ಒಟ್ಟು 7812 ಕಡೆಗಳಲ್ಲಿ , 132 ದಾಸರು , 3804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಜದಿ ಸುಖಪದ ಕೊಡುವೆಯೋ ಭಜಕರಿಗೆ ಶುಭದಾಯಿಯೋ ಪ ತ್ರಿಜನ ಪೂಜೆಯಗೊಂಬೆಯೋ ಅಂ- ಗಜಜನಕ ಗೋಕಾಯ್ದೆಯೋ ಅ.ಪ ಸುತನಕೊಂದೇ ಸತಿಯ ತೊರೆದೇ ಅತಿಯ ದುಃಖವ ನಟಿಸಿದೇ ಸತತ ಸರ್ವವ್ಯಾಪಿಯೆಂಬರು ಹಿತನೆ ಕಾಣಿಸೆಯೆಲ್ಲಿಹೇ 1 ನಾರಿಯರ ಸೆರೆ ನೀಗಿಸೀ ಹದಿ ನಾರು ಸಾವಿರ ಸೇರ್ದೆಯೋ ಚೋರನೆನ್ನಿಸಿ ಸೀರೆಕದ್ದು ಮಾರಕನೆ ತಾಮಮೃತನೇ 2 ಕೂರ್ಮ ವರಾಹನೇ ನರ ಕೇಸರೀ ವಾಮನನು ನೀ ಹಸ್ತಪರಶು ಶ್ರೀ ರಾಮಕೃಷ್ಣನೆ ವಿಶ್ವ ಬುದ್ಧನೆ ಕಲ್ಕಿಯೇ 3 ಘೋರ ದೈತ್ಯ ವಿದಾರಿಯೋ ಹರಿ ಸಾರಿ ಹಲವವತಾರದಿಂ ತೋರಿದವ ನೀನಾದರೂ ಜಾ ಮಾಧವ ನಂಬಿದೇ 4
--------------
ಶಾಮಶರ್ಮರು
ನಿತ್ಯ ಇಂದಿರಾಧವನೊಲಿಮೆ | ಸಂಧಿಸುವುದೂ ಪ ಪರಮ ಪ್ರಿಯ ಗುರುವರ್ಯ ನರಸಿಪುರ ದಾಸರಪರಮ ಮಂಗಳ ನಾಮ ಸುಸ್ತವನದೀ ||ಉರುತರದ ಸಂಚಿತವು ಮಿಂಚಿನಂದದಿ ಕರೆಗುಗರುವ ವೇತಕೊ ಮನುಜ ಭಜಿಸೊ ನಿತ್ಯಾ 1 ಪಥ ದೊರಕಿತೆನಗೆ2 ಶ್ರೀದಾಸಗುರುತಿಲಕ | ಮೋದತೀರ್ಥರ ಪ್ರೀಯಭೇದಾಗಮಜ್ಞಾನಿ ಪ್ರಾಜ್ಞ ಮೌಳೀ ||ಆದರಿಸಿ ಉದ್ಧರಿಸು | ಮೋದಮಯ ರತ್ನನೇವಾದಿಗಜ ಪಂಚಾಸ್ಯ | ಬುಧಜನರ ಪ್ರೀಯಾ 3 ಜ್ಞಾನ ಪ್ರಕಾಶನೇ | ಜ್ಞಾನ ಮಾರ್ಗವ ತೋರ್ವಪೂರ್ಣೇಂದು ಮತ್ತುದಯ | ಘನಗುಣಜ್ಞಾ ||ಮೌನಿವರ ಕರುಣಿಸಿ | ನಿನ್ನಕಾಂಬುವ ಹದನನೀನೆ ತಿಳಿಸಲಿ ಬೇಕು | ಆ ನಮಿಪೆ ನಿನ್ನ 4 ಮುದ್ದು ಮೋಹನ ದಾಸ ಪದಕಮಲ ಭೃಂಗನೇಸಿದ್ಧಜನ ಸನ್ಮೌಳಿ | ತಿದ್ದಿ ಮನ್ಮನವಾಮಧ್ವಾಂತರಾತ್ಮಗುರು | ಗೋವಿಂದ ವಿಠಲನಮದ್ಗುರುವೆ ಮನ್ನನದಿ | ಸಿದ್ಧಿಸೋ ಜೀಯಾ 5
--------------
ಗುರುಗೋವಿಂದವಿಠಲರು
ನಿತ್ಯ ಕರ್ಮೇಂದ್ರಿಯ ಸೇವಿತನಿಗೆಮಂಗಳಂ ಉಡುಪಿನ ಶ್ರೀಕೃಷ್ಣನಿಗೆಪ. ನಂದನ ಕಂದನಿಗೆ ವೃಂದಾರಕೇಂದ್ರನಿಗೆಮಂದರ ಗಿರಿಧರಗೆ ಇಂದಿರಾಕಾಂತನಿಗೆನಂದ ಸುರವ್ರಾತನಿಗೆ ನಂದ ತೀ-ರ್ಥೇಂದ್ರ ಗೋವಿಂದ ಹರಿಗೆ1 ಮಕರ ಕುಂಡಲಧರ ರುಕುಮಿಣಿ ರಮಣನಿಗೆಅಕಳಂಕ ಮಹಿಮಗೆ ಅಕುಟಿಲನಿಗೆಶುಕವಾಹನನ ಪಿತಗೆ ಭಕುತವತ್ಸಲಗೆ ಅ-ಧಿಕ ಕೋಟಿರವಿತೇಜ ಮಕುಟ ದಿಟ್ಟನಿಗೆ 2 ಸರಸ ಮಂದಹಾಸನಿಗೆ ನರಹರಿ ರೂಪನಿಗೆವರ ಕೌಸ್ತುಭಹಾರ ಧರಿಸಿದವಗೆಕರುಣದಿ ಗೋಪಿಯರ ಧುರದಿ ರಕ್ಷಿಪನಿಗೆಸಿರಿಮುದ್ದು ಹಯವದನ ಮುರಹರನಿಗೆ 3
--------------
ವಾದಿರಾಜ
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ನಿತ್ಯದಲಿ ಧೂಪ ಪ ನಾನದಾರಿಹೆನೆಂದು ತಿಳಿದವಗೆ ಧೂಪನಾನು ಆತ್ಮವು ಎಂದು ಕಂಡವಗೆ ಧೂಪನಾನಾ ಜೀವ ಭ್ರಾಂತಿಯಳಿದವಗೆ ಧೂಪತಾನೆ ತಾನಾಗಿಹೆನೆಂದವಗೆ ಧೂಪ 1 ಸಂಸಾರದೊಳು ಇದ್ದು ಇಲ್ಲದವನಿಗೆ ಧೂಪಸಂಸಾರ ಸಂತೆಂದು ಕಂಡವಗೆ ಧೂಪಸಂಸಾರ ಲೇಪ ಅಂಟದವನಿಗೆ ಧೂಪಸಂಸಾರದೊಳು ಮುಕ್ತನಾದವಗೆ ಧೂಪ2 ಸೂರ್ಯ ಚಂದ್ರ ಸ್ವರದಿ ನಡೆದವಗೆ ಧೂಪಆರು ಚಕ್ರದಿ ನಡೆದವಗೆ ಧೂಪಭೋರೆನಿಪ ಓಂಕಾರ ಕೇಳ್ದವಗೆ ಧೂಪಧೀರ ಚಿದಾನಂದ ಗುರುವಾದವಗೆ ಧೂಪ 3
--------------
ಚಿದಾನಂದ ಅವಧೂತರು
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿತ್ಯ ನಿಸ್ಸಂಗಾ ಪ ಅಂದು ದಶಕಂಧರನ ಮಂದಿರದೊಳಗೆ ಸೇರಿ| ಇಂದ್ರಾದಿಗಳು ಬಿದ್ದಿರೆ ಬಂದು ದಯದಿಂದ ಸಲುಹಿದಾ 1 ಸುರರು ಮಂದರಗಿರಿಯ ಕಟಿಯ | ಕುಂದದೆ ಸುಧೆಯನೆರೆದ ನಂದ ವಿಗ್ರಹ ಗೋವಿಂದಾ 2 ಇಂದು ಪುಷ್ಕರಣಿ ಕಾವೇರಿ | ದ್ವಂದ್ವ ತೀರವನಿರುತ ವಾಸಾ | ಕಂದರ್ಪಜನಕ ರಂಗ ಮಂದಿರ ವಿಜಯವಿಠ್ಠಲಾ 3
--------------
ವಿಜಯದಾಸ
ನಿತ್ಯ ಪ ಸಂಸಾರವೆ ಸುಖವೆಂದು ಹಾರಯಿಸಿ ಬಾಳುವಾ | ನರನ ಉದ್ಧಾರ ಮಾಡುವುದು ಅ.ಪ ಕಂಗಳಿಂದಲಿ ಪರರ ಮನೆಯ ಅಂಗನೆಯರ ನೋಡಿ ಅಂಗಸಂಗವ ಬಯಸಿ ಪಾಪಕ್ಕೆ ಹಿಂಗದೆ ಗುರಿಯಾದೆ 1 ಸಂಹ್ವತಿಯ ಮೆದ್ದು ಪುಣ್ಯದಾ ಗಹ್ವರವು ಮರಿಯದೆ 2 ನಾಸಿಕಕೊನೆಯಿಂದ ಅನರ್ಪಿತÀ ವಾಸನೆ ಕೈಕೊಂಡು ಲೇಸಾಗಿ ಮನವುಬ್ಬಿ ನಲಿವುತ ದೇಶದೊಳಗೆ ಮೆರೆದೆ 3 ಮುಪ್ಪಾಗುವತನಕ ಸುಖದಲ್ಲಿ ಅಪ್ಪಿದೆ ನಾರಿಯರ ಒಪ್ಪಿದ ಧರ್ಮಗಳ ಖಳರಿಗೆ ಒಪ್ಪಿಸಿದೆನೊ ಹರಿಯೇ 4 ಕೆಟ್ಟು ಪೋಗುವೆನೆಯ್ಯಾ ವಿಜಯವಿಠ್ಠಲ ನೀನೆ 5
--------------
ವಿಜಯದಾಸ
ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ಮನ್ನಿಸಿ ರೂಢಿಯೊಳಗೆ ನಿನಗೀಡುಗಾಣೆನೊ ಕರ ಪಿಡಿವ ತಾರಾಕ್ಷರೂಢ ವೆಂಕಟರಾಯ ಪ ಯೋನಿ ಮೊಗದಿಂದ ವೃದ್ಧ ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು ಹೀನ ಮತಿಯಿಂದಪಮಾನಕೊಳಗಾಗಿ ಏನು ಕಾಣದೆ ಪಾಪ ಕಾನನದೊಳು ಬಿದ್ದು ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು- ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು 1 ನಿತ್ಯ ನಿನ್ನ ನಂಬಿದೆ ಬೆಚ್ಚಿಸಲಾರೆ ಬಲು ಅರ್ಚನೆ ಬಗೆಯಿಂದ ಮುಚ್ಚಿದಾವರ್ಕ ದೇಹ ಬಿಚ್ಚಿಯಿಟ್ಟು ದೇವಾ ಅಚ್ಚನಾಗ್ರಹದಿಂದ ಅಚ್ಯುತಾ ಶರಣೆಂದು ಅಚ್ಯುತಾ ಅಚ್ಯುತಾ ಚಚ್ಚರಾ ನಾಮಗಳುಚ್ಚರಿಸುವ ಧ್ಯಾನ ಬಿಚ್ಚದೆ ಒದಗಲಿ ಇಚ್ಛಾಕ ಮೂರುತಿ 2 ಧನ್ಯ ಸ್ವಾಮಿ ಕಾಸಾರಾಪುಣ್ಯ ಕಾನನವಾಸಾರಣ್ಯಗಳೆಲ್ಲಾದಿ ಅಲ್ಲ ನಿನ್ನ ಭಕ್ತರ ಕುಲಕೆ ಮಾನ್ಯರಹಿತನೆ ತಾ- ಮದನ ಲಾ- ವಣ್ಯ ಕ್ಷೀರವಾರಿಧಿ ಕನ್ಯ ಭೂ ಸತಿಪತಿ ಶೂನ್ಯ ನೀನೆಲೊ ದುರಿತಾ- ಸಿರಿ ವಿಜಯವಿಠ್ಠಲ ಹಿ- ರಣ್ಯೋದರ ಪಿತ ಸನ್ಯಾಯದಿಂದಲಿ 3
--------------
ವಿಜಯದಾಸ
ನಿತ್ಯ ಮಂಗಳಂ ಪ್ರಸನ್ನ ವಾಸುದೇವಗುರುವೆ ಪರಮಮಂಗಳಂ ಗುರುವೆಪಅನಾಥನಾದವನಿಗಾನಂದ ಮಂಗಳಂ ನಿನ್ನಧ್ಯಾನಗೈವ ಧನ್ಯರಿಗೆ ದಿವ್ಯ ಮಂಗಳಂಮಾನಸ ನಿನ್ನೊಳಗೆರಗೆ ಬಹು ಮಂಗಳಂ ಸರ್ವವೂ ನೀವೆಂದರಿತ ಮ'ಮರಿಗಖಿಲ ಮಂಗಳಂ 1ಕಂಗಳು ನಿನ್ನೊಳಿದ್ದರೆ ಶುಭಕಾರ ಮಂಗಳಂ ಭವಭಂಗಗೈವ ನಿನ್ನ ನೋಡೆ ಭವ್ಯ ಮಂಗಳಂಅಂಗಪ್ರತಿಸೇವೆಯೆ ಸರ್ವಾದಿ ಮಂಗಳಂ ಕಷ್ಟ'ಂಗುವಂಥ ನಿನ್ನ ಕೃಪೆ ಕೋಟಿ ಮಂಗಳಂ 2ಪಾದುಕೆಯೂಳಿಗವೇ ಪ'ತ್ರ ಮಂಗಳಂ ನಿನ್ನಪಾದಪದ್ಮ ಸೇವೆ ದೊರಕೆ ಬಹು ಮಂಗಳಂಓದಿದರೆ ನಿನ್ನ ಕಥೆಯ 'ಶ್ವ ಮಂಗಳಂ ನೀನಾದರಿಸಿ ಕರೆಯಲೆಮಗತ್ಯಂತ ಮಂಗಳಂ 3ನಿನ್ನ ಮುಂದೆ ಕುಣಿಯಲೆಮಗೆ ನಾನಾ ಮಂಗಳಂ ಗುಣವನ್ನು ಪಾಡಿ ಪೊಗಳಿದರಪಾರ ಮಂಗಳಂನಿನ್ನ ಚರಣತೀರ್ಥಪಾನ ಅನಂತ ಮಂಗಳಂನಿನ್ನ ದಿವ್ಯಪ್ರಸಾದವೆ ಭುವನ ಮಂಗಳಂ 4ದಾಸಾನುದಾಸನಪ್ಪುದೆ ದೊಡ್ಡ ಮಂಗಳಂ ಗುರುವಾಸುದೇವಾರ್ಯ ನಿನ್ನವರಿಗೆಲ್ಲಾ ಮಂಗಳಂಪೋಷಕನೀನಾದುದರಿಂ ಪಂತು ಮಂಗಳಂ ತ್ರಿಭುವನೇಶ ಚಿಕ್ಕನಾಗಪುರವಾಸ ಮಂಗಳಂ5
--------------
ವೆಂಕಟದಾಸರು
ನಿತ್ಯ ಮಂದಾರ ತರುವಂತೆಕುಂದದಲ ಭೀಷ್ಟಗಳ ಗರೆವ | ಸುರ ತರುವಾ ಪ ವಾಗೀಶ ಕರಜಾತ | ನಿಗಮಾರ್ಥ ಕೋವಿದರಭೋಗಿಶಯನನ ಭಕುತ | ಭಾಗ್ಯ ದಾತೃಗಳ |ಯೋಗಿ ಕುಲವರ್ಯ ಹೃ | ದ್ರೋಗ ನೀಗುವರಜಾಗು ಮಾಡದೆ ಭಜಿಪ | ಭಕ್ತರನು ಪೊರೆವರನು 1 ಭವ ಭವಣೆ ಹರಿಸು ವರ |ನವ ನವ ಸ್ತೋತ್ರಗಳ | ಕವನ ರೂಪದಿ ಪೇಳಿಪವನಾಂತರಾತ್ಮಕನ | ಪರಿತೋಷ ಗೈದವರಾ 2 ಗರಳ ಅಂಘ್ರಿ ಕಮಲಂಗಳನುನೆರೆನಂಬಿ ಸುಖಿಸುವರ | ಸುರವ ಭಯ ವಿರಹಿತರ 3 ಉಕ್ತಿಯನು ಸ್ವಪ್ನದಲಿ | ಶಕ್ತಹಯಮುಖಪೇಳೆಯುಕ್ತಿಮಲ್ಲಿಕೆ ಮಾಲೆ | ಮೌಕ್ತಿಕವ ನಿತ್ತವರ |ಭಕ್ತಿಪಥ ತೋರಿ | ಕು | ಯುಕ್ತಿಗಳನೇ ಕಳೆದುಮುಕ್ತಿ ಮಾರ್ಗವ ತೋರ್ವ | ಭಕ್ತಿಯೋಗಿಗಳಾ 4 ಮಾಯಿ ಶೈವರು ಶಾಕ್ತ್ಯ | ಅನ್ಯಮತಗಳಗೆದ್ದುಜಯ ಪತ್ರ ಘಂಟೆಗಳ | ವಿಜಯ ಸಾರಥಿಗಿತ್ತು |ಭಯ ವಿನಾಶನು ನಮ್ಮ | ತೋಯಜಾಂಬಕ ಸಿರಿಹಯ ವದನನರ್ಚಿಸುವ | ವಾದಿರಾಜರನೂ 5 ಅದ್ವೈತ ತಮ ಸೂರ್ಯಮೇದಿನೀ ಸುರವಂದ್ಯ | ಶ್ರೀವಾದಿರಾಜರನೂ 6 ಭಾವಿ ಮಾರುತಿಯ | ದಿನ ದಿನದಿ ಪ್ರಾರ್ಥಿಪರಭಾವ ಕೊಲಿಯುತ ತೋರ್ವ | ಹಯ ಮುಖಾತ್ಮಕನು |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನಭವ್ಯ ರೂಪವ ಹೃದಯ | ದವಕಾಶದೊಳಗೇ 7
--------------
ಗುರುಗೋವಿಂದವಿಠಲರು
ನಿತ್ಯ ಶುದ್ಧನಾಪ ಲೋಕಂಗಳ ಮಾಡಿರುವ ಲೋಕಕೆ ತಾನೆ ಗುರುವಲೋಕವೇ ತಾನಾಗಿರುವ ಬಹುಲೋಕ ಲೋಕದ ಹೊರಗಿರುವ ದೇವನೇ 1 ದೃಶ್ಯವೇ ತಾನೆನಿಪ್ಪ ದೃಶ್ಯವ ನೋಡುತಲಿಪ್ಪದೃಶ್ಯಕೆ ಆನಂದಿಪ ಎಲ್ಲ ದೃಶ್ಯಕೆ ಆಧಾರವಿಪ್ಪನೇ 2 ಬೋಧನೆ ತಾನಾಗಿರ್ದ ಬೋಧಾಬೋಧದ ಸಿದ್ಧಬೋಧದಿ ತಾ ಬೆರೆದಿರ್ದಾ ಬರೆ-ಬೋಧಾ ಬೋಧಂಗಳ ಹೊದ್ದದ ದೇವನೇ 3 ನಾದದ ಮನೆಯಾಗಿಪ್ಪ ನಾದವ ಕೇಳುತಲಿಪ್ಪನಾದದಿಂ ನಲಿದಿಪ್ಪ ಮಹಾನಾದನಾದಕೆ ಬೆರೆದಿಪ್ಪ ದೇವನೇ 4 ನಿರುಪಮ ನಿರಾಲಂಬ ನಿರವಯ ನಿಶ್ಚಲಬಿಂಬಶರಣರೊಳು ಬಲಗೊಂಬ ವರಪರಮ ಗುರು ಚಿದಾನಂದ ದೇವನೇ 5
--------------
ಚಿದಾನಂದ ಅವಧೂತರು
ನಿತ್ಯ ಶುಭಮಂಗಲಂ ಪ ವಾತಜಾತನು ಆಗಿ ಖ್ಯಾತಿಯಲಿ ಮೆರೆದಗೆಸೇತುವೆಯ ಭರದಿಂದ ಲಂಘಿಸಿದಗೆಸೀತೆಯನು ವಂದಿಸುತೆ ಉಂಗುರವನಿತ್ತವಗೆದೈತ್ಯಪುರವನು ಭರದಲುರಿಸಿದವಗೆ 1 ವಸುಧೆಯಲಿ ಕುಂತಿನಂದನನಾಗಿ ಉದಿಸಿದಗೆಕುಸುಮವನು ತಂದು ದ್ರೌಪದಿಗಿತ್ತಗೆಕುಶಲತನದಲಿ ಕೌರವಾದಿಗಳ ಸಂಹರಿಸಿ-ದಸಹಾಯ ವೀರ ಶ್ರೀ ಭೀಮಸೇನಗೆ 2 ಮಧ್ಯಗೃಹದಾತನಾ ಸತಿಯಲ್ಲಿ ಉದಿಸಿದಗೆಬೌದ್ಧ ಚಾರ್ವಾಕ ಮಾಯ್ಗಳ ಜರಿದಗೆಮಧ್ವಶಾಸ್ತ್ರವನೆಲ್ಲ ಸಜ್ಜನರಿಗೊರೆದಗೆಮುದ್ದು ಶ್ರೀಆದಿಕೇಶವನ ಭಜಕಗೆ 3
--------------
ಕನಕದಾಸ
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಸೋಧಿಸಿ ಭಕ್ತಿ ರಸÀ ಸ್ವಾದ ಮಾಡುವ ಸಾಧುಗಳೊಳಗಿಡೊ ಶ್ರೀಶಾ ರಮೇಶ ಪ ಬೋಧಿಸಿ ತತ್ತ್ವರಸ ಸ್ವಾದ ನೀಡುವ ಮಾಧವ ಶ್ರೀಶನೆ ಮೋದ ಬೀರುತ ನಿನ್ನ ಪಾದವ ತೋರುವ ಸಾಧುಗಳೊಳಗಿಡೊ ಅಗಾಧ ಮಹಿಮನೆ ಅ.ಪ ಭವÀಸಂಸಾರದೊಳಿರಲು ಸಜ್ಜನರು ಅರುಣೋದಯದೊಳೆದ್ದು ನಿನ್ನ ಚರಣಪಲ್ಲವವನ್ನು ಕೃಷ್ಣಾ ಸ್ಮರಿಸುತಲಿರುವರೊ ಪರಮಪುರುಷಕೇಳೊ ಅಂಥಾ ವರ ಭಾಗವತರನು ಕರುಣದಿ ತೋರೋ ಶ್ರೀಶಾ ವರ ನೂಪುರಗೆಜ್ಜೆ ಧರಿಸಿ ಮೆರೆವ ದೇವಾ ವರ ಭಕ್ತರು ಕರೆ ಕರೆದಲ್ಲಿಗೆ ಬಹ ಶರಧಿ ಶಯನ ನಿನ್ನ ಬಿರುದಲ್ಲವೆ ಕೃಷ್ಣಾ ತ್ಪರಿತದಿ ನಿನ್ನಡಿ ಸ್ಮರಿಸುವರನೆ ತೋರೊ 1 ಅಗರು ಚಂದನ ಗಂಧ ಸೊಗವಿಲಿ ಧರಿಸುತ ಮಿಗೆ ಪೀತಾಂಬರದುಡಿಗೆಯನುಟ್ಟು ಕೃಷ್ಣಾ ಸಿರಿ ಸಹಿತಿರೆ ಸೊಗವಿಲಿ ಕರಿರಾಜನ ಸ್ವರ ಆಲಿಸಿ ಅಗಹರ ಸಿರಿಗ್ಹೇಳದೆ ಬಂದೆ ಶ್ರೀಧರ ಝಗಝಗಿಸುತ ನಿನ್ನ ಪದರುಹಗಳನಿಟ್ಟು ಮಿಗೆ ವೇಗದಿ ಬಂದು ಕರಿಯನುದ್ಧರಿಸಿದೆ ಈಗ ಬೇಗ ನಿನ್ನ ಭಕ್ತರ ಸೊಗವಿಲಿ ತೋರೋ ಕೃಷ್ಣಾ 2 ಯತಿ ಮುನಿ ಹೃದಯಾನಂದ ಶ್ರೀಕೃಷ್ಣ ಸತತದಿ ನಿನ್ನ ನಾಮ ಜತನ ಮಾಡುತ ತಮ್ಮ ಮತಿಭ್ರಮಣೆಯಲು ನಿನ್ನಾಕೃತಿ ನೋಡುತ ಸ್ತುತಿಪ ಯತಿಕುಲ ತಿಲಕಾಗ್ರಣಿ ಶ್ರೀ ಶ್ರೀನಿವಾಸ ಎನ್ನ ಮತಿಭ್ರಮಣೆಯನು ನೀಗಿಸುವಂಥಾ ಸುಜನರ ಸತತದಿ ತೋರಿಸೋ ಕ್ಷಿತಿಯೊಳು ವೆಂಕಟ ಪತಿತ ಪಾಮರರನು ಗತಿಕಾಣಿಸೆ ಕೃಷ್ಣಾ3
--------------
ಸರಸ್ವತಿ ಬಾಯಿ