ಒಟ್ಟು 2697 ಕಡೆಗಳಲ್ಲಿ , 122 ದಾಸರು , 1910 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರಥಿ ವಿಶ್ವಾಧೀಶ್ವರ ವಿಜಯ ಪಾಲಿಸು ಸತತಂ ವಿಜಯಧ್ವಜ ವೆಂಕಟಗಿರಿ ನಾಯಕಿ ಅಜಿತ ಸಕಲಸುರವೈರಿ ವಿದಾರಣ ಪ. ವೀರಾಗ್ರಣಿ ರಘುವೀರ ವಿದಾರಿತ ಘೋರದಿತಿಜ ಪರಿವಾರ ಶೌರಿ ಕಾರಣ ಧಾರಣ ವದನ ಖರಾರಿ ಕೃಪಾಕರ್ರ(?) 1 ಲಕ್ಷ್ಮಣ ಪೂರ್ವಜ ಋಕ್ಷವಿನುತ ಕಮ ಲಾಕ್ಷ ಶೂರ್ಪನಖ ಶಿಕ್ಷಾ ದಕ್ಷಿಣ ದುರಿತಾರಣ್ಯ ರಮಾಸ್ಪದವಕ್ಷಸ್ಥಳ ವಿಭವೈಕನಿಭೆ ಜಯ ದ್ವಿದಶಾಕ್ಷ ವಿಘಾತನ 2 ರಾಮಾಭಿದ ರಮಣೀಯ ಗುಣಾರ್ಣವ ಕಾಮಿತ ಫಲದಾವನಭೂಮಾ ಭವಾಮಯಹರ ಭಜಕಾಶ್ರಯಧಾಮಾ ಮಾರುತಿಕೃತ ಕಾಮಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಾಲವನು ಕೊಳುವಾಗ ಸಡಗರದ ಸಿರಿಯೋ ಸಾಲಿಗನು ಬಂದು ಕೆಳಲಾಗಡರಿತುರಿಯೋ ಪ ಡಬ್ಬುಗೈದಿದ್ದವನೊಳ್ ಎಬ್ಬಿಸಿ ಹಣತಂದು ಉಬ್ಬುಬ್ಬಿ ಸತಿಮುಂದೆ ಹೆಬ್ಬುಲಿಯ ತೆರದಿ ಒಬ್ಬರೀಡಿಲ್ಲೆನಗೆಂದಬ್ಬರಿಸುತ್ಹೇಳುವನು ತಬ್ಬಲು ಧಣಿಬಂದು ಮಬ್ಬಿನೊಳೆದ್ದೋಡ್ವ 1 ಹಣತಂದ ದಿನ ಅವನ ಮನೆಯೊಳಗೆ ಹಬ್ಬೂಟ ವನಿತೆಯೊಳೆನುತಿಹ್ಯನು ನನಗಾರು ಸರಿಯೆ ಹಣಕೊಟ್ಟ ಧಣಿಬಂದು ಮನೆಮುಂದೆ ಕುಳ್ಳಿರಲು ಹೆಣಇರುವ ಮನೆಗಿಂತ ಘನದು:ಖಕೇಳೊ 2 ಕಡುಹಿಗ್ಗಿನಿಂದೊಸನ ಒಡವೆ ಉದ್ದರಿತಂದು ಬಡಿವಾರ ಬಿಂಕ ಕೊಡುವ ವಾಯಿದೆ ಕಳೆದು ಬಡಿಗೆಯು ಬರಲಾಗ ಮಡದಿ ಸತ್ತವನಂತೆ ಇಡುವ ತಲಿ ಬುವಿಗೆ 3 ಅಕ್ಕಿಬೇಳೆ ಬೆಲ್ಲತಂದು ಅಕ್ಕರದಿಂ ಸತಿಸುತರಿ ಗಿಕ್ಕುವಾಗ ನೋಡವನವಕ್ಕರಂಗಳನು ಮಕ್ಕಮಾರಿಯಂದದಿ ತಿಕ್ಕುವಾಗಕೊಟ್ಟವರು ಸಿಕ್ಕದೆ ತಿರುಗುವನು ಬಿಕ್ಕೆ ಬೇಡುಣುತ 4 ಮನೆಮುರಿದು ಹೋಗಲಿ ವನಿತೆಯರು ಜರಿಯಲಿ ಎನಗೆಡರು ಬಂದೊದಗಿ ಅನ್ನ ಸಿಗದಿರಲಿ ಘನಮಹಿಮ ಶ್ರೀರಾಮ ಮಣಿದುಬೇಡುವೆ ನಿನಗೆ ಋಣದ ಬಾಳುವೆ ಬೇಡ ಜನಮಜನುಮಗಳಲಿ 5
--------------
ರಾಮದಾಸರು
ಸಾವಧಾನವಾಗಿ ನೋಡಿ ನಿಜ ಭಾವಬಲಿದು ನೋಡಲಿಕ್ಯದೆ ವಸ್ತು ಸಹಜ ಧ್ರುವ ಹತ್ತಿಲಿದೆ ತಾ ಸರ್ವಕಾಲ ಚಿತ್ತೊಂದೆ ಮಾಡಿ ನೋಡು ಗುರುಪಾದ ಕಮಲ ನೆತ್ತಿಯೊಳಗದೆ ನಿಶ್ಚಲ ಉತ್ತಮೋತ್ತವಾದ ಸದ್ವಸ್ತು ಅನುಕೂಲ 1 ಅತ್ತಿತ್ತಲೆ ನೋಡಲಾಗದು ತುಂಬಿ ತುಳುಕುವದು ಸುತ್ತೆ ಸೂಸ್ಯಾಡುತಲಿಹುದು ಮತ್ತೆ ಉನ್ಮನವಾಗಿ ತನ್ನೊಳು ತಾ ನೋಡುವದು2 ಸಾರವೆ ಅದೆ ಸತ್ಯನೋಡಿ ಮಿಥ್ಯ ಭ್ರಾಂತನೆ ಈಡಾಡಿ ಗುರುಕೃಪೆಯಿಂದ ನಿಜಗೂಡಿ ತರಳ ಮಹಿಪತಿ ಹರುಷಗೈದ ಬೆರೆದಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿತಗಿರೀಶ ಶ್ರೀಪತಿಯೆ ಕಾಯೋ ಯನ್ನಾ | ಕರುಣಾರಸ ಪೂರ್ಣ ಪ ಭವ ಭಂಗಾ ಅ.ಪ. ವರುಷಾ | ಕಾಣಲಿಲ್ಲ ಹರುಷಾ ||ಇಂದಿರೇಶ ತವ ಚರಣ ಸನ್ನಿಕರ್ಷಾ | ಎಂದಾಗುದೊ ಶ್ರೀಶಾ ||ವಂದಿಸೂವೆನೊ ನಾನು ನಿನ್ನ ಅನಿಶಾ | ಶ್ವೇತಾದ್ರಿ ವಾಸಾ 1 ಕಮಲ ಕಾಂಬುವಂಥ ಹದನಾ | ತೋರಿಸೊ ಜಿತ ಮದನಾ 2 ಸುರುಚಿರಾಂಗ ಶ್ರೀ ಬಿಳಿಗಿರಿಯ ರಂಗಾ | ಎನ್ನಂತರಂಗಾ ||ಮುರ ವಿರೋಧಿ ಸುರ ಸಾರ್ವಭೌಮ ಹರಿಯೇ | ಕರಿರಾಜನು ಕರಿಯೇ ||ತ್ವರದೊಳುದಿಸ್ಯವನ ಕಾಯ್ದ ದೊರೆಯೇ | ಹೀಗೆನ್ನ ಪೊರೆಯೆ ||ಗುರು ಗೋವಿಂದ ವಿಠಲ ಶ್ರೀಹರಿಯೇ | ನಿನ್ನುಪಕೃತಿ ತಾ ಮರೆಯೆ 3
--------------
ಗುರುಗೋವಿಂದವಿಠಲರು
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು
ಸಿರಿ | ವಕ್ಷ ಕಮಲದಳಾಕ್ಷ ಕೇಶವ | ಪಕ್ಷಿವರಗಮನಾ ರಕ್ಷಿಸೋ ಎನ್ನಾ ಪ ಭಂಗ ಬಿಡಿಸಿದ ವಂಗ ವಿಷಯಕ | ರಂಗ ತಿರುವೆಂಗಳೇಶನೆ | ಇಂಗಿತವನರಿದು | ಭವ ಭಯ | ಹಿಂಗಿಸುವ ಸಾಧು ಸಂಗವನುದಿನ | ಸಂಗಡಿಸು ಎನ್ನಗೆ 1 ಧ್ಯಾನ ಮೌನಗಳೇನು ಅರಿಯದ | ಹೀನ ನಾನೆಂದು ಅನತಾದ ಮಾನ | ನಿನ್ನದಲೈ | ಖೂನಿಡುವ ಶೃತಿಗೇನು ಗತಿಯಮ್ಮ | ನೀನುದ್ಧರಸದೇ 2 ನಂದ ಕಂದ ಗೋವಿಂದ ಸಚ್ಚಿದಾ | ನಂದ ಅನಿಮಿತ್ತ ಬಂಧು ಯೆಂಬುವಾ | ನೇಂದ್ರಿಯದ ನೆಲಿಗೇ || ಕುಂದ ಕೊರತೆಯಾ | ಇಂದು ಪಾಲಿಸು | ತಂದೆ ಮಹಿಪತಿ ನಂದನೊಡಿಯ ಮು | ಕುಂದ ಮುನಿವಂದ್ಯನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಿರಿ ನರಸಿಂಗನ ಪಾಡಿರೊ | ಮಂಗಳಮೂರುತಿ ಡಿಂಗರಿಗರ ಹೃಸ್ಸಂಗ ಕರುಣಾತರಂಗಾ ಪ ಮೊರೆಯಿಡಾ ಬಂದ | ಕಂಭದೊಳಿಂದ | ಲೋಕಸ್ವಾಮಿ | ಅಂತರ್ಯಾಮಿ || ಕರುಳಮಾಲೆ ಇಟ್ಟಾ | ಕೊರಳೊಳು ದಿಟ್ಟಾ | ಜಯವೆನುತಿರೆ ಮೆರೆದಾ | ಪ್ರಹ್ಲಾದವರದಾ 1 ಕೊಡುವನು ಚಲುವಾ | ಭಕುತರಿಗೊಲಿವ | ಹರಿ ನಮಗೆಲ್ಲಾ | ಭಕ್ತವತ್ಸಲಾ || ಗುಣಾಂಬುಧಿ ತೇಜ | ರಾಜಾಧಿ ರಾಜ | ಕರ್ತನು ಸಖ್ಯ 2 ಕನಕಮುನೀಶ್ವರ ತಪವನು ಮಾಡಲು ಮೆಚ್ಚಿ | ಬಂದನು ಮೆಚ್ಚಿ | ಕನಕ ವರುಷವನು ಗರೆವದು ಅಂದಿನ ದಿನದಿ | ಆನಂದವನಧಿ | ಕನಕ ನೃಕೇಸರಿ ಎನಿಸಿದಾ ಅಂದಿನಾರಭ್ಯಾ | ಈತನೆ ಸಭ್ಯಾ | ನುತಿಸಲು ಸುಳಿವಾ 3 ಇದು ಪುಸಿಯಲ್ಲಾ | ವೇದಾ | ಪೇಳ್ವದು ಮೋದಾ || ಅವನೇ ದನುಜಾ | ನಮಗೀತ ತಂದೆ 4 ನಿಧಿಯೊಳು ಧನದಾ | ದಿಕ್ಕಿಲಗಾಧಾ | ಮುನಿಜನ ಸಮ್ಮತ ಶ್ರುತಿ ಉಕ್ತಿಗಳಲ್ಲಿ ಅಕ್ಕು | ಕೇಳೀವಾಕು | ಮಾಡಲು ಭಕುತಿ | ಉಂಟು ವಿರಕುತಿ | ವಿಠ್ಠಲ ನರಸಿಂಗಾ | ರಿಪುಗಜ ಸಿಂಗಾ 5
--------------
ವಿಜಯದಾಸ
ಸಿರಿ ಪಾರ್ಥಸಖನಾ ಗುಣಕೀರ್ತನೆ ಮಾಡಲು ಪ ಯಂಟೆಂಟೆರಡುನಾಲ್ಕು ಸಾವಿರ ನುಡಿಯಲಿ ಯಂಟೆಂಟೆರಡು ರೂಪದಲಿ ಯಂಟೆಂಟೆರಡು ಮೂರೈದು ವ್ಯಂಜನದಿ ಯಂಟೆಂಟು ಮತ್ತೆಂಟು ಸ್ವರವ ತಿಳಿ 1 ಕಮಲ ಕರ್ಣಿಕೆಯಲ್ಲಿ ಯಂಟೆಂಟೆರಡರ ನಾಲ್ಕು ಸ್ತಂಭರಥ ಮಂಟಪದೊಳಗಿನ ವೆಂಕಟನ ನೋಡು2 ಯಂಟೆಂಟು ಕರಗಳಲಿ ಯಂಟಾಯುಧ ಪಿಡಿದು ಯಂಟು ದಿಕ್ಕಿನಲಿ ತಿರುಗುತಲಿ ಯಂಟು ವಿಧದಿ ಪ್ರೇರಣೆ ಮಾಡುವ ನಮ್ಮಾ ನೆಂಟ ತಂದೆಗುರುಗೋಪಾಲವಿಠಲನು 3
--------------
ಗುರುತಂದೆವರದಗೋಪಾಲವಿಠಲರು
ಸಿರಿನರಸಿಂಹನೆ ಕರಿಗಿರಿ ನಿಲಯನೆ ಶಿರಬಾಗಿ ನಮಿಸುವೆ ಭಕ್ತಿಯಲಿ ಪ ಕರುಣಾಸಾಗರ ನಿನ್ನ ಚರಣ ಕಮಲದಲಿ ಸ್ಥಿರ ಸ್ಮರಣೆಯ ಕೊಟ್ಟು ಸಲಹೆನ್ನನು ಅ.ಪ. ನೆಲೆಗೆ ನಿಲ್ಲದು ಮನ ಹಲವಕ್ಕೆ ಹರಿವುದು ಸುಲಲಿತವಲ್ಲವು ಸಾಧನವು ನಳಿನನಾಭನೆ ಎನ್ನ ಕುಲದೈವ ನಾರಸಿಂಹ ಒಲಿದು ನೀನಾಗಿಯೆ ಸಲಹುವುದು 1 ಅತ್ತಿತ್ತ ಓಡುವ ಚಿತ್ತವ ನಿಲಿಸುವ ಶಕ್ತಿಯು ಎನಗಿಲ್ಲ ಲವಲೇಶವು | ಚಿತ್ತಜಪಿತ ಎನ್ನ ಚಿತ್ತದೊಳಗೆ ನಿಂತು ಭಕ್ತಿಯ ಕರುಣಿಸೋ ತವ ಪಾದದಿ 2 ನೆಲದ ಮೇಲಲೆವಾಗಯಲರುಣಿ ಗಮನವು ಹಲವು ರೀತಿಯಲಿ ವಕ್ರವಲೆ ಘಳಿಲನೆ ತನ್ನಯ ಬಿಲದೊಳು ಪೋಪಾಗ ಸಲೆ ನೇರವಲ್ಲವೆ ಸಿರಿವರನೇ 3 ವನ ವಿಷಯಗಳಲದಲಿ ಬರಲಾರವು ಘನಭಕ್ತಿರಸದಿಂದ ತೊಳೆದು ನಿರ್ಮಲಗೈದು ಮನವ ನೀ ಮಡಿ ಮಾಡು ಘನಮಹಿಮ 4 ಕಳೆಗಳೆ ಬೆಳೆದಿವೆ ಮನಕ್ಷೇತ್ರದೊಳಗೆಲ್ಲಾ ಫಲ ಸಸ್ಯಗಳಲ್ಲಿ ಸ್ಥಳವಿಲ್ಲವು | ಕಳೆಗಳ ಕಳೆದು ಉತ್ತಮ ಫಲ ಕೊಡುವಂಥ ಬೆಳೆಯ ನೀನು ಬೆಳಸಯ್ಯಾ ಕರಿಗಿರೀಶ 5
--------------
ವರಾವಾಣಿರಾಮರಾಯದಾಸರು
ಸೀತಾದೇವಿಯೆ ಶ್ರಿತ ಸಂಜೀವಿಯೆ ಪ ಮಾತೆಯೆ ಪಾಲಿಸು ಮೊರೆಯನು ಲಾಲಿಸು ಅ.ಪ ಜನಕರಾಯನ ಪುತ್ರಿ ಜಗದೇಕ ಪವಿತ್ರಿ ಜನನಿ ಜನಯಿತ್ರಿ ಘನ ಶೋಭನ ಗಾತ್ರಿ 1 ದುರ್ಜನ ದೈತ್ಯವಿದಾರೆ ದೂರೀಕೃತ ಸಂಸಾರೆ2 ಸಮ್ಮತದೊಳಿರಿಸು ದುರ್ಮತವ ಬಿಡಿಸು ಸು | ಬ್ರಹ್ಮ ಜ್ಞಾನವ ಪಾಲಿಸು ಮರ್ಮವನು ಬೋಧಿಸು3 ವನಜದ ಸೇವೆ ಸದಾ ಎನಗೀಯೆ ತಾಯೆ 4 ಕಲುಷ ಪರಿಹಾರಿಣಿ ಕಮಲಪಾಣಿ ರುಕ್ಮಣಿ ಜಲಜಾಕ್ಷ ಗುರುರಾಮ ವಿಠಲನ ಪಟ್ಟದ ರಾಣಿ5
--------------
ಗುರುರಾಮವಿಠಲ
ಸೀತೆ ಸದ್ಗುಣ ಗಣಗಳ ವ್ರಾತೇ ಪರಿಪಾಲಿಸು ಮಾತೇ ಪ ವಾತ ಜನನಿ ನಿರ್ಧೂತ ಕಲ್ಮಷೇ ಅ.ಪ. ನೀರೋಳು ಓಲ್ಯಾಡುತ ಹರಿ ಬರಲೂ | ವೇದಾಭಿಧೆ ಇರಲೂವಾರಿಜಾಕ್ಷನು ಭಾರವನ್ಹೊರಲೂ | ವೇದವತಿ ನೀನಿರಲುಭೂರಿ ವರಹ ರೂಪವ ಕೊಳ್ಳಲು | ಧಾತ್ರಿ ರೂಪಿ ಇರಲುಸಾರಸಾಕ್ಷಿ ನೀ ಲಕುಮಿ ರೂಪದಲಿ | ನಾರಸಿಂಹನನ ಆರಾಧಿಸಿದೇ 1 ಬಲಿಯನ್ನು ವಂಚಿಸಿ ಹರಿ ಬಂದೂ | ಸುಖಾಭಿಧೆಯಂದೂತಲೆಯ ಗಡಿಕಾನು ಅವನೆಂದು | ಹರಿಣಿಯಾದೆ ಅಂದೂತಲೆ ಹತ್ತರವನ ಅಳಿಯಲು ಬಂದು | ಜನಕಾತ್ಮಜೆ ಅಂದೂಕಳುವಿನಿಂದಪಾಲ್ ಬೆಣ್ಣೆಯಮೆಲ್ಲುವ |ಗೊಲ್ಲನ ವಲಿಸಿದಿ ಚೆಲ್ವ ರುಕ್ಮಣೀ 2 ತ್ರಿಪುರರ ವ್ರತವನಳಿದವಗೇ | ವಲ್ಲಭೆ ದೇವತಿಯಾಗೇಸುಫಲಾ ರಾವುತನಾದವನಿಗೇ | ರಾಣಿ ಪ್ರಭಾ ಆಗೇವಿಪುಳ ರೂಪಗಳ ತೋರ್ದವಗೇ | ವಿಪುಳ ರೂಪಿಯಾಗೇಚಪಲಾಕ್ಷಿಯೆ ಗುರು ಗೋವಿಂದ ವಿಠಲನ | ಸಫಲಗೈಸು ಮಮ ಹೃತ್ಕಮಲದಲಿ 3
--------------
ಗುರುಗೋವಿಂದವಿಠಲರು
ಸೀಸಪದ್ಯ ಸುಂದರಾಂಗನ ಪಾದಕೊಂದಿಸುತ ಭಕ್ತಿಯಲಿ ಮಂದರೋದ್ಧಾರ ಮುಚುಕುಂದ ವರದ ನೆಂದು ಸ್ತುತಿಸುವ ಭಕ್ತವೃಂದವನು ರಕ್ಷಿಸುವ ಕುಂದನೆಣಿಸದಲೆ ನಾರಸಿಂಹ ಹರಿಯು 1 ಇಂದಿರಾರಮಣಗೆ ಜಯ ಗೋವಿಂದ ಗೋಪಕುಮಾರ- ನೆಂದವರ ಬಂಧನವ ಬಿಡಿಸಿ ಕಾಯ್ವ ಕಂದರ್ಪಜನಕ ಕಮಲಾಕ್ಷ ಹರಿ ಗತಿ ಎನುತ ಬಂದವನ ಕೈ ಬಿಡನು ಇಂದಿರೇಶ 2 ದುಂದುಭಿ ವತ್ಸರದಿ ಸುಜನರೆಲ್ಲ ತಂದೆ ಕಮಲನಾಭ ವಿಠ್ಠಲನೆನುತ ಒಂದೆ ಮನದಲಿ ಭಜಿಸಿ ಸ್ತುತಿಪ ಜನರ ಚಂದದಲಿ ಕಾಯ್ವ ನಾರಸಿಂಹ ಹರಿಯು3
--------------
ನಿಡಗುರುಕಿ ಜೀವೂಬಾಯಿ
ಸುಕೃತ ವಮ್ಮರಂಗನ ಕಾಂತೆಯರದಮ್ಮಅನಂತ ದೇಶಗಳು ಇವನಂತ ತಿಳಿಯವುಈ ಕಾಂತೆಯರುಒಲಿದರೆಂತು ಪೇಳಮ್ಮ ಪ. ಪಟ್ಟಾವಳಿ ಕೊಟ್ಟರು ರಂಗಗೆ ಇಟ್ಟರು ದಿವ್ಯ ಮುಕುಟವಇಟ್ಟರು ದಿವ್ಯ ಮುಕುಟ ಮುತ್ತಿನಹಾರ ಗಟ್ಟಿ ಕಂಕಣದ ಕೆಲದೆಯರು1 ಕೇಶರ ಬೆರೆಸಿದ ಮೀಸಲ ಶ್ರೀಗಂಧವಶ್ರೀಶನ ಸತಿಯರು ಹಿಡಕೊಂಡುಶ್ರೀಶನ ಸತಿಯರು ಹಿಡಕೊಂಡುರಂಗಗೆ ಲೇಪಿಸೆವೆಂಬೊ ಭರದಿಂದ2 ಸಾರ ತುಳಸಿಯು ಬೆರೆದ ಪಾರಿಜಾತದ ಮಾಲೆವಾರಿಜ ಮುಖಿಯರು ಹಿಡಕೊಂಡವಾರಿಜ ಮುಖಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ3 ಪಚ್ಚಮಾಣಿಕ ಬಿಗಿದ ಹೆಚ್ಚಿನ ಸರಗಳುಮಚ್ಛನೇತ್ರಿಯರು ಹಿಡಕೊಂಡುಮಚ್ಛನೇತ್ರಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ4 ಕೊರಳಲಿ ಸರಮಾಲೆ ಅರಳಿದ ಮುಖ ಕಮಲಎರಳೆ ನೋಟದಲಿ ಚಲುವನಎರಳೆ ನೋಟದಲಿ ಚಲುವ ಚನ್ನಿಗರಾಯನ ತರುವಳಿನೋಡಿ ಹರುಷಾಗಿ 5 ಹಸ್ತದಿ ಹಣಿಮ್ಯಾಲೆ ಕಸ್ತೂರಿ ಬಟ್ಟಿಟ್ಟುಉತ್ತಮ ತಿಲಕ ರಚಿಸುತಉತ್ತಮ ತಿಲಕ ರಚಿಸುತರಂಗನ ಹತ್ತಿರ ನಿಂತ ಕೆಲವರು6 ಇನ್ನೋರ್ವಳು ಬಂದು ಕನ್ನಡಿ ತೋರುತಕರ್ಣ ಕುಂಡಲವ ಸರಿಸುತಕರ್ಣ ಕುಂಡಲವ ಸರಿಸುತ ರಾಮೇಶನ ಚನ್ನಾಗಿ ನೋಡಿ ಸುಖಿಸುತ 7
--------------
ಗಲಗಲಿಅವ್ವನವರು
ಸುಗುಣಾಬ್ಧಿಯತಿ ರಾಯಾ ನಿನ್ನಯ ಪಾದಯುಗಳ ನಂಬಿಹರಯ್ಯ ಪ. ನೀನೆಲ್ಲಿಯಿರುವೆಯೊ ತಾನಲ್ಲಿ ಬರುವನು ಶ್ರೀನಿವಾಸನು ದಯದಿ ಯೀ ನುಡಿ ನಿಜವೆಂದು ಧ್ಯಾನಿಸುವದಕನುಮಾನವಿಲ್ಲವು ಜಗದಿ ಭಾನುತನುಜನ ತ್ರೇತೆಯೊಳು ಪರಮಾನುರಾಗದಿ ಪೊರೆದವನು ಕ ರ್ಣಾನುಜನ ದ್ವಾಪರದಿ ಸೇರಲಿಕೇನುಫಲ ಪವಮಾನ ಪೇಳೆಲೊ 1 ಇದರಿಂದ ನಿನ್ನಯ ಪದ ಕಮಲವ ಸೇರಿ ಬದುಕುವೆನೆಂಬಾಸೆಯಾ ಹೃದಯದಿ ದೃಢವಾಗಿ ವಹಿಸಿರುವೆನು ಬೇಗ ಒದಗಿ ರಕ್ಷಿಸು ಭಾಷೆಯ ಹರಿಯು ಕೃಪೆ ಮಾಡುವಂದದಿ ಜಲನಿಧಿ ಸೇರುವಂದದಿ 2 ಮಂದಮತಿಯ ಮತದಿಂದ ಸಂಗರದೊಳಗಿಂದ್ರಾರಿತವಕ- ದಿಂದಾ ಮಹಾಸ್ತ್ರವ ಬಂಧಿಸೆ ಬೇಗದಿಂದಾ ಆ ಲಂಕೆಯಿಂದಾ ಒಂದೇ ಹಾರಿಕೆಯಿಂದಾಲೌಷಧಿ ತಂದು ಹರಿಗಳ ಕಾಯ್ದ ಪೂರ್ಣ- ನಂದ ರಾಮಾವತಾರಿ ಶೇಷಗಿರೀಂದ್ರ ಕರುಣವ ಸೂರೆಗೊಂಡಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ