒದಗಿ ಬರುತಿಹ ದುಷ್ಟ ಅರಿಗಳನೆ ನುಗ್ಗೊತ್ತಿ ಪದುಮನಾಭನೆ ನಿನ್ನ ಜೊತೆಯವರೊಡನೆ2 ಅಂಬರ ಮಧ್ಯದಲಿ ಬಿಂಬವೆನ್ನುವ ದಿವ್ಯ ಬೊಂಬೆಯನೆ ಇಟ್ಟು ಸಂಭ್ರಮದಿ ಶೃಂಗರಿಸಿ ಹಾಡಿ ಪಾಡಿ ಕುಣಿದು ಆಂಬ್ರಣಿನುತ ನಿನ್ನ ನೋಡಿ ದಣಿಯುವೆನೊ 3 ಪುಂಡರೀಕಾಕ್ಷ ನಿನ್ನ ಕೊಂಡಾÀಡುವೊ ಬಹಳ ತಿಂಡಿಯನೆ ನೀಡೆನಗೆ ಅನುಗಾಲವೂ ಭಂಡು ಮಾಡುವರೊ ಬರಿಕೈಲಿದ್ದರೆ ಸಖರು ಕಂಡು ಕಂಡೂ ನೀನು ಸಮ್ಮನಿರಬೇಡೊ 4 ಎಷ್ಟು ಜನ ಸ್ನೇಹಿತರೊ ಈ ಮನೆಯೊಳೆಲೆ ದೇವ ಪುಟ್ಟನಾಗಿರುವೆ ನಾನೆಲ್ಲರಿಗೆ ಇನ್ನು ಕೊಟ್ಟರೆ ಸಲಕರಣೆ ಆಟವಾಡುವೆ ಅಳದೆ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ತನುವ ತೊಳೆದ ಮಾತ್ರದಿಂದ ಜನರು ಶುದ್ಧರೆನಿಪರೆ ಪ ಮನದ ಶುದ್ಧಿ ಆದ ಹೊರತು ವನಜನಾಭನೊಲಿವನೇ ಅ.ಪ ದಿನಪನುದಯ ಕಾಲದಿಂದ ದಿನಪನಸ್ತದನ್ನೆಗಾ ಧನವಗಳಿಸುವಾಸೆಯಿಂದ ಮನಸಿನಲ್ಲಿ ಯೋಚಿಸಿ ಮನಸಿಜಾತನಾಟಕೆ ಪರವನಿತೆಯರ ಬೆರೆಯುತುರುಳಿ ಕನಸಿನಲ್ಲಿ ಹರಿಯ ಕಂಡೆ ಎನುತ ಪೇಳ್ವ ಮಾನವಾ 1 ಪರರು ನೋಡಿ ಮೆಚ್ಚಲೆಂದು ಬೆರಳಿನಿಂದ ಮಣಿಯನೆಣಿಸಿ ಶಿರವನೊಮ್ಮೆತೂಗಿ ತೂಗಿ ತೆರೆದು ಮುಚ್ಚಿ ಕಂಗಳ ಹಿರಿಯ ಭಕ್ತನಂತೆ ನಟಿಸಿ ಪರರ ಮೋಸಗೊಳಿಸಿ ದಣಿಸಿ ಬರಿಯಡಾಂಭಿಕ ಮಾಂಗಿರೀಶ್ವರನ ಶರಣನೆನಲು ಸಾಧ್ಯವೇ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವಿದು ನಿತ್ಯವಲ್ಲ ಮನವು ನಿಶ್ಚಲ ಅಲ್ಲ ಪ ಕನಸಿನಂತೆ ಜೀವಿತವೆಲ್ಲ ಇನಿತು ಶಾಂತಿಯ ತಾಣ ಅಲ್ಲ ಅ.ಪ ಜಲಚರಂಗಳು ವನಚರಂಗಳು ಅಲೆವ ಪಕ್ಷಿಕೀಟಕ್ರಿಮಿಗಳು ಕಲುಷ ವಿಮಲವೆಂಬುದನರಿಯವು ಮಾನವ ಜನ್ಮಕೆ 1 ಜನುಮಗಳೊಳು ಹಿರಿಯದೆನಿಪ ಮನುಜ ಜನ್ಮವನಾಂತ ಮೇಲೆ ವಿನಯ ನಯ ವಿಧೇಯತೆಯಿಂದ ವನಜನಾಭನ ನೆನೆಯದಿರ್ದೊಡೆ 2 ಭಜಿಪ ಭಕ್ತರ ಕೂಗಿಗೊಲಿದು ಗಜವ ಪಾಲಿಸಿದಂತೆ ಬಂದು ನಿಜಪದಂಗಳ ತೋರ್ಪ ಮಾಂಗಿರಿ ವಿಜಯರಂಗನ ಸನ್ನುತಿ ಗೈಯದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಪ್ಪ ಪಾಲಿಸಿಕೊಳ್ಳೊ ಜೀಯಾ ತಿಮ್ಮಪ್ಪ ವೆಂಕಟಗಿರಿರಾಯ ಪ. ಬಪ್ಪ ತನ್ನಯ ಭಕ್ತ ಜನರ ಬವಣೆಗಳ ನೊಪ್ಪನೆಂಬ ಬಿರುದಿಪ್ಪ ಭಾಸುರಕಾಯ ಅ.ಪ. ಅರವಿಂದ ಸಖನುದಯಿಸಲು ಅಜ ಗರನಂತೆ ಬೀಳುವ ತಪ್ಪು ಗುರು ಹಿರಿಯರ ಜರಿವಂಥ ತಪ್ಪು ನಿನ್ನ ಸ್ಮರಣೆಯ ಮಾಡದ ತಪ್ಪು ನಿತ್ಯ ಕರ್ಮಗಳ ಬಿಡುವ ತಪ್ಪು ಸ್ಥಿರ ಚಿತ್ತದಲಿ ನಿನ್ನ ಚರಣಾರಾಧಿಸದಂಥ 1 ಸಂಧ್ಯಾ ಕೃತ್ಯಗಳ ಕಾಲದಲಿ ಪರ ನಿಂದೆಯ ಮಾಡುವ ತಪ್ಪು ದಿವ್ಯ ಶ್ರೀ ಗಂಧ ಶ್ರೀ ತುಳಸಿ ಪುಷ್ಪಗಳ ತಾನೆ ತಂದಿರಿಸದ ಮಹಾ ತಪ್ಪು ಮಿಂದು ಮಡಿಯೊಳಿದ್ದು ಮರುಳನಾಗಿ ನಿಜ ಮಂದಗಮನೆಯಳ ಮಾತನಾಲಿಸುವಂಥ 2 ಮನ ವಚನಾದಿಗಳಿಂದ ಪರ ವನಿತೇರ ಸ್ಮರಿಸುವ ತಪ್ಪು ಪುಣ್ಯ ದಿನಗಳ ತ್ಯಜಿಸುವ ತಪ್ಪು ಪರ ಧನಾಭಿಲಾಶಿಯ ತಪ್ಪು ಕನಸಿಲಾದರು ನಿನ್ನ ನೆನೆಯದೆ ಸತಿಸುತ ತನುವೆನ್ನದೆಂಬ ಚಿಂತನೆಯಿಂದ ಬಳಲುವ 3 ನೇಮ ವ್ರತಗಳೆಲ್ಲ ಮರತು ಸೌಖ್ಯ ಕಾಮುಕನಾಗಿಹ ತಪ್ಪು ಬಹು ಪಾಮರವೃತ್ತಿಯ ತಪ್ಪು ನಿನ್ನ ದಯ ಶೋಭಿಸದಂಥ ತಪ್ಪು ಆ ಮಹಾ ಮಂತ್ರಗಳ ಜಪಿಸದ ತಪ್ಪು ಕಾಮಿನಿಯರ ಮೋಹಕ್ಕೊಳಗಾಗಿ ಬಳಲುವ 4 ನರಗುರಿಯಾದೆನ್ನ ತಪ್ಪ ನೋಡೆ ಹುರುಳು ಗಾಣುವುದುಂಟೆನಪ್ಪ ಸರ್ವ ಸ್ಥಿರ ಚರಾದಿಗಳೊಳಗಿಪ್ಪ ಲಕ್ಷ್ಮೀ ವರನಿತ್ಯ ಸತ್ಯ ಸಂಕಲ್ಪ ಪರಮ ಪಾವನ ಶ್ರೀಮದುರಗೇಂದ್ರ ಗಿರಿವಾಸ ಕರುಣದಿಂದೆನ್ನನುದ್ಧರಿಸಿ ರಕ್ಷಿಸು ಬೇಗ 5
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪು ಮಾಡಿದ್ದು ಸತ್ಯ ನಾನಪ್ಪ ಮಿಥ್ಯಲ್ಲ ತಿಮ್ಮಪ್ಪ ತಪ್ಪು ಮಾಡಿದ್ದು ಸತ್ಯ ನಾನಪ್ಪ ಪ ತಪ್ಪು ಎನ್ನದು ಗಪ್ಪು ಮಾಡಿ ಪರರೊಪ್ಪುವಂತೆ ಮಂದಿ ತಪ್ಪು ತೋರಿಸಿ ತಪ್ಪು ಒಪ್ಪಿಸುತಿಪ್ಪ ಮೃತ್ಯುಗೆ ಕಷ್ಟವಾಗ್ವುದ ತಪ್ಪಿಸೋ ತಪ್ಪ ಅ.ಪ ಪರರ ದುರ್ಗಣ ಗಿರಿಯು ಪರ್ವತಪ್ಪ ಬೆಳಸಿ ಎನ್ನಯ ಪರಮದುರ್ಗುಣ ತೃಣಕೆ ಸಮನಪ್ಪ ಮಾಡಿತೋರಿಸಿ ಜರೆದು ಬೀಳುವೆ ನರಕಗುಂಟಪ್ಪ ದುರಿತಶೇಷಪ್ಪ ಹರಿದುಕೊಳ್ಳದೆ ಮರವೆಲಿ ಮತ್ತು ಪರರ ಜರಿಯುತ ದುರಿತದಿಂದೆಮಪುರವ ಸಾಧಿಪೆ ತಿರುಗಿ ನೋಡದೆ ಅರಿವು ಕರುಣಿಸು ಶರಣರ್ಹೊನ್ನಪ್ಪ 1 ಎಷ್ಟೋ ಎಷ್ಟೋ ಪಾಪಕೋಟೆಪ್ಪಾ ಆಚರಿಸಿ ನಾನು ಕೆಟ್ಟು ಭ್ರಷ್ಟನಾದೆ ಕಲ್ಲಪ್ಪ ದುಷ್ಟತನದಿ ನಷ್ಟಮಾಡಿದೆ ಪರರ ಮಾನಪ್ಪ ಮುಷ್ಟಿದಾನಪ್ಪ ಹುಟ್ಟಿದಂದಿನಿಂದ ಕೊಟ್ಟು ಪಡಿಲಿಲ್ಲ ಶಿಷ್ಟರೊಲುಮೆಯ ನಿಷ್ಠೆಯಿಂ ನಾ ಸೃಷ್ಟಿಕರ್ತ ದೃಷ್ಟಿಲಿಂದಿನ್ನು ಹುಟ್ಟಿಸೆನ್ನಗೆ ನಿಷ್ಠ ಜ್ಞಾನಪ್ಪ 2 ಎಲ್ಲ ಪಾಪಕ್ಹೆಚ್ಚು ನಂದಪ್ಪ ಜಗದಿ ಎಲ್ಲ ಖುಲ್ಲರಿಗೆ ನಾನ್ಹಿರಿಯ ಬಾಲಪ್ಪ ಕೇಳಲೇನು ಕಳ್ಳ ಸುಳ್ಳತನದಿ ವೀರಪ್ಪ ಕಾಲಯಮನಪ್ಪ ಅಲ್ಲ ಅಹುದೆನ್ನುವುದನೆಲ್ಲ ಬಲ್ಲೆ ನೀ ಇಲ್ಲವೆನಿಪ ಸಾಧ್ಯವೆಲ್ಲಿದೆ ಎನಗೆ ಪುಲ್ಲನಯನ ಕ್ಷಮೆ ಪಾಲಿಸು ಸಿರಿಯರ ನಲ್ಲ ಶ್ರೀರಾಮ ಗೊಲ್ಲ ಕೃಷ್ಣಪ್ಪ 3
--------------
ರಾಮದಾಸರು
ತಪ್ಪುಗಳೊಪ್ಪುವೆ ಎನ್ನಲಿ ತಿಮ್ಮಪ್ಪ ನೀ ಕ್ಷಮಿಸಿ ರಕ್ಷಿಸು ಕರುಣದಲಿ ಪ. ಬುದ್ಧಿ ಹೀನನಾಗಿ ಎದ್ದು ಹಾಸಿಕೆಯಿಂದ ಮೇಧ್ಯವಸ್ತುಗಳೆಲ್ಲ ತಂದು ತಿಂದು ಮಧ್ಯಾನದಲಿ ನಿದ್ರೆ ಗೈದು ಮೋಹದಲಿ ನಿ- ಸತಿ ಸಂಗ ಗೈದಿಹೆನು 1 ಗುರು ಹಿರಿಯರ ಕೆಟ್ಟ ಗರುವದಿಂದ ನೀ ಕರಿಸಿ ಲೋಭದೊಳತಿಥಿಗಳ ಬಿಟ್ಟು ಪರ ಧನವನು ನಾನಾ ತರದಿಂದ ಕೊಂಡು ಶ್ರೀ ವರ ನೀನೆ ಗತಿಯೆಂದು ಸ್ಮರಿಸಿಕೊಂಡಿಹೆನು 2 ಇಂಥಾನಂತಾನಂತ ಪಾತಕಿಗಳ ರಮಾ ಕಾಂತ ನೀ ಕ್ಷಮಿಸಲು ಶಕ್ತನೆಂದು ಚಿಂತಿಸಿ ನುಡಿದೆನು ಲಾಲಿಸಿ ಕಾಯೊ ದು- ರಂತ ಮಹಿಮ ವೆಂಕಟೇಶ ನೀ ದಯದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾಮರಸ ಇನ್ನು ಕಾಂಬುವದೆಂದುಪನ್ನಗಾತನ ವಾಹನಾ ಪ ಕಣ್ಣು ಕಾಣದ ಹೀನ ಮಾನವನು ನಾನಾದೆಉನ್ನಂತ ಗುಣ ಪೂರ್ಣ ಕಾಯೋ ಯೆನ್ನ ಅ.ಪ. ಕರಿ ಮಕರಿ ಸೆಣಸ್ಯಾಡಿಹರುಷ ಕುಗ್ಗುತ ಮರುಕದೀ |ಹರಿ ಹರಿ ಹರಿ ಎಂದು | ಕರಿರಾಜ ಮೊರೆಯಿಡಲುತ್ವರದಿಂದ ನೀಯವನ | ಎಡರ ಹರಿಸಿದೆ ದೇವ 1 ಕುರುರಾಜ ಸಭೆಯಲಿ | ತರುಳೆ ದ್ರೌಪದಿ ಸೀರೆಕೌರವಾನುಜ ಸೆಳೆಯಲೂ |ನಾರಿಮಣಿ ನಿಜಪತಿಗಳೈ | ವರಲಿ ಮನ ತಿಳಿದುಹಿರಿಯ ಸಭಿಕರಿಗರುಹಲೂ | ವರ ವೃದ್ಧ ಭೀಷ್ಮಾದಿ |ಬಹುಮಂದಿ ಇರುತ ಕಾಲವ ಕಳೆಯಲು |ಆರಾದರೂ ಬಂದು ಪಾರು ಮಾಡಿದರೇನೊಶೌರಿ ನಿನ್ನನು ಕರೆಯೆ | ಪಾರು ಮಾಡಿದ ದೇವ 2 ಪಾರುಗಾಣಿಸೊ ಎನ್ನ | ಮೂರು ವಿಧ ತಾಪಗಳಮಾರ ಜನಕನೆ ಪ್ರಾರ್ಥಿಪೇ ದೂರ ಮಾಡಿಸೊ ಹರಿಯೆ | ಮೂರು ಗುಣದಿಂದೆನ್ನಬಾರಿ ಬಾರಿಗು ಬೇಡುವೆ |ದುರುಳ ತತ್ವರ ಕಾರ್ಯ | ಕಡೆಗೈಸಿ ಶ್ರೀ ಹರಿಯೆಸುರರ ಸಹಕಾರ ನೀಡೊ |ಗುರುಗಳಂತರ್ಯಾಮಿ | ಗುರು ಗೋವಿಂದ ವಿಠಲನೆಕರುಣದಲಿ ತವ ಚರಣ | ಸರಸಿಜವ ತೋರೋ 3
--------------
ಗುರುಗೋವಿಂದವಿಠಲರು
ತಾಮರಸ ನೆರೆ ನಂಬಿದೆ ಪ ಕಾಮಕ್ರೋಧವ ಕಳೆದು ನಿನ್ನ ನಾಮಾಮೃತವ ಪ್ರೇಮದಲಿ ಎನಗುಣಿಸೋ ಸ್ವಾಮಿ ಅ.ಪ. ಉಪರಾಗ ದಶಮಿ ದ್ವಾದಶಿ ದಿವಸ ಮೊದಲಾದ ಉಪೇಕ್ಷೆ ಮಾಡಿ ಕಳೆದೆ ಉಪಕಾರಯೆಂದು ನಿಜ ಉಕ್ತಿ ಪೇಳಿದರೆನಗೆ ಅಪಕಾರ ಕಾಣುತಿದೆಕೋ ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆ ತಪ ವೃದ್ಧರನ್ನು ಹಳಿವೆ ಸ್ವಪನದೊಳಗಾದರೊ ವೈರಾಗ್ಯ ಬಯಸದಲೆ ಕಪಟ ಮನುಜರೊಳಾಡಿ ನಿನ್ನ ಮರೆದೆ ಸ್ವಾಮೀ 1 ಮಾರನ ಉಪಟಳಾಕಾರದಲಿ ನಾ ಬಲು ಪೋರ ಬುದ್ಧಿಯನು ಮಾಡಿ ಆರು ಇಲ್ಲದ ಸಮಯದೊಳವಳು ಕಣ್ಣು ಸನ್ನೆಯ ಮಾಡಿ ಕೋರಿದ್ದು ಇತ್ತು ನೀಡಿ ಕ್ರೂರಮಾನವರೊಳಗೆ ಆಡಿ ವಾರಿಜನಾಭ ನಿನ್ನ ಆರಾಧನೆಯ ಮರೆದು ಧಾರಿಣೀ ಭಾರದೆ ಪರಲೋಕ ಮರೆದೆ 2 ಭೂಸುರರು ಚಂಡಾಲ ಜಾತಿಯೆನ್ನದೆ ಬಲು ಹೇಸಿಕಿಲ್ಲದೆ ತಿರುಗುವೆ ಪರಿ ವೇಷವನು ಧರಿಸಿ ಮೆರೆದೇ ಆಶೆಯುಳ್ಳ ಮಹಪಿಶಾಚಿಗೊಳಗಾಗಿ ಹರಿ ದಾಸ ಸಹವಾಸ ಜರೆದೆ ವಾಸುಕೀಶಯನ ವಸುದೇವತನಯನೆ ನಿನ್ನ ದಾಸನೆನ್ನಿಸದೆ ಅಪಹಾಸ ಮಾನವನಾದೆ 3 ಹರಿದಾಸರ ಬಳಿ ಅರಘಳಿಗೆ ಕೂತರೆ ಶಿರವ್ಯಾಧಿಯೆಂದೇಳುವೇ ದುರುಳ ದುರ್ವಾರ್ತೆಗಳ ಪೇಳಲು ಹಸಿವು ತೃಷೆ ಮರೆದು ಲಾಲಿಸಿ ಕೇಳುವೆ ತರುಣಿ ಮಕ್ಕಳು ಎನ್ನ ಪರಿಪರಿ ಬೈದರೆ ಪರಮ ಹರುಷವ ತಾಳುವೆ ಗುರುಹಿರಿಯರೊಂದುತ್ತರವನಾಡಲು ಕೇಳಿ ಧರಿಸಲಾರದೆ ನಾನು ಮತ್ಸರಿಪೆನವರೊಡನೇ 4 ನಾ ಮಾಡಿದಪರಾಧ ಎಣಿಸಿ ಬರೆದರೆ ಈ ಭೂಮಂಡಲವು ಸಾಲದಿಹುದೊ ಕ್ಷಮೆಯೊಳಗುಳ್ಳ ದುರ್ಮತಿ ಕೂಡಿಡಲು ಈ ಮತಿಯ ಅದು ಪೋಲದು ಹೋಮ ಜಪತಪಗಳನು ಎಷ್ಟು ಮಾಡಲು ಪಾಪ ಸ್ತೋಮ ಎಂದಿಗು ಪೋಗದೊ ಸಾಮಜವರದ ಜಗನ್ನಾಥ ವಿಠಲ ನಿನ್ನ ಕಾಣಿ 5
--------------
ಜಗನ್ನಾಥದಾಸರು
ತಿರುಮಲೇಶ ಹರಿ ವಿಠ್ಠಲ | ಪೊರೆಯ ಬೇಕಿವನಾ ಪ ಕರುಣಾಳು ನೀನೆಂದು | ಪ್ರಾರ್ಥಿಸುವೆ ಹರಿಯೇಅ.ಪ. ತರಳನಿವ ಸಾಧನದ | ಸತ್ಪಥವ ಸಾಧಿಸಲುಹರಿದಾಸ ದೀಕ್ಷೆಯನು | ಕಾಂಕ್ಷಿಸುವ ಹರಿಯೇ |ಸರ್ವಬಗೆಯಲಿ ಇದಕೆ | ಪರಿಪರಿಯ ವಿಘ್ನಗಳಪರಿಹರಿಸಿ ಪೊರೆ ಇವನಾ | ಸರ್ವಾಂತರಾತ್ಮಾ 1 ಮರುತಮತ ದೀಕ್ಷೆಯಲಿ | ಇರುವಂತೆ ಕರುಣಿಸುತಪರತತ್ವ ಸಾರವನೆ | ಅರುಹುತಲಿ ಪೊರೆಯೋ |ವರಪಂಚ ಭೇಧಗಳ | ತರತರಾತ್ಮಕದರಿವುನೆರವಾಗಲಿವನೀಗೆ | ಗುರುದಯದಿ ಹರಿಯೇ 2 ಕಾಕುಸಂಗವ ಕೊಡದೆ | ಸತ್ಸಂಗ ಪ್ರಾಪಿಸುತಲೌಕಿಕೋನ್ನತಿ ಕೊಟ್ಟು | ನೀಕಾಯೊ ಹರಿಯೇ |ಪ್ರಾಕ್ಕು ಕರ್ಮವ ಕಳೆದು | ಬೇಕಾದ ವರಗಳನುನೀ ಕೊಟ್ಟು ಕಾಯೊ ಹರಿ | ಸಾಕಾರ ಮೂರ್ತೇ 3 ಗುರು ಹಿರಿಯ ಸೇವೆಯಲಿ | ಪರಮರತಿಯನೆ ಕೊಟ್ಟುಹರಿಗುರು ಚರಿತೆಗಳ | ಬರೆವ ಕೌಶಲವಾ |ಕರುಣಿಸೀ ಸತ್ಪಥದ | ಚರಿಪಂತೆಯ್ಯುಪ್ಪುದುಮರುತಾಂತರಾತ್ಮಕನೆ | ಉರುಗಾದ್ರಿ ನಿಲಯಾ 4 ಸರ್ವೇಶ ಸರ್ವಜ್ಞ | ಸರ್ವವ್ಯಾಪ್ತನೆ ಸ್ವಾಮಿನಿರ್ವಿಕಾರನೆ ದೇವಾ | ಶರ್ವಾದಿ ವಂದ್ಯಾ |ದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇಸರ್ವ ಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿರುಮಲೇಶವಿಠಲಾ | ಪೊರೆಯ ಬೇಕಿವಳಾ ಪ ನಿರುತ ನಿನ್ನಯ ನಾಮ | ಸ್ಮರಣೆ ಸುಖ ಕೊಡುತಾ ಅ.ಪ. ಸ್ವಪ್ನದಲಿ ತವರೂಪ | ಕನ್ಯೆತಾ ಕಾಣುತ್ತಾಉನ್ನಂತ ಹರ್ಷದಲಿ | ಭಿನ್ನವಿಸಿ ಇಹಳೋ |ಪನ್ನಗಾರಿಧ್ವಜನೆ | ಮನ್ನಿಸುತ ಮನ್ಮಾತಕನ್ಯೆಗಭಯದನಾಗಿ | ನನ್ನೆಯಿಂ ಸಲಹೋ 1 ಶೂನ್ಯ | ಭೋಧಾತ್ಮ ಶ್ರೀ ಹರಿಯೆಭೇದಪಂಚಕ ವರುಹಿ | ಮಧ್ವಮತ ದೀಕ್ಷಾ |ಸಾಧಿಸುವುದಿವಳಲ್ಲಿ | ಹೇದಯಾಂಬುದೆ ಪೂರ್ಣಭೋದಮುನಿಯ ಸನ್ನುತನೆ | ವೇದಾಂತ ವೇದ್ಯಾ 2 ವ್ರಾತ ಸಮತೆಲಿಯುಂಬಭೂತಿಕರುಣಿಸು ಹರಿಯೆ | ವಾತಾಂತರಾತ್ಮಾ |ಧಾತಾಂಡ ಸೃಜಿಸಿ ಹರಿ | ಓತ ಪ್ರೋತನು ಇರಲುಮಾತನೊಪ್ಪಿಸೆ ನಿನಗೆ | ಏತರವ ನಾನೂ 3 ಹರಿಗುರೂ ಸದ್ಭಕ್ತಿ | ಹಿರಿಯರಾ ಸತ್ಸೇವೆಕರುಣಿಸುತ ಸಾಧನದ | ವರಮಾರ್ಗ ತೋರೋ |ಶರಣಜನ ವಾತ್ಸಲ್ಯ | ಬಿರಿದು ಪೊತ್ತಾಮೇಲೆಕರುಣಾಬ್ಧಿಪೂರ್ಣೆಂದು | ಕರಪಿಡಿಯೊ ಇವಳಾ 4 ಸಾಮಗಾನವಿಲೋಲ | ಭಾಮೆರುಕ್ಷ್ಮಿಣಿಲೋಲಸಾಮಾಜಾವರವರದ | ಭೂಮಗುಣಪೂರ್ಣ |ಕಾಮಾರಿಸನ್ನುತನೆ | ಕಾಮಿತಪ್ರದನಾಗೊಕಾಮನಯ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿಳಿದು ನೋಡಲೆ ಮನವೆ ತೀವ್ರ ತಾಮಸವೇಕೆ ತಿಳಿದುಕೋನಿನ್ನ ನೀನು ತಿಳಿಯೆ ಮಾಯೆಗಳಿಲ್ಲ ತಿಳಿಯೆ ಶಿವನಾಗುತಿಹೆಬಲುಮರವೆ ಯಾಕೆ ಪಾಪಿ ಮನವೆ ಪ ಶೂನ್ಯ ದುರಿತ ಭಂಗತರ ತರಂಗ ಮೂರ್ತಿಜಂಗಮನೆ ನೆಲೆಸಿಹನು ಜನಿಸಿನೀ ನಿನ್ನೊಳಗೆ ಕಣ್ಗಾಣದಿಪ್ಪೆ ಗುರುವ ಮನವೆ 1 ಮಾಯೆ ಮೋಹಕೆ ಸಿಲುಕಿ ಮಗ್ನನಾಗಿರುತಿಹೆ ಕಾಯವಿದು ನಿನಗೆ ಸ್ಥಿರವೇಆಯಾಸಂಬಡಬಹುದೆ ಅಲ್ಪ ಮತಿಗಳ ಕೂಡಿ ನ್ಯಾಯವೆ ನಿನಗೆರಾಯ ನಾನೆಂಬ ಹೆಮ್ಮೆಯ ತಾಳ್ದು ರತಿ ಬಹಳ ಸ್ತ್ರೀಯರಲಿ ಸೊಗಸಬಹುದೇಮಾಯಕಿಂತಕಟ ನೀ ಶಿಲ್ಕಿ ಒಳಗಾಗುವುದುಮಾಯವೋ ಇದು ಮಹಿಮೆಯೋ ಮನವೇ 2 ಎನ್ನ ಸತಿಸುತ ಬಂಧು ಎನ್ನ ಗೃಹವು ಇದೆಂದು ಬನ್ನಬಡುತಿಹೆ ಯಾತಕೆನಿನ್ನೊಳಗೆ ಇಹ ವಸ್ತು ನೀನೆ ಕಾಣದಲಿರೆ ಮನ್ನಿಸಾ ಗುರುಹಿರಿಯರಉನ್ನತ ಕಟಾಕ್ಷದಲಿ ಒಳಗೆ ದೃಷ್ಟಿಸಿ ಕಂಡು ನಿನ್ನೊಳಗೆ ಪುಳಕನಾಗುಚಿನ್ಮಯ ಚಿದಾನಂದ ಚಿದ್ರೂಪ ತಾನೆಂದುನಿನ್ನ ಸಂಶಯ ಕಳೆಯೋ ಮನವೇ 3
--------------
ಚಿದಾನಂದ ಅವಧೂತರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ